Tag: police

  • 5ರ ಬಾಲೆಯ ಮೇಲೆ ರೇಪ್‌ – ಬೆಳಗಾವಿಯಲ್ಲಿ ಬಾಗಲಕೋಟೆ ಮೂಲದ ವ್ಯಕ್ತಿ ಅರೆಸ್ಟ್‌

    5ರ ಬಾಲೆಯ ಮೇಲೆ ರೇಪ್‌ – ಬೆಳಗಾವಿಯಲ್ಲಿ ಬಾಗಲಕೋಟೆ ಮೂಲದ ವ್ಯಕ್ತಿ ಅರೆಸ್ಟ್‌

    ಬೆಳಗಾವಿ: ಎರಡು ವರ್ಷದ ಹಿಂದೆ ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಪ್ರಕರಣಕ್ಕೆ (Rape Case) ಸಂಬಂಧಿಸಿದಂತೆ ವ್ಯಕ್ತಿಯನ್ನು ಬಂಧಿಸಲಾಗಿದೆ.

    ಜಿಲ್ಲಾ‌‌ ಮಕ್ಕಳ ರಕ್ಷಣಾ ಘಟಕ ನೀಡಿದ ದೂರಿನ ಅನ್ವಯ ಮಂಗಳವಾರ ರಾತ್ರಿ ಆರೋಪಿ ತುಫೇಲ್ ಅಹ್ಮದ್ ದಾದಾಫೀರ್‌ನನ್ನು ಬಂಧಿಸಿದ್ದೇವೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ.ಭೀಮಾಶಂಕರ್ ಗುಳೇದ್ (Bheemashankar Guled) ತಿಳಿಸಿದ್ದಾರೆ.

    ಎಸ್‌ಪಿ ಹೇಳಿದ್ದೇನು?
    ಮಂಗಳವಾರ ಸಂಜೆ ಪುನೀತ್ ಕೆರೆಹಳ್ಳಿ ಒಂದು ವಿಡಿಯೋ ಪೋಸ್ಟ್ ಮಾಡಿದ್ದರು. ಅದರಲ್ಲಿ ಓರ್ವ ವ್ಯಕ್ತಿ ಮಾತಾಡಿದ ಆಡಿಯೋ ಮತ್ತು ವಿಡಿಯೋ ತುಣುಕು ಇತ್ತು. ಇದರಲ್ಲಿ ಬಾಲಕಿ ಮೇಲೆ ಓರ್ವ ವ್ಯಕ್ತಿ ಮಲಗುವ ರೀತಿಯಲ್ಲಿತ್ತು. ಇದನ್ನೂ ಓದಿ: ನಟಿ ರಮ್ಯಾಗೆ ಅಶ್ಲೀಲ ಕಾಮೆಂಟ್ ಕೊಪ್ಪಳ ಮೂಲದ ಓರ್ವ ವಶಕ್ಕೆ

     

    ಈ ವಿಡಿಯೋ ಪ್ರಕಟವಾದ ನಂತರ ನಮ್ಮ ಸೈಬರ್‌ ಕ್ರೈಂ ಪೊಲೀಸರಿಗೆ (Cyber Crime Police) ಮಾಹಿತಿ ನೀಡಲಾಗಿತ್ತು. ವಿಡಿಯೋದಲ್ಲಿನ ವಿಳಾಸ ಆಧರಿಸಿ ನಮ್ಮ ಪೊಲೀಸರು ತನಿಖೆ ಶುರು ಮಾಡಿದ್ದರು. ಕೂಡಲೇ ನಮ್ಮ ಮುರಗೋಡ ಪೊಲೀಸ್ ಠಾಣೆಗೆ ಮಾಹಿತಿ ನೀಡಲಾಗಿತ್ತು.  ಇದನ್ನೂ ಓದಿ: ಅಪಹರಣಕ್ಕೆ ಸೂಚನೆ ನೀಡಿಲ್ಲ, ಯಾವುದೇ ಪುರಾವೆ ಇಲ್ಲ ಜಾಮೀನು ರದ್ದು ಮಾಡ್ಬೇಡಿ: ದರ್ಶನ್‌ ವಾದ ಏನು?

    ಈ ಘಟನೆ 2023 ಅಕ್ಟೋಬರ್ 5 ರಂದು ನಡೆದಿದ್ದು ಮಸೀದಿ ಪಕ್ಕದ ಮನೆಯ ವ್ಯಕ್ತಿ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದ. ಆರೋಪಿ ಘಟನೆ ನಡೆದ ಹಿಂದಿನ ದಿನ ಬಾಗಲಕೋಟೆಯ ಮಹಾಲಿಂಗಪುರದಿಂದ ಬಂದಿದ್ದ. ಚಿಕ್ಕಮ್ಮನ ಮನೆಗೆ ಬಂದಾಗ ಹೀನಾಯ ಕೃತ್ಯ ಎಸಗಿದ್ದ.

     
    ಈ ವಿಚಾರ ಗೊತ್ತಾದಾಗ ಅಲ್ಲಿರುವ ಸ್ಥಳೀಯರು ಬಾಲಕಿ ತಂದೆ ಕರೆದು ಮಾತಾಡಿದ್ದರು. ಆ ದಿನ ದೂರು ಕೊಡುವುದು ಬೇಡಾ ಅಂತಾ ತೀರ್ಮಾನಿಸಿ ಬಿಟ್ಟಿದ್ದರು. ಇದಾದ ಬಳಿಕ ವಿಡಿಯೋ ವೈರಲ್ ಆಗುತ್ತಿದ್ದಂತೆ ಬಾಲಕಿ ಪೋಷಕರ ಜೊತೆಗೆ ಮಾತಾಡಲಾಗಿತ್ತು.

    ತಂದೆ ತಾಯಿ ದೂರು ನೀಡಲು ಒಪ್ಪದ ಕಾರಣ ಜಿಲ್ಲಾ‌‌ ಮಕ್ಕಳ ರಕ್ಷಣಾ ಘಟಕದಿಂದ ದೂರು ಪಡೆದು ರಾತ್ರಿಯೇ ಆರೋಪಿ ತುಫೇಲ್ ಅಹ್ಮದ್ ದಾದಾಫೀರ್ ಬಂಧಿಸಿದ್ದೇವೆ. ಆರೋಪಿ ಮೌಲ್ವಿ ಅಲ್ಲ. ಆತ ವೆಲ್ಡಿಂಗ್‌ ಕೆಲಸ ಮಾಡಿಕೊಂಡಿದ್ದ. ಕೆಲಸ ಇಲ್ಲದೇ ಇದ್ದಾಗ ಮಸೀದಿಗಳಿಗೆ ಹೋಗಿ ಭಾಷಣ ಮಾಡುತ್ತಿದ್ದ ಎಂದು ತಿಳಿಸಿದರು.

  • ಧರ್ಮಸ್ಥಳ ಬುರುಡೆ ರಹಸ್ಯ- ಸಾಕ್ಷಿದಾರನ ಪರವಾಗಿ ಬರ್ತಾರಾ 6 ಮಂದಿ ಸ್ಥಳೀಯರು?

    ಧರ್ಮಸ್ಥಳ ಬುರುಡೆ ರಹಸ್ಯ- ಸಾಕ್ಷಿದಾರನ ಪರವಾಗಿ ಬರ್ತಾರಾ 6 ಮಂದಿ ಸ್ಥಳೀಯರು?

    ಮಂಗಳೂರು: ಧರ್ಮಸ್ಥಳ ಬುರುಡೆ ರಹಸ್ಯ ಪ್ರಕರಣಕ್ಕೆ (Dharmasthala Mass Burial Case) ರೋಚಕ ತಿರುವ ಸಿಗುವ ಸಾಧ್ಯತೆಯಿದೆ. ನೂರಾರು ಶವಗಳನ್ನು ಹೂತು ಹಾಕಿದ್ದೇನೆ ಎಂದು ಹೇಳಿರುವ ಸಾಕ್ಷಿದಾರನ (Witness) ಪರವಾಗಿ ಮತ್ತೆ 6 ಜನ ಸ್ಥಳೀಯರು ಮುಂದೆ ಬರುವ ಸಾಧ್ಯತೆಯಿದೆ.

    ಹೌದು. ದೂರಿನಲ್ಲಿ ದೂರುದಾರ ನಾನೊಬ್ಬನೇ 13 ಜಾಗಗಳಲ್ಲಿ ಹೆಣವನ್ನು ಹೂತಿದ್ದೇನೆ ಎಂದು ತಿಳಿಸಿದ್ದ. ಇಲ್ಲಿಯವರೆಗೆ ಪಾಯಿಂಟ್‌ ಸಂಖ್ಯೆ 12ರವರೆಗೆ ಶೋಧ ನಡೆದಿದ್ದು 6ನೇ ಪಾಯಿಂಟ್‌ನಲ್ಲಿ ಮಾತ್ರ ಅಸ್ಥಿಪಂಜರ ಸಿಕ್ಕಿದೆ. ಉಳಿದ 12 ಜಾಗದಲ್ಲಿ ಯಾವುದೇ ಅಸ್ಥಿ ಪತ್ತೆಯಾಗಿಲ್ಲ.

    ದೂರುದಾರನ ಈ ಪ್ರಯತ್ನ ವಿಫಲವಾದ ಬೆನ್ನಲ್ಲೇ ಆತ ಹೆಣ ಹೂತು ಹಾಕಿದ್ದನ್ನು ನೋಡಿದ್ದೇವೆ. ಆತನ ಹುಡುಕಾಟದಲ್ಲಿ ತಾವು ಕೂಡ ಸಹಾಯ ಮಾಡುವುದಾಗಿ 6 ಮಂದಿ ಮುಂದೆ ಬಂದಿದ್ದಾರೆ ಎನ್ನಲಾಗುತ್ತಿದೆ.

    6 ಜನ ಬಂದಿರುವ ಬಗ್ಗೆ ವಿಶೇಷ ತನಿಖಾ ತಂಡ (SIT) ಅಧಿಕೃತವಾಗಿ ಇಲ್ಲಿಯವರೆಗೆ ಯಾವುದೇ ಮಾಹಿತಿ ನೀಡಿಲ್ಲ. ಈಗ ಈ 6 ಜನರ ಸ್ಥಳೀಯರ ಮಾಡುತ್ತಿರುವ ಆರೋಪದ ಅಸಲಿಯತ್ತಿನ ಬಗ್ಗೆ ಚರ್ಚೆ ಆರಂಭವಾಗಿದೆ. ಇದನ್ನೂ ಓದಿ: ಧರ್ಮಸ್ಥಳ ಶವಗಳ ಹೂತಿಟ್ಟ ಕೇಸ್ – ಇಂದು ಕೊನೆಯ ಪಾಯಿಂಟ್‌ನಲ್ಲಿ ಶೋಧ

    ಚರ್ಚೆ ಏನು?
    ದೂರುದಾರ ತಾನೊಬ್ಬನೇ ಹೂತಿರುವುದಾಗಿ ದೂರು ನೀಡಿದ್ದು ಈ ಆಧಾರದಲ್ಲಿ ಈಗ ತನಿಖೆ ನಡೆಯುತ್ತಿದೆ. ಅಷ್ಟೇ ಅಲ್ಲದೇ ಧರ್ಮಸ್ಥಳ ತೊರೆದ ನಂತರ ನನಗೆ ಜೀವ ಭಯ ಇತ್ತು. ಈ ಕಾರಣಕ್ಕೆ ನಾನು ಇಲ್ಲಿಯವರೆಗೆ ಮುಂದೆ ಬಂದಿಲ್ಲ ಎಂದು ಹೇಳಿದ್ದ.

    ಈಗ ಹೊಸದಾಗಿ 6 ಜನ ಸ್ಥಳೀಯರೇ ಬಂದಿರುವ ಕಾರಣ ಇಲ್ಲಿಯವರೆಗೆ ಅವರು ಯಾಕೆ ಮೌನವಾಗಿದ್ದರು? ಸ್ಥಳೀಯರೇ ಆಗಿದ್ದರೆ ಈ ಮೊದಲೇ ದೂರು ನೀಡಬಹುದಿತ್ತು. ಅಷ್ಟೇ ಅಲ್ಲದೇ ಈ ಪ್ರಕರಣ ಸದ್ದು ಮಾಡಿದ ನಂತರ ಎಸ್‌ಐಟಿ ರಚನೆಯಾಗಿ 12 ಸ್ಥಳಗಳವರೆಗೆ ಶೋಧ ನಡೆಸುವವರೆಗೆ ಸುಮ್ಮನ್ನಿದ್ದ ಈ ವ್ಯಕ್ತಿಗಳು ಶೋಧ ನಡೆಸುವಾಗ ಮೊದಲೇ ಯಾಕೆ ಮುಂದೆ ಬರಲಿಲ್ಲ ಎಂಬ ಪ್ರಶ್ನೆಯ ಜೊತೆ ಹಲವು ಅನುಮಾನ ಎದ್ದಿದೆ.

    ಎಸ್‌ಐಟಿ ಸೋಮವಾರ ಪಾಯಿಂಟ್‌ ಸಂಖ್ಯೆ 11 ರಲ್ಲಿ ಉತ್ಕನನ ನಡೆಸಬೇಕಿತ್ತು. ಆದರೆ ಈ ಜಾಗದ ಮೇಲಿನ ಭಾಗಕ್ಕೆ ತೆರಳಿತ್ತು. ಈ ಜಾಗದಲ್ಲಿ ತೆರಳಿದಾಗ ಮನುಷ್ಯನ ಮೂಳೆಗಳು ಸಿಕ್ಕಿತ್ತು. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯ ಮೂಳೆ ಇದಾಗಿದ್ದು ನೆಲದಲ್ಲಿ ಪತ್ತೆಯಾಗಿದೆ. ಇದನ್ನೂ ಓದಿ: ಧರ್ಮಸ್ಥಳ ಬುರುಡೆ ರಹಸ್ಯ: ದಿನಕ್ಕೆ ಅಂದಾಜು 2 ಲಕ್ಷ ರೂ. ಖರ್ಚು- ಯಾವುದಕ್ಕೆ ಎಷ್ಟು?

    ಶವ ಹೂತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ರಚನೆಯಾಗಿದ್ದು ಈಗ ನೆಲದ ಮೇಲೆ ಅಸ್ಥಿ  ಸಿಕ್ಕಿದ್ದರಿಂದ ಇದರ ತನಿಖೆಗೆ ಇಳಿದಿದೆ. ಈ ಮೊದಲು ಜಯಂತ್‌ ಟಿ ಅವರು ಧರ್ಮಸ್ಥಳ ಗ್ರಾಮದಲ್ಲಿ ಕಾನೂನು ಬಾಹಿರವಾಗಿ ಮೃತದೇಹಗಳನ್ನು ಹೂತು ಹಾಕಲಾಗಿದೆ. ಯುವತಿಯ ಮೃತದೇಹವನ್ನು ಹೂತು ಹಾಕಿರುವುದನ್ನು ತಾನು ನೋಡಿದ್ದೇನೆ ಎಂದು ಆರೋಪಿಸಿ ಧರ್ಮಸ್ಥಳ ಠಾಣೆಗೆ ದೂರು ನೀಡಿದ್ದರು. ಈ ಪ್ರಕರಣವೂ ಈಗ ಎಸ್‌ಐಟಿಗೆ ವರ್ಗಾವಣೆಯಾಗಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಜನ ದೂರು ನೀಡಲು ಮುಂದೆ ಬಂದರೆ ಎಸ್‌ಐಟಿ ಯಾವ ರೀತಿಯ ನಿರ್ಧಾರ ಕೈಗೊಳ್ಳುತ್ತದೆ. ಆ ಎಲ್ಲಾ ವ್ಯಕ್ತಿಗಳು ಮಾಡಿದ ದೂರುಗಳನ್ನು ಸ್ವೀಕಾರ ಮಾಡುತ್ತಾ ಎನ್ನುವ ದೊಡ್ಡ ಪ್ರಶ್ನೆ ಎದ್ದಿದೆ.

  • 11 ಲಕ್ಷದ ಚಿನ್ನ ಕದ್ದು ಪರಾರಿ – ನಾಲ್ಕು ಕೇಸ್‌ಲ್ಲಿ ಭಾಗಿಯಾಗಿದ್ದ ಕತರ್ನಾಕ್ ಕಳ್ಳ ಅರೆಸ್ಟ್

    11 ಲಕ್ಷದ ಚಿನ್ನ ಕದ್ದು ಪರಾರಿ – ನಾಲ್ಕು ಕೇಸ್‌ಲ್ಲಿ ಭಾಗಿಯಾಗಿದ್ದ ಕತರ್ನಾಕ್ ಕಳ್ಳ ಅರೆಸ್ಟ್

    ಯಾದಗಿರಿ: 11 ಲಕ್ಷ ರೂ. ಮೌಲ್ಯದ ಚಿನ್ನ ಕದ್ದು ಪರಾರಿಯಾಗಿದ್ದ ಕುಖ್ಯಾತ ಮನೆಗಳ್ಳನನ್ನು ಪೊಲೀಸರು ಬಂಧಿಸಿದ್ದಾರೆ.

    ವಿಜಯಪುರ ಜಿಲ್ಲೆಯ ಮೂಲದ ಸಂತೋಷ್ (43) ಬಂಧಿತ ಆರೋಪಿ. ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಗೋಗಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.ಇದನ್ನೂ ಓದಿ: ಟಿಪ್ಪು ಡ್ಯಾಂ ಕಟ್ಟಿದ್ದ ಅಂತ ನಾನು ಎಲ್ಲಿಯೂ ಕೂಡ ಹೇಳಿಲ್ಲ – ಮಹದೇವಪ್ಪ ಯೂಟರ್ನ್

    ಗೋಗಿ ಹಾಗೂ ಭೀಮರಾಯನಗುಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ನಾಲ್ಕು ಮನೆಗಳಲ್ಲಿ ಕಳ್ಳತನ ನಡೆದಿತ್ತು. ನಾಲ್ಕು ಪ್ರಕರಣಗಳಲ್ಲಿ ಈ ಕುಖ್ಯಾತ ಕಳ್ಳನ ಕೈವಾಡವಿತ್ತು. ಈ ಕುರಿತು ಗೋಗಿ ಹಾಗೂ ಭೀಮರಾಯನಗುಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

    ಸದ್ಯ ಗೋಗಿ ಪೊಲೀಸರು ಈತನನ್ನು ಬಂಧಿಸಿದ್ದು, 11 ಲಕ್ಷ ರೂ. ಮೌಲ್ಯದ 110 ಗ್ರಾಂ ಚಿನ್ನ ಹಾಗೂ 4 ಲಕ್ಷ ರೂ. ನಗದನ್ನು ವಶಕ್ಕೆ ಪಡೆದಿದ್ದಾರೆ.ಇದನ್ನೂ ಓದಿ: ಮೈಸೂರು ಮಹಾರಾಜರ ಕೊಡುಗೆಗೆ ಕಾಂಗ್ರೆಸ್ ಅಪಸ್ವರ – ಮಹದೇವಪ್ಪ ಮೊದ್ಲು ಇತಿಹಾಸ ಅರಿಯಲಿ: ಜೋಶಿ ಕಿಡಿ

  • ಮಚ್ಚಿನಿಂದ ಕೊಲೆಗೈದ ಕೇಸ್‌ಗೆ ಟ್ವಿಸ್ಟ್ – ಪ್ರಿಯತಮೆಗಾಗಿ ಮಾಜಿ ಲವ್ವರ್‌ನನ್ನೇ ಕೊಂದ ಪ್ರಿಯಕರ

    ಮಚ್ಚಿನಿಂದ ಕೊಲೆಗೈದ ಕೇಸ್‌ಗೆ ಟ್ವಿಸ್ಟ್ – ಪ್ರಿಯತಮೆಗಾಗಿ ಮಾಜಿ ಲವ್ವರ್‌ನನ್ನೇ ಕೊಂದ ಪ್ರಿಯಕರ

    -ಬಳಿಕ ಪೊಲೀಸರಿಗೆ ಶರಣಾದ ಆರೋಪಿ

    ಕೊಪ್ಪಳ: ನಡುರಸ್ತೆಯಲ್ಲೇ ಮಚ್ಚಿನಿಂದ ಕೊಚ್ಚಿ ಯುವಕನನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆಗೆ ಟ್ವಿಸ್ಟ್ ಸಿಕ್ಕಿದೆ. ಪ್ರಿಯತಮೆಯನ್ನು ತಾನೇ ಮದುವೆಯಾಗಬೇಕೆಂದು ಆಕೆಯ ಮಾಜಿ ಪ್ರಿಯಕರನನ್ನು ಹತೈಗೈದಿರುವುದಾಗಿ ವಿಷಯ ಬೆಳಕಿಗೆ ಬಂದಿದೆ.

    ಭಾನುವಾರ (ಆ.3) ರಾತ್ರಿ ಕೊಪ್ಪಳದ ಬಹದ್ದೂರ ಬಂಡಿ ರಸ್ತೆಯಲ್ಲಿರುವ ನಿರ್ಮಿತಿ ಕೇಂದ್ರದ ಸಮೀಪ ಮಸೀದಿ ಮುಂದೆ ಕೊಪ್ಪಳದ ಸೈಲಾನ್‌ಪುರ ಓಣಿಯ ಮೂಲದ ಆರೋಪಿ ಸಾದಿಕ್ ಗವಿಸಿದ್ಧಪ್ಪ ನಾಯಕ(27) ಎಂಬಾತನನ್ನು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ್ದ. ಬಳಿಕ ಆರೋಪಿ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾನೆ.ಇದನ್ನೂ ಓದಿ: ಸಾರಿಗೆ ಮುಷ್ಕರ ನಿಲ್ಲಿಸಲು KSRTC, BMTC ಕೊನೆಯ ಕಸರತ್ತು

    ಘಟನೆ ಸಂಬಂಧ ಮೃತನ ಕುಟುಂಬಸ್ಥರು ಸಾದಿಕ್ ಮತ್ತು ಇತರ ಮೂವರು ಸೇರಿ ಕೊಲೆ ಮಾಡಿದ್ದಾಗಿ ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ನಾಲ್ವರ ವಿರುದ್ಧ ಬಿಎನ್‌ಸ್ 103(1) 2023 ಹಾಗೂ ಎಸ್ಸಿ/ಎಸ್ಟಿ ಕಾಯ್ದೆ 1989ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣ ಸಂಬಂಧ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದಾಗ ಎರಡು ಮಚ್ಚುಗಳು ಪತ್ತೆಯಾಗಿದ್ದವು.

    ಕೊಲೆ ನಡೆದಿದ್ದು ಹೇಗೆ?
    ಭಾನುವಾರ ರಾತ್ರಿ 9 ಗಂಟೆ ಸುಮಾರಿಗೆ ಮೃತ ಗವಿಸಿದ್ದಪ್ಪ ನಾಯಕ ಬೈಕ್ ನಿಲ್ಲಿಸಿಕೊಂಡು ನಿಂತಿದ್ದ. ಈ ವೇಳೆ ಆತನನ್ನು ಕೊಚ್ಚಿ ಕೊಲೆ ಮಾಡಿದ್ದಾರೆ. ಬಳಿ ಸಾದಿಕ್ ಪೊಲೀಸರಿಗೆ ಶರಣಾಗಿ ನಾನೊಬ್ಬನೇ ಕೊಲೆ ಮಾಡಿರುವುದಾಗಿ ತಿಳಿಸಿದ್ದ.

    ಹಿನ್ನೆಲೆ ಏನು?
    ಕಳೆದ ಕೆಲ ದಿನಗಳ ಹಿಂದೆ ಕೃಷಿ ಸಾಮಗ್ರಿ ಮಾರಾಟ ಮಳಿಗೆಯಲ್ಲಿ ಗವಿಸಿದ್ದಪ್ಪ ನಾಯಕ ಮತ್ತು ಬಾನು ಕೆಲಸ ಮಾಡುತ್ತಿದ್ದರು. ಕೆಲಸ ಮಾಡುವ ಜಾಗದಲ್ಲಿ ಪರಿಚಯ ಆಗಿದ್ದ ಇವರು, ನಂತರ ಒಬ್ಬರಿಗೊಬ್ಬರು ಪ್ರೀತಿಸುತ್ತಿದ್ದರು. ಇಷ್ಟೇ ಅಲ್ಲದೇ ಸುಮಾರು 7 ತಿಂಗಳ ಹಿಂದೆ ಮೃತ ಗವಿಸಿದ್ದಪ್ಪ ಮತ್ತು ಆಗ ಅಪ್ರಾಪ್ತೆ ಆಗಿದ್ದ ಬಾನು ಮದುವೆಯಾಗಲು ಓಡಿ ಹೋಗಿದ್ದರು. ಆಗ ಬಾನು ಅಪ್ರಾಪ್ತೆ ಆಗಿದ್ದರಿಂದ ರಾಜಿ ಪಂಚಾಯಿತಿ ನಡೆದು, ಇವರನ್ನು ಬೇರೆ ಮಾಡಿದ್ದರು. ಘಟನೆ ನಂತರ ಇಬ್ಬರನ್ನೂ ಕೆಲಸ ಬಿಡಿಸಲಾಗಿತ್ತು. ಇದೇ ವೇಳೆ ಬಾನು ಆರೋಪಿ ಸಾದಿಕ್‌ನನ್ನು ಪ್ರೀತಿಸಿದ್ದಳು. ಜೊತೆಗೆ ಗವಿಸಿದ್ದಪ್ಪನ ಜೊತೆಗೂ ಪ್ರೀತಿ ಮುಂದುವರೆದಿತ್ತು.

    ಸ್ವಲ್ಪ ದಿನಗಳ ಬಳಿಕ ಆರೋಪಿ ಸಾದಿಕ್‌ಗೆ ಗವಿಸಿದ್ದಪ್ಪ ಹಾಗೂ ಬಾನು ಪ್ರೀತಿ ಬಗ್ಗೆ ವಿಷಯ ಗೊತ್ತಾಗಿತ್ತು. ಇದ್ರಿಂದ ರೊಚ್ಚಿಗೆದ್ದ ಸಾದಿಕ್ ಗವಿಸಿದ್ದಪ್ಪನಿಗೆ ತಕರಾರು ಮಾಡಿದ್ದ. ಇದಕ್ಕೆಲ್ಲಾ ತಲೆಕಡೆಸಿಕೊಳ್ಳದ ಗವಿಸಿದ್ದಪ್ಪ ಹಾಗೆಯೇ ಪ್ರೀತಿ ಮುಂದುವರೆಸಿದ್ದ. ಕೊನೆಗೆ ನಾನೇ ಬಾನು ಅನ್ನು ಮದುವೆಯಾಗಬೇಕೆಂದು ಸಾದಿಕ್ ಮಚ್ಚಿನಿಂದ ಕೊಚ್ಚಿ ಗವಿಸಿದ್ದಪ್ಪ ನಾಯಕನನ್ನು ಕೊಲೆ ಮಾಡಿದ್ದಾನೆ ಎಂದು ತಿಳಿದು ಬಂದಿದೆ.ಇದನ್ನೂ ಓದಿ: ರಮ್ಯಾಗೆ ಅಶ್ಲೀಲ ಮೆಸೇಜ್ ಕೇಸ್: ಪ್ರಜ್ವಲ್ ಕಿಡಿ

  • ಕೆಂಗೇರಿಯಲ್ಲಿ ಕಾಮುಕನ ವಿಕೃತಿ – ಮಹಿಳೆ ಮುಂದೆ ಪ್ಯಾಂಟ್ ಬಿಚ್ಚಿ ಅಸಭ್ಯ ವರ್ತನೆ

    ಕೆಂಗೇರಿಯಲ್ಲಿ ಕಾಮುಕನ ವಿಕೃತಿ – ಮಹಿಳೆ ಮುಂದೆ ಪ್ಯಾಂಟ್ ಬಿಚ್ಚಿ ಅಸಭ್ಯ ವರ್ತನೆ

    ಬೆಂಗಳೂರು: ಮಹಿಳೆಯೊಬ್ಬಳ (Woman) ಮುಂದೆ ಕಾಮುಕನೊಬ್ಬ ಪ್ಯಾಂಟ್ ಬಿಚ್ಚಿ ಅಸಭ್ಯ ವರ್ತನೆ ತೋರಿಸಿರುವುದು ಕೆಂಗೇರಿಯಲ್ಲಿ (Kengeri) ನಡೆದಿದೆ. ಇದನ್ನು ಪ್ರಶ್ನಿಸಿದ್ದಕ್ಕೆ ಮಹಿಳೆಯ ಮೇಲೆ ಹಲ್ಲೆ ಮಾಡಿ ಮಾಡಿ ಆತ ಅಟ್ಟಹಾಸ ಮೆರೆದಿದ್ದಾನೆ.

    ಚಂದ್ರಾಹಸನ್ ಎಂಬಾತ ಮಹಿಳೆಯೊಬ್ಬರ ಮುಂದೆ ಜಿಪ್ ಓಪನ್ ಮಾಡಿ ಅಸಭ್ಯ ವರ್ತನೆ ಮಾಡಿದ್ದಾನೆ. ಕೆಂಗೇರಿ ಉಪ ನಗರದಲ್ಲಿ ಮಾರ್ಟ್‌ ಒಂದರ ವಾಚ್ ಮ್ಯಾನ್ ಆಗಿರೋ ಈತ ಮಾಲ್‍ಗೆ ಬರುವ ಹೆಣ್ಮಕ್ಕಳ ಮುಂದೆ ಅಸಭ್ಯವಾಗಿ ವರ್ತಿಸುತ್ತಿದ್ದ. ಇದನ್ನ ಮಾರ್ಟ್‍ನ ಮ್ಯಾನೇಜರ್‌ಗೆ ಹೇಳಲು ಮಹಿಳೆಯೊಬ್ಬಳು ಹೇಳಲು ಹೋದಾಗ ಆ ಮಹಿಳೆಯ ಮುಂದೆ ಪ್ಯಾಂಟ್ ಜಿಪ್ ಬಿಚ್ಚಿ, ಅಶ್ಲೀಲವಾಗಿ ನಿಂದಿಸಿ ಅಸಭ್ಯವಾಗಿ ವರ್ತಿಸಿದ್ದಾನೆ. ಈ ಕುರಿತು ಮಹಿಳೆ ಕೆಂಗೇರಿ ಪೊಲೀಸರಿಗೆ ದೂರು ನೀಡಿದ್ದಾರೆ. ಇದನ್ನೂ ಓದಿ: ಕೊಪ್ಪಳ| ನಡುರಸ್ತೆಯಲ್ಲೇ ಮಚ್ಚಿನಿಂದ ಕೊಚ್ಚಿ ಯುವಕನ ಭೀಕರ ಕೊಲೆ

    ಮಾರ್ಟ್‌ ಸಮೀಪವೇ ಮಹಿಳೆಯ ಅಂಗಡಿ ಇದೆಯಂತೆ. ಈ ಚಂದ್ರಹಾಸನ್ ಜಾಗದ ವಿಚಾರವಾಗಿ ಗಲಾಟೆ ಮಾಡಿದ್ದನ್ನಂತೆ. ಇನ್ನೂ ಮಾರ್ಟ್‍ಗೆ ಬರುವ ಹಣ್ಮಕ್ಕಳಿಗೆ, ಅಲ್ಲಿ ಕೆಲಸ ಮಾಡುವ ಕೆಲ ಯುವತಿಯರ ಜೊತೆಯೂ ಅಸಭ್ಯವಾಗಿ ವರ್ತಿಸ್ತಿದ್ದನಂತೆ. ಈ ವಿಚಾರಗಳ ಬಗ್ಗೆ ಮಹಿಳೆ ಸಂಜೆ ಮ್ಯಾನೇಜರ್‍ಗೆ ಹೇಳಲು ಹೋದಾಗ ಈ ಗಲಾಟೆಯಾಗಿದೆ. ಮಾತಿಗೆ ಮಾತು ಶುರುವಾಗಿ ಮಹಿಳೆ ಮೇಲೆ ಈ ವ್ಯಕ್ತಿ ಹಲ್ಲೆ ಮಾಡಿದ್ದು, ಕತ್ತು, ಕಿವಿಗೆ ಗಾಯವಾಗಿದ್ದು, ರಕ್ತಸ್ರಾವ ಆಗಿದೆ.

    ಅಲ್ಲಿನ ಸ್ಥಳೀಯರು ಚಂದ್ರಹಾಸ್‍ಗೆ ಕ್ಲಾಸ್ ತೆಗದುಕೊಂಡಿದ್ದಾರೆ. ಅಲ್ಲಿದ್ದ ಸಾರ್ವಜನಿಕರು ಗೂಸಾ ನೀಡಲು ಮುಂದಾದಾಗ ಪೊಲೀಸರು ಸ್ಥಳಕ್ಕೆ ಬಂದು ಆತನನ್ನು ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿ: ಪತಿಯನ್ನು ಪತ್ನಿಯೇ ನದಿಗೆ ತಳ್ಳಿದ ಕೇಸ್‌ಗೆ ಟ್ವಿಸ್ಟ್‌; ಬಾಲ್ಯವಿವಾಹ ಕೇಸಲ್ಲಿ ನಾಪತ್ತೆಯಾಗಿದ್ದ ಗಂಡ ಅರೆಸ್ಟ್‌

  • 6 ಜನರಿಂದ ಬಾಲಕಿ ಮೇಲೆ ನಿರಂತರ ಅತ್ಯಾಚಾರ – ಮೂವರು ಕಾಮುಕರು ಅರೆಸ್ಟ್

    6 ಜನರಿಂದ ಬಾಲಕಿ ಮೇಲೆ ನಿರಂತರ ಅತ್ಯಾಚಾರ – ಮೂವರು ಕಾಮುಕರು ಅರೆಸ್ಟ್

    ಕೋಲಾರ: ಬಾಲಕಿಯೊಬ್ಬಳ ಮೇಲೆ ನಿರಂತರ ಪ್ರತ್ಯೇಕವಾಗಿ 6 ಜನ ಅತ್ಯಾಚಾರವೆಸಗಿರುವುದು ಕೋಲಾರ (Kolar) ಜಿಲ್ಲೆಯ ವೇಮಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.

    ಬಂಧಿತರನ್ನು ರಾಹುಲ್, ನಾಗೇಶ್ ಹಾಗೂ ಪುನೀತ್ ಎಂದು ಗುರುತಿಸಲಾಗಿದೆ. ತಲೆಮರೆಸಿಕೊಂಡಿರುವ ಚೇತನ್, ಕಿರಣ್, ಮಹೇಂದ್ರಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಇದನ್ನೂ ಓದಿ: ಜಾಮೀನಿನ ಮೇಲೆ ಹೊರಗೆ ಬಂದು ಸಂತ್ರಸ್ತೆಗೆ ಗುಂಡು ಹಾರಿಸಿದ ರೇಪ್‌ ಆರೋಪಿ

    ಬಾಲಕಿ ನೀಡಿದ ಹೇಳಿಕೆ ಆಧರಿಸಿ ಆರು ಜನರ ವಿರುದ್ದ ಜು.18 ರಂದು ಕೋಲಾರ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದನ್ನೂ ಓದಿ: ಅಶ್ಲೀಲ ವಿಡಿಯೋದಲ್ಲಿ ಇದ್ದದ್ದು ಪ್ರಜ್ವಲ್‌ ಅಂತ ಪತ್ತೆಹಚ್ಚಿದ್ದೇ ಹೊಸ ತಂತ್ರಜ್ಞಾನ – ದೇಶದಲ್ಲೇ ಮೊದಲ ಪ್ರಯೋಗ

  • ಜಾಮೀನಿನ ಮೇಲೆ ಹೊರಗೆ ಬಂದು ಸಂತ್ರಸ್ತೆಗೆ ಗುಂಡು ಹಾರಿಸಿದ ರೇಪ್‌ ಆರೋಪಿ

    ಜಾಮೀನಿನ ಮೇಲೆ ಹೊರಗೆ ಬಂದು ಸಂತ್ರಸ್ತೆಗೆ ಗುಂಡು ಹಾರಿಸಿದ ರೇಪ್‌ ಆರೋಪಿ

    ನವದೆಹಲಿ: ಅತ್ಯಾಚಾರ ಆರೋಪಿಯೊಬ್ಬ ಜಾಮೀನಿನ ಮೇಲೆ ಜೈಲಿಂದ ಹೊರಗೆ ಬಂದು ಸಂತ್ರಸ್ತೆಯ ಮೇಲೆ ಗುಂಡಿನ ದಾಳಿ ನಡೆಸಿದ ಘಟನೆ ದೆಹಲಿಯಲ್ಲಿ (Delhi) ನಡೆದಿದೆ.

    ಅಬುಜೈರ್ ಶಫಿ (30) ಎಂಬಾತನ ವಿರುದ್ಧ ಗುಂಡಿನ ದಾಳಿಗೊಳಗಾದ ಮಹಿಳೆ ಕಳೆದ ವರ್ಷ ನಗರದ ವಸಂತ ವಿಹಾರ್‌ ಪೊಲೀಸ್‌ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಿಸಿದ್ದರು. ಈ ಸಂಬಂಧ ಆತನನ್ನು ಪೊಲೀಸರು ಬಂಧಿಸಿದ್ದರು. ಇತ್ತೀಚೆಗೆ ಆತ ಮಧ್ಯಂತರ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ. ಬಳಿಕ ಸಂತ್ರಸ್ತೆಯನ್ನು ಸಂಪರ್ಕಿಸಲು ಪ್ರಯತ್ನಿಸಿದ್ದ. ಆದರೆ ಮಹಿಳೆ ಆತನೊಂದಿಗೆ ಮಾತನಾಡಲು ನಿರಾಕರಿಸಿದ್ದಳು ಇದೇ ಕಾರಣಕ್ಕೆ ಆತ ಹಾಗೂ ಆತನ ಸಹಚರರು ಮಹಿಳೆಯ ಮೇಲೆ ಗುಂಡು ಹಾರಿಸಿದ್ದಾರೆ. ಇದನ್ನೂ ಓದಿ: ಪ್ರಜ್ವಲ್‌ಗೆ ಶಿಕ್ಷೆ ಬೆನ್ನಲ್ಲೇ ಪೆನ್‌ಡ್ರೈವ್‌ ಹಂಚಿದವರಿಗೆ ಶುರುವಾಯ್ತು ನಡುಕ!

    ಗುಂಡೇಟಿನಿಂದ ಮಹಿಳೆಯ ಎದೆಗೆ ಗಾಯವಾಗಿದೆ. ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆರೋಗ್ಯ ಸ್ಥಿರವಾಗಿದೆ. ಮಹಿಳೆಯ ಹೇಳಿಕೆ ಆಧರಿಸಿ, ಅಬುಜೈರ್ ಶಫಿ ಮತ್ತು ಅವನ ಸಹಚರ ಅಮನ್ ಶುಕ್ಲಾನನ್ನು ಪೊಲೀಸರು ಬಂಧಿಸಿದ್ದಾರೆ.

    ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಪೊಲೀಸರು, ಮಹಿಳೆ ಆಟೋದಲ್ಲಿ ತೆರಳುತ್ತಿದ್ದಾಗ ಬೈಕ್‌ನಲ್ಲಿ ಬಂದ ಆರೋಪಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಈ ಸಂಬಂಧ ಆರೋಪಿಗಳ ವಿರುದ್ಧ ವಸಂತ್ ವಿಹಾರ್ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತಾ ಸೆಕ್ಷನ್ 109(1) (ಕೊಲೆ ಯತ್ನ) ಮತ್ತು ಶಸ್ತ್ರಾಸ್ತ್ರ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಮನೆಗೆಲಸದಾಕೆ ಮೇಲೆ ಅತ್ಯಾಚಾರ ಕೇಸ್ – ಅಪರಾಧಿ ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ

  • ಬಳ್ಳಾರಿ | ತಂಗಿ ಜೊತೆಗಿದ್ದ ಫೋಟೋ ಶೇರ್ ಮಾಡಿದ್ದಕ್ಕೆ ಬ್ಯಾಟ್‍ನಿಂದ ಅಮಾನುಷ ಹಲ್ಲೆ – ವಿಡಿಯೋ ವೈರಲ್‌

    ಬಳ್ಳಾರಿ | ತಂಗಿ ಜೊತೆಗಿದ್ದ ಫೋಟೋ ಶೇರ್ ಮಾಡಿದ್ದಕ್ಕೆ ಬ್ಯಾಟ್‍ನಿಂದ ಅಮಾನುಷ ಹಲ್ಲೆ – ವಿಡಿಯೋ ವೈರಲ್‌

    ಬಳ್ಳಾರಿ: ತಂಗಿಯ ಜೊತೆಗಿದ್ದ ಫೋಟೋವನ್ನು ಇನ್ಸ್ಟಾದಲ್ಲಿ ಶೇರ್ ಮಾಡಿದ್ದಕ್ಕೆ ಗುಂಪು ಕಟ್ಟಿಕೊಂಡು ಬಂದು ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಬಳ್ಳಾರಿಯಲ್ಲಿ (Ballari) ನಡೆದಿದೆ.

    ದೊಡ್ಡಬಸವ (19) ಹಲ್ಲೆಗೊಳಗಾದ ಯುವಕ. ಶಶಿಕುಮಾರ್, ಸಾಯಿಕುಮಾರ್ ಸೇರಿ ಒಟ್ಟು 10 ಜನರಿಂದ ಹಲ್ಲೆ ನಡೆದಿದೆ. ಹಲ್ಲೆ ನಡೆಸಿದ ಯುವಕನೊಬ್ಬನ ತಂಗಿಯ ಜೊತೆ ಕಾರ್ಯಕ್ರಮ ಒಂದರಲ್ಲಿ ದೊಡ್ಡಬಸವ ಫೋಟೋ ತೆಗಿಸಿದ್ದ. ಅದನ್ನು ಇನ್ಸ್ಟಾದಲ್ಲಿ ಸ್ಟೇಟಸ್ ಹಾಕಿದ್ದ. ಇದೇ ಕಾರಣಕ್ಕೆ ಬೈಕ್‍ನಲ್ಲಿ ಐಟಿಐ ಕಾಲೇಜು ಮೈದಾನಕ್ಕೆ ಕರೆದೊಯ್ದು ಕ್ರಿಕೆಟ್ ಬ್ಯಾಟ್ ಹಾಗೂ ಬೆಲ್ಟ್‌ನಿಂದ ಅಮಾನುಷವಾಗಿ ಹಲ್ಲೆ ನಡೆಸಲಾಗಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಹಲ್ಲೆ ನಡೆಸಿದವರೆಲ್ಲ ಕಾಲೇಜು ವಿದ್ಯಾರ್ಥಿಗಳು ಎಂದು ತಿಳಿದು ಬಂದಿದೆ. ಇದನ್ನೂ ಓದಿ: ದರ್ಶನ್‌ಗೆ ಕೊಟ್ಟಂತೆ ನನಗೂ ಬೇಲ್ ಕೊಡಿ – ನೇಹಾ ಕೊಲೆ ಆರೋಪಿಯಿಂದ ಕೋರ್ಟ್‌ಗೆ ಮನವಿ

    ಕಾಲಿಗೆ ಬೀಳ್ತೀನಿ, ಕೈ ಮುಗಿತೀನಿ ಎಂದು ಯುವಕ ಅಂಗಾಲಾಚಿದ್ರೂ ಕರುಣೆ ತೋರದೇ ಮನಬಂದಂತೆ ಪುಂಡರು ಹಲ್ಲೆ ನಡೆಸಿದ್ದಾರೆ. ಹಲ್ಲೆಗೊಳಗಾಗಿರುವ ಯುವಕನ ತುಟಿ, ದವಡೆ, ಬೆನ್ನು, ಎದೆ, ಪಕ್ಕೆಲುಬು ಹಾಗೂ ಸೊಂಟಕ್ಕೆ ಗಾಯಗಳಾಗಿವೆ. ಈ ಸಂಬಂಧ ಬಳ್ಳಾರಿಯ ಕೌಲ್ ಬಜಾರ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಇದನ್ನೂ ಓದಿ: ಧಾರಾಕಾರ ಮಳೆ ನಡುವೆ ನಂ.10 ರಲ್ಲಿ ಶೋಧ – ದೂರುದಾರ ವ್ಯಕ್ತಿಗೆ ಮತ್ತೆ ನಿರಾಸೆ

  • ಕಿಡ್ನ್ಯಾಪ್‌ & ಮರ್ಡರ್ ಕೇಸ್‌ –  ಬಾಲಕನ ಮನೆಯಲ್ಲಿ ಚಾಲಕನಾಗಿದ್ದವನಿಂದಲೇ ಕೃತ್ಯ

    ಕಿಡ್ನ್ಯಾಪ್‌ & ಮರ್ಡರ್ ಕೇಸ್‌ – ಬಾಲಕನ ಮನೆಯಲ್ಲಿ ಚಾಲಕನಾಗಿದ್ದವನಿಂದಲೇ ಕೃತ್ಯ

    ಬೆಂಗಳೂರು: ಹುಳಿಮಾವು (Hulimavu) ಬಳಿ ಬಾಲಕನನ್ನು ಕಿಡ್ನ್ಯಾಪ್‌ ಮಾಡಿ ಕೊಲೆ ಮಾಡಿದ್ದ ಇಬ್ಬರು ಆರೋಪಿಗಳ ಕಾಲಿಗೆ ಪೊಲೀಸರು (Police) ಗುಂಡೇಟು ನೀಡಿದ್ದಾರೆ. ಗುಂಡೇಟು ತಿಂದ ಆರೋಪಿಗಳಲ್ಲಿ ಓರ್ವ, ಬಾಲಕನ ಮನೆಯಲ್ಲಿ ಹಿಂದೆ ಚಾಲಕನಾಗಿ ಕೆಲಸ ಮಾಡಿದ್ದ. ಇದೇ ಸಲುಗೆಯಿಂದ ಸುಲಭವಾಗಿ ಬಾಲಕನನ್ನು ಆರೋಪಿ ಅಪಹರಿಸಿದ್ದ.

    ಪ್ರಕರಣದ ಆರೋಪಿಗಳಾದ ಗುರುಮೂರ್ತಿ ಮತ್ತು ಗೋಪಾಲನನ್ನು ಪೊಲೀಸರು ಬಂಧಿಸಲು ತೆರಳಿದ್ದರು. ಈ ವೇಳೆ, ಇಬ್ಬರು ಸೇರಿ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ್ದು, ಆತ್ಮರಕ್ಷಣೆಗಾಗಿ ಆರೋಪಿಗಳ ಕಾಲಿಗೆ ಗುಂಡು ಹಾರಿಸಿದ್ದಾರೆ. ಗುಂಡೇಟಿನಿಂದ ಗಾಯಗೊಂಡ ಆರೋಪಿಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: ಆನೇಕಲ್ | ಟ್ಯೂಷನ್‌ಗೆ ಹೋಗ್ತಿದ್ದ ಬಾಲಕನ ಕಿಡ್ನ್ಯಾಪ್ ಮಾಡಿ ಬರ್ಬರ ಹತ್ಯೆ

    ಆರೋಪಿ ಗುರುಮೂರ್ತಿ ಈ‌ ಹಿಂದೆ ನಿಶ್ಚಿತ್ ಮನೆಯಲ್ಲಿ ಡೈವರ್ ಆಗಿ ಕೆಲಸ ಮಾಡಿದ್ದ. ಇನ್ನೂ ಅಪಹರಣಕ್ಕೆ ಸಾಥ್ ನೀಡಿದ್ದ ಗೋಪಾಲ, ಕದ್ದಿದ್ದ ಮೊಬೈಲ್‌ನಿಂದ ನಿಶ್ವಿತ್ ತಂದೆಗೆ ಕರೆ ಮಾಡಿ ಹಣಕ್ಕೆ ಬೇಡಿಕೆ ಇಟ್ಟಿದ್ದ ಎಂದು ತಿಳಿದುಬಂದಿದೆ.

    ಏನಿದು ಪ್ರಕರಣ?
    ಹುಳಿಮಾವು ಪೊಲೀಸ್ ಠಾಣಾ ವ್ಯಾಪ್ತಿಯ ಅಚ್ಯುತ್ ಮತ್ತು ಕವಿತಾ ದಂಪತಿಯ ಪುತ್ರ ನಿಶ್ಚಿತ್ (13) ಬುಧವಾರ ಸಂಜೆ ಟ್ಯೂಷನ್‌ಗೆ ಹೋಗಿದ್ದಾಗ ಆರೋಪಿಗಳು ಕಿಡ್ನ್ಯಾಪ್‌ ಮಾಡಿದ್ದರು. ಸಂಜೆ 7:30ಕ್ಕೆ ಟ್ಯೂಷನ್‌ ಮುಗಿಸಿಕೊಂಡು ಪ್ರತಿನಿತ್ಯ ಮನೆಗೆ ವಾಪಸ್ ಬರುತ್ತಿದ್ದ ಮಗ 8 ಗಂಟೆಯಾದರೂ ವಾಪಸ್ ಬಂದಿರಲಿಲ್ಲ. ಇದರಿಂದ ಆತಂಕಗೊಂಡ ಪೋಷಕರು ಟ್ಯೂಷನ್ ಶಿಕ್ಷಕರಿಗೆ ಕರೆ ಮಾಡಿ ವಿಚಾರಿಸಿದ್ದರು. ಆಗ ಟ್ಯೂಷನ್ ಮುಗಿಸಿಕೊಂಡು 7:30ಕ್ಕೆ ಹೋಗಿದ್ದಾಗಿ ಅವರು ಹೇಳಿದ್ದರು.

    ಇದರಿಂದ ಗಾಬರಿಗೊಂಡ ಪೋಷಕರು ಮಗನ ಸ್ನೇಹಿತರು ಮತ್ತು ನೆಂಟರಿಗೆ ಕರೆ ಮಾಡಿ ವಿಚಾರಿಸಿದ್ದರು. ಯಾರ ಕಡೆಯಿಂದನೂ ನಿಶ್ಚಿತ್ ಬಗ್ಗೆ ಮಾಹಿತಿ ಸಿಕ್ಕಿರಲಿಲ್ಲ. ಆದರೆ ನಿಶ್ಚಿತ್ ಸೈಕಲ್ ಅರೆಕೆರೆ ಸಮೀಪದ ಫ್ಯಾಮಿಲಿ ಪಾರ್ಕ್ ಬಳಿ ಪತ್ತೆ ಆಗಿತ್ತು. ಇದರಿಂದ ಗಾಬರಿಗೊಂಡ ಪೋಷಕರು ಹುಳಿಮಾವು ಪೊಲೀಸರಿಗೆ ಮಗ ಕಾಣೆ ಆಗಿರುವ ಬಗ್ಗೆ ದೂರು ನೀಡಿದ್ದರು.

    ಮರುದಿನ ನಿಶ್ಚಿತ್‌ನ ತಂದೆಗೆ ಆರೋಪಿಗಳು ಕರೆ ಮಾಡಿ, 5 ಲಕ್ಷ ರೂ.ಗೆ ಬೇಡಿಕೆ ಇಟ್ಟಿದ್ದರು. ಈ ವಿಚಾರವನ್ನು ನಿಶ್ಚಿತ್ ತಂದೆ ಪೊಲೀಸರಿಗೆ ತಿಳಿಸಿದ್ದರು. ಪೊಲೀಸರು ಟವರ್ ಲೊಕೇಷನ್ ಟ್ರ್ಯಾಕ್ ಮಾಡುವಷ್ಟರಲ್ಲಿ ಬಾಲಕನ ಮೃತದೇಹ ಅರೆಬೆಂದ ಸ್ಥಿತಿಯಲ್ಲಿ ಬನ್ನೇರುಘಟ್ಟ (Bannerugatta) ಬಳಿಯ ಅರಣ್ಯ ಪ್ರದೇಶದಲ್ಲಿ ಪತ್ತೆಯಾಗಿತ್ತು. ಈ ಬಗ್ಗೆ ಕುರಿಗಾಯಿಗಳು ಮೃತ ದೇಹವನ್ನು ನೋಡಿ ಬನ್ನೇರುಘಟ್ಟ ಪೊಲೀಸರಿಗೆ ಮಾಹಿತಿ ನೀಡಿದ್ದರು. ಇದನ್ನೂ ಓದಿ: ಚಿಕ್ಕಬಳ್ಳಾಪುರ | ತುಂಬಿದ ಬಸ್‌ಗಳಲ್ಲಿ ಕೈಚಳಕ ತೋರಿಸ್ತಿದ್ದ ಕಳ್ಳಿಯರ ಗ್ಯಾಂಗ್‌‌ ಲಾಕ್‌

  • ತಾಯಿಯನ್ನು ಕೊಂದ ಪಾಪಿಯಿಂದ ತಂದೆಯ ಮೇಲೂ ಮೃಗೀಯ ವರ್ತನೆ – ಚರ್ಮ ಸುಲಿಯುವಂತೆ ಹಲ್ಲೆ

    ತಾಯಿಯನ್ನು ಕೊಂದ ಪಾಪಿಯಿಂದ ತಂದೆಯ ಮೇಲೂ ಮೃಗೀಯ ವರ್ತನೆ – ಚರ್ಮ ಸುಲಿಯುವಂತೆ ಹಲ್ಲೆ

    ಚಿಕ್ಕಮಗಳೂರು: ತಾಲೂಕಿನ ಅರೆನೂರು ಸಮೀಪದ ಹಕ್ಕಿಮಕ್ಕಿ ಗ್ರಾಮದಲ್ಲಿ ತಾಯಿಯನ್ನು (Mother) ಕೊಂದು ಸುಟ್ಟು ಹಾಕಿ ಅಂದರ್‌ ಆಗಿರುವ ಆರೋಪಿ ಪವನ್, ತಿಂಗಳ ಹಿಂದೆ ಅಪ್ಪನ ಮೇಲೂ ಮೃಗೀಯ ವರ್ತನೆ ತೋರಿದ್ದ ಎಂಬುದು ಗೊತ್ತಾಗಿದೆ. ತಂದೆಯ ಮೇಲೂ ಲೆದರ್ ಬೆಲ್ಟ್‌ನಿಂದ ಮನಸ್ಸೋ ಇಚ್ಛೆ ಹಲ್ಲೆ ಮಾಡಿದ್ದ ಎಂಬುದು ತಿಳಿದು ಬಂದಿದೆ.

    ಪವನ್‌ ತನ್ನ ಅಪ್ಪನ ಬೆನ್ನಿನ ಚರ್ಮ ಸುಲಿಯುವಂತೆ ಬೆಲ್ಟ್‌ನಿಂದ ಹೊಡೆದಿದ್ದ. ನಿತ್ಯ ಕೂಲಿ ಕೆಲಸ ಮಾಡೋದು ಸಂಜೆ ಕುಡಿದು ಬಂದು ಅಪ್ಪ-ಅಮ್ಮನನ್ನ ಹೊಡೆಯೋದು ಇವನ ಕಾಯಕವಾಗಿತ್ತು. ಹೆತ್ತವರು ಕೂಡ ಮಗನೆಂಬ ಮಮಕಾರದಿಂದ ಪೊಲೀಸರಿಗೂ ದೂರು ನೀಡಿರಲಿಲ್ಲ. ಅಲ್ಲದೇ ಯಾರಿಗೂ ಹೇಳಿರಲಿಲ್ಲ. ಆದರೂ ಈ ವಿಷಯ ತಿಳಿದ ಸ್ಥಳೀಯರು ಪವನ್‌ಗೆ ಬುದ್ಧಿವಾದ ಹೇಳಿದ್ದರು. ಆದರೂ, ಕುಡಿದು ಅಪ್ಪ-ಅಮ್ಮನಿಗೆ ಹೊಡೆಯುವುದನ್ನು ಬಿಟ್ಟಿರಲಿಲ್ಲ. ಈಗ ಆತನ ದುಷ್ಕೃತ್ಯದಿಂದ ಪೊಲೀಸರ ಅತಿಥಿ ಆಗಿದ್ದಾನೆ. ಇದನ್ನೂ ಓದಿ: ಕುಡಿದ ಮತ್ತಿನಲ್ಲಿ ತಾಯಿಗೆ ಬೆಂಕಿ – ಶವದ ಪಕ್ಕವೇ ಮಲಗಿದ್ದ ಪುತ್ರ ಅರೆಸ್ಟ್‌

    ಅರೆನೂರು ಸಮೀಪದ ಹಕ್ಕಿಮಕ್ಕಿ ಗ್ರಾಮದಲ್ಲಿ ಆರೋಪಿ ಪವನ್ ಕಳೆದ ರಾತ್ರಿ ಕುಡಿದು ಬಂದು ತಾಯಿ ಭವಾನಿ (52) ಜೊತೆ ಗಲಾಟೆ ಮಾಡಿ ಕೊಂದು ಮನೆಯಲ್ಲೇ ಸುಟ್ಟು ಹಾಕಿದ್ದ. ಈ ವೇಳೆ ಕುಡಿದ ಮತ್ತಿನಲ್ಲಿ ಬೆಂಕಿ ಹಚ್ಚಿದ್ದ ಮೃತದೇಹದ ಪಕ್ಕದಲೇ ಮಲಗಿದ್ದ. ಅಪ್ಪನಿಂದ ವಿಷಯ ತಿಳಿದು ಸ್ಥಳೀಯರು ಬೆಂಕಿ ನಂದಿಸಿದ್ದರು. ಆದರೂ ಯಾವುದೇ ಪ್ರಯೋಜನವಾಗಿರಲಿಲ್ಲ. ಇದನ್ನೂ ಓದಿ: ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರಳಿದ ಸಾರಿಗೆ ಬಸ್ – ಪ್ರಯಾಣಿಕರು ಸೇಫ್