Tag: political leaders

  • ಮುರುಘಾ ಶ್ರೀಗಳ ಪ್ರಕರಣದಲ್ಲಿ ರಾಜಕೀಯ ಪಕ್ಷಗಳ ಎಚ್ಚರಿಕೆಯ ಹೆಜ್ಜೆ

    ಮುರುಘಾ ಶ್ರೀಗಳ ಪ್ರಕರಣದಲ್ಲಿ ರಾಜಕೀಯ ಪಕ್ಷಗಳ ಎಚ್ಚರಿಕೆಯ ಹೆಜ್ಜೆ

    ಬೆಂಗಳೂರು: ಪೋಕ್ಸೋ ಪ್ರಕರಣದಲ್ಲಿ ಬಂಧನವಾಗಿರುವ ಮುರುಘಾ ಶ್ರೀಗಳ ವಿಚಾರದಲ್ಲಿ ರಾಜಕೀಯ ಪಕ್ಷಗಳು ಎಚ್ಚರಿಕೆಯ ಹೆಜ್ಜೆ ಇಡುತ್ತಿದೆ.

    ಮೊದಲು ಬಿ.ಎಸ್ ಯಡಿಯೂರಪ್ಪ ಸೇರಿ ಬಿಜೆಪಿಯ ಹಲವರು ಸ್ವಾಮೀಜಿ ಪರ ಬಹಿರಂಗವಾಗಿ ಬ್ಯಾಟ್ ಬೀಸಿದ್ರು. ಆದ್ರೆ, ಸಾರ್ವಜನಿಕವಾಗಿ ಆಕ್ರೋಶ ಹೆಚ್ಚಾದ ಬೆನ್ನಲ್ಲೇ ಹೈಕಮಾಂಡ್ ಅಲರ್ಟ್ ಆಗಿದೆ. ಶಿವಮೂರ್ತಿ ಶ್ರೀಗಳನ್ನು ವಹಿಸಿಕೊಂಡು ಮಾತನಾಡಬೇಡಿ. ವಿರೋಧಿಸಿಯೂ ಮಾತನಾಡಬೇಡಿ. ಕಾನೂನು ಪ್ರಕಾರ ಎಲ್ಲಾ ನಡೆಯಲಿ ಎಂಬ ಸಂದೇಶವನ್ನು ರವಾನಿಸಿದೆ. ಅದಕ್ಕೆ ತಕ್ಕಂತೆಯೇ ಇಂದು ಸಿಎಂ ಬಸವರಾಜ ಬೊಮ್ಮಾಯಿ ಸೇರಿದಂತೆ ಬಿಜೆಪಿ ನಾಯಕರು ಪ್ರತಿಕ್ರಿಯೆ ನೀಡಿದ್ದಾರೆ. ಇದನ್ನೂ ಓದಿ: ಮುರುಘಾ ಶ್ರೀ 4 ದಿನ ಪೊಲೀಸ್ ಕಸ್ಟಡಿಗೆ

    ಕಾಂಗ್ರೆಸ್ ಕೂಡ ಈ ವಿಚಾರದಲ್ಲಿ ಅಂತರ ಕಾಯ್ದುಕೊಂಡಿದೆ. ಯಾವ ರೀತಿ ಹೇಳಿಕೆ ನೀಡಿದ್ರೆ ಏನಾಗುತ್ತೋ ಎಂಬ ಆತಂಕ, ಗೊಂದಲ ಕಾಂಗ್ರೆಸ್ಸಿಗರಲ್ಲಿ ಕಾಣುತ್ತಿದೆ. ರಾಜಕೀಯ ಲಾಭ ನಷ್ಟದ ಲೆಕ್ಕಾಚಾರ ಹಾಕಿದಂತೆ ಕಂಡುಬರುತ್ತಿದೆ. ಚಿತ್ರದುರ್ಗದ ಮುರುಘಾ ಮಠದ ಸ್ವಾಮಿಗಳ ವಿರುದ್ಧದ ಆರೋಪ ಗಂಭೀರ ಸ್ವರೂಪದ್ದಾಗಿದೆ. ಪೊಲೀಸರು ಯಾವುದೇ ಒತ್ತಡಕ್ಕೊಳಗಾಗದೆ ಸಂತ್ರಸ್ತ ವಿದ್ಯಾರ್ಥಿನಿಯರ ದೂರಿನ ಬಗ್ಗೆ ನಿಷ್ಪಕ್ಷಪಾತವಾಗಿ ತನಿಖೆ ನಡೆಸಿ ಸತ್ಯಸಂಗತಿಯನ್ನು ಬಹಿರಂಗಗೊಳಿಸಬೇಕು ಎಂದಷ್ಟೇ ಸಿದ್ದರಾಮಯ್ಯ ಟ್ವೀಟಿಸಿದ್ದಾರೆ. ಮಾಜಿ ಸಿಎಂ ಕುಮಾರಸ್ವಾಮಿ ಮಾತನಾಡುತ್ತಾ ಇದು ಸೂಕ್ಷ್ಮ ವಿಚಾರ. ಸರ್ಕಾರ ಜವಾಬ್ದಾರಿಯುತವಾಗಿ ನಡೆದುಕೊಳ್ಳಲಿ ಎಂದಿದ್ದಾರೆ. ಇದನ್ನೂ ಓದಿ: ಟ್ವಿಟ್ಟರ್‌ನಲ್ಲಿ ಮೋದಿ ವಿರುದ್ಧ ಆಕ್ರೋಶ – ಮೋದಿ ಮೋಸ, ಗೋ ಬ್ಯಾಕ್ ಮೋದಿ ಅಭಿಯಾನ

    Live Tv
    [brid partner=56869869 player=32851 video=960834 autoplay=true]

  • ಇಸ್ಪೀಟ್ ಅಡ್ಡೆ ಮೇಲೆ ಪೊಲೀಸರ ದಾಳಿ – ಕೈ, ಕಮಲ ಮುಖಂಡರು ಸೇರಿ 126 ಜನರ ಮೇಲೆ ಕೇಸ್

    ಇಸ್ಪೀಟ್ ಅಡ್ಡೆ ಮೇಲೆ ಪೊಲೀಸರ ದಾಳಿ – ಕೈ, ಕಮಲ ಮುಖಂಡರು ಸೇರಿ 126 ಜನರ ಮೇಲೆ ಕೇಸ್

    – 56 ಲಕ್ಷ, 40 ಕಾರು, 65 ಮೊಬೈಲ್ ಜಪ್ತಿ

    ಧಾರವಾಡ: ಧಾರವಾಡ ಜಿಲ್ಲಾ ಪೊಲೀಸರು ಇಸ್ಪೇಟ್ ಅಡ್ಡೆಯ ಮೇಲೆ ದಾಳಿ ಮಾಡಿದ್ದು, 126 ಜನರ ಮೇಲೆ ಕೇಸ್ ದಾಖಲಿಸಿ, 56 ಲಕ್ಷ ನಗದು, 40 ಕಾರು ಹಾಗೂ 65 ಮೊಬೈಲ್ ಜಪ್ತಿ ಮಾಡಿರುವ ಘಟನೆ ಧಾರವಾಡದಲ್ಲಿ ನಡೆದಿದೆ.

    ಧಾರವಾಡ ಹೊರವಲಯದ ರಮ್ಯಾ ರೆಸಿಡೆನ್ಸಿ ಹಾಗೂ ಪ್ರೀತಿ ರೆಸಿಡೆನ್ಸಿಯ ಮೇಲೆ ದಾಳಿ ನಡೆಸಿದ ಜಿಲ್ಲಾ ಪೊಲೀಸರು, ಅಂದರ್ ಬಾಹರ್ ಆಡುತಿದ್ದವರನ್ನು ವಶಕ್ಕೆ ಪಡೆದಿದ್ದಾರೆ. ಈ ಪ್ರಕರಣದಲ್ಲಿ ಕೈ ಮತ್ತು ಕಮಲದ ಮುಖಂಡರೂ ಕೂಡಾ ಸಿಕ್ಕಿ ಹಾಕಿಕೊಂಡಿದ್ದು, ಬಿಜೆಪಿ ಮುಖಂಡ ತವನಪ್ಪ ಅಷ್ಟಗಿ ಹಾಗೂ ಕಾಂಗ್ರೆಸ್ ಮುಖಂಡ ಇಸ್ಮಾಯಿಲ್ ತಮಾಟಗಾರ ಪೊಲೀಸ್ ಬಲೆಗೆ ಬಿದ್ದಿದ್ದಾರೆ.

    ಸದ್ಯ ಇವರ ಮೇಲೆ ಕೇಸ್ ದಾಖಲಿಸಿರುವ ಗ್ರಾಮೀಣ ಪೊಲೀಸರು, ಎರಡು ರೆಸಿಡೆನ್ಸಿಯಲ್ಲಿರುವ ಟೆಬಲ್ ಹಾಗೂ ಚೇರ್ ಗಳನ್ನು ವಶಕ್ಕೆ ಪಡೆದಿದ್ದಾರೆ. ಆದರೆ ಸಿಕ್ಕಿ ಬಿದ್ದಿರುವ ಬಿಜೆಪಿ ಮುಖಂಡ ತವನಪ್ಪ ಅಷ್ಟಗಿ ಪ್ರತಿಕ್ರಿಯೆ ನೀಡಿದ್ದು, ಪ್ರತಿ ವರ್ಷದಂತೆ ಈ ಬಾರಿ ಕೂಡ ನಾವು ದೀಪಾವಳಿ ಹಬ್ಬದ ಹಿನ್ನೆಲೆ ರಮ್ಯಾ ರೆಸಿಡೆನ್ಸಿಗೆ ಊಟಕ್ಕೆ ಹೋಗಿದ್ದು, ಅಲ್ಲೇ ಲೈಸೆನ್ಸ್ ಇರುವ ಅಧಿಕೃತ ಕ್ಲಬ್‍ನಲ್ಲಿ ಆಟವಾಡುತಿದ್ದೆವು. ಇದರಲ್ಲಿ ಪೊಲೀಸರ ಸಂಚು ಇದೆ ಎಂದಿದ್ದಾರೆ.

    ಇದಕ್ಕೆ ಉತ್ತರ ನೀಡಿರುವ ಉತ್ತರ ವಲಯದ ಐಜಿ ರಾಘವೇಂದ್ರ ಸುಹಾಸ್, ನಮ್ಮ ಕಡೆ ಅಂದರ್ ಬಾಹರ್ ಆಡುತಿದ್ದ ದಾಖಲೆ ಇದೆ ಎಂದಿದ್ದಾರೆ. ಸದ್ಯ ಇಸ್ಪೇಟ್ ಆಡುತಿದ್ದವರನ್ನು ಬೇಲ್ ಮೇಲೆ ಬಿಡುಗಡೆ ಮಾಡಲಾಗಿದೆ.

  • ಡ್ರಗ್ ಪ್ರಕರಣದಲ್ಲಿ ಯಾರೇ ರಾಜಕೀಯ ನಾಯಕರು ಇದ್ದರೂ ಕ್ರಮ ಕೈಗೊಳ್ಳಲಿ: ಸಿದ್ದರಾಮಯ್ಯ

    ಡ್ರಗ್ ಪ್ರಕರಣದಲ್ಲಿ ಯಾರೇ ರಾಜಕೀಯ ನಾಯಕರು ಇದ್ದರೂ ಕ್ರಮ ಕೈಗೊಳ್ಳಲಿ: ಸಿದ್ದರಾಮಯ್ಯ

    – ರಾಜ್ಯ ಅಂತೂ ದಿವಾಳಿಯಾಗಿ ಹೋಗಿದೆ

    ಹುಬ್ಬಳ್ಳಿ: ಡ್ರಗ್ ಪ್ರಕರಣದಲ್ಲಿ ಯಾರೇ ರಾಜಕೀಯ ನಾಯಕರು ಇದ್ದರೂ ಕ್ರಮ ಕೈಗೊಳ್ಳಲಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

    ಇಂದು ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಡ್ರಗ್ಸ್ ಜಾಲದಲ್ಲಿ ಯಾರೇ ಇದ್ದರೂ ಕಠಿಣ ಕ್ರಮ ಕೈಗೊಳ್ಳಬೇಕು. ಡ್ರಗ್ಸ್ ಜಾಲದಲ್ಲಿ ದೊಡ್ಡವರು ಸಣ್ಣವರು ಅನ್ನೋದು ಬೇಡ. ಯಾರೇ ರಾಜಕೀಯ ನಾಯಕರು ಇದ್ದರೂ ಕ್ರಮ ಕೈಗೊಳ್ಳಲಿ ಎಂದು ಆಗ್ರಹ ಮಾಡಿದರು.

    ಶಾಸಕ ಜಮೀರ್ ಅಹಮದ್ ವಿರುದ್ಧ ಸಾಕ್ಷ್ಯ ಇದ್ದರೆ ಗಲ್ಲಿಗೆ ಹಾಕಲಿ ಎಂದು ಅವರೇ ಹೇಳಿದ್ದಾರೆ. ಜೊತೆಗೆ ಅವರು ಆಸ್ತಿಯೆಲ್ಲಾ ಮುಟ್ಟುಗೋಲು ಹಾಕಿಕೊಳ್ಳಲಿ ಅಂತಾ ಹೇಳಿದ್ದಾರೆ. ಸಾಕ್ಷ್ಯ ಸಿಕ್ಕರೆ ತನಿಖೆ ಮಾಡಲಿ ಅದನ್ನು ಬಿಟ್ಟು ರಾಜಕೀಯವಾಗಿ ಮುಗಿಸಲು ಆರೋಪ ಮಾಡಬಾರದು. ಪ್ರಶಾಂತ್ ಸಂಬರಗಿ ಹೇಳಿದರು ಎಂದು ತನಿಖೆ ಮಾಡೋಕೆ ಆಗುತ್ತಾ? ಸಾಕ್ಷ್ಯ ಇದ್ದರೆ ಯಾರನ್ನಾದರೂ ತನಿಖೆ ಮಾಡಲಿ ಎಂದು ತಿಳಿಸಿದರು.

    ಇದೇ ವೇಳೆ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿ ಸಹೋದರನಿಗೆ ನೋಟಿಸ್ ಜಾರಿ ವಿಚಾರವಾಗಿ ಮಾತನಾಡಿ, ಅನಗತ್ಯವಾಗಿ ಸಿಬಿಐ ವಿಚಾರಣೆ ಮಾಡುತ್ತಿದ್ದಾರೆ. 25 ಬಿಜೆಪಿ ಸಂಸದರು ಇದ್ದರೂ ಬರ-ನೆರೆ ಪ್ರವಾಹ ಇನ್ನೂ ಕೊಟ್ಟಿಲ್ಲ. ಕಳೆದ ವರ್ಷ ಲಕ್ಷ ಕೋಟಿ ರೂಪಾಯಿ ನಷ್ಟವಾಗಿದೆ. ಆದರೆ ಇಲ್ಲಿಯವರೆಗೂ ಪರಿಹಾರ ನೀಡಿಲ್ಲ. ಮನೆ ಬಿದ್ದವರಿಗೆ ಪರಿಹಾರ ಇನ್ನೂ ಸಿಕ್ಕಿಲ್ಲ. ಆನೆ ಹೊಟ್ಟೆಗೆ ಮೂರು ಕಾಸು ಅಲ್ಲ ಆರು ಕಾಸಿನ ಮಜ್ಜಿಗೆ ನೀಡಿದಂತೆ ಪರಿಹಾರ ನೀಡಿದ್ದಾರೆ ಎಂದು ಕಿಡಿಕಾರಿದರು.

    ಅಧಿವೇಶನದಲ್ಲಿ ರಾಜ್ಯ ಸರ್ಕಾರದ ವೈಫಲ್ಯ, ಕಾನೂನು ಸುವ್ಯವಸ್ಥೆ ಹದಗೆಟ್ಟಿರುವ ಬಗ್ಗೆ ಚರ್ಚೆ ನಡೆಸುತ್ತೇವೆ. ಮೂರು ವಾರಗಳ ಕಾಲ ಅಧಿವೇಶನ ನಡೆಸಲಿ ಎಂದು ನಾನು ಸಿಎಂ ಬಿಎಸ್‍ವೈಗೆ ಪತ್ರ ಬರೆದಿದ್ದೇನೆ. ನಾಲ್ಕು ಜನರ ವಿರುದ್ಧ ಗೋಲಿಬಾರ್ ಮಾಡಿದ್ದು, ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಅನ್ನೋದು ಸತ್ಯ. ಡಿಜೆ ಹಳ್ಳಿ, ಕೆಜೆ ಹಳ್ಳಿ ಪ್ರಕರಣದಲ್ಲಿ ನವೀನನನ್ನು ತಕ್ಷಣ ಬಂಧನ ಮಾಡಿದ್ದರೆ ಬೆಂಕಿ ಹಚ್ಚುತ್ತಿರಲಿಲ್ಲ. ಬೆಂಕಿ ಹಚ್ಚುವುದು ಕಾನೂನುಬಾಹಿರ. ನಾನು ಸಹ ಬೆಂಕಿ ಹಾಕಿರುವುದನ್ನು ಖಂಡಿಸುತ್ತೇನೆ ಎಂದರು.

    ಸಿಎಂ ಬದಲಾವಣೆ ಬಗ್ಗೆ ನಾನು ಮಾತನಾಡಲ್ಲ. ಅವರು ಯಾರನಾದರೂ ಮಾಡಿಕೊಳ್ಳಲಿ. ಸಿಎಂ ಮತ್ತು ಕುಮಾರಸ್ವಾಮಿ ಏನೂ ಮಾತನಾಡಿಕೊಂಡಿದ್ದಾರೆ ಎಂದು ನನಗೆ ಗೊತ್ತಿಲ್ಲ. ಜೆಡಿಎಸ್‍ನವರಿಗೆ ಸ್ಪಷ್ಟವಾದ ನಿಲುವಿಲ್ಲ. ಅವರು ಯಾವಾಗ ಬೇಕೋ ಅವಾಗ ಅವರನ್ನು ತಬ್ಬಿಕೊಳ್ಳುತ್ತಾರೆ. ಆದರೆ ಇದರ ಮಧ್ಯೆ ರಾಜ್ಯ ಅಂತೂ ದಿವಾಳಿ ಆಗಿ ಹೋಗಿದೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

  • 100 ರೂ. ಲಂಚಕ್ಕಾಗಿ ಮೊಟ್ಟೆ ಬಂಡಿ ಪಲ್ಟಿ – ಬಾಲಕನಿಗೆ ಉಚಿತ ಶಿಕ್ಷಣ, ಮನೆ

    100 ರೂ. ಲಂಚಕ್ಕಾಗಿ ಮೊಟ್ಟೆ ಬಂಡಿ ಪಲ್ಟಿ – ಬಾಲಕನಿಗೆ ಉಚಿತ ಶಿಕ್ಷಣ, ಮನೆ

    – ಸಹಾಯಕ್ಕೆ ಬಂದ ರಾಜಕೀಯ ನಾಯಕರು

    ಭೋಪಾಲ್: 100 ರೂ. ಲಂಚಕ್ಕಾಗಿ ಮೊಟ್ಟೆ ಮಾರುವ ಬಾಲಕನ ಮೊಟ್ಟೆ ಗಾಡಿಯನ್ನು ಪಾಲಿಕೆ ಅಧಿಕಾರಿಗಳು ಪಲ್ಟಿ ಮಾಡಿದ್ದ ಅಮಾನವೀಯ ಘಟನೆ ಮಧ್ಯ ಪ್ರದೇಶದ ಇಂದೋರ್ ನಲ್ಲಿ ನಡೆದಿತ್ತು. ಈಗ ಈ ಬಾಲಕನಿಗೆ ಇಡೀ ದೇಶದ ಜನರ ಸಹಾಯ ಹಸ್ತ ಚಾಚುತ್ತಿದ್ದಾರೆ.

    ವ್ಯಾಪಾರ ಮಾಡಲು ಮೊಟ್ಟೆಯನ್ನು ತೆಗೆದುಕೊಂಡು ಹೋಗುತ್ತಿದ್ದ ಬಾಲಕನ ಬಳಿ ಸ್ಥಳೀಯ ಪಾಲಿಕೆ ಅಧಿಕಾರಿ 100 ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದ. ಇಲ್ಲ ಎಂದರೇ ಬಂಡಿಯನ್ನು ಸ್ಥಳದಿಂದ ತೆಗೆಯುವಂತೆ ಎಚ್ಚರಿಕೆ ನೀಡಿದ್ದ. ಆದರೆ ಲಾಕ್‍ಡೌನ್ ಕಾರಣದಿಂದ ವ್ಯಾಪಾರ ಕಡಿಮೆಯಾಗಿದ್ದರಿಂದ ಬಾಲಕ ಹಣ ನೀಡಲು ನಿರಾಕರಿಸಿದ್ದ. ಇದರಿಂದ ಕುಪಿತಗೊಂಡ ಅಧಿಕಾರಿ ನಡುರಸ್ತೆಯಲ್ಲಿ ಬಾಲಕನ ಬಂಡಿಯನ್ನು ಪಲ್ಟಿ ಮಾಡಿ ಮೊಟ್ಟೆಗಳನ್ನು ನಾಶ ಮಾಡಿದ್ದನು. ಇದನ್ನು ಓದಿ: 100 ರೂ. ಲಂಚ ನೀಡಲು ನಿರಾಕರಿಸಿದ ಬಾಲಕ- ಮೊಟ್ಟೆ ಬಂಡಿ ಪಲ್ಟಿ ಮಾಡಿದ ಪಾಲಿಕೆ ಅಧಿಕಾರಿ

    ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿತ್ತು. ಇದನ್ನು ಕಂಡು ಇಡೀ ದೇಶದ್ಯಾಂತ ಜನರು ಬಾಲಕನ ನೆರವಿಗೆ ಬಂದಿದ್ದಾರೆ. ಜೊತೆಗೆ ಆತನಿಗೆ ಇರಲು ಒಂದು ಮನೆ ಮತ್ತು ಉಚಿತ ಶಿಕ್ಷಣ ಕೊಡಿಸುವ ವ್ಯವಸ್ಥೆ ಮಾಡಲಾಗಿದೆ. ಈ ವಿಚಾರವಾಗಿ ಮಾತನಾಡಿರುವ ಬಾಲಕನ ಮನೆಯವರು, ಘಟನೆ ನಡೆದ ನಂತರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ದೆಹಲಿಯ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಕೂಡ ಕರೆ ಮಾಡಿ ಮಾತನಾಡಿದ್ದಾರೆ. ಬಾಲಕನ ಭವಿಷ್ಯಕ್ಕೆ ನೆರೆವು ನೀಡುವುದಾಗಿ ಹೇಳಿದ್ದಾರೆ ಎಂದು ತಿಳಿಸಿದ್ದಾರೆ.

    ಬಾಲಕ ವಿಡಿಯೋ ವೈರಲ್ ಆದ ನಂತರ ಆತನ ಸಹಾಯಕ್ಕೆ ಸ್ಥಳೀಯರು ಕೂಡ ಆಗಮಿಸಿದ್ದಾರೆ. ಜೊತೆಗೆ ಮಾಜಿ ಮುಖ್ಯಮಂತ್ರಿ ದಿಗ್ವಿಜಯ್ ಸಿಂಗ್ ಅವರು ಬಾಲಕನಿಗೆ ಉಚಿತ ಶಿಕ್ಷಣ ಕೊಡಿಸುವುದಾಗಿ ಹೇಳಿದ್ದು, ಆರ್ಥಿಕ ನೆರವು ಮತ್ತು ಸಹಾಯವನ್ನು ನೀಡಿದ್ದಾರೆ. ಇಂದೋರ್ ನ ಬಿಜೆಪಿ ಶಾಸಕ ರಮೇಶ್ ಮೆಂಡೋಲಾ ಅವರು ಪ್ರಧಾನ ಆವಾಸ್ ಯೋಜನೆಯಡಿ ಆತನಿಗೆ ಉಚಿತ ಮನೆಯನ್ನು ನೀಡುವುದಾಗಿ ಹೇಳಿದ್ದಾರೆ. ಇಂದೋರ್ ಪ್ರೆಸ್ ಕ್ಲಬ್ ಕೂಡ ಹುಡುಗನಿಗೆ ಪಡಿತರ ಮತ್ತು ಹಣವನ್ನು ಒದಗಿಸಿದೆ.

    ಈ ವಿಚಾರವಾಗಿ ಮಾತನಾಡಿರುವ ಬಾಲಕ ಅಜ್ಜ, ದೇಶಾದ್ಯಂತದ ಜನರ ಬೆಂಬಲ ನಮಗೆ ಸಿಕ್ಕಿದೆ. ಬಿಜೆಪಿ ಶಾಸಕ ರಮೇಶ್ ಮೆಂಡೋಲಾ ಅವರು ಪ್ರಧಾನ್ ಮಂತ್ರಿ ಆವಾಸ್ ಯೋಜನೆಯಡಿ ಮನೆ ನೀಡುವುದಾಗಿ ಭರವಸೆ ನೀಡಿದ್ದಾರೆ. ಜೊತೆಗೆ ಬಾಲಕನಿಗೆ ಸೈಕಲ್ ಮತ್ತು 2,500 ರೂ. ಧನಸಹಾಯ ಮಾಡಿದ್ದಾರೆ. ದಿಗ್ವಿಜಯ್ ಸಿಂಗ್ ಅವರು 10,000 ರೂ ನೀಡಿ ಜೊತೆಗೆ ಇಬ್ಬರು ಮಕ್ಕಳ ಶಿಕ್ಷಣವನ್ನು ನೋಡಿಕೊಳ್ಳುವ ಭರವಸೆ ನೀಡಿದ್ದಾರೆ. ರಾಹುಲ್ ಗಾಂಧಿ, ಅರವಿಂದ್ ಕೇಜ್ರಿವಾಲ್ ಎಲ್ಲರೂ ಕರೆ ಮಾಡಿ ಬೆಂಬಲ ನೀಡುವುದಾಗಿ ಹೇಳಿದ್ದಾರೆ ಎಂದು ತಿಳಿಸಿದ್ದಾರೆ.

  • ಇಹಲೋಕದ ತ್ಯಜಿಸಿದ ಚಿರಂಜೀವಿಗೆ ರಾಜಕೀಯ ಗಣ್ಯರಿಂದ ಸಂತಾಪ

    ಇಹಲೋಕದ ತ್ಯಜಿಸಿದ ಚಿರಂಜೀವಿಗೆ ರಾಜಕೀಯ ಗಣ್ಯರಿಂದ ಸಂತಾಪ

    ಬೆಂಗಳೂರು: ಇಂದು ಸಾವನ್ನಪ್ಪಿದ ನಟ ಚಿರಂಜೀವಿ ಸರ್ಜಾ ಅವರಿಗೆ ರಾಜ್ಯ ರಾಜಕೀಯ ನಾಯಕರು ಸಂತಾಪ ಸೂಚಿಸಿದ್ದಾರೆ.

    ಇಂದು ಬೆಂಗಳೂರಿನ ಅಪೊಲೋ ಆಸ್ಪತ್ರೆಯಲ್ಲಿ ತಮ್ಮ 39ನೇ ವರ್ಷಕ್ಕೆ ನಟ ಚಿರಂಜೀವಿ ಸರ್ಜಾ ಅವರು ಚಿರನಿದ್ರೆಗೆ ಜಾರಿದ್ದಾರೆ. ಚಿರು ಸಾವಿಗೆ ಇಡೀ ಕನ್ನಡ ಚಿತ್ರರಂಗವೇ ಕಂಬನಿ ಮಿಡಿದಿದೆ. ಜೊತೆಗೆ ಹಿರಿಯ ರಾಜಕಾರಣಿಗಳಾದ ಸಿಎಂ ಯಡಿಯೂರಪ್ಪ, ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಮಾಜಿ ಸಿಎಂ ಹೆಚ್‍ಡಿ ಕುಮಾರಸ್ವಾಮಿ ಅವರು ಕೂಡ ಸಂತಾಪ ಸೂಚಿಸಿದ್ದಾರೆ.

    ಈ ವಿಚಾರವಾಗಿ ಟ್ವೀಟ್ ಮಾಡಿರುವ ಯಡಿಯೂರಪ್ಪನವರು, ಕನ್ನಡದ ಖ್ಯಾತ ಕಲಾವಿದ, ಶ್ರೀ ಚಿರಂಜೀವಿ ಸರ್ಜಾ ಹೃದಯಾಘಾತದಿಂದ ಮೃತಪಟ್ಟ ಸುದ್ದಿ ತಿಳಿದು ತೀವ್ರ ಆಘಾತವಾಗಿದೆ. ಕೇವಲ 39 ವರ್ಷದ ವಯಸ್ಸಿನಲ್ಲಿ ಅಕಾಲಿಕವಾಗಿ ವಿಧಿವಶರಾಗಿರುವುದು ದಿಗ್ಭ್ರಮೆ ಮೂಡಿಸಿದೆ. ದೇವರು ಅವರಿಗೆ ಸದ್ಗತಿಯನ್ನು, ಅವರ ಕುಟುಂಬ, ಅಪಾರ ಅಭಿಮಾನಿ ವರ್ಗಕ್ಕೆ ದುಃಖವನ್ನು ಸಹಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.

    ಕನ್ನಡ ಚಿತ್ರರಂಗದ ಉದಯೋನ್ಮುಖ ನಟರಾದ ಚಿರಂಜೀವಿ ಸರ್ಜಾ ಅವರು ನಿಧನರಾದ ಸುದ್ದಿ ಕೇಳಿ ತೀವ್ರ ದುಃಖವಾಗಿದೆ. ಇವರ ಅಗಲಿಕೆಯಿಂದ ಕನ್ನಡ ಚಿತ್ರರಂಗಕ್ಕೆ ತುಂಬಲಾರದ ನಷ್ಟವಾಗಿದೆ. ದೇವರು ಅವರಿಗೆ ಚಿರಶಾಂತಿ ಕರುಣಿಸಲಿ. ಅವರ ಕುಟುಂಬ ಹಾಗೂ ನಾಡಿನ ಜನತಗೆ ಈ ದುಃಖವನ್ನು ಭರಿಸುವ ಶಕ್ತಿ ಆ ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ಟ್ವೀಟ್ ಮಾಡುವ ಮೂಲಕ ಸಂತಾಪ ಸೂಚಿಸಿದ್ದಾರೆ.

    ಮಾಜಿ ಸಿಎಂ ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿ, ಕನ್ನಡ ಚಿತ್ರರಂಗದ ಯುವ ನಟ ಚಿರಂಜೀವಿ ಸರ್ಜಾ ಅವರ ಸಾವಿನ ಸುದ್ದಿ ನೋವುಂಟುಮಾಡಿದೆ. ಇನ್ನಷ್ಟು ಕಾಲ ನಟಿಸುತ್ತಾ, ಎಲ್ಲರನ್ನು ರಂಜಿಸುತ್ತಾ ನಮ್ಮ ನಡುವೆ ಈ ಹುಡುಗ ಇರಬೇಕಿತ್ತು. ಅವರ ದುಃಖತಪ್ತ ಕುಟುಂಬ ವರ್ಗದವರಿಗೆ ಹಾಗೂ ಅಭಿಮಾನಿಗಳಿಗೆ ನನ್ನ ಸಂತಾಪಗಳು ಎಂದು ತಿಳಿಸಿದ್ದಾರೆ.

    ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು, ಚಂದನವನದ ಪ್ರತಿಭಾವಂತ ನಟ ಚಿರಂಜೀವಿ ಸರ್ಜಾ ಅವರ ನಿಧನದ ಸುದ್ದಿ ಕೇಳಿ ಆಘಾತವಾಗಿದೆ. ಇನ್ನೂ ಬಾಳಿ, ಬದುಕಿ ನಮ್ಮೆಲ್ಲರನ್ನೂ ತನ್ನ ನಟನೆಯ ಮೂಲಕ ರಂಜಿಸಬೇಕಿದ್ದ ಈ ಯುವ ನಾಯಕ ನಟನ ಅಗಲಿಕೆಯ ದುಃಖ ಭರಿಸುವ ಶಕ್ತಿಯನ್ನು ಆ ಭಗವಂತನು ಅವರ ಕುಟುಂಬ ಹಾಗೂ ಅಭಿಮಾನಿಗಳಿಗೆ ನೀಡಲೆಂದು ಪ್ರಾರ್ಥಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

    ನಟ ಚಿರಂಜೀವಿ ಸರ್ಜಾ ನಿಧನ ತೀವ್ರ ದುಃಖ ತರಿಸಿದೆ. ಚಿತ್ರರಂಗದಲ್ಲಿ ಬೆಳಗಬೇಕಿದ್ದ ತಾರೆಗೆ ಒದಗಿದ ಸ್ಥಿತಿ ಬೇಸರದಾಯಕ. ಕಲೆಗೆ ಇಡೀ ತಲೆಮಾರುಗಳನ್ನೇ ಮುಡುಪಾಗಿಟ್ಟ ಸರ್ಜಾ ಕುಟುಂಬದ ಕುಡಿ ಚಿರಂಜೀವಿ. ಅವರ ಕುಟುಂಬವೇ ಒಂದು ನಕ್ಷತ್ರಪುಂಜ. ಅದರಲ್ಲಿ ಬೆಳಗುತ್ತಿದ್ದ ಚಿರಂಜೀವಿ ಎಂಬ ತಾರೆಯ ದಿಢೀರ್ ಕಣ್ಮರೆ ತೀರ ನೋವಿನ ಸಂಗತಿ. ಪ್ರಖ್ಯಾತ ಕಲಾ ಕುಟುಂಬದಿಂದ ಬಂದಿದ್ದ ಚಿರಂಜೀವಿ ಸರ್ಜಾ ಕುಟುಂಬ, ಚಿತ್ರರಂಗಕ್ಕೆ ಸೇವೆ ಸಲ್ಲಿಸಿದ್ದ ಸುಂದರ್ ರಾಜ್ ಕುಟುಂಬದೊಂದಿಗೆ ಬೆರೆತಿತ್ತು. ಹಾಲು ಜೇನಿನಂತೆ ಕೂಡಿದ್ದ ಈ ಕುಟುಂಬಕ್ಕೆ ಚಿರಂಜೀವಿ ಅವರ ಅಗಲಿಕೆಯ ನೋವು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಹೆಚ್‍ಡಿಕೆ ಟ್ವೀಟ್ ಮಾಡಿದ್ದಾರೆ.

    ಅಂತಯೇ ಸಚಿವರಾದ ಜಗದೀಶ್ ಶೆಟ್ಟರ್, ಶಾಸಕ ಯು.ಟಿ ಖಾದರ್, ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಮತ್ತು ಡಿಸಿಎಂ ಅಶ್ವಥ್ ನಾರಾಯಣ್, ಲಕ್ಷ್ಮಣ ಸವದಿ ಸೇರಿದಂತೆ ಹಲವಾರು ರಾಜಕೀಯ ಗಣ್ಯ ನಾಯಕರು ಚಿರು ಸಾವಿಗೆ ಸಂತಾಪ ಸೂಚಿಸಿದ್ದಾರೆ. ಚಿರು ಅವರ ಅಂತ್ಯಕ್ರಿಯೆ ಅವರ ಹುಟ್ಟೂರು ಮಧುಗಿರಿಯ ಜಕ್ಕೇನಹಳ್ಳಿಯಲ್ಲಿ ನಡೆಯಲಿದೆ.

  • ಕರಾವಳಿಯಲ್ಲಿ ಮರಳಿಗಾಗಿ ಬರ- ಜನನಾಯಕರಿಗೆ ಜನರಿಂದಲೇ ಕ್ಲಾಸ್!

    ಕರಾವಳಿಯಲ್ಲಿ ಮರಳಿಗಾಗಿ ಬರ- ಜನನಾಯಕರಿಗೆ ಜನರಿಂದಲೇ ಕ್ಲಾಸ್!

    ಉಡುಪಿ: ಕರಾವಳಿ ಜಿಲ್ಲೆ ಉಡುಪಿಯಲ್ಲಿ ಮರಳಿನ ಬಿಸಿ ವಿಪರೀತವಾಗಿದೆ. ಜನಕ್ಕೆ ಮರಳು ಸಿಗದಿರೋದ್ರಿಂದ ಸಮಸ್ಯೆ ಎರಡೂ ರಾಷ್ಟ್ರೀಯ ಪಕ್ಷಗಳ ನಾಯಕರ ನೆಮ್ಮದಿ ಕೆಡಿಸಿದೆ. ಜನನಾಯಕರು ಸಾರ್ವಜನಿಕವಾಗಿ ಓಡಾಡದ ಪರಿಸ್ಥಿತಿ ಎದುರಾಗಿದೆ. ಸಚಿವ- ಸಂಸದರನ್ನು ಸಿಕ್ಕ ಸಿಕ್ಕಲ್ಲಿ ಜನ ಅಡ್ಡ ಹಾಕಿ ಪ್ರಶ್ನೆ ಮಾಡುತ್ತಿದ್ದಾರೆ. ಸಾರ್ವಜನಿಕರು, ಸಾಂಪ್ರದಾಯಿಕದಾಗಿ ಮರಳು ತೆಗೆಯುವವರು, ಲಾರಿ ಮಾಲಕರು, ಚಾಲಕರು ಜನಪ್ರತಿನಿಧಿಗಳನ್ನು ಬೇತಾಳದಂತೆ ಬೆನ್ನತ್ತುತ್ತಿದ್ದಾರೆ. ಸಿಕ್ಕ ಸಿಕ್ಕಲ್ಲೆಲ್ಲಾ ಜನನಾಯಕರಿಗೆ ಮುತ್ತಿಗೆ ಹಾಕಿ ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸುತ್ತಿದ್ದಾರೆ.

    ಹೌದು. ಕರಾವಳಿಯಲ್ಲಿ ಮರಳುಗಾರಿಕೆಗೆ ಅನುಮತಿಯಿಲ್ಲದ ಕಾರಣ ಮರಳಿನ ಬಿಸಿ ವಿಪರೀತವಾಗಿದೆ. ವಿವಾದ ಹಸಿರು ನ್ಯಾಯಪೀಠದಲ್ಲಿದ್ದು ವಿಚಾರಣೆ ನಡೆಯುತ್ತಿದೆ. ಆದ್ರೆ ಉಡುಪಿಯಲ್ಲಿ ಜನಪ್ರತಿನಿಧಿಗಳು ಓಡಾಡದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಸಿಕ್ಕಸಿಕ್ಕಲ್ಲಿ ಅಡ್ಡಹಾಕ್ತಿರುವ ಜನರು ಬಿಸಿ ಮುಟ್ಟಿಸ್ತಿದ್ದಾರೆ.

    ಸಂಸದೆ ಶೋಭಾ ಕರಂದ್ಲಾಜೆಗೆ ಮರಳು ಲಾರಿ ಮಾಲಕರು, ಕಾರ್ಮಿಕ ಸಂಘದವರು ಘೇರಾವ್ ಹಾಕಿದ್ದಾರೆ. ಕುಂದಾಪುರದ ಕೋಟೇಶ್ವರದಲ್ಲಿ ಈ ಘಟನೆ ನಡೆದಿದ್ದು, ನೀವು ಉಡುಪಿ ಚಿಕ್ಕಮಗಳೂರಿನ ಸಂಸದೆಯಾದರೂ ಬೆಂಗಳೂರಲ್ಲೇ ಇರುತ್ತೀರಿ. ಇಲ್ಲಿನ ಜನರ ಸಮಸ್ಯೆ ನಿಮಗೆ ಬಿದ್ದೇ ಹೋಗಿಲ್ಲ ಅಂತ ಕಿಡಿಕಾರಿದ್ದಾರೆ.


    ಉಡುಪಿಯ ಸಾಸ್ತಾನ ಬಳಿ ವಿಧಾನಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿಗೆ ಮುತ್ತಿಗೆ ಹಾಕಿದ ಟಿಪ್ಪರ್ ಮಾಲೀಕರು, ನೀವೂ ನಮ್ಮೊಂದಿಗೆ ಕುಳಿತು ಪ್ರತಿಭಟಿಸಿ ಅಂತಾ ಕ್ಲಾಸ್ ತಗೊಂಡ್ರು.

    ಅಕ್ಟೋಬರ್ 15ಕ್ಕೆ ಮರಳು ಸಮಸ್ಯೆ ಸರಿಮಾಡಿಕೊಡುತ್ತೇನೆ ಎಂದು ಹೇಳಿದ್ದ ಸಚಿವೆ ಜಯಮಾಲಾ ಅವರಿಗೂ ಮುತ್ತಿಗೆ ಹಾಕಿದ್ದಾರೆ. ಜಿಲ್ಲಾಧಿಕಾರಿಯನ್ನು ಎತ್ತಂಗಡಿ ಮಾಡಿ ಅಂತಾ ಪ್ರತಿಭಟನಾಕಾರರು ಒತ್ತಾಯಿಸಿದಾಗ ಅದು ನನ್ನಿಂದ ಸಾಧ್ಯವಿಲ್ಲ ಅಂತಾ ಜಯಮಾಲಾ ಜಾರಿಕೊಂಡ್ರು. ಬಿಜೆಪಿ ನಾಯಕ ಜಯಪ್ರಕಾಶ್ ಹೆಗ್ಡೆಯವರನ್ನು ಮರಳು ಕೊಡಿಸಿ ಸ್ವಾಮಿ ಅಂತ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನಾಕಾರರು ಅಡ್ಡ ಹಾಕಿದ್ದಾರೆ.

    ಉಡುಪಿ ಜಿಲ್ಲಾಧಿಕಾರಿ ಕಚೇರಿಗೆ ಪ್ರತಿಭಟನಾಕಾರರು ಮುತ್ತಿಗೆ ಹಾಕಲು ಮುಂದಾದಾಗ ಪೊಲೀಸರು ಬ್ಯಾರಿಕೇಡ್ ಇಟ್ಟು ತಡೆದಿದ್ದಾರೆ. ಈ ಸಂದರ್ಭ ಮರಳು ಲಾರಿ ಮಾಲಕರು ಮತ್ತು ಕಾರ್ಮಿಕರ ನಡುವೆ ಜಟಾಪಟಿಯಾಗಿ ಕೈ ಕೈ ಮಿಲಾಯಿಸಿಕೊಂಡಿದ್ದಾರೆ. ಒಟ್ಟಿನಲ್ಲಿ ಮರಳು ಬಿಸಿಯಿಂದಾಗಿ ಉಡುಪಿ ಜಿಲ್ಲೆಯ ಜನಪ್ರತಿನಿಧಿಗಳು ಜನರ ಕೈಗೆ ಸಿಗದೆ ತಲೆ ಮರೆಸಿಕೊಂಡು ಓಡಾಡುವ ಸ್ಥಿತಿ ನಿರ್ಮಾಣವಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv