Tag: politician

  • ಸಿದ್ದರಾಮಯ್ಯ ಬಂದ್ಮೇಲೆ ಕಾಂಗ್ರೆಸ್ ಬಲಿಷ್ಠವಾಗಿದೆ – ಜನಾರ್ದನ ಪೂಜಾರಿಗೆ ಜಮೀರ್ ತಿರುಗೇಟು

    ಸಿದ್ದರಾಮಯ್ಯ ಬಂದ್ಮೇಲೆ ಕಾಂಗ್ರೆಸ್ ಬಲಿಷ್ಠವಾಗಿದೆ – ಜನಾರ್ದನ ಪೂಜಾರಿಗೆ ಜಮೀರ್ ತಿರುಗೇಟು

    ಹಾವೇರಿ: ಮಾಜಿ ಸಿಎಂ ಸಿದ್ದರಾಮಯ್ಯ ಅವರು ಕಾಂಗ್ರೆಸ್‍ಗೆ ಬಂದ ಮೇಲೆ ಪಕ್ಷ ಬಲಿಷ್ಠವಾಗಿದೆ ಎಂದು ಅಲ್ಪಸಂಖ್ಯಾತ ಕಲ್ಯಾಣ ಮತ್ತು ವಕ್ಫ್ ಬೋರ್ಡ್ ಸಚಿವ ಜಮೀರ್ ಅಹ್ಮದ್ ಹೇಳಿದ್ದಾರೆ.

    ಇಂದು ಹಾವೇರಿ ನಗರದಲ್ಲಿ ಏರ್ಪಡಿಸಲಾಗಿದ್ದ ಉದ್ಯೋಗ ಮೇಳ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ಜನಾರ್ದನ ಪೂಜಾರಿ ಹೇಳಿಕೆಗೆ ತಿರುಗೇಟು ನೀಡಿದರು. ಅವರು ಪಕ್ಷದ ಅಧ್ಯಕ್ಷರಾಗಿದ್ದವರು. ಅವರಿದ್ದಾಗ ಪಕ್ಷ ಹೇಗಿತ್ತು ಎನ್ನುವುದು ಗೊತ್ತಿದೆ. ಸಿದ್ದರಾಮಯ್ಯ ಅವರ ಶಕ್ತಿ ಪಕ್ಷ ಕಾರ್ಯಕರ್ತರಿಗೆ ಗೊತ್ತಿದೆ. ಆದರೆ ಪಾಪ ಜನಾರ್ದನ ಪೂಜಾರಿ ಅವರಿಗೆ ಗೊತ್ತಿಲ್ಲ ಎಂದರು.

    ಕಾಂಗ್ರೆಸ್ ಪಕ್ಷವನ್ನು ಯಾರು ಮುಗಿಸಿದ್ದಾರೆ ಎನ್ನುವುದು ಕೂಡ ತಿಳಿದಿದ್ದು, ಸಿದ್ದರಾಮಯ್ಯ ಅವರು ಪಕ್ಷಕ್ಕೆ ಬಂದ ಕಾಲದಿಂದಲೂ ಅದನ್ನೇ ಹೇಳಿಕೊಂಡು ಬರುತ್ತಿದ್ದಾರೆ. ಆದರೆ ಅಂದಿನಿಂದಲೂ ಕೂಡ ಪಕ್ಷ ಮತ್ತಷ್ಟು ಬಲಿಷ್ಠ ಆಗುತ್ತಾ ಬರುತ್ತಿದೆ. ಎಲ್ಲವನ್ನ ಪಕ್ಷದ ಕಾರ್ಯಕರ್ತರು ನಿರ್ಧಾರ ಮಾಡುತ್ತಾರೆ ಎಂದು ಹೇಳಿ ಟಾಂಗ್ ನೀಡಿದರು.

    ಮಂಗಳೂರಿನಲ್ಲಿ ಗುರುವಾರ ಮಾತನಾಡಿದ್ದ ಜನಾರ್ದನ ಪೂಜಾರಿ ಅವರು, ಮಾಜಿ ಸಿಎಂ ಸಿದ್ದರಾಮಯ್ಯ ರಾಜ್ಯದಲ್ಲಿ ಕಾಂಗ್ರೆಸ್ ಮುಗಿಸುವುದಕ್ಕೆ ಪಕ್ಷ ಸೇರಿಕೊಂಡರು. ಸಿದ್ದರಾಮಯ್ಯನವರಿಂದ ಇಂದು ಸಮ್ಮಿಶ್ರ ಸರ್ಕಾರ ರಚನೆಯಾಗಿಲ್ಲ. ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಮತ್ತು ಸಿಎಂ ಕುಮಾರಸ್ವಾಮಿ ಅವರಿಂದ ಮೈತ್ರಿ ಸರ್ಕಾರ ಉಳಿದುಕೊಂಡಿದೆ. ಸರ್ಕಾರ ಉಳಿಯುವಲ್ಲಿ ದೊಡ್ಡ ಗೌಡರದ್ದು ಮಹತ್ವದ ಪಾತ್ರವಿದೆ. ದೇವೇಗೌಡರನ್ನು ಯಾರು ಲಘುವಾಗಿ ತೆಗೆದುಕೊಳ್ಳಬಾರದು ಎಂದು ಕಾಂಗ್ರೆಸ್ ಹಿರಿಯ ಮುಖಂಡ ಜನಾರ್ದನ ಪೂಜಾರಿ ಹೇಳಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ರಾಜಕಾರಣಿಗಳ ರಿಯಲ್ ಎಸ್ಟೇಟ್ ಕಳ್ಳ ದಂಧೆ ಬಿಟ್ರೆ ಮೈಸೂರಲ್ಲಿ ಬೇರೇನೂ ಇಲ್ಲ- ಪ್ರತಾಪ್ ಸಿಂಹ

    ರಾಜಕಾರಣಿಗಳ ರಿಯಲ್ ಎಸ್ಟೇಟ್ ಕಳ್ಳ ದಂಧೆ ಬಿಟ್ರೆ ಮೈಸೂರಲ್ಲಿ ಬೇರೇನೂ ಇಲ್ಲ- ಪ್ರತಾಪ್ ಸಿಂಹ

    ಮೈಸೂರು: ರಾಜಕಾರಣಿಗಳು ರಿಯಲ್ ಎಸ್ಟೇಟ್ ಕಳ್ಳ ದಂಧೆ ಮಾಡ್ತಾ ಇದ್ದಾರೆ. ಮೈಸೂರಿನಲ್ಲಿ ರಿಯಲ್ ಎಸ್ಟೇಟ್ ದಂಧೆ ಬಿಟ್ರೆ ಏನಿಲ್ಲ ಅಂತ ಸಂಸದ ಪ್ರತಾಪ್ ಸಿಂಹ ಬಹಿರಂಗವಾಗಿ ಹೇಳಿಕೆ ನೀಡಿದ್ದಾರೆ.

    ನಗರದಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಸಂಸದರು, ರಾಜಕಾರಣಿಗಳ ರಿಯಲ್ ಎಸ್ಟೇಟ್ ದಂಧೆಯಿಂದ ಮೈಸೂರು ಅಭಿವೃದ್ಧಿಯಾಗುತ್ತಿಲ್ಲ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ರಾಜಕಾರಣಿಗಳೆ ಸದಸ್ಯರು, ಅವರೇ ಡೆವೆಲಪ್ಪರ್ಸ್ ಆಗಿದ್ದಾರೆ. ಹೀಗಾದರೆ ಮೈಸೂರು ಅಭಿವೃದ್ಧಿ ಹೇಗೆ ಸಾಧ್ಯ ಹೇಳಿ ಎಂದು ಪ್ರಶ್ನಿಸಿದ್ದಾರೆ.

    ಪ್ರತಿಯೊಬ್ಬರೂ ಮೈಸೂರು ಮುಖಾಂತರವಾಗಿ ಬಂದು ಹೋಗುತ್ತಿದ್ದಾರೆ. ಪ್ರವಾಸಿಗರು ಮೈಸೂರಿಗೆ ಬೆಳಗ್ಗೆ ಬಂದು ಸಂಜೆ ಹೋಗುತ್ತಾರೆ. ಮೈಸೂರು ಪ್ರವಾಸೋದ್ಯಮ ಜಂಕ್ಷನ್ ಆಗಿದೆ. ಬಂಡೀಪುರ, ನಾಗರಹೊಳೆ, ಊಟಿ ಮೈಸೂರು ಮುಖಾಂತರವೇ ಹೋಗಬೇಕು. ಆದರೆ ಮೈಸೂರಿನಲ್ಲಿ ಯಾರು ಉಳಿಯುತ್ತಿಲ್ಲ. ಈ ರೀತಿ ಇರುವಾಗ ಇಂಡಸ್ಟ್ರಿಗಳು ಬರುವುದಾದರು ಹೇಗೆ? ಮೈಸೂರು ಅಭಿವೃದ್ಧಿ ಆಗುವುದು ಹೇಗೆ ಸಾಧ್ಯ ಹೇಳಿ ಎಂದು ಕೇಳಿದ್ದಾರೆ. ಈ ಮೂಲಕ ಮೈಸೂರಿನಲ್ಲಿ ರಾಜಕಾರಣಿಗಳ ರಿಯಲ್ ಎಸ್ಟೇಟ್ ದಂಧೆ ನಡೆಸುತ್ತಿರುವುದನ್ನು ಸಂಸದರು ಬಯಲು ಮಾಡಿದ್ದಾರೆ.

    ಬೆಂಗಳೂರಿನಿಂದ ಮೈಸೂರಿಗೆ ಒಂದು ದಿನಕ್ಕೆ ಸರಿಸುಮಾರು 36 ಸಾವಿರ ವಾಹನಗಳು ಬರುತ್ತವೆ. ಇದರಿಂದ ಆ ರಸ್ತೆ ಮೇಲೆ ಫ್ರೆಶರ್ ಎಷ್ಟಿದೆ? ಬೆಂಗಳೂರಿನಿಂದ ಮೈಸೂರಿಗೆ ಹೋಗಬೇಕಾದ್ರೆ 4 ಗಂಟೆ ಬೇಕಾದ್ರೆ ಯಾವ ಕಾರ್ಖಾನೆ ಇಲ್ಲಿ ಬರಲು ಸಾಧ್ಯವಿದೆ ಹೇಳಿ ಎಂದು ಪ್ರಶ್ನಿಸಿದ್ರು. ವಿಮಾನ ನಿಲ್ದಾಣವಿದೆ. ಆದ್ರೆ ವಿಮಾನವೇ ಬರಲ್ಲ ಅಂತಂದ್ರೆ ಇಲ್ಲಿಗೆ ಯಾರು ಬರುತ್ತಾರೆ ಎಂದು ಬೇಸರ ವ್ಯಕ್ತಪಡಿಸಿದರು.

    ಕಳ್ಳ ರಿಯಲ್ ಎಸ್ಟೇಟ್ ದಂಧೆಗಾಗಿ ಇಲ್ಲಿ ರಾಜಕಾರಣಿಗಳು ಬರುತ್ತಾರೆ. ಇದನ್ನು ಬಿಟ್ಟರೆ ಮೈಸೂರಿನಲ್ಲಿ ಬೇರೆ ಏನೂ ಇಲ್ಲ ಪ್ರತಾಪ್ ಸಿಂಹ ಹೇಳಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಎಂಪಿ ಚುನಾವಣೆಗೆ ಬಿಜೆಪಿಯಿಂದ ಟಿಪ್ಪು ಜಯಂತಿ ಅಸ್ತ್ರ: ನಾಣಯ್ಯ ವ್ಯಂಗ್ಯ

    ಎಂಪಿ ಚುನಾವಣೆಗೆ ಬಿಜೆಪಿಯಿಂದ ಟಿಪ್ಪು ಜಯಂತಿ ಅಸ್ತ್ರ: ನಾಣಯ್ಯ ವ್ಯಂಗ್ಯ

    ಮಡಿಕೇರಿ: ಚುನಾವಣೆ ಉದ್ದೇಶದಿಂದ ಟಿಪ್ಪು ಜಯಂತಿಯನ್ನು ವಿರೋಧಿಸಿ, ಸಮಾಜದ ಸ್ವಾಸ್ಥ್ಯ ಹಾಳುಮಾಡುವವರ ವಿರುದ್ಧ ಕಠಿಣ ಕ್ರಮಗೊಳ್ಳಬೇಕು ಎಂದು ಹಿರಿಯ ರಾಜಕಾರಣಿ ಎಂ.ಸಿ ನಾಣಯ್ಯ ಹೇಳಿದ್ದಾರೆ.

    ಮಾಧ್ಯಮಗಳ ಜೊತೆಗೆ ಇಂದು ಮಾತನಾಡಿದ ಅವರು, ಲೋಕಸಭಾ ಚುನಾವಣೆ ಹೊಸ್ತಿಲಲ್ಲಿ ಇರುವಾಗ ಟಿಪ್ಪು ಜಯಂತಿಯನ್ನು ಬಿಜೆಪಿ ಸಂಘ ಪರಿವಾರ ದಾಳವಾಗಿ ಬಳಸಿಕೊಳ್ಳುತ್ತಿದೆ. ಮತ ಗಿಟ್ಟಿಸಿಕೊಳ್ಳಲು ಟಿಪ್ಪು ಜಯಂತಿಗೆ ವಿರೋಧ ವ್ಯಕ್ತಪಡಿಸಿ, ಪ್ರತಿಭಟನೆ ಮಾಡಲಾಗುತ್ತಿದೆ ಎಂದು ಆರೋಪಿಸಿದರು. ಇದನ್ನು ಓದಿ: ಸಿಎಂ ಹೊಗಳಿ ವೇದಿಕೆಯಲ್ಲೇ ಎರಡು ಮನವಿ ಇಟ್ಟ ಪ್ರತಾಪ್ ಸಿಂಹ

    ಅಮಾಯಕ ಜನರನ್ನು ಬಳಸಿಕೊಂಡು ಪ್ರತಿಭಟನೆ ಮಾಡುವುದನ್ನು ಬಿಟ್ಟು, ವಿಧಾನಸಭೆ ಮತ್ತು ಪರಿಷತ್‍ನಲ್ಲಿ ಚರ್ಚಿಸಿ ಬಹುಮತದ ಆಧಾರದಲ್ಲಿ ನಿರ್ಣಯ ಕೈಗೊಳ್ಳಬೇಕು. ಆಗ ಬಹುಮತ ಹೇಗಿರುತ್ತದೆಯೋ ಹಾಗೇ ನಿರ್ಣಯ ಬರುತ್ತದೆ. ಒಂದು ವೇಳೆ ಬೇಡ ಅಂತಾ ನಿರ್ಣಯವಾದಲ್ಲಿ ಜಯಂತಿ ಆಚರಿಸುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಹೇಳಿದರು. ಇದನ್ನು ಓದಿ: ಸಿದ್ದರಾಮಯ್ಯ ಜಾರಿಗೆ ತಂದ ಟಿಪ್ಪು ಜಯಂತಿ ಕೈಬಿಡುತ್ತಾರಾ ಎಚ್‍ಡಿಕೆ?

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ನಂದಮೂರಿ ಹರಿಕೃಷ್ಣ ಮೃತ ದೇಹದ ಜೊತೆ ಸೆಲ್ಫಿ: ಸಿಬ್ಬಂದಿ ವಜಾ

    ನಂದಮೂರಿ ಹರಿಕೃಷ್ಣ ಮೃತ ದೇಹದ ಜೊತೆ ಸೆಲ್ಫಿ: ಸಿಬ್ಬಂದಿ ವಜಾ

    ಹೈದರಾಬಾದ್: ನಟ ಹಾಗೂ ರಾಜಕಾರಣಿ ನಂದಮೂರಿ ಹರಿಕೃಷ್ಣ ಅವರ ಮೃತ ದೇಹದ ಜೊತೆ ನಾಲ್ಕು ಜನ ಖಾಸಗಿ ಆಸ್ಪತ್ರೆಯ ಸಿಬ್ಬಂದಿ ಸೆಲ್ಫಿ ಕ್ಲಿಕ್ಕಿಸಿಕೊಂಡಿದ್ದರು. ಈ ಕುರಿತು ಭಾರೀ ಟೀಕೆ ಕೇಳಿ ಬರುತ್ತಿದ್ದಂತೆ ಆಸ್ಪತ್ರೆ ಆಡಳಿತ ಮಂಡಳಿ ನಾಲ್ವರನ್ನು ಕೆಲಸದಿಂದ ವಜಾಗೊಳಿಸಿದೆ.

    ನಂದಮೂರಿ ಹರಿಕೃಷ್ಣ ಮೃತ ದೇಹದ ಜೊತೆಗಿನ ಸೆಲ್ಫಿ ಫೋಟೋ ನೋಡಿದ್ದ ನೆಟ್ಟಿಗರು ಭಾರೀ ಆಕ್ರೋಶ ವ್ಯಕ್ತಪಡಿಸಿದ್ದರು. ಅಮಾನವೀಯವಾಗಿ ನಡೆದುಕೊಂಡ ಆಸ್ಪತ್ರೆಯ ಅವರನ್ನು ಕೆಲಸದಿಂದ ತೆಗೆದು ಹಾಕುವಂತೆ ಒತ್ತಾಯಿಸಿದ್ದರು. ಮಾಹಿತಿ ತಿಳಿಯುತ್ತಿದ್ದಂತೆ ಆಡಳಿತ ಮಂಡಳಿ ಅವರನ್ನು ವಜಾಗೊಳಿಸಿ, ಸಾರ್ವಜನಿಕರಲ್ಲಿ ಕ್ಷಮೆ ಕೇಳಿದೆ.

    ನಡೆದದ್ದು ಏನು?
    ಆಗಸ್ಟ್ 29ರಂದು ತೆಲಂಗಾಣದ ನಲ್ಗೊಂಡ ಬಳಿ ಬೀಕರ ಅಪಘಾತ ಸಂಭವಿಸಿ, ನಂದಮೂರಿ ಹರಿಕೃಷ್ಣ ಗಂಭೀರ ಗಾಯಗೊಂಡಿದ್ದರು. ಅವರನ್ನು ಹೈದರಾಬಾದ್ ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದರು.

    ಮೃತದೇಹ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿತ್ತು. ಈ ವೇಳೆ ಒಬ್ಬ ಪುರುಷ ಹಾಗೂ ಮೂವರು ಮಹಿಳಾ ಸಿಬ್ಬಂದಿ ಮೃತ ದೇಹದೊಂದಿಗೆ ಸೆಲ್ಫಿ ಕ್ಲಿಕ್ಕಿಸಿಕೊಂಡು ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿದ್ದರು. ಇದಕ್ಕೆ ನೆಟ್ಟಿಗರು ಕಿಡಿಕಾರಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಬೆಲ್ಟ್ ಬಿಚ್ಚಿ ಹೊಡಿತೀನಿ, ಏನ್ ಮಾಡ್ತೀನಿ ನೋಡು-ಮಹಿಳೆಗೆ ಶಾಸಕ ವಿ.ಸೋಮಣ್ಣ ಅವಾಜ್

    ಬೆಲ್ಟ್ ಬಿಚ್ಚಿ ಹೊಡಿತೀನಿ, ಏನ್ ಮಾಡ್ತೀನಿ ನೋಡು-ಮಹಿಳೆಗೆ ಶಾಸಕ ವಿ.ಸೋಮಣ್ಣ ಅವಾಜ್

    -ನಾನು ಹಲ್ಕಟ್ ರಾಜಕಾರಣಿ ಅಲ್ಲ ಅಂದ್ರು ಸೋಮಣ್ಣ

    ಬೆಂಗಳೂರು: ಬಿಜೆಪಿಯ ಹಿರಿಯ ನಾಯಕ, ಗೋವಿಂದರಾಜ ನಗರ ಶಾಸಕ ವಿ.ಸೋಮಣ್ಣ ಅವರು, ಮಹಿಳೆಗೆ ಏಕವಚನದಲ್ಲಿಯೇ ಕೆಳಮಟ್ಟದ ಪದ ಪ್ರಯೋಗಿಸಿ ನಿಂದಿಸಿರುವ ವಿಡಿಯೋ ವೈರಲ್ ಆಗಿದೆ.

    ರಾಜಕಾರಣದಲ್ಲಿ ಸಭ್ಯ, ಮೃದು ಸ್ವಭಾವದ ನಾಯಕ ಅಂತಾ ಗುರುತಿಸಿಕೊಳ್ಳುವ ವಿ.ಸೋಮಣ್ಣರ ಕೆಳಮಟ್ಟದ ಮಾತುಗಳನ್ನು ಕೇಳಿದ ಜನರು ಶಾಕ್ ಆಗಿದ್ದಾರೆ. ಚುನಾವಣೆ ಸಮಯದಲ್ಲಿ ಮಹಿಳೆಯರಿಗೆ ಅಮ್ಮಾ.. ತಾಯಿ ಎಂದು ಕರೆಯುವ ರಾಜಕೀಯ ನಾಯಕರು ಸಹಾಯ ಕೇಳಲು ಹೋದಾಗ ಈ ರೀತಿಯ ಪದ ಪ್ರಯೋಗ ಎಷ್ಟು ಸರಿ ಎಂದು ಸಾರ್ವಜನಿಕರು ಪ್ರಶ್ನಿಸುತ್ತಿದ್ದಾರೆ.

    ವಿಡಿಯೋದಲ್ಲಿ ಏನಿದೆ?: ಶಾಲಾ ಕಟ್ಟಡದ ವಿಚಾರಕ್ಕಾಗಿ ಕೆಲ ಸ್ಥಳೀಯ ಮಹಿಳೆಯರು ಶಾಸಕರನ್ನು ಭೇಟಿ ಆಗಿದ್ದರು. ಇದೇ ವೇಳೆ ಶಾಸಕರು, ಈಯಮ್ಮ ಏನ್ ಕಡಿಮೆ ಇಲ್ಲ, ಬೆಲ್ಟ್ ಬಿಚ್ಚಿ ಹೊಡೀತಿನಿ ನಿಂಗೆ, ಇರು ಏನ್ ಮಾಡ್ತೀನಿ ನೋಡು ಎಂದು ಅವಾಜ್ ಹಾಕಿದ್ದಾರೆ.

    ಈ ಕುರಿತು ಪಬ್ಲಿಕ್ ಟಿವಿಗೆ ಪ್ರತಿಕ್ರಿಯಿಸಿದ ವಿ.ಸೋಮಣ್ಣ, ನಾನು 40 ವರ್ಷದಿಂದ ರಾಜಕೀಯದಲ್ಲಿ ಇದ್ದೇನೆ. ವಿಡಿಯೋದಲ್ಲಿರುವ ಧ್ವನಿ ನನ್ನದಲ್ಲ, ಯಾರೋ ಎಡಿಟ್ ಮಾಡಿರುವ ಕೆಲಸ ಇದಾಗಿದ್ದು, ಉದ್ದೇಶ ಪೂರ್ವಕವಾಗಿ ನನ್ನ ತೇಜೋವಧೆಗಾಗಿ ವಿಡಿಯೋ ಮಾಡಿಸಲಾಗಿದೆ ಎಂದು ಆರೋಪಿಸಿದ್ದಾರೆ. 40 ವರ್ಷಗಳ ನನ್ನ ರಾಜಕಾರಣದಲ್ಲಿ ಎಂದಿಗೂ ನಾನು ಇಷ್ಟು ಕೆಳಮಟ್ಟದ ಪದಗಳನ್ನು ಬಳಸಿಲ್ಲ. ಅದರಲ್ಲಿಯೂ ಮಹಿಳೆಯರ ಬಗ್ಗೆ ಅಪಾರ ಗೌರವವನ್ನು ಹೊಂದಿದ್ದೇನೆ. ಪ್ರತಿದಿನ ಕಚೇರಿಗೆ ಆಗಮಿಸಿ ಸಾವಿರಾರು ಜನರ ಸಮಸ್ಯೆಗಳನ್ನು ಕೇಳಿ ಬಗೆಹರಿಸುವ ಪ್ರಯತ್ನ ಮಾಡುತ್ತೇನೆ.

    ನನ್ನ ಕಚೇರಿಗೆ ಸುಮಾರು 20 ರಿಂದ 30 ಮಹಿಳೆಯರು ಬಂದಿದ್ದರು. ಶಾಲಾ ಆವರಣದಲ್ಲಿರುವ ದೇವಸ್ಥಾನಕ್ಕೆ ಕಾಂಪೌಂಡ್ ಕಟ್ಟಬೇಕೆಂದು ಕೇಳಿಕೊಂಡಿದ್ದರು. ಕಾಂಪೌಂಡ್ ನಿರ್ಮಿಸುವುದರಿಂದ ಶಾಲೆಯ ಮಕ್ಕಳಿಗೆ ತೊಂದರೆ ಆಗಲಿದ್ದು, ದೇವಸ್ಥಾನಕ್ಕಾಗಿ ಬೇರೆ ಸ್ಥಳ ನಿಗದಿ ಮಾಡುತ್ತೇನೆ. ಸರ್ಕಾರದಿಂದ 10 ಲಕ್ಷ ರೂ.ಯನ್ನು ಸಹ ಕೊಡಿಸುತ್ತೇನೆ ಅಂತಾ ಹೇಳಿ ಕಳುಹಿಸಿದ್ದೆ ಎಂದು ಸೋಮಣ್ಣ ಅವರು ಸ್ಪಷ್ಟನೆ ನೀಡಿದ್ದಾರೆ.

    ಮಾತು ಬದಲಿಸಿದ ಸೋಮಣ್ಣ: ವಿಡಿಯೋ ಕುರಿತು ಸ್ಪಷ್ಟನೆ ನೀಡುತ್ತಿದ್ದ ಶಾಸಕರು ಕ್ಷಣಾರ್ಧದಲ್ಲಿ ತಮ್ಮ ಮಾತುಗಳನ್ನು ಬದಲಿಸಿದ್ದಾರೆ. ಸ್ಪಷ್ಟನೆ ಆರಂಭದಲ್ಲಿ ನಾನು ಈ ಬಗ್ಗೆ ಸಿಬಿಐಗೆ ದೂರು ಸಲ್ಲಿಸುತ್ತೇನೆ ಅಂತಾ ಹೇಳಿದರು. ಕೊನೆಗೆ ನಾನು ಯಾವುದೇ ದೂರು ನೀಡಲ್ಲ ಅಂದರು. ನಾನೇನು ತಪ್ಪು ಮಾಡಿಲ್ಲ, ಅಲ್ಲಿರುವ ಧ್ವನಿ ನನ್ನದಲ್ಲ. ವಿಡಿಯೋ ವೈರಲ್ ಮಾಡಿರುವವರೇ ಅದಕ್ಕೆ ಸಾಕ್ಷ್ಯಾಧಾರ ಒದಗಿಸಲಿ. ಚುನಾವಣೆಯಲ್ಲಿ ಸೋತ ಹಿನ್ನೆಲೆಯಲ್ಲಿ ಕಾಂಗ್ರೆಸ್‍ನ ಮಾಜಿ ಶಾಸಕ ಪ್ರಿಯಾ ಕೃಷ್ಣ ಅವರೇ ಈ ವಿಡಿಯೋ ಮಾಡಿಸಿರುವ ಸಾಧ್ಯತೆಗಳಿವೆ ಎಂದು ಆರೋಪ ಮಾಡಿದರು.

    ಇದೆಲ್ಲಾ ಸುಳ್ಳು ಅಂತಾದ್ರೆ, ವಿಡಿಯೋ ಮೂಲಕ ನಿಮ್ಮ ತೇಜೋವಧೆ ಆಗುತ್ತಿದ್ದರೆ ನೀವು ಯಾಕೆ ದೂರು ದಾಖಲಿಸಿಬರದು ಎಂಬ ಪ್ರಶ್ನೆಗೆ ಉತ್ತರಿಸಿದ ಸಚಿವರು, ಯಾರು ಏನ್ ಬೇಕಾದರೂ ಮಾಡಿಕೊಳ್ಳಲಿ, ನಾನೇನು ತಲೆ ಕೆಡಿಸಿಕೊಳ್ಳಲ್ಲ. ವಿಡಿಯೋದಲ್ಲಿರುವ ಧ್ವನಿ ಮಾತ್ರ ನನ್ನದಲ್ಲ ಎಂಬುದನ್ನು ಮಾತ್ರ ಸ್ಪಷ್ಟಪಡಿಸುತ್ತೇನೆ. ಗೌರವ, ಸಂಸ್ಕಾರದಿಂದ ರಾಜಕಾರಣ ಮಾಡಿಕೊಂಡು ಬಂದಿದ್ದೇನೆ ಅಂತಾ ಅಂದ್ರು.

  • ರೌಡಿಶೀಟರ್ ಸೈಕಲ್ ರವಿಯೊಂದಿಗೆ ಪ್ರಭಾವಿ ಕಾಂಗ್ರೆಸ್ ರಾಜಕಾರಣಿಗೆ ನಂಟು!

    ರೌಡಿಶೀಟರ್ ಸೈಕಲ್ ರವಿಯೊಂದಿಗೆ ಪ್ರಭಾವಿ ಕಾಂಗ್ರೆಸ್ ರಾಜಕಾರಣಿಗೆ ನಂಟು!

    ಬೆಂಗಳೂರು: ಸುಮಾರು 10 ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ ನಟೋರಿಯಸ್ ರೌಡಿಶೀಟರ್ ಸೈಕಲ್ ರವಿಗೆ ರಾಜಕಾರಣಿಯೊಂದಿಗೆ ನಂಟಿತ್ತು ಎಂಬ ಮಾಹಿತಿಯೊಂದು ಇದೀಗ ಪಬ್ಲಿಕ್ ಟಿವಿಗೆ ಲಭಿಸಿದೆ.

    ಹೌದು. ಮಂಡ್ಯದ ಕಾಂಗ್ರೆಸ್ ಮುಖಂಡ ಸಚ್ಚಿದಾನಂದ ಜೊತೆ ಸೈಕಲ್ ರವಿ ನಿಕಟ ಸಂಪರ್ಕ ಹೊಂದಿದ್ದನು. ನಿಕಟ ಸಂಪರ್ಕ ಹೊಂದಿದ್ದ ರವಿ ಸಚ್ಚಿದಾನಂದ ಅವರ ಜೊತೆ ಮಾತನಾಡಲಿಕ್ಕಾಗಿಯೇ ಬೇರೆ ಸಿಮ್ ಖರೀದಿ ಮಾಡಿದ್ದಾನಾ ಎಂಬ ಪ್ರಶ್ನೆಯೊಂದು ಮೂಡಿದೆ.

    ಶ್ರೀರಂಗಪಟ್ಟಣದ ವಿಧಾನಸಭಾ ಕ್ಷೇತ್ರದಿಂದ ಟಿಕೆಟ್ ಆಕಾಂಕ್ಷಿಯಾಗಿದ್ದ ಸಚ್ಚಿದಾನಂದ ಜೊತೆಗಿನ ನಂಟು ಇದೀಗ ಪೊಲೀಸರ ತಾಂತ್ರಿಕ ತನಿಖೆಯಿಂದ ಬಯಲಾಗಿದೆ. ಯಾವುದೇ ವ್ಯವಹಾರ ಮಾಡ್ಬೇಕು ಅಂದ್ರೂ ಅವರಿಬ್ಬರೂ ಇದೇ ನಂಬರ್ ಅಲ್ಲಿ ಮಾತನಾಡುತ್ತಿದ್ದರು ಎನ್ನುವ ವಿಚಾರವನ್ನು ಪೊಲೀಸ್ ಮೂಲಗಳು ತಿಳಿಸಿವೆ.

    ಚುನಾವಣಾ ಪ್ರಚಾರದ ವೇಳೆ ಮಂಡ್ಯದಲ್ಲಿ ಡಿ ಕೆ ಶಿವಕುಮಾರ್ ಅಚವರಿಗೆ ಇದೇ ಸಚ್ಚಿದಾನಂದ ಸೇಬಿನ ಹಾರ ಹಾಕಿ ಸನ್ಮಾನಿಸಿದ್ದರು. ಸೈಕಲ್ ರವಿ ಮತ್ತು ಸ್ಯಾಂಡಲ್ ವುಡ್ ನಟನ ನಡುವೆ ರಾಜಿ ಪಂಚಾಯಿತಿ ಮಾಡಿದ್ದು ಇವರೇ ಆಗಿದ್ದು, ದ್ವೇಷ ಬೇಡ ನಟನೊಂದಿಗೆ ರಾಜಿ ಪಂಚಾಯಿತಿ ಮಾಡಿಕೊ ಅಂತ ಸೈಕಲ್ ರವಿಗೆ ಬುದ್ಧಿವಾದ ಹೇಳಿದ್ದರು ಎನ್ನಲಾಗಿದೆ.

    ಸೈಕಲ್ ರವಿ ಹಿನ್ನೆಲೆ:
    ಆರೋಪಿ ರವಿ ಮೇಲೆ 1998 ರಲ್ಲಿ ಮೊದಲ ಬಾರಿಗೆ ಬನಶಂಕರಿಯಲ್ಲಿ ರೌಡಿಶೀಟರ್ ಪಟ್ಟ ದಾಖಲಾಗಿತ್ತು. ಕೆಪಿ ಅಗ್ರಹಾರದಲ್ಲಿ ಸಣ್ಣ ಪುಟ್ಟ ಗಲಾಟೆಯಲ್ಲಿ ಭಾಗಿಯಾಗಿದ್ದ ರವಿ, ಸುಬ್ರಹ್ಮಣ್ಯಪುರ ಮುಖ್ಯ ಕೇಂದ್ರವಾಗಿಸಿಕೊಂಡು ಕಾನೂನು ಬಾಹಿರ ಕೃತ್ಯಗಳಲ್ಲಿ ತೊಡಗಿಕೊಂಡಿದ್ದ. ಪ್ರಮುಖವಾಗಿ ಕೊಲೆ, ಕೊಲೆಯತ್ನ, ಅಪಹರಣ, ಧಮ್ಕಿ, ಹಫ್ತಾವಸೂಲಿ ಸೇರಿ 30 ಕ್ಕೂ ಹೆಚ್ಚು ಪ್ರಕರಣಗಳು ಆತನ ಮೇಲೆ ದಾಖಲಾಗಿದೆ. ಕುಖ್ಯಾತ ರೌಡಿ ಲಿಂಗ ಮರ್ಡರ್, ಕೆಂಗೇರಿಯಲ್ಲಿ ಜಾನಿ, ಟಾಮಿ ಜೊಡಿ ಮರ್ಡರ್ ಸೇರಿದಂತೆ, ನಗರದಲ್ಲಿ ಜೆಪಿನಗರ ತಲಘಟ್ಟಪುರ, ಬನಶಂಕರಿ, ಸುಬ್ರಹ್ಮಣ್ಯಪುರ ಕೆಂಗೇರಿ ರಾಜರಾಜೇಶ್ವರಿ ನಗರ ಕೆಜಿ ನಗರ ಕೆಪಿ ಅಗ್ರಹಾರ ಸೇರಿ 14 ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉಳಿದಂತೆ ಸೈಕಲ್ ರವಿ ಬೆಂಗಳೂರಿನ ಮತ್ತೊಬ್ಬ ಕುಖ್ಯಾತ ರೌಡಿಶೀಟರ್ ಹೆಬ್ಬೆಟ್ ಮಂಜನ ಸ್ನೇಹಿತನಾಗಿದ್ದಾನೆ.

    ಬಂಧನವಾಗಿದ್ದು ಹೇಗೆ?:
    ಜೂನ್ 27ರಂದು ರಾಜರಾಜೇಶ್ವರಿನಗರದ ನೈಸ್‍ರೋಡ್ ಬಳಿ ರೌಡಿ ಸೈಕಲ್ ರವಿ ಬಂಧನಕ್ಕೆ ಪೊಲೀಸರು ಮುಂದಾಗಿದ್ದರು. ಈ ವೇಳೆ ಸೈಕಲ್ ರವಿ ಪೊಲೀಸ್ ಕಾನ್ಸ್ ಟೇಬಲ್ ಸತೀಶ್ ಮೇಲೆ ಹಲ್ಲೆಗೆ ಯತ್ನಿಸಿದ್ದನು. ಆತ್ಮ ರಕ್ಷಣೆಗೆ ಮುಂದಾದ ಸಿಸಿಬಿ ಇನ್ಸ್ ಪೆಕ್ಟರ್ ಪ್ರಕಾಶ್ ಹಾಗೂ ಪಿಐ ಮಲ್ಲಿಕಾರ್ಜುನ್ ತಕ್ಷಣವೇ 2 ಸುತ್ತಿನ ಗುಂಡು ಹಾರಿಸಿ, ಸೈಕಲ್ ರವಿಯನ್ನು ವಶಕ್ಕೆ ಪಡೆದು, ನ್ಯಾಯಾಂಗ ಬಂಧನದಲ್ಲಿ ಇರಿಸಿಕೊಂಡು ತನಿಖೆ ನಡೆಸಿದ್ದರು.

  • ಎದೆ ಮೇಲೆ ನೆಚ್ಚಿನ ರಾಜಕಾರಣಿಯ ಟ್ಯಾಟೂ ಹಾಕಿಸಿದ ಅಭಿಮಾನಿ!

    ಎದೆ ಮೇಲೆ ನೆಚ್ಚಿನ ರಾಜಕಾರಣಿಯ ಟ್ಯಾಟೂ ಹಾಕಿಸಿದ ಅಭಿಮಾನಿ!

    ವಿಜಯಪುರ: ನೆಚ್ಚಿನ ನಾಯಕ ನಟ ಹಾಗೂ ನಟಿಯರ ಟ್ಯಾಟೂ ಹಾಕಿಸಿಕೊಳ್ಳುವುದು ಸಾಮಾನ್ಯ. ಆದರೆ ಇಲ್ಲೊಬ್ಬ ಅಭಿಮಾನಿ ತಮ್ಮ ನೆಚ್ಚಿನ ರಾಜಕಾರಣಿಯ ಶಾಶ್ವತ ಹಚ್ಚೆ ಹಾಕಿಕೊಂಡಿದ್ದಾರೆ.

    ವಿಜಯಪುರ ನಗರದ ಗ್ಯಾಂಗಬಾವಡಿ ನಿವಾಸಿ ಪಪ್ಪು ಪವಾರ ಎಂಬಾತ ಮಾಜಿ ಸಚಿವ ಅಪ್ಪು ಪಟ್ಟಣಶೆಟ್ಟಿಯ ಭಾವಚಿತ್ರವನ್ನು ತನ್ನ ಎದೆಯ ಮೇಲೆ ಹಾಕಿಸಿಕೊಂಡಿದ್ದಾರೆ. ಇನ್ನು ವಿಜಯಪುರ ನಗರ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾದ ಅಪ್ಪು ಪಟ್ಟಣಶೆಟ್ಟಿಗೆ ಟಿಕೆಟ್ ನೀಡಬೇಕೆಂದು ಅಭಿಮಾನಿ ಪಪ್ಪುನ ಒತ್ತಾಯ.

    ಅಲ್ಲದೇ ಯುವಕರಿಗೆ ಆದರ್ಶವಾಗಿರುವ ಅಪ್ಪು ಪಟ್ಟಣಶೆಟ್ಟಿ ಜನಸಾಮಾನ್ಯರೊಂದಿಗೆ ಬೆರೆಯುವ ಮನಸ್ಸಿನವರು. ಅಲ್ಲದೇ ನೇರ ಸಂಪರ್ಕಕ್ಕೆ ಸುಲಭವಾಗಿ ಸಿಗುತ್ತಾರೆ. ಜನ ಸಾಮಾನ್ಯರೊಂದಿಗೆ ಬೆರೆಯುವ ನಾಯಕರಾದ ಅಪ್ಪು ಪಟ್ಟಣಶೆಟ್ಟಿಗೆ ಈ ಬಾರಿ ಬಿಜೆಪಿ ಟಿಕೆಟ್ ನೀಡಬೇಕೆಂದು ಅಭಿಮಾನಿಯ ಆಶಯ ವ್ಯಕ್ತಪಡಿಸಿದ್ದಾರೆ.

    ಇನ್ನು ಪಪ್ಪು ಎಸ್.ಎಸ್.ಎಲ್.ಸಿವರೆಗೆ ಓದಿದ್ದು, ಸದ್ಯ ಪೇಂಟಿಂಗ್ ಕೆಲಸ ಮಾಡುತ್ತಾರೆ. ನಮ್ಮ ಮೆಚ್ಚಿನ ಹೀರೋಗಾಗಿ ಸುಮಾರು 3000 ರೂಪಾಯಿ ಖರ್ಚು ಮಾಡಿ ಈ ಟ್ಯಾಟೂ ಹಾಕಿಸಿಕೊಂಡಿದ್ದೇನೆಂದು ಹೇಳಿದ್ದಾರೆ.

  • ಗಂಡು ಮಗುವಿನ ತಂದೆಯಾದ ನಟ, ರಾಜಕಾರಣಿ ಪವನ್ ಕಲ್ಯಾಣ್

    ಗಂಡು ಮಗುವಿನ ತಂದೆಯಾದ ನಟ, ರಾಜಕಾರಣಿ ಪವನ್ ಕಲ್ಯಾಣ್

    ಹೈದರಾಬಾದ್: ನಟ ಕಮ್ ರಾಜಕಾರಣಿ ಪವನ್ ಕಲ್ಯಾಣ್ ಇಂದು ಗಂಡು ಮಗುವಿಗೆ ತಂದೆಯಾಗಿದ್ದಾರೆ.

    ಹೌದು. ನಟಿ ರೇಣು ದೇಸಾಯಿಗೆ ವಿಚ್ಚೇದನ ನೀಡಿದ ಬಳಿಕ ನಟ ಪವನ್ ಕಲ್ಯಾಣ್ ರಷ್ಯಾದ ಅನ್ನಾ ಲೆಜ್ನೆವಾ ಅವರನ್ನು ವರಿಸಿದ್ದರು. ಕಳೆದ 2011ರಲ್ಲಿ ಟೀನ್ ಮಾರ್ ಎಂಬ ಚಿತ್ರದ ಶೂಟಿಂಗ್ ವೇಳೆ ಪವನ್ ಅವರು ಅನ್ನಾರನ್ನು ಭೇಟಿಯಾಗಿದ್ದರು. ಆ ಬಳಿಕ ಇಬ್ಬರು ಡೇಟಿಂಗ್ ಮಾಡಿದ್ದು, ಪರಿಚಯ ಪ್ರೇಮಕ್ಕೆ ತಿರುಗಿ ಮದುವೆಯೂ ಆದ್ರು. ಈಗಾಗಲೇ ದಂಪತಿಗೆ ಪೊಲೆನಾ ಎಂಬ ಹೆಸರಿನ ಹೆಣ್ಣು ಮಗುವಿದೆ. ಇದೀಗ ಮತ್ತೆ ಗಂಡು ಮಗುವಿಗೆ ಅನ್ನಾ ಜನ್ಮ ನಿಡಿದ್ದು, ಎರಡೂ ಕುಟುಂಬಗಳಲ್ಲೂ ಸಂತಸ ಮನೆ ಮಾಡಿದೆ.

    ಚಿತ್ರವೊಂದರ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದರೂ ಪವನ್ ಹೈದರಾಬಾದ್ ಗೆ ಬಂದು ತಾಯಿ ಹಾಗೂ ಮಗುವಿನ ಆರೋಗ್ಯವನ್ನು ವಿಚಾರಿಸಿದ್ದಾರೆ. ಸದ್ಯ ತಾಯಿ- ಮಗು ಆರೋಗ್ಯವಾಗಿದ್ದಾರೆ.

    ಒಟ್ಟಿನಲ್ಲಿ ನಿರೀಕ್ಷೆಯಂತೆ ಸಂಕ್ರಾತಿಗೆ ತನ್ನ 25ನೇಯ ಚಿತ್ರ ಬಿಡುಗಡೆಯಾಗಲಿದ್ದು, ಅದಕ್ಕೂ ಮುನ್ನ ತಾಯಿ-ಮಗುವಿನ ಜೊತೆ ಪವನ್ ಕಲ್ಯಾಣ್ ತನ್ನ ಜೊತೆ ತನ್ನ ಅಮೂಲ್ಯ ಕ್ಷಣಗಳನ್ನು ಕಳೆಯಲಿದ್ದಾರೆ. ಪವನ್ ಈ ಮೊದಲು ಮದುವೆಯಾದ ರೇಣು ದೇಸಾಯಿಗೆ ಇಬ್ಬರು ಮಕ್ಕಳಿದ್ದು, ಮಗ ಅಕಿರ ಹಾಗೂ ಮಗಳು ಸದ್ಯ ಇದೀಗ ತಾಯಿಯ ಜೊತೆಗಿದ್ದಾರೆ.

  • ಖ್ಯಾತ ಬಾಲಿವುಡ್ ನಟ, ರಾಜಕಾರಣಿ ವಿನೋದ್ ಖನ್ನಾ ಇನ್ನಿಲ್ಲ

    ಖ್ಯಾತ ಬಾಲಿವುಡ್ ನಟ, ರಾಜಕಾರಣಿ ವಿನೋದ್ ಖನ್ನಾ ಇನ್ನಿಲ್ಲ

    ಮುಂಬೈ: ಖ್ಯಾತ ಬಾಲಿವುಡ್ ನಟ ಹಾಗೂ ರಾಜಕಾರಣಿ ವಿನೋದ್ ಖನ್ನಾ(70) ವಿಧಿವಶರಾಗಿದ್ದಾರೆ.

    ಕೆಲವು ವಾರಗಳ ಹಿಂದೆ ತೀವ್ರ ನಿರ್ಜಲೀಕರಣದ ಕಾರಣ ಖನ್ನಾ ಅವರನ್ನ ಗಿರ್‍ಗಾಂವ್‍ನ ಹೆಚ್‍ಎನ್ ರಿಲಯನ್ಸ್ ಫೌಂಡೇಷನ್ ಅಂಡ್ ರಿಸರ್ಚ್ ಸೆಂಟರ್‍ಗೆ ಕರೆದೊಯ್ಯಲಾಗಿತ್ತು. ಅವರಿಗೆ ಬ್ಲಾಡರ್ ಕ್ಯಾನ್ಸರ್‍ಗೆ ಚಿಕಿತ್ಸೆ ನೀಡಲಾಗ್ತಿದೆ ಎಂಬ ವದಂತಿಯೂ ಹಬ್ಬಿತ್ತು. ಇದಾದ ಕೆಲವು ದಿನಗಳ ಬಳಿಕ ವಿನೋದ್ ಖನ್ನಾ ಅವರ ಮಗ ರಾಹುಲ್ ಖನ್ನಾ ಸುದ್ದಿ ಸಂಸ್ಥೆಗೆ ಹೇಳಿಕೆ ನೀಡಿದ್ದು, ತೀವ್ರ ನಿರ್ಜಲೀಕರಣದಿಂದಾಗಿ ತಂದೆಯನ್ನು ಆಸ್ಪತ್ರೆಗೆ ದಾಖಲಿಸಿದ್ದೇವೆ. ವೈದ್ಯರು ಚಿಕಿತ್ಸೆ ನೀಡಿದ್ದು, ಶೀಘ್ರದಲ್ಲೇ ಡಿಸ್ಚಾರ್ಜ್ ಮಾಡಿಸಲಾಗುತ್ತದೆ ಎಂದು ಹೇಳಿದ್ದರು.

    1968ರಲ್ಲಿ ಮನ್ ಕಾ ಮೀತ್ ಚಿತ್ರದ ಮೂಲಕ ವಿನೋದ್ ಖನ್ನಾ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದರು. ಈ ಚಿತ್ರದಲ್ಲಿ ಸುನಿಲ್ ದತ್ತ ಅವರಿಗೆ ಖಳನಾಯಕರಾಗಿ ಅಭಿನಯಿಸಿದ್ದರು. ನಂತರ ಹಲವಾರು ಚಿತ್ರಗಳಲ್ಲಿ ಖಳನಾಯಕ ಹಾಗು ಪೋಷಕ ಪಾತ್ರಗಳಲ್ಲಿ ಅಭಿನಯಿಸಿದ್ರು. ಹಮ್ ತುಮ್ ಔರ್ ವೋ ಚಿತ್ರದಲ್ಲಿ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ರು. ಅಮರ್ ಅಕ್ಬರ್ ಆಂಟೋನಿ, ಪರ್ವರಿಷ್, ಹೇರಾ ಫೇರಿ, ಮುಖ್ದಾರ್ ಕಾ ಸಿಕಂದರ್ ಇನ್ನೂ ಮುಂತಾದ ಫೇಮಸ್ ಚಿತ್ರಗಳಲ್ಲಿ ಖನ್ನಾ ಅಭಿನಯಿಸಿದ್ದಾರೆ.

    ಇತ್ತೀಚೆಗೆ ಸಲ್ಮಾನ್ ಖಾನ್ ಅಭಿನಯದ ದಬಂಗ್ ಚಿತ್ರದಲ್ಲೂ ವಿನೋದ್ ಖನ್ನಾ ಕಾಣಿಸಿಕೊಂಡಿದ್ದರು. ಅವರು ಅಭಿನಯಿಸಿದ ಕೊನೆಯ ಚಿತ್ರ ಶಾರೂಖ್ ಖಾನ್ ಹಾಗೂ ಕಾಜೋಲ್ ಅಭಿನಯದ ದಿಲ್‍ವಾಲೆ.

    ನಟರಾಗಿ ಅಷ್ಟೇ ಅಲ್ಲದೆ ರಾಜಕಾರಣಿಯಾಗಿಯೂ ವಿನೋದ್ ಖನ್ನಾ ಗುರುತಿಸಿಕೊಂಡಿದ್ದರು. ಪಂಜಾಬ್‍ನ ಗುರುದಾಸ್‍ಪುರ ಕ್ಷೇತ್ರದಿಂದ ಬಿಜೆಪಿ ಸಂಸದರಾಗಿ ಆಯ್ಕೆಯಾಗಿದ್ದರು. ಕೇಂದ್ರ ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಸಚಿವ ಹಾಗೂ ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವರಾಗಿದ್ರು.