ಚಿಕ್ಕಮಗಳೂರು: ಕಾಂಗ್ರೆಸ್ಗೆ (Congress) ನಕ್ಸಲರು, ನಗರ ನಕ್ಸಲರು ಆತ್ಮೀಯರಾಗ್ತಾರೆ. ಆದರೆ ದೇಶಭಕ್ತರನ್ನು ಕಂಡರೆ ಅವರಿಗೆ ಆಗಲ್ಲ ಎಂದು ಎಂಎಲ್ಸಿ ಸಿ.ಟಿ ರವಿ (C.T Ravi) ಕಿಡಿಕಾರಿದ್ದಾರೆ.
ಚಿಕ್ಕಮಗಳೂರಿನಲ್ಲಿ (Chikkamagaluru) ಮಾಧ್ಯಮಗಳ ಜೊತೆ ಅವರು ಮಾತನಾಡಿದರು. ಈ ವೇಳೆ, ಆರ್ಎಸ್ಎಸ್ ಚಟುವಟಿಕೆಗಳಿಗೆ ಸರ್ಕಾರ ನಿರ್ಬಂಧ ಹೇರಿದ ವಿಚಾರವಾಗಿ ಅವರು ಪ್ರತಿಕ್ರಿಯಿಸಿದರು. ಆರ್ಎಸ್ಎಸ್ ಇರುವುದು ಜನರ ಮನಸ್ಸಿನಲ್ಲಿ. ದೇಶ ಹಾಳು ಮಾಡುವ ವಿಚಾರ ಆಗಿದ್ರೆ ಸಂಘ ಇಷ್ಟು ದೊಡ್ಡ ಮಟ್ಡಕ್ಕೆ ಬೆಳೆಯುತ್ತಿರಲಿಲ್ಲ. ಸಂಘದಲ್ಲಿರುವುದು ನಿಸ್ವಾರ್ಥ ದೇಶಪ್ರೇಮ, ಅದು ಬೆಳೆಯುತ್ತಲೇ ಇದೆ ಎಂದರು. ಇದನ್ನೂ ಓದಿ: ಸರ್ಕಾರಿ ಸ್ಥಳಗಳಲ್ಲಿ ಆರ್ಎಸ್ಎಸ್ ಚಟುವಟಿಕೆಗಳಿಗೆ ಮೂಗುದಾರ
ಕಾಂಗ್ರೆಸ್ ಸೇವಾದಳ ಅದಕ್ಕೂ ನೂರು ವರ್ಷ, ಯಾರಾದರೂ ನೆನಪಿಸುತ್ತಾರಾ? ನಮಗೆ ಗಣವೇಷವನ್ನು ಸರಬರಾಜು ಮಾಡಲು ಆಗದಂತಹ ಮಟ್ಟಕ್ಕೆ ಬೇಡಿಕೆ ಬಂದಿದೆ. ಆರ್ಎಸ್ಎಸ್ನಲ್ಲಿ ಕೆಲಸ ಮಾಡುವ ಜನ ದೇಶ ಬಲ ಆಗಬೇಕೆಂದು ಬಯಸುತ್ತಾರೆ. ದೂರ ಇಟ್ಟರೆ ದೇಶಕ್ಕೆ ನಷ್ಟವಾಗಲಿದೆ. ಇದರ ಲಾಭವನ್ನು ಅರಾಜಕವಾದಿಗಳು, ಭಾರತ್ ತೇರೆ ತುಕಡೆ ಹೂಂಗೆ, ಇನ್ಷಾ ಅಲ್ಲಾ ಅನ್ನೋರು ಪಡೆಯುತ್ತಾರೆ ಎಂದು ವಾಗ್ದಾಳಿ ನಡೆಸಿದರು.
ನಕ್ಸಲರು, ನಗರ ನಕ್ಸಲರು ಕಾಂಗ್ರೆಸ್ನವರಿಗೆ ಆತ್ಮೀಯರಾಗುತ್ತಾರೆ. ದೇಶಭಕ್ತಿಯ ಸಂಘಟನೆ ಕಂಡರೆ ಅಸಹನೆ ಆಗುತ್ತೆ, ಯಾರನ್ನ ದೇಶದ್ರೋಹಿಗಳು ಎನ್ನಬೇಕು? ರಾಷ್ಟ್ರೀಯ ಸ್ವಯಂ ಸೇವಕ ಸಂಘವನ್ನು ವಿರೋಧ ಮಾಡುವವರು ದೇಶದ್ರೋಹಿಗಳು ಎಂದು ಅಸಮಾಧಾನ ಹೊರಹಾಕಿದ್ದಾರೆ. ಇದನ್ನೂ ಓದಿ: ಸರ್ಕಾರಿ ನೌಕರರು ಆರ್ಎಸ್ಎಸ್ ಚಟುವಟಿಕೆಗಳಲ್ಲಿ ಭಾಗಿಯಾದ್ರೆ ಶಿಸ್ತು ಕ್ರಮ ಕೈಗೊಳ್ಳಿ: ಪ್ರಿಯಾಂಕ್ ಪತ್ರ










