Tag: Pooja Gandhi

  • ಲಂಡನ್‌ನಲ್ಲಿರುವ ಬಸವೇಶ್ವರ ಪುತ್ಥಳಿಗೆ ನಮನ ಸಲ್ಲಿಸಿದ ಪೂಜಾ ಗಾಂಧಿ

    ಲಂಡನ್‌ನಲ್ಲಿರುವ ಬಸವೇಶ್ವರ ಪುತ್ಥಳಿಗೆ ನಮನ ಸಲ್ಲಿಸಿದ ಪೂಜಾ ಗಾಂಧಿ

    ‘ಮುಂಗಾರು ಮಳೆ’ ನಟಿ ಪೂಜಾ ಗಾಂಧಿ (Pooja Gandhi) ಅವರು ಪತಿ ವಿಜಯ್ (Vijay) ಜೊತೆ ಲಂಡನ್‌ನಲ್ಲಿರುವ ಬಸವೇಶ್ವರ ಪುತ್ಥಳಿಯ ಆಶೀರ್ವಾದವನ್ನು ಪಡೆದಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿ ಬಸವೇಶ್ವರ ಪುತ್ಥಳಿಗೆ ಪೂಜಾ ಗಾಂಧಿ ದಂಪತಿ ನಮನ ಸಲ್ಲಿಸಿದ್ದಾರೆ. ಇದನ್ನೂ ಓದಿ:ದೊಡ್ಮನೆಯ ಮೊದಲ ಎಲಿಮಿನೇಷನ್- ಪ್ರಬಲ ಸ್ಪರ್ಧಿಯೇ ಔಟ್?

    ಮದುವೆಯಾದ ಬಳಿಕ ಪತಿ ಜೊತೆ ಪೂಜಾ ಗಾಂಧಿ ಲಂಡನ್‌ಗೆ ಹಾರಿದ್ದಾರೆ. ಅಲ್ಲಿ ಲಂಡನ್‌ನಲ್ಲಿರುವ 2 ಪ್ರಮುಖ ಕನ್ನಡ ಸಂಸ್ಥೆಗಳಾದ ಲ್ಯಾಂಬೆತ್ ಬಸವೇಶ್ವರ ಫೌಂಡೇಶನ್ ಮತ್ತು ಬಸವ ಸಮಿತಿ ಜಂಟಿಯಾಗಿ ಆಯೋಜಿಸಿದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ.

    ಈ ಸಂದರ್ಭದಲ್ಲಿ, ಪೂಜಾ ಗಾಂಧಿ ಅವರು ಬಸವೇಶ್ವರ ಪುತ್ಥಳಿಗೆ ಗೌರವ ಸಲ್ಲಿಸಿದರು. 12ನೇ ಶತಮಾನದಲ್ಲಿ ಮಾನವ ಹಕ್ಕುಗಳು, ಲಿಂಗ ಸಮಾನತೆ ಮತ್ತು ಜಾತಿ ತಾರತಮ್ಯದ ವಿರುದ್ಧದ ಹೋರಾಟಕ್ಕೆ ಅವರು ನೀಡಿದ ಕೊಡುಗೆಗಳ ಬಗ್ಗೆ ಮಾತನಾಡಿದರು. ತನಗೆ ಬಸವಣ್ಣನ ಬಗ್ಗೆ ಅಪಾರ ಅಭಿಮಾನವಿದೆ ಮತ್ತು ಅವರ ಬೋಧನೆಗಳ ಸಮರ್ಪಿತ ಅನುಯಾಯಿ ಎಂದು ಅವರು ಹೇಳಿದರು.

  • ಕಿರುತೆರೆಗೆ ಎಂಟ್ರಿ ಕೊಟ್ಟ ಮಳೆ ಹುಡುಗಿ ಪೂಜಾ ಗಾಂಧಿ

    ಕಿರುತೆರೆಗೆ ಎಂಟ್ರಿ ಕೊಟ್ಟ ಮಳೆ ಹುಡುಗಿ ಪೂಜಾ ಗಾಂಧಿ

    ‘ಮುಂಗಾರು ಮಳೆ’ (Mungaru Male) ನಟಿ ಪೂಜಾ ಗಾಂಧಿ (Pooja Gandhi) ಅಭಿಮಾನಿಗಳಿಗೆ ಸಿಹಿಸುದ್ದಿ ಕೊಟ್ಟಿದ್ದಾರೆ. ಮತ್ತೆ ನಟನೆಗೆ ಮರಳಿದ್ದಾರೆ. ‘ನಿನಗಾಗಿ’ ಎನ್ನುತ್ತಾ ಪೂಜಾ ಗಾಂಧಿ ಟಿವಿ ಪರದೆಗೆ ಎಂಟ್ರಿ ಕೊಟ್ಟಿದ್ದಾರೆ. ಇದನ್ನೂ ಓದಿ:‘ನೈಸ್ ರೋಡ್’ನಲ್ಲಿ ಕಾಣಿಸಿಕೊಂಡ ಧರ್ಮ : ಟ್ರೈಲರ್ ರಿಲೀಸ್

    ಸಿನಿಮಾ ನಟಿಯ ಕಥೆ ಹೊಂದಿರುವ ‘ನಿನಗಾಗಿ’ ಸೀರಿಯಲ್‌ನಲ್ಲಿ ಸೂಪರ್ ಸ್ಟಾರ್ ರಚನಾ ಎಂಬ ಪಾತ್ರದಲ್ಲಿ ‘ಬಿಗ್ ಬಾಸ್’ ಖ್ಯಾತಿಯ ದಿವ್ಯಾ ಉರುಡುಗ (Divya Uruduga) ನಟಿಸುತ್ತಿದ್ದಾರೆ. ಈ ಧಾರಾವಾಹಿಯಲ್ಲಿ ಕಿಶನ್‌ ಬಿಳಗಲಿ ಕೂಡ ನಟಿಸುತ್ತಿದ್ದಾರೆ.  ಸಾಕಷ್ಟು ತಿರುವು ಪಡೆದು ಮುನ್ನುಗ್ಗುತ್ತಿರುವ ಈ ಸೀರಿಯಲ್‌ಗೆ ಪೂಜಾ ಗಾಂಧಿ ವಿಶೇಷ ಪಾತ್ರವೊಂದಕ್ಕೆ ಜೀವ ತುಂಬಿದ್ದಾರೆ.

    ಸದ್ಯ ಪೂಜಾ ಗಾಂಧಿ ಜೊತೆಗಿನ ಸುಂದರ ಫೋಟೋಗಳನ್ನು ದಿವ್ಯಾ ಉರುಡುಗ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ‘ಮುದ್ದು ಕನ್ನಡತಿ’ ಎಂದು ದಿವ್ಯಾ ಕ್ಯಾಪ್ಷನ್ ನೀಡಿದ್ದಾರೆ. ಈ ಸೀರಿಯಲ್‌ನಲ್ಲಿ ನಟಿಸುತ್ತಿರುವ ಸಹಕಲಾವಿದರು ಕೂಡ ಫೋಟೋಗೆ ಪೋಸ್‌ ಕೊಟ್ಟಿದ್ದಾರೆ. ಈ ಪೋಸ್ಟ್‌ ನೋಡಿ ಬಳಿಕ ಎಪಿಸೋಡ್‌ ನೋಡಲು ಕಾತರದಿಂದ ಕಾಯ್ತಿದ್ದಾರೆ ಅಭಿಮಾನಿಗಳು.

    ಅಂದಹಾಗೆ, ಮುಂಗಾರು ಮಳೆ, ಮಿಲನಾ, ಕೃಷ್ಣ, ಅನು, ತಾಜ್‌ಮಹಲ್ ಸೇರಿದಂತೆ ಹಲವು ಸಿನಿಮಾಗಳಲ್ಲಿ ಪೂಜಾ ಗಾಂಧಿ ನಟಿಸಿದ್ದಾರೆ. ‘ಬಿಗ್‌ ಬಾಸ್‌ ಸೀಸನ್‌ 3’ರಲ್ಲಿ (Bigg Boss Kannada) ಪೂಜಾ ಸ್ಪರ್ಧಿಯಾಗಿ ಕಾಣಿಸಿಕೊಂಡಿದ್ದರು.

  • ಕರವೇ ಪ್ರತಿಭಟನೆ- ಲವ್ಲಿ ಸ್ಟಾರ್ ಪ್ರೇಮ್, ಪೂಜಾ ಗಾಂಧಿ ಬೆಂಬಲ

    ಕರವೇ ಪ್ರತಿಭಟನೆ- ಲವ್ಲಿ ಸ್ಟಾರ್ ಪ್ರೇಮ್, ಪೂಜಾ ಗಾಂಧಿ ಬೆಂಬಲ

    ರ್ನಾಟಕ ನೆಲದಲ್ಲಿ ಕನ್ನಡಿಗರಿಗೆ ಉದ್ಯೋಗದ ಸಮಗ್ರ ಕಾಯ್ದೆ ರೂಪಿಸಲು ಜುಲೈ 1ರಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾದ್ಯಂತ  ಸತ್ಯಾಗ್ರಹಕ್ಕೆ ಕರೆ ಕೊಟ್ಟಿದ್ದಾರೆ. ಈ ಪ್ರತಿಭಟನೆಗೆ ನಟಿ ಪೂಜಾ ಗಾಂಧಿ ಮತ್ತು ಲವ್ಲಿ ಸ್ಟಾರ್ ಪ್ರೇಮ್ (Lovely Star Prem) ಬೆಂಬಲಿಸಿದ್ದಾರೆ. ಇದನ್ನೂ ಓದಿ:ವಿಶ್ವಕಪ್ ಗೆದ್ದ ಭಾರತ- ಸಂಭ್ರಮಿಸಿದ ಸಿನಿತಾರೆಯರು

    ಒಂದು ಭಾಷೆ ಉಳಿಯಬೇಕಾದರೆ ಎರಡು ಕಾರಣ ಇರುತ್ತದೆ. ಒಂದು ಭಾಷೆಯ ಮೇಲೆ ಪ್ರೀತಿ ಇರಬೇಕು. ಆ ಭಾಷೆಯ ಬಗ್ಗೆ ಹೆಮ್ಮೆ ಇರಬೇಕು. 2ನೇ ಕಾರಣ, ಕನ್ನಡ ಅನ್ನದ ಭಾಷೆಯಾಗಿರಬೇಕು ಎಂದು ‘ಮುಂಗಾರು ಮಳೆ’ ನಟಿ ಪೂಜಾ ಗಾಂಧಿ ಮಾತನಾಡಿದ್ದಾರೆ. ಕರ್ನಾಟಕದಲ್ಲಿ ಕನ್ನಡಿಗರಿಗೆ ಕೆಲಸದಲ್ಲಿ ಶೇಕಡ 100ರಷ್ಟು ಮೀಸಲಾತಿ ಸಿಗಬೇಕು. ಕನ್ನಡಿಗರಿಗೆ ಉದ್ಯೋಗದಲ್ಲಿ ಮೊದಲ ಆಧ್ಯತೆ ಸಿಗಬೇಕು. ಇದು ಕನ್ನಡ ಬೆಳವಣಿಗೆಗೆ ಮುಖ್ಯ ಕಾರಣವಾಗುತ್ತದೆ ಎಂದಿದ್ದಾರೆ.

    ಕರವೇ ಅಧ್ಯಕ್ಷ ಟಿ.ಎ.ನಾರಾಯಣಗೌಡ ನೇತೃತ್ವದಲ್ಲಿ ಜುಲೈ 1ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಸಮಾವೇಶ ಆಯೋಜನೆ ಆಗುತ್ತಿದೆ. ಈ ಹೋರಾಟಕ್ಕೆ ನಾನು ಇರುತ್ತೇನೆ. ನೀವು ಬನ್ನಿ ಎಂದು ಪೂಜಾ ಗಾಂಧಿ (Pooja Gandhi) ಬೆಂಬಲ ಸೂಚಿಸಿದ್ದಾರೆ.

    ಕರ್ನಾಟಕದಲ್ಲಿ ಕನ್ನಡಿಗರಿಗೆ ಸಾರ್ವಜನಿಕ ಮತ್ತು ಖಾಸಗಿ ವಲಯದಲ್ಲಿ ಉದ್ಯೋಗ ಸಿಗಬೇಕು. ಸರೋಜಿನಿ ಮಹಿಷಿ ವರದಿ ಜಾರಿಗೆ ತರಬೇಕು ಅಂತ ಬೃಹತ್ ಪ್ರತಿಭಟನೆ ಸತ್ಯಾಗ್ರಹವನ್ನು ಜುಲೈ 1ರಂದು ಫ್ರೀಡಂ ಪಾರ್ಕ್‌ನಲ್ಲಿ ಹಮ್ಮಿಕೊಂಡಿದ್ದಾರೆ. ಒಬ್ಬ ಕನ್ನಡಿಗನಾಗಿ ಈ ಪ್ರತಿಭಟನೆಗೆ ನನ್ನ ಬೆಂಬಲವು ಇದೆ ಎಂದು ಲವ್ಲಿ ಸ್ಟಾರ್ ಪ್ರೇಮ್ ಕೂಡ ಮಾತನಾಡಿದ್ದಾರೆ.

  • ಉಡುಪಿ ಶ್ರೀಕೃಷ್ಣನ ದರ್ಶನ ಪಡೆದ ಪೂಜಾ ಗಾಂಧಿ ದಂಪತಿ

    ಉಡುಪಿ ಶ್ರೀಕೃಷ್ಣನ ದರ್ಶನ ಪಡೆದ ಪೂಜಾ ಗಾಂಧಿ ದಂಪತಿ

    ಸ್ಯಾಂಡಲ್‌ವುಡ್ ನಟಿ ಪೂಜಾ ಗಾಂಧಿ (Pooja Gandhi) ದಂಪತಿ ಉಡುಪಿಗೆ ಆಗಮಿಸಿದ್ದಾರೆ. ಪತಿ ವಿಜಯ್ ಘೋರ್ಪಡೆ (Vijay Ghorpade) ಜೊತೆ ನಟಿ ಪೂಜಾ ಗಾಂಧಿ ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

    ಮದುವೆ ಆದ ನಂತರ ಮೊದಲ ಬಾರಿಗೆ ಉಡುಪಿಗೆ ಆಗಮಿಸಿದ ಪೂಜಾ ಗಾಂಧಿ ದಂಪತಿ, ಕನಕ ನವಗ್ರಹ ಕಿಂಡಿಯ ಮೂಲಕ ದೇವರ ದರ್ಶನ ಮಾಡಿದ್ದಾರೆ. ರಥಬೀದಿಯಲ್ಲಿರುವ ಕಾಣಿಯೂರು ಮಠಕ್ಕೆ ತೆರಳಿ ಶ್ರೀವಿದ್ಯಾವಲ್ಲಭ ತೀರ್ಥ ಸ್ವಾಮೀಜಿಯವರನ್ನು ಭೇಟಿಯಾಗಿದ್ದು, ಸ್ವಾಮೀಜಿಯವರಿಂದ ಅನುಗ್ರಹ ಮಂತ್ರಾಕ್ಷತೆ ಸ್ವೀಕಾರ ಮಾಡಿದ್ದಾರೆ. ಶ್ರೀಕೃಷ್ಣಮಠ ಮತ್ತು ಕಾಣಿಯೂರು ಮಠ ನವ ದಂಪತಿಯನ್ನು ಗೌರವಿಸಿದೆ. ಇದನ್ನೂ ಓದಿ:ಉಡುಪಿ ಶ್ರೀಕೃಷ್ಣನ ದರ್ಶನ ಪಡೆದ ನಟಿ ಸಾಯಿಪಲ್ಲವಿ

    ನವೆಂಬರ್ 29ರಂದು ಉದ್ಯಮಿ ವಿಜಯ್ ಘೋರ್ಪಡೆ ಜೊತೆ ಪೂಜಾ ಗಾಂಧಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಮಂತ್ರ- ಮಾಂಗಲ್ಯ ಪದ್ಧತಿಯಲ್ಲಿ ಸರಳವಾಗಿ ಪೂಜಾ ಮದುವೆಯಾಗಿದ್ದಾರೆ.

    ‘ಮುಂಗಾರು ಮಳೆ’ (Mungarumale) ಚಿತ್ರದ ಮೂಲಕ ಗೋಲ್ಡನ್ ಸ್ಟಾರ್ ಗಣೇಶ್‌ಗೆ (Golden Star Ganesh) ನಾಯಕಿಯಾಗಿ ಪೂಜಾ ಗಾಂಧಿ ನಟಿಸಿದ್ದರು. ಬಳಿಕ ಮಿಲನ, ದಂಡು ಪಾಳ್ಯ, ಅಭಿನೇತ್ರಿ, ಬುದ್ಧಿವಂತ, ಕೃಷ್ಣ ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸಿ ಗಮನ ಸೆಳೆದಿದ್ದಾರೆ. ರಾಜಕೀಯ ರಂಗ- ಸಿನಿಮಾ ಕ್ಷೇತ್ರ ಎರಡರಲ್ಲೂ ನಟಿ ಗುರುತಿಸಿಕೊಂಡಿದ್ದಾರೆ.

  • ‘ಕವಿಶೈಲ’ದಲ್ಲಿ ಪೂಜಾ ಗಾಂಧಿ ದಂಪತಿ

    ‘ಕವಿಶೈಲ’ದಲ್ಲಿ ಪೂಜಾ ಗಾಂಧಿ ದಂಪತಿ

    ಕುವೆಂಪು ಅವರ ಆಶಯದ ಮಂತ್ರ ಮಾಂಗಲ್ಯ ಮೂಲಕ ಹೊಸ ಜೀವನಕ್ಕೆ ಕಾಲಿಟ್ಟ ಪೂಜಾ ಗಾಂಧಿ (Pooja Gandhi) ದಂಪತಿ ಕವಿಶೈಲಕ್ಕೆ  (Kavi Shaila)ಭೇಟಿ ನೀಡಿದ್ದಾರೆ. ಕುಪ್ಪಳ್ಳಿಯ ಕವಿ ಶೈಲಕ್ಕೆ ಪತಿಯೊಂದಿಗೆ ಆಗಮಿಸಿದ್ದ ಪೂಜಾ ಗಾಂಧಿ ಕೆಲ ಸಮಯವನ್ನು ಅಲ್ಲೆ ಕಳೆದಿದ್ದಾರೆ. ಕುವೆಂಪು ಅವರ ಪರಿಕಲ್ಪನೆಯ ಮಂತ್ರ ಮಾಂಗಲ್ಯ  ಮಾಡಿಕೊಂಡಿದ್ದರ ಬೆನ್ನಲ್ಲೇ ದಂಪತಿ ಭೇಟಿ ನೀಡಿದ್ದು ವಿಶೇಷ.

    ಇತ್ತೀಚೆಗಷ್ಟೇ ಬೆಂಗಳೂರಿನ ಯಲಹಂಕದಲ್ಲಿ ನಟಿ ಪೂಜಾ ಗಾಂಧಿ ಮತ್ತು  ಉದ್ಯಮಿ ವಿಜಯ್ ಘೋರ್ಪಡೆ (Vijay Ghorpade) ಬದುಕಿಗೆ ಕಾಲಿಟ್ಟಿದ್ದರು. ವಿಜಯ್ ಬೆಂಗಳೂರಿನ ಲಾಜೆಸ್ಟಿಕ್ ಕಂಪನಿಯ ಮಾಲೀಕರಾಗಿದ್ದು, ಪೂಜಾ ಅವರ ಕನ್ನಡ ಪ್ರೇಮವೇ ಇಬ್ಬರೂ ಮದುವೆ ಆಗುವಂತೆ ಮಾಡಿತ್ತು.

     

    ಪೂಜಾ- ವಿಜಯ್ ಮದುವೆಗೆ ಕುಟುಂಬಸ್ಥರು, ಆಪ್ತರು ಸ್ಯಾಂಡಲ್ವುಡ್‌ನ ಆತ್ಮೀಯ ಸ್ನೇಹಿತರು ಹಾಗೂ ಮುಂಗಾರು ಮಳೆ ನಿರ್ದೇಶಕ ಯೋಗರಾಜ್ ಭಟ್, ಸುಧಾರಾಣಿ, ಶುಭಾ ಪೂಂಜಾ, ಸುಮನಾ ಕಿತ್ತೂರು ಸೇರಿದಂತೆ ಅನೇಕರು ಭಾಗಿಯಾಗಿದ್ದರು.

  • ನನಗೂ ಪೂಜಾಗೂ ದಂಡುಪಾಳ್ಯ ಟೈಮ್‌ನಲ್ಲಿ ಕೋಳಿ ಜಗಳ ಆಗಿತ್ತು- ಸಂಜನಾ ಗಲ್ರಾನಿ

    ನನಗೂ ಪೂಜಾಗೂ ದಂಡುಪಾಳ್ಯ ಟೈಮ್‌ನಲ್ಲಿ ಕೋಳಿ ಜಗಳ ಆಗಿತ್ತು- ಸಂಜನಾ ಗಲ್ರಾನಿ

    ಳೆ ಹುಡುಗಿ ಪೂಜಾ ಗಾಂಧಿ (Pooja Gandhi) ಅವರು ಮಂತ್ರ ಮಾಂಗಲ್ಯ ಪದ್ಧತಿಯಂತೆ ಹೊಸ ಬಾಳಿಗೆ ಇಂದು (ನ.29) ಕಾಲಿಟ್ಟಿದ್ದಾರೆ. ಪೂಜಾ-ವಿಜಯ್ ಮದುವೆಗೆ ಸಂಜನಾ ಗಲ್ರಾನಿ ಆಗಮಿಸಿ ಶುಭಕೋರಿದ್ದಾರೆ. ಇದನ್ನೂ ಓದಿ:ಪೂಜಾ ಗಾಂಧಿ ಮದುವೆಗೆ ಕೌಂಟ್‌ಡೌನ್-‌ ಮಳೆ ಹುಡುಗಿ ಫುಲ್‌ ಮಿಂಚಿಂಗ್

    ಪೂಜಾ ಅವರನ್ನ ನೋಡಿದ್ರೆ ಹೆಮ್ಮೆ ಆಗುತ್ತದೆ. ಬೇರೇ ರಾಜ್ಯದಿಂದ ಬಂದು ಕನ್ನಡ ಕಲಿತಿದ್ದಾರೆ. ಈಗ ಕರ್ನಾಟಕದ ಸೊಸೆ ಆಗಿದ್ದಾರೆ. ವಿಜಯ್ ತುಂಬಾ ಒಳ್ಳೆಯ ಹುಡುಗ. ನಾನು ಹುಡುಗನ ಕಡೆಯಿಂದ ಮದುವೆಗೆ ಬಂದಿದ್ದೀನಿ ಎಂದು ಸಂಜನಾ ಮಾತನಾಡಿದ್ದಾರೆ. ಬಳಿಕ ನನಗೂ ಪೂಜಾಗೂ ದಂಡುಪಾಳ್ಯ ಟೈಮ್‌ನಲ್ಲಿ ಕೋಳಿ ಜಗಳ ಆಗಿತ್ತು ಎಂದು ಹಳೆಯ ದಿನಗಳನ್ನ ನಟಿ ಸಂಜನಾ ಗಲ್ರಾನಿ (Sanjana Galrani) ಸ್ಮರಿಸಿದ್ದರು. ಬಳಿಕ ನವಜೋಡಿಗೆ ಶುಭ ಹಾರೈಸಿದ್ದರು.

    ಕಳೆದ 10 ವರ್ಷಗಳಿಂದ ವಿಜಯ್ ಮತ್ತು ಪೂಜಾ ಗಾಂಧಿ ಸ್ನೇಹಿತರಾಗಿದ್ದರು. ವಿಜಯ್ ಅವರಿಂದಲೇ ಪೂಜಾ ಗಾಂಧಿ ಕನ್ನಡ ಕಲಿತಿದ್ದರು. ಈ ಪರಿಚಯವೇ ಪ್ರೇಮಕ್ಕೆ ಮುನ್ನುಡಿ ಬರೆದಿದೆ. ಯಲಹಂಕದ ಖಾಸಗಿ ರೆಸಾರ್ಟ್‌ವೊಂದರಲ್ಲಿ ಪೂಜಾ ಗಾಂಧಿ ಮದುವೆಯಾಗಿದ್ದಾರೆ.

    ಪೂಜಾ ಗಾಂಧಿ ಬಿಳಿ ಸೀರೆಯಲ್ಲಿ ಮಿಂಚಿದ್ರೆ, ವಿಜಯ್ ಬಿಳಿ ಬಣ್ಣದ ಶೆರ್ವಾನಿಯಲ್ಲಿ ಕಾಣಿಸಿಕೊಂಡಿದ್ದಾರೆ. 10 ವರ್ಷಗಳ ಪ್ರೀತಿಗೆ ಮದುವೆಯ ಮುದ್ರೆ ಒತ್ತಿದ್ದಾರೆ.

    ಯೋಗರಾಜ್ ಭಟ್, ಸುಧಾರಾಣಿ, ಶುಭ ಪೂಂಜಾ, ಸುಮನಾ ಕಿತ್ತೂರು, ಸಾಹಿತಿ ಜಯಂತ್ ಕಾಯ್ಕಿಣಿ ಸೇರಿದಂತೆ ಅನೇಕರು ಭಾಗಿಯಾಗಿ ನವಜೋಡಿಗೆ ಶುಭ ಕೋರಿದ್ದಾರೆ. ಮಳೆ ಹುಡುಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರೋದು ಅಭಿಮಾನಿಗಳಿಗೂ ಖುಷಿ ಕೊಟ್ಟಿದೆ. ಅವರು ಶುಭಕೋರಿದ್ದಾರೆ.

  • ದಾಂಪತ್ಯ ಜೀವನಕ್ಕೆ ಕಾಲಿಟ್ಟ ‘ಮಳೆ’ ಹುಡುಗಿ ಪೂಜಾ ಗಾಂಧಿ

    ದಾಂಪತ್ಯ ಜೀವನಕ್ಕೆ ಕಾಲಿಟ್ಟ ‘ಮಳೆ’ ಹುಡುಗಿ ಪೂಜಾ ಗಾಂಧಿ

    ‘ಮುಂಗಾರುಮಳೆ’ ನಟಿ ಪೂಜಾ ಗಾಂಧಿ (Pooja Gandhi) ಅವರು ಇಂದು ಮಂತ್ರ ಮಾಂಗಲ್ಯ ಪದ್ಧತಿಯಂತೆ ಬಹುಕಾಲದ ಗೆಳೆಯ ವಿಜಯ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

    ಕಳೆದ 10 ವರ್ಷಗಳಿಂದ ವಿಜಯ್ ಮತ್ತು ಪೂಜಾ ಗಾಂಧಿ ಸ್ನೇಹಿತರಾಗಿದ್ದರು. ವಿಜಯ್ ಅವರಿಂದಲೇ ಪೂಜಾ ಗಾಂಧಿ ಕನ್ನಡ ಕಲಿತಿದ್ದರು. ಈ ಪರಿಚಯವೇ ಪ್ರೇಮಕ್ಕೆ ಮುನ್ನುಡಿ ಬರೆದಿದೆ. ಯಲಹಂಕದ ಖಾಸಗಿ ರೆಸಾರ್ಟ್‌ವೊಂದರಲ್ಲಿ ಪೂಜಾ ಗಾಂಧಿ ಇಂದು (ನ.29) ಮದುವೆಯಾಗಿದ್ದಾರೆ.

    ಪೂಜಾ ಗಾಂಧಿ ಬಿಳಿ ಸೀರೆಯಲ್ಲಿ ಮಿಂಚಿದ್ರೆ, ವಿಜಯ್ ಬಿಳಿ ಬಣ್ಣದ ಶೆರ್ವಾನಿಯಲ್ಲಿ ಕಾಣಿಸಿಕೊಂಡಿದ್ದಾರೆ. 10 ವರ್ಷಗಳ ಪ್ರೀತಿಗೆ ಮದುವೆಯ ಮುದ್ರೆ ಒತ್ತಿದ್ದಾರೆ. ಇದನ್ನೂ ಓದಿ:ಪೂಜಾ ಗಾಂಧಿ ಮದುವೆಗೆ ಕೌಂಟ್‌ಡೌನ್-‌ ಮಳೆ ಹುಡುಗಿ ಫುಲ್‌ ಮಿಂಚಿಂಗ್

    ಯೋಗರಾಜ್ ಭಟ್, ಸುಧಾರಾಣಿ, ಶುಭ ಪೂಂಜಾ, ಸುಮನಾ ಕಿತ್ತೂರು, ಸಾಹಿತಿ ಜಯಂತ್ ಕಾಯ್ಕಿಣಿ ಸೇರಿದಂತೆ ಅನೇಕರು ಭಾಗಿಯಾಗಿ ನವಜೋಡಿಗೆ ಶುಭ ಕೋರಿದ್ದಾರೆ. ಮಳೆ ಹುಡುಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರೋದು ಅಭಿಮಾನಿಗಳಿಗೂ ಖುಷಿ ಕೊಟ್ಟಿದೆ. ಅವರು ಶುಭಕೋರಿದ್ದಾರೆ.

  • ಪೂಜಾ ಗಾಂಧಿ ಮದುವೆಗೆ ಕೌಂಟ್‌ಡೌನ್-‌ ಮಳೆ ಹುಡುಗಿ ಫುಲ್‌ ಮಿಂಚಿಂಗ್

    ಪೂಜಾ ಗಾಂಧಿ ಮದುವೆಗೆ ಕೌಂಟ್‌ಡೌನ್-‌ ಮಳೆ ಹುಡುಗಿ ಫುಲ್‌ ಮಿಂಚಿಂಗ್

    ಸ್ಯಾಂಡಲ್‌ವುಡ್ ನಟಿ ಪೂಜಾ ಗಾಂಧಿ (Pooja Gandhi) ಹಸೆಮಣೆ ಏರಲು ಇದೀಗ ಕೌಂಟ್‌ಡೌನ್ ಶುರುವಾಗಿದೆ. ಬಹುಕಾಲದ ಗೆಳೆಯನ ಜೊತೆ ಹೊಸ ಬಾಳಿಗೆ ಮುನ್ನುಡಿ ಬರೆಯಲು ನಟಿ ಸಜ್ಜಾಗಿದ್ದಾರೆ. ಮಂತ್ರ ಮಾಂಗಲ್ಯ ಪದ್ಧತಿಯಂತೆ ನಟಿ ಮದುವೆಯಾಗುತ್ತಿದ್ದಾರೆ.

    ಬೆಂಗಳೂರಿನ ಯಲಹಂಕದಲ್ಲಿ ಈ ಮದುವೆ (Wedding) ನಡೆಯುತ್ತಿದ್ದು, ಉದ್ಯಮಿ ಹಾಗೂ ಅವರಿಗೆ ಕನ್ನಡ ಕಲಿಸಿರುವ ವಿಜಯ್ ಘೋರ್ಪಡೆ ಎನ್ನುವವರ ಜೊತೆ ಪೂಜಾ ಹೊಸ ಬದುಕಿಗೆ ಕಾಲಿಡುತ್ತಿದ್ದಾರೆ. ವಿಜಯ್ ಬೆಂಗಳೂರಿನ ಲಾಜೆಸ್ಟಿಕ್ ಕಂಪನಿಯ ಮಾಲೀಕರು ಎಂದು ಹೇಳಲಾಗುತ್ತಿದೆ.

    ಪೂಜಾ- ವಿಜಯ್ ಮದುವೆಗೆ ಕುಟುಂಬಸ್ಥರು, ಆಪ್ತರು ಸ್ಯಾಂಡಲ್ವುಡ್‌ನ ಆತ್ಮೀಯ ಸ್ನೇಹಿತರು ಅಷ್ಟೇ ಭಾಗಿದ್ದಾರೆ. ಮುಂಗಾರು ಮಳೆ ನಿರ್ದೇಶಕ ಯೋಗರಾಜ್ ಭಟ್, ಸುಧಾರಾಣಿ, ಶುಭಾ ಪೂಂಜಾ, ಸುಮನಾ ಕಿತ್ತೂರು ಸೇರಿದಂತೆ ಅನೇಕರು ಭಾಗಿಯಾಗಿದ್ದಾರೆ.

    ತಮ್ಮ ಮದುವೆ ಯಾವುದೇ ಆಡಂಬರವಿಲ್ಲದೇ ಸರಳವಾಗಿ ಮದುವೆ ನಡೆಯುತ್ತಿದ್ದು, ಇಬ್ಬರು ಬಿಳಿ ಬಣ್ಣದ ಉಡುಗೆಯಲ್ಲಿ ಮಿಂಚಿದ್ದಾರೆ. ಮಳೆ ಹುಡುಗಿಯ ಮದುವೆ ಗುಡ್ ನ್ಯೂಸ್ ಕೇಳಿ ಅಭಿಮಾನಿಗಳು ಥ್ರಿಲ್ ಆಗಿದ್ದಾರೆ.

  • ಉದ್ಯಮಿ ಜೊತೆ ಇಂದು ಪೂಜಾ ಗಾಂಧಿ ಮದುವೆ

    ಉದ್ಯಮಿ ಜೊತೆ ಇಂದು ಪೂಜಾ ಗಾಂಧಿ ಮದುವೆ

    ನ್ನಡದ ಹೆಸರಾಂತ ನಟಿ ಪೂಜಾ ಗಾಂಧಿ (Pooja Gandhi) ಇಂದು ಸಪ್ತಪದಿ ತುಳಿಯಲಿದ್ದಾರೆ. ಸಂಜೆ ಉದ್ಯಮಿ ವಿಜಯ್ ಜೊತೆ ಪೂಜಾ ಮಂತ್ರ ಮಾಂಗಲ್ಯ ಮಾದರಿಯಲ್ಲಿ ಮದುವೆಯಾಗಲಿದ್ದಾರೆ (Marriage). ತಮ್ಮ ಆಪ್ತರಿಗೆ ಈಗಾಗಲೇ ಆಹ್ವಾನ ನೀಡಿದ್ದು, ಎರಡು ಕುಟುಂಬದ ಸದಸ್ಯರು ಮತ್ತು ಆಪ್ತರು ಮದುವೆ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ.

    ಬೆಂಗಳೂರಿನ ಯಲಹಂಕದಲ್ಲಿ ಈ ಮದುವೆ ನಡೆಯುತ್ತಿದ್ದು, ಉದ್ಯಮಿ ಹಾಗೂ ಅವರಿಗೆ ಕನ್ನಡ ಕಲಿಸಿರುವ ವಿಜಯ್ ಘೋರ್ಪಡೆ (Vijay Ghorpade) ಎನ್ನುವವರ ಜೊತೆ ಪೂಜಾ ಹೊಸ ಬದುಕಿಗೆ ಕಾಲಿಡುತ್ತಿದ್ದಾರೆ. ವಿಜಯ್ ಬೆಂಗಳೂರಿನ ಲಾಜೆಸ್ಟಿಕ್ ಕಂಪನಿಯ ಮಾಲೀಕರು ಎಂದು ಹೇಳಲಾಗುತ್ತಿದೆ.

     

    ಈಗಾಗಲೇ ಪೂಜಾ ತಮ್ಮ ಆಪ್ತರಿಗೆ ಕರೆ ಮಾಡಿ, ಮದುವೆ ಆ‍ಹ್ವಾನ ನೀಡಿದ್ದಾರೆ. ಮದುವೆ ಅತ್ಯಂತ ಸರಳವಾಗಿ ನಡೆಯುವುದರಿಂದ ಕೇವಲ ಹಸ್ತಾಕ್ಷರದಲ್ಲಿ ಆಮಂತ್ರಣ ಪತ್ರಿಕೆಯನ್ನು ರೆಡಿ ಮಾಡಿ, ಆಪ್ತರಿಗೆ ಕಳುಹಿಸಿದ್ದಾರೆ. ಮುಂಗಾರು ಮಳೆ ಸಿನಿಮಾದ ಮೂಲಕ ಕನ್ನಡ ಚಿತ್ರರಂಗಕ್ಕೆ ಬಂದಾಗಿ ಈ ಹುಡುಗಿ ಇದೀಗ ಕನ್ನಡದವರೇ ಆಗಿದ್ದಾರೆ.