Tag: Pooja Gandhi

  • ಮಹಿಳೆಯರಿಗೆ ಹೇಗೆ ಗೌರವ ಕೊಡಬೇಕು ಎಂಬುದನ್ನು ಗಂಡು ಮಕ್ಕಳಿಗೆ ಮನೆಯಲ್ಲಿ ಹೇಳಬೇಕು: ಪೂಜಾಗಾಂಧಿ

    ಮಹಿಳೆಯರಿಗೆ ಹೇಗೆ ಗೌರವ ಕೊಡಬೇಕು ಎಂಬುದನ್ನು ಗಂಡು ಮಕ್ಕಳಿಗೆ ಮನೆಯಲ್ಲಿ ಹೇಳಬೇಕು: ಪೂಜಾಗಾಂಧಿ

    – ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡಬೇಕು

    ಕೊಪ್ಪಳ: ಮಹಿಳೆಯರಿಗೆ ಹೇಗೆ ಗೌರವ ಕೊಡಬೇಕು ಎಂಬುದನ್ನು ಗಂಡು ಮಕ್ಕಳಿಗೆ ಮನೆಯಲ್ಲಿ ಹೇಳಬೇಕು ಎಂದು ನಟಿ ಪೂಜಾಗಾಂಧಿ ಗ್ಯಾಂಗ್ ರೇಪ್ ವಿರುದ್ಧ ಕಿಡಿಕಾರಿದ್ದಾರೆ.

    ಮೈಸೂರು ಯುವತಿ ಗ್ಯಾಂಗ್ ರೇಪ್ ಪ್ರಕರಣ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಪ್ರಕರಣ ಕೇಳಿ ತುಂಬಾ ಬೇಸರವಾಗಿದೆ. ಇಂತಹ ಪ್ರಕರಣಗಳು ಬೇರೆ ಬೇರೆ ರಾಜ್ಯದಲ್ಲಿ ನಡೆಯುತ್ತಿದ್ದನ್ನು ಕೇಳಿದ್ದೇವೆ. ಆದರೆ ಅಂತಹ ಘಟನೆ ಈಗ ಮೈಸೂರಿನಲ್ಲಿ ನಡೆದಿದೆ. ಇದು ನಿಜಕ್ಕೂ ಬೇಸರದ ಸಂಗತಿ. ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡಬೇಕು. ಪ್ರಕರಣದ ವಿಚಾರಣೆಯನ್ನು ತ್ವರಿತವಾಗಿ ನಡೆಸಿ ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.ಇದನ್ನೂ ಓದಿ: ನೀಚ ಕೃತ್ಯ ಮಾಡುವವರಿಗೆ ಪೊಲೀಸರು ಸ್ಪಷ್ಟ ಸಂದೇಶ ಕೊಟ್ಟಿದ್ದಾರೆ: ಅರಗ ಜ್ಞಾನೇಂದ್ರ

    ಈ ರೀತಿಯ ಘಟನೆಗಳಿಂದ ಮಹಿಳೆಯರಿಗೆ ರಕ್ಷಣೆ ಎಲ್ಲಿದೆ? ಎಂದು ಪ್ರಶ್ನಿಸಿದ್ದಾರೆ. ಮಹಿಳೆಯರಿಗೆ ಹೇಗೆ ಗೌರವ ಕೊಡಬೇಕು ಎಂಬುದನ್ನು ಗಂಡು ಮಕ್ಕಳಿಗೆ ಮನೆಯಲ್ಲಿ ಹೇಳಬೇಕು. ಎಲ್ಲರ ಮನೆಯ ಹೆಣ್ಣು ಮಕ್ಕಳು ಒಂದೆ. ಕಾನೂನು ಪ್ರಕಾರ ಏನು ಕ್ರಮ ಇದೆಯೋ ಆ ಕ್ರಮ ಜರುಗಿಸಬೇಕು. ಬೇರೆಯವರು ಅತ್ಯಾಚಾರ ಮಾಡುವುದಕ್ಕೆ ಮುಂಚೆ ನೂರು ಬಾರಿ ಯೋಚಿಸಬೇಕು ಆ ರೀತಿಯ ಶಿಕ್ಷೆ ನೀಡಬೇಕು ಎಂದು ಕಿಡಿಕಾರಿದ್ದಾರೆ.ಇದನ್ನೂ ಓದಿ:  ಗ್ಯಾಂಗ್‍ರೇಪ್ ಪ್ರಕರಣ- ಆರೋಪಿಗಳನ್ನು ಬಂಧಿಸಿದ ಪೊಲೀಸರ ತಂಡಕ್ಕೆ 5 ಲಕ್ಷ ರೂ. ಬಹುಮಾನ

    ಸಣ್ಣ ಸಣ್ಣ ಮಕ್ಕಳ ಮೇಲೆ ಅತ್ಯಾಚಾರಗಳು ನಡೆಯುತ್ತಿವೆ. ಇಂತಹ ಮನಸ್ಥಿತಿಯವರಿಗೆ ಕಠಿಣ ಶಿಕ್ಷೆ ನೀಡಬೇಕು. ನಾನು ಕಾನೂನನ್ನು ಗೌರವಿಸುತ್ತೇನೆ. ಮಹಿಳೆಯರ ರಕ್ಷಣೆಗಾಗಿ ಇರುವ ಕಾನೂನುಗಳಿಂದ ಎಲ್ಲ ಮಹಿಳೆಯರು ನಾವು ಸುರಕ್ಷಿತವಾಗಿದ್ದೇವೆ ಎಂಬ ಭಾವನೆ ಬರಬೇಕು ಎಂದು ತಿಳಿಸಿದ್ದಾರೆ.

    ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ತಮಿಳುನಾಡಿನ ತಳವಾಡಿಯಲ್ಲಿ ಆರೋಪಿಗಳನ್ನು ಬಂಧಿಸಿರುವ ಪೊಲಿಸರು ಇದೀಗ ಅವರನ್ನು ಮೈಸೂರಿಗೆ ಕರೆತಂದು ಗೌಪ್ಯ ಸ್ಥಳದಲ್ಲಿ ವಿಚಾರಣೆ ನಡೆಸುತ್ತಿದ್ದಾರೆ.ಇದನ್ನೂ ಓದಿ:ಅತ್ಯಾಚಾರ ಆರೋಪಿಗಳನ್ನು ಎನ್‍ಕೌಂಟರ್ ಮಾಡಬೇಕು: ಸಾ.ರಾ ಮಹೇಶ್

  • ಪೂಜಾ ಗಾಂಧಿಯ `ಸಂಹಾರಿಣಿ’ ಚಿತ್ರೀಕರಣ ಪೂರ್ಣ

    ಪೂಜಾ ಗಾಂಧಿಯ `ಸಂಹಾರಿಣಿ’ ಚಿತ್ರೀಕರಣ ಪೂರ್ಣ

    ಅಂದು `ದಂಡು ಪಾಳ್ಯ’ ಸಿನಿಮಾದಲ್ಲಿ ನಿರ್ಭಯವಾಗಿ ಅಭಿನಯಿಸಿದ್ದವರು ಪೂಜಾ ಗಾಂಧಿ. ಈಗ ಪೂಜಾ ಗಾಂಧಿ `ಸಂಹಾರಿಣಿ’ ಎಂಬ ಸಾಹಸ ಪ್ರಧಾನ ಸಿನಿಮಾದಲ್ಲಿ ಅಭಿನಯಿಸಿದ್ದು, ಈ ಚಿತ್ರದ ಚಿತ್ರೀಕರಣವೀಗ ಸಂಪೂರ್ಣಗೊಂಡಿದೆ.

    2 ಎಂ ಸಿನಿಮಾಸ್ ಬ್ಯಾನರ್ ಅಡಿಯಲ್ಲಿ, ಕೆ ವಿ ಶಭರೀಶ್ ನಿರ್ಮಾಣ ಮಾಡಿರುವ, ಥ್ರಿಲ್ಲರ್ ಅಂಶಗಳನ್ನು ಒಳಗೊಂಡಿರುವ ಈ ಚಿತ್ರವನ್ನು ಕೆ ಜವಾಹರ್ ನಿರ್ದೇಶನ ಮಾಡಿದ್ದಾರೆ.

    ಬಾಲಿವುಡ್ ಸಿನಿಮಾಗಳ ಪ್ರಸಿದ್ಧ ಖಳ ನಟ ರಾಹುಲ್ ದೇವ್, ರವಿ ಕಾಳೆ, ಹ್ಯಾರಿ ಜೋಶ್ ಈ ಚಿತ್ರದಲ್ಲಿ ಖಳನಟರಾಗಿ ಪಾತ್ರ ನಿರ್ವಹಿಸಿದ್ದಾರೆ. ನಟ ಕಿಶೋರ್ ಪ್ರಧಾನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಸಚಿನ್ ಹಾಗೂ ಅರುಣ್ ಪೋಷಕ ಕಲಾವಿದರಾಗಿ ಅಭಿನಯಿಸಿದ್ದಾರೆ.

    ಮಾಸ್ ಮಾದ ಸಾಹಸ, ಡಾ. ವಿ.ನಾಗೇಂದ್ರ ಪ್ರಸಾದ್ ಗೀತ ಸಾಹಿತ್ಯ, ಅಖಿಲ್ ಸಂಕಲನ, ವಿ 2 ಸಂಗೀತ ನಿರ್ದೇಶನ, ರಾಜೇಶ್ ಕುಮಾರ್ ಅವರು ಛಾಯಾಗ್ರಹಣ ಮಾಡಿದ್ದಾರೆ. ಗಂಗಾಧರ್ ನಿರ್ಮಾಣ ನಿರ್ವಹಣೆ ಇರುವ ಈ ಚಿತ್ರದ ಪ್ರಚಾರ ಕಲೆ ಲಕ್ಕಿ, ಸ್ಥಿರ ಛಾಯಾಗ್ರಹಣ ಸುರೇಶ್ ಮೆರ್ಲಿನ್ ಅವರು ಮಾಡಿದ್ದಾರೆ.

  • ಬಿಜೆಪಿ ಮುಖಂಡನ ಜೊತೆಗೆ ರೂಂ ಬುಕ್ ಮಾಡಿದ್ದ ನಟಿ ಪೂಜಾ ಗಾಂಧಿ!

    ಬಿಜೆಪಿ ಮುಖಂಡನ ಜೊತೆಗೆ ರೂಂ ಬುಕ್ ಮಾಡಿದ್ದ ನಟಿ ಪೂಜಾ ಗಾಂಧಿ!

    ಬೆಂಗಳೂರು: ಸ್ಯಾಂಡಲ್‍ವುಡ್ ಮಳೆ ಹುಡುಗಿ ಪೂಜಾ ಗಾಂಧಿ ವಿರುದ್ಧ ದೂರು ದಾಖಲಾದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಪೂಜಾಗಾಂಧಿಯವರು ಬಿಜೆಪಿ ಮುಖಂಡನ ಜೊತೆಗೆ ರೂಂ ಬುಕ್ ಮಾಡಿದ್ದರು ಎಂಬ ಮಾಹಿತಿ ಹೊರಬಿದ್ದಿದೆ.

    ಹೌದು. ಬೆಂಗಳೂರಿನ ದಿ ಲಲಿತ್ ಅಶೋಕ್ ಹೋಟೆಲ್‍ನಲ್ಲಿ ನಟಿ ಪೂಜಾ ಗಾಂಧಿ ಹಾಗೂ ಗದಗ ಬಿಜೆಪಿ ಮುಖಂಡ ಅನಿಲ್ ಮೆಣಸಿನಕಾಯಿ 1 ವರ್ಷ ರೂಂ ಬುಕ್ ಮಾಡಿದ್ದರು. ಕಳೆದ 2016ರ ಏಪ್ರಿಲ್‍ನಿಂದ ಮಾರ್ಚ್ 2017ರವರೆಗೆ ಬರೋಬ್ಬರಿ 1 ವರ್ಷ ರೂಂ ಬುಕ್ ಮಾಡಿದ್ದರು.

    ಬಿಜೆಪಿ ಮುಖಂಡನ ಜೊತೆ ರೂಂ ಬುಕ್ ಮಾಡಿ ಆತಿಥ್ಯ ಸ್ವೀಕರಿಸಿದ್ದ ನಟಿ, 26 ಲಕ್ಷ ರೂಪಾಯಿ ಬಿಲ್ ಕಟ್ಟದೆ ಹೋಟೆಲಿಗೆ ಸತಾಯಿಸುತ್ತಿದ್ದರು. ಅಲ್ಲದೆ ಇದರಲ್ಲಿ 22 ಲಕ್ಷ ರೂಪಾಯಿ ಪಾವತಿಸಿ 3.53 ಲಕ್ಷ ರೂ. ಬಾಕಿ ಉಳಿಸಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಹೋಟೆಲ್ ಆಡಳಿತ ಮಂಡಳಿ ಬೆಂಗಳೂರಿನ ಹೈ ಗ್ರೌಂಡ್ ಪೊಲೀಸರಿಗೆ ದೂರು ನೀಡಿದ್ದಾರೆ.

    ದೂರು ಹಿನ್ನೆಲೆಯಲ್ಲಿ ಪೊಲೀಸರು ನಟಿ ವಿರುದ್ಧ ಎನ್‍ಸಿಆರ್(ಗಂಭೀರ ಸ್ವರೂಪವಲ್ಲದ ಪ್ರಕರಣ) ದಾಖಲು ಮಾಡಿಕೊಂಡಿದ್ದಾರೆ. ಅಲ್ಲದೆ ದೂರು ದಾಖಲಾದ ಕೂಡಲೇ ಪೊಲೀಸರು ನಟಿಯನ್ನು ಠಾಣೆಗೆ ಕರೆಸಿದ್ದಾರೆ. ಬಳಿಕ ಪೊಲೀಸರ ಸಮ್ಮುಖದಲ್ಲಿಯೇ ನಟಿ ಎರಡು ಲಕ್ಷ ರೂ. ನೀಡಿದ್ದಾರೆ. ಉಳಿದ ಹಣ ಕೊಡಲು ಕಾಲಾವಕಾಶ ಕೇಳಿದ್ದಾರೆ. ಒಟ್ಟಿನಲ್ಲಿ ಓರ್ವ ಸ್ಟಾರ್ ನಟಿಯ ಬಳಿ ಬಿಲ್ ಕಟ್ಟಲೂ ಹಣ ಇರಲಿಲ್ಲವೇ? ನಾಲ್ಕೂವರೆ ಲಕ್ಷ ಹಣ ಕೊಡದೇ ಎಸ್ಕೇಪ್ ಆಗಿದ್ದು ಯಾಕೆ ಎಂಬ ಪ್ರಶ್ನೆ ಜನಸಾಮಾನ್ಯರನ್ನು ಕಾಡುತ್ತಿದೆ.

  • 3 ಬಾರಿ ಗೆದ್ದ ಶಾಸಕರಿಗಿಂತ ಪವರ್ ಫುಲ್ ಆದ್ರು ನಟಿ ಪೂಜಾಗಾಂಧಿ..!

    3 ಬಾರಿ ಗೆದ್ದ ಶಾಸಕರಿಗಿಂತ ಪವರ್ ಫುಲ್ ಆದ್ರು ನಟಿ ಪೂಜಾಗಾಂಧಿ..!

    ಬೆಂಗಳೂರು: ಶಾಸಕರಿಗಿಂತ ಸ್ಯಾಂಡಲ್‍ವುಡ್‍ನ ನಟಿ ನಗರದಲ್ಲಿ ಪವರ್ ಫುಲ್ ಆಗಿದ್ದು, ಬೆಂಗಳೂರಿನ ಶಾಸಕರುಗಳು ಬಿಡಿಎಯಲ್ಲಿ ಕೆಲಸ ಆಗ್ತಿಲ್ಲ ಅಂತ ಹೇಳಿದ್ರೂ ಕೆಲಸ ಮಾತ್ರ ಆಗುತ್ತಿರಲಿಲ್ಲ. ಆದರೆ ಈ ನಟಿಯ ಕಡೆಯ ಫೈಲ್ ಬಂದರೆ ಬಿಡಿಎಯಲ್ಲಿ ನೀರು ಕುಡಿದಷ್ಟೆ ಸಲಿಸಾಗಿ ಕೆಲಸ ಆಗುತ್ತದೆ ಎಂದು ಕಾಂಗ್ರೆಸ್ ಶಾಸಕರು ಗರಂ ಆಗಿದ್ದಾರೆ.

    ನಟಿ ಪೂಜಾ ಗಾಂಧಿ, 2-3 ಬಾರಿ ಗೆದ್ದ ಶಾಸಕರಿಗಿಂತ 5 ವರ್ಷದಲ್ಲಿ 3 ಪಕ್ಷ ಬದಲಿಸಿದ್ದಾರೆ. ನಟಿ ಮಣಿಯ ಕೆಲಸ ಬಿಡಿಎಯಲ್ಲಿ ನಡೆಯುತ್ತದೆ. ನಮ್ಮ ಕೆಲಸ ನಡೆಯಲ್ಲ ಎಂದು ನಗರದ ಕಾಂಗ್ರೆಸ್ ಶಾಸಕರು ಮಾತನಾಡಿಕೊಳ್ಳುತ್ತಿದ್ದಾರೆ.

     

    ನಾವು ಶಾಸಕರಾಗುವ ಬದಲು ಬಣ್ಣ ಹಚ್ಚಿಕೊಂಡರೆ ಕೆಲಸ ಆಗುತ್ತಾ ಅಂತ ನಗರದ ಕಾಂಗ್ರೆಸ್ ಶಾಸಕರು ಗರಂ ಆಗಿ ಡಿಸಿಎಂ ಪರಮೇಶ್ವರ್ ರನ್ನ ಕೇಳಿದ್ದಾರೆ. ಅಷ್ಟೇ ಅಲ್ಲದೇ ಏನು ಮಾಡುತ್ತೀರೋ ಗೊತ್ತಿಲ್ಲ ಸರ್ ಬಿಡಿಎ ಆಯುಕ್ತ ರಾಕೇಶ್ ಸಿಂಗ್ ರನ್ನ ಬದಲಿಸಿ ಅಂತ ಶಾಸಕರಾದ ಬೈರತಿ ಬಸವರಾಜು ಹಾಗೂ ಸೋಮಶೇಖರ್ ನೇತೃತ್ವದ ಕಾಂಗ್ರೆಸ್ ಶಾಸಕರ ತಂಡ ಡಿಸಿಎಂ ಪರಮೇಶ್ವರ್ ಗೆ ದೂರು ನೀಡಿದ್ದಾರೆ.

    ಸಮ್ಮಿಶ್ರ ಸರ್ಕಾರ ಬಂದು 5 ತಿಂಗಳು ಕಳೆದರೂ ಬಿಡಿಎಯಲ್ಲಿ ಮೊದಲಿನ ವೇಗದಲ್ಲಿ ಕೆಲಸ ಆಗುತ್ತಿಲ್ಲ ಎಂಬುದು ಕಾಂಗ್ರೆಸ್ ಶಾಸಕರ ದೂರಾಗಿದೆ. ಬಿಡಿಎ ಆಯುಕ್ತ ರಾಕೇಶ್ ಸಿಂಗ್ ಸರಿಯಾಗಿ ಕೆಲಸ ಮಾಡುತ್ತಿಲ್ಲ. ಅವರನ್ನ ಬದಲಿಸಿ ಅಂತ ನಗರದ ಕಾಂಗ್ರೆಸ್ ಶಾಸಕರು ಮೊದಲೇ ಡಿಸಿಎಂ ಪರಮೇಶ್ವರ್  ದೂರು ನೀಡಿದ್ದರು. ಎರಡು ಮೂರು ಬಾರಿ ಗೆದ್ದ ಶಾಸಕರುಗಳಾದ ನಮ್ಮ ಕೆಲಸವೇ ಬಿಡಿಎಯಲ್ಲಿ ಆಗುತ್ತಿಲ್ಲ. ಆದರೆ ನಟಿ ಪೂಜಾ ಗಾಂಧಿ ಕೆಲಸ ಮಾತ್ರ ಬಿಡಿಎಯಲ್ಲಿ ಸಲಿಸಾಗಿ ಆಗುತ್ತೆ ಅಂತ ಕಾಂಗ್ರೆಸ್ ಶಾಸಕರು ಡಿಸಿಎಂ ಪರಮೇಶ್ವರ್ ಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

    ರಾಕೇಶ್ ಸಿಂಗ್

    ಈ ಹಿಂದೆ ಮಾಜಿ ಸಿಎಂ ಸಿದ್ದರಾಮಯ್ಯರಿಗೂ ದೂರು ನೀಡಿ ಬಿಡಿಎ ಆಯುಕ್ತ ರಾಕೇಶ್ ಸಿಂಗ್ ಬದಲಿಸಿ ಅಂತ ಒತ್ತಡ ಹೇರಿದ್ದರು. ಒಂದೇ ಕೆಲಸಕ್ಕೆ ನಾವು ಹತ್ತಾರು ಬಾರಿ ಬಿಡಿಎ ಮೆಟ್ಟಿಲು ಹತ್ತಿ ಇಳಿಯಬೇಕು. ಆದರೆ ನಟಿ ಪೂಜಾ ಗಾಂಧಿ ಕಡೆಯಿಂದ ಬರುವ ಫೈಲ್‍ ಗೆ ಮಾತ್ರ ಕೂಡಲೆ ಪ್ರತಿಕ್ರಿಯೆ ಸಿಗುತ್ತದೆ ಯಾಕೆ ಅನ್ನೋದು ಶಾಸಕರ ಪ್ರೆಶ್ನೆ ಆಗಿದೆ.

    ರಾಜಕೀಯದಲ್ಲಿ ಏನೂ ಅಲ್ಲದೆ 3-4 ಪಕ್ಷ ಬದಲಿಸಿದ ಪೂಜಾಗಾಂಧಿಗೆ ಇರುವ ಬೆಲೆ, ಮೂರು ಮೂರು ಬಾರಿ ಗೆದ್ದು ಶಾಸಕರಾದ ನಮ್ಮ ಮಾತಿಗೆ ಇಲ್ವಾ ಅಂತ ಗರಂ ಆಗಿ ಪ್ರಶ್ನಿಸಿದ್ದಾರೆ. ಏನು ಮಾಡುತ್ತೀರೋ ಗೊತ್ತಿಲ್ಲ, ನಮ್ಮ ಸಮಸ್ಯೆ ಬಗೆ ಹರಿಸಿ. ಬಿಡಿಎ ಆಯುಕ್ತ ರಾಕೇಶ್ ಸಿಂಗ್ ರನ್ನ ಮೊದಲು ಬದಲಿಸಿ ಅಂತ ಪಟ್ಟು ಹಿಡಿದಿದ್ದರು ಎಂದು ಪಕ್ಷದ ಮೂಲಗಳಿಂದ ತಿಳಿದು ಬಂದಿದೆ.

    ಶಾಸಕರ ಒತ್ತಾಯಕ್ಕೆ ಮಣಿದು ಸ್ವಲ್ಪ ಸಮಯಾವಕಾಶ ಕೊಡಿ ಎಲ್ಲವನ್ನು ಸರಿಪಡಿಸುತ್ತೀನಿ ಅಂತ ಪರಮೇಶ್ವರ್ ಶಾಸಕರನ್ನ ಸಮಾಧಾನ ಪಡಿಸಿದ್ದಾರೆ ಎಂದು ತಿಳಿದು ಬಂದಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ವ್ಯಾಪಾರಿ ಮಹಿಳೆಯಿಂದ ನಟಿ ಪೂಜಾ ಗಾಂಧಿಗೆ ತರಾಟೆ

    ವ್ಯಾಪಾರಿ ಮಹಿಳೆಯಿಂದ ನಟಿ ಪೂಜಾ ಗಾಂಧಿಗೆ ತರಾಟೆ

    ಶಿವಮೊಗ್ಗ: ಕರ್ನಾಟಕ ಲೋಕಸಭಾ ಉಪಚುನಾವಣೆಯ ಪ್ರಚಾರ ಭರದಿಂದ ಸಾಗುತ್ತಿದ್ದು, ಜಿಲ್ಲೆಯಲ್ಲಿ ನಟಿ ಪೂಜಾಗಾಂಧಿ ಅವರು ಜೆಡಿಎಸ್ ಪರ ಪ್ರಚಾರ ಮಾಡುತ್ತಿದ್ದಾರೆ. ಪೂಜಾಗಾಂಧಿ ಚುನಾವಣಾ ಪ್ರಚಾರದ ವೇಳೆ ಪೇಚಿಗೆ ಸಿಲುಕಿದ್ದಾರೆ.

    ಪೂಜಾಗಾಂಧಿ ಎಸ್.ಎನ್. ಮಾರ್ಕೆಟ್ ನಲ್ಲಿ ಮೈತ್ರಿ ಅಭ್ಯರ್ಥಿ ಮಧು ಬಂಗಾರಪ್ಪ ಪರ ಮತ ಯಾಚನೆ ಮಾಡಲು ಬಂದಿದ್ದರು. ಈ ವೇಳೆ ಸಿಲಿಂಡರ್ ರೇಟ್ ಹೆಚ್ಚಾಗಿದೆ, ಡೀಸೆಲ್, ಪೆಟ್ರೋಲ್ ರೇಟು ಹೆಚ್ಚಾಗಿದೆ. ಗಾಂಧಿ ಬಜಾರ್ ನಲ್ಲಿ ವ್ಯಾಪಾರ ಮಾಡಲು ಅವಕಾಶ ಕೊಡುತ್ತಿಲ್ಲ. ಈಗ ವೋಟ್ ಕೇಳುವುದಕ್ಕೆ ಬಂದಿದ್ದೀರಿ ಎಂದು ವ್ಯಾಪಾರಿ ಮಹಿಳೆ ನಟಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

    ನನ್ನೊಬ್ಬಳಿಗೆ ಇಷ್ಟು ಕಷ್ಟವಾಗಿದೆ. ಬೇರೆಯವರಿಗೆ ನನಗಿಂತಲೂ ಹೆಚ್ಚು ಕಷ್ಟ ಆಗುತ್ತಿದೆ. ವ್ಯಾಪಾರ ಮಾಡಬೇಕು, ಮಕ್ಕಳನ್ನು ಸ್ಕೂಲಿಗೆ ಕಳಿಸಬೇಕು. ಇದರ ಜೊತೆಗೆ ಎಲ್ಲಾ ರೇಟು ಹೀಗೆ ಹೆಚ್ಚಾದರೆ ನಾವು ಬದುಕೋದು ಹೇಗೆ ಎಂದು ಮಹಿಳೆ ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರೆ. ಈ ಸಂದರ್ಭದಲ್ಲಿ ಮಹಿಳೆಗೆ ಸಮಾಧಾನ ಮಾಡುವಲ್ಲಿ ಪೂಜಾಗಾಂಧಿ ಸೋತಿದ್ದು, ಬಳಿಕ ಸ್ಥಳಿಯ ಮುಖಂಡರು ವ್ಯಾಪಾರಿ ಮಹಿಳೆಗೆ ಸಮಾಧಾನ ಮಾಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಪೂಜಾ ಗಾಂಧಿಯ ಎಂಟರ್‍ಟೈನ್ಮೆಂಟ್ ಫ್ಯಾಕ್ಟರಿಗೆ ಬೀಗ ಬಿತ್ತಾ?

    ಪೂಜಾ ಗಾಂಧಿಯ ಎಂಟರ್‍ಟೈನ್ಮೆಂಟ್ ಫ್ಯಾಕ್ಟರಿಗೆ ಬೀಗ ಬಿತ್ತಾ?

    ಬೆಂಗಳೂರು: ಕೇವಲ ಒಂದೂವರೆ ವರ್ಷಗಳ ಹಿಂದಷ್ಟೇ ಒಟ್ಟೊಟ್ಟಿಗೇ ಮೂರು ಸಿನಿಮಾ ಶುರು ಮಾಡಿದ್ದರು ಪೂಜಾ ಗಾಂಧಿ… ಎಲ್ಲಿಂದಲೋ ಬಂದು, ಕರ್ನಾಟಕದಲ್ಲಿ ನೆಲೆನಿಂತು, ಸಿನಿಮಾಗಳಲ್ಲಿ ನಟಿಸುತ್ತಲೇ ಕೆಲವಾರು ಉದ್ಯಮಗಳನ್ನೂ ಆರಂಭಿಸಿದರು. ಇವೆಲ್ಲದರ ಜೊತೆಗೆ ರಾಜಕೀಯಕ್ಕೂ ಕಾಲಿಟ್ಟರು. ನಿರ್ಮಾಪಕಿಯಾಗಿ ಅದಾಗಲೇ ಒಂದು ಸಿನಿಮಾವನ್ನು ನಿರ್ಮಿಸಿದ್ದ ಪೂಜಾ ಆಗ ಸಿನಿಮಾ ಫ್ಯಾಕ್ಟರಿಯನ್ನೇ ಆರಂಭಿಸಿದ್ದರು.

    ಹತ್ತು ವರ್ಷಗಳ ಹಿಂದೆ ಅನಿರೀಕ್ಷಿತವಾಗಿ ಕನ್ನಡ ಚಿತ್ರರಂಗದ ದಿಗಂತದಲ್ಲಿ ಉದಯಿಸಿದ ತಾರೆ ಪೂಜಾ ಗಾಂಧಿ. `ಮುಂಗಾರು ಮಳೆ’ ಚಿತ್ರ ಹೇಗೆ ನಾಯಕ ನಟ ಗಣೇಶ್ ಮತ್ತು ನಿರ್ದೇಶಕ ಯೋಗರಾಜ್ ಭಟ್ಟರ ಅದೃಷ್ಟದ ಬಾಗಿಲನ್ನು ತೆರೆಸಿತೋ ಅದೇ ರೀತಿ ಪಂಜಾಬಿನಿಂದ ಬಂದ ನಾಯಕಿ ಪೂಜಾ ಗಾಂಧಿಗೂ ಅದೃಷ್ಟ ಖುಲಾಯಿಸಿತು. ಆದರೆ `ಮುಂಗಾರು ಮಳೆ’ ಚಿತ್ರ ಬಿಡುಗಡೆಯಾದಾಗ ಪೂಜಾ ಗಾಂಧಿ ಬಗ್ಗೆ ಗಾಂಧಿನಗರದ ಜನರಿಗೆ ಒಂದಿಷ್ಟು ಅಲರ್ಜಿ ಇತ್ತು. ಆಕೆ ಕುಳ್ಳಿ ಎಂದರು ಕೆಲವರು. ಆಕೆಯದ್ದು `ಮ್ಯಾನ್ಲಿ ಲುಕ್’ ಎಂದು ಕೆಲವರು ಹೀಯಾಳಿಸಿದರು. ಮತ್ತೆ ಕೆಲವರು `ಆಕೆಗೆ ನಟನೆ ಅಷ್ಟೇನು ಬರೋಲ್ಲ’ ಎಂದರು. ಅಷ್ಟೇ ಏಕೆ, `ಮುಂಗಾರು ಮಳೆ’ ಚಿತ್ರದಲ್ಲಿ ಪೂಜಾ ಗಾಂಧಿಯ ಬದಲು ನಾಯಕಿಯಾಗಿ ರಮ್ಯಾ ಇದ್ದಿದ್ದರೆ ಆ ಚಿತ್ರದ ಖದರೇ ಬೇರೆಯಾಗುತ್ತಿತ್ತು ಎಂದು ಹಲವರು ಭವಿಷ್ಯವನ್ನು ನುಡಿದಿದ್ದರು. ಇವೆಲ್ಲ ಟೀಕೆಗಳನ್ನು ನೋಡಿ ಈ ಪಂಜಾಬಿ ಹುಡುಗಿ ಒಂದೇ ಚಿತ್ರಕ್ಕೆ ವಾಪಸ್ ಹೋಗುತ್ತಾಳೆ ಎಂದು ಎಲ್ಲರೂ ಭಾವಿಸಿದ್ದರು. ಆದರೆ ಯಾವಾಗ ಬಾಕ್ಸ್ ಆಫೀಸ್‍ನಲ್ಲಿ `ಮುಂಗಾರು ಮಳೆ’ ಹಿಟ್ ಆಯಿತೋ ಆಗ ಪೂಜಾಳನ್ನು ಟೀಕೆ ಮಾಡಿದ್ದ ಅದೇ ಗಾಂಧಿನಗರದ ಜನ ಆಕೆಯ ಕಾಲ್‍ಶೀಟ್ ಗಾಗಿ ಆಕೆ ಸುತ್ತ ಗಿರಕಿ ಹೊಡೆಯಲಾರಂಭಿಸಿದರು.

    ಎಷ್ಟಾದರೂ ಗೆದ್ದೆತ್ತಿನ ಬಾಲ ಹಿಡಿಯುವುದು ನಮ್ಮವರ ಸಹಜ ಗುಣ ತಾನೆ? ಹೌದು, ಪೂಜಾ ಗಾಂಧಿ ಲೈಮ್ ಲೈಟಿಗೆ ಬಂದಿದ್ದೇ ತಡ, ಆಕೆ ಮಾಲಾಶ್ರೀಯನ್ನು ನೆನಪಿಸುವ ರೀತಿಯಲ್ಲಿ ಶೈನ್ ಆಗುತ್ತಾಳೋ ಎಂದೆನಿಸಲು ಆರಂಭವಾಯಿತು. ಏಕೆಂದರೆ ಗಾಂಧಿನಗರದ ಬಹುತೇಕ ಎಲ್ಲಾ ನಿರ್ಮಾಪಕರು ಮತ್ತು ನಿರ್ದೇಶಕರು `ಪೂಜಾ ಮಂತ್ರ’ ಪಠಿಸಲು ಆರಂಭಿಸಿದ್ದರು.

    ಪೂಜಾಳ ಯಶಸ್ಸು ಮತ್ತು ನಾಗಾಲೋಟಕ್ಕೆ ಹಲವಾರು ಕಾರಣಗಳು ಇದ್ದವು. ಮೊದಲನೆಯದಾಗಿ, ಈ ಪಂಜಾಬಿ ಹುಡುಗಿ ಮೊದಲ ದಿನದಿಂದಲೇ ತೊದಲು ಕನ್ನಡ ನುಡಿಗಳನ್ನು ಮಾತನಾಡುತ್ತಾ ಕನ್ನಡಿಗರ ಮೆಚ್ಚುಗೆಗೆ ಪಾತ್ರಳಾದಳು. ಹಾಗೆಯೇ ನಮ್ಮ ಕನ್ನಡದ ಹುಡುಗಿಯರ ತರಹ ಬಿಂಕ-ವೈಯ್ಯಾರ ತೋರಿಸದೇ ನಿರ್ಮಾಪಕ ಕೊಟ್ಟಿದ್ದನ್ನು ಪಡೆದದ್ದೂ ಆಕೆಯ ಸುತ್ತ ನಿರ್ಮಾಪಕರು ಮುತ್ತಿಗೆ ಹಾಕಲು ಕಾರಣವಾಯಿತು. ಆಕೆಯ ಮತ್ತೊಂದು ವಿಶೇಷತೆಯೆಂದರೆ ದೊಡ್ಡ ದೊಡ್ಡ ನಟರುಗಳೊಂದಿಗೆ ಮಾತ್ರವಲ್ಲ, ಉದ್ಯಮಕ್ಕೆ ಹೊಸದಾಗಿ ಕಾಲಿಟ್ಟ ಹೊಸ ಹೀರೋಗಳ ಜೊತೆ ಕೂಡಾ ಯಾವುದೆ ಗರ್ವವಿಲ್ಲದೆ ಮರ ಸುತ್ತಲು ಒಪ್ಪಿಕೊಳ್ಳುತ್ತಿದ್ದದ್ದು. ನೋಡುನೋಡುತ್ತಿದ್ದಂತೆ ಪೂಜಾ ಗಾಂಧಿ ಕನ್ನಡದ ಜನಪ್ರಿಯ ನಾಯಕಿಯಾಗಿದ್ದ ರಮ್ಯಾಳನ್ನು ಕೂಡಾ ಓವರ್ ಟೇಕ್ ಮಾಡಿ ಅತ್ಯಂತ ಬೇಡಿಕೆಯ ನಟಿ ಎನ್ನಿಸಲಾರಂಭಿಸಿದಳು.

    ಪಂಜಾಬಿನ ಈ ಹುಡುಗಿ ಕರ್ನಾಟಕದ ಕಲಾಭಿಮಾನಿಗಳ ಮೆಚ್ಚಿನ ತಾರೆಯಾಗಿ ಬೆಳೆದು ನಿಂತಳು. ಆರಂಭದಲ್ಲಿ ಗಣೇಶ್ ಜೊತೆ ನಾಯಕಿಯಾಗಿ ಕಾಣಿಸಿಕೊಂಡ ಪೂಜಾ ಗಾಂಧಿ ಆನಂತರ ಉಪೇಂದ್ರ, ಜಗ್ಗೇಶ್, ಪುನೀತ್ ರಾಜ್‍ಕುಮಾರ್, ಶ್ರೀನಗರ ಕಿಟ್ಟಿ… ಹೀಗೆ ಬಹುತೇಕ ಎಲ್ಲಾ ಹೀರೋಗಳ ಜೊತೆ ನಟಿಸಿ ಮನ ಗೆದ್ದಳು. ಇದೇ ಸಂದರ್ಭದಲ್ಲಿ ಸುನೀಲ್ ಸಮೇತ ಅನೇಕ ಅಪರಿಚಿತ ಮತ್ತು ಉದಯೋನ್ಮುಖ ನಾಯಕರ ಜೊತೆ ಕೂಡಾ ಆಕೆ ನಟಿಸಿದಳು.

    ಇಷ್ಟೆಲ್ಲಾ ಯಾಕೆ ಹೇಳುತ್ತಿದ್ದೇವೆ ಎಂದರೆ, ಪೂಜಾ ಗಾಂಧಿ ನಟನೆಯಿಂದ ನಿರ್ಮಾಣಕ್ಕೆ ಜಾರಿದ್ದು ನಿಮಗೆಲ್ಲಾ ಗೊತ್ತಿರೋ ವಿಚಾರವೇ. ಅಭಿನೇತ್ರಿ ಸಿನಿಮಾವನ್ನು ಪೂಜಾ ನಿರ್ಮಿಸಿದ್ದರು. ನಂತರ ರಾವಣಿ ಎನ್ನುವ ಚಿತ್ರವನ್ನು ಆರಂಭಿಸಿದ್ದರೂ ಅದು ಟೇಕಾಫ್ ಆಗಲಿಲ್ಲ. ನಡುವೆ ಮತ್ತೆ ಬಂದ ಪೂಜಾ ಒಟ್ಟಿಗೇ ಮೂರು ಸಿನಿಮಾ ನಿರ್ಮಿಸುವುದಾಗಿ ಹೇಳಿಕೊಂಡಿದ್ದರು. ಭೂ, ಉದಾಹಿ ಮತ್ತು ಬ್ಲಾಕ್ ಅಂಡ್ ವೈಟ್ ಎನ್ನುವ ಚಿತ್ರಗಳನ್ನು ಆರಂಭಿಸಿದ್ದರು. ತೆಲುಗಿನ ಖ್ಯಾತ ನಟ ಜೆಡಿ ಚಕ್ರವರ್ತಿ ಈ ಮೂರೂ ಸಿನಿಮಾಗಳನ್ನು ನಿರ್ದೇಶಿಸಲಿದ್ದಾರೆ ಅಂತಾ ಹೇಳಿ ಸ್ವತಃ ಪೂಜಾ ಗಾಂಧಿ ಪ್ರೆಸ್ ಮೀಟ್ ಮಾಡಿದ್ದರು. ಇವು ಮೂರು ಸಿನಿಮಾಗಳ ಜೊತೆಗೆ ಇನ್ನೂ ಹತ್ತಾರು ಸಿನಿಮಾಗಳನ್ನು ಆರಂಭಿಸುವ ಪ್ಲಾನು ಮಾಡಿದ್ದೀನಿ ಅಂತಾ ಅಶೋಕ ಹೋಟೇಲಿನಲ್ಲಿ ಹೇಳಿದ್ದರು ಪೂಜಾ ಮೇಡಮ್ಮು.

    ಹತ್ತಾರು ಸಿನಿಮಾ ಇರಲಿ, ಆರಂಭಿಕವಾಗಿ ಶುರು ಮಾಡಿದ ಮೂರು ಸಿನಿಮಾಗಳು ಕೂಡಾ ಈಗ ಪೂರ್ಣ ಪ್ರಮಾಣದಲ್ಲಿ ಕಣ್ಮುಚ್ಚಿದ ಸುದ್ದಿ ಕೇಳಿಬರುತ್ತಿದೆ. ಅಸಲಿಗೆ ಜೆ.ಡಿ. ಚಕ್ರವರ್ತಿಗೂ ಪೂಜಾ ಗಾಂಧಿಗೂ ನಡುವಿನ ಸಂಬಂಧವೇ ಕಿತ್ತು ಹೋಗಿದೆ ಅನ್ನೋ ನ್ಯೂಸು ಕೂಡಾ ದಟ್ಟವಾಗಿ ಹಬ್ಬಿದೆ. ಎಂಟರ್‍ಟೈನ್ಮೆಂಟ್ ಫ್ಯಾಕ್ಟರಿಗೆ ಬೀಗ ಬಿದ್ದಿದ್ದಾರೂ ಯಾಕೆ? ಏನಿದೆಲ್ಲಾ? ಪೂಜಾ ಗಾಂಧಿ ಮೇಲಿಂದ ಮೇಲೆ ಯಾಕೆ ಇಂಥವೇ ಸೋಲುಗಳಿಗೆ ಸಿಲುಕುತ್ತಿದ್ದಾರೆ? ಈ ಪ್ರಶ್ನೆಗಳಿಗೆಲ್ಲಾ ಸ್ವತಃ ಪೂಜಾ ಅವರೇ ಉತ್ತರಿಸಬೇಕು!

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಇಡೀ ಕರ್ನಾಟಕದಲ್ಲಿ ಜೆಡಿಎಸ್ ಪರವಾಗಿ ಪ್ರಚಾರ ಮಾಡ್ತೀನಿ- ಪೂಜಾ ಗಾಂಧಿ

    ಇಡೀ ಕರ್ನಾಟಕದಲ್ಲಿ ಜೆಡಿಎಸ್ ಪರವಾಗಿ ಪ್ರಚಾರ ಮಾಡ್ತೀನಿ- ಪೂಜಾ ಗಾಂಧಿ

    ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕಾರವಾರ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಪರವಾಗಿ ನಟಿ ಪೂಜಾ ಗಾಂಧಿ ಮತ ಪ್ರಚಾರ ನಡೆಸಿದ್ದರು. ನಗರದ ಅಂಬೇಡ್ಕರ್ ವೃತ್ತದ ಬಳಿ ಆಗಮಿಸಿದ ನಟಿ ಪೂಜಾ ಗಾಂಧಿ ತಮ್ಮ ಸಿನಿಮಾದ ಹಾಡನ್ನು ಹಾಡುವ ಮೂಲಕ ಕಾರ್ಯಕರ್ತರನ್ನು ಹುರಿದುಂಬಿಸಿದ್ರು.

    ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ನಟಿ ಪೂಜಾ ಗಾಂಧಿ, ರಾಜ್ಯದಲ್ಲಿ ಸಾಕಷ್ಟು ಸಮಸ್ಯೆಗಳಿದ್ದು, ರಾಷ್ಟ್ರೀಯ ಪಕ್ಷಗಳು ಪರಿಹರಿಸುವಲ್ಲಿ ಸೋತಿದೆ. ಹೀಗಾಗಿ ಪ್ರಾದೇಶಿಕ ಪಕ್ಷವನ್ನು ಅಧಿಕಾರಕ್ಕೆ ತರಬೇಕಿದೆ ಅಂತಾ ಅಂದ್ರು.

    ಕಾರವಾರ ತಾಲೂಕಿನಲ್ಲಿ ಮೀನುಗಾರರು ಸಾಕಷ್ಟು ಸಮಸ್ಯೆ ಎದುರಿಸುತ್ತಿದ್ದಾರೆ. ಸರ್ಕಾರ ಪ್ರವಾಸೋದ್ಯಮ ಅಭಿವೃದ್ಧಿ ಹೆಸರಿನಲ್ಲಿ ಮೀನುಗಾರರನ್ನು ಬೀದಿಗೆ ತಂದಿದೆ. ಕಾರವಾರದ ಜನರು ಉದ್ಯೋಗಕ್ಕಾಗಿ ಗೋವಾವನ್ನು ಅವಲಂಭಿಸುವಂತಾಗಿದೆ ಎಂದು ರಾಜ್ಯ ಸರ್ಕಾರವನ್ನು ಟೀಕಿಸಿದರು.

    ಈ ತಿಂಗಳ 11ನೇ ತಾರೀಖಿನವರೆಗೆ ಇಡೀ ಕರ್ನಾಟಕದಲ್ಲಿ ಜೆಡಿಎಸ್ ಪರವಾಗಿ ಪ್ರಚಾರ ಮಾಡುತ್ತೇನೆ ಎಂದು ಪೂಜಾ ಗಾಂಧಿ ತಿಳಿಸಿದ್ದಾರೆ.

  • ಮಡಿಕೇರಿಯಲ್ಲಿ ಮಳೆ ಹುಡ್ಗಿಯಿಂದ ಜೆಡಿಎಸ್ ಪರ ಪ್ರಚಾರ- ಹಾಡಿ ಜನರ ಸಮಸ್ಯೆ ಆಲಿಸಿ ಗದ್ಗದಿತರಾದ ಪೂಜಾಗಾಂಧಿ

    ಮಡಿಕೇರಿಯಲ್ಲಿ ಮಳೆ ಹುಡ್ಗಿಯಿಂದ ಜೆಡಿಎಸ್ ಪರ ಪ್ರಚಾರ- ಹಾಡಿ ಜನರ ಸಮಸ್ಯೆ ಆಲಿಸಿ ಗದ್ಗದಿತರಾದ ಪೂಜಾಗಾಂಧಿ

    ಮಡಿಕೇರಿ: ಹಾಡಿಯಲ್ಲಿ ವಾಸ್ತವ್ಯ ಮಾಡಿ, ಹಾಡಿ ಜನರ ಸಮಸ್ಯೆ ಆಲಿಸುವ ಮೂಲಕ ಜೆಡಿಎಸ್ ಸ್ಟಾರ್ ಪ್ರಚಾರಕಿ ಪೂಜಾ ಗಾಂಧಿ ಜೆಡಿಎಸ್ ಅಭ್ಯರ್ಥಿ ಪರ ಚುನಾವಣಾ ಪ್ರಚಾರ ನಡೆಸಿದರು.

    ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಕೆಸುವಿನಕೆರೆ ಹಾಡಿಗೆ ಭೇಟಿ ನೀಡಿದ ಮುಂಗಾರು ಮಳೆ ಬೆಡಗಿ, ಹಾಡಿ ಜನರ ಸಮಸ್ಯೆ ಆಲಿಸಿ ಕೆಲಕ್ಷಣ ಗದ್ಗದಿತರಾದ್ರು. ಅವರ ಕಷ್ಟಗಳನ್ನು ಕೇಳಿ ಮರುಗಿದ ಪೂಜಾಗಾಂಧಿ ಸಮಸ್ಯೆ ಬಗೆಹರಿಸಿ ಹಾಡಿ ಜನರಿಗೆ ಮೂಲಭೂತ ಸೌಕರ್ಯ ಒದಗಿಸುವ ಭರವಸೆ ನೀಡಿದರು.

    ಕುಮಾರಸ್ವಾಮಿ ನೇತೃತ್ವದ ಸರ್ಕಾರ ಈ ಬಾರಿ ರಾಜ್ಯದಲ್ಲಿ ಆಡಳಿತಕ್ಕೆ ಬರಲಿದ್ದು, ಇಂತಹ ಜನರ ಬದುಕಿಗೆ ಬೆಳಕಾಗುವ ಕಾರ್ಯ ಮಾಡುತ್ತೇನೆ. ರಾಷ್ಟ್ರೀಯ ಪಕ್ಷಗಳಿಂದ ರಾಜ್ಯದ ಅಭಿವೃದ್ಧಿ ಕಷ್ಟಸಾಧ್ಯ. ಏನು ಮಾಡ್ಬೇಕು ಅಂದ್ರೂ ರಾಷ್ಟ್ರೀಯ ಪಕ್ಷಗಳ ನಾಯಕರುಗಳಿಗೆ ದೆಹಲಿಯಿಂದ ಅನುಮತಿ ಬೇಕು. ಅದೇ ಜೆಡಿಎಸ್ ನಂತಹ ಪ್ರಾದೇಶಿಕ ಪಕ್ಷಕ್ಕೆ ಅದ್ರ ಅಗತ್ಯವಿಲ್ಲ. ಜನರ ಸಮಸ್ಯೆ ನೂರಿದ್ದು, ಅವುಗಳನ್ನು ಬಗೆಹರಿಸಲು ಕುಮಾರಸ್ವಾಮಿ ಗೆದ್ದು ಬರುತ್ತಾರೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಜೆಡಿಎಸ್ ಪರ ಪ್ರಚಾರವನ್ನು ನಡೆಸಿದ್ದು, ಜೆಡಿಎಸ್ ನತ್ತ ಜನರ ಒಲವು ಇದೆ ಎಂದು ಪೂಜಾ ಗಾಂಧಿ ಹೇಳಿದ್ರು.

    ವಿರಾಜಪೇಟೆ ಪಟ್ಟಣದ ಮನೆ ಮನೆಗೆ ತೆರಳಿ ಪ್ರಚಾರ ನಡೆಸಿದ ಪೂಜಾ ಗಾಂಧಿಯ ಜೊತೆ ಸೆಲ್ಫಿ ಕ್ಲಿಕ್ಕಿಸಿಕೊಳ್ಳೋಕೆ ಜನ ಮುಗಿಬಿದ್ದರು. ಜೆಡಿಎಸ್‍ಗೆ ಒಂದು ಚಾನ್ಸ್ ಕೊಟ್ಟು ನೋಡಿ ಎಂದು ಪ್ರಚಾರ ನಡೆಸ್ತಿರೋ ಮುಂಗಾರು ಮಳೆ ಹುಡುಗಿ ಸೆಲ್ಫಿ ಕೊಟ್ಟು ಓಟು ಕೇಳಿದ್ರು. ರಸ್ತೆಯಲ್ಲಿ ತೆರಳ್ತಿದ್ದ ವಾಹನಗಳನ್ನು ತಡೆದು ಜೆಡಿಎಸ್ ಗೆ ಓಟು ಮಾಡಿ ಎಂದು ಪೂಜಾ ಗಾಂಧಿ ಮನವಿ ಮಾಡಿದ್ರು.

    ಹಾಡಿ ಜನರು ತಯಾರಿಸಿದ ಅಕ್ಕಿರೊಟ್ಟಿ, ಸೊಪ್ಪಿನ ಪಲ್ಯ, ಅನ್ನ, ತರಕಾರಿ ಸಾಂಬಾರು ಸವಿದು ಅಲ್ಲೇ ರಾತ್ರಿ ಕಳೆದ್ರು. ಬೆಳಗ್ಗಿನಿಂದಲೇ ವಿರಾಜಪೇಟೆ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಪರ ಭರ್ಜರಿ ಪ್ರಚಾರ ಮಾಡಿದ ಪೂಜಾ ರಾತ್ರಿ ಕೂಡಾ ಜನರ ಸಮಸ್ಯೆ ಆಲಿಸಿ ಅವರೊಂದಿಗೆ ಬೆರೆತು ಹಾಡಿ ವಾಸ್ತವ್ಯ ಮಾಡುವ ಮೂಲಕ ಮತಯಾಚನೆ ಮಾಡಿ ಗಮನ ಸೆಳೆದ್ರು. ಈ ವೇಳೆ ಜೆಡಿಎಸ್ ಅಭ್ಯರ್ಥಿ ಸಂಕೇತ್ ಪೂವಯ್ಯ ಉಪಸ್ಥಿತರಿದ್ದರು.

  • ನಾನೇ ಸಿಹಿಯಾಗಿದ್ದೇನೆ, ಹುಡ್ಗಿಯಾಗಿ ಬೇಗ ಮದ್ವೆಯಾಗ್ತೀನಿ: ಪೂಜಾ ಗಾಂಧಿ

    ನಾನೇ ಸಿಹಿಯಾಗಿದ್ದೇನೆ, ಹುಡ್ಗಿಯಾಗಿ ಬೇಗ ಮದ್ವೆಯಾಗ್ತೀನಿ: ಪೂಜಾ ಗಾಂಧಿ

    ರಾಯಚೂರು: ಹುಡುಗಿಯಾಗಿ ನಾನು ಬೇಗ ಮದುವೆಯಾಗುತ್ತೇನೆ. ಮದುವೆ ಸಂದರ್ಭದಲ್ಲಿ ಎಲ್ಲರಿಗೂ ಹೇಳುತ್ತೇನೆ ಎಂದು ನಟಿ ಪೂಜಾ ಗಾಂಧಿ ಹೇಳಿದ್ದಾರೆ.

    ರಾಯಚೂರಿನಲ್ಲಿ ಚುನಾವಣಾ ನೀತಿ ಸಂಹಿತೆ ಪ್ರಕರಣ ವಿಚಾರಣೆ ಹಿನ್ನೆಲೆಯಲ್ಲಿ ನ್ಯಾಯಾಲಯಕ್ಕೆ ಆಗಮಿಸಿದ್ದ ವೇಳೆ ಮಾತನಾಡಿದ ಪೂಜಾ ಗಾಂಧಿ ಈಗ ನಾನು ಸಂತೋಷವಾಗಿದ್ದೇನೆ. ನಾನೇ ಸಿಹಿಯಾಗಿದ್ದೇನೆ. ಸಿಹಿ ಸುದ್ದಿನೂ ಕೊಡುತ್ತೇನೆ ಎಂದು ಹೇಳಿದ್ದಾರೆ.

    ದಂಡುಪಾಳ್ಯ-3 ಸಿನಿಮಾ ಬಿಡುಗಡೆಗೆ ಸಿದ್ಧಗೊಂಡಿದ್ದು, ಜನವರಿ ತಿಂಗಳಲ್ಲಿ ಟೆಲಿಫಿಲ್ಮ್ ಪ್ರೊಡಕ್ಷನ್ ಮಾಡುತ್ತೇನೆ ಎಂದರು. ರಾಜಕಾರಣಕ್ಕೆ ಪುನಃ ಬರುವ ಬಗ್ಗೆ ಆಲೋಚನೆ ಇಲ್ಲ ಎಂದು ನಟಿ ಪೂಜಾ ಗಾಂಧಿ ತಿಳಿಸಿದರು.

    ಇನ್ನೂ 2013 ರಲ್ಲಿ ರಾಯಚೂರು ನಗರ ವಿಧಾನಸಭಾ ಕ್ಷೇತ್ರಕ್ಕೆ ಬಿಎಸ್ ಆರ್ ಪಕ್ಷದಿಂದ ಸ್ಪರ್ಧಿಸಿದ್ದ ವೇಳೆ ದಾಖಲಾಗಿದ್ದ ನೀತಿ ಸಂಹಿತೆ ಪ್ರಕರಣದ ತೀರ್ಪು ಡಿಸೆಂಬರ್ 13 ಕ್ಕೆ ಮುಂದೂಡಲಾಗಿದೆ. ನಗರದ ಎರಡನೇ ಜೆಎಂಎಫ್ ಸಿ ತೀರ್ಪು ಮುಂದೂಡಿದೆ. ಚುನಾವಣಾ ಪ್ರಚಾರಕ್ಕೆ ಅನುಮತಿ ಇಲ್ಲದ ವಾಹನ ಬಳಸಿ ನೀತಿ ಸಂಹಿತೆ ಉಲ್ಲಂಘಿಸಿರುವ ಪ್ರಕರಣವನ್ನ ಪೂಜಾಗಾಂಧಿ ಎದುರಿಸುತ್ತಿದ್ದಾರೆ.

     

  • ನ್ಯಾಯ ಸಿಕ್ಕರೆ ರಾಯಚೂರಿಗೆ 108 ತೆಂಗಿನಕಾಯಿ ಒಡೆಯುತ್ತೇನೆ: ನಟಿ ಪೂಜಾ ಗಾಂಧಿ

    ನ್ಯಾಯ ಸಿಕ್ಕರೆ ರಾಯಚೂರಿಗೆ 108 ತೆಂಗಿನಕಾಯಿ ಒಡೆಯುತ್ತೇನೆ: ನಟಿ ಪೂಜಾ ಗಾಂಧಿ

    ರಾಯಚೂರು: ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ಎದುರಿಸುತ್ತಿರುವ ನಟಿ ಪೂಜಾ ಗಾಂಧಿ ತಮಗೆ ನ್ಯಾಯ ಸಿಕ್ಕರೆ ತಾನು ನಿಂತ ಕ್ಷೇತ್ರ ರಾಯಚೂರು ನಗರಕ್ಕೆ 101 ತೆಂಗಿನಕಾಯಿ ಒಡೆಯುವುದಾಗಿ ಹೇಳಿದ್ದಾರೆ.

    ವಿಚಾರಣೆ ಹಿನ್ನೆಲೆ ರಾಯಚೂರಿನ ಜೆಎಂಎಫ್ ಸಿ ಎರಡನೇ ನ್ಯಾಯಾಲಯಕ್ಕೆ ಹಾಜರಾಗಿ ಹೊರ ಬಂದ ಬಳಿಕ ಮಾತನಾಡಿದ ಅವರು, ನ್ಯಾಯ ಸಿಗುವ ಭರವಸೆ ವ್ಯಕ್ತಪಡಿಸಿದರು. ಇದೇ ವೇಳೆ ನಟ ಉಪೇಂದ್ರ ಹೊಸ ಪಕ್ಷ ಕಟ್ಟಿರುವುದಕ್ಕೆ ಶುಭ ಕೋರಿದ ನಟಿ, ಅವರನ್ನು ಬೆಂಬಲಿಸುವುದಾಗಿ ಹೇಳಿದರು.

    ಪ್ರಕರಣದ ವಿಚಾರಣೆಯನ್ನು ಡಿಸೆಂಬರ್ 4 ಕ್ಕೆ ಮುಂದೂಡಲಾಗಿದ್ದು, ಅಂದೇ ಅಂತಿಮ ತೀರ್ಪು ಹೊರಬರಲಿದೆ. 2013 ರ ವಿಧಾನಸಭಾ ಚುನಾವಣೆಯಲ್ಲಿ ರಾಯಚೂರು ನಗರ ಕ್ಷೇತ್ರಕ್ಕೆ ಬಿಎಸ್ಆರ್ ಕಾಂಗ್ರೆಸ್ ಪಕ್ಷದಿಂದ ಪೂಜಾಗಾಂಧಿ ಸ್ಪರ್ಧಿಸಿದ್ದರು. ಚುನಾವಣಾ ಪ್ರಚಾರದ ವೇಳೆ ಅನುಮತಿ ಪಡೆಯದೇ ಪ್ರಚಾರಕ್ಕೆ ವಾಹನ ಬಳಸಿದ್ದ ಹಿನ್ನೆಲೆ ಸದರ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದ ವಿಚಾರಣೆ ಪೂರ್ಣಗೊಂಡಿದ್ದು ಡಿಸೆಂಬರ್ 4ಕ್ಕೆ ಅಂತಿಮ ತೀರ್ಪು ಹೊರಬೀಳಲಿದೆ.