Tag: pooja

  • ದೇಗುಲಗಳಲ್ಲಿ ಪೂಜಾಕೈಂಕರ್ಯಗಳನ್ನು ಆರಂಭಿಸಲು ಅನುಮತಿ ನೀಡುವಂತೆ ಮನವಿ

    ದೇಗುಲಗಳಲ್ಲಿ ಪೂಜಾಕೈಂಕರ್ಯಗಳನ್ನು ಆರಂಭಿಸಲು ಅನುಮತಿ ನೀಡುವಂತೆ ಮನವಿ

    ಬೆಂಗಳೂರು: ದೇಗುಲಗಳಲ್ಲಿ ಪೂಜಾಕೈಂಕರ್ಯಗಳು ಸುಲಲಿತವಾಗಿ ನಡೆಯಲು ಏರ್ಪಡಿಸುವಂತೆ ಮುಜರಾಯಿ ದೇವಸ್ಥಾನದ ಅರ್ಚಕರು ಹಾಗೂ ಅರ್ಚಕರ ಒಕ್ಕೂಟದಿಂದ ಮನವಿ ಸಲ್ಲಿಸಲಾಯಿತು.

    ಇಂದು ಸಚಿವೆ ಶಶಿಕಲಾ ಜೊಲ್ಲೆ ಅವರನ್ನು ಭೇಟಿಯಾದ ಅರ್ಚಕರ ಒಕ್ಕೂಟ, ಮುಜುರಾಯಿ ದೇವಸ್ಥಾನಗಳಲ್ಲಿ ಆಗಬೇಕಾದ ಕೆಲಸಗಳ ಬಗ್ಗೆ ಮನವಿ ಪತ್ರ ನೀಡಿದರು. ಇದೇ ವೇಳೆ ಮುಜರಾಯಿ ಇಲಾಖೆಗೆ ಒಳಪಟ್ಟ ದೇವಸ್ಥಾನಗಳಲ್ಲಿ ಎಲ್ಲ COVID ನಿಯಮ ಪಾಲನೆ ಅನುಸಾರ ಎಲ್ಲ ಸೇವೆಗಳು ಹಾಗೂ ಪೂಜಾ ಕೈಂಕರ್ಯಗಳನ್ನು ಆರಂಭಿಸಲು ಅನುಮತಿ ನೀಡಬೇಕೆಂದು ಮನವಿಯಲ್ಲಿ ತಿಳಿಸಿದ್ದಾರೆ.  ಇದನ್ನೂ ಓದಿ: ಹೆಮ್ಮೆಯಿಂದ ಬದುಕಿದ್ದು, ಅವಮಾನದಿಂದ ಬದುಕಲು ಸಾಧ್ಯವಾಗ್ತಿಲ್ಲ: ಗಿರಿ ಡೆತ್‍ನೋಟ್

    ಇಷ್ಟು ಮಾತ್ರವಲ್ಲದೆ ಮುಜರಾಯಿ ಇಲಾಖೆಯ ದೇವಸ್ಥಾನ ದೇವಸ್ಥಾನಗಳಲ್ಲಿ ಆಗಬೇಕಾದ ಕೆಲಸಗಳ ಬಗ್ಗೆ ಸಚಿವರಿಗೆ ಮನವರಿಕೆ ಮಾಡಿಕೊಟ್ಟರು. ಇದನ್ನೂ ಓದಿ: MSc ಓದಿ ಕಸ ಗುಡಿಸುತ್ತಿದ್ದ ಮಹಿಳೆಗೆ ಸರ್ಕಾರಿ ಕೆಲಸ ಕೊಟ್ಟ ಸಚಿವರು

  • ಪೂಜೆ ಮಾಡಿಕೊಂಡು ಹೋಗು ಅಂದ್ರೆ ದೇವಾಲಯವೇ ತನ್ನದೆಂದ ಪೂಜಾರಿ – ಗ್ರಾಮಸ್ಥರಿಂದ ಪ್ರತಿಭಟನೆ

    ಪೂಜೆ ಮಾಡಿಕೊಂಡು ಹೋಗು ಅಂದ್ರೆ ದೇವಾಲಯವೇ ತನ್ನದೆಂದ ಪೂಜಾರಿ – ಗ್ರಾಮಸ್ಥರಿಂದ ಪ್ರತಿಭಟನೆ

    ಚಾಮರಾಜನಗರ: ಪೂಜೆ ಮಾಡಿಕೊಂಡು ಹೋಗಪ್ಪ ಎಂದು ಗ್ರಾಮಸ್ಥರು ಪೂಜಾರಿಯೊಬ್ಬರಿಗೆ ಅವಕಾಶ ಮಾಡಿಕೊಟ್ಟರೆ ಪೂಜಾರಿ ದೇವಸ್ಥಾನವೇ ತನ್ನದೆಂದು ತನ್ನ ಹೆಸರಿಗೆ ಖಾತೆ ಮಾಡಿಸಿಕೊಳ್ಳಲು ಮುಂದಾಗಿರುವ ಘಟನೆ ಚಾಮರಾಜನಗರ ತಾಲೂಕಿನ ಕಣ್ಣೇಗಾಲ ಗ್ರಾಮದಲ್ಲಿ ನಡೆದಿದೆ.

    ಪೂಜಾರಿ ದೊಡ್ಡಯ್ಯ ಎಂಬವರು ಪ್ರತಿದಿನ ಗ್ರಾಮದ ದೊಡ್ಡಯ್ಯಸ್ವಾಮಿ ದೇವಸ್ಥಾನದಲ್ಲಿ ಪೂಜೆ ನೆರವೇರಿಸುತ್ತಿದ್ದರು. ಇದೀಗ ಪೂಜೆ ಮಾಡುವ ದೇವಸ್ಥಾನವನ್ನೆ ತನ್ನ ಹೆಸರಿಗೆ ಖಾತೆ ಮಾಡಿಸಿಕೊಳ್ಳಲು ಮುಂದಾಗಿದ್ದು, ತನ್ನ ಹೆಸರಿಗೆ ಸ್ವತ್ತು ನೀಡುವಂತೆ ಗ್ರಾಮಪಂಚಾಯತ್‍ಗೆ ಅರ್ಜಿ ಹಾಕಿದ್ದಾರೆ ಎಂದು ಗ್ರಾಮಸ್ಥರು ಪ್ರತಿಭಟನೆಗೆ ಮಾಡಿದ್ದಾರೆ. ಇದನ್ನೂ ಓದಿ: ಹೆಂಡತಿಯೊಂದಿಗೆ ಜಗಳ ವಿಷ ಕುಡಿದೆ ಎಂದು ಪೊಲೀಸರಿಗೆ ಪತಿರಾಯನ ಕರೆ

    ದೊಡ್ಡಯ್ಯಸ್ವಾಮಿ ದೇವಸ್ಥಾನದಲ್ಲಿ ಪೂಜೆ ಮಾಡಿಕೊಂಡು ಹೋಗುವಂತೆ ತಹಶೀಲ್ದಾರ್ ಕೆಲವರ್ಷಗಳ ಹಿಂದೆ ಸೂಚಿಸಿದ್ದರು. ಹಾಗಾಗಿ ಅಲ್ಲಿ ಪೂಜೆ ಮಾಡಿಕೊಂಡಿದ್ದ ದೊಡ್ಡಯ್ಯ ಈಗ ದೇವಸ್ಥಾನ ತನ್ನ ಆಸ್ತಿ ಎನ್ನುತ್ತಿದ್ದು, ದೇವಸ್ಥಾನ ಸಾರ್ವಜನಿಕ ಸ್ವತ್ತಾಗಿದ್ದು ಇದನ್ನು ಟ್ರಸ್ಟ್ ಗೆ ವಹಿಸಿಕೊಡುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ. ಇದನ್ನೂ ಓದಿ: ದಾರಿಯಲ್ಲಿ ಸಿಕ್ಕಿದ್ದ ಚಿನ್ನವನ್ನು ಪೊಲೀಸರಿಗೆ ಒಪ್ಪಿಸಿದ ಗ್ರಾ.ಪಂ ಸದಸ್ಯ

  • ಮಸೀದಿಯಲ್ಲಿ ಹಿಂದೂ ದೇವರ ಫೋಟೋಗಳಿಗೆ ಪೂಜೆ – ಭಾವೈಕ್ಯತೆಗೆ ಸಾಕ್ಷಿಯಾಯ್ತು ಕೊಪ್ಪಳ

    ಮಸೀದಿಯಲ್ಲಿ ಹಿಂದೂ ದೇವರ ಫೋಟೋಗಳಿಗೆ ಪೂಜೆ – ಭಾವೈಕ್ಯತೆಗೆ ಸಾಕ್ಷಿಯಾಯ್ತು ಕೊಪ್ಪಳ

    ಕೊಪ್ಪಳ: ಮಸೀದಿಯಲ್ಲಿ ಹಿಂದೂ ದೇವರ ಫೋಟೋಗಳಿಗೆ ಪೂಜೆ ಮಾಡುವ ಮೂಲಕ ಕೊಪ್ಪಳ ಜಿಲ್ಲೆ ಭಾವೈಕ್ಯತೆಗೆ ಸಾಕ್ಷಿಯಾಗಿದೆ.

    ಹೌದು. ಮುಸ್ಲಿಂ ಹಬ್ಬವೆಂದು ಹೇಳುವ ಮೊಹರಂ ಹಬ್ಬವನ್ನು ಉತ್ತರ ಕರ್ನಾಟಕದಲ್ಲಿ ಹಿಂದೂ- ಮುಸ್ಲಿಮರು ಭಾವೈಕ್ಯತೆಯಿಂದ ಆಚರಿಸುತ್ತಾರೆ. ಅದರಲ್ಲಿಯೂ ಕಲ್ಯಾಣ ಕರ್ನಾಟಕ ಭಾಗವು ಭಾವೈಕ್ಯತೆಯ ಸಂಕೇತವಾಗಿವಾಗಿದೆ. ಅಲಾಯಿ ದೇವರ ಕುಡುವ ಮಸೀದಿಯಲ್ಲಿ ಹಿಂದೂ ದೇವರಗಳ ಮೂರ್ತಿಗಳು ಇರುತ್ತವೆ. ಇಲ್ಲಿ ಮೊಹರಂ ಹಬ್ಬ ಸೇರಿ ವಿವಿಧ ಹಬ್ಬಗಳನ್ನು ಧರ್ಮ-ಬೇಧವಿಲ್ಲದೆ ಆಚರಿಸುತ್ತಾರೆ. ಅದಕ್ಕೆ ಕೊಪ್ಪಳ ತಾಲೂಕಿನ ಮುದ್ದಾಬಳ್ಳಿಯ ಮಸೀದಿ ಸಾಕ್ಷಿಯಾಗಿದೆ.

    ಮುಸ್ಲಿಂ ಜನಾಂಗದವರ ಕೊನೆಯ ಮಾಸವಾಗಿರುವ ಮೊಹರಂ ತಿಂಗಳಿನಲ್ಲಿ ಈ ಹಬ್ಬವನ್ನು ಆಚರಿಸುತ್ತಾರೆ. ಈ ಹಬ್ಬವನ್ನು ಉತ್ತರ ಕರ್ನಾಟಕದಲ್ಲಿ ಹಿಂದೂ-ಮುಸ್ಲಿಮರು ಸೇರಿ ಆಚರಿಸುವುದು ವಿಶೇಷವಾಗಿದೆ. ಬಹುತೇಕ ಗ್ರಾಮಗಳಲ್ಲಿ ಮುಸ್ಲಿಂ ಜನಾಂಗದವರಿಗಿಂತ ಅಧಿಕವಾಗಿ ಹಿಂದೂಗಳೇ ಈ ಹಬ್ಬವನ್ನು ಆಚರಿಸುತ್ತಾರೆ. ಅಲಾಯಿ ದೇವರನ್ನು ಪ್ರತಿಷ್ಠಾಪಿಸಿ ಪೂಜೆ ಸಲ್ಲಿಸುವುದು ಹೀಗೆ ಎಲ್ಲವನ್ನು ಹಿಂದೂಗಳೇ ಆಚರಿಸುತ್ತಾರೆ. ಇದನ್ನೂ ಓದಿ: ಎಂಟು ವಾರಗಳ ಕಾಲ ಬಳ್ಳಾರಿಗೆ ತೆರಳಲು ಜನಾರ್ದನ ರೆಡ್ಡಿಗೆ ಸುಪ್ರೀಂ ಅನುಮತಿ

    ಕೊಪ್ಪಳ ತಾಲೂಕಿನ ಮುದ್ದಾ ಬಳ್ಳಿಯಲ್ಲಿ ಸುಮಾರು 25 ಮುಸ್ಲಿಂ ಕುಟುಂಬಗಳಿವೆ. ಇಲ್ಲಿ ಹಿಂದೂಗಳು ಅಧಿಕವಾಗಿದ್ದಾರೆ. ಗ್ರಾಮದಲ್ಲಿ ಈಗ ಮೊಹರಂ ಹಬ್ಬಕ್ಕಾಗಿ ಅಲಾಯಿ ದೇವರನ್ನು ಮಸೀದಿಯಲ್ಲಿ ಪ್ರತಿಷ್ಠಾಪಿಸಿದ್ದಾರೆ. ಈ ಮಸೀದಿ ಯಲ್ಲಿ ಒಂದು ವಿಶೇಷವಿದ್ದು, ಇತ್ತೀಚೆಗೆ ಮಸೀದಿ ನವಿಕರಣ ಮಾಡುವಾಗಿ ಇಲ್ಲಿ ಹಿಂದೂ ದೇವರಾದ ಪರಮಾತ್ಮ, ದುರ್ಗಾದೇವಿ, ಸರಸ್ವತಿ, ಲಕ್ಷ್ಮಿ, ಕೊಪ್ಪಳದ ಶ್ರೀಗವಿಸಿದ್ದೇಶ್ವರ ಸ್ವಾಮಿಜಿಗಳ ಚಿತ್ರವಿರುವ ಕಲ್ಲುಗಳನ್ನು ಮಸೀದಿಯಲ್ಲಿ ಜೋಡಿಸಿದ್ದಾರೆ. ಇದು ಮುಸ್ಲಿಂ ಜನಾಂಗದವರಿಗೆ ಸೇರಿದ್ದಾಗಿದ್ದರೂ ಇಲ್ಲಿ ಹಿಂದೂ-ಮುಸ್ಲಿಮರು ಒಂದೇ ಎಂಬಂತೆ ಇಲ್ಲಿ ಅಲ್ಲಾ- ಅಲ್ಲಮ್ ಒಂದೇ ಎಂದು ಸಾರಿದ್ದಾರೆ.

    ಮೊಹರಂ ಹಬ್ಬದಲ್ಲಿ ಹಿಂದೂಗಳು ಪಾಲ್ಗೊಂಡರೆ, ಹಿಂದೂಗಳ ಹಬ್ಬವಾದ ದೀಪಾವಳಿ, ದಸರಾ ಸೇರಿ ವಿವಿಧ ಹಬ್ಬಗಳಲ್ಲಿ ಮುಸ್ಲಿಂ ಜನಾಂಗದವರು ಸಹ ಅಷ್ಟೆ ಭಕ್ತಿ ಶ್ರದ್ಧೆಯಿಂದ ಪಾಲ್ಗೊಳ್ಳುತ್ತಾರೆ. ಇದರಿಂದಾಗಿ ಇಲ್ಲಿ ಜಾತಿ-ಧರ್ಮಗಳ ಮಧ್ಯೆ ಭಿನ್ನಾಭಿಪ್ರಾಯದಿಂದ ಹೊಡೆದಾಡುತ್ತಿರುವಾಗ ಮುದ್ದಾಬಳ್ಳಿ ಗ್ರಾಮಸ್ಥರು ಭಾವೈಕ್ಯತೆಗೆ ಸಾಕ್ಷಿಯಾಗಿದ್ದಾರೆ. ಇದನ್ನೂ ಓದಿ: ಕೋವಿಡ್‍ನಿಂದ ಮೃತಪಟ್ಟ ತಾಯಿ ಮೊಬೈಲ್ ಕೊಡಿ ಪ್ಲೀಸ್ ಎಂದ ಬಾಲಕಿಗೆ ಸಿಕ್ತು ಫೋನ್

  • ಆಸ್ಕರ್ ಆರೋಗ್ಯಕ್ಕಾಗಿ ಅನಂತೇಶ್ವರ ದೇವರಿಗೆ ಪೂಜೆ – ರಾಘವೇಂದ್ರ ಸ್ವಾಮಿ ಮಠದಲ್ಲಿ ಪ್ರಾರ್ಥನೆ

    ಆಸ್ಕರ್ ಆರೋಗ್ಯಕ್ಕಾಗಿ ಅನಂತೇಶ್ವರ ದೇವರಿಗೆ ಪೂಜೆ – ರಾಘವೇಂದ್ರ ಸ್ವಾಮಿ ಮಠದಲ್ಲಿ ಪ್ರಾರ್ಥನೆ

    ಉಡುಪಿ: ರಾಜ್ಯಸಭಾ ಸದಸ್ಯ ಮಾಜಿ ಕೇಂದ್ರ ಸಚಿವ ಆಸ್ಕರ್ ಫರ್ನಾಂಡಿಸ್ ಶೀಘ್ರ ಗುಣಮುಖರಾಗಲಿ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ದೇವರ ಮೊರೆ ಹೋಗಿದೆ. ಅನಂತೇಶ್ವರ ದೇವರಿಗೆ, ರಾಘವೇಂದ್ರ ಸ್ವಾಮಿಗಳಿಗೆ ಪೂಜೆ ಸಲ್ಲಿಸಿದೆ.

    ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ನೇತೃತ್ವದಲ್ಲಿ ಪದಾಧಿಕಾರಿಗಳು ಸದಸ್ಯರು ರಥಬೀದಿಯಲ್ಲಿರುವ ಅನಂತೇಶ್ವರ ದೇವರಿಗೆ ವಿಶೇಷ ಪೂಜೆ ಸಲ್ಲಿಕೆ ಮಾಡಿದರು. ಆಸ್ಕರ್ ಫೆರ್ನಾಂಡಿಸ್ ಶೀಘ್ರ ಚೇತರಿಕೆಯಾಗಲಿ ಎಂದು ದೇವರಲ್ಲಿ ಪ್ರಾರ್ಥನೆ ಮಾಡಿಕೊಳ್ಳಲಾಯಿತು. ಪರ್ಕಳ ಕಾಂಗ್ರೆಸ್ ಸಮಿತಿ ವತಿಯಿಂದ ನಗರದ ರಾಘವೇಂದ್ರ ಮಠದಲ್ಲಿ ಆಸ್ಕರ್ ಆರೋಗ್ಯಕ್ಕಾಗಿ ಪ್ರಾರ್ಥನೆ ಸಲ್ಲಿಸಲಾಯಿತು.

    ಸುಮಾರು 50 ವರ್ಷಗಳ ಕಾಲ ರಾಷ್ಟ್ರರಾಜಕಾರಣದಲ್ಲಿ ತೊಡಗಿಸಿಕೊಂಡಿರುವ ಆಸ್ಕರ್ ಫೆರ್ನಾಂಡಿಸ್, ಪಕ್ಷಬೇಧ ಮರೆತು ಕೆಲಸ ಮಾಡಿದವರು. ಜಾತಿ ಮತ ಬೇಧ ರಾಜಕಾರಣವನ್ನು ಹತ್ತಿರವೂ ಸೇರಿಸಿಕೊಂಡವರಲ್ಲ. ಗಾಂಧಿ ಕುಟುಂಬಕ್ಕೆ ಬಹಳ ಹತ್ತಿರ ಇರುವ ಸ್ವಾರ್ಥ ರಹಿತ ಜೀವನ ನಡೆಸುವವರು ಇನ್ನಷ್ಟು ಬಾಳಿ ಬದುಕಬೇಕು ಎಂದು ಅರ್ಚಕರ ಮೂಲಕ ದೇವರಲ್ಲಿ ಕೋರಿಕೊಳ್ಳಲಾಯ್ತು. ಇನ್ನಷ್ಟು ಕಾಲ ಆಸ್ಕರ್ ಅವರ ಸೇವೆ ದೇಶಕ್ಕೆ ಸಿಗಬೇಕು ಎಂದು ನಾಯಕರು ದೇವರಲ್ಲಿ ಪ್ರಾರ್ಥನೆ ಮಾಡಿದರು. ಇದನ್ನೂ ಓದಿ: ಕೇಂದ್ರದ ಮಾಜಿ ಸಚಿವ ಆಸ್ಕರ್ ಫರ್ನಾಂಡಿಸ್ ಆಸ್ಪತ್ರೆಗೆ ದಾಖಲು

    ಅಶೋಕ್ ಕುಮಾರ್ ಮಾತನಾಡಿ, ಆಸ್ಕರ್ ಫೆರ್ನಾಂಡಿಸ್ ಅವರ ಆರೋಗ್ಯ ಚಿಂತಾಜನಕವಾಗಿದೆ. ನಾಯಕರ ಆರೋಗ್ಯ ವಿಚಾರಿಸಲು ಮಂಗಳೂರಿಗೆ ಹೋಗುವ ಪರಿಸ್ಥಿತಿ ಈಗ ಇಲ್ಲ. ಕೊರೋನಾ ಕಾರಣ ಎಲ್ಲರನ್ನು ಆಸ್ಪತ್ರೆಯೊಳಗೆ ಬಿಡುತ್ತಿಲ್ಲ. ಚರ್ಚ್ ಮಸೀದಿಯಲ್ಲಿ ಈಗಾಗಲೇ ಪ್ರಾರ್ಥನೆಗಳನ್ನು ಕಾಂಗ್ರೆಸ್ನ ಕಾರ್ಯಕರ್ತರು ಅಭಿಮಾನಿಗಳು ಸಲ್ಲಿಸಿದ್ದಾರೆ. ವಿಶೇಷ ಪೂಜೆ ದೇವರಿಗೆ ನೀಡಿದ್ದೇವೆ. ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸಿದ್ದೇವೆ. ಎಲ್ಲರೂ ದೇವರಲ್ಲಿ ಪ್ರಾರ್ಥನೆ ಮಾಡಿ ಎಂದರು.

  • ಇಂದಿನಿಂದ ದೇವಾಲಯಗಳು ಓಪನ್ – ಗರ್ಭಗುಡಿಯ ಮೇಲೆ ಲಕ್ಷ್ಮಿ ಸ್ವರೂಪಳಾದ ಬಿಳಿ ಗೂಬೆ ಪತ್ಯಕ್ಷ

    ಇಂದಿನಿಂದ ದೇವಾಲಯಗಳು ಓಪನ್ – ಗರ್ಭಗುಡಿಯ ಮೇಲೆ ಲಕ್ಷ್ಮಿ ಸ್ವರೂಪಳಾದ ಬಿಳಿ ಗೂಬೆ ಪತ್ಯಕ್ಷ

    ದಾಸರಹಳ್ಳಿ: ಕೊರೊನಾ ಲಾಕ್‍ಡೌನ್‍ನಿಂದ ಮುಚ್ಚಿದ್ದ ದೇವಾಲಯಗಳನ್ನು ಸೋಮವಾರದಿಂದ ತೆರೆಯಲು ಸರ್ಕಾರ ಅನುಮತಿ ನೀಡಿದೆ. ಈ ಹಿನ್ನೆಲೆ ಇಂದಿನಿಂದ ದೇವಾಲಯಗಳನ್ನು ತರೆಯಲಾಗಿದ್ದು, ದೇವಾಸ್ಥಾನವೊಂದರಲ್ಲಿ ಲಕ್ಷ್ಮಿ ಸ್ವರೂಪಳಾದ ಬಿಳಿ ಗೂಬೆ ಪ್ರತ್ಯಕ್ಷವಾಗಿದೆ.

    ಬೆಂಗಳೂರು ಹೊರವಲಯ ಟಿ.ದಾಸರಹಳ್ಳಿಯ ಮಲ್ಲಸಂದ್ರದಲ್ಲಿರುವ ರಾಜಮಾತ ಉಚ್ಛಂಗಿ ದೇವಸ್ಥಾನದಲ್ಲಿ ದೇವರ ದರ್ಶನಕ್ಕೆ ಅವಕಾಶವನ್ನು ಮಾಡಿಕೊಡಲಾಗಿದೆ. ದೇವರ ದರ್ಶನಕ್ಕೆ ಬಂದಂತಹ ಭಕ್ತಾದಿಗಳಿಗೆ ಅಚ್ಚರಿಯೇ ಕಾದಿದ್ದು, ದೇವರ ಗರ್ಭಗುಡಿಯ ಮೇಲೆ ಅಚ್ಚರಿ ರೂಪದಲ್ಲಿ ಲಕ್ಷ್ಮಿ ಸ್ವರೂಪಳಾದ ಬಿಳಿ ಗೂಬೆ ದರ್ಶನವನ್ನು ನೀಡಿದೆ.

    ಶುಭ ಸಂಕೇತವಾಗಿ ದೇವಸ್ಥಾನದ ಅರ್ಚಕ ಲಕ್ಷ್ಮಿ ಸ್ವರೂಪಳಾದ ಬಿಳಿ ಗೂಬೆಗೆ ಪೂಜೆಯನ್ನು ಕೂಡ ಸಲ್ಲಿಸಿದ್ದಾರೆ. ಪೂಜೆಯನ್ನು ಸಲ್ಲಿಸಿದರೂ ಕೂಡ ಬಿಳಿ ಗೂಬೆ ದೇವಸ್ಥಾನವನ್ನು ಬಿಟ್ಟು ತೆರಳಲಿಲ್ಲ. ಸದ್ಯ ದೇವಸ್ಥಾನದ ವತಿಯಿಂದ ಬೇಕಾದ ಎಲ್ಲಾ ಕೋವಿಡ್ ಮುಂಜಾಗ್ರತಾ ಕ್ರಮವನ್ನು ವಹಿಸಲಾಗಿದೆ ಹಾಗೂ ದೇವಾಲಯಕ್ಕೆ ಬಂದಂತಹ ಭಕ್ತಾದಿಗಳಿಗೆ ಮಂಗಳಾರತಿ ಮಾತ್ರ ನೀಡಲಾಗುತ್ತಿದೆ. ಅಲ್ಲದೇ ದೇವಸ್ಥಾನದಲ್ಲಿ ಯಾವುದೇ ವಿಶೇಷ ಪೂಜೆಯನ್ನು ಹಾಗೂ ದೇವರ ಪ್ರಸಾದವನ್ನು ಕೂಡ ನೀಡಲಾಗುತ್ತಿಲ್ಲ. ದೇವಸ್ಥಾನಕ್ಕೆ ನಿಧಾನವಾಗಿ ಭಕ್ತಾದಿಗಳು ಆಗಮಿಸುತ್ತಿದ್ದಾರೆ. ಒಟ್ಟಿನಲ್ಲಿ ದೇವಸ್ಥಾನದಲ್ಲಿ ಎಲ್ಲಾ ರೀತಿಯಲ್ಲಿ ಕೋವಿಡ್ ಮುಂಜಾಗ್ರತಾ ಕ್ರಮಗಳನ್ನು ಕೈಕೊಳ್ಳಲಾಗಿದೆ. ಇದನ್ನೂ ಓದಿ: ಇತಿಹಾಸ ಪ್ರಸಿದ್ಧ ಬಯಲು ಆಂಜನೇಯ ದೇವಾಲಯದಲ್ಲಿ ಪೂಜೆ ಪುರಸ್ಕಾರ- ಭಕ್ತರ ಸಂಖ್ಯೆ ಇಳಿಕೆ

  • ಇತಿಹಾಸ ಪ್ರಸಿದ್ಧ ಬಯಲು ಆಂಜನೇಯ ದೇವಾಲಯದಲ್ಲಿ ಪೂಜೆ ಪುರಸ್ಕಾರ- ಭಕ್ತರ ಸಂಖ್ಯೆ ಇಳಿಕೆ

    ಇತಿಹಾಸ ಪ್ರಸಿದ್ಧ ಬಯಲು ಆಂಜನೇಯ ದೇವಾಲಯದಲ್ಲಿ ಪೂಜೆ ಪುರಸ್ಕಾರ- ಭಕ್ತರ ಸಂಖ್ಯೆ ಇಳಿಕೆ

    ನೆಲಮಂಗಲ: ಮುಜರಾಯಿ ಇಲಾಖೆಯ ಎ ಗ್ರೇಡ್ ಶ್ರೇಣಿಯ ಗೊಲ್ಲಹಳ್ಳಿ ಬಯಲು ಆಂಜನೇಯ ದೇವಾಲಯ ಮುಕ್ತವಾಗಿದೆ.

    ಕೋವಿಡ್ 19ನಿಂದ ಇಡೀ ರಾಜ್ಯವೇ ಲಾಕ್‍ಡೌನ್ ಆಗಿ, ಇಂದಿನಿಂದ ಅನ್‍ಲಾಕ್ ಆಗಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ದೇವಾಲಯಗಳು ದರ್ಶನಕ್ಕೆ ಮುಕ್ತವಾಗಿದೆ. ನೆಲಮಂಗಲ ಗ್ರಾಮಾಂತರ ಭಾಗದ, ಮುಜರಾಯಿ ಇಲಾಖೆಯ ಎ ಗ್ರೇಡ್ ಶ್ರೇಣಿಯ ರೈಲ್ವೆ ಗೊಲ್ಲಹಳ್ಳಿ (ಬೈರಶೆಟ್ಟಿಹಳ್ಳಿ) ಇತಿಹಾಸ ಪ್ರಸಿದ್ದ ಶ್ರೀ ಬೈಲಾಂಜನೇಯ ದೇವಾಲಯದಲ್ಲಿ ಭಕ್ತರ ದರ್ಶನಕ್ಕೆ ಮುಕ್ತವಾಗಿದೆ.

    ಮುಜರಾಯಿ ಇಲಾಖೆ ದೇವಾಲಯವಾದ್ದರಿಂದ ಸರ್ಕಾರದ ಯೋಜನೆಗಳಿಗೆ ಒಳಪಡುವ ಗೊಲ್ಲಹಳ್ಳಿ ಆಂಜನೇಯ ದೇವಾಲಯದ ಬೆಳಗ್ಗೆಯೇ ದೇವಾಲಯ ಆವರಣ ಸ್ವಚ್ಚತೆಯಾಗಿದೆ. ಕೋವಿಡ್ ಹಿನ್ನೆಲೆ ದರ್ಶನಕ್ಕೆ ಮಾತ್ರ ಅವಕಾಶ ನೀಡಲಾಗಿದ್ದು, ಮಂಗಳಾರತಿ, ತೀರ್ಥ ಪ್ರಸಾದ ವಿತರಣೆ ಇಲ್ಲ ಎಂದು ಪ್ರಧಾನ ಅರ್ಚಕರಾದ ವಸಂತ್ ಕುಮಾರ್ ಹಾಗೂ ಪಾರಪತ್ತೇದಾರ ಶ್ರೀನಿವಾಸ್ ತಿಳಿಸಿದ್ದಾರೆ.

    ಕೋವಿಡ್ ನಿಯಮ ಎಚ್ಚರಿಕೆ ಮಾಸ್ಕ್ ಕಡ್ಡಾಯ, ಸಾಮಾಜಿಕ ಅಂತರ ಕಟ್ಟುನಿಟ್ಟಾಗಿ ಪಾಲಿಸಿದ್ದಾರೆ. ಆದರೆ ಮೊದಲ ದಿನವಾದ ಇಂದು ಭಕ್ತರ ಸಂಖ್ಯೆ ಕಡೆಮೆ ಇದ್ದು ಮುಂದಿನ ದಿನಗಳಲ್ಲಿ ಭಕ್ತರು ಬರುವ ವಿಶ್ವಾಸವನ್ನ ಅರ್ಚಕರು ಅಭಿಪ್ರಾಯಪಟ್ಟಿದ್ದಾರೆ. ಇದನ್ನೂ ಓದಿ: ಕೆಟ್ಟವರೊಂದಿಗೆ ಒಳ್ಳೆಯವರ ಸೇರ್ಪಡೆ – ಬಿಎಸ್‍ವೈ ವಿರುದ್ಧ ಗುಡುಗಿದ ಯತ್ನಾಳ್

  • ಕೊರೊನಾ ಬಾರದಂತೆ ಸ್ವಾಮೀಜಿಯಿಂದ ಬೆತ್ತ ಪೂಜೆ – ಮಧ್ಯರಾತ್ರಿ ಗ್ರಾಮದಲ್ಲಿ ನಡೆಯುತ್ತೆ ದಿಗ್ಬಂಧನ ಪೂಜೆ

    ಕೊರೊನಾ ಬಾರದಂತೆ ಸ್ವಾಮೀಜಿಯಿಂದ ಬೆತ್ತ ಪೂಜೆ – ಮಧ್ಯರಾತ್ರಿ ಗ್ರಾಮದಲ್ಲಿ ನಡೆಯುತ್ತೆ ದಿಗ್ಬಂಧನ ಪೂಜೆ

    ಹುಬ್ಬಳ್ಳಿ: ಕೊರೊನಾ ಬಾರದಂತೆ ಇಲ್ಲೊಂದು ಗ್ರಾಮದಲ್ಲಿ ಸ್ವಾಮೀಜಿಯಿಂದ ದಿಗ್ಬಂದನ ಪೂಜೆ ನಡೆಯುತ್ತಿದೆ. ರಾತ್ರಿ 10 ರಿಂದ 11 ರವರೆಗೆ ಪೂಜೆ ನಡೆಯುತ್ತಿದ್ದು, ಬಳಿಕ ಸ್ವಾಮೀಜಿ ಬೆತ್ತ ಹಿಡಿದು ಗ್ರಾಮದ ಸುತ್ತಲೂ ಓಂ ನಮಃ ಶಿವಾಯ ನಾಮ ಸ್ಮರಣೆಯೊಂದಿಗೆ ಸುತ್ತಾಡಿ ದಿಗ್ಬಂಧನ ಮಾಡುತ್ತಿದ್ದಾರೆ.

    ಧಾರವಾಡ ಜಿಲ್ಲೆಯ ಅಣ್ಣಿಗೇರಿ ತಾಲೂಕಿನ ಇಬ್ರಾಹಿಂಪುರದಲ್ಲಿ ಕಳೆದ ಮೂರು ದಿನಗಳಿಂದ ದಿಗ್ಬಂಧನ ಪೂಜೆ ನಡೆಯುತ್ತಿದೆ. ಇಬ್ರಾಹಿಂಪುರದಲ್ಲಿ ಬೂದಿಸ್ವಾಮಿ ಹಾಗೂ ರುದ್ರಮುನಿ ಸ್ವಾಮಿ ಎಂಬ ಎರಡು ಮಠಗಳಿವೆ. ಇವುಗಳಲ್ಲಿ ಶಿವಯೋಗಿ ಹಿರೇಮಠ ಸ್ವಾಮೀಜಿ ಪೂಜೆ ಸಲ್ಲಿಸುತ್ತಿದ್ದಾರೆ. ಮಠದ ಗರ್ಭಗುಡಿಯಲ್ಲಿ ರಾತ್ರಿ ವೇಳೆ ಬೆತ್ತಕ್ಕೆ ಪೂಜೆ ಸಲ್ಲಿಸಲಾಗುತ್ತದೆ. ಬಳಿಕ ಅದನ್ನು ಹಿಡಿದು ಶಿವಯೋಗಿ ಸ್ವಾಮೀಜಿ, `ಓಂ ನಮಃ ಶಿವಾಯ’ ಎಂದು ನಾಮ ಸ್ಮರಣೆ ಮಾಡುತ್ತಾ ಊರೆಲ್ಲ ಸುತ್ತು ಹಾಕುತ್ತಾರೆ.

    ಹೀಗೆ ಸುತ್ತು ಹಾಕುವುದರಿಂದ ಊರಲ್ಲಿ ಕೊರೊನಾ ಬಾರದಂತೆ ದಿಗ್ಬಂಧನ ಹಾಕಿದಂತೆ. ಇದರಿಂದ ಕೊರೊನಾ ಸೇರಿದಂತೆ ಯಾವುದೇ ಸಾಂಕ್ರಾಮಿಕ ರೋಗಗಳು ನಮ್ಮೂರಿನತ್ತ ಹಾಯುವುದಿಲ್ಲ ಎಂಬ ನಂಬಿಕೆ ಗ್ರಾಮಸ್ಥರು ಮತ್ತು ಶ್ರೀಗಳದ್ದಾಗಿದೆ. 5 ದಿನಗಳ ದಿಗ್ಬಂಧನ ಪೂಜೆಯಿದಾಗಿದ್ದು, ಈಗಾಗಲೇ ಮೂರು ದಿನಗಳ ಪೂಜೆ ಮುಗಿದಿದೆ. ಇನ್ನೆರಡು ದಿನ ಪೂಜೆ ಮಾಡುವುದು ಬಾಕಿಯಿದ್ದು, ಗುರುವಾರ ಮುಕ್ತಾಯವಾಗುತ್ತದೆ. ಕಳೆದ ವರ್ಷ ಕೊರೊನಾ ಮೊದಲ ಅಲೆಯ ವೇಳೆಯಲ್ಲೂ ಈ ರೀತಿ ಪೂಜೆ ಮಾಡಿ ದಿಗ್ಬಂಧನ ಹಾಕಲಾಗಿತ್ತು. ಆಗ ಹಾವಳಿ ಕಡಿಮೆಯಾಗಿತ್ತು ಎಂದು ಗ್ರಾಮಸ್ಥರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

    ಮೊದಲು ಇತ್ತು: ದಶಕಗಳ ಹಿಂದೆ ಬೂದಿಸ್ವಾಮಿ ಹಾಗೂ ರುದ್ರಮುನಿ ಸ್ವಾಮಿ ಎಂಬ ಇಬ್ಬರು ಈ ಊರಲ್ಲಿ ತಪಸ್ಸು ಮಾಡಿ ನೆಲೆ ನಿಂತಿದ್ದರಂತೆ. ಆಗ ಊರೆಲ್ಲೆಲ್ಲ ಪ್ಲೇಗ್ ಹಾವಳಿ ಇತ್ತು ಎನ್ನಲಾಗುತ್ತಿದ್ದು, ಇಬ್ರಾಹಿಂಪುರದಲ್ಲಿ ಈ ಮಹಾಮಾರಿ ಕಾಲಿಡಬಾರದೆಂದು ಈ ರೀತಿ ದಿಗ್ಬಂಧನ ಪೂಜೆ ಪ್ರತಿವರ್ಷ ಮಾಡುತ್ತಿದ್ದರಂತೆ. ಇದೀಗ ಕೊರೊನಾ ಹಾವಳಿ ಮಿತಿಮೀರಿದೆ. ಜೊತೆಗೆ ಕಳೆದ ವಾರ ಈ ಗ್ರಾಮದಲ್ಲಿ ಒಂದೇ ದಿನ ಏಳು ಜನರು ಸಾವಿಗೀಡಾಗಿದ್ದಾರೆ. (ಇಬ್ಬರು ಕೊರೊನಾದಿಂದ ಮೃತಪಟ್ಟರೆ, ಇನ್ನುಳಿದ ಐವರು ಅನ್ಯ ಕಾರಣಗಳಿಂದ ಮೃತಪಟ್ಟಿದ್ದಾರೆ) ಈ ಕಾರಣದಿಂದ ಗ್ರಾಮಸ್ಥರೆಲ್ಲರೂ ಚರ್ಚಿಸಿ, ಹಿಂದೆ ಹಿರಿಯ ಸ್ವಾಮೀಜಿಗಳು ಮಾಡಿದಂತೆ ದಿಗ್ಬಂಧನ ಪೂಜೆ ಮಾಡಲು ನಿರ್ಧರಿಸಿ, ಈಗಿನ ಸ್ವಾಮೀಜಿ ಶಿವಯೋಗಿ ಹಿರೇಮಠರವರಿಗೆ ಹೇಳಿ ಅವರಿಂದ ಪೂಜೆ ಮಾಡಿಸುತ್ತಿದ್ದಾರೆ.

    ಒಟ್ಟಿನಲ್ಲಿ ಇಬ್ರಾಹಿಂಪುರದಲ್ಲಿ ದಿಗ್ಬಂಧನ ಪೂಜೆ ಮಾಡುತ್ತಿರುವುದು ಜಿಲ್ಲೆಯಲ್ಲಿ ಚರ್ಚೆಗೆ ಗ್ರಾಸವನ್ನುಂಟು ಮಾಡಿರುವುದಂತೂ ಸತ್ಯ. ಈ ಪೂಜೆಯಲ್ಲಿ ಗ್ರಾಮದ ಶಿವಾನಂದ ಮಠದ ಶ್ರೀ ದಯಾನಂದ ಸ್ವಾಮಿಗಳು ಹಾಗೂ ಗ್ರಾಮ ಪಂಚಾಯಿತಿ ಅಧ್ಯಕ್ಷ ಶಿವಾನಂದ ಚಿಪ್ಪಾಡಿ, ಹೇಮಣ್ಣ ಬಡಿಗೇರ ಸೇರಿದಂತೆ ಮತ್ತಿತರ ಗ್ರಾಮಸ್ಥರು ಪಾಲ್ಗೊಂಡಿದ್ದರು.

    ಗ್ರಾಮಸ್ಥರು ಹೇಳುವುತ್ತಿರುವುದೇನು?
    ಗ್ರಾಮದಲ್ಲಿ ಒಂದೇ ದಿನಕ್ಕೆ 7 ಜನ ಮೃತಪಟ್ಟಿದ್ದಾರೆ. ಇದರಿಂದ ದೊಡ್ಡ ಆಘಾತವೇ ಉಂಟಾಗಿತ್ತು. ಈ ಹಿಂದೆ ಪ್ಲೇಗ್ ಬಂದಾಗ ಮಾಡುತ್ತಿದ್ದ ದಿಗ್ಬಂಧನ ಪೂಜೆಯನ್ನು ಗ್ರಾಮಸ್ಥರೆಲ್ಲರೂ ಸೇರಿ ಮಾಡಲು ನಿರ್ಧರಿಸಿ ಶ್ರೀಗಳ ಸನ್ನಿಧಾನದಲ್ಲಿ ಕೋರಿದೆವು. ಕೊರೊನಾ ಸೇರಿ ಯಾವುದೇ ರೋಗ ಗ್ರಾಮಕ್ಕೆ ಬರಬಾರದೆಂಬ ಉದ್ದೇಶದಿಂದ ನಿರ್ಣಯ ತೆಗೆದುಕೊಂಡಿದ್ದೇವೆ. ಇದರಿಂದ ಗ್ರಾಮಕ್ಕೆ ಒಳ್ಳೆಯದೇ ಆಗುತ್ತದೆ ಎಂದು ಗ್ರಾಮದ ಹಿರಿಯರು ಅಂತಿದ್ದಾರೆ.

  • ಲಾಕ್‍ಡೌನ್ ನಿಯಮ ಉಲ್ಲಂಘಿಸಿದ ಬಿಜೆಪಿ ಶಾಸಕ – ದೇವಸ್ಥಾನ ಬಾಗಿಲು ತೆರೆಸಿ ಪತ್ನಿ ಸಮೇತ ಪೂಜೆ

    ಲಾಕ್‍ಡೌನ್ ನಿಯಮ ಉಲ್ಲಂಘಿಸಿದ ಬಿಜೆಪಿ ಶಾಸಕ – ದೇವಸ್ಥಾನ ಬಾಗಿಲು ತೆರೆಸಿ ಪತ್ನಿ ಸಮೇತ ಪೂಜೆ

    ದಾವಣಗೆರೆ: ರಾಜ್ಯದಲ್ಲಿ ಮಹಾಮಾರಿ ಕೊರೊನಾ ವೈರಸ್ ತಾಂಡವವಾಡುತ್ತಿದ್ದು, ಚೈನ್ ಲಿಂಕ್ ಕತ್ತರಿಸುವ ಸಲುವಾಗಿ ರಾಜ್ಯಾದ್ಯಂತ ಲಾಕ್ ಡೌನ್ ಘೋಷಣೆ ಮಾಡಲಾಗಿದೆ. ಈ ಮಧ್ಯೆ ಬಿಜೆಪಿ ಶಾಸಕರೊಬ್ಬರು ಕೊರೊನಾ ನಿಯಮಗಳನ್ನು ಗಾಳಿಗೆ ತೂರಿದ್ದಾರೆ.

    ಜಗಳೂರು ಬಿಜೆಪಿ ಶಾಸಕ ಎಸ್ ವ್ಹಿ ರಾಮಚಂದ್ರಪ್ಪ ಅವರು ಕೋವಿಡ್ ನಿಯಮ ಉಲ್ಲಂಘನೆ ಮಾಡಿದ್ದಾರೆ. ದೇವಸ್ಥಾನಗಳು ಬಂದ್ ಇದ್ದರು ಕೂಡ ದೇವಸ್ಥಾನದ ಬಾಗಿಲು ತೆರೆಸಿ ವಿಶೇಷ ಪೂಜೆ ಅಲ್ಲಿಸಿದ್ದು, ಇದೀಗ ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದೆ.

    ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ಮಾಡ್ರಳ್ಳಿ ಗ್ರಾಮದ ಚೌಡೇಶ್ವರಿ ದೇವಿಗೆ ಶಾಸಕರು ಈ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಪತ್ನಿ ಇಂದಿರಾ ರಾಮಚಂದ್ರಪ್ಪ, ಪುತ್ರ ಅಜಯೇಂದ್ರ ಸಿಂಹ ಸೇರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ್ದಾರೆ.

    ಒಟ್ಟಿನಲ್ಲಿ ಕೋವಿಡ್ ನಿಂದ ದೇವಸ್ಥಾನಗಳು ಬಂದ್ ಆಗಿದ್ರೂ ಕೂಡ ಶಾಸಕರು ಬಾಗಿಲು ತೆರೆಸಿ ವಿಶೇಷ ಪೂಜೆ ಮಾಡಿರುವುದು ಜನಸಾಮಾನ್ಯರಿಗೊಂದು ನ್ಯಾಯ, ಜನಪ್ರತಿನಿಧಿಗಳಿಗೊಂದು ನ್ಯಾಯವಾ ಅನ್ನೋ ಪ್ರಶ್ನೆ ಮೂಡುವವಂತಾಗಿದೆ.

  • ಕೊರೊನಾ ಮನೆಗೆ ಪ್ರವೇಶಿಸದಂತೆ ಚಾಮರಾಜನಗರ ಜನತೆಯಿಂದ ವಿಶೇಷ ಪೂಜೆ

    ಕೊರೊನಾ ಮನೆಗೆ ಪ್ರವೇಶಿಸದಂತೆ ಚಾಮರಾಜನಗರ ಜನತೆಯಿಂದ ವಿಶೇಷ ಪೂಜೆ

    ಚಾಮರಾಜನಗರ: ಮಹಾಮಾರಿ ಕೊರೊನಾ ವೈರಸ್ ರಾಜ್ಯದಲ್ಲಿ ತಾಂಡವವಾಡುತ್ತಿದ್ದು, ಇದೀಗ ಚಾಮರಾಜನಗರದ ಜನತೆ ದೇವರ ಮೊರೆ ಹೋಗಿದ್ದಾರೆ.

    ಹೌದು. ಕೊರೊನಾ ಹೆಮ್ಮಾರಿ ಪ್ರವೇಶ ಮಾಡಬಾರದೆಂದು ಹಲವೆಡೆ ಪೂಜೆ ಮಾಡಲಾಗುತ್ತಿದೆ. ಮನೆ ಮನೆ ಹಾಗೂ ಬೀದಿಗಳ ಸ್ವಚ್ಛತೆ ಮಾಡುತ್ತಿದ್ದು, ಮನೆಗಳ ಮುಂದೆ ಸಗಣಿಯಿಂದ ಸಾರಿಸಿ ರಂಗೋಲಿ ಹಾಕುತ್ತಾರೆ. ಈ ರಂಗೋಲಿ ಮಧ್ಯೆ ಹಳ್ಳ ತೆಗೆದು ಸುತ್ತಲೂ ಬಲಿ ಅನ್ನ ಹಾಕಿ, ಹಳ್ಳಕ್ಕೆ ಕೆಂಡ ಸುರಿದು ಧೂಪ ಹಾಕಿ ದೇವರಿಗೆ ಪೂಜೆ ನಡೆಸಿದ್ದಾರೆ.

    ಮಾರಿಯರು, ಮಸಣಿಯರು ಪೀಡೆ ಪಿಶಾಚಿ ಬೀದಿಗೆ ನುಗ್ಗಬಾರದು, ಮನೆಯೊಳಗೆ ಬರಬಾರದು. ಸೋಂಕು ಒಬ್ಬರಿಗೊಬ್ಬರಿಗೆ ತಗುಲಬಾರದು ಎಂದು ನಿವಾಸಿಗಳು ದೇವರಲ್ಲಿ ಪ್ರಾರ್ಥನೆ ಮಾಡಿದ್ದಾರೆ. 12 ದಿನಗಳ ಕಾಲ ಪ್ರತಿ ರಾತ್ರಿ ಹೀಗೆ ಪೂಜೆ ಮುಂದುವರಿಸಲು ನಿರ್ಧಾರ ಮಾಡಿದ್ದಾರೆ.

    ಚಾಮರಾಜನಗರ ಪಟ್ಟಣ ಪ್ರದೇಶ ಹಾಗೂ ಗ್ರಾಮೀಣ ಪ್ರದೇಶಗಳ ಹಲವೆಡೆ ಇದೇ ರೀತಿಯ ಪೂಜೆಗಳನ್ನು ನಡೆಸಲಾಗುತ್ತಿದೆ. ಕೆಲವೆಡೆ ಕಬ್ಬಿಣದ ಸರಳು ನೆಟ್ಟು, ಬೇವಿನ ಸೊಪ್ಪು ಹಾಕಿ ಧೂಪ ಹಾಕಿ ಪೂಜೆ ಮಾಡಿದರೆ, ಇನ್ನೂ ಕೆಲವೆಡೆ ಪೂಜೆಗೆ ತೋರಿಸುವ ಶ್ರದ್ಧೆ, ಅಸಕ್ತಿ ಯನ್ನು ಕೊರೊನಾ ನಿಯಮಗಳ ಪಾಲನೆಗೆ ಜನ ತೋರುತ್ತಿಲ್ಲ.

    ಒಟ್ಟಿನಲ್ಲಿ ಜನ ಮೂಢನಂಬಿಕೆಗೆ ಒತ್ತು ನೀಡುವಷ್ಟು ಕೊರೊನಾ ಜಾಗೃತಿಗೆ ನೀಡುತ್ತಿಲ್ಲ.

  • ಕೊರೊನಾ ನಿವಾರಣೆಗಾಗಿ ದೇವಾಲಯಗಳಲ್ಲಿ ವಿಶೇಷ ಪೂಜೆ

    ಕೊರೊನಾ ನಿವಾರಣೆಗಾಗಿ ದೇವಾಲಯಗಳಲ್ಲಿ ವಿಶೇಷ ಪೂಜೆ

    ಬೆಂಗಳೂರು: ಮುನೇಶ್ವರ ಸ್ವಾಮಿ ಟ್ರಸ್ಟ್ ವತಿಯಿಂದ ಕೊರೊನಾ ಜಾಗೃತಿಗೆ ಮುಂದಾಗಿದ್ದು, ಧಾರ್ಮಿಕ ಕಾರ್ಯಕ್ರಮದಲ್ಲಿ ಸಾಮಾಜಿಕ ಕೆಲಸಕ್ಕೆ ಒತ್ತು ನೀಡಿದ್ದಾರೆ. ಎರಡನೇ ಅಲೆಯಲ್ಲಿ ಕೊರೊನಾ ಸೋಂಕು ಸಂಪೂರ್ಣವಾಗಿ ನಿವಾರಣೆಯಾಗಲು ಮುನೇಶ್ವರ ಸ್ವಾಮಿ ಹಾಗೂ ಚೌಡೇಶ್ವರಿ ದೇವಿಯಲ್ಲಿ ವಿಶೇಷವಾಗಿ ಪೂಜೆಯನ್ನು ಸಲ್ಲಿಸಿ ಲೋಕಕಲ್ಯಾಣಕ್ಕಾಗಿ ಧಾರ್ಮಿಕ ಕಾರ್ಯವನ್ನು ನಡೆಸಲಾಯಿತು.

    ಈ ಸಮಯದಲ್ಲಿ ಹಗಲಿರುಳು ಶ್ರಮಿಸುತ್ತಿರುವ ಆಶಾ ಕಾರ್ಯಕರ್ತರಿಗೆ ಗೌರವ ಸಮರ್ಪಣೆ ಅರ್ಪಿಸಲಾಯಿತು. ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ಹೊಸಪಾಳ್ಯ ಗ್ರಾಮದಲ್ಲಿ ಸರಳ ರೀತಿಯಲ್ಲಿ ಕಾರ್ಯಕ್ರಮ ಆಯೋಜಿಸಿದ್ದರು. ಕಾರ್ಯಕ್ರಮಕ್ಕೆ ಬಸವಣ್ಣ ದೇವರ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿ, ರಮಾಣನಂದ ಸ್ವಾಮೀಜಿ ಜ್ಯೋತಿ ಬೆಳಗುವ ಮೂಲಕ ಚಾಲನೆ ನೀಡಿದರು.

    ಕೊರೊನಾ ಸಮಯದಲ್ಲಿ ಆನ್ ಲೈನ್ ವಿದ್ಯಾಭ್ಯಾಸದಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಗೌರವ ಸನ್ಮಾನ ಮಾಡಲಾಯಿತು. ಆಡಳಿತ ಮಂಡಳಿಯಿಂದ ಈಶ್ವರ ಸ್ವರೂಪಿ ಶ್ರೀ ಮುನೇಶ್ವರ ಸ್ವಾಮಿ ಹಾಗೂ ಶ್ರೀ ಚೌಡೇಶ್ವರಿ ದೇವಾಲಯದ 14 ವರ್ಷದ ವಾರ್ಷಿಕೋತ್ಸವ ಜರುಗಿತು.

    ಈ ವೇಳೆಯಲ್ಲಿ ಎಲ್ಲರಿಗೂ ಮಾಸ್ಕ್ ಸ್ಯಾನಿಟೈಸರ್ ನೀಡಿ ಕೊರೊನಾ ಮಹಾಮಾರಿಯ ಬಗ್ಗೆ ವಿದ್ಯಾರ್ಥಿಗಳಲ್ಲಿ ಹಾಗೂ ಗ್ರಾಮಸ್ಥರಲ್ಲಿ ಅರಿವು ಹಾಗೂ ಜಾಗೃತಿ ಮೂಡಿಸಿದ್ದು ವಿಶೇಷವಾಗಿತ್ತು. ಈ ವೇಳೆ ಭವಾನಿ ಶಂಕರ್ ಮಂಜುನಾಥ್, ಸಿಎಂ ಗೌಡ, ಹನುಮಂತರಾಜು, ಪಂಚಾಯತಿ ಅಧ್ಯಕ್ಷೆ ಹಾಗೂ ಸದಸ್ಯರು ಉಪಸ್ಥಿತರಿದ್ದರು.