Tag: poojari

  • ದೇವರಿಗೆ ಕೆಂಡವೇ ನೈವೇದ್ಯ – ಒಂಚೂರೂ ಸುಡಲ್ಲ ಮೈ

    ದೇವರಿಗೆ ಕೆಂಡವೇ ನೈವೇದ್ಯ – ಒಂಚೂರೂ ಸುಡಲ್ಲ ಮೈ

    ಚಾಮರಾಜನಗರ: ಜಾತ್ರೆ ಅಂದರೆ ಅಲ್ಲಿ ದೇವರಿಗೆ ನೈವೇದ್ಯ, ಜನಸ್ತೋಮ, ಇಷ್ಟಾರ್ಥ ಸಿದ್ದಿಗಾಗಿ ಪ್ರಾರ್ಥನೆ ಎಂಬ ಕಲ್ಪನೆ ಮೂಡುತ್ತದೆ. ಆದರೆ ಗಡಿ ಜಿಲ್ಲೆಯ ಊರೊಂದರಲ್ಲಿ ನಡೆಯುವ ಜಾತ್ರೆ ವಿಚಿತ್ರ. ಅದು ವಿಜ್ಞಾನಕ್ಕೂ ಸವಾಲು ಎಸೆಯುವಂತಿದೆ.

    ಹೌದು ಚಾಮರಾಜನಗರ ತಾಲೂಕು ತೆಳ್ಳನೂರು ಗ್ರಾಮದ ಉರುಕಾತಮ್ಮ ಜಾತ್ರೆ ಹಲವು ವೈಶಿಷ್ಟ್ಯತೆಯನ್ನು ಒಳಗೊಂಡಿದೆ. ಪೂಜಾರಿ ಮೈಮೇಲೆ ಕೆಂಡ ಸುರಿಯಲಾಗುತ್ತದೆ. ಸುಮಾರು ನೂರು ವರ್ಷಗಳಿಂದಲೂ ಈ ಆಚರಣೆ ಊರಲ್ಲಿ ಚಾಲ್ತಿಯಲ್ಲಿದೆ. ಕೊಂಡೋತ್ಸವದ ದಿನ ಬೆಳಗ್ಗೆಯೇ ಬೃಹತ್ ಗಾತ್ರದ ಸೌದೆಗಳನ್ನು ಒಟ್ಟುಗೂಡಿಸಿ ಸುಡಲಾಗುತ್ತದೆ. ಸಂಜೆ ಆರು ಗಂಟೆಗೆ ಪ್ರಾರಂಭವಾಗುವ ಕೊಂಡೋತ್ಸವದಲ್ಲಿ ಪೂಜಾರಿ ಮೈಮೇಲೆ ಸುಡುವ ಕೆಂಡ ಸುರಿಯಲಾಗುತ್ತದೆ. ಇದನ್ನೂ ಓದಿ: ಉಡುಪಿಯಲ್ಲಿ ಜೆಸಿಬಿ ಘರ್ಜನೆ – SDPI ಜಿಲ್ಲಾಧ್ಯಕ್ಷನ ಹೋಟೆಲ್ ತೆರವು

    ಈ ಗ್ರಾಮ ದೇವತೆ ಮತ್ತೊಂದು ವಿಶಿಷ್ಟತೆಗೆ ಸಾಕ್ಷಿಯಾಗಿದೆ. ಈ ಊರಲ್ಲಿ ಹಾವು ಕಚ್ಚಿ ಸಾವನ್ನಪ್ಪಿರುವ ಉದಾಹರಣೆ ಇಲ್ಲ. ಎಂತಹದೇ ವಿಷ ಸರ್ಪ ಕಚ್ಚಿದರೂ ಎಷ್ಟೇ ದೂರವಿದ್ದರೂ ಸರಿ ತೆಳ್ಳನೂರಿನ ಉರುಕಾತಮ್ಮ ದೇವಸ್ಥಾನಕ್ಕೆ ಬಂದು ಪೂಜೆ ಸಲ್ಲಿಸಿದರೆ ವ್ಯಕ್ತಿ ಬದುಕುಳಿಯುತ್ತಾನೆ ಎಂಬ ಪ್ರತೀತಿ ಇದೆ.

    ಆಧುನಿಕ ದಿನಗಳಲ್ಲಿ ಈ ತರಹದ ಆಚರಣೆಗಳೆಲ್ಲ ಅವೈಜ್ಞಾನಿಕ ಅಂತಾರೆ. ಮೈಮೇಲೆ ಕೆಂಡ ಸುರಿದುಕೊಂಡರೆ ಸುಡಲ್ವಾ ಎನ್ನುವ ಜಿಜ್ಞಾಸೆಯೂ ಹುಟ್ಟುತ್ತದೆ. ಆದರೆ ಇದೆಲ್ಲದರ ನಡುವೆಯೂ ಚಮತ್ಕಾರ ನಡೆಯುತ್ತಿರುವುದು ಆಶ್ಚರ್ಯ ಹುಟ್ಟಿಸುತ್ತದೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಹಿಜಬ್‍ಗಾಗಿ ಪ್ರತಿಭಟನೆ – ಪೊಲೀಸರಿಂದ ಕಾನೂನು ಕ್ರಮದ ಎಚ್ಚರಿಕೆ

  • 58 ವರ್ಷದ ಸಮಸ್ಯೆ ಬಗೆಹರಿಸಿದ ಬಸಪ್ಪ – ಪವಾಡ ನೋಡಿ ನಿಬ್ಬೆರಗಾದ ಜನರು

    58 ವರ್ಷದ ಸಮಸ್ಯೆ ಬಗೆಹರಿಸಿದ ಬಸಪ್ಪ – ಪವಾಡ ನೋಡಿ ನಿಬ್ಬೆರಗಾದ ಜನರು

    ಮಂಡ್ಯ: ಸಕ್ಕರೆ ನಾಡು ಮಂಡ್ಯ ಜಿಲ್ಲೆಯಲ್ಲಿ ಬಸಪ್ಪನ ಮತ್ತೊಂದು ಪವಾಡ ನಡೆದಿದ್ದು, 58 ವರ್ಷದ ಗುಡ್ಡಪ್ಪ ನೇಮಕ ವಿವಾದವನ್ನು ಬಸಪ್ಪ ಇತ್ಯರ್ಥ ಮಾಡಿದೆ.

    basappa

    ಮಂಡ್ಯ ತಾಲೂಕಿನ ದೊಡ್ಡಬಾನಸವಾಡಿ ಗ್ರಾಮದ ಮೂರು ದೇವಾಲಯಗಳಿಗೆ ಮೂವರು ಪೂಜಾರಿಗಳ ನೇಮಕ ಮಾಡುವ ಮೂಲಕ ಹೊನ್ನನಾಯಕನಹಳ್ಳಿ ಧರೆಗೆ ದೊಡ್ಡವರು ಮಂಟೇಸ್ವಾಮಿ ಬಸಪ್ಪ ಪವಾಡ ಮಾಡಿದೆ. ದೊಡ್ಡಬಾನಸವಾಡಿ ಗ್ರಾಮದ ಚೌಡೇಶ್ವರಿ, ಪಟ್ಟಲದಮ್ಮ, ಮಾರ್ಗೋನಹಳ್ಳಿ ಅಮ್ಮ ದೇಗುಲಕ್ಕೆ ಅರ್ಚಕರು ಇರಲಿಲ್ಲ. ಹೀಗಾಗಿ ಅರ್ಚಕರ ಆಯ್ಕೆಗೆ ಬಸಪ್ಪನನ್ನು ಗ್ರಾಮಕ್ಕೆ ಕರೆಸಲಾಯಿತು.

    ಪೂಜಾರಿ ಆಯ್ಕೆ ವಿವಾದದಿಂದ 58 ವರ್ಷದಿಂದ ಪಟ್ಟಲದಮ್ಮನ ಕೊಂಡ, ಬಂಡಿ ಹಬ್ಬಗಳು ನಿಂತಿದ್ದವು. ಪಟ್ಟಲದಮ್ಮ ದೇವಿಯ ಅರ್ಚಕರೊಬ್ಬರ ನಿಧನದ ಬಳಿಕ, ಇಲ್ಲಿ ಈ ಹಬ್ಬ ನಿಂತಿತ್ತು. ವಯೋಸಹಜವಾಗಿ 58 ವರ್ಷದ ಹಿಂದೆ ಅರ್ಚಕರು ಮೃತಪಟ್ಟಿದ್ದರು. ಬಳಿಕ ಮತ್ತಿಬ್ಬರು ಪೂಜಾರಿಗಳನ್ನು ಗ್ರಾಮಸ್ಥರು ನೇಮಿಸಿದ್ದರು. ಆದರೆ ಅರ್ಚಕರ ಮೈ ಮೇಲೆ ದೇವರು ಬಾರದಿದ್ದಕ್ಕೆ 58 ವರ್ಷಗಳಿಂದ ಪಟ್ಟಲದಮ್ಮನ ಹಬ್ಬ ನಿಂತಿತ್ತು. ಇದೀಗ ಮತ್ತೆ ಹಬ್ಬ ಆಚರಣೆ ಮಾಡಬೇಕೆಂದು ದೈವಸ್ವರೂಪಿ ಮಂಟೇಸ್ವಾಮಿ ಬಸಪ್ಪನ ಮೊರೆಗೆ ಗ್ರಾಮಸ್ಥರು ಹೋಗಿದ್ದರು. ಗ್ರಾಮಸ್ಥರ ಮನವಿ ಮೇರೆಗೆ ಊರಿಗೆ ಬಸಪ್ಪ ಬಂದಿತ್ತು. ಇದನ್ನೂ ಓದಿ: ಉತ್ತರ ಪ್ರದೇಶಕ್ಕೆ 3ನೇ ಹಂತ, ಪಂಜಾಬ್ ಮತದಾನ ಇಂದು – ಅಖಿಲೇಶ್ ಯಾದವ್ ಭವಿಷ್ಯ ನಿರ್ಧಾರ

    ಊರಿಗೆ ಬಂದ ನಂತರ ದೇವಸ್ಥಾನಗಳ ಅರ್ಚಕರ ನೇಮಕ ಪ್ರಕ್ರಿಯೆಯನ್ನು ಬಸಪ್ಪ ಆರಂಭಿಸಿತು. ಜನರ ಗುಂಪಿನಲ್ಲಿ ಕುಳಿತಿದ್ದ ಮೂವರನ್ನು ಬಸಪ್ಪ ಗುರುತಿಸಿತು. ಬಳಿಕ ಅವರನ್ನು ದೇಗುಲದ ಮುಂಭಾಗದ ಕೊಳಕ್ಕೆ ತಳ್ಳಿ ಅರ್ಚಕರ ಆಯ್ಕೆಯನ್ನು ಮಾಡಿತು. ಬಸಪ್ಪನ ಪವಾಡ ಕಣ್ಣಾರೆ ಕಂಡ ಗ್ರಾಮಸ್ಥರು ಮೂಕವಿಸ್ಮಿತರಾದರು. ಚೌಡೇಶ್ವರಿ ದೇಗುಲಕ್ಕೆ ಪ್ರತಾಪ್, ಪಟ್ಟಲದಮ್ಮ ದೇಗುಲಕ್ಕೆ ಮಂಜು, ಮಾರ್ಗೋನಹಳ್ಳಿ ಅಮ್ಮ ದೇಗುಲಕ್ಕೆ ಶಿವಣ್ಣ ಎಂಬುವರನ್ನು ಅರ್ಚಕರನ್ನಾಗಿ ಬಸಪ್ಪ ಆಯ್ಕೆ ಮಾಡಿತು. ಇದನ್ನೂ ಓದಿ: ಹಿಜಬ್ ಆಯ್ಕೆಯಲ್ಲ, ನಾವು ಪ್ರೀತಿಸುವ ದೇವರು ವಿಧಿಸಿರುವ ಶಿಷ್ಟಾಚಾರ: ಝೈರಾ ವಾಸಿಮ್

  • ಗಂಡ, ಮಗನನ್ನ ಪೂಜೆಗೆ ಕೂರಿಸಿ ಮಹಿಳೆ ಮೇಲೆ ಅತ್ಯಾಚಾರ ಯತ್ನ- ಪೂಜಾರಿಗೆ ಗ್ರಾಮಸ್ಥರಿಂದ ಧರ್ಮದೇಟು

    ಗಂಡ, ಮಗನನ್ನ ಪೂಜೆಗೆ ಕೂರಿಸಿ ಮಹಿಳೆ ಮೇಲೆ ಅತ್ಯಾಚಾರ ಯತ್ನ- ಪೂಜಾರಿಗೆ ಗ್ರಾಮಸ್ಥರಿಂದ ಧರ್ಮದೇಟು

    ತುಮಕೂರು: ಮನೆಯಲ್ಲಿ ಶಾಂತಿಯಿಲ್ಲ, ನೆಮ್ಮದಿಯಿಲ್ಲ, ಒಂದು ಪೂಜೆ ಮಾಡಿ ಅಂತ ಪೂಜಾರಿಯನ್ನ ಮನೆಗೆ ಕರೆಸಿದ್ರು. ಆದ್ರೆ ಅದೇ ಪೂಜಾರಿ ಮನೆಗೆ ಬಂದು ಪೂಜೆಗೆ ಕರೆಸಿದ್ದ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಸಿಕ್ಕಿಬಿದ್ದು ಗೂಸಾ ತಿಂದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

    ತುಮಕೂರು ಜಿಲ್ಲೆ ತುರುವೇಕೆರೆ ತಾಲೂಕಿನ ಅಕ್ಕಳಸಂದ್ರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ನಾಗಮಂಗಲ ತಾಲೂಕಿನ ಮುಳಕಟ್ಟಮ್ಮ ದೇವಾಲಯದ ಸ್ವಯಂ ಘೋಷಿತ ಪೂಜಾರಿ, ಮಹೇಶ್ ಪೂಜಾರ್ ಅತ್ಯಾಚಾರಕ್ಕೆ ಯತ್ನಿಸಿದ ಆರೋಪಿ. ಕಳೆದ ಶುಕ್ರವಾರ ಅಕ್ಕಳಸಂದ್ರ ಗ್ರಾಮದ ಗೃಹಿಣಿ ಮನೆಗೆ ಪೂಜಾರಿ ಕಟ್ಟಲೇ ಮಾಡಲು ಬಂದಿದ್ದ. ಮೊದಲು ಮಹಿಳೆಯ ಗಂಡ ಹಾಗೂ ಮಗನನ್ನ ಕರ್ಪೂರ ಬೆಳಗುತ್ತಾ ಕುಳಿತಿರಬೇಕು ಅಂತ ಕೂರಿಸಿದ್ದಾನೆ. ನಂತರ ಗೃಹಿಣಿಗೆ ಕಟ್ಟಲೆ ಪೂಜೆ ಮಾಡಿಸೋಕೆ ಸ್ನಾನ ಮಾಡ್ಬೇಕು, ನಾನೇ ನೀರು ಹಾಕ್ಬೇಕು ಅಂತ ಕರೆದುಕೊಂಡು ಹೋಗಿ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ.

    ವಿಷಯ ತಿಳಿಯುತ್ತಿದ್ದಂತೆ ಜೋರು ಗಲಾಟೆ ಆಗಿದೆ. ಆಮೇಲೆ ಊರಿನ ಜನರೆಲ್ಲಾ ಸೇರಿ ಪೂಜಾರಿ ಮಹೇಶ್‍ಗೆ ಚೆನ್ನಾಗಿ ಥಳಿಸಿದ್ದಾರೆ. ಕೊನೆಗೆ ಗ್ರಾಮದಲ್ಲಿ ಪಂಚಾಯ್ತಿ ಮಾಡಿ ಆರೋಪಿ ಪೂಜಾರಿಗೆ 5 ಲಕ್ಷ ದಂಡವನ್ನೂ ವಿಧಿಸಿದ್ದಾರೆ. ಆದ್ರೆ ಚೆಕ್ ಕೊಟ್ಟು ಹೋಗಿದ್ದ ಆರೋಪಿ ಹಣ ಸಂದಾಯ ಮಾಡಿಲ್ಲ. ಹೀಗಾಗಿ ದಂಡಿನಶಿವರ ಪೊಲೀಸ್ ಠಾಣೆಯಲ್ಲಿ ಮಹೇಶ್ ವಿರುದ್ಧ ಅತ್ಯಾಚಾರ ಮತ್ತು ವಂಚನೆ ಆರೋಪದಡಿ ಪ್ರಕರಣ ದಾಖಲಾಗಿದೆ.