Tag: Poonch Attack

  • ಭಾರತೀಯ ಸೈನಿಕರ ಮೇಲೆ ದಾಳಿ – ಮೂವರು ಪಾಕಿಸ್ತಾನಿ ಉಗ್ರರ ಫೋಟೋ ರಿಲೀಸ್‌

    ಭಾರತೀಯ ಸೈನಿಕರ ಮೇಲೆ ದಾಳಿ – ಮೂವರು ಪಾಕಿಸ್ತಾನಿ ಉಗ್ರರ ಫೋಟೋ ರಿಲೀಸ್‌

    ಶ್ರೀನಗರ: ಇತ್ತೀಚೆಗೆ ಪೂಂಚ್‌ನಲ್ಲಿ (Poonch Attack) ಭಾರತೀಯ ವಾಯುಪಡೆಯ ಬೆಂಗಾವಲು ವಾಹನದ ಮೇಲೆ ನಡೆದ ದಾಳಿಗೆ ಹೊಣೆಗಾರರಾಗಿರುವ ಮೂವರು ಪಾಕಿಸ್ತಾನಿ ಭಯೋತ್ಪಾದಕರ ಫೋಟೋಗಳನ್ನು ಭಾರತೀಯ ವಾಯುಪಡೆಯ (IAF) ಅಧಿಕಾರಿಗಳು ಹಂಚಿಕೊಂಡಿದ್ದಾರೆ.

    ಸಿಸಿಟಿವಿಯಲ್ಲಿ ಸೆರೆಯಾದ ಭಯೋತ್ಪಾದಕರ (Terrorists) ಚಿತ್ರಗಳನ್ನು ಭದ್ರತಾ ಪಡೆ ಹಂಚಿಕೊಂಡಿದೆ. ಸಿಸಿಟಿವಿ ದೃಶ್ಯಾವಳಿಯಲ್ಲಿ (CCTV Footage) ಮೂವರು ಭಯೋತ್ಪಾದಕರು ಆಕ್ರಮಣಕಾರಿ ರೈಫಲ್‌ಗಳನ್ನು ಹಿಡಿದುಕೊಂಡು ಹೋಗುತ್ತಿರುವುದು ಕಂಡುಬಂದಿದೆ. ಯುಎಸ್‌ ನಿರ್ಮಿತ M4 ಮತ್ತು ರಷ್ಯಾ ನಿರ್ಮಿತ AK-47 ರೈಫಲ್‌ಗಳನ್ನು ಹಿಡಿದೊಯ್ಯುತ್ತಿರುವುದು ಕಂಡುಬಂದಿದೆ. ಅಲ್ಲದೇ ಇದು ಈ ವರ್ಷದಲ್ಲಿ ಮಿಲಿಟರಿಯನ್ನು ಗುರಿಯಾಗಿಸಿ ನಡೆಸಿದ ಪ್ರಮುಖ ದಾಳಿಯೂ ಆಗಿದೆ. ಕಳೆದ ವರ್ಷ ಸೈನಿಕರನ್ನ ಗುರಿಯಾಗಿಸಿ ಪ್ರಮುಖ ದಾಳಿಗಳು ನಡೆದಿದ್ದವು ಎಂದು ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಸೈನಿಕರ ಮೇಲೆ ದಾಳಿ – ಇಬ್ಬರು ಪಾಕ್ ಉಗ್ರರ ತಲೆಗೆ 20 ಲಕ್ಷ ಬಹುಮಾನ ಘೋಷಿಸಿದ IAF

    ಸಿಸಿಟಿವಿ ದೃಶ್ಯಾವಳಿಯಲ್ಲಿ ಸೆರೆಯಾದ ಮೂವರು ಪಾಕಿಸ್ತಾನದ ಉಗ್ರರು ಎಂದು ಅಧಿಕಾರಿಗಳು ಹೇಳಿದ್ದಾರೆ. ಪಾಕ್ ಸೇನೆಯ ಮಾಜಿ ಕಮಾಂಡೊ ಇಲಿಯಾಸ್, ಲಷ್ಕರ್ ಕಮಾಂಡರ್ ಅಬು ಹಮ್ಜಾ ಮತ್ತು ಹಾಡೂನ್ ಎಂದು ಗುರುತಿಸಲಾಗಿದೆ. ಭಯೋತ್ಪಾದಕ ಹಮ್ಜಾ 30-32 ವರ್ಷ ವಯಸ್ಸಿನವನು ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಅಂದಾಜಿಸಿರುವುದಾಗಿ ಉನ್ನತ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಭಾರತದಲ್ಲಿ ಪಿತ್ರಾರ್ಜಿತ ಆಸ್ತಿ ತೆರಿಗೆ ವಿಧಿಸಿದರೆ ಅಂಬಾನಿ, ಅದಾನಿಯಂಥ ಶ್ರೀಮಂತರು ದುಬೈಗೆ ಹೋಗ್ತಾರೆ: ಆರ್ಥಶಾಸ್ತ್ರಜ್ಞ

    ಕಳೆದ ವಾರವಷ್ಟೇ ಪೂಂಚ್‌ನ ಶಾಸಿತಾರ್ ಬಳಿ ಐಎಎಫ್ ಬೆಂಗಾವಲು ಪಡೆಯ ವಾಹನದ ಮೇಲೆ ಭಯೋತ್ಪಾದಕರು ದಾಳಿ ನಡೆಸಿದ್ದರು. ಈ ದಾಳಿಯಲ್ಲಿ ಐಎಎಫ್ ಕಾರ್ಪೋರಲ್ ವಿಕ್ಕಿ ಪಹಾಡೆ ಪ್ರಾಣ ಕಳೆದುಕೊಂಡಿದ್ದರು. ಅಲ್ಲದೇ ಘಟನೆಯಲ್ಲಿ ನಾಲ್ವರು ಸೈನಿಕರು ಗಾಯಗೊಂಡಿದ್ದರು. ದಾಳಿಯ ಬಳಿಕ ಶಾಸಿತಾರ್ ಪ್ರದೇಶದಲ್ಲಿ ಸಶಸ್ತ್ರ ಪಡೆಗಳು ಮಹತ್ವದ ಶೋಧಕಾರ್ಯ ನಡೆಸಿದವು. ಈ ಸಂಬಂಧ ತನಿಖೆ ನಡೆಸುತ್ತಿದ್ದ ಭದ್ರತಾಪಡೆಯ ಅಧಿಕಾರಿಗಳು ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರ ರೇಖಾಚಿತ್ರಗಳನ್ನೂ ಬಹಿರಂಗಪಡಿಸಿದ್ದರು. ಶಂಕಿತ ಉಗ್ರರ ಬಂಧನಕ್ಕೆ ನೆರವಾಗುವ ಯಾವುದೇ ಮಾಹಿತಿ ನೀಡಿದವರಿಗೆ 20 ಲಕ್ಷ ರೂ. ಬಹುಮಾನ ನೀಡುವುದಾಗಿ ಭದ್ರತಾ ಪಡೆ ಘೋಷಿಸಿತ್ತು.

  • ಐವರು ಸೈನಿಕರ ದುರ್ಮರಣದ ಹಿಂದೆ ಪಾಕ್‌ ಕೈವಾಡ – ಡ್ರೋನ್‌ ಮೂಲಕ ಶಸ್ತ್ರಾಸ್ತ್ರ ಪೂರೈಕೆ

    ಐವರು ಸೈನಿಕರ ದುರ್ಮರಣದ ಹಿಂದೆ ಪಾಕ್‌ ಕೈವಾಡ – ಡ್ರೋನ್‌ ಮೂಲಕ ಶಸ್ತ್ರಾಸ್ತ್ರ ಪೂರೈಕೆ

    – ತನಿಖೆ ವೇಳೆ ಸ್ಫೋಟಕ ಮಾಹಿತಿ ಬಯಲು

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu and Kashmir) ಪೂಂಚ್ ಜಿಲ್ಲೆಯಲ್ಲಿ ನಡೆದ ಉಗ್ರರ ದಾಳಿ (Poonch Attack) ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಫೋಟಕ ಮಾಹಿತಿ ಬೆಳಕಿಗೆ ಬಂದಿದೆ.

    ದಾಳಿಯ ಒಂದು ವಾರದ ನಂತರ ಭಯೋತ್ಪಾದಕರು ಪಾಕಿಸ್ತಾನದಿಂದ (Pakistan) ಡ್ರೋನ್‌ಗಳ ಮೂಲಕ ಶಸ್ತ್ರಾಸ್ತ್ರ (Weapons) ಪೂರೈಕೆ ಮಾಡಿಕೊಳ್ಳುತ್ತಿದ್ದಾರೆ. ಸುಮಾರು 12 ಮಂದಿ ಭಯೋತ್ಪಾದಕರು ಈ ಪ್ರದೇಶದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: ಸೈನಿಕರ ವಾಹನದ ಮೇಲೆ ದಾಳಿ ಪ್ರಕರಣ – 12 ಶಂಕಿತರು ವಶಕ್ಕೆ

    ಪೂಂಚ್‌ ಜಿಲ್ಲೆಯಲ್ಲಿ ಸೈನಿಕರು ಸಂಚರಿಸುತ್ತಿದ್ದ ವಾಹನದ ಮೇಲೆ ದಾಳಿ ನಡೆಸಿದಾಗ ಐವರು ಸೈನಿಕರು ಸಾವನ್ನಪ್ಪಿದರು. ಮರುದಿನ 12 ಜನ ಶಂಕಿತರನ್ನು ವಶಕ್ಕೆ ಪಡೆಯಲಾಗಿತ್ತು. ಬಳಿಕ ಘಟನೆಗೆ ಸಂಬಂಧಿಸಿದಂತೆ ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಮಹಾನಿರ್ದೇಶಕ ದಿಲ್ಬಾಗ್ ಸಿಂಗ್ ನೇತೃತ್ವದ ತಂಡ ಕಳೆದ ಒಂದು ವಾರದಿಂದಲೂ ಭಯೋತ್ಪಾದಕರನ್ನ ಸದೆಬಡಿಯಲು ಬಿಗಿ ಕಾರ್ಯಾಚರಣೆ ನಡೆಸುತ್ತಿದ್ದು, ಇದೀಗ ಮಾಹಿತಿ ಬೆಳಕಿಗೆ ಬಂದಿದೆ. ವಶಕ್ಕೆ ಪಡೆಯಲಾದ ಶಂಕಿತರ ಪೈಕಿ ನಾಸಿರ್‌ ಅಹ್ಮದ್‌ ಭಯೋತ್ಪಾದಕರಿಗೆ ಆಶ್ರಯ ನೀಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

    ನಾಸಿರ್‌ ಅಹ್ಮದ್‌ನನ್ನ ಮತ್ತಷ್ಟು ವಿಚಾರಣೆಗೆ ಒಳಪಡಿಸಿದಾಗ ಮತ್ತಷ್ಟು ಮಹತ್ವದ ಮಾಹಿತಿ ತಿಳಿದು ಬಂದಿದೆ. ಇದೇ ವೇಳೆ ಈ ಪ್ರದೇಶದಲ್ಲಿ ನೆಲೆಸಿರುವ ಭಯೋತ್ಪಾದಕರಿಗೆ ಪಾಕಿಸ್ತಾನದಿಂದ ಡ್ರೋನ್‌ ಮೂಲಕ ಶಸ್ತ್ರಾಸ್ತ್ರ ಪೂರೈಕೆಯಾಗುತ್ತಿದೆ ಅನ್ನೋದು ಗೊತ್ತಾಗಿದೆ. ಆದ್ರೆ ಅವರನ್ನು ಪತ್ತೆಹಚ್ಚಲು ಮಾಹಿತಿ ಸಹಾಯಕವಾಗಿಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: `ಮೋದಿ ವಿಷ ಸರ್ಪ, ಸೋನಿಯಾ ವಿಷಕನ್ಯೆ’ ಹೇಳಿಕೆ – ಖರ್ಗೆ, ಯತ್ನಾಳ್ ವಿರುದ್ಧ ದೂರು

    ಈಗಾಗಲೇ 12 ಜನ ಶಂಕಿತರನ್ನ ವಶಕ್ಕೆ ಪಡೆದಿದ್ದು, 200ಕ್ಕೂ ಹೆಚ್ಚು ಜನರನ್ನ ವಿಚಾರಣೆಗೆ ಕರೆಸಲಾಗಿದೆ. ದಾಳಿಕೋರರನ್ನ ಪತ್ತೆಹಚ್ಚಲು ಸತತ ಕಾರ್ಯಾಚರಣೆ ಮುಂದುವರಿದಿದೆ ಎಂದು ಮಾಹಿತಿ ನೀಡಿದ್ದಾರೆ.

    ಏನಿದು ಘಟನೆ?
    ಸೈನಿಕರು ಸಂಚರಿಸುತ್ತಿದ್ದ ವಾಹನದ ಮೇಲೆ ದಾಳಿ ನಡೆಸಿ ಐವರು ಸೈನಿಕರ ಸಾವನ್ನಪ್ಪಿದ್ದರು. ದಾಳಿಯ ನಂತರ ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಮಹಾನಿರ್ದೇಶಕ ದಿಲ್ಬಾಗ್ ಸಿಂಗ್ ಹಾಗೂ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಮುಖೇಶ್ ಸಿಂಗ್ ಅವರು ತನಿಖೆಯ ಮೇಲ್ವಿಚಾರಣೆಗಾಗಿ ನೆರೆಯ ರಜೌರಿ ಜಿಲ್ಲೆಯಲ್ಲಿ ಮೊಕ್ಕಾಂ ಹೂಡಿದ್ದರು. ಇಬ್ಬರು ಅಧಿಕಾರಿಗಳು ಸಹ ಸ್ಥಳಕ್ಕೆ ಭೇಟಿ ನೀಡಿದ್ದರು. ಡೆಪ್ಯುಟಿ ಇನ್ಸ್‍ಪೆಕ್ಟರ್ ಜನರಲ್ ಶ್ರೇಣಿಯ ಅಧಿಕಾರಿಯ ನೇತೃತ್ವದ ರಾಷ್ಟ್ರೀಯ ತನಿಖಾ ಸಂಸ್ಥೆಯ ತಂಡ ಸ್ಥಳದಲ್ಲಿ ಪರಿಶೀಲನೆ ನಡೆಸಿತ್ತು.

    ಪ್ರಾಥಮಿಕ ವರದಿಯಲ್ಲಿ ಸುಮಾರು ಐವರು ಭಯೋತ್ಪಾದಕರು ದಾಳಿಯಲ್ಲಿ ಭಾಗವಹಿಸಿದ ಬಗ್ಗೆ ಮಾಹಿತಿ ಇತ್ತು. ಸೇನಾ ಟ್ರಕ್ ಮೇಲೆ ಮೂರು ಕಡೆಗಳಿಂದ ದಾಳಿ ನಡೆದಿತ್ತು. ದಾಳಿಯ ನಂತರ, ಭಯೋತ್ಪಾದಕರು ಗ್ರೆನೇಡ್‍ಗಳು ಮತ್ತು ಬಾಂಬ್‍ಗಳನ್ನು ಬಳಸಿ ವಾಹನವನ್ನು ಸುಟ್ಟು ಹಾಕಿದ್ದರು. ದಾಳಿ ನಡೆಸಿದವರು ಒಂದು ವರ್ಷಕ್ಕೂ ಹೆಚ್ಚು ಕಾಲ ರಜೌರಿ ಮತ್ತು ಪೂಂಚ್‍ನಲ್ಲಿ ವಾಸವಾಗಿದ್ದರು. ಇಂತಹ ಕಠಿಣವಾದ ಭೂಪ್ರದೇಶದ ಬಗ್ಗೆ ಸಾಕಷ್ಟು ಜ್ಞಾನವನ್ನು ಹೊಂದಿದ್ದರು. ಪ್ರಸ್ತುತ ಈ ಪ್ರದೇಶದಲ್ಲಿ 3 ರಿಂದ 4 ಭಯೋತ್ಪಾದಕ ಗುಂಪುಗಳು ಸಕ್ರಿಯವಾಗಿವೆ ಎಂದು ತೀಳಿದು ಬಂದಿತ್ತು. ಜೈಶ್-ಎ-ಮೊಹಮ್ಮದ್‍ನ ಪೀಪಲ್ಸ್ ಆಂಟಿ-ಫ್ಯಾಸಿಸ್ಟ್ ಫ್ರಂಟ್ ನಿಷೇಧಿತ ಭಯೋತ್ಪಾದಕ ಗುಂಪು ದಾಳಿಯ ಹೊಣೆಯನ್ನು ಹೊತ್ತುಕೊಂಡಿತ್ತು. ಇದು ನಿಷೇಧಿತ ಲಷ್ಕರ್-ಎ-ತೊಯ್ಬಾ ಗುಂಪಿನ ಕೈವಾಡ ಎನ್ನಲಾದ ಮಾಹಿತಿ ಇದೆ ಎಂದೂ ತಿಳಿದುಬಂದಿತ್ತು.