Tag: Poor

  • ಗುಡಿಸಲಿಗೆ ಆಕಸ್ಮಿಕ ಬೆಂಕಿ- ಬೀದಿಗೆ ಬಿದ್ದ ಬಡವನ ಬಾಳು

    ಗುಡಿಸಲಿಗೆ ಆಕಸ್ಮಿಕ ಬೆಂಕಿ- ಬೀದಿಗೆ ಬಿದ್ದ ಬಡವನ ಬಾಳು

    ಬೆಳಗಾವಿ: ಹೊಲದಲ್ಲಿದ್ದ ಗುಡಿಸಲಿಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದ್ವಿಚಕ್ರ ವಾಹನ, ರಿಕ್ಷಾ ಸೇರಿದಂತೆ ಅಪಾರ ಪ್ರಮಾಣ ಹಾನಿಯಾದ ಘಟನೆ ಬೆಳಗಾವಿ ತಾಲೂಕಿನ ಗಜಪತಿ ಗ್ರಾಮದ ವ್ಯಾಪ್ತಿಯಲ್ಲಿ ನಡೆದಿದೆ.

    ಗಜಪತಿ ಗ್ರಾಮದ ಮಾರುತಿ ಕರಡಿ ತಮ್ಮ ಜಮೀನಲ್ಲಿ ಗುಡಿಸಲು ನಿರ್ಮಿಸಿಕೊಂಡು ವಾಸವಾಗಿದ್ದರು. ಆದರೆ ಸೋಮವಾರ ಗುಡಿಸಲಿಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಗೊಂಡು ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಬೆಂಕಿ ಕೆನ್ನಾಲಿಗೆ ಹೆಚ್ಚಾಗಿತ್ತು. ಇದರಿಂದಾಗಿ ಗುಡಿಸಿನಲ್ಲಿದ್ದ ದಿನನಿತ್ಯ ಉಪಯೋಗಿಸುವ ಬಟ್ಟೆ, ದವಸ ಧಾನ್ಯ, ಹಾಗೂ ಬಂಗಾರ, ನಗದು, ದ್ವಿಚಕ್ರ ವಾಹನ, ಒಂದು ರಿಕ್ಷಾ ಸೇರಿದಂತೆ ಅಪಾರ ವಸ್ತುಗಳು ಬೆಂಕಿಗೆ ಅಹುತಿಯಾಗಿವೆ.

    ಸುದ್ದಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳದ ಘಟನಾ ಸ್ಥಳಕ್ಕೆ ದೌಡಾಯಿಸಿದ್ದು, ಬೆಂಕಿಯನ್ನು ನಂದಿಸಿದ್ದಾರೆ. ಆದರೆ ಅಷ್ಟರಲ್ಲಿ ಗುಡಿಸಲು ಹಾಗೂ ಗುಡಿಸಲಿನಲ್ಲಿದ್ದ ಸಾಮಗ್ರಿಗಳು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದ್ದವು. ಈ ಸಂಬಂಧ ಹಿರೆಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಸ್ಲಂ ನಿವಾಸಿಗಳಿಗೆ ಬಂಪರ್ – 1 ಲಕ್ಷಕ್ಕೆ ವಸತಿ ಇಲಾಖೆಯಿಂದ ಮನೆ

    ಸ್ಲಂ ನಿವಾಸಿಗಳಿಗೆ ಬಂಪರ್ – 1 ಲಕ್ಷಕ್ಕೆ ವಸತಿ ಇಲಾಖೆಯಿಂದ ಮನೆ

    ಬೆಂಗಳೂರು: ಸೂರು ಇಲ್ಲದವರಿಗೆ ಸೂರು ಕಲ್ಪಿಸೋ ಅನೇಕ ಯೋಜನೆಗಳನ್ನು ಸರ್ಕಾರಗಳು ಜಾರಿಗೆ ತರುತ್ತಾನೆ ಇರ್ತವೆ. ಈಗ ಬಿಜೆಪಿ ಸರ್ಕಾರ ಇಂತಹದ್ದೇ ಹೊಸ ಯೋಜನೆ ಸ್ಲಂ ನಿವಾಸಿಗಳಿಗೆ ತರುತ್ತಿದ್ದು, ಒಂದು ಲಕ್ಷ ರೂಪಾಯಿಗೆ ಮನೆ ಕೊಡುವ ಕೆಲಸಕ್ಕೆ ಕೈ ಹಾಕಿದೆ.

    ವಿಧಾನಸೌಧದಲ್ಲಿ ಮಾತನಾಡಿದ ವಸತಿ ಸಚಿವ ಸೋಮಣ್ಣ, ಸರ್ಕಾರದ ಯೋಜನೆ ಬಗ್ಗೆ ತಿಳಿಸಿದರು. ಸ್ಲಂ ನಿವಾಸಿಗಳಿಗೆ ಕಡಿಮೆ ಬೆಲೆಗೆ ಮನೆ ಕೊಡಲಾಗುತ್ತದೆ. ಇನ್ನೆರಡು ವರ್ಷಗಳಲ್ಲಿ 50 ಸಾವಿರ ಮನೆಗಳನ್ನ ನಿರ್ಮಾಣ ಮಾಡುತ್ತೇವೆ. ಈ 50 ಸಾವಿರ ಮನೆಗಳನ್ನ ಸಂಪೂರ್ಣವಾಗಿ ಸ್ಲಂ ನಿವಾಸಿಗಳಿಗೆ ನೀಡುತ್ತೇವೆ ಅಂದರು. ಸದ್ಯ ಬೆಂಗಳೂರಿನಲ್ಲಿ 392 ಅಧಿಕೃತ ಸ್ಲಂಗಳಿವೆ. ನಿರ್ಮಾಣ ಮಾಡೋ ಹೊಸ ಮನೆಯನ್ನ ಸ್ಲಂ ನಿವಾಸಿಗಳಿಗೆ ಮಾತ್ರ ಕೊಡುವುದಾಗಿ ಅವರು ಸ್ಪಷ್ಟಪಡಿಸಿದರು.

    ಸ್ಲಂ ನಿವಾಸಿಗಳಿಗಾಗಿ ಈ ಮನೆಗಳ ನಿರ್ಮಾಣ ಮಾಡಲಾಗುತ್ತಿದೆ. ಸ್ಲಂ ಮುಕ್ತ ನಗರ ಮಾಡೋದು ನಮ್ಮ ಕನಸ್ಸು. ಹೀಗಾಗಿ ಈ ಕೆಲಸಕ್ಕೆ ಕೈ ಹಾಕಿದ್ದೇವೆ ಅಂತ ಸಚಿವರು ತಿಳಿಸಿದರು. ಕಡಿಮೆ ಬೆಲೆ ಅಂದ್ರೆ 1 ಲಕ್ಷಕ್ಕೆ ಮನೆ ಕೊಡ್ತೀವಿ. ಆ ಒಂದು ಲಕ್ಷಕ್ಕೂ ಬ್ಯಾಂಕ್ ನಿಂದ ಲೋನ್ ಕೊಡಿಸಲಾಗುತ್ತದೆ. ಲೋನ್ ನೀಡಲು ಅನೇಕ ಬ್ಯಾಂಕ್ ಗಳ ಜೊತೆ ಮಾತುಕತೆ ನಡೆಸಲಾಗುತ್ತಿದೆ ಅಂತ ಸಚಿವರು ತಿಳಿಸಿದರು.

  • ಬಡವರ ಹಣವನ್ನು ತಿಂದು ತೇಗಿದ ಪೋಸ್ಟ್ ಮ್ಯಾನ್

    ಬಡವರ ಹಣವನ್ನು ತಿಂದು ತೇಗಿದ ಪೋಸ್ಟ್ ಮ್ಯಾನ್

    ಹಾಸನ: ಕಷ್ಟ ಪಟ್ಟು ದುಡಿದ ಉಳಿತಾಯದ ಹಣವನ್ನು ಪೋಸ್ಟ್ ಮಾಸ್ಟರ್ ಓರ್ವ ದುರುಪಯೋಗ ಮಾಡಿಕೊಂಡಿರುವ ಆರೋಪ ಹಾಸನದ ಸಾಲಗಾಮೆ ಅಂಚೆ ಕಚೇರಿಯಲ್ಲಿ ಕೇಳಿಬಂದಿದೆ.

    ಹಲವಾರು ವರ್ಷಗಳಿಂದ ಸಾಲಗಾಮೆ ಗ್ರಾಮದಲ್ಲಿ ಅಂಚೆ ಕಚೇರಿ ಕಾರ್ಯನಿರ್ವಹಿಸುತ್ತಿದ್ದು 8 ಸಾವಿರ ಉಳಿತಾಯ ಖಾತೆಗಳಿವೆ. ಇಲ್ಲಿ ಅಂಚೆ ಅಧಿಕಾರಿಯಾಗಿ ಕಾರ್ಯನಿರ್ವಹಿಸುತಿದ್ದ ಚಂದ್ರು ಗ್ರಾಹಕರ ಹಣದಲ್ಲಿ ಅವ್ಯವಹಾರ ಮಾಡಿರುವ ಆರೋಪ ಕೇಳಿಬಂದಿದೆ.

    ಸದ್ಯ ಚಂದ್ರ ಬೇರೆ ಪೋಸ್ಟ್ ಆಫೀಸ್ ವರ್ಗವಾಗಿದ್ದು ನಂತರ ಈ ಅವ್ಯವಹಾರ ಬೆಳಕಿಗೆ ಬಂದಿದೆ. ತಮ್ಮ ಉಳಿತಾಯ ಖಾತೆಯ ಹಣವನ್ನು ಪಡೆಯಲು ಪೋಸ್ಟ್ ಆಫೀಸ್‍ಗೆ ಬಂದ ಗ್ರಾಹಕರಿಗೆ ಖಾತೆಯಲ್ಲಿ ಹಣವೇ ಇಲ್ಲದ್ದನ್ನು ನೋಡಿ ಶಾಕ್ ಆಗಿದ್ದಾರೆ.

    ಪಾಸ್ ಬುಕ್‍ನಲ್ಲಿ ಹಣ ಜಮಾವಣೆಯಾದ ಬಗ್ಗೆ ದಾಖಲೆ ಇದ್ದರೆ ಕಂಪ್ಯೂಟರ್ ನಲ್ಲಿ ಮಾತ್ರ ಹಣವನ್ನು ಸೇರಿಸಲಾಗಿಲ್ಲ. ಹೊಸದಾಗಿ ಬಂದಿರುವ ಅಂಚೆ ಅಧಿಕಾರಿ ಗ್ರಾಹಕರ ಹಣ ಕುರಿತು ಪರಿಶೀಲನೆ ನಡೆಸಿದಾಗ ಫೇಕ್ ಪಾಸ್ ಬಳಕೆ ಮಾಡಿರುವ ವಿಚಾರ ಬೆಳಕಿಗೆ ಬಂದಿದೆ.

    ಹಲವಾರು ವರ್ಷಗಳಿಂದ ಇದೇ ಅಂಚೆ ಕಚೇರಿಯಲ್ಲಿ ಕಾರ್ಯನಿರ್ವಹಿಸುತಿದ್ದ ಚಂದ್ರು ಹಲವು ಗ್ರಾಹಕರಿಗೆ ಇದೇ ರೀತಿ ಮಾಡಿರುವ ಶಂಕೆ ವ್ಯಕ್ತವಾಗಿದೆ. ಈಗಾಗಲೆ ಎಂಟು ಮಂದಿ ಗ್ರಾಹಕರ ಪಾಸ್‍ಬುಕ್‍ನಲ್ಲಿ ಎಂಟ್ರಿ ಮಾಡಲಾಗಿದ್ದು ಕಂಪ್ಯೂಟರ್ ನಲ್ಲಿ ಮಾತ್ರ ನೊಂದಣಿ ಆಗಿಲ್ಲ. ಸದ್ಯ ಅಂಚೆ ಇಲಾಖೆ ಹಿರಿಯ ಅಧಿಕಾರಿಗಳು ಭೇಟಿ ನೀಡಿದ್ದು ಪರಿಶೀಲನೆ ಮುಂದುವರಿಸಿದ್ದಾರೆ.

  • ದ್ವೇಷ ಇರೋದು ನನ್ನ ಮೇಲೆ, ಬಡವರ ಮೇಲೆ ಕೋಪ ಯಾಕೆ- ಬಿಎಸ್‍ವೈ ವಿರುದ್ಧ ಹೆಚ್‍ಡಿಕೆ ಕಿಡಿ

    ದ್ವೇಷ ಇರೋದು ನನ್ನ ಮೇಲೆ, ಬಡವರ ಮೇಲೆ ಕೋಪ ಯಾಕೆ- ಬಿಎಸ್‍ವೈ ವಿರುದ್ಧ ಹೆಚ್‍ಡಿಕೆ ಕಿಡಿ

    ಬೆಂಗಳೂರು: ಬಡವರ ಸ್ವಾಭಿಮಾನವನ್ನು ಕೆಣಕಿದ್ದೀರಿ ಯಡಿಯೂರಪ್ಪನವರೇ ಎಂದು ಟ್ವೀಟ್ ಮಾಡುವ ಮೂಲಕ ಸಿಎಂ ಬಿಎಸ್‍ವೈಗೆ ಮಾಜಿ ಸಿಎಂ ಕುಮಾರಸ್ವಾಮಿ ಟಾಂಗ್ ಕೊಟ್ಟಿದ್ದಾರೆ.

    ಕುಮಾರಸ್ವಾಮಿ ಅವರ ಸರ್ಕಾರ ಅವಧಿಯಲ್ಲಿ ಜಾರಿಯಾಗಿರುವ ಕೆಲ ಯೋಜನೆಗಳನ್ನು ಯಡಿಯೂರಪ್ಪ ಅವರ ಸರ್ಕಾರ ತಡೆಹಿಡಿಯಲು ಮುಂದಾಗಿದೆ. ಈ ವಿಚಾರಕ್ಕೆ ಟ್ವೀಟ್ ಮಾಡವ ಮೂಲಕ ಬೇಸರ ವ್ಯಕ್ತಪಡಿಸಿರುವ ಹೆಚ್‍ಡಿಕೆ ಬಡವರ ಬಂಧು ಯೋಜನೆಯನ್ನು ನಿರ್ಲಕ್ಷಿಸಿ ನೀವು ಬಡವರ ವಿರೋಧಿಯಾಗಿದ್ದೀರಿ ಎಂದು ಟ್ವೀಟ್ ಮಾಡಿ ಕಿಡಿಕಾರಿದ್ದಾರೆ. ಇದನ್ನು ಓದಿ: ರಾಜ್ಯ ಸರ್ಕಾರದ ಮಹತ್ವದ ‘ಬಡವರು ಬಂಧು’ ಯೋಜನೆಗೆ ಚಾಲನೆ

    ಇಂದು ಬೆಳಗ್ಗೆ ಸರಣಿ ಟ್ವೀಟ್ ಮಾಡಿರುವ ಹೆಚ್‍ಡಿಕೆ, ನಿಮಗೆ ದ್ವೇಷ ಇದ್ದದ್ದು ನನ್ನ ಮೇಲಲ್ಲವೇ ಯಡಿಯೂರಪ್ಪನವರೇ? ಆದರೆ ಬಡವರ ಮೇಲೇಕೆ ನಿಮ್ಮ ಕೋಪ? ಸೇಡಿನ ರಾಜಕೀಯ ಮಾಡುವುದಿಲ್ಲ ಎಂದು ಸದನದಲ್ಲಿ ಹೇಳಿದ್ದ ನೀವು ಅಧಿಕಾರ ವಹಿಸಿಕೊಂಡ ನಂತರ ನನ್ನ ಸರ್ಕಾರದ ಕಾರ್ಯಕ್ರಮಗಳ ವಿಷಯದಲ್ಲಿ ಮಾಡಿದ್ದೆಲ್ಲವೂ ಸೇಡಿನ ಕ್ರಮ. ‘ಬಡವರ ಬಂಧು’ ಯೋಜನೆಯನ್ನು ನಿರ್ಲಕ್ಷಿಸಿ ನೀವು ಬಡವರ ವಿರೋಧಿಯಾಗಿದ್ದೀರಿ ಎಂದು ಟ್ವೀಟ್ ಮಾಡಿದ್ದಾರೆ. ಇದನ್ನು ಓದಿ: ಬೀದಿ ಬದಿ ವ್ಯಾಪಾರಿಗಳಿಗೆ ಇನ್ಮುಂದೆ ಸಿಗಲಿದೆ ಬಡ್ಡಿಯೇ ಇಲ್ಲದ ದಿನದ ಸಾಲ: ಏನಿದು ಬಡವರ ಬಂಧು ಯೋಜನೆ? ಯಾರು ಅರ್ಹರು?

    ಆರ್ಥಿಕವಾಗಿ ಅಶಕ್ತರಾದವರು, ಸಣ್ಣ ವ್ಯಾಪಾರಿಗಳನ್ನು ಲೇವಾದೇವಿದಾರರ ವಿಷವರ್ತುಲದಿಂದ ಪಾರು ಮಾಡುವ ಸದುದ್ದೇಶದಿಂದ ಬಡವರ ಬಂಧು ಕಾರ್ಯಕ್ರಮವನ್ನು ಜಾರಿಗೆ ತರಲಾಗಿತ್ತು. ಅಶಕ್ತರು ಸ್ವಾಭಿಮಾನದ ಬದುಕು ಕಟ್ಟಿಕೊಳ್ಳಲು ನೆರವಾಗುತ್ತಿದ್ದ ಈ ಯೋಜನೆಯನ್ನು ಕೊಲ್ಲುತ್ತಿರುವ ನೀವು ಬಡವರ ಸ್ವಾಭಿಮಾನವನ್ನು ಕೆಣಕಿದ್ದೀರಿ ಯಡಿಯೂರಪ್ಪನವರೇ ಎಂದು ಹೇಳಿದ್ದಾರೆ.

    ಬಡವರ ಬಂಧು ಯೋಜನೆ ವಿಫಲವಾಗಬಾರದು. ಇದರಲ್ಲಿ ಜಾತಿ, ಧರ್ಮ, ಪಕ್ಷಗಳಿಲ್ಲ. ಅಶಕ್ತರನ್ನು ಸಬಲರನ್ನಾಗಿಸಿ ದೇಶದ ಅಭಿವೃದ್ಧಿಯಲ್ಲಿ ಅವರನ್ನೂ ಒಳಗೊಳ್ಳುವಂತೆ ಮಾಡುವ ಪ್ರಮುಖ ಅರ್ಥಿಕ ಚಟುವಟಿಕೆ. ಈ ಕಾರ್ಯಕ್ರಮಕ್ಕೆ ಯಡಿಯೂರಪ್ಪನವರು ಚೈತನ್ಯ ತುಂಬಬೇಕು. ಇಲ್ಲವೇ ಹೋರಾಟ ಎದುರಿಸಬೇಕು ಎಂದು ಎಚ್ಚರಿಕೆ ನೀಡಿದ್ದಾರೆ.

  • ಅಂಗನವಾಡಿಯಲ್ಲಿ ಕಳಪೆ ಆಹಾರ- ಕೆಂಡಾಮಂಡಲವಾಗಿ ಸಭೆಯಲ್ಲಿ ಅಧಿಕಾರಿಗಳ ಮೈಚಳಿ ಬಿಡಿಸಿದ ಜಿ.ಪಂ. ಅಧ್ಯಕ್ಷೆ

    ಅಂಗನವಾಡಿಯಲ್ಲಿ ಕಳಪೆ ಆಹಾರ- ಕೆಂಡಾಮಂಡಲವಾಗಿ ಸಭೆಯಲ್ಲಿ ಅಧಿಕಾರಿಗಳ ಮೈಚಳಿ ಬಿಡಿಸಿದ ಜಿ.ಪಂ. ಅಧ್ಯಕ್ಷೆ

    ಗದಗ: ಬಡ ಮಕ್ಕಳಿಗೆ ಪೌಷ್ಟಿಕ ಆಹಾರಕ್ಕಾಗಿ ಸರ್ಕಾರ ಕೋಟಿ ಕೋಟಿ ಹಣ ನೀಡುತ್ತಿದೆ. ಆದರೆ ಜಿಲ್ಲೆಯ ಅಂಗನವಾಡಿಯ ಅಧಿಕಾರಿಗಳು ಮಕ್ಕಳಿಗೆ ಕಳಪೆ ಆಹಾರವನ್ನು ನೀಡುತ್ತಿದ್ದಾರೆ.

    ರವೆ, ಶೇಂಗಾದಲ್ಲಿ ಹುಳಗಳು ಸಾರ್ ಹುಳಗಳು, ಕಳಪೆ ಗುಣಮಟ್ಟದ ಹೆಸರುಕಾಳು, ಕಡಲೆಕಾಳು, ತೊಗರಿ ಬೆಳೆ, ಕೆಟ್ಟು ಹೋಗಿರುವ ಬೆಲ್ಲ ಇದು ಬಡ ಮಕ್ಕಳ ಅಪೌಷ್ಟಿಕತೆ ನೀಗಿಸಲು ಅಂಗನವಾಡಿ ಕೇಂದ್ರಗಳಿಗೆ ಸರ್ಕಾರ ನೀಡುವ ಆಹಾರದಲ್ಲಿ ಕಂಡು ಬಂದಿದೆ.

    ಗದಗ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ರೂಪಾ ಅಂಗನವಾಡಿ ಎಮ್.ಎಸ್.ಪಿ.ಸಿ ಕೇಂದ್ರಗಳಿಗೆ ದಿಢೀರ್ ಭೇಟಿ ನೀಡಿದಾಗ ಈ ಕಳಪೆ ಆಹಾರ ಮತ್ತು ಅಧಿಕಾರಿಗಳ ನಿಜ ಬಣ್ಣ ಬಯಲಾಗಿದೆ. ಇಂತಹ ಕಳಪೆ ಆಹಾರವನ್ನು ಮಕ್ಕಳು ತಿಂದ್ರೆ ಪೌಷ್ಟಿಕಾಂಶ ಬರಲು ಹೇಗೆ ಸಾಧ್ಯ ಅಂತ ಅಧ್ಯಕ್ಷೆ ರೂಪಾ ಅಧಿಕಾರಿಗಳನ್ನ ತರಾಟೆಗೆ ತೆಗೆದುಕೊಂಡಿದ್ದಾರೆ.

    ಗದಗದ ಎಂಎಸ್‍ಪಿಸಿ ಅಂಗನವಾಡಿ ಕೇಂದ್ರಗಳಿಗೆ ಕಳಪೆ ಆಹಾರ ಸಾಮಗ್ರಿಗಳ ಪೂರೈಕೆ ಮಾಡುತ್ತಿದ್ದು, ಇದರಿಂದ ಮಕ್ಕಳ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತಿದೆ. ಹೀಗಾಗಿ ಕಳಪೆ ಆಹಾರ ಪೂರೈಕೆ ಮಾಡಿದ ಅಧಿಕಾರಿಗಳು, ಗುತ್ತಿಗೆದಾರರನ್ನ ಸಸ್ಪೆಂಡ್ ಮಾಡುವಂತೆ ಜಿಲ್ಲಾ ಪಂಚಾಯ್ತಿ ಸಿಇಓ ಮಂಜುನಾಥ್ ಹಾಗೂ ಡಿಸಿಗೆ ಜಿಪಂ ಅಧ್ಯಕ್ಷೆ ಸೂಚಿಸಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ರಾಮಕೃಷ್ಣ ಹೇಳಿದ್ದಾರೆ.

    ಪ್ರತಿಯೊಂದು ಆಹಾರ ಪದಾರ್ಥಗಳ ತೂಕದಲ್ಲೂ ಭಾರೀ ಮೋಸ ನಡೆಯುತ್ತಿರುವುದು ಸಹ ಕಂಡು ಬಂದಿದೆ. ಇದರಲ್ಲಿ ಎಂಎಸ್‍ಪಿಸಿ ಅಧಿಕಾರಿಗಳು ಶಾಮಿಲಾಗಿದ್ದಾರೆ ಎಂಬ ಆರೋಪವಿದೆ. ಇನ್ನಾದರೂ ಜಿಲ್ಲಾಧಿಕಾರಿಗಳು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಮುಂದಾಗಿ ಮಕ್ಕಳ ಆರೋಗ್ಯದ ಬಗ್ಗೆ ಗಮನ ಹರಿಸಬೇಕಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಎಚ್‍ಡಿಕೆ ಕಾರ್ಯಕ್ರಮದಲ್ಲಿ ಅನ್ನದರಾಶಿಯನ್ನೇ ಚೆಲ್ಲಿದ ಆಯೋಜಕರು – ಹೊಟ್ಟೆ ಸೇರ್ಬೆಕಾದ ತುತ್ತು ಮಣ್ಣುಪಾಲು!

    ಎಚ್‍ಡಿಕೆ ಕಾರ್ಯಕ್ರಮದಲ್ಲಿ ಅನ್ನದರಾಶಿಯನ್ನೇ ಚೆಲ್ಲಿದ ಆಯೋಜಕರು – ಹೊಟ್ಟೆ ಸೇರ್ಬೆಕಾದ ತುತ್ತು ಮಣ್ಣುಪಾಲು!

    ಹಾಸನ: ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರ ತವರು ಜಿಲ್ಲೆಯಲ್ಲಿ ಸುಮಾರು 1650 ಕೋಟಿ ರೂ.ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದ ನಂತರ ಕಡು ಬಡವರು, ಹಸಿದವರ ಪರ ತಮ್ಮೊಳಗಿನ ಕಾಳಜಿಯನ್ನು ಹೊರ ಹಾಕಿದ್ದರು. ವಿಪರ್ಯಾಸ ಅಂದ್ರೆ ಅದೇ ಬಡವರು, ಹಸಿದವರ ಹೊಟ್ಟೆ ತಣಿಸಬೇಕಿದ್ದ ಅನ್ನ ಹಾಸನದ ಜಿಲ್ಲಾ ಕ್ರೀಡಾಂಗಣದ ಬಳಿ ಎಲ್ಲೆಂದರಲ್ಲಿ ಚೆಲ್ಲಾಡುತ್ತಿದೆ.

    ಭಾನುವಾರ ಹಾಸನ ಜಿಲ್ಲಾ ಕ್ರೀಡಾಂಗಣದಲ್ಲಿ ಸುಮಾರು 81 ಅಭಿವೃದ್ಧಿ ಕಾಮಗಾರಿಗಳಿಗೆ ಸಿಎಂ ಶಂಕುಸ್ಥಾಪನೆ ನೆರವೇರಿಸಿದ್ದರು. ಈ ಕಾರ್ಯಕ್ರಮಕ್ಕೆ ಬಂದಿದ್ದ ಸಾವಿರಾರು ಮಂದಿಗೆ ಮೊಸರನ್ನ, ಬಿಸಿಬೇಳೆ ಬಾತ್, ಪಲಾವ್ ಮಾಡಿಸಲಾಗಿತ್ತು.

    ಕಾರ್ಯಕ್ರಮ ಮುಗಿದ ಬಳಿಕ ಪ್ರೇಕ್ಷಕರು ಊಟ ಮಾಡಿದರಾದ್ರೂ, ಇನ್ನೂ ಸಾವಿರಕ್ಕೂ ಅಧಿಕ ಮಂದಿ ಊಟ ಮಾಡುವಷ್ಟು ಆಹಾರ ಹಾಗೇ ಉಳಿದಿತ್ತು. ಅದನ್ನು ಯಾವುದಾದ್ರು ಹಾಸ್ಟೆಲ್, ಅನಾಥಾಶ್ರಮ ಇಲ್ಲವೇ ಬೇರೆ ಯಾರಿಗಾದ್ರೂ ಕೊಡಬಹುದಾಗಿತ್ತು. ಆದ್ರೆ ಆಯೋಜಕರ ನಿರ್ಲಕ್ಷ್ಯ ಹಾಗೂ ಬೇಜವಾಬ್ದಾರಿಯಿಂದಾಗಿ ಅಷ್ಟೂ ಅನ್ನ ಮಣ್ಣುಪಾಲಾಗಿದೆ. ಚರಂಡಿ, ಮೈದಾನದಲ್ಲಿ ಕ್ವಿಂಟಾಲ್ ಗಟ್ಟಲೆ ಅನ್ನ ಹಳಸಿ ನಾರುತ್ತಿದ್ದು, ಯಾರಿಗೂ ಬೇಡವಾಗಿದೆ.

    ಆಹಾರ ಮಾತ್ರವಲ್ಲ ಟೊಮೆಟೋ, ಈರುಳ್ಳಿ ಸಹ ಮಣ್ಣು ಪಾಲಾಗಿದೆ. ಒಂದು ಕಡೆ ಪ್ಲಾಸ್ಟಿಕ್ ನಿಷೇಧದ ಬಗ್ಗೆ ಬಾಯಿ ಮಾತಲ್ಲಿ ಭಾಷಣ ಮಾಡುತ್ತಾರೆ. ಆದರೆ ಕ್ರೀಡಾಂಗಣದ ತುಂಬೆಲ್ಲ ಮೊಸರು, ಮಜ್ಜಿಗೆ, ನೀರಿನ ಪ್ಲಾಸ್ಟಿಕ್ ಪ್ಯಾಕೆಟ್ ರಾಶಿಯೇ ಬಿದ್ದಿದೆ. ಜವಾಬ್ದಾರಿ ಸ್ಥಾನದಲ್ಲಿರುವವರೇ ಹೀಗೆ ಮಾಡಿದ್ರೆ, ಸ್ವಚ್ಛತೆ ಹಾಗೂ ನಿಯಮ ಪಾಲನೆ ಮಾಡೋರು ಯಾರು ಎಂದು ಸಾರ್ವಜನಿಕರು ಪ್ರಶ್ನೆ ಮಾಡಿದ್ದಾರೆ.

    ಹಾಲು, ನೀರು, ಮೊಸರು ಪೂರೈಕೆ ಮಾಡಿದ ಹಾಸನ ಹಾಲು ಒಕ್ಕೂಟದವರು, ಬೆಳಗ್ಗೆ ಬಂದು ಚೆಲ್ಲಾಪಿಲ್ಲಿಯಾಗಿದ್ದ ಟ್ರೇಗಳನ್ನು ಜೋಡಿಸಿಕೊಂಡು ಹೋಗಿದ್ದಾರೆ. ಆದರೆ ಅವ್ಯವಸ್ಥೆಯ ಆಗರವಾಗಿರುವ ಕ್ರೀಡಾಂಗಣವನ್ನು ಸ್ವಚ್ಛ ಮಾಡುವವರು ಯಾರು ಎಂಬ ಪ್ರಶ್ನೆಗೆ ಸಂಬಂಧಪಟ್ಟವರೇ ಉತ್ತರ ನೀಡಬೇಕಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv 

  • ಹಳ್ಳ ಹಿಡಿದ ಪ್ರಧಾನಿಯ ಮಹತ್ವಾಕಾಂಕ್ಷೆ ಯೋಜನೆ-ಬಡವರ ಸಂಜೀವಿನಿಯಲ್ಲಿ ಮಹಾ ದೋಖಾ..!

    ಹಳ್ಳ ಹಿಡಿದ ಪ್ರಧಾನಿಯ ಮಹತ್ವಾಕಾಂಕ್ಷೆ ಯೋಜನೆ-ಬಡವರ ಸಂಜೀವಿನಿಯಲ್ಲಿ ಮಹಾ ದೋಖಾ..!

    ಬೆಂಗಳೂರು: ಭಾರತದಲ್ಲಿ ಬಡ ರೋಗಿಗಳು ಔಷಧಿಗಳನ್ನು ಕೊಳ್ಳಲಾಗದ ಪರಿಸ್ಥಿತಿ ಇನ್ನೂ ಇದೆ. ಇದನ್ನು ಮನಗಂಡ ಪ್ರಧಾನಿ ನರೇಂದ್ರ ಮೋದಿಯವರು ಬಡರೋಗಿಗಳು ಔಷಧಿ ಸಿಗದೇ ಕಷ್ಟ ಅನುಭವಿಸಬಾರದು ಅಂತಾ ದೇಶಾದ್ಯಂತ ಪ್ರಧಾನ ಮಂತ್ರಿ ಜನೌಷಧಿ ಕೇಂದ್ರಗಳನ್ನು ಪ್ರಾರಂಭ ಮಾಡಿ ವರ್ಷಗಳೇ ಕಳೆದಿದೆ. ಅದರೆ ಇದೀಗ ಬಡವರ ಸಂಜೀವಿನಿ ಕೇಂದ್ರಗಳು ಹಳ್ಳ ಹಿಡಿದಿವೆ. ಜನಔಷಧಿ ಕೇಂದ್ರಗಳು ಬೆಂಗಳೂರಿನಲ್ಲಿ ಇದ್ದೂ ಇಲ್ಲದಂತಾಗಿವೆ. ಈ ಕುರಿತು ಪಬ್ಲಿಕ್ ಟಿವಿ ಸೋಮವಾರ ರಿಯಾಲಿಟಿ ಚೆಕ್ ನಡೆಸಿದೆ.

    ರಿಯಾಲಿಟಿ ಚೆಕ್ 1
    ಆಸ್ಪತ್ರೆ: ವಿಕ್ಟೋರಿಯಾ ಆಸ್ಪತ್ರೆ ಆವರಣ
    ಸ್ಥಳ: ಕೆ.ಆರ್. ಮಾರುಕಟ್ಟೆ
    ಮಳಿಗೆ: ಜೆನರಿಕ್ ಮಳಿಗೆ
    ಸಮಯ: ಬೆಳಗ್ಗೆ 11.00


    ಬಡವರಿಗೆ ಕೈಗೆಟುಕುವ ಜನೌಷಧಿ ಸಿಗುತ್ತಿಲ್ಲ ಅಂತ ಪಬ್ಲಿಕ್ ಟಿವಿಗೆ ನಿರಂತರ ಕರೆ ಬಂದ ಹಿನ್ನೆಲೆಯಲ್ಲಿ ರಿಯಾಲಿಟಿ ಚೆಕ್‍ಗೆ ನಾವು ಮುಂದಾದ್ವಿ. ಬೆಳಗ್ಗೆ 11.00 ಗಂಟೆ ಸುಮಾರಿಗೆ ಕೆ.ಆರ್. ಮಾರುಕಟ್ಟೆ ಆವರಣದಲ್ಲಿರೋ ಜೆನರಿಕ್ ಔಷಧಿ ಕೇಂದ್ರಕ್ಕೆ ಸಾಗಿದ್ವಿ. ಅಲ್ಲಿ ಬಿಪಿ ಡಯಾಬಿಟಿಕ್ ಹಾಗೂ ಕೆಲ ಕ್ಯಾನ್ಸರ್‍ಗೆ ಸಂಬಂಧಿಸಿದ ಮಾತ್ರೆಗಳು ಇದ್ಯಾ ಅಂತಾ ಕೇಳಿದ್ವಿ. ಅಲ್ಲಿ ಬಂದ ಉತ್ತರವೇ ಬೇರೆ. ಈ ಮಾತ್ರೆ ಇಲ್ಲ, ಬೇರೆ ಇದೆ, ಅಷ್ಟು ಎಂಜಿ ಮಾತ್ರೆಗಳಿಲ್ಲ. ಇಷ್ಟೇ ಇರೋದು, ಸದ್ಯಕ್ಕೆ ಸ್ಟಾಕ್ ಖಾಲಿಯಾಗಿದೆ ಅನ್ನೋ ಉತ್ತರನೇ ಬರುತ್ತಿದೆ.

    ಪ್ರತಿನಿಧಿ – ಡಯಾಬಿಟ್ರಿಕ್ ಟ್ಯಾಬ್ಲೆಟ್ ಇದ್ಯಾ?
    ವಿಕ್ಟೋರಿಯಾ ಜೆನರಿಕ್ ಕೇಂದ್ರದವರು – ಇಲ್ಲಾ
    ಪ್ರತಿನಿಧಿ – ಬಿಪಿದು, ಯಾಕೆ ಮಾತ್ರೆಗಳು ಸ್ಟಾಕ್ ಇರಲ್ವಾ?
    ವಿಕ್ಟೋರಿಯಾ ಜೆನರಿಕ್ ಕೇಂದ್ರದವರು- ಅದು ಕಂಟೆಂಡ್ ನಲ್ಲಿ ಬರೋದು ಸ್ಟಾಕ್ ಇಲ್ಲ ಅಂತಾ ಅಲ್ಲ. ಬಿಪಿದು 40 ಎಂಜಿದು ಇಲ್ಲ ನಮ್ಮ ಹತ್ರ 20 ಎಂಜಿದು ಇದೆ ಅಷ್ಟೆ ಅಂದ್ರು.

    ಪ್ರತಿನಿಧಿ : ಸ್ಟಾಕ್ ಇಲ್ವಾ ಹೇಗೆ
    ವಿಕ್ಟೋರಿಯಾ ಜೆನರಿಕ್ : ಹಾಗೇನಿಲ್ಲ (ಅಷ್ಟರಲ್ಲಿ ಸಾರ್ವಜನಿಕರು ಪ್ರಿಸ್ಕಿಪ್ರಶ್ಯನ್ ಹಿಡಿದುಕೊಂಡು ಬಂದ್ರು)
    ಸಾರ್ವಜನಿಕರು – ಈ ಮಾತ್ರೆ ಇದ್ಯಾ (ಬಿಪಿ ಮಾತ್ರೆ)
    ವಿಕ್ಟೋರಿಯಾ ಜೆನರಿಕ್ – ಇಲ್ಲ

    ರಿಯಾಲಿಟಿ ಚೆಕ್ – 2
    ಸ್ಥಳ: ರಾಜಾಜಿನಗರ
    ಮಳಿಗೆ: ಜನೌಷಧಿ ಮಳಿಗೆ
    ಸಮಯ: ಮಧ್ಯಾಹ್ನ 1.00

    ಬೆಂಗಳೂರಿನ ರಾಜಾಜಿನಗರದಲ್ಲಿ ಜನೌಷಧಿ ಕೇಂದ್ರದ ಪರಿಸ್ಥಿತಿನೂ ಇದೇ ಆಗಿದೆ. ನೀವು ಯಾವ ಮಾತ್ರೆ ಕೇಳಿದ್ರೂ ಕೂಡ ಇಲ್ಲ ಅನ್ನೋ ಮಾತು ಬಿಟ್ರೆ ಅಲ್ಲಿ ಬರೆ ಮಾತೇ ಇಲ್ಲ.
    ಪ್ರತಿನಿಧಿ: ಸರ್ ಈ ಔಷಧಿಗಳು ಇದ್ಯಾ…?
    ಜನೌಷಧಿ ಕೇಂದ್ರ: ಯಾವುದೇ ಎಂಜಿಗಳು ಇಲ್ಲ. ಎಷ್ಟು ಎಷ್ಟು ಬೇಕು?
    ಪ್ರತಿನಿಧಿ: ಒಂದು ದಿನಕ್ಕೆ ಅಗುವಷ್ಟು ಮಾತ್ರೆಗಳನ್ನು ಕೊಡಿ.
    ಜನೌಷಧಿ ಕೇಂದ್ರ: ಇದರಲ್ಲಿ ಯಾವುದೂ ಇಲ್ಲ. ಒಂದು ಮಾತ್ರ ಇದೆ.
    ಪ್ರತಿನಿಧಿ: ಯಾಕೆ ಉಳಿದಿದ್ದು ಇಲ್ಲ?
    ಜನೌಷಧಿ ಕೇಂದ್ರ: ಯಾಕೆ ಇಲ್ಲ ಅಂದ್ರೆ ಸ್ಟಾಕ್ ಇಲ್ಲ.
    ಪ್ರತಿನಿಧಿ: ಸ್ಟಾಕ್ ಯಾಕೆ ಇಲ್ಲ.?
    ಜನೌಷಧಿ ಕೇಂದ್ರ: ಕಸ್ಟಮರ್ ಬಂದು ಎಲ್ಲಾ ತಗೂಂಡು ಹೋಗಿದ್ದಾರೆ.
    ಪ್ರತಿನಿಧಿ: ಎಷ್ಟು ದಿನದಿಂದ ಸ್ಟಾಕ್ ಇಲ್ಲ?
    ಜನೌಷಧಿ ಕೇಂದ್ರ: ಒಂದೂವರೆ ತಿಂಗಳಿಂದ ಸ್ಟಾಕ್ ಇಲ್ಲ.
    ಪ್ರತಿನಿಧಿ: ಶುಗರ್, ಬಿಪಿ ಯಾವುದು ಇಲ್ವಾ?
    ಜನೌಷಧಿ ಕೇಂದ್ರ: ಒಂದು ಮಾತ್ರೆ ಬಿಟ್ಟು ಯಾವುದು ಇಲ್ಲ..


    ಇದು ಬೆಂಗಳೂರಿನ ರಾಜಾಜಿನಗರದ ಜನಔಷದ ಕೇಂದ್ರದ ಪರಿಸ್ಥಿತಿ. ಜನಔಷದಿ ಕೇಂದ್ರ ಪ್ರಕಾರವೇ ಒಂದೂವರೇ ತಿಂಗಳಿನಿಂದ ರೋಗಿಗಳಿಗೆ ಅಗತ್ಯವಾಗಿ ಬೇಕಾಗುವ ಬಿಪಿ ಶುಗರ್ ಮಾತ್ರೆಗಳೇ ಇಲ್ಲ. ಇದು ರಾಜಾಜಿನಗರದ ಪರಿಸ್ಥಿತಿಯಾದ್ರೆ. ಮತ್ತಿಕೆರೆ ಜನಔಷಧ ಕೇಂದ್ರದ ಪರಿಸ್ಥಿತಿ ಭಿನ್ನವಾಗಿಲ್ಲ.

    ಮತ್ತಿಕೆರೆ ಜನಔಷಧ ಕೇಂದ್ರದಲ್ಲಿ ಕೂಡ ಒಂದು ಟಾಬ್ಲೆಟ್‍ಗಳು ಇದ್ರೆ ಇನ್ನೊಂದು ಇಲ್ಲ. ಶ್ರೀರಾಂಪುರ ಜನಔಷಧಿ ಕೇಂದ್ರದ ಮಾಲೀಕರನ್ನ ಯಾವ ಯಾವ ಟಾಬ್ಲೇಟ್ ಇದೆ ಸರ್, ಶುಗರ್, ಬಿಪಿ ಮಾತ್ರೆಗಳು ಇದೀಯಾ ಅಂದ್ರೆ. ಯಾವುದು ಇದೆ ಅಂತಾ ಹೇಳಕ್ಕೆ ಅಗಲ್ಲ ರೀ ಅಂತಾ ಹೇಳುತ್ತಾರೆ

    ರಿಯಾಲಿಟಿ ಚೆಕ್ 3
    ಆಸ್ಪತ್ರೆ: ಶಂಕರ ಆಸ್ಪತ್ರೆ
    ಸ್ಥಳ: ಶಂಕರಪುರಂ, ಬಸವನಗುಡಿ,
    ಮಳಿಗೆ: ಜನೌಷಧಿ ಮಳಿಗೆ
    ಸಮಯ: ಮಧ್ಯಾಹ್ನ 2 ಗಂಟೆ

    ಸಾರ್ ಬಿಪಿ ಟ್ಯಾಬ್ಲೆಟ್ ಕೊಡಿ, ಸ್ಟಾಕ್ ಇಲ್ಲ, ಶುಗರ್‍ದು, ಅಯ್ಯೋ ಸ್ಟಾಕ್ ಇಲ್ಲ, ಫೀವರ್‍ದು ಇದ್ಯಾ? ಈ ಟ್ಯಾಬ್ಲೆಟ್ ಇಲ್ಲ ಬೇರೆ ಕಡೆ ಹೋಗಿ ಅಂತ ಹೇಳುತ್ತಾರೆ.
    ಪ್ರತಿನಿಧಿ – ಮೆಟಾಫಾರ್ಮಿನ್ ಇದ್ಯಾ
    ಜನೌಷಧ ಸೆಂಟರ್‍ನವರು – ಇಲ್ಲ
    ಪ್ರತಿನಿಧಿ – ಗ್ಲೂಕೋ ಮೀಟರ್, ಡಯಾಬಿಟಾನೋ
    ಜನೌಷಧ ಸೆಂಟರ್‍ನವರು – ಸ್ಟಾಕೇ ಇಲ್ಲ ನಾವೇನ್ ಮಾಡೋಣ

    ಕೇಂದ್ರದ ಮಾಹಿತಿ ಪ್ರಕಾರ ಕರ್ನಾಟಕಕ್ಕೆ ಅತಿ ಹೆಚ್ಚು ಔಷಧಿ ವಿತರಣೆಯಾಗುತ್ತಿದೆ. ಆದ್ರೆ ಕಳ್ಳಮಾರ್ಗದಲ್ಲಿ ಎಲ್ಲಿ ಹೋಗುತ್ತಿದೆ ಅನ್ನೋದೆ ಮಿಲಿಯನ್ ಡಾಲರ್ ಪ್ರಶ್ನೆ. ಕಳ್ಳನ ಮನಸು ಹುಳ್ಳ ಹುಳ್ಳಗೆ ಅನ್ನೋ ಹಾಗೆ ಜನೌಷಧ ಕೇಂದ್ರದ ಖಾಲಿ ಔಷಧ ರ್ಯಾಕ್‍ಗಳನ್ನು ಸೆರೆ ಹಿಡಿಯಲು ಹೋದಾಗ ಪಬ್ಲಿಕ್ ಟಿವಿ ಕ್ಯಾಮೆರ ಕಿತ್ತುಕೊಳ್ಳಲು ಮುಂದಾದ್ರು. ದುಗುಡದಲ್ಲಿ ಬಂದಿದ್ದ ಬಡಜೀವಗಳಿಗೆ, ದುಬಾರಿ ದುಡ್ಡು ಕೊಡಲಾಗದೇ ಜೀವ ಉಳಿಸುವ ಆಸೆಯಲ್ಲಿ ಜನೌಷಧಿ ಕೇಂದ್ರಕ್ಕೆ ಬರುವ ರೋಗಿಗಳಿಗೆ ಹಾಗೆ ವಾಪಸು ಕಳಿಸುತ್ತಿದ್ದಾರೆ ಜನಔಷಧಿ ಕೇಂದ್ರದವರು. ಜನೌಷಧ ಕೇಂದ್ರಕ್ಕೆ ಅಲೆದು ಅಲೆದು ಜನ ಹಿಡಿಶಾಪ ಹಾಕಿದ್ರು.

    ರಿಯಾಲಿಟಿ ಚೆಕ್ – 4
    ಎನ್ ಆರ್ ಕಾಲೋನಿ
    ಪ್ರತಿನಿಧಿ – ಗ್ಲಿಮಿಸ್ಟಾರ್ ಇದ್ಯಾ ಸರ್
    ಜನೌಷಧಿಯವರು – ಇಲ್ಲ
    ಪ್ರತಿನಿಧಿ – ಮೆಟಾಫಾರ್ಮಿನ್ ಇದ್ಯಾ
    ಜನೌಷಧಿಯವರು – ಅದ್ ಇಲ್ಲ ಸ್ಟಾಕ್ ಖಾಲಿಯಾಗಿದೆ, ಬರುತ್ತೆ ಅನಿಸುತ್ತೆ ಸದ್ಯದಲ್ಲಿಯೇ.

    ಹಾಗಿದ್ರೆ ಸದ್ಯ ಜೆನರಿಕ್ ಹಾಗೂ ಜನೌಷಧದಲ್ಲಿ ಯಾವೆಲ್ಲ ಮಾತ್ರೆಗಳು ಸಿಗಲ್ಲ ಇದಕ್ಕೆ ಏನು ಕಾರಣ ಅನ್ನೋದನ್ನು ಹೇಳ್ತೀವಿ ಕೇಳಿ

    ಮೆಟಾಫಾರ್ಮಿನ್ – ಹೈ ಬ್ಲಡ್ ಶುಗರ್ ಕಂಟ್ರೋಲ್‍ಗೆ
    ಗ್ಲೂಕೋ ಮೀಟರ್ – ಡಯಾಬಿಟಿಕ್
    ಡಯಾಬಿಟಾನೋ – ಡಯಾಬಿಟಿಸ್
    ಆಂಟಿಹೈಪರ್‍ಟೆನ್ಸಿವ್ – ಬಿಪಿ ಸಮಸ್ಯೆಗೆ
    ಟ್ಯಾಜಿಲ್ಕೋ – ಹೈಬ್ಲಡ್ ಶುಗರ್

    ಸಾಮಾನ್ಯವಾಗಿ ಡಯಾಬಿಟಿಸ್, ಶುಗರ್ ಹಾಗೂ ಬಿಪಿ ಮಾತ್ರೆಗಳು ದುಬಾರಿ. ಖಾಸಗಿ ಮೆಡಿಕಲ್‍ಗಿಂತ ಜನೌಷಧದಲ್ಲಿ ಶೇ 75 ರಷ್ಟು ಕಡಿಮೆ ಇರುತ್ತೆ. ಉದಾಹರಣೆಗೆ ಖಾಸಗಿ ಮೆಡಿಕಲ್‍ನಲ್ಲಿ ನೂರು ರೂ ಇರುವ ಬಿಪಿ ಮಾತ್ರೆ ಜನೌಷಧ ಕೇಂದ್ರದಲ್ಲಿ ಕೇವಲ ಹದಿನೈದು ರೂಗೆ ಲಭ್ಯ ಇರುತ್ತೆ. ಆದ್ರೇ ಈಗ ಅತಿ ಹೆಚ್ಚು ಜನ ಬಳಸೋ ಈ ಮಾತ್ರೆಗಳು ಜನೌಷಧ ಕೇಂದ್ರದಲ್ಲಿ ಸಿಗ್ತಾ ಇಲ್ಲ ಇದಕ್ಕೆ ಕಾರಣಗಳೇನು ಅನ್ನೋದನ್ನು ನೋಡಿದ್ರೆ

    ಜನೌಷಧ ಔಷಧಿ ಅಲಭ್ಯಕ್ಕೆ ಏನ್ ಕಾರಣ?
    1. ಖಾಸಗಿಯವರ ಲಾಬಿಗೆ ಮಣಿದಿರುವ ಸಾಧ್ಯತೆ. ಕೆಲ ಔಷಧಿಗಳು ಅಕ್ರಮವಾಗಿ ಮಾರಾಟವಾಗಿರುವ ಶಂಕೆಯೂ ಇದೆ.
    2. ಲಾರಿ ಮುಷ್ಕರದಿಂದ ಕೊಂಚ ಸಮಸ್ಯೆ ಆಗಿರೋದು ನಿಜ, ಆದ್ರೆ ಕೆಲ ಸ್ಟೋರ್‍ನಲ್ಲಿ ಕಳೆದೆರಡು ತಿಂಗಳಿಂದ ಸಮಸ್ಯೆ
    3. ಡೀಲರ್ಸ್ ಹಾಗೂ ವಿತರಕರ ಮಧ್ಯೆ ಸಂವಹನ ಕೊರತೆನೂ ಇರಬಹುದು.
    4. ಕೆಲ ಔಷಧಗಳನ್ನು ಸ್ಟೋರೆಜ್ ಮಾಡುವ ಅತ್ಯಾಧುನಿಕ ಸಾಧನ ಅನೇಕ ಕಡೆ ಇಲ್ಲ. ಇದ್ರಿಂದ ದೀರ್ಘಾವದಿಗೆ ಔಷಧಗಳನ್ನು ಇಟ್ಟುಕೊಳ್ಳಲು ಸಾಧ್ಯವಾಗುತ್ತಿಲ್ಲ
    5 ಅತಿ ಹೆಚ್ಚು ಡಿಮ್ಯಾಂಡ್ ರಾಜ್ಯದಲ್ಲಿರೋದ್ರಿಂದ ಪೂರೈಕೆ ಸಮಸ್ಯೆ ಆಗುತ್ತಿರುವ ಸಾಧ್ಯತೆಯೂ ಇದೆ.

    ರಾಜ್ಯ ಸರ್ಕಾರದ ಬುಡದಲ್ಲಿಯೇ ಇರುವ ಜೆನೆರಿಕ್ ಔಷಧದಲ್ಲೂ ಸಮಸ್ಯೆಯಾಗಿದೆ. ಕೇಂದ್ರ ಜನೌಷಧದಲ್ಲೂ ಅವ್ಯವಸ್ಥೆ. ಜೀವ ನೀಡುವ ಭರವಸೆ ಕೊಟ್ಟು ಕೊಲ್ಲುವ ಕಟುಕರಾಗಿದೆ ಇರಲಿ. ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರ ಮೊದಲು ಔಷಧಿ ಕೇಂದ್ರವನ್ನು ಸರಿಪಡಿಸಲಿ .

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಬಡರೈತರಿಗೆ ಉಚಿತ ವಕಾಲತ್ತು- 25 ವರ್ಷಗಳಿಂದ ಕಾನೂನು ಸೇವೆ ಮಾಡ್ತಿರೋ ತುಮಕೂರಿನ ಬಸವರಾಜ್

    ಬಡರೈತರಿಗೆ ಉಚಿತ ವಕಾಲತ್ತು- 25 ವರ್ಷಗಳಿಂದ ಕಾನೂನು ಸೇವೆ ಮಾಡ್ತಿರೋ ತುಮಕೂರಿನ ಬಸವರಾಜ್

    ತುಮಕೂರು: ದುಡ್ಡಿದವರು ಮಾತ್ರ ಕೋರ್ಟ್ ಕಚೇರಿ ಅಂತ ಸುತ್ತಾಡಬೇಕು. ಏಕೆಂದರೆ ವಕೀಲರ ಫೀಸು, ದೀರ್ಘಕಾಲದ ಅಲೆದಾಟ-ಸುತ್ತಾಟ ಇವುಗಳಿಗೆಲ್ಲಾ ದುಡ್ಡು ಬೇಕೇ ಬೇಕು. ಹಾಗಾಗಿ ಬಡ ಜನರು, ರೈತರು ತಮಗೆ ಅನ್ಯಾಯವಾದರೂ ಕೋರ್ಟು-ಕಚೇರಿಂದ ದೂರ ಇರುತ್ತಾರೆ. ಆದರೆ ಇಂತ ರೈತರ ಪಾಲಿನ ಆಶಾಕಿರಣರಾಗಿದ್ದಾರೆ ತುಮಕೂರಿನ ವಕೀಲರಾದ ಬಸವರಾಜ್.

    ಬಸವರಾಜ್ ವೃತ್ತಿಯಲ್ಲಿ ವಕೀಲರಾದರು ಸಮಾಜ ಸೇವೆ ಮಾಡುತ್ತಿದ್ದಾರೆ. ಬಡವರು ಅದರಲ್ಲೂ ಬಡ ರೈತರು ಎಂದರೆ ಇವರಿಗೆ ತುಂಬಾ ಮುತುವರ್ಜಿ. ಕಳೆದ 25 ವರ್ಷಗಳಿಂದ ಈ ವರ್ಗದ ಜಮೀನು ವ್ಯಾಜ್ಯಗಳಿಗೆ ಉಚಿತವಾಗಿ ವಕಾಲತ್ತು ವಹಿಸುತ್ತಿದ್ದಾರೆ. ಅದರಲ್ಲೂ ರೈತರ ಜಮೀನು ಭೂಭಕಾಸುರರ ಕೈ ಸೇರಿದರೆ ಅಂಥದಕ್ಕೆ ವಿಶೇಷವಾಗಿ ಆಸ್ಥೆವಹಿಸ್ತಾರೆ. ಇಲ್ಲಿವರೆಗೆ ಸುಮಾರು 200ಕ್ಕೂ ಹೆಚ್ಚು ರೈತರಿಗೆ, ಬಡಜನರಿಗೆ ಉಚಿತ ಕಾನೂನು ಸೇವೆ ಒದಗಿಸಿದ್ದು ಒಂದು ಕಪ್ ಚಹಾ ಸಹ ಸ್ವೀಕರಿಸಿಲ್ಲ.

    55 ವರ್ಷದ ಬಸವರಾಜು ಅವರು ತುಮಕೂರು ನಗರದ ಗಾರ್ಡನ್ ರಸ್ತೆಯ ನಿವಾಸಿ. 1993ರಲ್ಲಿ ವಕೀಲಿಕೆ ಆರಂಭಿಸಿದ ಇವರು ಅಂದಿನಿಂದಲೂ ನೊಂದವರ ಕಷ್ಟಕ್ಕೆ ಮರುಗುತ್ತಿದ್ದಾರೆ. ಪ್ರತಿಫಲಾಪೇಕ್ಷೆಯಿಲ್ಲದೆ ಕೆಲಸ ಮಾಡುತ್ತಿದ್ದಾರೆ. ಇಲ್ಲಿವರೆಗೂ ಕೋರ್ಟ್‍ಗೆ ನಡೆದುಕೊಂಡೇ ಹೋಗುವ ಬಸವರಾಜು ಅವರು ಕನಿಷ್ಟ ಪಕ್ಷ ಬೈಕನ್ನೂ ಖರೀದಿಸಿಲ್ಲ. ಅಷ್ಟರ ಮಟ್ಟಿಗೆ ಸರಳಜೀವಿ.

    ಶಾಂತ ಸ್ವರೂಪಿಯಾಗಿರೋ ಬಸವರಾಜು ಅವರು ರೈತರ ಜೊತೆಗೆ ತಮ್ಮ ಕಿರಿಯ ವಕೀಲರಿಗೂ ಗಂಟೆಗಟ್ಟಲೆ ಮಾರ್ಗದರ್ಶನ ನೀಡುತ್ತಿದ್ದಾರೆ. ಅಲ್ಲದೆ ಬಡವರಿಗೆ, ರೈತರಿಗೆ ಉಚಿತವಾಗಿ ವಕಲಾತ್ತು ವಹಿಸುವಂತೆ ಕಿರಿಯ ವಕೀಲರಿಗೆ ಸಲಹೆ ನೀಡುತ್ತಾರೆ.

    https://www.youtube.com/watch?v=5J9F3jItnWo