Tag: Population Control Bill

  • ಪ್ರತಿಯೊಬ್ಬರಿಗೂ ಅನ್ವಯವಾಗುವಂತೆ ಜನಸಂಖ್ಯಾ ನಿಯಂತ್ರಣ ಮಸೂದೆ ಜಾರಿಗೊಳಿಸಿ – ಗಿರಿರಾಜ್ ಸಿಂಗ್

    ಪ್ರತಿಯೊಬ್ಬರಿಗೂ ಅನ್ವಯವಾಗುವಂತೆ ಜನಸಂಖ್ಯಾ ನಿಯಂತ್ರಣ ಮಸೂದೆ ಜಾರಿಗೊಳಿಸಿ – ಗಿರಿರಾಜ್ ಸಿಂಗ್

    ನವದೆಹಲಿ: ಜನಸಂಖ್ಯಾ ನಿಯಂತ್ರಣ ಮಸೂದೆಗೆ ಸಂಬಂಧಿಸಿದಂತೆ ಬಿಜೆಪಿ (BJP) ನಾಯಕರ ಹೇಳಿಕೆಗಳು ಆಗಾಗ ಮುನ್ನೆಲೆಗೆ ಬರುತ್ತಿವೆ. ಕೇಂದ್ರ ಸಚಿವರೂ ಆಗಿರವ ಬಿಜೆಪಿ ನಾಯಕ ಗಿರಿರಾಜ್ ಸಿಂಗ್ (Giriraj Singh) ಕೂಡ ದೇಶದಲ್ಲಿ ಹೆಚ್ಚುತ್ತಿರುವ ಜನಸಂಖ್ಯೆಯ (Population) ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.

    ಲಿಂಗ ಆಧಾರಿತ ತಾರತಮ್ಯ ಮತ್ತು ಹಿಂಸಾಚಾರ ಕುರಿತ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಜನಸಂಖ್ಯಾ ನಿಯಂತ್ರಣ ಮಸೂದೆ (Population Control Bill) ಬಗ್ಗೆ ಅವರು ಮತ್ತೊಮ್ಮೆ ದನಿ ಎತ್ತಿದ್ದು, ಭಾರತದಲ್ಲಿ ಸೀಮಿತ ಸಂಪನ್ಮೂಲ ಇರುವುದರಿಂದ ಜನಸಂಖ್ಯಾ ನಿಯಂತ್ರಣ ಮಸೂದೆ ನಿರ್ಣಾಯಕವಾಗಿದೆ ಎಂದಿದ್ದಾರೆ. ಇದನ್ನೂ ಓದಿ: ಮೆಸ್ಸಿ ಆಟ ನೋಡಲು ಕಿಕ್ಕಿರಿದ ಅಭಿಮಾನಿಗಳು – 28 ವರ್ಷಗಳ ಇತಿಹಾಸದಲ್ಲಿ ಮೊದಲ ಬಾರಿಗೆ ಇಷ್ಟೊಂದು ಜನ!

    ನಮ್ಮಲ್ಲಿ ಸೀಮಿತ ಸಂಪನ್ಮೂಲ ಇರುವುದರಿಂದ ಜನಸಂಖ್ಯೆ ನಿಯಂತ್ರಿಸುವುದು ಅವಶ್ಯಕವಾಗಿದೆ. ಭಾರತವು ವೇಗವಾಗಿ ಅಭಿವೃದ್ಧಿ ಹೊಂದಬೇಕಾದರೆ, ಈ ಬಗ್ಗೆ ಕಾನೂನು ರೂಪಿಸಬೇಕು ಎಂದು ಗಿರಿರಾಜ್ ಸಿಂಗ್ ಹೇಳಿದ್ದಾರೆ. ಇದನ್ನೂ ಓದಿ: ಮದುವೆ ಆಮಂತ್ರಣ ಪತ್ರಿಕೆ ಜೊತೆಗೆ 75 ಸಾವಿರ ಭಗವದ್ಗೀತೆ ಪುಸ್ತಕ ವಿತರಣೆ – 132 ಜೋಡಿಗೆ ಮದುವೆ ಭಾಗ್ಯ

    ಚೀನಾ (China) ಜನಸಂಖ್ಯೆ ನಿಯಂತ್ರಿಸುವುದಕ್ಕಾಗಿ `ಒನ್ ಚೈಲ್ಡ್ ಪಾಲಿಸಿ’ (ಒಂದು ಮಗುವನ್ನು ಹೊಂದುವ ನೀತಿ) ಜಾರಿಗೆ ತಂದಿತು. ಈ ಮೂಲಕ ಜನಸಂಖ್ಯೆಯನ್ನು ನಿಯಂತ್ರಿಸಿ ಅಭಿವೃದ್ಧಿ ಸಾಧಿಸಿತು. ಇಂದು ಚೀನಾದಲ್ಲಿ ನಿಮಿಷಕ್ಕೆ 10 ಮಕ್ಕಳು ಜನಿಸುತ್ತಿದ್ದರೆ, ಭಾರತದಲ್ಲಿ 30 ಮಕ್ಕಳು ಜನಿಸುತ್ತಿದ್ದಾರೆ. ಹೀಗಿರುವಾಗ ನಾವು ಚೀನಾದೊಂದಿಗೆ ಸ್ಪರ್ಧಿಸೋದು ಹೇಗೆ? ಆದ್ದರಿಂದ ಮಸೂದೆಯನ್ನು ಧರ್ಮ ಅಥವಾ ಪಂಗಡವನ್ನು ಲೆಕ್ಕಿಸದೇ ಪ್ರತಿಯೊಬ್ಬರಿಗೂ ಅನ್ವಯವಾಗುವಂತೆ ಜಾರಿಗೊಳಿಸಬೇಕು. ಅನುಸರಿಸದವರ ಮತದಾನದ ಹಕ್ಕನ್ನೂ ಕಸಿದುಕೊಳ್ಳಬೇಕು ಎಂದು ಕೇಂದ್ರ ಸಚಿವ ಸಲಹೆ ನೀಡಿದ್ದಾರೆ.

    ಸರ್ಕಾರ ಮಹಿಳೆಯರ ಮೇಲಿನ ಯಾವುದೇ ದೌರ್ಜನ್ಯವನ್ನು ಧರ್ಮದ ಚೌಕಟ್ಟಿನಲ್ಲಿ ನೋಡಬಾರದು. ಅಂತಹ ಘಟನೆಗಳನ್ನು ಪೂರ್ವಾಗ್ರಹ ರಹಿತವಾಗಿ ಎಲ್ಲರೂ ಖಂಡಿಸಬೇಕು ಎಂದು ಹೇಳಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಜನಸಂಖ್ಯಾ ನಿಯಂತ್ರಣ ಮಸೂದೆ ಮಂಡಿಸುತ್ತೇನೆ: 4 ಮಕ್ಕಳ ತಂದೆ, BJP ಸಂಸದ ರವಿ ಕಿಶನ್‌ ಹೇಳಿಕೆ

    ಜನಸಂಖ್ಯಾ ನಿಯಂತ್ರಣ ಮಸೂದೆ ಮಂಡಿಸುತ್ತೇನೆ: 4 ಮಕ್ಕಳ ತಂದೆ, BJP ಸಂಸದ ರವಿ ಕಿಶನ್‌ ಹೇಳಿಕೆ

    ನವದೆಹಲಿ: ಲೋಕಸಭೆಯಲ್ಲಿ ಜನಸಂಖ್ಯೆ ನಿಯಂತ್ರಣ ಕುರಿತ ಖಾಸಗಿ ಮಸೂದೆಯನ್ನು ಮಂಡಿಸಲಿದ್ದೇನೆ ಎಂದು ನಟ ಹಾಗೂ ಬಿಜೆಪಿ ಸಂಸದ ರವಿ ಕಿಶನ್ ಶುಕ್ರವಾರ ಹೇಳಿದ್ದಾರೆ.

    ಉತ್ತರ ಪ್ರದೇಶದ ಗೋರಖ್‌ಪುರ ಕ್ಷೇತ್ರದ ಸಂಸದರಾಗಿರುವ ಕಿಶನ್‌ ಅವರಿಗೆ ಸ್ವತಃ ನಾಲ್ವರು ಮಕ್ಕಳಿದ್ದಾರೆ. ಮೂವರು ಪುತ್ರಿಯರು ಮತ್ತು ಒಬ್ಬ ಪುತ್ರ ಇದ್ದಾರೆ. ಇದನ್ನೂ ಓದಿ: ಬಿಎಸ್‌ವೈಗೆ ಸುಪ್ರೀಂ ಕೋರ್ಟ್‌ನಿಂದ ಬಿಗ್ ರಿಲೀಫ್

    ಜನಸಂಖ್ಯೆ ನಿಯಂತ್ರಣ ಮಸೂದೆಯನ್ನು ತಂದಾಗ ಮಾತ್ರ ನಾವು ವಿಶ್ವಗುರುವಾಗಲು ಸಾಧ್ಯ. ಜನಸಂಖ್ಯೆಯನ್ನು ನಿಯಂತ್ರಣಕ್ಕೆ ತರುವುದು ಬಹಳ ಮುಖ್ಯ ಎಂದು ಕಿಶನ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

    ನಾನು ಮಸೂದೆಯನ್ನು ಪರಿಚಯಿಸಲು ವಿಪಕ್ಷಗಳು ಅವಕಾಶ ಕಲ್ಪಿಸಬೇಕು. ಯಾಥಕ್ಕಾಗಿ ಈ ಮಸೂದೆ ಮಂಡಿಸುತ್ತಿದ್ದೇನೆ ಎಂಬುದನ್ನು ಸಹ ಆಲಿಸಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಸದನದ ಕಲಾಪಕ್ಕೆ ಅಡ್ಡಿಪಡಿಸೋ ಮೂಲಕ ಕಾಂಗ್ರೆಸ್ ಸಂಸದರ ಹಕ್ಕು ಕಸಿಯುತ್ತಿದೆ: ಜೋಶಿ ಟೀಕೆ

    ಜನಸಂಖ್ಯೆ ನಿಯಂತ್ರಣಕ್ಕೆ ಯಾವುದೇ ಶಾಸನಾತ್ಮಕ ಕ್ರಮವನ್ನು ಕೇಂದ್ರವು ಪರಿಗಣಿಸುತ್ತಿಲ್ಲ ಎಂದು ಆರೋಗ್ಯ ಖಾತೆ ರಾಜ್ಯ ಸಚಿವೆ ಭಾರತಿ ಪ್ರವೀಣ್ ಪವಾರ್ ಮಂಗಳವಾರ ರಾಜ್ಯಸಭೆಗೆ ತಿಳಿಸಿದ್ದರು. ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಸೇರಿದಂತೆ ಹಲವು ಬಿಜೆಪಿ ನಾಯಕರು ಭಾರತದಲ್ಲಿ ಹೆಚ್ಚುತ್ತಿರುವ ಜನಸಂಖ್ಯಾ ನಿಯಂತ್ರಣಕ್ಕೆ ಕಾನೂನು ಪರಿಚಯಿಸಬೇಕೆಂದು ಒತ್ತಾಯಿಸುತ್ತಿದ್ದಾರೆ.

    2023ರ ವೇಳೆಗೆ ಭಾರತದ ಜನಸಂಖ್ಯೆಯು ಚೀನಾವನ್ನು ಮೀರಿಸುತ್ತದೆ ಎಂದು ವಿಶ್ವಸಂಸ್ಥೆ ಭವಿಷ್ಯ ನುಡಿದಿದೆ.

    Live Tv
    [brid partner=56869869 player=32851 video=960834 autoplay=true]

  • ಕರ್ನಾಟಕದಲ್ಲಿ ಜಾರಿಯಾಗುತ್ತಾ ಯುಪಿ ಮಾದರಿ ಜನಸಂಖ್ಯಾ ನಿಯಂತ್ರಣ ಕಾನೂನು?

    ಕರ್ನಾಟಕದಲ್ಲಿ ಜಾರಿಯಾಗುತ್ತಾ ಯುಪಿ ಮಾದರಿ ಜನಸಂಖ್ಯಾ ನಿಯಂತ್ರಣ ಕಾನೂನು?

    – ಪರಿಷತ್‍ನಲ್ಲಿ ಶಾಸಕಿ ಭಾರತಿ ಶೆಟ್ಟಿ ಪ್ರಸ್ತಾಪ

    ಬೆಂಗಳೂರು: ಕರ್ನಾಟಕದಲ್ಲಿ ಹಿಜಬ್ ವಿವಾದ, ದಿ ಕಾಶ್ಮೀರ್ ಫೈಲ್ಸ್ ಸಿನಿಮಾ, ಮುಸ್ಲಿಂ ವರ್ತಕರಿಗೆ ನಿರ್ಬಂಧ ಬಳಿಕ ಇದೀಗ ಬಿಜೆಪಿ ಶಾಸಕರಿಂದ ಜನಸಂಖ್ಯಾ ನಿಯಂತ್ರಣದ ಬಗ್ಗೆ ಒತ್ತಡ ಕೇಳಿಬಂದಿದೆ.

    ಈಗಾಗಲೇ ಉತ್ತರ ಪ್ರದೇಶದಲ್ಲಿ ಎರಡು ಮಕ್ಕಳಿಗಿಂತ ಹೆಚ್ಚಿದ್ರೆ ಸರ್ಕಾರಿ ಸೌಲಭ್ಯ ಕಡಿತ ಎಂಬ ನಿರ್ಣಯ ತೆಗೆದುಕೊಳ್ಳಲಾಗಿದೆ. ಉತ್ತರಾಖಂಡದಲ್ಲಿ ಏಕರೂಪ ನಾಗರೀಕ ಸಂಹಿತೆಗೆ ಕ್ಯಾಬಿನೆಟ್‍ನಲ್ಲಿ ಒಪ್ಪಿಗೆ ಸೂಚಿಸಲಾಗಿದೆ. ಇದನ್ನೆಲ್ಲ ಗಮನಿಸಿದ ಬಳಿಕ ಇದೀಗ ಕರ್ನಾಟಕದಲ್ಲಿ ಜನಸಂಖ್ಯಾ ನಿಯಂತ್ರಣ ಕಾನೂನು ಜಾರಿಗೆ ತರಲು ಒತ್ತಡ ಕೇಳಿ ಬರುತ್ತಿದೆ. ಈ ಮೂಲಕ ಮುಂದಿನ ಚುನಾವಣೆಗೆ ರಾಜ್ಯದಲ್ಲೂ ಜನಸಂಖ್ಯಾ ನಿಯಂತ್ರಣ ಅಸ್ತ್ರ ಪ್ರಯೋಗಿಸುತ್ತಾ ಸರ್ಕಾರ ಕಣ್ಣಿಟ್ಟಿದೆ. ಇದನ್ನು ಗಮನಿಸಿದಾಗ ಕರ್ನಾಟಕದಲ್ಲಿ ಬಿಜೆಪಿ ಮುಂದಿನ ಅಸ್ತ್ರ ಜನಸಂಖ್ಯಾ ನಿಯಂತ್ರಣನಾ ಎಂಬ ಪ್ರಶ್ನೆ ಎದ್ದಿದೆ. ಇದನ್ನೂ ಓದಿ: ಪಶ್ಚಿಮ ಬಂಗಾಳದ ವಿಧಾನಸಭೆಯಲ್ಲಿ ಮಾರಾಮಾರಿ- ಐವರು ಬಿಜೆಪಿ ಶಾಸಕರು ಅಮಾನತು

    ವಿಧಾನ ಪರಿಷತ್ ಶೂನ್ಯವೇಳೆಯಲ್ಲಿ ಬಿಜೆಪಿ ಎಮ್‍ಎಲ್‍ಸಿ ಭಾರತಿ ಶೆಟ್ಟಿ ಜನಸಂಖ್ಯಾ ನಿಯಂತ್ರಣದ ಪ್ರಸ್ತಾಪವನ್ನಿಟ್ಟಿದ್ದಾರೆ. ಸರ್ಕಾರದ ಪ್ರಯತ್ನಗಳ ಹೊರತಾಗಿಯೂ ಜನಸಂಖ್ಯೆ ಏರಿಕೆ ನಿಯಂತ್ರಣವಾಗುತ್ತಿಲ್ಲ. ಹೀಗಾಗಿ ಜನಸಂಖ್ಯಾ ನಿಯಂತ್ರಣಕ್ಕೆ ಹೊಸ ನಿಯಮ ಜಾರಿಗೆ ತರಬೇಕು. ಉತ್ತರ ಪ್ರದೇಶದ ಸರ್ಕಾರ ಎರಡು ಮಕ್ಕಳಿಗಿಂತ ಹೆಚ್ಚು ಮಕ್ಕಳು ಇದ್ದವರಿಗೆ ಸರ್ಕಾರಿ ಸೌಲಭ್ಯ ಇಲ್ಲ ಅಂತ ಹೇಳಿದೆ. ಅದನ್ನು ಪರಿಶೀಲಿಸಿ ನಮ್ಮ ರಾಜ್ಯದಲ್ಲಿಯೂ ಅಂಥ ಕ್ರಮ ಜಾರಿ ಮಾಡಿ. ಎರಡು ಮಕ್ಕಳನ್ನು ಹೊಂದಿದ ಕುಟುಂಬಕ್ಕೆ ಮಾತ್ರ ಸರ್ಕಾರಿ ಸೌಲಭ್ಯ ಕೊಡಿ ಎಂದು ಒತ್ತಾಯಿಸಿದರು. ಇದನ್ನೂ ಓದಿ:  ಯುಗಾದಿ ವೇಳೆ ಹಲಾಲ್ ಮಾಂಸ ಬಹಿಷ್ಕರಿಸಿ – ಹಿಂದೂ ಜನಜಾಗೃತಿ ಸಮಿತಿ ಕರೆ

    ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ರಾಜ್ಯದಲ್ಲಿ ತೆರಿಗೆ ಹಣ ಪೋಲಾಗುತ್ತಿದೆ. ಜನರ ತೆರಿಗೆ ಸರಿಯಾಗಿ ವಿನಿಯೋಗ ಆಗಬೇಕು. ತೆರಿಗೆ ಹಣ ಕೊಡುವವರು ಯಾರೋ, ಫಲಾನುಭವಿಗಳು ಇನ್ಯಾರೋ ಆಗಬಾರದು. ಮಧ್ಯಮ ವರ್ಗದವರಿಂದಲೂ ತೆರಿಗೆ ಸಂಗ್ರಹವಾಗುತ್ತಿದೆ. ಎರಡಕ್ಕಿಂತ ಹೆಚ್ಚು ಮಕ್ಕಳಿದ್ದರೆ ಸರ್ವರಿಗೂ ಸಮಪಾಲು ಅನ್ನೋದು ಅನ್ವಯ ಆಗಲ್ಲ. ಹೆಚ್ಚು ಮಕ್ಕಳಿದ್ದವರ ಮನೆಗೆ ಹೆಚ್ಚು ಅಕ್ಕಿ ಕೊಡುವಂಥ ಪರಿಸ್ಥಿತಿ ಇದೆ. ಒಂದು ಮನೆಗೆ ಒಂದು ಕ್ವಿಂಟಾಲ್ ಅಕ್ಕಿ ಸರ್ಕಾರ ಕೊಡುತ್ತಿದೆ. ಸಬ್ಸಿಡಿಯಲ್ಲಿ ಹೆಚ್ಚು ಮಕ್ಕಳಿರುವ ಮನೆಗೆ ಹೆಚ್ಚು ಅಕ್ಕಿ ಸರ್ಕಾರ ಕೊಡುತ್ತಿದೆ. ಜನಸಂಖ್ಯೆ ಹೆಚ್ಚಳ ಆರ್ಥಿಕ ಕುಸಿತಕ್ಕೂ ಕಾರಣವಾಗಿದೆ ಎಂದು ಹೇಳಿದರು.

    ನಾನು ಚುನಾವಣೆ ಹಿನ್ನೆಲೆಯಲ್ಲಿ ಈ ಒತ್ತಾಯ ಮಾಡಿಲ್ಲ. ಇಂದಿರಾಗಾಂಧಿ ಕಾಲದಿಂದಲೂ ಜನಸಂಖ್ಯೆ ನಿಯಂತ್ರಣ ಕ್ರಮಗಳಿವೆ. ನಾವಿಬ್ಬರೂ ನಮಗಿಬ್ಬರು ಅನ್ನೋದು ಬಂತು. ಬಳಿಕ ನಾವಿಬ್ಬರು ನಮಗೊಬ್ಬರು ಅಂತನೂ ಬಂತು. ಕೆಲವರು ನಾವಿಬ್ಬರು ನಮ್ಮೊಂದಿಗೆ 28 ಜನ ಅಂತ ಬದುಕುತ್ತಿದ್ದಾರೆ ಇದು ನ್ಯಾಯವಲ್ಲ. ಮುಸ್ಲಿಂ ಸಮುದಾಯದವರನ್ನು ದೃಷ್ಟಿಯಲ್ಲಿಟ್ಕೊಂಡು ನಾನು ಈ ಒತ್ತಾಯ ಮಾಡಿಲ್ಲ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ಮುಸ್ಲಿಂ ವ್ಯಾಪಾರಸ್ಥರಿಗೆ ಆರ್ಥಿಕ ನಿರ್ಬಂಧ ಹೇರಲು ಅವಕಾಶ ಕೊಡುವುದಿಲ್ಲ: ಅನಿಲ ಬೆನಕೆ

    ನಮ್ಮ ಸರ್ಕಾರ ಅಲ್ಪಸಂಖ್ಯಾತರಿಗೆ ಅನೇಕ ಉತ್ತಮ ಕೆಲಸ ಮಾಡಿದೆ. ಸರ್ವರಿಗೂ ಸಮಪಾಲು ಸರ್ವರಿಗೂ ಸಮಬಾಳು ಕೊಡಲು ಬಂದವರು. ನಾವು ರಾಜ್ಯದಲ್ಲಿ ಯಾವತ್ತು ಕೂಡ ಒಂದೇ ಸಮುದಾಯವನ್ನು ಮೆಚ್ಚಿಸಲು ಹೊರಟಿಲ್ಲ. ಕಾಂಗ್ರೆಸ್ ಈ ಹಿಂದೆ ಶಾದಿ ಭಾಗ್ಯ ನೀಡಿ ಮುಸ್ಲಿಂ ಸಮುದಾಯವನ್ನು ಮೆಚ್ಚಿಸಲು ಪ್ರಯತ್ನ ಪಟ್ಟಿತ್ತು. ನಾವು ಆ ರೀತಿ ಮಾಡಿಲ್ಲ. ಅಂಗೈ ಹುಣ್ಣಿಗೆ ಕನ್ನಡಿ ಬೇಡ ಎಂದು ಮಾರ್ಮಿಕವಾಗಿ ನುಡಿದರು.