Tag: Port

  • ಮಂಗಳೂರು, ಕಾರವಾರದಲ್ಲಿ ಬಂದರು ನಿರ್ಮಾಣ – 13 ಐಲ್ಯಾಂಡ್ ಅಭಿವೃದ್ಧಿ: ಮಂಕಾಳ್ ವೈದ್ಯ

    ಮಂಗಳೂರು, ಕಾರವಾರದಲ್ಲಿ ಬಂದರು ನಿರ್ಮಾಣ – 13 ಐಲ್ಯಾಂಡ್ ಅಭಿವೃದ್ಧಿ: ಮಂಕಾಳ್ ವೈದ್ಯ

    ಬೆಂಗಳೂರು: ಮಂಗಳೂರು (Mangaluru) ಮತ್ತು ಕಾರವಾರದಲ್ಲಿ (Karawara) ಬಂದರು ನಿರ್ಮಾಣ ಮಾಡಲಾಗುತ್ತದೆ ಎಂದು ಮೀನುಗಾರಿಕೆ ಮತ್ತು ಬಂದರು ಇಲಾಖೆ ಸಚಿವ ಮಂಕಾಳ್ ವೈದ್ಯ (Mankal Vaidya) ತಿಳಿಸಿದ್ದಾರೆ.

    ಉತ್ತರ ಕನ್ನಡ,  ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಜನಪ್ರತಿನಿಧಿಗಳು, ವಿವಿಧ ಇಲಾಖೆ ಅಧಿಕಾರಿಗಳು ಸಭೆ ವಿಧಾನಸೌಧದಲ್ಲಿ ನಡೆಯಿತು. ಸಭೆ ಬಳಿಕ ಮಾತನಾಡಿದ ಸಚಿವ ಮಂಕಾಳ್ ವೈದ್ಯ, ಕಾರವಾರ, ಮಂಗಳೂರಿನಲ್ಲಿ ಬಂದರು ಮಾಡಲು ಇವತ್ತಿನ ಸಭೆಯಲ್ಲಿ ಚರ್ಚೆಯಾಗಿದೆ. 1 ಕೋಟಿ ರೂ. ನಿಂದ 1 ಸಾವಿರ ಕೋಟಿ ರೂ.ನಲ್ಲಿ ಬಂದರು (Port) ಮಾಡಬಹುದು. ಯಾವ ಮಾದರಿಯಲ್ಲಿ ಬಂದರು ಮಾಡಬೇಕು ಎಂದು ಚರ್ಚೆ ಮಾಡಿ ತೀರ್ಮಾನ ಮಾಡುತ್ತೇನೆ. ಮಾರುಕಟ್ಟೆ ಮತ್ತು ಪ್ರವಾಸೋದ್ಯಮ ಗಮನದಲ್ಲಿಟ್ಟುಕೊಂಡು ಬಂದರು ಮಾಡಲು ಚರ್ಚೆಯಾಗಿದೆ. ಆದಷ್ಟು ಬೇಗ ಇದಕ್ಕೆ ಬ್ಲೂ ಪ್ರಿಂಟ್ ರೆಡಿ ಮಾಡುವುದಾಗಿ ತಿಳಿಸಿದರು.

    ಮೀನುಗಾರರಿಗೆ 200 ಲೀಟರ್ ಡೀಸೆಲ್ ಕೊಡುವುದಾಗಿ ಹೇಳಿದ್ದೇವೆ ಅದನ್ನು ಕೊಡುತ್ತೇವೆ. ಮೀನುಗಾರರಿಗೆ ಸೀಮೆಎಣ್ಣೆ ಬಗ್ಗೆ ಸಮಸ್ಯೆ ‌ಇತ್ತು. ಇದರಿಂದ ಮೀನುಗಾರಿಗೆ ಸಮಸ್ಯೆ ಆಗುತ್ತಿತ್ತು. ಹೀಗಾಗಿ 10 ತಿಂಗಳು ಬಿಳಿ ಸೀಮೆಎಣ್ಣೆಯನ್ನು ಸರ್ಕಾರವೇ ಖರೀದಿ ಮಾಡಿ 35 ರೂಪಾಯಿ ಸಬ್ಸಿಡಿ ದರದಲ್ಲಿ ಮೀನುಗಾರಿಕೆ (Fishing) ಮಾಡುವವರಿಗೆ ಕೊಡುತ್ತಿದ್ದೇವೆ. ಕೇಂದ್ರ ಸರ್ಕಾರ ಸೀಮೆಎಣ್ಣೆ ಕೊಡುತ್ತಿಲ್ಲ. ಹೀಗಾಗಿ ದೇಶದಲ್ಲಿ ‌ಮೊದಲ ಬಾರಿಗೆ ನಾವೇ ಸೀಮೆಎಣ್ಣೆ ‌ಕೊಡುತ್ತಿದ್ದೇವೆ. ಸರ್ಕಾರ 300 ಲೀಟರ್ ನೀಡಲು ಸಿದ್ದ ಎಂದು ಹೇಳಿದರು.  ಇದನ್ನೂ ಓದಿ: ಬ್ರಿಟನ್‌ನಲ್ಲಿ ಹಿಂದೂಗಳೊಂದಿಗೆ ದೀಪಾವಳಿ ಆಚರಿಸಿದ ಪ್ರಧಾನಿ ರಿಷಿ ಸುನಾಕ್‌, ಪತ್ನಿ ಅಕ್ಷತಾ ಮೂರ್ತಿ

    ಬೆಂಗಳೂರಿನಲ್ಲಿ ನವೆಂಬರ್ 21 ರಂದು ವಿಶ್ವ ಮೀನುಗಾರಿಕೆ ದಿನ ಕಾರ್ಯಕ್ರಮ ಮಾಡುತ್ತಿದ್ದೇವೆ. ಅಂದು 8 ಲಕ್ಷ ಮೌಲ್ಯದ ಮೀನುಗಾರರಿಗೆ ಮೀನು ಮಾರಾಟ ಮಾಡುವ ಗಾಡಿ ಕೊಡುತ್ತಿದ್ದೇವೆ. 300 ಗಾಡಿ ಪೈಕಿ ಬೆಂಗಳೂರಿಗೆ 150 ಗಾಡಿ ಕೊಡುತ್ತಿದ್ದೇವೆ. ಸರ್ಕಾರ ಸೆಕ್ಯುರಿಟಿ ಫಂಡ್ ಹೆಸರಿನಲ್ಲಿ ಫಲಾನುಭವಿಗಳಿಂದ 2 ಲಕ್ಷ ರೂ. ಡೆಪಾಸಿಟ್ ಪಡೆದುಕೊಳ್ಳುತ್ತದೆ. ಎಸ್‌ಸಿ ಎಸ್‌ಟಿ ಫಲಾನುಭವಿಗಳಿಂದ 1.5 ಲಕ್ಷ ರೂ. ಡೆಪಾಸಿಟ್‌ ತೆಗೆದುಕೊಳ್ಳುತ್ತೇವೆ ಎಂದರು.

     

    3 ಜಿಲ್ಲೆಗಳಲ್ಲಿ 13 ಐಲ್ಯಾಂಡ್ ಗುರುತಿಸಿದ್ದು, ಅಭಿವೃದ್ಧಿ ಮಾಡಲು ಪಿಪಿಪಿ ಮಾಡೆಲ್ ಮಾಡಬೇಕಾ ಎಂಬುದರ ಬಗ್ಗೆ ಚರ್ಚೆ ನಡೆದಿದೆ. ಐಲ್ಯಾಂಡ್ ಅಭಿವೃದ್ಧಿ ಮಾಡಿದರೆ ಪ್ರವಾಸೋದ್ಯಮ ಅಭಿವೃದ್ಧಿ ಆಗಲಿದೆ. ಈ‌ ನಿಟ್ಟಿನಲ್ಲಿ ಇವತ್ತಿನ ಸಭೆಯಲ್ಲಿ ಚರ್ಚೆಯಾಗಿದೆ ಎಂದರು. ಅಂಕೋಲದಲ್ಲಿ (Ankola)‌ ವಿಮಾನ ನಿಲ್ದಾಣಕ್ಕೆ (Air Port) ಬೇಕಾದ ಜಮೀನು ಖರೀದಿಯ ಪ್ರಕ್ರಿಯೆಗಳು ನಡೆಯುತ್ತಿವೆ. ಭೂಮಿ ಕೊಡುವವರಿಗೆ ಪರ್ಯಾಯ ಭೂಮಿ ನೀಡಿ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಹೇಳಿದರು.

  • ಜಪಾನ್ ಸಮುದ್ರದಲ್ಲಿ ಎರಡು ತುಂಡಾದ ಹಡಗು – 24 ಕಿ.ಮೀ.ವರೆಗೆ ಹರಡಿದ ತೈಲ

    ಜಪಾನ್ ಸಮುದ್ರದಲ್ಲಿ ಎರಡು ತುಂಡಾದ ಹಡಗು – 24 ಕಿ.ಮೀ.ವರೆಗೆ ಹರಡಿದ ತೈಲ

    ಟೋಕಿಯೋ: ಉತ್ತರ ಜಪಾನಿನ ಬಂದರು ಬಳಿ ಸರಕು ಸಾಗಣೆಯ ಹಡಗು ಇಬ್ಭಾಗವಾಗಿದ್ದು, ಸುಮಾರು 24 ಕಿಲೋ ಮೀಟರ್ ವರೆಗೆ ತೈಲ ವ್ಯಾಪಿಸಿದೆ. ಬುಧವಾರ ಈ ಘಟನೆ ನಡೆದಿದೆ ಎಂದು ಜಪಾನ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

    ಹಡಗಿನಲ್ಲಿದ್ದ ಎಲ್ಲ ಸಿಬ್ಬಂದಿ ಸುರಕ್ಷಿತವಾಗಿದ್ದಾರೆ. ಕಿಮ್ಸನ್ ಪೊಲಾರಿಸ್ ಹೆಸರಿನ ಹಡಗು ದಡಕ್ಕೆ ರಭಸವಾಗಿ ತಾಕಿದ್ದರಿಂದ ಹಡಗು ಎರಡು ತುಂಡಾಗಿದೆ. ಬುಧವಾರ ಉತ್ತರ ಜಪಾನಿನ ಹಚಿನೊಹೆ ಬಂದರಿನಲ್ಲಿ ಈ ಅವಘಡ ಸಂಬಂಧಿಸಿದೆ.

    39 ಸಾವಿರ ಟನ್ ತೂಕದ ಕಿಮ್ಸನ್ ಪೊಲಾರಿಸ್, ಕಟ್ಟಿಗೆಯ ತುಂಡುಗಳನ್ನ ತೆಗೆದುಕೊಂಡು ಸಾಗುತ್ತಿತ್ತು. ದಡದ ಬಳಿ ಬಂದಾಗ ಸಮುದ್ರ ಆಳ ಕಡಿಮೆ ಇರುವ ಕಾರಣ, ಮುಂಭಾಗ ದಡಕ್ಕೆ ತಾಕಿದ್ದರಿಂದ ಕ್ರ್ಯಾಕ್ ಉಂಟಾಗಿ ಎರಡು ತುಂಡಾಗಿದೆ.  ಕೂಡಲೇ ಕೋಸ್ಟಲ್ ಸಿಬ್ಬಂದಿ ಮತ್ತೊಂದು ಹಡಗಿನ ಮೂಲಕ ತೆರಳಿ ಎಲ್ಲ ಸಿಬ್ಬಂದಿಯನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇದನ್ನೂ ಓದಿ: ಯುರೋಪ್‍ನಲ್ಲಿ ಕಂಗನಾ ಹಾಟ್ ಪೋಸ್ – ಅಭಿಮಾನಿಗಳು ಕ್ಲೀನ್ ಬೋಲ್ಡ್

    ಅಧಿಕಾರಿಗಳು ತೈಲ ಸೋರಿಕೆ ತಡೆಯಲು ಪ್ರಯತ್ನಿಸಿದ್ರೂ, ಅಪಾರ ಪ್ರಮಾಣದ ಇಂಧನ ಸಮುದ್ರ ಸೇರಿದೆ. ತೈಲ ಸೋರಿಕೆಯಿಂದ ಜಲಚರ ಜೀವಿ ಮತ್ತು ಪರಿಸರದ ಮೇಲೆ ಯಾವ ರೀತಿಯ ಪರಿಣಾಮ ಬೀರಿದೆ ಎಂಬುದರ ಬಗ್ಗೆ ಅಧ್ಯಯನ ನಡೆಸಲಾಗುತ್ತಿದೆ. ಹಡಗಿನ ಎಲ್ಲ ಸಿಬ್ಬಂದಿ ಚೀನಾ ಮತ್ತು ಫಿಲಿಫೈನ್ಸ್ ಮೂಲದವರು ಎಂದು ವರದಿಯಾಗಿದೆ. ಇದನ್ನೂ ಓದಿ: ನಾಗರಹೊಳೆ ಅಭಯಾರಣ್ಯಕ್ಕೆ ರಾಜೀವ್ ಗಾಂಧಿ ಹೆಸರು ತೆಗೆದು, ಜನರಲ್ ಕಾರ್ಯಪ್ಪ ಹೆಸರಿಡಲಿ: ಅಪ್ಪಚ್ಚು ರಂಜನ್

  • ಮನವಿ ಸ್ವೀಕರಿಸಲು ಬಾರದ ಸಚಿವರು – ಮನವಿ ಪತ್ರ, ಹೂವುಗಳನ್ನು ಸಮುದ್ರಕ್ಕೆ ಅರ್ಪಿಸಿ ಮೀನುಗಾರರಿಂದ ವಿನೂತನ ಪ್ರತಿಭಟನೆ

    ಮನವಿ ಸ್ವೀಕರಿಸಲು ಬಾರದ ಸಚಿವರು – ಮನವಿ ಪತ್ರ, ಹೂವುಗಳನ್ನು ಸಮುದ್ರಕ್ಕೆ ಅರ್ಪಿಸಿ ಮೀನುಗಾರರಿಂದ ವಿನೂತನ ಪ್ರತಿಭಟನೆ

    ಕಾರವಾರ: ಮೀನುಗಾರರ ಸಮಸ್ಯೆ ಆಲಿಸಲು ಬಾರದೇ ಇದ್ದುದರಿಂದ ಮೀನುಗಾರರು ಸಚಿವರಿಗೆ ನೀಡಬೇಕಿದ್ದ ಮನವಿ ಪತ್ರವನ್ನು ಪೂಜೆ ಸಲ್ಲಿಸಿ ಸಮುದ್ರಕ್ಕೆ ಬಿಡುವ ಮೂಲಕ ಹೊನ್ನಾವರದ ಕಾಸರಕೋಡು ಬಂದರಿನಲ್ಲಿ ವಿನೂತನವಾಗಿ ಮೀನುಗಾರರು ಪ್ರತಿಭಟನೆ ಮಾಡಿದರು.

    ಇಂದು ಹೊನ್ನಾವರದಲ್ಲಿ ಮೀನುಗಾರಿಕಾ ಸಚಿವ ಎಸ್.ಅಂಗಾರ ರವರು ಭೇಟಿ ನೀಡಿದ್ದರು. ಈ ಹಿನ್ನೆಲೆಯಲ್ಲಿ ಕಾಸರಗೋಡು ಬಂದರಿನಲ್ಲಿ ಖಾಸಗಿ ವಾಣಿಜ್ಯ ಬಂದರು ನಿರ್ಮಿಸದಂತೆ ಮೀನುಗಾರರು ಸಚಿವರಿಗೆ ಮನವಿ ಸಲ್ಲಿಸಲು ಹಾಗೂ ಸ್ವಾಗತಿಸಲು ಸಿದ್ಧತೆ ಮಾಡಿಕೊಂಡಿದ್ದರು. ಆದರೇ ವಿವಾದಿತ ಪ್ರದೇಶವೆಂದು ಸಚಿವರು ತಮ್ಮ ಬಂದರು ಬೇಟಿಯನ್ನು ರದ್ದುಗೊಳಿಸಿ ಉಡುಪಿಗೆ ಪ್ರಯಾಣ ಬೆಳಸಿದರು.

    ತಮ್ಮ ಸಮಸ್ಯೆ ಆಲಿಸದಿದ್ದುದಕ್ಕೆ ನೊಂದ ಮೀನುಗಾರರು ಸಚಿವರಿಗೆ ಸಲ್ಲಿಸಬೇಕಿದ್ದ ಮನವಿ ಪತ್ರ ಹಾಗೂ ಸ್ವಾಗತಿಸಲು ತಂದಿದ್ದ ಹೂವಿನ ಪುಷ್ಪಗುಚ್ಛವನ್ನು ಸಮುದ್ರಕ್ಕೆ ಪೂಜೆ ಸಲ್ಲಿಸಿ ಬಿಡುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.

    ಮನವಿ ಪತ್ರದಲ್ಲಿ ಏನಿತ್ತು? ಸಚಿವರು ಬರದೇ ಇರುವುದಕ್ಕೆ ಕಾರಣ ಏನು?
    ಮೀನುಗಾರರಿಗೆ ಸರ್ಕಾರ ಘೋಷಣೆ ಮಾಡಿದ ಪರಿಹಾರದಲ್ಲಿ ಮೀನುಗಾರಿಕಾ ವಿವಿಧ ಅವಲಂಭಿತ ಕಾರ್ಮಿಕರಿಗೆ ಆದೇಶದಲ್ಲಿ ಸೂಚಿಸಿಲ್ಲ. ಪರಿಹಾರ ಪ್ಯಾಕೇಜ್ ನಲ್ಲಿ ಗೊಂದಲವಿದ್ದು, ಎಲ್ಲಾ ಮೀನುಗಾರಿಕಾ ಅವಲಂಬಿತ ಕಾರ್ಮಿಕರಿಗೂ ಪರಿಹಾರ ನೀಡಬೇಕು ಎಂಬ ಮನವಿಯನ್ನು ಪತ್ರದಲ್ಲಿ ಉಲ್ಲೇಖ ಮಾಡಲಾಗಿತ್ತು. ಇನ್ನು ಬಂದರಿನಲ್ಲಿ ಮೀನುಗಾರಿಕಾ ಮಹಿಳೆಯರಿಗೆ ಸಮಸ್ಯೆ ಒಣಮೀನು ಒಣಗಿಸಲು ಸ್ಥಳಾವಕಾಶದ ಸಮಸ್ಯೆ, ಕುರಿತು ಮನವಿ ಪತ್ರವನ್ನ ಹೊನ್ನಾವರ ಮೀನುಗಾರರ ಸೊಸೈಟಿ, ಮೀನುಗಾರ ಕಾರ್ಮಿಕರ ಸಂಘ, ಹಸಿಮೀನು ವ್ಯಾಪಾರಿಗಳ ಸಂಘ,ಪರ್ಷಿಯನ್ ಬೋಟ್ ಯೂನಿಯನ್ ಗಳು ಸಲ್ಲಿಸಿ ತಮ್ಮ ಸಮಸ್ಯೆ ಬಗ್ಗೆ ಸಚಿವರ ಗಮನ ತರುವುದರಲ್ಲಿದ್ದರು. ಆದರೆ ಸಚಿವರು ಕೊನೆ ಕ್ಷಣದಲ್ಲಿ ಇಲ್ಲಿಗೆ ಬಾರದೇ ನೇರ ಉಡುಪಿ ಕಡೆ ಪ್ರಯಾಣಿಸಿದ್ದಾರೆ.

    ವಿವಾದ ಮತ್ತು ಗಲಾಟೆ?
    ಹೊನ್ನಾವರದಲ್ಲಿ ಕಾಸರಕೋಡು ಬಂದರು ವಿವಾದ ವರ್ಷಗಳಿಂದ ನಡೆಯುತ್ತಿದೆ. ಬಂದರಿ ಬಳಿಯಲ್ಲಿಯೇ ಹೊನ್ನಾವರ ಪೋರ್ಟ್ ಕಂಪನಿ ಪ್ರವೇಟ್ ಲಿಮಿಟೆಡ್ ಎಂಬ ಕಂಪನಿ ಖಾಸಗಿ ವಾಣಿಜ್ಯ ಬಂದರು ನಿರ್ಮಾಣ ಮಾಡುತ್ತಿದೆ. ಇದಕ್ಕೆ ಮೀನುಗಾರರು ತೀವ್ರ ವಿರೋಧ ವ್ಯಕ್ತವಾಗಿದ್ದು ಈ ವಿಷಯ ಕೋರ್ಟ್ ನಲ್ಲಿದೆ. ಈ ಕುರಿತು ಸಚಿವರಿಗೆ ಮೀನುಗಾರರು ಮನವಿ ಪತ್ರ ಸಲ್ಲಿಸುತ್ತಾರೆ ಹಾಗೂ ಗಲಾಟೆ ಮಾಡುತ್ತಾರೆ ಎಂಬ ಸಂದೇಶವನ್ನು ಸಚಿವರಿಗೆ ಅವರ ಆಪ್ತ ಮೂಲಗಳು ತಪ್ಪಾಗಿ ಮಾಹಿತಿ ನೀಡಿದೆ. ಹೀಗಾಗಿ ಮೊದಲೇ ನಿರ್ಧಾರವಾಗಿದ್ದ ಕಾಸರಕೋಡು ಬಂದರು ಭೇಟಿಯನ್ನು ಗಲಾಟೆಯಾಗಬಹುದು ಎಂಬ ನೆಪದಲ್ಲಿ ಸಚಿವರು ಕೊನೆ ಕ್ಷಣದಲ್ಲಿ ಮೊಡಕುಗೊಳಿಸಿದ್ದಾರೆ ಎಂಬ ಮಾಹಿತಿ ಅವರ ಆಪ್ತ ಮೂಲದಿಂದ ತಿಳಿದುಬಂದಿದೆ.

    ಇದೇ ಮೊದಲಬಾರಿ ಈ ಭಾಗದಲ್ಲಿ ಮೀನುಗಾರರ ಸಮಸ್ಯೆ ಆಲಿಸಲು ಹಾಗೂ ಅಭಿವೃದ್ಧಿ ಕಾರ್ಯ ವೀಕ್ಷಿಸಲು ಬಂದ ಸಚಿವರು ಹೀಗೆ ಏಕಾಏಕಿ ಮೀನುಗಾರರ ಸಮಸ್ಯೆ ಆಲಿಸದೇ ಕಾರ್ಯಕ್ರಮವನ್ನೇ ಮೊಟಕುಗೊಳಸಿ ತೆರಳಿದ್ದು ಮೀನುಗಾರರಲ್ಲಿ ಬೇಸರ ಮೂಡಿಸದೆ.

  • ಕಾರವಾರ ಬಂದರಿನಲ್ಲಿದ್ದ ವಿಕ್ರಮಾದಿತ್ಯ ನೌಕೆಯಲ್ಲಿ ಬೆಂಕಿ- ಎಲ್ಲ ಸಿಬ್ಬಂದಿ ಸುರಕ್ಷಿತ

    ಕಾರವಾರ ಬಂದರಿನಲ್ಲಿದ್ದ ವಿಕ್ರಮಾದಿತ್ಯ ನೌಕೆಯಲ್ಲಿ ಬೆಂಕಿ- ಎಲ್ಲ ಸಿಬ್ಬಂದಿ ಸುರಕ್ಷಿತ

    ಕಾರವಾರ: ಭಾರತದ ವಿಮಾನವಾಹಕ ನೌಕೆ ಐಎನ್‍ಎಸ್ ವಿಕ್ರಮಾದಿತ್ಯದಲ್ಲಿ ಇಂದು ಬೆಳಗ್ಗೆ ಸಣ್ಣ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಯಾವುದೇ ಅನಾಹುತ ಸಂಭವಿಸಿಲ್ಲ, ಎಲ್ಲ ಸಿಬ್ಬಂದಿ ಸುರಕ್ಷಿತವಾಗಿದ್ದಾರೆ ಎಂದು ನೌಕಾಪಡೆಯ ವಕ್ತಾರರು ತಿಳಿಸಿದ್ದಾರೆ.

    ಬೆಂಕಿಯನ್ನು ನಂದಿಸಲಾಗಿದ್ದು, ಎಲ್ಲ ಸಿಬ್ಬಂದಿ ಸುರಕ್ಷಿತವಾಗಿದ್ದಾರೆ. ಯುದ್ಧ ನೌಕೆಯಲ್ಲಿ ನಾವಿಕರು ವಸತಿ ಇರುವ ಭಾಗದಿಂದ ಹೊಗೆ ಕಾಣಿಸಿಕೊಂಡಿದ್ದನ್ನು ಸಿಬ್ಬಂದಿ ಗಮನಿಸಿದ್ದಾರೆ ಎಂದು ನೌಕಾಪಡೆಯ ವಕ್ತಾರರು ತಿಳಿಸಿದ್ದಾರೆ.

    ಹಡಗಿನ ಕರ್ತವ್ಯ ಸಿಬ್ಬಂದಿ ಬೆಂಕಿ ನಂದಿಸಲು ತಕ್ಷಣವೇ ಕಾರ್ಯಪ್ರವೃತ್ತರಾಗಿದ್ದು, ಬೆಂಕಿ ನಂದಿಸಿದ್ದಾರೆ. ಎಲ್ಲ ಸಿಬ್ಬಂದಿ ಸುರಕ್ಷಿತವಾಗಿದ್ದಾರೆ. ದೊಡ್ಡ ಹಾನಿ ಸಂಭವಿಸಿಲ್ಲ. ಈ ಬಗ್ಗೆ ತನಿಖೆಗೆ ಆದೇಶಿಸಿದ್ದು, ಕರ್ನಾಟಕದ ಕಾರವಾರದಲ್ಲಿ ಘಟನೆ ಸಂಭವಿಸಿದೆ ಎಂದು ಸ್ಪಷ್ಟಪಡಿಸಿದ್ದಾರೆ.

    ಹಡಗಿನ ವಿಶೇಷವೇನು?
    1978 ರಲ್ಲಿ ಈ ಹಡಗು ನಿರ್ಮಾಣಗೊಂಡು ರಷ್ಯಾದ ನೌಕಾನೆಲೆಯಲ್ಲಿ ಸೇವೆ ಸಲ್ಲಿಸಿ ನಂತರ 1996 ರಲ್ಲಿ ಇದಕ್ಕೆ ನಿವೃತ್ತಿ ನೀಡಲಾಯಿತು. ನಂತರ ಅಂದಿನ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ರವರು 2004 ರಲ್ಲಿ ಒಪ್ಪಂದದ ಮೂಲಕ 97.4 ಕೋಟಿ ರೂಗಳನ್ನು ನೀಡಿ ಖರೀದಿಸಲು ಮಾತುಕತೆ ನಡೆದಿತ್ತು. ಇದೇ ಸಂದರ್ಭದಲ್ಲಿ ಇದರ ನವೀಕರಣ ನಡೆಸಿ ರಷ್ಯಾದ ಹೆಚ್ಚುವರಿ ಬೇಡಿಕೆಯಂತೆ ಯುಪಿಎ ಸರ್ಕಾರ 235 ಕೋ.ಡಾಲರ್(10,575 ಕೋ.ರೂಪಾಯಿ 2010ರ ದರದಲ್ಲಿ) ನೀಡಿ ನವೀಕರಣಗೊಂಡು 2013ರ ನವೆಂಬರಿನಲ್ಲಿ ಭಾರತೀಯ ನೌಕಾಪಡೆ ಸೇವೆಗೆ ಸಮರ್ಪಿಸಲಾಗಿತ್ತು.

    44,500 ಟನ್ ತೂಕ, 284 ಮೀಟರ್ ಉದ್ದ, 60 ಮೀಟರ್ ಎತ್ತರ, 34 ಯುದ್ಧ ವಿಮಾನ ಮತ್ತು ಹೆಲಿಕಾಪ್ಟರ್ ಗಳನ್ನು ಹೊರುವ ಸಾಮಥ್ರ್ಯ ಹೊಂದಿದೆ. 1,600 ಸಿಬ್ಬಂದಿಗಳು, 22 ಅಂತಸ್ತುಗಳಿರುವ ನೌಕೆಗೆ ಒಮ್ಮೆ ಇಂಧನ ಭರ್ತಿಯಾದರೆ 13 ಸಾವಿರ ಕಿ.ಮೀ ಕ್ರಮಿಸುವ ಸಾಮಥ್ರ್ಯ ಹೊಂದಿದೆ. ಸದ್ಯ ಅರಬ್ಬಿ ಸಮುದ್ರದ ಗಡಿಯಲ್ಲಿ ಕಾವಲುಗಾರನಾಗಿ ಸೇವೆ ಸಲ್ಲಿಸುತ್ತಿದ್ದು ಕಾರವಾರದ ಕದಂಬ ನೌಕಾ ನೆಲೆ ಇದರ ತಂಗುದಾಣವಾಗಿದೆ.

    ಈ ಹಿಂದೆ ನಡೆದಿತ್ತು ದುರಂತ!
    ಈ ಹಿಂದೆ ಸಹ ವಿಕ್ರಮಾದಿತ್ಯ ಹಡಗಿನಲ್ಲಿ ಬಾಯ್ಲರ್ ಸಿಡಿದು ಉತ್ತರ ಪ್ರದೇಶ ಮೂಲದ ಲೆಫ್ಟಿನೆಂಟ್ ಕಮಾಂಡರ್ ಚೌಹಾಣ್ ಮೃತಪಟ್ಟು 7 ಮಂದಿ ಗಂಭೀರವಾಗಿ ಗಾಯಗೊಂಡಿದ್ದರು. ಇದರ ನಂತರ ಮುಂಬೈನಲ್ಲಿ ತಾಂತ್ರಿಕ ಸಮಸ್ಯೆಯನ್ನು ಸರಿಪಡಿಸಿ ಗಡಿಯಲ್ಲಿ ಪಹರೆಗೆ ತೆರಳಿತ್ತು.

  • ಪಬ್ಲಿಕ್ ಟಿವಿ ಇಂಪ್ಯಾಕ್ಟ್ – ಮಂಗ್ಳೂರಿಗೆ ಹೊರ ರಾಜ್ಯಗಳಿಂದ ಬರೋ ಮೀನು ಲಾರಿಗಳಿಗೆ ನಿರ್ಬಂಧ

    ಪಬ್ಲಿಕ್ ಟಿವಿ ಇಂಪ್ಯಾಕ್ಟ್ – ಮಂಗ್ಳೂರಿಗೆ ಹೊರ ರಾಜ್ಯಗಳಿಂದ ಬರೋ ಮೀನು ಲಾರಿಗಳಿಗೆ ನಿರ್ಬಂಧ

    ಮಂಗಳೂರು: ಹೊರ ರಾಜ್ಯಗಳಿಂದ ಮಂಗಳೂರಿನ ಬಂದರಿಗೆ ಅನೇಕ ಮೀನು ಲಾರಿಗಳು ಬರುತ್ತಿದ್ದವು. ಈ ವೇಳೆ ಯಾವುದೇ ಸಾಮಾಜಿಕ ಅಂತರ ಇಲ್ಲದೆ ಬಂದರಿನಲ್ಲಿ ಸಾವಿರಾರು ಮಂದಿ ಸೇರುತ್ತಿದ್ದರು. ಈ ಬಗ್ಗೆ ಪಬ್ಲಿಕ್ ಟಿವಿ ವರದಿ ಮಾಡಿತ್ತು. ಇದೀಗ ಎಚ್ಚೆತ್ತ ಸಚಿವರು ಮಂಗಳೂರಿಗೆ ಹೊರ ರಾಜ್ಯಗಳಿಂದ ಬರುವ ಮೀನು ಲಾರಿಗಳಿಗೆ ನಿರ್ಬಂಧ ಹೇರಿದ್ದಾರೆ.

    ಮೀನುಗಾರಿಕಾ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೊರ ರಾಜ್ಯಗಳಿಂದ ಬರುವ ಮೀನು ಲಾರಿಗಳಿಗೆ ನಿರ್ಬಂಧ ಹೇರಿ ಆದೇಶ ಹೊರಡಿಸಿದ್ದಾರೆ. ಮಂಗಳೂರು ಬಂದರಿಗೆ ಹೊರ ರಾಜ್ಯದ ಮೀನಿನ ಲಾರಿಗಳು ಬರುತ್ತಿದ್ದವು. ಮೀನು ಅನ್ ಲೋಡಿಂಗ್ ವೇಳೆ ಸಾವಿರಾರು ಜನರು ಮುಗಿಬೀಳುತ್ತಿದ್ದರು. ಈ ವೇಳೆ ಮೀನಿನ ವ್ಯಾಪಾರಿಗಳು ಯಾವುದೇ ಸಾಮಾಜಿಕ ಅಂತರ ಇಲ್ಲದೆ ಮುಗಿಬೀಳುತ್ತಿದ್ದರು. ಈ ಬಗ್ಗೆ ಪಬ್ಲಿಕ್ ಟಿವಿ ವರದಿ ಮಾಡಿತ್ತು. ಇದೀಗ ಪಬ್ಲಿಕ್ ಟಿವಿ ಸುದ್ದಿಯಿಂದ ಎಚ್ಚೆತ್ತ ದಕ್ಷಿಣ ಕನ್ನಡ ಜಿಲ್ಲಾಡಳಿತ ಹೊರ ರಾಜ್ಯದ ಮೀನಿನ ಲಾರಿಗಳಿಗೆ ಬ್ರೇಕ್ ಹಾಕಿದೆ.

    ಕಳೆದ ನಾಲ್ಕು ದಿನಗಳಿಂದ ಜಿಲ್ಲಾಡಳಿತ ಮೀನು ಸರಬರಾಜಿಗೆ ಅನುಮತಿ ನೀಡಿದ್ದು, ಮಂಗಳೂರಿನ ಮೀನು ವ್ಯಾಪಾರಿಗಳು ಮೀನು ಖರೀದಿಗೆ ಮುಗಿಬಿದ್ದಿದ್ದರು. ಯಾವುದೇ ಸಾಮಾಜಿಕ ಅಂತರ ಇಲ್ಲದೆ 2 ಸಾವಿರಕ್ಕೂ ಹೆಚ್ಚು ಮಂದಿ ಬಂದರಿನಲ್ಲಿ ಸೇರುತ್ತಿದ್ದರು. ಅನ್ ಲೋಡಿಂಗ್ ಮತ್ತು ಏಲಂ ಮೂಲಕ ವಿತರಣೆ ಮಾಡುತ್ತಿದ್ದಾರೆ. ಮಾಸ್ಕ್, ಗ್ಲೌಸ್ ಯಾವುದೇ ರಕ್ಷಾ ಕವಚ ಇಲ್ಲದೆ ಕಾರ್ಮಿಕರು ತೊಡಗಿಸಿಕೊಂಡಿದ್ದರು.

    ದಿನಕ್ಕೆ ನೂರಕ್ಕೂ ಹೆಚ್ಚು ಹೊರ ರಾಜ್ಯದ ಲಾರಿಗಳು ಬರುತ್ತಿದ್ದು, ಇಲ್ಲಿಂದ ಖರೀದಿಸಿದ ಮೀನುಗಳನ್ನು ಮರುದಿನ ಕರಾವಳಿಯಾದ್ಯಂತ ಸರಬರಾಜು ಮಾಡಲಾಗುತ್ತೆ. ಈ ಮೂಲಕ ಉಚಿತವಾಗಿ ಕೊರೊನಾ ಕೂಡ ಗ್ರಾಮ ಗ್ರಾಮಗಳಿಗೆ ಸರಬರಾಜು ಆಗುವ ಅಪಾಯ ಎದುರಾಗಿತ್ತು. ಹಿಂದೆಲ್ಲಾ ಮಂಗಳೂರಿನ ಮೀನುಗಾರಿಕಾ ಬಂದರಿನಿಂದ ಹೊರ ರಾಜ್ಯಕ್ಕೆ ಮೀನು ಸಾಗಾಟ ಆಗುತ್ತಿತ್ತು. ಈಗ ಕರ್ನಾಟಕದಲ್ಲಿ ಆಳಸಮುದ್ರ ಮೀನುಗಾರಿಕೆ ಇಲ್ಲದ ಕಾರಣ ಆಂಧ್ರ ಪ್ರದೇಶ, ತಮಿಳನಾಡು ಕಡೆಯಿಂದ ಮೀನು ಪೂರೈಕೆಯಾಗುತ್ತಿದೆ.

    ಮುಸ್ಲಿಮರಿಗೆ ರಂಜಾನ್ ಆಗಿರುವ ಕಾರಣ ರಾತ್ರಿ ವೇಳೆ ಮೀನು ವಹಿವಾಟು ನಡೆಸಲು ಜಿಲ್ಲಾಡಳಿತ ವಿಶೇಷ ಅನುಮತಿ ನೀಡಿತ್ತು.  ಆದರೆ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಯಾವುದೇ ವ್ಯವಸ್ಥೆ ಮಾಡದಿರುವುದು ಕೊರೊನಾ ಸೋಂಕು ಹರಡುವ ಸಾಧ್ಯತೆ ಇತ್ತು. ಅಲ್ಲದೇ ಜಿಲ್ಲಾಡಳಿತವೇ ಇಡೀ ಜಿಲ್ಲೆಯ ಜನರಿಗೆ ಕೊರೊನಾ ಸೋಂಕನ್ನು ಹರಡುತ್ತಿದೆ ಎಂಬ ಆರೋಪ ಕೇಳಿ ಬಂದಿತ್ತು. ಇದೀಗ ಜಿಲ್ಲಾಡಳಿತ ಹೊರ ರಾಜ್ಯಗಳಿಂದ ಬರುವ ಮೀರು ಲಾರಿಗಳಿಗೆ ಬ್ರೇಕ್ ಹಾಕಿದೆ.

  • ಮಂಗ್ಳೂರು ಬಂದರಿನಲ್ಲಿ ಭಾರೀ ಸಂಖ್ಯೆಯಲ್ಲಿ ಸೇರುತ್ತಿದ್ದಾರೆ ಜನ – ಕೊರೊನಾ ನಿಯಂತ್ರಣ ಹೇಗೆ?

    ಮಂಗ್ಳೂರು ಬಂದರಿನಲ್ಲಿ ಭಾರೀ ಸಂಖ್ಯೆಯಲ್ಲಿ ಸೇರುತ್ತಿದ್ದಾರೆ ಜನ – ಕೊರೊನಾ ನಿಯಂತ್ರಣ ಹೇಗೆ?

    – ಮೀನು ಖರೀದಿಗೆ ಮುಗಿಬಿದ್ದ ವ್ಯಾಪಾರಿಗಳು
    – ಸಾಮಾಜಿಕ ಅಂತರ ಇಲ್ಲ, ಮಾಸ್ಕ್ ಧರಿಸಿಲ್ಲ
    – ಜಿಲ್ಲಾಡಳಿತದಿಂದ ಕೊರೊನಾ ಸೋಂಕು – ಆರೋಪ

    ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಇದೀಗ ಕೊರೊನಾ ಹಾಟ್‍ಸ್ಪಾಟ್ ಆಗಿದೆ. ಕೊರೊನಾ ಪಾಸಿಟಿವ್ ಕೇಸ್ ಕಡಿಮೆ ಆಯಿತು ಎಂದು ನಿಟ್ಟುಸಿರು ಬಿಡುವಾಗಲೇ ಮತ್ತೆ ಮತ್ತೆ ಕೊರೊನಾ ಪಾಸಿಟಿವ್ ಹೆಚ್ಚಾಗಿ ಇಬ್ಬರು ಮೃತಪಟ್ಟಿದ್ದಾರೆ. ಇದೀಗ ಜಿಲ್ಲಾಡಳಿತವೇ ಇಡೀ ಜಿಲ್ಲೆಯ ಜನರಿಗೆ ಕೊರೊನಾ ಸೋಂಕನ್ನು ಹರಡುತ್ತಿದೆ ಎಂಬ ಆರೋಪ ಕೇಳಿ ಬಂದಿದೆ.

    ಕೊರೊನಾ ಹರಡಲು ದಕ್ಷಿಣ ಕನ್ನಡ ಜಿಲ್ಲಾಡಳಿತ ದಾರಿ ಮಾಡಿಕೊಟ್ಟಿರುವ ಬೆಳವಣಿಗೆ ನಡೆದಿದೆ. ಮಂಗಳೂರಿನ ಮೀನುಗಾರಿಕಾ ಬಂದರಿನಲ್ಲಿ ರಾತ್ರಿ ವೇಳೆ ಹೊರ ರಾಜ್ಯಗಳಿಂದ ಮೀನಿನ ಲಾರಿಗಳು ಬರುತ್ತಿದ್ದು, ಭಾರೀ ಸಂಖ್ಯೆಯಲ್ಲಿ ಜನಜಂಗುಳಿ ಏರ್ಪಡುತ್ತಿದೆ.

    ಕಳೆದ ನಾಲ್ಕು ದಿನಗಳಿಂದ ಜಿಲ್ಲಾಡಳಿತ ಮೀನು ಸರಬರಾಜಿಗೆ ಅನುಮತಿ ನೀಡಿದ್ದು, ಮಂಗಳೂರಿನ ಮೀನು ವ್ಯಾಪಾರಿಗಳು ಮೀನು ಖರೀದಿಗೆ ಮುಗಿಬಿದ್ದಿದ್ದಾರೆ. ಯಾವುದೇ ಸಾಮಾಜಿಕ ಅಂತರ ಇಲ್ಲದೆ 2 ಸಾವಿರಕ್ಕೂ ಹೆಚ್ಚು ಮಂದಿ ಬಂದರಿನಲ್ಲಿ ಸೇರುತ್ತಿದ್ದಾರೆ. ಅನ್ ಲೋಡಿಂಗ್ ಮತ್ತು ಏಲಂ ಮೂಲಕ ವಿತರಣೆ ಮಾಡುತ್ತಿದ್ದಾರೆ. ಮಾಸ್ಕ್, ಗ್ಲೌಸ್ ಯಾವುದೇ ರಕ್ಷಾ ಕವಚ ಇಲ್ಲದೆ ಕಾರ್ಮಿಕರು ತೊಡಗಿಸಿಕೊಂಡಿದ್ದಾರೆ.

    ದಿನಕ್ಕೆ ನೂರಕ್ಕೂ ಹೆಚ್ಚು ಹೊರ ರಾಜ್ಯದ ಲಾರಿಗಳು ಬರುತ್ತಿದ್ದು, ಇಲ್ಲಿಂದ ಖರೀದಿಸಿದ ಮೀನುಗಳನ್ನು ಮರುದಿನ ಕರಾವಳಿಯಾದ್ಯಂತ ಸರಬರಾಜು ಮಾಡಲಾಗುತ್ತೆ. ಈ ಮೂಲಕ ಉಚಿತವಾಗಿ ಕೊರೊನಾ ಕೂಡ ಗ್ರಾಮ ಗ್ರಾಮಗಳಿಗೆ ಸರಬರಾಜು ಆಗುವ ಅಪಾಯ ಎದುರಾಗಿದೆ. ಹಿಂದೆಲ್ಲಾ ಮಂಗಳೂರಿನ ಮೀನುಗಾರಿಕಾ ಬಂದರಿನಿಂದ ಹೊರ ರಾಜ್ಯಕ್ಕೆ ಮೀನು ಸಾಗಾಟ ಆಗುತ್ತಿತ್ತು. ಈಗ ಕರ್ನಾಟಕದಲ್ಲಿ ಆಳಸಮುದ್ರ ಮೀನುಗಾರಿಕೆ ಇಲ್ಲದ ಕಾರಣ ಆಂಧ್ರ ಪ್ರದೇಶ, ತಮಿಳನಾಡು ಕಡೆಯಿಂದ ಮೀನು ಪೂರೈಕೆಯಾಗುತ್ತಿದೆ.

    ಮುಸ್ಲಿಮರಿಗೆ ರಂಜಾನ್ ಆಗಿರುವ ಕಾರಣ ರಾತ್ರಿ ವೇಳೆ ಮೀನು ವಹಿವಾಟು ನಡೆಸಲು ಜಿಲ್ಲಾಡಳಿತ ವಿಶೇಷ ಅನುಮತಿ ನೀಡಿದೆ. ಆದರೆ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಯಾವುದೇ ವ್ಯವಸ್ಥೆ ಮಾಡದಿರುವುದು ಕೊರೊನಾ ಸೋಂಕು ಹರಡುವ ಸಾಧ್ಯತೆ ಇದೆ.

    ಇದೇ ರೀತಿ ಮುಂದುವರಿದರೆ ಮಂಗಳೂರಿನ ಮೀನುಗಾರಿಕಾ ಬಂದರಿನಿಂದ ಕೊರೊನಾ ಫ್ರೀಯಾಗಿ ರಾಜ್ಯದೆಲ್ಲೆಡೆ ರವಾನೆಯಾಗುವ ಸಾಧ್ಯತೆಯಿದೆ. ಇಂತಹ ಅವ್ಯವಸ್ಥೆಗೆ ದಕ್ಷಿಣ ಕನ್ನಡ ಜಿಲ್ಲಾಡಳಿತ, ಉಸ್ತುವಾರಿ ಸಚಿವರು, ಸಂಸದರು ಹಾಗೂ ಶಾಸಕರು ಕಾರಣರಾಗಲಿದ್ದಾರೆ. ರಾಜ್ಯದೆಲ್ಲೆಡೆ ಲಾಕ್‍ಡೌನ್ ಇದ್ದರೂ ರೆಡ್‍ಝೋನ್ ಮಂಗಳೂರಿನಲ್ಲಿ ಮೀನು ವಹಿವಾಟಿಗೆ ಅವಕಾಶ ಕೊಟ್ಟಿದ್ದು, ಹೇಗೆ ಅನ್ನುವ ಪ್ರಶ್ನೆಗೆ ಸ್ವತಃ ಮೀನುಗಾರಿಕೆ ಸಚಿವರಾಗಿರುವ ಜಿಲ್ಲಾ ಉಸ್ತುವಾರಿ ಸಚಿವರೇ ಉತ್ತರ ನೀಡಬೇಕಷ್ಟೆ.

  • ಭೀತಿ ನಡುವೆಯೇ ಮಂಗ್ಳೂರಲ್ಲಿ ಕೊರೊನಾ ನೋಡಲು ಮುಗಿಬಿದ್ದ ಜನ!

    ಭೀತಿ ನಡುವೆಯೇ ಮಂಗ್ಳೂರಲ್ಲಿ ಕೊರೊನಾ ನೋಡಲು ಮುಗಿಬಿದ್ದ ಜನ!

    ಮಂಗಳೂರು: ಜಗತ್ತಿನಲ್ಲಿ ಕೊರೊನಾ ಭೀತಿ ದಿನದಿಂದ ದಿನಕ್ಕೆ ಹೆಚ್ಚಾಗಿದೆ. ಈ ಮಧ್ಯೆ ಕಡಲ ನಗರಿ ಮಂಗಳೂರು ಬಂದರಿನಲ್ಲಿ ಕೊರೊನಾ ಪತ್ತೆಯಾಗಿದೆ. ಆದರೆ ಇಲ್ಲಿ ಮಾತ್ರ ಯಾರೂ ಆತಂಕ ಪಡದೇ ಕುತೂಹಲದಿಂದ ನೋಡುತ್ತಿದ್ದಾರೆ.

    ಹೌದಾ ಅಂತ ಹುಬ್ಬೇರಿಸಬೇಡಿ. ಇದು ಮಹಾಮಾರಿ ವೈರಸ್ ಕೊರೊನಾ ಅಲ್ಲ ಬದಲಿಗೆ ಇದು ಕೊರೊನಾ ಮೀನು. ಕೊರೊನಾ ಬರುವುದೇ ಬೇಡ ಅಂತ ದೇವರಲ್ಲಿ ಮೊರೆ ಇಟ್ಟು ಮುಂಜಾಗ್ರತಾ ಕ್ರಮ ಕೈಗೊಂಡರೆ ಇಲ್ಲಿ ಮಾತ್ರ ಜನ ಕೊರೊನಾ ಬೇಕು ಅಂತಿದ್ದಾರೆ.

    ಕೊರೊನಾ ಕಡಲಿನಲ್ಲಿ ಸಿಗುವ ಬಲು ಅಪರೂಪದ ಮೀನು ಆಗಿದೆ. ಕೊರೊನಾ ಮೀನಿಗೆ ಕೆ.ಜಿಗೆ 1,800 ರಿಂದ 2,000ವರೆಗೆ ಉತ್ತಮ ಬೆಲೆ ಇದೆ. ಕರಾವಳಿ ಜಿಲ್ಲೆಯಲ್ಲಿ ಇದರ ಬೇಡಿಕೆ ಕಡಿಮೆ. ಹೀಗಾಗಿ ಕೊರೊನಾ ಮೀನಿಗೆ ಉತ್ತಮ ಬೇಡಿಕೆ ಇರುವ ಗುಜರಾತ್ ಸೇರಿದಂತೆ ಬೇರೆ ರಾಜ್ಯಗಳಿಗೆ ಇದು ರಫ್ತು ಆಗುತ್ತಿದೆ.

    ಮತ್ಸ್ಯ ಕ್ಷಾಮದಿಂದ ಕಂಗೆಟ್ಟಿದ್ದ ಮೀನುಗಾರರಿಗೆ ಕೊರೊನಾ ಮೀನು ಸಿಕ್ಕಿದ್ದು ಖುಷಿ ಕೊಟ್ಟಿದೆ. ಇದರ ನಡುವೆ ವೈರಸ್ ಕೊರೊನಾದಿಂದ ಬಂದರಿನಲ್ಲಿ ಕೊರೊನಾ ಮೀನಿನ ಸದ್ದು ಕೂಡ ಜೋರಾಗಿದೆ.

  • ಮಂಗ್ಳೂರಿಗೆ ಬಂದ ಕೋಸ್ಟಾ ವಿಕ್ಟೋರಿಯಾ ಹಡಗು

    ಮಂಗ್ಳೂರಿಗೆ ಬಂದ ಕೋಸ್ಟಾ ವಿಕ್ಟೋರಿಯಾ ಹಡಗು

    ಮಂಗಳೂರು: ಬೇಸಿಗೆಯಲ್ಲಿ ಪ್ರವಾಸಿ ತಾಣಗಳಿಗೆ ಭೇಟಿ ನೀಡುವ ಉದ್ದೇಶದಿಂದ ಕಡಲ ನಗರಿ ಮಂಗಳೂರಿಗೆ ಸಾವಿರಾರು ವಿದೇಶಿ ಪ್ರವಾಸಿಗರು ಆಗಮಿಸುತ್ತಾರೆ.

    ಹಡಗಿನ ಮೂಲಕ ಬರುವ ವಿದೇಶಿ ಪ್ರವಾಸಿಗರು ಹಲವು ದಿನಗಳ ಕಾಲ ಮಂಗಳೂರಿನ ಪ್ರವಾಸಿ ತಾಣಗಳಿಗೆ ಭೇಟಿ ನೀಡಿ, ಇಲ್ಲಿನ ಸಂಸ್ಕ್ರತಿ, ಜನ ಜೀವನ ಆಚಾರ ವಿಚಾರಗಳನ್ನು ತಿಳಿದುಕೊಳ್ಳುತ್ತಾರೆ. ಅದರಂತೆ ಇಂದು ಮಂಗಳೂರಿನ ನವಮಂಗಳೂರು ಬಂದರ್‌ಗೆ ವಿದೇಶಿ ಪ್ರವಾಸಿಗರು ಇರುವ ಕೋಸ್ಟಾ ವಿಕ್ಟೋರಿಯಾ ಎಂಬ ವಿದೇಶಿ ಹಡಗು ಆಗಮಿಸಿದೆ.

    ಕೋಸ್ಟಾ ವಿಕ್ಟೋರಿಯಾ ಹಡಗು ಈ ಬಾರಿಯ 13ನೇ ವಿದೇಶಿ ಹಡಗಾಗಿದೆ. ಈ ವಿದೇಶಿ ಹಡಗಿನಲ್ಲಿ 1,800 ಪ್ರವಾಸಿಗರು ಮತ್ತು 800 ಸಿಬ್ಬಂದಿ ಆಗಮಿಸಿದ್ದರು. ಮಂಗಳೂರಿಗೆ ಬಂದ ಪ್ರವಾಸಿಗರು ಮಂಗಳೂರಿನ ಪ್ರಸಿದ್ಧ ಚರ್ಚ್, ದೇವಸ್ಥಾನ ಮತ್ತು ಮಾರುಕಟ್ಟೆ ಪ್ರದೇಶ, ಬೀಚ್ ಹಲವು ಕಡೆ ಪ್ರವಾಸಿ ತಾಣಗಳಿಗೆ ಭೇಟಿ ನೀಡಲಿದ್ದಾರೆ. ಮುಂಬೈನಿಂದ ಬಂದ ಕೋಸ್ಟಾ ವಿಕ್ಟೋರಿಯಾ ಹಡಗು ಮುಂದೆ ಕೊಚ್ಚಿನ್‍ಗೆ ಪ್ರಯಾಣ ಬೆಳೆಸಲಿದೆ.