Tag: Positive

  • ನಾಲ್ವರು ಗನ್‍ಮ್ಯಾನ್‍ಗಳಿಗೂ ಕೊರೊನಾ ಪಾಸಿಟಿವ್ – ರೇವಣ್ಣನಿಗೆ ಆತಂಕ

    ನಾಲ್ವರು ಗನ್‍ಮ್ಯಾನ್‍ಗಳಿಗೂ ಕೊರೊನಾ ಪಾಸಿಟಿವ್ – ರೇವಣ್ಣನಿಗೆ ಆತಂಕ

    ಹಾಸನ: ಮಾಜಿ ಸಚಿವ ಹೆಚ್‍ಡಿ ರೇವಣ್ಣ ಅವರ ಗನ್‍ಮ್ಯಾನ್‍ಗಳಿಗೆ ಕೊರೊನಾ ಪಾಸಿಟಿವ್ ಬಂದಿದ್ದು, ರೇವಣ್ಣವರಿಗೂ ಕೊರೊನಾ ಭೀತಿ ಎದುರಾಗಿದೆ.

    ಸೋಮವಾರ ರೇವಣ್ಣ ಅವರು ಗನ್‍ಮ್ಯಾನ್‍ಗಳು ಸೇರಿದಂತೆ ಅವರ 9 ಜನ ಸಿಬ್ಬಂದಿಗೆ ಕೊರೊನಾ ತಪಾಸಣೆ ಮಾಡಲಾಗಿತ್ತು. ಇಂದು ಬಂದ ವರದಿಯಲ್ಲಿ ರೇವಣ್ಣ ಅವರ ನಾಲ್ವರು ಗನ್‍ಮ್ಯಾನ್‍ಗಳಿಗೂ ಕೊರೊನಾ ಪಾಸಿಟಿವೆ ಬಂದಿದೆ.

    ಸದ್ಯ ರೇವಣ್ಣ ಅವರು ಬೆಂಗಳೂರಿನಲ್ಲಿ ಇದ್ದು, ಅವರ ಕೊರೊನಾ ತಪಾಸಣೆಯೂ ಒಳಪಡುವ ಸಾಧ್ಯತೆ ಇದೆ. ಕಳೆದ ಸೋಮವಾರ ರೇವಣ್ಣನವರ ಬೆಂಗಾವಲು ಪಡೆಯ 9 ಜನ ಪೊಲೀಸರಿಗೆ ಕೊರೊನಾ ಪರೀಕ್ಷೆ ಮಾಡಲಾಗಿತ್ತು. ಅವರಲ್ಲಿ ನಾಲ್ವರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಈಗ ಅವರ ಸೋಂಕಿತ ಮೂವರ ಜೊತೆ ಬೆಂಗಳೂರಿಗೆ ಬಂದಿದ್ದಾರೆ. ಇನ್ನೊಬ್ಬ ಸೋಂಕಿತ ಹಾಸನದಲ್ಲೇ ಇದ್ದಾರೆ.

    ಇಂದು ಹಾಸನದಲ್ಲಿ 15 ಕೊರೊನಾ ಪಾಸಿಟಿವ್ ಪ್ರಕರಣಗಳು ಬಂದಿವೆ ಎಂದು ಹಾಸನದ ಡಿಎಚ್‍ಒ ಸತೀಶ್ ಹೇಳಿದ್ದಾರೆ. ಹೊಳೆನರಸೀಪುರ ತಾಲೂಕು ಒಂದರಲ್ಲೇ 11 ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ. 11 ಜನ ಪೊಲೀಸರಲ್ಲಿ ನಾಲ್ಕು ಜನ ಪೊಲೀಸರಿಗೆ ಪಾಸಿಟಿವ್ ಬಂದಿದೆ. ನಾಲ್ಕು ಜನ ಪೊಲೀಸರಲ್ಲಿ ಮೂವರು ಗಂಟಲು ದ್ರವ ಪರೀಕ್ಷೆಗೆ ತೆಗೆದುಕೊಂಡ ನಂತರ ಬೆಂಗಳೂರಿಗೆ ಹೋಗಿದ್ದಾರೆ. ಹೀಗಾಗಿ ಮೂವರು ಬೆಂಗಳೂರಿನಲ್ಲಿಯೇ ಚಿಕಿತ್ಸೆಗೆ ದಾಖಲಾಗಿದ್ದಾರೆ ಎಂದು ತಿಳಿಸಿದ್ದಾರೆ.

  • ಮೂರು ದಿನಗಳಲ್ಲಿ 5 ಸಾವು – ಬಳ್ಳಾರಿಯಲ್ಲಿ ಕೊರೊನಾ ರಣಕೇಕೆ

    ಮೂರು ದಿನಗಳಲ್ಲಿ 5 ಸಾವು – ಬಳ್ಳಾರಿಯಲ್ಲಿ ಕೊರೊನಾ ರಣಕೇಕೆ

    ಬಳ್ಳಾರಿ: ಗಣಿ ಜಿಲ್ಲೆಯಲ್ಲಿ ಮಹಾಮಾರಿ ಕೊರೊನಾ ಸೋಂಕಿಗೆ ಮತ್ತಿಬ್ಬರು ಬಲಿಯಾಗಿದ್ದು, ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 7ಕ್ಕೇರಿದೆ.

    ನೆರೆಯ ರಾಜ್ಯ ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ರಾಯದುರ್ಗದ ನಿವಾಸಿ 28 ವರ್ಷದ ಯುವಕ ಹಾಗೂ ಜಿಲ್ಲೆಯ ಸಂಡೂರು ತಾಲೂಕಿನ ವಡ್ಡು ಗ್ರಾಮದ ನಿವಾಸಿ 59 ವರ್ಷದ ವ್ಯಕ್ತಿ ಸಾವನ್ನಪ್ಪಿದ್ದಾರೆಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ತಿಳಿಸಿದ್ದಾರೆ.

    ಜೂನ್ 18ರಂದು ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ಮೃತ ಯುವಕ ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ. ಯುವಕ ಸಾವಿನ ಬಳಿಕ ಕೋವಿಡ್ ಪರೀಕ್ಷೆ ಮಾಡಲಾಗಿದ್ದು, ಈಗ ಕೋವಿಡ್ ಪರೀಕ್ಷಾ ವರದಿ ಪಾಸಿಟಿವ್ ಎಂದು ಬಂದಿದೆ. 59 ವರ್ಷದ ವ್ಯಕ್ತಿ ಸಹ ತೀವ್ರ ಉಸಿರಾಟದ ತೊಂದರೆಯಿಂದ ಸಾವನ್ನಪ್ಪಿದ್ದಾರೆ. ಈ ವ್ಯಕ್ತಿ ಜಿಂದಾಲ್ ಗುತ್ತಿಗೆ ನೌಕರರ ಕಾಂಟ್ಯಾಕ್ಟ್‍ನಲ್ಲಿ ಇದ್ದ ಕಾರಣ ಜಿಂದಾಲ್ ನೌಕರರಿಂದ ಸೋಂಕು ತಗುಲಿರುವ ಸಾಧ್ಯತೆ ಹೆಚ್ಚಾಗಿದೆ.

    ಉಸಿರಾಟದ ತೊಂದರೆ ಹಾಗೂ ಅನಾರೋಗ್ಯದ ಹಿನ್ನೆಲೆಯಲ್ಲಿ ಇವರನ್ನು ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕೋವಿಡ್ ಪರೀಕ್ಷೆ ನಡೆಸಿದ್ದಾಗ ಇವರಲ್ಲಿ ಸೋಂಕು ಇರುವುದು ದೃಢಪಟ್ಟಿದ್ದು, ಅವರನ್ನು ಜಿಲ್ಲಾ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಇಂದು ಸಾವನ್ನಪ್ಪಿದ್ದಾರೆ. ಕೊರೊನಾ ಮಹಾಮಾರಿಗೆ ನಿನ್ನೆಯೂ ಇಬ್ಬರು ಬಲಿಯಾಗಿದ್ದು, ಇಂದು ಮತ್ತಿಬ್ಬರು ಸಾವನ್ನಪ್ಪಿರುವುದು ಜಿಲ್ಲೆಯ ಜನರಲ್ಲಿ ಆತಂಕ ಹೆಚ್ಚಿಸಿದೆ.

  • ಹಾಸನ ಜಿಲ್ಲೆಯಲ್ಲಿ ಸ್ಥಳೀಯನಿಗೆ ಕೊರೊನಾ – ಆತಂಕದಲ್ಲಿ ಜಿಲ್ಲೆಯ ಜನ

    ಹಾಸನ ಜಿಲ್ಲೆಯಲ್ಲಿ ಸ್ಥಳೀಯನಿಗೆ ಕೊರೊನಾ – ಆತಂಕದಲ್ಲಿ ಜಿಲ್ಲೆಯ ಜನ

    – ಟ್ರಾವೆಲ್ ಹಿಸ್ಟರಿ ಇಲ್ಲದವರಿಗೂ ಕೊರೊನಾ

    ಹಾಸನ: ಹಾಸನದಲ್ಲಿಂದ ಸ್ಥಳೀಯ ವ್ಯಕ್ತಿಯೊಬ್ಬರಿಗೆ ಕೊರೊನಾ ಪಾಸಿಟಿವ್ ಬಂದಿದ್ದು, ಆತಂಕಕ್ಕೆ ಕಾರಣವಾಗಿದೆ.

    ಇದುವರೆಗೂ ಜಿಲ್ಲೆಯಲ್ಲಿ ಹೊರರಾಜ್ಯ, ಹೊರ ಜಿಲ್ಲೆಯಿಂದ ಬಂದವರಿಗೆ ಅಥವಾ ಅವರ ಜೊತೆ ಸಂಪರ್ಕದಲ್ಲಿದ್ದವರಿಗೆ ಕೊರೊನಾ ಪಾಸಿಟಿವ್ ಕಂಡು ಬಂದಿತ್ತು. ಆದರೆ ಇಂದು ಆ ರೀತಿಯ ಯಾವುದೇ ಸಂಪರ್ಕ ಹೊಂದಿರದ 60 ವರ್ಷದ ವ್ಯಕ್ತಿಗೆ ಕೊರೊನಾ ಪಾಸಿಟಿವ್ ಕಂಡು ಬಂದಿದ್ದು ಆತಂಕಕ್ಕೆ ಕಾರಣವಾಗಿದೆ.

    ಆತನನ್ನು ಪರೀಕ್ಷೆ ಮಾಡಿದ ವೈದ್ಯರು ಸೇರಿದಂತೆ 17 ಜನರ ಗಂಟಲು ದ್ರವವನ್ನು ಮುನ್ನೆಚ್ಚರಿಕಾ ಕ್ರಮವಾಗಿ ಪರೀಕ್ಷೆಗೆ ಕಳುಹಿಸಲಾಗಿದೆ. ವೃದ್ಧನನ್ನು ಪರೀಕ್ಷೆ ಮಾಡಿದ ಆಸ್ಪತ್ರೆ ಕೊಠಡಿ ಸೀಲ್‍ಡೌನ್ ಮಾಡಲಾಗಿದೆ. ವೃದ್ಧ ವಾಸವಿದ್ದ ಗ್ರಾಮವನ್ನು ಸೀಲ್‍ಡೌನ್ ಮಾಡಲು ಕ್ರಮ ಕೈಗೊಳ್ಳಲಾಗಿದೆ. ವೃದ್ಧನಿಗೆ ಕೊರೊನಾ ಹೇಗೆ ಬಂತು? ಆತ ಯಾರ ಜೊತೆ ಪ್ರಾಥಮಿಕ ಸಂಪರ್ಕದಲ್ಲಿದ್ದ? ಆತ ಎಲ್ಲೆಲ್ಲಿ ಓಡಾಡಿದ್ದ ಎಂಬುದರ ಮಾಹಿತಿ ಕಲೆಹಾಕಲಾಗುತ್ತಿದ್ದು ಆತಂಕಕ್ಕೆ ಕಾರಣವಾಗಿದೆ.

    ಹಾಸನ ಜಿಲ್ಲೆಯಲ್ಲಿಂದು ಹೊಸದಾಗಿ 18 ಕೋವಿಡ್-19 ಪ್ರಕರಣ ಪತ್ತೆಯಾಗಿವೆ. ಈ ಮೂಲಕ ಹಾಸನದಲ್ಲಿ ಸೋಂಕಿತರ ಸಂಖ್ಯೆ 271ಕ್ಕೆ ಏರಿಕೆಯಾಗಿದೆ. 192 ಮಂದಿ ಕೋವಿಡ್ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಹಾಗೂ 78 ಮಂದಿ ಸಕ್ರಿಯ ಸೋಂಕಿತರು ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೋವಿಡ್ ಆಸ್ಪತ್ರೆಯಿಂದ ಬಿಡುಗಡೆಯಾದವರನ್ನು 7 ದಿನಗಳ ನಂತರ ಚಿಕಿತ್ಸೆಗೆ ಒಳಪಡಿಸಲಾಗುತ್ತದೆ ಪಾಸಿಟಿವ್ ವರದಿ ಬಂದರೆ ಅವರನ್ನು ಆಸ್ಪತೆಯಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತದೆ. ನೆಗೆಟಿವ್ ಬಂದವರನ್ನು ಮನೆಗೆ ಕಳುಹಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು.

    ಇಂದು ಹೊಸದಾಗಿ ಬಂದ 18 ಪ್ರಕರಣಗಳಲ್ಲಿ 4 ಮಂದಿ ಹಾಸನ ಜಿಲ್ಲೆಗೆ ಸೇರಿದವರಾಗಿದ್ದಾರೆ. ಇನ್ನುಳಿದ 14 ಮಂದಿ ಚನ್ನರಾಯಪಟ್ಟಣ ತಾಲೂಕಿಗೆ ಸೇರಿದವರಾಗಿದ್ದು, ಅವರಲ್ಲಿ ಒಬ್ಬರು ಮಾತ್ರ ಸ್ಥಳೀಯರೇ ಆಗಿದ್ದು, ಶ್ವಾಸಕೋಶದ ಸಮಸ್ಯೆಯಿಂದ ಚಿಕಿತ್ಸೆ ಪಡೆಯುತ್ತಿದ್ದರು ಹಾಗೂ ಇನ್ನುಳಿದ ಎಲ್ಲರೂ ಮುಂಬೈನಿಂದ ಬಂದ ಹಿನ್ನೆಲೆಯನ್ನು ಹೊಂದಿರುವವರಾಗಿದ್ದಾರೆ ಎಂದು ಆರ್. ಗಿರೀಶ್ ಮಾಹಿತಿ ನೀಡಿದರು.

  • ವರದಕ್ಷಿಣೆ ಕಿರುಕುಳದ ಆರೋಪಿಗೆ ಕೊರೊನಾ ಶಂಕೆ- ಪೊಲೀಸ್ ಠಾಣೆ ಸೀಲ್‍ಡೌನ್

    ವರದಕ್ಷಿಣೆ ಕಿರುಕುಳದ ಆರೋಪಿಗೆ ಕೊರೊನಾ ಶಂಕೆ- ಪೊಲೀಸ್ ಠಾಣೆ ಸೀಲ್‍ಡೌನ್

    ಕೋಲಾರ: ವರದಕ್ಷಿಣೆ ಕಿರುಳದ ಆರೋಪಿಗೆ ಕೊರೊನಾ ಸೋಂಕು ಬಂದಿರುವ ಶಂಕೆ ವ್ಯಕ್ತವಾಗಿದ್ದು, ಕೋಲಾರ ಜಿಲ್ಲೆಯ ಮುಳಬಾಗಿಲು ನಗರ ಪೊಲೀಸ್ ಠಾಣೆಯನ್ನು ಸೀಲ್‍ಡೌನ್ ಮಾಡಲಾಗಿದೆ.

    ಠಾಣೆಯಲ್ಲಿದ್ದ ಆರೋಪಿ ಸೋಂಕು ತಗಲಿರುವ ಶಂಕೆ ಇರುವ ಕಾರಣ, ಮುಳಬಾಗಿಲು ನಗರ ಠಾಣೆಯ ಪಿಎಸ್‍ಐ ಸೇರಿದಂತೆ 22 ಜನರನ್ನು ಕ್ವಾರಂಟೈನ್ ಮಾಡಲಾಗಿದೆ. ವರದಕ್ಷಿಣೆ ಕಿರುಕುಳ ಹಿನ್ನೆಲೆ ಬೆಂಗಳೂರಿನ ಕೆ.ಅರ್.ಪುರ ಮೂಲದ ಆರೋಪಿಯನ್ನು ಪೋಲಿಸರು ಬಂಧಿಸಿದ್ದರು. ಆತನಿಗೆ ಕೊರೊನಾ ಇದ್ದು, ಈ ಬಗ್ಗೆ ನಾಳೆಯ ಬುಲೆಟಿನ್ ಅಲ್ಲಿ ಅಧಿಕೃತವಾಗಿ ಘೋಷಣೆಯಾಲಿದೆ.

    ಆರೋಪಿಯನ್ನು ಬಂಧಿಸಿ ಮೂರು ದಿನ ಪೊಲೀಸ್ ಠಾಣೆಯಲ್ಲಿ ವಿಚಾರಣೆ ಮಾಡಲಾಗಿತ್ತು. ನಂತರ ಆತನನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಕೊರೊನಾ ಇರುವುದು ದೃಢಪಟ್ಟಿದೆ. ಈ ಕಾರಣ ಠಾಣೆ ಸುತ್ತಾ ಕಂಟೈನ್ಮೆಂಟ್ ಝೋನ್ ಎಂದು ಘೋಷಣೆ ಮಾಡಲಾಗಿದೆ. ಮುಳಬಾಗಿಲು ವೈಎಸ್‍ಪಿ ನಾರಾಯಣಸ್ವಾಮಿ, ಪಿಎಸ್‍ಐ ಶ್ರೀನಿವಾಸ್ ಸೇರಿ 22 ಜನ ಹೋಂ ಕ್ವಾರಂಟೈನ್ ಮಾಡಲಾಗಿದೆ.

  • 2 ದಿನ ರಜೆ ಹಾಕಿ ಆಸ್ಪತ್ರೆ ಹೋದ ಕಾನ್‍ಸ್ಟೇಬಲ್‍ಗೂ ಕೊರೊನಾ ಸೋಂಕು

    2 ದಿನ ರಜೆ ಹಾಕಿ ಆಸ್ಪತ್ರೆ ಹೋದ ಕಾನ್‍ಸ್ಟೇಬಲ್‍ಗೂ ಕೊರೊನಾ ಸೋಂಕು

    – ಹಾವೇರಿ ಜಿಲ್ಲೆಯಲ್ಲಿ 27ಕ್ಕೆ ಏರಿದ ಸೋಂಕಿತರ ಸಂಖ್ಯೆ

    ಹಾವೇರಿ: ಜಿಲ್ಲೆಗೆ ಮತ್ತೆ ಮಹಾಮಾರಿ ಕೊರೊನಾ ವಕ್ಕರಿಸಿದ್ದು, ಜಿಲ್ಲೆಯ ಇಬ್ಬರಲ್ಲಿ ಮತ್ತೆ ಕೊರೊನಾ ಸೋಂಕು ದೃಢಪಟ್ಟಿದೆ. 9 ವರ್ಷದ ಬಾಲಕ ಹಾಗೂ ಪೊಲೀಸ್ ಕಾನ್‍ಸ್ಟೇಬಲ್‍ ನಲ್ಲಿ ಸೋಂಕು ದೃಢಪಟ್ಟಿದೆ.

    41 ವರ್ಷದ ಕಾನಸ್ಟೇಬಲ್ ಪಿ-7030ರಲ್ಲಿ ಸೋಂಕು ದೃಢಪಟ್ಟಿದ್ದು, ಹಾವೇರಿ ಜಿಲ್ಲೆ ಬ್ಯಾಡಗಿ ಠಾಣೆಯಲ್ಲಿ ಕಾನ್‍ಸ್ಟೇಬಲ್‍ ಆಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಮೂಲತಃ ಕದರಮಂಡಲಿ ಗ್ರಾಮದ ನಿವಾಸಿಯಾಗಿದ್ದು, ಎರಡು ದಿನ ರಜೆ ಹಾಕಿ ದಾವಣಗೆರೆ ಜಿಲ್ಲೆ ಮಲೇಬೆನ್ನೂರಿಗೆ ಸಂಬಂಧಿಕರ ಮನೆಗೆ ಹೋಗಿದ್ದರು. ಅಲ್ಲದೇ ತನ್ನ ಮಗನನ್ನು ಮಲೇಬೆನ್ನೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದ್ದು, ಎರಡು ಬಾರಿ ಔಷಧಿ ತರಲು ಆಸ್ಪತ್ರೆಗೆ ಹೋಗಿದ್ದರು ಎನ್ನಲಾಗಿದೆ.

    ಬ್ಯಾಡಗಿ ಪೊಲೀಸ್ ಠಾಣೆಯ ಸಿಬ್ಬಂದಿ ಹಾಗೂ ಕುಟುಂಬ ಸದಸ್ಯರು ಸೇರಿದಂತೆ ಪ್ರಾಥಮಿಕ ಸಂಪರ್ಕ ಹೊಂದಿದ್ದ 74ಕ್ಕೂ ಅಧಿಕ ಜನರನ್ನು ಗುರುತಿಸಿ ಕ್ವಾರಂಟೈನ್ ಮಾಡಲಾಗಿದೆ. ದ್ವೀತಿಯ ಸಂಪರ್ಕ ಹೊಂದಿದ್ದ 4 ಜನರನ್ನು ಗುರುತಿಸಿ ಕ್ವಾರಂಟೈನ್ ಮಾಡಲಾಗಿದೆ. ಜೊತೆಗೆ ಒಂಬತ್ತು ವರ್ಷದ ಪಿ-7031ರಲ್ಲಿ ಸೋಂಕು ದೃಢಪಟ್ಟಿದ್ದು, ಬಾಲಕ ಹಾವೇರಿ ತಾಲೂಕಿನ ಗುತ್ತಲ ಪಟ್ಟಣದ ಕಲಾಲ ಪ್ಲಾಟ್‍ನ ನಿವಾಸಿ ಎನ್ನಲಾಗಿದೆ.

    ಪಿ-5004ರ ಕೆ.ಎಸ್.ಆರ್.ಟಿ.ಸಿ ಮೆಕಾನಿಕ್ ಸಂಪರ್ಕ ಹೊಂದಿದ್ದ ಬಾಲಕನಿಗೆ ಸೋಂಕು ದೃಢಪಟ್ಟಿದೆ. ಇಬ್ಬರು ಸೋಂಕಿತರನ್ನು ಜಿಲ್ಲಾ ಕೋವಿಡ್-19 ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಹಾವೇರಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಒಟ್ಟು 27ಕ್ಕೆ ಏರಿಕೆ ಆಗಿದೆ.

  • ಬೆಂಗ್ಳೂರಿನಲ್ಲಿ ಭಿಕ್ಷುಕನಿಗೆ ಕೊರೊನಾ- ಶವ ಪರೀಕ್ಷೆಯಲ್ಲಿ ಸೋಂಕು ಪತ್ತೆ

    ಬೆಂಗ್ಳೂರಿನಲ್ಲಿ ಭಿಕ್ಷುಕನಿಗೆ ಕೊರೊನಾ- ಶವ ಪರೀಕ್ಷೆಯಲ್ಲಿ ಸೋಂಕು ಪತ್ತೆ

    ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಕೊರೊನಾ ಮಹಾಮಾರಿ ತಾಂಡವಾಡುತ್ತಿದೆ. ಅಂತೆಯೇ ರಸ್ತೆ ಬದಿಯಲ್ಲಿ ಭಿಕ್ಷೆ ಬೇಡುತ್ತಿದ್ದ ವ್ಯಕ್ತಿಗೂ ಕೊರೊನಾ ಸೋಂಕು ಹರಡಿದೆ.

    ಇಂದು ಬೆಂಗಳೂರಿನಲ್ಲಿ ಕೊರೊನಾಗೆ ನಾಲ್ವರು ಬಲಿಯಾಗಿದ್ದಾರೆ. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನಾಲ್ಕು ಮಂದಿ ಇಂದು ಮೃತಪಟ್ಟಿದ್ದಾರೆ. ಆದರೆ ಸೋಮವಾರ ಮೃತಪಟ್ಟಿದ್ದ ಅಪರಿಚಿತ ವ್ಯಕ್ತಿಯ ಕೋವಿಡ್ ಟೆಸ್ಟ್ ನಲ್ಲಿ ಕೊರೊನಾ ಪಾಸಿಟಿವ್ ಬಂದಿದ್ದು, ಆಂತಕಕ್ಕೆ ಎಡೆಮಾಡಿಕೊಟ್ಟಿದೆ.

    ಸೋಮವಾರ ನಾಗರಬಾವಿ ಬ್ರಿಡ್ಜ್ ನಿಂದ ಬಿದ್ದು ಅಪರಿಚಿತ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದ. ಸಾವನ್ನಪ್ಪಿದ ವ್ಯಕ್ತಿಯನ್ನು ಬೀದಿ ಬದಿಯ ಭಿಕ್ಷುಕ ಎಂದು ಗುರುತಿಸಲಾಗಿತ್ತು. ಆದರೆ ಆತನ ಹೆಸರು ಮನೆ ವಿಳಾಸ ಹಿನ್ನೆಲೆ ಯಾವುದೂ ಪತ್ತೆಯಾಗಿರಲಿಲ್ಲ. ಆದ್ದರಿಂದ ಪೊಲೀಸರು ಹಾಗೂ ಬಿಬಿಎಂಪಿ ಸಿಬ್ಬಂದಿ ಸೇರಿ ಮೃತದೇಹವನ್ನು ಆಸ್ಪತ್ರೆಗೆ ರವಾನೆ ಮಾಡಿದ್ದರು. ಈಗ ಮೃತ ಭಿಕ್ಷುಕನ ಮರಣ ನಂತರ ಪರೀಕ್ಷೆಯಲ್ಲಿ ಕೊರೊನಾ ಪಾಸಿಟಿವ್ ಬಂದಿದ್ದು, ಹೆಣ ಸಾಗಿಸಿದ ಅಧಿಕಾರಿಗಳಿಗೆ ಟೆನ್ಷನ್ ಶುರುವಾಗಿದೆ.

  • ಬೆಂಗ್ಳೂರಿನಲ್ಲಿ ಪೊಲೀಸರಿಗೆ ಕೊರೊನಾ ಕಂಟಕ- ನಗರದ 7 ಠಾಣೆಯ ಪೇದೆಗಳಿಗೆ ಸೋಂಕು

    ಬೆಂಗ್ಳೂರಿನಲ್ಲಿ ಪೊಲೀಸರಿಗೆ ಕೊರೊನಾ ಕಂಟಕ- ನಗರದ 7 ಠಾಣೆಯ ಪೇದೆಗಳಿಗೆ ಸೋಂಕು

    ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಮಹಾಮಾರಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಾನೆ ಇದೆ. ಇದರ ಬೆನ್ನಲ್ಲೇ ಜನರನ್ನು ರಕ್ಷಣೆ ಮಾಡಬೇಕಾದ ಆರಕ್ಷಕರಿಗೆ ಕೊರೊನಾ ಪಾಸಿಟಿವ್ ಬರುತ್ತಿರುವುದು ಎಲ್ಲರ ಆತಂಕಕ್ಕೆ ಕಾರಣವಾಗಿದೆ.

    ನಗರದಲ್ಲಿ ಇಲ್ಲಿವರೆಗೂ ಏಳು ಪೊಲೀಸ್ ಠಾಣೆಯ ಪೊಲೀಸ್ ಪೇದೆಗಳಿಗೆ ಕೊರೊನಾ ಪಾಸಿಟಿವ್ ಬಂದಿದ್ದು ಮತ್ತಷ್ಟು ಆತಂಕಕ್ಕೆ ದೂಡಿದೆ. ನಗರದ ಬಂಡೇಪಾಳ್ಯ ಪೊಲೀಸ್ ಠಾಣೆ, ಜೆಜೆ ನಗರ ಪೊಲೀಸ್ ಠಾಣೆ, ಜೆಬಿ ನಗರ ಪೊಲೀಸ್ ಠಾಣೆ, ಡಿಜಿ ಅಂಡ್ ಐಜಿಪಿ ಕಚೇರಿ, ಫ್ರೇಜರ್ ಟೌನ್ ಪೊಲೀಸ್ ಠಾಣೆ, ಚಾಮರಾಜ ಪೇಟೆ ಸಿಎಆರ್ ಪೊಲೀಸ್ ಪೇದೆಗಳಿಗೆ ಪಾಸಿಟಿವ್ ಬಂದಿದೆ.

    ಇತ್ತ ನಿನ್ನೆ ಹೆಣ್ಣೂರು ಪೊಲೀಸ್ ಠಾಣೆಯ ಕೋರ್ಟ್ ಬೀಟ್ ಪೊಲೀಸ್, ಶಂಕರ್ ಪುರಂ ಪೊಲೀಸ್ ಪೇದೆಗೂ ಕೊರೊನಾ ಪಾಸಿಟಿವ್ ಬಂದಿರುವುದು ಪೊಲೀಸ್ ವಲಯದಲ್ಲಿ ಆತಂಕ ಶುರುವಾಗುವಂತೆ ಮಾಡಿದೆ. ಬಹುತೇಕ ಎಲ್ಲ ಪೊಲೀಸ್ ಠಾಣೆಗಳನ್ನು ಕೂಡ ಸ್ಯಾನಿಟೈಜೇಶನ್ ಮಾಡಲಾಗಿದ್ದು, ಮುಂದಿನ ದಿನಗಳಲ್ಲಿ ಈ ಮಹಾಮಾರಿ ಯಾವೆಲ್ಲ ರೀತಿಯಲ್ಲಿ ರುದ್ರ ನರ್ತನ ಮಾಡುತ್ತದೆ ಎಂದು ಕಾದುನೋಡಬೇಕಿದೆ.

  • ಪಾದರಾಯನಪುರ ಕಾರ್ಪೊರೇಟರ್ ಇಮ್ರಾನ್ ಪಾಷಾಗೆ ಕೊರೊನಾ

    ಪಾದರಾಯನಪುರ ಕಾರ್ಪೊರೇಟರ್ ಇಮ್ರಾನ್ ಪಾಷಾಗೆ ಕೊರೊನಾ

    ಬೆಂಗಳೂರು: ಪಾದರಾಯನಪುರದ ಜೆಡಿಎಸ್ ಕಾರ್ಪೊರೇಟರ್ ಇಮ್ರಾನ್ ಪಾಷಾ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.

    ಕಂಟೈನ್‍ಮೆಂಟ್ ಝೋನ್‍ನಲ್ಲಿ ಓಡಾಡಿದ್ದ ಇಮ್ರಾನ್ ಪಾಷಾ ಅವರು ಶುಕ್ರವಾರ ಬೆಳ್ಳಗ್ಗೆ ಕೋವಿಡ್-19 ಪರೀಕ್ಷೆಗೆ ಒಳಗಾಗಿದ್ದರು. ಸಂಜೆ ಬಂದ ರಿಪೋರ್ಟ್ ನಲ್ಲಿ ಸೋಂಕು ತಗುಲಿರುವುದು ಪತ್ತೆಯಾಗಿದೆ. ಹೀಗಾಗಿ ಇಮ್ರಾನ್ ಪಾಷ ಅವರ ಮನೆ ಇರುವ ಪಾದರಾಯನಪುರದ 13ನೇ ಕ್ರಾಸ್ ಅನ್ನು ಸೀಲ್‍ಡೌನ್ ಮಾಡಲಾಗಿದೆ. ಇದನ್ನೂ ಓದಿ: ಮಹಿಳೆಯರನ್ನ ಮುಂದೆ ಬಿಟ್ಟು ಪಾದರಾಯನಪುರದಲ್ಲಿ ಮತ್ತೆ ಗಲಾಟೆ

    ಇಮ್ರಾನ್ ಪಾಷ ಅವರ ಪ್ರಾರ್ಥಮಿಕ ಸಂಪರ್ಕದಲ್ಲಿ ಪತ್ನಿ, ಮೂವರು ಮಕ್ಕಳು, ಇಬ್ಬರು ಕಾರ್ ಚಾಲಕರು, ಇಬ್ಬರು ಮನೆ ಕೆಲಸದವರು, ಏಳು ಜನ ಕಚೇರಿ ಕೆಲಸದವರು ಸೇರಿ ಒಟ್ಟು 21 ಜನರಿದ್ದರು. ಎಲ್ಲರನ್ನೂ ಕ್ವಾರಂಟೈನ್ ಮಾಡಲು ಸಿದ್ಧತೆ ನಡೆದಿದೆ.

    ರಂಜಾನ್ ಹಬ್ಬದ ಪ್ರಯುಕ್ತ ಇಮ್ರಾನ್ ಪಾಷ ಅವರು ವಾರ್ಡಿನಲ್ಲಿ ಪ್ರತಿ ಮನೆಮನೆಗೆ ತೆರಳಿ ರೇಷನ್ ವಿತರಣೆ ಮಾಡಿದ್ದರು. ಸೀಲ್‍ಡೌನ್ ಆಗಿದ್ದ ಏರಿಯಾದ ಮನೆಗಳಿಗೂ ತೆರಳಿ ಕಿಟ್ ನೀಡಿದ್ದರು. ಪ್ರತಿನಿತ್ಯ ನೂರಾರು ಜನರನ್ನ ಭೇಟಿ ಮಾಡಿದ್ದಾರೆ. ಹೀಗಾಗಿ ಅವರ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕದಲ್ಲಿದ್ದ ಅವರನ್ನು ಪತ್ತೆ ಹಚ್ಚುವುದು ಬಿಬಿಎಂಪಿ ಅಧಿಕಾರಿಗಳಿಗೆ ಸವಾಲಿನ ಕೆಲಸವಾಗಿದೆ.

    ತಪ್ಪಿದ ಭಾರೀ ಅನಾಹುತ: ಇಮ್ರಾನ್ ಪಾಷಾ ಅವರು ಗುರುವಾರ ಪಾಲಿಕೆ ಸಭೆಯಲ್ಲಿ ಭಾಗಿಯಾಗಿಲ್ಲ. ಸಭೆಯಲ್ಲಿ 150ಕ್ಕೂ ಹೆಚ್ಚು ಜನ ಕಾರ್ಪೊರೇಟರ್, 50 ಜನ ಅಧಿಕಾರಿಗಳು ಭಾಗಿಯಾಗಿದ್ದರು. ಹೀಗಾಗಿ ಭಾರೀ ಅನಾಹುತವೇ ತಪ್ಪಿದೆ.

  • ಕೊರೊನಾ ವಾರಿಯರ್ಸ್ ಮೇಲೂ ಮಹಾಮಾರಿ ಕೊರೊನಾ ಕರಿನೆರಳು

    ಕೊರೊನಾ ವಾರಿಯರ್ಸ್ ಮೇಲೂ ಮಹಾಮಾರಿ ಕೊರೊನಾ ಕರಿನೆರಳು

    ಬಳ್ಳಾರಿ: ಗಣಿನಾಡಿನ ಬಳ್ಳಾರಿ ಜಿಲ್ಲಾ ಕೋವಿಡ್ ಆಸ್ಪತ್ರೆಯ ಐಸೊಲೇಷನ್ ವಾರ್ಡಿನಲ್ಲಿ ಕೊರೊನಾ ವಾರಿಯರ್ಸ್ ಸೇವೆಯಲ್ಲಿ ತೊಡಗಿಕೊಂಡಿದ್ದ ಪುರುಷ ಸ್ಟಾಫ್ ನರ್ಸ್ ಒಬ್ಬರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ.

    ಇದಕ್ಕೂ ಮುನ್ನ ಗಣಿ ಜಿಲ್ಲೆಯಲ್ಲಿ 36 ಪಾಸಿಟಿವ್ ಕೇಸ್‍ಗಳಿದ್ದವು. ಇದೀಗ ಅದರ ಸಂಖ್ಯೆ 37ಕ್ಕೆ ಜಿಗಿದಿದೆ. ಈವರೆಗೂ 15 ಮಂದಿ ಗುಣಮುಖರಾಗಿದ್ದು, ಕೇವಲ ಒಬ್ಬರು ಮಾತ್ರ ಸಾವನ್ನಪ್ಪಿದ್ದಾರೆ. ಐಸೊಲೇಷನ್ ನಲ್ಲಿರುವವರ ಸಂಖ್ಯೆ 21ಕ್ಕೇ ಏರಿಕೆಯಾಗಿದೆ.

    ಜಿಲ್ಲಾ ಕೋವಿಡ್ ಆಸ್ಪತ್ರೆಯ ಐಸೊಲೇಷನ್ ಸೇವೆಯಲ್ಲಿ ತೊಡಗಿಕೊಂಡಿದ್ದ 14 ಮಂದಿಯನ್ನು ನಿನ್ನೆಯ ದಿನ ಗಂಟಲು ದ್ರವ ಮತ್ತು ರಕ್ತದ ಮಾದರಿ ಸಂಗ್ರಹಿಸಿ ಪರೀಕ್ಷೆಗೆ ಒಳಪಡಿಸಲಾಗಿತ್ತು. ಆ ಪೈಕಿ 13 ನೆಗೆಟಿವ್ ಬಂದಿದ್ದು, ಕೇವಲ ಒಂದು ಮಾತ್ರ ಪಾಸಿಟಿವ್ ಬಂದಿದೆ. ಕಳೆದ 14 ದಿನಗಳ ಕಾಲ ಕೊರೊನಾ ವಾರ್ಡಿನಲ್ಲಿ ಡಿ ಗ್ರೂಪ್ ನೌಕರರಿಗೆ ಟೆಸ್ಟ್ ಮಾಡಲಾಗಿತ್ತು. ವರದಿ ಬಂದ ಬಳಿಕ ಕೊರೊನಾ ಪಾಸಿಟಿವ್ ಬಂದಿರುವುದು ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ತಿಳಿಸಿದ್ದಾರೆ.

    ಈ ಮೂಲಕ ಕೊರೊನಾ ವಾರಿಯರ್ಸ್ ಗೂ ಸೋಂಕು ತಗುಲಿದ್ದು ಆರೋಗ್ಯ ಇಲಾಖೆಯ ಸಿಬ್ಬಂದಿಯನ್ನು ಮತ್ತಷ್ಟು ಆತಂಕಕ್ಕೆ ದೂಡಿದೆ. ಐಸೊಲೇಷನ್ ವಾರ್ಡಿನಲ್ಲಿ ಎಲ್ಲ ರೀತಿಯ ಸುರಕ್ಷತಾ ಕ್ರಮಗಳನ್ನು ತೆಗೆದುಕೊಂಡಿದ್ದರೂ ಕೊರೊನಾ ವಾರಿಯರ್ಸ್ ಗೆ ಸೋಂಕು ತಗುಲಿದ್ದು ಹೇಗೆ ಎನ್ನುವುದು ಮಾತ್ರ ಈವರೆಗೂ ನಿಗೂಢವಾಗಿದೆ.

  • ಮುಂಬೈನ ಧಾರಾವಿ ಸ್ಲಂ ಸ್ಥಿತಿ ಬೆಂಗ್ಳೂರಿಗೂ ಬರುತ್ತಾ?

    ಮುಂಬೈನ ಧಾರಾವಿ ಸ್ಲಂ ಸ್ಥಿತಿ ಬೆಂಗ್ಳೂರಿಗೂ ಬರುತ್ತಾ?

    – ಸ್ಲಂ‌ನಲ್ಲಿ ಯಾವುದೇ ಸಂಪರ್ಕ ಇಲ್ಲದೇ ಕೊರೊನಾ ಪತ್ತೆ

    ಬೆಂಗಳೂರ: ಮುಂಬೈ ಮಹಾನಗರಕ್ಕೆ ಭಾರೀ ಸಂಕಷ್ಟ ತಂದಿದ್ದು ಧಾರಾವಿ ಸ್ಲಂ ಪ್ರದೇಶ. ಅದೇ ಸಮಸ್ಯೆ ಬೆಂಗಳೂರಿಗೂ ಎದುರಾಗುತ್ತಾ ಎನ್ನುವ ಅನುಮಾನ ಶುರುವಾಗಿದೆ.

    ಪುಲಿಕೇಶಿ ನಗರ ಕ್ಷೇತ್ರದ ಎಸ್.ಕೆ. ಗಾರ್ಡನ್ ಸ್ಲಂ ಪ್ರದೇಶದ 38 ವರ್ಷದ ಮಹಿಳೆಗೆ ಕೊರೊನಾ ತಗುಲಿದೆ. ಅವರನ್ನು ರೋಗಿ-2180 ಎಂದು ಗುರುತಿಸಲಾಗಿದೆ. ಅವರು ತೀವ್ರ ಉಸಿರಾಟದ ಸಮಸ್ಯೆಯಿಂದಾಗಿ ಬೌರಿಂಗ್ ಆಸ್ಪತ್ರೆಗೆ ದಾಖಲಾಗಿದ್ದರು. ಇದರಿಂದಾಗಿ ಕೊರೊನಾ ಟೆಸ್ಟ್ ಮಾಡಲಾಗಿದ್ದು, ರಿಪೋರ್ಟ್ ಪಾಸಿಟಿವ್ ಬಂದಿದೆ.

    ಮಹಿಳೆ ಪ್ರಾಥಮಿಕ ಸಂಪರ್ಕಿದಲ್ಲಿ 35 ಜನರಿದ್ದರು. ಅವರನ್ನು ಕ್ವಾರಂಟೈನ್ ಮಾಡಲಾಗಿದೆ. ಉಳಿದಂತೆ ದ್ವಿತೀಯ ಸಂಪರ್ಕಿತರ ಮಾಹಿತಿ ಕಲೆ ಹಾಕಲಾಗುತ್ತಿದೆ. ಆದರೆ ಮಹಿಳೆಗೆ ಕೊರೊನಾ ಸೋಂಕು ತಗುಲಿರುವುದು ನಿಗೂಢವಾಗಿದೆ. ಹೀಗಾಗಿ ಎಸ್.ಕೆ. ಗಾರ್ಡನ್ ಸ್ಲಂನಿಂದ ಬೆಂಗಳೂರಿಗೆ ಕಂಟಕ ಹೆಚ್ಚಾಗುತ್ತೆ ಎಂಬ ಮಾತುಗಳು ಕೇಳಿ ಬರುತ್ತಿವೆ.