Tag: Post Office

  • Video Viral | ಸ್ವಾತಂತ್ರ‍್ಯ ದಿನಾಚರಣೆಯಂದು ಅಂಚೆ ಕಚೇರಿಯಲ್ಲಿ ಭರ್ಜರಿ ಬಾಡೂಟ; ಕ್ರಮಕ್ಕೆ ಆಗ್ರಹ

    Video Viral | ಸ್ವಾತಂತ್ರ‍್ಯ ದಿನಾಚರಣೆಯಂದು ಅಂಚೆ ಕಚೇರಿಯಲ್ಲಿ ಭರ್ಜರಿ ಬಾಡೂಟ; ಕ್ರಮಕ್ಕೆ ಆಗ್ರಹ

    ಹಾಸನ: ಸ್ವಾತಂತ್ರ‍್ಯ ದಿನದಂದು (Independence Day) ಅಂಚೆ ಕಚೇರಿಯಲ್ಲಿ ಭರ್ಜರಿ ಬಾಡೂಟ ಮಾಡಿ, ನೌಕರರು ಡಿಜೆ ಸಾಂಗ್‌ಗೆ ಸ್ಟೆಪ್ ಹಾಕಿರುವ ಘಟನೆ ಹಾಸನ ಜಿಲ್ಲೆಯ ಬೇಲೂರು ಪಟ್ಟಣದ ಅಂಚೆ ಕಚೇರಿಯಲ್ಲಿ (Beluru Town Post Office) ನಡೆದಿದೆ.

    ಸ್ವಾತಂತ್ರ‍್ಯ ದಿನದಂದು (ಆ.15) ಅಧಿಕಾರಿಗಳು ಅಂಚೆಕಚೇರಿ ಆವರಣದಲ್ಲಿ ಧ್ವಜಾರೋಹಣ ನೆರವೇರಿಸಿದ್ದರು. ನಂತರ ಸಿಬ್ಬಂದಿ, ಪೋಸ್ಟ್ ಮಾಸ್ಟರ್‌ಗಳು ಹಾಗೂ ಮಹಿಳಾ ಸಿಬ್ಬಂದಿ ಅಂಚೆ ಕಚೇರಿಯೊಳಗೆ ನಾನ್‌ವೆಜ್ ಅಡುಗೆ ಮಾಡಿದ್ದರು. ಭರ್ಜರಿ ಬಾಡೂಟ ಸವಿದ ಸಿಬ್ಬಂದಿ, ಬಳಿ ಡಿಜೆ ಸಾಂಗ್‌ಗೆ ಕುಣಿದು ಕುಪ್ಪಳಿಸಿದ್ದರು. ಇದನ್ನೂ ಓದಿ: ಮತ್ತೆ `ಕುಂಟು’ನೆಪ – ದರ್ಶನ್ ಬೆನ್ನುನೋವಿಗೆ ಜೈಲಿನ ಆಸ್ಪತ್ರೆಯಲ್ಲೇ ಚಿಕಿತ್ಸೆ!

    ಇದೀಗ ಅಂಚೆ ಇಲಾಖೆ ನೌಕರ ಭರ್ಜರಿ ಡ್ಯಾನ್ಸ್‌ನ ವೀಡಿಯೋ ವೈರಲ್ ಆಗಿದ್ದು, ಸಿಬ್ಬಂದಿ ವರ್ತನೆಗೆ ಸಾರ್ವಜನಿಕ ವಲಯದಲ್ಲೇ ವ್ಯಾಪಕ ಆಕ್ರೋಶವಾಗಿದೆ. ಸ್ವಾತಂತ್ರ‍್ಯ ದಿನಾಚರಣೆ ದಿನದಂದು ನಿಯಮ ಉಲ್ಲಂಘನೆ ಮಾಡಿದ್ದಾರೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.

  • ಸಿಸಿಬಿ ಪೊಲೀಸರ ಭರ್ಜರಿ ಬೇಟೆ – 21 ಕೋಟಿ ಮೌಲ್ಯದ ಮಾದಕ ವಸ್ತು ಜಪ್ತಿ

    ಸಿಸಿಬಿ ಪೊಲೀಸರ ಭರ್ಜರಿ ಬೇಟೆ – 21 ಕೋಟಿ ಮೌಲ್ಯದ ಮಾದಕ ವಸ್ತು ಜಪ್ತಿ

    ಬೆಂಗಳೂರು: ಭರ್ಜರಿ ಕಾರ್ಯಾಚರಣೆಯೊಂದರಲ್ಲಿ ಸಿಸಿಬಿ ಪೊಲೀಸರು (Bengaluru CCB Police) ಸುಮಾರು 21 ಕೋಟಿ ರೂ. ಮೌಲ್ಯದ ಮಾದಕ ವಸ್ತುಗಳನ್ನು ಜಪ್ತಿ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

    ಭಾರತೀಯ ಅಂಚೆ ಮೂಲಕ ವಿವಿಧ ದೇಶಗಳಿಂದ ಪೋಸ್ಟ್‌ ಮೂಲಕ ಬಂದಿದ್ದ ಮಾದಕ ವಸ್ತುಗಳನ್ನು (Narcotics) ವಶಕ್ಕೆ ಪಡೆದಿರುವ ಬೆಂಗಳೂರಿನ ಸಿಸಿಬಿ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಇದನ್ನೂ ಓದಿ: ʻಮಂಡ್ಯ To ಇಂಡಿಯಾʼ – ಮಂಡ್ಯದಲ್ಲಿ ಇಂದಿನಿಂದ 2 ದಿನ ಬೃಹತ್ ಉದ್ಯೋಗ ಮೇಳ

    ಹೌದು. ಅಮೆರಿಕ, ಯುಕೆ, ಬೆಲ್ಜಿಯಂ, ಥೈಲ್ಯಾಂಡ್, ನೇದರ್‌ಲ್ಯಾಂಡ್ ಹಾಗೂ ಇತರೆ ದೇಶಗಳಿಂದ ಭಾರತೀಯ ಅಂಚೆ ಇಲಾಖೆ ಮೂಲಕ ಸುಮಾರು 3,500 ಅನುಮಾನಾಸ್ಪದ ಅಂಚೆ ಪೋಸ್ಟ್‌ಗಳು ಬಂದಿದ್ದವು. ಈ ಬಗ್ಗೆ ಸಿಸಿಬಿ ಅಧಿಕಾರಿಗಳು ತೀವ್ರ ಪರಿಶೀಲನೆ ನಡೆಸಿದ್ದರು. 3,500 ಪೋಸ್ಟ್‌ಗಳ ಪೈಕಿ 606 ಅಂಚೆ ಪೋಸ್ಟ್‌ಗಳಲ್ಲಿ ಪಾರ್ಸೆಲ್‌ ರೂಪದಲ್ಲಿ ನಿಷೇಧಿತ ಮಾದಕ ವಸ್ತುಗಳು ಪತ್ತೆಯಾಗಿವೆ.

    ಈ ಮಾದಕ ವಸ್ತುಗಳನ್ನು ವಿದೇಶದಿಂದ ಬೆಂಗಳೂರಿಗೆ ತರಿಸಿಕೊಂಡು ಹೆಚ್ಚಿನ ಹಣಕ್ಕೆ ಮಾರಾಟ ಮಾಡುತ್ತಿದ್ದರು ಎಂದು ಪೊಲೀಸ್‌ ಮೂಲಗಳು ತಿಳಿಸಿವೆ. ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಿರುವ ಸಿಸಿಬಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಇದನ್ನೂ ಓದಿ:  ಭವಾನಿ ರೇವಣ್ಣಗೆ ಬಿಗ್‌ ರಿಲೀಫ್‌ – ಜಾಮೀನು ಅರ್ಜಿ ವಜಾ ಮಾಡಲು ನಿರಾಕರಿಸಿದ ಸುಪ್ರೀಂ

  • ಕೊರಿಯರ್‌ಗಳು ಅಂಚೆ ಕಚೇರಿ ಕಾಯ್ದೆ ವ್ಯಾಪ್ತಿಗೆ – ಇನ್ಮುಂದೆ ಸರ್ಕಾರವೂ ನಿಮ್ಮ ಪತ್ರಗಳನ್ನು ತೆರೆದು ನೋಡ್ಬೋದು

    ಕೊರಿಯರ್‌ಗಳು ಅಂಚೆ ಕಚೇರಿ ಕಾಯ್ದೆ ವ್ಯಾಪ್ತಿಗೆ – ಇನ್ಮುಂದೆ ಸರ್ಕಾರವೂ ನಿಮ್ಮ ಪತ್ರಗಳನ್ನು ತೆರೆದು ನೋಡ್ಬೋದು

    ನವದೆಹಲಿ: ದೇಶದ ಭದ್ರತೆಯ ದೃಷ್ಟಿಯಿಂದ ಅಂಚೆ ಕಚೇರಿಗೆ (Post Office) ಬರುವ ಪತ್ರಗಳನ್ನು (Letters) ಯಾವುದೇ ಸರ್ಕಾರಿ ಅಧಿಕಾರಿಗಳು ತೆರೆದು ನೋಡುವ ಹಾಗೂ ಮುಟ್ಟುಗೋಲು ಹಾಕುವ ಅಧಿಕಾರ ನೀಡುವ ಮಸೂದೆಗೆ ಲೋಕಸಭೆ ಒಪ್ಪಿಗೆ ನೀಡಿದೆ.

    ಪತ್ರಗಳು ಮಾತ್ರವಲ್ಲದೇ ಖಾಸಗಿ ಕೊರಿಯರ್‌ಗಳನ್ನೂ (Courier) ಇದೇ ಮೊದಲ ಬಾರಿಗೆ ಮಸೂದೆ ವ್ಯಾಪ್ತಿಗೆ ತರಲಾಗಿದೆ. ಇದರ ಪ್ರಕಾರ ಕೊರಿಯರ್ ಅಂಗಡಿಗೆ ಬರುವ ಶಾಂಕಾಸ್ಪದ ಪತ್ರಗಳನ್ನು ಅಥವಾ ಯಾವುದೇ ವಸ್ತುಗಳನ್ನು ತೆರೆದು ನೋಡಿ ಮುಟ್ಟುಗೋಲು ಹಾಕುವ ಅಧಿಕಾರ ಇದೀಗ ಸರ್ಕಾರಕ್ಕೆ ಲಭಿಸಿದೆ.

    ಈ ಮಸೂದೆಗೆ ರಾಜ್ಯಸಭೆಯಲ್ಲಿ ಡಿಸೆಂಬರ್ 4 ರಂದೇ ಅಂಗೀಕಾರ ದೊರೆತಿದೆ. ಸಂಸತ್‌ನಲ್ಲಿ ಭದ್ರತಾ ಲೋಪದ ಬಗ್ಗೆ ಅಮಿತ್ ಶಾ ಉತ್ತರ ನೀಡಬೇಕು ಎಂದು ವಿಪಕ್ಷಗಳು ಗದ್ದಲ ನಡೆಸಿದ ಸಂದರ್ಭದಲ್ಲಿಯೇ ಈ ಮಸೂದೆಯನ್ನು ಅಂಗೀಕರಿಸಲಾಗಿದೆ. ಈ ಹೊಸ ಕಾಯ್ದೆ 125 ವರ್ಷಗಳಷ್ಟು ಹಳೆಯ ಪೋಸ್ಟಾಫೀಸ್ ಕಾಯ್ದೆಯನ್ನು (1898) ಬದಲಿಸಿದೆ. ಇದನ್ನೂ ಓದಿ: ಇವಿಎಂ ಬಗ್ಗೆ ಮತ್ತೆ ವಿಪಕ್ಷಗಳಿಗೆ ಅನುಮಾನ – ವಿವಿಪ್ಯಾಟ್‌ ಸ್ಲಿಪ್‌ ಮತದಾರರ ಕೈಗೆ ನೀಡಬೇಕು

    ಈ ಮಸೂದೆಯಿಂದಾಗಿ ಸರ್ಕಾರಿ ಅಧಿಕಾರಿಗಳಿಗೆ ಅಂಚೆ ಕಚೇರಿ ಹಾಗೂ ಖಾಸಗಿ ಕೊರಿಯರ್ ಕಚೇರಿಗೆ ಬರುವ ಪತ್ರಗಳನ್ನು ತೆರೆದು ನೋಡುವ ಹಾಗೂ ಮುಟ್ಟುಗೋಲು ಹಾಕುವ ಅಧಿಕಾರವನ್ನು ನೀಡುತ್ತದೆ. ಇದನ್ನೂ ಓದಿ: ಕಾಂಗ್ರೆಸ್ ಶಾಸಕರ ಬ್ಯಾನರ್ ಪ್ರೇಮ – ಪಂಚಾಯತ್‌ನಿಂದ ರಸ್ತೆ ದುರಸ್ತಿ, ಬ್ಯಾನರ್ ಶಾಸಕರದ್ದು

  • 2000 ರೂ. ಮುಖಬೆಲೆಯ 9760 ಕೋಟಿ ರೂ. ವಿನಿಮಯವಾಗಿಲ್ಲ: ಆರ್‌ಬಿಐ

    2000 ರೂ. ಮುಖಬೆಲೆಯ 9760 ಕೋಟಿ ರೂ. ವಿನಿಮಯವಾಗಿಲ್ಲ: ಆರ್‌ಬಿಐ

    ನವದೆಹಲಿ: 9760 ಕೋಟಿ ರೂ. ಮುಖಬೆಲೆಯ 2000 ರೂ. ನೋಟುಗಳನ್ನು (2000 RS Notes) ಬ್ಯಾಂಕ್‍ಗಳಲ್ಲಿ ವಿನಿಮಯ ಮಾಡಿಕೊಂಡಿಲ್ಲ ಎಂದು ಭಾರತೀಯ ರಿಸರ್ವ್ ಬ್ಯಾಂಕ್ (Reserve Bank of India) ಹೇಳಿದೆ.

    ಈ ವರ್ಷ ಮೇ.19 ರಂದು 2000 ರೂ. ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂಪಡೆಯುವುದಾಗಿ ಭಾರತೀಯ ರಿಸರ್ವ್ ಬ್ಯಾಂಕ್ ಘೋಷಿಸಿತ್ತು. ಈ ಸಮಯದಲ್ಲಿ ಚಲಾವಣೆಯಲ್ಲಿದ್ದ ನೋಟುಗಳ ಮೊತ್ತ 3.56 ಲಕ್ಷ ರೂ. ಕೋಟಿಗಳಷ್ಟಿತ್ತು. ಅಲ್ಲದೇ ನವೆಂಬರ್ 30ರ ವೇಳೆಗೆ ಚಲಾವಣೆಯಲ್ಲಿದ್ದ ಮೌಲ್ಯ 9760 ಕೋಟಿ ರೂ. ಗಳಿಗೆ ಕುಸಿದಿದೆ. ಈ ಮೂಲಕ 97.26% ರಷ್ಟು 2000 ರೂ. ಮುಖಬೆಲೆಯ ನೋಟ್‍ಗಳು ಠೇವಣೆಯಾಗಿದೆ ಎಂದು ಆರ್‌ಬಿಐ ಪ್ರಕಟಣೆಯಲ್ಲಿ ತಿಳಿಸಿದೆ. ಇದನ್ನೂ ಓದಿ: ಕಾಂಗ್ರೆಸ್‍ನ ತುಷ್ಠೀಕರಣ ಪರಿಣಾಮ ಮುಸ್ಲಿಮರಿಗೆ ನಮ್ಮದೇ ರಾಜ್ಯ ಎನ್ನುವ ಭ್ರಮೆ: ಮುತಾಲಿಕ್

    ದೇಶಾದ್ಯಂತ ಎಲ್ಲಾ ಬ್ಯಾಂಕ್ ಶಾಖೆಗಳಲ್ಲಿ 2000 ರೂ. ನೋಟುಗಳನ್ನು ಠೇವಣಿ ಇಡಲು ಅಥವಾ ಬದಲಾಯಿಸಲು ಆರ್‌ಬಿಐ ಜನಸಾಮಾನ್ಯರಿಗೆ ಅವಕಾಶ ನೀಡಿತ್ತು. ಇದರ ಆರಂಭಿಕ ಗಡುವು ಈ ವರ್ಷ ಸೆ.30 ಆಗಿತ್ತು, ನಂತರ ಅದನ್ನು ಅ.7ಕ್ಕೆ ವಿಸ್ತರಿಸಲಾಗಿತ್ತು. ಆರ್‌ಬಿಐನ 19 ಕಚೇರಿಗಳಲ್ಲಿ ನೋಟುಗಳನ್ನು ಬದಲಾಯಿಸುವ ಸೌಲಭ್ಯ ಈಗಲೂ ಇದೆ.

    ಭಾರತದಲ್ಲಿನ ತಮ್ಮ ಬ್ಯಾಂಕ್ ಖಾತೆಗಳಿಗೆ ಜಮಾ ಮಾಡಲು, 2000 ರೂ. ನೋಟ್‍ಗಳನ್ನು ದೇಶದ ಯಾವುದೇ ಅಂಚೆ ಕಚೇರಿಯಿಂದ (Post Office) ಆರ್‌ಬಿಐ ಕಚೇರಿಗೆ ಕಳಿಸಲು ಅವಕಾಶ ಇದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಇದನ್ನೂ ಓದಿ: ತಂಗಿಯ ಮೇಲಿನ ಸೇಡಿಗೆ ಆಕೆಯ ಮಗುವನ್ನೇ ಕೊಲೆಗೈದು ಜೈಲು ಪಾಲಾದ ಅಕ್ಕ

  • ಬೆಂಗಳೂರಿನ ಪೋಸ್ಟ್ ಮಾಸ್ಟರ್ ಕೆಲಸಕ್ಕೆ ಬಿಲ್ ಗೇಟ್ಸ್ ಫಿದಾ – ಡಿಜಿಟಲೀಕರಣಕ್ಕೆ ಮನಸೋತ ಪೋಸ್ಟ್ ವೈರಲ್

    ಬೆಂಗಳೂರಿನ ಪೋಸ್ಟ್ ಮಾಸ್ಟರ್ ಕೆಲಸಕ್ಕೆ ಬಿಲ್ ಗೇಟ್ಸ್ ಫಿದಾ – ಡಿಜಿಟಲೀಕರಣಕ್ಕೆ ಮನಸೋತ ಪೋಸ್ಟ್ ವೈರಲ್

    ಬೆಂಗಳೂರು: ಸಿಲಿಕಾನ್ ಸಿಟಿ ಪೋಸ್ಟ್ ಮಾಸ್ಟರ್ (Post Master) ಕೆಲಸಕ್ಕೆ ಮೈಕ್ರೋಸಾಫ್ಟ್ (Microsoft) ಸಹಸ್ಥಾಪಕ ಬಿಲ್‌ಗೇಟ್ಸ್ (Bill Gates) ಫಿದಾ ಆಗಿದ್ದು, ಭಾರತದ ಡಿಜಿಟಲೀಕರಣಕ್ಕೆ (Digitization) ಮನಸೋತು ಪೋಸ್ಟ್‌ವೊಂದನ್ನು ಹಾಕಿದ್ದಾರೆ. ಸದ್ಯ ಈ ಪೋಸ್ಟ್ ಎಲ್ಲೆಡೆ ವೈರಲ್ ಆಗುತ್ತಿದೆ.

    ಈ ಪೋಸ್ಟ್‌ನಲ್ಲಿ ಅಂಚೆ ಕಚೇರಿ ಪೋಸ್ಟ್ ಮಾಸ್ಟರ್ ಕುಸುಮಾರನ್ನು ಬಿಲ್ ಗೇಟ್ಸ್ ಹಾಡಿಹೊಗಳಿದ್ದು, ಆಕೆಯ ಜೊತೆ ನಗುನಗುತ್ತಾ ಮಾತನಾಡುತ್ತಿರುವ ಬಿಲ್ ಗೇಟ್ಸ್ ಆಕೆಯ ಕೆಲಸದ ಬಗ್ಗೆ ಲಿಂಕ್ಡ್ ಇನ್ ಅಲ್ಲಿ ಪೋಸ್ಟ್ ಮಾಡಿದ್ದಾರೆ. ಅಲ್ಲದೇ ಕುಸುಮಾ ಮಾಡುವ ಕೆಲಸದ ಬಗ್ಗೆ ಹೆಚ್ಚು ತಿಳಿದುಕೊಳ್ಳುವ ಸಲುವಾಗಿ ಒಂದು ಲಿಂಕ್ ಅನ್ನು ಸಹಾ ಪೋಸ್ಟ್ ಮಾಡಿದ್ದಾರೆ. ಇದನ್ನೂ ಓದಿ:‌ ‘ಶಕ್ತಿ’ ವಿರೋಧಿಸಿ ಕರ್ನಾಟಕ ಬಂದ್ – ಖಾಸಗಿ ಸಾರಿಗೆ ಒಕ್ಕೂಟದ ಜೊತೆಗಿನ ಸಭೆ ವಿಫಲ

    ಬಿಲ್ & ಮೆಲಿಂಡಾ ಗೇಟ್ಸ್ ಫೌಂಡೇಶನ್‌ನ ವೆಬ್‌ಸೈಟ್ ಲಿಂಕ್‌ನಲ್ಲಿ ವಿಡಿಯೋ ಪ್ರಕಟ ಮಾಡಿದ್ದು, ಭಾರತದಲ್ಲಿ ಡಿಜಿಟಲ್ ಬ್ಯಾಂಕಿಂಗ್ ಕಥೆ ಮತ್ತು ಯುವತಿಯ ವೃತ್ತಿಜೀವನದ ಹಾದಿ ಎಂಬ ಶೀರ್ಷಿಕೆಯಡಿ ಮಾಹಿತಿ ಪ್ರಕಟಿಸಲಾಗಿದೆ. ಭಾರತದಲ್ಲಿ ಅಳವಡಿಸಿರುವ ಡಿಜಿಟಲೀಕರಣಕ್ಕೆ ಬಿಲ್ ಗೇಟ್ಸ್ ಮನಸೋತಿದ್ದಾರೆ. ಇದನ್ನೂ ಓದಿ: ಬುಧವಾರ ಆಗದಿದ್ರೆ ಆ.27ಕ್ಕೆ ಚಂದ್ರಯಾನ-3 ಲ್ಯಾಂಡಿಂಗ್

    ಪೋಸ್ಟ್‌ನಲ್ಲಿ ಏನಿದೆ?
    ನನ್ನ ಭಾರತ ಪ್ರವಾಸದಲ್ಲಿ ನಾನು ನಂಬಲಾಗದ ಶಕ್ತಿಯೊಂದನ್ನು ಭೇಟಿಯಾದೆ. ಆ ಶಕ್ತಿಯೇ ಕುಸುಮಾ. ತನ್ನ ಸ್ಥಳೀಯ ಅಂಚೆ ಇಲಾಖೆಯಲ್ಲಿ ಅದ್ಭುತ ಕೆಲಸ ಮಾಡುತ್ತಿರುವ ಗಮನಾರ್ಹ ಯುವತಿ ಈಕೆ. ಹಣಕಾಸು ಅಭಿವೃದ್ಧಿಯನ್ನು ವೇಗಗೊಳಿಸಲು ಡಿಜಿಟಲ್ ಸಾರ್ವಜನಿಕ ಮೂಲಸೌಕರ್ಯವನ್ನು ಅಭಿವೃದ್ಧಿಪಡಿಸುವಲ್ಲಿ ಭಾರತವು ಮುಂಚೂಣಿಯಲ್ಲಿದೆ. ಇದನ್ನೂ ಓದಿ: ಇನ್ಮುಂದೆ ಲಗೇಜ್‌ಗಳನ್ನು ಸಾಗಿಸಲು ರಸ್ತೆಗಿಳಿಯಲಿದೆ KSRTC ಲಾರಿ

    ಕುಸುಮಾರಂತಹ ಅಂಚೆ ಕಚೇರಿ ಪೋಸ್ಟ್ಮಾಸ್ಟರ್‌ಗಳು ಭಾರತದಾದ್ಯಂತ ಗ್ರಾಹಕರಿಗೆ ಬ್ಯಾಂಕಿಂಗ್ ಸೇವೆಗಳನ್ನು ನೀಡಲು ಸ್ಮಾರ್ಟ್‌ಫೋನ್ ಸಾಧನಗಳು ಮತ್ತು ಬಯೋಮೆಟ್ರಿಕ್‌ಗಳನ್ನು ಬಳಕೆ ಮಾಡುತ್ತಿರುವುದು ಗಮನಾರ್ಹ. ಆಕೆ ಕೇವಲ ಹಣಕಾಸು ಸೇವೆಗಳನ್ನು ಒದಗಿಸುತ್ತಿಲ್ಲ, ಬದಲಾಗಿ ತನ್ನ ಸಮುದಾಯಕ್ಕೆ ಭರವಸೆ ಮತ್ತು ಆರ್ಥಿಕ ಸಬಲೀಕರಣವನ್ನು ನೀಡುತ್ತಿದ್ದಾಳೆ ಎಂದು ಬರೆದು ಪೋಸ್ಟ್ ಮಾಡಿದ್ದಾರೆ. ಇದನ್ನೂ ಓದಿ: ಬೆಂಗಳೂರು ಉತ್ತರ ಗೆಲ್ಲಲು ಡಿಕೆಶಿ ರಣತಂತ್ರ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಪೋಸ್ಟ್‌ಮ್ಯಾನ್‍ನಿಂದಲೇ ಬಡ ಜನರ ಲಕ್ಷ, ಲಕ್ಷ ಹಣ ಗುಳುಂ

    ಪೋಸ್ಟ್‌ಮ್ಯಾನ್‍ನಿಂದಲೇ ಬಡ ಜನರ ಲಕ್ಷ, ಲಕ್ಷ ಹಣ ಗುಳುಂ

    ಚಿಕ್ಕಬಳ್ಳಾಪುರ: ಬಡವರು, ದಿನ ಕೂಲಿ, ನಾಲಿ ಮಾಡಿ ತಮ್ಮ ಮಕ್ಕಳ ವಿದ್ಯಾಭ್ಯಾಸ, ಮದುವೆ ಸೇರಿದಂತೆ ಕಷ್ಟಕ್ಕೆ ಬೇಕಾಗುತ್ತೆ ಎಂದು ಪೋಸ್ಟ್ ಆಫೀಸ್‍ಗೆ 100-200 ರೂ.ಗಳನ್ನು ಠೇವಣಿ ಕಟ್ಟುತ್ತಿದ್ರು. ಆದ್ರೆ ಜನರ ಬಳಿ ದುಡ್ಡು ಪಡೀತಿದ್ದ ಪೋಸ್ಟ್‌ಮ್ಯಾನ್‍ ಪೋಸ್ಟ್ ಆಫೀಸ್‍ಗೆ ದುಡ್ಡು ಕಟ್ಟದೆ ತಾನೇ ಸ್ವಂತಕ್ಕೆ ಬಳಸಿಕೊಂಡು ಚೆನ್ನಾಗಿ ಮಜಾ ಮಾಡಿದ್ದಾನೆ. ಈ ವಿಷಯ ತಿಳಿದ ಜನರು ತಮ್ಮ ಹಣ ವಾಪಸ್ ನೀಡುವಂತೆ ಧರಣಿ ಕುಳಿತಿದ್ದಾರೆ.

    ಚಿಕ್ಕಬಳ್ಳಾಪುರ ನಗರದ ಅಂಚೆಕಚೇರಿಯಲ್ಲಿ ಈ ಘಟನೆ ನಡೆದಿದೆ. ಕಷ್ಟಕಾಲಕ್ಕೆ ಆಗಲಿ ಎಂದು ಅಂಚೆ ಕಚೇರಿಯಲ್ಲಿ ಪ್ರತಿದಿನ ತಾವು ದುಡಿದ ಹಣದಲ್ಲಿ ಬಡಮಧ್ಯಮ ವರ್ಗದ ಜನ ಒಂದಿಷ್ಟು ಅಂತ ಉಳಿತಾಯ ಮಾಡಿ ಠೇವಣಿ ಮಾಡ್ತಿದ್ರು. ಅದು ನೇರವಾಗಿ ಪೋಸ್ಟ್‌ಮ್ಯಾನ್‍ ಕೈಗೆ ದುಡ್ಡು ಕೊಡುತ್ತಿದ್ರು. ಹೀಗೆ ಪೋಸ್ಟ್‌ ಮ್ಯಾನ್‍ಗೆ ಹಣ ಕಟ್ಟಿದ್ದ ಜನ ಕಷ್ಟ ಇದೆ ಅಂತ ಪೋಸ್ಟ್ ಅಫೀಸ್‍ಗೆ ಹೋಗಿ ಹಣ ಡ್ರಾ ಮಾಡುವುದಕ್ಕೆ ಹೋದ್ರೆ ಅವರಿಗೆ ಶಾಕ್ ಆಗಿದೆ. ಇದನ್ನೂ ಓದಿ:  ಶಾಲಾ ಕೊಠಡಿಯಲ್ಲೇ ಶಿಕ್ಷಕಿ ಜೊತೆ ರೋಮ್ಯಾನ್ಸ್ ಮಾಡುತ್ತಿದ್ದ ಪ್ರಿನ್ಸಿಪಾಲ್ – ಆಕ್ರೋಶಗೊಂಡ ಗ್ರಾಮಸ್ಥರು 

    ದಿನ ಹಣ ಕಟ್ಟುತ್ತಿದ್ರೂ ಅವರ ಖಾತೆಗಳಲ್ಲಿ ಹಣವೇ ಇರಲಿಲ್ಲ. ಅರೇ ಇದೇನಪ್ಪಾ ಅಂತ ಪೋಸ್ಟ್‌ಮ್ಯಾನ್‍ ಕರೆಸಿ ವಿಚಾರಣೆ ಮಾಡಿದಾಗ ಆಸಲಿ ಸತ್ಯ ತಿಳಿದುಬಂದಿದೆ. ಬಡವರ ಬಳಿ ದುಡ್ಡು ಪಡೀತಿದ್ದ ಪೋಸ್ಟ್‌ಮ್ಯಾನ್‍ ಇವರಿಗೆ ನಕಲಿ ಸೀಲ್ ಸಹಿ ಮಾಡಿದ ರಸೀದಿ ನೀಡಿದ್ದಾನೆ. ಈ ಹಣವನ್ನ ಪೋಸ್ಟ್ ಆಫೀಸ್‍ಗೆ ಕಟ್ಟಿಲ್ಲ. ಇದ್ರಿಂದ ಹಣ ಕಳೆದುಕೊಂಡ ಜನ ಈಗ ಅಂಚೆ ಕಚೇರಿಗೆ ಬಂದು ತಮ್ಮ ಹಣ ಕೊಡುವಂತೆ ಧರಣಿ ಕೂತಿದ್ದಾರೆ.

    ಚಿಕ್ಕಬಳ್ಳಾಪುರ ನಗರ ಅಂಚೆ ಕಚೇರಿಯ ಪೋಸ್ಟ್‌ಮ್ಯಾನ್‍ ಜಯರಾಜ್ ಈ ವಂಚನೆ ಮಾಡಿದ್ದಾನೆ. ಹಲವು ದಿನಗಳಿಂದಲೂ ಜನರಿಂದ ಹಣ ಪಡೀತಿದ್ದ ಈತ ಅದನ್ನು ಪೋಸ್ಟ್ ಆಫೀಸ್‍ಗೆ ಜಮಾ ಮಾಡದೆ ತಾನೇ ಸ್ವಂತಕ್ಕೆ ಬಳಸಿಕೊಂಡು ಜನರ ದುಡ್ಡನ್ನ ದುರ್ಬಳಕೆ ಮಾಡಿಕೊಂಡಿದ್ದಾನೆ. ಇದರಿಂದ ಹಣ ಕಟ್ಟಿದವರಿಗೆ ಈಗ ದಿಕ್ಕು ತೋಚದಂತಾಗಿ ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ಸೂರ್ಯ- ಚಂದ್ರ ಇರೋವರೆಗೂ ಸಂವಿಧಾನ ಬದಲಾವಣೆ ಅಸಾಧ್ಯ: ಆನಂದ್ ಸಿಂಗ್ 

    30 ಜನರ ಬಳಿ ಸರಿಸುಮಾರು 13 ಲಕ್ಷ ಹಣವನ್ನ ಸ್ವಂತಕ್ಕೆ ಬಳಸಿಕೊಂಡಿರೋ ಬಗ್ಗೆ ಜಯರಾಜ್ ತಪ್ಪೊಪ್ಪಿಕೊಂಡಿದ್ದಾನೆ. ತನ್ನ ಜಮೀನು ಮಾರಿ ಹಣ ವಾಪಾಸ್ ಮಾಡುವ ಬಗ್ಗೆಯೂ ಭರವಸೆ ನೀಡಿದ್ದಾನೆ. ಇತ್ತ ವಂಚನೆ ಮಾಡಿದ ಜಯರಾಜ್‌ನನ್ನು ಇಲಾಖೆ ಅಮಾನತು ಮಾಡಿದ್ದು, ತಮ್ಮ ದುಡ್ಡು ಅದ್ಯಾವಾಗ ಸಿಗುತ್ತೋ ಇಲ್ವೋ ಅಂತ ಬಡ ಜನರು ಅಂಚೆ ಕಚೇರಿಗೆ ಬಂದು ಆಕ್ರೋಶ ವ್ಯಕ್ತಪಡಿಸಿ ಹಣಕ್ಕಾಗಿ ತಮ್ಮ ಅಳಲು ತೋಡಿಕೊಂಡಿದ್ದಾರೆ.

  • ನಿಶ್ಚಿತಾರ್ಥವಾದ ಒಂದೇ ತಿಂಗಳಲ್ಲಿ ಆತ್ಮಹತ್ಯೆಗೆ ಶರಣಾದ ಯುವತಿ

    ನಿಶ್ಚಿತಾರ್ಥವಾದ ಒಂದೇ ತಿಂಗಳಲ್ಲಿ ಆತ್ಮಹತ್ಯೆಗೆ ಶರಣಾದ ಯುವತಿ

    ಚಿತ್ರದುರ್ಗ: ಎಷ್ಟೋ ಜನ ಹದಿಹರೆಯದ ಯುವಕ, ಯುವತಿಯರು ಉದ್ಯೋಗ ಸಿಗಲಿಲ್ಲ, ಲೈಫ್ ಸೆಟ್ಲ್ ಆಗ್ತಿಲ್ಲ ಎಂದು ಪರದಾಡುತ್ತಾರೆ. ಆದರೆ ಇಲ್ಲೊಬ್ಬಲು ಯುವತಿಗೆ ಸರ್ಕಾರಿ ಉದ್ಯೋಗ ಸಿಕ್ಕಿ, ಇನ್ನೇನೂ ಮದುವೆ ತಯಾರಿಯಲ್ಲಿ ಮನೆಯವರಿದ್ದರು. ಆದರೆ ಎಂಗೇಜ್ಮೆಂಟ್ ಆಗಿ ಒಂದೇ ತಿಂಗಳಲ್ಲಿ ಹುಡುಗಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ರೇಖಲಗೆರೆ ಗ್ರಾಮದಲ್ಲಿ ನಡೆದಿದೆ.

    ಆತ್ಮಹತ್ಯೆ ಮಾಡಿಕೊಂಡ ಯುವತಿಯನ್ನು ಮಾನಸ (22) ಎಂದು ಗುರುತಿಸಲಾಗಿದೆ. ಮಾನಸ ಸರ್ಕಾರಿ ಉದ್ಯೋಗ ಸಿಕ್ಕಿ, ಲೈಫ್ ಎಂಜಾಯ್ ಮಾಡೋ ಟೈಮಲ್ಲಿ ಅನುಮಾನಸ್ಪದವಾಗಿ ಆ್ಯಸಿಡ್ ಕುಡಿದು, ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ.

    ಮಾನಸಗೆ ಚಿಕ್ಕ ವಯಸ್ಸಿಗೆ ತನ್ನ ಕಾಲ ಮೇಲೆ ತಾನೇ ನಿಂತು ಇತರರಿಗೆ ಸ್ಪೂರ್ತಿ ಆಗುವಂತಹ ಅವಕಾಶ ಸಿಕ್ಕಿತ್ತು. ಆದರೆ ಈಕೆ ಮೇಲೆ ಅದ್ಯಾರ ದೃಷ್ಟಿ ಬಿತ್ತೋ ಗೊತ್ತಿಲ್ಲ. ಮಾನಸಿಕವಾಗಿ ಈಕೆ ಕುಗ್ಗಿ ಹೋಗಿದ್ದಳು. ತನ್ನನ್ನು ತಾನೇ ದ್ವೇಷಿಸಿಕೊಳ್ಳುವಷ್ಟು ನೊಂದಿದ್ದಳು. ಹೀಗಾಗಿ ಒಂದಲ್ಲ, ಎರಡಲ್ಲ ಸತತ ಮೂರು ಬಾರಿ ಆತ್ಮಹತ್ಯೆಗೆ ಯತ್ನಿಸಿ ಕೊನೆಗೂ ಇಂದು ಕರ್ತವ್ಯಕ್ಕೆ ತೆರಳುವ ಮಾರ್ಗ ಮಧ್ಯೆ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಈಚಲಗೆರೆ ಗ್ರಾಮದ ಬಳಿ ತನ್ನ ದ್ವಿಚಕ್ರ ವಾಹನವನ್ನು ರಸ್ತೆ ಬದಿಗೆ ನಿಲ್ಲಿಸಿ, ಕತ್ತನ್ನು ಕೊಯ್ದುಕೊಂಡು, ಆ್ಯಸಿಡ್ ಕುಡಿದು ಆತ್ಮಹತ್ಯೆಗೆ ಶರಣಾಗಿದ್ದು, ಈಕೆಯ ಕುಟುಂಬ ಕಣ್ಣೀರಲ್ಲಿ ಕೈ ತೊಳೆಯುವಂತಾಗಿದೆ. ಇದನ್ನೂ ಓದಿ: 2 ಲಕ್ಷ ಮೌಲ್ಯದ ಚಿನ್ನಾಭರಣ, ಹಣವಿರುವ ಬ್ಯಾಗ್ ಹಿಂದಿರುಗಿಸಿದ ಆಟೋ ಚಾಲಕ..!

    ಮಾನಸ, ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ನಗರಂಗೆರೆ ಗ್ರಾಮದ ಪೋಸ್ಟ್  ಆಫೀಸ್‍ನಲ್ಲಿ ಪೋಸ್ಟ್  ಮಾಸ್ಟರ್ ಆಗಿ ಕರ್ತವ್ಯ ನಿರ್ವಹಿಸುತಿದ್ದಳು. ಕಳೆದ ಒಂದು ತಿಂಗಳ ಹಿಂದೆಯಷ್ಟೇ ಸರ್ಕಾರಿ ಉದ್ಯೋಗಿ ಯವಕನೊಂದಿಗೆ ಎಂಗೇಜ್ಮೆಂಟ್ ಆಗಿತ್ತು. ಆದರೆ ಇದೀಗ ಮಾನಸ ದಿಢೀರ್ ಎಂದು ಆತ್ಮಹತ್ಯೆಗೆ ಶರಣಾಗಿರುವುದು ಅನುಮಾನ ಮೂಡಿಸಿದೆ.

    ಮಾನಸ ದಾರಿ ಮಧ್ಯೆ ಆ್ಯಸಿಡ್ ಸೇವಿಸಿದ ಪರಣಾಮ ಆಕೆಯ ದೇಹದ ಒಳಗಿನ ಭಾಗ ಸಂಪೂರ್ಣ ಸುಟ್ಟು ಹೋಗಿವೆ, ಅಲ್ಲದೇ ಕುತ್ತಿಗೆಯನ್ನು ಸಹ ಚಾಕುವಿನಿಂದ ಕೊಯ್ದಕೊಂಡಿದ್ದಾಳೆಂದು ವೈದ್ಯರು ತಿಳಿಸಿದ್ದಾರೆ. ಆದರೆ ದಿಢೀರ್ ಅಂತ ಈ ರೀತಿ ಸಾವಿಗೀಡಾದ ಪರಿಣಾಮ ಈ ಸಾವಿನ ಸುತ್ತ ಸಾರ್ವಜನಿಕವಾಗಿ ಬಾರಿ ಅನುಮಾನ ವ್ಯಕ್ತವಾದ ಹಿನ್ನೆಲೆಯಲ್ಲಿ ಚಿತ್ರದುರ್ಗ ಎಸ್‍ಪಿ ರಾಧಿಕಾ ನೇತೃತ್ವದಲ್ಲಿ ನಿಗೂಢ ಸಾವಿನ ಬಗ್ಗೆ ತನಿಖೆಯನ್ನು ಚುರುಕುಗೊಳಿಸಲಾಗಿದೆ.

    ಆತ್ಮಹತ್ಯೆಯ ಬಳಿಕ ಮಾನಸನ ಕುಟುಂಬಸ್ಥರು ಹಾಗೂ ಈ ಪ್ರಕರಣದ ಬಗ್ಗೆ ಚಿತ್ರದುರ್ಗ ಎಸ್‍ಪಿ ಜಿ.ರಾಧಿಕಾ ಅವರು ಪ್ರತಿಕ್ರಿಯಿಸಿದ್ದು, ಮಾನಸ ಹಲವು ದಿನಗಳಿಂದ ಮಾನಸಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಳು. ಮಾನಸಿಕವಾಗಿ ಖಿನ್ನತೆಗೆ ಒಳಗಾಗಿದ್ದಳು. ಹೀಗಾಗಿ ಆತ್ಮಹತ್ಯೆಗೆ ಶರಣಾಗಿರಬಹುದು ಎಂದಿದ್ದಾರೆ.

  • ಮಂಡ್ಯದ ಪೋಸ್ಟ್ ಆಫೀಸ್‍ನಲ್ಲಿ ದೋಖಾ – ಸಾವನ್ನಪ್ಪಿ 5 ವರ್ಷ ನಂತ್ರ ಖಾತೆಯಿಂದ ಹಣ ಡ್ರಾ

    ಮಂಡ್ಯದ ಪೋಸ್ಟ್ ಆಫೀಸ್‍ನಲ್ಲಿ ದೋಖಾ – ಸಾವನ್ನಪ್ಪಿ 5 ವರ್ಷ ನಂತ್ರ ಖಾತೆಯಿಂದ ಹಣ ಡ್ರಾ

    ಮಂಡ್ಯ: ವೃದ್ಧೆಯೊಬ್ಬರು ಮೃತಪಟ್ಟು ಐದು ವರ್ಷವಾದ ಬಳಿಕ ಅವರ ಅಂಚೆ ಕಚೇರಿಯಲ್ಲಿ ಇದ್ದ ಖಾತೆಯಿಂದ 19 ಸಾವಿರ ಹಣ ಡ್ರಾ ಆಗಿರುವ ಘಟನೆ ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಬೆಳಕಿಗೆ ಬಂದಿದ್ದು, ಈ ಬಗ್ಗೆ ಅಂಚೆ ಅಧಿಕಾರಿಗಳನ್ನು ಕೇಳಿದರೆ ಉತ್ತರವಿಲ್ಲದೆ ಸೈಲೆಂಟ್ ಆಗಿ ಇದ್ದಾರೆ.

    ಕೆರಗೋಡು ಗ್ರಾಮದ ನಿವಾಸಿ ವಿಜಯಾಂಭ ಎಂಬವರು 2011 ಜೂನ್ 18 ರಂದು ಮೃತಪಟ್ಟಿದ್ದಾರೆ. ಕುಟುಂಬಸ್ಥರಿಗೆ ವಿಜಯಾಂಭ ಅವರು ಅಂಚೆ ಕಚೇರಿಯಲ್ಲಿ ಖಾತೆ ಹೊಂದಿದ್ದಾರೆ ಎಂದು 2018ರಲ್ಲಿ ಮನೆಯನ್ನು ಸ್ವಚ್ಚಗೊಳಿಸುವ ವೇಳೆ ಸಿಕ್ಕ ಪಾಸ್‍ಬುಕ್‍ನಿಂದ ತಿಳಿದು ಬಂದಿದೆ. ನಂತರ ಆ ಪಾಸ್‍ಬುಕ್ ಹಾಗೂ ವಿಜಯಾಂಭ ಅವರ ಡೆತ್ ಸರ್ಟಿಫಿಕೇಟ್‍ನ್ನು ತೆಗೆದುಕೊಂಡು ಅಂಚೆ ಕಚೇರಿಗೆ ಹೋಗಿ ಅಂಚೆ ಅಕೌಂಟ್ ಬಗ್ಗೆ ಕುಟುಂಬಸ್ಥರು ಪರಿಶೀಲನೆ ಮಾಡಿದ್ದಾರೆ.

    ಈ ವೇಳೆ 2016ರ ಜೂನ್ 28 ರಂದು ವಿಜಯಾಂಭ ಖಾತೆಯಿಂದ 19 ಸಾವಿರ ಹಣ ಡ್ರಾ ಆಗಿರುವುದು ಬೆಳಕಿಗೆ ಬಂದಿದೆ. ಅದಾಗಲೇ ವಿಜಯಾಂಭ ಅವರು ಮೃತಪಟ್ಟಿ 5 ವರ್ಷಗಳು ಆಗಿತ್ತು. ಈ ವೇಳೆ ಕುಟುಂಬಸ್ಥರು ವಿಜಯಾಂಭ ಅವರು ಸಾವನ್ನಪ್ಪಿರುವುದು 2011 ರಲ್ಲಿ ಅವರ ಖಾತೆಯಿಂದ 2015 ರಲ್ಲಿ ಹಣ ಹೇಗೆ ಡ್ರಾ ಆಯ್ತು ಎಂದು ಪ್ರಶ್ನೆ ಮಾಡಿದ್ದಾರೆ.

    ಕುಟುಂಬಸ್ಥರ ಪ್ರಶ್ನೆಗೆ ಅಂಚೆ ಅಧಿಕಾರಿಗಳು ಯಾವುದೇ ಉತ್ತರ ನೀಡದೇ ಬೇರೆ ಸಬೂಬನ್ನು ನೀಡಿದ್ದಾರೆ. ಈ ಪ್ರಕರಣ ಬೆಳಕಿಗೆ ಬಂದು ಮೂರು ವರ್ಷಗಳಾಗಿದ್ದು, ಇಲ್ಲಿಯವರೆಗೆ ಯಾವುದೇ ನ್ಯಾಯ ಈ ಕುಟುಂಬಕ್ಕೆ ದೊರೆತಿಲ್ಲ. ವಿಜಯಾಂಭ ಅವರ ಅಳಿಯ ಶಿವಪ್ರಕಾಶ್ ಅಂಚೆ ಇಲಾಖೆಯ ಮುಖ್ಯ ಅಧಿಕಾರಿಗಳಿಗೆ ಪತ್ರ ಬರೆದರೂ ಸಮಸ್ಯೆ ಪರಿಹಾರವಾಗಿಲ್ಲ. ಅಂಚೆ ಇಲಾಖೆಯಲ್ಲಿ ಈ ರೀತಿಯ ಮೋಸ ಆಗುತ್ತದೆ ಎಂದರೆ ಯಾರು ಹಣ ಕಟ್ಟುತ್ತಾರೆ. ಈ ರೀತಿ ಆದೆಷ್ಟು ಜನರಿಗೆ ಮೋಸ ಆಗಿದೆಯೋ. ನಮಗೆ ನ್ಯಾಯ ದೊರಕಿಸಿ, ತಪ್ಪಿತಸ್ಥ ಅಧಿಕಾರಿಗಳಿಗೆ ಶಿಕ್ಷಯಾಗಬೇಕೆಂದು ಶಿವಪ್ರಕಾಶ್ ಆಗ್ರಹ ಮಾಡುತ್ತಿದ್ದಾರೆ.

  • ಅಂಚೆ ಚೀಟಿಯಲ್ಲಿ ಭೂಗತ ಪಾತಕಿಗಳ ಚಿತ್ರ!

    ಅಂಚೆ ಚೀಟಿಯಲ್ಲಿ ಭೂಗತ ಪಾತಕಿಗಳ ಚಿತ್ರ!

    – ಅಂಚೆ ಕಚೇರಿ ಸಿಬ್ಬಂದಿಯಿಂದ ಎಡವಟ್ಟು

    ಲಕ್ನೋ: ಅಂಚೆ ಕಚೇರಿ ಬಿಡುಗಡೆಗೊಳಿಸಿದ ಅಂಚೆ ಇಲಾಖೆಯ ಚೀಟಿ(ಸ್ಟಾಂಪ್) ನಲ್ಲಿ ಭೂಗತ ಪಾತಕಿಗಳ ಚಿತ್ರ ಇರುವುದು ಉತ್ತರಪ್ರದೇಶದ ಕಾನ್ಪುರ ಮುಖ್ಯ ಅಂಚೆ ಕಚೇರಿಯಲ್ಲಿ ಕಂಡು ಬಂದಿದೆ.

    ಕುಖ್ಯಾತ ಭೂಗತ ದೊರೆಗಳಾದ ಛೋಟಾ ರಾಜನ್ ಮತ್ತು ಮುನ್ನಾ ಭಜರಂಗಿ ಚಿತ್ರವಿರುವ 24 ಸ್ಟಾಂಪ್‍ಗಳನ್ನು ಬಿಡುಗಡೆ ಮಾಡಲಾಗಿದೆ.

    ಮೈ ಸ್ಟಾಂಪ್ ಯೋಜನೆಯಡಿ ಇಂಡಿಯಾ ಪೋಸ್ಟ್‍ನ ಅಂಚೆ ಚೀಟಿಗಳ ವೈಯಕ್ತಿಕ ಹಾಳೆಗಳನ್ನು ಪಡೆಯಲು ಅವಕಾಶ ನೀಡುತ್ತದೆ. ಈ ಸ್ಟಾಂಪ್‍ಗಳನ್ನು ಬಿಡುಗಡೆ ಮಾಡುವಾಗ ಅಚಾತುರ್ಯವೊಂದು ನಡೆದಿರುವುದು ಇದೀಗ ಭಾರೀ ಸುದ್ದಿಯಲ್ಲಿದೆ.

    ಅಂಚೆ ಚೀಟಿಗಳನ್ನು ಮಾಡುವಾಗ ಸಂಬಂಧಪಟ್ಟ ವ್ಯಕ್ತಿಗಳ ಗುರುತು ಪತ್ರವನ್ನು ಪಡೆದಿಲ್ಲ. ಅಲ್ಲದೇ ಅರ್ಜಿ ಸಲ್ಲಿಸಿದ ವ್ಯಕ್ತಿಗಳು ಯಾರು ಎಂದು ಗೊತ್ತಿಲ್ಲ. ಈ ಹಿನ್ನೆಲೆಯಲ್ಲಿ ಅಂಚೆ ಚೀಟಿ ಸಂಗ್ರಹಣ ವಿಭಾಗದ ಮುಖ್ಯಸ್ಥ ರಜನೀಶ್ ಕುಮಾರ್‍ನನ್ನು ಅಮಾನತುಗೊಳಿಸಲಾಗಿದೆ.

    ಅಂಚೆ ಇಲಾಖೆ ಮೈ ಸ್ಟಾಂಪ್ ಯೋಜನೆಯಡಿ ವ್ಯಕ್ತಿಗಳು ತಮ್ಮ ಅಥವಾ ಕುಟುಂಬ ಸದಸ್ಯರು ಸ್ಟಾಂಪ್‍ಗಳನ್ನು ಹೊಂದಲು ಅವಕಾಶ ನೀಡಿದೆ.

  • ಬಡವರ ಹಣವನ್ನು ತಿಂದು ತೇಗಿದ ಪೋಸ್ಟ್ ಮ್ಯಾನ್

    ಬಡವರ ಹಣವನ್ನು ತಿಂದು ತೇಗಿದ ಪೋಸ್ಟ್ ಮ್ಯಾನ್

    ಹಾಸನ: ಕಷ್ಟ ಪಟ್ಟು ದುಡಿದ ಉಳಿತಾಯದ ಹಣವನ್ನು ಪೋಸ್ಟ್ ಮಾಸ್ಟರ್ ಓರ್ವ ದುರುಪಯೋಗ ಮಾಡಿಕೊಂಡಿರುವ ಆರೋಪ ಹಾಸನದ ಸಾಲಗಾಮೆ ಅಂಚೆ ಕಚೇರಿಯಲ್ಲಿ ಕೇಳಿಬಂದಿದೆ.

    ಹಲವಾರು ವರ್ಷಗಳಿಂದ ಸಾಲಗಾಮೆ ಗ್ರಾಮದಲ್ಲಿ ಅಂಚೆ ಕಚೇರಿ ಕಾರ್ಯನಿರ್ವಹಿಸುತ್ತಿದ್ದು 8 ಸಾವಿರ ಉಳಿತಾಯ ಖಾತೆಗಳಿವೆ. ಇಲ್ಲಿ ಅಂಚೆ ಅಧಿಕಾರಿಯಾಗಿ ಕಾರ್ಯನಿರ್ವಹಿಸುತಿದ್ದ ಚಂದ್ರು ಗ್ರಾಹಕರ ಹಣದಲ್ಲಿ ಅವ್ಯವಹಾರ ಮಾಡಿರುವ ಆರೋಪ ಕೇಳಿಬಂದಿದೆ.

    ಸದ್ಯ ಚಂದ್ರ ಬೇರೆ ಪೋಸ್ಟ್ ಆಫೀಸ್ ವರ್ಗವಾಗಿದ್ದು ನಂತರ ಈ ಅವ್ಯವಹಾರ ಬೆಳಕಿಗೆ ಬಂದಿದೆ. ತಮ್ಮ ಉಳಿತಾಯ ಖಾತೆಯ ಹಣವನ್ನು ಪಡೆಯಲು ಪೋಸ್ಟ್ ಆಫೀಸ್‍ಗೆ ಬಂದ ಗ್ರಾಹಕರಿಗೆ ಖಾತೆಯಲ್ಲಿ ಹಣವೇ ಇಲ್ಲದ್ದನ್ನು ನೋಡಿ ಶಾಕ್ ಆಗಿದ್ದಾರೆ.

    ಪಾಸ್ ಬುಕ್‍ನಲ್ಲಿ ಹಣ ಜಮಾವಣೆಯಾದ ಬಗ್ಗೆ ದಾಖಲೆ ಇದ್ದರೆ ಕಂಪ್ಯೂಟರ್ ನಲ್ಲಿ ಮಾತ್ರ ಹಣವನ್ನು ಸೇರಿಸಲಾಗಿಲ್ಲ. ಹೊಸದಾಗಿ ಬಂದಿರುವ ಅಂಚೆ ಅಧಿಕಾರಿ ಗ್ರಾಹಕರ ಹಣ ಕುರಿತು ಪರಿಶೀಲನೆ ನಡೆಸಿದಾಗ ಫೇಕ್ ಪಾಸ್ ಬಳಕೆ ಮಾಡಿರುವ ವಿಚಾರ ಬೆಳಕಿಗೆ ಬಂದಿದೆ.

    ಹಲವಾರು ವರ್ಷಗಳಿಂದ ಇದೇ ಅಂಚೆ ಕಚೇರಿಯಲ್ಲಿ ಕಾರ್ಯನಿರ್ವಹಿಸುತಿದ್ದ ಚಂದ್ರು ಹಲವು ಗ್ರಾಹಕರಿಗೆ ಇದೇ ರೀತಿ ಮಾಡಿರುವ ಶಂಕೆ ವ್ಯಕ್ತವಾಗಿದೆ. ಈಗಾಗಲೆ ಎಂಟು ಮಂದಿ ಗ್ರಾಹಕರ ಪಾಸ್‍ಬುಕ್‍ನಲ್ಲಿ ಎಂಟ್ರಿ ಮಾಡಲಾಗಿದ್ದು ಕಂಪ್ಯೂಟರ್ ನಲ್ಲಿ ಮಾತ್ರ ನೊಂದಣಿ ಆಗಿಲ್ಲ. ಸದ್ಯ ಅಂಚೆ ಇಲಾಖೆ ಹಿರಿಯ ಅಧಿಕಾರಿಗಳು ಭೇಟಿ ನೀಡಿದ್ದು ಪರಿಶೀಲನೆ ಮುಂದುವರಿಸಿದ್ದಾರೆ.