Tag: poster

  • ಪ್ಲೀಸ್ ಹುಡುಗಿ ಕೊಡಿ – ಮದುವೆಯಾಗಲು ವಧು ಬೇಕೆಂದು ಊರೆಲ್ಲಾ ಪೋಸ್ಟರ್ ಹಾಕಿದ ಯುವಕ

    ಪ್ಲೀಸ್ ಹುಡುಗಿ ಕೊಡಿ – ಮದುವೆಯಾಗಲು ವಧು ಬೇಕೆಂದು ಊರೆಲ್ಲಾ ಪೋಸ್ಟರ್ ಹಾಕಿದ ಯುವಕ

    ಚೆನ್ನೈ: ಪ್ರತಿಯೊಬ್ಬರ ಜೀವನದಲ್ಲಿಯೂ ಮದುವೆ ಎಂಬುವುದು ಹೊಸ ಅಧ್ಯಾಯವಾಗಿರುತ್ತದೆ. ಸಾಮಾನ್ಯವಾಗಿ ಮದುವೆ ಸ್ವರ್ಗದಲ್ಲಿ ನಿಶ್ಚಯವಾಗಿರುತ್ತದೆ ಎಂದು ಹಿರಿಯರು ಹೇಳುವುದನ್ನು ನಾವು ಕೇಳಿರುತ್ತೇವೆ. ಹೀಗಾಗಿ ಹಲವಾರು ಮಂದಿ ತಮಗೆ ಹೊಂದಿಕೊಳ್ಳುವAತಹ ಜೀವನ ಸಂಗಾತಿಯನ್ನು ಹುಡುಕಲು ಪ್ರಯತ್ನಿಸುತ್ತಾರೆ. ಇದಕ್ಕಾಗಿ ಬ್ರೋಕರ್, ಮ್ಯಾಟ್ರಿಮೋನಿಗಳಲ್ಲಿ ತಮ್ಮ ಪ್ರೋಫೈಲ್ ಅನ್ನು ಪೋಸ್ಟ್ ಮಾಡುವುದನ್ನು ನಾವು ನೋಡಿರುತ್ತೇವೆ. ಆದರೆ ವ್ಯಕ್ತಿಯೋರ್ವ ಹುಡುಗಿಗಾಗಿ ಊರು ತುಂಬಾ ತನ್ನ ಪ್ರೊಪೈಲ್‌ನನ್ನು ಪೋಸ್ಟರ್‌ನನ್ನು ಲಗತ್ತಿಸಿದ್ದಾನೆ.

    ಹೌದು, ತಮಿಳುನಾಡಿನ ಎಂ.ಎಸ್ ಜಗನ್ ಎಂಬವರು ಮದುವೆಯಾಗಲು ಹುಡುಗಿ ಬೇಕೆಂದು ಪೋಸ್ಟರ್ ಹಾಕಿದ್ದಾರೆ. ಸದ್ಯ ಈ ಪೋಸ್ಟರ್ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ. ಇಂಜಿನಿಯರ್ ಆಗಿರುವ 27 ವರ್ಷದ ಎಂ.ಎಸ್ ಜಗನ್ ಹಲವಾರು ವರ್ಷಗಳಿಂದ ಹುಡುಗಿಯನ್ನು ಹುಡುಕುತ್ತಿದ್ದಾರೆ. ಹುಡುಗಿಗಾಗಿ ಬ್ರೋಕರ್‌ಗಳನ್ನು ಸಂಪರ್ಕಿಸಿ ತಮ್ಮ ಪ್ರೊಫೈಲ್‌ನ್ನು ನೀಡಿದ್ದರು. ಅಲ್ಲದೇ ಮ್ಯಾಟ್ರಿಮೋನಿ ಸೈಟ್‌ನಲ್ಲೂ ಪ್ರೊಫೈಲ್ ಅಟ್ಯಾಚ್ ಮಾಡಿದ್ದರು. ಆದರೆ ಯಾವ ರೀತಿಯಲ್ಲಿ ಹುಡುಕಿದರೂ ಸೂಕ್ತ ಸಂಗಾತಿ ಸಿಕ್ಕಿರಲ್ಲಿಲ್ಲ. ಹೀಗಾಗಿ ಮಧುರೈನ ವಿಲ್ಲುಪುರಂನ ಎಂಎಸ್ ಜಗನ್ ತಮ್ಮ ವೈಯಕ್ತಿಕ ವಿವರಗಳನ್ನು ಹೊಂದಿರುವ ದೊಡ್ಡ ಪೋಸ್ಟರ್‌ಗಳನ್ನು ತಮ್ಮ ಊರಿನ ಸುತ್ತಲೂ ಹಾಕಿದ್ದಾರೆ.

     

    ಪೋಸ್ಟರ್‌ನಲ್ಲಿ ಜಗನ್ ಅವರ ಫೋಟೋ ಮತ್ತು ಅವರ ಹೆಸರು, ಜಾತಿ, ಸಂಬಳ, ವೃತ್ತಿ, ವಿಳಾಸ ಮತ್ತು ಅವರು ತುಂಡು ಭೂಮಿ ಹೊಂದಿರುವ ಎಂಬ ವಿವರಗಳನ್ನು ನೀಡಿರುವುದನನು ಕಾಣಬಹುದಾಗಿದೆ. ಇದನ್ನೂ ಓದಿ:  ಭಾರತೀಯ ಉಕ್ಕು ಪ್ರಾಧಿಕಾರದ ಮಾಜಿ ಅಧ್ಯಕ್ಷ ವಿ. ಕೃಷ್ಣಮೂರ್ತಿ ವಿಧಿವಶ

    MARRIAGE

    ಈ ಬಗ್ಗೆ ಪ್ರತಿಕ್ರಿಯಿಸಿದ ಜಗನ್ ಅವರು, ನಾನು ಕಳೆದ ಐದು ವರ್ಷಗಳಿಂದ ವಧುವನ್ನು ಹುಡುಕುತ್ತಿದ್ದೇನೆ, ಆದರೆ ಸೂಕ್ತವಧು ಸಿಕ್ಕಿಲ್ಲ. ಹೀಗಾಗಿ ನಾನು ಅನೇಕ ಪೋಸ್ಟರ್‌ಗಳನ್ನು ವಿನ್ಯಾಸಗೊಳಿಸಿದ್ದೇನೆ. ಆದರೆ ಈ ಪ್ಲ್ಯಾನ್ ಯಾಕೋ ವರ್ಕೌಟ್ ಆಗುತ್ತಿಲ್ಲ. 27 ವರ್ಷದೊಳಗಿನ ವಧು ಕುಟುಂಬಗಳಿಂದ ಕರೆಬರಬಹುದು ಎಂಬ ನಿರೀಕ್ಷೆಯನ್ನು ಹೊಂದಿದ್ದೆ. ಆದರೆ ಬದಲಿಗೆ ಬ್ರೋಕರ್‌ಗಳಿಂದ ಕರೆ ಬರುತ್ತಿದೆ. ಮತ್ತೆ ಕೆಲವರು ಪೋಸ್ಟರ್ ನೋಡಿ ಅಪಹಾಸ್ಯ ಮಾಡುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

    ನಾನು ಇದ್ಯಾವುದಕ್ಕೂ ಹೆದರುವುದಿಲ್ಲ. ಅವರು ನನ್ನ ಪೋಸ್ಟರ್‌ನಿಂದ ಮೀಮ್‌ಗಳನ್ನು ಮಾಡುತ್ತಿದ್ದಾರೆ, ಆದರೆ ನಾನು ಅದರಿಂದ ಪ್ರಭಾವಿತನಾಗುವುದಿಲ್ಲ. ಅವರ ಖರ್ಚಿನಿಂದ ನಾನು ವೈರಲ್ ಆಗುತ್ತಿದ್ದೇನೆ ಎಂದು ವ್ಯಂಗ್ಯವಾಡಿದ್ದಾರೆ. ಇದನ್ನೂ ಓದಿ: ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜಯಲಲಿತಾ ಸೀರೆ, ಚಪ್ಪಲಿ ಹರಾಜು?

    Live Tv

  • ಮುದ್ದುಗಿಳಿ ಕಾಣೆಯಾಗಿದೆ ಹುಡುಕಿಕೊಡಿ – ನಗದು ಬಹುಮಾನ ಘೋಷಿಸಿದ ಕುಟುಂಬ

    ಮುದ್ದುಗಿಳಿ ಕಾಣೆಯಾಗಿದೆ ಹುಡುಕಿಕೊಡಿ – ನಗದು ಬಹುಮಾನ ಘೋಷಿಸಿದ ಕುಟುಂಬ

    ಪಾಟ್ನಾ: ಬಿಹಾರದ ಗಯಾ ಜಿಲ್ಲೆಯ ಕುಟುಂಬವೊಂದು ಕಳೆದ 12 ವರ್ಷಗಳಿಂದಲೂ ಮುದ್ದಾಗಿ ಸಾಕಿದ್ದ `ಪೊಪೊ’ ಗಿಳಿಯೊಂದು ಕಾಣೆಯಾಗಿದ್ದು, ಹುಡುಕಿಕೊಟ್ಟವರಿಗೆ ಆಕರ್ಷಕ ನಗದು ಬಹುಮಾನ ನೀಡುವುದಾಗಿ ಘೋಷಿಸಿದೆ.

    ಇಲ್ಲಿನ ಪಿಪಾರಪತಿ ರಸ್ತೆಯ ನಿವಾಸಿಗಳಾದ ಶ್ಯಾಮ್ ದೇವ್ ಪ್ರಸಾದ್‌ಗುಪ್ತಾ ಹಾಗೂ ಅವರ ಪತ್ನಿ ಸಂಗೀತಾ ಗುಪ್ತಾ ತಮ್ಮ ಗಿಳಿಯನ್ನು ಹುಡುಕಿಕೊಟ್ಟವರಿಗೆ 5,100 ರೂಪಾಯಿ ಬಹುಮಾನ ನೀಡುವುದಾಗಿ ಘೋಷಿಸಿದ್ದಾರೆ. ನಗರದ ಪ್ರಮುಖ ರಸ್ತೆಯ ಗೋಡೆಗಳ ಮೇಲೆ ಹಾಗೂ ಮಾರುಕಟ್ಟೆಗಳಲ್ಲಿ ಪಕ್ಷಿಯ ಫೋಟೋ ಇರುವ ಪೋಸ್ಟರ್‌ಗಳನ್ನು ಹಾಕಲಾಗಿದೆ. ಇದನ್ನೂ ಓದಿ: ರಾಯಭಾರ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಬ್ರಿಟಿಷ್ ಮಹಿಳೆಗೆ ಮುಂಬೈ ಕ್ಲಬ್‌ನಲ್ಲಿ ಕಿರುಕುಳ

    Pet parrot

    ಪೊಪೊ ಗಿಳಿ ಒಂದು ತಿಂಗಳ ಹಿಂದೆ ಮನೆಯಿಂದ ಹಾರಿಹೋಗಿದೆ. ಅದನ್ನು ಮರಳಿ ಪಡೆಯಲು ಹಲವು ರೀತಿಯಲ್ಲಿ ಪ್ರಯತ್ನಿಸುತ್ತಿದ್ದಾರೆ. ಅದಕ್ಕಾಗಿ ವಿಶೇಷ ಧ್ವನಿಯಲ್ಲಿ ಕೂಗುವುದು, ಹತ್ತಿರದ ಮರಗಳಲ್ಲಿ ಹುಡುಕುವ ಪ್ರಯತ್ನವನ್ನೂ ಮಾಡುತ್ತಿದ್ದಾರೆ.

    ಕೊನೆಯ ಪ್ರಯತ್ನವಾಗಿ ಪೋಸ್ಟರ್ ಮೂಲಕ ಕರೆ ಕೊಟ್ಟಿದ್ದಾರೆ. ಜೊತೆಗೆ ಫೇಸ್‌ಬುಕ್ ಹಾಗೂ ವಾಟ್ಸಾಪ್ ಮೂಲಕ ಸಂದೇಶ ರವಾನೆ ಮಾಡುವ ಮೂಲಕ ಹುಡುಕಾಟದ ಅಭಿಯಾನ ಶುರು ಮಾಡಿದ್ದಾರೆ. ಇದನ್ನೂ ಓದಿ: ಭಾವಿಪತಿಯನ್ನೇ ಅರೆಸ್ಟ್ ಮಾಡಿದ ಇನ್ಸ್‌ಪೆಕ್ಟರ್

    PARROT

    ಈ ಕುರಿತು ಪ್ರತಿಕ್ರಿಯೆ ನೀಡಿರುವ ಸಂಗೀತಾ ಗುಪ್ತ ಅವರು, ಸುಮಾರು 12 ವರ್ಷಗಳಿಂದ ಗಿಳಿಯನ್ನು ಸಾಕುಪ್ರಾಣಿಯನ್ನು ಹೊಂದಿದ್ದೆವು. ಏಪ್ರಿಲ್ 5ರಂದು ಪಕ್ಷಿ ಮನೆಯಿಂದ ನಾಪತ್ತೆಯಾಗಿತ್ತು. ನಮ್ಮ ಪಕ್ಷಿಯನ್ನು ಯಾರೇ ತೆಗೆದುಕೊಂಡಿದ್ದರೂ ದಯವಿಟ್ಟು ಅದನ್ನು ನಮಗೆ ಹಿಂತಿರುಗಿಸಿ ಎಂದು ಮನವಿ ಮಾಡಿದ್ದೇವೆ. ಏಕೆಂದರೆ ಅದು ಪಕ್ಷಿ ಮಾತ್ರವಲ್ಲ ನಮ್ಮ ಕುಟುಂಬದ ಸದಸ್ಯ. ಅದಕ್ಕೆ ಪ್ರೀತಿಯಿಂದ ಪೊಪೊ ಎಂದು ಹೆಸರಿಡಲಾಗಿದೆ ಎಂದು ಸುದ್ದಿಸಂಸ್ಥೆಯೊಂದು ವರದಿ ಮಾಡಿದೆ.

  • YSRP ಪೋಸ್ಟರ್‌ಗಳಿಗೆ ಹಾನಿ – 3, 4ನೇ ತರಗತಿಯ ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದ ಪೊಲೀಸ್ರು

    YSRP ಪೋಸ್ಟರ್‌ಗಳಿಗೆ ಹಾನಿ – 3, 4ನೇ ತರಗತಿಯ ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದ ಪೊಲೀಸ್ರು

    ಹೈದರಾಬಾದ್: ಆಡಳಿತಾರೂಢ ಯುವಜನ ಶ್ರಮಿಕ ರೈತ ಕಾಂಗ್ರೆಸ್ ಪಕ್ಷದ (ವೈಎಸ್‍ಆರ್‌ಪಿ) ಬ್ಯಾನರ್‌ಗಳನ್ನು ಹಾನಿಗೊಳಿಸಿದ 3 ಮತ್ತು 4ನೇ ತರಗತಿ ವಿದ್ಯಾರ್ಥಿಗಳನ್ನು ಆಂಧ್ರಪ್ರದೇಶ ಗುಂಟೂರು ಜಿಲ್ಲೆಯ ಪಲ್ನಾಡು ಪ್ರದೇಶದ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

    ಆಡಳಿತ ನಡೆಸುತ್ತಿರುವ ವೈಎಸ್‍ಆರ್‌ಪಿ ಪೋಸ್ಟರ್‌ಗಳನ್ನು ಹರಿದು ಹಾಕಿದರ ಕುರಿತಂತೆ ವಿಚಾರಣೆ ನಡೆಸಲು ಪೊಲೀಸರು ಅಪ್ರಾಪ್ತ ಬಾಲಕರನ್ನು ಠಾಣೆಗೆ ಕರೆದೊಯ್ದು ಸಂಜೆಯವರೆಗೂ ನೆಲದ ಮೇಲೆ ಕುರಿಸಿಕೊಂಡಿದ್ದರು. ಇದನ್ನೂ ಓದಿ: ಪ್ರಿಯಾಂಕಾ ಗಾಂಧಿ ಕಾಂಗ್ರೆಸ್ ಮುಖ್ಯಸ್ಥೆ ಆಗಬೇಕು ಅಂತ ಪ್ರಶಾಂತ್ ಕಿಶೋರ್ ಬಯಸಿದ್ರು

    cm jagan mohan reddy

    ಈ ಕುರಿತಂತೆ ಪ್ರತಿಕ್ರಿಯಿಸಿದ ಉಪ ಪೊಲೀಸ್ ವರಿಷ್ಠಾಧಿಕಾರಿ (ಡಿಎಸ್‍ಪಿ) ಜಯರಾಮ್ ಪ್ರಸಾದ್, ಕಟ್ಟಿದ್ದ ವೈಎಸ್‍ಆರ್‌ಪಿ ಪೋಸ್ಟರ್‌ಗಳಿಗೆ ಹಾನಿ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಈ ಸಂಬಂಧ ವಿಚಾರಣೆ ನಡೆಸಲು ನಾವು ವಿದ್ಯಾರ್ಥಿಗಳನ್ನು ಅವರ ಪೋಷಕರೊಂದಿಗೆ ಠಾಣೆಗೆ ಕರೆದಿದ್ದೇವೆ ಎಂದು ತಿಳಿಸಿದ್ದಾರೆ.

    ವೈಎಸ್‍ಆರ್ ಸದಸ್ಯರೊಬ್ಬರು ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಗ್ರಾಮದ 10ರಿಂದ 15 ವರ್ಷದೊಳಗಿನ ಕೆಲವು ಮಕ್ಕಳನ್ನು ವಶಕ್ಕೆ ಪಡೆದಿದ್ದರು. ವಿಚಾರಣೆ ನಡೆಸಿ ಒಂದು ದಿನದ ಬಳಿಕ ಪೊಲೀಸರು ಮಕ್ಕಳನ್ನು ಬಿಡುಗಡೆ ಮಾಡಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ನಿರುದ್ಯೋಗ ಬಿಕ್ಕಟ್ಟಿನ ಬಗ್ಗೆ ಪ್ರಧಾನಿ ಹೆಚ್ಚು ಗಮನಹರಿಸಬೇಕು: ರಾಹುಲ್ ಸಲಹೆ

    ಈ ವಿಚಾರ ಹಬ್ಬುತ್ತಿದ್ದಂತೆಯೇ ತೆಲುಗು ದೇಶಂ ಪಕ್ಷ (ಟಿಡಿಪಿ) ಅಪ್ರಾಪ್ತ ಮಕ್ಕಳಿಗೆ ಕಿರುಕುಳ ನೀಡಿದ ವೈಸಿಪಿ ನಾಯಕರು ಮತ್ತು ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದೆ.

  • ಸಿದ್ಧಾರ್ಥ್ ಮಲ್ಹೋತ್ರಾ ಜೊತೆಗಿನ ಬ್ರೇಕ್‍ಅಪ್‍ಗೆ ಹೊಸ ಟ್ವಿಸ್ಟ್ ಕೊಟ್ಟ ನಟಿ ಕಿಯಾರಾ

    ಸಿದ್ಧಾರ್ಥ್ ಮಲ್ಹೋತ್ರಾ ಜೊತೆಗಿನ ಬ್ರೇಕ್‍ಅಪ್‍ಗೆ ಹೊಸ ಟ್ವಿಸ್ಟ್ ಕೊಟ್ಟ ನಟಿ ಕಿಯಾರಾ

    ಬಾಲಿವುಡ್ ಕ್ಯೂಟ್ ಜೋಡಿ ನಟಿ ಕಿಯಾರಾ ಅಡ್ವಾಣಿ ಮತ್ತು ಸಿದ್ಧಾರ್ಥ್ ಮಲ್ಹೋತ್ರಾ ಅವರ ನಡುವಿನ ಪ್ರೇಮದಲ್ಲಿ ಬಿರುಕು ಕಾಣಿಸಿಕೊಂಡಿದೆ ಎಂದು ಬಿ-ಟೌನ್ ಅಂಗಳದಲ್ಲಿ ಭಾರೀ ಗಾಸಿಪ್‍ಗಳು ಹರಿದಾಡಿದವು. ಇಬ್ಬರ ಸಂಬಂಧ ಕಿತ್ತೇ ಹೋಯಿತು ಎನ್ನುವ ಸುದ್ದಿ ಕೂಡ ಆಯಿತು. ಆದರೆ ಈ ಎಲ್ಲಾ ವದಂತಿಗಳಿಗೆ ಕಿಯಾರಾ ಸಾಮಾಜಿಕ ಜಾಲತಾಣದಲ್ಲಿ ಉತ್ತರ ಕೊಟ್ಟಿದ್ದಾರೆ. ಪೋಸ್ಟರ್‌ವೊಂದನ್ನು ಹಂಚಿಕೊಂಡಿರುವ ಅವರು, ಈಗ ಹರಿದಾಡುತ್ತಿರುವ ಸುದ್ದಿ ಸುಳ್ಳೆಂದು ಹೇಳಿಕೊಂಡಿದ್ದಾರೆ.

    ಪೋಸ್ಟ್‌ನಲ್ಲಿ ಏನಿದೆ?
    ಕೆಲವು ದಿನಗಳ ಹಿಂದೆಯಷ್ಟೇ ಕಿಯಾರಾ ಅಡ್ವಾಣಿ ಮತ್ತು ಸಿದ್ಧಾರ್ಥ್ ಇಬ್ಬರೂ ಬೇರ್ಪಟ್ಟಿದ್ದಾರೆ ಎಂಬ ವರದಿಗಳು ಹರಡಿದ್ದವು. ಈ ವದಂತಿಗಳ ನಡುವೆಯೇ ಕಿಯಾರಾ ಅವರು ಧರ್ಮ ಪ್ರೊಡಕ್ಷನ್ ಅಡಿಯಲ್ಲಿ ಮೂಡಿಬಂದ ‘ಶೇರ್ಷಾ’ ಚಿತ್ರದಲ್ಲಿ ಸಿದ್ಧಾರ್ಥ್ ಮತ್ತು ಕಿಯಾರಾ ಒಟ್ಟಿಗೆ ನಟಿಸಿದ್ದರು. 2021ರಲ್ಲಿ ಬಿಡುಗಡೆ ಆಗಿದ್ದ ಈ ಚಿತ್ರಕ್ಕೆ ಒಟಿಟಿ ಪ್ರಶಸ್ತಿ ಕೂಡಾ ಲಭಿಸಿತ್ತು. ಇಬ್ಬರಿಗೂ ಸಹ ಅತ್ಯುತ್ತಮ ನಟ, ನಟಿ ಪ್ರಶಸ್ತಿ ದೊರೆಕಿತ್ತು. ಪ್ರಶಸ್ತಿ ಪಡೆದ ಪೋಸ್ಟರ್ ಅನ್ನೇ ಪೋಸ್ಟ್ ಮಾಡಿರುವ ಅವರು ಹಾರ್ಟ್ ಮತ್ತು ನಮಸ್ತೆ ಎಮೋಜಿಗಳನ್ನು ಹಾಕಿ ಹಂಚಿಕೊಂಡಿದ್ದಾರೆ.

    ಸಿದ್ಧಾರ್ಥ್ ಮತ್ತು ಕಿಯಾರಾ ಇಬ್ಬರೂ ತಮ್ಮ ಪ್ರೀತಿಯ ವಿಚಾರವನ್ನು ಯಾವತ್ತೂ ಬಹಿರಂಗವಾಗಿ ಹೇಳಿಕೊಂಡವರಲ್ಲ. ಹಾಗಂತ ನಿರಾಕರಿಸಿಯೂ ಇಲ್ಲ. ಶೇರ್ಷಾ ಸಿನಿಮಾ ಬಿಡುಗಡೆ ಬಳಿಕ ಈ ಜೋಡಿ ಮತ್ತಷ್ಟು ಫೇಮಸ್ ಆಗಿತ್ತು. ಸದಾ ಒಟ್ಟಿಗೆ ಕಾಣಿಸಿಕೊಳ್ಳುತ್ತಿದ್ದ ಈ ಜೋಡಿ ಇದೀಗ ಒಬ್ಬರಿಗೊಬ್ಬರು ಭೇಟಿ ಮಾಡುವುದನ್ನೆ ಬಿಟ್ಟಿದ್ದಾರೆ ಎನ್ನಲಾಗಿತ್ತು. ಈ ಬಗ್ಗೆ ಮಾಧ್ಯಮಗಳು ವರದಿ ಮಾಡಿದ್ದವು.

    ಇಬ್ಬರೂ ತಮ್ಮ ರಿಲೇಶನ್ ಶಿಪ್ ಕೊನೆಗೊಳಿಸಿದ್ದರಿಂದ, ಒಬ್ಬರಿಗೊಬ್ಬರು ಭೇಟಿ ಮಾಡುವುದನ್ನೇ ನಿಲ್ಲಿಸಿದ್ದಾರೆ ಎನ್ನಲಾಗಿತ್ತು. ಅದಕ್ಕೆ ಅಸಲಿ ಕಾರಣ ಬೇರೆಯೇ ಇದೆ. ಇಬ್ಬರೂ ಬೇರೆ ಆಗಿರುವುದು ನಿಜವೇ ಆಗಿದ್ದರೂ, ತಮ್ಮ ತಮ್ಮ ಬ್ಯುಸಿ ಕೆಲಸಗಳಿಂದ ಸೇರಲು ಆಗಿಲ್ಲ ಎನ್ನಲಾಗುತ್ತಿದೆ.

  • ರಕ್ತದಲ್ಲಿ ತಯಾರಾಯ್ತು ‘ದಿ ಕಾಶ್ಮೀರ್ ಫೈಲ್ಸ್’ ಪೋಸ್ಟರ್ – ಭಾವುಕನಾಗಿ ವಿನಂತಿ ಮಾಡಿದ ನಿರ್ದೇಶಕ

    ರಕ್ತದಲ್ಲಿ ತಯಾರಾಯ್ತು ‘ದಿ ಕಾಶ್ಮೀರ್ ಫೈಲ್ಸ್’ ಪೋಸ್ಟರ್ – ಭಾವುಕನಾಗಿ ವಿನಂತಿ ಮಾಡಿದ ನಿರ್ದೇಶಕ

    ನೈಜ ಘಟನೆ ಆಧಾರಿತ ಬಾಲಿವುಡ್ ನ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ಯಶಸ್ಸು ಗಳಿಸುವುದರ ಜೊತೆಗೆ ಜನರಲ್ಲಿ ಕ್ರೇಜ್ ಸೃಷ್ಟಿಸಿದೆ. ಬಾಲಿವುಡ್ ಬಾಕ್ಸ್ ಆಫೀಸ್‍ನಲ್ಲಿ ಕೊಳ್ಳೆ ಹೊಡೆಯುತ್ತಿರುವ ಈ ಸಿನಿಮಾ ಪ್ರೇಕ್ಷಕರ ಮನವನ್ನೂ ತಟ್ಟಿದೆ. ಇದಕ್ಕೆ ಸಾಕ್ಷಿ ಎಂಬಂತೆ ಮಹಿಳೆಯೊಬ್ಬರ ತಮ್ಮ ರಕ್ತದಿಂದ ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರದ ಪೋಸ್ಟರ್ ರಚಿಸಿದ್ದಾರೆ.

    ಹೌದು, ಸಾಮಾನ್ಯವಾಗಿ ಅಭಿಮಾನಿಗಳು ತಮ್ಮ ನೆಚ್ಚಿನ ನಟ, ನಟಿಯರ ಹೆಸರು ಹಾಗೂ ಭಾವಚಿತ್ರಗಳನ್ನು ಹಚ್ಚೆ ಹಾಕಿಸಿಕೊಳ್ಳುವ, ರಕ್ತದಿಂದ ಅವರಿಗೆ ಲೆಟರ್ ಬರೆಯುವುದು, ಪೇಯಿಂಟಿಂಗ್ ಮಾಡುವ ಮೂಲಕ ಹೀಗೆ ನಾನಾ ರೀತಿಯಲ್ಲಿ ಅಭಿಮಾನ ವ್ಯಕ್ತಪಡಿಸುವುದನ್ನು ಕಂಡಿದ್ದೇವೆ. ಆದರೆ ಮಹಿಳೆಯೊಬ್ಬರು ರಕ್ತದಿಂದ ‘ದಿ ಕಾಶ್ಮೀರ್ ಫೈಲ್ಸ್’ ಪೋಸ್ಟರ್ ರಚಿಸಿದ್ದು, ಇದೀಗ ಆ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ.

    ಮಂಜು ಸೋನಿ ಎನ್ನುವವರು 10 ಎಂಎಲ್ ತಮ್ಮ ರಕ್ತವನ್ನು ತೆಗೆದುಕೊಂಡು ದಿ ಕಾಶ್ಮೀರ್ ಫೈಲ್ಸ್ ಪೋಸ್ಟರ್ ಚಿತ್ರ ಬಿಡಿಸಿದ್ದಾರೆ. ಇನ್ನೂ ಈ ಫೋಸ್ಟರ್ ನೋಡಿ ಸಿನಿಮಾ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಅವರು ಫುಲ್ ಫಿದಾ ಆಗಿದ್ದು, ಆ ಮಹಿಳೆಗೆ ಸಲಹೆಯನ್ನೂ ನೀಡಿದ್ದಾರೆ. ಜೊತೆಗೆ ತಮ್ಮ ಟ್ವಿಟ್ಟರ್‍ನಲ್ಲಿ ಮಂಜು ಅವರು ರಕ್ತ ನೀಡುತ್ತಿರುವ, ಚಿತ್ರ ಬಿಡಿಸುತ್ತಿರುವ ಕೆಲವು ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಇದನ್ನೂ ಓದಿ : ಅಭಿಮಾನಿಗಳ ಒತ್ತಡಕ್ಕೆ ಕೊನೆಗೂ ಮಣಿದ ‘ವಿಕ್ರಾಂತ್ ರೋಣ’ :ಏಪ್ರಿಲ್ ಮೊದಲ ವಾರದಲ್ಲಿ ಟೀಸರ್

    ಫೋಟೋಗಳ ಜೊತೆಗೆ ‘ಓಹ್ ಮೈ ಗಾಡ್. ನಂಬಲು ಸಾಧ್ಯವಾಗುತ್ತಿಲ್ಲ. ಏನು ಹೇಳಬೇಕು ಎಂಬುದೇ ತಿಳಿಯುತ್ತಿಲ್ಲ. ಮಂಜೂ ಅವರಿಗೆ ನಾನು ಹೇಗೆ ಧನ್ಯವಾದ ತಿಳಿಸಬೇಕು ಅಂತ ಗೊತ್ತಿಲ್ಲ. ಅವರಿಗೆ ನನ್ನ ಶತ ಶತ ಪ್ರಣಾಮಗಳು, ಕೃತಜ್ಞತೆಗಳು. ಅವರ ಪರಿಚಯ ಯಾರಿಗಾದರೂ ಇದ್ದರೆ ನನಗೆ ಅವರ ನಂಬರ್ ಮೆಸೇಜ್ ಮಾಡಿ’ ಎಂದು ಕ್ಯಾಪ್ಷನ್‍ನಲ್ಲಿ ಹಾಕಿಕೊಂಡಿದ್ದಾರೆ.

    ಅಲ್ಲದೇ, ‘ನೀವು ಹೊಂದಿರುವ ಭಾವನೆಯನ್ನು ನಾನು ಮೆಚ್ಚುತ್ತೇನೆ. ಆದರೆ ಈ ರೀತಿಯ ಯಾವುದೇ ಪ್ರಯತ್ನಗಳನ್ನು ಮಾಡಬೇಡಿ’ ಎಂದು ವಿನಮ್ರವಾಗಿ ನಾನು ಮನವಿ ಮಾಡಿಕೊಳ್ಳುತ್ತೇನೆ. ಇದೆಲ್ಲವೂ ಒಳ್ಳೆಯದಲ್ಲ. ಮನೆಯಲ್ಲಿ ಇಂಥದ್ದನೆಲ್ಲ ಮಾಡಲೇಬೇಡಿ’ ಎಂದು ಮನವಿ ಮಾಡಿದ್ದಾರೆ. ಇದನ್ನೂ ಓದಿ : ಕೆಜಿಎಫ್ 2 ಟ್ರೈಲರ್ ಬಿಡುಗಡೆಗೆ ಹೋಸ್ಟ್ ಮಾಡಲಿದ್ದಾರೆ ಕರಣ್ ಜೋಹಾರ್

    ನಿರ್ದೇಶಕ ವಿವೇಕ್ ಅಗ್ನಿಹೋತ್ರಿ 1990ರಲ್ಲಿ ನಡೆದ ಕಾಶ್ಮೀರಿ ಪಂಡಿತರ ನರಮೇಧದ ಕುರಿತು ಸಿನಿಮಾ ಮಾಡಿದ್ದು, ಇದಕ್ಕೆ ದಿ ಕಾಶ್ಮೀರ್ ಫೈಲ್ಸ್ ಎಂಬ ಶೀರ್ಷಿಕೆಯಲ್ಲಿ ಬಿಡುಗಡೆಗೊಳಿಸಿದ್ದಾರೆ. ಸಿನಿಮಾದ ಶೀರ್ಷಿಕೆಯೇ ಪ್ರಚುರಪಡಿಸುವಂತೆ ನರಮೇಧದ ಹಿಂದಿರುವ ಇತಿಹಾಸವನ್ನು ಬಿಚ್ಚಿಡುವಂತಹ ಫೈಲ್ ಇದಾಗಿದೆ. ಈ ಫೈಲ್‍ನ ಪುಟಪುಟದಲ್ಲೂ ರಕ್ತಸಿಕ್ತ ಅಧ್ಯಾಯಗಳಿವೆ. ಬರೆದ ಶಾಹಿ ಕೂಡ ಕೆಂಪಾಗಿದೆ. ಇಂತಹ ಹತ್ಯಾಕಾಂಡವನ್ನು ಸಿನಿಮಿಯ ರೂಪದಲ್ಲಿ ತರದೇ, ನಡೆದ ಘಟನೆಯನ್ನು ಹಸಿಹಸಿಯಾಗಿಯೇ ತರುವ ಪ್ರಯತ್ನ ಈ ಸಿನಿಮಾದಲ್ಲಿ ಆಗಿದೆ.

  • ದಳಪತಿಯ ಬೀಸ್ಟ್ ಎದುರಿಗೆ ಯಶ್ ನಟನೆ ಕೆಜಿಎಫ್ 2

    ದಳಪತಿಯ ಬೀಸ್ಟ್ ಎದುರಿಗೆ ಯಶ್ ನಟನೆ ಕೆಜಿಎಫ್ 2

    ಮಿಳು ಚಿತ್ರರಂಗದ ಸ್ಟಾರ್ ನಟ ದಳಪತಿ ವಿಜಯ್ ಹಾಗೂ ಖ್ಯಾತ ನಟಿ ಪೂಜಾ ಹೆಗ್ಡೆ ಅಭಿನಯದ `ಬೀಸ್ಟ್’ ಸಿನಿಮಾವು ಇದೇ ಏಪ್ರಿಲ್ 13ರಂದು ತೆರೆಗೆ ಬರುತ್ತಿದೆ.

    ದಳಪತಿ ವಿಜಯ್ ಅವರ ಈ ಹಿಂದಿನ ಚಿತ್ರ `ಮಾಸ್ಟರ್’ ಇತ್ತೀಚೆಗಷ್ಟೇ ಭಾರಿ ಸದ್ದು ಮಾಡಿತ್ತು. ಅಪರಾಧ ಚಟುವಟಿಕೆಗಳಿಕೆ ಅಪ್ರಾಪ್ತ ಮಕ್ಕಳನ್ನು ಬಳಸಿಕೊಳ್ಳುತ್ತಿರುವ ಬಗ್ಗೆ ಉತ್ತಮ ಸಂದೇಶ ನೀಡಿದ ಈ ಚಿತ್ರವು ಬಾಕ್ಸ್ ಆಫೀಸ್‍ನಲ್ಲೂ ಸದ್ದು ಮಾಡಿತ್ತು. ಕೋವಿಡ್ ಕಾರಣದಿಂದಾಗಿ ಶೇ.50ರಷ್ಟು ಸಿನಿಮಾ ಪ್ರದರ್ಶನಕ್ಕೆ ಅವಕಾಶವಿದ್ದ ಸಂದರ್ಭದಲ್ಲೂ ಈ ಸಿನಿಮಾ ದೊಡ್ಡ ಹೆಜ್ಜೆಯನ್ನಿರಿಸಿತ್ತು. ಇದೀಗ ಬಹುನಿರೀಕ್ಷಿತ ಚಿತ್ರ `ಬೀಸ್ಟ್’ನೊಂದಿಗೆ ತೆರೆಯ ಮೇಲೆ ಬರಲು ದಳಪತಿ ಸಿದ್ಧರಾಗಿದ್ದಾರೆ. ನೆಲ್ಸನ್ ದಿಲೀಪ್ ಕುಮಾರ್ ನಿರ್ದೇಶನದ ಈ ಚಿತ್ರದಲ್ಲಿ ಪೂಜಾ ಹೆಗ್ಡೆ ನಾಯಕಿಯಾಗಿ ನಟಿಸಿದ್ದಾರೆ. ಇದನ್ನೂ ಓದಿ : ಅಜಿತ್ ನಟನೆ ಬ್ಲಾಕ್ ಬಸ್ಟರ್ ‘ವಲಿಮೈ’ಸಿನಿಮಾ ಒಟಿಟಿಗೆ ಎಂಟ್ರಿ

    ಡಿಸೆಂಬರ್‌ನಲ್ಲಿ ಎಕ್ಸೈಟಿಂಗ್ ಪೋಸ್ಟರ್ ಬಿಡುಗಡೆ ಮಾಡಿದ್ದ ಬೀಸ್ಟ್ ಚಿತ್ರತಂಡವು ಏಪ್ರಿಲ್‍ನಲ್ಲಿ ಚಿತ್ರ ಬಿಡುಗಡೆ ಮಾಡುವುದಾಗಿ ಹೇಳಿತ್ತು. ಈ ಸಿನಿಮಾ ಏಪ್ರಿಲ್ 2ನೇ ವಾರದಲ್ಲಿ ಚಿತ್ರಮಂದಿರಗಳಿಗೆ ಬರಲಿದೆ ಎಂದು ವರದಿಯಾಗಿತ್ತು. ಕೇರಳದಲ್ಲಿ ಏ.14 ರಂದು ಹೊಸ ವರ್ಷ ಆಚರಿಸುತ್ತಿರುವ ಹಿನ್ನೆಲೆಯಲ್ಲಿ ಏಪ್ರಿಲ್ 13ರಂದೇ ಚಿತ್ರತಂಡವು ಬೀಸ್ಟ್ ಅನ್ನು ತೆರೆಗೆ ತರಲು ಸಿದ್ಧತೆ ಮಾಡಿಕೊಂಡಿದೆ.

    ಈಗಾಗಲೇ ಚಿತ್ರತಂಡವು ಬೀಸ್ಟ್ ಸಿನಿಮಾದ ಹೊಸ ಬಗೆಯ ಪೋಸ್ಟರ್ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಲಕ್ಷಾಂತರ ಮಂದಿ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.  ಇದನ್ನೂ ಓದಿ : ಕನ್ನಡದ ಹುಡುಗನ ಚಿತ್ರಕ್ಕೆ ಹನ್ಸಿಕಾ ಮೊಟ್ವಾನಿ ಹೀರೋಯಿನ್

    ಆದರೆ, ಪ್ರಶಾಂತ್ ನೀಲ್ ನಿರ್ದೇಶನದ ‘ಕೆಜಿಎಫ್ 2’ ಚಿತ್ರವು ಏಪ್ರಿಲ್ 14ರಂದು ತೆರೆಗೆ ಬರುತ್ತಿರುವುದು ಬೀಸ್ಟ್ ತಂಡಕ್ಕೆ ಭಾರಿ ಸವಾಲು ಎದುರಾಗಲಿದೆ ಎನ್ನುವುದೇ ಪ್ರಶ್ನೆಯಾಗಿದೆ.

  • ಉಪೇಂದ್ರ ಸಿನಿಮಾದ ಹೊಸ ಪೋಸ್ಟರ್ ವಿಶ್ಲೇಷಣೆ: ಏನೇನೆಲ್ಲ ಇದೆ, ತಲೆ ಕೆಟ್ಟು ಹೋಗತ್ತೆ!

    ಉಪೇಂದ್ರ ಸಿನಿಮಾದ ಹೊಸ ಪೋಸ್ಟರ್ ವಿಶ್ಲೇಷಣೆ: ಏನೇನೆಲ್ಲ ಇದೆ, ತಲೆ ಕೆಟ್ಟು ಹೋಗತ್ತೆ!

    ಟ, ನಿರ್ದೇಶಕ, ನಿರ್ಮಾಪಕ ಉಪೇಂದ್ರ ಆತ್ಮವಿಶ್ವಾಸದಿಂದಲೋ, ಅಹಂಕಾರದಿಂದಲೋ ಹೇಳಿಕೊಂಡಿರುವ ‘ಉಪ್ಪಿಗಿಂತ ರುಚಿ ಬೇರೆ ಇಲ್ಲ’ ಎನ್ನುವ ಮಾತು ಅಕ್ಷರಶಃ ರಿಯಲ್ ಸ್ಟಾರ್ ಗೆ ಒಪ್ಪುತ್ತದೆ. ಕಾರಣ ಉಪ್ಪಿ ಯಾವಾಗಲೂ ವಿಭಿನ್ನ, ಯಾವತ್ತಿಗೂ ಭಿನ್ನ.

    ಸಾಮಾನ್ಯವಾಗಿ ಸಿನಿಮಾಗಳು ಮನಸ್ಸಿಗೆ ಉಲ್ಲಾಸ ನೀಡುತ್ತವೆ, ನೀಡಬೇಕು. ಆದರೆ, ಉಪ್ಪಿ ಚಿತ್ರಗಳು ಮಾತ್ರ ಮನಸ್ಸಿನ ಜತೆ ಮೆದುಳಿಗೂ ಕೆಲಸ ಕೊಡುತ್ತವೆ. ಪರಪರ ಅಂತ ತಲೆಕೆರೆದುಕೊಳ್ಳುವಂತೆ ಮಾಡುತ್ತವೆ. ಹಾಗಾಗಿಯೇ ಪ್ರೀತಿಯಿಂದ ಉಪ್ಪಿದಾದಾನ ‘ಬುದ್ಧಿವಂತ’ ನಿರ್ದೇಶಕ ಎಂದಿದೆ ಚಿತ್ರರಂಗ. ಇದನ್ನೂ ಓದಿ : ಯಾಕೆ ಆ ವಿಡಿಯೋ ಹಾಕಿದ್ರು ಮೀರಾ ಜಾಸ್ಮಿನ್? ಅಭಿಮಾನಿ ಅಳಲೇನು ಕೇಳಿ

    ಉಪ್ಪಿ 2 ಸಿನಿಮಾದ ನಂತರ  ಉಪೇಂದ್ರ ಮತ್ತೆ ನಿರ್ದೇಶನಕ್ಕೆ ಇಳಿದಿದ್ದಾರೆ. ಬರೋಬ್ಬರಿ ಏಳು ವರ್ಷಗಳ ನಂತರ ಆಕ್ಷನ್ ಕಟ್ ಹೇಳುತ್ತಿರುವುದರಿಂದ ಸಿನಿಮಾ ವಿಭಿನ್ನವಾಗಿ ಇರಲೇಬೇಕು ಎನ್ನುವುದು ಅವರ ಪಾಲಿಸಿ. ಅದರಂತೆ ಹೊಸ ಸಿನಿಮಾದ ಪೋಸ್ಟರ್ ಬಿಡುಗಡೆ ಮಾಡಿದ್ದಾರೆ. ಆ ಫೋಸ್ಟರೇ ಹೊಸದೊಂದು ಕಥೆ ಹೇಳುವಂತಿದೆ. ಸಸ್ಪೆನ್ಸ್ ಮತ್ತು ಥ್ರಿಲ್ಲರ್ ಸಿನಿಮಾದಂತೆ ಮಜಾ ಕೊಡುತ್ತದೆ. ನೀವೂ ಒಂದ್ ಸಲ ಪೋಸ್ಟರ್ ಅನ್ನು ಸೂಕ್ಷ್ಮವಾಗಿ ಗಮನಿಸಿ ನೋಡಿ, ನಿಮ್ಮ ತಲೆಗೂ ಮತ್ತೊಂದು ಹೊಳವು ಕಾಣಬಹುದು.

    ಮೇಲ್ನೋಟಕ್ಕೆ ಪೋಸ್ಟರ್ ನೋಡಿದಾಗ ಕುದುರೆ ಮೇಲೆ ಕೂತಿರುವ ಉಪೇಂದ್ರ, ಸಿನಿಮಾದ ಶೀರ್ಷಿಕೆ, ನಿರ್ದೇಶಕರ ಹೆಸರು, ನಿರ್ಮಾಪಕರ ಹೆಸರು ಇವಿಷ್ಟು ಕಾಣುತ್ತದೆ. ಆದರೆ, ಪೋಸ್ಟರ್ ಅನ್ನು ಆಳವಾಗಿ ಗಮನಿಸಿದಾಗ ದೊಡ್ಡದೊಂದು ಜಗತ್ತೇ ಅಲ್ಲಿದೆ.  ಇದನ್ನೂ ಓದಿ : ಮಾರ್ಚ್ 14ಕ್ಕೆ ಆರ್.ಆರ್.ಆರ್ ‘ಎತ್ತುವ ಜಂಡಾ’ ಸಾಂಗ್ ರಿಲೀಸ್

    ಏನು ಹೇಳತ್ತೆ ಟೈಟಲ್ ?

    ಸಡನ್ನಾಗಿ ಧಾರ್ಮಿಕ ಚಿಹ್ನೆ ಅಂತ ಕಾಣುವ ಸಿನಿಮಾದ ಟೈಟಲ್, ಅವರವರ ಭಾವಕ್ಕೆ ತಕ್ಕಂತೆ ಅದು ದಕ್ಕುತ್ತದೆ. ‘ಯು’ ಮತ್ತು ‘ಐ’ ಎಂದೂ ಓದಿಕೊಳ್ಳಬಹುದು. ನಾನು ಮತ್ತು ನೀನು ಎರಡೇ ಕಾನ್ಸೆಪ್ಟ್ ಇಟ್ಟುಕೊಂಡು ಉಪ್ಪಿ ಹಲವು ಸಿನಿಮಾಗಳನ್ನು ಮಾಡಿದ್ದಾರೆ. ‘ಎ’, ‘ಉಪೇಂದ್ರ’, ಮತ್ತು ‘ಉಪ್ಪಿ2’ ಸಿನಿಮಾದ ಕಥೆ ‘ನಾನು ಮತ್ತು ನೀನು’ ಎನ್ನುವ ಆಧ್ಯಾತ್ಮದ ತುದಿಯೊಂದಿಗೆ ಸಾಗಿದ್ದರು. ಹೀಗಾಗಿ ಅದರ ಮುಂದುವರೆಕೆಯ ಭಾಗವಾ ಹೊಸ ಸಿನಿಮಾ ಅನಿಸುತ್ತದೆ. ಇನ್ನೊಂದು ರೀತಿಯಲ್ಲಿ ಟೈಟಲ್ ಕುದುರೆ ಲಾಳದಂತೆಯೂ ಕಾಣುತ್ತದೆ. ‘ಯು’ ಮತ್ತು ‘ಎ’ ಅಂತಾನೇ ಅಂದುಕೊಳ್ಳುವುದಾದರೆ, ಹಾರ್ಸ್ಶೋ ಮತ್ತು ಹಾರ್ಸ್ ಮ್ಯಾನ್ ಅಂತಾನೂ ಆಗತ್ತದೆ. ಇದನ್ನೂ ಓದಿ : ತಮಿಳಿಗೆ ಹೊರಟ ಬಸಣ್ಣಿ ಖ್ಯಾತಿಯ ತಾನ್ಯ ಹೋಪ್ : ಪ್ರಶಾಂತ್ ರಾಜ್ ಚಿತ್ರಕ್ಕೆ ತಾನ್ಯ ನಾಯಕಿ

    ಕುದುರೆ ಮೇಲೆ ಉಪೇಂದ್ರ

    ಅದು ಸಾಮಾನ್ಯ ಕುದುರೆಯಲ್ಲ. ಎರಡು ಕೊಂಬಿರುವ ಕುದುರೆ. ಒಂದು ರೀತಿಯಲ್ಲಿ ಅದು ಕೆರಿಬಿಯನ್ಸ್ ಕಥೆಯಲ್ಲಿ ಬರುವಂತಹ ಕುದುರೆ. ಹಾಗಾಗಿ ಅದು ಆ ಕಾಲದ ಕಥೆಯಾ ಅಂತ ಕುತೂಹಲ ಮೂಡಿಸಬಹುದು. ಕುದುರೆ ಕಾಲದ ಸಂಕೇತ, ಕೋಣನ ಕೊಂಬು ಕಾಲನ ಸಂಕೇತ. ಹಾಗಾಗಿ ಹುಟ್ಟು ಸಾವಿನ ಬಗೆಗಿನ ಸಿನಿಮಾ ಇರಬಹುದಾ? ಎನ್ನುವ  ಪ್ರಶ್ನೆ ಕೂಡ ಮೂಡುತ್ತದೆ. ಕಲ್ಕಿಯ ಕೊನೆಯ ಅವತಾರ ಬಿಳಿ ಕುದುರೆ ಏರಿ ಬರುವುದು. ಆ ಅವತಾರದ ಲಿಂಕ್ ಏನಾದ್ರೂ ಕಥೆಯಲ್ಲಿ ಇರಬಹುದು. ಇದನ್ನೂ ಓದಿ : ಸೋಲೊ ಟ್ರಿಪ್ ನಲ್ಲಿ ಪ್ಯಾರ್ಗೆ ಹುಡುಗಿ ಪಾರುಲ್ ಯಾದವ್

    ಐದು ಭಾಷೆಗಳಲ್ಲಿ ಚಿತ್ರ

    ಪೋಸ್ಟರ್ ನಲ್ಲಿಯೇ ಐದು ಭಾಷೆಗಳನ್ನು ಬಳಸಿಕೊಂಡು ಒಂದು ವಾಕ್ಯವನ್ನು ಸೃಷ್ಟಿಸಿದ್ದಾರೆ ಉಪೇಂದ್ರ. ಕನ್ನಡ, ತೆಲುಗು, ತಮಿಳು, ಹಿಂದಿ ಮತ್ತು ಮಲಯಾಳಂ ಸೇರಿಸಿ ಅವರು ಬರೆದಿರುವ ವಾಕ್ಯ ‘’ಇವನು ಯಾವಾಗ ಬರ್ತಾನೋ ಗೊತ್ತಿಲ್ಲ, ಆದರೆ, ನಿಶ್ಚಿತವಾಗಿ ಬಂದೇ ಬರ್ತಾನೆ” ಎನ್ನವ ಅರ್ಥ ಬರುತ್ತದೆ. ಈ ಪದಗಳ ಹಿಂದಿರುವ ಅರ್ಥವನ್ನು ಗಮನಿಸಿದರೆ, “ಸಾವು ಯಾವಾಗ ಬರತ್ತೋ ಗೊತ್ತಿಲ್ಲ. ಆದರೆ, ಯಾವತ್ತೋ ಒಂದು ದಿನ ನಿಶ್ಚಿತಾಗಿಯೂ ಅದು ಬರುತ್ತದೆ” ಎಂಬ ಸಂದೇಶವನ್ನು ಈ ಸಿನಿಮಾ ಸಾರಲಿದೆಯಾ, ನೋಡಬೇಕು. ಕೋಣನ ಕೊಂಬು ಕೂಡ ಈ ವಾಕ್ಯಕ್ಕೆ ಸಾಥ್ ಕೊಡುತ್ತದೆ. ಇದನ್ನೂ ಓದಿ : ಸದ್ಯ ಡೇಟಿಂಗ್, ಮುಂದೆ ಮದ್ವೆ, ಹೃತಿಕ್ –ಸಬಾ ಜೋಡಿ ಪ್ರೇಮ್ ಕಹಾನಿ

    ಅಳಿದುಳಿದ ಅವಶೇಷಗಳು

    ಪೋಸ್ಟರ್ ನಲ್ಲಿ ಮಸೀದಿ, ದೇವಾಲಯ, ಚರ್ಚ್ ಗಳ ಅವಶೇಷಗಳಿವೆ. ರೈಲಿದೆ, ಸ್ಯಾಟ್ ಲೈಟ್ ಕೂಡ ಕಾಣುತ್ತದೆ.  ನಶಿಸಿದ ನಾಗರೀಕತೆ ಮತ್ತು ಆಧುನಿಕತೆಯ ಸವಾಲುಗಳನ್ನು ಈ ಸಿನಿಮಾದಲ್ಲಿ ಹೇಳುತ್ತಿರಬಹುದಾ ಎಂಬ ಅನುಮಾನವನ್ನು ಈ ಪೋಸ್ಟರ್ ಹುಟ್ಟು ಹಾಕುತ್ತದೆ. ಎರಡು ಕಾಲ ಘಟ್ಟವನ್ನು ಬೆಸೆಯುವಂತಹ ಧೀರನಾಗಿ ಕಲ್ಕಿ ಅವತಾರದಲ್ಲಿ ನಾಯಕ ಧರೆಗೆ ಬರುತ್ತಾನಾ ಎನ್ನುವ ಪ್ರಶ್ನೆ ಕೂಡ ಮೂಡುತ್ತದೆ.

  • ಶಾಕುಂತಲಂ ಫಸ್ಟ್ ಪೋಸ್ಟರ್ ಔಟ್ – ಶಕುಂತಲೆ ರೂಪದಲ್ಲಿ ಸಮಂತಾ ಫುಲ್ ಮಿಂಚಿಂಗ್

    ಶಾಕುಂತಲಂ ಫಸ್ಟ್ ಪೋಸ್ಟರ್ ಔಟ್ – ಶಕುಂತಲೆ ರೂಪದಲ್ಲಿ ಸಮಂತಾ ಫುಲ್ ಮಿಂಚಿಂಗ್

    ಹೈದರಾಬಾದ್: ಟಾಲಿವುಡ್ ನಟಿ ಸಮಂತಾ ಅಭಿನಯದ ಬಹು ನಿರೀಕ್ಷಿತ ಪೌರಾಣಿಕ ಸಿನಿಮಾ ಶಾಕುಂತಲಂ ಫಸ್ಟ್ ಪೋಸ್ಟರ್ ಬಿಡುಗಡೆಗೊಂಡಿದೆ.

     

    ಶಾಕುಂತಲಂ ಸಿನಿಮಾದಲ್ಲಿ ರಾಜಕುಮಾರಿ ಪಾತ್ರದಲ್ಲಿ ಮಿಂಚುತ್ತಿರುವ ಸಮಂತಾ ಪೋಸ್ಟರ್‌ನಲ್ಲಿ ಬಿಳಿ ಸೀರೆಯುಟ್ಟು ಪ್ರಕೃತಿಯ ಹಾಗೂ ಜಿಂಕೆಗಳ ಮಧ್ಯೆ ಕುಳಿತು ಮಿರ ಮಿರ ಕಂಗೊಳಿಸುತ್ತಿರುವುದನ್ನು ಕಾಣಬಹುದಾಗಿದೆ. ಈ ಪೋಸ್ಟರ್ ಬಿಡುಗಡೆಯಾಗುತ್ತಿದ್ದಂತೆ ಲಕ್ಷಗಟ್ಟಲೆ ಲೈಕ್ಸ್ ಬಂದಿದ್ದು, ಸಮಂತಾ ಲುಕ್‍ಗೆ ಅಭಿಮಾನಿಗಳು ಫುಲ್ ಫಿದಾ ಆಗಿದ್ದಾರೆ. ಹಿಂದೆಂದೂ ಕಾಣಿಸಿಕೊಳ್ಳದ ವಿಭಿನ್ನ ಪಾತ್ರದಲ್ಲಿ ಇದೇ ಮೊದಲ ಬಾರಿಗೆ ಕಾಣಿಸಿಕೊಳ್ಳುತ್ತಿರುವ ಸಮಂತಾರನ್ನು ಬಿಗ್ ಸ್ಕ್ರೀನ್ ಮೇಲೆ ನೋಡಲು ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.

    ಈ ಚಿತ್ರಕ್ಕೆ ನಿರ್ದೇಶಕ ಗುಣಶೇಖರ್ ಆ್ಯಕ್ಷನ್ ಕಟ್ ಹೇಳಿದ್ದು, ನೀಲಿಮಾ ಗುಣ ಬಂಡವಾಳ ಹೂಡಿದ್ದಾರೆ. 2022ರ ಮೋಸ್ಟ್ ಎಕ್ಸ್‍ಪೆಕ್ಟೆಡ್ ಸಿನಿಮಾಗಳಲ್ಲಿ ಶಾಕುಂತಲಂ ಚಿತ್ರ ಕೂಡ ಒಂದಾಗಿದ್ದು, ಪ್ರಸ್ತುತ ಈ ಸಿನಿಮಾದ ಪೋಸ್ಟ್ ಪ್ರೊಡಕ್ಷನ್ ಕಾರ್ಯಗಳು ನಡೆಯುತ್ತಿದೆ. ಈ ಸಿನಿಮಾದ ಮೊದಲ ಪೋಸ್ಟರ್‌ಗೆ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ದೊರೆಯುತ್ತಿದೆ. ಇದನ್ನೂ ಓದಿ: ಈ ಹುಡುಗಿಗೆ ಜಿಮ್ ನಲ್ಲಿ ಸಿಕ್ತಂತೆ ನಟಿಸೋಕೆ ಅವಕಾಶ

     

    View this post on Instagram

     

    A post shared by Samantha (@samantharuthprabhuoffl)

    ಈ ಸಿನಿಮಾ ಜನಪ್ರಿಯ ಭಾರತೀಯ ನಾಟಕ ಕಾಳಿದಾಸ ಹಾಗೂ ಶಾಕುಂತಲಾ ಪೇಮ ಕಥಾಹಂದರವನ್ನು ಆಧರಿಸಿದ್ದು, ನಟ ದೇವ್ ಮೋಹನ್ ದುಷ್ಯಂತನ ಪ್ರಾತದಲ್ಲಿ ಕಾಣಿಸಿಕೊಳ್ಳಿದ್ದಾರೆ. ಇನ್ನೂ ಶಾಕುಂತಲಂ ಪೋಷಕರ ಪಾತ್ರದಲ್ಲಿ ನಟಿ ಆದಿತಿ ಬಾಲನ್ ಮತ್ತು ಮೋಹನ್ ಬಾಬು ಅಭಿನಯಿಸುತ್ತಿದ್ದು, ಟಾಲಿವುಡ್ ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ಪುತ್ರಿ ಅರ್ಹಾ ಕೂಡ ವಿಶೇಷ ಪಾತ್ರದಲ್ಲಿ ಅಭಿನಯಿಸಿದ್ದಾಳೆ. ಚಿತ್ರಕ್ಕೆ ಮಣಿ ಶರ್ಮಾ ಅವರು ಸಂಗೀತ ಸಂಯೋಜಿಸಿದ್ದು, ಗುಣ ಟೀಮ್‍ ವರ್ಕ್ ಮತ್ತು ಶ್ರೀ ವೆಂಕಟೇಶ್ವರ ಕ್ರಿಯೇಷನ್ಸ್ ಬ್ಯಾನರ್ ಜಂಟಿಯಾಗಿ ನಿರ್ಮಿಸಿದೆ.

    ಟಾಲಿವುಡ್‍ನ ಬ್ಯಾಕ್ ಟೂ ಬ್ಯಾಕ್ ಸಿನಿಮಾಗಳಲ್ಲಿ ಬ್ಯೂಸಿಯಾಗಿರುವ ನಟಿ ಸಮಂತಾ ಬಹು ಬೇಡಿಕೆಯ ನಟಿಯರಲ್ಲಿ ಒಬ್ಬರಾಗಿದ್ದಾರೆ. ಇತ್ತೀಚೆಗಷ್ಟೇ ಅಲ್ಲು ಅರ್ಜುನ್ ಅಭಿನಯದ ಪುಷ್ಪ ಸಿನಿಮಾದ ಊ ಅಂಟಾವಾ ಮಾಮ ಸಾಂಗ್‍ನಲ್ಲಿ ಸೊಂಟ ಬಳುಕಿಸಿದ್ದ ಸಮಂತಾಗೆ ದೊಡ್ಡ ಹಿಟ್ ಸಿಕ್ಕಿತು. ಈ ಮುನ್ನ ಫ್ಯಾಮಿಲಿ ಮ್ಯಾನ್ ವೆಬ್ ಸರಣಿ ಕೂಡ ಸಕ್ಸಸ್ ಕಂಡಿತ್ತು. ಇದೀಗ ಮೊದಲ ಬಾರಿಗೆ ಪೌರಣಿಕ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವ ಸಮಂತಾಗೆ ಶಾಕುಂತಲಂ ಸಿನಿಮಾ ಕೂಡ ಲಕ್ ತಂದು ಕೊಡುತ್ತಾ ಕಾದು ನೋಡಬೇಕಾಗಿದೆ. ಇದನ್ನೂ ಓದಿ: ಪುಷ್ಪ ಸಿನಿಮಾಗೆ ದಾದಾಸಾಹೇಬ್‌ ಫಾಲ್ಕೆ ಅಂತಾರಾಷ್ಟ್ರೀಯ ಚಿತ್ರೋತ್ಸವ ಪ್ರಶಸ್ತಿ – ರಣವೀರ್‌ ಸಿಂಗ್‌ ಅತ್ಯುತ್ತಮ ನಟ

  • ಸಲಾಂ ಸೋಲ್ಜರ್, ದೇಶಕ್ಕೆ ನೀನೇ ಪವರ್ – ಪುನೀತ್ ಖದರ್

    ಸಲಾಂ ಸೋಲ್ಜರ್, ದೇಶಕ್ಕೆ ನೀನೇ ಪವರ್ – ಪುನೀತ್ ಖದರ್

    ಬೆಂಗಳೂರು: ಸ್ಯಾಂಡಲ್‍ವುಡ್ ನಟ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅಭಿನಯದ ಬಹು ನಿರೀಕ್ಷಿತ ಜೇಮ್ಸ್ ಚಿತ್ರದ ಪೋಸ್ಟರ್ ಇಂದು ಬಿಡುಗಡೆಯಾಗಿದೆ.

    ಪುನೀತ್ ರಾಜ್‍ಕುಮಾರ್ ಅವರು ಕೊನೆಯದಾಗಿ ಅಭಿನಯಿಸಿರುವ ಚಿತ್ರ ಇದಾಗಿದ್ದು, ಈ ಚಿತ್ರದ ಪೋಸ್ಟರ್ ಅನ್ನು ಗಣರಾಜ್ಯೋತ್ಸವದಂದು ಬಿಡುಗಡೆಗೊಳಿಸುವುದಾಗಿ ಚಿತ್ರತಂಡ ಅನೌನ್ಸ್ ಮಾಡಿತ್ತು. ಅದರಂತೆ ಇಂದು ಜೇಮ್ಸ್ ಸಿನಿಮಾದ ಪೋಸ್ಟರ್ ಬಿಡುಗಡೆಗೊಂಡಿದ್ದು, ಅಶ್ವಿನಿ ಪುನೀತ್ ರಾಜ್‍ಕುಮಾರ್, ನಟ ಶಿವರಾಜ್ ಕುಮಾರ್, ರಾಘವೇಂದ್ರ ರಾಜ್‍ಕುಮಾರ್ ಅವರು ತಮ್ಮ ಇನ್‍ಸ್ಟಾಗ್ರಾಮ್‍ನಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಪೋಸ್ಟರ್‌ನಲ್ಲಿ ಪುನೀತ್ ಗನ್ ಹಿಡಿದು ಖಡಕ್ ಆರ್ಮಿ ಆಫೀಸರ್ ಆಗಿ ಮಿಂಚಿದ್ದಾರೆ. ಅದರಲ್ಲಿಯೂ ಪೋಸ್ಟರ್‌ನಲ್ಲಿರುವ ಸಲಾಂ ಸೋಲ್ಜರ್ ದೇಶಕ್ಕೆ ನೀನೇ ಪವರ್ ಎಂಬ ಸಾಲುಗಳು ಎಲ್ಲರ ಗಮನ ಸೆಳೆಯುತ್ತಿದೆ.

    ಪೋಸ್ಟರ್ ಜೊತೆಗೆ ಅಶ್ವಿನಿ ಪುನೀತ್ ರಾಜ್‍ಕುಮಾರ್ ಅವರು ಎಲ್ಲರಿಗೂ ಗಣರಾಜ್ಯೋತ್ಸವದ ಶುಭಾಶಯಗಳು ಎಂದು ಕ್ಯಾಪ್ಷನ್‍ನಲ್ಲಿ ಬರೆದುಕೊಂಡಿದ್ದಾರೆ. ನಿರ್ದೇಶಕ ಚೇತನ್ ಕುಮಾರ್ ಆ್ಯಕ್ಷನ್ ಕಟ್ ಹೇಳುತ್ತಿರುವ ಆ್ಯಕ್ಷನ್ ಕಮರ್ಷಿಯಲ್ ಜೇಮ್ಸ್ ಸಿನಿಮಾವಾಗಿದ್ದು, ಚಿತ್ರದ ಶೂಟಿಂಗ್ ಇದೀಗ ಕಂಪ್ಲೀಟ್ ಆಗಿದೆ. ಒಂದು ಹಾಡು ಮತ್ತು ಕೆಲವು ದೃಶ್ಯಗಳನ್ನು ಗ್ರಾಫಿಕ್ಸ್ ಮಾಡಲಾಗಿದೆ. ಇದನ್ನೂ ಓದಿ:  ಮಗಳ ವಿಚಾರದಲ್ಲಿ ನಮ್ಮ ನಿರ್ಧಾರ, ಮನವಿ ಮೊದಲಿನಂತೆಯೇ ಇರಲಿದೆ: ಅನುಷ್ಕಾ ಶರ್ಮಾ

     

    View this post on Instagram

     

    A post shared by DrShivaRajkumar (@nimmashivarajkumar)

    ಈ ಚಿತ್ರಕ್ಕೆ ನಿರ್ದೇಶಕ ಚೇತನ್ ಕುಮಾರ್ ಆ್ಯಕ್ಷನ್ ಕಟ್ ಹೇಳಿದ್ದು, ಅಪ್ಪು ಹುಟ್ಟುಹಬ್ಬದ ದಿನದಂದೇ ಸಿನಿಮಾ ಬಿಡುಗಡೆ ಮಾಡಲು ಪ್ಲಾನ್ ಮಾಡಲಾಗುತ್ತಿದೆ. ರಾಜಕುಮಾರ ಸಿನಿಮಾದಲ್ಲಿ ನಟಿಸಿದ್ದ ಪ್ರಿಯಾ ಆನಂದ್ ಅವರೇ ಜೇಮ್ಸ್ ಚಿತ್ರದಲ್ಲಿ ಅಪ್ಪು ಜೊತೆ ರೊಮ್ಯಾನ್ಸ್ ಮಾಡಿದ್ದಾರೆ. ಚಿತ್ರದಲ್ಲಿ ಶ್ರೀಕಾಂತ್, ಆದಿತ್ಯ ಮೆನನ್ ಹಾಗೂ ಅನು ಪ್ರಭಾಕರ್, ಮುಖೇಶ್ ರಿಷಿ ಸೇರಿದಂತೆ ಹಲವಾರು ಕಲಾವಿದರು ನಟಿಸಿದ್ದಾರೆ.

    ಪುನೀತ್ ಅಭಿನಯದ ಕೊನೆಯ ಸಿನಿಮಾ ಜೇಮ್ಸ್ ಆಗಿದ್ದು, ಈಗಾಗಲೇ ಪ್ರೇಕ್ಷಕರು ಸಿನಿಮಾದ ಬಗ್ಗೆ ಸಾಕಷ್ಟು ನಿರೀಕ್ಷೆ ಹೊಂದಿದ್ದು, ಸಿನಿಮಾ ನೋಡಲು ಕಾತುರದಿಂದ ಕಾಯುತ್ತಿದ್ದಾರೆ. ಇದನ್ನೂ ಓದಿ: ಯಶ್, ಅಲ್ಲು ಅರ್ಜುನ್ ಬಾಲಿವುಡ್‍ನಿಂದ ಭ್ರಷ್ಟರಾಗಬೇಡಿ: ಕಂಗನಾ ರಣಾವತ್

  • ಸಂಜಯ್ ದತ್‍ಗೆ ಹುಟ್ಟುಹಬ್ಬದ ಸಂಭ್ರಮ – ಕೆಜಿಎಫ್‍ನಿಂದ ಸಿಕ್ತು ಭರ್ಜರಿ ಗಿಫ್ಟ್

    ಸಂಜಯ್ ದತ್‍ಗೆ ಹುಟ್ಟುಹಬ್ಬದ ಸಂಭ್ರಮ – ಕೆಜಿಎಫ್‍ನಿಂದ ಸಿಕ್ತು ಭರ್ಜರಿ ಗಿಫ್ಟ್

    ಬೆಂಗಳೂರು: ಬಾಲಿವುಡ್ ನಟ ಸಂಜಯ್ ದತ್‍ಗೆ ಇಂದು 62ನೇ ಜನುಮ ದಿನದ ಸಂಭ್ರಮ. ಈ ವಿಶೇಷ ದಿನದಂದು ಸ್ಯಾಂಡಲ್‍ವುಡ್‍ನ ಬಹುನಿರೀಕ್ಷಿತ ಕೆಜಿಎಫ್-2 ಚಿತ್ರತಂಡದಿಂದ ಮುನ್ನಾಬಾಯ್ ಅಭಿಮಾನಿಗಳಿಗೆ ಭರ್ಜರಿ ಗಿಫ್ಟ್ ನೀಡಿದೆ.

    ಹೌದು ಇಡೀ ಭಾರತೀಯ ಚಿತ್ರರಂಗವೇ ಎದುರು ನೋಡುತ್ತಿರುವ ಸಿನಿಮಾ ಕೆಜಿಎಫ್-2. ಸ್ಯಾಂಡಲ್‍ವುಡ್ ನಟ ರಾಕಿಂಗ್ ಸ್ಟಾರ್ ಯಶ್‍ಗೆ ವಿರುದ್ಧವಾಗಿ ಇದೇ ಮೊದಲ ಬಾರಿಗೆ ಸಂಜಯ್ ದತ್ ಖಡಕ್ ಖಳನಾಯಕನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾದಲ್ಲಿ ಸಂಜಯ್ ದತ್ ಅವರ ಪಾತ್ರವಿರುವ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಸಂಜಯ್ ದತ್‍ಗೆ ಚಿತ್ರತಂಡ ಬರ್ತ್‍ಡೇ ವಿಶ್ ಮಾಡಿದೆ.

    ಈ ಸಿನಿಮಾದಲ್ಲಿ ಸಂಜಯ್ ದತ್ ಅಧೀರ ಎಂಬ ಕ್ರೂರಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಸದ್ಯ ಈ ಹೊಸ ಪೋಸ್ಟರ್‍ನನ್ನು ನಿರ್ದೇಶಕ ಪ್ರಶಾಂತ್ ನೀಲ್ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದು, ಯುದ್ಧ ಇರುವುದು ಪ್ರಗತಿಗಾಗಿ, ಇದನ್ನು ರಣಹದ್ದುಗಳು ಸಹ ಒಪ್ಪುತ್ತದೆ ಎಂದು ಕ್ಯಾಪ್ಷನ್‍ನಲ್ಲಿ ಬರೆದುಕೊಂಡಿದ್ದು, ಸಂಜಯ್ ದತ್‍ಗೆ ವಿಶ್ ಮಾಡಿದ್ದಾರೆ.

    ಇದಕ್ಕೆ ಸಂಜಯ್ ದತ್ ನನಗೆ ವಿಶ್ ಮಾಡಿದ ಪ್ರತಿಯೊಬ್ಬರಿಗೂ ಧನ್ಯವಾದ. ಕೆಜಿಎಫ್-2 ಸಿನಿಮಾದಲ್ಲಿ ಕೆಲಸ ಮಾಡಿದ ಅನುಭವ ಅದ್ಭುತ. ನೀವೆಲ್ಲರೂ ಸಿನಿಮಾ ಬಿಡುಗಡೆಗೊಳಿಸಲು ಬಹಳ ದಿನಗಳಿಂದ ಕಾಯುತ್ತಿದ್ದೀರಿ ಎನ್ನುವುದು ನನಗೆ ಗೊತ್ತಿದೆ. ನಾನು ನಿಮಗೆ ಭರವಸೆ ನೀಡುತ್ತೇನೆ ಕಾಯುವುದರಿಂದ ಒಳ್ಳೆಯದು ಆಗುತ್ತದೆ ಎಂದು ಸಂಜಯ್ ದತ್ ಕ್ಯಾಪ್ಷನ್‍ನಲ್ಲಿ ಬರೆದುಕೊಂಡಿದ್ದಾರೆ. ಇದನ್ನೂ ಓದಿ:ಕೆಲವು ಸಂಬಂಧಗಳು ಶಾಶ್ವತವಾಗಿ ಉಳಿಯುತ್ತವೆ – ಮುನಿಸು ಮರೆತು ಒಂದಾದ ದರ್ಶನ್, ರಕ್ಷಿತಾ