Tag: posters

  • ಇನ್ಮುಂದೆ ವಾಹನಗಳ ಮೇಲೆ ಮಚ್ಚು ಹಿಡಿದ ಪೋಸ್ಟರ್ ಹಾಕಿದ್ರೆ ಬೀಳುತ್ತೆ ದಂಡ!

    ಇನ್ಮುಂದೆ ವಾಹನಗಳ ಮೇಲೆ ಮಚ್ಚು ಹಿಡಿದ ಪೋಸ್ಟರ್ ಹಾಕಿದ್ರೆ ಬೀಳುತ್ತೆ ದಂಡ!

    – ಪರಿಶೀಲನೆ ವೇಳೆ ಹಳೆಯ ಕೇಸುಗಳಿದ್ದರೆ ವಾಹನ ಜಪ್ತಿ

    ಬೆಂಗಳೂರು: ವಾಹನಗಳ ಮೇಲೆ ವಿವಾದಾತ್ಮಕ, ಕ್ರೌರ್ಯ, ಅಶ್ಲೀಲ ಪೋಸ್ಟರ್ ಹಾಕಿದರೆ ಇನ್ನು ಮುಂದೆ ದಂಡ ಬೀಳಲಿದೆ. ಇದಕ್ಕೆ ಸಂಬಂಧಿಸಿದಂತೆ ಸಾರಿಗೆ ಅಧಿಕಾರಿಗಳು ಕಣ್ಣಿಟ್ಟಿದ್ದು, ದಂಡದ ಜೊತೆ ಸೀಜ್ ಮಾಡುವ ಪ್ಲ್ಯಾನ್ ಮಾಡುತ್ತಿದ್ದಾರೆ.

    ಹೌದು, ಆಟೋ, ಟ್ಯಾಕ್ಸಿ, ಇತರೆ ವಾಹನ ಚಾಲಕರ ಗಮನದಲ್ಲಿರಲಿ. ವಾಹನಗಳ ಮೇಲೆ ನೆಚ್ಚಿನ ನಟರ ಫೋಟೋ ಹಾಕಿ, ಯಾವುದೋ ವಿವಾದಾತ್ಮಕ ಫೋಟೋ ಅಥವಾ ಬರಹಗಳನ್ನು ಹಾಕಿ ಸಮಾಜದ ಸ್ವಾಸ್ಥ್ಯ ಕೆಡಿಸುವವರ ವಿರುದ್ಧ ಸಾರಿಗೆ ಇಲಾಖೆಯ ಅಧಿಕಾರಿಗಳು ಸಮರ ಸಾರಲು ಮುಂದಾಗಿದ್ದಾರೆ.ಇದನ್ನೂ ಓದಿ: ಯುದ್ಧವನ್ನು ಕೊನೆಗೊಳಿಸದಿದ್ದರೆ ಮತ್ತಷ್ಟು ನಿರ್ಬಂಧ, ಸುಂಕ – ಪುಟಿನ್‌ಗೆ ಟ್ರಂಪ್‌ ಬೆದರಿಕೆ

    ನಟರು ಮಚ್ಚು ಹಿಡಿಯುವ ಪೋಸ್ಟರ್ ಅಥವಾ ಕೆಲವರ ಭಾವನೆಗಳನ್ನು ಕೆರಳಿಸುವ ಬರಹಗಳು, ಫೋಟೋಗಳನ್ನು ಹಾಕಿದರೆ ಅಧಿಕಾರಿಗಳು ದಂಡಾಸ್ತ್ರ ಪ್ರಯೋಗ ಮಾಡಲಿದ್ದಾರೆ. ಆಯಾ ಪ್ರಾದೇಶಿಕ ಸಾರಿಗೆ ಕಚೇರಿಯ ಅಧಿಕಾರಿಗಳ ತಂಡ ಇಂತಹ ವಾಹನಗಳ ಪರಿಶೀಲನೆಗೆ ಇಳಿಯಲಿದೆ. ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ಚಾಲಕರು, ತಮ್ಮ ವಾಹನಗಳ ಮೇಲೆ ಯಾವುದಾದರೂ ಹಳೆಯ ಕೇಸುಗಳಿದ್ದರೆ ಅಂತ ವಾಹನಗಳನ್ನ ಅಧಿಕಾರಿಗಳು ಸೀಜ್ ಮಾಡಲಿದ್ದಾರೆ.

    ಅಶ್ಲೀಲ, ಅಸಭ್ಯ ಹಾಗೂ ಕ್ರೌರ್ಯವನ್ನು ಬಿಂಬಿಸುವ ಬರಹಗಳು, ಕೆಲವು ಪೋಸ್ಟರ್‌ಗಳನ್ನ ಆಟೋ, ಟ್ಯಾಕ್ಸಿಗಳ ಮೇಲೆ ಹಾಕಿರುವುದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗ್ತಿವೆ. ಇದು ನಕಾರಾತ್ಮಕ ಪರಿಣಾಮ ಬೀಳುತ್ತಿದ್ದು, ಸಾರಿಗೆ ನಿಯಮಗಳನ್ನ ಉಲ್ಲಂಘಿಸಿ ಇಂತಹ ಪೋಸ್ಟರ್‌ಗಳನ್ನು ಹಾಕುವುದನ್ನು ನಿಲ್ಲಿಸಿ ಎಂದು ಸಾರಿಗೆ ಇಲಾಖೆಯ ಅಧಿಕಾರಿಗಳು ಮನವಿ ಮಾಡಿದ್ದಾರೆ.

    ಕೆಲವು ಕಂಪನಿ, ಸಂಸ್ಥೆಗಳ ಜಾಹೀರಾತುಗಳನ್ನು, ಪೋಸ್ಟರ್ ಕವರ್ ಹಾಕಿಕೊಳ್ಳಲು ನಗರ ಜಿಲ್ಲಾಧಿಕಾರಿಗಳು ಅನುಮತಿ ಕೊಟ್ಟಿದ್ದು, ಅದನ್ನ ಹೊರತುಪಡಿಸಿ ಇತರೆ ಪೋಸ್ಟರ್‌ಗಳನ್ನು ಹಾಕಿಕೊಳ್ಳುವುದು ಕೂಡ ನಿಯಮ ಉಲ್ಲಂಘನೆ. ಇಷ್ಟು ದಿನ ಸುಮ್ಮನಿದ್ದ ಸಾರಿಗೆ ಇಲಾಖೆಯ ಅಧಿಕಾರಿಗಳು, ಇದೀಗ ನಿಯಮ ಉಲ್ಲಂಘಿಸಿ ಪೋಸ್ಟರ್ ಹಾಕಿಕೊಂಡವರ ವಿರುದ್ಧ ದಂಡಾಸ್ತ್ರ ಪ್ರಯೋಗ ಮಾಡಲಿದ್ದಾರೆ.ಇದನ್ನೂ ಓದಿ: ದಿನ ಭವಿಷ್ಯ 23-01-2025

  • 2 ಸಾವಿರಕ್ಕೂ ಅಧಿಕ ಮೋದಿ ವಿರೋಧಿ ಪೋಸ್ಟರ್‌ಗಳು – ನಾಲ್ವರು ಅರೆಸ್ಟ್

    2 ಸಾವಿರಕ್ಕೂ ಅಧಿಕ ಮೋದಿ ವಿರೋಧಿ ಪೋಸ್ಟರ್‌ಗಳು – ನಾಲ್ವರು ಅರೆಸ್ಟ್

    ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರನ್ನು ಪದಚ್ಯುತಗೊಳಿಸುವ ಸಾವಿರಾರು ಪೋಸ್ಟರ್‌ಗಳು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ (Delhi) ಕಂಡುಬಂದಿದ್ದು, ಪ್ರಕರಣಕ್ಕೆ ಸಂಬಂಧಿಸಿ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.

    ಬಂಧಿತ ನಾಲ್ವರಲ್ಲಿ ಇಬ್ಬರು ಪ್ರಿಟಿಂಗ್ ಪ್ರೆಸ್ ಅನ್ನು ಹೊಂದಿದ್ದಾರೆ. ಘಟನೆಗೆ ಸಂಬಂಧಿಸಿ ದೆಹಲಿ ಪೊಲೀಸರು 44 ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ. ಪೊಲೀಸರು ದೆಹಲಿಯ ವಿವಿಧ ಸ್ಥಳಗಳಲ್ಲಿ ನಡೆಸಿದ ಬೃಹತ್ ಕಾರ್ಯಾಚರಣೆ ವೇಳೆ ಸುಮಾರು 2,000 ಮೋದಿ ವಿರೋಧಿ (Anti-Modi) ಪೋಸ್ಟರ್‌ಗಳನ್ನು (Posters) ಕೆಳಗಿಳಿಸಿದ್ದಾರೆ. ಇದರಲ್ಲಿ ಹೆಚ್ಚಿನ ಪೋಸ್ಟರ್‌ಗಳಲ್ಲಿ ಮೋದಿ ಹಠಾವೋ, ದೇಶ್ ಬಚಾವೋ (ಮೋದಿಯನ್ನು ತೆಗೆದುಹಾಕಿ, ದೇಶವನ್ನು ಉಳಿಸಿ) ಎಂಬ ಘೋಷಣೆಗಳನ್ನು ಹೊಂದಿದ್ದವು.

    ಜೊತೆಗೆ 2,000ಕ್ಕೂ ಅಧಿಕ ಪೋಸ್ಟರ್‌ಗಳನ್ನು ಆಮ್ ಆದ್ಮಿ ಪಕ್ಷದ ಕಚೇರಿಗೆ ತಲುಪಿಸಲಾಗುತ್ತಿತ್ತು. ಐಪಿ ಎಸ್ಟೇಟ್ ಪ್ರದೇಶದಲ್ಲಿ ವ್ಯಾನ್ ಅನ್ನು ಅಡ್ಡಗಟ್ಟಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಪೋಸ್ಟರ್‌ಗಳು ಇರುವುದು ಕಂಡುಬಂದಿದೆ. ಈ ಬಗ್ಗೆ ಚಾಲಕನನ್ನು ವಿಚಾರಣೆಗೆ ಒಳಪಡಿಸಿದಾಗ ಪೋಸ್ಟರ್‌ಗಳನ್ನು ಆಪ್ (AAP) ಕೇಂದ್ರ ಕಚೇರಿಗೆ ತಲುಪಿಸುವಂತೆ ಸೂಚಿಸಲಾಗಿದೆ ಎಂದು ತಿಳಿಸಿದ್ದಾನೆ. ಘಟನೆಗೆ ಸಂಬಂಧಿಸಿ ದೆಹಲಿ ಪೊಲೀಸರು ಪೋಸ್ಟರ್‌ಗಳನ್ನು ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿ: ಗಗನಕ್ಕೇರಿದ Gold Rate – 60 ಸಾವಿರ ಗಡಿ ದಾಟಿದ ಚಿನ್ನ

    ಮೋದಿ ಹಟಾವೋ, ದೇಶ್ ಬಚಾವೋ ಪೋಸ್ಟರ್‌ಗಳನ್ನು ಮುದ್ರಿಸಲು ತಮಗೆ 50,000 ಆದೇಶ ಬಂದಿದೆ ಎಂದು ಬಂಧಿತ ಪ್ರಿಂಟಿಂಗ್ ಪ್ರೆಸ್ ಮಾಲೀಕರು ದೆಹಲಿ ಪೊಲೀಸರಿಗೆ ತಿಳಿಸಿದ್ದಾರೆ. ಆದರೆ ಘಟನೆಗೆ ಸಂಬಂಧಿಸಿ ಎಎಪಿಯಿಂದ ಇನ್ನೂ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಇದನ್ನೂ ಓದಿ: ಯುಗಾದಿ ಹಬ್ಬಕ್ಕೆ ಜನರಿಗೆ ಶಾಕ್ – ಹೂವು, ಹಣ್ಣಿನ ಬೆಲೆ ದುಪ್ಪಟ್ಟು

  • ಆದಿತ್ಯ ಠಾಕ್ರೆ ಮುಂದಿನ ‘ಮಹಾ’ ಸಿಎಂ- ರಾರಾಜಿಸುತ್ತಿವೆ ಪೋಸ್ಟರ್

    ಆದಿತ್ಯ ಠಾಕ್ರೆ ಮುಂದಿನ ‘ಮಹಾ’ ಸಿಎಂ- ರಾರಾಜಿಸುತ್ತಿವೆ ಪೋಸ್ಟರ್

    ಮುಂಬೈ: ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಪುತ್ರ ಆದಿತ್ಯ ಠಾಕ್ರೆ ಅವರಿಗೆ ಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ಬೆಂಬಲಿಗರು ಒತ್ತಾಯಿಸುದ್ದಾರೆ. ಅಷ್ಟೇ ಅಲ್ಲದೆ ಆದಿತ್ಯ ಠಾಕ್ರೆ ಮುಂದಿನ ಸಿಎಂ ಎಂಬ ಬ್ಯಾನರ್ ಗಳು ಮಹಾರಾಷ್ಟ್ರದಲ್ಲಿ ರಾರಾಜಿಸುತ್ತಿವೆ.

    ಮಹಾರಾಷ್ಟ್ರದ 288 ವಿಧಾನಸಭಾ ಕ್ಷೇತ್ರಗಳ ಚುನಾವಣೆಯಲ್ಲಿ ಬಿಜೆಪಿ-ಶಿವಸೇನೆ ಮೈತ್ರಿಯು 161 ಕ್ಷೇತ್ರಗಳಲ್ಲಿ ಜಯ ಸಾಧಿಸಿದೆ. ಈಗಾಗಲೇ ಅಧಿಕಾರದ ಚುಕ್ಕಾಣಿ ಹಿಡಿಯಲು ಕಸರತ್ತು ನಡೆದಿದ್ದು, 50:50 ಸೂತ್ರದ ಅಳವಡಿಕೆಗೆ ಶಿವಸೇನೆ ಬಿಗಿ ಪಟ್ಟು ಹಿಡಿದಿದೆ. ಈ ಮಧ್ಯೆ ಇದೇ ಮೊದಲ ಬಾರಿ ಚುನಾವಣೆಯಲ್ಲಿ ಸ್ಪರ್ಧಿಸಿ ಭರ್ಜರಿ ಗೆಲವು ಸಾಧಿಸಿದ 29 ವರ್ಷದ ಆದಿತ್ಯ ಠಾಕ್ರೆ ಅವರಿಗೆ ಮುಖ್ಯಮಂತ್ರಿ ಸ್ಥಾನ ನೀಡಿಬೇಕು ಎಂಬ ಕೂಗು ಕೇಳಿ ಬರುತ್ತಿದೆ.

    ಆದಿತ್ಯ ಠಾಕ್ರೆ ಸ್ಪರ್ಧಿಸಿದ್ದ ವರ್ಲಿ ಕ್ಷೇತ್ರದಲ್ಲಿ ಪೋಸ್ಟರ್ ಗಳು ರಾರಾಜಿಸುತ್ತಿದ್ದು, ಅದರಲ್ಲಿ ಶಿವಸೇನಾ ಸ್ಥಾಪಕ ಬಾಳ್ ಠಾಕ್ರೆ, ಅಧ್ಯಕ್ಷ ಉದ್ಧವ್ ಠಾಕ್ರೆ ಹಾಗೂ ಆದಿತ್ಯ ಠಾಕ್ರೆ ಫೋಟೋ ಹಾಕಲಾಗಿದೆ. ಜೊತೆಗೆ ಆದಿತ್ಯ ಠಾಕ್ರೆ ಮಹಾರಾಷ್ಟ್ರದ ಮುಂದಿನ ಮುಖ್ಯಮಂತ್ರಿ ಎಂದು ಬರೆಯಲಾಗಿದೆ.

    ವರ್ಲಿ ವಿಧಾನಸಭಾ ಕ್ಷೇತ್ರದಲ್ಲಿ ಶಿವಸೇನೆಯ ಎದುರಾಳಿ ಪಕ್ಷವಾದ ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ ಸುರೇಶ್ ಮನೆ ವಿರುದ್ಧ ಆದಿತ್ಯ ಠಾಕ್ರೆ 67 ಸಾವಿರ ಮತಗಳಿಂದ ಜಯಗಳಿಸಿದ್ದಾರೆ. ಪ್ರಸಕ್ತ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 105, ಶಿವಸೇನೆ 56, ಎನ್‍ಸಿಪಿ 54 ಹಾಗೂ ಕಾಂಗ್ರೆಸ್ 43 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿವೆ.

    ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರನ್ನು ಬಿಟ್ಟು ಆದಿತ್ಯ ಠಾಕ್ರೆಗೆ ಮುಖ್ಯಮಂತ್ರಿ ಸ್ಥಾನ ನೀಡುವುದು ಸೂಕ್ತವಲ್ಲ. ಆದಿತ್ಯ ಠಾಕ್ರೆಗೆ ಮುಂದಿನ ದಿನಗಳಲ್ಲಿ ಅವಕಾಶ ನೀಡಬಹುದು. ಸದ್ಯ ಉದ್ಧವ್ ಠಾಕ್ರೆ ಅವರು ಸಿಎಂ ಸ್ಥಾನ ನಿರ್ವಹಿಸಬೇಕು ಎಂಬ ಮಾತುಗಳು ಪಕ್ಷದಲ್ಲಿ ಕೇಳಿ ಬರುತ್ತಿವೆ ಎನ್ನಲಾಗಿದೆ.

  • ಮತದಾನ ಜಾಗೃತಿ ಬ್ಯಾನರಿನಲ್ಲಿ ನಿರ್ಭಯಾ ಪ್ರಕರಣ ಅಪರಾಧಿ ಫೋಟೋ

    ಮತದಾನ ಜಾಗೃತಿ ಬ್ಯಾನರಿನಲ್ಲಿ ನಿರ್ಭಯಾ ಪ್ರಕರಣ ಅಪರಾಧಿ ಫೋಟೋ

    – ಚುನಾವಣಾ ಆಯೋಗ ಎಡವಟ್ಟಿಗೆ ವ್ಯಾಪಕ ಆಕ್ರೋಶ

    ಚಂಡೀಗಢ: ಮತದಾನ ಜಾಗೃತಿ ಬ್ಯಾನರ್ ನಲ್ಲಿ ನಿರ್ಭಯಾ ಅತ್ಯಾಚಾರ ಪ್ರಕರಣದ ಅಪರಾಧಿ ಫೋಟೋ ಹಾಕಿ ಪಂಜಾಬ್ ಚುನಾವಣಾ ಆಯೋಗವು ಎಡವಟ್ಟು ಮಾಡಿಕೊಂಡಿದೆ.

    ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಮತದಾನ ಜಾಗೃತಿ ಬ್ಯಾನರ್ ಗಳನ್ನು ಹೋಶಿಯಾರ್​ಪುರದ ಸರ್ಕಾರಿ ಕಚೇರಿಗಳ ಸಂಕೀರ್ಣದಲ್ಲಿ ಹಾಕಲಾಗಿತ್ತು. ಆದರೆ ಯಾರೊಬ್ಬರೂ ಇದನ್ನು ಗಮನಿಸಿರಲಿಲ್ಲ. ಚುನಾವಣೆ ಮುಗಿದು 2 ತಿಂಗಳು ಕಳೆದ ನಂತರ ಶುಕ್ರವಾರ ವ್ಯಕ್ತಿಯೊಬ್ಬರು ಚುನಾವಣಾ ಆಯೋಗದಿಂದ ಆಗಿರುವ ಎಡವಟ್ಟನ್ನು ಪತ್ತೆ ಹಚ್ಚಿದ್ದಾರೆ. ಈ ಮತದಾನ ಜಾಗೃತಿ ಬ್ಯಾನರ್ ನಲ್ಲಿ ನಿರ್ಭಯಾ ಅತ್ಯಾಚಾರ ಪ್ರಕರಣದ ಅಪರಾಧಿ ಮುಕೇಶ್​ ಸಿಂಗ್ ಫೋಟೋವನ್ನು ಮುದ್ರಿಸಲಾಗಿದೆ.

    ಚುನಾವಣಾ ಆಯೋಗ ಎಡವಟ್ಟನ್ನು ಜನಸಾಮಾನ್ಯರು ಗುರುತಿಸಿದ್ದು, ಅಧಿಕಾರಿಗಳಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ. ಅಷ್ಟೇ ಅಲ್ಲದೆ ಈ ಬ್ಯಾನರ್ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿದ್ದು, ಅಧಿಕಾರಿಗಳ ವಿರುದ್ಧ ನೆಟ್ಟಿಗರು ಕಿಡಿಕಾರಿದ್ದಾರೆ.

    ಈ ಕುರಿತು ಪ್ರತಿಕ್ರಿಯೆ ನೀಡಿರುವ ಪಂಜಾಬ್ ಕ್ಯಾಬಿನೆಟ್ ಸಚಿವ ಶ್ಯಾಮ್ ಅರೋರ್ ಅವರು, ಗೊತ್ತಿಲ್ಲದೆ ಚುನಾವಣಾ ಆಯೋಗದ ಅಧಿಕಾರಿಗಳು ಫೋಟೋವನ್ನು ಹಾಕಿರಬಹುದು. ತಪ್ಪಾದ ಗುರುತಿನ ಪತ್ರವನ್ನು ಅಧಿಕಾರಿಗಳು ಬಳಸಿರಬಹುದು. ಈ ಸಂಬಂಧ ತನಿಖೆ ನಡೆಸಲಾಗುತ್ತದೆ ಎಂದು ತಿಳಿಸಿದ್ದಾರೆ.

    ಮುಖೇಶ್ ಸಿಂಗ್ 2012ರಲ್ಲಿ ನಡೆದ ನಿರ್ಭಯಾ ಗ್ಯಾಂಗ್ ರೇಪ್ ಪ್ರಕರಣದ ಅಪರಾಧಿ. ಮುಖೇಶ್ ಸಿಂಗ್, ನಾನು ಅಪರಾಧ ಎಸಗಿಲ್ಲ. ಕೇವಲ ಬಸ್ ಜಾಲನೆ ಮಾಡುತ್ತಿದ್ದೆ ಎಂದು ಕೋರ್ಟ್ ನಲ್ಲಿ ಹೇಳಿಕೆ ನೀಡಿದ್ದ. ಆತನನ್ನು ಸೇರಿದಂತೆ ಒಟ್ಟು 4 ಜನ ಅಪರಾಧಿಗಳಿಗೆ ದೆಹಲಿ ಕೋರ್ಟ್ ಗಲ್ಲು ಶಿಕ್ಷೆ ವಿಧಿಸಿತ್ತು. ಅಪರಾಧಿಗಳು ಈ ತೀರ್ಪನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ ಅರ್ಜಿ ಸಲ್ಲಿಸಿದ್ದರು. ಆದರೆ ಕೋರ್ಟ್ ಅರ್ಜಿಯನ್ನು ವಜಾಗೊಳಿಸಿತ್ತು.