Tag: postponed

  • ಬಹುನಿರೀಕ್ಷಿತ ಚಿತ್ರ ವಿಕ್ರಾಂತ್ ರೋಣ ಬಿಡುಗಡೆ ಮುಂದೂಡಿಕೆ!

    ಬಹುನಿರೀಕ್ಷಿತ ಚಿತ್ರ ವಿಕ್ರಾಂತ್ ರೋಣ ಬಿಡುಗಡೆ ಮುಂದೂಡಿಕೆ!

    ಬೆಂಗಳೂರು: ಸ್ಯಾಂಡಲ್‍ವುಡ್‍ನಲ್ಲಿ ಭಾರೀ ನಿರೀಕ್ಷೆಯನ್ನು ಹುಟ್ಟಿಸಿರುವ ಸುದೀಪ್ ಅಭಿನಯದ ವಿಕ್ರಾಂತ್ ರೋಣ ಸಿನಿಮಾ ಬಿಡುಗಡೆ ದಿನಾಂಕವನ್ನು ಮುಂದೂಡಿದೆ. ದೇಶದಲ್ಲಿ ಹೆಚ್ಚುತ್ತಿರುವ ಕೊರೊನಾ ಪ್ರಕರಣಗಳ ಕಾರಣದಿಂದ ಚಿತ್ರತಂಡ ಸಿನಿಮಾದ ರಿಲೀಸ್ ದಿನಾಂಕವನ್ನು ಮುಂದೂಡುವುದಾಗಿ ಘೋಷಿಸಿದೆ.

    ರಂಗಿತರಂಗ ಖ್ಯಾತಿಯ ಅನೂಪ್ ಭಂಡಾರಿ ನಿರ್ದೇಶನದಲ್ಲಿ ನಿರ್ಮಾಣಗೊಂಡಿರುವ ಸಿನಿಮಾ ಫೆಬ್ರವರಿ 24ರಂದು ಬಿಡುಗಡೆಯಾಗಬೇಕಿತ್ತು. ಆದರೆ ಕೊರೊನಾ ಭೀತಿಯಿಂದಾಗಿ ಸಿನಿಮಾ ಸೇರಿದಂತೆ ಎಲ್ಲಾ ವಾಣಿಜ್ಯ ಉದ್ಯಮಗಳು ಆತಂಕಕ್ಕೆ ಒಳಗಾಗಿವೆ. ಹೀಗಾಗಿ ಸಿನಿಮಾವನ್ನು ಮುಂದೂಡುವುದಾಗಿ ಚಿತ್ರ ತಂಡ ಘೋಷಿಸಿದೆ. ಇದನ್ನೂ ಓದಿ: ಚಿರು ಸ್ನೇಹಿತನ ಮಗನಿಗೆ ಹೇರ್ ಸ್ಟೈಲಿಸ್ಟ್ ಆದ ರಾಯನ್- ಫೋಟೋ ವೈರಲ್

    ‘ನಮ್ಮ ಕನಸು ಫೆಬ್ರವರಿ 24ರಂದು ನಿಮ್ಮ ಮುಂದೆ ತರಲು ನಾವು ಉತ್ಸುಕರಾಗಿದ್ದರೂ, ಪ್ರಸ್ತುತ ಕೋವಿಡ್ ಪರಿಸ್ಥಿತಿ ಹಾಗೂ ಅದಕ್ಕೆ ಸಂಬಂಧಿಸಿದ ನಿಯಮಾವಳಿಗಳು, ಪ್ರಪಂಚದಾದ್ಯಂತ ನಮ್ಮ ಸಿನಿಮಾವನ್ನು ತಲುಪಿಸಲು ಅನುಕೂಲಕರವಾಗಿಲ್ಲ. ನಿಮ್ಮ ಪ್ರೀತಿ ಹಾಗೂ ತಾಳ್ಮೆಗೆ ನಾವು ಆಭಾರಿ. ಅದಕ್ಕೆ ಪ್ರತಿಯಾಗಿ, ನೀವು ಮನಸಾರೆ ಸ್ವೀಕರಿಸುವಂತಹ ಚಿತ್ರ ನಿಮ್ಮ ಮುಂದೆ ತರುತ್ತೇವೆ ಎಂಬ ಭರವಸೆ ನಮಗಿದೆ. ಭಾರತದ ಮೊದಲ ಅಡ್ವೆಂಚರ್ ಹೀರೋನನ್ನು ಪ್ರಪಂಚಕ್ಕೆ ಪರಿಚಯಿಸುವ ಹೊಸ ದಿನಾಂಕವನ್ನು ಶೀಘ್ರದಲ್ಲೇ ನಿಮಗೆ ತಿಳಿಸುತ್ತೇವೆ ಎಂದು ನಿರ್ದೇಶಕ ಅನೂಪ್ ಭಂಡಾರಿ ಇನ್‍ಸ್ಟಾಗ್ರಾಮ್ ಮೂಲಕ ಅಭಿಮಾನಿಗಳಿಗೆ ತಿಳಿಸಿದ್ದಾರೆ. ಇದನ್ನೂ ಓದಿ: ನಿದ್ದೆಗಳಿಲ್ಲದ ರಾತ್ರಿ ಕಳೆಯಲು ಸಿದ್ಧರಾಗಿ – ಪ್ರಿಯಾಂಕಾಗೆ ಅನುಷ್ಕಾ ಶರ್ಮಾ ವಿಶ್

     

    View this post on Instagram

     

    A post shared by Manjunathgowda (@jack_manjunath_)

    ಬಹು ನಿರೀಕ್ಷಿತ ಸ್ಯಾಂಡಲ್‍ವುಡ್ ಸಿನಿಮಾದಲ್ಲಿ ಕಿಚ್ಚ ಸುದೀಪ್, ನಿರೂಪ್ ಭಂಡಾರಿ, ಜಾಕ್ವೆಲಿನ್ ಫರ್ನಾಂಡಿಸ್ ಮುಂತಾದವರು ಮುಖ್ಯ ಪಾತ್ರಗಳಲ್ಲಿ ನಟಿಸಿದ್ದಾರೆ. ಒಟಿಟಿ ಮುಖಾಂತರ ಸಿನಿಮಾವನ್ನು ಬಿಡುಗಡೆ ಮಾಡಲು ಒಪ್ಪದ ಚಿತ್ರತಂಡ ನೇರವಾಗಿ ಚಿತ್ರಮಂದಿರದಲ್ಲೇ ಬಿಡುಗಡೆ ಮಾಡಲು ಸರಿಯಾದ ಸಮಯಕ್ಕೆ ನಿರೀಕ್ಷಿಸುತ್ತಿದೆ.

  • RRR ಸಿನಿಮಾ ಬಿಡುಗಡೆ ಮುಂದೂಡಿಕೆ ಅಧಿಕೃತ

    RRR ಸಿನಿಮಾ ಬಿಡುಗಡೆ ಮುಂದೂಡಿಕೆ ಅಧಿಕೃತ

    ಹೈದರಾಬಾದ್: ಕೊರನಾ ಕಾರಣದಿಂದಾಗಿ ಆರ್‌ಆರ್‌ಆರ್‌ ಸಿನಿಮಾ ರಿಲೀಸ್ ದಿನಾಂಕ ಮುಂದೂಡಲ್ಪಟ್ಟಿದೆ ಎಂಬ ಸುದ್ದಿ ಹರಿದಾಡುತ್ತಿತ್ತು. ಈ ಕುರಿತಾಗಿ ಚಿತ್ರತಂಡ ಅಧಿಕೃತ ಮಾಹಿತಿಯನ್ನು ಹೊರ ಹಾಕಿದೆ.

    ಟ್ವೀಟ್‍ನಲ್ಲಿ ಏನಿದೆ?: ಎಲ್ಲರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು, ನಾವು ನಮ್ಮ ಚಲನಚಿತ್ರ ಬಿಡುಗಡೆಯನ್ನು ಮುಂದೂಡಲು ಇಚ್ಚಿಸಿದ್ದೇವೆ. ಎಲ್ಲರ ಪ್ರೀತಿ, ಅಭಿಮಾನಕ್ಕೆ ಧನ್ಯವಾದಗಳು ಎಂದು ಬರೆದುಕೊಂಡಿದ್ದಾರೆ. ಚಿತ್ರತಂಡ ಸಿನಿಮಾ ಬಿಡುಗಡೆಯ ದಿನಾಂಕವನ್ನು ಮೂಂದುಡಿದೆ ಎನ್ನುವ ಮಾಹಿತಿಯನ್ನು ಹೊರ ಹಾಕಿದೆ.

    ನಮ್ಮ ನಿರಂತರ ಪ್ರಯತ್ನಗಳ ಹೊರತಾಗಿಯೂ, ಕೆಲವು ಸನ್ನಿವೇಶಗಳು ನಮ್ಮ ನಿಯಂತ್ರಣವನ್ನು ಮೀರಿದೆ. ಭಾರತದ ಅನೇಕ ರಾಜ್ಯಗಳು ಚಿತ್ರಮಂದಿರಗಳನ್ನು ಮುಚ್ಚುತ್ತಿರುವುದರಿಂದ, ನಿಮ್ಮ ಉತ್ಸಾಹವನ್ನು ಹಿಡಿದಿಟ್ಟುಕೊಳ್ಳಲು ಕೇಳುವುದನ್ನು ಬಿಟ್ಟು ನಮಗೆ ಬೇರೆ ದಾರಿಯಿಲ್ಲದಾಗಿದೆ. ನಾವು ಭಾರತೀಯ ಸಿನಿಮಾದ ವೈಭವವನ್ನು ಮರಳಿ ತರುವುದಾಗಿ ಭರವಸೆ ನೀಡುತ್ತಿದ್ದೇವೆ ಮತ್ತು ಸರಿಯಾದ ಸಮಯದಲ್ಲಿ ಸಿನಿಮಾವನ್ನು ಬಿಡುಗಡೆ ಮಾಡುತ್ತೇವೆ ಎಂದು ಚಿತ್ರತಂಡ ಅಧಿಕೃತವಾಗಿ ತಿಳಿಸಿದೆ.

     

    View this post on Instagram

     

    A post shared by Taran Adarsh (@taranadarsh)

    ರಾಮ್ ಚರಣ್ ತೇಜಾ, ಜೂ.ಎನ್‍ಟಿಆರ್ ಅಭಿನಯಿಸಿರುವ ನಿರ್ದೇಶಕ ರಾಜಮೌಳಿ ಸಾರಥ್ಯದಲ್ಲಿ ಬಹು ಕೋಟಿ ವೆಚ್ಚದಲ್ಲಿ ತಯಾರಾಗಿರುವ ಆರ್‌ಆರ್‌ಆರ್‌ ಸಿನಿಮಾ 2022ರ ಜನವರಿ 7ರಂದು ಐದು ಭಾಷೆಗಳಲ್ಲಿ ತೆರೆ ಕಾಣಬೇಕಾಗಿತ್ತು. ಆದರೆ ಕೋವಿಡ್-19 ಪ್ರಕರಣಗಳು ಹೆಚ್ಚಾಗುತ್ತಿರುವ ಕಾರಣ ಇದೀಗ ಆರ್‌ಆರ್‌ಆರ್‌ ಸಿನಿಮಾ ಬಿಡುಗಡೆ ದಿನಾಂಕವನ್ನು ಮುಂದೂಡಲಾಗಿದೆ.

     

    ತಮಿಳುನಾಡು, ದೆಹಲಿ, ಮಹಾರಾಷ್ಟ್ರ ಸೇರಿದಂತೆ ಹಲವು ರಾಜ್ಯಗಳಲ್ಲಿ ಕೊರೊನಾ ನಿರ್ಬಂಧ ವಿಧಿಸಲಾಗಿದ್ದು, ಬೆಂಗಳೂರಿನಲ್ಲಿಯೂ ಕೊರೊನಾ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಈ ಹಿನ್ನೆಲೆ ಸದ್ಯದ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ನಿರ್ಮಾಪಕರು ಚಿತ್ರ ಬಿಡುಗಡೆಗೊಳಿಸದಿರಲು ತೀರ್ಮಾನಿಸಿದ್ದಾರೆ. ಈಗಾಗಲೇ ಆರ್‍ಆರ್‍ಆರ್ ಚಿತ್ರತಂಡ ಸಿನಿಮಾ ಕುರಿತಂತೆ ಭರ್ಜರಿಯಾಗಿ ಪ್ರಮೋಷನ್ ನಡೆಸಿದ್ದು, ಚಿತ್ರ ನೋಡಲು ಅಭಿಮಾನಿಗಳು ಸಾಕಷ್ಟು ಕಾತುರದಿಂದ ಕಾಯುತ್ತಿದ್ದಾರೆ. ಆದರೆ ಸಿನಿಮಾ ಬಿಡುಗಡೆ ದಿನಾಂಕವನ್ನು ಮುಂದೂಡುವುದನ್ನು ಬಿಟ್ಟು ನಿರ್ಮಾಪಕರಿಗೆ ಬೇರೆ ದಾರಿ ಇಲ್ಲದಂತಾಗಿದೆ.

    ಬೆಂಗಳೂರಿನಲ್ಲಿ ಆರ್‌ಆರ್‌ಆರ್‌ ಚಿತ್ರದ ಪ್ರಿರಿಲೀಸ್ ಇವೆಂಟ್ ಜನವರಿ 2ಕ್ಕೆ ನಿಗದಿಯಾಗಿತ್ತು. ಆದರೆ ಬೆಂಗಳೂರಿನಲ್ಲಿಯೂ ಕೊರೊನಾ ಹೆಚ್ಚಾಗುತ್ತಿರುವ ಕಾರಣ ಪ್ರಮೋಷನ್ ಕಾರ್ಯಕ್ರಮವನ್ನು ಚಿತ್ರತಂಡ ಮೊಟಕುಗೊಳಿಸಿತ್ತು. ಇದೀಗ ಸಿನಿಮಾ ಬಿಡುಗಡೆ ದಿನಾಂಕವನ್ನು ಮಂದೂಡಿರುವುದಾಗಿ ಆರ್‌ಆರ್‌ಆರ್‌ ಚಿತ್ರತಂಡ ತಿಳಿಸಿದೆ.

  • ಸಿಇಟಿ ಪರೀಕ್ಷೆ ಮುಂದೂಡಿಕೆ

    ಸಿಇಟಿ ಪರೀಕ್ಷೆ ಮುಂದೂಡಿಕೆ

    ಬೆಂಗಳೂರು: ಕೊರೊನಾ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಸಿಇಟಿ (ಸಾಮಾನ್ಯ ಪ್ರವೇಶ ಪರೀಕ್ಷೆ) ಪರೀಕ್ಷೆಯನ್ನು ಮುಂದೂಡಿ, ದಿನಾಂಕವನ್ನು ಮರು ನಿಗದಿ ಮಾಡಿದೆ.

    ಸೋಂಕು ಹೆಚ್ಚಳವಾಗುತ್ತಿರುವ ಕಾರಣ ದ್ವಿತೀಯ ಪಿಯುಸಿ ಅಂತಿಮ ಪರೀಕ್ಷೆ ಮುಂದೂಡಿಕೆ ಮಾಡಿರುವ ಹಿನ್ನೆಲೆಯಲ್ಲಿ ಸಿಇಟಿ ಪರೀಕ್ಷೆಯನ್ನು ಮುಂದೂಡಲಾಗಿದೆ.

    ಈ ಹಿಂದೆ ಸಿಇಟಿ ಪರೀಕ್ಷೆಯನ್ನು ಜುಲೈ 7 ಮತ್ತು 8ರಂದು ನಡೆಸಲು ತೀರ್ಮಾನಿಸಲಾಗಿತ್ತು, ಆದರೆ ಇದೀಗ ಸಿಇಟಿ ಪರೀಕ್ಷೆಯನ್ನು ಮುಂದೂಡಿ, ಆಗಸ್ಟ್ 28 ಮತ್ತು 29ರಂದು ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತೀರ್ಮಾನಿಸಿದೆ.

    ಪರಿಷ್ಕ್ರತ ಪಟ್ಟಿಯಂತೆ ಆಗಸ್ಟ್ 28ರಂದು ಜೀವಶಾಸ್ತ್ರ, ಗಣಿತ ಪರೀಕ್ಷೆ ನಡೆಯಲಿದೆ. ಆಗಸ್ಟ್ 29ರಂದು ಭೌತಶಾಸ್ತ್ರ ಮತ್ತು ರಾಸಾಯನ ಶಾಸ್ತ್ರ ಪರೀಕ್ಷೆಗಳು ನಡಡೆಯಲಿದೆ. ಇದೇ ವೇಳೆ ಜುಲೈ 9ರಂದು ಗಡಿನಾಡು, ಹೊರನಾಡು ಕನ್ನಡಿಗರಿಗೆ ನಡೆಯಬೇಕಿದ್ದ ಕನ್ನಡ ಭಾಷಾ ಪರೀಕ್ಷೆಯನ್ನು ಮುಂದೂಡಿಕೆ ಮಾಡಲಾಗಿದ್ದು, ಆ ಪರೀಕ್ಷೆಯು ಆಗಸ್ಟ್ 30 ರಂದು ನಡೆಯಲಿದೆ.

  • ಚಿತ್ರದುರ್ಗದಲ್ಲಿ ನಡೆಯಬೇಕಿದ್ದ ಟಿಇಟಿ ಪರೀಕ್ಷೆ ಮಾ. 29ಕ್ಕೆ ಮುಂದೂಡಿಕೆ

    ಚಿತ್ರದುರ್ಗದಲ್ಲಿ ನಡೆಯಬೇಕಿದ್ದ ಟಿಇಟಿ ಪರೀಕ್ಷೆ ಮಾ. 29ಕ್ಕೆ ಮುಂದೂಡಿಕೆ

    ಚಿತ್ರದುರ್ಗ: ಮಾರ್ಚ್ 15ಕ್ಕೆ ನಡೆಯಬೇಕಿದ್ದ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯು(ಟಿಇಟಿ) ಮಾರ್ಚ್ 29ರಂದು ನಡೆಯಲಿದ್ದು, ಚಿತ್ರದುರ್ಗ ಜಿಲ್ಲೆಯಲ್ಲಿ ಯಾವುದೇ ಲೋಪದೋಷಗಳಿಲ್ಲದಂತೆ ವ್ಯವಸ್ಥಿತವಾಗಿ ಪರೀಕ್ಷೆ ನಡೆಸಬೇಕು ಎಂದು ಜಿಲ್ಲಾಧಿಕಾರಿ ಆರ್. ವಿನೋತ್ ಪ್ರಿಯಾ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

    ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇಂದು ಆಯೋಜಿಸಿದ್ದ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಡಿಸಿ ಅವರು ಮಾತನಾಡಿದರು. ಈ ವೇಳೆ ಮಾರ್ಚ್ 15ರಂದು ನಡೆಯಬೇಕಿದ್ದ ಟಿಇಟಿ ಪರೀಕ್ಷೆ ಅನಿವಾರ್ಯ ಕಾರಣದಿಂದಾಗಿ ಮಾರ್ಚ್ 29ಕ್ಕೆ ಮುಂದೂಡಲಾಗಿದೆ. 1 ರಿಂದ 5ನೇ ತರಗತಿ ಬೋಧಿಸುವ ಶಿಕ್ಷಕರಿಗೆ ಮಾರ್ಚ್ 29ರ ಬೆಳಿಗ್ಗೆ 9.30ರಿಂದ ಮಧ್ಯಾಹ್ನ 12 ಗಂಟೆಯವರೆಗೆ ಜಿಲ್ಲೆಯ 11 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಒಟ್ಟು 2,513 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗುತ್ತಾರೆ ಎಂದು ಡಿಸಿ ಮಾಹಿತಿ ನೀಡಿದರು.

    6 ರಿಂದ 8ನೇ ತರಗತಿ ಬೋಧಿಸುವ ಶಿಕ್ಷಕರಿಗೆ ಮಧ್ಯಾಹ್ನ 2ರಿಂದ ಸಂಜೆ 4.30 ಗಂಟೆಯವರೆಗೆ 34 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಒಟ್ಟು 7,022 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷೆ ಆರಂಭವಾಗುವ ಅರ್ಧ ಗಂಟೆ ಮುಂಚಿತವಾಗಿ ಅಭ್ಯರ್ಥಿಗಳಿಗೆ ಪರೀಕ್ಷಾ ಕೇಂದ್ರಕ್ಕೆ ಪ್ರವೇಶವಕಾಶ ಕಲ್ಪಿಸಬೇಕು ಎಂದರು.

    ಪರೀಕ್ಷಾ ಕೇಂದ್ರಗಳಲ್ಲಿ ಸಮರ್ಪಕ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ, ಶೌಚಾಲಯ ವ್ಯವಸ್ಥೆ ಸೇರಿದಂತೆ ಇತರೆ ಮೂಲಭೂತ ಸೌಕರ್ಯ ಒದಗಿಸಬೇಕು. ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರು ಪರೀಕ್ಷೆಯನ್ನು ಯಾವುದೇ ಲೋಪವಿಲ್ಲದಂತೆ ಪಾರದರ್ಶಕವಾಗಿ ನಡೆಸಬೇಕು. ಸ್ಥಾನಿಕ ಜಾಗೃತದಳದ ಅಧಿಕಾರಿಗಳು ಪರೀಕ್ಷಾ ಕೇಂದ್ರಗಳಿಗೆ 1 ಗಂಟೆ ಮುಂಚಿತವಾಗಿ ಹಾಜರಿರಬೇಕು. ಪರೀಕ್ಷಾ ಕೇಂದ್ರಕ್ಕೆ ಅಭ್ಯರ್ಥಿ ಹೊರತುಪಡಿಸಿ ಸಾರ್ವಜನಿಕರಿಗೆ ಪ್ರವೇಶ ನೀಡಬಾರದು. ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡುವ ಮೂಲಕ ಪರೀಕ್ಷಾ ಸಮಯದಲ್ಲಿ ಜೆರಾಕ್ಸ್ ಅಂಗಡಿಗಳನ್ನು ಮುಚ್ಚುವಂತೆ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ಹೇಳಿದರು.

    ಈ ಬಗ್ಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಕೆ. ರವಿಶಂಕರ್ ರೆಡ್ಡಿ ಮಾತನಾಡಿ, ಜಿಲ್ಲಾ ಖಜಾನೆಯಿಂದ ಪ್ರಶ್ನೆ ಪತ್ರಿಕೆಗಳನ್ನು ಪಡೆದು ನಿಗದಿತ ಪರೀಕ್ಷಾ ಕೇಂದ್ರಕ್ಕೆ ತಲುಪಿಸುವಂತೆ, ಪರೀಕ್ಷಾ ನಂತರ ಉತ್ತರ ಪತ್ರಿಕೆ ಹಾಗೂ ಗೌಪ್ಯ ಸಾಮಗ್ರಿಗಳನ್ನು ಮುಖ್ಯ ಅಧೀಕ್ಷಕರಿಂದ ಹಿಂಪಡೆದು ಖಜಾನೆಗೆ ಸಲ್ಲಿಸಲು 11 ಮಾರ್ಗಾಧಿಕಾರಿಗಳನ್ನು ನೇಮಿಸಲಾಗಿದೆ. ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರನ್ನು ಕೇಂದ್ರಕ್ಕೆ ನಿಗದಿಪಡಿಸಿದ ಕೊಠಡಿಗಳ ಸಂಖ್ಯೆಗೆ ಅನುಗುಣವಾಗಿ ಕೊಠಡಿ ಮೇಲ್ವಿಚಾರಕರನ್ನಾಗಿ ಸರ್ಕಾರಿ ಹಾಗೂ ಅನುದಾನಿತ ಶಾಲೆಯ ಶಿಕ್ಷಕರನ್ನು ಮಾತ್ರ ನೇಮಿಸಿಕೊಳ್ಳಬೇಕು. ಕೊಠಡಿ ಮೇಲ್ವಿಚಾರಕರ ಪಟ್ಟಿಯನ್ನು ಉಪನಿರ್ದೇಶಕರಿಂದ ಅನುಮೋದಿಸಿಕೊಳ್ಳುವುದು ಕಡ್ಡಾಯವಾಗಿದೆ ಎಂದರು.

    ಈ ಸಭೆಯಲ್ಲಿ ಚಿತ್ರದುರ್ಗ ಕ್ಷೇತ್ರ ಶಿಕ್ಷಣಾಧಿಕಾರಿ ಸಿದ್ದಪ್ಪ, ಹೊಸದುರ್ಗ ಕ್ಷೇತ್ರ ಶಿಕ್ಷಣಾಧಿಕಾರಿ ಜಯಪ್ಪ, ಇನ್ಸ್‌ಪೆಕ್ಟರ್ ಮೃತ್ಯುಂಜಯ ಸೇರಿದಂತೆ ಪರೀಕ್ಷಾ ಕೇಂದ್ರದ ಮುಖ್ಯಸ್ಥರು, ಶಿಕ್ಷಣ ಇಲಾಖೆಯ ಸಿಬ್ಬಂದಿ ಉಪಸ್ಥಿತರಿದ್ದರು.

  • ನಿಷೇಧಾಜ್ಞೆ ಜಾರಿಯಿಂದಾಗಿ ಪಿಎಸ್‍ಐ ನೇಮಕಾತಿ ಮುಂದೂಡಿಕೆ

    ನಿಷೇಧಾಜ್ಞೆ ಜಾರಿಯಿಂದಾಗಿ ಪಿಎಸ್‍ಐ ನೇಮಕಾತಿ ಮುಂದೂಡಿಕೆ

    ಹುಬ್ಬಳ್ಳಿ: ಪೌರತ್ವ ಕಾಯ್ದೆ ಜಾರಿ ವಿಚಾರವಾಗಿ ರಾಜ್ಯವ್ಯಾಪಿ ಪ್ರತಿಭಟನೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ನಿಷೇಧಾಜ್ಞೆ ಜಾರಿಯಾಗಿದೆ. ಆದ್ದರಿಂದ ಪಿಎಸ್‍ಐ ನೇಮಕಾತಿಯನ್ನು ಮುಂದೂಡಲಾಗಿದೆ ಎಂದು ಪೊಲೀಸ್ ಇಲಾಖೆ ಆದೇಶ ಹೊರಡಿಸಿದೆ.

    ಡಿಸೆಂಬರ್ 20ರಿಂದ 24ರವರೆಗೆ ಪಿಎಸ್‍ಐ ಹುದ್ದೆಗಳಿಗೆ ಸಂಬಂಧಿಸಿದಂತೆ ಅರ್ಹ ಅಭ್ಯರ್ಥಿಗಳ ಸಹಿಷ್ಣುತೆ ಮತ್ತು ದೇಹದಾರ್ಢ್ಯತೆ ಪರೀಕ್ಷೆ ನಡೆಯಬೇಕಾಗಿತ್ತು. ಆದರೆ ನಿಷೇಧಾಜ್ಞೆ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಪ್ರತಿಭಟನೆ ನಡೆಯುತ್ತಿರುವುದರಿಂದ ಪಿಎಸ್‍ಐ ನೇಮಕಾತಿಯನ್ನು ಮುಂದೂಡಲಾಗಿದೆ.

    ಡಿಸೆಂಬರ್ 26ರಿಂದ ಜನವರಿ 17ರವರೆಗೆ ಪಿಎಸ್‍ಐ ನೇಮಕಾತಿ ಪ್ರಕ್ರಿಯೆ ನಡೆಸಲಾಗುವುದೆಂದು ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರ್ ದಿಲೀಪ್ ತಿಳಿಸಿದ್ದಾರೆ.

  • ಪ್ರಶ್ನೆ ಪತ್ರಿಕೆ ಸೋರಿಕೆ – ಭಾನುವಾರದ ಪೊಲೀಸ್ ಪೇದೆ ನೇಮಕಾತಿ ಪರೀಕ್ಷೆ ಮುಂದೂಡಿಕೆ

    ಪ್ರಶ್ನೆ ಪತ್ರಿಕೆ ಸೋರಿಕೆ – ಭಾನುವಾರದ ಪೊಲೀಸ್ ಪೇದೆ ನೇಮಕಾತಿ ಪರೀಕ್ಷೆ ಮುಂದೂಡಿಕೆ

    – 116 ಅಭ್ಯರ್ಥಿಗಳು ವಶಕ್ಕೆ, ಪರೀಕ್ಷೆ ಮುಂದೂಡಿ ಎಡಿಜಿಪಿಯಿಂದ ಆದೇಶ

    ಹಾಸನ: ಪೊಲೀಸ್ ಪೇದೆ ನೇಮಕಾತಿ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ನೀಡುವುದಾಗಿ ಆಮಿಷವೊಡ್ಡಿ ಹಣ ವಸೂಲಿ ಮಾಡುತ್ತಿದ್ದ ಜಾಲವನ್ನು ಜಿಲ್ಲೆಯ ಪೋಲಿಸರು ಭೇದಿಸಿದ್ದಾರೆ.

    ಪೊಲೀಸ್ ಪೇದೆ ನೇಮಕಾತಿ ಪ್ರವೇಶ ಪರೀಕ್ಷೆ ಭಾನುವಾರ ನಿಗದಿಯಾಗಿತ್ತು. ಹೀಗಾಗಿ ಅಭ್ಯರ್ಥಿಗಳನ್ನು ಕುಳ್ಳಿರಿಸಿ ಪ್ರಶ್ನೆ ಪತ್ರಿಕೆ ಹಂಚಲು ಸಿದ್ಧತೆ ನಡೆಸುತ್ತಿದ್ದಾಗ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದಿದ್ದಾರೆ. ಪ್ರಕರಣದ ಕಿಂಗ್‍ಪಿನ್ ಶಿವಕುಮಾರ್ ಸ್ವಾಮಿಯನ್ನು ಬಂಧಿಸಲಾಗಿದೆ.

    ಪ್ರಶ್ನೆ ಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ ನೇಮಕಾತಿ ವಿಭಾಗದ ಎಡಿಜಿಪಿ ಅವರು ಪರೀಕ್ಷೆಯನ್ನು ರದ್ದು ಮಾಡಿ ಆದೇಶ ಹೊರಡಿಸಿದ್ದಾರೆ. ಮುಂದಿನ ದಿನಾಂಕವನ್ನು ತಿಳಿಸಲಾಗುವುದು ಎಂದು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿ ತಿಳಿಸಿದ್ದಾರೆ.

    ಏನಿದು ಪ್ರಕರಣ?:
    ಆರೋಪಿ ಶಿವಕುಮಾರ್ ಸ್ವಾಮಿ ಈ ಹಿಂದೆ ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಸಿಕ್ಕಿ ಬಿದ್ದಿದ್ದ. ಈ ಬೆನ್ನಲ್ಲೇ ಈಗ ಪೊಲೀಸ್ ಪೇದೆ ಪ್ರವೇಶ ಪರೀಕ್ಷೆ ಪ್ರಶ್ನೆ ಪತ್ರಿಕೆ ನೀಡುವುದಾಗಿ ಆಮಿಷವೊಡ್ಡಿ ಹಣ ವಸೂಲಿ ಮಾಡುತ್ತಿದ್ದ. ನಾಳೆ ಪರೀಕ್ಷಾರ್ಥಿಗಳನ್ನು ನೇರವಾಗಿ ಪರೀಕ್ಷಾ ಕೊಠಡಿಗೆ ಕಳುಹಿಸುವ ವ್ಯವಸ್ಥೆ ಮಾಡಿದ್ದ.

    ಪೊಲೀಸ್ ಪೇದೆ ಪರೀಕ್ಷೆಗೆ ಸಂಬಂಧಿಸಿದ ಪ್ರಶ್ನೆ ಪತ್ರಿಕೆ ಈ ಜಾಲದ ಬಗ್ಗೆ ಖಚಿತ ಮಾಹಿತಿ ಸಿಸಿಬಿಗೆ ಸಿಕ್ಕಿತ್ತು. ರಾಜ್ಯದ ವಿವಿಧ ಭಾಗಗಳಿಂದ ವಿಶೇಷವಾಗಿ ಉತ್ತರ ಕರ್ನಾಟಕದಿಂದ ಸುಮಾರು 116 ಅಭ್ಯರ್ಥಿಗಳನ್ನು ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಶನಿವಾರ ಸಂತೆಯ ಕಲ್ಲಮಠದ ಶ್ರೀನಂಜುಂಡೇಶ್ವರ ವಿದ್ಯಾಮಂದಿರ ಕೊಠಡಿಯೊಂದರಲ್ಲಿ ಸೇರಿಸಲಾಗಿತ್ತು. ಅಭ್ಯರ್ಥಿಗಳಿಗೆ ಪ್ರಶ್ನೆಪತ್ರಿಕೆ ಹಾಗೂ ಅವುಗಳಿಗೆ ಉತ್ತರ ನೀಡಲು ಶಿವಕುಮಾರ್, ಬಸವರಾಜು ಒಳ ಸಂಚು ರೂಪಿಸಿದ್ದರು.

    ಆರೋಪಿಗಳಿಗೆ ಬಲೆ ಬಿಸಿದ್ದ ಸಿಸಿಬಿಯ ಹಿರಿಯ ಪೊಲೀಸ್ ಅಧಿಕಾರಿ ಬಿ.ಆರ್.ವೇಣುಗೋಪಾಲ್ ಮತ್ತು ಬಿ.ಬಾಲರಾಜು ರವರ ನೇತೃತ್ವದ 2 ವಿಶೇಷ ತಂಡಗಳನ್ನು ರಚಿಸಿ, ಹಲವು ಸ್ಪಷ್ಟ ಸೂಚನೆಗಳನ್ನು ನೀಡಿದ್ದರು. ಈ ತಂಡವು ಇಂದು ಬೆಳಗ್ಗೆ ದಾಳಿ ನಡೆಸಿದೆ. ಈ ಜಾಲದ ಪ್ರಮುಖ ರುವಾರಿಯಾಗಿದ್ದ ಶಿವಕುಮಾರ್ ನನ್ನು ಪ್ರಶ್ನೆಪತ್ರಿಕೆ ಸಮೇತ ವಶಕ್ಕೆ ತೆಗೆದುಕೊಳ್ಳಲಾಗಿದೆ. ಅಕ್ರಮವಾಗಿ ಗುಂಪು ಸೇರಿಸಿದ್ದ ಸುಮಾರು 116 ಅಭ್ಯರ್ಥಿಗಳು, 7 ಜನ ಚಾಲಕರು, ಕ್ಲೀನರ್ಸ್ ಹಾಗೂ 4 ಮಿನಿ ಬಸ್, 1 ಇನ್ನೋವಾ ಕಾರ್ ವಾಹನಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ.

    ಪ್ರತಿ ಅಭ್ಯರ್ಥಿಯಿಂದ 6 ರಿಂದ 8 ಲಕ್ಷ ರೂ. ಹಣ ಪಡೆಯಲಾಗಿತ್ತು ಎಂದು ತನಿಖೆಯಿಂದ ತಿಳಿದು ಬಂದಿದೆ. ಈ ಕೃತ್ಯವನ್ನು ಎಸಗಲು ಬೇರೆ ಬೇರೆ ಆಸಾಮಿಗಳ ಹೆಸರಿನ ದಾಖಲಾತಿಗಳನ್ನು ಬಳಸಿ, ಮೊಬೈಲ್ ಸಿಮ್ ಕಾರ್ಡ್‍ಗಳನ್ನು ಪಡೆದಿರುವುದಾಗಿಯೂ ಮತ್ತು ಇದಕ್ಕಾಗಿ ಸಾಮಾಜಿಕ ಜಾಲತಾಣದಲ್ಲಿ ನಕಲಿ ಖಾತೆಗಳನ್ನು ಸೃಷ್ಟಿಸಿರುವುದು ತಿಳಿದು ಬಂದಿದೆ. ದಾಳಿ ವೇಳೆ ಬಸವರಾಜು ಎಂಬ ಮತ್ತೋರ್ವ ಆರೋಪಿ ತಲೆಮರೆಸಿಕೊಂಡಿದ್ದು, ಈತನ ಪತ್ತೆ ಕಾರ್ಯ ಮುಂದುವರಿದಿರುತ್ತದೆ. ಈ ಸಂಬಂಧ ಬೆಂಗಳೂರು ನಗರ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಐಪಿಸಿ ಮತ್ತು ಐಟಿ ಕಾಯ್ದೆ ಅಡಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ಕೆಜಿಎಫ್ ಡಿಸೆಂಬರ್ 21ಕ್ಕೆ ರಿಲೀಸ್: ಬಿಡುಗಡೆ ತಡವಾಗೋದಕ್ಕೆ ಕಾರಣ ಕೊಟ್ಟ ಚಿತ್ರತಂಡ

    ಕೆಜಿಎಫ್ ಡಿಸೆಂಬರ್ 21ಕ್ಕೆ ರಿಲೀಸ್: ಬಿಡುಗಡೆ ತಡವಾಗೋದಕ್ಕೆ ಕಾರಣ ಕೊಟ್ಟ ಚಿತ್ರತಂಡ

    ಬೆಂಗಳೂರು: ಯಶ್ ಅಭಿನಯದ ಕೆಜಿಎಫ್ ಚಿತ್ರದ ಬಿಡುಗಡೆಯ ದಿನಾಂಕ ಒಂದು ತಿಂಗಳು ಮುಂದಕ್ಕೆ ಹೋಗಿದ್ದು, ನವೆಂಬರ್ 16 ರಂದು ಬಿಡುಗಡೆಯಾಗಬೇಕಿದ್ದ ಚಿತ್ರ ಡಿಸೆಂಬರ್ 21 ರಂದು ಬಿಡುಗಡೆಯಾಗಲಿದೆ.

    ಪತ್ರಿಕಾಗೋಷ್ಠಿ ನಡೆಸಿದ ನಿರ್ದೇಶಕ ಪ್ರಶಾಂತ್ ನೀಲ್, ಡಿಸೆಂಬರ್ ತಿಂಗಳು ಯಶ್ ಅವರಿಗೆ ಲಕ್ಕಿ ತಿಂಗಳಾದ್ದರಿಂದ ಕೆಜಿಎಫ್ ಆ ತಿಂಗಳಿನಲ್ಲಿ ತೆರೆಕಾಣಲು ಸಿದ್ಧವಾಗಿದೆ. ಸಿನಿಮಾ ರಿಲೀಸ್ ಮುಂದೂಡಿಕೆ ಮಾತ್ರವಲ್ಲದೇ ಅಕ್ಟೋಬರ್ ನಲ್ಲಿ ಬಿಡುಗಡೆಯಾಗಬೇಕಿದ್ದ ಚಿತ್ರದ ಟ್ರೇಲರ್ ಬಿಡುಗಡೆಯ ದಿನಾಂಕವನ್ನು ನವೆಂಬರ್ ಗೆ ಮುಂದೂಡಲಾಗಿದೆ ಎಂದು ತಿಳಿಸಿದರು.

    ಪಂಚ ಭಾಷೆಯಲ್ಲಿ ತೆರೆಕಾಣುವ ಕೆಜಿಎಫ್ ಚಿತ್ರದ ಶೂಟಿಂಗ್ ಮೈಸೂರು, ಕೋಲಾರ, ಮುಂಬೈ, ಚೆನ್ನೈ, ಉತ್ತರ ಕರ್ನಾಟಕ ಸೇರಿದಂತೆ ಹಲವು ಭಾಗಗಳಲ್ಲಿ ನಡೆಸಲಾಗಿದೆ. ಈ ಚಿತ್ರದ ವಿತರಣಾ ಹಕ್ಕನ್ನು ಅನಿಲ್ ತಡಾನಿ, ರಿತೇಶ್ ಸಿದ್ವಾನಿ, ಫರ್ಹಾನ್ ಅಕ್ತರ್ ತೆಗೆದುಕೊಂಡಿದ್ದು ದೇಶಾದ್ಯಂತ ಅದ್ಧೂರಿಯಾಗಿ ರಿಲೀಸ್ ಮಾಡಲು ತಯಾರಿ ನಡೆಸಿದ್ದು, ನಾವು ಅಂದುಕೊಂಡದಕ್ಕಿಂತ ದೊಡ್ಡ ಮಟ್ಟದಲ್ಲಿ ರಿಲೀಸ್ ಆಗಲಿದೆ ಎಂದರು. ಕನ್ನಡ, ತೆಲುಗು, ಮತ್ತು ತಮಿಳಿನಲ್ಲಿ ಡಬ್ಬಿಂಗ್ ಮುಗಿದಿದ್ದು, ಸದ್ಯ ಹಿಂದಿ ಡಬ್ಬಿಂಗ್ ನಡೆಯುತ್ತಿದೆ ಎಂದು ತಿಳಿಸಿದರು.

    ಬಾಹುಬಲಿ ಎಂಬ ಕಾನ್ಸೆಪ್ಟ್ ಮಾಡಿ, ಎಲ್ಲಾ ಭಾಷೆಗೂ ಇದು ಅನ್ವಯವಾಗುತ್ತೆ ಅಂತ ಹೇಳಿಕೊಟ್ಟ ರಾಜಮೌಳಿ ಅವರ ಹಾದಿಯನ್ನ ನಾವು ಅನುಕರಿಸುತ್ತಿದ್ದೇವೆ. ಕೆಜಿಎಫ್ ಸಿನಿಮಾ ಕೂಡ ಯೂನಿವರ್ಸಲ್ ಕಾನ್ಸೆಪ್ಟ್. ಆದ್ದರಿಂದ ಎಲ್ಲಾ ಭಾಷೆಯಲ್ಲಿ ಬಿಡುಗಡೆ ಮಾಡೋದಕ್ಕೆ ಜಗತ್ತಿನಾದ್ಯಂತ ತೆರೆಗೆ ತರೋದಕ್ಕೆ ಪ್ಲ್ಯಾನ್ ಮಾಡಿದ್ದೇವೆ ಎಂದರು.

    ಚಿತ್ರದ ಕಥೆಯ ಬಗ್ಗೆ ವಿವರಿಸಿದ ನಟ ಯಶ್ ಅವರು, ಕೆಜಿಎಫ್ ಕಥೆ ಯೂನಿವರ್ಸಲ್ ಕಾನ್ಸೆಪ್ಟ್ ಆಗಿದ್ದು, ತಾಯಿ-ಮಗನ ಸೆಂಟಿಮೆಂಟ್ ಇಲ್ಲಿದೆ. ಸಿನಿಮಾದಲ್ಲಿ ಬಹುತೇಕ ಕಲಾವಿದರೆಲ್ಲರೂ ಹೊಸಬರೇ ಆಗಿದ್ದು, ಸಿನಿಮಾದ ಪ್ರತಿಯೊಂದು ಪಾತ್ರಕ್ಕೂ ಮಹತ್ವವಿದೆ. ಇಲ್ಲಿ ನಾನು ಮಾತ್ರ ಹೈಲೆಟ್ ಆಗಿಲ್ಲ, ಪ್ರತಿಯೊಂದು ಪಾತ್ರಕ್ಕೂ ಅದರದ್ದೇ ಆದ ಮಹತ್ವವಿದೆ ಎಂದು ಹೇಳಿದರು.

    ಅಮಿತಾಬ್ ಬಚ್ಚನ್ ಸಿನಿಮಾ ನೋಡಿಕೊಂಡು ಬೆಳೆದ ನನಗೆ, 80 ರ ದಶಕದ ಸ್ಟೈಲ್‍ನಲ್ಲಿ ಸಿನಿಮಾಗಳನ್ನ ಮಾಡಬೇಕು ಅನ್ನೋ ಆಸೆ ಇತ್ತು. ಆ ಮಹಾಬಯಕೆ ಕೆಜಿಎಫ್ ಮೂಲಕ ನೆರವೇರಿದೆ ಎಂದು ಪ್ರಶಾಂತ್ ನೀಲ್ ಹೇಳಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv