Tag: poultry farm

  • ಮಂಡ್ಯದಲ್ಲಿ ಸ್ಟಾರ್ ಗ್ರೂಪ್ಸ್ ಮಾಲೀಕರಿಗೆ ಬೆಳ್ಳಂಬೆಳಗ್ಗೆ ಐಟಿ ಶಾಕ್

    ಮಂಡ್ಯದಲ್ಲಿ ಸ್ಟಾರ್ ಗ್ರೂಪ್ಸ್ ಮಾಲೀಕರಿಗೆ ಬೆಳ್ಳಂಬೆಳಗ್ಗೆ ಐಟಿ ಶಾಕ್

    ಮಂಡ್ಯ: ಸಕ್ಕರೆ ನಾಡಿನಲ್ಲಿ ಬೆಳಗಿನ ಜಾವ 4 ಗಂಟೆಗೆ ಸ್ಟಾರ್ ಗ್ರೂಪ್ಸ್ ಮಾಲೀಕ ಮತ್ತು ಅವರ ಸಹೋದರರ ಮನೆ ಹಾಗೂ ಕಚೇರಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

    ಉದ್ಯಮಿ ಅಮಿರುಲ್ ಮುರ್ತುಜಾ ಸೇರಿದಂತೆ ಅಮ್ಜಾ, ಶಹಬಾಜ್, ಶಿರೋಜ್ ನಿವಾಸಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅಮಿರುಲ್ ಅವರ ಸಹೋದರರು ನಾಗಮಂಗಲದ ಪ್ರಖ್ಯಾತ ಉದ್ಯಮಿಗಳಾಗಿದ್ದಾರೆ. ಸ್ಟಾರ್ ಗ್ರೂಪ್ಸ್ ಹೆಸರಿನಲ್ಲಿ ಪೌಲ್ಟ್ರಿ ಫಾರ್‍ಂ, ಹೋಟೆಲ್, ಪೆಟ್ರೋಲ್ ಉದ್ಯಮ ಸೇರಿದಂತೆ ಹಲವಾರು ಉದ್ಯಮ ನಡೆಸುತ್ತಿದ್ದಾರೆ. ಇದನ್ನೂ ಓದಿ: ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಗೆಲುವು ಸಾಧಿಸಿದ ತೃತೀಯಲಿಂಗಿ

    ನಸುಕಿನ 4 ಗಂಟೆಗೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ವೇಳೆ 10ಕ್ಕೂ ಹೆಚ್ಚು ಕಾರುಗಳಲ್ಲಿ ಬಂದ ಅಧಿಕಾರಿಗಳಿಂದ ದಾಳಿ ನಡೆಸಲಾಗಿದೆ. ಅಧಿಕಾರಿಗಳು 10ಕ್ಕೂ ಹೆಚ್ಚು ಮನೆ ಮತ್ತು ಕಚೇರಿಗಳ ಮೇಲೆ ದಾಳಿ ನಡೆಸಿ, ಆಸ್ತಿ-ಪಾಸ್ತಿ, ಕಡತ, ಹಣ, ಚಿನ್ನಾಭರಣಗಳನ್ನು ಪರಿಶೀಲನೆ ಮಾಡಿದ್ದಾರೆ. ಇದನ್ನೂ ಓದಿ: ಮೆಲಾನಿಯಾ ಟ್ರಂಪ್, ಕೇಜ್ರಿವಾಲ್ ಶಾಲೆಯನ್ನು ಮಾತ್ರ ನೋಡಬೇಕೆಂದಿದ್ದರು: ದೆಹಲಿ ಸಿಎಂ

  • ನೊಣಗಳ ಹಾವಳಿಗೆ ಜನ ಸುಸ್ತೋ ಸುಸ್ತು – ನೊಣಕ್ಕಂಜಿ ಊರು ತೊರೆಯಲಾರಂಭಿಸಿದ ಸಾರ್ವಜನಿಕರು

    ನೊಣಗಳ ಹಾವಳಿಗೆ ಜನ ಸುಸ್ತೋ ಸುಸ್ತು – ನೊಣಕ್ಕಂಜಿ ಊರು ತೊರೆಯಲಾರಂಭಿಸಿದ ಸಾರ್ವಜನಿಕರು

    ಗದಗ: ತಾಲೂಕಿನ ಹರ್ತಿ ಗ್ರಾಮದ ಜನರ ಜೀವನ ದುಸ್ತರವಾಗಿದೆ. ಗ್ರಾಮೀಣ ಭಾಷೆಐಲ್ಲಿ ಹೇಳುವುದಾದರೆ, ದಂಡಿನ ಗುಂಡಿಗೆ ಹೆದರಲಿಲ್ಲಾ, ದಾಳಿಗೆ ಹೆದರಲಿಲ್ಲಾ, ಆದರೆ ನೊಣಗಳ ಹಿಂಡಿಗೆ ಹೆದರುವಂತಾಗಿದೆ.

    ಈ ಗ್ರಾಮದ ಜನ ಏನು ತಪ್ಪು ಮಾಡಿರುವರೋ ಗೊತ್ತಿಲ್ಲ. ಈ ಹಳ್ಳಿಗೆ ವೈರಿಗಳ ದಂಡೊಂದು ಲಗ್ಗೆ ಇಟ್ಟು ನಿತ್ಯ ಕಾಟ ಕೊಡುತ್ತಿವೆ. ಆ ವೈರಿಗಳ ಕಾಟಕ್ಕೆ ಇಲ್ಲಿನ ಜನ ನಿತ್ಯ ನರಕಯಾತನೆ ಅನುಭವಿಸುತ್ತಿದ್ದಾರೆ. ಮನೆ ಒಳಗೆ, ಹೊರಗೆ ಎಲ್ಲಿ ಕೂತರು ಸಮಾಧಾನವೇ ಇಲ್ಲದಂತಾಗಿದೆ. ಊಟ, ನಿದ್ರೆ, ವಿಶ್ರಾಂತಿಗೂ ಬಿಡಲ್ಲಾ. ವೈರಿಗಳ ಆಟೋಟಪಕ್ಕೆ ಊರಿನ ಜನ ಬೇಸತ್ತು ಹೋಗಿದ್ದಾರೆ.

    ಹರ್ತಿ ಗ್ರಾಮದ ಜನರ ಪರಸ್ಥಿತಿ ನಾಲ್ಕೈದು ತಿಂಗಳು ಹೇಳ ತೀರದಾಗಿದೆ. ಕಾರಣ ಊರ ಪಕ್ಕದ ಕೋಳಿ ಫಾರ್ಮ್ ನಿಂದ ಲಗ್ಗೆ ಇಟ್ಟ ಈಗಗಳ ದಂಡುಪಾಳ್ಯ, ಈ ಜನರ ನೆಮ್ಮದಿ ಹಾಳು ಮಾಡಿದೆ. ಒಂದಡೆ ಕೊರೊನಾ ಹಾವಳಿ, ಮತ್ತೊಂದಡೆ ನೊಣಗಳ ಹಾವಳಿಯಿಂದ ಅನಾರೋಗ್ಯಕ್ಕೆ ಒಳಗಾಗಿ ಜೀವನದಲ್ಲಿ ಜಿಗುಪ್ಸೆಗೊಂಡಿದ್ದಾರೆ. ಮಾವು, ಬೇವು ಹಣ್ಣಿನ ಸೀಜನ್‍ನಲ್ಲಿ ನೊಣಗಳು ಹೆಚ್ಚು ಇರುತ್ತವೆ. ಆದರೆ ಮಳೆಗಾಲದಲ್ಲೂ ಎಲ್ಲಿ ಕುಂತರೂ ಸಮಾಧಾನ ಆಗುವುದಿಲ್ಲ. ಅಡಿಗೆ ಮಾಡಿ ಊಟ ಮಾಡಲಿಕ್ಕೂ ಆಗುತ್ತಿಲ್ಲಾ, ನೀರು ಕುಡಿಯಲು ಆಗುತ್ತಿಲ್ಲ. ಅಂಗಡಿ, ಹೋಟೆಲ್ ನವರ ಪರಸ್ಥಿತಿ ನೋಣ ಹೊಡೆಯುವುದೇ ಕಾಯಕವಾಗಿದೆ.

    ಮಕ್ಕಳು, ವೃದ್ಧರ ಪರಸ್ಥಿತಿ ಕೇಳತೀರದು. ಜಾನುವಾರುಗಳ ಮೇಲು ಜೇನು ಹುಳುವಿನಂತೆ ಕೂಡಿರುತ್ತವೆ. ಇದರಿಂದ ಗ್ರಾಮದಲ್ಲಿ ಅನೇಕರು ವಾಂತಿ, ಬೇಧಿ, ಜ್ವರ ಹೀಗೆ ಅನಾರೋಗ್ಯಕ್ಕೆ ತುತ್ತಾಗುತ್ತಿದ್ದಾರೆ. ಬೇಸಿಗೆಯಲ್ಲಿ ಗಾಳಿ ಬೀಸಿಕೊಂಡಂತೆ ಮಳೆಗಾಲದಲ್ಲೂ ನೊಣಗಳ ಕಾಟಕ್ಕೆ ಗಾಳಿ ಬೀಸಿಕೊಳ್ಳಬೇಕಾದ ಪರಿಸ್ಥಿತಿ ಇವರದ್ದಾಗಿದೆ. ಕೊರೊನಾ ಸಂದರ್ಭದಲ್ಲಿ ಮಕ್ಕಳನ್ನು ಕಟ್ಟಿಕೊಂಡು ವಾಸಿಸದೇ ಊರು ತೊರೆಯುವ ಸಂದರ್ಭ ಬಂದಿದೆ. ಅಧಿಕಾರಿಗಳು ಇತ್ತಕಡೆ ಗಮನ ಹರಿಸಿ, ಕೋಳಿ ಫಾರ್ಮ್‍ಗಳನ್ನು ಬಂದ್ ಮಾಡಿ, ಜನರ ಆರೋಗ್ಯದ ಮೇಲೆ ಬೀರುವ ದುಷ್ಪರಿಣಾಮ ಹಾಗೂ ತೊಂದರೆಗಳನ್ನು ತಪ್ಪಿಸಬೇಕು ಎಂದು ಸ್ಥಳೀಯರು ಹೇಳುತ್ತಿದ್ದಾರೆ.

    ಈ ಕೋಳಿ ಫಾರ್ಮ್ ಆಗಿ ನಾಲ್ಕೈದು ವರ್ಷಗಳಿಂದ ಆಗಾಗ ಇದೇ ಸಮಸ್ಯೆ ಎದುರಿಸುತ್ತಿದೆ. ಆದರೆ ಇತ್ತೀಚಿಗೆ ನೊಣಗಳ ಹಾವಳಿ ತುಂಬಾನೆ ಆಗಿದ್ದು, ನೊಣಗಳ ಕಾಟಕ್ಕೆ ಜನ ಸುಸ್ತಾಗಿದ್ದಾರೆ. ಊರಾಚೆಯ ಆಂಧ್ರ ಪ್ರದೇಶ ಮೂಲದ ಪ್ರಭಾವಿ ಗುತ್ತಿಗೆದಾರ ಸುಬ್ಬಾರೆಡ್ಡಿ ಸಂಬಂಧಿಗಳ ಈ ಕೋಳಿ ಫಾರ್ಮ್ ನಲ್ಲಿ ಸ್ವಚ್ಛತೆ, ಔಷಧ ಸಿಂಪಡಣೆ, ತ್ಯಾಜ್ಯ ವಿಲೇವಾರಿ ಸರಿಯಾದ ನಿರ್ವಹಣೆ ಇಲ್ಲದ ಕಾರಣ ನೊಣಗಳು ಹೆಚ್ಚಾಗಿ ಹರ್ತಿ ಜನರನ್ನು ಕಾಡತೊಡಗಿವೆ. ಸತ್ತ ಕೋಳಿಗಳನ್ನು ಎಲ್ಲೆಂದರಲ್ಲಿ ಬಿಸಾಡುತ್ತಾರೆ ಎಂಬ ಆರೋಪಿಸಿದ್ದಾರೆ.

    ಇತ್ತೀಚಿಗೆ ಅತೀ ಹೆಚ್ಚು ನೊಣಗಳು ಉದ್ಭವಿಸಿ ಜನರ ನಿದ್ದೆಗೆಡಿಸಿದೆ. ಪಿಡಿಓ, ಅಧ್ಯಕ್ಷರು, ಆರೋಗ್ಯ ಇಲಾಖೆ, ಕಂದಾಯ ಇಲಾಖೆ ಎಲ್ಲರಿಗೂ ಹೇಳಿದರೂ ನೊಣಗಳು ಕಡಿಮೆ ಆಗುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಇದು ಪ್ರಭಾವಿಯೊಬ್ಬರ ಫಾರ್ಮ್ ಆಗಿದ್ದರಿಂದ ಯಾರು ಇವರ ಗೋಜಿಗೆ ಹೊಗುತ್ತಿಲ್ಲ. ಗ್ರಾಮ ಪಂಚಾಯತ ನಿಂದ ಕೋಳಿ ಫಾರ್ಮ್‍ಗೆ ಕೇವಲ ಸೂಚನೆ ನೀಡ್ತಾರೆ, ಆದ್ರೆ ಯಾವುದೆ ಕ್ರಮ ಕೈಗೊಂಡಿಲ್ಲ ಎಂಬ ಆರೋಪ ಕೇಳಿಬರುತ್ತಿದೆ. ಜನ್ರಿಗೆ ಮಾರಕವಾಗುವ ಈ ಕೋಳಿ ಫಾರ್ಮ್‍ಗಳನ್ನ ಬಂದ್ ಮಾಡಬೇಕು. ಕೊರೊನಾ ಸಂದರ್ಭದಲ್ಲಿ ಜನ-ಜಾನುವಾರಗಳ ಆರೋಗ್ಯದ ಬಗ್ಗೆ ಕಾಳಜಿ ವಹಿಸಲಿ ಎಂಬುದು ಎಲ್ಲರ ಬೇಡಿಕೆಯಾಗಿದೆ. ಇದನ್ನೂ ಓದಿ: ಸಿಎಂ ಖುರ್ಚಿಗಾಗಿ ಸಿದ್ದರಾಮಯ್ಯ, ಡಿಕೆಶಿ ಮಧ್ಯೆ ಈಗಲೇ ಕುಸ್ತಿ ಶುರುವಾಗಿದೆ: ಕಾರಜೋಳ

  • ರಾಜಕೀಯ ದ್ವೇಷ – ಶಾಸಕರ ಸೂಚನೆಯಂತೆ ಕೋಳಿ ಫಾರಂ ನೆಲಸಮ

    ರಾಜಕೀಯ ದ್ವೇಷ – ಶಾಸಕರ ಸೂಚನೆಯಂತೆ ಕೋಳಿ ಫಾರಂ ನೆಲಸಮ

    – ದೇವರ ಬಳಿ ಪ್ರಮಾಣ ಮಾಡಲು ಕೈ ಮುಖಂಡರ ಪಟ್ಟು
    – ಎಸ್‍ವಿ ರಾಮಚಂದ್ರಪ್ಪ ಸೂಚನೆಯಂತೆ ನೆಲಸಮ

    ದಾವಣಗೆರೆ: ರಾಜಕೀಯ ದುರುದ್ದೇಶದಿಂದ ಬಿಜೆಪಿ ಶಾಸಕರೊಬ್ಬರು ಕೋಳಿ ಫಾರಂನನ್ನು ಅಕ್ರಮವಾಗಿ ನೆಲಸಮ ಮಾಡಿಸಿದ್ದಾರೆ ಎಂಬ ಗಂಭೀರ ಆರೋಪ ದಾವಣಗೆರೆಯಲ್ಲಿ ಕೇಳಿ ಬಂದಿದೆ.

    ಜಿಲ್ಲೆಯ ಜಗಳೂರು ತಾಲೂಕಿನ ಹೀರೇ ಅರಕೆರೆ ಗ್ರಾಮದ ನಿವಾಸಿ ಗುರುಸ್ವಾಮಿ ರಸ್ತೆಗೆ ಹಾಗೂ ಬಸ್ ನಿಲ್ದಾಣಕ್ಕೆ ಜಮೀನು ಬಿಟ್ಟುಕೊಟ್ಟಿದ್ದರು. ಹೀಗಾಗಿ ಅಲ್ಲೇ ಪಕ್ಕದಲ್ಲಿ 2015ರಲ್ಲಿ ತಹಶೀಲ್ದಾರ್ ಅವರ ಅನುಮತಿ ಮೇರೆಗೆ ಕೋಳಿ ಫಾರಂ ಶೆಡ್ ನಿರ್ಮಾಣ ಮಾಡಿದ್ದರು. ಆದರೆ ಈಗ ಶಾಸಕ ಎಸ್‍ವಿ ರಾಮಚಂದ್ರಪ್ಪ ರಾಜಕೀಯ ದ್ವೇಷದ ಮೇಲೆ ಈ ಶೆಡ್ ಅನ್ನು ಒಡೆಸಿಹಾಕಿದ್ದಾರೆ ಎಂದು ಗುರುಸ್ವಾಮಿ ಆರೋಪ ಮಾಡಿದ್ದಾರೆ.

    ಈ ಹಿಂದೆ ಗುರುಸ್ವಾಮಿ ಹಾಗೂ ಎಸ್‍ವಿ ರಾಮಚಂದ್ರಪ್ಪ ಇಬ್ಬರು ಕಾಂಗ್ರೆಸ್ ಪಕ್ಷದಲ್ಲಿ ಇದ್ದರು. ಈ ಮಧ್ಯೆ ಕಾಂಗ್ರೆಸ್ ಬಿಟ್ಟು ಬಂದ ರಾಮಚಂದ್ರಪ್ಪ ಬಿಜೆಪಿಯಿಂದ ಎಂಎಲ್‍ಎ ಚುನಾವಣೆಯಲ್ಲಿ ಸ್ಪರ್ಧೆ ಮಾಡಿ ಗೆದ್ದು ಶಾಸಕರಾದರು. ಇದಾದ ನಂತರ ರಾಮಚಂದ್ರಪ್ಪ ಗುರುಸ್ವಾಮಿಯನ್ನು ನಮ್ಮ ಪಕ್ಷಕ್ಕೆ ಬಾ ಎಂದು ಹೇಳುತ್ತಿದ್ದರಂತೆ. ಇದಕ್ಕೆ ಗುರುಸ್ವಾಮಿ ನಾನು ಬರುವುದಿಲ್ಲ ಎಂದು ಹೇಳಿದ್ದಾರೆ. ಪಕ್ಷ ಸೇರದಿದ್ದಕ್ಕೆ ಕೋಪಗೊಂಡ ಶಾಸಕ ಈ ರೀತಿ ಮಾಡಿದ್ದಾರೆ ಎಂದು ಗುರುಸ್ವಾಮಿ ದೂರಿದ್ದಾರೆ.

    ನೋಟಿಸ್ ಕೂಡ ನೀಡದೇ, ಏಕಾಏಕಿ ಜೆಸಿಬಿಯಿಂದ ಶೆಡ್ ಅನ್ನು ತಹಶೀಲ್ದಾರ್ ತಿಮ್ಮಪ್ಪ ನೆಲಸಮ ಮಾಡಿದ್ದಾರೆ. ಈ ವೇಳೆ ಶೆಡ್ ಒಳಗೆ ಇದ್ದ ಮನೆಯ ಸಾಮಗ್ರಿಗಳನ್ನು ತೆಗೆದುಕೊಳ್ಳುತ್ತೇವೆ ಎಂದರೂ ಬಿಡದೇ ಶಾಸಕರಿಂದ ಕರೆ ಮಾಡಿಸಿ ನಾವು ಹಾಗೇ ಬಿಟ್ಟು ಹೋಗುತ್ತೇವೆ ಎಂದು ತಹಶೀಲ್ದಾರ್ ತಿಮ್ಮಪ್ಪ ಹೇಳಿದರು ಎಂದು ಗುರುಸ್ವಾಮಿ ತಮ್ಮ ನೋವನ್ನು ಹೇಳಿಕೊಂಡಿದ್ದಾರೆ.

    ರಾಜಕೀಯ ದ್ವೇಶದಿಂದಲೇ ಈ ರೀತಿ ಮಾಡಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಮುಖಂಡರು ಶಾಸಕ ರಾಮಚಂದ್ರಪ್ಪ ವಿರುದ್ಧ ತಿರುಗಿ ಬಿದ್ದಿದ್ದಾರೆ. ಜೊತೆಗೆ ಈ ಕೃತ್ಯದಲ್ಲಿ ಶಾಸಕರ ಪಾತ್ರವಿಲ್ಲದಿದ್ದರೆ ಮಾಯಮ್ಮ ದೇವಸ್ಥಾನಕ್ಕೆ ಬಂದು ಪ್ರಮಾಣ ಮಾಡಲಿ ಎಂದು ಸವಾಲ್ ಹಾಕಿದ್ದಾರೆ ಹಾಗೂ ಮಂಗಳವಾರ ಮಾಯಮ್ಮ ದೇವಿ ದೇವಸ್ಥಾನಕ್ಕೆ ಬಂದು ಪ್ರಮಾಣ ಮಾಡುವಂತೆ ಕಾಂಗ್ರೆಸ್ ನಾಯಕರು ಪಟ್ಟು ಹಿಡಿದಿದ್ದಾರೆ.

  • ಜನತಾ ಕರ್ಫ್ಯೂ ನಡುವೆ 100 ರೂ.ಗೊಂದು ಕೋಳಿ- ಫಾರ್ಮ್‍ಗೆ ನುಗ್ಗಿ ಕೋಳಿ ಖರೀದಿ

    ಜನತಾ ಕರ್ಫ್ಯೂ ನಡುವೆ 100 ರೂ.ಗೊಂದು ಕೋಳಿ- ಫಾರ್ಮ್‍ಗೆ ನುಗ್ಗಿ ಕೋಳಿ ಖರೀದಿ

    -ಪೊಲೀಸರನ್ನು ಕಂಡು ಜನರು ಪರಾರಿ

    ಚಿಕ್ಕಬಳ್ಳಾಪುರ: ಪ್ರಧಾನಿ ನರೇಂದ್ರ ಮೋದಿ ಮನವಿಯ ಜನತಾ ಕರ್ಫ್ಯೂವನ್ನೇ ಬಂಡವಾಳ ಮಾಡಿಕೊಂಡ ಕೋಳಿ ಫಾರಂ ಮಾಲೀಕನೊಬ್ಬ ಇತ್ತೀಚೆಗೆ ಕೊರೊನಾದಿಂದ ಬಿಕರಿಯಾಗದೆ ಉಳಿದ ಕೋಳಿಗಳ ಮಾರಾಟಕ್ಕೆ ಮುಂದಾಗಿದ್ದಾನೆ.

    ಒಂದು ಕೋಳಿಗೆ 100 ರೂ.ಯಂತೆ ಮಾರಾಟ ಮಾಡಿದ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ನಕ್ಕಲ ಬಚ್ಚಹಳ್ಳಿ ಬಳಿ ನಡೆಯಿತು. ಕೊರೊನಾದಿಂದಾಗಿ ಇತ್ತೀಚೆಗೆ ಬಾಯಲರ್ ಕೋಳಿಗಳನ್ನು ಯಾರೂ ಕೊಳ್ಳದೇ ನೂರಾರು ಕೋಳಿ ಫಾರ್ಮ್‍ಗಳಲ್ಲೇ ಕೋಳಿಗಳು ನರಳುವಂತಾಗಿತ್ತು. ಇದರಿಂದ ಬೇಸತ್ತ ಕೋಳಿ ಫಾರ್ಮ್ ಮಾಲೀಕರು 100 ರೂ.ಗೊಂದು ಕೋಳಿ ಎಂದು ಘೋಷಣೆ ಮಾಡಿದ್ದಾನೆ.

    ಮಾಲೀಕ ಘೋಷಣೆ ಮಾಡಿದ್ದೇ ತಡ ಜನ ಮರಳೋ ಜಾತ್ರೆ ಮರಳೋ ಎನ್ನುವ ಲೆಕ್ಕದಲ್ಲಿ ಕೋಳಿ ಫಾರ್ಮ್‍ಗೆ ನುಗ್ಗಿದ ಜನ 100ರೂ.ಗೊಂದರಂತೆ ತಮಗೆ ಬೇಕಾದಷ್ಟು ಕೋಳಿಗಳನ್ನ ಬಾಚಿಕೊಂಡು ಹೋದರು. ಆದರೆ ಚಿಕ್ಕಬಳ್ಳಾಪುರ ಜಿಲ್ಲೆಯಾದ್ಯಾಂತ 144 ಸೆಕ್ಷೆನ್ ಜಾರಿ ಮಾಡಲಾಗಿದ್ದು ಹಾಗೂ ಜನತಾ ಕರ್ಫ್ಯೂ ನಡುವೆ ಜನ ಜಮಾಯಿಸಿದ್ದರು.

    ಇದನ್ನು ತಿಳಿದ ನಂದಿಗಿರಿಧಾಮದ ಪೊಲೀಸರು ಕೋಳಿ ಫಾರ್ಮ್ ಬಳಿ ಬಂದು ಜಮಾಯಿಸಿದ್ದ ಜನರನ್ನು ಚದರಿಸಿದರು. ಕೋಳಿ ಫಾರ್ಮ್ ಮಾಲೀಕರಿಗೆ ಕೋಳಿ ಮಾರಾಟ ಮಾಡದಂತೆ ಎಚ್ಚರಿಸಿದರು. ಇದರಿಂದ ಪೊಲೀಸರನ್ನು ಕಂಡ ಜನ ಎದ್ನೋಬಿದ್ನೋ ಎಂದು ಬೈಕ್ ಏರಿ ಪರಾರಿಯಾದರು.

  • ಮಕ್ಕಳಂತೆ ಸಾಕಿದ್ದೇನೆ – ಕೋಳಿಗಳಿಗಾಗಿ ಗೋಳಾಡಿದ ವೃದ್ಧೆ

    ಮಕ್ಕಳಂತೆ ಸಾಕಿದ್ದೇನೆ – ಕೋಳಿಗಳಿಗಾಗಿ ಗೋಳಾಡಿದ ವೃದ್ಧೆ

    – ದಮ್ಮಯ್ಯ ಎನ್ನುತ್ತೇನೆ ಕೋಳಿ ಬಿಡ್ರಪ್ಪ

    ದಾವಣಗೆರೆ: ಮಕ್ಕಳಂತೆ ಸಾಕಿದ್ದೇನೆ. ದಮ್ಮಯ್ಯ ಎನ್ನುತ್ತೇನೆ ಕೋಳಿ ಬಿಡ್ರಪ್ಪ ಎಂದು ವೃದ್ಧೆಯೊಬ್ಬರು ಗೋಳಾಡಿದ ಘಟನೆ ಜಿಲ್ಲೆಯ ಹರಿಹರ ತಾಲೂಕಿನ ಬನ್ನಿಕೋಡು ಗ್ರಾಮದಲ್ಲಿ ನಡೆದಿದೆ.

    ಗ್ರಾಮದ ಪಕ್ಕದಲ್ಲೇ ಇರುವ ಅಭಿಷೇಕ್ ಎನ್ನುವರಿಗೆ ಸೇರಿದ ಕೋಳಿ ಫಾರಂನಲ್ಲಿ ಹಕ್ಕಿರೋಗ ಕಂಡುಬಂದಿದ್ದು, ಅಧಿಕಾರಿಗಳು ಕೂಡ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೆ ಜಿಲ್ಲಾಧಿಕಾರಿಗಳು ಕೂಡ ಫಾರಂನ ಒಂದು ಕಿಲೋಮೀಟರ್ ಸುತ್ತಳತೆಯಲ್ಲಿರುವ ಕೋಳಿಗಳನ್ನು ಹಾಗೂ ಸಾಕು ಪಕ್ಷಿಗಳನ್ನು ನಾಶ ಪಡಿಸಲು ಕಿಲ್ಲಿಂಗ್ ಆರ್ಡರ್ ನೀಡಿದ್ದಾರೆ. ಇಂದು ಬೆಳಗ್ಗೆಯಿಂದಲೇ ಆರೋಗ್ಯ ಇಲಾಖೆ ಹಾಗೂ ಪಶುಸಂಗೋಪನೆ ಇಲಾಖೆ ಅಧಿಕಾರಿಗಳ ನೇತೃತ್ವದಲ್ಲಿ ಬನ್ನಿಕೋಡು ಗ್ರಾಮದಲ್ಲಿರುವ ಕೋಳಿಗಳನ್ನು ನಾಶಮಾಡಲು ರ‍್ಯಾಪಿಡ್ ಟೀಮ್ ರೆಡಿ ಮಾಡಿಕೊಂಡಿದ್ದಾರೆ.

    ಬನ್ನಿಕೋಡು ಗ್ರಾಮದಲ್ಲಿ 1,167 ಸಾಕು ಕೋಳಿಗಳಿದ್ದು,12 ಜನರ ರ‍್ಯಾಪಿಡ್ ರೆಸ್ಪಾನ್ಸ್ ಟೀಂನಿಂದ ಕಿಲ್ಲಿಂಗ್ ಅಪರೇಷನದ ಶುರು ಮಾಡಿದ್ದಾರೆ. ಗ್ರಾಮದಲ್ಲಿ ಇರುವ ಕೋಳಿಗಳನ್ನು ಹಾಗೂ ಸಾಕು ಪಕ್ಷಿಗಳನ್ನು ಹಿಡಿದು ನಾಶ ಮಾಡಿ ಗ್ರಾಮದ ಹೊರ ಭಾಗದಲ್ಲಿರುವ ಗುಂಡಿಯಲ್ಲಿ ಹಾಕಿ ಮುಚ್ಚಲು ಮುಂದಾಗಿದ್ದಾರೆ. ಆದರೆ ಗ್ರಾಮದ ವೃದ್ಧೆ ಸೀತಮ್ಮ ತಮ್ಮ ಕೋಳಿಗಳನ್ನು ಹಿಡಿದುಕೊಂಡು ಹೋಗಬೇಡಿ ಎಂದು ಗೋಳಾಡಿದ್ದಾಳೆ. ಕೋಳಿಗಳನ್ನು ಮಕ್ಕಳಂತೆ ಸಾಕಿದ್ದೇನೆ. ದಮ್ಮಯ್ಯ ಎನ್ನುತ್ತೇನೆ ನನ್ ಕೋಳಿ ಬಿಡ್ರಪ್ಪ. ಕೋಳಿ ಬದಲು ನನ್ನನ್ನು ಸಾಯಿಸಿ ಎಂದು ವೃದ್ಧೆ ಗೋಳಾಡಿದ್ದಾಳೆ.

    ವೃದ್ಧೆ ಸೀತಮ್ಮನ ಬಳಿ 9 ಕೋಳಿಗಳಿದ್ದು, ಆ ಕೋಳಿಗಳಿಂದಲೇ ಜೀವನ ನಡೆಸುತ್ತಿದ್ದಳು. ಈಗ ಕಿಲ್ಲಿಂಗ್ ಆದೇಶ ಬಂದಿದ್ದೇ ತಡ ಗ್ರಾಮಕ್ಕೆ ನುಗ್ಗಿದ ರ‍್ಯಾಪಿಡ್ ಟೀಮ್ ಒಂದು ಕೋಳಿಯನ್ನು ಬಿಡದೇ ಹಿಡಿದು ಗುಂಡಿಯಲ್ಲಿ ಹೂಳುತ್ತಿದ್ದಾರೆ. ಅದಕ್ಕೆ ವೃದ್ಧೆ ಸೀತಮ್ಮ ಮಾತ್ರ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಕೋಳಿಯನ್ನು ಸಾಯಿಸುವ ಬದಲು ನನ್ನನ್ನು ಸಾಯಿಸಿ ಎಂದು ಗೋಳಾಡಿದ್ದಾಳೆ. ಆದರೆ ಅಧಿಕಾರಿಗಳು ಮಾತ್ರ ಆದೇಶದಂತೆ ಕೋಳಿಯನ್ನು ಬಿಡದೆ ಗುಂಡಿಯಲ್ಲಿ ಮುಚ್ಚಿದ್ದಾರೆ. ಅಲ್ಲದೇ ವೃದ್ಧೆಗೆ ಸಮಾಧಾನ ಮಾಡಿ ನಿಮಗೆ ಪರಿಹಾರ ನೀಡುತ್ತೇವೆ ಎಂದು ಭರವಸೆ ನೀಡಿದ್ದಾರೆ.

    https://www.facebook.com/publictv/videos/792337247922752/

  • ಕೊರೊನಾ ಭೀತಿಗೆ ನೆಲಕಚ್ಚಿದ ಕುಕ್ಕುಟೋದ್ಯಮ – 4 ಸಾವಿರ ಜೀವಂತ ಕೋಳಿಮರಿಗಳನ್ನು ಹೂತ ಮಾಲೀಕ

    ಕೊರೊನಾ ಭೀತಿಗೆ ನೆಲಕಚ್ಚಿದ ಕುಕ್ಕುಟೋದ್ಯಮ – 4 ಸಾವಿರ ಜೀವಂತ ಕೋಳಿಮರಿಗಳನ್ನು ಹೂತ ಮಾಲೀಕ

    ಶಿವಮೊಗ್ಗ: ಕೊರೊನಾ ವೈರಸ್ ಭೀತಿಯಿಂದ ಇಡೀ ವಿಶ್ವವೇ ತಲ್ಲಣಗೊಂಡಿದೆ. ಅದರಂತೆ ರಾಜ್ಯದಲ್ಲಿಯೂ ಕೊರೊನಾ ವೈರಸ್‍ನ ಪರಿಣಾಮ ಸಾಕಷ್ಟಿದೆ. ಈ ಹಿನ್ನೆಲೆ ಶಿವಮೊಗ್ಗದಲ್ಲಿ ಕುಕ್ಕುಟೋದ್ಯಮ ನಷ್ಟ ಅನುಭವಿಸುತ್ತಿದೆ. ಶಿವಮೊಗ್ಗದ ಸಂತೆಕಡೂರಿನಲ್ಲಿ ಶ್ರೀನಿವಾಸ್ ಕೋಳಿ ಫಾರಂನ ಮಾಲೀಕರಾದ ಶ್ರೀನಿವಾಸ್ ನಷ್ಟ ಅನುಭವಿಸಿದ್ದು, ಸುಮಾರು 4 ಸಾವಿರ ಜೀವಂತ ಕೋಳಿಮರಿಗಳನ್ನು ಗುಂಡಿ ತೆಗೆದು ಹೂತಿದ್ದಾರೆ.

    ಕೊರೊನಾ ವೈರಸ್‍ನಿಂದಾಗಿ ಜಗತ್ತಿನ ಹಲವು ದೇಶಗಳ ಆರ್ಥಿಕ ವ್ಯವಸ್ಥೆಯೇ ಅಲ್ಲೋಲ ಕಲ್ಲೋಲವಾಗಿದೆ. ಈ ನಡುವೆ ರಾಜ್ಯದಲ್ಲಿಯೂ ಕೊರೊನಾ ವೈರಸ್ ಭೀತಿಯ ಎಫೆಕ್ಟ್ ಬಹಳ ಜೋರಾಗಿದ್ದು, ಈಗಾಗಲೇ ರಾಜ್ಯದಲ್ಲಿ 4 ಮಂದಿಗೆ ಈ ಸೋಂಕು ತಗುಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಮಧ್ಯೆ ಹಕ್ಕಿ ಜ್ವರದ ಭೀತಿ ಕೂಡ ಶುರುವಾಗಿದ್ದು, ಶಿವಮೊಗ್ಗದ ಕುಕ್ಕುಟೋದ್ಯಮದ ಮೇಲೆ ಭಾರೀ ಗಂಭೀರ ಪರಿಣಾಮ ಬೀರಿದೆ.

    ಶಿವಮೊಗ್ಗದ ಸಂತೆಕಡೂರು ಗ್ರಾಮದ ಶ್ರೀನಿವಾಸ್ ಕೋಳಿ ಫಾರಂನಲ್ಲಿದ್ದ 22 ದಿನಗಳ ಸುಮಾರು 4 ಸಾವಿರ ಕೋಳಿ ಮರಿಗಳನ್ನು ಗುಂಡಿ ತೆಗೆದು ಜೀವಂತವಾಗಿ ಹೂಳಲಾಗಿದೆ. ಕಳೆದ ನಾಲ್ಕು ದಿನಗಳಿಂದ ಕೋಳಿ ಮಾಂಸ ಮಾರಾಟಗಾರರು ಕೋಳಿ ಖರೀದಿಗೆ ಹಿಂದೇಟು ಹಾಕಿದ್ದು, ಸುಮಾರು 170 ರೂ. ಇದ್ದ ಕೋಳಿ ಮಾಂಸದ ಬೆಲೆ ಕೇವಲ 70 ರೂ. ಗೆ ಇಳಿದಿದೆ. ಇದರಿಂದಾಗಿ ಭಾರೀ ನಷ್ಟವುಂಟಾಗಿದೆ. ಹೀಗಾಗಿ ಕೋಳಿ ಸಾಕಾಣಿಕೆದಾರರು ಕೂಡ ನಷ್ಟದ ಹಾದಿಯಲ್ಲಿದ್ದು, ತಾವು ಫಾರಂನಲ್ಲಿ ಬೆಳೆಸಲಾಗುತ್ತಿರುವ ಕೋಳಿಗಳಿಗೆ ಬೆಲೆ ಇಲ್ಲದಂತಾಗಿ ನಷ್ಟ ಅನುಭವಿಸುವ ಬದಲು ಜೀವಂತವಾಗಿ ಹೂತರೆ ಇನ್ನಷ್ಟು ನಷ್ಟವುಂಟಾಗುವುದು ತಪ್ಪುತ್ತದೆ ಎಂಬ ನಿರ್ಧಾರಕ್ಕೆ ಬಂದಿದ್ದಾರೆ.

    ಇಂದು ಜೆಸಿಬಿ ಮೂಲಕ 12 ಅಡಿ ಆಳದ ಗುಂಡಿ ತೆಗೆದು ಜೀವಂತವಾಗಿ ಕೋಳಿ ಮರಿಗಳನ್ನು ಹೂತು ಹಾಕಿದ್ದಾರೆ. ಶ್ರೀನಿವಾಸ್ ಅವರಿಗೆ ಒಂದು ಕೆಜಿ ಕೋಳಿಗೆ ಕೇವಲ 8 ರೂ. ಮಾತ್ರ ಸಿಗುತ್ತಿದ್ದು, ಕೋಳಿ ಸಾಕಲು 16 ರೂ. ವರೆಗೂ ಖರ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಎರಡೂವರೆ ಲಕ್ಷ ಖರ್ಚಾಗಿದ್ದು, ಇದನ್ನು ಮತ್ತೆ ಸಾಕಲು ಮುಂದಾದರೆ ಮತ್ತೆ ಲಕ್ಷಾಂತರ ರೂ. ನಷ್ಟ ಉಂಟಾಗುತ್ತದೆ. ಹೀಗಾಗಿ ಈಗಲೇ ಹೂತು ಹಾಕಿದರೇ ಲಕ್ಷಾಂತರ ರೂಪಾಯಿ ನಷ್ಟ ತಪ್ಪಿದಂತಾಗುತ್ತದೆ ಎಂಬ ನಿರ್ಧಾರಕ್ಕೆ ಶ್ರೀನಿವಾಸ್ ಬಂದಿದ್ದಾರೆ.

    ಆದ್ದರಿಂದ ಶ್ರೀನಿವಾಸ್ ಅವರು 4 ಸಾವಿರ ಕೋಳಿಗಳನ್ನು ಸಮಾಧಿ ಮಾಡುವ ತೀರ್ಮಾನಕ್ಕೆ ಬಂದಿದ್ದು, ಜೀವಂತ ಕೋಳಿಗಳನ್ನು ತಮ್ಮ ಫಾರಂನ ಆವರಣದಲ್ಲಿಯೇ ಹೂತಿದ್ದಾರೆ. ಕೊರೊನಾ ವೈರಸ್ ಭೀತಿಗೆ ಜನರು ಕೋಳಿ ಮಾಂಸ ಸೇವಿಸದೇ ಇರುವುದೇ ಈ ನಷ್ಟಕ್ಕೆ ಕಾರಣವಾಗಿದೆ. ಕೋಳಿ ಕೃಷಿ ಮಾಡುವವರು ಇದೀಗ ಬೀದಿಗೆ ಬರುವಂತಾಗಿದ್ದು, ಮಾಂಸ ಮಾರಾಟಗಾರರು ಕೂಡ ಮಾಂಸ ಮಾರಾಟ ಮಾಡಲಾಗದೇ, ಕೋಳಿಗಳನ್ನ ಖರೀದಿಸದೇ ಸುಮ್ಮನಾಗಿದ್ದಾರೆ.

    ಕೊರೊನಾ ವೈರಸ್ ಕೋಳಿಯಿಂದ ಬಾರಲ್ಲ ಇದು ಮನುಷ್ಯರಿಂದ ಮನುಷ್ಯರಿಗೆ ಹರಡುತ್ತೆದೆ. ಹೀಗಾಗಿ ಕೋಳಿ ತಿನ್ನುವುದರಲ್ಲಿ ಸಮಸ್ಯೆ ಇಲ್ಲ. ಕೋಳಿ ಮಾಂಸ ಖರೀದಿಸಿ, ನಮ್ಮನ್ನು ಉಳಿಸಿ ಎಂಬುದು ಕೋಳಿ ಫಾರಂ ಮಾಲೀಕರ ಅಳಲಾಗಿದೆ. ಅಲ್ಲದೇ ರಾಜ್ಯ ಸರ್ಕಾರ ಈ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದು ಕೋಳಿ ಫಾರಂ ಮಾಲೀಕರು ಮನವಿ ಮಾಡಿದ್ದಾರೆ.

    ಕೊರೊನಾ ವೈರಸ್ ಮತ್ತು ಹಕ್ಕಿ ಜ್ವರದ ಭೀತಿ ಪರಿಣಾಮದಿಂದಾಗಿ ಕುಕ್ಕುಟೋದ್ಯಮಕ್ಕೆ ಬೇಡಿಕೆ ಕಡಿಮೆಯಾಗಿದೆ. ಹೀಗಾಗಿ ಇದೀಗ ಜಿಲ್ಲೆಯಲ್ಲಿ ಪ್ರಥಮ ಕೋಳಿ ಫಾರಂ ಮುಚ್ಚಲಾಗಿದ್ದು, ಮುಂದಿನ ದಿನಗಳಲ್ಲಿ ಇದು ಇನ್ನಷ್ಟು ಹೆಚ್ಚಾಗುವ ಸಂಭವವಿದೆ. ಏನೇ ಆಗಲಿ ಕೊರೊನಾ ವೈರಸ್‍ನ ಭೀತಿಯಿಂದಾಗಿ ಜನರು ನಲುಗಿಹೋಗಿದ್ದು, ಇದನ್ನ ಹೋಗಲಾಡಿಸುವ ನಿಟ್ಟಿನಲ್ಲಿ ಸರ್ಕಾರ ಕ್ರಮ ತೆಗೆದುಕೊಳ್ಳಬೇಕಾದ ಅಗತ್ಯವಿದೆ.

  • ಮಗನನ್ನು ಕೊಂದು ಕೋಳಿ ಫಾರಂನಲ್ಲಿ ಮೃತದೇಹವನ್ನು ಹೂತಿಟ್ಟ ತಂದೆ

    ಮಗನನ್ನು ಕೊಂದು ಕೋಳಿ ಫಾರಂನಲ್ಲಿ ಮೃತದೇಹವನ್ನು ಹೂತಿಟ್ಟ ತಂದೆ

    ಹೈದರಾಬಾದ್: ತಂದೆಯೊಬ್ಬ ತನ್ನ ಮಗನನ್ನು ಕೊಲೆ ಮಾಡಿ ಆತನ ಮೃತದೇಹವನ್ನು ಕೋಳಿ ಫಾರಂನಲ್ಲಿ ಹೂತಿಟ್ಟ ಘಟನೆ ಗುರುವಾರ ಹೈದರಾಬಾದ್‍ನ ಮೆಡಕ್ ಜಿಲ್ಲೆಯ ಇಬ್ರಾಹಿಂಪುರದಲ್ಲಿ ನಡೆದಿದೆ.

    ಶ್ರವಣ್ ಕುಮಾರ್ ರೆಡ್ಡಿ(24) ಕೊಲೆಯಾದ ಮಗ. ಸ್ಥಳೀಯ ಸಂಘದ ಅಧ್ಯಕ್ಷನಾಗಿರುವ ನಾರಾಯಣ ರೆಡ್ಡಿ ತನ್ನ ಮಗ ಶ್ರವಣ್‍ನನ್ನು ಕೊಲೆ ಮಾಡಿದ್ದಾನೆ. ಶ್ರವಣ್ ಆರೋಪಿ ನಾರಾಯಣ ರೆಡ್ಡಿಯ ಎರಡನೇ ಮಗನಾಗಿದ್ದು, ಮೆಡ್ಚಲ್‍ನಲ್ಲಿ ಎಂಜಿನಿಯರಿಂಗ್ ಓದುತ್ತಿದ್ದನು. ದಸರಾ ಹಬ್ಬಯಿರುವ ಕಾರಣ ಶ್ರವಣ್ ತನ್ನ ಮನೆಗೆ ಬಂದಿದ್ದನು.

    ಸೋಮವಾರ ಸಂಜೆ ನಾರಾಯಣ ರೆಡ್ಡಿ ಹಾಗೂ ಶ್ರವಣ್ ಕುಮಾರ್ ನಡುವೆ ಜಗಳವಾಗಿದೆ. ಜಗಳವಾಡಿದ ಸಮಯದಲ್ಲಿ ಮದ್ಯದ ನಶೆಯಲ್ಲಿದ್ದ ನಾರಾಯಣ ರೆಡ್ಡಿ ತನ್ನ ಮಗ ಶ್ರವಣ್‍ನನ್ನು ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ. ಮಗ ಮೃತಪಟ್ಟಿದ್ದಾನೆ ಎಂದು ತಿಳಿದ ತಕ್ಷಣ ನಾರಾಯಣ ಆತನ ಮೃತದೇಹವನ್ನು ಕೋಳಿ ಫಾರಂ ಹೂತಿಟ್ಟಿದ್ದಾನೆ.

    ಶ್ರವಣ ಎಲ್ಲಿಯೂ ಕಾಣಿಸದಿದ್ದಾಗ ಗ್ರಾಮಸ್ಥರಿಗೆ ಅನುಮಾನ ಮೂಡಿದೆ. ಅಲ್ಲದೆ ಶ್ರವಣ್ ನಾಪತ್ತೆ ಆದಾಗಿನಿಂದ ಕುಟುಂಬಸ್ಥರು ಆತನ ಬಗ್ಗೆ ಎಲ್ಲಿಯೂ ಮಾತನಾಡುತ್ತಿರಲಿಲ್ಲ. ಇದರಿಂದ ಅನುಮಾನಗೊಂಡ ಗ್ರಾಮಸ್ಥರು ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

    ಸದ್ಯ ಪೊಲೀಸರು ನಾರಾಯಣ ರೆಡ್ಡಿಯನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ. ಈ ವೇಳೆ ನಾರಾಯಣ ತನ್ನ ಮಗನನ್ನು ಕೊಲೆ ಮಾಡಿದ್ದಾಗಿ ಒಪ್ಪಿಕೊಂಡಿದ್ದಾನೆ. ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ವಿಚಾರಣೆ ಮುಂದುವರಿಸಿದ್ದಾರೆ.

  • ಪೌಲ್ಟ್ರಿ ಫಾರ್ಮ್ ನಲ್ಲಿ ಒಂದೇ ಕುಟುಂಬದ 7 ಮಂದಿ ಅನುಮಾನಾಸ್ಪದ ಸಾವು

    ಪೌಲ್ಟ್ರಿ ಫಾರ್ಮ್ ನಲ್ಲಿ ಒಂದೇ ಕುಟುಂಬದ 7 ಮಂದಿ ಅನುಮಾನಾಸ್ಪದ ಸಾವು

    ಹೈದರಾಬಾದ್: ಮೂವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ 7 ಮಂದಿ ಪೌಲ್ಟ್ರಿ ಫಾರ್ಮ್ ನಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ತೆಲಂಗಾಣದ ಭೋಂಗಿರ್ ಯಾದಾದ್ರಿ ಜಿಲ್ಲೆಯಲ್ಲಿ ಶುಕ್ರವಾರದಂದು ನಡೆದಿದೆ.

    ಮೃತರೆಲ್ಲರೂ ಕ್ರಿಮಿನಾಶಕ ಸೇವಿಸಿರುವ ಶಂಕೆ ವ್ಯಕ್ತವಾಗಿದೆ. ಪೌಲ್ಟ್ರಿ ಮಾಲೀಕ ರೂಮಿನಲ್ಲಿ ಮೃತರನ್ನು ನೋಡಿ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ.

    ಮೃತರನ್ನು ಬಾಲನರಸಯ್ಯ(70), ಪತ್ನಿ ಭರತಮ್ಮ(65), ಮಗಳು ದುಬಾಶಿ ತಿರುಮಲ(35), ಅವರ ಗಂಡ ಬಾಲರಾಜು(38), ಮಕ್ಕಳಾದ ಶ್ರಾವಣಿ(13), ರಾಜೇಶ್ (11) ಹಾಗೂ ರಾಕೇಶ್(8) ಎಂದು ಗುರುತಿಸಲಾಗಿದೆ. ಈ ಬಗ್ಗೆ ರಾಜಾಪೇಟ್ ಪೊಲೀಸ್ ಠಾಣೆಯಲ್ಲಿ ಅನುಮಾನಾಸ್ಪದ ಸಾವು ಎಂದು ಪ್ರಕರಣ ದಾಖಲಾಗಿದೆ.

    ಬಾಲರಾಜು ಹಣಕಾಸು ಸಮಸ್ಯೆಯಿಂದ ಈ ನಿರ್ಧಾರ ತೆಗೆದುಕೊಂಡಿರಬಹುದು. ಇದಕ್ಕೆ ಕುಟುಂಬ ಸದಸ್ಯರು ಜೊತೆಗೂಡಿರುವ ಶಂಕೆ ಇದೆ ಎಂದು ಡಿಸಿಪಿ ರಾಮಚಂದ್ರ ರೆಡ್ಡಿ ಹೇಳಿದ್ದಾರೆ. ಮೃತದೇಹಗಳು ಇದ್ದ ರೂಮಿನಲ್ಲಿ ಒಂದು ಮದ್ಯದ ಬಾಟಲಿ, ಚಿಕನ್ ಅಡುಗೆ ಪತ್ತೆಯಾಗಿದೆ. ಪಕ್ಕದ ರೂಮಿನಲ್ಲಿ 3 ಕ್ರಿಮಿನಾಶಕ ಬಾಟಲಿಗಳು ಪತ್ತೆಯಾಗಿವೆ ಎಂದು ಅವರು ತಿಳಿಸಿದ್ದಾರೆ.

    ನಾಗಭೂಷಣ್ ಅವರ ಪೌಲ್ಟ್ರಿ ಫಾರ್ಮ್‍ನಲ್ಲಿ ಬಾಲರಾಜು ಹಾಗೂ ಅವರ ಪತ್ನಿ ಕೆಲಸ ಮಾಡುತ್ತಿದ್ದರು ಎಂದು ವರದಿಯಾಗಿದೆ. ಮೂರು ದಿನಗಳ ಹಿಂದೆ ಬಾಲರಾಜು ತಾನು ಅನಾರೋಗ್ಯಕ್ಕೀಡಾಗಿದ್ದು, ಗುರುವಾರದಂದು ವೈದ್ಯಕೀಯ ಪರೀಕ್ಷೆಗೆ ಹೋಗುವುದಾಗಿ ತನ್ನ ಮಾಲೀಕನಿಗೆ ಹೇಳಿದ್ದರು ಎಂದು ಡಿಸಿಪಿ ತಿಳಿಸಿದ್ದಾರೆ.

    ಮರಣೋತ್ತರ ಪರೀಕ್ಷೆಯ ವರದಿ ಬಂದ ನಂತರ ಸಾವಿಗೆ ಸ್ಪಷ್ಟ ಕಾರಣ ಏನಂಬುದು ಹೇಳಲು ಸಾಧ್ಯ ಎಂದು ಪೊಲೀಸರು ಹೇಳಿದ್ದಾರೆ.

  • ಪೌಲ್ಟ್ರಿಗಳಲ್ಲಿ ಕೋಳಿಗಳನ್ನ ದಪ್ಪವಾಗಿಸೋಕೆ ಮದ್ಯ ಕುಡಿಸ್ತಾರಾ?

    ಪೌಲ್ಟ್ರಿಗಳಲ್ಲಿ ಕೋಳಿಗಳನ್ನ ದಪ್ಪವಾಗಿಸೋಕೆ ಮದ್ಯ ಕುಡಿಸ್ತಾರಾ?

    ಬೆಂಗಳೂರು: ಚಿಕನ್ ಪ್ರಿಯರಿಗೆ ಶಾಕ್ ನೀಡುವಂತಹ ಸುದ್ದಿಯೊಂದು ಹರಿದಾಡ್ತಿದೆ. ಈ ಬಗ್ಗೆ ಯಾವುದೇ ಅಧ್ಯಯನ ನಡೆದಿಲ್ಲ ಅಥವಾ ಪಶುಸಂಗೋಪನಾ ಇಲಾಖೆಗೆ ಇಂತಹ ಯಾವುದೇ ಪ್ರಕರಣ ಬಂದಿಲ್ಲ. ಆದ್ರೂ ಪೌಲ್ಟ್ರಿ ಫಾರ್ಮ್‍ಗಳಲ್ಲಿ ಕೋಳಿಗಳನ್ನ ದಪ್ಪ ಮಾಡೋಕೆ ಮದ್ಯಪಾನ ನೀಡ್ತಾರೆ ಅಂತ ಕುಣಿಗಲ್ ತಾಲೂಕಿನಲ್ಲಿ ಸುದ್ದಿ ಹರಿದಾಡ್ತಿದೆ.

    ಮೂಲಗಳ ಮಾಹಿತಿಯ ಪ್ರಕಾರ ಕುಣಿಗಲ್‍ನಲ್ಲಿ ಸುಮಾರು 50 ರಿಂದ 60 ಕೋಳಿ ಫಾರ್ಮ್‍ಗಳಿದ್ದು, ಇವುಗಳಲ್ಲಿ ಕೆಲವು ಫಾರ್ಮ್‍ಗಳು ಕಡಿಮೆ ಬೆಲೆಯ ಮದ್ಯವನ್ನ ಕೋಳಿಗಳ ಮೇವಿನಲ್ಲಿ ಬೆರೆಸಿ ಕೊಡ್ತಿದ್ದಾರೆ ಎನ್ನಲಾಗಿದೆ. ಮದ್ಯದ ಅಮಲಿನಲ್ಲಿ ಕೋಳಿಗಳು ಹೆಚ್ಚಿನ ಮೇವು ಹಾಗೂ ನೀರು ಸೇವಿಸುತ್ತವೆ. ಹೀಗಾಗಿ ಅವುಗಳ ತೂಕ ಹೆಚ್ಚಾಗಿ ಮಾಲೀಕನಿಗೆ ಲಾಭ ಸಿಗುತ್ತದೆ ಎಂದು ಹೇಳಲಾಗಿದೆ.

    ಆದ್ರೆ ಕುಣಿಗಲ್‍ನ ಪ್ರಭಾರಿ ಸಹಾಯಕ ನಿರ್ದೇಶಕರಾದ ಡಾ. ನವೀನ್ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ಇಂತಹ ಯಾವುದೇ ದೂರುಗಳು ಬಂದಿಲ್ಲ. ಆದ್ರೆ ಕಡಿಮೆ ಬೆಲೆಯ ಮದ್ಯವನ್ನ ಪೌಲ್ಟ್ರಿಗಳಲ್ಲಿ ನೀಡಲಾಗ್ತಿದೆ ಅಂತ ಜನ ಹೇಳ್ತಿದ್ದಾರೆ. ಆದ್ರೆ ನಿರ್ದಿಷ್ಟವಾದ ಪ್ರಕರಣಗಳಿಲ್ಲ. ಅಲ್ಲದೆ ಮದ್ಯದ ಅಮಲಿನಲ್ಲಿ ಕೋಳಿಗಳು ಹೆಚ್ಚು ಮೇವು ಸೇವಿಸುತ್ತವೆ ಎಂಬ ಬಗ್ಗೆ ಯಾವುದೇ ಅಧ್ಯಯನ ನಡೆದಿಲ್ಲ ಎಂದಿದ್ದಾರೆ.

    ದೇಹದೊಳಗೆ ಮದ್ಯ ಹೋದ ನಂತರ ನಿರ್ಜಲೀಕರಣವಾಗುತ್ತದೆ. ಇದರಿಂದ ಕೋಳಿ ಹೆಚ್ಚು ನೀರು ಕುಡಿಯಬಹುದು ಮತ್ತು ಆಹಾರ ಸೇವಿಸಬಹುದು ಎಂದು ಊಹಿಸಬಹುದು. ಆದ್ರೆ ಕೇವಲ ಊಹೆ ಮೇಲೆ ಕೋಳಿಗಳ ತೂಕ ಹೆಚ್ಚಾಗುತ್ತದೆ ಎಂಬ ನಿರ್ಧಾರಕ್ಕೆ ಬಂದು ಮಾಲೀಕರು ಲಾಭ ಮಾಡಿಕೊಳ್ತಿದ್ದಾರೆ ಎಂದು ಹೇಳಲು ಸಾಧ್ಯವಿಲ್ಲ. ಇವೆಲ್ಲಾ ಅವೈಜ್ಞಾನಿಕ ವರದಿ ಎಂದಿದ್ದಾರೆ.

  • ಬೇಕರಿ ತಿನಿಸುಗಳಂದ್ರೆ ಇಷ್ಟನಾ? ಹಾಗಿದ್ರೆ ನೀವು ಈ ಸ್ಟೋರಿ ಓದ್ಲೇಬೇಕು

    ಬೇಕರಿ ತಿನಿಸುಗಳಂದ್ರೆ ಇಷ್ಟನಾ? ಹಾಗಿದ್ರೆ ನೀವು ಈ ಸ್ಟೋರಿ ಓದ್ಲೇಬೇಕು

    ಕೊಪ್ಪಳ: ನೀವು ಬೇಕರಿ ತಿನಿಸುಗಳ ಪ್ರಿಯರಾಗಿದ್ರೆ ಖಂಡಿತವಾಗ್ಲೂ ಈ ಸ್ಟೋರಿ ಓದ್ಲೇಬೇಕು. ರುಚಿ ರುಚಿಯಾದ ಬೇಕರಿ ತಿನಿಸು, ಎಗ್ ರೈಸ್ ಚಪ್ಪರಿಸೋ ಮುನ್ನ ಆ ಮೊಟ್ಟೆ ಎಂಥದ್ದು ಎಂಬ ಬಗ್ಗೆ ಒಮ್ಮೆ ಯೋಚಿಸಿ. ಇಲ್ಲವಾದ್ರೆ ನಿಮ್ಮ ಆರೋಗ್ಯ ಹದಗೆಡೋದು ಗ್ಯಾರಂಟಿ.

    ಹೌದು. ರಾಜ್ಯದಲ್ಲಿಯೇ ಕುಕ್ಕಟ ಉದ್ದಿಮೆಗೆ ಖ್ಯಾತಿ ಪಡೆದಿರೋ ಜಿಲ್ಲೆಯಲ್ಲಿ ಡ್ಯಾಮೇಜ್ ಮೊಟ್ಟೆ ದಂಧೆ ನಡೀತಿದೆ. ಮೊಟ್ಟೆ ವಿಷಯದಲ್ಲಿ ಕೊಪ್ಪಳ ಜಿಲ್ಲೆಯಲ್ಲಿ ಇಂಥದ್ದೊಂದು ಎಚ್ಚರಿಕೆ ಮಾತು ಕೇಳಿ ಬರ್ತಿದೆ. ಯಾಕಂದ್ರೆ ಜಿಲ್ಲೆಯಲ್ಲಿ ಕೆಟ್ಟು, ಕೊಳಕು ನಾರುವ ಮೊಟ್ಟೆಗಳನ್ನ ಬೇಕರಿ ಅಂಗಡಿಗೆ ಬಿಕರಿ ಮಾಡ್ತಿದ್ದಾರೆ ಕೆಲ ಕೋಳಿ ಫಾರ್ಮ್ ಮಾಲೀಕರು. ಇದ್ರಿಂದ ಕಡಿಮೆ ದರದಲ್ಲಿ ಮೊಟ್ಟೆ ಖರೀದಿಸಿ ಬೇಕರಿ ಮಾಲೀಕರು ಹಣ ಜೇಬಿಗಿಳಿಸ್ತಿದ್ರೆ ಕೊಳಕು ಮೊಟ್ಟೆಯಿಂದ ತಯಾರಿಸಿದ ತಿನಿಸು ತಿಂದು ಜನರ ಆರೋಗ್ಯ ಹದಗೆಡ್ತಿದೆ.

    ಇಂಥದ್ದೊಂದು ದಂಧೆ ಕೊಪ್ಪಳ ಜಿಲ್ಲೆಯ ಕುಷ್ಟಗಿ ಹೊರವಲಯದ ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಿರೋ ಮಾಣಿಕ್ಯಂ ಕೋಳಿ ಫಾರಂನಲ್ಲಿ ಎಗ್ಗಿಯಿಲ್ಲದೆ ನಡೀತಿತ್ತು. ಇದರ ಮೇಲೆ ಕಣ್ಣಿಟ್ಟಿದ್ದ ಯುವಬ್ರಿಗೇಡ್ ಕಾರ್ಯಕರ್ತರು ಕೊಳಕು ಮೊಟ್ಟೆ ಸಾಗಿಸ್ತಿದ್ದ ಟಂಟಂ ತಡೆದು ಪೊಲೀಸರಿಗೊಪ್ಪಿಸಿದ್ದಾರೆ. ಈ ಮೂಲಕ ಕೊಳಕು ಮೊಟ್ಟೆ ಮಾರಾಟ ದಂಧೆಯ ಜಾಲ ಪತ್ತೆ ಹಚ್ಚಿದ್ದಾರೆ.

    ಇದನ್ನೂ ಓದಿ: ಪ್ರತಿದಿನ ಮೊಟ್ಟೆ ತಿಂತೀರಾ? ಹಾಗಿದ್ರೆ ನೀವು ಈ ಸುದ್ದಿ ಓದ್ಲೇಬೇಕು

    ಇಂಥದ್ದೊಂದು ಜಾಲ ಪತ್ತೆಯಾಗುತ್ತಿದ್ದಂತೆ ಮೊಟ್ಟೆಪ್ರಿಯರು ತಳಮಳಗೊಂಡಿದ್ದಾರೆ. ಮೊಟ್ಟೆಯಿಂದ ತಯಾರಿಸಿದ ಬೇಕರಿ ತಿನಿಸುಗಳನ್ನ ಖರೀದಿಸಲು ಹಿಂದೇಟು ಹಾಕ್ತಿದ್ದಾರೆ. ಒಡೆದ, ಹುಳುಗಳು ತುಂಬಿಕೊಂಡು ಗಬ್ಬು ನಾರುವ ಮೊಟ್ಟೆಗಳನ್ನು ಪಾತ್ರೆಗಳಲ್ಲಿ ತುಂಬಿ ವಾಹನಗಳಲ್ಲಿ ಕುಷ್ಟಗಿ ಸೇರಿದಂತೆ ಗಂಗಾವತಿ, ಕೊಪ್ಪಳ, ಇಲಕಲ್ ಇನ್ನಿತರ ಕಡೆ ಇರುವ ಬೇಕರಿಗಳಿಗೆ ಸಾಗಣೆ ಮಾಡ್ತಿದ್ರು ಮಾಣಿಕ್ಯಂ ಕೋಳಿ ಫಾರ್ಮ್ ಮಾಲೀಕ ರಾಮಮನೋಹರ್. ಜಿಲ್ಲೆಯಲ್ಲಿ ಇಂಥಹ ಸಾಕಷ್ಟು ಪ್ರಕರಣಗಳಿವೆ. ಪೊಲೀಸರು ಪತ್ತೆಹಚ್ಚಬೇಕು ಅಂತಾರೆ ಹೋರಾಟಗಾರರು.

    ಇದನ್ನೂ ಓದಿ: ಅಕ್ಕಿ, ಮೊಟ್ಟೆ ಆಯ್ತು ಈಗ ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ ಪ್ಲಾಸ್ಟಿಕ್ ಕ್ಯಾಬೇಜ್ – ವಿಡಿಯೋ ನೋಡಿ

    ಚಿಕ್ಕ ಮಕ್ಕಳಿಂದ ಹಿಡಿದು ದೊಡ್ಡವರು ಕೂಡ ಬೇಕರಿ ತಿನಿಸು ತಿನ್ನಲು ಮುಗಿಬೀಳ್ತಾರೆ. ಅದನ್ನ ಸೇವಿಸೋ ಮುನ್ನ ಯೋಚಿಸಿ ಅನ್ನೋದು ನಮ್ಮ ಕಾಳಜಿ.