Tag: Power Department

  • ರಾಜ್ಯಾದ್ಯಂತ ಮೇ 5 ರಿಂದ 20 ರವರೆಗೆ ಟ್ರಾನ್ಸ್‌ಫಾರ್ಮರ್ ನಿರ್ವಹಣಾ ಅಭಿಯಾನ‌

    ರಾಜ್ಯಾದ್ಯಂತ ಮೇ 5 ರಿಂದ 20 ರವರೆಗೆ ಟ್ರಾನ್ಸ್‌ಫಾರ್ಮರ್ ನಿರ್ವಹಣಾ ಅಭಿಯಾನ‌

    ಬೆಂಗಳೂರು: ರಾಜ್ಯಾದ್ಯಂತ ಮೇ 5 ರಿಂದ 20 ರವರೆಗೆ ಟ್ರಾನ್ಸ್‌ಫಾರ್ಮರ್‌ ನಿರ್ವಹಣಾ ಅಭಿಯಾನ ನಡೆಸಲು ಇಂಧನ ಇಲಾಖೆ ನಿರ್ಧರಿಸಿದೆ.

    ಮಳೆಗಾಲ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಟ್ರಾನ್ಸ್‌ಫಾರ್ಮರ್ ಸಂಬಂಧಿತ ಅವಘಡ ತಪ್ಪಿಸುವುದಕ್ಕಾಗಿ ರಾಜ್ಯಾದ್ಯಂತ ಮೇ 5 ರಿಂದ 20 ರವರೆಗೆ ಟ್ರಾನ್ಸ್‌ಫಾರ್ಮರ್ ನಿರ್ವಹಣಾ ಅಭಿಯಾನ ನಡೆಸಲು ತೀರ್ಮಾನಿಸಿದೆ. ಕಳೆದ ಒಂದು ತಿಂಗಳಲ್ಲಿ ನಡೆದ ಟ್ರಾನ್ಸ್‌ಫಾರ್ಮರ್ ದುರಂತಗಳ ಹಿನ್ನೆಲೆಯಲ್ಲಿ ಈ ಅಭಿಯಾನ ನಡೆಸಲು ತೀರ್ಮಾನಿಸಲಾಗಿದ್ದು, ಎಲ್ಲ ಹಂತದ ಅಧಿಕಾರಿಗಳಿಗೂ ಈ ಅಭಿಯಾನದಲ್ಲಿ ಭಾಗವಹಿಸುವಂತೆ ಇಂಧನ ಸಚಿವ ವಿ.ಸುನೀಲ್ ಕುಮಾರ್ ನಿರ್ದೇಶನ ನೀಡಿದ್ದಾರೆ. ಇದನ್ನೂ ಓದಿ: ಪಿಎಸ್‍ಐ ನೇಮಕಾತಿಯಲ್ಲಿ 300 ಕೋಟಿಗೂ ಅಕ್ರಮ: ಸಿದ್ದರಾಮಯ್ಯ ಬಾಂಬ್

    ರಾಜ್ಯದಲ್ಲಿ ಹದಿನೈದು ವರ್ಷಕ್ಕಿಂತ ಹಳೆಯ ಪರಿವರ್ತಕಗಳು ಸಾಕಷ್ಟು ಪ್ರಮಾಣದಲ್ಲಿ ಇವೆ. ಮಳೆಗಾಲದಲ್ಲಿ ಅವುಗಳು ನಿರ್ವಹಣಾ ಸಮಸ್ಯೆ ಉಂಟಾಗುತ್ತಿವೆ. ಮಳೆಗಾಲದಲ್ಲಿ ಸಿಡಿಲು ಇತ್ಯಾದಿ ಕಾರಣಗಳಿಂದ ಪರಿವರ್ತಕಗಳ ಹಾನಿ ಸಾಧ್ಯತೆ ಇದೆ. ಜೊತೆಗೆ ಅಧಿಕ ಲೋಡ್‌ನಿಂದ ಟ್ರಾನ್ಸ್‌ಫಾರ್ಮರ್ ಹಾನಿಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಪರಿಶೀಲನೆ ನಡೆಸಲು ಅಭಿಯಾನ ನಡೆಸಲಾಗುತ್ತಿದೆ.

    VIDHAN SHOUDHA

    ಅಭಿಯಾನದಲ್ಲಿ ಎಲ್ಲ ಹಂತದ ಅಧಿಕಾರಿಗಳೂ ಭಾಗಿಯಾಗಬೇಕು. ಪ್ರತಿ ದಿನ ಪರಿಶೀಲನೆ ನಡೆಸಿದ ಟ್ರಾನ್ಸ್‌ಫಾರ್ಮರ್‌ಗಳ ವಿವರ, ಅವುಗಳಲ್ಲಿ ಕಂಡುಬಂದ ನ್ಯೂನ್ಯತೆ, ಯಾವ ಕಾರಣಕ್ಕಾಗಿ ತೊಂದರೆ ಕಾಣಿಸಿಕೊಂಡಿದೆ ಎಂಬ ವಿವರವನ್ನು ಕೇಂದ್ರ ಕಚೇರಿಗೆ ಪ್ರತಿ ದಿನ ಕಳುಹಿಸಿಕೊಡುವಂತೆ ಸೂಚನೆ ನೀಡಲಾಗಿದೆ. ಪ್ರತಿ ವರ್ಷವೂ ಈ ರೀತಿ ಅಭಿಯಾನ ನಡೆಸುವುದರಿಂದ ಟ್ರಾನ್ಸ್‌ಫಾರ್ಮರ್‌ಗಳ ಕ್ಷಮತೆ ಹೆಚ್ಚಲಿದೆ. ಇದನ್ನೂ ಓದಿ: ಹುಬ್ಬಳ್ಳಿಯಲ್ಲಿ ಜಯದೇವ ಆಸ್ಪತ್ರೆಗೆ ಆಗಸ್ಟ್ 15ರೊಳಗೆ ಶಂಕುಸ್ಥಾಪನೆ: ಬೊಮ್ಮಾಯಿ

    ಟ್ರಾನ್ಸ್‌ಫಾರ್ಮರ್‌ಗಳ ರಿಪೇರಿಗೆ ಇಂಧನ ಇಲಾಖೆ ಪ್ರತಿವರ್ಷ 150 ಕೋಟಿ ರೂ. ವೆಚ್ಚ ಮಾಡುತ್ತದೆ. ನಿರ್ವಹಣಾ ಕೆಲಸವನ್ನು ಕಾಲ ಕಾಲಕ್ಕೆ ನಡೆಸಿದರೆ ರಿಪೇರಿ ವೆಚ್ಚ ತಗ್ಗಿಸುವುದಕ್ಕೆ ಸಾಧ್ಯವಿದೆ. ಜತೆಗೆ ಎಲ್ಲಿ ಹೊಸ ಟ್ರಾನ್ಸ್ ಫಾರ್ಮರ್‌ಗಳ ತುರ್ತು ಅಗತ್ಯವಿದೆ ಎಂಬುದನ್ನೂ ಈ ಅಭಿಯಾನದ ಮೂಲಕ ತಿಳಿದುಕೊಳ್ಳುವುದಕ್ಕೆ ಸಾಧ್ಯವಿದೆ. ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಹದಿನೈದು ದಿನಗಳ‌ ಕಾಲ ಅಭಿಯಾನ ನಡೆಸಲು ಸೂಚನೆ ನೀಡಲಾಗಿದೆ.

  • ನಿನ್ನ ಪತ್ನಿಯನ್ನು ರಾತ್ರಿ ಕಳುಹಿಸು ಎಂದ ಬಾಸ್ – ಬೆಂಕಿ ಹಚ್ಚಿಕೊಂಡು ವ್ಯಕ್ತಿ ಆತ್ಮಹತ್ಯೆ

    ನಿನ್ನ ಪತ್ನಿಯನ್ನು ರಾತ್ರಿ ಕಳುಹಿಸು ಎಂದ ಬಾಸ್ – ಬೆಂಕಿ ಹಚ್ಚಿಕೊಂಡು ವ್ಯಕ್ತಿ ಆತ್ಮಹತ್ಯೆ

    ಲಖನೌ: ಉತ್ತರ ಪ್ರದೇಶದ ವಿದ್ಯುತ್ ಇಲಾಖೆಯ ಅಧಿಕಾರಿಯೊಬ್ಬರು, ತನಗೆ ವರ್ಗಾವಣೆ ಬೇಕಿದ್ದರೆ ಪತ್ನಿಯನ್ನು ರಾತ್ರಿಗೆ ಕಳುಹಿಸು ಎಂದು ಕೇಳಿದ್ದಕ್ಕೆ ಮನನೊಂದ ಉದ್ಯೋಗಿಯೊಬ್ಬರು ಡೀಸೆಲ್ ಸುರಿದು ಬೆಂಕಿಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

    ಗೋಕುಲ್ ಪ್ರಸಾದ್ (45) ಅವರೇ ಲಖೀಂಪುರದ ಜೂನಿಯರ್ ಇಂಜಿನಿಯರ್ ಕಚೇರಿಯ ಹೊರಗೆ ಡೀಸೆಲ್ ಸುರಿದು ಬೆಂಕಿ ಹಚ್ಚಿಕೊಂಡಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಇದನ್ನೂ ಓದಿ: ಕೇಂದ್ರೀಯ ವಿವಿ ವಿದ್ಯಾರ್ಥಿಗಳ ಮೇಲೆ ಹಲ್ಲೆ – ಮೂವರ ವಿರುದ್ಧ FIR

    CRIME (2)

    ಗೋಕುಲ್ ಪ್ರಸಾದ್ ಅವರು ಬೆಂಕಿ ಹಚ್ಚಿಕೊಂಡ ನಂತರ ಚಿತ್ರೀಕರಿಸಿದ ವೀಡಿಯೋದಲ್ಲಿ ಕಿರಿಯ ಇಂಜಿನಿಯರ್ ಹಾಗೂ ಅವರ ಸಹಾಯಕರು ತನಗೆ ಕಿರುಕುಳ ನೀಡುತ್ತಿದ್ದರು. ಪೊಲೀಸರನ್ನು ಸಂಪರ್ಕಿಸಿದರೂ ಯಾವುದೇ ಸಹಾಯ ಸಿಕ್ಕಿಲ್ಲ ಎಂದು ಆರೋಪಿಸಿದ್ದಾರೆ. ಮತ್ತೊಂದು ವಿಡಿಯೋದಲ್ಲಿ, ಆರೋಪಿಗಳು ಕಳೆದ ಮೂರು ವರ್ಷಗಳಿಂದಲೂ ತನ್ನ ಪತಿಗೆ ಚಿತ್ರಹಿಂಸೆ ನೀಡುತ್ತಿದ್ದರು ಎಂದು ಆತನ ಪತ್ನಿ ಆರೋಪಿಸಿದ್ದಾರೆ.

    ತನ್ನ ಪತಿ ಖಿನ್ನತೆಗೆ ಒಳಗಾಗಿ ಔಷಧಿ ತೆಗೆದುಕೊಳ್ಳಲು ಪ್ರಾರಂಭಿಸಿದರು. ಆದರೂ, ಅಲಿಗಂಜ್‌ಗೆ ವರ್ಗಾಯಿಸಲಾಯಿತು. ಅವರಿಗೆ ಪ್ರಯಾಣಿಸಲು ಕಷ್ಟವಾಗುತ್ತಿದ್ದರಿಂದ ಮನೆಯ ಸಮೀಪದಲ್ಲೇ ಇರುವ ಕಚೇರಿಗೆ ವರ್ಗಾಯಿಸುವಂತೆ ಮನವಿ ಮಾಡಿದರು. ಈ ವೇಳೆ ಅಲ್ಲಿನ ಅಧಿಕಾರಿಗಳು ನಿನ್ನ ಹೆಂಡತಿಯನ್ನು ನಮ್ಮೊಂದಿಗೆ ಮಲಗುವಂತೆ ಮಾಡಿ, ಆಗ ನಾವು ವರ್ಗಾವಣೆ ಮಾಡುತ್ತೇವೆಂದು ಹೇಳಿದ್ದಾರೆ. ಇದರಿಂದ ಅವರು ಆತ್ಮಹತ್ಯೆ ದಾರಿ ಹಿಡಿದಿದ್ದಾರೆ. ಆತ್ಮಹತ್ಯೆ ಮಾಡಿಕೊಳ್ಳುವಾಗಲೂ ಯಾರೂ ತಪ್ಪಿಸಲು ಸಹಾಯ ಮಾಡಲಿಲ್ಲ ಎಂದು ದೂರಿದ್ದಾರೆ.  ಇದನ್ನೂ ಓದಿ: ಲವ್ ಜಿಹಾದ್ ಬದಲಿಗೆ `ಲವ್ ಕೇಸರಿ’ ಟ್ರೆಂಡ್ ಸೃಷ್ಟಿಸಲು ಶ್ರೀರಾಮಸೇನೆ ಕರೆ

    crime

    ಘಟನೆ ಸಂಬAಧ ಮಾಹಿತಿ ನೀಡಿರುವ ಹಿರಿಯ ಪೊಲೀಸ್ ಅಧಿಕಾರಿ ಸಂಜೀವ್ ಸುಮನ್, ಗೋಕುಲ್‌ಪ್ರಸಾದ್ ವರ್ಗಾವಣೆ ಕೋರಿದಾಗ ಜೂನಿಯರ್ ಇಂಜಿನಿಯರ್ ಹಣದ ಬೇಡಿಕೆ ಮತ್ತು ಅಸಭ್ಯ ಹೇಳಿಕೆಯನ್ನೂ ನೀಡಿದ್ದಾರೆ. ಹಾಗಾಗಿ ಆತ್ಮಹತ್ಯೆಗೆ ಕುಮ್ಮಕ್ಕು ನೀಡಿದ ಆರೋಪದ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದು, ಜೂನಿಯರ್ ಇಂಜಿನಿಯರ್ ಅನ್ನು ಅಮಾನತುಗೊಳಿಸಿ, ವಿಚಾರಣೆಗೆ ಒಳಪಡಿಸಲಾಗಿದೆ.

  • ಕೊಡಗಿನಲ್ಲಿ ಮಳೆಗಾಲ ಎದುರಿಸಲು ಚೆಸ್ಕಾಂ ಇಲಾಖೆ ಸನ್ನದ್ಧವಾಗಿದೆ: ಬಿ.ಸೋಮಶೇಖರ್

    ಕೊಡಗಿನಲ್ಲಿ ಮಳೆಗಾಲ ಎದುರಿಸಲು ಚೆಸ್ಕಾಂ ಇಲಾಖೆ ಸನ್ನದ್ಧವಾಗಿದೆ: ಬಿ.ಸೋಮಶೇಖರ್

    ಮಡಿಕೇರಿ: ಕೊಡಗಿನ ಮಳೆಗಾಲದಲ್ಲಿ ಎದುರಾಗುವ ವಿದ್ಯುತ್ ಸಮಸ್ಯೆಗಳನ್ನು ಎದುರಿಸಲು ಈಗಾಗಲೇ ಚೆಸ್ಕಾಂ ಇಲಾಖೆ ಸನ್ನದ್ಧವಾಗಿದೆ ಎಂದು ಚೆಸ್ಕಾಂ ಕಾರ್ಯನಿರ್ವಹಕ ಎಂಜಿನಿಯರ್.ಬಿ.ಸೋಮಶೇಖರ್ ಪಬ್ಲಿಕ್ ಟಿವಿಗೆ ತಿಳಿಸಿದ್ದಾರೆ.

    ಇಂದು ನಗರದಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಮಳೆಗಾಲದಲ್ಲಿ ವಿಪರೀತ ಗಾಳಿ-ಮಳೆ ಆಗುವುದರಿಂದ ಗ್ರಾಮೀಣ ಪ್ರದೇಶಗಳಲ್ಲಿ ಎದುರಾಗುವ ವಿದ್ಯುತ್ ಸಮಸ್ಯೆಗಳಿಗೆ ತುರ್ತಾಗಿ ಸ್ಪಂದಿಸಲು ಇಲಾಖೆ ಸನ್ನದ್ಧವಾಗಿದೆ. ವಿದ್ಯುತ್ ಇಲಾಖೆ ಪ್ರತೀ ಮಳೆಗಾಲವನ್ನು ಗಂಭೀರವಾಗಿ ತೆಗೆದುಕೊಳ್ಳುತ್ತದೆ. 2018ರಿಂದ ಜಿಲ್ಲೆಯಲ್ಲಿ ಪ್ರವಾಹದ ಪರಿಸ್ಥಿತಿ ಸೃಷ್ಟಿಯಾಗುತ್ತಿದೆ ಎಂದರು.

    ಇಂತಹ ಸನ್ನಿವೇಶವನ್ನು ಸಮರ್ಥವಾಗಿ ಎದುರಿಸಲು ಚೆಸ್ಕಾಂ ಸಿಬ್ಬಂದಿ ರೆಡಿಯಾಗಿದ್ದಾರೆ. ಈಗಾಗಲೇ ನಿಗದಿಪಡಿಸಿರುವ ಸ್ಥಳಗಳಲ್ಲಿ ವಿದ್ಯುತ್ ಕಂಬಗಳನ್ನು ಸಂಗ್ರಹಿಸಿದ್ದೇವೆ. ಮಳೆಗಾಲದಲ್ಲಿ ಅಧಿಕ ಕೆಲಸ ಇರುವುದರಿಂದ ಅಗತ್ಯವಿರುವ ಸಿಬ್ಬಂದಿಯ ಜೊತೆಗೆ 150 ಹೆಚ್ಚುವರಿ ಸಿಬ್ಬಂದಿಯನ್ನು ನಿಯೋಜಿಸಲು ಟೆಂಡರ್ ಕರೆಯಲಾಗಿದೆ. ಸಾಮಾನ್ಯವಾಗಿ 5 ವಾಹನಗಳನ್ನು ಬಳಸುತ್ತಿದ್ದ ಸಿಬ್ಬಂದಿ ಈ ಸಂದರ್ಭದಲ್ಲಿ 20 ವಾಹನಗಳನ್ನು ಬಳಸಿಕೊಳ್ಳುತ್ತೇವೆ ಎಂದು ತಿಳಿಸಿದರು.

    ಸಾಮಾನ್ಯವಾಗಿ ಅತಿ ಹೆಚ್ಚು ಮಳೆಯಾಗುವ ಪ್ರದೇಶಗಳದ ಸೋಮವಾರಪೇಟೆ ತಾಲೂಕಿನ ಶಾಂತಳ್ಳಿ, ಸೂರ್ಲಬ್ಬಿ, ಮಾದಾಪುರ, ಮಡಿಕೇರಿ ತಾಲೂಕಿನ ಭಾಗಮಂಡಲ ಹಾಗೂ ಪಾಲಿಬೆಟ್ಟ ಭಾಗಗಳಲ್ಲಿ ಹೆಚ್ಚಿನ ಸಮಸ್ಯೆಗಳು ಕಂಡುಬರುತ್ತವೆ. ಟ್ರಾನ್ಸ್ ಫಾರ್ಮರ್ನಿಂದ ವಿದ್ಯುತ್ ಲೈನ್‍ಗಳು 50 ರಿಂದ 60 ಕಿ.ಮೀಟರ್ ದೂರಕ್ಕೆ ಸಂಪರ್ಕ ಕಲ್ಪಿಸಿರುವುದರಿಂದ ಸಮಸ್ಯೆಗಳು ಎದುರಾಗುತ್ತವೆ ಎಂದರು.