Tag: power minister

  • ಸರ್ಕಾರಿ ಕಚೇರಿಗಳಿಗೆ ಶಾಕ್ ನೀಡಿದ ಸುನಿಲ್ ಕುಮಾರ್ 

    ಸರ್ಕಾರಿ ಕಚೇರಿಗಳಿಗೆ ಶಾಕ್ ನೀಡಿದ ಸುನಿಲ್ ಕುಮಾರ್ 

    ಬೆಂಗಳೂರು: ಸರ್ಕಾರಿ ಕಚೇರಿಗಳಲ್ಲಿ ಬಿಲ್ ಪಾವತಿಸದ ಹಿನ್ನೆಲೆ ಇಲಾಖೆಗೆ ನಷ್ಟ ಉಂಟಾಗುತ್ತಿದೆ. ಹೀಗಾಗಿ ಕಚೇರಿಗಳಲ್ಲಿ ಪ್ರೀಪೇಡ್ ಮೀಟರ್ ಅಳವಡಿಕೆಗೆ ನಿರ್ಧಾರ ಮಾಡಲಾಗಿದೆ ಎನ್ನುವ ಮೂಲಕ ಸರ್ಕಾರಿ ಕಚೇರಿಗಳಿಗೆ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನಿಲ್ ಕುಮಾರ್ ಶಾಕ್ ನೀಡಿದ್ದಾರೆ.

    ಪಕ್ಷದ ಕಚೇರಿಗೆ ಸಚಿವರ ಕಡ್ಡಾಯ ಭೇಟಿಗೆ ವರಿಷ್ಟರು ಸೂಚನೆ ನೀಡುರುವ ಹಿನ್ನೆಲೆ, ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಗೆ ಆಗಮಿಸಿದ ಸಚಿವರು, ಬಿಜೆಪಿ ಕಾರ್ಯಕರ್ತರು ಹಾಗೂ ಸಾರ್ವಜನಿಕರಿಂದ ಅಹವಾಲು ಸ್ವೀಕಾರ ಮಾಡಿದರು.

    ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಣ ಕೊಟ್ಟು ರೀಚಾರ್ಜ್ ಮಾಡಿದ್ರೆ ಮಾತ್ರ ಇನ್ಮುಂದೆ ಸರ್ಕಾರಿ ಕಚೇರಿಗಳಲ್ಲಿ ಕರೆಂಟ್ ಸಿಗುತ್ತದೆ. ಈಗಾಗಲೇ ಕೋಟ್ಯಂತರ ಬಿಲ್ ಬಾಕಿ ಇರೋದ್ರ್ರಿಂದ ಹೊಸ ನಿರ್ಧಾರ ಮಾಡಿದ್ದೇವೆ. ಶೀಘ್ರವೇ ಪ್ರೀಪೇಡ್ ಯೋಜನೆ ಆರಂಭಿಸಿ ಸರ್ಕಾರಿ ಕಚೇರಿಗಳಲ್ಲಿ ಪ್ರೀಪೇಡ್ ಮೀಟರ್ ಅಳವಡಿಕೆ ಮಾಡಲಿದ್ದೇವೆ. ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಪ್ರಿಪೇಡ್ ಮೀಟರ್ ಅಳವಡಿಕೆಗೆ ತೀರ್ಮಾನಿಸಿದ್ದೇವೆ. ಸರ್ಕಾರಿ ಕಚೇರಿಗಳಲ್ಲಿ ವಿದ್ಯುತ್ ಬಿಲ್ ಬಾಕಿ ಜಾಸ್ತಿ ಉಳಿದಿದ್ದು ಸರ್ಕಾರಕ್ಕೆ ಹೊರೆಯಾಗಲಿದೆ. ಹಾಗಾಗಿ ಪ್ರಿಪೇಡ್ ಮಿಟರ್ ಅಳವಡಿಕೆಗೆ ಮುಂದಾಗಿದ್ದೇವೆ ಎಂದರು.

    ಗ್ರಾಮ ಪಂಚಾಯತಿ ಮಟ್ಟದಲ್ಲಿ ಮನೆ ಕಟ್ಟಿ, ವಿದ್ಯುತ್ ಸಂಪರ್ಕ ಪಡೆಯಲಾಗದವರಿಗೆ ವಿದ್ಯುತ್ ಪೂರೈಕೆ ಮಾಡುವುದು ಸಿಎಂ ಕನಸಾಗಿದೆ. ಬೆಳಕು ಯೋಜನೆಯಡಿ ನೂರು ದಿನದೊಳಗೆ ಎನ್.ಓ.ಸಿ ಇಲ್ಲದೆ ವಿದ್ಯುತ್ ನೀಡಲು ನಿರ್ಧಾರ ಮಾಡಿದ್ದೇವೆ. ಟ್ರಾನ್ಸ್‍ಫಾರ್ಮರ್ ಬ್ಯಾಂಕ್ ಮಾಡಿ, ಕೆಟ್ಟುಹೋದ 24 ಗಂಟೆಯಲ್ಲಿ ಟಿ.ಸಿ ಬದಲಾಯಿಸಲು ಸೂಚಿಸಿದ್ದೇನೆ. ಗಂಗಾ ಕಲ್ಯಾಣ ಯೋಜನೆಯಲ್ಲಿ ಬಡ ರೈತರು ನೀರಾವರಿ ನಿಗಮದ ಮೂಲಕ ಬೋರ್ ಕೊರೆದಿದ್ದು, ನಿಗಮದಿಂದ ಹಣ ಭರ್ತಿ ಮಾಡಬೇಕು. ನಿಗಮ ಹಣ ಪಾವತಿಸಿದ 30 ದಿನದಲ್ಲಿ ಪಂಪ್ ಸೆಟ್‍ಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲು ನಿರ್ಧಾರ ಮಾಡಿದ್ದೇವೆ ಎಂದು ತಿಳಿಸಿದರು. ಇದನ್ನೂ ಓದಿ:ಕೋವಿಡ್ ನಿಯಂತ್ರಣದಲ್ಲಿ ರಾಜ್ಯದಲ್ಲಿಯೇ ಮಂಡ್ಯಕ್ಕೆ ಮೊದಲ ಸ್ಥಾನ: ಅಶ್ವಥ್ ನಾರಾಯಣ್

    ಹಳ್ಳಿಗಳಿಗೆ ಕೃಷಿ ಪಂಪ್ ಸೆಟ್ ಯೋಜನೆ ಮೂಲಕ ಏಳು ಗಂಟೆ ವಿದ್ಯುತ್ ಪೂರೈಕೆಗೆ ಚಿಂತನೆ ಮಾಡಲಾಗಿದೆ. ಇದಕ್ಕಾಗಿ 60ಕ್ಕೂ ಹೆಚ್ಚು ಜಾಗ ಗುರ್ತಿಸಿ, ನಿರಂತರ ವಿದ್ಯುತ್ ಪೂರೈಕೆಗೆ ಯೋಜನೆ ರೂಪಿಸಲಾಗಿದೆ. ಹುದ್ದೆ ಖಾಲಿಯಿರುವ ಕಡೆ ಲೈನ್ ಮ್ಯಾನ್ ನೇಮಕಾತಿ, ಜೆಇ ನೇಮಕಾತಿ ಮಾಡಲಾಗುವುದು. ವರ್ಗಾವಣೆ ದಂಧೆಗೆ ಬ್ರೇಕ್ ಹಾಕಲು ನಿರ್ಧರಿಸಿದ್ದೇವೆ. ಸಿಎಂ ಸಲಹೆ ಮೇರೆಗೆ ವರ್ಗಾವಣೆಯಾಗಲಿದೆ ಅಷ್ಟೇ ಎಂದು ಹೇಳಿದರು. ಇದನ್ನೂ ಓದಿ: ಫೋಟೋ ಚೆನ್ನಾಗಿ ಬಂದಿದ್ಯಾ ಅಂತ ಚೆಕ್ ಮಾಡ್ತಿದ್ದಾನೆ ರಾಯನ್: ಸುಧಾರಾಣಿ

    ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ರಾಜ್ಯೋತ್ಸವ ಪ್ರಶಸ್ತಿಗಾಗಿ ಅರ್ಜಿ ಹಾಕುವ ಸಂಸ್ಕೃತಿ ಕಡಿಮೆ ಆಗಬೇಕು. ಸಾಧಕರನ್ನ ಗುರುತಿಸಿ ಪ್ರಶಸ್ತಿ ನೀಡುವ ಕೆಲಸ ಆಗಬೇಕು. ಶಕ್ತಿ ಇರುವವರು ಬೆಂಗಳೂರಿಗೆ ಬಂದು ಅರ್ಜಿ ಹಾಕ್ತಾರೆ, ಇಲ್ಲದವರಿಗೆ ಅರ್ಜಿ ಹಾಕಲು ಸಾಧ್ಯವಾಗುವುದಿಲ್ಲ. ಹಾಗಾಗಿ ಈ ಬಾರಿ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿ ಹಾಕದವರನ್ನು ಪರಿಗಣಿಸುತ್ತೇವೆ. ಕಲಾವಿದರನ್ನು ಗುರ್ತಿಸಲು ಡಾಟಾ ಬ್ಯಾಂಕ್ ಮಾಡಲು ನಿರ್ಧಾರ ಮಾಡಿದ್ದೇವೆ. ಅಮೃತ ಮಹೋತ್ಸವ ಕಾರ್ಯಕ್ರಮ ಮಾಡಲು ನಿರ್ಧರಿಸಲಾಗಿದೆ. ಸ್ವಾತಂತ್ರ್ಯ ಹೋರಾಟಕ್ಕೆ ಕರ್ನಾಟಕದ ಕೊಡುಗೆ ಬಗ್ಗೆ ಚಿತ್ರಣ ತೋರಿಸಲಾಗುವುದು ಎಂದರು.

  • ನಾನೂ ಕೂಡ ಸಿಎಂ ಅಭ್ಯರ್ಥಿಯೆಂದು ಮನದಾಳದ ಆಸೆಯನ್ನು ಬಿಚ್ಚಿಟ್ಟ ಡಿಕೆಶಿ

    ನಾನೂ ಕೂಡ ಸಿಎಂ ಅಭ್ಯರ್ಥಿಯೆಂದು ಮನದಾಳದ ಆಸೆಯನ್ನು ಬಿಚ್ಚಿಟ್ಟ ಡಿಕೆಶಿ

    ಮಂಡ್ಯ: ನಾನೂ ಕೂಡ ಸಿಎಂ ಅಭ್ಯರ್ಥಿ ಎಂದು ಹೇಳುವ ಮೂಲಕ ಸಾವಿರಾರು ಜನ ಕಾರ್ಯಕರ್ತರೆದುರು ಇಂಧನ ಸಚಿವ ಡಿಕೆ.ಶಿವಕುಮಾರ್ ತಮ್ಮ ಮನದ ಆಸೆಯನ್ನು ವ್ಯಕ್ತಪಡಿಸಿದ್ದಾರೆ.

    ಮಂಡ್ಯದ ಮದ್ದೂರು ಕ್ಷೇತ್ರದ ಕಾಂಗ್ರೆಸ್ ಮಧುಮಾದೇಗೌಡ ಪರ ರೋಡ್ ಶೋ ನಡೆಸುತ್ತಾ ಮಾತನಾಡಿದ ಇಂಧನ ಸಚಿವ ಡಿಕೆ.ಶಿವಕುಮಾರ್, ಕುಮಾರಣ್ಣ ಮುಖ್ಯಮಂತ್ರಿ ಆಗ್ತಾರೆ ಓಟ್ ಹಾಕಿ ಅಂತಾರೆ. ಹಾಗಾದ್ರೆ ನಾನೇನಿಲ್ವಾ? ಎಂದು ಕಾರ್ಯಕರ್ತರನ್ನು ಪ್ರಶ್ನಿಸುವ ಮೂಲಕ ನಾನು ಕೂಡ ಸಿಎಂ ಅಭ್ಯರ್ಥಿ ಎಂಬ ಗುಟ್ಟು ರಟ್ಟು ಮಾಡಿದ್ದಾರೆ. ಡಿಕೆಶಿ ಮಾತಿಗೆ ಓ ಎಂದು ಕೂಗುವ ಮೂಲಕ ಕಾರ್ಯಕರ್ತರು ಕೂಡ ಹರ್ಷ ವ್ಯಕ್ತಪಡಿಸಿದ್ದಾರೆ.

    ಇದೇ ವೇಳೆ ದೇವೇಗೌಡರು, ಕುಮಾರಸ್ವಾಮಿ ವಿರುದ್ಧ ವ್ಯಂಗ್ಯವಾಗಿ ಮಾತನಾಡಿದ ಡಿಕೆಶಿ, ಸಿಎಂ ಆಗಿದ್ದರು, ಪ್ರಧಾನಿ ಆಗಿದ್ರು. ಮಂಡ್ಯಕ್ಕೆ ಏನು ಮಾಡಿದ್ದಾರೆ ಹೇಳ್ಬೇಕಲ್ವಾ ಇದೇನು ಪಂಚಾಯಿತಿ ಕೆಟ್ಟೋಯ್ತಾ? ನಾನೇ ಮುಂದಿನ ಮುಖ್ಯಮಂತ್ರಿ ಅಂದ್ರೆ ಜನ ದಡ್ಡರ? ಇವೆಲ್ಲ ಆಗದಿರೋ ಕಥೆ. ತಮ್ಮಣ್ಣಂಗೆ ಈ ಬಾರಿ ರೆಸ್ಟ್ ಕೊಡಿ. ಮಧುನ ಈ ಬಾರಿ ಗೆಲ್ಸಿ ಎಂದು ಡಿಕೆಶಿ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.

    ಇದೇ ಸಂದರ್ಭದಲ್ಲಿ ತಮ್ಮ ಮಗ ಮಧುಮಾದೇಗೌಡ ಪರ ಪ್ರಚಾರಕ್ಕೆ ಬಂದಿದ್ದ ಜಿ.ಮಾದೇಗೌಡ ಅವರ ಕಾಲನ್ನು ಮುಟ್ಟಿ ನಮಸ್ಕರಿಸಿ ಡಿಕೆ.ಶಿವಕುಮಾರ್ ಆಶೀರ್ವಾದ ಪಡೆದಿದ್ದಾರೆ.

  • ಯಾವ ಗರ್ಭಗುಡಿಯಲ್ಲಿ ಏನು ಅಡಗಿದ್ಯೋ ಚರ್ಚೆ ಮಾಡಲ್ಲ- ಎಚ್‍ಡಿಡಿ ಹೊಗಳಿದ ಮೋದಿಗೆ ಡಿಕೆಶಿ ಟಾಂಗ್

    ಯಾವ ಗರ್ಭಗುಡಿಯಲ್ಲಿ ಏನು ಅಡಗಿದ್ಯೋ ಚರ್ಚೆ ಮಾಡಲ್ಲ- ಎಚ್‍ಡಿಡಿ ಹೊಗಳಿದ ಮೋದಿಗೆ ಡಿಕೆಶಿ ಟಾಂಗ್

    ಉಡುಪಿ: ಇಂಧನ ಸಚಿವ ಡಿಕೆ ಶಿವಕುಮಾರ್ ಅವರು ಇಂದು ತಮ್ಮ ಪತ್ನಿ ಉಷಾ ಅವರ ಜೊತೆ ಉಡುಪಿ ಕೃಷ್ಣಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ ಮಾಡಿದ್ದಾರೆ.

    ಕೃಷ್ಣಮಠದ ಪರ್ಯಾಯ ಪಲಿಮಾರು ಶ್ರೀಗಳನ್ನು ಭೇಟಿ ಮಾಡಿ, ಆಶೀರ್ವಾದ ಪಡೆದರು. ನಂತರ ಮಠದಲ್ಲಿ ಮಾಧ್ಯಮಗಳ ಜೊತೆ ಡಿಕೆಶಿ ಮಾರ್ಮಿಕ ಮಾತನಾಡಿದರು. ಶ್ರೀಕೃಷ್ಣ ಒಬ್ಬ ಸಮರ್ಥ ರಾಜಕಾರಣಿ. ರಾಜಕಾರಣಿಯನ್ನು ದೇವರ ಹೆಸರಲ್ಲಿ ಧರ್ಮ ಸ್ಥಾಪನೆಗೆ ಪ್ರತಿಷ್ಠಾಪಿಸಲಾಗಿದೆ. ಹಾಗಾಗಿ ರಾಜಕಾರಣಿಗಳು ಹೆಚ್ಚಾಗಿ ಕೃಷ್ಣಮಠಕ್ಕೆ ಬರ್ತಾರೆ ಅಂತ ಹೇಳಿದ್ರು.

    ಮಠಕ್ಕೆ ಯಾರು ಬಂದ್ರು ಯಾರು ಬರಲಿಲ್ಲ ಮುಖ್ಯವಲ್ಲ. ನನಗೆ ಕೃಷ್ಣನ ಮೇಲೆ ಬಹಳ ನಂಬಿಕೆಯಿದೆ. ಪಕ್ಷದ ಪರವಾಗಿ, ವೈಯುಕ್ತಿಕವಾಗಿ ಸರ್ಕಾರದ ಪರವಾಗಿ ಬಂದಿದ್ದೇನೆ ಅಂತ ಹೇಳಿದ ಅವರು, ದೇವರಲ್ಲಿ ಏನು ಬೇಡಿಕೊಂಡ್ರಿ ಎಂಬ ಪ್ರಶ್ನೆಗೆ ಭಕ್ತ – ಭಗವಂತನ ವ್ಯವಹಾರ ನಮ್ಮಿಬ್ರಿಗೆ ಗೊತ್ತಿದೆ. ಪೂಜ್ಯ ಶ್ರೀಗಳೂ ಆಶೀರ್ವಾದ ಮಾಡಿದ್ದಾರೆ. ನಾನು ಬೇಡಿದನ್ನು, ಶೀಗಳು ಆಶೀರ್ವಾದ ಮಾಡಿದ್ದನ್ನೆಲ್ಲ ಬಹಿರಂಗ ಮಾಡಲ್ಲ ಅಂತ ಬೇಡಿಕೆ ಮತ್ತು ಆಶೀರ್ವಾದವನ್ನು ಗೌಪ್ಯವಾಗಿಟ್ಟರು.

    ಶ್ರೀಕೃಷ್ಣ ನನಗೆ ಮಾದರಿ ಅಂದ್ರು. ಈ ಬಾರಿ ಧರ್ಮ ಅಧರ್ಮದ ನಡುವಿನ ಚುನಾವಣೆ. ನಮ್ಮದು ಧರ್ಮ- ಬಿಜೆಪಿದ್ದು ಅಧರ್ಮ ಅಂದ್ರು. ಮಠಕ್ಕೆ ಬರುವುದು ಬಿಡುವುದು ಅವರವರ ವೈಯಕ್ತಿಕ ವಿಚಾರ. ಸಿದ್ದರಾಮಯ್ಯ ಮಠಕ್ಕೆ ಬರಲಿಲ್ಲ ಎನ್ನುವುದು ಸತ್ಯ. ಹಾಗಂತ ಸಿದ್ದರಾಮಯ್ಯನವರು ಮುಜರಾಯಿ ಇಲಾಖೆ ಮುಚ್ಚಲಿಲ್ಲವಲ್ಲ ಅಂತ ಹೇಳಿದರು.

    ಮೋದಿ, ಅಮಿತ್ ಶಾ ದೇವೇಗೌಡರನ್ನು ಹೊಗಳಲಿ. ಅಂತರಂಗದ ವಿಷಯ ಗೌಪ್ಯ. ಯಾವ ಗರ್ಭಗುಡಿಯಲ್ಲಿ ಏನು ಅಡಗಿದ್ಯೋ ನಾನು ಚರ್ಚೆ ಮಾಡಲ್ಲ ಅಂತ ಜೆಡಿಎಸ್ ಅನಿವಾರ್ಯ ಪರಿಸ್ಥಿತಿ ಬಂದ್ರೆ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಳ್ಳುತ್ತೆ ಅಂತ ಹೇಳಿದ್ರು. ಐಟಿ ಕಾಂಗ್ರೆಸ್ ಮೇಲೆ ನಿರಂತರ ದಾಳಿ ಮಾಡಿದೆ. ಇದಕ್ಕೆ ಬಿಜೆಪಿ ಉತ್ತರ ಕೊಡಬೇಕು. ಡಿಕೆ ಶುದ್ಧ ನೀರು ಮಾಡಿ 5 ವರ್ಷವಾಯ್ತು. ಈಗ ವಾಟರ್ ಕ್ಯಾನ್ ಮಾಡಿದ್ದಲ್ಲ. ವಾಟರ್ ಕ್ಯಾನ್ ಹಂಚುವ ಅವಶ್ಯಕತೆ ನಮಗಿಲ್ಲ ಅಂತ ವಾಗ್ದಾಳಿ ನಡೆಸಿದ್ರು.

    ರಾಜಕಾರಣದಲ್ಲಿ ಸಾಧಿಸುವುದು ಮತ್ತಷ್ಟಿದೆ ಅನ್ನುವ ಡಿಕೆ ಶಿವಕುಮಾರ್ ಸಿಎಂ ಕುರ್ಚಿಯ ಮೇಲೆ ಕಣ್ಣಿಟ್ಟಿರುವುದು ಸುಳ್ಳಲ್ಲ. ಭಗವಾನ್ ಶ್ರೀ ಕೃಷ್ಣನಲ್ಲಿ, ಮುಖ್ಯಪ್ರಾಣನಲ್ಲಿ ಅದನ್ನು ಬೇಡಿಕೊಂಡಿದ್ದೇನೆ ಅಂತ ನೇರವಾಗಿ ಒಪ್ಪಿಕೊಳ್ಳದಿದ್ದರೂ ಮಾರ್ಮಿಕವಾಗಿ ಹೇಳಿದರು.

  • ಸರ್ಕಾರಿ ಕೆಲಸ ಕೊಡ್ಸೋದಾಗಿ ಮೋಸ- ಕಾಂಗ್ರೆಸ್ ನಾಯಕರ ಆಪ್ತ ಸಿಸಿಬಿ ಬಲೆಗೆ

    ಸರ್ಕಾರಿ ಕೆಲಸ ಕೊಡ್ಸೋದಾಗಿ ಮೋಸ- ಕಾಂಗ್ರೆಸ್ ನಾಯಕರ ಆಪ್ತ ಸಿಸಿಬಿ ಬಲೆಗೆ

    ಬೆಂಗಳೂರು: ಕಾಂಗ್ರೆಸ್ ನಾಯಕರ ಆಪ್ತನೊಬ್ಬ ಸರ್ಕಾರಿ ಕೆಲಸ ಕೊಡಿಸ್ತೀನಿ ಅಂತ ಕೋಟ್ಯಾಂತರ ರೂಪಾಯಿ ಪಂಗನಾಮ ಹಾಕಿ ಇದೀಗ ಸಿಸಿಬಿ ಪೊಲೀಸರ ಅತಿಥಿಯಾಗಿದ್ದಾನೆ.

    ರಾಜ್ಯ ಸರ್ಕಾರಿ ನೌಕರರ ಸಂಘದ ಸದಸ್ಯ ಮುಂಜುನಾಥ್ ಮೋಸ ಮಾಡಿರೋ ವ್ಯಕ್ತಿ. ಈತನಿಗೆ ಸಿಎಂ ಸಿದ್ದರಾಮಯ್ಯರಿಂದ ಹಿಡಿದು, ನಗರ ಪೊಲೀಸ್ ಆಯುಕ್ತರ ತನಕ ಎಲ್ಲರೂ ದೋಸ್ತಿಗಳಾಗಿದ್ದಾರೆ.

    ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರಗೆ ಕ್ಲೋಸ್ ಫ್ರೆಂಡ್ ಆಗಿರೋ ಮಂಜುನಾಥ್ ಒಂದು ಫೋನ್ ಮಾಡಿದ್ರೆ ಕಾಂಗ್ರೆಸ್ ಪಾಳಯವೇ ಈತನ ಮುಂದೆ ಬಂದು ನಿಲ್ಲುತ್ತೆ. ಕೈ ನಾಯಕರ ಜೊತೆಗಿನ ಫೋಟೋಗಳನ್ನು ತೋರಿಸಿ, ಸರ್ಕಾರಿ ಕೆಲಸ ಕೊಡಿಸ್ತೀನಿ ಅಂತ ಕೊಟ್ಯಾಂತರ ರೂಪಾಯಿ ಪಂಗನಾಮ ಹಾಕಿದ್ದಾನೆ. ಆದ್ರೆ ಇದೀಗ ಬೆಂಗಳೂರಿನ ಸಿಸಿಬಿ ಪೊಲೀಸರು ಮಂಜುನಾಥ್‍ನನ್ನು ಹೆಡೆಮುರಿ ಕಟ್ಟಿ, ಕಂಬಿ ಹಿಂದೆ ತಳ್ಳಿದ್ದಾರೆ.

    ಕಾಂಗ್ರೆಸ್ ಸರ್ಕಾರದ ಎಲ್ಲಾ ಸಚಿವರ ಜೊತೆ ಫೋಟೋ ತೆಗಿಸಿಕೊಂಡಿರೋ ಮಂಜುನಾಥ್, ಯಾರದೇ ಹುಟ್ಟುಹಬ್ಬ ಬಂದ್ರು ಕೂಡ ಬ್ಯಾನರ್ ಹಾಕಿಸಿಕೊಳ್ತಿದ್ದ. ಬಿ ಗ್ರೂಪ್ ನೌಕರಿ ಸಿಗ್ಬೇಕು ಅಂದ್ರೆ 20 ಲಕ್ಷ, ಸಿ ಗ್ರೂಪ್‍ಗೆ 15 ಲಕ್ಷ ಅಂತ ರೇಟ್ ಫಿಕ್ಸ್ ಮಾಡ್ತಿದ್ದ. ಈತನ ಸಚಿವರೊಂದಿಗಿನ ಫೋಟೋ ನೋಡಿ ಮರುಳಾದ ಜನ ಕೆಲಸಕ್ಕಾಗಿ ಲಕ್ಷಾಂತರ ಹಣ ಕೊಟ್ಟು ಈಗ ಕಣ್ಕಣ್ಣು ಬಿಡುತ್ತಿದ್ದಾರೆ.


    ಮಂಜುನಾಥ್ ಬಂಧನವಾದ ವಿಷಯ ತಿಳಿಯುತ್ತಿದ್ದಂತೆ ಸರ್ಕಾರವೇ ಬಿದ್ದು ಹೋಯ್ತೇನೋ ಎನ್ನುವಂತೆ ಈತನನ್ನು ಬಿಡಿಸಲು ಪ್ರಯತ್ನ ನಡೆದಿದೆ. ಆದ್ರೆ ಸಾಕ್ಷಿ ಇದ್ದ ಕಾರಣ ಕಸ್ಟಡಿಗೆ ಪಡೆದಿರೋ ಸಿಸಿಬಿ ಪೊಲೀಸರು ಮಂಜುನಾಥ್‍ನಿಂದ ಮಾಹಿತಿ ಕಲೆ ಹಾಕುತ್ತಿದ್ದಾರೆ.

  • ಸಿಎಂ ಕುರ್ಚಿ ಮೇಲೆ ಕಣ್ಣು?- ಕೊಲ್ಲೂರು ಮೂಕಾಂಬಿಕಾ ಸನ್ನಿಧಿಯಲ್ಲಿ ಡಿಕೆಶಿಯಿಂದ ಶತಚಂಡಿಕಾ ಹೋಮ

    ಸಿಎಂ ಕುರ್ಚಿ ಮೇಲೆ ಕಣ್ಣು?- ಕೊಲ್ಲೂರು ಮೂಕಾಂಬಿಕಾ ಸನ್ನಿಧಿಯಲ್ಲಿ ಡಿಕೆಶಿಯಿಂದ ಶತಚಂಡಿಕಾ ಹೋಮ

    ಉಡುಪಿ: 2018ರ ಚುನಾವಣೆಯ ನಂತರ ಡಿ.ಕೆ ಶಿವಕುಮಾರ್ ಸಿಎಂ ಕುರ್ಚಿಯ ಮೇಲೆ ಕಣ್ಣಿಟ್ಟಿದ್ದಾರೆ ಎಂದು ಚರ್ಚೆಗಳು ಶುರುವಾಗಿದೆ. ಈ ನಡುವೆ ಉಡುಪಿಯ ಕೊಲ್ಲೂರು ಮೂಕಾಂಬಿಕಾ ಸನ್ನಿಧಿಯಲ್ಲಿ ಡಿಕೆಶಿ ಶತಚಂಡಿಕಾ ಹೋಮ ಮಾಡಿಸುತ್ತಿದ್ದಾರೆ.

    ಐಟಿ ದಾಳಿಯಿಂದ ನಲುಗಿಹೋಗಿರುವ ಇಂಧನ ಸಚಿವ ಡಿ.ಕೆ ಶಿವಕುಮಾರ್ ಕೊಲ್ಲೂರು ಮೂಕಾಂಬಿಕೆಯ ಮೊರೆ ಹೋಗಿದ್ದಾರೆ. ಇಂದು ಬೆಳಗ್ಗೆ ದೇವಸ್ಥಾನಕ್ಕೆ ಆಗಮಿಸಿದ ಡಿಕೆಶಿ ಶತಚಂಡಿಕಾ ಹೋಮಕ್ಕೆ ಪ್ರಾರ್ಥನೆ ಮತ್ತು ಸಂಕಲ್ಪ ಮಾಡಿದ್ದಾರೆ. ರಾಜಕೀಯ ಅಭಿವೃದ್ಧಿ, ಇಷ್ಟಾರ್ಥ ಸಿದ್ಧಿ, ಶತ್ರು ನಾಶ, ಹರಕೆ, ಉದ್ಯಮ, ಆರೋಗ್ಯ, ಮಾನಸಿಕ ನೆಮ್ಮದಿ, ಕೌಟುಂಬಿಕ ಕಲಹ ಹೀಗೆ ಸಕಲ ದೋಷ ನಿವಾರಣೆ ಮತ್ತು ಶ್ರೇಯೋಭಿವೃದ್ಧಿಗೆ ಚಂಡಿಕಾ ಹೋಮ ಮಾಡಿಸಲಾಗುತ್ತದೆ. ಇದನ್ನೂ ಓದಿ: ಪಂಥಾಹ್ವಾನ ನೀಡಿದ್ರೂ `ಪವರ್’ಫುಲ್ ಸಚಿವರು ಸೈಲೆಂಟ್ ಆಗಿರೋದಕ್ಕೆ ಅಜ್ಜಯ್ಯ ಕಾರಣನಾ?

    ಸಾವಿರ ಚಂಡಿಕಾ ಹೋಮಕ್ಕೆ ಸರಿಸಾಟಿಯಾದ ಹೋಮ ಮಾಡಿಸುತ್ತಿರುವ ಡಿ.ಕೆ ಶಿವಕುಮಾರ್, ಕೊಲ್ಲೂರು ಮೂಕಾಂಬಿಕೆಯ ಪರಮ ಭಕ್ತ. ಡಿಕೆಶಿ ತನ್ನ ರಾಜಕೀಯ ಮತ್ತು ಉದ್ಯಮದಲ್ಲಿ ಯಶಸ್ಸು ಮತ್ತು ಸಂಕಷ್ಟ ಬಂದಾಗ ಕೊಲ್ಲೂರಿಗೆ ಬಂದು ಪೂಜೆ, ಹೋಮ ಮಾಡಿಸುತ್ತಾರೆ. ಇದನ್ನೂ ಓದಿ: ಅಭ್ಯರ್ಥಿ ಇಲ್ಲಿ ನೆಪ ಮಾತ್ರ, ನಾನು-ಡಿ.ಕೆ.ಸುರೇಶ್ ಇಲ್ಲಿನ ನಿಜವಾದ ಅಭ್ಯರ್ಥಿಗಳು ನೆನಪಿರಲಿ: ಚನ್ನಪಟ್ಟಣದಲ್ಲಿ ಡಿಕೆಶಿ ಅಬ್ಬರ

    ಶತಚಂಡಿಕಾ ಹೋಮ ಸೇವೆಗೆ ಬೆಳಗ್ಗೆ ಚಾಲನೆ ಸಿಕ್ಕಿದ್ದು, ಮೂರು ದಿನಗಳ ಕಾಲ ನಿರಂತರ ಯಾಗ ನಡೆಯಲಿದೆ. ಜನವರಿ 8ರ ಮಧ್ಯಾಹ್ನ ಚಂಡಿಕಾ ಹೋಮದ ಪೂರ್ಣಾಹುತಿ ನಡೆಯಲಿದೆ. ದೇವಳದ ಹಿರಿಯ ಅರ್ಚಕ ನರಸಿಂಹ ಅಡಿಗ ನೇತ್ರತ್ವದಲ್ಲಿ ಶತಚಂಡಿಕಾಯಾಗ ಆರಂಭವಾಗಿದೆ. ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕೊಲ್ಲೂರು ಗ್ರಾಮಕ್ಕೆ ಡಿಕೆಶಿ ಮೂರು ದಿನ ಬರ್ತಾರೆ ಎಂದು ಹೇಳಲಾಗಿದೆ.

    ಸೋಮವಾರ ಉಡುಪಿಯಲ್ಲಿ ನಡೆಯೋ ಮೂರು ಸಮಾವೇಶದಲ್ಲಿ ಸಿಎಂ ಇರಲಿದ್ದು, ಈ ಸಂದರ್ಭ ಡಿಕೆಶಿಯೂ ಜೊತೆಗಿರ್ತಾರೆ. ಇತ್ತ ಹೋಮ, ಅತ್ತ ರಾಜಕೀಯ ಪ್ರಚಾರದಲ್ಲಿ ಪಾಲ್ಗೊಂಡು ಸ್ವಾಮಿ ಮತ್ತು ಸ್ವ-ಕಾರ್ಯದಲ್ಲಿ ಡಿಕೆಶಿ ತೊಡಗಲಿದ್ದಾರೆ ಎನ್ನಲಾಗಿದೆ.

  • ಅಡ್ಜಸ್ಟ್ ಮೆಂಟ್ ರಾಜಕೀಯ ವದಂತಿಗೆ ಹೆಚ್‍ಡಿಡಿ ಸ್ಪಷ್ಟನೆ

    ಅಡ್ಜಸ್ಟ್ ಮೆಂಟ್ ರಾಜಕೀಯ ವದಂತಿಗೆ ಹೆಚ್‍ಡಿಡಿ ಸ್ಪಷ್ಟನೆ

    ಕೋಲಾರ: ಕಾಂಗ್ರೆಸ್ ಜೊತೆ ಜೆಡಿಎಸ್ ಹೊಂದಾಣಿಕೆ ನಡೆಸುತ್ತಿದೆ ಅಂತ ಕೆಲವರಿಗೆ ಅನುಮಾನ ಕಾಡ್ತಿದೆ. ಆದ್ರೆ ಕಾಂಗ್ರೆಸ್‍ನೊಂದಿಗೆ ಹೊಂದಾಣಿಕೆ ಮಾಡಿಕೊಳ್ಳಲ್ಲ ಅಂತಾ ಮಾಜಿ ಪ್ರಧಾನಿ ಹೆಚ್‍ಡಿಡಿ ಸ್ಪಷ್ಟಪಡಿಸಿದ್ದಾರೆ.

    ಶ್ರೀನಿವಾಸಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಜೆಡಿಎಸ್ ಪಕ್ಷದ ನೂತನ ಕಚೇರಿ ಹಾಗು ಸಮಾವೇಶದಲ್ಲಿ ಭಾಗವಹಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷ ಸಂಘಟನೆ ಮತ್ತು ಮುಂದಿನ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸುವ ಜವಾಬ್ದಾರಿಯನ್ನು ಪ್ರಜ್ವಲ್ ರೇವಣ್ಣಗೆ ನೀಡಿದ್ದೇವೆ. ಚನ್ನಪಟ್ಟಣದಿಂದ ಸ್ಪರ್ಧಿಸುವಂತೆ ಅನಿತಾ ಕುಮಾರಸ್ವಾಮಿಗೆ ಎಲ್ಲರೂ ಒತ್ತಡ ಹೇರುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಈ ಬಗ್ಗೆ ತೀರ್ಮಾನ ಕೈಗೊಳ್ತೀವಿ ಅಂದ್ರು.

    ಅನಿತಾ ಕುಮಾರಸ್ವಾಮಿ ಇಂಧನ ಸಚಿವ ಡಿ.ಕೆ.ಶಿವಕುಮಾರ್ ಅವರೊಂದಿಗೆ ವೇದಿಕೆ ಹಂಚಿಕೊಂಡಿರುವುದರಿಂದ ಬೇರೆ ಬೇರೆ ಆಪಾದನೆಗಳು ಕೇಳಿಬಂದಿವೆ. ಜೊತೆಗೆ ಬೆಂಗಳೂರಿನ ಕೆಂಪೇಗೌಡ ಜಯಂತಿಯಲ್ಲಿ ಶಿವಕುಮಾರ್ ನನ್ನ ಕಾಲಿಗೆರಗಿದ್ದಕ್ಕೂ ಕೂಡ ಹೊಂದಾಣಿಕೆ ರಾಜಕೀಯ ನಡೆಯುತ್ತಿದೆ ಎಂದು ಸಾಕಷ್ಟು ಅನುಮಾನ ಕೆಲವರಿಗೆ ಕಾಡ್ತಿದೆ. ಆದ್ರೆ ಜೆಡಿಎಸ್ ಕಾಂಗ್ರೆಸ್ ನೊಂದಿಗೆ ಯಾವುದೇ ಕಾರಣಕ್ಕೂ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ. ಅದು ರಾಜ್ಯದ 224 ಕ್ಷೇತ್ರ, ಅದರಲ್ಲೂ ಮುಖ್ಯಮಂತ್ರಿ ಸಿದ್ದಾರಾಮಯ್ಯ ಅವರ ಕ್ಷೇತ್ರ ಒಳಗೊಂಡಂತೆ ಯಾವುದೇ ಕ್ಷೇತ್ರದಲ್ಲಿ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ ಅಂತ ಸ್ಪಷ್ಟಪಡಿಸಿದ್ರು.

    ಕೋಲಾರ ಹಾಗೂ ಚಿಕ್ಕಬಳ್ಳಾಪುರ ಅವಳಿ ಜಿಲ್ಲೆಗಳಲ್ಲಿ 9 ಜನ ಜೆಡಿಎಸ್ ಅಭ್ಯರ್ಥಿಗಳು ಗೆಲ್ಲಲಿದ್ದಾರೆ ಎಂದು ಭವಿಷ್ಯ ನುಡಿದ್ರು.

    ಇದನ್ನೂ ಓದಿ: ಅನಿತಾ ಕುಮಾರಸ್ವಾಮಿ ನನ್ನನ್ನು ಅಣ್ಣ ಅಂತ ತಿಳಿದುಕೊಂಡಿದ್ದಾರೆ- ಅಡ್ಜಸ್ಟ್ ಮೆಂಟ್ ರಾಜಕಾರಣ ಸುದ್ದಿಗೆ ಡಿಕೆಶಿ ಸ್ಪಷ್ಟನೆ

    ಇದನ್ನೂ ಓದಿ: ಚುನಾವಣೆ ಬರುತ್ತಿದ್ದಂತೆ ರಾಜ್ಯದಲ್ಲಿ ಶುರುವಾಯ್ತಾ ಅಡ್ಜಸ್ಟ್ ಮೆಂಟ್ ಪಾಲಿಟಿಕ್ಸ್?

    ಇದನ್ನೂ ಓದಿ: ಅನಿತಾ ಕುಮಾರಸ್ವಾಮಿ ಚನ್ನಪಟ್ಟಣದಿಂದ ಸ್ಪರ್ಧಿಸುತ್ತಾರಾ: ಎಚ್‍ಡಿಕೆ ಹೇಳಿದ್ದು ಹೀಗೆ

  • ರಾಜ್ಯದಲ್ಲಿ ಶುರುವಾಯ್ತು ಲೋಡ್ ಶೆಡ್ಡಿಂಗ್-ಬೇಸಿಗೆ ಆರಂಭಕ್ಕೂ ಮುನ್ನವೇ ಕತ್ತಲೆ ಭಾಗ್ಯ

    ರಾಜ್ಯದಲ್ಲಿ ಶುರುವಾಯ್ತು ಲೋಡ್ ಶೆಡ್ಡಿಂಗ್-ಬೇಸಿಗೆ ಆರಂಭಕ್ಕೂ ಮುನ್ನವೇ ಕತ್ತಲೆ ಭಾಗ್ಯ

    ಬೆಂಗಳೂರು: ರಾಜ್ಯದ ಪವರ್ ಮಿನಿಸ್ಟರ್‍ಗೆ ಐಟಿ ಶಾಕ್ ಕೊಟ್ರೆ, ಪವರ್ ಮಿನಿಸ್ಟರ್ ರಾಜ್ಯಕ್ಕೆ ಕರೆಂಟ್ ಶಾಕ್ ನೀಡಿದ್ದಾರೆ.

    ಕರುನಾಡಿನ ಜನರಿಗೆ ಕತ್ತಲೆ ಭಾಗ್ಯ ಸಿಕ್ಕಿದೆ. ಸಾಮಾನ್ಯವಾಗಿ ಬೇಸಿಗೆಯಲ್ಲಿ ಶುರುವಾಗುವ ಲೋಡ್ ಶೆಡ್ಡಿಂಗ್ ಈಗಲೇ ಶುರುವಾಗಿದೆ. ಯುಪಿಎಸ್‍ಎಲ್, ಆರ್‍ಟಿಪಿಎಸ್ ವಿದ್ಯುತ್ ಉತ್ಪಾದನಾ ಘಟಕದಲ್ಲಿ ತಾಂತ್ರಿಕ ದೋಷ ಕಂಡು ಬಂದಿದ್ದು, ಘಟಕದ ಯೂನಿಟ್ ಮಂಗಳವಾರದಿಂದ ಸ್ಥಗಿತಗೊಂಡಿದೆ.

    ವಿದ್ಯುತ್ ಉತ್ಪಾದನೆಯಲ್ಲಿ ಕೊರತೆಯಾದ ಹಿನ್ನೆಲೆಯಲ್ಲಿ ಬೆಸ್ಕಾಂ ಐಇಎಕ್ಸ್‍ನಿಂದ ವಿದ್ಯುತ್ ಖರೀದಿಗೆ ಮುಂದಾಗಿದೆ. ಬೆಂಗಳೂರಿನಲ್ಲಿ ಅನಿಯಮಿತ ಲೋಡ್ ಶೆಡ್ಡಿಂಗ್ ಈಗಾಗಲೇ ಶುರುವಾಗಿದ್ದು ದಿನಕ್ಕೆ ಹತ್ತು ಗಂಟೆ ವಿದ್ಯುತ್ ಸಿಕ್ಕರೆ ಹೆಚ್ಚು ಅನ್ನುವಂತಾಗಿದೆ. ಈ ವಿದ್ಯುತ್ ಸಮಸ್ಯೆ ಯಾವತ್ತೂ ಬಗೆಹರಿಯಲಿದೆ ಅನ್ನೋ ಬಗ್ಗೆ ಬೆಸ್ಕಾಂ ಇನ್ನೂ ಮಾಹಿತಿ ನೀಡಿಲ್ಲ.

  • ಡಿಕೆ ಶಿವಕುಮಾರ್‍ಗೆ ಐಟಿಯಿಂದ 7ನೇ ನೋಟಿಸ್- ಆಡಿಟರ್ ಕರೆತರದಂತೆ ಖಡಕ್ ಸೂಚನೆ

    ಡಿಕೆ ಶಿವಕುಮಾರ್‍ಗೆ ಐಟಿಯಿಂದ 7ನೇ ನೋಟಿಸ್- ಆಡಿಟರ್ ಕರೆತರದಂತೆ ಖಡಕ್ ಸೂಚನೆ

    ಬೆಂಗಳೂರು: ಆದಾಯ ತೆರಿಗೆ ಇಲಾಖೆ ಪವರ್ ಮಿನಿಸ್ಟರ್ ಡಿಕೆ ಶಿವಕುಮಾರ್ ಮನೆಯ ಮೇಲೆ ನಿರಂತರವಾಗಿ 4 ದಿನಗಳ ಕಾಲ ದಾಳಿ ನಡೆಸಿ ಮಹತ್ತರ ದಾಖಲೆ ವಶಕ್ಕೆ ಪಡೆದಿತ್ತು.

    ದಾಳಿ ಬಳಿಕ ನಿರಂತರ ವಿಚಾರಣೆ ನಡೆಸುತ್ತಿರುವ ಐಟಿ ಅಧಿಕಾರಿಗಳು, ಬರೋಬ್ಬರಿ 7ನೇ ಬಾರಿಗೆ ನೊಟೀಸ್ ಜಾರಿ ಮಾಡಿದ್ದಾರೆ. ಈ ಬಾರಿ ಇಡೀ ಕುಟುಂಬಕ್ಕೆ ನೋಟೀಸ್ ನೀಡಿದ್ದು, ಇಂದು ಕುಟುಂಬ ಸಮೇತ ಐಟಿ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಬೇಕಿದೆ.

     

    ಪ್ರತಿ ಬಾರಿಯೂ ಕೂಡ ಚಾರ್ಟೆಡ್ ಅಕೌಂಟೆಂಟ್ ಜೊತೆಯಲ್ಲಿ ವಿಚಾರಣೆಗೆ ಹಾಜರಾಗ್ತಿದ್ದ ಡಿಕೆಶಿ, ಇಂದು ಚಾರ್ಟೆಂಟ್ ಅಕೌಂಟೆಂಟ್ ಬಿಟ್ಟು ಹೆಂಡತಿ, ಮಕ್ಕಳು ಮತ್ತು ತಾಯಿಯ ಜೊತೆಯಲ್ಲಿ ವಿಚಾರಣೆ ಹಾಜರಾಗುವಂತೆ ನೋಟೀಸ್‍ನಲ್ಲಿ ತಿಳಿಸಲಾಗಿದೆ. ಇಂದು ಐಟಿ ಅಧಿಕಾರಿಗಳು ಡಿಕೆಶಿ ಕುಟುಂಬಕ್ಕೆ ಏನೇಲ್ಲಾ ಪ್ರಶ್ನೆಗಳನ್ನು ಕೇಳ್ತಾರೆ..? ಆಡಿಟರ್ ಕರೆತರದಂತೆ ಸೂಚಿಸಿರೋದು ಯಾಕೆ ಅನ್ನೋ ಕುತೂಹಲ ಎಲ್ಲರನ್ನೂ ಕಾಡ್ತಿದೆ.

    ಇದನ್ನೂ ಓದಿ: ಪವರ್ ಮಿನಿಸ್ಟರ್‍ಗೆ ಮತ್ತೆ ಪವರ್ ಫುಲ್ ಶಾಕ್

    ಆಗಸ್ಟ್ 2 ರಂದು ಡಿಕೆ ಶಿವಕುಮಾರ್ ನಿವಾಸದ ಮೇಲೆ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದರು. ಈ ವೇಳೆ ಗುಜರಾತ್ ಕಾಂಗ್ರೆಸ್ ಶಾಸಕರು ತಂಗಿದ್ದ ಈಗಲ್ ಟನ್ ರೆಸಾರ್ಟ್ ಮೇಲೂ ದಾಳಿ ನಡೆದಿತ್ತು.

    https://www.youtube.com/watch?v=1hWVXuy2xRs