Tag: power

  • ನೀರು ಕಾಯಿಸುವ ವಿದ್ಯುತ್ ಕಾಯಿಲ್ ತಾಗಿ ಗರ್ಭಿಣಿ ಸಾವು

    ನೀರು ಕಾಯಿಸುವ ವಿದ್ಯುತ್ ಕಾಯಿಲ್ ತಾಗಿ ಗರ್ಭಿಣಿ ಸಾವು

    ದಾವಣಗೆರೆ: ಮನುಷ್ಯನ ಆಯುಷ್ಯ ಅನ್ನೋದು ಮುಗಿದಾಗ ಸಾವು ಹೇಗೆ ಬರುತ್ತದೆ ಎಂಬುದು ಹೇಳಲು ಅಸಾಧ್ಯ. ಅದೇ ರೀತಿ ಇದೀಗ ಗರ್ಭಿಣಿಯೊಬ್ಬರು ನೀರು ಕಾಯಿಸುವ ವಿದ್ಯುತ್ ಕಾಯಿಲ್ ತಾಗಿ ಸಾವನ್ನಪ್ಪಿದ ವಿಲಕ್ಷಣ ಘಟನೆ ನಡೆದಿದೆ.

    ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಹನುಮಂತಾಪುರ ಗ್ರಾಮದ ಗೊಲ್ಲರಹಟ್ಟಿಯಲ್ಲಿ ಈ ದುರ್ಘಟನೆ ಸಂಭವಿಸಿದೆ. ಮೃತ ದುರ್ದೈವಿಯನ್ನು ನೇತ್ರಾವತಿ ಬಸವರಾಜ್ (23) ಎಂದು ಗುರುತಿಸಲಾಗಿದೆ.

    ನೇತ್ರಾವತಿ ಅವರು ಸ್ನಾನ ಮಾಡಲೆಂದು ಕೊಡಪಾನದಲ್ಲಿ ನೀರು ತುಂಬಿಸಿ ಬಿಸಿಯಾಗಲು ವಿದ್ಯುತ್ ಕಾಯಿಲ್ ಹಾಕಿದ್ದರು. ಈ ವೇಳೆ ವಿದ್ಯುತ್ ತಗುಲಿ ಗರ್ಭಿಣಿ ಮೃತಪಟ್ಟಿದ್ದಾರೆ. ಈಕೆ ಎಷ್ಟು ತಿಂಗಳ ಗರ್ಭಿಣಿ ಎಂಬುದು ತಿಳಿದುಬಂದಿಲ್ಲ.

    ಘಟನೆಗೆ ಸಂಬಂಧಿಸಿದಂತೆ ಜಗಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ವಿದ್ಯುತ್ ಕ್ಷೇತ್ರದಲ್ಲಿ ರಾಷ್ಟ್ರವೇ ಮೆಚ್ಚುವಂತ ಕೆಲಸ ಮಾಡಿದ್ದೆವು: ಡಿಕೆಶಿ

    ವಿದ್ಯುತ್ ಕ್ಷೇತ್ರದಲ್ಲಿ ರಾಷ್ಟ್ರವೇ ಮೆಚ್ಚುವಂತ ಕೆಲಸ ಮಾಡಿದ್ದೆವು: ಡಿಕೆಶಿ

    – ಶಾಲೆ ಆರಂಭ ವಿಚಾರಕ್ಕೆ ಪ್ರತಿಕ್ರಿಯೆ

    ಕೊಪ್ಪಳ: ಕಾಂಗ್ರೆಸ್ ಸರ್ಕಾರ ವಿದ್ಯುತ್ತನ್ನು ಸರಿಯಾಗಿ ನಿರ್ವಹಣೆ ಮಾಡಿತ್ತು. ವಿದ್ಯುತ್ ಕ್ಷೇತ್ರದಲ್ಲಿ ರಾಷ್ಟ್ರವೇ ಮೆಚ್ಚುವಂತ ಕೆಲಸ ಮಾಡಿದ್ದೆವು. ಕೇಂದ್ರ ಸರ್ಕಾರ ಸಹ ಮೆಚ್ಚುಗೆ ವ್ಯಕ್ತಪಡಿಸಿತ್ತು ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ.

    ಕೊಪ್ಪಳದ ಹಿಟ್ನಾಳ್ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿದ್ಯುತ್ ದರ ಏರಿಕೆಯನ್ನು ಕಡಿಮೆ ಮಾಡಬೇಕು. ಭತ್ತಕ್ಕೆ ಹೆಚ್ಚವರಿಯಾಗಿ 500 ರೂಪಾಯಿ ಬೆಂಬಲ ಬೆಲೆ ಕೊಡಬೇಕು. ಸಿಎಂ ಹಾಗೂ ಮಂತ್ರಿಗಳಿಗೆ ಸರ್ಕಾರ ಉಳಿಸಿಕೊಳ್ಳುವುದು ಮುಖ್ಯವಾಗಿದೆ. ರೈತರನ್ನು ಉಳಿಸಿಕೊಳ್ಳುವುದು ಮುಖ್ಯವಲ್ಲ. ಅವರು ಖುರ್ಚಿಗಳು ಭದ್ರವಾಗಿರಬೇಕು. ರೈತರ ಬೆಳೆಯ ಬೆಲೆಯನ್ನು ನಿಯಂತ್ರಣ ಮಾಡಲು ಆಗುತ್ತಿಲ್ಲ. ರೈತರು ಬದುಕಲು ಬಿಡಲ್ಲ. 30 ರಂದು ರಾಜ್ಯದ ಹಿರಿಯ ನಾಯಕರ ಸಭೆ ಕರೆದಿದ್ದೇನೆ. ಅದು ಅನೇಕ ವಿಚಾರಗಳನ್ನು ಚರ್ಚೆ ಮಾಡುತ್ತೇವೆ ಎಂದರು.

    ಇದೇ ವೇಳೆ ಶಾಲೆ ಆರಂಭದ ವಿಚಾರಕ್ಕೆ ಪ್ರತಿಕ್ರಿಯಿಸಿ. ಶಿಕ್ಷಣ ಕ್ಷೇತ್ರದ ಕುರಿತು ಸರ್ಕಾರ ನಮ್ಮ ಜೊತೆ ಚರ್ಚೆ ಮಾಡಿಲ್ಲ. ಹಿಂದೆ ಒಂದು ಬಾರಿ ನಮ್ಮನ್ನು ಕೇಳಿದ್ದರು. ಅವರು ತೀರ್ಮಾನ ಮಾಡಲಿ. ಅವರಿಗೆ ಒಂದು ಅವಕಾಶ ಇದೆ ಮಾಡಿಕೊಳ್ಳಲಿ. ಅವರ ತೀರ್ಮಾನ ಆದ ಮೇಲೆ ನಾವು ಮಾತಾಡ್ತೀವಿ ಎಂದು ತಿಳಿಸಿದ ಅವರು ರೋಷನ್ ಬೇಗ್ ಮನೆ ಮೇಲೆ ಸಿಬಿಐ ದಾಳಿ ಕುರಿತು ಪ್ರತಿಕ್ರಿಯೆ ನೀಡಲು ಡಿಕೆಶಿ ನಿರಾಕರಿಸಿದರು.

    ಕಾಂಗ್ರೆಸ್ಸಿನ ಮಾಜಿ ಮಂತ್ರಿಗಳು ಬಿಜೆಪಿಗೆ ಸೇರ್ಪಡೆ ವಿಚಾರ ಸಂಬಂಧ ಬಿಜೆಪಿ ಕಡೆಯಿಂದ ಬರುವವರ ಬಗ್ಗೆ ನೀವು ಕೇಳ್ತಿದ್ದೀರಾ ಎಂದು ಪ್ರಶ್ನಿಸಿದ ಡಿಕೆಶಿ, ಅವರು ಈಗ ರೂಲಿಂಗ್ ನಲ್ಲಿದ್ದಾರೆ. ಅವರ ಸಣ್ಣ ಪುಟ್ಟ ಕೆಲಸಗಳನ್ನು ಮುಗಿಸಿಕೊಳ್ಳಲಿ ಎಂದು ಟಾಂಗ್ ನೀಡಿದರು.

  • ಚಾಮರಾಜನಗರಕ್ಕೆ ಭೇಟಿ ಕೊಡಲು ಸಿಎಂ ಹಿಂದೇಟು – ಮೂಢನಂಬಿಕೆಗೆ ಜೋತು ಬಿದ್ರಾ ಬಿಎಸ್‍ವೈ?

    ಚಾಮರಾಜನಗರಕ್ಕೆ ಭೇಟಿ ಕೊಡಲು ಸಿಎಂ ಹಿಂದೇಟು – ಮೂಢನಂಬಿಕೆಗೆ ಜೋತು ಬಿದ್ರಾ ಬಿಎಸ್‍ವೈ?

    ಚಾಮರಾಜನಗರ: ಸಿಎಂ ಯಡಿಯೂರಪ್ಪ ಮೂಢನಂಬಿಕೆಗೆ ಕಟ್ಟುಬಿದ್ದಿದ್ದಾರಾ? ಹೌದು ಹೀಗೊಂದು ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ. ಕಾರಣ ಅಧಿಕಾರ ವಹಿಸಿಕೊಂಡು 16 ತಿಂಗಳು ಕಳೆದರು ಸಿಎಂ ಚಾಮರಾಜನಗರದತ್ತ ತಲೆ ಹಾಕಿಲ್ಲ. ಆದರೆ ಇದೇ ತಿಂಗಳು 25ರಂದು ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆಗಾಗಿ ಜಿಲ್ಲೆಯ ಮಹದೇಶ್ವರ ಬೆಟ್ಟಕ್ಕೆ ಆಗಮಿಸುತ್ತಿರುವ ಯಡಿಯೂರಪ್ಪ ಚಾಮರಾಜನಗರಕ್ಕೆ ಭೇಟಿ ನೀಡುತ್ತಿಲ್ಲ ಎಂಬುದು ಚರ್ಚೆಗೆ ಗ್ರಾಸವಾಗಿದೆ.

    2008ರಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗ ಸುಮಾರು ಮೂರು ವರ್ಷ ಕಾಲ ಮುಖ್ಯಮಂತ್ರಿಯಾಗಿದ್ದ ಯಡಿಯೂರಪ್ಪ ಒಮ್ಮೆಯೂ ಚಾಮರಾಜನಗರಕ್ಕೆ ಭೇಟಿ ನೀಡಿರಲಿಲ್ಲ. ಇದೀಗ ಅದೇ ಪರಿಪಾಠ ಮುಂದುವರಿಸಿದ್ದು, ಚಾಮರಾಜನಗರ ಪಟ್ಟಣಕ್ಕೆ ಬಾರದೆ ಇದೇ ತಿಂಗಳು 25ರಂದು ಜಿಲ್ಲೆಯ ಮಹದೇಶ್ವರ ಬೆಟ್ಟಕ್ಕೆ ಬಂದು ಹೋಗುತ್ತಿದ್ದಾರೆ. ಚಾಮರಾಜನಗರಕ್ಕೆ ಭೇಟಿ ನೀಡಿದರೆ ಅಧಿಕಾರ ಕಳೆದುಕೊಳ್ಳಬೇಕಾಗುತ್ತೆ ಎಂಬ ಮೂಢನಂಬಿಕೆಗೆ ಯಡಿಯೂರಪ್ಪ ಜೋತುಬಿದ್ದಿದ್ದಾರೆ ಎಂಬ ಆರೋಪಗಳು ಕೇಳಿಬರುತ್ತಿವೆ.

    ದೇವರಾಜ ಅರಸು, ಗುಂಡೂರಾವ್, ರಾಮಕೃಷ್ಣ ಹೆಗಡೆ, ಎಸ್.ಆರ್ ಬೊಮ್ಮಾಯಿ ಹಾಗೂ ವೀರೇಂದ್ರ ಪಾಟೀಲ್ ಮುಖ್ಯಮಂತ್ರಿ ಆಗಿದ್ದ ವೇಳೆ ಚಾಮರಾಜನಗರಕ್ಕೆ ಬಂದಿದ್ದರು. ಆದರೆ ಇಲ್ಲಿಂದ ಹೋದ ಮೇಲೆ ಆರು ತಿಂಗಳ ಒಳಗೆ ಬೇರೆ ಬೇರೆ ಕಾರಣಗಳಿಂದ ಅಧಿಕಾರ ಕಳೆದುಕೊಂಡರು. ಹೀಗಾಗಿ ಮುಖ್ಯಮಂತ್ರಿಗಳಾದವರು ಚಾಮರಾಜನಗರ ಬಂದರೆ ಆರು ತಿಂಗಳ ಒಳಗೆ ಅವರ ಅಧಿಕಾರ ಹೋಗುತ್ತೆ ಎಂಬ ಮೂಢನಂಬಿಕೆ ಹುಟ್ಟಿಕೊಂಡಿತು. ಎಸ್. ಬಂಗಾರಪ್ಪ, ವೀರಪ್ಪಮೊಯ್ಲಿ, ಹೆಚ್.ಡಿ. ದೇವೇಗೌಡ, ಜೆ.ಎಚ್. ಪಟೇಲ್, ಎಸ್. ಎಂ. ಕೃಷ್ಣ, ಧರಂಸಿಂಗ್ ಚಾಮರಾಜನಗರದತ್ತ ಸುಳಿಯಲಿಲ್ಲ.

    ಸುಮಾರು 16 ವರ್ಷಗಳ ನಂತರ ಹೆಚ್.ಡಿ ಕುಮಾರಸ್ವಾಮಿ ಮೂಢನಂಬಿಕೆ ಧಿಕ್ಕರಿಸಿ 2007ರ ಮೇ ತಿಂಗಳಲ್ಲಿ ಚಾಮರಾಜನಗರಕ್ಕೆ ಭೇಟಿ ನೀಡಿದ್ದರು. ಆದರೆ ಕುಮಾರಸ್ವಾಮಿ ಸಹ ಕಾಕತಾಳಿಯವೆಂಬಂತೆ ಪದಚ್ಯುತಿಗೊಂಡರು. ಇದರಿಂದ ಚಾಮರಾಜನಗರಕ್ಕೆ ಮತ್ತೆ ಅದೇ ಕಳಂಕ ಅಂಟಿಕೊಂಡಿತು. ನಂತರದಲ್ಲಿ ಸಿಎಂ ಆದ ಯಡಿಯೂರಪ್ಪ ನಗರಕ್ಕೆ ಬರಲಿಲ್ಲ. ಸದಾನಂದಗೌಡರು ಚಾಮರಾಜನಗಕ್ಕೆ ಭೇಟಿ ನೀಡಲು ಹಿಂಜರಿದರು. ಆದರೆ ಜಗದೀಶ್ ಶೆಟ್ಟರ್ ತಮ್ಮ ಅಧಿಕಾರದ ಕೊನೆ ದಿನಗಳಲ್ಲಿ ಚಾಮರಾಜನಗರಕ್ಕೆ ಆಗಮಿಸಿದ್ದರು. ನಂತರ ಸಿಎಂ ಆದ ಸಿದ್ದರಾಮಯ್ಯ 10ಕ್ಕೂ ಹೆಚ್ಚು ಬಾರಿ ಭೇಟಿ ನೀಡುವ ಮೂಲಕ ಮೂಢನಂಬಿಕೆಗೆ ಇತಿಶ್ರೀ ಹಾಡಿದರು.

    ಸಿಎಂ ಭೇಟಿ ಕುರಿತು ಉಸ್ತುವಾರಿ ಸಚಿವ ಸುರೇಶ್ ಕುಮಾರ್ ಮಾತನಾಡಿ, ಕಳೆದ 58 ವಾರದಲ್ಲಿ 49 ಬಾರಿ ನಾನು ಜಿಲ್ಲೆಗೆ ಭೇಟಿ ಕೊಟ್ಟಿದ್ದೇನೆ. ನನಗೆ ಜಿಲ್ಲೆಗೆ ಆಗಮಿಸಿದರೆ ಅಧಿಕಾರ ಹೋಗುತ್ತೆ ಎಂಬ ಭಯವಿಲ್ಲ. ಅದೇ ರೀತಿ ಯಡಿಯೂರಪ್ಪ ಕೂಡ ಚಾಮರಾಜನಗರಕ್ಕೆ ಭೇಟಿ ಕೊಡುತ್ತಾರೆ. ಅವರಿಗೆ ಅಧಿಕಾರ ಹೋಗುವ ಭಯವಿಲ್ಲ, ಶೀಘ್ರದಲ್ಲೇ ಜಿಲ್ಲೆಯಲ್ಲಿ ಪ್ರವಾಸ ಮಾಡುತ್ತಾರೆ ಎಂಬ ಹಾರಿಕೆ ಉತ್ತರ ಕೊಡುತ್ತಿದ್ದಾರೆ.

    ಈಗ ಯಡಿಯೂರಪ್ಪ ಮತ್ತೆ ಅದೇ ಮೂಢನಂಬಿಕೆಗೆ ಜೋತು ಬಿದ್ದಿದ್ದು ಚಾಮರಾಜನಗರಕ್ಕೆ ಭೇಟಿ ನೀಡಲು ಹಿಂದೇಟು ಹಾಕುತ್ತಿದ್ದಾರೆ ಎಂಬ ಆರೋಪಗಳು ಕೇಳಿಬರುತ್ತಿವೆ. ಮುಖ್ಯಮಂತ್ರಿ ಆಗಿದ್ದವರು ಅಧಿಕಾರ ಕಳೆದುಕೊಂಡ ಇದುವರೆಗಿನ ಘಟನೆಗಳು ಕೇವಲ ಕಾಕತಾಳೀಯ ಅಷ್ಟೇ. ರಾಜಕೀಯ ಕಾರಣಗಳಿಗೆ ಅಧಿಕಾರ ಕಳೆದುಕೊಂಡರೆ ಚಾಮರಾಜನಗರಕ್ಕೆ ಆ ಕಳಂಕವನ್ನು ಅಂಟಿಸುವುದು ಎಷ್ಟರ ಮಟ್ಟಿಗೆ ಸರಿ ಎಂಬುದು ಸಾರ್ವಜನಿಕರ ಪ್ರಶ್ನೆಯಾಗಿದೆ.

  • ರಾಷ್ಟ್ರ ಮಟ್ಟದಲ್ಲಿ ಕಿತ್ತಾಟ, ಪಟ್ಟಣ ಪಂಚಾಯತ್‍ನಲ್ಲಿ ಮೈತ್ರಿ – ಗದ್ದುಗೆ ಹಿಡಿದ ಕೈ, ಕಮಲ

    ರಾಷ್ಟ್ರ ಮಟ್ಟದಲ್ಲಿ ಕಿತ್ತಾಟ, ಪಟ್ಟಣ ಪಂಚಾಯತ್‍ನಲ್ಲಿ ಮೈತ್ರಿ – ಗದ್ದುಗೆ ಹಿಡಿದ ಕೈ, ಕಮಲ

    ಚಾಮರಾಜನಗರ: ರಾಜ್ಯ ಹಾಗೂ ರಾಷ್ಟ್ರದಲ್ಲಿ ಕಿತ್ತಾಡುತ್ತಿರುವ ಬಿಜೆಪಿ ಕಾಂಗ್ರೆಸ್ ಪಕ್ಷಗಳು ಚಾಮರಾಜನಗರ ಜಿಲ್ಲೆಯ ಹನೂರು ಪಟ್ಟಣ ಪಂಚಾಯ್ತಿ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಂಡು ಅಚ್ಚರಿ ಮೂಡಿಸಿವೆ. ಅತಿ ಹೆಚ್ಚು ಸ್ಥಾನಗಳಿಸಿದ್ದ ಜೆಡಿಎಸ್ ಪಕ್ಷವನ್ನು ಅಧಿಕಾರದಿಂದ ದೂರವಿಡಲು ಕಾಂಗ್ರೆಸ್ ಹಾಗೂ ಬಿಜೆಪಿ ಮೈತ್ರಿ ಮಾಡಿಕೊಂಡು ಅಧಿಕಾರದ ಗದ್ದುಗೆ ಹಿಡಿದಿವೆ.

    ಒಟ್ಟು 13 ಸದಸ್ಯ ಬಲದ ಹನೂರು ಪಟ್ಟಣ ಪಂಚಾಯ್ತಿ ಚುನಾವಣೆಯಲ್ಲಿ ಜೆ.ಡಿ.ಎಸ್ 6, ಕಾಂಗ್ರೆಸ್ 4 ಹಾಗೂ ಬಿಜೆಪಿ ಮೂರು ಸ್ಥಾನ ಗೆದಿದ್ದವು. ಹೀಗಾಗಿ ಯಾವ ಪಕ್ಷಕ್ಕೂ ಬಹುಮತ ಬಂದಿರಲಿಲ್ಲ. ಆದರೆ ಆರು ಸ್ಥಾನಗಳಿಸುವ ಮೂಲಕ ಜೆಡಿಎಸ್ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು. ಈ ನಡುವೆ ಬಿಜೆಪಿಯ ಓರ್ವ ಸದಸ್ಯ ಮೃತಪಟ್ಟಿದ್ದರಿಂದ ಒಂದು ಸ್ಥಾನ ಖಾಲಿಯಾಗಿ ಬಿಜೆಪಿ ಎರಡು ಸ್ಥಾನ ಮಾತ್ರ ಹೊಂದಿತ್ತು.

     

    ಇಂದು ನಡೆದ ಅಧ್ಯಕ್ಷ ಉಪಾಧ್ಯಕ್ಷರ ಚುನಾವಣೆಯಲ್ಲಿ ಕಾಂಗ್ರೆಸ್ ಬಿಜೆಪಿ ಮೈತ್ರಿ ಮಾಡಿಕೊಂಡು ಅಧ್ಯಕ್ಷ ಸ್ಥಾನಕ್ಕೆ ಮೈತ್ರಿಕೂಟದಿಂದ ಬಿಜೆಪಿಯ ಚಂದ್ರಮ್ಮ, ಉಪಾಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್‍ನ ಹರೀಶ್ ಕುಮಾರ್ ಸ್ಪರ್ಧಿಸಿದ್ದರು. ಹಾಗೆಯೇ ಜೆಡಿಎಸ್ ನಿಂದ ಅಧ್ಯಕ್ಷ ಸ್ಥಾನಕ್ಕೆ ಜಮಮ್ತಾಜ್ ಬಾನು ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಆನಂದ ಕುಮಾರ್ ಕಣಕ್ಕಿಳಿದಿದ್ದರು. ಸ್ವತಃ ಬಿಜೆಪಿ ಸಂಸದ ವಿ.ಶ್ರೀನಿವಾಸಪ್ರಸಾದ್ ಹಾಗೂ ಹನೂರು ಕಾಂಗ್ರೆಸ್ ಶಾಸಕ ಆರ್.ನರೇಂದ್ರ ಕೈಜೋಡಿಸುವ ಮೂಲಕ ಮೈತ್ರಿಕೂಟದ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದರು.

    ಅಭ್ಯರ್ಥಿಗಳು ಗೆಲ್ಲಲು 8 ಸದಸ್ಯರ ಬೆಂಬಲ ಬೇಕಾಗಿತ್ತು. ಸಂಸದ ಹಾಗೂ ಶಾಸಕರ ಮತ ಸೇರಿ ಬಿಜೆಪಿ ಕಾಂಗ್ರೆಸ್ ಮೈತ್ರಿಕೂಟಕ್ಕೆ 8 ಮತ ಲಭಿಸುವುದರೊಂದಿಗೆ ಅಧ್ಯಕ್ಷರಾಗಿ ಬಿಜೆಪಿಯ ಚಂದ್ರಮ್ಮ, ಉಪಾಧ್ಯಕ್ಷರಾಗಿ ಕಾಂಗ್ರೆಸ್ಸಿನ ಹರೀಶ್ ಕುಮಾರ್ ಆಯ್ಕೆಯಾದರು. ಜೆಡಿಎಸ್ ಅಭ್ಯರ್ಥಿಗಳಿಗೆ ತಲಾ 6 ಮತ ಲಭಿಸಿ ಸೋಲು ಅನುಭವಿಸಬೇಕಾಯ್ತು. ಹನೂರು ಪಟ್ಟಣದ ಅಭಿವೃದ್ಧಿ ದೃಷ್ಟಿಯಿಂದ ಸ್ಥಳೀಯವಾಗಿ ಬಿಜೆಪಿ ಕಾಂಗ್ರೆಸ್ ಮೈತ್ರಿ ಅನಿವಾರ್ಯವಾಗಿತ್ತು ಎಂದು ಬಿಜೆಪಿ ಸಂಸದ ವಿ.ಶ್ರೀನಿವಾಸಪ್ರಸಾದ್ ಮೈತ್ರಿಯನ್ನು ಸಮರ್ಥಿಸಿಕೊಂಡಿದ್ದಾರೆ.

    ಇದನ್ನೇ ದೊಡ್ಡ ವಿಷಯವನ್ನಾಗಿ ಮಾಡುವುದು ಬೇಡ, ಹಿಂದೆ ಕೇಂದ್ರದಲ್ಲಿ ಎನ್.ಡಿ.ಎ. ಸರ್ಕಾರಕ್ಕೆ ಫಾರೂಕ್ ಅಬ್ದುಲ್ಲಾ, ಕರುಣಾನಿಧಿ, ಮಮತಾಬ್ಯಾನರ್ಜಿ ಅಂತಹವರೇ ಕೈ ಜೋಡಿಸಿದ್ದರು. ಹಾಗಾಗಿ ಸ್ಥಳೀಯ ಮೈತ್ರಿ ಬಗ್ಗೆ ವಿಶೇಷ ಅರ್ಥ ಕಲ್ಪಿಸುವುದು ಬೇಡ ಎಂದು ಅವರು ವಿ.ಶ್ರೀನಿವಾಸಪ್ರಸಾದ್ ಹೇಳಿದ್ದಾರೆ. ಜೊತೆಗೆ ನನ್ನ ಬೆಳವಣಿಗೆ ಸಹಿಸಲಾಗದೆ ಹಾಗೂ ನನ್ನನ್ನು ರಾಜಕೀಯವಾಗಿ ಮುಗಿಸಲು ಈ ಎರಡೂ ಪಕ್ಷಗಳು ಅಪವಿತ್ರ ಮೈತ್ರಿ ಮಾಡಿಕೊಂಡಿವೆ ಜೆ.ಡಿ.ಎಸ್.ಮುಖಂಡ ಮಂಜುನಾಥ್ ವಾಗ್ದಾಳಿ ನಡೆಸಿದ್ದಾರೆ.

  • ಬೆಳ್ಳಂಬೆಳಗ್ಗೆ ಸಂಬಂಧಿಕರ ಮನೆಯಿಂದ ಹೊರಟವ ಸುಟ್ಟು ಕರಕಲಾದ!

    ಬೆಳ್ಳಂಬೆಳಗ್ಗೆ ಸಂಬಂಧಿಕರ ಮನೆಯಿಂದ ಹೊರಟವ ಸುಟ್ಟು ಕರಕಲಾದ!

    ಮಂಗಳೂರು: ರಸ್ತೆಯಲ್ಲಿ ವಿದ್ಯುತ್ ತಂತಿ ಕಡಿದು ಬಿದ್ದು ಸವಾರನೊಬ್ಬ ಬೈಕ್ ಸಮೇತ ಸುಟ್ಟು ಕರಕಲಾದ ಘಟನೆಯೊಂದು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಪಡ್ಪಿನಂಗಡಿ ಬಳಿ ನಡೆದಿದೆ.

    ಮೃತ ದುರ್ದೈವಿಯನ್ನು ಉಮೇಶ್ ಎಂದು ಗುರುತಿಸಲಾಗಿದೆ. ಇವರು ಸುಳ್ಯದ ಮಂಡೆಕೋಲು ನಿವಾಸಿಯಾಗಿದ್ದಾರೆ. ಉಮೇಶ್ ಅವರು ಬಳ್ಪದಲ್ಲಿರುವ ತನ್ನ ಸಂಬಂಧಿಕರ ಮನೆಗೆ ಬಂದಿದ್ದು, ಇಂದು ಬೆಳಗ್ಗೆ ಹಾಲು ಕರೆಯಲು ಇದೆ ಎಂದು ಅಲ್ಲಿಂದ ಮುಂಜಾನೆ 4.30ರ ಸುಮಾರಿಗೆ ಹೊರಟಿದ್ದಾರೆ. ಹೀಗೆ ಹೊರಟ ಉಮೇಶ್ ಅವರು ಕಂಬದಿಂದ ರಸ್ತೆಗೆ ಅಡ್ಡಲಾಗಿ ಬಿದ್ದಿರುವ ವಿದ್ಯುತ್ ತಂತಿಯನ್ನು ಗಮನಿಸದ ಕಾರಣ ಈ ಅವಘಡ ಸಂಭವಿಸಿದೆ.

    ವಿದ್ಯುತ್ ತಂತಿಯ ಮೇಲೆಯೇ ಬೈಕ್ ಚಲಾಯಿಸಿದ ಪರಿಣಾಮ ಬೈಕಿಗೆ ವಿದ್ಯುತ್ ಪ್ರವಹಿಸಿ ಸವಾರ ಸಜೀವ ದಹನವಾಗಿದ್ದಾರೆ. ಈ ಘಟನೆ ಬೆಳ್ಳಂಬೆಳಗ್ಗೆ 5 ಗಂಟೆ ಸುಮಾರಿಗೆ ನಡೆದಿರಬಹುದು ಎಂದು ಸ್ಥಳೀಯರು ಅಂದಾಜಿಸಿದ್ದಾರೆ. ಸ್ಥಳಕ್ಕೆ ಮೆಸ್ಕಾಂ ಅಧಿಕಾರಿಗಳು ಹಾಗೂ ಸುಳ್ಯ ಪೊಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

  • 20 ವರ್ಷಗಳಿಂದ ವಿದ್ಯುತ್ ಕಾಣದ ಬಡ ಕುಟುಂಬಕ್ಕೆ ಬೆಳಕಾದ ಸೇವಾ ಚಾರಿಟೇಬಲ್ ಟ್ರಸ್ಟ್

    20 ವರ್ಷಗಳಿಂದ ವಿದ್ಯುತ್ ಕಾಣದ ಬಡ ಕುಟುಂಬಕ್ಕೆ ಬೆಳಕಾದ ಸೇವಾ ಚಾರಿಟೇಬಲ್ ಟ್ರಸ್ಟ್

    ಮಂಗಳೂರು: ಸುಮಾರು 20 ವರ್ಷಗಳಿಂದ ಕಾಟಿಪಳ್ಳ 4ನೇ ಬ್ಲಾಕ್ ನಲ್ಲಿ ನಿವಾಸಿ ಮೀನಾಕ್ಷಿ ಮತ್ತು ಮನೆಯವರು ತೀರಾ ಬಡತನದಿಂದಾಗಿ ವಿದ್ಯುತ್ ಸಂಪರ್ಕವಿಲ್ಲದೆ ವಾಸವಿದ್ದರು.

    ಕಳೆದ ಇಪ್ಪತ್ತು ವರ್ಷಗಳಿಂದಲೂ ವಿದ್ಯುತ್ ಕಾಣದ ಈ ಕುಟುಂಬದ ಸ್ಥಿತಿ ಕಂಡು ಮಂಗಳೂರಿನ ಸುರತ್ಕಲ್ ಸಮೀಪದ ಗಣೇಶಪುರ ಕಾಟಿಪಳ್ಳ ‘ಸೇವಾ ಚಾರಿಟೇಬಲ್ ಟ್ರಸ್ಟ್’ ಸದರಿ ಮನೆಗೆ ಉಚಿತವಾಗಿ ವಿದ್ಯುತ್ ಸಂಪರ್ಕದ ವ್ಯವಸ್ಥೆ ಕಲ್ಪಿಸಿಕೊಟ್ಟಿದೆ. ವಿದ್ಯುತ್ ದೀಪವನ್ನು ಕಾಣದ ಬಡಕುಟುಂಬದ ಮನೆಗೆ ವಿದ್ಯುತ್ ಸಂಪರ್ಕ ವ್ಯವಸ್ಥೆಯನ್ನು ಉಚಿತವಾಗಿ ಕಲ್ಪಿಸಿ ಕೊಟ್ಟು ಮಾದರಿಯಾಗಿದೆ.

    ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಸೇವಾ ಕಾರ್ಯಗಳನ್ನು ನಡೆಸಲು ಶ್ರೀ ದೇವರು ಶಕ್ತಿ ನೀಡಲಿ ಎಂದು ವಿದ್ಯುತ್ ಸಂಪರ್ಕಕ್ಕೆ ಚಾಲನೆ ನೀಡಿದ ಟ್ರಸ್ಟ್‍ನ ಗೌರವ ಕಾನೂನು ಸಲಹೆಗಾರ ಮಯೂರ ಕೀರ್ತಿಯವರು ಶುಭ ಹಾರೈಸಿದರು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಸುರತ್ಕಲ್ ಶ್ರೀ ಕಾಂತೇರಿ ಧೂಮಾವತಿ ದೈವಸ್ಥಾನದ ಆಡಳಿತ ಮೊಕ್ತೇಸರ ಮಂಜು ಕಾವು ಹಾಗೂ 5ನೇ ಬ್ಲಾಕ್ ಕೃಷ್ಣಾಪುರ ಪಣಂಬೂರು ಶ್ರೀ ಕೊಡ್ಡು ದೈವಸ್ಥಾನದ ಗುರಿಕಾರ ಲೋಕೇಶ್‍ರವರು ದೀಪ ಪ್ರಜ್ವಲಿಸಿ, ಪ್ರಶಂಸೆಗೈದು ಶುಭ ಹಾರೈಸಿದರು.

    ಕಳೆದ ಡಾಕ್‍ಡೌನ್ ಸಂದರ್ಭದಲ್ಲಿ ತರಕಾರಿ-ಪಡಿತರ ಕಿಟ್‍ಗಳನ್ನು ವಿತರಿಸಿದ ಸಂದರ್ಭ ಮೀನಾಕ್ಷಿಯವರ ಮನೆಯ ಪರಿಸ್ಥಿತಿ ನಮ್ಮ ಗಮನಕ್ಕೆ ಬಂದು ಅಂದೇ ಟ್ರಸ್ಟ್ ವತಿಯಿಂದ ಮನೆಗೆ ವಿದ್ಯುತ್ ಸಂಪರ್ಕವನ್ನು ನೀಡುವ ಬಗ್ಗೆ ತೀರ್ಮಾನಿಸಿದ್ದು, ಈ ಮನೆಯ ಪರಿಸ್ಥಿತಿ ತಿಳಿದು ಈ ಬಗ್ಗೆ ವಾಗ್ದಾನ ಮಾಡಿ, ಈ ಸತ್ಕಾರ್ಯ ಸರ್ವರ ಸಹಕಾರದಿಂದ ಸಾಕಾರಗೊಂಡಿದೆ ಎಂದು ಟ್ರಸ್ಟ್‍ನ ಅಧ್ಯಕ್ಷ ಎ.ಪಿ. ಮೋಹನ್ ಗಣೇಶಪುರ ಮಾತನಾಡಿ ಹೇಳಿದರು.

    ಟ್ರಸ್ಟ್‍ನ ಕಾರ್ಯದರ್ಶಿ ದಿನೇಶ್ ಸುವರ್ಣ, ಕೋಶಾಧಿಕಾರಿ ಸಂದೀಪ್ ಕಾಟಿಪಳ್ಳ, ಟ್ರಸ್ಟಿಗಳಾದ ಗಿರೀಶ್ ನಾಯಕ, ಸುಧಾಕರ ಬೊಳ್ಳಾಜೆ, ರವೀಂದ್ರ ಆಚಾರ್ಯ, ಲೋಕನಾಥ್ ಶೆಟ್ಟಿ, ಗಣೇಶ್ ದೇವಾಡಿಗ, ಕಿಶನ್ ಅಮೀನ್ ನಾಗರಾಜ ಸುವರ್ಣ, ಪ್ರಮುಖರಾದ ಗಂಗಾಧರ ಶೆಟ್ಟಿಗಾರ್, ತಾರಾನಾಥ ಶೆಟ್ಟಿಗಾರ್, ಮಂಜುನಾಥ ಪೂಜಾರಿ, ತಾರಾನಾಥ್ ಶೆಟ್ಟಿ, ವಿದ್ಯುತ್ ಗುತ್ತಿಗೆದಾರರು ಬಾಲಕೃಷ್ಣ ಶೆಟ್ಟಿಗಾರ್, ಮಹಿಳಾ ಸಮಿತಿಯ ಇಂದ್ರಾಕ್ಷಿ ಹರೀಶ್, ಮಮತಾ ರಾವ್, ಜಯಂತಿ ಪಿ.ಟಿ.ರೈ, ಅಕ್ಷಿತಾ ಸಂದೀಪ್, ಲತಾ ಮಹೇಶ್, ಜಯಂತಿ ಗಣೇಶ್ ಮುಂತಾದವರು ಭಾಗವಹಿಸಿದರು.

  • ಮೂರು ತಿಂಗಳು ವಿದ್ಯುತ್ ವಿನಾಯಿತಿ

    ಮೂರು ತಿಂಗಳು ವಿದ್ಯುತ್ ವಿನಾಯಿತಿ

    ನವದೆಹಲಿ: ಜನ ಸಾಮಾನ್ಯರಿಗೆ, ಉದ್ಯೋಗಿಗಳಿಗೆ ರಿಲೀಫ್ ನೀಡಿದ್ದ ಕೇಂದ್ರ ಸರ್ಕಾರ ಈಗ ವಿದ್ಯುತ್ ವಿನಾಯಿತಿಯನ್ನು ನೀಡಿದೆ.

    ಮೂರು ತಿಂಗಳ ಕಾಲ ವಿದ್ಯುತ್ ಬಿಲ್ ಪಾವತಿಗೆ 3 ತಿಂಗಳು ವಿನಾಯಿತಿ ನೀಡಿ ರಾಜ್ಯ ಸರ್ಕಾರಗಳು ಎಲ್ಲ ಎಸ್ಕಾಂಗಳಿಗೆ ಸೂಚಿಸಬೇಕೆಂದು ಕೇಂದ್ರ ಇಂಧನ ಸಚಿವಾಲಯ ಆದೇಶಿಸಿದೆ.

    ಲಾಕ್‍ಡೌನ್ ಅವಧಿಯಲ್ಲಿ ವ್ಯವಹಾರ ನಡೆಯದ ಕಾರಣ ವಿದ್ಯುತ್ ಶುಲ್ಕದಲ್ಲಿ ವಿನಾಯಿತಿ ನೀಡಬೇಕೆಂದು ಬೇಡಿಕೆ ವ್ಯಕ್ತವಾಗಿತ್ತು. ಲಾಕ್‍ಡೌನ್ ಹಿನ್ನೆಲೆಯಲ್ಲಿ ಹಲವು ಕೈಗಾರಿಕೆ ಮತ್ತು ಕಂಪನಿಗಳು ಬಂದ್ ಆಗಿರುವ ಕಾರಣ ವಿದ್ಯುತ್ ಬೇಡಿಕೆ ಕಡಿಮೆಯಾಗಿದೆ.

    ಕೃಷಿ ಉತ್ಪನ್ನ ಸಾಗಾಟ, ಕೃಷಿಗೆ ಪೂರಕವಾಗಿರುವ ಸಂಸ್ಥೆಗಳ ವ್ಯವಹಾರಗಳಿಗೆ ಕೇಂದ್ರ ಸರ್ಕಾರ ವಿನಾಯಿತಿ ನೀಡಿದೆ.

  • ಸಿದ್ದರಾಮಯ್ಯ, ಎಚ್‍ಡಿಕೆ ಅಧಿಕಾರದ ಹಗಲುಗನಸು ಕಾಣುತ್ತಿದ್ದಾರೆ: ಎಂಟಿಬಿ

    ಸಿದ್ದರಾಮಯ್ಯ, ಎಚ್‍ಡಿಕೆ ಅಧಿಕಾರದ ಹಗಲುಗನಸು ಕಾಣುತ್ತಿದ್ದಾರೆ: ಎಂಟಿಬಿ

    ಆನೇಕಲ್: ಕುಮಾರಸ್ವಾಮಿ ಹಾಗೂ ಸಿದ್ದರಾಮಯ್ಯ ತಿಪ್ಪರಲಾಗ ಹಾಕಿದ್ರೂ ಅಧಿಕಾರಕ್ಕೆ ಬರುವುದಿಲ್ಲ ಎಂದು ಮಾಜಿ ಸಚಿವ ಎಂಟಿಬಿ ನಾಗರಾಜ್ ಭವಿಷ್ಯ ನುಡಿದಿದ್ದಾರೆ.

    ಎಂಟಿಬಿ ನಾಗರಾಜು ಇಂದು ತಮ್ಮ ಪುತ್ರ ಬಿಬಿಎಂಪಿ ಸದಸ್ಯ ನಿತಿನ್ ಪುರುಷೋತಮ್ ಹುಟ್ಟುಹಬ್ಬದಲ್ಲಿ ಪಾಲ್ಗೊಂಡ ಶುಭಾಶಯ ತಿಳಿಸಿ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ವಿರುದ್ಧ ಹರಿಹಾಯ್ದರು. ಸಿದ್ದರಾಮಯ್ಯ ಹಾಗೂ ಕುಮಾರಸ್ವಾಮಿ ಅಧಿಕಾರ ಸಿಗುತ್ತೆ ಎಂಬ ಹಗಲುಗನಸು ಕಾಣುತ್ತಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.

    ಸಿದ್ದರಾಮಯ್ಯ ಅಧಿಕಾರಕ್ಕಾಗಿ ಏನ್ ಬೇಕಾದರೂ ಮಾಡುತ್ತಾರೆ. ಆದರೆ ಈ ಬಾರೀ ಸಿದ್ದರಾಮಯ್ಯ ತಿಪ್ಪರಲಾಗ ಹಾಕಿದರು ಅಧಿಕಾರ ಸಿಗಲ್ಲ. ಇನ್ನು ಮೂರುವರ್ಷ ಯಡಿಯೂರಪ್ಪ ಸರ್ಕಾರ ಸುಭದ್ರವಾಗಿರುತ್ತೆ ಎಂದರು. ಜೊತೆಗೆ ಆರ್. ಶಂಕರ್, ಎಚ್.ವಿಶ್ವನಾಥ್ ಹಾಗೂ ತಮ್ಮನ್ನ ಯಡಿಯೂರಪ್ಪ ಯಾವತ್ತೂ ಕೈ ಬಿಡುವುದಿಲ್ಲ. ನಮ್ಮನ್ನು ಇನ್ನು ಕೆಲವು ತಿಂಗಳಲ್ಲಿ ಸಚಿವರನಾಗಿ ಮಾಡುತ್ತಾರೆ. ಯಾರು ಏನೇ ಮಾಡಿದರೂ ಯಡಿಯೂರಪ್ಪ ಅಧಿಕಾರ ಪೂರ್ಣಗೊಳಿಸುತ್ತಾರೆ ಎಂದು ತಿಳಿಸಿದರು.

  • ಶೀಘ್ರವೇ ರಾಜ್ಯದ ಜನತೆಗೆ ವಿದ್ಯುತ್ ದರ ಹೆಚ್ಚಳದ ಶಾಕ್

    ಶೀಘ್ರವೇ ರಾಜ್ಯದ ಜನತೆಗೆ ವಿದ್ಯುತ್ ದರ ಹೆಚ್ಚಳದ ಶಾಕ್

    ಬೆಂಗಳೂರು: ರಾಜ್ಯದ ಜನತೆಗೆ ವಿದ್ಯುತ್ ದರ ಹೆಚ್ಚಳದ ಶಾಕ್ ನೀಡಲು ರಾಜ್ಯ ಸರ್ಕಾರ ಸಿದ್ಧತೆ ನಡೆಸಿಕೊಂಡಿದೆ. ರಾಜ್ಯದ ಐದು ವಿದ್ಯುತ್ ಸರಬರಾಜು ಕಂಪನಿಗಳು ತಮ್ಮ ವ್ಯಾಪ್ತಿಯ ವಿದ್ಯುತ್ ಸಂಪರ್ಕಕ್ಕೆ ಏಪ್ರಿಲ್ ನಿಂದ ವಿದ್ಯುತ್ ದರ ಹೆಚ್ಚಳ ಮಾಡುವಂತೆ ಕರ್ನಾಟಕ ವಿದ್ಯುತ್ ನಿಯಂತ್ರಣ ಅಯೋಗಕ್ಕೆ (ಕೆಇಆರ್‍ಸಿ) ಪ್ರಸ್ತಾವನೆ ಸಲ್ಲಿಸಿದೆ.

    ಪ್ರತಿಯೊಂದು ಯೂನಿಟ್ ಗೆ 1.ರೂ. ನಿಂದ 2.20 ರೂ.ವರೆಗೆ ವಿದ್ಯುತ್ ದರ ಏರಿಕೆ ಮಾಡಲು ವಿದ್ಯುತ್ ಸರಬರಾಜು ಕಂಪನಿಗಳು ಕೆಇಆರ್‍ಸಿಗೆ ಪ್ರಸ್ತಾವನೆ ಸಲ್ಲಿಸಿವೆ. ಆದರೆ ಕಡಿಮೆ ವಿದ್ಯುತ್ ಬಳಕೆ ಮಾಡುವ ನಗರ ಪ್ರದೇಶ ಹಾಗೂ ಗ್ರಾಮೀಣ ಭಾಗದ ಗೃಹ ಬಳಕೆದಾರರಿಗೆ ಹೆಚ್ಚಿನ ಹೊರೆಯಾಗದಂತೆ ಪ್ರಸ್ತಾವನೆ ಸಲ್ಲಿಸಿವೆ. ಕೃಷಿ ಪಂಪ್ ಸೆಟ್ ಗಳಿಗೆ ಭಾರೀ ಪ್ರಮಾಣದಲ್ಲಿ ವಿದ್ಯುತ್ ದರ ಏರಿಕೆ ಮಾಡುವಂತೆ ಪ್ರಸ್ತಾವನೆ ಸಲ್ಲಿಸಿವೆ.

    ಪ್ರತಿ ವಿದ್ಯುತ್ ಸರಬರಾಜು ಕಂಪನಿಯೂ ಗೃಹ ಬಳಕೆಗೆ ಗ್ರಾಹಕರು, ಸರ್ಕಾರಿ ವಿದ್ಯಾ ಸಂಸ್ಥೆಗಳು ಹಾಗೂ ಆಸ್ಪತ್ರೆ ಸ್ಥಾವರಗಳಿಗೆ ಒಂದು ದರ ಹಾಗೂ ಕೈಗಾರಿಕಾ, ವಾಣಿಜ್ಯ, ಎಚ್ ಟಿ ವಾಣಿಜ್ಯ ಬಳಕೆದಾರರಿಗೆ ಪ್ರತ್ಯೇಕವಾಗಿ ದರ ಏರಿಕೆಗೆ ಪ್ರಸ್ತಾಪ ಸಲ್ಲಿಸಿದೆ. ವಿದ್ಯುತ್ ಸರಬರಾಜು ಕಂಪನಿಗಳ ದರ ಏರಿಕೆಗೆ ಪರಿಶೀಲನೆ ನಡೆಸುತ್ತಿದ್ದು, ರಾಜ್ಯ ಸರ್ಕಾರದ ಜೊತೆ ಚರ್ಚೆ ನಡೆಸಿ ಸದ್ಯದಲ್ಲಿಯೇ ವಿದ್ಯುತ್ ದರ ಏರಿಕೆ ಮಾಡಲಿವೆ.

    ಪ್ರತಿ ಯೂನಿಟ್‍ಗೆ 1.90 ರೂ. ಹೆಚ್ಚಳ?
    ಬೆಸ್ಕಾಂ ಕೆಇಆರ್‍ಸಿಗೆ ಸಲ್ಲಿಸಿರುವ ಪ್ರಸ್ತಾವನೆಯಲ್ಲಿ 3018-19 ನೇ ಸಾಲಿನಲ್ಲಿ ಬೆಸ್ಕಾಂಗೆ 2,224 ಕೋಟಿ ರೂ.ಆದಾಯ ಕೊರತೆ ಉಂಟಾಗಿತ್ತು. ಹೀಗಾಗಿ ಎಲ್ಲಾ ವಲಯಗಳಲ್ಲಿ ಪ್ರತಿ ಯೂನಿಟ್‍ಗೆ 1.96 ರೂ.ಗಳಂತೆ ವಿದ್ಯುತ್ ದರ ಹೆಚ್ಚಳ ಮಾಡಲು ಪ್ರಸ್ತಾಪ ಸಲ್ಲಿಸಿದೆ.

    ಬೆಸ್ಕಾಂ ಮಾತ್ರವಲ್ಲದೇ ಮೆಸ್ಕಾಂ, ಚೆಸ್ಕಾಂ, ಹೆಸ್ಕಾಂ ಜೆಸ್ಕಾಂ ವಿದ್ಯುತ್ ಸರಬರಾಜು ಕಂಪನಿಗಳಿಗೂ ಪ್ರತ್ಯೇಕವಾಗಿ ಎಲ್ಲಾ ವರ್ಗಗಳ ಗ್ರಾಹಕರಿಗೆ ಪ್ರತಿ ಯೂನಿಟ್ ಗೆ 0.50 ರೂ.ಗಳಿಂದ 2.00 ರೂ.ವರೆಗೆ ದರ ಏರಿಕೆ ಮಾಡುವಂತೆ ಪ್ರಸ್ತಾವನೆ ಸಲ್ಲಿಸಿವೆ ಎಂದು ಮೂಲಗಳು ತಿಳಿಸಿವೆ.

  • ಚಳಿಗಾಲದಲ್ಲೂ ಹೆಚ್ಚಾಯ್ತು ಬೇಡಿಕೆ – ಶಾಖೋತ್ಪನ್ನ ವಿದ್ಯುತ್ ಕೇಂದ್ರಗಳ ಮೇಲೆ ಒತ್ತಡ

    ಚಳಿಗಾಲದಲ್ಲೂ ಹೆಚ್ಚಾಯ್ತು ಬೇಡಿಕೆ – ಶಾಖೋತ್ಪನ್ನ ವಿದ್ಯುತ್ ಕೇಂದ್ರಗಳ ಮೇಲೆ ಒತ್ತಡ

    ರಾಯಚೂರು: ಸಾಮಾನ್ಯವಾಗಿ ಚಳಿಗಾಲದಲ್ಲಿ ವಿದ್ಯುತ್ ಬೇಡಿಕೆ ಕಮ್ಮಿ ಇರುತ್ತದೆ. ಆದರೆ ಈ ವರ್ಷ ಬೇಡಿಕೆ ಅಧಿಕವಾಗಿದೆ. ಹೀಗಾಗಿ ರಾಜ್ಯದ ಶಾಖೊತ್ಪನ್ನ ವಿದ್ಯುತ್ ಕೇಂದ್ರಗಳ ಮೇಲೆ ಹೆಚ್ಚು ವಿದ್ಯುತ್ ಉತ್ಪಾದನೆಯ ಒತ್ತಡ ಬಿದ್ದಿದೆ.

    ರಾಜ್ಯಕ್ಕೆ ಶೇಕಡಾ 40 ರಷ್ಟು ವಿದ್ಯುತ್ ನೀಡುವ ಪ್ರಮುಖ ಶಾಖೋತ್ಪನ್ನ ವಿದ್ಯುತ್ ಕೇಂದ್ರ ರಾಯಚೂರಿನ ಆರ್.ಟಿ.ಪಿ.ಎಸ್ (ರಾಯಚೂರು ಥರ್ಮಲ್ ಪವರ್ ಸ್ಟೇಷನ್) ಮೇಲೆ ಹೆಚ್ಚಿನ ಒತ್ತಡವಿದೆ. ಹೀಗಾಗಿ ಆರ್.ಟಿ.ಪಿ.ಎಸ್ ನ 8 ಘಟಕಗಳಲ್ಲಿ 7 ಘಟಕಗಳು ನಿರಂತರವಾಗಿ ದಾಖಲೆ ಪ್ರಮಾಣದ ವಿದ್ಯುತ್ ಉತ್ಪಾದನೆಗೆ ಮುಂದಾಗಿವೆ. ಕೃಷಿ, ನೀರಾವರಿ ಪಂಪ್ ಸೆಟ್ ಸೇರಿದಂತೆ ಇನ್ನಿತರ ಕಾರಣಗಳಿಗೆ ಹೆಚ್ಚು ವಿದ್ಯುತ್ ಬಳಕೆಯಿರುವುದರಿಂದ ಬೇಡಿಕೆಯೂ ಹೆಚ್ಚಾಗಿದೆ. ಹೀಗಾಗಿ ಮಳೆಗಾಲ, ಚಳಿಗಾಲದಲ್ಲಿ ವಾರ್ಷಿಕ ನಿರ್ವಹಣೆಗೆ ಒಳಪಡಬೇಕಾದ ಘಟಕಗಳು ನಿರಂತರವಾಗಿ ವಿದ್ಯುತ್ ಉತ್ಪಾದಿಸುತ್ತಿವೆ.

    ಆರ್.ಟಿ.ಪಿ.ಎಸ್ ನ 8 ಘಟಕಗಳಿಗೆ ಒಟ್ಟು 1,ಸ720 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಸಾಮಥ್ರ್ಯವಿದ್ದು, ಈಗ 7 ಘಟಕಗಳಿಂದ 1,083 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಮಾಡಲಾಗುತ್ತಿದೆ. 1,700 ಮೆಗಾ ವ್ಯಾಟ್ ಸಾಮಥ್ರ್ಯದ ಬಳ್ಳಾರಿ ಬಿಟಿಪಿಎಸ್ ನಲ್ಲಿ 453 ಮೆಗಾವ್ಯಾಟ್ ವಿದ್ಯುತ್ ಉತ್ಪಾದಿಸಲಾಗುತ್ತಿದೆ.

    ರಾಜ್ಯದಲ್ಲಿ ಒಟ್ಟು 8,323 ಮೆಗಾವ್ಯಾಟ್ ವಿದ್ಯುತ್ ಬೇಡಿಕೆ ಇದೆ. ಕಳೆದ ಎರಡು ದಿನಗಳ ಹಿಂದೆ 10,121 ಮೆಗಾವ್ಯಾಟ್ ವಿದ್ಯುತ್ ಬೇಡಿಕೆ ಇತ್ತು. ಈ ವರ್ಷ ಉತ್ತಮ ಮಳೆಯಾಗಿದ್ದರಿಂದ ಈ ಚಳಿಗಾಲದಲ್ಲಿ ಬೇಡಿಕೆ ಕಡಿಮೆ ಇರುತ್ತದೆ ಎನ್ನಲಾಗಿತ್ತು. ಆದರೆ ಚಳಿಗಾಲದಲ್ಲಿಯೇ ಅಧಿಕ ಬೇಡಿಕೆ ಇದೆ. ರಾಜ್ಯದ ಶಾಖೋತ್ಪನ್ನ ವಿದ್ಯುತ್ ಸ್ಥಾವರಗಳಿಗೆ ಸದ್ಯ ಕಲ್ಲಿದ್ದಲು ಕೊರತೆಯಿಲ್ಲದ ಕಾರಣ ನಿರಂತರ ವಿದ್ಯುತ್ ಉತ್ಪಾದನೆ ಯಾವ ತೊಡಕಿಲ್ಲದೆ ನಡೆದಿದೆ.