Tag: power

  • ರೆಸಾರ್ಟ್ ರಾಜಕಾರಣ ಮಾಡಿದ್ರೆ ಕತ್ತಿನ ಪಟ್ಟಿ ಹಿಡಿದು ಬುದ್ಧಿ ಕಲಿಸಬೇಕಾಗುತ್ತೆ: ಮಂಡ್ಯ ರೈತರು

    ರೆಸಾರ್ಟ್ ರಾಜಕಾರಣ ಮಾಡಿದ್ರೆ ಕತ್ತಿನ ಪಟ್ಟಿ ಹಿಡಿದು ಬುದ್ಧಿ ಕಲಿಸಬೇಕಾಗುತ್ತೆ: ಮಂಡ್ಯ ರೈತರು

    ಮಂಡ್ಯ: ರೈತರ ಸಮಸ್ಯೆ ಬಗೆ ಹರಿಸೋದು ಬಿಟ್ಟು ಹೀಗೆ ರೆಸಾರ್ಟ್ ರಾಜಕಾರಣ ಮಾಡುತ್ತ ಕುಳಿತರೆ ನಿಮ್ಮ ಕತ್ತಿನ ಪಟ್ಟಿ ಹಿಡಿದು ಬುದ್ಧಿ ಕಲಿಸಬೇಕಾಗುತ್ತದೆ ಎಂದು ಜನಪ್ರತಿನಿಧಿಗಳಿಗೆ ಮಂಡ್ಯ ರೈತರು ಎಚ್ಚರಿಕೆ ನೀಡಿದ್ದಾರೆ.

    ರೈತರ ಸಮಸ್ಯೆಗಳ ಬಗ್ಗೆ ಚರ್ಚಿಸಲು ಇಂದು ಮಂಡ್ಯದ ಪ್ರವಾಸಿ ಮಂದಿರದಲ್ಲಿ ಸಭೆ ಸೇರಿದ್ದ ರೈತರು, ಸರ್ಕಾರದ ನಡೆ ವಿರುದ್ಧ ಆಕ್ರೋಶ ಹೊರಹಾಕಿದರು. ಅಧಿಕಾರದ ಸಲುವಾಗಿ ರೆಸಾರ್ಟ್ ಸೇರಿರುವ ಆಡಳಿತ ಪಕ್ಷ ಮತ್ತು ವಿರೋಧ ಪಕ್ಷದ ವಿರುದ್ಧ ಧಿಕ್ಕಾರ ಕೂಗಿ ತಮ್ಮ ಅಸಮಾಧಾನವನ್ನು ರೈತರು ಹೊರಹಾಕಿದ್ದಾರೆ.

    ಈ ಮೈತ್ರಿ ಸರ್ಕಾರದಲ್ಲಿ ಜನರ ಕಷ್ಟಗಳಿಗೇ ಸ್ಪಂದಿಸುವ ಕೆಲಸ ಆಗುತ್ತಿಲ್ಲ. ಅಧಿಕಾರವನ್ನು ಉಳಿಸಿಕೊಳ್ಳಲು ಎಲ್ಲರೂ ರೆಸಾರ್ಟ್ ರಾಜಕಾರಣ ಮಾಡುತ್ತಿದ್ದಾರೆ. ಇದರ ಜೊತೆ ವಿರೋಧ ಪಕ್ಷಕ್ಕೂ ರಾಜ್ಯದ ರೈತರ ಸಮಸ್ಯೆ ಬೇಕಾಗಿಲ್ಲ. ಅವರು ಕೂಡ ಅಧಿಕಾರವನ್ನು ಹಿಡಿಯಲು ಓಡಾಡುತ್ತಿದ್ದಾರೆ. ನಮ್ಮ ನಾಡಿನ ಜನ ಎಚ್ಚೆತ್ತು ಚುನಾವಣೆ ಸಮಯದಲ್ಲಿ ಮನೆ ಬಳಿ ಬರುವ ರಾಜಕಾರಣಿಗಳಿಗೇ ಬುದ್ಧಿ ಕಲಿಸಬೇಕು. ಯಾವುದೇ ಪಕ್ಷದವರು ಆಗಲಿ ಮೊದಲು ಜನರ ಕಷ್ಟವನ್ನು ಆಲಿಸಿ ನಂತರ ಅವರು ರಾಜಕಾರಣ ಮಾಡಲಿ ಎಂದು ರೈತರು ಜನಪ್ರತಿನಿಧಿಗಳಿಗೆ ಕ್ಲಾಸ್ ತೆಗೆದುಕೊಂಡರು.

    ನಿಮಗೆ ವೋಟ್ ಹಾಕಿರೋದು ಯಾಕೆ? ಇಲ್ಲಿ ನೀರಿಲ್ಲದೆ ನಮ್ಮ ಬೆಳೆಗಳು ಒಣಗುತ್ತಿವೆ. ನೀವು ನಮ್ಮ ಕಷ್ಟಕ್ಕೆ ಸ್ಪಂದಿಸದೇ ರೆಸಾರ್ಟ್ ಸೇರಿಕೊಂಡಿದ್ದೀರಿ? ನಿಮಗೆ ಮಾನ ಮರ್ಯಾದೆ ಇಲ್ಲವೇ? ಇದು ಹೀಗೆ ಮುಂದುವರಿದರೆ ನಿಮ್ಮ ಕತ್ತಿನ ಪಟ್ಟಿ ಹಿಡಿದು ಬುದ್ಧಿ ಕಲಿಸಬೇಕಾಗುತ್ತೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

  • ರಾಜ್ಯದ ವಿವಿಧ ಭಾಗಗಳಲ್ಲಿ ರಾತ್ರಿಯಿಂದಲೇ ಸುರಿಯುತ್ತಿದೆ ಮಳೆ

    ರಾಜ್ಯದ ವಿವಿಧ ಭಾಗಗಳಲ್ಲಿ ರಾತ್ರಿಯಿಂದಲೇ ಸುರಿಯುತ್ತಿದೆ ಮಳೆ

    ಬೆಂಗಳೂರು: ರಾಜ್ಯದ ವಿವಿಧ ಭಾಗಗಳಲ್ಲಿ ಶನಿವಾರ ರಾತ್ರಿಯಿಂದ ಬಿಟ್ಟು ಬಿಡದೆ ಮಳೆ ಸುರಿಯುತ್ತಿದೆ. ಬೆಳಗಾವಿ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಕಳೆದ ರಾತ್ರಿಯಿಂದ ಬಿಟ್ಟು ಬಿಡದೆ ಸುರಿಯುತ್ತಿದೆ. ರಾತ್ರಿಯಿಂದ ಸುರಿಯುತ್ತಿರುವ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದ್ದು, ವಾಹನ ಸವಾರರು ಪರದಾಡುವಂತಾಗಿದೆ. ಅಲ್ಲದೆ ಬೆಳಗಾವಿಯ ಮಾರುತಿ ಗಲ್ಲಿಯ 20ಕ್ಕೂ ಅಧಿಕ ಮನೆಗಳಿಗೆ ನೀರು ನುಗ್ಗಿದೆ. ಮನೆಯ ಮುಂಭಾಗದ ರಸ್ತೆಗಳು ನದಿಯಂತಾಗಿದ್ದು, ಹೊರಬರಲು ಜನರು ಹರಸಾಹಸ ಪಡುತ್ತಿದ್ದಾರೆ.

    ಬೆಳಗಾವಿಯಲ್ಲಿ ಮುಂಗಾರು ಮಳೆಯ ಅಬ್ಬರ ಜೋರಾಗಿದ್ದು, ಕಳೆದ ರಾತ್ರಿ ಸುರಿದ ಭಾರೀ ಮಳೆಯಿಂದ ರಸ್ತೆ ಮೇಲೆ ನೀರು ಹರಿದಾಡುತ್ತಿದೆ. ಬೆಳಗಾವಿ ಜಿಲ್ಲೆಯಾದ್ಯಂತ ಸುರಿದ ಭಾರೀ ಮಳೆಗೆ ಪಟ್ಟಣದ ಮಾರುತಿ ನಗರದಲ್ಲಿ ಮನೆಗಳಿಗೆ ನೀರು ನುಗ್ಗಿದೆ. ಸದ್ಯ ನೀರನ್ನು ಹೊರಹಾಕಲು ಜನರು ಶ್ರಮಪಡುತ್ತಿದ್ದಾರೆ. ಮಳೆಯಿಂದಾಗಿ ರೈತರ ಮುಖದಲ್ಲಿ ಮಂದಹಾಸ ಮೂಡಿದೆ. ಇಂದು ಬೆಳಗ್ಗಿನಿಂದ ಕೂಡ ತುಂತುರು ಮಳೆ ಸುರಿಯುತ್ತಿದ್ದು, ವಾಹನ ಸವಾರರು ಪರದಾಡುತ್ತಿದ್ದಾರೆ.

    ಧಾರವಾಡದಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದೆ. ಶನಿವಾರ ಸಂಜೆಯಿಂದ ರಾತ್ರಿಯಿಡೀ ಮಳೆಯ ಅಬ್ಬರ ನಿಂತಿಲ್ಲ. ಬೆಳಗ್ಗೆಯೂ ವರುಣ ತನ್ನ ಅಬ್ಬರವನ್ನು ಮುಂದುವರಿಸಿದ್ದಾನೆ. ಮಳೆಯಿಂದಾಗಿ ಬಹುತೇಕ ಕಡೆ ರಾತ್ರಿಯಿಂದಲೇ ವಿದ್ಯುತ್ ಕಡಿತಗೊಂಡಿದೆ. ತಂಪು ಗಾಳಿ ಸಹಿತ ಮಳೆ ಸುರಿಯುತ್ತಿದೆ.

    ಕಳೆದ ವಾರ ರಾಜ್ಯದ ನಾನಾ ಭಾಗಗಳಲ್ಲಿ ಉತ್ತಮ ಮಳೆ ಆಗಿತ್ತು. ಆದರೆ ಹಾವೇರಿ ಜಿಲ್ಲೆಯಲ್ಲಿ ಮಳೆರಾಯನ ಅವಕೃಪೆಯಿಂದ ಜನರಲ್ಲಿ ಆತಂಕ ಮನೆ ಮಾಡಿತ್ತು. ಇಂದು ಹಾವೇರಿ ಜಿಲ್ಲೆಯ ಹಲವು ಭಾಗಗಳಲ್ಲಿ ಉತ್ತಮ ಮಳೆ ಆಗಿದೆ. ಜಿಲ್ಲೆಯ ಬ್ಯಾಡಗಿ, ಹಾನಗಲ್ ತಾಲೂಕು ಸೇರಿದಂತೆ ವಿವಿಧ ಭಾಗದಲ್ಲಿ ಮಳೆ ಆಗಿದೆ. ಮುಂಗಾರು ಕೈಕೊಟ್ಟ ಹಿನ್ನೆಲೆಯಲ್ಲಿ ರೈತರು ಆತಂಕಕ್ಕೆ ಒಳಗಾಗಿದ್ದರು. ಒಂದು ಗಂಟೆಗಳ ಕಾಲ ಧಾರಕಾರವಾಗಿ ಮಳೆಯಾದ ಹಿನ್ನೆಲೆಯಲ್ಲಿ ಜಿಲ್ಲೆಯ ಜನರಿಗೆ ಸಂತಸವಾಗಿದೆ. ಜನರು ಹೆಚ್ಚಿನ ಮಳೆಯ ನಿರೀಕ್ಷೆಯಲ್ಲಿ ಇದ್ದಾರೆ. ಇದು ಸ್ವಲ್ಪ ಮಟ್ಟಿಗೆ ರೈತರ ಆತಂಕವನ್ನು ದೂರ ಮಾಡಿದೆ.

    ಉತ್ತರ ಕನ್ನಡ ಜಿಲ್ಲೆಯಾದ್ಯಂತ ಮಳೆರಾಯನ ಆರ್ಭಟ ಮುಂದುವರಿದಿದೆ. ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ ಒಟ್ಟು 524.7 ಮಿ.ಮೀ ಮಳೆಯಾಗಿದೆ. ಮಳೆಯಿಂದಾಗಿ ಕಾರವಾರದ ಹಲವು ಭಾಗದಲ್ಲಿ ಚರಂಡಿಯಲ್ಲಿ ಕಸ ಕಟ್ಟಿ ರಸ್ತೆಗಳಲ್ಲಿ ನೀರು ತುಂಬಿ ಹರಿಯುತ್ತಿದೆ. ಹಲವು ಜನವಸತಿ ಪ್ರದೇಶಗಳಲ್ಲಿ ರಸ್ತೆಗಳ ಮೇಲೆ ನೀರು ಹರಿಯುತ್ತಿದ್ದು ಸಂಚಾರಕ್ಕೆ ತೊಂದರೆಗಳಾಗಿವೆ. ಜಿಲ್ಲೆಯಾದ್ಯಂತ ಮಳೆ ಮುಂದುವರಿದಿದ್ದು ಮಂಡಗೋಡು ಭಾಗ ಹೊರತುಪಡಿಸಿ ಉಳಿದ ಭಾಗದಲ್ಲಿ ಉತ್ತಮ ಮಳೆಯಾಗುತ್ತಿದೆ.

  • ಸಿದ್ದರಾಮಯ್ಯ ಕನಸಿನ ಇಂದಿರಾ ಕ್ಯಾಂಟೀನ್‍ಗಳಲ್ಲಿ ಕುಡಿಯೋಕೆ ನೀರಿಲ್ಲ

    ಸಿದ್ದರಾಮಯ್ಯ ಕನಸಿನ ಇಂದಿರಾ ಕ್ಯಾಂಟೀನ್‍ಗಳಲ್ಲಿ ಕುಡಿಯೋಕೆ ನೀರಿಲ್ಲ

    – ಕೋಟಿಗಟ್ಟಲೆ ಕರೆಂಟ್ ಬಿಲ್ ಕಟ್ಟೇ ಇಲ್ಲ

    ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ಕನಸಿನ ಯೋಜನೆಗೆ ಎಳ್ಳು ನೀರು ಬಿಡುವ ಸ್ಥಿತಿ ಎದುರಾಗಲಿದೆ. ಯಾಕಂದರೆ ಇಂದಿರಾ ಕ್ಯಾಂಟೀನ್ ಬಗ್ಗೆ ದೋಸ್ತಿ ನಾಯಕರಿಗೆ ಆಸಕ್ತಿ ಇದ್ದಂತೆ ಕಾಣುತ್ತಿಲ್ಲ. ಜನಸಾಮಾನ್ಯರ ಇಂದಿರಾ ಕ್ಯಾಂಟೀನ್‍ನಲ್ಲಿ ನೀರಿಗಾಗಿ ಪರದಾಟ ಶುರುವಾಗಿದೆ.

    ಈ ಮೂಲಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಡವರ ಹಸಿವು ನೀಗಿಸಲು ಆರಂಭಿಸಿದ ಯೋಜನೆ ಈಗ ನೆಲಕಚ್ಚುತ್ತಿದೆಯಾ ಎಂಬ ಅನುಮಾನ ಕಾಡುತ್ತಿದೆ. ಇಂದಿರಾ ಕ್ಯಾಂಟೀನ್‍ನಲ್ಲಿ ವಿದ್ಯುತ್, ನೀರು ವ್ಯತ್ಯಯವಾಗಿದೆ. ಕಾರಣ ಕಳೆದ ಒಂದು ವರ್ಷದಿಂದ ಇಂದಿರಾ ಕ್ಯಾಂಟೀನ್‍ ಇವುಗಳ ಬಿಲ್ ಪಾವತಿಸಿಲ್ಲ. ನಗರದ 21 ಕ್ಯಾಂಟೀನ್‍ಗಳಲ್ಲಿ ಸದ್ಯ ನೀರಿನ ಪೂರೈಕೆ ಬಹುತೇಕ ಬಂದ್ ಆಗಿದೆ.

    ವಿದ್ಯುತ್ ಹಾಗೂ ನೀರಿಗೆ ವಾಣಿಜ್ಯ ಬೆಲೆ ನಿಗದಿ ಮಾಡಿದ್ದಾರೆ. ಇಂದಿರಾ ಕ್ಯಾಂಟೀನ್ ಯೋಜನೆ ಸಾರ್ವಜನಿಕ ಸೇವೆಯದ್ದಾಗಿದೆ. ಇದಕ್ಕೆ ರಿಯಾಯಿತಿ ನೀಡುವವರೆಗೂ ಬಿಲ್ ಪಾವತಿಸಲ್ಲ ಎಂದು ಗುತ್ತಿಗೆದಾರರು ಪಟ್ಟು ಹಿಡಿದಿದ್ದಾರೆ. ಪರಿಣಾಮ ಕೋಡಿಗೆಹಳ್ಳಿ ಸಮೀಪದ ಕ್ಯಾಂಟೀನ್‍ನಲ್ಲಿ ಕಳೆದ 10 ದಿನದಿಂದ ನೀರಿನ ಸಂಪರ್ಕ ಕಡಿತಗೊಳಿಸಲಾಗಿದೆ.

    ರಿಯಾಯಿತಿ ದರದಲ್ಲಿ ಊಟ, ತಿಂಡಿ ಕೊಡುತ್ತಾರೆ. ನೀರು ಮಾತ್ರ ಕಷ್ಟ ಆಗುತ್ತಿದೆ. ಬೇಗ ನೀರಿನ ವ್ಯವಸ್ಥೆ ಕೊಡಿ ಎಂದು ಗ್ರಾಹಕರು ಒತ್ತಾಯಿಸುತ್ತಿದ್ದಾರೆ. ಬೆಂಗಳೂರಿನ 21 ಕ್ಯಾಂಟೀನ್ ಗಳಲ್ಲಿ ವಾಟರ್ ಬಂದ್ ಮಾಹಿತಿ ಇದೆ. ಹೀಗಾಗಿ ಸದ್ಯ ಖಾಸಗಿ ವಾಟರ್ ಟ್ಯಾಂಕ್‍ಗೆ ಸಾವಿರ ರೂ ಕೊಟ್ಟು ನೀರಿನ ಪೈಪ್ ಅಳವಡಿಸಿ ವ್ಯವಸ್ಥೆ ಮಾಡಿದ್ದಾರೆ. ಇನ್ನು ಗುತ್ತಿಗೆದಾರೊಂದಿಗೆ ಮಾತನಾಡಿ ಅಗತ್ಯ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಮೇಯರ್ ಗಂಗಾಬಿಕೆ ಹೇಳಿದ್ದಾರೆ.

    ಪ್ರತಿ ಇಂದಿರಾ ಕ್ಯಾಂಟೀನ್ ನಲ್ಲೂ ವಿದ್ಯುತ್ 90 ಸಾವಿರವರೆಗೂ ಬಿಲ್ ಬಾಕಿ ಉಳಿದಿದೆ. ನೀರು ಕಟ್ ಅಂತೂ ಆಯ್ತು ಹೀಗೆ ಮುಂದುವರಿದರೆ ವಿದ್ಯುತ್ ಸಹ ಬಂದ್ ಆಗಲಿದೆ. ಹೀಗಾಗಿ ಅಧಿಕಾರಿಗಳು, ದೋಸ್ತಿ ಜನರು ಇಂದಿರಾ ಸಂಕಟವನ್ನು ಬಗೆಹರಿಸಬೇಕಿದೆ.

  • ಅಣ್ಣನ ರಕ್ಷಣೆಗೆ ತೆರಳಿದ ತಮ್ಮ- ಇಬ್ಬರೂ ದುರ್ಮರಣ

    ಅಣ್ಣನ ರಕ್ಷಣೆಗೆ ತೆರಳಿದ ತಮ್ಮ- ಇಬ್ಬರೂ ದುರ್ಮರಣ

    ರಾಯಚೂರು: ವಿದ್ಯುತ್ ಸ್ಪರ್ಶಿಸಿ ಸಹೋದರರಿಬ್ಬರು ಮೃತಪಟ್ಟ ಘಟನೆ ಸಿಂಧನೂರು ತಾಲೂಕಿನ ಸಾಲಗುಂದ ಗ್ರಾಮದಲ್ಲಿ ನಡೆದಿದೆ.

    ಸಾಲಗುಂದ ಗ್ರಾಮದ ಹುಸೇನ್ ಬಾಷಾ (36) ಹಾಗೂ ಹಸನ್ ಬಾಷಾ (34) ಮೃತ ದುರ್ದೈವಿಗಳು. ಗ್ರಾಮದಲ್ಲಿ ಭಾನುವಾರ ಸಂಜೆ ಭಾರೀ ಗಾಳಿ ಬೀಸಿದ್ದು, ವಿದ್ಯುತ್ ತಂತಿಗಳು ತುಂಡಾಗಿ ಬಿದ್ದಿದ್ದವು.

    ಅದನ್ನು ಸರಿಪಡಿಸಲು ಹೋಗಿದ್ದ ಹುಸೇನ್‍ಗೆ ವಿದ್ಯುತ್ ಶಾಕ್ ಹೊಡೆದಿದೆ. ತಕ್ಷಣವೇ ಅಣ್ಣನ ರಕ್ಷಣೆಗೆ ಮಾಡಲು ಹಸನ್ ಹೋಗಿದ್ದಾರೆ. ಪರಿಣಾಮ ಇಬ್ಬರೂ ಮೃತಪಟ್ಟಿದ್ದಾರೆ.

    ಸಿಂಧನೂರು ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

  • ರಾಜಕೀಯ ಅಧ್ಯಾಯ ಮುಗಿದಿಲ್ಲ, ಹೊಸ ಇನ್ನಿಂಗ್ಸ್ ಪ್ರಾರಂಭ ಮಾಡ್ತೀನಿ: ಮುದ್ದಹನುಮೇಗೌಡ

    ರಾಜಕೀಯ ಅಧ್ಯಾಯ ಮುಗಿದಿಲ್ಲ, ಹೊಸ ಇನ್ನಿಂಗ್ಸ್ ಪ್ರಾರಂಭ ಮಾಡ್ತೀನಿ: ಮುದ್ದಹನುಮೇಗೌಡ

    ತುಮಕೂರು: ನನ್ನ ರಾಜಕೀಯ ಜೀವನ ಇಲ್ಲಿಗೆ ಮುಗಿದಿಲ್ಲ. ಕಾಂಗ್ರೆಸ್ ಪಕ್ಷದಲ್ಲಿ ಇದ್ದುಕೊಂಡೇ ಹೊಸ ಇನ್ನಿಂಗ್ಸ್ ಆರಂಭಿಸುತ್ತೇನೆ ಎಂದು ಸಂಸದ ಮುದ್ದಹನುಮೇಗೌಡ ತಿಳಿಸಿದ್ದಾರೆ.

    ತುಮಕೂರಿನಲ್ಲಿ ಖಾಸಗಿ ಹೋಟೆಲ್‍ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮೊದಲಿಗೆ ಕ್ಷೇತ್ರದ ಜನತೆಗೆ ಧನ್ಯವಾದ ತಿಳಿಸಿದ್ದಾರೆ. ನಾನು ಈ ಬಾರಿ ಚುನಾವಣೆಗೆ ಸ್ಪರ್ಧೆ ಮಾಡಿಲ್ಲ. ಆದ್ದರಿಂದ ನಾನು ಚುನಾವಣೆ ಫಲಿತಾಂಶಕ್ಕೆ ಕಾಯಬೇಕಿಲ್ಲ. ಆದರೆ ಯಾರಾದರೂ ಚುನಾಯಿತರಾಗಲಿ ಮುಂದಿನ ದಿನಗಳಲ್ಲಿ ನಮ್ಮ ಜಿಲ್ಲೆಯಲ್ಲಿ ನಡೆಯುವ ಅಭಿವೃದ್ಧಿ ಕಾರ್ಯಗಳಿಗೆ ನಾನು ಸಂಪೂರ್ಣ ಸಹಕಾರ ನೀಡುತ್ತೇನೆ ಎಂದರು.

    ರಾಜ್ಯದ ಜನತೆ ಜೊತೆಗೆ ಜಿಲ್ಲೆಯ ಜನತೆ ನನ್ನ ಅನುಮಾನಿಸಿಲ್ಲ. ಕೆಲ ವಿಕೃತ ಮನಸ್ಸುಗಳನ್ನು ಹೊರತುಪಡಿಸಿ ಜಿಲ್ಲೆಯ ಜನರ ಮನಸು ನನಗಾಗಿ ಮಿಡಿದಿದೆ. ಅದು ನನ್ನ ಪೂರ್ವ ಜನ್ಮದ ಪುಣ್ಯಕ್ಷೇತ್ರದ ಜನತೆ ನನ್ನ ಮೇಲೆ ಇಟ್ಟಿರುವ ನಂಬಿಕೆಯಾಗಿದ್ದು, ಇದು ನನ್ನ ಪೂರ್ವ ಜನ್ಮದ ಪುಣ್ಯ ಎಂದರು. ಅಷ್ಟೇ ಅಲ್ಲದೇ ನನ್ನ ರಾಜಕೀಯ ಜೀವನದ ಅಧ್ಯಾಯ ಮುಗಿದಿಲ್ಲ. ಕಾಂಗ್ರೆಸ್ ಪಕ್ಷದಲ್ಲೇ ಹೊಸ ಇನ್ನಿಂಗ್ಸ್ ಆರಂಭಿಸುತ್ತೇನೆ ಎಂದು ಸ್ಪಷ್ಟಪಡಿಸಿದರು.

    ನನಗೆ ಟಿಕೆಟ್ ಸಿಗದೇ ಇದ್ದರೂ ಪಕ್ಷ ನನ್ನನ್ನು ಗೌರವಯುತವಾಗಿ ನಡೆಸಿಕೊಂಡಿದೆ ಎಂದು ಹೇಳಿದ್ದಾರೆ. ಇದೇ ತಿಂಗಳ ಅಂತ್ಯಕ್ಕೆ ತಮ್ಮ ಅಧಿಕಾರ ಅವಧಿ ಅಂತ್ಯಗೊಳ್ಳಲಿದ್ದು ಸಹಕಾರ ನೀಡಿದ ಜನತೆ, ಅಧಿಕಾರಿಗಳು ಹಾಗೂ ಪಕ್ಷದ ನಾಯಕರು, ಕಾರ್ಯಕರ್ತರಿಗೆ ಧನ್ಯವಾದ ತಿಳಿಸಿದ್ದಾರೆ.

  • ‘ಕೆಜಿಎಫ್’ ಸಿನಿಮಾ ನೋಡ್ಬೇಕು – ಕರೆಂಟ್ ಕಟ್ ಮಾಡಿದ್ರೆ ಕಚೇರಿಗೆ ಬಾಂಬ್ : ಮೆಸ್ಕಾಂಗೆ ಪತ್ರ

    ‘ಕೆಜಿಎಫ್’ ಸಿನಿಮಾ ನೋಡ್ಬೇಕು – ಕರೆಂಟ್ ಕಟ್ ಮಾಡಿದ್ರೆ ಕಚೇರಿಗೆ ಬಾಂಬ್ : ಮೆಸ್ಕಾಂಗೆ ಪತ್ರ

    ಬೆಂಗಳೂರು: ಶನಿವಾರ ದೇಶಾದ್ಯಂತ ಹವಾ ಸೃಷ್ಟಿಸಿದ್ದ ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಕೆಜಿಎಫ್’ ಸಿನಿಮಾ ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕರೆಂಟ್ ತೆಗೆದರೆ ಕಚೇರಿಗೆ ಬಾಂಬ್ ಹಾಕುತ್ತೇವೆ ಹುಷಾರ್ ಎಂದು ಭದ್ರಾವತಿಯ ಮೆಸ್ಕಾಂಗೆ ಪತ್ರವೊಂದು ಬಂದಿದೆ.

    ಟಿವಿಯಲ್ಲಿ ಪ್ರಸಾರವಾಗುವ ಕೆಜಿಎಫ್ ಸಿನಿಮಾ ನೋಡಲು ಯಾವುದೇ ತೊಂದರೆಯಾಗಬಾರದೆಂದು ಭದ್ರಾವತಿ ಮೆಸ್ಕಾಂ ಕಚೇರಿಗೆ ಬಿಜೆಪಿ ಕಾರ್ಯಕರ್ತರೊಬ್ಬರ ಹೆಸರಿನಲ್ಲಿ ಪತ್ರ ಬಂದಿದೆ. ಈ ಪತ್ರ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

    ಪತ್ರದಲ್ಲಿ ಏನಿದೆ?
    ಈ ಮೂಲಕ ಕೆಇಬಿ ಮೆಸ್ಕಾಂ ಅಧಿಕಾರಿಗಳಿಗೆ ಎಚ್ಚರಿಸುವುದೆನೆಂದರೆ ಶನಿವಾರ ಭದ್ರಾವತಿಯಲ್ಲಿ ಕರೆಂಟ್ ಏನಾದರೂ ತೆಗೆದರೆ ನೀವು ಇರಲ್ಲ, ನಿಮ್ಮ ಕಚೇರಿನೂ ಇರಲ್ಲ. ಸುಟ್ಟು ಭಸ್ಮ ಮಾಡುತ್ತೇವೆ. ಹಾಗೇ ಶನಿವಾರ ಸಂಜೆ ಯಶ್ ನಟಿಸಿರುವ ಕೆಜಿಎಫ್ ಚಲನಚಿತ್ರ ಟಿವಿಯಲ್ಲಿ ಪ್ರಸಾರವಾಗುತ್ತಿದೆ. ಎಚ್.ಡಿ. ಕುಮಾರಸ್ವಾಮಿ, ಅಪ್ಪಾಜಿ ಇವರ ಕುಮ್ಮಕ್ಕಿನಿಂದ ಕರೆಂಟ್ ತೆಗೆದರೆ ನಿಮ್ಮ ಆಫಿಸ್‍ಗೆ ಸರಿಯಾದ ಬಾಂಬ್ ಹಾಕುತ್ತೇವೆ.

    ಸೋಮವಾರ ನಿಖಿಲ್ ನಾಮಿನೇಷನ್ ದಿನ 24 ಗಂಟೆ ವಿದ್ಯುತ್ ಪೂರೈಕೆ ಮಾಡಿ ಎಂದು ಸಿಎಂ ಕುಮಾರಸ್ವಮಿ ಚೆಸ್ಕಾಂಗೆ ಸೂಚನೆ ಕೊಟ್ಟಿದ್ದರು. ಅಲ್ಲದೇ ಸುಮಲತಾ ನಾಮಿನೇಷನ್ ದಿನ ಮಂಡ್ಯದಲ್ಲಿ ಕೇಬಲ್ ಕಟ್ ಮಾಡಲಾಗಿದೆ ಎಂದು ಆರೋಪಿಸಲಾಗಿತ್ತು.

  • ಕೊಂಬೆ ಕಡಿಯಲು ಹೋದ ಯುವಕ ಮರದಲ್ಲೇ ದುರ್ಮರಣ..!

    ಕೊಂಬೆ ಕಡಿಯಲು ಹೋದ ಯುವಕ ಮರದಲ್ಲೇ ದುರ್ಮರಣ..!

    ಮಡಿಕೇರಿ: ಕಾಫಿ ತೋಟಕ್ಕೆ ಸ್ಪ್ರಿಂಕ್ಲರ್ ಮೂಲಕ ನೀರು ಹಾಯಲು ತಡೆಯಾಗಿದ್ದ ಕೊಂಬೆಗಳನ್ನು ಕಡಿಯಲು ಕಾರ್ಮಿಕರೊಬ್ಬರು ಮರವೇರಿದ್ದರು. ಆದರೆ ಹೈಟೆನ್ಷನ್ ವಯರ್ ನಿಂದ ಹರಿದ ವಿದ್ಯುತ್ ಪ್ರವಾಹಕ್ಕೆ ಸಿಲುಕಿ ಮರದಲ್ಲೇ ಮೃತಪಟ್ಟಿರುವ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಸುಂಟಿಕೊಪ್ಪ ಸಮೀಪದ ಮಾರುತಿ ನಗರದಲ್ಲಿ ನಡೆದಿದೆ.

    ಹೆದ್ದಾರಿ ಬದಿಯಲ್ಲಿರುವ ಶಂಭುರವರಿಗೆ ಸೇರಿದ ತೋಟದಲ್ಲಿ ಈ ದುರ್ಘಟನೆ ನಡೆದಿದ್ದು, ಹೇಮಂತ್ ಕುಮಾರ್ (20) ಮೃತ ದುರ್ದೈವಿ ಯುವಕ. ಅವಿವಾಹಿತನಾಗಿರುವ ಹೇಮಂತ್ ಗುರುವಾರ ಬೆಳಗ್ಗೆ ತೋಟದ ಮಾಲೀಕರು ಕಾಫಿ ಗಿಡಗಳಿಗೆ ಸ್ಪ್ರಿಂಕ್ಲರ್ ಮೂಲಕ ನೀರು ಹಾಯಿಸುವ ಕೆಲಸಕ್ಕೆ ನಿಯುಕ್ತಿಗೊಳಿಸಿದ್ದರು.

    ಸ್ಪ್ರಿಂಕ್ಲರ್ ಅಳವಡಿಸಿದ್ದ ಸ್ಥಳದಲ್ಲಿ ಹಲಸಿನ ಮರವೊಂದಿದ್ದು, ಅದರ ದಟ್ಟವಾದ ಕೊಂಬೆಗಳು ಇನ್ನಿತರ ಕಾಫಿ ಗಿಡಗಳಿಗೆ ನೀರು ಸರಾಗವಾಗಿ ಹಾಯಲು ಬಿಡದೆ ತಡೆಯಾಗಿದ್ದವು. ಹೀಗಾಗಿ ಈ ಕೊಂಬೆಗಳನ್ನು ಕಡಿಯಲೆಂದು ಹೇಮಂತ್ ಮರವೇರಿದ್ದರು. ಅಲ್ಲದೆ ಕೊಂಬೆಗಳನ್ನು ಕಡಿಯುತ್ತಿದ್ದಾಗ ಮೇಲ್ಭಾಗದಲ್ಲಿ ಹಾದುಹೋಗಿದ್ದ ಹೈಟೆನ್ಸನ್ ವಯರ್ ನಿಂದ ವಿದ್ಯುತ್ ಪ್ರವಹಿಸಿದೆ. ಪರಿಣಾಮ ವಿದ್ಯುತ್ ಅಘಾತಕ್ಕೊಳಗಾಗಿ ಮೃತಪಟ್ಟಿದ್ದಾರೆ.

    ಹೇಮಂತ್ ಕುಮಾರ್ ಏಕಾಂಗಿಯಾಗಿ ಕೆಲಸ ಮಾಡುತ್ತಿದ್ದರಿಂದ ಬೇರೆಯವರಿಗೆ ವಿಷಯ ತಿಳಿದಿರಲಿಲ್ಲ. ಮಧ್ಯಾಹ್ನ ಕಳೆದರೂ ಹೇಮಂತ್ ಕುಮಾರ್ ಪತ್ತೆಯಾಗದ ಕಾರಣ ಘಟನಾ ಸ್ಥಳಕ್ಕೆ ಹುಡುಕಿಕೊಂಡು ಬಂದಾಗ ಮರದ ಕೆಳಗೆ ಮೃತದೇಹ ಕಂಡುಬಂದಿದೆ. ಹೇಮಂತ್ ಕುಮಾರ್ ಬೆಳಗ್ಗೆ 10.30ರ ಸಮಯದವರೆಗೂ ಮರದಲ್ಲಿದ್ದುದನ್ನು ಕಂಡವರಿದ್ದಾರೆ. ಆ ನಂತರ ಈ ದುರ್ಘಟನೆ ಸಂಭವಿಸಿರಬಹುದೆಂದು ಶಂಕಿಸಲಾಗಿದೆ.

    ಈ ಕುರಿತು ಸುಂಟಿಕೊಪ್ಪ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೊಳಪಡಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಏಕಾಏಕಿ ಬಂದ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ- ಮನೆ ಮುಂದೆ ನಿಂತಿದ್ದ ವ್ಯಕ್ತಿ ಸಾವು

    ಏಕಾಏಕಿ ಬಂದ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ- ಮನೆ ಮುಂದೆ ನಿಂತಿದ್ದ ವ್ಯಕ್ತಿ ಸಾವು

    ಬೆಂಗಳೂರು: ವಿದ್ಯುತ್ ಅವಘಡಕ್ಕೆ ವ್ಯಕ್ತಿಯೊಬ್ಬರು ಬಲಿಯಾದ ಘಟನೆ ಬೆಂಗಳೂರು ಹೊರವಲಯದ ನೆಲಮಂಗಲ ತಾಲೂಕಿನ ಕಾಸರಘಟ್ ಗ್ರಾಮದ ಬಳಿ ನಡೆದಿದೆ.

    ಮೃತ ದುರ್ದೈವಿ ವ್ಯಕ್ತಿಯನ್ನು ರಾಮಕೃಷ್ಣಪ್ಪ ಎಂದು ಗುರುತಿಸಲಾಗಿದೆ. ಇವರು ತಮ್ಮ ಮನೆ ಮುಂದೆ ನಿಂತಿದ್ದ ವೇಳೆ ನಡೆದ ಭಾರೀ ಅವಘಡಕ್ಕೆ ತುತ್ತಾಗಿದ್ದಾರೆ.

    ಮೃತ ರಾಮಕೃಷ್ಣಪ್ಪ ಅವರು ಮನೆ ಮುಂದೆ ನಿಂತಿದ್ದರು. ಈ ವೇಳೆ ಏಕಾಏಕಿ ಬಂದ ಇಂಡಿಕಾ ಕಾರೊಂದು ಮೃತ ವ್ಯಕ್ತಿಯ ಮನೆಯ ಮುಂದಿದ್ದ ವಿದ್ಯುತ್ ಕಂಬಕ್ಕೆ ಗುದ್ದಿದೆ. ಕಾರು ಕಂಬಕ್ಕೆ ಡಿಕ್ಕಿಯಾಗುತ್ತಿದ್ದಂತೆಯೇ ಶಾರ್ಟ್ ಸಕ್ರ್ಯೂಟ್ ಉಂಟಾಗಿದೆ. ಪರಿಣಾಮ ಅಲ್ಲೆ ನಿಂತಿದ್ದ ರಾಮಕೃಷ್ಣಪ್ಪ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

    ಕಾರಿನಲ್ಲಿ ನಾಲ್ವರಿದ್ದು ಅವರು ಪಾನಮತ್ತರಾಗಿ ಗಾಂಜ ಸೇವಿಸಿದ ಶಂಕೆ ವ್ಯಕ್ತವಾಗುತ್ತಿದೆ. ಇವರಲ್ಲಿ ಮೂವರು ನಾಪತ್ತೆಯಾಗಿದ್ದು, ಓರ್ವನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

    ಡಾಬಸ್ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ರೈತರ ತೋಟಕ್ಕೆ ಶಾಕ್ ಕೊಟ್ಟ ಪವರ್ ಗ್ರಿಡ್!

    ರೈತರ ತೋಟಕ್ಕೆ ಶಾಕ್ ಕೊಟ್ಟ ಪವರ್ ಗ್ರಿಡ್!

    – ತೋಟಕ್ಕೆ ಕಾಲಿಡಲು ರೈತರಿಗೆ ಭಯ
    – ದ್ರಾಕ್ಷಿ ತೋಟದ ಕಂಬಿಗಳಿಂದ ಉರಿಯುತ್ತಿದೆ ವಿದ್ಯುತ್ ಬಲ್ಬ್

    ಚಿಕ್ಕಬಳ್ಳಾಪುರ: ರೈತರ ಜಮೀನುಗಳಲ್ಲಿ ಎಲ್ಲೆಂದರಲ್ಲಿ ಕರೆಂಟ್ ಶಾಕ್ ಹೊಡೆಯುತ್ತಿದೆ. ಹೀಗಾಗಿ ರೈತರು ತಮ್ಮ ತೋಟಗಳಿಗೂ ಹೆಜ್ಜೆ ಇಡಲು ಭಯ ಪಡುವಂತಹ ಪರಿಸ್ಥಿತಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಕುರವಿಗೆರೆ ಗ್ರಾಮದಲ್ಲಿ ನಡೆದಿದೆ.

    ಗ್ರಾಮದ ರೈತ ಮುನೇಗೌಡ ಎಂಬವರ ಜಮೀನಿನಲ್ಲಿ ಹೈಟೆನ್ಷನ್ ವಿದ್ಯುತ್ ಟವರ್ ಅಳವಡಿಸಲಾಗಿದೆ. ಹೀಗಾಗಿ ಈ ಹೈಟೆನ್ಷನ್ ವಿದ್ಯುತ್ ಟವರ್ ನಿಂದ ವಿದ್ಯುತ್ ಭೂಮಿಗೆ ಹರಿಯುತ್ತಿದ್ದು, ಟವರ್ ಸುತ್ತ ಮುತ್ತಲಿನ 300 ಮೀಟರ್ ವರೆಗೂ ವಿದ್ಯುತ್ ಪ್ರವಹಿಸುತ್ತಿದೆ. ರೈತ ಹನುಮಂತರಾಜು ದ್ರಾಕ್ಷಿ ತೋಟದಲ್ಲೂ ವಿದ್ಯುತ್ ಪ್ರವಹಿಸುತ್ತಿದೆ.

    ದ್ರಾಕ್ಷಿ ತೋಟಕ್ಕೆ ಹಾಕಲಾಗಿರುವ ಕಂಬಿಗಳಲ್ಲಿ ವಿದ್ಯುತ್ ಪ್ರವಹಿಸುತ್ತಿದೆ. ಭೂಮಿಯ ಒಳಗೆ ಒಂದು ಅರ್ಥೀಂಗ್ ವೈರ್ ಕನೆಕ್ಟ್ ಮಾಡಿ ಮತ್ತೊಂದು ವೈರ್ ದ್ರಾಕ್ಷಿ ತೋಟದ ಕಂಬಿಗೆ ಅಟ್ಯಾಚ್ ಮಾಡಿ ಬಲ್ಬ್ ಗೆ ಕನೆಕ್ಷನ್ ಕೊಟ್ರೆ ಬಲ್ಬ್ ಹೊತ್ತಿಕೊಳ್ಳುತ್ತಿದೆ. ಮೊದಮೊದಲು ತೋಟದಲ್ಲಿ ಕೆಲಸ ಮಾಡುವ ಕೂಲಿಯಾಳುಗಳಿಗೆ ಪವರ್ ಶಾಕ್ ಅನುಭವವಾಗಿದೆ. ತದನಂತರ ರೈತರು ಪರಿಶೀಲನೆ ನಡೆಸಿದಾಗ ವಿದ್ಯುತ್ ಪ್ರವಹಿಸುತ್ತಿರುವುದು ದೃಢವಾಗಿದೆ.

    ಹೀಗಾಗಿ ತೋಟದಲ್ಲಿ ಕೆಲಸ ಮಾಡೋಕೆ ಕೂಲಿಯಾಳುಗಳು ಹಿಂದೇಟು ಹಾಕುತ್ತಿದ್ದಾರೆ. ಮತ್ತೊಂದೆಡೆ ರೈತರು ಸಹ ಜಮೀನಿನೊಳಗೆ ಹೆಜ್ಜೆ ಇಡೋಕೂ ಭಯ ಬೀಳುವಂತಾಗಿದೆ. ಇನ್ನೂ ಈ ಬಗ್ಗೆ ಸ್ಥಳೀಯ ಕೆಪಿಟಿಸಿಎಲ್ ಸಿಬ್ಬಂದಿ ಅಧಿಕಾರಿಗಳಿಗೆ ಮಾಹಿತಿ ನೀಡಿದ್ರೂ ಪ್ರಯೋಜನವಾಗಿಲ್ಲ. ಇದು ಕೇಂದ್ರ ಸರ್ಕಾರಿ ಸ್ವಾಮ್ಯದ ಪವರ್ ಗ್ರಿಡ್ ಕಾರ್ಪೋರೇಶನ್ ಸಂಸ್ಥೆ ಅಳವಡಿಸಿರುವ ಟವರ್ ಆಗಿದ್ದು ಅವರಿಗೆ ತಿಳಿಸಿ ಅಂತ ಕೆಪಿಟಿಸಿಎಲ್ ನವರು ಹೇಳುತ್ತಿದ್ದಾರೆ ಅಂತ ರೈತರು ದೂರಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಹಿಮಪಾತಕ್ಕೆ ಸೇಬು ಬೆಳೆ ಹಾನಿ- ಸಂಚಾರ, ವಿದ್ಯುತ್ ಅಸ್ತವ್ಯಸ್ತ

    ಹಿಮಪಾತಕ್ಕೆ ಸೇಬು ಬೆಳೆ ಹಾನಿ- ಸಂಚಾರ, ವಿದ್ಯುತ್ ಅಸ್ತವ್ಯಸ್ತ

    -ಕ್ಯಾಂಡಲ್ ಬೆಳಕಲ್ಲಿ ಪರೀಕ್ಷೆ ಬರೆದ ವಿದ್ಯಾರ್ಥಿಗಳು

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಹಿಮಪಾತ ಆರಂಭವಾಗಿದ್ದು, ರಸ್ತೆ, ವಿದ್ಯುತ್ ಸಂಪರ್ಕ ಅಸ್ತವ್ಯಸ್ತಗೊಂಡಿದೆ. ಸೇಬು ಗಿಡಗಳ ಮೇಲೆ ಹಿಮ ಬಿದ್ದ ಪರಿಣಾಮ ಭಾರೀ ಹಾನಿ ಉಂಟಾಗಿದೆ.

    ಬೃಹತ್ ಪ್ರಮಾಣದಲ್ಲಿ ಸೇಬು ಗಿಡಗಳು ಹಾಳಾಗಿವೆ. ಇದರಿಂದಾಗಿ ಆರ್ಥಿಕತೆಯ ಮೇಲೆ ಭಾರೀ ಪರಿಣಾಮ ಬೀರಿದೆ ಎಂದು ಜಮ್ಮು ಮತ್ತು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಉಮರ್ ಅಬ್ದುಲ್ ಅವರು ಇಂದು ಟ್ವೀಟ್ ಮಾಡಿದ್ದಾರೆ. ಈ ಮೂಲಕ ಸೇಬು ಬೆಳೆಗಾರರಿಗೆ ಆಗಿರುವ ನಷ್ಟವನ್ನು ಭರಿಸುವಂತೆ ಸರ್ಕಾರವನ್ನು ಒತ್ತಾಯಿಸಿದ್ದಾರೆ.

    ಕಳೆದ ಎರಡು ವರ್ಷಗಳಿಗೆ ಹೋಲಿಕೆ ಮಾಡಿದರೆ ಈ ಬಾರಿ ನವೆಂಬರ್ ಆರಂಭದಲ್ಲಿಯೇ ಹೆಚ್ಚಿನ ಪ್ರಮಾಣದಲ್ಲಿ ಹಿಮಪಾತ ಕಂಡು ಬಂದಿದೆ. ಇದೇ ರೀತಿ 2009, 2008 ಮತ್ತು 2004ರಲ್ಲಿ ಹಿಮಪಾತ ಸಂಭವಿಸಿತ್ತು ಅಂತ ಹವಾಮಾನ ಇಲಾಖೆ ತಿಳಿಸಿದೆ ಎಂದು ವರದಿಯಾಗಿದೆ.

    ಕಾಶ್ಮೀರದ ಗುಲ್ಮರ್ಗ್ ಕನಿಷ್ಠ ಮೂರು ಡಿಗ್ರಿ ಸೆಲ್ಸಿಯಸ್ ಹಾಗೂ ಶ್ರೀನಗರದಲ್ಲಿ 1.8 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಕಳೆದ ಎರಡು ದಿನಗಳಿಂದ ವಿದ್ಯುತ್ ಕಡಿತವಾಗಿದ್ದು, ವಿದ್ಯಾರ್ಥಿಗಳು ಕ್ಯಾಂಡಲ್ ಬೆಳಕಿನಲ್ಲಿ ಪರೀಕ್ಷೆ ಬರೆದಿದ್ದಾರೆ. ಅಷ್ಟೇ ಅಲ್ಲದೆ ಆಸ್ಪತ್ರೆಗಳಿಗೆ ವಿದ್ಯುತ್ ಕಡಿತದ ಬಿಸಿ ತಟ್ಟಿದೆ. ಹೀಗಾಗಿ ವಿದ್ಯುತ್ ದುರಸ್ತಿ ಕಾರ್ಯದಲ್ಲಿ 7 ಸಾವಿರ ಸಿಬ್ಬಂದಿ ತೊಡಗಿದ್ದಾರಂತೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv