Tag: PPE Kit

  • EXCLUSIVE: ದ್ರಾವಣ, ನೀರು ಹಾಕಿದ್ರೆ ಕೆಳಗೆ ಸೋರುತ್ತೆ- ಹೆಲ್ತ್ ವಾರಿಯರ್ಸ್‌ಗೆ ಆಸ್ಪತ್ರೆಯಿಂದ ಕಳಪೆ ಪಿಪಿಇ ಕಿಟ್

    EXCLUSIVE: ದ್ರಾವಣ, ನೀರು ಹಾಕಿದ್ರೆ ಕೆಳಗೆ ಸೋರುತ್ತೆ- ಹೆಲ್ತ್ ವಾರಿಯರ್ಸ್‌ಗೆ ಆಸ್ಪತ್ರೆಯಿಂದ ಕಳಪೆ ಪಿಪಿಇ ಕಿಟ್

    – ಪಬ್ಲಿಕ್ ಟಿವಿ ವರದಿ ಬಳಿಕ ಎಚ್ಚೆತ್ತ ಆಸ್ಪತ್ರೆ ಡೀನ್

    ಬೆಂಗಳೂರು: ರಾಜ್ಯದಲ್ಲಿ ಮಹಾಮಾರಿ ಕೊರೊನಾ ವೈರಸ್ ಕಾಣಿಸಿಕೊಂಡಾಗಿನಿಂದ ವೈದ್ಯರು, ನರ್ಸ್, ಪೊಲೀಸರು ಹಗಲಿರುಳು ಜನರ ಜೀವವನ್ನು ಕಾಪಾಡಲು ಶ್ರಮಿಸುತ್ತಿದ್ದಾರೆ. ಆದರೆ ಕೊರೊನಾ ಕೆಲಸ ಮಾಡುವ ಹೆಲ್ತ್ ವಾರಿಯರ್ಸ್‌ಗೆ ಸರ್ಕಾರ ಕಳಪೆ ಪಿಪಿಇ ಕಿಟ್ ಕೊಟ್ಟಿದೆ ಎಂಬ ಆರೋಪವೊಂದು ಕೇಳಿಬಂದಿದೆ.

    ವಿಕ್ಟೋರಿಯಾ ಆಸ್ಪತ್ರೆಯ ಹೆಲ್ತ್ ವಾರಿಯರ್ಸ್ ಧರಿಸುವ ಪಿಪಿಇ ಕಿಟ್‍ನ ಗುಣಮಟ್ಟದ ಎಕ್ಸ್ ಕ್ಲ್ಯೂಸಿವ್ ವಿಡಿಯೋ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ. ಪಿಪಿಇ ಕಿಟ್‍ನ ಮೇಲೆ ದ್ರಾವಣ ಅಥವಾ ನೀರು ಹಾಕಿದರೆ ಅದು ಹಾಗೆ ಕೆಳಗೆ ಸೋರುತ್ತೆ. ಇದರಲ್ಲಿ ಸೋಂಕಿತ ವ್ಯಕ್ತಿಗೆ ಚಿಕಿತ್ಸೆ ಕೊಡುವಾಗ ಆತ ಕೆಮ್ಮಿದರೆ ಅಥವಾ ಸೀನಿದರೆ ಆತನ ದ್ರಾವಣ ವೈದ್ಯಕೀಯ ಸಿಬ್ಬಂದಿಯ ಮೈ ಮೇಲೆ ನೇರವಾಗಿ ಬರುತ್ತೆ. ಈ ಮೂಲಕ ಸರ್ಕಾರ ನೀಡಿರುವ ಪಿಪಿಇ ಕಿಟ್ ಸುರಕ್ಷತೆ ಇಲ್ಲದ ಪಿಪಿಇ ಕಿಟ್ ಆಗಿದೆ ಎಂದು ವಾರಿಯರ್ಸ್ ಬೇಸರ ವ್ಯಕ್ತಪಡಿಸಿದ್ದಾರೆ.

    ಪಿಪಿಇ ಕಿಟ್ ವೈರಸ್ ನಿರೋಧಕವಾಗಿರಬೇಕು. ಆದರೆ ಸರ್ಕಾರ ನೀಡಿರುವ ಕಳಪೆ ಮಟ್ಟದ ಪಿಪಿಇ ಕಿಟ್ ಮೇಲೆ ನೀರು ಹಾಕಿದರೆ ಅದು ಹಾಗೆ ಕೆಳಗೆ ಸೋರುತ್ತಿದೆ. ಇದನ್ನು ಖಂಡಿಸಿ ಸಿಬ್ಬಂದಿ ಹಾಸ್ಟೆಲ್ ಹೊರ ಭಾಗದಲ್ಲಿ ಮೌನ್ ಪ್ರತಿಭಟನೆ ಮಾಡಿದ್ದಾರೆ.

    ಈಗಾಗಲೇ ವಿಕ್ಟೋರಿಯಾದಲ್ಲಿ ಕೋವಿಡ್ ವಾರ್ಡಿನಲ್ಲಿ ಕೆಲಸ ಮಾಡುವ ವೈದ್ಯರು, ಸಿಬ್ಬಂದಿಗೆ ಕೊರೊನಾ ಬಂದಿದೆ. ಈ ರೀತಿ ಹೆಲ್ತ್ ವಾರಿಯರ್ಸ್‌ಗೆ ಕಳಪೆ ಮಟ್ಟದ ಕಿಟ್ ಕೊಟ್ಟರೆ ಕೋವಿಡ್ ರೋಗಿಗಳನ್ನು ಹೇಗೆ ನೋಡಿಕೊಳ್ಳುತ್ತಾರೆ ಎಂದು ಸಿಬ್ಬಂದಿ ಪ್ರಶ್ನೆ ಮಾಡಿದ್ದಾರೆ.

    ಈ ಬಗ್ಗೆ ವಿಕ್ಟೋರಿಯಾ ಆಸ್ಪತ್ರೆಯ ಸಿಬ್ಬಂದಿ ಪ್ರತಿಕ್ರಿಯಿಸಿ, ಈ ಪಿಪಿಇ ಕಿಟ್ ತುಂಬಾ ಕಳಪೆ ಮಟ್ಟದ್ದಾಗಿದೆ. ದಯವಿಟ್ಟು ಇದನ್ನು ಬದಲಾಯಿಸಿ ಉತ್ತಮ ಗುಣಮಟ್ಟದ ಪಿಪಿಇ ಕಿಟ್ ಕೊಡಿ. ಇಲ್ಲವಾದರೆ ನಮಗೂ ಕೊರೊನಾ ಸೋಂಕು ಬರುವುದು ಪಕ್ಕಾ ಆಗುತ್ತದೆ. ಇದರಿಂದ ನಮ್ಮ ಜೀವನ ತುಂಬಾ ಕಷ್ಟವಾಗುತ್ತದೆ ಎಂದು ಮನವಿ ಮಾಡಿಕೊಂಡಿದ್ದಾರೆ.

    ಈ ಕುರಿತು ಪಬ್ಲಿಕ್ ಟಿವಿ ವರದಿ ಪ್ರಸಾರ ಮಾಡಿತ್ತು. ವರದಿಯ ಬಳಿಕ ವಿಕ್ಟೋರಿಯಾ ಆಸ್ಪತ್ರೆಯ ಡೀನ್ ಡಾ.ಜಯಂತಿ ಈ ಬಗ್ಗೆ ಸ್ಪಂದಿಸಿದ್ದಾರೆ. ನಾನು ಪಿಪಿಇ ಕಿಟ್ ಕೊಡುವ ಮೊದಲೇ ಎಲ್ಲಾ ಮುಂಜಾಗ್ರತಾ ಕ್ರಮವನ್ನು ಕೈಗೊಂಡಿದ್ದೇವೆ. ವೈದ್ಯರು ಕೂಡ ಅದನ್ನೇ ಧರಿಸಿದ್ದೇವೆ. ಪಿಪಿಇ ಕಿಟ್ ಗುಣಮಟ್ಟವನ್ನು ಪರಿಶೀಲನೆ ಮಾಡಿ ನೀಡಿದ್ದೇವೆ. ಈಗ ಮತ್ತೆ ಪಿಪಿಇ ಕಿಟ್ ಗುಣಮಟ್ಟವನ್ನು ಪರಿಶೀಲನೆ ಮಾಡುತ್ತೇವೆ. ನಂತರ ಕಳಪೆ ಗುಣಮಟ್ಟದ ಪಿಪಿಇ ಕಿಟ್ ಅನ್ನು ವಾಪಸ್ ಕೊಡುತ್ತೇವೆ. ತಕ್ಷಣ ಈ ಬಗ್ಗೆ ಕ್ರಮ ಕೈಗೊಳ್ಳುತ್ತೇವೆ ಎಂದು ಡಾ.ಜಯಂತಿ ತಿಳಿಸಿದರು.

     

    ಮೂರು ದಿನಗಳ ಹಿಂದೆ ಪಿಪಿಇ ಕಿಟ್ ಬೇರೆ ಇತ್ತು. ಇಂದು ಬೇರೆ ಪಿಪಿಇ ಕಿಟ್ ನೀಡಿದ್ದೇವೆ. ಅದರಲ್ಲಿ ಒಂದರಲ್ಲಿ ಡ್ಯಾಮೇಜ್ ಆಗಿತ್ತು. ನರ್ಸ್ ಗಳಿಗೆ ಪಿಪಿಇ ಕಿಟ್ ಸರಿಯಾಗಿ ಗೊತ್ತಿಲ್ಲ. ಹೀಗಾಗಿ ಸಿಬ್ಬಂದಿ ಆತಂಕಗೊಂಡಿದ್ದಾರೆ.  ಕಿಟ್ ಮೇಲೆ ದ್ರಾವಣ ಬಿದ್ದರೆ ಅದು ಒಣಗುತ್ತದೆ ಎಂದು ನರ್ಸಿಂಗ್ ಆಫೀಸರ್ ಸಂತೋಷ್ ಹೇಳಿದರು.

  • ಪಿಪಿಇ ಕಿಟ್ ತೆಗೆಯುವಾಗ ಎಡವಟ್ಟು- ನರ್ಸ್‍ಗೆ ತಗುಲಿದೆ ಕೊರೊನಾ

    ಪಿಪಿಇ ಕಿಟ್ ತೆಗೆಯುವಾಗ ಎಡವಟ್ಟು- ನರ್ಸ್‍ಗೆ ತಗುಲಿದೆ ಕೊರೊನಾ

    ಬೆಂಗಳೂರು: ಪಿಪಿಇ ಕಿಟ್ ತೆಗೆಯುವಾಗ ಎಡವಟ್ಟು ಮಾಡಿಕೊಂಡ ಪರಿಣಾಮ ಬೆಂಗಳೂರಿನ ನರ್ಸ್ (ರೋಗಿ-928) ಅವರಿಗೆ ಡೆಡ್ಲಿ ಕೊರೊನಾ ಸೋಂಕು ತಗುಲಿದೆ ಎಂಬ ಮಾಹಿತಿ ಮೂಲಗಳಿಂದ ಲಭಿಸಿದೆ.

    ಕೋವಿಡ್-19 ವಾರ್ಡಿನಲ್ಲಿ ಕೆಲಸ ಮಾಡುವಾಗ ವೈದ್ಯರು, ವೈದ್ಯಕೀಯ ಸಿಬ್ಬಂದಿ ಸಂಪೂರ್ಣವಾಗಿ ವೈಯಕ್ತಿಕ ಸುರಕ್ಷಾ ಸಾಧನ (ಪಿಪಿಇ ಕಿಟ್) ಅಳವಡಿಸಿಕೊಳ್ಳುತ್ತಾರೆ. ಅಷ್ಟೇ ಅಲ್ಲದೆ ಅದನ್ನು ಜಾಗೃತವಾಗಿ ಬಿಚ್ಚಿ ಎಸೆಯಬೇಕು. ಆದರೆ ನರ್ಸ್ ಪಿಪಿಇ ಕಿಟ್ ಬಿಚ್ಚುವಾಗ ಎಡವಟ್ಟು ಮಾಡಿಕೊಂಡಿದ್ದರು ಎಂದು ಹೇಳಲಾಗುತ್ತಿದೆ.

    ಕೊರೊನಾ ಸೋಂಕಿತರ ವಾರ್ಡಿನಲ್ಲಿ ಕೆಲಸ ಮುಗಿಸಿದ ನಂತರ ಪಿಪಿಇ ಕಿಟ್ ಹೊರ ಭಾಗವನ್ನು ಮುಟ್ಟದೇ ತೆಗೆಯಬೇಕು. ಆದರೆ ನರ್ಸ್ ಪಿಪಿಇ ಕಿಟ್‍ನ ಹೊರಭಾಗವನ್ನು ಮುಟ್ಟಿದ್ದರು. ಬಳಿಕ ಮಾಸ್ಕ್ ತೆಗೆಯುವಾಗ ಮೂಗು ಮುಟ್ಟಿಕೊಂಡಿದ್ದರಿಂದ ಸೋಂಕು ತಗುಲಿದೆ ಎನ್ನಲಾಗುತ್ತಿದೆ.

    ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸಿದ ಅವರನ್ನು ನಿಯಮದಂತೆ ಹೋಟೆಲ್‍ನಲ್ಲಿ ಕ್ವಾರಂಟೈನ್ ಮಾಡಲಾಗಿತ್ತು. ಈ ವೇಳೆ ಅವರಿಗೆ ಸೋಂಕಿನ ಲಕ್ಷಣಗಳು ಬಂದಿದ್ದವು. ಇದರಿಂದಾಗಿ ಗಂಟಲು ದ್ರವವನ್ನು ಕೋವಿಡ್-19 ಪರೀಕ್ಷೆಗೆ ಕಳಿಸಲಾಗಿತ್ತು. ಬುಧವಾರ ಬಂದ ರಿಪೋರ್ಟ್ ನಲ್ಲಿ ನರ್ಸ್‍ಗೆ ಸೋಂಕು ತಗುಲಿರುವುದು ದೃಢಪಟ್ಟಿತ್ತು. ಸದ್ಯ ಅವರನ್ನು ಪ್ರತ್ಯೇಕವಾಗಿರಿಸಿ ಚಿಕಿತ್ಸೆ ಕೊಡಲಾಗುತ್ತಿದೆ.

  • ಕೊರೊನಾ ವಾರಿಯರ್ಸ್‍ಗಾಗಿ ಪಿಪಿಇ ಕಿಟ್, ಮಾಸ್ಕ್ ತಯಾರಿಸ್ತಿದ್ದಾರೆ ಮಹಿಳೆಯರು

    ಕೊರೊನಾ ವಾರಿಯರ್ಸ್‍ಗಾಗಿ ಪಿಪಿಇ ಕಿಟ್, ಮಾಸ್ಕ್ ತಯಾರಿಸ್ತಿದ್ದಾರೆ ಮಹಿಳೆಯರು

    ಬೆಂಗಳೂರು: ಹೆಣ್ಣೊಂದು ಕಲಿತರೆ ಶಾಲೆಯೊಂದು ತೆರೆದಂತೆ ಎನ್ನುವ ಹಾಗೆ ಮಹಿಳೆಯರೆಲ್ಲಾ ಸೇರಿ ಕೌಶಲ್ಯ ಪಡೆದು ಇಡೀ ಕುಟುಂಬದ ಆರ್ಥಿಕ ಮಟ್ಟ ಸುಧಾರಿಸಿ, ಮಾರಾಣಾಂತಿಕ ಕೋವಿಡ್-19 ಸಂದರ್ಭದಲ್ಲಿ ಕೊರೊನಾ ವಾರಿಯರ್ಸ್‍ಗೆ ಅಗತ್ಯವಾದ ಪಿಪಿಇ ಕಿಟ್ ತಯಾರಿಸಿ ನೆರವಾಗುತ್ತಿದ್ದಾರೆ.

    ಬೆಂಗಳೂರು ಉತ್ತರ ತಾಲೂಕಿನ ಚಿಕ್ಕಬಾಣಾವರ ಸಮೀಪ ಬ್ಲಾಕ್ ಸ್ತ್ರೀ ಶಕ್ತಿ ಸೊಸೈಟಿ ಅಡಿಯಲ್ಲಿ ಮಹಿಳೆಯರು ಕೋವಿಡ್ 19 ವಾರಿಯರ್ಸ್‍ಗೆ ತಮ್ಮ ಅಳಿಲು ಸೇವೆ ಮಾಡಿ, ಕೊರೊನಾ ಸಂದರ್ಭದಲ್ಲಿ ನೆರವಾಗಿ ಸಾರ್ಥಕತೆ ಮೆರೆಯುತ್ತಿದ್ದಾರೆ.

    ಈ ಮಹಿಳೆಯರು ಆರ್ಥಿಕವಾಗಿ ಸಬಲರಾಗಲು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಡಿಯಲ್ಲಿ ಸ್ತ್ರೀ ಶಕ್ತಿ ಸಂಘಗಳನ್ನು ರಚಿಸಿಕೊಂಡು, ಕೌಶಲ್ಯ ತರಬೇತಿಯಲ್ಲಿ ಪಾಲ್ಗೊಂಡು, ವಿದ್ಯುತ್ ಚಾಲಿತ ಹೋಲಿಗೆ ಯಂತ್ರಗಳಲ್ಲಿ ಕೆಲಸ ಮಾಡುವ ವಿಧಾನ ಕಲಿತಿದ್ದಾರೆ. ಕೊರೊನಾ ವಾರಿಯರ್ಸ್‍ಗಳಾದ ವೈದ್ಯರು, ಪೊಲೀಸರು, ಬೆಂಗಳೂರು ಹಾಲು ಒಕ್ಕೂಟಕ್ಕೆ ಅಗತ್ಯವಿರುವ ಮುಖಕವಚ, ಮಾಸ್ಕ್, ಪಿಪಿಇ ಕಿಟ್‍ಗಳ ಸಾಮಾಗ್ರಿಗಳಾದ ಕೋಟ್, ಗ್ಲೌಸ್, ಕಾಲು ಚೀಲ, ದೇಹ ರಕ್ಷಕಗಳನ್ನು ಹೊಲಿಗೆ ಮಾಡಿ ದೇಶ ಸೇವೆಯಲ್ಲಿ ಪಾಲ್ಗೊಂಡಿದ್ದಾರೆ.

    ಬೆಳಗ್ಗೆ 9 ಗಂಟೆಯಿಂದ ಸಂಜೆ 6ರವರೆಗೆ ಕಡಿಮೆ ಬೆಲೆಯಲ್ಲಿ ಮಾಸ್ಕ್, ಸರ್ಜಿಕಲ್ ಮಾಸ್ಕ್, ಇನ್ನಿತರೆ ವಸ್ತುಗಳನ್ನು ಹೋಲಿಯುತ್ತಿದ್ದು, ಲಾಕ್‍ಡೌನ್ ವೇಳೆಯಲ್ಲಿ ಸ್ವಾವಲಂಬಿಯಾಗುತ್ತಿದ್ದಾರೆ. ಸುಮಾರು 30ರಿಂದ 40 ಮಹಿಳೆಯರು ದಿನನಿತ್ಯ ಕೆಲಸ ಮಾಡಿ ಆರ್ಥಿಕವಾಗಿ ಸಬಲರಾಗುತ್ತಿದ್ದಾರೆ. ಬಡ ಕುಟುಂಬದಿಂದ ಬಂದಂತಹ ಮಹಿಳೆಯರ ಸ್ವಾವಲಂಬಿಗಳಾಗಿ ಮಾಸ್ಕ್, ಮತ್ತು ಪಿಪಿಇ ಕಿಡ್ ತಯಾರಿಸಲು ಮುಂದಾಗಿದ್ದಾರೆ.

    ಈ ಬಗ್ಗೆ ಚಿಕ್ಕಬಾಣಾವರ ಸ್ತ್ರೀ ಶಕ್ತಿ ಒಕ್ಕೂಟದ ಕಾರ್ಯಾಧ್ಯಕ್ಷೆ ಭಾಗ್ಯಮ್ಮ ಅವರು ಮಾತನಾಡಿ, ಇವರೇಲ್ಲರಿಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಗತ್ಯ ತರಬೇತಿ ನೀಡಿದ್ದು, ಈ ಮಹಿಳೆಯರು ದಾಸರಹಳ್ಳಿ, ಪೀಣ್ಯ ಪೊಲೀಸ್ ಠಾಣೆಗೂ ರಿಯಾಯಿತಿ ದರದಲ್ಲಿ ಮಾಸ್ಕ್ ನೀಡುತ್ತಿದ್ದಾರೆ. ಕೆಲಸಕ್ಕೆ ಆದ್ಯತೆ ನೀಡಿ, ತರಬೇತಿ ಕೊಡಿಸಿ ನಮ್ಮಲ್ಲೇ ಮಹಿಳೆಯರು ಆರ್ಥಿಕವಾಗಿ ಸದೃಢರಾಗಿರುವುದು ಹೆಮ್ಮೆಯ ವಿಚಾರವಾಗಿದೆ ಎಂದರು.

  • ಕೊರೊನಾ ಸೋಂಕಿತನ ಅಂತ್ಯಸಂಸ್ಕಾರ- ಪಿಪಿಇ ಕಿಟ್ ಬೈರಸಂದ್ರ ಕೆರೆಗೆ ಎಸೆದ್ರಾ?

    ಕೊರೊನಾ ಸೋಂಕಿತನ ಅಂತ್ಯಸಂಸ್ಕಾರ- ಪಿಪಿಇ ಕಿಟ್ ಬೈರಸಂದ್ರ ಕೆರೆಗೆ ಎಸೆದ್ರಾ?

    ಬೆಂಗಳೂರು: ಆತ್ಮಹತ್ಯೆ ಮಾಡಿಕೊಂಡ ಕೊರೊನಾ ಸೋಂಕಿತನ ಶವ ಸಂಸ್ಕಾರದಲ್ಲಿ ಆರೋಗ್ಯ ಇಲಾಖೆ ಹಾಗೂ ಬಿಬಿಎಂಪಿ ಮತ್ತೊಮ್ಮೆ ಲೋಪ ಎಸಗಿದೆ ಎನ್ನುವ ಅನುಮಾನಗಳು ಕಾಡುತ್ತಿವೆ.

    ವಿಕ್ಟೋರಿಯಾ ಆಸ್ಪತ್ರೆ ಮೇಲಿಂದ ಸೋಮವಾರ ಜಿಗಿದು ರೋಗಿ-466 ಮೃತಪಟ್ಟಿದ್ದ. ಆತನ ಅಂತ್ಯಸಂಸ್ಕಾರ ಜಯನಗರ ಬಿಟಿಬಿ ಏರಿಯಾದ ಚಿತಾಗಾರದಲ್ಲಿ ನಡೆದಿತ್ತು. ಈ ವೇಳೆ ಬಳಸಲಾಗಿದ್ದ ಪಿಪಿಇ ಕಿಟ್‍ಗಳನ್ನು ಬೈರಸಂದ್ರ ಕೆರೆ ಪ್ರದೇಶದಲ್ಲಿ ಎಸೆದಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ.

    ಪಿಪಿಇ ಕಿಟ್ ನೋಡಿ ಬೈರಸಂದ್ರ ಕೆರೆ ಭಾಗದ ಜನರು ಆತಂಕಕ್ಕೆ ಒಳಗಾಗಿದ್ದಾರೆ. ನಿಯಮದಂತೆ ಅಂತ್ಯಸಂಸ್ಕಾರದ ನಂತರ ಪಿಪಿಇ ಕಿಟ್‍ಗಳನ್ನು ನಿಗದಿತ ಏಜೆನ್ಸಿಗಳಿಗೆ ನೀಡಿ ಅದನ್ನು ಸುಟ್ಟು ವಿಲೇವಾರಿ ಮಾಡಬೇಕು. ಸೋಮವಾರ ಅಂತ್ಯಸಂಸ್ಕಾರವಾದ್ರೂ, ಬುಧವಾರ ಸಂಜೆವರೆಗೆ ಪಿಪಿಇ ಕೆರೆ ಬಳಿಯೇ ಬಿದ್ದಿದ್ದವೆಂದು ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಸ್ಥಳೀಯರ ಆಕ್ರೋಶ ಹೆಚ್ಚಾಗುತ್ತಿದ್ದಂತೆ ಬುಧವಾರ ಸಂಜೆ ಬಿಬಿಎಂಪಿ ಸಿಬ್ಬಂದಿ, ಪಿಪಿಇಗಳ ಮೇಲೆ ಪೆಟ್ರೋಲ್ ಸುರಿದು ಸುಟ್ಟಿದ್ದಾರೆ. ಪಿಪಿಇ ಸುಟ್ಟ ನಂತರ ಆ ಪ್ರದೇಶದಲ್ಲಿ ಔಷಧ ಸಿಂಪಡಿಸಿದ್ದಾರೆ ಎನ್ನುವ ಆರೋಪ ಕೇಳಿ ಬರುತ್ತಿದೆ. ಬಿಬಿಎಂಪಿ ಪಿಪಿಇ ಕಿಟ್‍ಗಳ ವಿಲೇವಾರಿಗಾಗಿ ವಲಯಕ್ಕೆ ಒಂದರಂತೆ 4 ಏಜೆನ್ಸಿ ನಿಗದಿಪಡಿಸಿದೆ.

  • ಉಡುಪಿಯ ನದಿಯಲ್ಲಿ ಪಿಪಿಇ ಕಿಟ್- ಅಲೆವೂರು ರಾಂಪುರ ಜನರಲ್ಲಿ ಆತಂಕ

    ಉಡುಪಿಯ ನದಿಯಲ್ಲಿ ಪಿಪಿಇ ಕಿಟ್- ಅಲೆವೂರು ರಾಂಪುರ ಜನರಲ್ಲಿ ಆತಂಕ

    ಉಡುಪಿ: ಜಿಲ್ಲೆಯ ಅಲೆವೂರು ಗ್ರಾಮಪಂಚಾಯತ್ ವ್ಯಾಪ್ತಿಯ ಕೊಡಂಗಳ ನದಿಯಲ್ಲಿ ಕೊರೊನಾ ವೈದ್ಯಕೀಯ ಸಿಬ್ಬಂದಿಗಳು ಬಳಸುವ ವೈಯಕ್ತಿಕ ಸುರಕ್ಷ ಸಾಧನ(ಪಿಪಿಇ) ಪತ್ತೆಯಾಗಿದ್ದು, ಸ್ಥಳೀಯ ಜನರ ಆತಂಕಕ್ಕೆ ಕಾರಣವಾಗಿದೆ.

    ಕೊರೊನಾ ಸೋಂಕಿತರನ್ನು ಚಿಕಿತ್ಸೆಗೆ ಒಳಪಡಿಸುವಾಗ ಈ ವಿಶೇಷ ಕಿಟ್ ಧರಿಸಲಾಗುತ್ತದೆ. ಉಪಯೋಗಿಸಿದ ಬಳಿಕ ಕಿಟ್‍ನ್ನು ಅತ್ಯಂತ ಎಚ್ಚರಿಕೆಯಿಂದ ವಿಲೇವಾರಿ ಮಾಡಬೇಕು ಎಂದು ವಿಶ್ವ ಆರೋಗ್ಯ ಸಂಸ್ಥೆಯ ನಿರ್ದೇಶನವಿದೆ. ವೈರಾಣುಗಳ ಸಂಪರ್ಕಕ್ಕೆ ಬರುವ ಈ ಕಿಟ್‍ಗಳನ್ನು ಎಲ್ಲೆಂದರಲ್ಲಿ ಎಸೆದರೆ ರೋಗ ಹರಡುವ ಸಾಧ್ಯತೆ ಇದ್ದು, ಗ್ರಾಮಸ್ಥರು ಈ ಘಟನೆಯಿಂದ ಆತಂಕಕ್ಕೆ ಒಳಗಾಗಿದ್ದಾರೆ.

    ಮೇಲ್ನೋಟಕ್ಕೆ ಇದು ಬಳಸಿ ಎಸೆದ ಕಿಟ್ ನಂತೆ ಕಾಣುತ್ತಿದ್ದು, ಸ್ಥಳೀಯ ಆಶಾ ಕಾರ್ಯಕರ್ತೆ ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೊಡಂಗಳ ನದಿಯ ಸೇತುವೆಯ ಮೇಲ್ಭಾಗದಿಂದ ಅಂಬುಲೆನ್ಸ್ ಚಾಲಕರು ಇದನ್ನು ಎಸೆದಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಈ ನದಿಯ ನೀರನ್ನು ಗ್ರಾಮಸ್ಥರು ಬಳಸುತ್ತಿರುವ ಕಾರಣ ಇಲ್ಲಿ ಜನರಲ್ಲಿ ಆತಂಕ ಮನೆಮಾಡಿದೆ.

    ಸ್ಥಳೀಯ ರಾಜೇಶ್ ಶೆಟ್ಟಿ ಅಲೆವೂರು ಮಾತನಾಡಿ, ಯಾರಾದರು ಎಸೆಯದೆ ಇಲ್ಲಿ ಬಂದು ಬಿದ್ದಿರುವ ಸಾಧ್ಯತೆ ಇಲ್ಲ. ಆ ರಸ್ತೆಯಲ್ಲಿ ಅಂಬುಲೆನ್ಸ್ ಸಂಚಾರ ಕಡಿಮೆ. ರಾಷ್ಟ್ರೀಯ ಹೆದ್ದಾರಿ ತಪ್ಪಿಸಿ ಒಳ ರಸ್ತೆಯಲ್ಲಿ ಬಂದು ಎಸೆದಿರುವ ಸಾಧ್ಯತೆ ಇದೆ. ಸ್ಥಳೀಯ ಯುವಕರು ಈಜುವ ಸಂದರ್ಭ ಕಿಟ್ ಇರುವುದು ಗಮನಕ್ಕೆ ಬಂದಿದೆ. ಮಣಿಪಾಲ ಪೊಲೀಸರು ಸ್ಥಳಕ್ಕಾಗಮಿಸಿದ್ದರು ಎಂದು ಅವರು ಹೇಳಿದರು.

  • ತಿರುಗಾಡ್ತಿದ್ದವರಿಗೆ ಗೋಣಿಚೀಲದ ಕಿಟ್ ಹಾಕಿಸಿದ ಪೊಲೀಸರು

    ತಿರುಗಾಡ್ತಿದ್ದವರಿಗೆ ಗೋಣಿಚೀಲದ ಕಿಟ್ ಹಾಕಿಸಿದ ಪೊಲೀಸರು

    ಕೊಪ್ಪಳ: ಲಾಕ್‍ಡೌನ್ ಶುರುವಾದಗಿನಿಂದ ಪೊಲೀಸರು ಹಗಲಿರುಳು ಜನರ ಆರೋಗ್ಯ ಕಾಪಾಡುವ ದೃಷ್ಟಿಯಿಂದ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಆದರೂ ಕೆಲವರು ಅನಾವಶ್ಯಕವಾಗಿ ರಸ್ತೆಗೆ ಬಂದು ತಿರುಗಾಡುತ್ತಿದ್ದರು. ಅಂತವರಿಗೆ ಕೊಪ್ಪಳ ಪೊಲೀಸರು ವಿನೂತನ ಶಿಕ್ಷೆ ನೀಡಿದ್ದಾರೆ.

    ಪೊಲೀಸರು ಅನಾವಶ್ಯಕವಾಗಿ ರಸ್ತೆಯಲ್ಲಿ ತಿರುಗಾಡುತ್ತಿದ್ದ ವಾಹನ ಸವಾರರಿಗೆ ಗೋಣಿ ಚೀಲದ ಪಿಪಿಇ ಕಿಟ್ ಹಾಕಿಸಿದ್ದಾರೆ. ಈ ಮೂಲಕ ಕೊಪ್ಪಳ ನಗರ ಠಾಣಾ ಪೊಲೀಸರು ವಿಭಿನ್ನ ರೀತಿಯಲ್ಲಿ ಕೊರೊನಾ ವೈರಸ್ ಜಾಗೃತಿ ಮೂಡಿಸಿದ್ದಾರೆ.

    ಭಾರತ ಲಾಕ್‍ಡೌನ್ ನಡುವೆಯೂ ವಾಹನ ಸವಾರರು ಅನಾವಶ್ಯಕವಾಗಿ ತಿರುಗಾಡುತ್ತಿದ್ದರು. ಈ ಹಿಂದೆ ಹಲವು ಬಾರಿ ಪೊಲೀಸರು ಮನೆಯಿಂದ ಹೊರಗೆ ಬಂದು ತಿರುಗಾಡುತ್ತಿದ್ದವರಿಗೆ ಎಚ್ಚರಿಕೆ ನೀಡಿದ್ದರು. ಅಲ್ಲದೇ ಪೂಜೆ ಮಾಡಿ, ಮಂಗಳಮುಖಿಯರಿಂದ ರಾಖಿ ಕಟ್ಟಿಸಿದ್ದರು. ಆದರೂ ವಾಹನ ಸವಾರರು ಪೊಲೀಸರ ಮಾತಿಗೆ ಕ್ಯಾರೆ ಎನ್ನುತ್ತಿರಲಿಲ್ಲ. ಹೀಗಾಗಿ ಪೊಲೀಸರು ಇಂದು ವಿನೂತವಾಗಿ ಗೋಣಿ ಚೀಲದ ಪಿಪಿಇ ಕಿಟ್ ಹಾಕಿಸಿದ್ದಾರು.

    ಗೋಣಿ ಚೀಲದಿಂದ ಮಾಡಿದ ಮಾದರಿ ಪಿಪಿಇ ಕಿಟ್ ಹಾಕಿಸಿದ್ದರು. ಗೋಣಿ ಚೀಲದ ಮಾಸ್ಕ್, ಹ್ಯಾಂಡ್ ಗ್ಲೌಸ್ ಹಾಕಿಸಿದ್ದರು. ನಂತರ ಅನಾವಶ್ಯಕವಾಗಿ ತಿರುಗಾಡುವವವರಿಗೆ ಪಿಪಿಇ ಕಿಟ್ ಹಾಕಿಕೊಂಡವರು ತಿಳಿ ಹೇಳಿದ್ದಾರೆ.