Tag: Prabhakar Reddy

  • 2ನೇ ಹೆಂಡ್ತಿ ಮನೆ ಟಾಯ್ಲೆಟ್‍ನಲ್ಲಿ ಅಡಗಿದ್ದ ಪ್ರಭಾಕರ್ ರೆಡ್ಡಿ ಅರೆಸ್ಟ್

    2ನೇ ಹೆಂಡ್ತಿ ಮನೆ ಟಾಯ್ಲೆಟ್‍ನಲ್ಲಿ ಅಡಗಿದ್ದ ಪ್ರಭಾಕರ್ ರೆಡ್ಡಿ ಅರೆಸ್ಟ್

    ಬೆಂಗಳೂರು: ನಕಲಿ ದಾಖಲೆ ಸೃಷ್ಟಿಸಿ ಭೂಮಿ ಮಾರಾಟ, ಭೂ ಕಬಳಿಕೆ, ಜೀವ ಬೆದರಿಕೆ, ವಂಚನೆ ಕೇಸ್‍ನಲ್ಲಿ ಬೆಂಗಳೂರಿನ ಜೆಡಿಎಸ್ ಮುಖಂಡ ಪ್ರಭಾಕರ್ ರೆಡ್ಡಿಯನ್ನ ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ.

    ಪೊಲೀಸರ ದಾಳಿ ವೇಳೆ ರೆಡ್ಡಿ ರಾಜರಾಜೇಶ್ವರಿ ನಗರದಲ್ಲಿರುವ ತನ್ನ 2ನೇ ಹೆಂಡ್ತಿ ಮನೆ ಟಾಯ್ಲೆಟ್‍ನಲ್ಲಿ ಅಡಗಿದ್ದ. ಪೊಲೀಸರು ಬಂಧನಕ್ಕೆ ಬಂದಾಗ 2ನೇ ಪತ್ನಿ ಬಾಗಿಲು ತೆರೆಯದೇ ಸತಾಯಿಸಿದ್ರು. ಗುರುವಾರ ನಡೆದ ದಾಳಿ ವೇಳೆ 300 ಕೋಟಿ ರೂಪಾಯಿ ಮೊತ್ತದ ಆಸ್ತಿಪಾಸ್ತಿಯ ದಾಖಲೆಯನ್ನ ವಶಪಡಿಸಿಕೊಳ್ಳಲಾಗಿದೆ.

    ಕಂಡಕಂಡವರ ಖಾಸಗಿ, ಸರ್ಕಾರಿ ಸೈಟನ್ನು ತನ್ನದೆಂದು ಹೇಳಿ ಮಾರಾಟ ಮಾಡ್ತಿದ್ದ ರೆಡ್ಡಿ ಹಲವಾರು ಮಂದಿಗೆ ಕೋಟಿಗಟ್ಟಲೇ ರೂಪಾಯಿ ವಂಚಿಸಿದ್ದರು. ಬೇಗೂರು ಬಳಿ ಮೂಲ ಮಾಲೀಕರಿಗೆ ಗೊತ್ತೇ ಇಲ್ಲದಂತೆ 7 ಸೈಟ್‍ ಗಳನ್ನು ಮಾರಿದ್ದರು. ಆದ್ರೆ ಮೋಸ ಬಯಲಾದ ಬಳಿಕ ಸೈಟ್ ಖರೀದಿಸಿದ್ದ ಉದ್ಯಮಿ ಹಣ ನೀಡುವಂತೆ ಒತ್ತಾಯಿಸಿದ್ದರು.

    ಈ ವೇಳೆ ಹಣ ಕೊಡಲ್ಲ, ಕೊಲೆ ಮಾಡ್ತೀನಿ ಎಂದು ರೆಡ್ಡಿ ಅವಾಜ್ ಹಾಕಿದ್ದರು. `ಶ್ರೀಸಾಯಿ ರಿಯಲ್ ಎಸ್ಟೇಟ್’ ಕಂಪನಿ ನಡೆಸ್ತಿರುವ ರೆಡ್ಡಿ ಜೆಡಿಎಸ್‍ನಿಂದ ಲೋಕಸಭೆ ಮತ್ತು ಅಸೆಂಬ್ಲಿ ಎಲೆಕ್ಷನ್‍ಗೂ ನಿಂತು ಸೋತಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಭಿಕ್ಷೆ ಬೇಡಿ ವೈದ್ಯರಾದ್ರು, ದುಡಿದ ಹಣವನ್ನ ವಿದ್ಯಾರ್ಥಿಗಳಿಗೆ ದಾನ ಮಾಡಿದ್ರು ಪಾವಗಡದ ಪ್ರಭಾಕರ ರೆಡ್ಡಿ

    ಭಿಕ್ಷೆ ಬೇಡಿ ವೈದ್ಯರಾದ್ರು, ದುಡಿದ ಹಣವನ್ನ ವಿದ್ಯಾರ್ಥಿಗಳಿಗೆ ದಾನ ಮಾಡಿದ್ರು ಪಾವಗಡದ ಪ್ರಭಾಕರ ರೆಡ್ಡಿ

    ತುಮಕೂರು: ಎಂಜಿನಿಯರ್, ಡಾಕ್ಟರ್ ಆಗಿ ಚೆನ್ನಾಗಿ ಸಂಪಾದನೆ ಮಾಡ್ಬೇಕು. ಲೈಫನ್ನ ಎಂಜಾಯ್ ಮಾಡ್ಬೇಕು. ಮಕ್ಕಳು ಮೊಮ್ಮಕ್ಕಳಿಗೂ ಕೂಡಿಡಬೇಕು ಅಂತಲೇ ಎಲ್ಲರ ಕನಸು ಕಾಣ್ತಾರೆ. ಆದ್ರೆ, ಇವತ್ತಿನ ನಮ್ಮ ಪಬ್ಲಿಕ್ ಹೀರೋ ಡಾ.ಪ್ರಭಾಕರ್ ರೆಡ್ಡಿ ಅವರು ಮಾತ್ರ ಹಣವನ್ನೆಲ್ಲಾ ಬಡ ವಿದ್ಯಾರ್ಥಿಗಳಿಗೆ ದಾನ ಮಾಡ್ತಿದ್ದಾರೆ.

    80 ವರ್ಷದ ಡಾ. ಪ್ರಭಾಕರ್ ರೆಡ್ಡಿಯವರು ತುಮಕೂರು ಜಿಲ್ಲೆ ಪಾವಗಡ ತಾಲೂಕಿನ ವಳ್ಳೂರು ಗ್ರಾಮದಲ್ಲಿ ಜನಿಸಿದ್ದಾರೆ. ಬೆಂಗಳೂರಿನಲ್ಲಿ ಎಂಬಿಬಿಎಸ್ ವ್ಯಾಸಂಗ ಮಾಡಿ ವೈದ್ಯ ವೃತ್ತಿಗಾಗಿ ಲಂಡನ್‍ಗೆ ಹೋಗಿರೋ ಇವರು ಸದ್ಯ ನಿವೃತ್ತಿಯಾಗಿದ್ದಾರೆ.

    ಬಾಲ್ಯದಲ್ಲೇ ಹೆತ್ತವರನ್ನ ಕಳೆದುಕೊಂಡು ಕಡುಬಡತನದಲ್ಲಿ ಬೆಳೆದ ಇವರಿಗೆ ಡಾಕ್ಟರ್ ಆಗೋದು ಕನಸು. 1965ರಲ್ಲಿ ಎಂಬಿಬಿಎಸ್ ಪದವಿ ಮುಗಿಸಿದ್ದಾರೆ. ಅಂದಿನ ಕಾಲದಲ್ಲಿ 240 ರೂಪಾಯಿ ಶುಲ್ಕ ಕಟ್ಟಲು ಸಾಧ್ಯವಾಗದೆ ಪರಿತಪಿಸಿದ್ದರು. ಸ್ನೇಹಿತರ ಬಳಿ ಸ್ವಲ್ಪ ಹಣ ಸಿಕ್ಕರೂ ಉಳಿದ ಹಣಕ್ಕಾಗಿ ಸಾರ್ವಜನಿಕವಾಗಿ ಭಿಕ್ಷೆ ಬೇಡಿ, ಎಂಬಿಬಿಎಸ್ ಪಾಸ್ ಮಾಡಿದ್ರು. ಆಮೇಲೆ ಕೆಲ ವರ್ಷ ರಾಜ್ಯದಲ್ಲಿ ಸೇವೆ ಸಲ್ಲಿಸಿ ಹೆಚ್ಚಿನ ವ್ಯಾಸಂಗಕ್ಕಾಗಿ ಲಂಡನ್‍ಗೆ ಹೋಗಿ ಅಲ್ಲಿಯೇ ನೆಲೆಸಿದ್ದರು.

    ತಮ್ಮ ಕಷ್ಟದ ದಿನಗಳನ್ನ ನೆನಸಿಕೊಳ್ಳುವ ಪ್ರಭಾಕರ ರೆಡ್ಡಿ ಅವರು, ತಮ್ಮ ಹೆಸರಿನಲ್ಲಿ ಎಜುಕೇಷನ್ ಟ್ರಸ್ಟ್ ಸ್ಥಾಪಿಸಿ ವಿದ್ಯಾರ್ಥಿಗಳ ಸಹಾಯಕ್ಕೆ ನಿಂತಿದ್ದಾರೆ. ವಿದ್ಯಾರ್ಥಿ ವೇತನ, ಶಾಲಾ ಕಾಲೇಜ್‍ಗಳಿಗೆ ಕುಡಿಯುವ ನೀರು, ಬೆಂಚು, ಕ್ರೀಡಾಪಟುಗಳಿಗೆ ಸಮವಸ್ತ್ರವನ್ನ ನೀಡ್ತಿದ್ದಾರೆ. ಪಾವಗಡದಲ್ಲಿ ಸುಮಾರು 1 ಕೋಟಿ ವೆಚ್ಚದಲ್ಲಿ ವಿದ್ಯಾರ್ಥಿನಿಯರ ಹಾಸ್ಟೆಲ್ ಕಟ್ಟಿ ಅದನ್ನು ಸಮಾಜ ಕಲ್ಯಾಣ ಇಲಾಖೆಗೆ ಅತಿ ಕಡಿಮೆ ಬಾಡಿಗೆಗೆ ನೀಡಿದ್ದಾರೆ.

    ಬೆಂಗಳೂರಿನಲ್ಲಿದ್ದ 1.5 ಕೋಟಿ ರೂಪಯಿ ಮನೆ ಹಾಗೂ ಲಂಡನ್ನಿನಲಿದ್ದ ಸುಮಾರು 2 ಕೋಟಿ ರೂಪಾಯಿ ಮನೆಯನ್ನು ಮಾರಿದ್ದು, ಈಗ ಬಾಡಿಗೆ ಮನೆಯಲ್ಲಿದ್ದಾರೆ. ವಿದ್ಯಾರ್ಥಿಗಳಿಗೆ ಹಣಕಾಸಿನ ನೆರವಿನ ಜೊತೆಗೆ ಪರಿಸರ ಕಾಳಜಿ, ಸ್ವಚ್ಚತೆ, ಹಾಗೂ ಮಾನವೀಯ ಮೌಲ್ಯಗಳ ಬಗ್ಗೆ ಉಪನ್ಯಾಸ ಸಹ ಮಾಡ್ತಿದ್ದಾರೆ.

    https://www.youtube.com/watch?v=GYvWiQGjB94

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvnews