Tag: Prabhakaran

  • LTTE ಮುಖ್ಯಸ್ಥ ಪ್ರಭಾಕರನ್ ಇನ್ನೂ ಜೀವಂತ: ಇಂದಿರಾ ಆಪ್ತ, ತಮಿಳು ನಾಯಕ ಸ್ಫೋಟಕ ಹೇಳಿಕೆ

    LTTE ಮುಖ್ಯಸ್ಥ ಪ್ರಭಾಕರನ್ ಇನ್ನೂ ಜೀವಂತ: ಇಂದಿರಾ ಆಪ್ತ, ತಮಿಳು ನಾಯಕ ಸ್ಫೋಟಕ ಹೇಳಿಕೆ

    ನವದೆಹಲಿ: ಎಲ್‍ಟಿಟಿಇ (ಲಿಬರೇಷನ್ ಟೈಗರ್ಸ್ ಆಫ್ ತಮಿಳ್ ಈಳಂ) ಮುಖ್ಯಸ್ಥ ಪ್ರಭಾಕರನ್ (Prabhakaran) ಇನ್ನೂ ಜೀವಂತವಾಗಿದ್ದಾನೆ ಎಂದು ಮಾಜಿ ಕಾಂಗ್ರೆಸ್ (Congress) ನಾಯಕ ಪಾಜಾ ನೆಡುಮರನ್ (Pazha Nedumaran) ಸೋಮವಾರ ಸ್ಫೋಟಕ ಹೇಳಿಕೆಯೊಂದನ್ನು ನೀಡಿದ್ದಾರೆ.

    ಪ್ರಭಾಕರನ್ ಆರೋಗ್ಯವಾಗಿ ಕುಟುಂಬಸ್ಥರೊಂದಿಗೆ ವಾಸವಾಗಿದ್ದಾರೆ. ಅವರು ತಮಿಳು ಜನರ ಏಳಿಗೆಗಾಗಿ ಮತ್ತೆ ಜನರೆದುರು ಬರಲಿದ್ದಾನೆ. ಅವರನ್ನು ಜನತೆ ಬೆಂಬಲಿಸಬೇಕು ಎಂದಿದ್ದಾರೆ. ನನ್ನೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿರುವ ಅವರು ಈ ಮಾಹಿತಿಯನ್ನು ನೀಡಿದ್ದಾರೆ ಎಂದು ಅವರು ತಿಳಿಸಿದ್ದಾರೆ.

    ಪ್ರಭಾಕರನ್ ಕುಟುಂಬದ ಅನುಮತಿಯೊಂದಿಗೆ ಈ ಸುದ್ದಿ ಹಂಚಿಕೊಳ್ಳುತ್ತಿದ್ದೇನೆ. ಆದರೆ ಈಗ ನೆಲೆಸಿರುವ ಸ್ಥಳವನ್ನು ತಿಳಿಸಲು ಸಾಧ್ಯವಿಲ್ಲ ಎಂದಿದ್ದಾರೆ.

    ಯಾರು ಈ ಪ್ರಭಾಕರನ್?: ಪೂರ್ವ ಮತ್ತು ಉತ್ತರ ಶ್ರೀಲಂಕಾದ ಭಾಗಗಳಲ್ಲಿ ಸ್ವತಂತ್ರ್ಯ ತಮಿಳು ದೇಶಕ್ಕಾಗಿ 25 ವರ್ಷಗಳ ಕಾಲ ಶ್ರೀಲಂಕಾ ಸರ್ಕಾರದೊಂದಿಗೆ ಎಲ್‍ಟಿಟಿಇ ಹೋರಾಡಿತ್ತು. ಈ ಎಲ್‍ಟಿಟಿಇ (LTTE) ನಿಯಂತ್ರಣಕ್ಕೆ ಪ್ರಧಾನಿ ರಾಜೀವ್ ಗಾಂಧಿ ಸೇನೆಯನ್ನು ಕಳುಹಿಸಿದ್ದರು. ಇದನ್ನೂ ಓದಿ: ಬಡವರು ಬಡವರಾಗೇ ಇರ‍್ಲಿ, ಶ್ರೀಮಂತರಾದ್ರೆ ಐಟಿ, ಇಡಿ, ಸಿಬಿಐ ಸಂಕಷ್ಟ : ಕೆಜಿಎಫ್ ಬಾಬು

    ಶ್ರೀಲಂಕಾ ಸರ್ಕಾರಕ್ಕೆ ಸಹಾಯ ಮಾಡಿದ್ದಕ್ಕೆ ಆತ್ಮಾಹುತಿ ಬಾಂಬ್ ದಾಳಿ ನಡೆಸಿ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರನ್ನು ಎಲ್‍ಟಿಟಿಇ ಬೆಂಬಲಿತ ಸದಸ್ಯರು ಹತ್ಯೆಗೈದಿದ್ದರು. ಈ ದಾಳಿಯ ಹಿಂದೆ ಪ್ರಭಾಕರನ್ ಕೈವಾಡವಿತ್ತು. 2009ರಲ್ಲಿ ಸರ್ಕಾರ ಮತ್ತು ಎಲ್‍ಟಿಟಿಇ ನಡುವಿನ ಕಾದಾಟದಲ್ಲಿ ಪ್ರಭಾಕರನ್ ಅವರನ್ನು ಹತ್ಯೆ ಮಾಡಲಾಗಿದೆ ಎಂದು ವರದಿಯಾಗಿತ್ತು. ಇದನ್ನೂ ಓದಿ: ಪರೀಕ್ಷಾ ಸಮಯದಲ್ಲಿ ವಿದ್ಯಾರ್ಥಿಗಳಿಗೆ ತೊಂದರೆ ಆಗದಂತೆ ವಿದ್ಯುತ್ ಪೂರೈಕೆ: ಸುನಿಲ್ ಕುಮಾರ್

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಮತ್ತೆ ಬೆಳ್ಳಿತೆರೆಗೆ ಕಂಬ್ಯಾಕ್ ಮಾಡಲು ಸಜ್ಜಾದ ಕಿರುತೆರೆಯ ಸ್ಟಾರ್ ನಿರೂಪಕಿ ಅನುಶ್ರೀ

    ಮತ್ತೆ ಬೆಳ್ಳಿತೆರೆಗೆ ಕಂಬ್ಯಾಕ್ ಮಾಡಲು ಸಜ್ಜಾದ ಕಿರುತೆರೆಯ ಸ್ಟಾರ್ ನಿರೂಪಕಿ ಅನುಶ್ರೀ

    ನ್ನಡ ಕಿರುತೆರೆ ಅಂಗಳದ ಸ್ಟಾರ್ ಆಂಕರ್, ಚಿಟಪಟ ಮಾತಿನ ಚಿನಕುರಳಿ ಅನುಶ್ರೀ ಸ್ಯಾಂಡಲ್‍ವುಡ್ ಅಂಗಳಕ್ಕೆ ಮತ್ತೆ ಎಂಟ್ರಿ ಕೊಡುತ್ತಿದ್ದಾರೆ.

    ಉಪ್ಪು ಹುಳಿ ಖಾರ ಸಿನಿಮಾ ನಂತರ ಬೇರೆ ಯಾವುದೇ ಸಿನಿಮಾಕ್ಕೆ ಗ್ರೀನ್ ಸಿಗ್ನಲ್ ಕೊಡದೇ ಕಿರುತೆರೆ ನಿರೂಪಣೆಯಲ್ಲಿಯೇ ಬ್ಯುಸಿಯಾಗಿರುವ ಅನುಶ್ರೀ ಹೊಸ ವರ್ಷದ ಆರಂಭದಲ್ಲಿ ಸಿಹಿ ಸುದ್ದಿಯನ್ನು ತಮ್ಮ ಅಭಿಮಾನಿ ಬಳಗಕ್ಕೆ ನೀಡಿದ್ದಾರೆ.

    ಹೌದು, ಹೊಸ ವರ್ಷದ ಆರಂಭದಲ್ಲಿಯೇ ಮತ್ತೆ ಸಿನಿಮಾದಲ್ಲಿ ಅಭಿನಯಿಸುತ್ತಿರುವ ಮಾಹಿತಿಯನ್ನು ಅನುಶ್ರೀ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಪ್ರಭಾಕರನ್ ಎಂಬ ಹೊಸ ಪ್ರತಿಭೆ ನಿರ್ದೇಶಿಸುತ್ತಿರುವ ಚೊಚ್ಚಲ ಸಿನಿಮಾದಲ್ಲಿ ಅನುಶ್ರೀ ನಟಿಸಲು ಗ್ರೀನ್ ಸಿಗ್ನಲ್ ನೀಡಿದ್ದಾರೆ. ಹಾರಾರ್, ಸಬ್ಜೆಕ್ಟ್ ಒಳಗೊಂಡ ಕಥಾಹಂದರ ಸಿನಿಮಾದಲ್ಲಿದ್ದು ಚಿತ್ರದ ಟೈಟಲ್ ಬಗ್ಗೆ ಸದ್ಯದಲ್ಲೇ ಮಾಹಿತಿ ಹಂಚಿಕೊಳ್ಳಲಾಗುವುದಾಗಿ ಅನುಶ್ರೀ ತಿಳಿದ್ದಾರೆ. ಚಿತ್ರದ ಮುಹೂರ್ತ ಕಾರ್ಯವೂ ಚಿಕ್ಕದಾಗಿ ನೇರವೇರಿದ್ದು, ಎಸ್‍ಎಂಪಿ ಪ್ರೊಡಕ್ಷನ್ ಹಾಗೂ ಲೋಹಿತ್ ಹೆಚ್ ಪ್ರೊಡಕ್ಷನ್ ಜಂಟಿ ನಿರ್ಮಾಣದಲ್ಲಿ ಸಿನಿಮಾ ಮೂಡಿ ಬರಲಿದೆ. ನಾಲ್ಕು ವರ್ಷದ ಬಳಿಕ ಅನುಶ್ರೀ ಬೆಳ್ಳೆತೆರೆಗೆ ಕಂಬ್ಯಾಕ್ ಮಾಡುತ್ತಿರುವುದು ಅವರ ಅಭಿಮಾನಿ ಬಳಗಕ್ಕೆ ಸಹಜವಾಗಿಯೇ ಸಂತಸ ತಂದಿದೆ. ಇದನ್ನೂ ಓದಿ: ಸೆನ್ಸಾರ್ ಅಂಗಳದಲ್ಲಿರುವ ‘ಪುರುಷೋತ್ತಮ’ ಚಿತ್ರತಂಡದಿಂದ ಸದ್ಯದಲ್ಲೇ ಟ್ರೇಲರ್ ಉಡುಗೊರೆ

    ತಮ್ಮ ವಿಭಿನ್ನ ನಿರೂಪಣೆ ಶೈಲಿ ಮೂಲಕ ಕನ್ನಡಿಗರ ಮನೆ ಮಾತಾಗಿರುವ ಅನುಶ್ರೀ ತಮ್ಮದೇ ಆದ ಅಭಿಮಾನಿ ಬಳಗವನ್ನು ಸಂಪಾದಿಸಿಕೊಂಡಿದ್ದಾರೆ. ಕಳೆದ ಒಂದೂವರೆ ದಶಕದಿಂದ ನಿರೂಪಕರಾಗಿ ಜನಮನ್ನಣೆ ಪಡೆದಿರುವ ಅನುಶ್ರೀ ಸಿನಿಮಾದಲ್ಲೂ ತಮ್ಮ ಅದೃಷ್ಟ ಪರೀಕ್ಷೆ ನಡೆಸಿದ್ದಾರೆ. 2011ರಲ್ಲಿ ತೆರೆಕಂಡ ಭೂಮಿ ತಾಯಿ ಸಿನಿಮಾ ಮೂಲಕ ಸಿಲ್ವರ್ ಸ್ಕ್ರೀನ್‍ಗೆ ಎಂಟ್ರಿಕೊಟ್ಟ ಮಾತಿನ ಮೋಡಿಗಾರ್ತಿ ಬೆಳ್ಳಿ ಕಿರಣ, ಬೆಂಕಿಪಟ್ನ, ರಿಂಗ್ ಮಾಸ್ಟರ್, ಉತ್ತಮ ವಿಲನ್, ಮಾದ ಮತ್ತು ಮಾನಸಿ, ಉಪ್ಪು ಹುಳಿ ಖಾರ ಸಿನಿಮಾಗಳಲ್ಲಿ ನಟಿಸಿದ್ದಾರೆ. ಇದನ್ನೂ ಓದಿ: ಅದಿತಿ ಪ್ರಭುದೇವ ಮದುವೆ ಆಗಲಿರುವ ಹುಡುಗ ಯಾರು ಗೊತ್ತಾ?

    ಉಪ್ಪು ಹುಳಿ ಖಾರ ಸಿನಿಮಾ ನಂತರ ನಾಲ್ಕು ವರ್ಷಗಳ ಕಾಲ ಸಿನಿಮಾಗಳಿಂದ ದೂರ ಉಳಿದಿದ್ದ ಅನುಶ್ರೀ ಯೂಟ್ಯೂಬ್ ಚಾನೆಲ್ ಆರಂಭಿಸಿ ಸ್ಟಾರ್ ನಟ ನಟಿಯರ ಸಂದರ್ಶನ ಮಾಡುತ್ತಿದ್ದಾರೆ. ಇದೀಗ ನಿರೂಪಣೆ ಜೊತೆಗೆ ವಿಭಿನ್ನ ಕಥಾಶೈಲಿ ಒಳಗೊಂಡ ಸಿನಿಮಾದಲ್ಲೂ ನಟಿಸಲು ಗ್ರೀನ್ ಸಿಗ್ನಲ್ ನೀಡಿದ್ದು ಚಿತ್ರದ ಬಗ್ಗೆ ಹೆಚ್ಚಿನ ಮಾಹಿತಿ ಸದ್ಯದಲ್ಲೇ ಹೊರಬೀಳಲಿದೆ.