Tag: Prabhudeva

  • ಆ ಒಂದು ಕ್ಯಾಸೆಟ್‌ನಿಂದ ಪ್ರಭುದೇವ ಭವಿಷ್ಯ ಬದಲಾಯಿಸಿತು

    ಆ ಒಂದು ಕ್ಯಾಸೆಟ್‌ನಿಂದ ಪ್ರಭುದೇವ ಭವಿಷ್ಯ ಬದಲಾಯಿಸಿತು

    ಸಾಧಕನ ಸಾಧನೆಯ ಕಥೆ ಹೇಳುವ ಜನಪ್ರಿಯ Weekend with Ramesh 5 ಶೋನಲ್ಲಿ ತಮ್ಮ ಬದಕು ಬದಲಾದ ಕಥೆಯನ್ನ ಹೇಳಿದ್ದಾರೆ. ಪ್ರಭುದೇವ (Prabhudeva) ಕೈಗೆ ಸಿಕ್ಕ ಆ ಒಂದು ಕ್ಯಾಸೆಟ್‌ನಿಂದ ಅವರ ಭವಿಷ್ಯ ಬದಲಾಗಿದ್ದು, ಹೇಗೆ? ಎಂದು ಹೇಳಿದ್ದಾರೆ.

    ಬಾಲ್ಯದಿಂದಲೇ ನೃತ್ಯ ರಂಗದಲ್ಲಿ ಪ್ರಭುದೇವಗೆ ಒಲವಿತ್ತು. ಹಾಗಾಗಿ ಭರತನಾಟ್ಯ ಸೇರಿದಂತೆ ಹಲವು ಶೈಲಿಯ ನೃತ್ಯವನ್ನ ನಟ ಕರಗತ ಮಾಡಿಕೊಂಡರು. ತಂದೆಯ ಹಾದಿಯಲ್ಲಿಯೇ ಪ್ರಭುದೇವ ಸಾಗಿದ್ದರು. ಪ್ರಭುದೇವ ನೃತ್ಯ ಕಲಿಯುವಾಗ ಅವರಿಗೆ ಥ್ರಿಲ್ಲರ್ ಹೆಸರಿನ ಕ್ಯಾಸೆಟ್ ಸಿಕ್ಕಿತ್ತು. ವಿಶ್ವಪ್ರಸಿದ್ಧ ಡ್ಯಾನ್ಸರ್ ಮೈಕಲ್ ಜಾಕ್ಸನ್ ಅವರ 1982ರ ಸೂಪರ್ ಹಿಟ್ ಆಲ್ಬಂ ಥ್ರಿಲ್ಲರ್. ಬೀಟ್ ಇಟ್ ಸೇರಿದಂತೆ ಹಲವು ಹಾಡುಗಳು ಆ ಆಲ್ಬಂನಲ್ಲಿದ್ದವು. ಪ್ರಭುದೇವ ಅವರು ಆ ಆಲ್ಬಂನ ವಿಸಿಆರ್ ಕ್ಯಾಸೆಟ್ ಅನ್ನು ತೆಗೆದುಕೊಂಡು ಅದನ್ನು ನೋಡಲು ವಿಸಿಆರ್ ಅನ್ನು ಬಾಡಿಗೆ ತಂದಿದ್ದರಂತೆ. ಆ ಕ್ಯಾಸೆಟ್ ನೋಡುತ್ತಲೇ ನನಗೆ ರೋಮಾಂಚನವಾಗಿ ಬಿಟ್ಟಿತು. ನಾನು ಹೊಸದೇನನ್ನೋ ನೋಡಿದೆ. ಅಲ್ಲಿಯವರೆಗೆ ನಾನು ಆ ರೀತಿಯ ಡ್ಯಾನ್ಸ್ ನೋಡಿರಲೇ ಇಲ್ಲ. ಮೈಕಲ್ ಜಾಕ್ಸನ್ ಡ್ಯಾನ್ಸ್ ಮಾಡಿದ ರೀತಿ ನನ್ನನ್ನು ಬೆರಗಾಗಿಸಿತು ಎಂದು ನೆನಪಿಸಿಕೊಂಡಿದ್ದಾರೆ. ಇದನ್ನೂ ಓದಿ: `ನಾಟು ನಾಟು’ ಹಾಡಿಗೆ ಹೆಜ್ಜೆ ಹಾಕಿದ ಆಲಿಯಾ ಭಟ್- ರಶ್ಮಿಕಾ ಮಂದಣ್ಣ

    ಅಂದು ಮೈಕಲ್ ಜಾಕ್ಸನ್‌ರ ಥ್ರಿಲ್ಲರ್ ನೋಡಿದ ಬಳಿಕ ಆ ಮಾದರಿಯ ಡ್ಯಾನ್ಸ್ ನನ್ನನ್ನು ಕಾಡಲು ಆರಂಭಿಸಿತು. ನಾನು ಎಲ್ಲಿದ್ದರು ಏನು ಮಾಡುತ್ತಿದ್ದರೂ ಡ್ಯಾನ್ಸ್ ಮಾಡಲು ಆರಂಭಿಸಿದೆ. ಒಂದು ರೀತಿ ಹುಚ್ಚನಾಗಿಬಿಟ್ಟಿದ್ದೆ, ನೃತ್ಯ ಕಲಿಯುವಾಗಲು ಮಧ್ಯದಲ್ಲಿ ಒಂದೊಂದು ಬ್ರೇಕ್ ಡ್ಯಾನ್ಸ್ ಸ್ಟೆಪ್ಸ್ ಸೇರಿಸಿಬಿಡುತ್ತಿದ್ದ, ನನ್ನ ಗುರುಗಳು ನನ್ನನ್ನು ಬೈಯ್ಯುತ್ತಿದ್ದರೂ ಆದರೂ ಆ ಅಭ್ಯಾಸ ನನ್ನಿಂದ ಹೋಗುತ್ತಿರಲಿಲ್ಲ ಎಂದ ಪ್ರಭುದೇವ, ಮೈಕಲ್ ಜಾಕ್ಸನ್ ನನ್ನ ಮೇಲೆ ಬೀರಿದ ಪ್ರಭಾವ ಬಹಳ ದೊಡ್ಡದು ಎಂದು ಪ್ರಭುದೇವ ಸ್ಮರಿಸಿದರು.

    ಶೋನಲ್ಲಿ ಹಲವು ಬಾರಿ ಅವರು ಮೈಕಲ್ ಜಾಕ್ಸನ್ ಅವರನ್ನು ನೆನಪು ಮಾಡಿಕೊಂಡರು ಪ್ರಭುದೇವ. ಮೈಕಲ್ ಜಾಕ್ಸನ್ (Michael Jackson) ಒಮ್ಮೆ ಮುಂಬೈಗೆ ಬಂದಾಗ ನಿರ್ಮಾಪಕರೊಬ್ಬರ ಸಹಾಯದಿಂದ ತಾವು ಅವರನ್ನು ಭೇಟಿಯಾಗಿದ್ದಾಗಿಯೂ, ಅಂದು ಅವರು ನನಗೆ ಏನೋ ಹೇಳಿದರು ಆದರೆ ಅದು ನನಗೆ ನೆನಪಿಲ್ಲ ಏಕೆಂದರೆ ಅವರನ್ನು ನೋಡಿ ನಾನು ಶಾಕ್‌ನಲ್ಲಿದ್ದೆ ಅವರನ್ನೇ ನೋಡುತ್ತಿದ್ದೆ ಎಂದಿದ್ದಾರೆ. ಶೋನ ಕೊನೆಯಲ್ಲಿ ನಿಮ್ಮ ಈ ಸಾಧನೆಗೆ ಮುಖ್ಯ ಕಾರಣಕರ್ತರು ಯಾರೆಂದಾಗ ತಮಗೆ ನೃತ್ಯ ಹೇಳಿಕೊಟ್ಟ ಧರ್ಮರಾಜ್ ಮಾಸ್ಟರ್, ಲಕ್ಷ್ಮಿನಾರಾಯಣ ಮಾಸ್ಟರ್ ಎಂದ ಪ್ರಭುದೇವ, ಮೈಕಲ್ ಜಾಕ್ಸನ್ ಸಹ ತಮಗೆ ಗುರುವೇ ಎಂದು  ಪ್ರಭುದೇವ ಮಾತನಾಡಿದ್ದಾರೆ.

  • ಅಪ್ಪ ಅಂದು ಬೆನ್ನ ಮೇಲೆ ಕೊಟ್ಟ ಆ ಸಣ್ಣ ಏಟು ನನ್ನನ್ನು ಬದಲಾಯಿಸಿತು: ಪ್ರಭುದೇವ

    ಅಪ್ಪ ಅಂದು ಬೆನ್ನ ಮೇಲೆ ಕೊಟ್ಟ ಆ ಸಣ್ಣ ಏಟು ನನ್ನನ್ನು ಬದಲಾಯಿಸಿತು: ಪ್ರಭುದೇವ

    ಟಿವಿ ಲೋಕದ Weekend With Ramesh 5 ಕಾರ್ಯಕ್ರಮದಲ್ಲಿ ಡ್ಯಾನ್ಸಿಂಗ್ ಲೆಜೆಂಡ್ ಪ್ರಭುದೇವ (Prabhudeva) ಭಾಗವಹಿಸಿದ್ದಾರೆ. ತಮ್ಮ ಜೀವನದ ಸಾಕಷ್ಟು ವಿಚಾರಗಳನ್ನ ಹಂಚಿಕೊಂಡಿದ್ದಾರೆ. ಪಿಯುಸಿ ಫೇಲ್ ಆದಾಗ, ಪ್ರಭುದೇವ ಅವರ ತಂದೆ ಮೂಗೂರು ಸುಂದರ್ (Mugur Sundar) ಮನಸ್ಥಿತಿ ಹೇಗಿತ್ತು? ತಂದೆ ಮಾಡಿದ ಕಾರ್ಯದಿಂದ ತಮಗೆ ಅದ್ಯಾವ ರೀತಿ ಪ್ರಭಾವ ಬೀರಿತು ಎಂಬುದನ್ನ ಪ್ರಭುದೇವ ಹಂಚಿಕೊಂಡಿದ್ದಾರೆ.

    ವೀಕೆಂಡ್ ಟೆಂಟ್‌ನಲ್ಲಿ ರಮ್ಯಾ ಬಳಿಕ ಪ್ರಭುದೇವ 2ನೇ ಅತಿಥಿಯಾಗಿ ಭಾಗಿಯಾಗಿದ್ದಾರೆ. ಪ್ರಭುದೇವ ಅವರ ಸ್ಪಷ್ಟ ಕನ್ನಡಕ್ಕೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಡ್ಯಾನ್ಸ್ ಅನ್ನೇ ಕೆರಿಯರ್ ಆಗಿ ಬದಲಾಯಿಸಿಕೊಂಡು ನಟ, ನಿರ್ದೇಶಕ, ಕೊರಿಯೋಗ್ರಾಫರ್ ಬೆಳೆದಿದ್ದು ಹೇಗೆ ಎಂಬುದನ್ನ ಪ್ರಭುದೇವ ಹೇಳಿದ್ದಾರೆ. ಜೊತೆಗೆ ತಂದೆಯ ಬೆಂಬಲದ ಬಗ್ಗೆ ಅಚ್ಚರಿಯ ಮಾಹಿತಿ ತಿಳಿಸಿದ್ದಾರೆ. ಪ್ರತಿ ವ್ಯಕ್ತಿಯು ಕೂಡ ಸಾಧನೆಯ ಹಾದಿಗೆ ಕಾಲಿಡಲು ಅವರ ಕುಟುಂಬದವರು ನೀಡುವ ಬೆಂಬಲ ಬಹಳ ಮುಖ್ಯವಾಗುತ್ತದೆ. ಪ್ರಭುದೇವಗೆ ಅಂಥಹಾ ಬೆಂಬಲ ದೊರಕಿದ್ದು,ಅವರ ತಂದೆ ಮೂಗುರು ಸುಂದರ್‌ ಅವರಿಂದಲೇ. ಅವರು ಮಾಡಿದ್ದು ಬಹಳ ಸರಳವಾದ ಕಾರ್ಯವಷ್ಟೆ ಆದರೆ ಅದು ಪ್ರಭುದೇವ ಜೀವನದಲ್ಲಿ ಬಹಳ ಮಹತ್ವದ ಕಾರ್ಯವಾಯಿತು. ಅದರ ಬಗ್ಗೆ ವೀಕೆಂಡ್ ವಿತ್ ರಮೇಶ್‌ನಲ್ಲಿ ಪ್ರಭುದೇವ ಮಾತನಾಡಿದ್ದಾರೆ. ಇದನ್ನೂ ಓದಿ: ‘ಅಭಿರಾಮಚಂದ್ರ’ನಿಗೆ ಕರುನಾಡ ಚಕ್ರವರ್ತಿ ಶಿವಣ್ಣ ಸಾಥ್

    ಡ್ಯಾನ್ಸ್‌ನಲ್ಲಿ ಚಿಕ್ಕಂದಿನಿಂದಲೂ ಅಪ್ರತಿಮರಾಗಿದ್ದ ಪ್ರಭುದೇವ ಅವರು ಓದಿನಲ್ಲಿ ಮೊದಲಿನಿಂದಲೂ ಬಹಳ ಹಿಂದೆ ಇದರಂತೆ. ಅದರಲ್ಲಿಯೂ ರಸಾಯನಶಾಸ್ತ್ರವೆಂದರೆ ಪ್ರಭುದೇವಗೆ ಭಯವೋ ಭಯ. ಹೀಗಿರುವಾಗ ಪಿಯುಸಿಯಲ್ಲಿ ಪ್ರಭುದೇವ ಫೇಲ್ ಆಗಿಬಿಡುತ್ತಾರೆ. ಅಂದು ಬಹಳ ಭಯದಲ್ಲಿದ್ದ ಪ್ರಭುದೇವ ಮನೆಗೆ ಬಂದರೆ ಅಪ್ಪ ಮನೆಯಲ್ಲಿಯೇ ಇದ್ದಾರೆ. ಫೇಲ್ ಆಗಿ ಭಯದಲ್ಲಿ ರೂಂನಲ್ಲಿ ಕೂತಿದ್ದರಂತೆ ಪ್ರಭು, ಮಗ ಫೇಲ್ ಆಗಿದ್ದಾನೆಂದು ತಿಳಿದ ಮೂಗೂರು ಸುಂದರ್ ಅವರು ನಿಧಾನಕ್ಕೆ ಪ್ರಭು ಇದ್ದ ರೂಮಿಗೆ ಬಂದಿದ್ದಾರೆ. ಏನಾಯ್ತು ಎಂದು ಕೇಳಿದಾಗ ಫೇಲ್ ಆಗಿದ್ದೇನೆ ಎಂದರಂತೆ. ಆಗ ಮೂಗುರು ಸುಂದರ್ ಅವರು ಪ್ರಭುದೇವ ಬೆನ್ನನ್ನು ಎರಡು ಬಾರಿ ಮೆತ್ತಗೆ ತಟ್ಟಿ, ಪರವಾಗಿಲ್ಲ ನಿನಗೆ ಏನು ಇಷ್ಟವಾಗುತ್ತದೆಯೋ ಅದನ್ನು ಮಾಡು ಎಂದರಂತೆ.

    ಆ ಕ್ಷಣ ಪ್ರಭುದೇವಗೆ ಅಳು ಬಂದುಬಿಟ್ಟಿತಂತೆ, ಆದರೆ ಅಪ್ಪ ಅಂದು ಬೆನ್ನ ಮೇಲೆ ಕೊಟ್ಟ ಆ ಸಣ್ಣ ಏಟು ನನ್ನನ್ನು ಬದಲಾಯಿಸಿತು ಎಂದಿದ್ದಾರೆ ಪ್ರಭುದೇವ. ಅದಾದ ಬಳಿಕ ನಾನು ಬದಲಾಗಿಬಿಟ್ಟೆ, ಅಪ್ಪ ಇಟ್ಟ ವಿಶ್ವಾಸವನ್ನು ಉಳಿಸಿಕೊಳ್ಳಲೇ ಬೇಕು ಎಂಬ ಹಠಕ್ಕೆ ಬಿದ್ದೆ ಎಂದು ನೆನಪಿಸಿಕೊಂಡಿದ್ದಾರೆ. ಅಂದು ಅಪ್ಪ ಬೆನ್ನು ತಟ್ಟಿದ್ದರಿಂದಲೇ ನಾನು ಇಂದಿನ ಪ್ರಭುದೇವ ಆಗಲು ಸಾಧ್ಯವಾಗಿದ್ದು ಎಂದಿದ್ದಾರೆ ಪ್ರಭು.

  • ಮಗ ಸತ್ತಾಗ ಆತ್ಮಸ್ಥೈರ್ಯ ತುಂಬಿ ಜೊತೆಯಾಗಿದ್ದು, ಪ್ರಭುದೇವ: ಪ್ರಕಾಶ್‌ ರಾಜ್‌

    ಮಗ ಸತ್ತಾಗ ಆತ್ಮಸ್ಥೈರ್ಯ ತುಂಬಿ ಜೊತೆಯಾಗಿದ್ದು, ಪ್ರಭುದೇವ: ಪ್ರಕಾಶ್‌ ರಾಜ್‌

    ವೀಕೆಂಡ್ ಟೆಂಟ್‌ನಲ್ಲಿ ಇಂಡಿಯನ್ ಮೈಕಲ್ ಜಾಕ್ಸನ್ ಪ್ರಭುದೇವ (Prabhudeva)  ಅವರ ಎಂಟ್ರಿಯಾಗಿದೆ. ನಟ ರಮೇಶ್ ಅರವಿಂದ್ ಜೊತೆ ಬದುಕಿನ ಬಾಲ್ಯದ ಹಲವಾರು ವಿಚಾರಗಳನ್ನ ನಟ ಹಂಚಿಕೊಂಡಿದ್ದಾರೆ. ಅದಷ್ಟೇ ಅಲ್ಲ, ಬಹುಭಾಷಾ ನಟ ಪ್ರಕಾಶ್ ರಾಜ್ (Prakash Raj) ಅವರು ಪ್ರಭುದೇವ ಬಗ್ಗೆ Weekend With Ramesh ಕಾರ್ಯಕ್ರಮದಲ್ಲಿ ಮಾತನಾಡಿದ್ದಾರೆ. ಮಗ ಸಿದ್ದು ಸತ್ತಾಗ, ಆತ್ಮಸ್ಥೈರ್ಯ ತುಂಬಿದ ಪ್ರಭುದೇವ ನಡೆಯ ಬಗ್ಗೆ ಮಾತನಾಡಿದ್ದಾರೆ.

    ಮೈಸೂರು ಮೂಲದ ನಟ ಪ್ರಭುದೇವ ಅವರಿಗೆ ಬಾಲಿವುಡ್‌ನಲ್ಲಿ ಸಿಕ್ಕಾಪಟ್ಟೆ ಬೇಡಿಕೆ ಇದೆ. ನಟ, ನಿರ್ದೇಶಕ, ಕೊರಿಯೋಗ್ರಾಫರ್ ಆಗಿ ದೊಡ್ಡ ಮಟ್ಟದಲ್ಲಿ ಹೆಸರು ಮಾಡಿದ್ರು ಕೂಡ. ಕನ್ನಡ ಭಾಷೆ- ಕರ್ನಾಟಕದ ಬಗ್ಗೆ ಅಪಾರ ಪ್ರೀತಿಯನ್ನ ಇಟ್ಟುಕೊಂಡಿದ್ದಾರೆ. ಪ್ರಭುದೇವ-ಅವರ ತಂದೆ ಮುಗೂರ್ ಸುಂದರ್ ಇಡೀ ಕುಟುಂಬ ಚಿತ್ರರಂಗದಲ್ಲಿ ಕಲಾಸೇವೆ ಮಾಡುತ್ತಲೇ ಬಂದಿದ್ದಾರೆ. ಪ್ರಭುದೇವ ಅವರು `ಪದ್ಮಶ್ರೀ’ ಜೊತೆಗೆ 2 ರಾಷ್ಟ್ರ ಪ್ರಶಸ್ತಿ ಪುರಸ್ಕಾರ ಪಡೆದ ಪ್ರಭುದೇವ ಅವರು ಅಪ್ಪಟ ಕನ್ನಡದ ಪ್ರತಿಭೆ. 36 ವರ್ಷಗಳಲ್ಲಿ 100ಕ್ಕೂ ಅಧಿಕ ಸಿನಿಮಾಗಳಿಗೆ ಕೊರಿಯೋಗ್ರಫಿ ಮಾಡಿರುವ ಪ್ರಭುದೇವ ಅವರು 61 ಚಿತ್ರಗಳಲ್ಲಿ ನಟಿಸಿದ್ದಾರೆ, 15 ಸಿನಿಮಾಗಳನ್ನು ನಿರ್ದೇಶಿಸಿದ್ದಾರೆ, 3 ಸಿನಿಮಾಗಳ ನಿರ್ಮಾಣ ಮಾಡಿದ್ದಾರೆ. ಭಾರತದ ಸ್ಟಾರ್ ನಟರ ಜೊತೆ ಪ್ರಭುದೇವ ಕೆಲಸ ಮಾಡಿದ್ದಾರೆ. ಇಷ್ಟೇಲ್ಲಾ ಸಾಧನೆ ಮಾಡಿರುವ ಪ್ರಭುದೇವ ಅವರು ಕಷ್ಟದಲ್ಲಿರುವ ಸ್ನೇಹಿತರಿಗಾಗಿ ಮಿಡಿಯುವ ಮನಸ್ಸಿನ ಬಗ್ಗೆ ಪ್ರಕಾಶ್ ರಾಜ್ ವೀಕೆಂಡ್ ವಿತ್ ರಮೇಶ್‌ನಲ್ಲಿ ಹಂಚಿಕೊಂಡಿದ್ದಾರೆ.

    ಕನ್ನಡಿಗ, ಬಹುಭಾಷಾ ನಟ ಪ್ರಕಾಶ್ ರಾಜ್ ಕಾರ್ಯಕ್ರಮದಲ್ಲಿ ವೀಡಿಯೋ ಸಂದೇಶದ ಮೂಲಕ ಸ್ನೇಹಿತ ಪ್ರಭುದೇವ ಅವರ ಹುಟ್ಟುಹಬ್ಬಕ್ಕೆ, ಸಿನಿ ಜರ್ನಿಗೆ ಶುಭಹಾರೈಸಿದ್ದಾರೆ. ಹಾಗೆಯೇ ಎಲ್ಲೂ ಹೇಳಿರದ ವಿಚಾರವೊಂದರನ್ನ ಹಂಚಿಕೊಂಡಿದ್ದಾರೆ. ಪ್ರಕಾಶ್ ರಾಜ್ ಅವರಿಗೆ `ಸಿದ್ದು’ ಎಂಬ ಮುದ್ದಾದ ಗಂಡು ಮಗನಿದ್ದ, 2004ರಲ್ಲಿ 5 ವರ್ಷದ ಮಗ ಸಿದ್ದು ನಿಧನರಾದರು. ಮಗನ ನಿಧನದ ಸಂದರ್ಭದಲ್ಲಿ ಧೈರ್ಯ,ಸಾಂತ್ವನ ತುಂಬಿದ ಬಗ್ಗೆ ಪ್ರಕಾಶ್ ರಾಜ್ ಹೇಳಿದ್ದಾರೆ. ಸಂಕಷ್ಟದ ಸಮಯದಲ್ಲಿ ಪ್ರಭುದೇವ ಸಾಥ್ ನೀಡಿದ್ದರ ಬಗ್ಗೆ ನಟ ಹಂಚಿಕೊಂಡಿದ್ದಾರೆ.

    ವೇದಿಕೆಯಲ್ಲಿ ಶಾಲೆಯ ಗೆಳೆಯರು ಸೇರಿದಂತೆ ಬಾಲ್ಯದ ಗೆಳೆಯರೆಲ್ಲರೂ ಸಹ ವೇದಿಕೆಯ ಮೇಲೆ ಬಂದು ಪ್ರಭುದೇವ ಅವರಿಗೆ ಸರ್ಪ್ರೈಸ್ ನೀಡುವ ಮೂಲಕ ಮತ್ತೊಮ್ಮೆ ಶಾಲಾ ದಿನಗಳು ಹಾಗೂ ಬಾಲ್ಯಕ್ಕೆ ಕರೆದುಕೊಂಡು ಹೋಗುವ ಕೆಲಸವನ್ನು ಮಾಡಿದ್ದಾರೆ. ಬಾಲ್ಯದ ಸ್ನೇಹಿತರನ್ನು ನೋಡಿ ನಾನು ಲುಂಗಿಯನ್ನು ಉಟ್ಟುಕೊಳ್ಳುವುದಿಲ್ಲ. ಇವರೆಲ್ಲರೂ ಲುಂಗಿಯನ್ನ ಉಟ್ಟುಕೊಳ್ಳುತ್ತಾರೆ. ಯಾಕೆಂದರೆ ಬೆಳಿಗ್ಗೆ ಎದ್ದು ನೋಡಿದ್ರೆ ಲುಂಗಿ ಮಾಯವಾಗಿತ್ತು ಎಂದು ಬಾಲ್ಯದಲ್ಲಿ ನಡೆದಂತಹ ಒಂದು ಪ್ರಸಂಗವನ್ನ ಮೆಲುಕು ಹಾಕಿ ಎಲ್ಲರ ಮುಖದಲ್ಲೂ ನಗೆಯನ್ನ ತರಿಸಿದ್ದಾರೆ. ಪ್ರಭುದೇವ ಮತ್ತು ಸ್ನೇಹಿತರು ಮಲಗಿದ್ದಾಗ ರಾತ್ರಿ ಲುಂಗಿ ಉಟ್ಟುಕೊಂಡು ಮಲಗಿದ್ದಾರೆ. ಆದರೆ ಪ್ರಭುದೇವ ಅವರು ಬೆಳಿಗ್ಗೆ ಎದ್ದಾಗ ಲುಂಗಿ ಮಾಯವಾಗಿತ್ತಂತೆ. ಇದರಿಂದ ನಾನು ಅಂದಿನಿಂದ ಲುಂಗಿ ಉಟ್ಟಿಕೊಳ್ಳುವುದನ್ನು ಬಿಟ್ಟೆ ಎಂದು ಪ್ರಭುದೇವ ತಿಳಿಸಿದ್ದಾರೆ.

  • `ಇಂಡಿಯನ್ ಮೈಕಲ್ ಜಾಕ್ಸನ್’ ಪ್ರಭುದೇವ ಕನ್ನಡಕ್ಕೆ ಕನ್ನಡಿಗರ ಚಪ್ಪಾಳೆ

    `ಇಂಡಿಯನ್ ಮೈಕಲ್ ಜಾಕ್ಸನ್’ ಪ್ರಭುದೇವ ಕನ್ನಡಕ್ಕೆ ಕನ್ನಡಿಗರ ಚಪ್ಪಾಳೆ

    ಕಿರುತೆರೆಯ ಜನಪ್ರಿಯ Weekend With Ramesh ಶೋನಲ್ಲಿ `ಇಂಡಿಯನ್ ಮೈಕಲ್ ಜಾಕ್ಸನ್’ ಪ್ರಭುದೇವ ಎಂಟ್ರಿಯಾಗಿದೆ. ಬಾಲ್ಯ ಜೀವನ, ಶಿಕ್ಷಣ, ಸಿನಿಮಾ ಕೆರಿಯರ್, ಡ್ಯಾನ್ಸ್, ಹೀಗೆ ಸಾಕಷ್ಟು ವಿಚಾರಗಳ ಬಗ್ಗೆ ಪ್ರಭುದೇವ ಅವರು ಈ ಕಾರ್ಯಕ್ರಮದಲ್ಲಿ ಹಂಚಿಕೊಂಡಿದ್ದಾರೆ. ಜೊತೆಗೆ ಪ್ರಭುದೇವ (Prabhudeva) ಅವರ ಕನ್ನಡಕ್ಕೆ (Kannada) ಕನ್ನಡಿಗರು ಫಿದಾ ಆಗಿದ್ದಾರೆ.

    ಮೈಸೂರು (Mysore) ಮೂಲದ ಪ್ರಭುದೇವ್ ಅವರು ಇತರೆ ಭಾಷೆಗಳಲ್ಲಿ ಸಾಕಷ್ಟು ಜನಪ್ರಿಯತೆಯನ್ನು ಗಳಿಸಿದ್ದಾರೆ. ಭಾರತದ ಮೈಕಲ್ ಜಾಕ್ಸನ್ ಎಂದೇ ಖ್ಯಾತಿಗಳಿಸಿರುವ ಪ್ರಭುದೇವ ನಟ ನಿರ್ದೇಶಕ ಡ್ಯಾನ್ಸರ್ ಆಗಿದ್ದಾರೆ. ಈಗ ಐದನೇ ಆವೃತ್ತಿಯ ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮದ ಎರಡನೇ ಸಾಧಕನಾಗಿ ಪ್ರಭುದೇವ ಆಗಮಿಸಿದ್ದಾರೆ. ಮೊದಲ ಸಂಚಿಕೆಯಲ್ಲಿ ರಮ್ಯಾ ಸ್ಪೂರ್ತಿಯ ಕಥೆ ಎಲ್ಲರಿಗೂ ಮೋಡಿ ಮಾಡಿತ್ತು. ಆದರೆ ಅವರ ಅತಿಯಾದ ಇಂಗ್ಲಿಷ್ ಬಳಕೆ ಬಗ್ಗೆ ಅಪಸ್ವರ ಕೇಳಿ ಬಂದಿತ್ತು. ಇನ್ನೂ ಬಾಲಿವುಡ್‌ನ ಬಹುಬೇಡಿಕೆ ನಟ, ನಿರ್ದೇಶಕ ಕೊರಿಯೋಗ್ರಾಫರ್ ಪ್ರಭುದೇವ ಬರುತ್ತಾರೆ ಎಂದಾಗ ಹಿಂದಿ & ಇಂಗ್ಲಿಷ್ ಭಾಷೆ ಮಾತನಾಡುತ್ತಾರೆ ಎಂದು ಅಂದುಕೊಂಡವರೇ ಜಾಸ್ತಿ. ಆದರೆ ಆಗಿದ್ದೇ ಬೇರೆ.

    ಪ್ರಭುದೇವ ಅವರು ಅಪರೂಪಕ್ಕೆ ಇಂಗ್ಲಿಷ್ ಪದ ಬಳಸಿದ್ದರು ಕೂಡ ಅತೀ ಹೆಚ್ಚು ಕನ್ನಡದಲ್ಲಿಯೇ ಮಾತನಾಡಿದರು. ಅವರ ತಂದೆ ಮೂಗೂರು ಸುಂದರಂ, ತಾಯಿ, ಸಹೋದರ ನಾಗೇಂದ್ರ ಪ್ರಸಾದ್ ಸೇರಿ ಅವರ ಬಳಗ ಎಲ್ಲವೂ ಕನ್ನಡದಲ್ಲಿಯೇ ಮಾತನಾಡಿದ್ದರು. ಕೆಲವರಿಗೆ ಇದು ತಮಿಳು ಮಿಶ್ರಿತ ಕನ್ನಡ ಅಂತ ಅನಿಸಿರಬಹುದು. ಆದರೆ ಅದು ತಮಿಳು ಮಿಶ್ರಿತ ಕನ್ನಡ ಅಲ್ಲವೇ ಅಲ್ಲ. ಚಾಮರಾಜನಗರ ಭಾಷೆಯ ಕನ್ನಡವಿದು, ಕಾಡು ಭಾಷೆ ಅಂತಲೂ ಹೇಳುತ್ತಾರೆ. ಡಾ ರಾಜ್‌ಕುಮಾರ್ ಅವರು ಚಾಮರಾಜನಗರದ ಕಡೆಯವರು ಬಂದ್ರು ಅಂದ್ರೆ ನಮ್ಮ ಕಾಡಿನವ್ರು ಅಂತ ಹೇಳುತ್ತಿದ್ದರಂತೆ. ಅಷ್ಟೇ ಅಲ್ಲ, ದೋಸೆ ಕೊಡು ಎನ್ನಲು ತತ್ತಾಯ್ಯಾ ಒಂದ್ ದ್ಯಾಸ್ಯಾ ಅಂತ ಹೇಳುತ್ತಿದ್ದರಂತೆ. ಮನೆಯಲ್ಲಿ ಅಣ್ಣಾವ್ರು ಹೀಗೆ ಮಾತನಾಡ್ತಿದ್ರಂತೆ. ಒಟ್ನಲ್ಲಿ ರಮ್ಯಾ (Ramya) ಕನ್ನಡ ಬಳಕೆಗೆ ಅಸಮಾಧಾನ ವ್ಯಕ್ತವಾದ ಬೆನ್ನಲ್ಲೇ ಪ್ರಭುದೇವ ಅವರ ಕನ್ನಡಕ್ಕೆ ಕನ್ನಡಿಗರು ಫುಲ್ ಮಾರ್ಕ್ಸ್ ಕೊಟ್ಟಿದ್ದಾರೆ. ಇದನ್ನೂ ಓದಿ: ದಶಕದ ನಂತರ ಮತ್ತೆ ಬಣ್ಣ ಹಚ್ಚಿದ ಸಂಗೀತ ನಿರ್ದೇಶಕ ಗುರುಕಿರಣ್

    ಶಾಲೆಯ ಗೆಳೆಯರು ಸೇರಿದಂತೆ ಬಾಲ್ಯದ ಗೆಳೆಯರೆಲ್ಲರೂ ಸಹ ವೇದಿಕೆಯ ಮೇಲೆ ಬಂದು ಪ್ರಭುದೇವ ಅವರಿಗೆ ಸರ್ಪ್ರೈಸ್ ನೀಡುವ ಮೂಲಕ ಮತ್ತೊಮ್ಮೆ ಶಾಲಾ ದಿನಗಳು ಹಾಗೂ ಬಾಲ್ಯಕ್ಕೆ ಕರೆದುಕೊಂಡು ಹೋಗುವ ಕೆಲಸವನ್ನು ಮಾಡಿದ್ದಾರೆ. ಅಮಾವಾಸ್ಯೆ ಎಂದರೆ ಎಲ್ಲರಿಗೂ ಭಯ ಇದ್ದೇ ಇರುತ್ತದೆ. ಆ ದಿನ ಮಗು ಜನಿಸಿದ್ರೆ ಹೇಗಾಗಿರಬೇಡ, ಆದರೆ ಮೂಗೂರು ಸುಂದರ್ ಅವರು ತಮ್ಮ ಮಗ ಅಮಾವಾಸ್ಯೆ ದಿನ ಹುಟ್ಟಿದ ಎಂದು ತುಂಬಾ ಖುಷಿಯನ್ನ ಪಟ್ಟಿದ್ದಾರೆ. ಅದನ್ನು ಸ್ವತಃ ಅವರೇ ಹೇಳಿದ್ದಾರೆ. ನನ್ನ ಮಗ ಅಮಾವಾಸ್ಯೆಯ ದಿನ ಹುಟ್ಟಿದ್ದು ನನಗಂತೂ ತುಂಬಾ ಸಂತಸವನ್ನು ತಂದಿದೆ ಎಂದು ವೇದಿಕೆಯ ಮೇಲೆ ಸೀಕ್ರೆಟ್ ರಿವೀಲ್ ಮಾಡಿದ್ದಾರೆ. ಪ್ರಭುದೇವ ಅವರಿಗೆ ಹಪ್ಪಳ ಎಂದರೆ ತುಂಬಾ ಇಷ್ಟ. ಇದರಿಂದಾಗಿ ಹಪ್ಪಳದ ಕಥೆಯನ್ನ ಹೇಳಿದ್ದಾರೆ. ನಾವು ಮನೆಯಲ್ಲಿ ಇದ್ದಾಗ ಹಪ್ಪಳವನ್ನು ಜೋಡಿಸಿಕೊಂಡು ತಿನ್ನುತ್ತಿದ್ದೆವು ಎಂದು ನಟ ರಮೇಶ್ ಬಳಿ ಹೇಳಿದ್ದಾರೆ. ಇನ್ನು ಇದೇ ವೇಳೆ `ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು’ ಎಂಬ ಹಾಡಿಗೆ ತಂದೆ ಮಗ ಇಬ್ಬರು ಸೇರಿಕೊಂಡು ಡ್ಯಾನ್ಸ್ ಮಾಡಿದ್ದಾರೆ.

    `ಪದ್ಮಶ್ರೀ’ ಜೊತೆಗೆ 2 ರಾಷ್ಟ್ರ ಪ್ರಶಸ್ತಿ ಪುರಸ್ಕಾರ ಪಡೆದ ಪ್ರಭುದೇವ ಅವರು ಅಪ್ಪಟ ಕನ್ನಡದ ಪ್ರತಿಭೆ. 36 ವರ್ಷಗಳಲ್ಲಿ 100ಕ್ಕೂ ಅಧಿಕ ಸಿನಿಮಾಗಳಿಗೆ ಕೊರಿಯೋಗ್ರಫಿ ಮಾಡಿರುವ ಪ್ರಭುದೇವ ಅವರು 61 ಚಿತ್ರಗಳಲ್ಲಿ ನಟಿಸಿದ್ದಾರೆ, 15 ಸಿನಿಮಾಗಳನ್ನು ನಿರ್ದೇಶಿಸಿದ್ದಾರೆ, 3 ಸಿನಿಮಾಗಳ ನಿರ್ಮಾಣ ಮಾಡಿದ್ದಾರೆ. ಭಾರತದ ಸ್ಟಾರ್ ನಟರ ಜೊತೆ ಪ್ರಭುದೇವ ಕೆಲಸ ಮಾಡಿದ್ದಾರೆ.

  • ಅಮಾವಾಸ್ಯೆಯಂದು ಪ್ರಭುದೇವ ಹುಟ್ಟಿದ್ದು, ರಹಸ್ಯ ಬಿಚ್ಚಿಟ್ಟ ತಂದೆ ಮೂಗೂರ್‌ ಸುಂದರ್‌

    ಅಮಾವಾಸ್ಯೆಯಂದು ಪ್ರಭುದೇವ ಹುಟ್ಟಿದ್ದು, ರಹಸ್ಯ ಬಿಚ್ಚಿಟ್ಟ ತಂದೆ ಮೂಗೂರ್‌ ಸುಂದರ್‌

    ಕಿರುತೆರೆಯ ಜನಪ್ರಿಯ Weekend With Ramesh-5 ಶೋಗೆ ರಮ್ಯಾ (Ramya) ಮೊದಲ ಅತಿಥಿಯಾಗಿ ಎಂಟ್ರಿ ಕೊಟ್ಟಿದ್ದರು. ತನ್ನ ಬದುಕಿನ ಹಲವು ವಿಚಾರಗಳನ್ನ ನಟಿ ಬಿಚ್ಚಿಟ್ಟಿದ್ದರು. ಇದೀಗ ಇಂಡಿಯನ್ ಮೈಕಲ್ ಜಾಕ್ಸನ್ ಪ್ರಭುದೇವ (Prabhudeva) ಅವರು ಈ ಸಾಧಕರ ಸೀಟ್ ಅನ್ನ ಅಲಂಕರಿಸಿದ್ದಾರೆ.

    ಮೊದಲ ಅತಿಥಿಯಾಗಿ ರಮ್ಯಾ ಕಾಲಿಟ್ಟ ಬೆನ್ನಲ್ಲೇ ಪ್ರಭುದೇವ ಅವರು 2ನೇ ಅತಿಥಿಯಾಗಿ ತಮ್ಮ ಬದುಕಿನ ಹಲವು ವಿಚಾರಗಳನ್ನ ಹಂಚಿಕೊಂಡಿದ್ದಾರೆ. ಪ್ರಭುದೇವ ಅವರು ಬೆಳೆದು ಬಂದ ದಾರಿ, ಬೆಳೆದ ರೀತಿಯ ಬಗ್ಗೆ Weekend With Ramesh ಶೋನಲ್ಲಿ  ನೋಡಬಹುದಾಗಿದೆ. ಈ ವಾರ ಏಪ್ರಿಲ್‌ 1 & 2ರಂದು ರಾತ್ರಿ 9ಕ್ಕೆ ಪ್ರಭುದೇವ ಅವರ ಸಂಚಿಕೆ ಪ್ರಸಾರವಾಗಲಿದೆ.

    ಈ ಕುರಿತ ಪ್ರೋಮೋ ಸದ್ದು ಮಾಡ್ತಿದೆ. ಪ್ರಭುದೇವ ತಂದೆ ಮೂಗೂರು ಸುಂದರ್ (Muguru Sundar) ಎಂಟ್ರಿ ಪ್ರಮುಖ ಘಟ್ಟವಾಗಿದೆ. ಈ ಪ್ರೋಮೊದಲ್ಲಿ ಮೂಗೂರು ಸುಂದರ್ ಅವರ ಮಗನ ಹುಟ್ಟಿನ ರಹಸ್ಯವನ್ನು ರಿವೀಲ್ ಮಾಡಿದ್ದಾರೆ. ಬ್ಯಾಕ್‌ಗ್ರೌಂಡ್‌ನಲ್ಲಿ ಪ್ರಭುದೇವ ಅವರ ತಂದೆ, ಮಗ “ಅಮಾವಾಸ್ಯೆಯಲ್ಲಿ ಹುಟ್ಟಿದ್ದಾನೆ ಅಂದ್ರು” ಅಂತ ಹೇಳಿದ್ದಾರೆ.

    ಪ್ರಭುದೇವ ಯಾವುದೇ ಕಾರ್ಯಕ್ರಮಕ್ಕೆ ಹೋದರೂ, ಡ್ಯಾನ್ಸ್ ಇಲ್ಲದೆ ಹೊರ ಬರುವ ಹಾಗಿಲ್ಲ. ವೀಕ್ಷಕರ ಡಿಮ್ಯಾಂಡ್ ಕೂಡ ಇದೇನೆ. `ವೀಕೆಂಡ್ ವಿತ್ ರಮೇಶ್’ ಕಾರ್ಯಕ್ರಮದಲ್ಲೂ ಪ್ರಭುದೇವ ಭರ್ಜರಿಯಾಗಿ ಸ್ಟೆಪ್ಸ್ ನೋಡುವುದಕ್ಕೆ ಸಿಗುತ್ತಿದೆ. ಅಲ್ಲದೆ, ತಂದೆ ಮೂಗೂರು ಸುಂದರ್ ಜೊತೆ ಹುಟ್ಟಿದರೆ `ಕನ್ನಡ ನಾಡಿನಲ್ಲಿ ಹುಟ್ಟಬೇಕು’ ಹಾಡಿಗೆ ಹೆಜ್ಜೆ ಹಾಕಿದ್ದಾರೆ. ಇದು ಕಾರ್ಯಕ್ರಮದಲ್ಲಿ ನೆನಪಿನಲ್ಲಿ ಉಳಿಯುವ ಘಳಿಗೆ ಆಗಬಹುದು. ಇದರೊಂದಿಗೆ ನಿರೂಪಕ ರಮೇಶ್ ಅರವಿಂದ್ ಜೊತೆ ಪ್ರಭುದೇವ ಮೂನ್ ವಾಕ್ ಮಾಡಿದ್ದಾರೆ. ಇದು ಕೂಡ ಪ್ರೋಮೊದ ಹೈಲೈಟ್ ಆಗಿದೆ. ಈ ಕಾರ್ಯಕ್ರಮದಲ್ಲಿ ನಿರ್ದೇಶಕ ಯೋಗರಾಜ್ ಭಟ್ (Yogaraj Bhat) ಕೂಡ ಭಾಗಿಯಾಗಿದ್ದಾರೆ.

  • Exclusive- ವೀಕೆಂಡ್ ವಿತ್ ರಮೇಶ್ 5 : ಮೊದಲ ಅತಿಥಿ ರಿಷಬ್ ಶೆಟ್ಟಿ ಅಲ್ಲ,  ಖ್ಯಾತ ಡಾನ್ಸರ್

    Exclusive- ವೀಕೆಂಡ್ ವಿತ್ ರಮೇಶ್ 5 : ಮೊದಲ ಅತಿಥಿ ರಿಷಬ್ ಶೆಟ್ಟಿ ಅಲ್ಲ, ಖ್ಯಾತ ಡಾನ್ಸರ್

    ಜೀ ಕನ್ನಡ ವಾಹಿನಿಯ ಜನಪ್ರಿಯ ಟಾಕ್ ಶೋ ವೀಕೆಂಡ್ ವಿತ್ ರಮೇಶ್ ಸೀಸನ್ 5 (Weekend with Ramesh) ಅತೀ ಶೀಘ್ರದಲ್ಲೇ ಶುರುವಾಗಲಿದೆ. ಮಾರ್ಚ್ 25ರಿಂದ ಪ್ರಸಾರವಾಗಲಿದೆ ಎನ್ನಲಾದ ಈ ಕಾರ್ಯಕ್ರಮದ ಮೊದಲ ಅತಿಥಿಯಾಗಿ ರಿಷಬ್ ಶೆಟ್ಟಿ (Rishabh Shetty) ಬರುತ್ತಾರೆ ಎಂದು ಹೇಳಲಾಗಿತ್ತು. ಈಗಾಗಲೇ ರಿಷಬ್ ಬಗ್ಗೆ ರಮೇಶ್ (Ramesh Arvind) ತಂಡ ಸಂಶೋಧನೆ ನಡೆಸಿದ್ದಾರೆ ಎಂಬ ಮಾಹಿತಿ ಇತ್ತು. ಅಲ್ಲದೇ, ರಿಷಬ್ ಮೊದಲನೇ ಎಪಿಸೋಡ್ ಗಾಗಿ ಚಿತ್ರೀಕರಣದಲ್ಲಿ ಪಾಲ್ಗೊಳ್ಳಲಿದ್ದಾರೆ ಎನ್ನುವ ಸುದ್ದಿಯಿತ್ತು. ಆದರೆ, ಮೊದಲ ಎಪಿಸೋಡಿನಲ್ಲಿ ಬರುವ ಅತಿಥಿ ಬದಲಾಗಿದ್ದಾರೆ.

    ನಿನ್ನೆಯಿಂದ ವೀಕೆಂಡ್ ವಿತ್ ರಮೇಶ್ ಸೀಸನ್ 5ರ ಚಿತ್ರೀಕರಣ ಶುರುವಾಗಿದ್ದು, ಮೊದಲನೇ ಅತಿಥಿಯಾಗಿ ಖ್ಯಾತ ನೃತ್ಯ ನಿರ್ದೇಶಕ, ನಿರ್ದೇಶಕ, ನಟ ಪ್ರಭುದೇವ (Prabhudeva) ಆಗಮಿಸಿದ್ದಾರೆ. ಸೀಸನ್ 5ರ ಮೊದಲ ಅತಿಥಿಯಾಗಿ ಪ್ರಭುದೇವ ಕಾಣಿಸಿಕೊಳ್ಳಲಿದ್ದಾರೆ. ನಿನ್ನೆ ಬೆಂಗಳೂರಿನ ಅಬ್ಬಯ್ಯ ನಾಯ್ಡು ಸ್ಟುಡಿಯೋದಲ್ಲಿ ನಡೆದ ಚಿತ್ರೀಕರಣದಲ್ಲಿ ಪ್ರಭುದೇವ ಪಾಲ್ಗೊಂಡಿದ್ದಾರೆ. ಇದನ್ನೂ ಓದಿ: ಬರ್ತ್‌ಡೇ ಸಂಭ್ರಮದ ಫೋಟೋ ಹಂಚಿಕೊಂಡ ರಾಧಿಕಾ ಪಂಡಿತ್

    ಮೈಸೂರು ಮೂಲದ ಪ್ರಭುದೇವ ಕನ್ನಡ, ತಮಿಳು ಮತ್ತು ಹಿಂದಿ ಸಿನಿಮಾ ರಂಗದಲ್ಲಿ ತಮ್ಮದೇ ಆದ ಛಾಪು ಮೂಡಿಸಿದವರು. ನಿರ್ದೇಶನ, ನಟನೆ, ನೃತ್ಯ ನಿರ್ದೇಶನ, ನಿರ್ಮಾಣ ಹೀಗೆ ಸಿನಿಮಾ ರಂಗದ ಹಲವಾರು ಕ್ಷೇತ್ರಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡವರು. ಪ್ರಭುದೇವ ಅವರ ತಂದೆ, ಸಹೋದರರು ಸಿನಿಮಾ ರಂಗದಲ್ಲೇ ದುಡಿದವರು. ಅಲ್ಲದೇ, ಪ್ರಭುದೇವ ಅವರ ಬದುಕು ವರ್ಣರಂಜಿತವಾದದ್ದು. ಹಾಗಾಗಿ ಸಹಜವಾಗಿಯೇ ಇವರ ಎಪಿಸೋಡ್ ಕುತೂಹಲದಿಂದ ಕೂಡಿರಲಿದೆ.

    ಸೀಸನ್ 5ರಲ್ಲಿ ಕೇವಲ ಸೆಲೆಬ್ರಿಟಿಗಳಿಗೆ ಮಾತ್ರವಲ್ಲ, ಸಾಮಾನ್ಯ ಸಾಧಕರಿಗೂ ಅವಕಾಶ ನೀಡಲಾಗಿದೆ ಎಂದು ಹೇಳಲಾಗುತ್ತಿದೆ. ಕ್ರಿಕೆಟ್, ರಾಜಕಾರಣಿಗಳು, ಸಿನಿಮಾ, ಕಿರುತೆರೆ, ರಂಗಭೂಮಿ ಹೀಗೆ ಬೇರೆ ಬೇರೆ ಕ್ಷೇತ್ರಗಳ ಸಾಧಕರು ಈ ಬಾರಿ ವೀಕೆಂಡ್ ಕುರ್ಚಿಯ ಮೇಲೆ ಕೂತು, ತಮ್ಮ ಕಥೆಯನ್ನು ಹೇಳಿಕೊಳ್ಳಲಿದ್ದಾರೆ. ಎಂದಿನಂತೆ ರಮೇಶ್ ಅರವಿಂದ್ ಅವರ ಮಾತಿಗೆ ಕಿವಿಯಾಗಲಿದ್ದಾರೆ.

  • ಪ್ರಭುದೇವ ನಟನೆಯ `ವೂಲ್ಫ್’ ಚಿತ್ರದಲ್ಲಿ ಪತ್ರಕರ್ತನಾದ ವಸಿಷ್ಠ ಸಿಂಹ

    ಪ್ರಭುದೇವ ನಟನೆಯ `ವೂಲ್ಫ್’ ಚಿತ್ರದಲ್ಲಿ ಪತ್ರಕರ್ತನಾದ ವಸಿಷ್ಠ ಸಿಂಹ

    ಟ ಪ್ರಭುದೇವ (Actor Prabhudeva) ಸದ್ಯ `ವೂಲ್ಫ್’ (Wolf) ಸಿನಿಮಾದಲ್ಲಿ ಬ್ಯುಸಿಯಿದ್ದಾರೆ. ಬಹುನಿರೀಕ್ಷಿತ ಈ ಪ್ಯಾನ್ ಇಂಡಿಯಾ ಸಿನಿಮಾದಲ್ಲಿ ಕನ್ನಡದ ದೈತ್ಯ ಪ್ರತಿಭೆಗಳು ಕೂಡ ಸಾಥ್ ನೀಡಿದ್ದಾರೆ. ಈ ಕುರಿತ ಕಂಪ್ಲಿಟ್ ಡಿಟೈಲ್ಸ್ ಇಲ್ಲಿದೆ.

    ಕನ್ನಡ ನಾಡಿನ ಯುವ ನಿರ್ದೇಶಕ ವಿನೂ ವೆಂಕಟೇಶ್ (Vinoo Venkatesh) ಇದೀಗ ಪ್ರಭುದೇವ ಅವರ 60ನೇ ಚಿತ್ರ `ವೂಲ್ಫ್’ ಸಿನಿಮಾಗೆ ಡೈರೆಕ್ಷನ್ ಮಾಡ್ತಿದ್ದಾರೆ. ಮಿಸ್ಟರಿ ಕಥೆಯನ್ನ ವಿಭಿನ್ನವಾಗಿ ಹೇಳೋಕೆ ಹೊರಟಿದ್ದಾರೆ. ಪ್ರಭುದೇವ ಅವರ ಚಿತ್ರದಲ್ಲಿ ತಾರೆಯರ ದಂಡೇ ಇದೆ. ಸೂಪರ್ ಸ್ಟಾರ್ ಜೊತೆ ಕನ್ನಡದ ಪ್ರತಿಭೆ ವಸಿಷ್ಠ ಸಿಂಹ (Vasista Simha) ಕೂಡ ವಿಶೇಷ ಪಾತ್ರದಲ್ಲಿ ನಟಿಸಿದ್ದಾರೆ.

    ಚಿತ್ರದಲ್ಲಿ ವಸಿಷ್ಠ ಸಿಂಹ ಅವರು ಪತ್ರಕರ್ತನಾಗಿ (Journalist) ಕಾಣಿಸಿಕೊಂಡಿದ್ದಾರೆ. ಇವರ ಪಾತ್ರ ಇಡೀ ಚಿತ್ರಕಥೆಗೆ ಮುಖ್ಯವಾಗಿರುತ್ತದೆ. ಎಂದೂ ಕಾಣಿಸಿಕೊಂಡಿರದ ಪಾತ್ರದಲ್ಲಿ ವಸಿಷ್ಠ ನಟಿಸಿದ್ದಾರೆ. ಇದನ್ನೂ ಓದಿ:ದಿನಕರ್ ತೂಗುದೀಪ್ ನಿರ್ದೇಶನದಲ್ಲಿ ʻರಾಯಲ್ʼ ಆಗಿ ಮಿಂಚಲು ವಿರಾಟ್ ರೆಡಿ

    ʻWOLFʼ ಸಿನಿಮಾದಲ್ಲಿ ನಟ ವಿಜಯ್ ಸೇತುಪತಿ ಒಂದು ಹಾಡನ್ನ ಹಾಡಿದ್ದಾರೆ. ಇದು ವಿಶೇಷವಾಗಿ ಹಾಡಿರುವ ಹಾಡು ಆಗಿದೆ. ಸದ್ಯದಲ್ಲೇ ಸಿನಿಮಾ ಬಗ್ಗೆ ಮತ್ತಷ್ಟು ಸಿಗಲಿದೆ. ಬಹುತೇಕ ಚಿತ್ರೀಕರಣ ಮುಗಿಸಿರುವ ಚಿತ್ರತಂಡ, ಮಾರ್ಚ್ನಲ್ಲಿ ರಿಲೀಸ್ ಮಾಡೋಕೆ ರೆಡಿಯಾಗಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಪ್ರಭುದೇವ ನಟನೆಯ ಕನ್ನಡ ಚಿತ್ರಕ್ಕೆ ವಿಜಯ್ ಸೇತುಪತಿ ಗಾಯಕ

    ಪ್ರಭುದೇವ ನಟನೆಯ ಕನ್ನಡ ಚಿತ್ರಕ್ಕೆ ವಿಜಯ್ ಸೇತುಪತಿ ಗಾಯಕ

    ಸಂದೇಶ್ ಪ್ರೊಡಕ್ಷನ್ಸ್ ಸಂಸ್ಥೆ ಲಾಂಛನದಲ್ಲಿ ರಾಷ್ಟ್ರಪ್ರಶಸ್ತಿ ವಿಜೇತ ನಿರ್ಮಾಪಕ ಸಂದೇಶ್ ನಾಗರಾಜ್(ಎಂ.ಎಲ್.ಸಿ)  ನಿರ್ಮಿಸಿರುವ, ಖ್ಯಾತ ನಟ ಪ್ರಭುದೇವ ನಾಯಕರಾಗಿ ನಟಿಸಿರುವ “wolf” ಚಿತ್ರದ ವಿಶೇಷ ಹಾಡೊಂದನ್ನು ತಮಿಳಿನ ಹೆಸರಾಂತ ನಟ ವಿಜಯ್ ಸೇತುಪತಿ ಹಾಡಿದ್ದಾರೆ. ಅಂಬರೀಶ್ ಈ ಚಿತ್ರದ ಸಂಗೀತ ನಿರ್ದೇಶಕರು.

    ಇತ್ತೀಚೆಗಷ್ಟೇ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಈ ಚಿತ್ರದ ಫಸ್ಟ್  ಲುಕ್ ಬಿಡುಗಡೆ ಮಾಡಿ ಶುಭ ಕೋರಿದ್ದರು.  ವಿನು ವೆಂಕಟೇಶ್  ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿರುವ ಈ ಚಿತ್ರ ಕನ್ನಡ, ತಮಿಳು, ತೆಲುಗು ಹಾಗೂ ಮಲೆಯಾಳಂ ಭಾಷೆಗಳಲ್ಲಿ ಅದ್ದೂರಿಯಾಗಿ ನಿರ್ಮಾಣವಾಗಿದೆ. ಇದನ್ನೂ ಓದಿ: ಪೊಲೀಸ್‌ ಲಾಠಿ ಏಟಿನಿಂದ ತಪ್ಪಿಸಿಕೊಳ್ಳಲು ರ‍್ಯಾಪರ್‌ನನ್ನು ತಳ್ಳಿ ಬೀಳಿಸಿದ ಫ್ಯಾನ್‌

    ಪ್ರಭುದೇವ, ಅಂಜು ಕುರಿಯನ್, ಲಕ್ಷ್ಮೀ ರೈ, ಅನಸೂಯ(ಪುಷ್ಪ ಖ್ಯಾತಿ) ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ಮೊನ್ನೆಯಷ್ಟೇ ಈ ಸಿನಿಮಾದ ಫಸ್ಟ್ ಲುಕ್ ಅನ್ನು ಸ್ಯಾಂಡಲ್ ವುಡ್ ನಟ ಶಿವರಾಜ್ ಕುಮಾರ್ ಲೋಕಾರ್ಪಣೆ ಮಾಡಿದ್ದರು.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಪ್ರಭುದೇವ ಅಭಿನಯದ ‘wolf’ ಸಿನಿಮಾದ ಶೂಟಿಂಗ್ ಮುಕ್ತಾಯ

    ಪ್ರಭುದೇವ ಅಭಿನಯದ ‘wolf’ ಸಿನಿಮಾದ ಶೂಟಿಂಗ್ ಮುಕ್ತಾಯ

    ನ್ನಡ ಚಿತ್ರರಂಗಕ್ಕೆ ಸದಭಿರುಚಿ ಚಿತ್ರಗಳನ್ನು ನೀಡಿರುವ ಸಂದೇಶ್ ಪ್ರೊಡಕ್ಷನ್ಸ್ ಸಂಸ್ಥೆ ಲಾಂಛನದಲ್ಲಿ ರಾಷ್ಟ್ರಪ್ರಶಸ್ತಿ ವಿಜೇತ ನಿರ್ಮಾಪಕ ಸಂದೇಶ್ ನಾಗರಾಜ್(ಎಂ.ಎಲ್.ಸಿ)  ನಿರ್ಮಸಿರುವ, ಇಂಡಿಯನ್ ಮೈಕಲ್ ಜಾಕ್ಸನ್ ಪ್ರಭುದೇವ (Prabhudeva) ನಾಯಕರಾಗಿ ನಟಿಸಿರುವ “wolf” ಚಿತ್ರದ ಚಿತ್ರೀಕರಣ (shooting) ಮುಕ್ತಾಯವಾಗಿದೆ. ಬಹುಕೋಟಿ ವೆಚ್ಚದಲ್ಲಿ ಅದ್ದೂರಿಯಾಗಿ ನಿರ್ಮಾಣವಾಗಿರುವ ಈ ಚಿತ್ರಕ್ಕೆ ಪಾಂಡಿಚೇರಿ, ಚೆನೈ, ಬೆಂಗಳೂರು, ಅಂಡಮಾನ್, ನಿಕೋಬಾರ್ ಮುಂತಾದ ಕಡೆ 65 ದಿನಗಳ ಚಿತ್ರೀಕರಣ ನಡೆದಿದೆ.

    ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ವಿನು ವೆಂಕಟೇಶ್ (Vinu Venkatesh) ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಕನ್ನಡ, ತಮಿಳು, ತೆಲುಗು ಹಾಗೂ ಮಲೆಯಾಳಂ ಭಾಷೆಗಳಲ್ಲಿ ಈ ಚಿತ್ರ ನಿರ್ಮಾಣವಾಗಿದೆ. ಪ್ರಭುದೇವ, ಅಂಜು ಕುರಿಯನ್, ಲಕ್ಷ್ಮೀ ರೈ, ಅನಸೂಯ(ಪುಷ್ಪ ಖ್ಯಾತಿ) ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ಇದನ್ನೂ ಓದಿ: ಬಾಯ್‌ಫ್ರೆಂಡ್ ಜಾಕಿ ಭಗ್ನಾನಿ ಬರ್ತ್‌ಡೇಗೆ ನಟಿ ರಾಕುಲ್ ಲವ್ಲಿ ವಿಶ್

    ಅಂಬರೀಶ್ ಅವರ ಸಂಗೀತ ನಿರ್ದೇಶನವಿರುವ ಈ ಚಿತ್ರಕ್ಕೆ ಅರುಳ್ ವಿನ್ಸೆಂಟ್ ಅವರ ಛಾಯಾಗ್ರಹಣವಿದೆ. ಲಾರೆನ್ಸ್ ಕಿಶೋರ್ ಸಂಕಲನ, ಪ್ರದೀಪ್ ದಿನೇಶ್ ಸಾಹಸ ನಿರ್ದೇಶನ, ಮಣಿ ಮೌಳಿ ಕಲಾ ನಿರ್ದೇಶನ ಹಾಗೂ ಗಣೇಶ್, ಶ್ರೀಧರ್, ಭೂಪತಿ ರಾಜ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ. ಪ್ತಸಾದ್ ನಿರ್ಮಾಣ ಮೇಲ್ವಿಚಾರಣೆ ಹಾಗೂ ಶಂಕರ್ ಲಿಂಗಂ, ಮೈಸೂರು ಸುರೇಶ್ ನಿರ್ಮಾಣ ನಿರ್ವಹಣೆ “wolf” ಚಿತ್ರದ ನಿರ್ಮಾಣ ನಿರ್ವಾಹಕರು.

    Live Tv
    [brid partner=56869869 player=32851 video=960834 autoplay=true]

  • ಪುನೀತ್ ಪರ್ವ ಕಾರ್ಯಕ್ರಮದಲ್ಲಿ ರಮ್ಯಾ, ಪ್ರಭುದೇವ ಡಾನ್ಸ್

    ಪುನೀತ್ ಪರ್ವ ಕಾರ್ಯಕ್ರಮದಲ್ಲಿ ರಮ್ಯಾ, ಪ್ರಭುದೇವ ಡಾನ್ಸ್

    ಇಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿರುವ ಪುನೀತ್ ಪರ್ವ ಕಾರ್ಯಕ್ರಮದಲ್ಲಿ ರಮ್ಯಾ (Ramya), ಪ್ರಭುದೇವ (Prabhudeva) ಸೇರಿದಂತೆ ಅನೇಕ ತಾರೆಯರು ನೃತ್ಯ (Dance) ಮಾಡಲಿದ್ದಾರೆ. ಪುನೀತ್ ರಾಜ್ ಕುಮಾರ್ ನಟನೆಯ ಸಿನಿಮಾಗಳ ಗೀತೆಗಳಿಗೆ ತಾರೆಯರು ಹೆಜ್ಜೆ ಹಾಕಲಿದ್ದಾರೆ. ಈಗಾಗಲೇ ಅರಮನೆ ಮೈದಾನ ಸಿದ್ಧಗೊಂಡಿದ್ದು, ಕನ್ನಡ ಸಿನಿಮಾ ರಂಗದ ಬಹುತೇಕ ತಾರೆಯರು ಈ ಕಾರ್ಯಕ್ರಮದಲ್ಲಿ ಭಾಗಿ ಆಗುತ್ತಿದ್ದಾರೆ.

    ಖ್ಯಾತಗಾಯಕರಾದ ವಿಜಯ್ ಪ್ರಕಾಶ್, ಗುರುಕಿರಣ್ ಸೇರಿದಂತೆ ಅನೇಕ ಗಾಯಕರು ಈ ಕಾರ್ಯಕ್ರಮದಲ್ಲಿ ಪುನೀತ್ ನಟನೆಯ ಹಾಡುಗಳನ್ನು ಹೇಳಲಿದ್ದಾರೆ. ಐದುನೂರಕ್ಕೂ ಹೆಚ್ಚು ಗಣ್ಯರು ಈ ಕಾರ್ಯಕ್ರಮದಲ್ಲಿ ಭಾಗಿ ಆಗುವ ಸಾಧ್ಯತೆ ಇದೆ. ಪುನೀತ್ ರಾಜ್ ಕುಮಾರ್ ಅವರನ್ನು ಮತ್ತೆ ಮತ್ತೆ ನೆನಪಿಸಿಕೊಳ್ಳುವ ಬಹೃತ್ ಸಮಾರಂಭ ಇದಾಗಿದೆ. ಇದನ್ನೂ ಓದಿ:ಆಮದು ಮಾಡಿಕೊಂಡ ಧರ್ಮಗಳು ಎಂದು ಚೇತನ್ ಮತ್ತೆ ಕಿಡಿ

    ಬೆಂಗಳೂರಿನ ಅರಮನೆ ಮೈದಾನದಲ್ಲಿ ಇಂದು ಪುನೀತ್ ರಾಜ್ ಕುಮಾರ್ (Puneeth Rajkumar) ನೆನಪಿನಲ್ಲಿ ‘ಪುನೀತ್ ಪರ್ವ’ (Puneeth Parva) ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ. ಪುನೀತ್ ನಟನೆಯ ಕಟ್ಟಕಡೆಯ ಡಾಕ್ಯುಮೆಂಟರಿ ಮಾದರಿಯ ಸಿನಿಮಾದ ಪ್ರಿ ರಿಲೀಸ್ ಇವೆಂಟ್ ಕೂಡ ಇದಾಗಿದ್ದು, ಭಾರತೀಯ ಸಿನಿಮಾ ರಂಗದ ಅನೇಕ ದಿಗ್ಗಜರು ಸಮಾರಂಭದಲ್ಲಿ ಭಾಗಿ ಆಗುತ್ತಿದ್ದಾರೆ. ಅಲ್ಲದೇ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಆಹ್ವಾನ ನೀಡಲಾಗಿದೆ.

    ಸಿನಿಮಾ ಮತ್ತು ರಾಜಕೀಯ ಕ್ಷೇತ್ರದ ಗಣ್ಯರು ಮಾತ್ರವಲ್ಲ, 40 ಸಾವಿರಕ್ಕೂ ಅಧಿಕ ಅಭಿಮಾನಿಗಳು ಕೂಡ ಈ ಕಾರ್ಯಕ್ರಮಕ್ಕೆ ಸಾಕ್ಷಿ ಆಗಿರುವುದರಿಂದ ಪೊಲೀಸ್ ಬಂದೋಬಸ್ತ್ ಕೂಡ ಮಾಡಿಕೊಳ್ಳಲಾಗಿದೆ. ಸಂಜೆ 6 ಗಂಟೆಗೆ ಈ ಕಾರ್ಯಕ್ರಮ ನಡೆಯಲಿದ್ದು, ಸಮಾರಂಭವು ಸರಾಗವಾಗಿ ನಡೆಯುವಂತೆ ನೋಡಿಕೊಳ್ಳುವುದಕ್ಕಾಗಿ ಬೆಂಗಳೂರು ಪೊಲೀಸರು ಭಾರೀ ಸಿದ್ದತೆಯನ್ನೇ ಮಾಡಿಕೊಂಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]