Tag: pradhan mantri awas yojana

  • ಗ್ಯಾಂಗ್‌ಸ್ಟರ್ ಅತೀಕ್ ಜಮೀನಿನಲ್ಲಿ ಮನೆಗಳನ್ನು ನಿರ್ಮಿಸಿ ಬಡವರಿಗೆ ಹಂಚಿದ ಯೋಗಿ ಆದಿತ್ಯನಾಥ್

    ಗ್ಯಾಂಗ್‌ಸ್ಟರ್ ಅತೀಕ್ ಜಮೀನಿನಲ್ಲಿ ಮನೆಗಳನ್ನು ನಿರ್ಮಿಸಿ ಬಡವರಿಗೆ ಹಂಚಿದ ಯೋಗಿ ಆದಿತ್ಯನಾಥ್

    ಲಕ್ನೋ: ಕಳೆದ 2 ತಿಂಗಳ ಹಿಂದೆ ಹತ್ಯೆಯಾಗಿದ್ದ ಗ್ಯಾಂಗ್‌ಸ್ಟರ್ ಹಾಗೂ ರಾಜಕಾರಣಿ ಅತೀಕ್ ಅಹ್ಮದ್‌ನ (Atiq Ahmed) ಜಮೀನನ್ನು ಸರ್ಕಾರ ವಶಪಡಿಸಿಕೊಂಡಿತ್ತು. ಇದೀಗ ಆ ಭೂಮಿಯಲ್ಲಿ ಮನೆಗಳನ್ನು ನಿರ್ಮಿಸಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Yogi Adityanath) ಬಡವರಿಗೆ ಹಂಚಿದ್ದಾರೆ.

    ಪ್ರಯಾಗ್‌ರಾಜ್ (Prayagraj) ಬಳಿಯ ಲುಕರ್ಗಂಜ್ ಬಳಿ ಸ್ವಾಧೀನಪಡಿಸಿಕೊಂಡ 1731 ಚ.ಮೀ ಭೂಮಿಯಲ್ಲಿ ಸಿಎಂ ಆದಿತ್ಯನಾಥ್ 2021ರ ಡಿಸೆಂಬರ್ 26ರಂದು ವಸತಿಯೋಜನೆಗೆ ಶಂಕು ಸ್ಥಾಪನೆ ಮಾಡಿದ್ದರು. ಬಳಿಕ ಭೂಮಿಯಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆ (Pradhan Mantri Awas Yojana) ಅಡಿಯಲ್ಲಿ 2 ಬ್ಲಾಕ್‌ಗಳಲ್ಲಿ 76 ಫ್ಲಾಟ್‌ಗಳನ್ನು ನಿರ್ಮಾಣ ಮಾಡಲಾಗಿದೆ.

    ಈ ತಿಂಗಳ ಆರಂಭದಲ್ಲಿ ಲಾಟರಿ ಮೂಲಕ ಫ್ಲಾಟ್‌ಗಳನ್ನು ಹಂಚಿಕೆ ಮಾಡಲಾಗಿದೆ. ಶುಕ್ರವಾರ ಆದಿತ್ಯನಾಥ್ ಅವರು 76 ಫ್ಲಾಟ್‌ಗಳ ಕೀಲಿಗಳನ್ನು ಬಡವರಿಗೆ ಹಂಚಿಕೆ ಮಾಡಿದ್ದಾರೆ. ಇದನ್ನೂ ಓದಿ: 4 ತಿಂಗಳಲ್ಲಿ ಮೂರನೇ ಬಾರಿಗೆ ಸಂಪುಟಕ್ಕೆ ಸರ್ಜರಿ- ಕೇಜ್ರಿವಾಲ್ ಬಳಿಕ ಅತಿಶಿ ಪ್ರಭಾವಿ ಸಚಿವೆ

    ಅಧಿಕಾರಿಗಳ ಪ್ರಕಾರ ಪ್ರತಿ ಫ್ಲಾಟ್‌ಗಳು 41 ಚ.ಮೀ ವಿಸ್ತೀರ್ಣವನ್ನು ಹೊಂದಿದೆ. ಮನೆಗಳಲ್ಲಿ 2 ಕೊಠಡಿಗಳು, ಅಡುಗೆಮನೆ, ಶೌಚಾಲಯ ಒಳಗೊಂಡಿದೆ. ಈ ಫ್ಲಾಟ್‌ಗಳಿಗಾಗಿ 6,000 ಕ್ಕೂ ಹೆಚ್ಚು ಜನರು ಪ್ರಯಾಗ್‌ರಾಜ್ ಅಭಿವೃದ್ಧಿ ಪ್ರಾಧಿಕಾರಕ್ಕೆ ಅರ್ಜಿ ಸಲ್ಲಿಸಿದ್ದರು. ಇದರಲ್ಲಿ 1,590 ಜನರು ಲಾಟರಿ ಪ್ರಕ್ರಿಯೆಯಲ್ಲಿ ಭಾಗವಹಿಸಲು ಅರ್ಹರಾಗಿದ್ದರು.

    2017ಕ್ಕೂ ಮೊದಲು ಬಡವರು, ಉದ್ಯಮಿಗಳು ಅಥವಾ ಸರ್ಕಾರಿ ಸಂಸ್ಥೆಗಳ ಭೂಮಿಯನ್ನು ಯಾವುದೇ ಮಾಫಿಯಾಗಳು ವಶಪಡಿಸಿಕೊಳ್ಳಬಹುದಾಗಿತ್ತು. ಆ ಕಾಲದಲ್ಲಿ ಬಡವರು ಅಸಹಾಯಕರಾಗಿ ನೋಡುತ್ತಿದ್ದರು. ಇಂದು ನಾವು ಅದೇ ಭೂಮಿಯಲ್ಲಿ ಬಡವರಿಗೆ ಮನೆಗಳನ್ನು ನಿರ್ಮಿಸುತ್ತಿದ್ದೇವೆ. ಈ ಮಾಫಿಯಾಗಳಿಂದ ಭೂಮಿಯನ್ನು ವಶಪಡಿಸಿಕೊಂಡಿರುವುದು ದೊಡ್ಡ ಸಾಧನೆಯಾಗಿದೆ ಎಂದು ಆದಿತ್ಯನಾಥ್ ಸಮಾರಂಭದಲ್ಲಿ ತಿಳಿಸಿದ್ದಾರೆ.

    100 ಕ್ಕೂ ಹೆಚ್ಚು ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿದ್ದ ಅತೀಕ್ ಹಾಗೂ ಆತನ ಸಹೋದರ ಅಶ್ರಫ್ ಅಹ್ಮದ್ ಈ ವರ್ಷದ ಏಪ್ರಿಲ್‌ನಲ್ಲಿ ಹತ್ಯೆಯಾದರು. ವೈದ್ಯಕೀಯ ತಪಾಸಣೆಗೆಂದು ಪ್ರಯಾಗ್‌ರಾಜ್‌ಗೆ ಕರೆದುಕೊಂಡು ಹೋಗುತ್ತಿದ್ದ ವೇಳೆ ಪತ್ರಕರ್ತರ ಸೋಗಿನಲ್ಲಿ ಬಂದಿದ್ದ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದರು. ಹತ್ಯೆಯ ವೇಳೆ ಅವರು ಪೊಲೀಸರ ವಶದಲ್ಲೇ ಇದ್ದರು. ಘಟನೆಗೂ ಕೆಲ ದಿನಗಳ ಮುನ್ನ ಅತೀಕ್ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ. ಇದನ್ನೂ ಓದಿ: ಕೇಂದ್ರದ ಆದೇಶವನ್ನು ಪಾಲಿಸಿ – ಟ್ವಿಟ್ಟರ್‌ ಅರ್ಜಿ ವಜಾ, 50 ಲಕ್ಷ ದಂಡ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಪಿಎಂ ಆವಾಸ್ ಯೋಜನೆಯ ಹಣ ಪಡೆದು 4 ಮಹಿಳೆಯರು ಪ್ರೇಮಿಗಳೊಂದಿಗೆ ಪಲಾಯನ

    ಪಿಎಂ ಆವಾಸ್ ಯೋಜನೆಯ ಹಣ ಪಡೆದು 4 ಮಹಿಳೆಯರು ಪ್ರೇಮಿಗಳೊಂದಿಗೆ ಪಲಾಯನ

    ಲಕ್ನೋ: ಪ್ರಧಾನ ಮಂತಿ ಆವಾಸ್ ಯೋಜನೆಯ (PMAY) ಅಡಿಯಲ್ಲಿ ಹಣವನ್ನು (Money) ಪಡೆದ ನಾಲ್ವರು ವಿವಾಹಿತ ಮಹಿಳೆಯರು (Women) ತಮ್ಮ ಪತಿಯರನ್ನು ಬಿಟ್ಟು ಪ್ರೇಮಿಗಳೊಂದಿಗೆ (Lovers) ಓಡಿಹೋಗಿರುವ ವಿಚಿತ್ರ ಘಟನೆ ಉತ್ತರ ಪ್ರದೇಶದಲ್ಲಿ (Uttar Pradesh) ನಡೆದಿದೆ.

    ಪಿಎಂಎವೈ ಯೋಜನೆ ಕೇಂದ್ರ ಸರ್ಕಾರದ ಪ್ರಮುಖ ಯೋಜನೆಯಾಗಿದ್ದು, ಇದು ಬಡವರಿಗೆ ನಗರ ವಸತಿ ಕೊರತೆಯನ್ನು ಪರಿಹರಿಸುವ ಗುರಿಯನ್ನು ಹೊಂದಿದೆ. ಆರ್ಥಿಕವಾಗಿ ದುರ್ಬಲರಾದವರು, ಕಡಿಮೆ ಹಾಗೂ ಮಧ್ಯಮ ಆದಾಯದ ಗುಂಪುಗಳಿಗೆ ಸೇರಿದವರಿಗೆ ಈ ಯೋಜನೆ ನಗದು ರೂಪದಲ್ಲಿ ಸಹಾಯ ಮಾಡುತ್ತದೆ. ಇದನ್ನು ಬಳಸಿಕೊಂಡು ಜನರು ಮನೆಗಳನ್ನು ಹೊಂದಬಹುದಾಗಿದೆ.

    ಪಿಎಂಎವೈ ಅಡಿಯಲ್ಲಿ ಕುಟುಂಬದ ಒಬ್ಬ ಮಹಿಳಾ ಸದಸ್ಯೆ ಮನೆಯ ಮಾಲಕಿ ಅಥವಾ ಸಹ-ಮಾಲಕಿಯಾಗಿರುವುದು ಕಡ್ಡಾಯವಾಗಿದೆ. ವರದಿಗಳ ಪ್ರಕಾರ ಈ ಯೋಜನೆಯ ಫಲಾನುಭವಿಗಳಾದ ನಾಲ್ವರು ಮಹಿಳೆಯರು ತಮ್ಮ ಖಾತೆಗೆ 50,000 ರೂ. ಅನುದಾನ ಬಂದ ತಕ್ಷಣವೇ ತಮ್ಮ ಪತಿಯರನ್ನು ತೊರೆದು ಓಡಿ ಹೋಗಿದ್ದಾರೆ.

    ಈ ಘಟನೆಯ ಪರಿಣಾಮವಾಗಿ ಮಹಿಳೆಯರ ಗಂಡಂದಿರು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಒಂದೆಡೆ ಮನೆಯ ನಿರ್ಮಾಣದ ಕಾಮಗಾರಿ ಇನ್ನೂ ಪ್ರಾರಂಭವಾಗದ ಕಾರಣ ಜಿಲ್ಲಾ ನಗರಾಭಿವೃದ್ಧಿ ಸಂಸ್ಥೆ (DUDA) ಎಚ್ಚರಿಕೆಯನ್ನು ನೀಡುವ ಭೀತಿಯಲ್ಲಿದ್ದರೆ, ಇನ್ನೊಂದೆಡೆ ತಮ್ಮ ಪತ್ನಿಯರ ಖಾತೆಗಳಿಗೆ ಮುಂದಿನ ಕಂತಿನ ಹಣ ವರ್ಗಾವಣೆಯಾಗುವ ಆತಂಕದಲ್ಲಿದ್ದಾರೆ.

    ಇದೀಗ ಗೊಂದಲದಲ್ಲಿರುವ ಪತಿಯರು ಏನು ಮಾಡಬೇಕೆಂದು ತೋಚದೇ ಓಡಿ ಹೋಗಿರುವ ಪತ್ನಿಯರ ಖಾತೆಗೆ ವರ್ಗಾವಣೆಯಾಗಬಹುದಾದ ಮುಂದಿನ ಕಂತನ್ನು ಕಳುಹಿಸದಂತೆ ಡಿಯುಡಿಎಯ ಯೋಜನಾಧಿಕಾರಿಗಳಿಗೆ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಬೆಂಗಳೂರು ಚಿತ್ರೋತ್ಸವಕ್ಕೆ ರೂ. 4.49 ಕೋಟಿ ಮೀಸಲು : ಆರ್.ಅಶೋಕ್

    ನಗರ ಪಂಚಾಯಿತಿ ಬೆಲ್ಹಾರ, ಬಂಕಿ, ಜೈದ್‌ಪುರ ಹಾಗೂ ಸಿದೌರ್‌ನ ನಾಲ್ವರು ಮಹಿಳೆಯರು ಯೋಜನೆಯ ಮೊದಲ ಕಂತಿನ ಹಣವನ್ನು ಪಡೆದಿದ್ದು, ಬಳಿಕ ತಮ್ಮ ಪ್ರೇಮಿಗಳೊಂದಿಗೆ ಓಡಿಹೋಗಿದ್ದಾರೆ. ಫಲಾನುಭವಿಗಳ ಮನೆಗಳ ನಿರ್ಮಾಣ ಕಾಮಗಾರಿ ಆರಂಭವಾಗದೇ ಹೋಗಿರುವ ಹಿನ್ನೆಲೆ ಈ ವಿಚಿತ್ರ ಪ್ರಕರಣ ಅಧಿಕಾರಿಗಳ ಗಮನಕ್ಕೆ ಬಂದಿದೆ.

    ಕುಟುಂಬಗಳಿಗೆ ಹಣ ವರ್ಗಾವಣೆಯಾಗಿದ್ದರೂ ಮನೆ ನಿರ್ಮಾಣ ಇನ್ನೂ ಪ್ರಾರಂಭವಾಗಿಲ್ಲ ಎಂಬ ಕಾರಣಕ್ಕೆ ದುಡಾದ ಯೋಜನಾಧಿಕಾರಿ ಸೌರಭ್ ತ್ರಿಪಾಠಿ ನೋಟಿಸ್ ಕಳುಹಿಸಿ ತಕ್ಷಣವೇ ಮನೆ ನಿರ್ಮಾಣ ಕಾಮಗಾರಿ ಪ್ರಾರಂಭಿಸುವಂತೆ ಆದೇಶ ನೀಡಿದ್ದರು. ಕೊನೆಗೆ ಓಡಿಹೋದ ಮಹಿಳೆಯರ ಪತಿಯರು ಸರ್ಕಾರಿ ಕಚೇರಿಗೆ ತೆರಳಿ ನಡೆದಿರುವ ಘಟನೆಯನ್ನು ವಿವರಿಸಿದ್ದಾರೆ ಹಾಗೂ 2ನೇ ಕಂತು ಜಮಾ ಮಾಡದಂತೆ ಕೇಳಿಕೊಂಡಿದ್ದಾರೆ.

    ಇದೀಗ ಓಡಿಹೋಗಿರುವ ಮಹಿಳೆಯರಿಂದ ಹಣವನ್ನು ವಸೂಲಿ ಮಾಡುವುದು ಹೇಗೆ ಎಂದು ಜಿಲ್ಲಾಡಳಿತದ ಅಧಿಕಾರಿಗಳು ತಲೆಕೆಡಿಸಿಕೊಂಡಿದ್ದಾರೆ. ಆದರೂ ಪ್ರತಿ ಫಲಾನುಭವಿಗಳಿಂದಲೂ ಹಣವನ್ನು ಹಿಂಪಡೆಯಲು ಇಲಾಖೆ ಪ್ರಯತ್ನಿಸುತ್ತಿದೆ ಎಂದು ತ್ರಿಪಾಠಿ ತಿಳಿಸಿದ್ದಾರೆ. ಇದನ್ನೂ ಓದಿ: ಭಾರತವನ್ನೂ ಟಾರ್ಗೆಟ್‌ ಮಾಡಿದೆ ಚೀನಾದ ಬೇಹುಗಾರಿಕಾ ಬಲೂನ್‌

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • Budget 2023: ಮನೆ ಕಟ್ಟೋರಿಗೆ ಗುಡ್‌ ನ್ಯೂಸ್‌ – ಪ್ರಧಾನಮಂತ್ರಿ ಆವಾಸ್ ಯೋಜನೆಗಾಗಿ 79,000 ಕೋಟಿ ಅನುದಾನ

    Budget 2023: ಮನೆ ಕಟ್ಟೋರಿಗೆ ಗುಡ್‌ ನ್ಯೂಸ್‌ – ಪ್ರಧಾನಮಂತ್ರಿ ಆವಾಸ್ ಯೋಜನೆಗಾಗಿ 79,000 ಕೋಟಿ ಅನುದಾನ

    ನವದೆಹಲಿ: ಮನೆ ಕಟ್ಟೋರಿಗೆ ಕೇಂದ್ರ ಸರ್ಕಾರ ಬಜೆಟ್ ಮೂಲಕ ಗುಡ್‌ನ್ಯೂಸ್ ಕೊಟ್ಟಿದೆ. ಪ್ರಧಾನಮಂತ್ರಿ ಆವಾಸ್ ಯೋಜನೆಗಾಗಿ (Pradhan Mantri Awas Yojana) 79 ಸಾವಿರ ಕೋಟಿ ಅನುದಾನ ಘೋಷಿಸಿದೆ.

    ಬುಧವಾರ 2023-24ನೇ ಸಾಲಿನ ಬಜೆಟ್‌ (Union Budget 2023) ಮಂಡಿಸಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ (Nirmala Sitharaman) ಅವರು, ಪ್ರಧಾನಮಂತ್ರಿ ಆವಾಸ್ ಯೋಜನೆಗಾಗಿ (PMAY) 79 ಸಾವಿರ ಕೋಟಿ ಅನುದಾನ ಮೀಸಲಿಡಲಾಗಿದೆ. ಇದು ಕಳೆದ ವರ್ಷದ ಅನುದಾನಕ್ಕೆ ಹೋಲಿಸಿದರೆ ಶೇಕಡಾ 66ರಷ್ಟು ಹೆಚ್ಚು. ಈ ಯೋಜನೆಯಡಿ 80 ಲಕ್ಷ ಮಂದಿಗೆ ಅನುಕೂಲವಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: Union Budget 2023: ಎಲ್ಲಾ ರಾಜ್ಯಗಳಲ್ಲೂ ʼಯೂನಿಟಿ ಮಾಲ್‌ʼ

    ಕಳೆದ ಬಜೆಟ್‌ನಲ್ಲಿ ಎಲ್ಲರಿಗೂ ಮನೆ ಎಂದು ನಿರ್ಮಲಾ ಸೀತಾರಾಮನ್‌ ಅವರು ಹೇಳಿದ್ದರು. ಪ್ರಧಾನಮಂತ್ರಿ ಆವಾಸ್‌ ಯೋಜನೆಯಡಿ 84 ಲಕ್ಷ ಮನೆಗಳನ್ನು ಪೂರ್ಣಗೊಳಿಸಲು ಕಳೆದ ವರ್ಷದ ಬಜೆಟ್‌ನಲ್ಲಿ ಸಚಿವರು 48,000 ಕೋಟಿ ಮೀಸಲಿಟ್ಟಿದ್ದರು. ಪ್ರಸ್ತುತ ಬಜೆಟ್‌ನಲ್ಲಿ ಈ ಯೋಜನೆಗಾಗಿ ಸುಮಾರು ಶೇ.65 ಹೆಚ್ಚಿನ ಹಣವನ್ನು ಮೀಸಲಿಡಲಾಗಿದೆ. ಇದನ್ನೂ ಓದಿ: ಭದ್ರಾ ಮೇಲ್ದಂಡೆ ಯೋಜನೆಗೆ ಬಜೆಟ್‍ನಲ್ಲಿ ಬಂಪರ್ – ಏನಿದು ಯೋಜನೆ? ಯಾರಿಗೆಲ್ಲ ಲಾಭ?

    ಪ್ರಧಾನಮಂತ್ರಿ ಆವಾಸ್ ಯೋಜನೆಯು ಕೇಂದ್ರ ಸರ್ಕಾರದ ಯೋಜನೆಯಾಗಿದೆ. ಇದು ಸಮಾಜದ ದುರ್ಬಲ ವರ್ಗಗಳಿಗೆ (EWS/LIG and MIG) ಕೈಗೆಟುಕುವ ದರದಲ್ಲಿ ವಸತಿ ಒದಗಿಸುವ ಗುರಿ ಹೊಂದಿದೆ. ಇದನ್ನು 2015 ರಲ್ಲಿ ಪ್ರಾರಂಭಿಸಲಾಯಿತು. ಇದನ್ನೂ ಓದಿ: ಜಾತ್ರೆಯಲ್ಲಿ ಬಾಂಬೆ, ಕೋಲ್ಕತ್ತಾ ತೋರಿಸುವ ರೀತಿ ಬಜೆಟ್: ಸಿದ್ದರಾಮಯ್ಯ ವಾಗ್ದಾಳಿ

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಪಿಎಂ ಆವಾಸ್ ಯೋಜನೆಯಲ್ಲಿ ರಾಜ್ಯಕ್ಕೆ ಅನುದಾನ ಕಡಿತ – ಬಿಜೆಪಿಗೆ ವೋಟ್ ಹಾಕಿದ ತಪ್ಪಿಗೆ ಈ ಶಿಕ್ಷೆಯೇ?: ದಿನೇಶ್ ಗುಂಡೂರಾವ್

    ಪಿಎಂ ಆವಾಸ್ ಯೋಜನೆಯಲ್ಲಿ ರಾಜ್ಯಕ್ಕೆ ಅನುದಾನ ಕಡಿತ – ಬಿಜೆಪಿಗೆ ವೋಟ್ ಹಾಕಿದ ತಪ್ಪಿಗೆ ಈ ಶಿಕ್ಷೆಯೇ?: ದಿನೇಶ್ ಗುಂಡೂರಾವ್

    ಬೆಂಗಳೂರು: ಪಿಎಂ ಆವಾಸ್ ಯೋಜನೆಯಲ್ಲಿ ನೆರೆಯ ಆಂಧ್ರ, ತಮಿಳುನಾಡು, ಮಹಾರಾಷ್ಟ್ರಗಳಿಗೆ ಅನುದಾನ ಹೆಚ್ಚಳವಾಗಿದೆ. ಆದರೆ ಕರ್ನಾಟಕಕ್ಕೆ ಅರ್ಧದಷ್ಟು ಅನುದಾನ ಕಡಿತವಾಗಿದೆ. ಕೇಂದ್ರದಿಂದ ಕರ್ನಾಟಕಕ್ಕೆ ಯಾಕೆ ಈ ತಾರತಮ್ಯ? ರಾಜ್ಯದ ಜನರು ಬಿಜೆಪಿಗೆ ವೋಟ್‌ ಹಾಕಿದ ತಪ್ಪಿಗೆ ಈ ಶಿಕ್ಷೆಯೇ ಎಂದು ಕೇಂದ್ರ ಸರ್ಕಾರದ ವಿರುದ್ಧ ದಿನೇಶ್ ಗುಂಡೂರಾವ್ ಸರಣಿ ಟ್ವೀಟ್ ಮೂಲಕ ವಾಗ್ದಾಳಿ ನಡೆಸಿದ್ದಾರೆ.

    ಟ್ವೀಟ್‍ನಲ್ಲಿ ಏನಿದೆ?
    ಜಿಎಸ್‍ಟಿ ಪರಿಹಾರದಲ್ಲೂ ರಾಜ್ಯಕ್ಕೆ ಅನ್ಯಾಯ. ಜಿಎಸ್‍ಟಿ ಬಾಕಿಯಲ್ಲೂ ಅನ್ಯಾಯ. 5,495 ಕೋಟಿ ರೂ. ವಿಶೇಷ ಅನುದಾನದಲ್ಲೂ ರಾಜ್ಯಕ್ಕೆ ಅನ್ಯಾಯ. ಈಗ ಪಿಎಂ ಆವಾಸ್ ಯೋಜನೆಯ ಅನುದಾನದಲ್ಲೂ ಅನ್ಯಾಯ. ಬಿಜೆಪಿಯ 25 ಸಂಸದರನ್ನು ಆಯ್ಕೆ ಮಾಡಿದ ರಾಜ್ಯದ ಜನರಿಗೆ ಇದೇನಾ ಪ್ರತಿಫಲ? ಬಿಜೆಪಿಯವರೇ ಡಬಲ್ ಇಂಜಿನ್ ಸರ್ಕಾರದ ಸ್ವರ್ಗ ಸೃಷ್ಟಿಯೆಂದರೆ ರಾಜ್ಯಕ್ಕೆ ಅನ್ಯಾಯವೆಸಗುವುದೇ? ಇದನ್ನೂ ಓದಿ: ಸಂಪಾಜೆ ಘಾಟ್‌ ರಸ್ತೆಯಲ್ಲಿ ನಾಳೆಯಿಂದ ಎಲ್ಲ ವಾಹನಗಳ ಸಂಚಾರಕ್ಕೆ ಅನುಮತಿ: ಸಿಸಿ ಪಾಟೀಲ್‌

    ಪಿಎಂ ಆವಾಸ್ ಯೋಜನೆಯಲ್ಲಿ ನೆರೆಯ ಆಂಧ್ರ, ತಮಿಳುನಾಡು, ಮಹಾರಾಷ್ಟ್ರಗಳಿಗೆ ಅನುದಾನ ಹೆಚ್ಚಳವಾಗಿದೆ. ಆದರೆ ಕರ್ನಾಟಕಕ್ಕೆ ಅರ್ಧದಷ್ಟು ಅನುದಾನ ಕಡಿತವಾಗಿದೆ. ಕೇಂದ್ರದಿಂದ ಕರ್ನಾಟಕಕ್ಕೆ ಯಾಕೆ ಈ ತಾರತಮ್ಯ? ರಾಜ್ಯದ ಜನರು ಬಿಜೆಪಿಗೆ ವೋಟ್ ಹಾಕಿದ ತಪ್ಪಿಗೆ ಈ ಶಿಕ್ಷೆಯೇ? ಅಥವಾ ರಾಜ್ಯದ ಜನ ಹೇಗಿದ್ದರೂ ಕೇಳುವುದಿಲ್ಲ ಎಂಬ ಉದಾಸೀನವೇ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ದಂತಚೋರರ ಬೆನ್ನಿಗೆ ನಿಂತ್ರಾ ಪ್ರಜ್ವಲ್‌ ರೇವಣ್ಣ? – ಸಿಎಂಗೆ ಮನೇಕಾ ಪತ್ರ

    Live Tv
    [brid partner=56869869 player=32851 video=960834 autoplay=true]

  • ಪ್ರಧಾನಮಂತ್ರಿಗಳ ಅವಾಸ್ ಯೋಜನೆ, ಸೂರು ಕಲ್ಪಿಸುವಲ್ಲಿ ಬೆಂಗಳೂರು ಮೊದಲು: ಸೋಮಣ್ಣ

    ಪ್ರಧಾನಮಂತ್ರಿಗಳ ಅವಾಸ್ ಯೋಜನೆ, ಸೂರು ಕಲ್ಪಿಸುವಲ್ಲಿ ಬೆಂಗಳೂರು ಮೊದಲು: ಸೋಮಣ್ಣ

    ಬೆಂಗಳೂರು: ಪ್ರಧಾನಮಂತ್ರಿಗಳ ಅವಾಸ್ ಯೋಜನೆಯಡಿ ಎಲ್ಲರಿಗೂ ಸೂರು ಕಲ್ಪಿಸುವಲ್ಲಿ ಬೆಂಗಳೂರು ನಗರ ಜಿಲ್ಲೆ ಮೊದಲು ಸ್ಥಾನದಲ್ಲಿದೆ ಎಂದು ವಸತಿ ಮತ್ತು ಮೂಲಸೌಲಭ್ಯ ಅಭಿವೃದ್ಧಿ ಸಚಿವರು ಹಾಗೂ ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷ ವಿ.ಸೋಮಣ್ಣ ಹೇಳಿದರು.

    ಕರ್ನಾಟಕ ಗೃಹ ಮಂಡಳಿಯಿಂದ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲ್ಲೂಕಿನ ಚಂದಪುರದ ಸೂರ್ಯನಗರದಲ್ಲಿ 1ನೇ ಹಂತದ ನೂತನವಾಗಿ ನಿರ್ಮಿಸಿಲಾಗಿರುವ ಸೂರ್ಯ ಎಲಿಗೆನ್ಸ್ ಬಹುಮಹಡಿ ವಸತಿ ಸಮುಚ್ಚಯವನ್ನು ಲೋಕಾರ್ಪಣೆ ಮಾಡಿದರು. ಹತ್ತು ಫಲಾನುಭವಿಗಳಿಗೆ ಹಕ್ಕು ಪತ್ರವನ್ನು ಸಹ ವಿತರಿಸಿದರು.

    ನಂತರ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಪ್ರತಿಯೊಬ್ಬರಿಗೂ ಸ್ವಂತ ಮನೆ ಹೊಂದಬೇಕು ಎನ್ನುವ ಮಹದಾಸೆಗೆ ಸೂರ್ಯನಗರ ಯೋಜನೆಯನ್ನು ಜಾರಿಗೊಳಿಸಲಾಗಿದ್ದು, ಈಗಾಗಲೇ ಫ್ಲ್ಯಾಟ್‍ಗಳ ಹಂಚಿಕೆಗೆ ಅರ್ಜಿ ಕರೆಯಲಾಗಿದೆ. ಶೀಘ್ರವೇ ಮನೆಗಳ ಹಂಚಿಕೆಯಾಗಲಿದ್ದು, ಉತ್ತಮ ಗುಣಮಟ್ಟದ ಫ್ಲಾಟ್ ನಿರ್ಮಾಣದ ಸಂಕಲ್ಪಕ್ಕೆ ಮಂಡಳಿ ಬದ್ಧವಾಗಿದೆ ಎಂದರು. ಇದನ್ನೂ ಓದಿ: ಸುರೇಶ್ ಅಂಗಡಿ ಇಲ್ಲೇ ಚಿಕಿತ್ಸೆ ಪಡೆದಿದ್ದರೆ ಉಳಿಯುತಿದ್ದರೆನೋ? – ಶೆಟ್ಟರ್

    ಮಧ್ಯಮ ಮತ್ತು ಕೆಳಮಧ್ಯಮ ವರ್ಗದ ಲಕ್ಷಾಂತರ ಮಂದಿ ಸ್ವಂತ ಸೂರು ಇಲ್ಲದೆ ನಿವೇಶನ ಹೊಂದುವ ಬಯಕೆಯನ್ನು ಹೊಂದಿರುತ್ತಾರೆ. ಎಲ್ಲರ ಆಶೋತ್ತರಗಳನ್ನು ಈಡೇರಿಸಲು ವಸತಿ ಇಲಾಖೆಯ ಏಷ್ಯಾದ ಅತಿದೊಡ್ಡ ಯೋಜನೆಯನ್ನು ಕೈಗೆತ್ತಿಕೊಂಡಿದೆ. ಬೆಂಗಳೂರಿನ ಚಂದಾಪುರದಲ್ಲಿ 6 ಎಕರೆ 14 ಗುಂಟೆ ವ್ಯಾಪ್ತಿಯಲ್ಲಿ 77.14 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿರುವ ಸೂರ್ಯನಗರ ಹಲವು ವಿಶೇಷತೆಗಳನ್ನು ಹೊಂದಿದ್ದು ಉತ್ತಮ ಗುಣಮಟ್ಟದ ರಸ್ತೆ ಸೌಲಭ್ಯ, ಒಳಾಂಗಣ ಕ್ರೀಡಾಂಗಣ ಮತ್ತು ಉದ್ಯಾನವನ ನಿರ್ಮಿಸಲಾಗಿದೆ. ಒಳಚರಂಡಿ ಹಾಗೂ ಕಾವೇರಿ ನೀರು ಸರಬರಾಜು, ಮಳೆ ನೀರು ಕೊಯ್ಲು ವ್ಯವಸ್ಥೆಯನ್ನು ಮಾಡಲಾಗಿದೆ. ಈ ಸಮುಚ್ಚಯದಲ್ಲಿ 2 ಮತ್ತು 3 ಬಿ.ಎಚ್.ಕೆ ಸೇರಿ ಒಟ್ಟು 384 ಪ್ಲ್ಯಾಟ್ ಲಭ್ಯವಿವೆ ಎಂದು ಹೇಳಿದರು.

    ಮುಂದಿನ ದಿನಗಳಲ್ಲಿ ಈ ಭಾಗಕ್ಕೆ ಕಾವೇರಿ ಕುಡಿಯುವ ನೀರಿಗಾಗಿ ಮೂರನೇ ಹಂತದಿಂದ 5ಎಮ್ ಎಲ್‍ಡಿಯನ್ನು ಒದಗಿಸುವ ಯೋಜನೆ ಸರ್ಕಾರದ ಮುಂದಿದೆ. ಅಂದಾಜು 25 ಎಕರೆ ಜಮೀನನ್ನು ಗುರುತಿಸಿ ಅಂತರಾಷ್ಟ್ರೀಯ ಮಟ್ಟದ ಕ್ರೀಡಾಂಗಣ ನಿರ್ಮಾಣ ಮಾಡಲು ಮುಖ್ಯ ಮಂತ್ರಿಗಳೊಂದಿಗೆ ಸಮಾಲೋಚಿಸಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಸೋಮಣ್ಣ ಹೇಳಿದರು. ಇದನ್ನೂ ಓದಿ: ಹಿಂದೂತ್ವ, ಅಭಿವೃದ್ಧಿ ಎರಡು ಅಜೆಂಡಾ ಇಟ್ಟುಕೊಂಡು ಕೆಲಸ ಮಾಡಿ: ಅಭಯ್ ಪಾಟೀಲ್

    ಈ ಸಂದರ್ಭದಲ್ಲಿ ಸಂಸದರಾದ ಡಿ.ಕೆ.ಸುರೇಶ್ ಅವರು ಮಾತನಾಡಿ, ಸ್ಥಳೀಯ ನಿವಾಸಿಗಳಿಗೆ ಸಮುಚ್ಚಯ ಖರೀದಿಯಲ್ಲಿ ಮೀಸಲಾತಿ ಹಾಗೂ ವಿನಾಯಿತಿ ನೀಡಬೇಕು ಎಂದು ಒತ್ತಾಯಿಸಿದರು.

    ಕಾರ್ಯಕ್ರಮದ ಅಧ್ಯಕ್ಷತೆಯನ್ನು ಆನೇಕಲ್ ವಿಧಾನ ಸಭಾ ಕ್ಷೇತ್ರದ ಶಾಸಕ ಬಿ. ಶಿವಣ್ಣ ವಹಿಸಿದರು. ಕಾರ್ಯಕ್ರಮದಲ್ಲಿ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ಕೇಂದ್ರ ಸಚಿವ ಎ.ನಾರಾಯಣಸ್ವಾಮಿ, ವಿಧಾನ ಪರಿಷತ್ ಶಾಸಕರಾದ ಪುಟ್ಟಣ್ಣ, ಹಾಗೂ ಅ ದೇವೇಗೌಡ ಆನೇಕಲ್ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಕೆ.ಜಯಣ್ಣ, ವಸತಿ ಇಲಾಖೆ ಕಾರ್ಯದರ್ಶಿ ಮನೋಜ್ ಕುಮಾರ ಮೀನಾ, ಕರ್ನಾಟಕ ಗೃಹ ಮಂಡಳಿ ಆಯುಕ್ತರಾದ ಡಿ.ಎಸ್ ರಮೇಶ್, ಬೆಂಗಳೂರು ನಗರ ಜಿಲ್ಲಾಧಿಕಾರಿ ಜೆ.ಮಂಜುನಾಥ್ ಸೇರಿದಂತೆ ಸ್ಥಳೀಯ ಗ್ರಾಮ ಪಂಚಾಯತಿ ಅಧ್ಯಕ್ಷರುಗಳು, ಅಧಿಕಾರಿಗಳು ಉಪಸ್ಥಿತರಿದ್ದರು.