Tag: PrajwalRevanna

  • ಏನೂ ತಪ್ಪು ಮಾಡ್ದೆ ಪ್ರಕರಣದಲ್ಲಿ ಸಿಲುಕಿಸಿದ್ದಾರೆ ಎಂದು ರೇವಣ್ಣ ಕಣ್ಣೀರಿಟ್ರು: ಜಿ.ಟಿ ದೇವೇಗೌಡ

    ಏನೂ ತಪ್ಪು ಮಾಡ್ದೆ ಪ್ರಕರಣದಲ್ಲಿ ಸಿಲುಕಿಸಿದ್ದಾರೆ ಎಂದು ರೇವಣ್ಣ ಕಣ್ಣೀರಿಟ್ರು: ಜಿ.ಟಿ ದೇವೇಗೌಡ

    – ರೇವಣ್ಣಗೆ ಈಗಲೂ ಅಭಿವೃದ್ಧಿಯದ್ದೇ ಚಿಂತೆ

    ಬೆಂಗಳೂರು: ಏನೂ ತಪ್ಪು ಮಾಡದೇ ಪ್ರಕರಣದಲ್ಲಿ ಸಿಲುಕಿಸಿ, ಜೈಲಿಗೆ ಹಾಕಿದ್ದಾರೆ ಎಂಬ ನೋವಿನಲ್ಲಿ ರೇವಣ್ಣ (H.D Revanna) ಹತ್ತು ನಿಮಿಷಗಳ ಕಾಲ ಕಣ್ಣೀರು ಹಾಕಿದರು ಎಂದು ಜೆಡಿಎಸ್ ಮುಖಂಡ ಜಿ.ಟಿ ದೇವೇಗೌಡ (G.T Devegowda) ಅವರು ಹೇಳಿದ್ದಾರೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ (Parappana Agrahara) ರೇವಣ್ಣ ಅವರನ್ನು ಬೇಟಿಯಾದ ಬಳಿಕ ಮಾಧ್ಯಮಗಳಿಗೆ ಅವರು ಪ್ರತಿಕ್ರಿಯೆ ಕೊಟ್ಟಿದ್ದಾರೆ.

    ರೇವಣ್ಣ ಜೈಲಿಗೆ ಹೋದ ದಿನದಿಂದ ಅವರ ಭೇಟಿಗೆ ಬಂದಿರಲಿಲ್ಲ. ಇಂದು (ಸೋಮವಾರ) ಅವರನ್ನು ಭೇಟಿಯಾಗಿದ್ದೇನೆ. ಅವರು ಆರಾಮವಾಗಿ ಕೂತಿದ್ದು, ಜೊತೆಯಲ್ಲಿ ಚಹಾ ಕುಡಿದು, ಹಳೆಯ ವಿಚಾರಗಳನ್ನು ಮೆಲುಕು ಹಾಕಿದ್ರು. ಅವರಿಗೆ ಈಗಲೂ ಅಭಿವೃದ್ಧಿ ಕಾರ್ಯಕ್ರಮಗಳದ್ದೇ ಚಿಂತೆ. ಅಲ್ಲದೇ ನಾನೇನೂ ತಪ್ಪು ಮಾಡಿದ್ದೇನೆ ಎಂಬ ಚಿಂತೆಯಲ್ಲಿದ್ದಾರೆ ಎಂದರು.

    ನನ್ನ ಬಳಿ ಅವರು ಮಾತನಾಡಿ, ಸಂತ್ರಸ್ತ ಮಹಿಳೆ ಜೊತೆ ಮಾತನಾಡಿ ಆರು ವರ್ಷಗಳಾಗಿವೆ. ನನ್ನನ್ನು ಈ ಪ್ರಕರಣದಲ್ಲಿ ಸೇರಿಸಿ ಹೀಗೆ ಮಾಡಿದ್ದಾರೆ. ನಾನು ತಪ್ಪು ಮಾಡಿದ್ರೆ ಇನ್ನೂ ಶಿಕ್ಷೆ ಕೊಡಲಿ ಅನುಭವಿಸಬಹುದಿತ್ತು ಎಂದು ರೇವಣ್ಣ ಭಾವುಕರಾದರು ಎಂದು ಅವರು ಹೇಳಿದ್ದಾರೆ.

    ಕ್ಷೇತ್ರದಲ್ಲಿನ ಅಭಿವೃದ್ಧಿ ಕೆಲಸಗಳ ಬಗ್ಗೆ ಚರ್ಚಿಸಿದ ಅವರು, ರಾಜಕೀಯ ಹೇಗೆ ನಡೆಯುತ್ತಿದೆ? ನಾವು ಎಲ್ಲೆಲ್ಲಿ ಎಡವಿದ್ದೇವೆ? ನಮ್ಮ ಸರ್ಕಾರದ ಇದ್ದಾಗ ಕಾರ್ಯಕರ್ತರಿಗೆ ಏನೂ ಮಾಡಲು ಆಗಲಿಲ್ಲ. ಅಲ್ಪಾವಧಿ ಅಧಿಕಾರ ಬಂತು. ಅಧಿಕಾರ ಅನುಭವಿಸಿದವರು ಹೊರಟು ಹೋದ್ರು. ಮಂತ್ರಿಯಾಗಿದ್ದವರು ಹೊರಟು ಹೋದ್ರು. ನೀವು ಗೌಡರಿಗೋಸ್ಕರ ಪಕ್ಷದಲ್ಲಿ ಉಳಿದು ಗೌಡರಿಗೆ ನೆಮ್ಮದಿ ಕೊಟ್ಟಿದ್ದೀರಿ ಎಂದು ವಿಚಾರ ಹಂಚಿಕೊಂಡಿದ್ದಾರೆ. ಪ್ರಜ್ವಲ್ ರೇವಣ್ಣ (Prajwal Revanna) ವಿಚಾರವಾಗಿ ಯಾವುದೇ ಚರ್ಚೆ ಮಾಡಲಿಲ್ಲ. ರೇವಣ್ಣ ಕೂಡ ಪ್ರಜ್ವಲ್ ಬಗ್ಗೆ ಏನೂ ಹೇಳಲಿಲ್ಲ ಎಂದರು.

    ನವೀನ್ ಗೌಡ ಮತ್ತು ಕಾರ್ತಿಕ್ ಗೌಡ ಇನ್ನೂ ಬಂಧನವಾಗದ ಬಗ್ಗೆ, ಎಸ್‍ಐಟಿ ಅಧಿಕಾರಿಗಳು ತನಿಖೆ ಮಾಡ್ತಾರೆ. ನಮಗೆ ಅವರ ಮೇಲೆ ನಂಬಿಕೆ ಇದೆ. ಸಿಬಿಐಗೆ ಕೊಡುವ ಅಗತ್ಯವಿಲ್ಲ ಎಂದು ಸಿಎಂ ಹೇಳಿದ್ದಾರೆ. ನ್ಯಾಯಯುತವಾಗಿ ತನಿಖೆ ಮಾಡ್ತಾರೆ ಎಂದು ಪದೇ ಪದೇ ಸಿಎಂ ಹೇಳ್ತಿದ್ದಾರೆ. ಪೆನ್‍ಡ್ರೈವ್ ಯಾರು ರಿಲೀಸ್ ಮಾಡಿದ್ರು? ಯಾರೂ ತಪ್ಪು ಮಾಡಿದ್ದಾರೆ ಎಲ್ಲವನ್ನೂ ತನಿಖೆ ಮಾಡಿ ಕಂಡುಹಿಡಿದು ಸಿಎಂ ಇತಿಹಾಸ ಸೃಷ್ಟಿಸಲಿ ಎಂದು ಅವರು ಹೇಳಿದ್ದಾರೆ.

    ಅರಕಲಗೂಡು ಶಾಸಕ ಎ.ಮಂಜು ಅವರಿಗೂ ಪ್ರಕರಣ ಸುತ್ತಿಕೊಂಡಿದೆ. ಪೆನ್‍ಡ್ರೈವ್ ರಿಲೀಸ್ ಮಾಡಿದವರ ಬಗ್ಗೆ ತನಿಖೆ ಪ್ರಾರಂಭವಾಗಿದೆ. ಈ ಬಗ್ಗೆ ತನಿಖೆ ಮಾಡಿ ಪತ್ತೆ ಮಾಡುತ್ತಾರೆಂದು ಸಿಎಂ ಬೆನ್ನು ತಟ್ಟಿಕೊಂಡಿದ್ದಾರೆ. ನಮಗೂ ಕೂಡ ನಂಬಿಕೆ ಬಂದಿದೆ. ಎಲ್ಲರ ಕೈವಾಡ ಹೊರಗೆ ಬರಲಿದೆ. ಸ್ವಲ್ಪ ದಿನ ಕಾಯಬೇಕು ಎಂದು ಅವರು ಹೇಳಿದ್ದಾರೆ.

    ರೇವಣ್ಣ ಜಾಮೀನಿನ ಅರ್ಜಿ ವಿಚಾರಣೆ ನಡೆಯುತ್ತಿದೆ. ಇಂದು ಅವರಿಗೆ ಜಾಮೀನು ಸಿಗುವ ನಂಬಿಕೆ ಇದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

  • ಕೇಂದ್ರವನ್ನು ರಾಜ್ಯ ಸರ್ಕಾರದವರು ದೂರುವುದು ಸರಿಯಲ್ಲ, ಅಗತ್ಯವಿದ್ದಾಗಲೆಲ್ಲ ನೆರವು ನೀಡಿದೆ: ಪ್ರಜ್ವಲ್ ರೇವಣ್ಣ

    ಕೇಂದ್ರವನ್ನು ರಾಜ್ಯ ಸರ್ಕಾರದವರು ದೂರುವುದು ಸರಿಯಲ್ಲ, ಅಗತ್ಯವಿದ್ದಾಗಲೆಲ್ಲ ನೆರವು ನೀಡಿದೆ: ಪ್ರಜ್ವಲ್ ರೇವಣ್ಣ

    ಹಾಸನ: ಕೇಂದ್ರ ಸರ್ಕಾರವನ್ನು ರಾಜ್ಯ ಸರ್ಕಾರದವರು (State Government) ದೂರುವುದು ಸರಿಯಲ್ಲ. ಅಗತ್ಯ ಇದ್ದಾಗಲೆಲ್ಲ ನೆರವು ನೀಡಿದೆ ಎಂದು ಕಾಂಗ್ರೆಸ್ ವಿರುದ್ಧ ಸಂಸದ ಪ್ರಜ್ವಲ್ ರೇವಣ್ಣ  (Prajwal Revanna) ಕಿಡಿಕಾರಿದ್ದಾರೆ.

    ದೆಹಲಿಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ (Congress) ಪ್ರತಿಭಟನೆ ಕುರಿತು ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಾಗಿದ್ದರೆ ಜನರ ತೆರಿಗೆ ಹಣವನ್ನು ಇವರ ಉಚಿತ ಗ್ಯಾರಂಟಿಗೆ ಬಳಸಿದ್ದಾರೆ. ಮುಂದೆ ತೆರಿಗೆ ಪಾವತಿದಾರರು ನಮ್ಮ ತೆರಿಗೆ ನಮ್ಮ ಹಕ್ಕು ಎಂದು ಹೋರಾಟ ಮಾಡಿದರೆ ಏನು ಮಾಡೋದು ಎಂದು ಪ್ರಶ್ನಿಸಿದ್ದಾರೆ. ಕೇಂದ್ರ ಸರ್ಕಾರ ಅಗತ್ಯ ಇದ್ದಾಗಲೆಲ್ಲ ನೆರವು ನೀಡಿದೆ. ಕೇಂದ್ರದಿಂದ ಅನುದಾನ ಬಂದೇ ಇಲ್ಲ ಎಂಬ ಭಾವನೆ ಮೂಡಿಸುವುದು ತಪ್ಪು ಎಂದು ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ನಮ್ಮ ಹಕ್ಕು ಕೇಳಲು ದೆಹಲಿಯಲ್ಲಿ ಪ್ರತಿಭಟನೆ: ಸತೀಶ್ ಜಾರಕಿಹೊಳಿ

    ದಕ್ಷಿಣ ಭಾರತ ಪ್ರತ್ಯೇಕವಾಗಬೇಕು ಎಂಬ ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್ ಹೇಳಿಕೆಯನ್ನು ಖಂಡಿಸಿ, ದೇಶ ಒಡೆಯುವ ಹೇಳಿಕೆ ಯಾರೂ ಕೊಡಬಾರದು. ಭಾರತ ಒಂದಾಗಿರುತ್ತದೆ. ಭಾರತೀಯರು ಎಂದು ಹೇಳಿಕೊಳ್ಳಲು ನಮಗೆ ಹೆಮ್ಮೆ ಇದೆ. ಈ ರೀತಿಯ ಹೇಳಿಕೆ ಅವರಿಗೆ ಶೋಭೆ ತರಲ್ಲ ಎಂದು ತಿರುಗೇಟು ನೀಡಿದ್ದಾರೆ. ಇದನ್ನೂ ಓದಿ:  ಯಡಿಯೂರಪ್ಪರಿಂದ ಭಾರತ್ ಬ್ರ್ಯಾಂಡ್ ಅಕ್ಕಿ ವಿತರಣೆಗೆ ಚಾಲನೆ

    ಹೆಚ್.ಡಿ.ಕುಮಾರಸ್ವಾಮಿ ಕೇಸರಿ ಶಾಲು ಧರಿಸಿದ್ದಕ್ಕೆ ಮಾಜಿ ಪ್ರಧಾನಿ ದೇವೇಗೌಡ ಅವರ ಹೇಳಿಕೆಗೆ ಪ್ರತಿಕ್ರಿಯಿಸಿ, ಕೇಸರಿ ಶಾಲು ಎಂದರೆ ಬಿಜೆಪಿ ಎಂದು ಯಾಕೆ ಭಾವಿಸಬೇಕು? ದೇಗುಲ ಉದ್ಘಾಟನೆ ವೇಳೆ ನಮ್ಮ ಕಾರ್ಯಕರ್ತರೇ ಕೇಸರಿ ಶಾಲು ಹಾಕಿರುತ್ತಾರೆ. ಅದು ಧಾರ್ಮಿಕ ಸಂಕೇತ ಅಷ್ಟೆ. ಕೇಸರಿ ಶಾಲು ಹಾಕಿರೋರು ಬಿಜೆಪಿ ಕಾರ್ಯಕರ್ತರು ಎನ್ನೋಕೆ ಆಗುತ್ತಾ. ಮಂಡ್ಯ ಪ್ರತಿಭಟನೆ ವೇಳೆ ಕುಮಾರಸ್ವಾಮಿಗೆ ಯಾರೋ ಕಾರ್ಯಕರ್ತ ಬಂದು ಕೇಸರಿ ಶಾಲು ಹಾಕಿದ್ದರು. ಇದಕ್ಕೆ ತಪ್ಪಾಗಿ ತಿಳಿಯುವ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ. ಇದನ್ನೂ ಓದಿ:  ಸವದಿ ಹುಟ್ಟುಹಬ್ಬದ ಫ್ಲೆಕ್ಸ್‌ನಲ್ಲಿ ಕೈ ಚಿಹ್ನೆ ಮಾಯ!

    ಹಾಸನ ರೈಲ್ವೆ ಮೇಲ್ಸೇತುವೆ ಕಾಮಗಾರಿ ಬಗ್ಗೆ ಮಾತನಾಡಿ, ಹಾಸನ ರೈಲ್ವೆ ಮೇಲ್ಸೇತುವೆ ಕಾಮಗಾರಿಗೆ ರಾಜ್ಯ ಸರ್ಕಾರ ಹಣ ಕೊಡಲ್ಲ ಅಂತ ಹೇಳಿದೆ. ಆ ನಂತರ ಕೇಂದ್ರದ ಬಳಿ ಹೋಗಿದ್ದೇವೆ. ಮತ್ತೆರಡು ಮಾರ್ಗದ ಮೇಲ್ಸೇತುವೆಗಾಗಿ ಕೇಂದ್ರ ಸರ್ಕಾರದಲ್ಲಿ 48 ಕೋಟಿ ಅನುಮೋದನೆಗೆ ಹೋಗಿದೆ ಎಂದು ಹೇಳಿದರು. ಅದೇನು ಬಿಬಿಎಂಪಿ ಕೆಲಸ ಕೆಟ್ಟೋಯ್ತಾ, ಅದೇ ಚರಂಡಿಗೆ ಅದೇ ಕಲ್ಲು ಹಾಕೋಕೆ. ಹಣ ಕೊಡಿ ಎಂಬ ನಮ್ಮ ಮನವಿಗೆ, ಪತ್ರ ವ್ಯವಹಾರಕ್ಕೆ ನಾವು ಹಣ ಕೊಡಲು ಆಗಲ್ಲ ಎಂದು ಕಠಿಣವಾಗಿಯೇ ಉತ್ತರ ನೀಡಿದ್ದಾರೆ. ಸಹಕಾರವನ್ನೂ ಸಹ ಕೊಡಲ್ಲ ಎಂದಿದ್ದಾರೆ. ಅಲ್ಲಿಗೆ ಅದು ಮುಗಿದಿದೆ. ನಮಗೆ ರಾಜ್ಯ ಸರ್ಕಾರದಿಂದ ರೈಲ್ವೆ ಮೇಲ್ಸೇತುವೆಗೆ ಸಹಕಾರ ಬೇಕಾಗಿಲ್ಲ. ಮೂರು ಸಾರಿ ಕೊಡಲ್ಲ ಎಂದ ಮೇಲೆ ಬೇಡ ಎಂದು ನೇರವಾಗಿ ಹೇಳಿದ್ದಾರೆ. ಇದನ್ನೂ ಓದಿ: ಅಕ್ರಮ ಪಟಾಕಿ ಕಾರ್ಖಾನೆ ಸ್ಫೋಟ – 11 ಮಂದಿ ದುರ್ಮರಣ, 60 ಮಂದಿಗೆ ಗಾಯ