Tag: Prakash Veer

  • ದರ್ಶನ್ ಜೈಲಲ್ಲಿ – `ಇದ್ರೆ ನೆಮ್ದಿಯಾಗ್ ಇರ್ಬೇಕ್’ ಸಾಂಗ್ ರಿಲೀಸ್

    ದರ್ಶನ್ ಜೈಲಲ್ಲಿ – `ಇದ್ರೆ ನೆಮ್ದಿಯಾಗ್ ಇರ್ಬೇಕ್’ ಸಾಂಗ್ ರಿಲೀಸ್

    ದರ್ಶನ್ ನಟನೆಯ ಡೆವಿಲ್ ಸಿನಿಮಾದ (The Devil) `ಇದ್ರೆ ನೆಮ್ದಿಯಾಗ್ ಇರ್ಬೇಕ್‌ʼ (Idre Nemdiyaag Irbek) ಹಾಡು ಇಂದು ಬಿಡುಗಡೆ ಆಗಿದೆ. ದರ್ಶನ್ ಅಭಿಮಾನಿಗಳು ಹಲವಾರು ದಿನಗಳಿಂದ ಕುತೂಹಲದಿಂದ ಕಾಯ್ತಿದ್ದ ಈ ಹಾಡು ಕೊನೆಗೂ ರಿಲೀಸ್ ಆಗಿದೆ. ಅಜನೀಶ್ ಲೋಕನಾಥ್ ಸಂಗೀತ ನಿರ್ದೇಶನದಲ್ಲಿ ದೀಪಕ್ ಬ್ಲೂ ಹಾಡಿಗೆ ಧ್ವನಿಯಾಗಿದ್ದಾರೆ. ದರ್ಶನ್ ಜೈಲಿನಲ್ಲಿರುವಾಗಲೇ ಡೆವಿಲ್ ಸಿನಿಮಾದ ಮೊದಲ ಸಾಂಗ್ ರಿಲೀಸ್ ಆಗಿದೆ.

    ಅಂದುಕೊಂಡಂತೆ ಆಗಿದ್ದರೆ, ಆಗಸ್ಟ್ 15ರಂದು ಈ ಹಾಡು ಬಿಡುಗಡೆ ಆಗಬೇಕಿತ್ತು. ಆದ್ರೆ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ಗೆ ಹೈಕೋರ್ಟ್ ನೀಡಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್‌ (Supreme Court) ರದ್ದುಗೊಳಿಸಿದ ಕಾರಣದಿಂದಾಗಿ, ಆಗಸ್ಟ್ 14ರಂದು ದರ್ಶನ್ ಮತ್ತೆ ಜೈಲುಪಾಲಾದರು. ಇಂದು ಈ ಹಾಡನ್ನು ರಿಲೀಸ್‌ ಮಾಡಲಾಗಿದೆ. ಚಿತ್ರದ ನಿರ್ದೇಶಕ ಪ್ರಕಾಶ್ ವೀರ್, ಪರಪ್ಪನ ಅಗ್ರಹಾರ ಜೈಲಿನಲ್ಲಿರೋ ದರ್ಶನ್ (Darshan) ಜೊತೆ ಚರ್ಚಿಸಿ ಇಂದು ಹಾಡನ್ನು ಬಿಡುಗಡೆ ಮಾಡಿದ್ದಾರೆ. ಡೆವಿಲ್ ಹಾಡು ನೋಡಿ ದರ್ಶನ್ ಅಭಿಮಾನಿಗಳು ಒಂದು ಕಡೆ ಸಂಭ್ರಮ ಪಡುತ್ತಿದ್ದಾರೆ. ಮತ್ತೊಂದು ಕಡೆ ದಚ್ಚು ಜೈಲಿನಲ್ಲಿರುವ ಕಾರಣದಿಂದ ಫ್ಯಾನ್ಸ್ ಸಂಕಟ ಪಟುವಂತಾಗಿದೆ.

    ದರ್ಶನ್ ಜೈಲಿನಲ್ಲಿದ್ದಾಗಲೇ ಹಾಡನ್ನ ಬಿಡುಗಡೆ ಮಾಡುವ ಮೂಲಕ ಚಿತ್ರದ ಪ್ರಚಾರಕ್ಕೆ ಚಾಲನೆ ನೀಡಲಾಗಿದೆ. ದರ್ಶನ್ ಅನುಪಸ್ಥಿತಿಯಲ್ಲಿ ಡೆವಿಲ್ ಸಿನಿಮಾ ತೆರೆಗೆ ಬರಲು ಕೂಡಾ ಸೂಚನೆ ಸಿಕ್ಕಿದೆ. ಸಿನಿಮಾದ ಎಲ್ಲಾ ಕಾರ್ಯಗಳು ಮುಗಿದಿದ್ದು, ಸಿನಿಮಾ ತೆರೆಗೆ ಬರೋದು ಮಾತ್ರ ಬಾಕಿ ಇದೆ. ಹೀಗಾಗಿ ದರ್ಶನ್ ಜೊತೆ ಚರ್ಚಿಸಿ ಸಿನಿಮಾವನ್ನ ರಿಲೀಸ್ ಮಾಡಲು ಚಿತ್ರತಂಡ ಕೂಡಾ ನಿರ್ಧರಿಸಿದೆಯಂತೆ.

    ಡೆವಿಲ್ ಸಿನಿಮಾದ ಶೂಟಿಂಗ್ ಸಂದರ್ಭದಲ್ಲೇ ದರ್ಶನ್ ಮೈಸೂರಿನಲ್ಲಿ ಬಂಧನವಾಗಿದ್ದರು. ಆನಂತರ ನೂರಾರು ದಿನಗಳ ಕಾಲ ಜೈಲಿನಲ್ಲಿ ಇರಬೇಕಾಯಿತು. ಜಾಮೀನು ಸಿಕ್ಕು ಆಚೆ ಬಂದ ಮೇಲೆ ಡೆವಿಲ್ ಸಿನಿಮಾದ ಸಂಪೂರ್ಣ ಚಿತ್ರೀಕರಣವನ್ನು ಮುಗಿಸಿಕೊಟ್ಟಿದ್ದರು. ಈಗ ಸಿನಿಮಾ ರಿಲೀಸ್‌ಗೆ ಸಿದ್ಧವಾಗಿದೆ. ಈಗ ಮತ್ತೆ ದರ್ಶನ್ ಜೈಲುಪಾಲಾಗಿದ್ದಾರೆ. ದರ್ಶನ್ ಇಲ್ಲದೇ ಸಿನಿಮಾ ಬಿಡುಗಡೆ ಮಾಡಬೇಕಾದ ಅನಿವಾರ್ಯತೆ ಚಿತ್ರತಂಡಕ್ಕೆ ಎದುರಾಗಿದೆ.

  • ದರ್ಶನ್ ‘ಡೆವಿಲ್’ ಫಸ್ಟ್ ಲುಕ್ ಫೇಕ್: ಪ್ರಚಾರ ಆರಂಭಿಸಿಲ್ಲ ಎಂದು ನಿರ್ದೇಶಕ

    ದರ್ಶನ್ ‘ಡೆವಿಲ್’ ಫಸ್ಟ್ ಲುಕ್ ಫೇಕ್: ಪ್ರಚಾರ ಆರಂಭಿಸಿಲ್ಲ ಎಂದು ನಿರ್ದೇಶಕ

    ತ್ತೀಚೆಗೆ  ಪ್ರಕಾಶ್ ವೀರ್ (Prakash Veer) ಅವರ ನಿರ್ದೇಶನದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ನಾಯಕರಾಗಿ ನಟಿಸುತ್ತಿರುವ ‘ಡೆವಿಲ್’ (Devil) ಚಿತ್ರದ ಸ್ಕ್ರಿಪ್ಟ್ ಪೂಜೆ ಸರಳವಾಗಿ ನೆರವೇರಿತ್ತು. ಪೂಜೆ ಮುಗಿದಿದ್ದೆ ತಡ ಡೆವಿಲ್ ಹೆಸರಿನಲ್ಲಿ ಪೋಸ್ಟರ್ ಹರಿದಾಡಿದವು. ಆದರೆ, ಈ ಕುರಿತು ನಿರ್ದೇಶಕರು ಪ್ರತಿಕ್ರಿಯೆ ನೀಡಿದ್ದಾರೆ.

    ಶುಭದಿನವೆಂದು ಡೆವಿಲ್ ಚಿತ್ರದ ಸ್ಕ್ರಿಪ್ಟ್ ಪೂಜೆ ಮಾಡಿದ್ದೇವೆ. ಆದರೆ, ಚಿತ್ರದ ಫಸ್ಟ್ ಲುಕ್ (First Look) ಆಗಲಿ, ಪೋಸ್ಟರ್ ಆಗಲಿ ಯಾವುದು ನಾವು ಬಿಡುಗಡೆ ಮಾಡಿಲ್ಲ. ಕಾಟೇರ ಚಿತ್ರದ ನಂತರ ನಮ್ಮ ಚಿತ್ರದ ಪ್ರಚಾರ ಕಾರ್ಯ ಆರಂಭಿಸುತ್ತೇವೆ‌. ನಮ್ಮ ವೈಷ್ಣೊ ಸ್ಟುಡಿಯೋಸ್ ಸಂಸ್ಥೆಯ ಮೂಲಕವೇ ಅಧಿಕೃತವಾಗಿ ಡೆವಿಲ್ ಚಿತ್ರದ ಬಗ್ಗೆ ಮಾಹಿತಿ ನೀಡುತ್ತಾ ಹೋಗುತ್ತೇವೆ ಎಂದು ನಿರ್ದೇಶಕ ಪ್ರಕಾಶ್ ವೀರ್ ತಿಳಿಸಿದ್ದಾರೆ.

    ಹೆಸರಾಂತ ನಿರ್ದೇಶಕ ಮಿಲನ ಪ್ರಕಾಶ್, ಚಾಲೇಂಜಿಂಗ್ ಸ್ಟಾರ್ ದರ್ಶನ್ (Darshan) ಗಾಗಿ ಒಂದು ಸಿನಿಮಾ ಮಾಡಲಿದ್ದಾರೆ ಎನ್ನುವ ಸುದ್ದಿ ಹಲವು ತಿಂಗಳಿಂದ ಹರಿದಾಡುತ್ತಿತ್ತು. ಬೆಂಗಳೂರಿನ ದೊಡ್ಡ ಮಹಾ ಗಣಪತಿ ದೇವಸ್ಥಾನದಲ್ಲಿ ದರ್ಶನ್ ಅವರ ಹೊಸ ಸಿನಿಮಾದ (New Cinema) ಮುಹೂರ್ತ ಸದ್ದಿಲ್ಲದೇ ನಡೆಯುವ ಮೂಲಕ ನಿಜವಾಗಿತ್ತು.

    ಮಿಲನ ಪ್ರಕಾಶ್ (Milan Prakash) ಈ ಸಿನಿಮಾವನ್ನು ನಿರ್ದೇಶನ ಮಾಡಲಿದ್ದು, ಅಜನೀಶ್ ಲೋಕನಾಥ್ ಅವರ ಸಂಗೀತ ಸಂಯೋಜನೆ ಚಿತ್ರಕ್ಕೆ ಇರಲಿದೆ, ವೈಷ್ಣೋ ಬ್ಯಾನರ್ ಅಡಿಯಲ್ಲಿ ಈ ಸಿನಿಮಾ ನಿರ್ಮಾಣವಾಗಲಿದೆ. ಈ ನಡುವೆ ಮತ್ತೊಂದು ಸುದ್ದಿ ಗಾಂಧಿ ನಗರದಲ್ಲಿ ಜೋರಾಗಿಯೇ ಕೇಳಿ ಬರುತ್ತಿದೆ. ದರ್ಶನ್ ಮತ್ತು ಸುದೀಪ್ ಕಾಂಬಿನೇಷನ್ ನ  ದಿಗ್ಗಜರು 2 ಸಿನಿಮಾ ಬಗ್ಗೆ ಚರ್ಚೆ ನಡೆಯುತ್ತಿದೆ. ಮತ್ತೆ ಇಬ್ಬರು ಜೊತೆಯಾಗಿ ನಟಿಸುತ್ತಾರಾ ಎಂಬ ಪ್ರಶ್ನೆ ಅಭಿಮಾನಿಗಳಲ್ಲಿ ಮೂಡಿದೆ.

    ಸುದೀಪ್ – ದರ್ಶನ್ ಇಬ್ಬರಿಗೂ ಆಪ್ತರಾಗಿರೋ ನಿರ್ಮಾಪಕ ರಾಕ್‌ಲೈನ್ ವೆಂಕಟೇಶ್ (Rockline Venkatesh) ಸಾರಥ್ಯದಲ್ಲಿ ದಿಗ್ಗಜರು 2 ಸಿನಿಮಾ ಬರುತ್ತಾ? ಇಬ್ಬರನ್ನೂ ಜೊತೆಯಾಗಿಸಿ ಸಿನಿಮಾ ಮಾಡ್ತಾರಾ? ಎಂಬ ಕೌತುಕ ಸ್ಯಾಂಡಲ್‌ವುಡ್ ಅಂಗಳದಲ್ಲಿ ಗುಸು ಗುಸು ಚರ್ಚೆ ಶುರುವಾಗಿದೆ.

    ಜ್ಯೂ.ಅಂಬರೀಶ್ – ಜ್ಯೂ.ವಿಷ್ಣುವರ್ಧನ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದ ದರ್ಶನ್- ಸುದೀಪ್ (Sudeep) ಮತ್ತೆ ಒಂದೇ ವೇದಿಕೆಯಲ್ಲಿ ಜೊತೆಯಾಗಿರೋದು ಅಭಿಮಾನಿಗಳ ಕಣ್ಣಿಗೆ ಹಬ್ಬವಾಗಿದೆ. ಈ ಹಿಂದೆ ಅಂಬರೀಶ್ 60ನೇ ವರ್ಷದ ಬರ್ತ್‌ಡೇ ಕಾರ್ಯಕ್ರಮದಲ್ಲಿ ಕುಚಿಕು ಕುಚಿಕು ಡ್ಯಾನ್ಸ್ ಮಾಡಿ ಕಿಚ್ಚ-ದಚ್ಚು ಗಮನ ಸೆಳೆದಿದ್ದರು.

     

    2012ರಲ್ಲಿ ದರ್ಶನ್ ನಟನೆಯ ‘ಸಂಗೊಳ್ಳಿ ರಾಯಣ್ಣ’ ಚಿತ್ರಕ್ಕೆ ಸಂಪೂರ್ಣ ಸಹಕರಿಸಿದ್ದ ಕಿಚ್ಚ. ದರ್ಶನ್ ಈ ಚಿತ್ರಕ್ಕೆ ಹಿನ್ನೆಲೆ ಧ್ವನಿ ನೀಡಿದ್ದರು. ಮುಂದೆ ಒಂದೊಳ್ಳೆ ಘಳಿಗೆ ಬಂದರೆ ಒಟ್ಟಿಗೆ ಆಕ್ಟ್ ಮಾಡೋದಾಗಿ ಇಬ್ಬರು ಹೇಳಿದ್ರು. ಅಂಬಿ ಇದ್ದಿದ್ರೆ ಇಷ್ಟೊತ್ತಿಗಾಗ್ಲೇ ಸುದೀಪ್-‌ ದರ್ಶನ್ ಒಂದಾಗುತ್ತಿದ್ದರು. ಇದೀಗ ಇಬ್ಬರನ್ನೂ ಒಂದಾಗಿಸೋ ಪ್ರಯತ್ನಗಳು ಜಾರಿಯಲ್ಲಿವೆ ಎನ್ನಲಾಗುತ್ತಿದೆ.