Tag: praksh rai

  • ಪ್ರಕಾಶ್ ರೈ ಎಲ್ಲಿ ಉಳಿದುಕೊಳ್ಳುತ್ತಾನೆ- ಕಾರ್ ಚಾಲಕನಿಗೆ ಧಮ್ಕಿ

    ಪ್ರಕಾಶ್ ರೈ ಎಲ್ಲಿ ಉಳಿದುಕೊಳ್ಳುತ್ತಾನೆ- ಕಾರ್ ಚಾಲಕನಿಗೆ ಧಮ್ಕಿ

    ಮಂಗಳೂರು: ನಟ ಪ್ರಕಾಶ್ ರೈ ಅವರಿಗೆ ನಗರದ ವಿಮಾನ ನಿಲ್ದಾಣದಲ್ಲಿ ನಾಲ್ವರು ಬೆದರಿಕೆ ಹಾಕಿರೋ ಘಟನೆಯೊಂದು ನಡೆದಿರುಬವ ಬಗ್ಗೆ ಬೆಳಕಿಗೆ ಬಂದಿದೆ.

    ರಾತ್ರಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಕಾರ್ ಡ್ರೈವರ್ ಬಳಿ ಬಂದ ನಾಲ್ವರು ಕೆಲ ಪ್ರಶ್ನೆಗಳನ್ನು ಹಾಕಿದ್ದಾರೆ. ಪ್ರಕಾಶ್ ರೈ ಎಲ್ಲಿ ಉಳಿದುಕೊಳ್ಳುತ್ತಾರೆ ಅಂತ ಹೇಳಿ ಕಾರ್ ಡ್ರೈವರ್ ಗೆ ಧಮ್ಕಿ ಹಾಕಿದ್ದಾರೆ. ಪೊಲೀಸರು ಬಂದ ಬಳಿಕ ಕೂಡಲೇ ಅಲ್ಲಿಂದ ಕಾಲ್ಕಿತ್ತಿದ್ದಾರೆ. ಇದರಿಂದ ಇಲ್ಲಿ ನನಗೆ ಆತಂಕದ ವಾತಾವರಣ ನಿರ್ಮಾಣವಾಗಿದೆ ಅಂತ ರೈ ಮಂಗಳೂರಿನ ಪ್ರೆಸ್ ಕ್ಲಬ್ ನಲ್ಲಿ ನಡೆದ ಮಾಧ್ಯಮ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡುತ್ತಾ ಹೇಳಿದ್ದಾರೆ.

    ನನ್ನ ಹೇಳಿಕೆಯನ್ನು ಸದಾ ತಿರುಚಲಾಗುತ್ತದೆ. ನಾನು ರಾಜಕೀಯ ಪಕ್ಷದಿಂದ ಬೆಳೆದಿಲ್ಲ. ರಾಜಕೀಯದಲ್ಲಿ ಆತಂಕದ ವಾತಾವರಣ ಇದೆ. ನಾನು ಆಳುವ ಪಕ್ಷದ ವಿರೋಧಿಯಾಗಿದ್ದೇನೆ. ಒಬ್ಬ ಪ್ರಜೆ, ಪ್ರಜೆಯಾಗಿರೋದಕ್ಕೆ ಸಾಧ್ಯವಾಗುತ್ತಿಲ್ಲ. ಪ್ರಶ್ನಿಸುವ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ. #just asking ಅಭಿಯಾನ ನಿರಂತರವಾಗಿರುತ್ತದೆ ಅಂತ ಅವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

    ಪ್ರತಾಪ್ ಸಿಂಹ ಜೊತೆ ದ್ವೇಷವಿಲ್ಲ: ನಾನು ಯಾವುದೇ ಚುನಾವಣಾ ಪ್ರಚಾರಕ್ಕೆ ಹೋಗಲ್ಲ. ಆದ್ರೆ ಕೆಲ ಪಕ್ಷಗಳ ವಿರುದ್ಧ ಮಾತನಾಡುತ್ತೇನೆ. ಬಿಜೆಪಿ ಕೋಮುವಾದದ ಬಗ್ಗೆ ಮಾತನಾಡ್ತೇನೆ. ಬಿಜೆಪಿ ಕೋಮುವಾದ ದೇಶದ ಸಾಮರಸ್ಯ ಹಾಳು ಮಾಡುತ್ತದೆ. ಸಂಸದ ಪ್ರತಾಪ್ ಸಿಂಹ ಬಗ್ಗೆ ನನಗೆ ದ್ವೇಷ ಇಲ್ಲ. ಅವರು ಮುಖವಾಡ ಹಾಕಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಸೊಂಟದ ಕೆಳಗಿನ ಭಾಷೆ ಬಳಕೆ ಮಾಡ್ತಾರೆ. ನಾನು ಒಬ್ಬ ಪ್ರಜೆಯಾಗಿ ಪ್ರತಾಪ್ ಸಿಂಹ ವಿರುದ್ಧ ಕೇಸ್ ಹಾಕಿದ್ದೇನೆ ಅಂತ ಅವರು ಹೇಳಿದ್ರು.

    ಆರೋಪಿಗಳ ಖುಲಾಸೆಗೆ ವಿಷಾದ: ಪಬ್ ದಾಳಿ ಆರೋಪಿಗಳಿಗೆ ಕೋರ್ಟ್ ಖುಲಾಸೆ ವಿಚಾರದ ಕುರಿತು ಇದೇ ವೇಳೆ ಮಾತನಾಡಿದ ಅವರು, ಕೋರ್ಟ್ ಸಾಕ್ಷ್ಯಾಧಾರ ಇಲ್ಲ ಅಂತ ಹೇಳಿದೆ. ಕಾರ್ಯಕರ್ತರು ಹೊಡೆದಿರುವ ವಿಡಿಯೋ ಕೂಡಾ ಇದೆ. ಕೋರ್ಟ್ ಆಜ್ಞೆ ಜನಸಾಮಾನ್ಯರನ್ನು ಗೊಂದಲ ಮಾಡಿದೆ. ಕೋರ್ಟ್ ಆರ್ಡರ್ ಕೊಟ್ಟಿದ್ದು ನ್ಯಾಯನಾ? ಆಡಳಿತರೂಢ ಕಾಂಗ್ರೆಸ್ ಇದರ ಬಗ್ಗೆ ಪ್ರಶ್ನೆ ಮಾಡಬಹುದಿತ್ತು. ಪ್ರಶ್ನೆ ಮಾಡಿದ್ರೆ ವಿರೋಧಿಯಾಗ್ತಿವಿ ಎಂಬ ಭಯ ಇದೆ. ಕಾಂಗ್ರೆಸ್ ರಾಜಕೀಯ ಪ್ರದರ್ಶನ ಮಾಡುತ್ತಿದೆ ಅಂದ್ರು.

  • ಪ್ರೇಕ್ಷಕರಿಂದ ಚಪ್ಪಾಳೆ ಗಿಟ್ಟಿಸಲು ಹುಚ್ಚು ಹೇಳಿಕೆ: ಪ್ರಕಾಶ್ ರಾಜ್ ವಿರುದ್ಧ ಸುರೇಶ್ ಕುಮಾರ್ ವಾಗ್ದಾಳಿ

    ಪ್ರೇಕ್ಷಕರಿಂದ ಚಪ್ಪಾಳೆ ಗಿಟ್ಟಿಸಲು ಹುಚ್ಚು ಹೇಳಿಕೆ: ಪ್ರಕಾಶ್ ರಾಜ್ ವಿರುದ್ಧ ಸುರೇಶ್ ಕುಮಾರ್ ವಾಗ್ದಾಳಿ

    ಬೆಂಗಳೂರು: ಚಪ್ಪಾಳೆ ತಟ್ಟುತ್ತಾರೆ ಎನ್ನುವ ಮನಸ್ಥಿಯಲ್ಲಿ ವೇದಿಕೆ ಮೇಲೆ ಪ್ರಕಾಶ್ ರಾಜ್ ಹುಚ್ಚುಚ್ಚಾಗಿ ಮಾತನಾಡಿದ್ದಾರೆ ಎಂದು ಬಿಜೆಪಿ ಮುಖಂಡ ಸುರೇಶ್ ಕುಮಾರ್ ವಾಗ್ದಾಳಿ ನಡೆಸಿದ್ದಾರೆ.

    ಪಕ್ಷದ ಕಚೇರಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಪ್ರಕಾಶ್ ರಾಜ್ ನಟರಾಗಿ ಮುಂದುವರಿದರೆ ಒಳ್ಳೆಯದು. ಇಲ್ಲದೇ ಇದ್ದರೆ ಪಕ್ಷ ಹುಟ್ಟು ಹಾಕಿ ಮುಂದುವರಿಯಲಿ. ರಾಜ್ಯದಲ್ಲಾಗಿರುವ ದುರಂತಕ್ಕೆ ಪ್ರಧಾನಿ ಮೋದಿಯವರು ಏನೂ ಮಾಡಿಲ್ಲ ಎನ್ನುವುದು ಸರಿಯಲ್ಲ. ಇದು ನಟ ಪ್ರಕಾಶ್ ರಾಜ್ ಅವರ ಅಪ್ರಬುದ್ಧತೆಯನ್ನು ತೋರಿಸುತ್ತದೆ ಎಂದು ಹೇಳಿದರು.

    ಕಲಬುರ್ಗಿ ಮತ್ತು ಗೌರಿ ಹತ್ಯೆ ಬಗ್ಗೆ ತನಿಖೆ ನಡೆದು ಹಂತಕರನ್ನು ಶೀಘ್ರವೇ ಬಂಧಿಸಬೇಕೆಂದು ಕೇಂದ್ರವೇ ಹೇಳಿದೆ. ಪ್ರಕಾಶ್ ರೈ ಅವರು ಕಾವೇರಿ ವಿವಾದ ಸಂದರ್ಭದಲ್ಲಿ ತಮ್ಮನ್ನು ಎಳೆಯಬೇಡಿ ಎಂದಿದ್ದರು. ರಾಜ್ಯದಲ್ಲಿ 12 ಬಿಜೆಪಿ ಕಾರ್ಯಕರ್ತರ ಕೊಲೆಯಾಗಿದೆ. ಇದರ ಬಗ್ಗೆ ಪ್ರಕಾಶ್ ರಾಜ್ ಯಾಕೆ ಇದುವರಗೆ ಹೇಳಿಕೆ ಕೊಟ್ಟಿಲ್ಲ ಎಂದು ಪ್ರಶ್ನಿಸಿದ ಅವರು ಡಿವೈಎಫ್‍ಐ ಕಾರ್ಯಕ್ರಮದಲ್ಲಿ ವೇದಿಕೆಗೆ ತಕ್ಕಂತೆ ಮಾತಾಡಿದ್ದಾರೆ ಎಂದು ಕಿಡಿಕಾರಿದರು.

    ಇದನ್ನೂ ಓದಿ: ಅವಾರ್ಡ್ ಗಳನ್ನ ವಾಪಸ್ ಕೊಡಲು ನಾನೇನು ಮೂರ್ಖನಾ?- ಪ್ರಕಾಶ್ ರಾಜ್