Tag: Pramod

  • ಪ್ರಮೋದ್ ಚಿತ್ರಕ್ಕೆ ಸಾಥ್ ನೀಡಿದ ಕಿಚ್ಚ ಸುದೀಪ್

    ಪ್ರಮೋದ್ ಚಿತ್ರಕ್ಕೆ ಸಾಥ್ ನೀಡಿದ ಕಿಚ್ಚ ಸುದೀಪ್

    ಭುವನಂ ಗಗನಂ (Bhuvanam Gaganam) ಸಿನಿಮಾ ತನ್ನ ಟೀಸರ್ ನಿಂದಲೇ ಪ್ರೇಕ್ಷಕರಲ್ಲಿ ಕುತೂಹಲ ಕೇಂದ್ರ ಬಿಂದುವಾಗಿದೆ. ಕ್ಲಾಸ್ ಕಥೆಗಳ ಮೂಲಕ ಗಮನಸೆಳೆದ ಪೃಥ್ವಿ ಅಂಬಾರ್ ಹಾಗೂ ಮಾಸ್ ಸಿನಿಮಾಗಳ ಮೂಲಕ ಸೈ ಎನಿಸಿಕೊಂಡ ಪ್ರಮೋದ್ (Pramod) , ಮೊದಲ ಬಾರಿ ಒಟ್ಟಿಗೆ ತೆರೆಹಂಚಿಕೊಂಡಿರುವ ಈ ಚಿತ್ರದ ಟೈಟಲ್ ಟ್ರ್ಯಾಕ್ ಅನಾವರಣಗೊಂಡಿದೆ.

    ಹೊಸ ಪ್ರತಿಭೆಗಳಿಗೆ ಸದಾ ಬೆನ್ನುತಟ್ಟುವ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ (Sudeep), ಚಿತ್ರರಂಗದ ಭರವಸೆ ನಾಯಕರಾಗಿರುವ ಪ್ರಮೋದ್, ಪೃಥ್ವಿ ಚಿತ್ರಕ್ಕೆ ಸಾಥ್ ಕೊಟ್ಟಿದ್ದಾರೆ, ಭುವನಂ ಗಗನಂ ಹಾಡು ಬಿಡುಗಡೆ ಮಾಡಿ ಇಡೀ ಸಿನಿತಂಡಕ್ಕೆ ಆಲ್ ದಿ ಬೆಸ್ಟ್ ತಿಳಿಸಿದ್ದಾರೆ. ಭುವನಂ ಗಗನಂ ಎಂದು ಶುರುವಾಗುವ ಹಾಡಿಗೆ ಅನಿರುದ್ಧ ಶಾಸ್ತ್ರೀ ಕ್ಯಾಚಿ ಮ್ಯಾಚಿ ಪದ ಪೊಣಿಸಿದ್ದು, ಅರ್ಮಾನ್ ಮಲ್ಲಿಕ್ ಹಾಗೂ ಐಶ್ವರ್ಯ ರಂಗರಾಜನ್ ಧ್ವನಿಯಾಗಿದ್ದಾರೆ. ಗುಮ್ಮಿನೇನಿ ವಿಜಯ್ ಈ ಮಧುರ ಗೀತೆಗೆ ಟ್ಯೂನ್ ಹಾಕಿದ್ದಾರೆ. ಭುವನಂಗಗನಂ ಟೈಟಲ್ ಟ್ರ್ಯಾಕ್ ನಲ್ಲಿ ಪ್ರಮೋದ್ ಹಾಗೂ ರೆಚೆಲ್ ಡೇವಿಡ್ ಜೋಡಿಯ ಕೆಮಿಸ್ಟ್ರೀ ನೋಡುಗರಿಗೆ ಇಷ್ಟವಾಗುತ್ತದೆ.

    ಗಿರೀಶ್ ಮೂಲಿಮನಿ ಭುವನಂ ಗಗನಂ ಸಿನಿಮಾಗೆ ಕಥೆ, ಚಿತ್ರಕಥೆ ಬರೆದಿದ್ದು, ಆಕ್ಷನ್ ಕಟ್ ಹೇಳಿದ್ದಾರೆ. ಈ ಹಿಂದೆ ಇವರು ರಾಜರು ಎಂಬ ಚಿತ್ರ ಮಾಡಿದ್ದರು. ಇದೀಗ ಭುವನಂ ಗಗನಂ ಮೂಲಕ ಮತ್ತೊಂದು ಫ್ರೆಶ್ ಕಥೆಯನ್ನು ಹೇಳೋದಿಕ್ಕೆ ಬರ್ತಿದ್ದಾರೆ. ಕನ್ನಡ ಸಿನಿಮಾ ರಂಗಕ್ಕೆ ಅದ್ಭುತ ಸಿನಿಮಾಗಳನ್ನು ಕೊಡುಗೆಯಾಗಿ ನೀಡ್ಬೇಕೆಂಬ ಕನಸಿನೊಂದಿಗೆ ನಿರ್ಮಾಪಕ ಎಂ ಮುನೇಗೌಡ ತಮ್ಮದೇ ಎಸ್ ವಿಸಿ ಫಿಲ್ಮಂಸ್ ಪ್ರೊಡಕ್ಷನ್ ನಡಿ ಭುವನಂ ಗಗನಂಗೆ ಹಣ ಹಾಕಿದ್ದಾರೆ.

    ಭುವನಂ ಗಗನಂ ಸಿನಿಮಾ ಲವ್, ರೋಮ್ಯಾನ್ಸ್, ಫ್ಯಾಮಿಲಿ ಎಮೋಷನ್ ಕಥಾಹಂದರ ಸಿನಿಮಾವಾಗಿದ್ದು, ನಗರ, ಹಳ್ಳಿ ಎರಡು ಬ್ಯಾಕ್ ಡ್ರಾಪ್ ನಲ್ಲಿ ನಡೆಯುವ ಕಥೆಯಾಗಿದ್ದು, ಪ್ರಮೋದ್ ಗೆ ಜೋಡಿಯಾಗಿ ಲವ್ ಮಾಕ್ಟೇಲ್ ಖ್ಯಾತಿಯ ರೆಚೆಲ್ ಡೇವಿಡ್, ಪೃಥ್ವಿಗೆ ಜೋಡಿಯಾಗಿ ಅಶ್ವಥಿ ನಟಿಸ್ತಿದ್ದಾರೆ. ಅಚ್ಯುತ್ ಕುಮಾರ್, ಶರತ್ ಲೋಹಿತಾಶ್ವ, ಪ್ರಕಾಶ್ ತುಮ್ಮಿನಾಡು, ಸಿದ್ಲಿಂಗು ಶ್ರೀಧರ್, ಹರಿಣಿ, ಸ್ಪರ್ಶ ರೇಖಾ, ಪ್ರಜ್ವಲ್ ಶೆಟ್ಟಿ, ಚೇತನ್ ದುರ್ಗ ತಾರಾಬಳಗದಲ್ಲಿದ್ದಾರೆ. ಉದಯ್ ಲೀಲಾ ಕ್ಯಾಮೆರಾ ಕೈಚಳಕ, ಗುಮ್ಮಿನೇನಿ ವಿಜಯ್ ಮ್ಯೂಸಿಕ್ ಕಿಕ್, ಸುನೀಲ್ ಕಶ್ಯಪ್ ಸಂಕಲನ ಸಿನಿಮಾಕ್ಕಿದೆ. ಪ್ರಚಾರ ಅಖಾಡಕ್ಕೆ ಇಳಿದಿರುವ ಚಿತ್ರತಂಡ ಆದಷ್ಟು ಬೇಗ ಭುವನಂ ಗಗನಂ ಸಿನಿಮಾ ತೆರೆಗೆ ತರಲಿದೆ.

  • ಪ್ರಮೋದ್, ಪೃಥ್ವಿ ಚಿತ್ರಕ್ಕೆ ಸಾಥ್ ನೀಡಿದ ಧ್ರುವ ಸರ್ಜಾ

    ಪ್ರಮೋದ್, ಪೃಥ್ವಿ ಚಿತ್ರಕ್ಕೆ ಸಾಥ್ ನೀಡಿದ ಧ್ರುವ ಸರ್ಜಾ

    ಸ್ಯಾಂಡಲ್ ವುಡ್ ಅಂಗಳದ ಇಬ್ಬರು ಪ್ರತಿಭಾನ್ವಿತ ನಟರಾದ ಸಲಾರ್ ಪ್ರಮೋದ್ (Pramod) ಹಾಗೂ ದಿಯಾ ಪೃಥ್ವಿ ಅಂಬಾರ್ (Prithvi) ನಟನೆಯ ಬಹುನಿರೀಕ್ಷಿತ ಸಿನಿಮಾ ಭುವನಂ ಗಗನಂ. ಈ ಚಿತ್ರದ ನಿರ್ಮಾಪಕ ಎಂ. ಮುನೇಗೌಡ ಹುಟ್ಟುಹಬ್ಬದ ಪ್ರಯುಕ್ತ ಚಿತ್ರತಂಡ ಟೀಸರ್ ಬಿಡುಗಡೆ ಮಾಡಿ ಶುಭ ಕೋರಿದೆ. ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಟೀಸರ್ ಅನಾವರಣ ಮಾಡಿ ಚಿತ್ರತಂಡಕ್ಕೆ ಬೆಸ್ಟ್ ವಿಷಸ್ ತಿಳಿಸಿದ್ದಾರೆ. ಬೆಂಗಳೂರಿನ ಡಾ.ರಾಜಕುಮಾರ ಇಂಡೋರ್ ಸ್ಟೇಡಿಯಂನಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ನಟ ನೆನಪಿರಲಿ ಪ್ರೇಮ್, ನಿರ್ದೇಶಕ ಸಿಂಪಲ್ ಸುನಿ ಸೇರಿದಂತೆ ಹಲವರು ಉಪಸ್ಥಿತಿದ್ದರು.

    ಟೀಸರ್ ರಿಲೀಸ್ ಬಳಿಕ ಧ್ರುವ ಸರ್ಜಾ ಮಾತನಾಡಿ, ಚಿತ್ರದ ಟೈಟಲ್ ಕೇಳಿದ ತಕ್ಷಣ ನನಗೆ ನೆನಪಾಗಿದ್ದು, ಭುವನಂ ಗಗನಂ (Bhuvanam Gaganam) ಸಾಂಗ್. ವಂಶಿ ಚಿತ್ರದ್ದು. ಪುನೀತ್ ಸರ್ ನೆನಪಾದರು. ಅಪ್ಪು ಸರ್ ಗೆ ಬರ್ತ್ ಡೇ ವಿಷ್ ಮಾಡ್ತಾ ಮಾತನಾಡಲು ಶುರು ಮಾಡುತ್ತೇನೆ. ನಾನು ಇವತ್ತು ಇಲ್ಲಿಗೆ ಬರಲು ಮುಖ್ಯ ಕಾರಣ ಈ ಚಿತ್ರದ ಟೆಕ್ನಿಷಿಯನ್ಸ್. ನಮ್ಮ ಅಣ್ಣ ಹಾಗೂ ಸುದೀಪ್ ಸರ್ ನಟಿಸಿದ ವರದನಾಯಕ ಸಿನಿಮಾದಲ್ಲಿ  ಅಸೋಸಿಯೇಟ್ ಡೈರೆಕ್ಟರ್ ಆಗಿ ಕೆಲಸ ಮಾಡಿದವರು ಗಿರೀಶ್ ಮೂಲಿಮನಿ.‌ ಅವರು ಈ ಚಿತ್ರದ ನಿರ್ದೇಶಕ ಗಿರೀಶ್. ಈ ಸಿನಿಮಾದ ಟ್ರೇಲರ್ ನೋಡಿದರೇ ಟೇಕಿಂಗ್ ಚೆನ್ನಾಗಿದೆ. ಈ ಚಿತ್ರದ ಡಿಒಪಿ ಉದಯ್ ಅವರು. ಅವರ ಜೊತೆ ಬಹದ್ದೂರು, ಭರ್ಜರಿ ಮಾಡಿದ್ದೇವೆ. ಅವರು ಅದ್ಭುತ ವರ್ಕರ್. ಮ್ಯೂಸಿಕ್ ಡೈರೆಕ್ಟರ್ ಜೊತೆಯೂ ಕೆಲಸ ಮಾಡಿದ್ದೇವೆ. ನಮ್ಮ ಎಡಿಟರ್ ಸುನಿಲ್ ಸರ್. ಇವತ್ತು ನಿರ್ಮಾಪಕ ಮುನೇಗೌಡರು ಜನ್ಮದಿನ.ಅವರಿಗೆ ಒಳ್ಳೆಯದು ಆಗಲಿ. ಸಿನಿಮಾದ ಹೀರೋ ಪ್ರಮೋದ್, ಹಾಗೂ ಪೃಥ್ವಿ ಇಡೀ ತಂಡಕ್ಕೆ ಆಲ್ ದಿ ಬೆಸ್ಟ್ ಹೇಳಿ. ಈ ಸಿನಿಮಾ ಸೂಪರ್ ಹಿಟ್ ಆಗುತ್ತದೆ  ಎಂದರು.

    ನಟ ಪ್ರಮೋದ್ ಮಾತನಾಡಿ, ಭುವನಂ ಗಗನಂ ತುಂಬಾ ಇಷ್ಟಪಟ್ಟು ಒಪ್ಪಿಕೊಂಡ ಸಿನಿಮಾ. ಯಾಕಂದರೆ ನಾನು ಲವ್ ಸ್ಟೋರಿ ಮಾಡಿರಲಿಲ್ಲ. ಗಿರೀಶ್ ಸರ್ ಕಥೆ ಹೇಳಿದಾಗ, ಸೀನ್ಸ್ ಹೇಳಿದಾಗ ಖುಷಿಯಾಯ್ತು. ಅಂದರೆ ಈ ತರಹದ್ದು ಸಿನಿಮಾ ಮಾಡಿದರೆ ತುಂಬಾ ಜನ, ಫ್ಯಾಮಿಲಿ, ಹೆಣ್ಮಕ್ಕಳಿಗೆ ರೀಚ್ ಆಗುತ್ತದೆ.  ಅಂತಾ ಖುಷಿಪಟ್ಟು ಒಪ್ಪಿಕೊಂಡಿದ್ದೇನೆ. ಗಿರೀಶ್ ಸರ್ ಶೂಟ್ ಮಾಡಿದಾಗ ಯಾಕೆ ಇಷ್ಟು ಇವರು ನಿಧಾನ ಇದ್ದಾರೆ ಎಂದು ಗಾಬರಿಯಾಗಿತ್ತು. ಡಬ್ಬಿಂಗ್ ಶುರುವಾಗಿದೆ. ಸಿನಿಮಾ ನೋಡುತ್ತಿದ್ದೇವೆ. ಈಗ ಅವರು ಯಾಕೆ ನಿಧಾನ ಶೂಟ್ ಮಾಡಿದ್ದಾರೆ ಅನ್ನೋದು ಗೊತ್ತಾಗಿದೆ. ಪ್ರತಿಯೊಬ್ಬರು ಅವರು ಅಂದುಕೊಂಡಂತೆ ಬರಲು ತಡವಾಗಿದೆ ಎಂದು ಅರ್ಥವಾಯ್ತು. ಎಲ್ಲರಿಗೂ ಸಿನಿಮಾ ಇಷ್ಟವಾಗುತ್ತದೆ. ಮುನೇಗೌಡ ತುಂಬಾ ಫ್ಯಾಷನೇಟೆಡ್ ನಿರ್ಮಾಪರು ಎಂದರು.

    ನಿರ್ದೇಶಕ ಗಿರೀಶ್ ಮಾತನಾಡಿ, ಭುವನಂ ಗಗನಂ ಟೀಸರ್ ಲಾಂಚ್ ಮಾಡಿದ್ದೇವೆ.  ಟೀಸರ್ ಲಾಂಚ್ ಮಾಡಲು ಕಾರಣ ನಿರ್ಮಾಪಕ ಹುಟ್ಟುಹಬ್ಬ. ಅವರ ಬರ್ತ್ ಡೇಗೆ ಏನಾದರೂ ಗಿಫ್ಟ್ ಕೊಡಲು ಟೀಸರ್ ಲಾಂಚ್ ಮಾಡಿದ್ದೇವೆ. ಸಿನಿಮಾ ಜರ್ನಿ ಬಗ್ಗೆ ಹೇಳಲು ತುಂಬಾ ಇದೆ. ಇದು ಜಸ್ಟ್ ಟೀಸರ್. ಮುಂದೆ ಸಾಂಗ್ ಇದೆ. ಟ್ರೇಲರ್ ಇದೆ. ಸಿನಿಮಾ ಚೆನ್ನಾಗಿದೆ. ಅದರಲ್ಲೂ ಯೂತ್ಸ್ ಗೆ ಕನೆಕ್ಟ್ ಆಗುತ್ತದೆ. ಫ್ಯಾಮಿಲಿ ಎಂಟರ್ ಟೈನರ್ ಕಥೆ ಇದೆ. ಸಿನಿಮಾದ ಪ್ರತಿ ಹಂತದಲ್ಲಿಯೂ ನಿರ್ಮಾಪಕರು ಬೆಂಬಲವಾಗಿ ನಿಂತಿದ್ದಾರೆ ಎಂದರು. ಗಿರೀಶ್ ಮೂಲಿಮನಿ ಕಥೆ, ಚಿತ್ರಕಥೆ ಬರೆದು ಭುವನಂ ಗಗನಂ ಸಿನಿಮಾ ನಿರ್ದೇಶನ ಮಾಡಿದ್ದಾರೆ. ಈ ಹಿಂದೆ ಇವರು ರಾಜರು ಎಂಬ ಚಿತ್ರ ಮಾಡಿದ್ದರು. ಇದೀಗ ಭುವನಂ ಗಗನಂ ಮೂಲಕ ಮತ್ತೊಂದು ಫ್ರೆಶ್ ಕಥೆಯನ್ನು ಹೇಳೋದಿಕ್ಕೆ ಬರ್ತಿದ್ದಾರೆ. ಕನ್ನಡ ಸಿನಿಮಾ ರಂಗಕ್ಕೆ ಅದ್ಭುತ ಸಿನಿಮಾಗಳನ್ನು ಕೊಡುಗೆಯಾಗಿ ನೀಡ್ಬೇಕೆಂಬ ಕನಸಿನೊಂದಿಗೆ ನಿರ್ಮಾಪಕ ಎಂ ಮುನೇಗೌಡ ತಮ್ಮದೇ ಎಸ್ ವಿಸಿ ಫಿಲ್ಮಂಸ್ ಪ್ರೊಡಕ್ಷನ್ ನಡಿ ಭುವನಂ ಗಗನಂಗೆ ಹಣ ಹಾಕಿದ್ದಾರೆ.

    ಭುವನಂ ಗಗನಂ ಸಿನಿಮಾ ಲವ್, ರೋಮ್ಯಾನ್ಸ್, ಫ್ಯಾಮಿಲಿ ಎಮೋಷನ್ ಕಥಾಹಂದರ ಸಿನಿಮಾವಾಗಿದ್ದು, ನಗರ, ಹಳ್ಳಿ ಎರಡು ಬ್ಯಾಕ್ ಡ್ರಾಪ್ ನಲ್ಲಿ ನಡೆಯುವ ಕಥೆಯಾಗಿದ್ದು, ಪ್ರಮೋದ್ ಗೆ ಜೋಡಿಯಾಗಿ ಲವ್ ಮಾಕ್ಟೇಲ್ ಖ್ಯಾತಿಯ ರೆಚೆಲ್ ಡೇವಿಡ್, ಪೃಥ್ವಿಗೆ ಜೋಡಿಯಾಗಿ ಅಶ್ವಥಿ ನಟಿಸ್ತಿದ್ದಾರೆ. ಅಚ್ಯುತ್ ಕುಮಾರ್, ಶರತ್ ಲೋಹಿತಾಶ್ವ, ಪ್ರಕಾಶ್ ತುಮ್ಮಿನಾಡು, ಸಿದ್ಲಿಂಗು ಶ್ರೀಧರ್, ಹರಿಣಿ, ಸ್ಪರ್ಶ ರೇಖಾ, ಪ್ರಜ್ವಲ್ ಶೆಟ್ಟಿ, ಚೇತನ್ ದುರ್ಗ ತಾರಾಬಳಗದಲ್ಲಿದ್ದಾರೆ. ಉದಯ್ ಲೀಲಾ ಕ್ಯಾಮೆರಾ ಕೈಚಳಕ, ಗುಮ್ಮಿನೇನಿ ವಿಜಯ್ ಮ್ಯೂಸಿಕ್ ಕಿಕ್, ಸುನೀಲ್ ಕಶ್ಯಪ್ ಸಂಕಲನ ಸಿನಿಮಾಕ್ಕಿದೆ. ಮಾನ್ಸೂನ್ ಗೆ ಭುವನಂ ಗಗನಂ ಸಿನಿಮಾ ತೆರೆಗೆ ಬರಲಿದೆ.

  • ‘ಆತ್ಮ’ದ ಸುತ್ತ ಹಾರರ್ ಕಥನ

    ‘ಆತ್ಮ’ದ ಸುತ್ತ ಹಾರರ್ ಕಥನ

    ಹಾರರ್, ಥ್ರಿಲ್ಲರ್ ಅಂಶಗಳನ್ನು ಒಳಗೊಂಡಿರುವ ’ಆತ್ಮ’ (Atma) ಚಿತ್ರದ ಟ್ರೈಲರ್ (Trailer) ಅನ್ನು ನಿರ್ದೇಶಕರ ಸಂಘದ ಅಧ್ಯಕ್ಷ ಎನ್ನಾರ್.ಕೆ.ವಿಶ್ವನಾಥ್ ಬಿಡುಗಡೆ ಮಾಡಿ ತಂಡಕ್ಕೆ ಶುಭ ಹಾರೈಸಿದರು. ವಿರಾಜ್ ಫಿಲಿಂ ರೆರ್ಕಾಡಿಂಗ್ ಸ್ಟುಡಿಯೋ ಮಾಲೀಕ ಯುವ ಪ್ರತಿಭೆ ಅನಿಲ್.ಸಿ.ಆರ್ ಕಥೆ, ನಿರ್ಮಾಣ ಮಾಡುವುದರ ಜತೆಗೆ ನಾಯಕರಾಗಿ ಅಭಿನಯಿಸಿರುವುದು  ಎರಡನೇ ಅನುಭವ. ಮುನೇಗೌಡ ಕಿತ್ತಗನೂರು ಸಹ ನಿರ್ಮಾಪಕರಾಗಿ ಗುರುತಿಸಿಕೊಂಡಿದ್ದಾರೆ. ಅಚಲ, ಓಂ ಶಾಂತಿ ಓಂ ಮತ್ತು ಅಸ್ಥಿರ ಚಿತ್ರಗಳಿಗೆ ಆಕ್ಷನ್ ಹೇಳಿರುವ ಎಸ್.ಆರ್.ಪ್ರಮೋದ್ (Pramod) ನಿರ್ದೇಶನ ಮಾಡಿದ್ದಾರೆ.

    ಪ್ರಾರಂಭದಿಂದ ಅಂತ್ಯದವರೆಗೂ ಕುತೂಹಲ ಹುಟ್ಟಿಸುತ್ತಾ ಸಿನಿಮಾವು ಸಾಗಲಿದೆ. ಮನುಷ್ಯ ಸತ್ತ ಮೇಲೆ ಶ್ರಾದ್ಧ ಮಾಡದೆ ಇದ್ದಲ್ಲಿ ಅದು ಆತ್ಮವಾಗುತ್ತದೆಂದು ಹೇಳುತ್ತಾರೆ. ಇದರ ಒಂದು ಎಳೆಯನ್ನು ತೆಗೆದುಕೊಂಡು ಚಿತ್ರಕಥೆ ಸಿದ್ದಪಡಿಸಲಾಗಿದೆ. ಆರು ಸ್ನೇಹಿತರು ವೀಕೆಂಡ್ ಪಾರ್ಟಿಗೆಂದು ಒಂದು ಸ್ಥಳಕ್ಕೆ ಹೋಗುತ್ತಾರೆ. ಅವರ ಗುಂಪಿನಲ್ಲಿ ಒಬ್ಬಳು ಗೋಸ್ಟ್ ಹಂಟರ್ ಇರುತ್ತಾಳೆ. ಅವಳು ಎಲ್ಲರನ್ನು ಭೂತದ ಮನೆಗೆ ಕರೆದುಕೊಂಡು ಹೋಗುತ್ತಾಳೆ. ಎಲ್ಲರೂ ಪಾರ್ಟಿ ಮಾಡುತ್ತಿರುವಾಗ ಇವಳು ಮಾತ್ರ ಗೋಸ್ಟ್ ಹಂಟ್ ಮಾಡ್ತಾ ಇರುತ್ತಾಳೆ. ಅಲ್ಲಿ ಸಿಗುವ ಆತ್ಮ ಇಪ್ಪತ್ತು ವರ್ಷಗಳ ಹಿಂದೆ ನಡೆದ ಭಯಾನಕ ಘಟನೆಯ ನಿಗೂಢತೆಯನ್ನು ತೆರೆದುಕೊಳ್ಳುತ್ತದೆ. ಕೊನೆಗೆ ಅದರಿಂದ ತಪ್ಪಿಸಿಕೊಂಡು ಹೇಗೆ ಹೊರಗೆ ಬರುತ್ತಾರೆ? ಗೋಸ್ಟ್ ಹಂಟರ್ ಯಾರು? ಅದಕ್ಕೆ ಕಾರಣವೇನು? ಇವೆಲ್ಲವೂ ಕುತೂಹಲಕಾರಿ ಸನ್ನಿವೇಶಗಳು ಸಿನಿಮಾದಲ್ಲಿ ಇರಲಿವೆಯಂತೆ.

    ನಾಯಕಿ ಕಾವ್ಯ, ಇವರೊಂದಿಗೆ ದಿವ್ಯ, ಪುಷ್ಪ, ಪ್ರೀತಿ, ಏಲೇಶ್, ಬನ್ನೂರು ಶ್ರೀನಿವಾಸಗೌಡ, ಮುಂತಾದವರ ನಟನೆ ಇದೆ. ಎರಡು ಹಾಡುಗಳಿಗೆ ನಿತಿನ್‌ರಾಜ್ ಸಂಗೀತ ಸಂಯೋಜಿಸಿದ್ದಾರೆ. ಛಾಯಾಗ್ರಹಣ ರಣಧೀರ್‌ ನಾಯಕ್, ಸಂಕಲನ ಆಯುರ್, ಸಂಭಾಷಣೆ ಅಜಯ್‌ ವೇದಾಂತಿ, ಸಾಹಿತ್ಯ ಸಿದ್ದುಅರಸು, ನಿರ್ವಹಣೆ ದೀಪಕ್‌ ಬಾಬು ಅವರದಾಗಿದೆ. ಮೈಸೂರು ಸುತ್ತಮುತ್ತ 22 ದಿನಗಳ ಕಾಲ ಚಿತ್ರೀಕರಣ ನಡೆಸಲಾಗಿದೆ.

  • ‘ಸಲಾರ್’ ಹುಡುಗನ ಜೊತೆ ಮತ್ತೆ ಸಿನಿಮಾ ಘೋಷಿಸಿದ ಶ್ರುತಿ ನಾಯ್ಡು

    ‘ಸಲಾರ್’ ಹುಡುಗನ ಜೊತೆ ಮತ್ತೆ ಸಿನಿಮಾ ಘೋಷಿಸಿದ ಶ್ರುತಿ ನಾಯ್ಡು

    ನ್ನಡ ಕಿರುತೆರೆ ಲೋಕದ ಹೆಸರಾಂತ ನಟಿ, ನಿರ್ಮಾಪಕಿ ಶ್ರುತಿ ನಾಯ್ಡು, ಈ ಹಿಂದೆ ಪ್ರೀಮಿಯರ್ ಪದ್ಮಿನಿ ಸಿನಿಮಾವನ್ನು ನಿರ್ಮಾಣ ಮಾಡಿದ್ದರು. ಜಗ್ಗೇಶ್ ಮತ್ತು ಪ್ರಮೋದ್ ಕಾಂಬಿನೇಷನ್ ನ ಈ ಸಿನಿಮಾ ಬಾಕ್ಸ್ ಆಫೀಸಿನಲ್ಲೂ ಹಿಟ್ ಆಗಿತ್ತು. ಆ ನಂತರ ಈ ಚಿತ್ರದ ಸಿಕ್ವೇಲ್ ಮಾಡುವ ಕುರಿತು ಚರ್ಚೆ ನಡೆದಿತ್ತು. ಅದಕ್ಕೂ ಮೊದಲು ಮತ್ತೊಂದು ಸಿನಿಮಾ ಘೋಷಣೆ ಮಾಡಿದ್ದಾರೆ.

    ಪ್ರೀಮಿಯರ್ ಪದ್ಮಿನಿ ಸಿನಿಮಾದಲ್ಲಿ ಪ್ರಮುಖ ಪಾತ್ರ ಮಾಡಿದ್ದ ಪ್ರಮೋದ್ ಅವರನ್ನೇ ನಾಯಕನನ್ನಾಗಿ ಆಯ್ಕೆ ಮಾಡಿಕೊಂಡು ಹೊಸ ಸಿನಿಮಾ ಘೋಷಣೆ ಮಾಡಿದ್ದಾರೆ ಶ್ರುತಿ ನಾಯ್ಡು. ಪ್ರಮೋದ್ ಹುಟ್ಟು ಹಬ್ಬದಂದು ಪೋಸ್ಟರ್ ಕೂಡ ರಿಲೀಸ್ ಮಾಡಿದ್ದಾರೆ. ಪ್ರೀಮಿಯರ್ ಪದ್ಮಿನಿಗೆ ನಿರ್ದೇಶಕರಾಗಿ ಕೆಲಸ ಮಾಡಿದ್ದ ರಮೇಶ್ ಇಂದಿರಾ ಅವರೇ ಈ ಚಿತ್ರಕ್ಕೂ ನಿರ್ದೇಶಕರು.

    ಸಲಾರ್ ಸಿನಿಮಾದಲ್ಲಿ ಪ್ರಮೋದ್ ಗಟ್ಟಿಯಾಗಿರೋ ಪಾತ್ರವನ್ನೇ ಮಾಡಿದ್ದಾರೆ. ಆ ಪಾತ್ರದ ಮೂಲಕ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಸುದ್ದಿಯಾಗಿದ್ದಾರೆ. ಇದೀಗ ಮತ್ತೆ ಶ್ರುತಿ ನಾಯ್ಡು ಅವರ ಸಿನಿಮಾವನ್ನು ಒಪ್ಪಿಕೊಂಡಿದ್ದಾರೆ.  ಈಗಾಗಲೇ ಚಿತ್ರಕ್ಕೆ ಪೂಜೆ ಕೂಡ ಆಗಿದ್ದು, ಫೆಬ್ರವರಿಯಲ್ಲಿ ಚಿತ್ರೀಕರಣಕ್ಕೂ ಸಿದ್ಧತೆ ಮಾಡಿಕೊಂಡಿದ್ದಾರೆ.

  • ‘ಸಲಾರ್’ ಪ್ರಮೋದ್- ಪೃಥ್ವಿ ಅಂಬರ್ ನಟನೆಯ ‘ಭುವನಂ ಗಗನಂ’ ಚಿತ್ರದ ಶೂಟಿಂಗ್ ಕಂಪ್ಲೀಟ್

    ‘ಸಲಾರ್’ ಪ್ರಮೋದ್- ಪೃಥ್ವಿ ಅಂಬರ್ ನಟನೆಯ ‘ಭುವನಂ ಗಗನಂ’ ಚಿತ್ರದ ಶೂಟಿಂಗ್ ಕಂಪ್ಲೀಟ್

    ‘ಭುವನಂ ಗಗನಂ’ (Bhuvanam Gaganam Film) ಸಿನಿಮಾ ತನ್ನ ಟೈಟಲ್ ಮೂಲಕ ಗಾಂಧಿನಗರದ ಟಾಕ್ ಐಟಂ ಎನಿಸಿಕೊಂಡಿದೆ. ‘ಸಲಾರ್’ (Salaar) ಸಿನಿಮಾ ಖ್ಯಾತಿ ಪ್ರಮೋದ್, ‘ದಿಯಾ’ (Dia) ಖ್ಯಾತಿಯ ಪೃಥ್ವಿ ಅಂಬರ್ ನಾಯಕನಾಗಿ ನಟಿಸುತ್ತಿರುವ ಈ ಚಿತ್ರದ ಶೂಟಿಂಗ್ ಕಂಪ್ಲೀಟ್ ಆಗಿದೆ. ಬೆಂಗಳೂರಿನ ಹೆಸರಘಟ್ಟದಲ್ಲಿ ಅದ್ಧೂರಿ ಸೆಟ್ ಹಾಕಿ ಕೊನೆ ದಿನ ಚಿತ್ರೀಕರಣ ನಡೆಸಲಾಗಿದೆ. ಈ ವೇಳೆ, ಚಿತ್ರತಂಡ ಮಾಧ್ಯಮದರೊಂದಿಗೆ ಮಾಹಿತಿ ಹಂಚಿಕೊಂಡಿದೆ.

    ನಟ ಪ್ರಮೋದ್ (Pramod) ಮಾತನಾಡಿ, ನನ್ನ ಭಾಗದ ಶೂಟಿಂಗ್ ಅಕ್ಟೋಬರ್ ತಿಂಗಳಲ್ಲಿಯೇ ಮುಗಿತ್ತು. ತುಂಬಾ ಚೆನ್ನಾಗಿ ಮೂಡಿಬಂದಿದೆ. ಅದ್ಭುತ ಶೂಟಿಂಗ್ ಸೆಟ್ ಹಾಕಿದ್ದಾರೆ. ಇದಕ್ಕೆಲ್ಲಾ ಮುನೇಗೌಡರ ಬೆಂಬಲವಿದೆ. ಅವರಿಗೆ ಸಿನಿಮಾ ಮೇಲೆ ಹೆಚ್ಚು ಫ್ಯಾಷನ್ ಇದೆ. ಸ್ಕ್ರಿನ್‌ ಪ್ಲೇ ಅದ್ಭುತವಾಗಿದೆ. ಈ ಚಿತ್ರದಲ್ಲಿ ನಾನು ಸ್ಟೈಲೀಶ್ ಆಗಿ ಲವ್ ಬಾಯ್ ಆಗಿ ಕಾಣಿಸಿಕೊಂಡಿದ್ದೇನೆ ಎಂದರು. ಇದನ್ನೂ ಓದಿ:ದೊಡ್ಮನೆಯಲ್ಲಿ ಬಿಗ್‌ ಫೈಟ್-‌ ಸಮರ್ಥ್‌ನ ಕೆನ್ನೆಗೆ ಬಾರಿಸಿ ಎಲಿಮಿನೇಟ್‌ ಆದ ಅಭಿಷೇಕ್‌

    ನಟ ಪೃಥ್ವಿ ಅಂಬರ್ (Pruthvi Ambar) ಮಾತನಾಡಿ, ಮುನೇಗೌಡರ ಎಸ್‌ವಿಸಿ ಫಿಲ್ಮಂಸ್ ದೊಡ್ಡ ಸಂಸ್ಥೆಯಾಗಿ ಚಿತ್ರರಂಗದಲ್ಲಿ ಹೊರಹೊಮ್ಮಬೇಕು. ಒಬ್ಬ ಸ್ಟ್ರಾಂಗ್ ಪ್ರೊಡ್ಯೂಸರ್ ಸಿಗುವುದು ಕಷ್ಟ. ಈ ಕಂಟೆಂಟ್‌ಗೆ ಏನು ಬೇಕೋ ಅದನ್ನು ಮನಸಾರೆ, ತುಂಬಾ ಪ್ರೀತಿ ಇಟ್ಟು ಕೊಟ್ಟಿದ್ದಾರೆ. ಈ ಸಂಸ್ಥೆಯಿಂದ ತುಂಬಾ ಒಳ್ಳೆಯ ಸಿನಿಮಾಗಳು ಬರಬೇಕು. ನನ್ನ ಪಾತ್ರ ತುಂಬಾ ಭಿನ್ನವಾಗಿ ಮೂಡಿ ಬಂದಿದೆ. ಇಡೀ ಸಿನಿಮಾ ತುಂಬಾ ಚೆನ್ನಾಗಿ ಮೂಡಿಬಂದಿದೆ ಎಂದರು. ಇದನ್ನೂ ಓದಿ:ಗೆಳೆಯನ ಜೊತೆ ತಿಮ್ಮಪ್ಪನ ದರ್ಶನ ಮಾಡಿದ ಜಾಹ್ನವಿ ಕಪೂರ್

    ನಿರ್ದೇಶಕ ಗಿರೀಶ್ ಮೂಲಿಮನಿ ಮಾತನಾಡಿ, ಒಂದೂವರೆ ವರ್ಷದ ಹಿಂದೆ ‘ಭುವನಂ ಗಗನಂ’ ಜರ್ನಿ ಶುರುವಾಗಿತ್ತು. ಅಲ್ಲಿಂದ ಇಲ್ಲಿವರೆಗೆ ನಾವು ನಿಮ್ಮನ್ನು ಭೇಟಿಯಾಗಲು ಆಗಿರಲಿಲ್ಲ. ಈಗ ಚಿತ್ರೀಕರಣ ಮುಕ್ತಾಯಗೊಂಡಿದೆ. ಎಲ್ಲರ ಸಹಕಾರ ನಮ್ಮ ಸಿನಿಮಾ ಮೇಲೆ ಇರಲಿ ಎಂದರು.

    ನಿರ್ಮಾಪಕ ಎಂ ಮುನೇಗೌಡ ಮಾತನಾಡಿ, ಒಂದೂವರೆ ವರ್ಷ ಹಿಂದೆ ಶುರುವಾದ ಜರ್ನಿ ಇದು. ಸುಮಾರು 75 ದಿನಗಳ ಕಾಲ ಮೈಸೂರು, ಹಾವೇರಿ, ಕುದುರೆಮುಖ, ಕಳಸ, ಕನ್ಯಾಕುಮಾರಿ, ಬೆಂಗಳೂರು ಇಷ್ಟು ಜಾಗ ಸುತ್ತಿಕೊಂಡು ಕೊನೆಯಲ್ಲಿ ಈ ಜಾಗದಲ್ಲಿ ಅದ್ಧೂರಿಯಾಗಿ ಸೆಟ್ ಹಾಕಿ ಚಿತ್ರೀಕರಣ ನಡೆಸಲಾಗಿದೆ. ಒಂದೊಳ್ಳೆ ಕಥೆ ಇಟ್ಕೊಂಡು ಸಿನಿಮಾ ಮಾಡಿದ್ದೇವೆ. ನನಗೆ ಹೋಪ್ ಇದೆ. ಈ ಸಿನಿಮಾ ಯಾವುದೋ ಒಂದು ರೇಂಜ್‌ನಲ್ಲಿ ಹೋಗುತ್ತದೆ ಎಂದರು.

    ಪೃಥ್ವಿ ಅಂಬಾರ್, ಸಲಾರ್ (Salaar) ಖ್ಯಾತಿಯ ಪ್ರಮೋದ್ ನಾಯಕರಾಗಿ ನಟಿಸ್ತಿರುವ ‘ಭುವನಂ ಗಗನಂ’ ಸಿನಿಮಾಗೆ ಗಿರೀಶ್ ಮೂಲಿಮನಿ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಈ ಹಿಂದೆ ‘ರಾಜರು’ ಎಂಬ ಚಿತ್ರ ಮಾಡಿದ್ದರು. ಇದೀಗ ‘ಭುವನಂ ಗಗನಂ’ ಮೂಲಕ ಮತ್ತೊಂದು ಫ್ರೆಶ್ ಕಥೆಯನ್ನು ಹೇಳೋದಿಕ್ಕೆ ಬರುತ್ತಿದ್ದಾರೆ. ಕನ್ನಡ ಸಿನಿಮಾ ರಂಗಕ್ಕೆ ಅದ್ಭುತ ಸಿನಿಮಾಗಳನ್ನು ಕೊಡುಗೆಯಾಗಿ ನೀಡ್ಬೇಕೆಂಬ ಕನಸಿನೊಂದಿಗೆ ನಿರ್ಮಾಪಕ ಎಂ ಮುನೇಗೌಡ ತಮ್ಮದೇ ಎಸ್ ವಿಸಿ ಫಿಲ್ಮಂಸ್ ಪ್ರೊಡಕ್ಷನ್ ನಡಿ ‘ಭುವನಂ ಗಗನಂ’ಗೆ ಹಣ ಹಾಕಿದ್ದಾರೆ.

    ‘ಭುವನಂ ಗಗನಂ’ ಸಿನಿಮಾ ಲವ್, ರೋಮ್ಯಾನ್ಸ್, ಫ್ಯಾಮಿಲಿ ಎಮೋಷನ್ ಕಥಾಹಂದರ ಸಿನಿಮಾವಾಗಿದ್ದು, ನಗರ, ಹಳ್ಳಿ ಎರಡು ಬ್ಯಾಕ್ ಡ್ರಾಪ್‌ನಲ್ಲಿ ನಡೆಯುವ ಕಥೆಯಾಗಿದ್ದು, ಪ್ರಮೋದ್‌ಗೆ ಜೋಡಿಯಾಗಿ ‘ಲವ್ ಮಾಕ್ಟೇಲ್’ ಖ್ಯಾತಿಯ ರೆಚೆಲ್ ಡೇವಿಡ್, ಪೃಥ್ವಿಗೆ ಜೋಡಿಯಾಗಿ ಅಶ್ವಥಿ ನಟಿಸಿದ್ದಾರೆ. ಅಚ್ಯುತ್ ಕುಮಾರ್, ಶರತ್ ಲೋಹಿತಾಶ್ವ, ಪ್ರಕಾಶ್ ತುಮ್ಮಿನಾಡು, ಸಿದ್ಲಿಂಗು ಶ್ರೀಧರ್, ಹರಿಣಿ, ಸ್ಪರ್ಶ ರೇಖಾ, ಪ್ರಜ್ವಲ್ ಶೆಟ್ಟಿ, ಚೇತನ್ ದುರ್ಗ ತಾರಾಬಳಗದಲ್ಲಿದ್ದಾರೆ. ಉದಯ್ ಲೀಲಾ ಕ್ಯಾಮೆರಾ ಕೈಚಳಕ, ಗುಮ್ಮಿನೇನಿ ವಿಜಯ್ ಮ್ಯೂಸಿಕ್ ಕಿಕ್, ಸುನೀಲ್ ಕಶ್ಯಪ್ ಸಂಕಲನ ಸಿನಿಮಾಕ್ಕಿದೆ.

  • ‘ಸಲಾರ್’ ಸಿನಿಮಾದಲ್ಲಿ ಮತ್ತೊಬ್ಬ ಕನ್ನಡದ ಸ್ಟಾರ್ ನಟ

    ‘ಸಲಾರ್’ ಸಿನಿಮಾದಲ್ಲಿ ಮತ್ತೊಬ್ಬ ಕನ್ನಡದ ಸ್ಟಾರ್ ನಟ

    ಪ್ರಶಾಂತ್ ನೀಲ್ (Prashant Neel) ನಿರ್ದೇಶನದ, ತೆಲುಗಿನ ಖ್ಯಾತ ನಟ ಪ್ರಭಾಸ್ (Prabhas) ನಟನೆಯ ‘ಸಲಾರ್’ (Salar) ಸಿನಿಮಾದಲ್ಲಿ ಈಗಾಗಲೇ ಕನ್ನಡದ ನಟ ಪ್ರಮೋದ್ (Pramod) ನಟಿಸಿದ್ದಾರೆ ಎನ್ನುವುದನ್ನು ಎಕ್ಸ್ ಕ್ಲೂಸಿವ್ ಆಗಿ ಪಬ್ಲಿಕ್ ಟಿವಿ ಡಿಜಿಟಲ್ ಪ್ರಕಟಿಸಿತ್ತು. ಇದೀಗ ಮತ್ತೋರ್ವ ಕನ್ನಡದ ಖ್ಯಾತ ನಟ ಈ ಸಿನಿಮಾದಲ್ಲಿ ನಟಿಸಿದ್ದಾರೆ ಎನ್ನುವುದು ಬಹಿರಂಗವಾಗಿದೆ. ಈ ವಿಷಯವನ್ನು ಸ್ವತಃ ಅವರೇ ಹೇಳಿಕೊಂಡಿದ್ದಾರೆ.

    ಖಳನಟನಾಗಿ, ನಾಯಕ ನಟನಾಗಿ ಸಾಕಷ್ಟು ಸಿನಿಮಾಗಳಲ್ಲಿ ಅಭಿನಯಿಸಿರುವ ದೇವರಾಜ್ (Devaraj), ಸಲಾರ್ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಮಾಹಿತಿಯನ್ನು ಅವರೇ ಹಂಚಿಕೊಂಡಿದ್ದಾರೆ. ಮಾಧ್ಯಮದೊಂದಿಗೆ ಮಾತನಾಡಿರುವ ಅವರು ‘ನಾನು ಸಲಾರ್ ಸಿನಿಮಾದಲ್ಲಿ ನಟಿಸಿದ್ದೇನೆ’ ಎಂದು ಹೇಳಿಕೊಂಡಿದ್ದಾರೆ. ಇದನ್ನೂ ಓದಿ: ನಟ ಚೇತನ್‌ ಭಾರತದ ವೀಸಾ ರದ್ದು

    ದೇವರಾಜ್ ಅವರು ಯಾವ ರೀತಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ ಎನ್ನುವ ಕುರಿತು ಯಾವುದೇ ಮಾಹಿತಿಯನ್ನು ಹಂಚಿಕೊಂಡಿಲ್ಲ. ಆ ಕುರಿತು ಏನೂ ಹೇಳಲಾರೆ ಎಂದಷ್ಟೇ ಉತ್ತರಿಸಿದ್ದಾರೆ. ಸಿನಿಮಾದ ಮೊದಲರ್ಧ ಕಡಿಮೆ ಅವಧಿಯಲ್ಲಿ ಕಾಣಿಸಿಕೊಳ್ಳುವೆ, ದ್ವಿತೀಯಾರ್ಧದಲ್ಲಿ ಹೆಚ್ಚು ಸಮಯ ತೆರೆಯ ಮೇಲೆ ಇರುತ್ತೇನೆ ಎಂದೂ ಅವರು ಮಾತನಾಡಿದ್ದಾರೆ.

    ಪ್ರಶಾಂತ್ ನೀಲ್ ತೆಲುಗಿನಲ್ಲಿ ಸಿನಿಮಾ ಮಾಡುತ್ತಿದ್ದರೂ, ಕನ್ನಡದ ಅನೇಕ ಕಲಾವಿದರನ್ನು ಮತ್ತು ತಂತ್ರಜ್ಞರನ್ನು ಆ ಚಿತ್ರಕ್ಕಾಗಿ ಬಳಸಿಕೊಂಡಿದ್ದಾರೆ. ಸಿನಿಮಾಟೋಗ್ರಾಫರ್, ಸಂಕಲನಕಾರ ಹೀಗೆ ಅನೇಕ ಕನ್ನಡದ ತಂತ್ರಜ್ಞರೇ ಈ ಚಿತ್ರಕ್ಕಾಗಿ ಕೆಲಸ ಮಾಡುತ್ತಿದ್ದಾರೆ. ಜೊತೆಗೆ ಅನೇಕ ಕಲಾವಿದರು ಕೂಡ ಸಲಾರ್ ನಲ್ಲಿ ಕಾಣಿಸಿಕೊಂಡಿದ್ದಾರೆ.

  • ಸಲಾರ್ ಸಿನಿಮಾದಲ್ಲಿ ‘ಕಾಂತಾರ’ ನಟನಿಗೆ ಅವಕಾಶ ನೀಡಿದ ಪ್ರಶಾಂತ್ ನೀಲ್

    ಸಲಾರ್ ಸಿನಿಮಾದಲ್ಲಿ ‘ಕಾಂತಾರ’ ನಟನಿಗೆ ಅವಕಾಶ ನೀಡಿದ ಪ್ರಶಾಂತ್ ನೀಲ್

    ತೆಲುಗಿನ ಸಲಾರ್ ಸಿನಿಮಾದಲ್ಲಿ ನಟಿಸುವಂತಹ ಅವಕಾಶವನ್ನು ಮೊನ್ನೆಯಷ್ಟೇ ಪ್ರಮೋದ್ ಪಡೆದುಕೊಂಡಿರುವ ಸುದ್ದಿಯನ್ನು ಓದಿದ್ದೀರಿ. ಇದೀಗ ಗಾಂಧಿನಗರದಲ್ಲಿ ಮತ್ತೊಂದು ಸುದ್ದಿ ಹರಿದಾಡುತ್ತಿದ್ದು, ಕಾಂತಾರ ಸಿನಿಮಾದಲ್ಲಿ ನಟಿಸಿರುವ ನಟರೊಬ್ಬರಿಗೆ ಇದೇ ಸಿನಿಮಾದಲ್ಲಿ ನಟಿಸಲು ಅವಕಾಶ ನೀಡಿದ್ದಾರಂತೆ ನಿರ್ದೇಶಕ ಪ್ರಶಾಂತ್ ನೀಲ್. ಅವರು ಇನ್ನೂ ಚಿತ್ರೀಕರಣದಲ್ಲಿ ಭಾಗಿ ಆಗಿಲ್ಲವಾದರೂ, ಸದ್ಯದಲ್ಲೇ ಶೂಟಿಂಗ್ ನಲ್ಲಿ ಪಾಲ್ಗೊಳ್ಳಲಿದ್ದಾರಂತೆ.

    ಕಾಂತಾರ ಸಿನಿಮಾದಲ್ಲಿ ದೈವನರ್ತಕನಾಗಿ ನಟಿಸಿದ್ದ ನವೀನ್ ಬೊಂಡೇಲ್ ಅವರಿಗೆ ಸಲಾರ್ ಸಿನಿಮಾದಲ್ಲಿ ನಟಿಸಲು ಅವಕಾಶ ಸಿಕ್ಕಿದೆ ಎಂದು ಹೇಳಲಾಗುತ್ತಿದ್ದು, ಇದಕ್ಕೂ ಮುನ್ನ ಪ್ರಶಾಂತ್ ನೀಲ್ ಅವರೇ ಬರೆದ ಬಘೀರ್ ಸಿನಿಮಾದಲ್ಲೂ ಬೊಂಡೇಲ್ ನಟಿಸಿದ್ದಾರಂತೆ. ತಮ್ಮ ಭಾಗದ ಚಿತ್ರೀಕರಣ ಮುಗಿಸಿಕೊಂಡು, ಸಲಾರ್ ಶೂಟಿಂಗ್ ಗೆ ಹೊರಡಲು ರೆಡಿ ಮಾಡಿಕೊಳ್ಳುತ್ತಿದ್ದಾರೆ ಎನ್ನುವ ಮಾಹಿತಿ ಇದೆ. ಅದನ್ನೂ ಓದಿ:400 ಕೋಟಿ ಕ್ಲಬ್ ಸೇರಿ ದಾಖಲೆ ಬರೆದ ‘ಕಾಂತಾರ’ ಸಿನಿಮಾ

    ಐವತ್ತು ದಿನಗಳನ್ನು ಪೂರೈಸಿ, ಯಶಸ್ಸಿಯಾಗಿ ಮುನ್ನುಗ್ಗುತ್ತಿರುವ ‘ಕಾಂತಾರ’ ಸಿನಿಮಾ ಈವರೆಗೂ 400 ಕೋಟಿ ರೂಪಾಯಿ ಗಳಿಕೆ ಮಾಡಿದೆ ಎಂದು ಅಂದಾಜಿಸಲಾಗಿದೆ. ಕರ್ನಾಟಕವೊಂದರಲ್ಲೇ 170 ಕೋಟಿಗೂ ಅಧಿಕ ಹಣ ಬಾಕ್ಸ್ ಆಫೀಸಿಗೆ ಹರಿದು ಬಂದಿದೆ ಎಂದು ಹೇಳಲಾಗುತ್ತಿದೆ. ಹಿಂದಿ, ತಮಿಳು, ತೆಲುಗು, ಮಲಯಾಳಂ ಹಾಗೂ ವಿದೇಶದಿಂದ ಬಂದ ಹಣವನ್ನು ಒಟ್ಟಾಗಿಸಿದರೆ ಸಿನಿಮಾದ ಒಟ್ಟು ಗಳಿಕೆ 400 ಕೋಟಿ ಎಂದು ಅಂದಾಜಿಸಲಾಗಿದೆ. ಹಾಗಾಗಿ ಕಡಿಮೆ ಬಜೆಟ್ ನಲ್ಲಿ ತಯಾರಾದ ಸಿನಿಮಾ ಈ ಪ್ರಮಾಣದಲ್ಲಿ ಗಳಿಕೆ ಮಾಡಿದ್ದು ಒಂದು ರೀತಿಯಲ್ಲಿ ದಾಖಲೆ ಎಂದೇ ಬಣ್ಣಿಸಲಾಗುತ್ತಿದೆ.

    Live Tv
    [brid partner=56869869 player=32851 video=960834 autoplay=true]

  • ‘ಸಲಾರ್’ ಸಿನಿಮಾದಲ್ಲಿ ಪ್ರಮೋದ್: ಶ್ರುತಿ ನಾಯ್ಡು ಹೇಳಿದ್ದ ಭವಿಷ್ಯ ನಿಜವಾಯ್ತು

    ‘ಸಲಾರ್’ ಸಿನಿಮಾದಲ್ಲಿ ಪ್ರಮೋದ್: ಶ್ರುತಿ ನಾಯ್ಡು ಹೇಳಿದ್ದ ಭವಿಷ್ಯ ನಿಜವಾಯ್ತು

    ಪ್ರಶಾಂತ್ ನೀಲ್ ನಿರ್ದೇಶನದ ಸಿನಿಮಾದಲ್ಲಿ ನಟಿಸಲು ಭಾರತೀಯ ಸಿನಿಮಾ ರಂಗದ ಅನೇಕ ಕಲಾವಿದರು ಕಾಯುತ್ತಿದ್ದಾರೆ. ಕೆಲವರಂತೂ ಅದನ್ನು ಬಹಿರಂಗವಾಗಿಯೇ ಹೇಳಿಕೊಂಡಿದ್ದಾರೆ. ಆದರೆ, ಬಯಸದೇ ಬಂದ ಭಾಗ್ಯ ಅನ್ನುವಂತೆ ಪ್ರಮೋದ್ ‘ಸಲಾರ್’ ಸಿನಿಮಾದಲ್ಲಿ ನಟಿಸುವ ಮೂಲಕ ಅಚ್ಚರಿ ಮೂಡಿಸಿದ್ದಾರೆ. ಇಂಥದ್ದೊಂದು ಅವಕಾಶವನ್ನು ಕಲ್ಪಿಸಿದ್ದಕ್ಕಾಗಿ ಪ್ರಶಾಂತ್ ನೀಲ್ ಅವರಿಗೆ ಧನ್ಯವಾದಗಳನ್ನೂ ಹೇಳಿದ್ದಾರೆ ಪ್ರಮೋದ್.

    ತಮಗೆ ಸಲಾರ್ ಸಿನಿಮಾದಲ್ಲಿ ನಟಿಸಲು ಅವಕಾಶ ಸಿಕ್ಕಿದ್ದು ಹೇಗೆ ಎನ್ನುವ ಕುರಿತು ಪಬ್ಲಿಕ್ ಟಿವಿ ಡಿಜಿಟಲ್ ಜೊತೆ ಮಾತನಾಡಿದ ಪ್ರಮೋದ್, ರತ್ನನ್ ಪ್ರಪಂಚ ಸಿನಿಮಾದ ಪಾತ್ರವೇ ಅವರಿಗೆ ಸಲಾರ್ ದಲ್ಲಿ ನಟಿಸುವಂತಹ ಅವಕಾಶ ಮಾಡಿದ್ದು ಎನ್ನುತ್ತಾರೆ. ‘ರತ್ನನ್ ಪ್ರಪಂಚ ಸಿನಿಮಾವನ್ನು ನೋಡಿದ್ದ ಪ್ರಶಾಂತ್ ನೀಲ್, ಆ ಪಾತ್ರವನ್ನು ನೋಡಿ ನನ್ನೊಳಗಿನ ಶಕ್ತಿಯನ್ನು ಗುರುತಿಸಿದ್ದರು. ನಿನ್ನಿಂದ ಒಂದು ಪಾತ್ರ ಮಾಡಿಸುವೆ ಅಂದಿದ್ದರು. ಆದಾದ ನಂತರ ಆರೇಳು ತಿಂಗಳಾದರೂ, ಸಲಾರ್ ಸಿನಿಮಾದ ಶೂಟಿಂಗ್ ಶುರುವಾಗಿದ್ದರೂ ನನ್ನನ್ನು ಕರೆಯಲೇ ಇಲ್ಲ’ ಎಂದು ನಿರಾಸೆ ವ್ಯಕ್ತ ಪಡಿಸಿದರು.

    ಆರೇಳು ತಿಂಗಳು ನಂತರ ಪ್ರಶಾಂತ್ ನೀಲ್ ಅವರು ಕರೆ ಮಾಡಿದರು ಎಂದು ಉತ್ಸಾಹದಿಂದಲೇ ಮಾತನ್ನು ಮುಂದುವರೆಸಿದ ಪ್ರಮೋದ್, ‘ನಿನಗೊಂದು ಪಾತ್ರ ಸಿದ್ದವಿದೆ. ಹೈದರಾಬಾದ್ ಗೆ ಬನ್ನಿ, ಲುಕ್ ಟೆಸ್ಟ್ ಮಾಡಿಸೋಣ ಅಂತ ಪ್ರಶಾಂತ್ ಅವರು ಫೋನ್ ಮಾಡಿದರು. ನಿಜಕ್ಕೂ ನನಗೆ ಖುಷಿ ಆಯಿತು. ನನಗಾಗಿ ಇನ್ನೂ ಪಾತ್ರ ಕಾದಿದೆ ಎಂದು ಹೊರಟೆ. ಲುಕ್ ಟೆಸ್ಟ್ ಮಾಡಿದರೂ, ತುಂಬಾ ಮೆಚ್ಚುಗೆ ಸೂಚಿಸಿದರು. ಈ ರೀತಿಯ ಪಾತ್ರ ಕೊಡುತ್ತಾರೆ ಅಂತ ನಾನು ಅಂದುಕೊಂಡಿರಲಿಲ್ಲ. ನನ್ನ ವೃತ್ತಿ ಜೀವನದ ಬೆಸ್ಟ್ ಪಾತ್ರ ಮತ್ತು ಸಿನಿಮಾ ಇದಾಗಲಿದೆ’ ಎನ್ನುತ್ತಾರೆ ಪ್ರಶಾಂತ್.

    ಶ್ರುತಿ ನಾಯ್ಡು ನಿರ್ದೇಶನದ ‘ಪ್ರೀಮಿಯರ್ ಪದ್ಮಿನಿ’ ಸಿನಿಮಾ ಮಾಡಿದಾಗ, ಪ್ರಮೋದ್ ಅವರ ಪಾತ್ರಕ್ಕೆ ಅತ್ಯುತ್ತಮ ಪ್ರತಿಕ್ರಿಯೆ ಸಿಕ್ಕಿತ್ತು. ಆವಾಗಲೇ ಪ್ರಮೋದ್ ಬಗ್ಗೆ ಶ್ರುತಿ ನಾಯ್ಡು ಮಾತನಾಡುತ್ತಾ, ‘ಪ್ರಮೋದ್ ಮುಂದಿನ ದಿನಗಳಲ್ಲಿ ದೊಡ್ಡ ಮಟ್ಟದ ಸಿನಿಮಾದಲ್ಲಿ ಪಾತ್ರ ಮಾಡುತ್ತಾರೆ. ಒಳ್ಳೆಯ ಭವಿಷ್ಯವಿದೆ’ ಎಂದು ನುಡಿದಿದ್ದರು. ಇದೀಗ ಪ್ರಮೋದ್ ಪ್ಯಾನ್ ಇಂಡಿಯಾ ಸಿನಿಮಾದಲ್ಲಿ ದೊಡ್ಡ ಪಾತ್ರವನ್ನೇ ಮಾಡಿದ್ದಾರೆ. ಪ್ರಭಾಸ್, ಪೃಥ್ವಿ ಸುಕುಮಾರ್ ಸೇರಿದಂತೆ ಭಾರತೀಯ ಸಿನಿಮಾ ರಂಗದ ದಿಗ್ಗಜರೇ ನಟಿಸಿರುವ ಸಲಾರ್ ಚಿತ್ರದಲ್ಲಿ ಮುಖ್ಯ ಪಾತ್ರ ಮಾಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ‘ಸಲಾರ್’ ಸಿನಿಮಾದಲ್ಲಿ ಕನ್ನಡದ ಯುವ ನಾಯಕ ಪ್ರಮೋದ್ ನಟಿಸಿದ್ದು ನಿಜ : ಪ್ರಶಾಂತ್ ನೀಲ್

    ‘ಸಲಾರ್’ ಸಿನಿಮಾದಲ್ಲಿ ಕನ್ನಡದ ಯುವ ನಾಯಕ ಪ್ರಮೋದ್ ನಟಿಸಿದ್ದು ನಿಜ : ಪ್ರಶಾಂತ್ ನೀಲ್

    ಪ್ರಭಾಸ್ ಮತ್ತು ಪ್ರಶಾಂತ್ ನೀಲ್ ಕಾಂಬಿನೇಷನ್ ನ ಸಲಾರ್ ಸಿನಿಮಾ ಅಡ್ಡದಿಂದ ಹೊಸ ಸುದ್ದಿಯೊಂದು ಬಂದಿದ್ದು, ಕನ್ನಡದ ನಾಯಕ ನಟ ಪ್ರಮೋದ್ ಕೂಡ ಈ ಸಿನಿಮಾದಲ್ಲಿ ನಟಿಸಿದ್ದಾರಂತೆ. ಈಗಾಗಲೇ ತಮ್ಮ ಭಾಗದ ಚಿತ್ರೀಕರಣವನ್ನು ಮುಗಿಸಿಯೂ ಬಂದಿದ್ದಾರಂತೆ. ಯಾವ ಪಾತ್ರ, ಯಾವಾಗ ಶೂಟಿಂಗ್ ನಲ್ಲಿ ಭಾಗಿಯಾಗಿದ್ದರೆ ಎನ್ನುವ ಮಾಹಿತಿ ಕೊಡದೇ ಇದ್ದರೂ, ಪ್ರಮೋದ್ ಈ ಸಿನಿಮಾದಲ್ಲಿ ಪ್ರಮುಖ ಪಾತ್ರವೊಂದನ್ನು ನಿರ್ವಹಿಸಿದ್ದು ನಿಜ ಎನ್ನಲಾಗುತ್ತಿದೆ ಎಂದು ಈ ಹಿಂದೆಯೇ ಪಬ್ಲಿಕ್ ಟಿವಿ ಡಿಜಿಟಲ್ ಸುದ್ದಿ ಮಾಡಿತ್ತು. ಅದು ಈಗ ನಿಜವಾಗಿದೆ. ಈ ಕುರಿತು ಸ್ವತಃ ಪ್ರಶಾಂತ್ ನೀಲ್ ಅವರೇ ಪ್ರತಿಕ್ರಿಯಿಸಿದ್ದಾರೆ.

    ಮಾಧ್ಯಮದ ಜೊತೆ ಮಾತನಾಡಿರುವ ಪ್ರಶಾಂತ್ ನೀಲ್, ‘ಪ್ರಮೋದ್ ಅವರನ್ನು ನಾನು ರತ್ನನ್ ಪ್ರಪಂಚ ಸಿನಿಮಾದಲ್ಲಿ ನೋಡಿದ್ದೆ. ಆ ಸಿನಿಮಾದಲ್ಲಿ ಅವರು ತುಂಬಾ ಚೆನ್ನಾಗಿ ಅಭಿನಯಿಸಿದ್ದರು. ಈ ಸಿನಿಮಾದ ಅವರ ಅಭಿನಯವೇ ಸಲಾರ್ ಸಿನಿಮಾದಲ್ಲಿ ನಟಿಸಲು ಆಯ್ಕೆ ಮಾಡುವಂತೆ ಮಾಡಿತ್ತು. ಹಾಗಾಗಿ ಸಲಾರ್ ಸಿನಿಮಾದಲ್ಲಿ ಪ್ರಮೋದ್ ಪ್ರಮುಖ ಪಾತ್ರವೊಂದರಲ್ಲಿ ನಟಿಸಿದ್ದಾರೆ’ ಎಂದು ಹೇಳಿದ್ದಾರೆ. ಇದನ್ನೂ ಓದಿ:ವಿಜಯ್ ದೇವರಕೊಂಡ ನಂತರ ಅವರ ತಾಯಿಯೂ ಅಂಗಾಂಗ ದಾನಕ್ಕೆ ನೋಂದಣಿ

    ಕಿರುತೆರೆಯ ಪಾಪ್ಯುಲರ್ ನಟರಾಗಿ ಸಿನಿಮಾ ರಂಗಕ್ಕೆ ಕಾಲಿಟ್ಟ ಪ್ರಮೋದ್, ಪ್ರಿಮೀಯರ್ ಪದ್ಮಿನಿ ಸಿನಿಮಾದ ಮೂಲಕ ಭರವಸೆ ಮೂಡಿಸಿದರು. ರತ್ನನ್ ‍ಪ್ರಪಂಚ ಸಿನಿಮಾದಲ್ಲಿ ಇವರ ನಟನೆ ಕಂಡು ಅಭಿಮಾನಿ ಬಳಗವೂ ಹೆಚ್ಚಾಯಿತು. ಈಗ ಮತ್ತೆರಡು ಸಿನಿಮಾಗಳನ್ನು ಒಪ್ಪಿಕೊಂಡಿರುವ ಪ್ರಮೋದ್, ಸಲಾರ್ ಸಿನಿಮಾ ರಿಲೀಸ್ ನಂತರ ಬೇರೆ ಭಾಷೆಯ ಚಿತ್ರಗಳಲ್ಲೂ ಅವರಿಗೆ ಅವಕಾಶ ಸಿಗಬಹುದು ಎಂದು ಹೇಳಲಾಗುತ್ತಿದೆ.

    ಅಂದುಕೊಂಡಂತೆ ಆಗಿದ್ದರೆ ಸಲಾರ್ ಸಿನಿಮಾದ ಚಿತ್ರೀಕರಣ ಇಷ್ಟೊತ್ತಿಗೆ ಮುಗಿಯಬೇಕಿತ್ತು. ಆದರೆ, ನಾನಾ ಕಾರಣಗಳಿಂದಾಗಿ ಅದು ಸಾಧ್ಯವಾಗಿಲ್ಲ. ಬಿಡುಗಡೆಗೆ ಇನ್ನೂ ಟೈಮ್ ಇರುವುದರಿಂದ ನಿಧಾನವಾಗಿಯೇ ಶೂಟಿಂಗ್ ಮಾಡುತ್ತಿದ್ದಾರಂತೆ ಪ್ರಶಾಂತ್ ನೀಲ್. ಹೊಂಬಾಳೆ ಬ್ಯಾನರ್ ನಿಂದ ಈ ಸಿನಿಮಾ ತಯಾರಾಗುತ್ತಿದ್ದು, ಪ್ರಭಾಸ್ ನಾಯಕ ನಟರಾಗಿ ಪಾತ್ರ ಮಾಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಪ್ರಶಾಂತ್ ನೀಲ್ ನಿರ್ದೇಶನದ ‘ಸಲಾರ್’ ಸಿನಿಮಾದಲ್ಲಿ ಪ್ರಮೋದ್ ಗೆ ಅವಕಾಶ

    ಪ್ರಭಾಸ್ ಮತ್ತು ಪ್ರಶಾಂತ್ ನೀಲ್ ಕಾಂಬಿನೇಷನ್ ನ ಸಲಾರ್ (Salar) ಸಿನಿಮಾ ಅಡ್ಡದಿಂದ ಹೊಸ ಸುದ್ದಿಯೊಂದು ಬಂದಿದ್ದು, ಕನ್ನಡದ ನಾಯಕ ನಟ ಪ್ರಮೋದ್ ಕೂಡ ಈ ಸಿನಿಮಾದಲ್ಲಿ ನಟಿಸಿದ್ದಾರಂತೆ. ಈಗಾಗಲೇ ತಮ್ಮ ಭಾಗದ ಚಿತ್ರೀಕರಣವನ್ನು ಮುಗಿಸಿಯೂ ಬಂದಿದ್ದಾರಂತೆ. ಯಾವ ಪಾತ್ರ, ಯಾವಾಗ ಶೂಟಿಂಗ್ ನಲ್ಲಿ ಭಾಗಿಯಾಗಿದ್ದರೆ ಎನ್ನುವ ಮಾಹಿತಿ ಕೊಡದೇ ಇದ್ದರೂ, ಪ್ರಮೋದ್ ಈ ಸಿನಿಮಾದಲ್ಲಿ ಪ್ರಮುಖ ಪಾತ್ರವೊಂದನ್ನು ನಿರ್ವಹಿಸಿದ್ದು ನಿಜ ಎನ್ನಲಾಗುತ್ತಿದೆ.

    ಕಿರುತೆರೆಯ ಪಾಪ್ಯುಲರ್ ನಟರಾಗಿ ಸಿನಿಮಾ ರಂಗಕ್ಕೆ ಕಾಲಿಟ್ಟ ಪ್ರಮೋದ್, ಪ್ರಿಮೀಯರ್ ಪದ್ಮಿನಿ ಸಿನಿಮಾದ ಮೂಲಕ ಭರವಸೆ ಮೂಡಿಸಿದರು. ರತ್ನನ್ ‍ಪ್ರಪಂಚ ಸಿನಿಮಾದಲ್ಲಿ ಇವರ ನಟನೆ ಕಂಡು ಅಭಿಮಾನಿ ಬಳಗವೂ ಹೆಚ್ಚಾಯಿತು. ಈಗ ಮತ್ತೆರಡು ಸಿನಿಮಾಗಳನ್ನು ಒಪ್ಪಿಕೊಂಡಿರುವ ಪ್ರಮೋದ್, ಈ ನಡುವೆ ಸಲಾರ್ ಸಿನಿಮಾದ ಚಿತ್ರೀಕರಣದಲ್ಲೂ ಭಾಗಿಯಾಗಿದ್ದಾರಂತೆ. ಈ ವಿಷಯವನ್ನು ಅವರು ಬಹಿರಂಗ ಪಡಿಸದೇ ಇದ್ದರೂ, ಸಲಾರ್ ಟೀಮ್ ನಿಂದಲೂ ಈ ಸುದ್ದಿ ಲೀಕ್ ಆಗಿದೆಯಂತೆ. ಇದನ್ನೂ ಓದಿ:ಡಿವೋರ್ಸ್ ವದಂತಿಯ ನಡುವೆ ಸಾನಿಯಾ ಮಿರ್ಜಾ ಬರ್ತ್‌ಡೇಗೆ ಶೋಯೆಬ್ ಮಲಿಕ್ ವಿಶ್

    ಅಂದುಕೊಂಡಂತೆ ಆಗಿದ್ದರೆ ಸಲಾರ್ ಸಿನಿಮಾದ ಚಿತ್ರೀಕರಣ ಇಷ್ಟೊತ್ತಿಗೆ ಮುಗಿಯಬೇಕಿತ್ತು. ಆದರೆ, ನಾನಾ ಕಾರಣಗಳಿಂದಾಗಿ ಅದು ಸಾಧ್ಯವಾಗಿಲ್ಲ. ಬಿಡುಗಡೆಗೆ ಇನ್ನೂ ಟೈಮ್ ಇರುವುದರಿಂದ ನಿಧಾನವಾಗಿಯೇ ಶೂಟಿಂಗ್ ಮಾಡುತ್ತಿದ್ದಾರಂತೆ ಪ್ರಶಾಂತ್ ನೀಲ್. ಹೊಂಬಾಳೆ ಬ್ಯಾನರ್ ನಿಂದ ಈ ಸಿನಿಮಾ ತಯಾರಾಗುತ್ತಿದ್ದು, ಪ್ರಭಾಸ್ ನಾಯಕ ನಟರಾಗಿ ಪಾತ್ರ ಮಾಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]