Tag: Pramod

  • ಉಡಾಳ್ ಬಾಬು ಆಗಿದ್ದ ನಟ ಪ್ರಮೋದ್ ಇದೀಗ ‘ಬಾಂಡ್ ರವಿ’ ಅವತಾರ:  ಟೀಸರ್ ಗೆ ಮೆಚ್ಚುಗೆಯ ಮಹಾಪೂರ

    ಉಡಾಳ್ ಬಾಬು ಆಗಿದ್ದ ನಟ ಪ್ರಮೋದ್ ಇದೀಗ ‘ಬಾಂಡ್ ರವಿ’ ಅವತಾರ: ಟೀಸರ್ ಗೆ ಮೆಚ್ಚುಗೆಯ ಮಹಾಪೂರ

    ಸ್ಯಾಂಡಲ್ ವುಡ್ ಅಂಗಳದ ಯುವ ಹಾಗೂ ಪ್ರತಿಭಾನ್ವಿತ ನಾಯಕ ನಟ ಪ್ರಮೋದ್. ರತ್ನನ್ ಪ್ರಪಂಚದಲ್ಲಿ ಉಡಾಳ್ ಬಾಬು ಆಗಿ ಸಿನಿ ಪ್ರೇಕ್ಷಕರ ಮನಸೂರೆಗೊಂಡ ಪ್ರಮೋದ್ ‘ಬಾಂಡ್ ರವಿ’ಯಾಗಿ ತೆರೆ ಮೇಲೆ ಬರೋಕೆ ಸಜ್ಜಾಗಿದ್ದಾರೆ.  ಈ ಚಿತ್ರದ ಇಂಟ್ರಸ್ಟಿಂಗ್ ಹಾಗೂ ಅಷ್ಟೇ ಖಡಕ್ ಆದ ಟೀಸರ್ ಇಂದು ಬಿಡುಗಡೆಯಾಗಿದೆ. ಪ್ರಮೋದ್ ಖಡಕ್ ಅಂಡ್ ಮಾಸ್ ಆಕ್ಟಿಂಗ್ ಎಲ್ಲರ ಗಮನ ಸೆಳೆಯುತ್ತಿದೆ. ಟೀಸರ್ ನೋಡಿದವರು ಬಾಂಡ್ ರವಿ (Bond Ravi) ಬ್ರ್ಯಾಂಡ್ ರವಿ ಆಗೋದ್ರಲ್ಲಿ ಡೌಟೇ ಇಲ್ಲ ಅಂತಿದ್ದಾರೆ. ಟೀಸರ್ (Teaser) ಪತ್ರಕರ್ತರಿಂದ ಬಿಡುಗಡೆಯಾಗಿದ್ದು ವಿಶೇಷ. ಇದಕ್ಕೆ ಕಾರಣ ನಟ ಪ್ರಮೋದ್. ನಾನು ಏನು ಆಗಿಲ್ಲದೆ ಇದ್ದಾಗಿನಿಂದಲೂ ನನ್ನನ್ನು  ಸಪೋರ್ಟ್ ಮಾಡಿಕೊಂಡು ಬಂದವರು ಪತ್ರಕರ್ತರು. ಎಂಟು ವರ್ಷದಿಂದ ನನ್ನ ಪ್ರತಿ ಹೆಜ್ಜೆಯಲ್ಲಿ ಮಾಧ್ಯಮ ಹಾಗೂ ಪತ್ರಕರ್ತ ಮಿತ್ರರ ಸಪೋಟ್ ಬಹಳ ದೊಡ್ಡದು. ಆದ್ದರಿಂದ ಈ ಚಿತ್ರದ ಟೀಸರ್ ಪತ್ರಕರ್ತ ಮಿತ್ರರೇ ಬಿಡುಗಡೆ ಮಾಡಿಕೊಡಬೇಕು ಎಂದು ಪತ್ರಕರ್ತರ ಮೂಲಕ ಟೀಸರ್ ಬಿಡುಗಡೆ ಮಾಡಿಸಿದ್ದು ಬಹಳ ವಿಶೇಷವಾಗಿತ್ತು.

    ‘ಗೀತಾ ಬ್ಯಾಂಗಲ್ ಸ್ಟೋರ್’ ಚಿತ್ರದ ಮೂಲಕ ಸ್ಯಾಂಡಲ್ ವುಡ್ ಗೆ ನಾಯಕ ನಟನಾಗಿ ಎಂಟ್ರಿ ಕೊಟ್ಟ ಪ್ರಮೋದ್ (Pramod) ‘ಮತ್ತೆ ಉದ್ಭವ’, ‘ಪ್ರೀಮಿಯರ್ ಪದ್ಮಿನಿ’ ಹಾಗೂ ‘ರತ್ನನ್ ಪ್ರಪಂಚ’ ಸಿನಿಮಾಗಳಲ್ಲಿ ತಮ್ಮ ವಿಶೇಷ ಅಭಿನಯದ ಮೂಲಕ ಅಪಾರ ಮನ್ನಣೆ ಗಳಿಸಿಕೊಂಡಿದ್ದಾರೆ. ‘ಬಾಂಡ್ ರವಿ’ ಸಿನಿಮಾ ಪ್ರಮೋದ್ ಗೆ ಬಿಗ್ ಬ್ರೇಕ್ ನೀಡೋದ್ರಲ್ಲಿ ಡೌಟೇ ಇಲ್ಲ ಎನ್ನುವಂತಿದೆ ಬಿಡುಗಡೆಯಾಗಿರುವ ಪ್ರಾಮಿಸಿಂಗ್ ಟೀಸರ್. ಪಂಚಿಂಗ್  ಹಾಗೂ ಮಾಸ್ ಡೈಲಾಗ್ ಗಳು ಟೀಸರ್ ನಲ್ಲಿ ಗಮನ ಸೆಳೆದಿದ್ದು ಸಿನಿಮಾ ಮೇಲಿನ ಕ್ಯೂರಿಯಾಸಿಟಿಯನ್ನು ಹೆಚ್ಚಿಸಿದೆ. ನಟ ಪ್ರಮೋದ್ ಮಾತನಾಡಿ ನಾನು ಈ ಸಿನಿಮಾವನ್ನು ತುಂಬಾ ಮೆಚ್ಚಿ ಇಷ್ಟಪಟ್ಟು ಮಾಡಿದ್ದೇನೆ. ಈ ಸಿನಿಮಾ ಮೇಲೆ ಕೆಟ್ಟ ನಂಬಿಕೆ ಇದೆ. ಸಿನಿಮಾ ಗೆದ್ದೇ ಗೆಲ್ಲುತ್ತೆ ಅನ್ನೋ ಬಲವಾದ ನಂಬಿಕೆ ಕೂಡ ನನಗಿದೆ. ಅಷ್ಟು ಒಳ್ಳೆಯ ಕಂಟೆಂಟ್, ಕಥೆ ಸಿನಿಮಾದಲ್ಲಿದೆ. ನಾನು ಕೂಡ ಈ ಸಿನಿಮಾ ಮೂಲಕ ದೊಡ್ಡ ಮಟ್ಟದಲ್ಲಿ ಗೆಲ್ಲುತ್ತೇನೆ ಎಂದು ಭರವಸೆಯ ಮಾತುಗಳನ್ನಾಡಿದ್ರು.

    ಸಂಗೀತ ನಿರ್ದೇಶಕ ಮನೋಮೂರ್ತಿ (Manomurthy) ಮಾತನಾಡಿ ನನಗೂ ಈ ಸಿನಿಮಾ ಬಗ್ಗೆ ಅಪಾರ ಭರವಸೆ ಇದೆ. ಮುಂಗಾರು ಮಳೆ ಕೂಡ ಹೀಗೆ ಆರಂಭವಾಗಿದ್ದು, ಅದು ದೊಡ್ಡ ಹಿಟ್ ಆಯ್ತು ಈ ಸಿನಿಮಾ ಕೂಡ ಹಿಟ್ ಆಗುತ್ತೆ. ಪ್ರಮೋದ್ ಮತ್ತು ಕಾಜಲ್ ಕುಂದರ್ ಇಬ್ಬರು ಅಮೋಘವಾಗಿ ನಟಿಸಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ರು. ಚಿತ್ರದ ನಟಿ ಕಾಜಲ್ ಕುಂದರ್ ಮಾತನಾಡಿ ನನ್ನ ಮೇಲೆ ನಂಬಿಕೆ ಇಟ್ಟು ಒಳ್ಳೆಯ ಪಾತ್ರವನ್ನು ಕೊಟ್ಟಿದ್ದಕ್ಕೆ  ಚಿತ್ರತಂಡಕ್ಕೆ ತುಂಬಾ ಧನ್ಯವಾದಗಳು. ನನ್ನ ಪಾತ್ರಕ್ಕೆ ನ್ಯಾಯ ಒದಗಿಸಿದ್ದೇನೆ  ಎಂಬ ನಂಬಿಕೆ ಇದೆ. ಪ್ರಮೋದ್ ಅವರ ಜೊತೆ ನಟಿಸಿದ್ದು ತುಂಬಾ ಖುಷಿ ಕೊಟ್ಟಿದೆ ಎಂದ್ರು. ಇದನ್ನೂ ಓದಿ:`ಕಮಲಿ’ ಖ್ಯಾತಿಯ ಅಮೂಲ್ಯಗೌಡರ ಹಾಟ್ ಫೋಟೋ ವೈರಲ್

    ಚಿತ್ರದ ನಿರ್ದೇಶಕ ಪ್ರಜ್ಚಲ್ (Prajwal) ಮಾತನಾಡಿ ಇದು ನನ್ನ ಮೊದಲ ಸಿನಿಮಾ. ಸಿನಿಮಾ ಚೆನ್ನಾಗಿ ಮೂಡಿ ಮುಂದಿದೆ. ಒಂದೊಳ್ಳೆ ಸಿನಿಮಾ ಮಾಡಿದ ತೃಪ್ತಿ ನನಗಿದೆ. ಪ್ರಮೋದ್ ಅವರು ನನಗೆ ಸಿಕ್ಕಿದ್ದು ನನ್ನ ಅದೃಷ್ಟ. ಅವ್ರು ವ್ಯಕ್ತಿಯಾಗಿ, ನಟನಾಗಿ ನನಗೆ ತುಂಬಾ ಸಪೋರ್ಟ್ ಮಾಡಿದ್ದಾರೆ. ನವೆಂಬರ್ ನಲ್ಲಿ ಸಿನಿಮಾ ಬಿಡುಗಡೆಗೆ ಪ್ಲ್ಯಾನ್ ಮಾಡಿದ್ದೇವೆ. ಖಂಡಿತ ಈ ಚಿತ್ರ ಎಲ್ಲರಿಗೂ ಇಷ್ಟವಾಗುತ್ತೆ ಎಂದು ತಮ್ಮ ಸಿನಿಮಾ ಬಗ್ಗೆ ಮನದಾಳದ ಮಾತುಗಳನ್ನ ಹಂಚಿಕೊಂಡ್ರು.

    ಬಾಂಡ್ ರವಿ ಆಕ್ಷನ್ ಲವ್ ಸ್ಟೋರಿ ಸಿನಿಮಾ. ಚಿತ್ರರಂಗದಲ್ಲಿ ಹನ್ನೊಂದು ವರ್ಷಗಳಿಂದ ನಿರ್ದೇಶನ ವಿಭಾಗದಲ್ಲಿ ದುಡಿದ ಅನುಭವ ಇರುವ ಪ್ರಜ್ವಲ್ ಎಸ್.ಪಿ. ಬಾಂಡ್ ರವಿ ಸೂತ್ರಧಾರ.  ನರಸಿಂಹಮೂರ್ತಿ ಲೈಫ್ ಲೈನ್ ಫಿಲಂ ಬ್ಯಾನರ್ ನಡಿ ಬಾಂಡ್ ರವಿ ಸಿನಿಮಾಗೆ ಬಂಡವಾಳ ಹೂಡಿದ್ದು, ಮಲ್ಲಿಕಾರ್ಜುನ್ ಕಾಶಿ ಹಾಗೂ ಝೇವಿಯರ್ ಫರ್ನಾಂಡಿಸ್ ಸಹ ನಿರ್ಮಾಪಕರ ಜವಾಬ್ದಾರಿ ಹೊತ್ತುಕೊಂಡಿದ್ದಾರೆ. ಚಿತ್ರದಲ್ಲಿ ಅಪ್ಪು ಅಭಿಮಾನಿಯಾಗಿ ಪ್ರಮೋದ್ ನಟಿಸಿದ್ದು ಇವರಿಗೆ ಜೋಡಿಯಾಗಿ ಕಾಜಲ್ ಕುಂದರ್ ತೆರೆ ಹಂಚಿಕೊಂಡಿದ್ದಾರೆ.

    ಬೆಂಗಳೂರು, ಶಿವಮೊಗ್ಗ, ಕೊಡಚಾದ್ರಿ, ಕುದುರೆಮುಖ, ಉಡುಪಿ, ಮಂಗಳೂರು ಭಾಗಗಳಲ್ಲಿ ಬಾಂಡ್ ರವಿ ಚಿತ್ರೀಕರಣ ನಡೆಸಲಾಗಿದೆ. ರವಿಕಾಳೆ, ಧರ್ಮ, ವಿಜಯ್ ಚೆಂಡೂರ್, ಶೋಭರಾಜ್ ಚಿತ್ರದ ತಾರಾ ಬಳಗದಲ್ಲಿದ್ದಾರೆ. ಕೆ.ಎಸ್. ಚಂದ್ರಶೇಖರ್ ಛಾಯಾಗ್ರಹಣ, ಅರ್ಜುನ್ ಕಿಟ್ಟು ಸಂಕಲನ, ಸುನೀಲ್ ಮತ್ತು ದೇವ್ ಎನ್, ರಾಜ್ ಸಂಭಾಷಣೆ, ಮನೋಮೂರ್ತಿ ಸಂಗೀತ ಚಿತ್ರಕ್ಕಿದೆ.

    Live Tv
    [brid partner=56869869 player=32851 video=960834 autoplay=true]

  • ‘ಅಸ್ಥಿರ’ ಪಯಣದಲ್ಲಿ ಹೊಸ ಹುಡುಗರ ಥ್ರಿಲ್ಲರ್ ಸ್ಟೋರಿ

    ‘ಅಸ್ಥಿರ’ ಪಯಣದಲ್ಲಿ ಹೊಸ ಹುಡುಗರ ಥ್ರಿಲ್ಲರ್ ಸ್ಟೋರಿ

    ನಿರ್ದೇಶಕ ಹೊರತುಪಡಿಸಿ ಬಹುತೇಕ ಹೊಸಬರೇ ಸೇರಿಕೊಂಡು ಸಿದ್ದಪಡಿಸಿರುವ ’ಅಸ್ಥಿರ’ (Asthira) ಚಿತ್ರದ ಟೀಸರ್, ಎರಡು ಲಿರಿಕಲ್ ಹಾಡುಗಳ ಬಿಡುಗಡೆ ಕಾರ್ಯಕ್ರಮವು ಎಸ್‌ಆರ್‌ವಿ ಪ್ರಿವ್ಯೂ ಚಿತ್ರಮಂದಿರದಲ್ಲಿ ಅದ್ದೂರಿಯಾಗಿ ನಡೆಯಿತು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾ.ಮ.ಹರೀಶ್ ಪೋಸ್ಟರ್ ಅನಾವರಣಗೊಳಿಸಿ ತಂಡಕ್ಕೆ ಶುಭಹಾರೈಸಿದರು.

    ಸ್ಥಿರವಲ್ಲದ್ದನ್ನು ಅಸ್ಥಿರ ಎಂದು ಕರೆಯುವುದುಂಟು. ಅದೇ ರೀತಿ ಸೀಮಿತ ಮನಸ್ಥಿತಿ ಇಲ್ಲದೆ ಇರುವ ವ್ಯಕ್ತಿಯು ಪ್ರೀತಿಯಲ್ಲಿ ಸೋತಾಗ ಸಾಮಾನ್ಯ ಹುಡುಗನಾದವನು ಯಾವ ರೀತಿ ಇರುತ್ತಾನೆ ಎಂಬುದನ್ನು ಹೇಳಲಾಗಿದೆ. ತ್ರಿಕೋನ ಪ್ರೇಮ ಕಥೆಯು ಬನ್ನೂರುನಿಂದ ಕುಮುಟಾ, ಹೊನ್ನಾವರ ತನಕ ಪಯಣದಲ್ಲಿ ಸಾಗಿ ಕಾಡಿನಲ್ಲಿ ಕೊನೆಗೊಳ್ಳುವುದನ್ನು ಥ್ರಿಲ್ಲರ್, ಸೆಸ್ಪೆನ್ಸ್ ಮಾದರಿಯಲ್ಲಿ ತೋರಿಸಲಾಗಿದೆ. ಇದನ್ನೂ ಓದಿ:ಮಸ್ತಾಗಿದೆ `ಕಬ್ಜ’ ಟೀಸರ್: ಹೇಗಿದೆ ಗೊತ್ತಾ ಉಪೇಂದ್ರ- ಸುದೀಪ್ ಜುಗಲ್‌ಬಂದಿ

    ಮೂರು ಚಿತ್ರಗಳನ್ನು ನಿರ್ದೇಶನ ಮಾಡಿದ ಅನುಭವ ಇರುವ ಪ್ರಮೋದ್.ಎಸ್.ಆರ್ (Pramod)ಆ್ಯಕ್ಷನ್ ಕಟ್ ಹೇಳುವ ಜತೆಗೆ ಉಪನಾಯಕನಾಗಿ ಕಾಣಿಸಿಕೊಂಡಿದ್ದಾರೆ. ಚಿತ್ರರಂಗದಲ್ಲಿ ಹತ್ತು ವರ್ಷಗಳ ಪರಿಣತಿ ಪಡೆದುಕೊಂಡಿರುವ ಅನಿಲ್.ಸಿ.ಆರ್ (Anil) ಕಥೆ ಮತ್ತು ವಿರಾಜ್ ಫಿಲಂ ರೆಕಾರ್ಡಿಂಗ್ ಸ್ಟುಡಿಯೋ ಹೆಸರಿನಲ್ಲಿ ಬಂಡವಾಳ ಹೂಡಿದ್ದು, ಹಾಗೂ ನಾಯಕನಾಗಿ ಬಣ್ಣ ಹಚ್ಚಿರುವುದು ಹೊಸ ಪ್ರಯತ್ನ. ಕಾಲೇಜು ಹುಡುಗಿಯಾಗಿ ಕಾವೇರಿ (Kaveri) ನಾಯಕಿ. ಗೆಳತಿಯರಾಗಿ  ಹುಬ್ಬಳಿ ಮೂಲದ ಭುವನ, ಗುಬ್ಬಿ ಕಡೆಯ ಹರಿಣಿ ಮುಂತಾದವರು ನಟಿಸಿದ್ದಾರೆ. ಕಲಾವಿದರ ಮೂಲ ಹೆಸರನ್ನು ಆಯಾ ಪಾತ್ರಕ್ಕೆ ಬಳಸಲಾಗಿದೆ.

    ಸಿದ್ದುಅರಸು ಸಾಹಿತ್ಯದ ನಾಲ್ಕು ಹಾಡುಗಳಿಗೆ ನಿತಿನ್‌ರಾಜ್ (Nitin Raj) ಸಂಗೀತ ಸಂಯೋಜಿಸಿದ್ದಾರೆ. ಛಾಯಾಗ್ರಹಣ ವಿನೋದ್.ಆರ್, ಸಂಕಲನ ಅಯುರ್‌ಸ್ವಾಮಿ, ಸಾಹಸ ಗಣೇಶ್ ಅವರದಾಗಿದೆ. ಕುಮುಟ, ಹೊನ್ನಾವರ, ಬನ್ನೂರು ಕಡೆಗಳಲ್ಲಿ ಚಿತ್ರೀಕರಣ ನಡೆಸಲಾಗಿದೆ. ಸದ್ಯ ಚಿತ್ರವು ಪೋಸ್ಟ್‌ಪ್ರೊಡಕ್ಷನ್‌ದಲ್ಲಿ ಬ್ಯುಸಿ ಇದ್ದು ನವೆಂಬರ್‌ದಲ್ಲಿ ತೆರೆ ಕಾಣಿಸಲು ತಂಡವು ಯೋಜನೆ ರೂಪಿಸಿಕೊಂಡಿದೆ. ಸುಂದರ ಸಮಯದಲ್ಲಿ ವಾಣಿಜ್ಯ ಮಂಡಳಿ ಪದಾಧಿಕಾರಿ ನಿತ್ಯಾನಂದಪ್ರಭು, ನಿರ್ಮಾಪಕರುಗಳಾದ ಸೆಬಾಸ್ಟಿನ್‌ಡೇವಿಡ್, ಕೆ.ಎನ್.ನಾಗೇಗೌಡ್ರು ಉಪಸ್ಥಿತರಿದ್ದರು.

    Live Tv
    [brid partner=56869869 player=32851 video=960834 autoplay=true]

  • ಬಾಂಡ್ ರವಿಯಾಗಿ ಕಾಣಿಸಿಕೊಂಡ ಡಬ್ಬಿಂಗ್ ಮುಗಿಸಿದ ಪ್ರಮೋದ್

    ಬಾಂಡ್ ರವಿಯಾಗಿ ಕಾಣಿಸಿಕೊಂಡ ಡಬ್ಬಿಂಗ್ ಮುಗಿಸಿದ ಪ್ರಮೋದ್

    ನ್ನಡ ಚಿತ್ರರಂಗದ ಪ್ರತಿಭಾನ್ವಿತ ನಾಯಕ ನಟ ಪ್ರಮೋದ್ ನಟನೆಯ ಬಾಂಡ್ ರವಿ ಸಿನಿಮಾದ ಡಬ್ಬಿಂಗ್ ಕಂಪ್ಲೀಟ್ ಆಗಿದ್ದು, ಶೀರ್ಘದಲ್ಲಿ ಚಿತ್ರ ತೆರೆಗೆ ಬರಲಿದೆ. ಹನ್ನೊಂದು ವರ್ಷಗಳಿಂದ ನಿರ್ದೇಶನ ವಿಭಾಗದಲ್ಲಿ ಕೆಲಸ ಮಾಡಿರುವ ಪ್ರಜ್ವಲ್ ಎಸ್.ಪಿ. ಸಿನಿಮಾಗೆ ಆಕ್ಷನ್ ಕಟ್ ಹೇಳಿದ್ದು, ಇದೊಂದು ಆಕ್ಷನ್ ಲವ್ ಸ್ಟೋರಿ ಸಿನಿಮಾವಾಗಿದೆ.

    ಈ ಹಿಂದೆ ಮಾದ ಮಾನಸಿ ಸಿನಿಮಾ ನಿರ್ಮಾಣ ಮಾಡಿದ್ದ ನರಸಿಂಹಮೂರ್ತಿ ಲೈಫ್ ಲೈನ್ ಫಿಲ್ಮ್ಸ್ ಬ್ಯಾನರ್‌ನ ಅಡಿ ಬಾಂಡ್ ರವಿ ಸಿನಿಮಾಗೆ ಬಂಡವಾಳ ಹೂಡಿದ್ದು, ಮಲ್ಲಿಕಾರ್ಜುನ್ ಕಾಶಿ ಹಾಗೂ ಝೇವಿಯರ್ ಫರ್ನಾಂಡಿಸ್ ಸಹ ನಿರ್ಮಾಪಕರ ಜವಾಬ್ದಾರಿ ಹೊತ್ತುಕೊಂಡಿದ್ದಾರೆ. ಅಪ್ಪು ಅಭಿಮಾನಿಯಾಗಿ ಬಾಂಡ್ ರವಿಯಾಗಿ ನಟಿಸಿರುವ ಪ್ರಮೋದ್ ಗೆ ಜೋಡಿಯಾಗಿ ಕಾಜಲ್ ಕುಂದರ್  ಕಾಣಿಸಿಕೊಂಡಿದ್ದಾರೆ. ಇದನ್ನೂ ಓದಿ:ಲಂಡನ್ ಸ್ಟುಡಿಯೋದಲ್ಲಿ ಕನ್ನಡ ಚಿತ್ರಕ್ಕೆ ಹಿನ್ನೆಲೆ ಸಂಗೀತ

    ಬೆಂಗಳೂರು, ಶಿವಮೊಗ್ಗ, ಕೊಡಚಾದ್ರಿ, ಕುದುರೆಮುಖ, ಉಡುಪಿ ಮಂಗಳೂರು ಭಾಗದಲ್ಲಿ ಸುಮಾರು 50 ದಿನಗಳ‌ ಕಾಲ ಚಿತ್ರೀಕರಣ ಮಾಡಲಾಗಿದ್ದು,  ರವಿಕಾಳೆ, ಧರ್ಮ, ವಿಜಯ್ ಚೆಂಡೂರ್, ಶೋಭರಾಜ್ ಮುಖ್ಯ ಭೂಮಿಕೆಯಲ್ಲಿದ್ದಾರೆ. ಕೆ.ಎಸ್. ಚಂದ್ರಶೇಖರ್ ಛಾಯಾಗ್ರಹಣ, ಅರ್ಜುನ್ ಕಿಟ್ಟು ಸಂಕಲನ, ಸುನಿಲ್ ಮತ್ತು ದೇವ್ ಎನ್. ರಾಜ್ ಸಂಭಾಷಣೆ, ಮನೋಮೂರ್ತಿ ಸಂಗೀತ ಸಿನಿಮಾಕ್ಕಿದೆ. ಜಯಂತ್ ಕಾಯ್ಕಿಣಿ ನಾಗೇಂದ್ರ ಪ್ರಸಾದ್ ಸಾಹಿತ್ಯ ಬರೆದಿದ್ದಾರೆ. ನಟಿ ಸುಹಾಸಿನಿ, ಶೋಭರಾಜ್, ಯಶಾ ಶಿವಕುಮಾರ್ ಅವರು ಈ ಚಿತ್ರದಲ್ಲಿ ನಟಿಸಿದ್ದಾರೆ. ಗುರು ಕಶ್ಯಪ್ ಅವರು ಈ ಚಿತ್ರದ ಸಂಭಾಷಣೆ ಬರೆದಿದ್ದರು, ಆದರೆ ಅವರು ಇಂದು ದೈಹಿಕವಾಗಿ ಇಲ್ಲ. ಎಸ್ ಕೆ ರಾವ್ ಛಾಯಾಗ್ರಹಣ, ಅನುಪ್ ಸೀಳಿನ್ ಸಂಗೀತ ಈ ಚಿತ್ರಕ್ಕಿದೆ.

    Live Tv
    [brid partner=56869869 player=32851 video=960834 autoplay=true]

  • ಜ್ಯೋತಿಷಿ ಕೈಕಾಲು ಕಟ್ಟಿ ಚಿನ್ನಾಭರಣ ದೋಚಿದ ಪ್ರಕರಣ- ಪ್ರಮೋದ್ ಪಿಎ ಸೇರಿದಂತೆ ನಾಲ್ವರ ಬಂಧನ

    ಜ್ಯೋತಿಷಿ ಕೈಕಾಲು ಕಟ್ಟಿ ಚಿನ್ನಾಭರಣ ದೋಚಿದ ಪ್ರಕರಣ- ಪ್ರಮೋದ್ ಪಿಎ ಸೇರಿದಂತೆ ನಾಲ್ವರ ಬಂಧನ

    ಬೆಂಗಳೂರು: ಜ್ಯೋತಿಷಿ ಪ್ರಮೋದ್ ಕೈಕಾಲು ಕಟ್ಟಿ ಚಿನ್ನಾಭರಣ ದೋಚಿದ ಪ್ರಕರಣಕ್ಕೆ ಸಂಬಂಧಿಸದಂತೆ ಇದೀಗ ಪಿಎ ಮೇಘನಾ ಸೇರಿದಂತೆ ನಾಲ್ವರನ್ನು ಬಂಧಿಸಲಾಗಿದೆ.

    ಬೆಂಗಳೂರಿನ ಕೆಂಗೇರಿ ಪೊಲೀಸರು ತಮಿಳುನಾಡಿನ ಸೇಲಂನಲ್ಲಿ ಆರೋಪಿಗಳನ್ನು ಬಂಧಿಸಿದ್ದಾರೆ. ದರೋಡೆ ಪ್ರಕರಣದ ಮಾಸ್ಟರ್ ಮೈಂಡ್ ಆಗಿರುವ ಮೇಘನಾ ಅವರು ಜ್ಯೋತಿಷಿ ಬಳಿ ಪಿಎ ಆಗಿ ಕೆಲಸ ಮಾಡಿಕೊಂಡಿದ್ದಳು. ಈ ವೇಳೆ ಜ್ಯೋತಿಷಿ ಬಳಿ ಸಾಕಷ್ಟು ಚಿನ್ನಾಭರಣ, ಹಣ ಇರೋದನ್ನು ನೋಡಿದ್ದಾಳೆ. ನಂತರ ತಮಿಳುನಾಡು ಮೂಲದ ಓರ್ವ ವ್ಯಕ್ತಿಗೆ ದರೋಡೆಗೆ ಸುಪಾರಿ ನೀಡಿದ್ದಾಳೆ. ಅದರಂತೆ ಕಳೆದ ವಾರ ಜ್ಯೋತಿಷಿ ಮನೆಗೆ ತಂಡ ನುಗ್ಗಿದೆ.

    ದರೋಡೆ ವೇಳೆ ಮೇಘನಾ ಮತ್ತು ಜ್ಯೊತೀಷಿ ಪ್ರಮೋದ್ ಕೈಕಾಲು ಕಟ್ಟಿ ಹಲ್ಲೆ ಮಾಡಿ ಚಿನ್ನಾಭರಣ ದೋಚಿದ್ರು. ಈ ಸಂಬಂಧ ಕೆಂಗೇರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.  ಇದನ್ನೂ ಓದಿ: ಸಹೋದರರಿಂದ 5 ಸುತ್ತು ಗುಂಡಿನ ದಾಳಿ- ಪಾರಾದ ಚಿತ್ರನಟ ಶಿವರಂಜನ್ ಹೇಳಿದ್ದೇನು?

    Live Tv
    [brid partner=56869869 player=32851 video=960834 autoplay=true]

  • ಪೃಥ್ವಿ ಅಂಬರ್ ಮತ್ತು ಪ್ರಮೋದ್ ಕಾಂಬಿನೇಷನ್ ಚಿತ್ರಕ್ಕೆ ಚಾಲನೆ

    ಪೃಥ್ವಿ ಅಂಬರ್ ಮತ್ತು ಪ್ರಮೋದ್ ಕಾಂಬಿನೇಷನ್ ಚಿತ್ರಕ್ಕೆ ಚಾಲನೆ

    ನ್ನಡದ ಪ್ರತಿಭಾವಂತ ಯುವ ನಟರಾದ ದಿಯಾ ಖ್ಯಾತಿಯ ಪೃಥ್ವಿ ಅಂಬರ್ ಮತ್ತು ಪ್ರೀಮಿಯರ್ ಪದ್ಮಿನಿ ಖ್ಯಾತಿಯ ಪ್ರಮೋದ್ ಕಾಂಬಿನೇಷನ್ ಹೊಸ ಚಿತ್ರಕ್ಕೆ  ಚಾಲನೆ ಸಿಕ್ಕಿದೆ. ಕನ್ನಡ ಚಿತ್ರರಂಗದ ಇಬ್ಬರು ಪ್ರತಿಭಾನ್ವಿತ ನಾಯಕರಿಗೆ ನಿರ್ಮಾಣ ಮಾಡುವ ಕೆಲಸಕ್ಕೆ ಎಂ ಮುನೇಗೌಡ ಮುಂದಾಗಿದ್ದಾರೆ. ಇವತ್ತು ಎಸ್ ವಿಸಿ ಫಿಲ್ಮಂಸ್ ಪ್ರೊಡಕ್ಷನ್ ನ ಮೊದಲ ಚಿತ್ರದ ಮುಹೂರ್ತ ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ನೆರವೇರಿದೆ. ದಿಯಾ ಖ್ಯಾತಿಯ ಪೃಥ್ವಿ ಅಂಬಾರ್ ಹಾಗೂ ರತ್ನನ್ ಪ್ರಪಂಚ ಖ್ಯಾತಿಯ ಪ್ರಮೋದ್ ನಾಯಕರಾಗಿ ನಟಿಸ್ತಿರುವ ಸಿನಿಮಾಗೆ ಭುವನಂ ಗಗನಂ ಎಂಬ ಟೈಟಲ್ ಇಡಲಾಗಿದ್ದು,  ಈ ಹಿಂದೆ ರಾಜರು ಎಂಬ ಚಿತ್ರ ಮಾಡಿದ್ದ ಗಿರೀಶ್ ಮೂಲಿಮನಿ ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ.

    ಸಿನಿಮಾ ಬಗ್ಗೆ ಮಾಹಿತಿ ಹಂಚಿಕೊಂಡ ನಟ ಪ್ರಮೋದ್, ಕ್ಲಾಸ್ ಲವ್ ಸ್ಟೋರಿ ಸಿನಿಮಾ ಹುಡುಕುತ್ತಿದ್ದೇ. ಈ ಕಥೆ ಕೇಳಿ ಏನೋ ಇಷ್ಟ ಆಗಿದೆ. ನಾನು ಈ ಸಿನಿಮಾದಲ್ಲಿ ಬೇರೆ ರೀತಿ ಕಾಣಿಸ್ತೇನೆ. ಇಡೀ ಸಿನಿಮಾ ನನಗೆ ಬೇರೆ ಮಜಲು ಕ್ರಿಯೇಟ್ ಮಾಡುತ್ತದೆ ಅನ್ನೋ ನಂಬಿಕೆ ಈ ಚಿತ್ರ ಒಪ್ಪಿಕೊಂಡಿದ್ದೇನೆ. ಈ ಅವಕಾಶ ಕೊಟ್ಟ ಎಲ್ಲರಿಗೂ ಧನ್ಯವಾದ. ಒಳ್ಳೆ ಸಿನಿಮಾವಾಗುತ್ತದೆ. ಎಲ್ಲರೂ ಸೇರಿ ಕೆಲಸ ಮಾಡೋಣಾ ಎಂದರು. ಪೃಥ್ವಿ ಅಂಬಾರ್, ಯಾವುದೇ ಸಿನಿಮಾವಾಗಲಿ ಫ್ಯಾಷನೇಟೇಡ್ ನಿರ್ಮಾಪಕರು, ನಿರ್ದೇಶಕರು ಬೇಕು. ಈ ಸಿನಿಮಾದಲ್ಲಿ ಎರಡು ಇದೆ. ನಿರ್ದೇಶಕರ ಜೊತೆ ಈ ಹಿಂದೆ ಕೆಲಸ ಮಾಡಿದ್ದೇನೆ. ನನಗೆ ಟೈಟಲ್ ಬಹಳ ಇಷ್ಟವಾಯ್ತು. ನನ ಹೆಸ್ರು ಅರ್ಥ ಕೂಡ ಭುವನಂ ಗಗನಂ. ಕಥೆ ಕೇಳಿದಾಗ ನನಗೆ ಬಹಳ ಕನೆಕ್ಟ್ ಆಗಿತ್ತು. ಪ್ರಮೋದ್ ಅದ್ಭುತ ಕಲಾವಿದ. ಇಡೀ ತಂಡದ ಜೊತೆ ಕೆಲಸ ಮಾಡುವ ಅವಕಾಶ ಸಿಕ್ಕಿರುವುದು ಖುಷಿ ಎಂದು ಅಭಿಪ್ರಾಯ ಹಂಚಿಕೊಂಡರು. ಇದನ್ನೂ ಓದಿ: ಡಿಸೆಂಬರ್ ನಲ್ಲಿ ಮದುವೆ ಆಗಲಿದ್ದಾರೆ ತಿಥಿ ಸಿನಿಮಾ ಖ್ಯಾತಿಯ ಪೂಜಾ

    ನಿರ್ದೇಶಕ ಗಿರೀಶ್ ಮೂಲಿಮನಿ, ಈ ಹಿಂದೆ ರಾಜರು ಎಂಬ ಸಿನಿಮಾ ಮಾಡಿದ್ದೇನೆ. ಇದು ನನ್ನ ಎರಡನೇ ಸಿನಿಮಾ. ಎಸ್ ವಿಸಿ ಬ್ಯಾನರ್ ಅಂದ್ರೆ ಅದು ಡ್ರೀಮ್. ಸಿನಿಮಾ ಮಾಡೋದು ಅವರ ಕನಸು. ಎಸ್ ವಿಸಿ ಬ್ಯಾನರ್ ನಡಿ ನನಗೆ ಮೊದಲ ಸಿನಿಮಾ ಮಾಡಲು ಅವಕಾಶ ಸಿಕ್ಕಿರೋದು ಖುಷಿ. ನನ್ನ ಹೊಸ ಜರ್ನಿ ಸಕ್ಸಸ್ ಆಗುತ್ತೇ, ಫೀಲ್ ಗುಡ್ ಮೂವೀ ಮಾಡುತ್ತೇವೆ ಎಂಬ ನಂಬಿಕೆ ಇದೆ ಎಂದರು. ಎಂ ಮುನೇಗೌಡ, ಇದು ನನ್ನ ಮೊದಲ ಸಿನಿಮಾ. ನಿರ್ದೇಶಕರು  ಹೇಳಿದ ಕಥೆ ವಿಭಿನ್ನ ಅನಿಸಿತು. ಒಳ್ಳೆ ಕಲಾವಿದರ ದಂಡೇ ಇದೆ. ಪ್ರತಿಯೊಬ್ಬರು ಸಿನಿಮಾಗೆ ಬೆಂಬಲ ನೀಡಿ ಎಂದರು.

    ಭುವನಂ ಗಗನಂ ಸಿನಿಮಾ ಲವ್, ರೋಮ್ಯಾನ್ಸ್, ಫ್ಯಾಮಿಲಿ ಎಮೋಷನ್ ಕಥಾಹಂದರ ಸಿನಿಮಾವಾಗಿದ್ದು, ನಗರ, ಹಳ್ಳಿ ಎರಡು ಬ್ಯಾಕ್ ಡ್ರಾಪ್ ನಲ್ಲಿ ನಡೆಯುವ ಕಥೆಯಾಗಿದ್ದು, ಪ್ರಮೋದ್ ಗೆ ಜೋಡಿಯಾಗಿ ಲವ್ ಮಾಕ್ಟೇಲ್ ಖ್ಯಾತಿಯ ರೆಚೆಲ್ ಡೇವಿಡ್, ಪೃಥ್ವಿಗೆ ಜೋಡಿಯಾಗಿ ವಾಮನ ಸಿನಿಮಾದ ನಾಯಕಿ ರಚನಾ ರೈ ನಟಿಸ್ತಿದ್ದಾರೆ. ಬರುವ ಜುಲೈ 1ರಿಂದ ಸಿನಿಮಾದ ಶೂಟಿಂಗ್ ಶುರುವಾಗ್ತಿದ್ದು, ಅಚ್ಯುತ್ ಕುಮಾರ್, ಶರತ್ ಲೋಹಿತಾಶ್ವ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಸುಜಯ್ ಕುಮಾರ್ ಬಾವಿಕಟ್ಟಿ ಕ್ಯಾಮೆರಾ ಕೈಚಳಕ, ಗುಮ್ಮಿನೇನಿ ವಿಜಯ್ ಮ್ಯೂಸಿಕ್ ಕಿಕ್, ಸುನೀಲ್ ಕಶ್ಯಪ್ ಸಂಕಲನ ಸಿನಿಮಾಕ್ಕಿದೆ.

    Live Tv

  • ಬಾಂಡ್ ರವಿಗಾಗಿ ಭರ್ಜರಿ ಹೊಡೆದಾಡಿದ ಪ್ರಮೋದ್

    ಬಾಂಡ್ ರವಿಗಾಗಿ ಭರ್ಜರಿ ಹೊಡೆದಾಡಿದ ಪ್ರಮೋದ್

    ಪ್ರೀಮಿಯರ್ ಪದ್ಮನಿ ಸಿನಿಮಾದ ಮೂಲಕ ಭರವಸೆ ಮೂಡಿಸಿರುವ ನಟ ಪ್ರಮೋದ್ ನಟನೆಯ ಬಹು ನಿರೀಕ್ಷಿತ ಸಿನ್ಮಾ ಬಾಂಡ್ ರವಿ ಚಿತ್ರದ ಶೂಟಿಂಗ್ ಭರದಿಂದ ಸಾಗ್ತಿದೆ. ಈಗಾಗಲೇ 70ರಷ್ಟು ಶೂಟಿಂಗ್ ಕಂಪ್ಲೀಟ್ ಮಾಡಿರುವ ಚಿತ್ರತಂಡ, ಬೆಂಗಳೂರಿನ HMTಯಲ್ಲಿ ಸಾಹಸ ದೃಶ್ಯದ ಚಿತ್ರೀಕರಣ ನಡೆಸಿದೆ. ಖ್ಯಾತ ಸಾಹಸ ನಿರ್ದೇಶಕ ಮಾಸ್ಟರ್ ವಿನೋದ್ ಸಾಹಸ ಸಂಯೋಜನೆಯಲ್ಲಿ ಭರ್ಜರಿ  ಸಾಹಸ ಸನ್ನಿವೇಶದ ಚಿತ್ರೀಕರಣ ನಡೆದಿದೆ. ಪ್ರಮೋದ್, ಸಹಕಲಾವಿದರು ಭರ್ಜರಿ ಆಕ್ಷನ್ ಸೀನ್ಸ್ ಭಾಗಿಯಾಗಿದ್ದರು. ಇದನ್ನೂ ಓದಿ : ತೆರೆಯ ಮೇಲೂ ನಿರ್ದೇಶಕನಾಗಿ ನಟಿಸಿದ ಯೋಗರಾಜ್ ಭಟ್

    ಕಳೆದ‌ ಹನ್ನೊಂದು ವರ್ಷದಿಂದ ನಿರ್ದೇಶನದ ವಿಭಾಗದಲ್ಲಿ ಕೆಲಸ ಮಾಡಿರುವ ಪ್ರಜ್ವಲ್ ಚಿತ್ರಕ್ಕೆ ಆಕ್ಷನ್ ಕಟ್ ಹೇಳ್ತಿದ್ದು, ಇದೊಂದು ಕಮರ್ಷಿಯಲ್, ಆಕ್ಷನ್-ಲವ್ ಸ್ಟೋರಿ ಸಿನಿಮಾವಾಗಿದ್ದು, ಲೈಫ್ ಲೈನ್ ಫಿಲ್ಮಸ್ ಬ್ಯಾನರ್ ನಡಿ ನರಸಿಂಹಮೂರ್ತಿ ಬಂಡವಾಳ ಹೂಡ್ತಿದ್ದಾರೆ. ಈ‌ ಹಿಂದೆ ನರಸಿಂಹಮೂರ್ತಿ ಮಾದ ಮನಸಿ ಸಿನಿಮಾ ನಿರ್ಮಾಣ ಮಾಡಿದ್ದರು. ಪ್ರಮೋದ್ ಗೆ ಜೋಡಿಯಾಗಿ ಮಾಯಕನ್ನಡಿ ಸಿನಿಮಾ ಮೂಲಕ ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಟ್ಟಿದ್ದ ಕಾಜಲ್ ಕುಂದರ್ ನಾಯಕಿಯಾಗಿ ನಟಿಸ್ತಿದ್ದಾರೆ. ಇದನ್ನೂ ಓದಿ : ಪೊಲೀಸ್ ಪೇದೆ ನನ್ನನ್ನು ಸೆಕ್ಸ್ ವರ್ಕರ್ ರೀತಿ ನೋಡಿದ : ಮಲಯಾಳಿ ನಟಿ ಅರ್ಚನಾ ಆರೋಪ

    ಮಲ್ಲಿಕಾರ್ಜುನ್ ಹಾಗೂ ಝೇವಿಯರ್ ಫರ್ನಾಂಡಿಸ್ ಸಹ ನಿರ್ಮಾಣದ ಜವಾಬ್ದಾರಿ ಹೊತ್ತಕೊಂಡಿದ್ದಾರೆ. ರವಿಕಾಳೆ, ಧರ್ಮ, ವಿಜಯ್ ಚೆಂಡೂರ್, ಶೋಭರಾಜ್, ತೆಲುಗಿನ ಖ್ಯಾತ ನಟ ರವಿ ಪ್ರಕಾಶ್ ಮುಖ್ಯ ಭೂಮಿಕೆಯಲ್ಲಿ ನಟಿಸ್ತಿದ್ದು, ಕೆಎಸ್ ಚಂದ್ರಶೇಖರ್ ಛಾಯಾಗ್ರಹಣ, ಅರ್ಜುನ್ ಸಂಕಲನ, ಸುನಿಲ್ & ದೇವ್ ಎನ್ ರಾಜ್ ಸಂಭಾಷಣೆ, ಮನೋಮೂರ್ತಿ ಮಧುರ ಸಂಗೀತ, ಜಯಂತ್ ಕಾಯ್ಕಿಣಿ ನಾಗೇಂದ್ರ ಪ್ರಸಾದ್ ಸಾಹಿತ್ಯ ಸಿನಿಮಾಕ್ಕಿದೆ.

  • ಬಾಂಡ್ ರವಿ ಆದ ಪ್ರೀಮಿಯರ್ ಪದ್ಮಿನಿ ಹುಡುಗ ಪ್ರಮೋದ್

    ಬಾಂಡ್ ರವಿ ಆದ ಪ್ರೀಮಿಯರ್ ಪದ್ಮಿನಿ ಹುಡುಗ ಪ್ರಮೋದ್

    ತ್ನನ್ ಪ್ರಪಂಚ್, ಪ್ರಿಮಿಯರ್ ಪದ್ಮಿನಿ ಸಿನಿಮಾದ ಮೂಲಕ ಭರವಸೆ ಮೂಡಿಸಿರುವ ಪ್ರಮೋದ್, ಈಗ ಮತ್ತೊಂದು ಸಿನಿಮಾ ಒಪ್ಪಿಕೊಂಡಿದ್ದಾರೆ. ಯುಗಾದಿ ಹಬ್ಬದ ದಿನದಂದು ಆ ಸಿನಿಮಾದ ಫಸ್ಟ್ ಲುಕ್ ಮತ್ತು ಟೈಟಲ್ ಬಿಡುಗಡೆ ಆಗಿದ್ದು, ಚಿತ್ರಕ್ಕೆ ಬಾಂಡ್ ರವಿ ಎಂದು ಹೆಸರಿಡಲಾಗಿದೆ. ಇದನ್ನೂ ಓದಿ : ಕಂಗನಾ ರಣಾವತ್ ಶೋನಲ್ಲಿ ಕರ್ಮ ಕರ್ಮ : ಶರ್ಟ್ ಬಿಚ್ಚಿತೀನಿ ಅಂದ ಮಾದಕ ನಟಿ ಪೂನಂ

    ಈ ಸಿನಿಮಾದ ಮೂಲಕ ಕನ್ನಡ ಚಿತ್ರರಂಗಕ್ಕೆ ಮತ್ತೊಬ್ಬ ಭರವಸೆ ನಿರ್ದೇಶಕರು ಪಾದಾರ್ಪಣೆ ಮಾಡುತ್ತಿದ್ದು, ನಿರ್ದೇಶಕರಾದ ಎಸ್.ಮಹೇಂದ್ರರ್, ಪ್ರಶಾಂತ್ ರಾಜ್ ಹಾಗೂ‌ ಕಾಂತಾ ಕನ್ನಹಳ್ಳಿ ಜೊತೆ ಅಸಿಸ್ಟೆಂಟ್, ಅಸೋಸಿಯೇಟ್, ಕೋ ಡೈರೆಕ್ಟರ್ ಆಗಿ ಕಳೆದ ಹನ್ನೊಂದು ವರ್ಷಗಳಿಂದ ನಿರ್ದೇಶನದ ಅನುಭವ ಅರಿತಿರುವ ಹಿರಿಯೂರು ಮೂಲದ ಪ್ರಜ್ವಲ್. ಎಸ್.ಪಿ  ಈ ಸಿನಿಮಾ ಮೂಲಕ ಡೈರೆಕ್ಟರ್ ಕ್ಯಾಪ್ ತೊಟ್ಟು ನಿರ್ದೇಶನದ ಅಖಾಡಕ್ಕೆ‌ ಇಳಿದಿದ್ದಾರೆ. ಇದನ್ನೂ ಓದಿ : ಸಿನಿಮಾ ಶೀರ್ಷಿಕೆ ಮೂಲಕ ಅಪ್ಪುನ ನೆನಪಿಸಿಕೊಂಡ ಗೋಲ್ಡನ್ ಸ್ಟಾರ್ : ಗಣಿ-ಗುಬ್ಬಿ ಕಾಂಬಿನೇಷನ್ ಚಿತ್ರಕ್ಕೆ ‘ಬಾನದಾರಿಯಲ್ಲಿ’ ಟೈಟಲ್

    ಯುಗಾದಿ ಹಬ್ಬದಂದು ಬಾಂಡ್ ರವಿ ಸಿನಿಮಾದ ಟೈಟಲ್ ಹಾಗೂ ಫಸ್ಟ್ ಲುಕ್ ರಿಲೀಸ್ ಆಗಿದೆ. ಪ್ರತಿಭಾನ್ವಿತ ನಾಯಕ ನಟ ಪ್ರೀಮಿಯರ್ ಪದ್ಮಿನಿ ಖ್ಯಾತಿಯ ಪ್ರಮೋದ್ ನಾಯಕನಾಗಿ ಮಿಂಚಿದ್ದಾರೆ. ಹಣೆಯಲ್ಲಿ ರಕ್ತ, ಕೈಯಲ್ಲಿ ಬೇಡಿ ತೊಟ್ಟು ಖಡಕ್ ಲುಕ್ ನಲ್ಲಿ ಪ್ರಮೋದ್ ಮಿಂಚಿದ್ದಾರೆ. ಇದನ್ನೂ ಓದಿ : ಜುಲೈ 28ರಂದು ಗುಮ್ಮನ ಕಥೆ – ಯುಗಾದಿ ದಿನ ಡಬಲ್ ಖುಷಿ ಕೊಟ್ಟ ‘ವಿಕ್ರಾಂತ್ ರೋಣ’ ಟೀಮ್

    ಅಂದಹಾಗೇ ಬಾಂಡ್ ರವಿ ಕಮರ್ಷಿಯಲ್ ಎಮೋಷನಲ್ ಥ್ರಿಲ್ಲರ್ ಜಾನರ್ ಸಿನಿಮಾವಾಗಿದ್ದು, ಲೈಫ್ ಲೈನ್ ಫಿಲ್ಮಸ್ ಬ್ಯಾನರ್ ನಡಿ ನರಸಿಂಹಮೂರ್ತಿ ಬಂಡವಾಳ ಹೂಡ್ತಿದ್ದು, ಮಲ್ಲಿಕಾರ್ಜುನ್ ಕಾಶಿ ಹಾಗೂ ಝೇವಿಯರ್ ಫರ್ನಾಂಡಿಸ್ ಸಹ ನಿರ್ಮಾಣದ ಜವಾಬ್ದಾರಿ ಹೊತ್ತಕೊಂಡಿದ್ದಾರೆ. ರವಿಕಾಳೆ, ಧರ್ಮ, ವಿಜಯ್ ಚೆಂಡೂರ್, ಶೋಭರಾಜ್ ಮುಖ್ಯ ಭೂಮಿಕೆಯಲ್ಲಿ ನಟಿಸ್ತಿದ್ದು, ಕೆಎಸ್ ಚಂದ್ರಶೇಖರ್ ಛಾಯಾಗ್ರಹಣ, ಅರ್ಜುನ್ ಕಿಟ್ಟು  ಸಂಕಲನ, ಸುನಿಲ್ ಮತ್ತು ದೇವರಾಜ್ ಸಂಭಾಷಣೆ, ಮನೋಮೂರ್ತಿ ಸಂಗೀತ ಸಿನಿಮಾಕ್ಕಿದೆ ಜಯಂತ್ ಕಾಯ್ಕಿಣಿ ನಾಗೇಂದ್ರ ಪ್ರಸಾದ್ ಸಾಹಿತ್ಯ ಬರೆದಿದ್ದಾರೆ

  • ‘ಇಂಗ್ಲಿಷ್ ಮಂಜ’ನಿಗೆ ಸುಕ್ಕಾ ಸೂರಿಯ ಆರ್ಶೀವಾದ- ಟೀಸರ್ ಮೆಚ್ಚಿದ ಸಿನಿರಸಿಕರು

    ‘ಇಂಗ್ಲಿಷ್ ಮಂಜ’ನಿಗೆ ಸುಕ್ಕಾ ಸೂರಿಯ ಆರ್ಶೀವಾದ- ಟೀಸರ್ ಮೆಚ್ಚಿದ ಸಿನಿರಸಿಕರು

    ಪ್ರೀಮಿಯರ್ ಪದ್ಮಿನಿ, ಮತ್ತೆ ಉದ್ಭವ ಸಿನಿಮಾಗಳಲ್ಲಿ ತಮ್ಮ ಅಭಿನಯದ ಮೂಲಕ ಭರವಸೆ ಮೂಡಿಸಿರುವ ಪ್ರತಿಭಾವಂತ ನಟ ಪ್ರಮೋದ್. ಇತ್ತೀಚೆಗೆ ಅಮೇಜಾನ್ ಪ್ರೈಂ ನಲ್ಲಿ ಬಿಡುಗಡೆಗೊಂಡ ರತ್ನನ್ ಪ್ರಪಂಚ ಸಿನಿಮಾದಲ್ಲಿ ಉಡಾಳ್ ಬಾಬು ಆಗಿ ಇವರ ಅಭಿನಯ ಕಂಡು ಸಿನಿ ಪ್ರೇಕ್ಷಕರು ಕೊಂಡಾಡಿದ್ದರು. ನಟನೆ, ಡಾನ್ಸ್, ಆಕ್ಷನ್ ಎಲ್ಲದರಲ್ಲೂ ಸೈ ಎನಿಸಿಕೊಂಡಿರುವ ಪ್ರಮೋದ್ ಲಾಂಗ್ ಹಿಡಿದು ಮಾಸ್ ಅವತಾರ ಎತ್ತಿರುವ ಸಿನಿಮಾ ‘ಇಂಗ್ಲಿಷ್ ಮಂಜ’. ಇವರ ಮಾಸ್ ಅವತಾರಕ್ಕೆ ಸಾಥ್ ಸಿಕ್ಕಿರುವುದು ಸ್ಯಾಂಡಲ್‍ವುಡ್ ಸ್ಟಾರ್ ಡೈರೆಕ್ಟರ್ ಸುಕ್ಕಾ ಸೂರಿಯಿಂದ ಎನ್ನುವುದು ವಿಶೇಷ ಸಂಗತಿ.

    English Manja

    ‘ಇಂಗ್ಲಿಷ್ ಮಂಜ’ ಪಕ್ಕಾ ರೌಡಿಸಂ ಹಿನ್ನೆಲೆಯುಳ್ಳ ಸಿನಿಮಾ. 2020ರಲ್ಲಿ ಸೆಟ್ಟೇರಿದ್ದ ಈ ಚಿತ್ರ ಬಿಡುಗಡೆಯ ಹಂತಕ್ಕೆ ಬಂದು ನಿಂತಿದೆ. ಇಂದು ಚಿತ್ರದ ನಾಯಕ ನಟ ಪ್ರಮೋದ್ ಹುಟ್ಟುಹಬ್ಬ. ಆದರಿಂದ ಚಿತ್ರತಂಡ ಚಿತ್ರದ ಟೀಸರ್ ಇಂದು ಬಿಡುಗಡೆ ಮಾಡಿದೆ. ಟೈಟಲ್ ಮೂಲಕವೇ ಒಂದು ಹಂತದ ಕ್ಯೂರಿಯಾಸಿಟಿಯನ್ನು ಪ್ರೇಕ್ಷಕರಲ್ಲಿ ಮೂಡಿಸಿದ್ದ ಚಿತ್ರ ಟೀಸರ್ ಬಿಡುಗಡೆಯಾದ ಮೇಲೆ ಆ ಕ್ಯೂರಿಯಾಸಿಟಿ ಲೆವೆಲ್ ಇನ್ನಷ್ಟು ಹೆಚ್ಚಿಸಿದೆ. ಮಾಸ್ ಟೀಸರ್ ಪ್ರೇಕ್ಷಕರ ಮೆಚ್ಚುಗೆಗೂ ಪಾತ್ರವಾಗಿದೆ. ರೌಡಿಸಂ ಹಿನ್ನೆಲೆಯ ಸಿನಿಮಾ ನಿರ್ದೇಶನಕ್ಕೆ ಬ್ರ್ಯಾಂಡ್ ಅಂದರೆ ಅದು ಸ್ಟಾರ್ ಡೈರೆಕ್ಟರ್ ಸೂರಿ. ಆದರಿಂದಲೇ ಚಿತ್ರತಂಡ ಇಂಗ್ಲಿಷ್ ಮಂಜ ಟೀಸರ್ ಬಿಡುಗಡೆಯನ್ನು ಅವರಿಂದಲೇ ಮಾಡಿಸಿದೆ. ಟೀಸರ್ ಝಲಕ್ ಹಾಗೂ ಟೈಟಲ್ ನೋಡಿ ಸಖತ್ ಇಂಪ್ರೆಸ್ ಆಗಿರುವ ಸೂರಿ ಚಿತ್ರತಂಡದ ಪ್ರಯತ್ನಕ್ಕೆ ಬೆನ್ನುತಟ್ಟಿ ಪ್ರೋತ್ಸಾಹಿಸಿದ್ದಾರೆ. ಇದನ್ನೂ ಓದಿ: ಅಧಿಕಾರಿಯನ್ನು ಕೊಲ್ಲಲು ಸಂಚು ಮಾಡಿದ ಆಡಿಯೋ ಕ್ಲಿಪ್ ರಿಲೀಸ್ – ನಟ ದಿಲೀಪ್ ವಿರುದ್ಧ FIR

    ಕೋಲಾರ ಸಿನಿಮಾ ನಿರ್ದೇಶಿಸಿದ್ದ ಆರ್ಯ ಎಂ.ಮಹೇಶ್ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಎರಡನೇ ಸಿನಿಮಾ ಇದು. ರೌಡಿಸಂ ಹಿನ್ನೆಲೆಯ ಕಥೆಗೆ ಬೇಕಾದ ಎಲ್ಲಾ ಕಮರ್ಶಿಯಲ್ ಎಳೆಯೂ ಸಿನಿಮಾದಲ್ಲಿದ್ದು ಅದರೊಂದಿಗೆ ಸುಂದರ ಪ್ರೇಮ್ ಕಹಾನಿಯೂ ಚಿತ್ರದಲ್ಲಿದೆ. ಚಿತ್ರದಲ್ಲಿ ಲಾಂಗ್ ಹಿಡಿದು ರಗಡ್ ಲುಕ್‍ನಲ್ಲಿ ಅಬ್ಬರಿಸಿರುವ ಪ್ರಮೋದ್ ಲವರ್ ಬಾಯ್ ಆಗಿಯೂ ಮಿಂಚಿದ್ದಾರೆ. ಇವರಿಗೆ ಜೋಡಿಯಾಗಿ ತೇಜಸ್ವಿನಿ ಶರ್ಮಾ ಸ್ಕ್ರೀನ್ ಶೇರ್ ಮಾಡಿದ್ದಾರೆ. ಸುನೀಲ್ ಪುರಾಣಿಕ್, ವಿ.ನಾಗೇಂದ್ರ ಪ್ರಸಾದ್, ವಿಕ್ಟರಿ ವಾಸು, ನಾಗೇಂದ್ರ ಅರಸ್ ಒಳಗೊಂಡ ಅನುಭವಿ ಕಲಾವಿದರ ಬಳಗ ಚಿತ್ರದಲ್ಲಿದೆ. ಇದನ್ನೂ ಓದಿ: ಪುಷ್ಪ-2’ಗೆ ಶೇ.50 ಸಂಭಾವನೆ ಹೆಚ್ಚಿಸಿಕೊಂಡ ರಶ್ಮಿಕಾ!

    English Manja

    2020ರಲ್ಲಿ ಸೆಟ್ಟೇರಿದ್ದ ಈ ಚಿತ್ರ ಬಿಡುಗಡೆಯ ಅಂಚಿಗೆ ಬಂದು ನಿಂತಿದ್ದು, ಟೀಸರ್ ಬಿಡುಗಡೆ ಮಾಡುವ ಮೂಲಕ ಚಿತ್ರದ ಪ್ರಚಾರಕ್ಕೆ ಆರಂಭ ನೀಡಿದೆ ಚಿತ್ರತಂಡ. ಚಿತ್ರಕ್ಕೆ ಇನ್ಫ್ಯಾಂಟ್ ಸಿನಿ ಕ್ರಿಯೇಷನ್ಸ್ ಬ್ಯಾನರ್ ನಡಿ ಡೇವಿಡ್ ಆರ್ ಬಂಡವಾಳ ಹೂಡಿದ್ದು, ಬಿ.ಆರ್.ಹೇಮಂತ್ ಸಂಗೀತ ಸಂಯೋಜನೆ, ರಂಗಸ್ವಾಮಿ ಕ್ಯಾಮೆರಾ ವರ್ಕ್, ಕೆ.ಗಿರೀಶ್ ಕುಮಾರ್ ಸಂಕಲನ ಚಿತ್ರಕ್ಕಿದೆ.

  • ‘ಮತ್ತೆ ಉದ್ಭವ’ಕ್ಕೆ ‘ಉದ್ಭವ’ವೇ ಸ್ಫೂರ್ತಿ!

    ‘ಮತ್ತೆ ಉದ್ಭವ’ಕ್ಕೆ ‘ಉದ್ಭವ’ವೇ ಸ್ಫೂರ್ತಿ!

    ‘ಉದ್ಭವ’ ಸಿನಿಮಾ ಯಾರಿಗೆ ತಾನೇ ಗೊತ್ತಿಲ್ಲ ಹೇಳಿ. 91ರ ದಶಕದಲ್ಲೇ ಹೊಸ ಕಲ್ಪನೆಯೊಂದಿಗೆ ಬಂದ ‘ಉದ್ಭವ’ ಎಲ್ಲರ ಮನಸ್ಸಿನೊಳಗೆ ಕುಳಿತುಕೊಳ್ಳುವಲ್ಲಿ ಯಶಸ್ವಿಯಾಗಿತ್ತು. ಚಿತ್ರದಲ್ಲಿ ಹಿರಿಯ ನಟ ಅನಂತ್ ನಾಗ್ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದರು. ಅದ್ಭುತ ಕಥೆಯೊಂದಿಗೆ ಕೂಡ್ಲು ರಾಮಕೃಷ್ಣ ಹಾಗೂ ಅನಂತ್ ನಾಗ್ ಜೋಡಿ ಗೆದ್ದಿತ್ತು. ಸಿನಿಮಾ ಎಲ್ಲರ ಮನಸ್ಸಿನೊಳಗೆ ಕುಳಿತುಕೊಂಡಿತ್ತು. ಪ್ರಸ್ತುತ ಕಾಲಘಟ್ಟಕ್ಕೆ ತಕ್ಕಂತೆ ಕೂಡ್ಲು ರಾಮಕೃಷ್ಣ ಅವರು ‘ಮತ್ತೆ ಉದ್ಭವ’ ನಿರ್ದೇಶಿಸಿದ್ದಾರೆ. ಒಂದು ಅದ್ಭುತವಾದ ಕಾಮಿಡಿ ಜಾನರ್ ಸಿನಿಮಾ ಇದಾಗಿದ್ದು, ಇಡೀ ಮನೆ ಮಂದಿಯೆಲ್ಲಾ ಕುಳಿತು ನೋಡಬಹುದು. ಉದ್ಭವದ ಸೀಕ್ವೆನ್ಸ್ ಎಂದಾಗಲೇ ಸಹಜವಾಗಿಯೇ ಸಿನಿಮಾದ ಮೇಲೆ ಕುತೂಹಲ ಮೂಡಿದೆ. ಯಾವಾಗ ರಿಲೀಸ್ ಆಗುತ್ತೆ ಅಂತ ಕಾಯುತ್ತಿದ್ದವರಿಗೆ ಸಿನಿಮಾ ರಿಲೀಸ್ ಡೇಟ್ ಫಿಕ್ಸ್ ಆಗಿದೆ.

    ಕೂಡ್ಲು ರಾಮಕೃಷ್ಣ ಅವರು ಚಂದನವನದ ಹಿರಿಯ ನಿರ್ದೇಶಕ. ಹಲವು ಸದಾಭಿರುಚಿಯ ಸಿನಿಮಾಗಳನ್ನು ನೀಡಿದವರು. ಅವರ ಬಹುತೇಕ ಚಿತ್ರಗಳು ಕಾದಂಬರಿಯಾಧಾರಿತ, ಸಾಮಾಜಿಕ, ರಾಜಕೀಯ ಅವ್ಯವಸ್ಥೆಗಳನ್ನು ವಿಡಂಬನಾತ್ಮಕವಾಗಿ ಚಿತ್ರೀಸುವ ಅವರ ಶೈಲಿ ಎಲ್ಲರಿಗೂ ಅಚ್ಚುಮೆಚ್ಚು. ‘ಉದ್ಭವ’ದಲ್ಲಿ ನಕ್ಕುನಲಿಸಿದ್ದಲ್ಲದೆ, ‘ಮತ್ತೆ ಉದ್ಭವ’ದಲ್ಲೂ ನಗಿಸಲು ಬಂದಿದ್ದಾರೆ. ‘ಉದ್ಭವ’ ಸಿನಿಮಾ ರಿಲೀಸ್ ಆದಾಗ 1 ಗಂಟೆ ಇದ್ದ ಶೋ ಗೆ 11 ಗಂಟೆಗೆಲ್ಲಾ ಥಿಯೇಟರ್ ಹೌಸ್ ಫುಲ್ ಆಗಿತ್ತಂತೆ. ಅವತ್ತು ಕೂಡ್ಲು ರಾಮಕೃಷ್ಣ ಅವರು ಸ್ನೇಹಿತರನ್ನು ಕರೆದುಕೊಂಡು ಸಿನಿಮಾಗೇ ಹೋಗಿದ್ರಂತೆ. ಆದ್ರೆ ಕ್ಯೂ ನಿಲ್ಲದೆ ನೇರವಾಗಿ ಟಿಕೆಟ್ ಕೌಂಟರ್ ಬಳಿ ಹೋಗಿದ್ರಂತೆ. ಸೆಕ್ಯೂರಿಟಿ ಬಂದು ಕಾಲಿಗೆ ಒಡೆದು, ಅಲ್ಲಿ ಎಲ್ಲಾ ಕ್ಯೂನಲ್ಲಿ ನಿಂತಿದ್ದಾರೆ. ದೊಡ್ಡ ಮನುಷ್ಯ ನೀನು ಬಂದುಬಿಟ್ಯಾ ಅಂತ ಗದರಿದ್ದರಂತೆ. ಆ ಕ್ಯೂನಲ್ಲಿ ಡೈರೆಕ್ಟರ್ ವಿ.ಸೋಮಶೇಖರ್, ರಮನಾಥ್ ರೈ, ಶ್ರೀನಿವಾಸ್ ಪ್ರಸಾದ್ ಕೂಡ ನಿಂತಿದ್ದರಂತೆ. ಸೆಕ್ಯೂರಿಟಿ ಹೊಡೆದ ತಕ್ಷಣ ಅವ್ರೆಲ್ಲಾ ಅವ್ರೆ ಕಣಪ್ಪ ಡೈರೆಕ್ಟರ್ ಅಂದಾಗ ಎಲ್ಲರೂ ಒಂದು ಕ್ಷಣ ಶಾಕ್ ಆಗಿದ್ರಂತೆ. ಆಗ ಬಿದ್ದ ಒದೆಗಿಂತ ಜನ ನನ್ನ ಸಿನಿಮಾ ಪ್ರೀತಿಸಿದ ರೀತಿ ನೋಡಿ ನೋವು ಮಾಯಾ ಆಯ್ತು ಅಂತಾರೆ ನಿರ್ದೇಶಕ ಕೂಡ್ಲು ರಾಮಕೃಷ್ಣ.

    ಇನ್ನು ಆ ಸಿನಿಮಾ ಮುಗಿದು 29 ವರ್ಷಗಳಾಯ್ತು. ‘ಮಾರ್ಚ್-22’ ರಿಲೀಸ್ ಆದ್ಮೇಲೆ ಸುಮಾರು ಒಂದು ಒಂದೂವರೆ ವರ್ಷ ಕೂಡ್ಲು ಸುಮ್ನೆ ಕುಳಿತಿದ್ದರಂತೆ. ಎಲ್ಲಿ ಹೋದ್ರು ಸರ್ ಮತ್ತೆ ‘ಉದ್ಭವ’ದಂತ ಸಿನಿಮಾ ಮಾಡಿ ಸರ್ ಅನ್ನೋ ಮಾತು ಕೇಳಿ ಕೇಳಿ ಪಡೆದ ಸ್ಫೂರ್ತಿಯೇ ಇವತ್ತಿನ ‘ಮತ್ತೆ ಉದ್ಭವ’ ಅಂತಾರೆ ನಿರ್ದೇಶಕ. ಆ ಚಿತ್ರದಲ್ಲಿ ದೇವಸ್ಥಾನ ಇತ್ತು. ಈಗ ದೇವಸ್ಥಾನದ ಬದಲಿಗೆ ಟೆಂಪಲ್ ಮಾಲ್ ಆಗಿದೆ. ಟೆಂಪಲ್ ಮಾಲ್ ಅನ್ನೋ ಒಂದೇ ಪದದ ಮೇಲೆ ಇಡೀ ಸಿನಿಮಾ ನಿಂತಿದೆ ಅಂತೇಳೋ ನಿರ್ದೇಶಕರು, ಕನ್ನಡ ಚಿತ್ರರಂಗದಲ್ಲಿ ಅಲ್ಲ ಭಾರತೀಯ ಚಿತ್ರರಂಗದಲ್ಲೇ ಯಾರು ನಿರೀಕ್ಷೆ ಮಾಡದಿರುವಂತ ಚಿತ್ರ ಅದು. ಯಾರು ಕೂಡ ಊಹೆ ಮಾಡದೆ ಇರುವಂತ ಕ್ಲೈಮ್ಯಾಕ್ಸ್ ಅದು ಎಂದು ತುಂಬಾ ಕುತೂಹಲಕಾರಿಯಾಗಿ ಹೇಳಿದ್ದಾರೆ.

    ಈಗಾಗಲೇ ಚಿತ್ರದ ಪೋಸ್ಟರ್, ಟ್ರೇಲರ್ ನಿಂದಲೇ ಸಿನಿಮಾದಲ್ಲಿರುವ ನಗುವಿನ ಬಗ್ಗೆ ಅರ್ಥೈಸಿಕೊಳ್ಳಲಾಗಿದೆ. ಪ್ರಮೋದ್, ಮಿಲನಾ ನಾಗರಾಜ್, ರಂಗಾಯಣ ರಘು, ಸುಧಾ ಬೆಳವಾಡಿ, ಮೋಹನ್ ಸೇರಿದಂತೆ ಅನೇಕರು ತಾರಾಬಳಗದಲ್ಲಿದ್ದಾರೆ. ಮೋಹನ್ ಛಾಯಾಗ್ರಹಣ, ವಿ ಮನೋಹರ್ ಸಂಗೀತ ನೀಡಲಿದ್ದಾರೆ. ಉಳಿದಂತೆ ಅವಿನಾಶ್, ಸುಧಾ ಬೆಳವಾಡಿ, ಶುಭಾ ರಕ್ಷಾ ಸೇರಿ ಹಲವು ಕಲಾವಿದರು ಚಿತ್ರದಲ್ಲಿದ್ದಾರೆ. ವೈಟ್ ಪ್ಯಾಂಥರ್ಸ್ ಕ್ರಿಯೇಟಿವ್ಸ್ ಬ್ಯಾನರ್ ನಲ್ಲಿ ಚಿತ್ರ ನಿರ್ಮಾಣವಾಗಲಿದೆ.