Tag: Pramoda devi wadiyar

  • ಚಾಮುಂಡೇಶ್ವರಿ ದೇವಸ್ಥಾನ ನಮ್ಮ ಆಸ್ತಿ: ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್

    ಚಾಮುಂಡೇಶ್ವರಿ ದೇವಸ್ಥಾನ ನಮ್ಮ ಆಸ್ತಿ: ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್

    – ಚಾಮುಂಡಿಬೆಟ್ಟ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ರಾಜವಂಶಸ್ಥೆ ವಿರೋಧ

    ಮೈಸೂರು: ಚಾಮುಂಡೇಶ್ವರಿ ದೇವಸ್ಥಾನ (Chamundeshwari Temple) ನಮ್ಮ ಆಸ್ತಿ. ಅದು ಸಂಸ್ಥಾನದ ಖಾಸಗಿ ಆಸ್ತಿಗಳ ಪಟ್ಟಿಯಲ್ಲಿ ಇದೆ ಎನ್ನುವ ಮೂಲಕ ಚಾಮುಂಡಿಬೆಟ್ಟ ಅಭಿವೃದ್ಧಿ ಪ್ರಾಧಿಕಾರ (Chamundi Hill Development Authority) ರಚನೆಗೆ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ (Pramoda Devi Wadiyar) ವಿರೋಧ ವ್ಯಕ್ತಪಡಿಸಿದರು.

    ಮೈಸೂರು (Mysuru) ಅರಮನೆಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಚಾಮುಂಡಿ ಬೆಟ್ಟದ ನಿರ್ವಹಣೆ ಸಂಬಂಧ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಸರ್ಕಾರಕ್ಕೆ ಪತ್ರ ಬರೆದಿದ್ದರು. ನಿರ್ವಹಣೆ ಮಾಡಲು ಆಗೋದಿಲ್ಲ ಅಂತಾ ಬರೆದಿದ್ದರು. ಈಗ ನಾವು ನಿರ್ವಹಣೆ ಮಾಡೋ ಬಗ್ಗೆ ನಾನು ಹೆಚ್ಚೇನು ಮಾತಾಡೋದಿಲ್ಲ. ನ್ಯಾಯಾಲಯ, ಸರ್ಕಾರ ಈಗಲೂ ಗ್ರೀನ್ ಸಿಗ್ನಲ್ ಕೊಟ್ಟರೆ ಚಾಮುಂಡಿ ಬೆಟ್ಟವನ್ನ ನಾವೇ ನಿರ್ವಹಣೆ ಮಾಡ್ತೇವೆ. ಬೆಟ್ಟವನ್ನು ಬೆಟ್ಟವಾಗಿಯೇ ಉಳಿಸಿಕೋಳ್ಳಬೇಕು ಅನ್ನೋದು ನಮ್ಮ ವಾದ. ಸರ್ಕಾರಿ ಖರಾಬು ಅಂತಾ ಚಾಮುಂಡಿ ಬೆಟ್ಟವನ್ನು ಮಾಡಲು ಆಗೋದಿಲ್ಲ. ಕೇವಲ ಖರಾಬು ಅಂತಾ ಮಾತ್ರವೇ ಇದೆ. ಆದ್ರೆ ಸರ್ಕಾರಿ ಖರಾಬು, ಖರಾಬು ಅಂತಾ ಇಲ್ಲ. ನಾವು ಸರ್ಕಾರಕ್ಕೆ ಕೊಟ್ಟ ಪ್ರಾಪರ್ಟಿ ಬಿಟ್ಟು ಸರ್ಕಾರಕ್ಕೆ ಕೊಟ್ಟಿರೋ ಬಗ್ಗೆ ನಾವು ಇವಾಗ ಕ್ಲೈಮ್ ಮಾಡೋದಿಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ಅ.3 ರಂದು ಮೈಸೂರು ದಸರಾ ಉದ್ಘಾಟನೆ; ಅ.12 ಕ್ಕೆ ಜಂಬೂಸವಾರಿ – ಸಿಎಂ ಸಿದ್ದರಾಮಯ್ಯ

    ಚಾಮುಂಡೇಶ್ವರಿ ದೇವಸ್ಥಾನ ನಮ್ಮ ಆಸ್ತಿ. ಅದು ಸಂಸ್ಥಾನದ ಖಾಸಗಿ ಆಸ್ತಿಗಳ ಪಟ್ಟಿಯಲ್ಲಿ ಇದೆ. ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರಕ್ಕೆ ನಮ್ಮ ವಿರೋಧ ಇದೆ. ಸಂಸ್ಥಾನದ ಖಾಸಗಿ ಆಸ್ತಿಗಳ ಪಟ್ಟಿಯಲ್ಲಿ ಬೆಟ್ಟದ ಅರಮನೆ, ನಂದಿ, ಚಾಮುಂಡೇಶ್ವರಿ ಹಾಗೂ ಮಹಾಬಲೇಶ್ವರ ದೇವಸ್ಥಾನ, ದೇವಿಕೆರೆ ಸುತ್ತಮುತ್ತಲ ಪ್ರದೇಶ ಸೇರಿದೆ. ದೇವಸ್ಥಾನ ಸಂಬಂಧ 2001ರಲ್ಲಿ ಮುಜರಾಯಿ ಇಲಾಖೆ ಹೈಕೋರ್ಟ್ ಮೆಟ್ಟಿಲೇರಿದೆ. ಪ್ರಕರಣ ಕೋರ್ಟ್ನಲ್ಲಿ ಇರುವಾಗ ಪ್ರಾಧಿಕಾರ ರಚನೆ ಮಾಡುವುದು ಸರಿಯಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು.

    ಹೀಗಾಗಿ ಕೋರ್ಟ್‌ನಲ್ಲಿ ಪ್ರಶ್ನೆ ಮಾಡಲಾಗಿದೆ. ಕೋರ್ಟ್ ಬರೀ ಸ್ಟೇಟಸ್ ಕೋ ಕೊಟ್ಟಿಲ್ಲ, ಪ್ರಾಧಿಕಾರವೇ ಜಾರಿಯಲ್ಲಿ ಇರೋದಿಲ್ಲ. 1950 ರಲ್ಲೇ ನಮ್ಮ ಸಂಸ್ಥಾನದಿಂದ ಖಾಸಗಿ ಆಸ್ತಿಗಳ ಪಟ್ಟಿ ಕೊಟ್ಟಿರೋದು. ಕೇಂದ್ರ ಸರ್ಕಾರ 1972 ರಲ್ಲಿ ಮಾಡಿರುವ ಆದೇಶದ ಪ್ರಕಾರ ಅವುಗಳನ್ನು ನಾವು ಅನುಭವಿಸಬಹುದು ಎಂದರು. ಇದನ್ನೂ ಓದಿ: ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣ – ಸಿಬಿಐ ವಿಚಾರಣೆ ಆದೇಶ ಕಾಯ್ದಿರಿಸಿದ ಹೈಕೋರ್ಟ್

  • ಮಳೆಗಾಲದಲ್ಲೂ ಬರಿದಾದ ಕೆಆರ್‌ಎಸ್ ಡ್ಯಾಂ ನೋಡಿ ರಾಜವಂಶಸ್ಥೆ ಬೇಸರ

    ಮಳೆಗಾಲದಲ್ಲೂ ಬರಿದಾದ ಕೆಆರ್‌ಎಸ್ ಡ್ಯಾಂ ನೋಡಿ ರಾಜವಂಶಸ್ಥೆ ಬೇಸರ

    – ಕೆಆರ್‌ಎಸ್ ಡ್ಯಾಂ ವೀಕ್ಷಿಸಿದ ಪ್ರಮೋದಾದೇವಿ ಒಡೆಯರ್

    ಮಂಡ್ಯ: ಕೆಆರ್‌ಎಸ್ ಜಲಾಶಯದಿಂದ (KRS Dam) ತಮಿಳುನಾಡಿಗೆ (Tamil Nadu) ನಿರಂತರ ನೀರು ಹರಿಸುತ್ತಿರುವ ಬೆನ್ನಲ್ಲೇ ಮೈಸೂರಿನ (Mysuru) ರಾಜವಂಶಸ್ಥೆ ಪ್ರಮೋದಾದೇವಿ (Pramoda Devi Wadiyar) ಕೆಆರ್‌ಎಸ್ ಡ್ಯಾಂಗೆ ಭೇಟಿ ನೀಡಿ ವೀಕ್ಷಣೆ ಮಾಡಿದ್ದಾರೆ.

    ಕೆಆರ್‌ಎಸ್ ಡ್ಯಾಂನಲ್ಲಿ ನೀರು ಕಡಿಮೆ ಇರುವ ಹಿನ್ನೆಲೆ ತಮಿಳುನಾಡಿಗೆ ನೀರು ಹರಿಸದಂತೆ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಇವರ ಈ ಪ್ರತಿಭಟನೆಯ ನಡುವೆಯೂ ಅ.15ರವರೆಗೆ ತಮಿಳುನಾಡಿಗೆ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಆದೇಶ ನೀಡಿದೆ. ಇದನ್ನೂ ಓದಿ: ಕಲಬುರಗಿ ಲೋಕಸಭಾ ಕ್ಷೇತ್ರದಲ್ಲಿ ಖರ್ಗೆ ಅಳಿಯ ಸ್ಪರ್ಧೆ ಸಾಧ್ಯತೆ: ಚಿಂಚನಸೂರು

    ಈ ಬೆನ್ನಲ್ಲೇ ಮೈಸೂರಿನ ರಾಜಮಾತೆ ಪ್ರಮೋದಾದೇವಿ ಒಡೆಯರ್ ಮಂಡ್ಯದ ಕೆಆರ್‌ಎಸ್ ಡ್ಯಾಂಗೆ ಭೇಟಿ ನೀಡಿದ್ದು, ಮಳೆಗಾಲದಲ್ಲೂ ಬರಿದಾದ ಡ್ಯಾಂ ನೋಡಿ ಬೇಸರಗೊಂಡಿದ್ದಾರೆ. ಇದನ್ನೂ ಓದಿ: ಮಹಾತ್ಮ ಗಾಂಧಿ ಪ್ರಭಾವ ಜಾಗತಿಕವಾಗಿದೆ: ಪ್ರಧಾನಿ ಮೋದಿ

    ರಾಜಮಾತೆ ಒಬ್ಬರೇ ಡ್ಯಾಂ ಬಳಿ ಭೇಟಿ ನೀಡಿ ವೀಕ್ಷಣೆ ನಡೆಸಿದ್ದಾರೆ. ಬರಿದಾಗಿರುವ ಡ್ಯಾಂ ನೋಡಿ ಬೇಸರಗೊಂಡ ಪ್ರಮೋದಾದೇವಿ ಮಳೆಗಾಗಿ ಪ್ರಾರ್ಥನೆ ಮಾಡಿದ್ದಾರೆ. ಇದನ್ನೂ ಓದಿ: ಕಮಲ-ದಳ ಮೈತ್ರಿಗೆ ಕೇರಳ ಜೆಡಿಎಸ್ ನಾಯಕರ ವಿರೋಧ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ದಾಖಲೆ ಮರೆತು ಬಂದ ಪ್ರಮೋದಾ ದೇವಿ ಒಡೆಯರ್ – ಅರಮನೆಗೆ ತೆರಳಿದ ಬಳಿಕ ವೋಟ್ ಮಾಡಿದ ರಾಜವಂಶಸ್ಥೆ

    ದಾಖಲೆ ಮರೆತು ಬಂದ ಪ್ರಮೋದಾ ದೇವಿ ಒಡೆಯರ್ – ಅರಮನೆಗೆ ತೆರಳಿದ ಬಳಿಕ ವೋಟ್ ಮಾಡಿದ ರಾಜವಂಶಸ್ಥೆ

    ಮೈಸೂರು: ಕರ್ನಾಟಕ ವಿಧಾನಸಭಾ ಚುನಾವಣೆ (Karnataka Assembly Election) ಹಿನ್ನೆಲೆ ಮೈಸೂರಿನ (Mysuru) ರಾಜವಂಶಸ್ಥೆ ಪ್ರಮೋದಾ ದೇವಿ ಒಡೆಯರ್ (Pramoda Devi Wadiyar) ಮತದಾನ ಮಾಡಲೆಂದು ಮತಗಟ್ಟೆಗೆ ಬಂದಿದ್ದರೂ ವಾಪಸ್ ತೆರಳಿರುವ ಪ್ರಸಂಗ ನಡೆದಿದೆ.

    ಮತದಾನ ಮಾಡಲೆಂದು ರಾಜವಂಶಸ್ಥೆ ಮತಗಟ್ಟೆಗೆ ಬಂದಿದ್ದರು. ಆದರೆ ಅವರು ಒರಿಜಿನಲ್ ದಾಖಲೆಗಳನ್ನು ಮರೆತು ಬಂದಿದ್ದರು. ಬಳಿಕ ಅವರು ಚುನಾವಣಾ ಸಿಬ್ಬಂದಿಗೆ ತಮ್ಮ ಮೊಬೈಲಿನಲ್ಲಿ ಸಾಫ್ಟ್ ಕಾಪಿ ತೋರಿಸಿದ್ದಾರೆ. ಆದರೆ ಒರಿಜಿನಲ್ ದಾಖಲಾತಿ ತರುವಂತೆ ಚುನಾವಣಾ ಸಿಬ್ಬಂದಿ ಪ್ರಮೋದಾ ದೇವಿ ಬಳಿ ಮನವಿ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಕ್ಯೂನಲ್ಲಿ ನಿಂತು ಮತ ಚಲಾಯಿಸಿದ ಸುಧಾಮೂರ್ತಿ ದಂಪತಿ

    ಪ್ರಮೋದಾ ದೇವಿ ದಾಖಲೆಗಳನ್ನು ತಂದು ಬಳಿಕ ವೋಟ್ ಮಾಡುವುದಾಗಿ ತಿಳಿಸಿ ಅರಮನೆಗೆ ಹಿಂತಿರುಗಿದ್ದಾರೆ. ಬಳಿಕ ದಾಖಲೆ ಸಮೇತ ಮತಗಟ್ಟೆಗೆ ಬಂದ ಅವರು ಕೆಆರ್ ಕ್ಷೇತ್ರದ ಬೂತ್ ಸಂಖ್ಯೆ 179ರಲ್ಲಿ ಮತದಾನ ಮಾಡಿದರು. ಇದನ್ನೂ ಓದಿ: Karnataka Election 2023 | ಕರ್ನಾಟಕ ವಿಧಾನಸಭಾ ಚುನಾವಣೆಗೆ ಇಂದು ಮತದಾನ | Live Updates

  • ನಾಡಹಬ್ಬಕ್ಕೆ ಪ್ರಮೋದಾದೇವಿಯವರಿಗೆ ಎಸ್.ಟಿ.ಎಸ್ ಅಧಿಕೃತ ಆಹ್ವಾನ

    ನಾಡಹಬ್ಬಕ್ಕೆ ಪ್ರಮೋದಾದೇವಿಯವರಿಗೆ ಎಸ್.ಟಿ.ಎಸ್ ಅಧಿಕೃತ ಆಹ್ವಾನ

    ಮೈಸೂರು: ನಾಡಹಬ್ಬ ದಸರಾ ಮಹೋತ್ಸವಕ್ಕೆ ರಾಜಮಾತೆ ಪ್ರಮೋದಾದೇವಿ ಅವರನ್ನು ಸಹಕಾರ ಸಚಿವರು ಹಾಗೂ ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರು ಇಂದು ಅಧಿಕೃತವಾಗಿ ಆಹ್ವಾನಿಸಿದ್ದಾರೆ.

    ರಾಜಮಾತೆಗೆ ಫಲಪುಷ್ಪ ತಾಂಬೂಲ ನೀಡಿ ಗೌರವಿಸಿ ಆಹ್ವಾನ ನೀಡಲಾಯಿತು. ಸಚಿವರ ಆಹ್ವಾನ ಸ್ವೀಕರಿಸಿದ ಪ್ರಮೋದಾದೇವಿ ಅವರು ದಸರಾ ಆಚರಣೆಗೆ ಸಂಪೂರ್ಣ ಸಹಕಾರ ನೀಡುವುದಾಗಿ ತಿಳಿಸಿದರು.

    ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವರು, ಪ್ರತಿವರ್ಷದ ಪದ್ಧತಿಯಂತೆ ದಸರಾ ಮಹೋತ್ಸವಕ್ಕೆ ರಾಜಮಾತೆಯವರನ್ನು ಆಹ್ವಾನಿಸಲಾಯಿತು. ದಸರಾಗೆ ಪೂರ್ಣ ಸಹಕಾರ ನೀಡುವಂತೆ ಕೋರಲಾಯಿತು. ಅದಕ್ಕೆ ಅವರು ಸಕಾರಾತ್ಮಕವಾಗಿ ಸ್ಪಂದಿಸಿದರು. ಅರಮನೆಯ ಕಾರ್ಯಕ್ರಮಗಳಿಗೂ ಯಾವುದೇ ಅಡಚಣೆಯಾಗದ ರೀತಿಯಲ್ಲಿ ಸಹಕಾರ ನೀಡುವಂತೆ ಅವರೂ ಕೋರಿದರು. ಅದಕ್ಕೆ ಸಂಪೂರ್ಣ ಸಹಕಾರ ಕೊಡುವುದಾಗಿ ತಿಳಿಸಲಾಗಿದೆ ಎಂದರು. ಇದನ್ನೂ ಓದಿ:   ಸಮಂತಾ, ನಾಗ ಚೈತನ್ಯ DIVORCEಗೆ ಅಸಲಿ ಕಾರಣ ಬಯಲು

    ಅ.7ರಿಂದ 15ರವರೆಗೆ ದಸರಾ ನಡೆಯಲಿದೆ. ದಸರಾ ಉದ್ಘಾಟನೆ ಕಾರ್ಯಕ್ರಮಕ್ಕೆ 400 ಜನರಿಗೆ ಅವಕಾಶ ನೀಡಲಾಗಿದೆ. ಚಾಮುಂಡಿಬೆಟ್ಟದಲ್ಲಿ ಯಾವುದೇ ನಿಬರ್ಂಧ ಇಲ್ಲ. ದೇವರ ದರ್ಶನ ಮಾಡುವವರು ಮಾಡಬಹುದು ಎಂದು ಹೇಳಿದರು. ಇದನ್ನೂ ಓದಿ:  ರಾಜ್ಯ ರಾಜಕಾರಣ ಬಿಟ್ಟು ನಾನು ಬರಲ್ಲ: ಸೋನಿಯಾ ಭೇಟಿಯ ಇನ್‌ಸೈಡ್‌ ಸುದ್ದಿ

    ಚಾಮುಂಡಿಬೆಟ್ಟದಲ್ಲಿ ದಸರಾ ಉದ್ಘಾಟನೆ, ಅರಮನೆ ಆವರಣದಲ್ಲಿ ಸಾಂಸ್ಕøತಿಕ ಕಾರ್ಯಕ್ರಮಗಳು, ಜಂಬೂ ಸವಾರಿ ನಡೆಯಲಿದೆ. ಇದರ ಹೊರತು ಬೇರೆ ಯಾವುದೇ ಕಾರ್ಯಕ್ರಮಕ್ಕೆ ಅವಕಾಶವಿಲ್ಲ. ಜಂಬೂ ಸವಾರಿ ವೀಕ್ಷಣೆಗೆ 500 ಜನರಿಗೆ ಅವಕಾಶವಿದ್ದು, ಯಾವರೀತಿ ಅವಕಾಶ ಕಲ್ಪಿಸಬೇಕು ಎಂಬುದರ ಕುರಿತಾಗಿ ಚರ್ಚಿಸಿ ತೀರ್ಮಾನಿಸಲಾಗುವುದು ಎಂದರು. ಇದನ್ನೂ ಓದಿ: ಡಿಕೆಶಿ ಸಾಕ್ಷ್ಯ ವೇಳೆ ಸುಳ್ಯ ಕೋರ್ಟಲ್ಲಿ ಕೈ ಕೊಟ್ಟ ಕರೆಂಟ್! 

    ರಾಜಮಾತೆಗೆ ಆಹ್ವಾನ ನೀಡುವ ಸಂದರ್ಭದಲ್ಲಿ ಸಂಸದ ಪ್ರತಾಪ್ ಸಿಂಹ, ಶಾಸಕ ಎಲ್.ನಾಗೇಂದ್ರ, ಮೈಸೂರು ಮೇಯರ್ ಸುನಂದಾ ಪಾಲನೇತ್ರ, ಮೂಡಾ ಅಧ್ಯಕ್ಷ ರಾಜೀವ್, ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್, ಅಪರ ಜಿಲ್ಲಾಧಿಕಾರಿ ಡಾ. ಬಿ.ಎಸ್.ಮಂಜುನಾಥಸ್ವಾಮಿ, ಸಚಿವರ ವಿಶೇಷ ಕರ್ತವ್ಯಾಧಿಕಾರಿ ದಿನೇಶ್ ಗೂಳಿಗೌಡ, ಪಾಲಿಕೆ ಆಯುಕ್ತರಾದ ಜಿ.ಲಕ್ಷ್ಮೀಕಾಂತ್ ರೆಡ್ಡಿ, ಮೈಸೂರು ನಗರ ಬಿಜೆಪಿ ಅಧ್ಯಕ್ಷರಾದ ಶ್ರೀವತ್ಸ ಸೇರಿದಂತೆ ಇತರೆ ಗಣ್ಯರು ಹಾಗೂ ಅಧಿಕಾರಿವರ್ಗದವರು ಉಪಸ್ಥಿತರಿದ್ದರು.

  • ಮೈಸೂರು ರಾಜವಂಶದ ಖಾಸಗಿ ದಸರಾಗೆ ಸಾರ್ವಜನಿಕರು, ಮಾಧ್ಯಮಕ್ಕೆ ನಿರ್ಬಂಧ

    ಮೈಸೂರು ರಾಜವಂಶದ ಖಾಸಗಿ ದಸರಾಗೆ ಸಾರ್ವಜನಿಕರು, ಮಾಧ್ಯಮಕ್ಕೆ ನಿರ್ಬಂಧ

    ಮೈಸೂರು: ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾದ ಪರಿಣಾಮ ಮೈಸೂರು ಅರಮನೆಯಲ್ಲಿ 2020ರ ಸಾಲಿನ ಮೈಸೂರು ರಾಜವಂಶದ ಖಾಸಗಿ ದಸರಾಗೆ ಸಾರ್ವಜನಿಕರು ಹಾಗೂ ಮಾಧ್ಯಮಗಳಿಗೆ ನಿರ್ಬಂಧ ಹೇರಲಾಗಿದೆ.

    ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಈ ಬಗ್ಗೆ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ. ಕೊರೊನಾ ಹಿನ್ನೆಲೆಯಲ್ಲಿ ಅರಮನೆಯ ದರ್ಬಾರ್ ಹಾಲ್‍ನಲ್ಲಿ ನಡೆಯುವ ಕಾರ್ಯಕ್ರಮಗಳಿಗೆ ಸಾರ್ವಜನಿಕರಿಗೆ ನಿಷೇಧ ಹೇರಲಾಗಿದೆ. ಅಲ್ಲದೇ ಖಾಸಗಿ ದರ್ಬಾರ್ ವೀಕ್ಷಣೆ ಹಾಗೂ ನೇರ ಪ್ರಸಾರಕ್ಕೂ ಅವಕಾಶ ಇಲ್ಲದಂತಾಗಿದೆ.

    ಪ್ರತಿಕಾ ಪ್ರಕಟಣೆ:
    ಮೈಸೂರಿನಲ್ಲಿ ಹೆಚ್ಚಿನ ಕೋವಿಡ್ ಪ್ರಕರಣಗಳ ದೃಷ್ಟಿಯಿಂದ ಅರಮನೆಯಲ್ಲಿ 2020ರ ಸಾಲಿನ ಶರನ್ನವರಾತ್ರಿ ಸಂದರ್ಭದಲ್ಲಿ ಪೂಜಾ ವಿಧಿವಿಧಾನಗಳನ್ನ ಸಾಂಪ್ರದಾಯಿಕವಾಗಿ ನಡೆಸಲಾಗುವುದು. ಮುನ್ನೆಚ್ಚರಿಕೆ ಕ್ರಮ ಅವಶ್ಯಕವಾಗಿರುವುದರಿಂದ ಆಚರಣೆಯಲ್ಲಿ ಕುಟುಂಬ ಸದಸ್ಯರನ್ನು ಒಳಗೊಂಡಂತೆ ಸಾರ್ವಜನಿಕರು ಹಾಗೂ ಮಾಧ್ಯಮಗಳು ಭಾಗವಹಿಸುವಿಕೆ ಇರುವುದಿಲ್ಲ ಎಂದು ತಿಳಿಸಿದ್ದಾರೆ.

    ಕೊರೊನಾ ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಈ ಕ್ರಮ ಅನಿವಾರ್ಯವಾಗಿದೆ. ಸಾರ್ವಜನಿಕರು ಹಾಗೂ ಮಾಧ್ಯಮ ಪ್ರತಿನಿಧಿಗಳು ಸಹಕರಿಸಬೇಕು ಎಂದು ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಪತ್ರಿಕಾ ಹೇಳಿಕೆ ಮೂಲಕ ತಿಳಿಸಿದ್ದಾರೆ.

  • ಅರಮನೆಯಲ್ಲಿ ನಡೆಯಬೇಕಿದ್ದ ಜಟ್ಟಿ ಕಾಳಗ ರದ್ದು

    ಅರಮನೆಯಲ್ಲಿ ನಡೆಯಬೇಕಿದ್ದ ಜಟ್ಟಿ ಕಾಳಗ ರದ್ದು

    ಮೈಸೂರು: ರಾಜಮಾತೆ ಪ್ರಮೋದಾ ದೇವಿ ಒಡೆಯರ್ ತಾಯಿ ನಿಧನ ಹಿನ್ನೆಲೆಯಲ್ಲಿ ಅಂಬಾ ವಿಲಾಸ ಅರಮನೆಯಲ್ಲಿ ನಡೆಯಬೇಕಿದ್ದ ಜಟ್ಟಿ ಕಾಳಗ ರದ್ದು ಮಾಡಲಾಗಿದೆ.

    ಗಣಪತಿ ಪೂಜೆ, ಬನ್ನಿ ಪೂಜೆ ಸೇರಿ ವಿಜಯರಥ ಮೆರವಣಿಗೆಯೂ ರದ್ದಾಗುವ ಸಾಧ್ಯತೆ ಇದೆ. ಅದು ಕೂಡ ಅನುಮಾನವಾಗಿದೆ. ಮೈಸೂರು ಸಂಸ್ಥಾನದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಸೂತಕ ಬಂದು ಎಲ್ಲ ಪೂಜಾ ಕೈಂಕರ್ಯಗಳು ರದ್ದಾಗಿದೆ. ಅಜ್ಜಿ ಸಾವಿನಲ್ಲಿ ಯದುವೀರ್ ಸರಳವಾಗಿ ಪೂಜೆ ಸಲ್ಲಿಸಲಿದ್ದು, ಬೆಳ್ಳಿ ಪಲ್ಲಕ್ಕಿ ಏರಿ ವಿಜಯ ಯಾತ್ರೆ ಮಾಡುವುದು ಅನುಮಾನವಾಗಿದೆ.

     

    ಇಂದು ನಡೆಯಬೇಕಿದ್ದ ಜಟ್ಟಿ ಕಾಳಗ ಅಕ್ಟೋಬರ್ 22ಕ್ಕೆ ಮುಂದೂಡಿಕೆ ಮಾಡಲಾಗಿದೆ. ಇಂದು ಅನಾರೋಗ್ಯದ ಬಳಲುತ್ತಿದ್ದ ರಾಜವಂಶಸ್ಥೆ ಪ್ರಮೋದಾ ದೇವಿ ಅವರ ತಾಯಿ ಪುಟ್ಟಚಿನ್ನಮ್ಮಣಿ ಅವರು ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧಾನರಾಗಿದ್ದಾರೆ. ಇದರಿಂದ ಅರಮನೆಯಲ್ಲಿ ಸೂತಕದ ವಾತಾವರಣ ಆವರಿಸಿಕೊಂಡಿದೆ.

    ಧಾರ್ಮಿಕ ಪೂಜಾ ವಿಧಾನಗಳ ಬಗ್ಗೆ ಅರಮನೆಯ ಪುರೋಹಿತರೊಂದಿಗೆ ಪ್ರಮೋದಾ ದೇವಿ ಚೆರ್ಚೆ ನಡೆಸುತ್ತಿದ್ದು, ವಿಜಯ ದಶಮಿ ಪೂಜೆಯಲ್ಲಿ ಪ್ರಮೋದಾ ದೇವಿ ಒಡೆಯರ್ ಭಾಗವಹಿಸುವುದು ಅನುಮಾನವಾಗಿದೆ. ಈಗಾಗಲೇ ಸಮರ್ ಪ್ಯಾಲೇಸ್ ನಲ್ಲಿ ಅಂತಿಮ ಸಂಸ್ಕಾರ ನಡೆಸುವ ಬಗ್ಗೆ ಚೆರ್ಚೆ ಮಾಡುತ್ತಿದ್ದಾರೆ. ಇದನ್ನೂ ಓದಿ:  ರಾಜಮಾತೆಗೆ ಮಾತೃವಿಯೋಗ- ಇದು ಯಾವುದರ ಸಂಕೇತ…? ಶ್ರೀ ರೇಣುಕಾರಾಧ್ಯ ಗುರೂಜಿ ಸ್ಪಷ್ಟನೆ

    ಅರಮನೆ ಉಪ ನಿರ್ದೇಶಕ ಸುಬ್ರಮಣ್ಯ ಅವರು ಗೋಪಾಲಗೌಡ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಆಸ್ಪತ್ರೆಯಲ್ಲಿ ಪುಟ್ಟಚಿನ್ನಮ್ಮಣ್ಣಿ ಪಾರ್ಥಿವ ಶರೀರ ರವಾನೆಗೆ ಸಿದ್ಧತೆ ಮಾಡಲಾಗುತ್ತಿದೆ. ಅಂಬ್ಯುಲೆನ್ಸ್ ನಲ್ಲಿ ಕೆಫಿನ್ ಬಾಕ್ಸ್ ಇಟ್ಟು ಪಾರ್ಥಿವ ಶರೀರ ರವಾನೆಗೆ ಆಸ್ಪತ್ರೆ ಸಿಬ್ಬಂದಿ ಸಿದ್ಧ ಮಾಡುತ್ತಿದ್ದಾರೆ. ಆಸ್ಪತ್ರೆಯಿಂದ ಸಮ್ಮರ್ ಪ್ಯಾಲೇಸ್ ಗೆ ಚಿನ್ನಮ್ಮಣ್ಣಿ ಪಾರ್ಥಿವ ಶರೀರ ರವಾನೆ ಸಾಧ್ಯತೆ ಇದೆ.

    ಸಚಿವ ಸಾರಾ ಮಹೇಶ್ ಅವರು ಆಸ್ಪತ್ರೆಗೆ ಭೇಟಿ ನೀಡಿ ತಾಯಿ ಪ್ರಮೋದಾ ದೇವಿ ಅವರ ತಾಯಿಯ ದರ್ಶನ್ ಪಡೆದು ಬಳಿಕ, ರಾಜಮಾತೆಯವರ ತಾಯಿ ನಿಧನರಾಗಿದ್ದಾರೆ. ಸಮ್ಮರ್ ಪ್ಯಾಲೇಸ್ ನಲ್ಲಿ ಅಂತಿಮ ದರ್ಶನಕ್ಕೆ ಇಡಲಾಗುವುದು. ರಾಜಮಾತೆಯವರು ಸಮ್ಮರ್ ಪ್ಯಾಲೇಸ್‍ಗೆ ಆಗಮಿಸುತ್ತಾರೆ. ಪರಕಾಲ ಮಠದ ಅಭಿಪ್ರಾಯವನ್ನು ಕೇಳಿದ್ದಾರೆ. ಪರಕಾಲ ಮಠ ಯಾವ ರೀತಿ ಶಾಸ್ತ್ರ ವಿಧಿ-ವಿಧಾನ ಸೂಚಿಸುತ್ತಾರೋ ಹಾಗೆ ಕಾರ್ಯಕ್ರಮಗಳು ನಿರ್ಧಾರವಾಗಲಿವೆ ಎಂದು ಹೇಳಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ರಾಜಮಾತೆಗೆ ಮಾತೃವಿಯೋಗ- ಇದು ಯಾವುದರ ಸಂಕೇತ…? ಶ್ರೀ ರೇಣುಕಾರಾಧ್ಯ ಗುರೂಜಿ ಸ್ಪಷ್ಟನೆ

    ರಾಜಮಾತೆಗೆ ಮಾತೃವಿಯೋಗ- ಇದು ಯಾವುದರ ಸಂಕೇತ…? ಶ್ರೀ ರೇಣುಕಾರಾಧ್ಯ ಗುರೂಜಿ ಸ್ಪಷ್ಟನೆ

    ಬೆಂಗಳೂರು: ಇಂದು ನಾಡಿನಾದ್ಯಂತ ವಿಜಯ ದಶಮಿಯನ್ನು ಅತ್ಯಂತ ಸಂಭ್ರಮ ಸಡಗರದಿಂದ ಆಚರಣೆ ಮಾಡಲಾಗುತ್ತಿದೆ. ಆದ್ರೆ ಇಂದೇ ರಾಜಮಾತೆ ಪ್ರಮೋದಾದೇವಿ ಅವರ ತಾಯಿ 98 ವರ್ಷದ ಪುಟ್ಟ ಚಿನ್ನಮ್ಮಣ್ಣಿ ವಿಧಿವಶರಾಗಿದ್ದಾರೆ. ಜಂಬೂ ಸವಾರಿ ದಿನವೇ ರಾಜಮಾತೆಯ ತಾಯಿಯವರು ವಿಧಿವಶವಾಗಿದ್ದರಿಂದ ಅಪಶಕುನನಾ? ಅರಮನೆಯಲ್ಲಿ ಸೂತಕದ ವಾತಾವರಣ ನಿರ್ಮಾಣ ಆಗುತ್ತಾ..? ಜಂಬೂ ಸವಾರಿ ನಡೆಯುತ್ತಾ? ಎಂಬಿತ್ಯಾದಿ ಪ್ರಶ್ನೆಗಳು ನಾಡಿನ ಜನರಲ್ಲಿ ಹುಟ್ಟಿಕೊಂಡಿವೆ.

    ಈ ಸಂಬಂಧ ಪಬ್ಲಿಕ್ ಟಿವಿಗೆ ಪ್ರತಿಕ್ರಿಯಿಸಿರುವ ಖ್ಯಾತ ಜ್ಯೋತಿಷಿ ರೇಣುಕಾರಾಧ್ಯ ಗುರೂಜಿ, ಪುಟ್ಟ ಚಿನ್ನಮ್ಮಣ್ಣಿ ನಿಧನದಿಂದ ಅರಮನೆಯಲ್ಲಿ ಸೂತಕವಾದ ವಾತಾವರಣ ನಿರ್ಮಾಣ ಆಗಲ್ಲ. ಪ್ರಮೋದಾದೇವಿಯವರ ತವರು ಮನೆ ಆಗಿದ್ದರಿಂದ ಅರಮನೆಗೆ ಸೂತಕ ಎಂಬ ಮಾತು ಬರಲ್ಲ. ಮೃತ ದೇಹದ ದರ್ಶನ ಪಡೆಯುವ ಮೊದಲು ಧಾರ್ಮಿಕ ವಿಧಿವಿಧಾನಗಳಲ್ಲಿ ಭಾಗಿ ಆಗಬಹುದು. ಆದ್ರೆ ದರ್ಶನ ಪಡೆದ ನಂತರ 5 ಅಥವಾ 11 ಅಥವಾ 13 ದಿನ ಜನರು ದೇವತಾ ದರ್ಶನ ಮತ್ತು ದೇವತಾ ಕಾರ್ಯ ಮಾಡಬಾರದು ಎಂಬುದು ನಮ್ಮ ಸಂಸ್ಕಾರಗಳಲ್ಲಿದೆ. ಜಂಬೂ ಸವಾರಿಯ ನಂತರ ದರ್ಶನ ಪಡೆತಯುತ್ತಾರಾ..? ಅಥವಾ ಧಾರ್ಮಿಕ ವಿಧಿ ವಿಧಾನಗಳಿಂದ ದೂರು ಉಳಿಯುತ್ತಾರಾ? ಎಂಬುದನ್ನು ಪ್ರಮೋದಾ ದೇವಿ ಅವರು ನಿರ್ಧರಿಸಬೇಕಿದೆ.

     

    ಪುಟ್ಟಚಿನ್ನಮ್ಮಣಿ ವಯೋಸಹಜ, ಪ್ರಕೃತ್ತಿದತ್ತವಾಗಿ ವಿಧಿವಶವಾಗಿದ್ದರಿಂದ ಅರಮನೆಗೆ ಸೂತಕದ ಛಾಯೆ ಬರೋದಿಲ್ಲ. ನಾಡ ಹಬ್ಬ ದಸರಾ ಮೇಲೆ ಯಾವುದೇ ಪರಿಣಾಮ ಬೀರಲ್ಲ. ನಾಡಿಗೆ ಕೆಡುಕು, ಒಳ್ಳೆಯದಾಗಲ್ಲ, ಅಪಶುಕನ ಎಂಬಿತ್ಯಾದಿ ಸುಳ್ಳು. ನಾಡಿನ ಜನರು ಆತಂಕಕ್ಕೆ ಒಳಪಡುವ ಅಗತ್ಯವಿಲ್ಲ. ವಿಜಯದಶಮಿ ದಿನದಂದು ದೈವಾಧೀನರಾದ್ರೆ, ಆತ್ಮ ನೇರವಾಗಿ ಭಗವಂತನ ಪಾದಕ್ಕೆ ಸೇರುವ ಮೂಲಕ ಮೋಕ್ಷ ಸಿಗುತ್ತೆ ಎಂಬ ಧರ್ಮದಲ್ಲಿ ನಂಬಿಕೆ ಇದೆ. ಅರಮನೆಯಲ್ಲಿ ಧಾರ್ಮಿಕ ಕಾರ್ಯಗಳು ನಡೆದ್ರೆ, ಒಂದು ಕಡೆ ಅಂತ್ಯಕ್ರಿಯೆಯ ಅಂತಿಮ ವಿಧಿವಿಧಾನಗಳು ನಡೆಯಬಹುದು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv