Tag: Pramodh Muthalik

  • ಸಾಮಾಜಿಕ ಜಾಲತಾಣದಲ್ಲಿ ಬೆದರಿಕೆ ಹಾಕಿದವರು ಷಂಡರು: ಯಶ್‌ಪಾಲ್ ಸುವರ್ಣ

    ಸಾಮಾಜಿಕ ಜಾಲತಾಣದಲ್ಲಿ ಬೆದರಿಕೆ ಹಾಕಿದವರು ಷಂಡರು: ಯಶ್‌ಪಾಲ್ ಸುವರ್ಣ

    ಉಡುಪಿ: ನನಗೆ ಸಾಮಾಜಿಕ ಜಾಲತಾಣದಲ್ಲಿ ಬೆದರಿಕೆ ಹಾಕಿದವರು ಷಂಡರು ಎಂದು ನಗರದ ಸರ್ಕಾರಿ ಮಹಿಳಾ ಪಿಯು ಕಾಲೇಜು ಉಪಾಧ್ಯಕ್ಷ ‌ಯಶ್‌ಪಾಲ್ ಸುವರ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಕಿಡಿಗೇಡಿಗಳು ಸಾಮಾಜಿಕ ಜಾಲತಾಣದಲ್ಲಿ ಬಹಿರಂಗವಾಗಿ ಬೆದರಿಕೆ ಹಾಕಿರುವ ವಿಚಾರವಾಗಿ ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿದ ಅವರು, ಹಿಂದುತ್ವದ ವಿಚಾರದಲ್ಲಿ ಕೆಲಸ ಮಾಡುವಾಗ ಬೆದರಿಕೆಗಳು ಸಾಮಾನ್ಯ. ಧಮ್ಕಿ ಕೊಟ್ಟವನಿಗೆ ನನ್ನ ವ್ಯಾಲ್ಯೂಯೇಷನ್ ಎಷ್ಟು ಅಂತ ಗೊತ್ತಿಲ್ಲ. ಒಬ್ಬ ಮನುಷ್ಯನ ಬೆಲೆ ಎಷ್ಟು ಅಂತ ಗೊತ್ತಿದ್ದರೆ ಆತ ಬೆಲೆ ಕಟ್ಟುತ್ತಿರಲಿಲ್ಲ. ಧಮ್ಕಿ ಬಂತು ಅಂತ ನನ್ನ ಕೆಲಸದ ಶೈಲಿ ರಾಷ್ಟ್ರೀಯತೆ ಹಿಂದುತ್ವದ ಹೋರಾಟದಿಂದ ಹಿಂದೆ ಸರಿಯುವುದಿಲ್ಲ ಎಂದು ಕಿಡಿಕಾರಿದರು. ಇದನ್ನೂ ಓದಿ: ಬಾಲಕಿಯರಿಗೆ ರೈಫಲ್ ತರಬೇತಿ, ಸೂಸೈಡ್ ಬಾಂಬ್ ತರಬೇತಿ ನೀಡಿದ್ದೆ – ಐಸಿಸ್ ಸೇರಿದ್ದ ಶಿಕ್ಷಕಿಯಿಂದ ತಪ್ಪೊಪ್ಪಿಗೆ

    ಕಿಡಿಗೇಡಿಗಳು ಅವರ ತಲೆ ತೆಗೆಯುವುದಾಗಿ ಬೆದರಿಕೆ ಹಾಕಿದ್ದಲ್ಲದೇ, ತಲೆಗೆ 10 ಲಕ್ಷ ರೂಪಾಯಿ ಘೋಷಿಸಿರುವ ವಿಚಾರವಾಗಿ ಪ್ರತಿಕ್ರಿಯೆ ನೀಡಿ, ಸಾಮಾಜಿಕ ಜಾಲತಾಣದಲ್ಲಿ ಬೆದರಿಕೆ ಹಾಕಿದವರು ಷಂಡರು. ತಾಕತ್ ಇದ್ದರೆ ಅವರು ಎದುರು ಬಂದು ಮಾತಾಡಲಿ. ನನ್ನ ಜೀವನದಲ್ಲಿ ಇಂತದ್ದು ತುಂಬಾ ನೋಡಿದ್ದೇನೆ. ನಾನು ದೇಶದ್ರೋಹಿ ಚಟುವಟಿಕೆ ಮಾಡಿಲ್ಲ, ಅನ್ಯಾಯ ಮಾಡಿಲ್ಲ. ನನಗೆ ದೋ ನಂಬರ್ ಬ್ಯುಸಿನೆಸ್ ಇಲ್ಲ ನಾನು ಯಾರದೋ ಅನ್ನದ ಬಟ್ಟಲಿಗೆ ಕೈಹಾಕಿ ತಿಂದಿಲ್ಲ ಎಂದು ಸಿಡಿದರು. ಇದನ್ನೂ ಓದಿ: ಮೈಕ್‌ ದಂಗಲ್‌ – ಇಂದು ಬಿಜೆಪಿ ಮುಖಂಡರ ಮನೆ ಮುಂದೆ ಶ್ರೀರಾಮ ಸೇನೆಯಿಂದ ಪ್ರತಿಭಟನೆ

    court order law

    ಶಾಲೆಯ ಶಿಸ್ತು ಮತ್ತು ಕೋರ್ಟ್ ಆದೇಶ ಪಾಲಿಸಲು ನಾವು ಹಿಜಬ್‍ನ ವಿರುದ್ಧವೇ ನಿಲ್ಲುತ್ತೇವೆ. ಈ ವರ್ಷ ಕೂಡ 40ಕ್ಕೂ ಹೆಚ್ಚು ಮುಸ್ಲಿಮ್ ವಿದ್ಯಾರ್ಥಿನಿಯರನ್ನು ನಾವು ಅಡ್ಮಿಶನ್ ಮಾಡಿಸಿಕೊಂಡಿದ್ದೇವೆ. ನಾವು ಹಿಜಬ್ ತೆಗೆದು ಕ್ಲಾಸಿಗೆ ಬರುತ್ತೇವೆ ಎಂದು ಬರೆದುಕೊಟ್ಟಿದ್ದಾರೆ ಎಂದು ತಿಳಿಸಿದರು.

    ಕಿಡಿಗೇಡಿಗಳು ಪ್ರಮೋದ್ ಮುತಾಲಿಕ್ ಅವರಿಗೂ ಬೆದರಿಕೆ ಹಾಕಿದ್ದಾರೆ. ನಾನು ಅವರ ಜೊತೆ ಮಾತನಾಡಿಲ್ಲ, ಮಾತನಾಡುತ್ತೇನೆ. ನನ್ನ ಸಿದ್ಧಾಂತ ದೇಶದ ವಿಚಾರದ ಹೋರಾಟ ಮಾಡುತ್ತೇನೆ. ನಾನು ಭಯಪಡುವ ಪ್ರಶ್ನೆಯೇ ಇಲ್ಲ. ಟೀಕೆ ಬೆದರಿಕೆ ಸಾಮಾಜಿಕ ಚಟುವಟಿಕೆಯ ಒಂದು ಅವಿಭಾಜ್ಯ ಅಂಗ ಎಂದರು.

  • ರಾಮಮಂದಿರ ಮಾಡದೆ ಇದ್ದರೆ ಮೋದಿ ಹಿಂದೂಗಳಿಗೆ ದ್ರೋಹ ಬಗೆದಂತೆ: ಪ್ರಮೋದ್ ಮುತಾಲಿಕ್

    ರಾಮಮಂದಿರ ಮಾಡದೆ ಇದ್ದರೆ ಮೋದಿ ಹಿಂದೂಗಳಿಗೆ ದ್ರೋಹ ಬಗೆದಂತೆ: ಪ್ರಮೋದ್ ಮುತಾಲಿಕ್

    ಧಾರವಾಡ: ರಾಮಮಂದಿರ ನಿರ್ಮಾಣ ಮಾಡದೇ ಇದ್ದರೆ, ಪ್ರಧಾನಿ ನರೇಂದ್ರ ಮೋದಿಯವರು ಹಿಂದೂಗಳಿಗೆ ದ್ರೋಹ ಬಗೆದಂತಾಗುತ್ತದೆ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ತಿಳಿಸಿದ್ದಾರೆ.

    ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಮಾತನಾಡಿದ ಅವರು, ರಾಮಮಂದಿರ ನಿರ್ಮಾಣ ಆಗಬೇಕೆಂದು 100 ಕೋಟಿ ಹಿಂದೂಗಳ ಆಶಯವಾಗಿದೆ. ಆದರೆ ಇದು ಬಿಜೆಪಿಯವರಿಗೆ ಲಾಭ ಆಗುತ್ತಿದೆ. ಬಿಜೆಪಿಯವರು ರಾಮ ಮಂದಿರ ನಿರ್ಮಿಸುತ್ತೇವೆ ಎಂದು ತಮ್ಮ ಪ್ರಣಾಳಿಕೆಯಲ್ಲಿ ಹಾಕಿದ್ದರು. ಅಲ್ಲದೇ ಜನರು, ಸಂತರೂ ಸಹ ಈಗ ಒತ್ತಾಯ ಮಾಡುತ್ತಿದ್ದಾರೆ. ಮುಂಬರುವ ಚುನಾವಣೆ ವೇಳೆಗೆ ರಾಮ ಮಂದಿರ ನಿರ್ಮಾಣವಾಗಬೇಕು. ಈ ಬಾರಿ ಮಾಡದೇ ಇದ್ದರೆ, ಪ್ರಧಾನಿ ಮೋದಿಯವರು ಹಿಂದೂಗಳಿಗೆ ದ್ರೋಹ ಬಗೆದಂತಾಗುತ್ತದೆ. ಈ ಹಿಂದೆ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರು ಇದೇ ರೀತಿ ಮಾಡಿದ್ದರು. ಹೀಗಾಗಿ ನಾವು ಅವರನ್ನು ಕೆಳಗೆ ಇಳಿಸಿದ್ದೇವು ಎಂದರು.

    ಇದೇ ವೇಳೆ ಗೋರಕ್ಷಕರ ಮೇಲೆ ಹಲ್ಲೆ ಕುರಿತು ಪ್ರತಿಕ್ರಿಯಿಸಿ, ಹಿಂದೂ ಕಾರ್ಯಕರ್ತರಿಗೆ ಗೋಮಾಂಸ ಸಾಗಾಟದ ವಿಷಯ ಗೊತ್ತಾಗುತ್ತದೆ. ಆದರೆ ಪೊಲೀಸರಿಗೆ ಸಾಗಾಟದ ಬಗ್ಗೆ ಮಾಹಿತಿ ಗೊತ್ತಿರಲಿಲ್ಲವೇ? ಪೊಲೀಸರ ಕೆಲಸ ಇರೋದೆ ಪತ್ತೆ ಮಾಡುವುದಕ್ಕೆ. ಹಾಗಾದರೇ ಅವರು ಏನು ಕತ್ತೆ ಕಾಯುತ್ತಿದ್ದರಾ ಎಂದು ಪ್ರಶ್ನಿಸಿ ಆಕ್ರೋಶ ವ್ಯಕ್ತಪಡಿಸಿದರು.

    ರಾಜ್ಯ ಪೊಲೀಸ್ ಇಲಾಖೆ ವಿರುದ್ಧ ಹರಿಹಾಯ್ದ ಅವರು, ಅಕ್ರಮವಾಗಿ ಗೋಮಾಂಸವನ್ನು ಸಾಗಿಸುತ್ತಾರೆ. ಅವರ ಹಿಂದೆ ಕಾರುಗಳನ್ನು ಫಾಲೋ ಮಾಡಿ, ಅದು ಬಿಟ್ಟು ಹಿಂದೂ ಕಾರ್ಯಕರ್ತರ ಮೇಲೆ ಹಲ್ಲೆ ನಡೆದಿದೆ. ಅಕ್ರಮ ಚಟುವಟಿಕೆಗಳನ್ನು ನಿಲ್ಲಿಸಲು ನಿಮ್ಮನ್ನು ನೇಮಿಸಲಾಗಿದೆ. ಆದರೆ ಈ ಬಗ್ಗೆ ಪೊಲೀಸರನ್ನು ಪ್ರಶ್ನಿಸಿದರೆ, ಅಕ್ರಮ ಇಲ್ಲ ಪರವಾನಿಗೆ ಇದೆ ಎಂದು ಹೇಳುತ್ತಿದ್ದಾರೆ. ಹಾಗಾದರೆ ಪರವಾನಿಗೆ ಇದ್ದಿದ್ದರೆ, ಅದನ್ನು ತೋರಿಸಬೇಕಿತ್ತು. ಕದ್ದು ಮುಚ್ಚಿ ಏಕೆ ಹೋಗಬೇಕಿತ್ತು ಎಂದು ಪ್ರಶ್ನಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಮದುವೆ ಆಗಿ ಮುಹೂರ್ತ ಫಿಕ್ಸ್ ಆಗಿದೆ- ಬಜೆಟ್ ಮಂಡಿಸಿದ್ರೆ ಮಂಡಿಸಲಿ: ಸಿಎಂ ಇಬ್ರಾಹಿಂ

    ಮದುವೆ ಆಗಿ ಮುಹೂರ್ತ ಫಿಕ್ಸ್ ಆಗಿದೆ- ಬಜೆಟ್ ಮಂಡಿಸಿದ್ರೆ ಮಂಡಿಸಲಿ: ಸಿಎಂ ಇಬ್ರಾಹಿಂ

    ಬೆಂಗಳೂರು: ನೂತನ ಸಮ್ಮಿಶ್ರ ಸರ್ಕಾರದ ಬಜೆಟ್ ಮಂಡನೆ ವಿಚಾರದಲ್ಲಿ ಉಂಟಾದ ಗೊಂದಲಕ್ಕೆ ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯ ಸಿಎಂ ಇಬ್ರಾಹಿಂರವರು ಹೊಸ ಸಿಎಂ ಹುಮ್ಮಸ್ಸಿನಲ್ಲಿದ್ದಾರೆ ಬಜೆಟ್ ಮಂಡಿಸಿದರೆ ಮಂಡಿಸಲಿ ಎಂದು ಹೇಳಿಕೆ ನೀಡಿದ್ದಾರೆ.

    ಇಂದು ಹೊಸ ಬಜೆಟ್ ಮಂಡನೆ ಕುರಿತು ಪ್ರತಿಕ್ರಿಯಿಸಿದ ಅವರು, ಸಮ್ಮಿಶ್ರ ಸರ್ಕಾರಕ್ಕೆ ಮದುವೆ ಆಗಿ ಮುಹೂರ್ತ ಫಿಕ್ಸ್ ಆಗಿದೆ. ಮುಖ್ಯಮಂತ್ರಿಯವರು ಕೂಡ ಹೊಸ ಹುರುಪಿನಲ್ಲಿದ್ದಾರೆ. ಹೀಗಾಗಿ ಬಜೆಟ್ ಮಂಡನೆ ವಿಚಾರದ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ. ಹೊಸ ಬಜೆಟ್ ಮಂಡಿಸಿದರೆ ಮಂಡಿಸಲಿ ಬಿಡಿ ಎಂದು ಉತ್ತರಿಸಿದ್ದಾರೆ.

    ಸಮ್ಮಿಶ್ರ ಸರ್ಕಾರದಲ್ಲಿ ಯಾವುದೇ ಗೊಂದಲಗಳಿಲ್ಲ ಸಚಿವ ಸಂಪುಟದ ಗೊಂದಲದ ಕುರಿತು ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ನೋಡಿಕೊಳ್ಳುತ್ತಾರೆ ಎಂದರು.

    ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್‍ರವರ ಹೇಳಿಕೆಗೆ ಪ್ರತಿಕ್ರಿಯಿಸಿದ ಇಬ್ರಾಹಿಂರವರು, ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿಕೊಂಡಿದ್ದಾರೆ. ನಾನು ಹೇಳಿದ್ದು ಅಮಾಯಕ ಯುವಕರ ತಲೆ ಕೆಡಿಸಿದವರು ಯಾರು ಎಂದು? ಆರೋಪಿಗಳು ಈಗಾಗಲೇ ನಾಲ್ಕು ತಂಡಗಳಾಗಿ ಹತ್ಯೆ ಮಾಡಿರುವುದಾಗಿ ಅಧಿಕಾರಿಗಳ ಮುಂದೆ ಒಪ್ಪಿಕೊಂಡಿದ್ದಾರೆ. ಹತ್ಯೆಗೆ ಆರೋಪಿಗಳಿಗೆ ಪ್ರೇರೆಪಿಸಿದ್ದು ಯಾರು ಎಂದು ಪ್ರಮೋದ್ ಮುತಾಲಿಕ್ ಹಾಗೂ ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆಯವರಿಗೆ ಪ್ರಶ್ನಿಸಿದ್ದಾರೆ.

    ಮನುಷ್ಯನ ಜೀವನ ಶಾಶ್ವತ ಅಲ್ಲ, ನಾವು 60-70 ವರ್ಷ ಬದುಕುತ್ತೇವೆ. ಈ ವೇಳೆ ಒಳ್ಳೆಯ ಕೆಲಸಗಳನ್ನು ಮಾಡಬೇಕು. ನಾವೆಲ್ಲರೂ ಒಂದೇ ತಾಯಿಯ ಮಕ್ಕಳು, ನಮ್ಮಲ್ಲಿ ವಿಷ ಬೀಜ ಬಿತ್ತುತ್ತಿರುವುದು ಯಾರು? ಯಾವುದೇ ಧರ್ಮದವರಾದರೂ ಇಂತಹ ಘಟನೆಗಳನ್ನು ಖಂಡಿಸಬೇಕು ಇಲ್ಲವಾದರೆ ಮುಂದಿನ ದಿನಗಳಲ್ಲಿ ದೇಶಕ್ಕೆ ಭಾರೀ ಗಂಡಾಂತರ ಎದುರಾಗುತ್ತದೆ ಎಂದು ವಿಷಾದ ವ್ಯಕ್ತಪಡಿಸಿದರು.

    ನಮಗೆ ಅಟಲ್ ಬಿಹಾರಿ ವಾಜಪೇಯಿ ಹಾಗೂ ಅಡ್ವಾಣಿಯವರ ಮೇಲೆಯೂ ಗೌರವವಿದೆ. ಮುತಾಲಿಕ್ ರವರು ಆಚಾರವಿಲ್ಲದ ನಾಲಿಗೆ ಎಂಬಂತೆ ಮಾತನಾಡಬಾರದು ಎಂದು ಹೇಳಿದರು.

  • ಅಮಿತ್ ಶಾ, ರಾಹುಲ್ ಗಾಂಧಿ ಪ್ರವಾಸದ ವಿರುದ್ಧ ಪ್ರಮೋದ್ ಮುತಾಲಿಕ್ ಕಿಡಿಕಾರಿದ್ದು ಹೀಗೆ

    ಅಮಿತ್ ಶಾ, ರಾಹುಲ್ ಗಾಂಧಿ ಪ್ರವಾಸದ ವಿರುದ್ಧ ಪ್ರಮೋದ್ ಮುತಾಲಿಕ್ ಕಿಡಿಕಾರಿದ್ದು ಹೀಗೆ

    ಧಾರವಾಡ: ರಾಷ್ಟ್ರೀಯ ಪಕ್ಷಗಳ ಮುಖಂಡರಾದ ಅಮಿತ್ ಶಾ ಹಾಗೂ ರಾಹುಲ್ ಗಾಂಧಿ ಪಕ್ಷ ಬೆಳವಣಿಗೆ ಬಗ್ಗೆ ಮಾತ್ರ ಪ್ರವಾಸ ಮಾಡುತ್ತಿದ್ದು, ಮಹದಾಯಿ ಬಗ್ಗೆ ಚಕಾರ ಎತ್ತಿಲ್ಲ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ

    ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಬರಗಾಲ ಬಂದಿದೆ. ರೈತರಿಗೆ ನೀರಿನ ಹಾಹಾಕಾರ ಎದುರಾಗಿದೆ. ಮಹದಾಯಿ ನೀರಿನ ಸಮಸ್ಯೆ ಇದ್ದರೂ ಎರಡೂ ರಾಷ್ಟ್ರೀಯ ಪಕ್ಷಗಳಿಗೆ ಅಧಿಕಾರ ಮುಖ್ಯವಾಗಿದೆ ಎಂದರು.

    ರೈತರಿಗೆ ಬೇಕಾದ ನೀರಿನ ವಿಷಯ ಎತ್ತುತ್ತಿಲ್ಲ. ಮಹದಾಯಿ ಯೋಜನೆಗೆ ವಿರೋಧ ವ್ಯಕ್ತಪಡಿಸುತ್ತಿರುವ ಗೋವಾ ಸಿಎಂ ನಿರ್ಲಜ್ಜ ಸಿಎಂ ಎಂದು ಕಿಡಿಕಾರಿದರು. ಚುನಾವಣೆಯಲ್ಲಿ ರಾಜಕೀಯ ಮಾಡದೇ, ರಾಜ್ಯದ ರೈತರ ಹಾಹಾಕಾರ ಇದೆ. ಅದಕ್ಕೆ ಪರಿಹಾರ ಕೊಡುವ ಕೆಲಸವನ್ನು ಅಮಿತ್ ಶಾ ಮಾಡಬೇಕು ಎಂದು ತಿಳಿಸಿದರು.

    ನಾನೀಗಾಗಲೇ ಅಮಿತ್ ಶಾ ಅವರಿಗೆ ಪತ್ರ ಬರೆದು ಮಹದಾಯಿ ಬಗ್ಗೆ ಉಲ್ಲೇಖ ಮಾಡಿದ್ದೇನೆ. ಕಾಂಗ್ರೆಸ್‍ನ ರಾಹುಲ್ ಗಾಂಧಿ ಕೂಡಾ ರಾಜ್ಯದ ಜನರಿಗೆ ದ್ರೋಹ ಮಾಡುತ್ತಿದ್ದಾರೆ. ಎರಡು ವರ್ಷದಿಂದ ಪ್ರತಿಭಟನೆ ನಡೆಯುತ್ತಿದ್ದರೂ ಯಾವುದೇ ಪ್ರತಿಕ್ರಿಯೇ ಇಲ್ಲ. ರೈತರ ಮೇಲೆ ಕೇಸ್ ಹಾಕಿದ್ರೂ ಜನ ಛೀ.. ಥೂ.. ಅಂದರೂ ಸಮಸ್ಯೆ ಮಾತ್ರ ಸರಿಯಾಗುತ್ತಿಲ್ಲ. ಸೋನಿಯಾ ಗಾಂಧಿ ಅವರು ಕೂಡಾ ಮಹದಾಯಿ ಜೋಡಿಸುವ ವಿಚಾರದಲ್ಲಿ ಮೌನವಾಗಿದ್ದಾರೆ. ಬಿಜೆಪಿಗೆ ಜನರು ಅಧಿಕಾರ ಕೊಟ್ಟಿದ್ದಾರೆ. ಆದರೆ ಪರಿಸ್ಥಿತಿ ಹೀಗೆಯೇ ಮುಂದುವರೆಸಿದರೆ ಕೇಂದ್ರ ಸರ್ಕಾರದಲ್ಲಿ ಸೋನಿಯಾ ಗಾಂಧಿಗೆ ಆದ ಸ್ಥಿತಿ ನಿಮಗೂ ಆಗುತ್ತೆ ಎಂದು ಎಚ್ಚರಿಕೆ ನೀಡಿದರು.

    ನಾಲ್ಕು ಜಿಲ್ಲೆಯ ಜನರು ಚುನಾವಣೆಗೆ ಬಹಿಷ್ಕಾರ ಹಾಕಬೇಕು. ನೀರು ತಂದು ಕೊಟ್ಟವರಿಗೆ ಓಟು ಹಾಕುವ ಕೆಲಸ ಆಗಬೇಕು. ನಿರ್ಗಮಿತ ಉಪರಾಷ್ಟ್ರಪತಿ ಹಮೀದ್ ಅನ್ಸಾರಿ ಅವರು ದೇಶದಲ್ಲಿ ಮುಸ್ಲಿಮರು ಅಸುರಕ್ಷಿತ ಎಂದು ಹೇಳಿದ್ದಾರೆ. ಎರಡು ಬಾರಿ ನೀವು ಹಿಂದೂ ಸುರಕ್ಷತೆಯಲ್ಲಿ ಉಪರಾಷ್ಟ್ರಪತಿಯಾಗಿದ್ದೀರಿ. ಹೀಗಾಗಿ ಈ ರೀತಿ ಹೇಳಿಕೆ ನೀಡಿರುವುದು ಮೂರ್ಖತನವಾಗಿದೆ ಎಂದು ಹೇಳಿದರು.