Tag: pranab mukharji

  • ಅನಾರೋಗ್ಯಕ್ಕೂ ಮುನ್ನ ಹಳ್ಳಿಯ ಹಲಸಿನ ಹಣ್ಣು ತರಿಸಿ ತಿಂದಿದ್ರು ಪ್ರಣಬ್ ಮುಖರ್ಜಿ

    ಅನಾರೋಗ್ಯಕ್ಕೂ ಮುನ್ನ ಹಳ್ಳಿಯ ಹಲಸಿನ ಹಣ್ಣು ತರಿಸಿ ತಿಂದಿದ್ರು ಪ್ರಣಬ್ ಮುಖರ್ಜಿ

    ನವದೆಹಲಿ: ತೀವ್ರ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರು ಅನಾರೋಗ್ಯಕ್ಕೂ ಮುನ್ನ ಹಳ್ಳಿಯಲ್ಲಿ ಸಿಗುವ ಹಲಸಿನ ಹಣ್ಣು ತರಿಸಿಕೊಂಡು ತಿಂದಿದ್ದರು.

    ಪಶ್ಚಿಮ ಬಂಗಾಳದ ರಾಜಕಾರಣಿಯಾಗಿರುವ ಮಗ ಅಭಿಜಿತ್ ಜೊತೆ ಮಾಜಿ ರಾಷ್ಟ್ರಪತಿಯವರು ತನಗೆ ಹಲಸಿನ ಹಣ್ಣು ತಿನ್ನಬೇಕು ಎಂಬ ಆಸೆಯಾಗುತ್ತಿದೆ. ಹೀಗಾಗಿ ಅದನ್ನು ತಂದುಕೊಡುವಂತೆ ಹೇಳಿದ್ದರು. ಅಂತೆಯೇ ಅಭಿಜಿತ್ ಕೂಡ ತಮ್ಮ ತಂದೆಗೆ ಹಲಸಿನ ಹಣ್ಣು ತಂದು ಕೊಟ್ಟಿದ್ದರು.

    ತಂದೆ ಮನವಿಯಂತೆ ನಾನು ಪಶ್ಚಿಮ ಬಂಗಾಳದ ಬಿರ್‍ಭುಮ್ ಜಿಲ್ಲೆಯ ಮಿರಾತಿ ಎಂಬ ಗ್ರಾಮಕ್ಕೆ ತೆರಳಿ ಹಲಸಿನ ಹಣ್ಣು ತೆಗೆದುಕೊಂಡು ಬಂದಿದ್ದೆ. 25 ಕೆ.ಜಿಯಷ್ಟು ಹಣ್ಣು ಹಿಡಿದುಕೊಂಡು ಆಗಸ್ಟ್ 3 ರಂದು ದೆಹಲಿ ರೈಲು ಹತ್ತಿ ಅವರನ್ನು ಭೇಟಿಯಾಗಿ ಅವರ ಆಸೆಯಂತೆ ಹಣ್ಣನ್ನು ನೀಡಿದ್ದೆ. ತಂದೆ ಹಾಗೂ ನನಗೆ ರೈಲು ಪ್ರಯಾಣ ಅಂದರೆ ಅಚ್ಚುಮೆಚ್ಚು ಎಂದು ಅಭಿಜಿತ್ ಮಾಧ್ಯಮಕ್ಕೆ ತಿಳಿಸಿದ್ದಾರೆ.

    ನಾನು ತಂದು ಕೊಟ್ಟ ದಿನವೇ ತಂದೆ ಹಣ್ಣು ತಿಂದಿದ್ದಾರೆ. ಅದೃಷ್ಟವಶಾತ್ ಅವರ ಶುಗರ್ ಲೆವೆಲ್ ನಲ್ಲಿ ಏನೂ ಬದಲಾವಣೆಯಾಗಿಲ್ಲ. ಹಣ್ಣನ್ನು ನೋಡುತ್ತಿದ್ದಂತೆಯೇ ತಂದೆಗೆ ತುಂಬಾನೆ ಖುಷಿಯಾಗಿತ್ತು. ಆಗ ಅವರಿಗೆ ಅನಾರೋಗ್ಯ ಇರಲಿಲ್ಲ. ಆದರೆ ವಾರದ ಬಳಿಕ ಅವರು ಹಠಾತ್ ಅನಾರೋಗ್ಯಕ್ಕೀಡಾದರು. ಅವರ ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿದ ಪರಿಣಾಮ ಶಸ್ತ್ರ ಚಿಕಿತ್ಸೆ ಮಾಡಲಾಯಿತು. ಇದೇ ವೇಳೆ ಅವರ ಕೊರೊನಾ ಟೆಸ್ಟ್ ಮಾಡಿಸಿದಾಗ ಪಾಸಿಟಿವ್ ಎಂದು ವರದಿ ಬಂದಿದೆ.

    ಸದ್ಯ ಅವರು ದೆಹಲಿಯ ಸೇನಾ ಸಂಶೋಧನೆ ಮತ್ತು ರೆಫರಲ್ ಆಸ್ಪತ್ರೆಯಲ್ಲಿ ದಾಖಲಾಗಿದ್ದು, ಇದೂವರೆಗೆ ನನಗೆ 4 ಬಾರಿ ಅವರನ್ನು ನೋಡಲು ಅವಕಾಶ ಸಿಕ್ಕಿತ್ತು. ಅವರನ್ನು ನೋಡಲು ತೆರಳುವಾಗ ನಾನು ಪಿಪಿಇ ಕಿಟ್ ಧರಿಸಿ ಹಾಗೂ ಇತರ ಸುರಕ್ಷತಾ ಕ್ರಮಗಳನ್ನು ತೆಗೆದುಕೊಂಡಿದ್ದೇನೆ. ನಾನು ನಾಲ್ಕನೇ ಬಾರಿ ನೋಡಲು ಹೋದಾಗ ಅವರು ವೆಂಟಿಲೇಟರ್ ಸಹಾಯವಿಲ್ಲದೆ ಉಸಿರಾಡುತ್ತಿದ್ದರು ಎಂದು ಅಭಿಜಿತ್ ತಿಳಿಸಿದರು.

  • ಪ್ರಣಬ್ ಬಳಿಕ ಮೋಹನ್ ಭಾಗವತ್ ಜೊತೆ ವೇದಿಕೆ ಹಂಚಿಕೊಳ್ಳಲಿದ್ದಾರೆ ರತನ್ ಟಾಟಾ!

    ಪ್ರಣಬ್ ಬಳಿಕ ಮೋಹನ್ ಭಾಗವತ್ ಜೊತೆ ವೇದಿಕೆ ಹಂಚಿಕೊಳ್ಳಲಿದ್ದಾರೆ ರತನ್ ಟಾಟಾ!

    ಮುಂಬೈ: ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ನಂತರ ದೇಶದ ಪ್ರಮುಖ ಉದ್ಯಮಿಗಳಲ್ಲಿ ಒಬ್ಬರಾಗಿರುವ ರತನ್ ಟಾಟಾರವರು ಆರ್ ಎಸ್‍ಎಸ್‍ ಮುಖ್ಯಸ್ಥ ಮೋಹನ್ ಭಾಗವತ್ ಅವರ ಜತೆ ವೇದಿಕೆಯನ್ನು ಹಂಚಿಕೊಳ್ಳಲಿದ್ದಾರೆ.

    ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಅಂಗಸಂಸ್ಥೆಯಾಗಿರುವ `ನಾನಾ ಪಾಲ್ಕರ್ ಸಮಿತಿ’ಯು ಮುಂದಿನ ತಿಂಗಳು ಪುಣೆಯಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ರತನ್ ಟಾಟಾ ಭಾಗವಹಿಸಲಿದ್ದಾರೆ ಎಂದು ಸಂಘದ ಮೂಲಗಳು ತಿಳಿಸಿವೆ. ಆದರೆ ಈ ಕಾರ್ಯಕ್ರಮದ ಬಗ್ಗೆ ಅಧಿಕೃತ ಘೋಷಣೆಯಾಗಬೇಕಿದ್ದು, ಆಗಸ್ಟ್ 24ರಂದು ಕಾರ್ಯಕ್ರಮ ನಡೆಯುವ ಸಾಧ್ಯತೆಗಳು ಹೆಚ್ಚಾಗಿವೆ. ಇದನ್ನೂ ಓದಿ: #PranabAtRSS: ರಾಷ್ಟ್ರ, ರಾಷ್ಟ್ರೀಯತೆ, ರಾಷ್ಟ್ರಭಕ್ತಿ ಬಗ್ಗೆ ಮಾತನಾಡಿದರು ಪ್ರಣಬ್ ದಾದಾ!

    ಕಳೆದ ತಿಂಗಳು ನಾಗ್ಪುರದಲ್ಲಿ ನಡೆದ ಆರ್ ಎಸ್‍ಎಸ್‍ ಕಾರ್ಯಕ್ರಮದಲ್ಲಿ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಪಾಲ್ಗೊಂಡು ದೇಶಾದ್ಯಂತ ಸಂಚಲನ ಮೂಡಿಸಿದ್ದರು. ಪ್ರಣಬ್ ಮುಖರ್ಜಿಯವರ ಭೇಟಿಯಿಂದ ಆರ್ ಎಸ್‍ಎಸ್‍ಗೆ ಸೇರ್ಪಡೆಯಾಗುವ ಕಾರ್ಯಕರ್ತರ ಸಂಖ್ಯೆ ಹೆಚ್ಚಾಗಿದೆ ಸಂಘ ತಿಳಿಸಿತ್ತು.

  • ಕೇಂದ್ರ ಸಚಿವ ಅನಿಲ್ ಮಾಧವ್ ದವೆ ನಿಧನ- ಪ್ರಧಾನಿ ಮೋದಿ ಸಂತಾಪ

    ಕೇಂದ್ರ ಸಚಿವ ಅನಿಲ್ ಮಾಧವ್ ದವೆ ನಿಧನ- ಪ್ರಧಾನಿ ಮೋದಿ ಸಂತಾಪ

    ನವದೆಹಲಿ: ಕೇಂದ್ರ ಅರಣ್ಯ ಹಾಗೂ ಪರಿಸರ ಖಾತೆ ಸಚಿವ ಅನಿಲ್ ಮಾಧವ್ ದವೆ ಇಂದು ಬೆಳಗ್ಗೆ ನಿಧನ ಹೊಂದಿದ್ದಾರೆ.

    61 ವರ್ಷ ವಯಸ್ಸಿನ ಸಚಿವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಕೂಡಲೇ ಅವರನ್ನು ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ಹೃದಯಾಘಾತವಾಗಿ, ಇಂದು ಮೃತಪಟ್ಟಿದ್ದಾರೆ.

    2009ರಿಂದ ರಾಜ್ಯಸಭಾ ಸದಸ್ಯರಾಗಿರುವ ಇವರು 2016ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಂಪುಟದಲ್ಲಿ ಕೇಂದ್ರ ಅರಣ್ಯ ಹಾಗೂ ಪರಿಸರ ಖಾತೆ ಸಚಿವರಾಗಿ ಅಧಿಕಾರ ಸ್ವೀಕರಿಸಿದ್ದರು. ಇದೀಗ ಸಚಿವರ ಅಕಾಲಿಕ ನಿಧನಕ್ಕೆ ಪ್ರಧಾನಿ ಮೋದಿ, ರಾಷ್ಟ್ರಪತಿ ಪ್ರಣವ್ ಮುಖರ್ಜಿ ಸೇರಿದಂತೆ ಗಣ್ಯಾತಿ ಗಣ್ಯರು ಸಂತಾಪ ಸೂಚಿಸಿದ್ದಾರೆ.

    ಸಚಿವರ ಅಕಾಲಿಕ ನಿಧನ ನಿಜಕ್ಕೂ ಆಘಾತ ತಂದಿದೆ. ದೇವರು ಅವರ ಕುಟುಂಬಸ್ಥರಿಗೆ ದುಃಖ ಭರಿಸೋ ಶಕ್ತಿ ನೀಡಲಿ ಅಂತಾ ರಾಷ್ಟ್ರಪತಿಯವರು ಸಂತಾಪ ಸೂಚಿಸಿದ್ದಾರೆ.

    `ಗೌರವಾನ್ವಿತ ಸಹೋದ್ಯೋಗಿ, ಸ್ನೇಹಿತ, ಪರಿಸರ ಸಚಿವ ಅನಿಲ್ ಮಾಧವ್ ದವೆ ಅವರ ನಿಧನದಿಂದ ಆಘಾತವಾಗಿದೆ. ಸಂತಾಪಗಳು’ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.

    `ದವೆ ಅವರೊಬ್ಬ ಉತ್ತಮ ಸಾರ್ವಜನಿಕ ಸೇವಕ. ಪರಿಸರ ರಕ್ಷಣೆಯ ಬಗ್ಗೆ ಅವರಿಗೆ ಅತೀವ ಕಾಳಜಿ ಇತ್ತು’ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.

    `ನಿನ್ನೆ ಸಂಜೆಯಷ್ಟೇ ಅವರ ಬಳಿ ಪ್ರಮುಖ ವಿಷಯಗಳ ಬಗ್ಗೆ ಅವರ ಜತೆ ಮಾತುಕತೆ ನಡೆಸಿದ್ದೆ. ಅವರ ನಿಧನದಿಂದ ನನಗೆ ವೈಯಕ್ತಿಕವಾಗಿಯೂ ನಷ್ಟವಾಗಿದೆ’ ಎಂದು ಮೋದಿ ಹೇಳಿದ್ದಾರೆ.

    ಕೇಂದ್ರ ಸಚಿವ ಅನಿಲ್ ದವೆ ನಿಧನಕ್ಕೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಕೂಡ ಸಂತಾಪ ಸೂಚಿಸಿದ್ದು, `ಅನಿಲ್ ದವೆ ನಿಧನ ಆಘಾತ ತಂದಿದೆ. ಪ್ರಬುದ್ಧ ಮಾತುಗಾರ, ಮಾನವೀಯ ವ್ಯಕ್ತಿಯಾಗಿದ್ರು ದವೆ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ದೇವರು ನೀಡಲಿ ಅಂತಾ ಪತ್ರದ ಮೂಲಕ ತಿಳಿಸಿದ್ದಾರೆ.

    ಅನಿಲ್ ಮಾಧವ್ ದವೆ ಅವರು ಜುಲೈ 6, 1956 ರಂದು ಮಧ್ಯಪ್ರದೇಶದ ಬದ್ ನಗರ್ ನಲ್ಲಿ ಜನಿಸಿದ್ದರು.