Tag: pranab mukherjee

  • ಸಿಎಂ ಸಿದ್ದರಾಮಯ್ಯನವರಿಗೆ ಯಾಕೆ ಕೋಪ ಗೊತ್ತಿಲ್ಲ: ಪೇಜಾವರ ಶ್ರೀ

    ಸಿಎಂ ಸಿದ್ದರಾಮಯ್ಯನವರಿಗೆ ಯಾಕೆ ಕೋಪ ಗೊತ್ತಿಲ್ಲ: ಪೇಜಾವರ ಶ್ರೀ

    ಉಡುಪಿ: ನಾವು ಯಾರಿಗೂ ಕೋಪ ಬರುವ ಕೆಲಸ ಮಾಡಿಲ್ಲ. ಮುಖ್ಯಮಂತ್ರಿ ಅವರಿಗೆ ಯಾಕೆ ಕೋಪ ಇದೆ ಎನ್ನುವುದು ಗೊತ್ತಿಲ್ಲ. ಅವರು ಕೃಷ್ಣ ಮಠಕ್ಕೆ ಬರುತ್ತಾರೋ ಇಲ್ಲವೋ ಎನ್ನುವುದು ಭಾನುವಾರ ತಿಳಿಯಲಿದೆ ಎಂದು ಪರ್ಯಾಯ ಪೇಜಾವರ ಮಠದ ವಿಶ್ವೇಶತೀರ್ಥ ಶ್ರೀಗಳು ಹೇಳಿದ್ದಾರೆ.

    ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಭಾನುವಾರ ಕೃಷ್ಣ ಮಠಕ್ಕೆ ಭೇಟಿ ನೀಡುವ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಗೈರಾಗುತ್ತಿದ್ದಾರೆ ಎನ್ನುವ ವರದಿಗೆ ಪ್ರತಿಕ್ರಿಯಿಸಿದ ಅವರು, ಸಿಎಂ ಅವರಿಗೆ ಕೃಷ್ಣಮಠದ ಪ್ರತಿನಿಧಿಗಳ ಮೂಲಕ ಆಹ್ವಾನ ನೀಡಿದ್ದೇವೆ. ಆದರೆ ಕಾರ್ಯದರ್ಶಿಗಳು ಉಡುಪಿ ಕಾರ್ಯಕ್ರಮಕ್ಕೆ ಸಿಎಂ ಬರುವುದಿಲ್ಲ ಎಂದು ಹೇಳಿದ್ದಾರೆ. ಹೀಗಾಗಿ ಮಠಕ್ಕೆ ಬರುತ್ತಾರೋ ಇಲ್ಲವೋ ಭಾನುವಾರ ತಿಳಿಯಲಿದೆ ಎಂದರು.

    ನನ್ನ ಪರ್ಯಾಯದ ಸಂದರ್ಭದಲ್ಲಿ ಅವರಿಗೆ ಆಹ್ವಾನ ಮಾಡಿದ್ದೆ. ಹಲವು ಬಾರೀ ಮಠಕ್ಕೆ ಆಹ್ವಾನ ನೀಡಲಾಗಿದೆ. ನಾನು ಬರುವುದಿಲ್ಲ ಎಂದು ಸಿಎಂ ಅವರು ಹೇಳಿಲ್ಲ. ಆದರೆ ಒಂದು ಬಾರಿಯೂ ಮಠಕ್ಕೆ ಬಂದಿಲ್ಲ. ಮೊನ್ನೆ ಪರ್ಯಾಯದ ನಂತರ ಕೃಷ್ಣನಿಗೆ ಕಾಣಿಕೆ ಕಳುಹಿಸಿದ್ದರು. ಸಿಎಂ ಅವರ ಶ್ರೀಮತಿ ಫೋನ್‍ನಲ್ಲಿ ಮಾತನಾಡಿದ್ದರು ಎಂದು ಪೇಜಾವರ ಶ್ರೀ ತಿಳಿಸಿದರು.

    ನಾನು ಸಿಎಂ ಅವರನ್ನು ಮಂಗಳೂರು, ಬೆಂಗಳೂರು, ಮೈಸೂರಲ್ಲಿ ಹಲವು ಬಾರಿ ಭೇಟಿಯಾಗಿದ್ದೇನೆ. ವರುಣಾ ಉಪಚುನಾವಣೆ ಸಂದರ್ಭ ಪ್ರಸಾದ ತೆಗೆದುಕೊಂಡು ಹೋಗಿದ್ದಾರೆ. ಸುತ್ತೂರು ಶ್ರೀಗಳು ಕೃಷ್ಣಮಠಕ್ಕೆ ಬರುವುದಾಗಿ ಹೇಳಿದ್ದರು. ಸಿಎಂ ಅವರನ್ನೂ ಜೊತೆ ಕರೆತರುವುದಾಗಿ ಹೇಳಿದ್ದಾರೆ ಎಂದು ಶ್ರೀಗಳು ಹೇಳಿದರು.

    ಇದನ್ನೂ ಓದಿ:  ಧರ್ಮಸಂಕಟದಲ್ಲಿ ಸಿಎಂ ಸಿದ್ದರಾಮಯ್ಯ: ಕೃಷ್ಣ ಮಠಕ್ಕೆ ಹೋಗಲು ಹಿಂದೇಟು, 3 ಸಚಿವರಿಗೆ ರಾಷ್ಟ್ರಪತಿ ಕಾರ್ಯಕ್ರಮದ ಜವಾಬ್ದಾರಿ

     

  • ರಾಷ್ಟ್ರಪತಿ ರೇಸಲ್ಲಿ ಮಣ್ಣಿನ ಮಗ ದೇವೇಗೌಡ್ರ ಹೆಸರು- ಗೌಡ್ರಿಗೆ ಒಲಿಯುತ್ತಾ ಪ್ರಥಮ ಪ್ರಜೆ ಪಟ್ಟ?

    ರಾಷ್ಟ್ರಪತಿ ರೇಸಲ್ಲಿ ಮಣ್ಣಿನ ಮಗ ದೇವೇಗೌಡ್ರ ಹೆಸರು- ಗೌಡ್ರಿಗೆ ಒಲಿಯುತ್ತಾ ಪ್ರಥಮ ಪ್ರಜೆ ಪಟ್ಟ?

    ಬೆಂಗಳೂರು: ಮಾಜಿ ಪ್ರಧಾನಿ ಹೆಚ್‍ಡಿ ದೇವೇಗೌಡರಿಗೆ ರಾಷ್ಟ್ರಪತಿ ಹುದ್ದೆ ಒಲಿದು ಬರುತ್ತಾ? ಇಂತಹ ಒಂದು ಚರ್ಚೆ ರಾಜಕೀಯ ವಲಯದಲ್ಲಿ ಆರಂಭವಾಗಿದೆ. ಎನ್‍ಡಿಎ ಅಭ್ಯರ್ಥಿ ವಿರುದ್ಧ ಕಾಂಗ್ರೆಸ್ ಬೆಂಬಲದೊಂದಿಗೆ ದೇವೇಗೌಡರನ್ನ ಸರ್ವಸಮ್ಮತ ಅಭ್ಯರ್ಥಿಯಾಗಿ ಕಣಕ್ಕಿಳಿಸುವ ಬಗ್ಗೆ ಚರ್ಚೆ ನಡೆದಿದೆ ಎಂಬ ಸುದ್ದಿ ದೆಹಲಿ ಮಟ್ಟದಲ್ಲಿ ವ್ಯಾಪಕವಾಗಿದೆ.

    ಇಂತಹ ಒಂದು ಸುದ್ದಿ ಹಿಂದೊಮ್ಮೆ ಬಂದಾಗ ದೇವೇಗೌಡರು ರಾಷ್ಟ್ರಪತಿ ಅಭ್ಯರ್ಥಿ ಆಗುವ ಸಾಧ್ಯತೆಯನ್ನ ಸಾರಾಸಗಟಾಗಿ ತಳ್ಳಿಹಾಕಿದ್ರು. ಹಾಗಿದ್ದರೂ ಕೂಡ ದೇವೇಗೌಡರನ್ನ ಎನ್‍ಡಿಎ ವಿರುದ್ಧ ಒಮ್ಮತದ ಅಭ್ಯರ್ಥಿಯಾಗಿ ಕಣಕ್ಕಿಳಿಸುವ ಆಶಯವನ್ನ ಬಿಜೆಪಿ ವಿರೋಧಿ ಗುಂಪು ರಾಷ್ಟ್ರಮಟ್ಟದಲ್ಲಿ ವ್ಯಕ್ತಪಡಿಸುತ್ತಿದೆ. ದೇವೇಗೌಡರು ಒಪ್ಪದಿದ್ದರೆ ಜೆಡಿಯು ಮುಖಂಡ ಶರದ್ ಯಾದವ್‍ರನ್ನ ಕಣಕ್ಕಿಳಿಸುವ ಸಾಧ್ಯತೆಯಿದೆ.

    ಈ ಬಗ್ಗೆ ಈಗಾಗಲೇ ಎಡರಂಗ ಹಾಗೂ ಜನತಾ ಪರಿವಾರದ ಮುಖಂಡರು ಸೋನಿಯಾ ಗಾಂಧಿ ಜೊತೆ ಒಂದು ಸುತ್ತಿನ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ. ಒಂದು ವೇಳೆ ಹಾಲಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಮತ್ತೊಮ್ಮೆ ಕಣಕ್ಕಿಳಿಯಲು ಒಪ್ಪಿದ್ರೆ ಅವರನ್ನೇ ಅಭ್ಯರ್ಥಿಯಾಗಿ ಮಾಡುವ ಬಗ್ಗೆಯೂ ಚಿಂತನೆ ನಡೆದಿದೆ ಎಂದು ಹೇಳಲಾಗಿದೆ.

  • ಇಂದು ಚೆನ್ನೈಗೆ ರಾಜ್ಯಪಾಲ: ಬ್ಯಾಂಕ್ ಆಫ್ ಇಂಡಿಯಾ ಮ್ಯಾನೇಜರ್‍ಗೆ ಸೆಲ್ವಂ ಪತ್ರ

    ಚೆನ್ನೈ: ತಮಿಳುನಾಡಿನ ರಾಜಕೀಯ ಬಿಕ್ಕಟ್ಟು ಇವತ್ತು ಸ್ವಲ್ಪ ಶಾಂತವಾಗೋ ಸಾಧ್ಯತೆಯಿದೆ. ರಾಜ್ಯದಲ್ಲಿ ಅಸ್ಥಿರತೆ ಉಂಟಾಗಿದ್ರೂ ಮುಂಬೈನಲ್ಲಿದ್ದ ತಮಿಳುನಾಡಿನ ಹೆಚ್ಚುವರಿ ರಾಜ್ಯಪಾಲ ವಿದ್ಯಾಸಾಗರ್ ರಾವ್ ಇಂದು ಚೆನ್ನೈಗೆ ಆಗಮಿಸಲಿದ್ದಾರೆ.

    ಶಶಿಕಲಾ ಹಾಗೂ ಬೆಂಬಲಿಗ ಶಾಸಕರು ಮಧ್ಯಾಹ್ನ ರಾಜ್ಯಪಾಲರನ್ನು ಭೇಟಿಯಾಗಿ ಸರ್ಕಾರ ರಚನೆಗೆ ಅವಕಾಶ ನೀಡುವಂತೆ ಮನವಿ ಮಾಡಲಿದ್ದಾರೆ. ರಾಜ್ಯಪಾಲರು ಕೂಡ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಗ್ರೀನ್ ಸಿಗ್ನಲ್ ನೀಡೋ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಅಜ್ಞಾತ ಸ್ಥಳಕ್ಕೆ ಹೋಗಿರೋ ಎಐಎಡಿಎಂಕೆಯ 130 ಶಾಸಕರು ರಾಷ್ಟ್ರಪತಿ ಮುಂದೆ ನಡೆಸಲು ಉದ್ದೇಶಿಸಿದ್ದ ಪರೇಡ್‍ನ್ನ ಕೈಬಿಟ್ಟಿದ್ದಾರೆ.

    ಇದಕ್ಕೂ ಮುನ್ನ ರಾಜ್ಯಪಾಲರು ಉದ್ದೇಶಪೂರ್ವಕವಾಗಿ ಪ್ರಮಾಣ ವಚನ ಕಾರ್ಯಕ್ರಮವನ್ನ ಮುಂದೂಡ್ತಿದ್ದಾರೆ ಅಂತ ಶಶಿಕಲಾ ಆರೋಪಿಸಿದ್ರು. ಪಕ್ಷದ ಖಜಾಂಚಿ ಹುದ್ದೆಯಿಂದ ವಜಾಗೊಂಡಿರೋ ಪನ್ನೀರ್ ಸೆಲ್ವಂ ಬ್ಯಾಂಕ್ ಆಫ್ ಇಂಡಿಯಾದ ಮ್ಯಾನೇಜರ್‍ಗೆ ಪತ್ರ ಬರೆದಿದ್ದು, ಚಾಲ್ತಿ ಖಾತೆಯಲ್ಲಿರೋ ಪಕ್ಷದ ನಿಧಿಯನ್ನು ಹಿಡಿದಿಟ್ಟುಕೊಳ್ಳಬೇಕು. ನನ್ನ ಲಿಖಿತ ಅನುಮತಿ ಇಲ್ಲದೆ ಬೇರೆಯವ್ರಿಗೆ ಪಾರ್ಟಿ ಫಂಡ್ ಅನ್ನು ಆಪರೇಟ್ ಮಾಡೋಕೆ ಅವಕಾಶ ನೀಡಬಾರದು ಅಂತ ಮನವಿ ಮಾಡಿದ್ದಾರೆ.