ಹಾವೇರಿ: ಜಾತಿಗಣತಿ ವರದಿಯನ್ನು ಈ ಕೂಡಲೇ ಅಂಗೀಕರಿಸಬೇಕು. ಪ್ರಬಲ ಸಮುದಾಯದ ನಾಯಕರ ಮಾತಿಗೆ ಮಣಿಯದೆ ವರದಿಯನ್ನ ಅಂಗೀಕರಿಸಬೇಕು ಎಂದು ಈಡಿಗ ಸಮುದಾಯದ ಪ್ರಣವಾನಂದ ಸ್ವಾಮೀಜಿ ಆಗ್ರಹಿಸಿದ್ದಾರೆ.
ಹಾವೇರಿಯಲ್ಲಿ ಮಾತನಾಡಿದ ಅವರು, ಯಾವುದೇ ನ್ಯೂನತೆಗಳು ಇದ್ದರೆ ಸರಿಪಡಿಸಲು ಸಮಯ ಇದೆ. ಈಗಾಗಲೇ ಜಾತಿಗಣತಿ ಸೋರಿಕೆಯಾಗಿದೆ. ಈಡಿಗ ಸಮುದಾಯದ ಸಂಖ್ಯೆ 15 ಲಕ್ಷ ತೋರಿಸಲಾಗಿದೆ. ರಾಜ್ಯದಲ್ಲಿ ಈಡಿಗ ಸಮುದಾಯದ 50 ಲಕ್ಷ ಜನರು ಇದ್ದಾರೆ ಎಂದು ಸ್ವಾಮೀಜಿ ತಿಳಿಸಿದ್ದಾರೆ.
ಸಿದ್ದರಾಮಯ್ಯ ಅವರು ಜಾತಿಗಣತಿಯನ್ನ ಮಂಡನೆ ಮಾಡದಿದ್ದರೆ ಅಹಿಂದ ಸಮಾಜಕ್ಕೆ ಅನ್ಯಾಯ ಮಾಡಿದಂತೆ ಆಗುತ್ತದೆ. ಈ ವರದಿ ಜಾರಿಗೆ ಮಾಡಲು ಅಲ್ಪಸಂಖ್ಯಾತರು, ಅಹಿಂದ ಸಮಾಜ ನಿಮ್ಮ ಬೆನ್ನಿಗೆ ಇದೆ. ನಿಮ್ಮ ಪಕ್ಷದ ಕೆಲವು ನಾಯಕರು ಪರಿಷ್ಕರಣೆ ಮಾಡುವ ಹೇಳಿಕೆ ನೀಡುತ್ತಿದ್ದಾರೆ. ನೀವು ನಿಮ್ಮ ಚುನಾವಣೆ ಪ್ರಣಾಳಿಕೆಯಲ್ಲಿ ಜಾತಿಗಣತಿಯನ್ನ ಜಾರಿಗೆ ತರುತ್ತೇವೆ ಎಂದು ಸ್ಪಷ್ಟವಾಗಿ ಹೇಳಿದ್ದೀರಿ. ಆವತ್ತು ನಿಮ್ಮ ನಾಯಕರು ಯಾಕೆ ವಿರೋಧ ಮಾಡಲಿಲ್ಲ? ಈಗ ನಿಮ್ಮ ನಾಯಕರು ಯಾಕೆ ವಿರೋಧ ಮಾಡುತ್ತಿದ್ದಾರೆ ಎಂದು ಸ್ವಾಮೀಜಿ ಪ್ರಶ್ನಿಸಿದ್ದಾರೆ.
ರಾಜ್ಯದ ಪ್ರಬಲ ಸಮುದಾಯದ ನಾಯಕರ ನಡುವಳಿಕೆಯಿಂದ ಪರಿಶಿಷ್ಟ ಜಾತಿ-ಪಂಗಡಗಳ ಹಕ್ಕು ಕಸಿಯುವ ಪ್ರಯತ್ನ ಸುಮಾರು ವರ್ಷಗಳಿಂದ ನಡೆಯುತ್ತಿದೆ. ಮುಖ್ಯಮಂತ್ರಿಗಳ ಮೇಲೆ ಈಡಿಗ ಸಮುದಾಯ ಅಪಾರ ನಂಬಿಕೆ ಇಟ್ಟುಕೊಂಡಿದೆ. 17ರಂದು ನಡೆಯುವ ಸಚಿವ ಸಂಪುಟದಲ್ಲಿ ಜಾತಿಗಣತಿಯನ್ನ ಬಗ್ಗೆ ಸಂಪೂರ್ಣ ಮಾಹಿತಿಯನ್ನ ರಾಜ್ಯದ ಜನರ ಮುಂದೆ ತೆರೆದಿಡಬೇಕು. 2013 ರಲ್ಲಿ ಮಾಡಿದ ವರದಿ ಇದು ಎಂದು ಹಿಂದಕ್ಕೆ ಇಡಬೇಡಿ. 12 ವರ್ಷ ಆಗಿದೆ ಅಂದರೆ, ಹೆಚ್ಚುಕಮ್ಮಿ ಆಗಿದ್ದರೆ ತನಿಖೆ ಮಾಡಿ ತಿದ್ದುಪಡಿ ಮಾಡಬಹುದು. ಯಾವುದೇ ಸ್ವಾಮೀಜಿ, ಪ್ರಬಲ ನಾಯಕರ ಒತ್ತಡಕ್ಕೆ ಮಣಿಯಬಾರದು. ಶೀಘ್ರದಲ್ಲೇ ಜಾತಿಗಣತಿ ಜಾರಿಗೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.
ಯಾದಗಿರಿ: ಪ್ರಣವಾನಂದ ಶ್ರೀಗಳ ವಿರುದ್ಧ ಶಿಕ್ಷಣ ಸಚಿವ ಮಧು ಬಂಗಾರಪ್ಪ (Madhu Bangarappa) ಅವಹೇಳನಕಾರಿಯಾಗಿ ಮಾತನಾಡಿದ್ದು, ಕೂಡಲೆ ಶ್ರೀಗಳ ಕ್ಷಮೆ ಕೋರುವಂತೆ ಈಡಿಗ ಮಹಾಮಂಡಳಿಯ ಪದಾಧಿಕಾರಿಗಳು ಆಗ್ರಹಿಸಿದ್ದಾರೆ.
ಯಾದಗಿರಿ (Yadgir) ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಈಡಿಗ ಮಹಾಮಂಡಳಿ ಪದಾಧಿಕಾರಿಗಳು, ಶ್ರೀಗಳ ಹಿನ್ನೆಲೆ ಏನು ಅನ್ನೋದನ್ನ ಮೊದಲು ಶಿಕ್ಷಣ ಸಚಿವರು ತಿಳಕೊಳ್ಳಲಿ. ಪ್ರಣವಾನಂದ ಶ್ರೀಗಳು (Pranavananda Swamiji) ನಮ್ಮ ಸಮುದಾಯದ ಏಳಿಗೆಗಾಗಿ ಸತತ 3 ವರ್ಷಗಳು 1,000 ಕೀ.ಮೀ. ಪಾದಯಾತ್ರೆ ಮಾಡಿದ್ದಾರೆ. ಶ್ರೀಗಳ ಪಾದಯಾತ್ರೆಯಿಂದ ಎಚ್ಚೆತ್ತ ಹಿಂದಿನ ಸರ್ಕಾರದಲ್ಲಿ ಹಿಂದುಳಿದ ಈಡಿಗ ಜನಾಂಗ ಬ್ರಹ್ಮ ಶ್ರೀ ನಾರಾಯಣ ಗುರು ನಿಗಮ ಮಂಡಳಿ ಘೋಷಣೆ ಮಾಡಿದೆ. ಇದೇ ತಿಂಗಳ ಸೆ.9 ರಂದು ಆಯೋಜನೆಗೊಂಡಿದ್ದ ಹಿಂದುಳಿದ ವರ್ಗದ ಬೃಹತ್ ಸಮಾವೇಶದಲ್ಲಿ 30 ರಿಂದ 40 ಸಾವಿರ ಜನಸಂಖ್ಯೆ ಸೇರಿತ್ತು. ಇದರಿಂದ ತಮ್ಮ ಅಸ್ತಿತ್ವಕ್ಕೆ ಧಕ್ಕೆ ಆಗುತ್ತದೆ ಎಂದು ಮಧು ಬಂಗಾರಪ್ಪ ಶ್ರೀಗಳ ವಿರುದ್ಧ ಇಲ್ಲಸಲ್ಲದ ಆರೋಪ ಮಾಡ್ತಿದ್ದಾರೆ ಎಂದು ಅಸಮಾಧಾನ ಹೊರಹಾಕಿದ್ದಾರೆ.
ನಮ್ಮ ಇಡೀ ಸಮುದಾಯ ಪ್ರಣವಾನಂದ ಶ್ರೀಗಳನ್ನ ಒಪ್ಪಿಕೊಂಡಿದೆ. ಆದ್ರೆ ಮಧು ಬಂಗಾರಪ್ಪ ಯಾಕೆ ಒಪ್ಪಿಕೊಳ್ಳುತ್ತಿಲ್ಲ ಎಂಬುದು ಗೊತ್ತಿಲ್ಲ. ಶ್ರೀಗಳ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡುವ ಮಧು ಬಂಗಾರಪ್ಪ ಸಮಾಜಕ್ಕೆ ಕೊಟ್ಟಿರುವ ಕೊಡುಗೆ ಏನು? ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: 12 ಲಕ್ಷ ರೂ. ಮೌಲ್ಯದ ಅಮೆರಿಕನ್ ಡೈಮಂಡ್ ಹರಳುಗಳಿಂದ ಸಿದ್ಧಗೊಂಡ ವಿಶೇಷ ವಿನಾಯಕ ಮೂರ್ತಿ
ಶಿಕ್ಷಣ ಸಚಿವ ಮಧು ಬಂಗಾರಪ್ಪ ಕೂಡಲೇ ಶ್ರೀಗಳ ಕ್ಷಮೆ ಕೇಳಬೇಕು. ಇಲ್ಲದಿದ್ದರೆ ಈಡಿಗ ಮಹಾಮಂಡಳಿಯು ರಾಜ್ಯಾದ್ಯಂತ ಶಿಕ್ಷಣ ಸಚಿವರ ವಿರುದ್ಧ ಉಗ್ರ ಹೋರಾಟ ಕೈಗೊಳ್ಳಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಸಚಿವ ಮಧು ಬಂಗಾರಪ್ಪ ಹೇಳಿದ್ದೇನು?
ಶಿವಮೊಗ್ಗದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ್ದ ಶಿಕ್ಷಣ ಸಚಿವ ಮಧು ಬಂಗಾರಪ್ಪ, ತನಗೆ ಜೀವ ಬೆದರಿಕೆ ಇದೆ ಎಂದು ಈಡಿಗ ಸಮುದಾಯದ ಪ್ರಣವನಂದ ಸ್ವಾಮೀಜಿ ಕಣ್ಣೀರು ಹಾಕಿ ಆರೋಪ ಮಾಡಿದ್ದಾರೆ. ಸ್ವಾಮೀಜಿ ಏಕೆ ಕಣ್ಣೀರು ಹಾಕಿದ್ದಾರೆ? ಅವರು ಏನಾದರೂ ತಪ್ಪು ಮಾಡಿದ್ದಾರಾ? ಕಳ್ಳತನ ಮಾಡಿದ್ದರೆ, ತಪ್ಪು ಮಾಡಿದ್ದರೆ ಕಣ್ಣೀರು ಹಾಕೋದು ಸಹಜ. ಇಂತಹವರನ್ನ ಬೇಕಾದಷ್ಟು ನೋಡಿದ್ದೇನೆ. ಹಿಂದಿನಿಂದ ಅವರು ಈ ರೀತಿ ಬುರುಡೆ ಬಿಟ್ಟುಕೊಂಡೇ ಬಂದಿದ್ದಾರೆ. ಅವರು ನಮ್ಮ ಸಮಾಜದ ಸ್ವಾಮೀಜಿಯೇ ಅಲ್ಲ. ಅವರೇನು ಈಡಿಗ ಸಮಾಜದವರಾ? ಎಂದು ಪ್ರಶ್ನಿಸಿದ್ದರು. ಇದನ್ನೂ ಓದಿ: ಊಸರವಳ್ಳಿ ಸರ್ಕಾರ, ನೀರು ಬಿಡಲ್ಲ ಎಂದು ನೀರು ಬಿಡ್ತೀವಿ ಅಂತಿದ್ದಾರೆ: ಬೊಮ್ಮಾಯಿ ಕಿಡಿ
ಬೆಂಗಳೂರು: ಸಚಿವ ಮಧು ಬಂಗಾರಪ್ಪ (Madhu Bangarappa) ಬೆಂಬಲಿಗರು ಫೋನ್ ಕರೆ ಮಾಡಿ ಜೀವ ಬೆದರಿಕೆ ಹಾಕುತ್ತಿದ್ದಾರೆ ಎಂದು ಪ್ರಣವಾನಂದ ಸ್ವಾಮೀಜಿ (Pranavananda Swamiji) ಗಂಭೀರ ಆರೋಪ ಮಾಡಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಸ್ವಾಮೀಜಿ, ನನಗೆ ಜೀವ ಬೆದರಿಕೆ ಇದೆ. ಇವತ್ತು ಪೊಲೀಸ್ ಕಮಿಷನರ್ ಭೇಟಿ ಮಾಡುತ್ತಿದ್ದೇನೆ. ಮಧು ಬಂಗಾರಪ್ಪ ವಿರುದ್ಧ ದೂರು ನೀಡುತ್ತಿದ್ದೇನೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯ ಪೂರ್ಣಾವಧಿ ಸಿಎಂ ಆಗಬೇಕು: ಕೆಎನ್ ರಾಜಣ್ಣ
ಬಿ.ಕೆ.ಹರಿಪ್ರಸಾದ್ (B.K.Hariprasad) ಅವರು ಹಿಂದುಳಿದ ವರ್ಗದವರು. ಅವರಿಗೆ ಸ್ಥಾನಮಾನ ಕೇಳುವುದರಲ್ಲಿ ಏನು ತಪ್ಪಿದೆ? ಬೇರೆ ಸಮುದಾಯದವರು ಹೋರಾಟ ಮಾಡಿದ್ದರಲ್ವಾ. ಸಮುದಾಯಕ್ಕೆ ಮಧು ಬಂಗಾರಪ್ಪ ಕೊಡುಗೆಯೇನು ಎಂದು ಸ್ವಾಮೀಜಿ ಪ್ರಶ್ನಿಸಿದ್ದಾರೆ.
ನಾರಾಯಣ ಗುರು ರಥ ಬಂದಾಗ ಒಂದು ಹಾರ ಹಾಕಿದ್ರಾ? ನಾನು ಸಮುದಾಯದ ಭೂಮಿ ಕೊಳ್ಳೆ ಹೊಡೆದಿಲ್ಲ. ಸೈಟ್ ಮಾಡಿ ಮಾರಾಟ ಮಾಡಿಲ್ಲ. ಬಿ.ಕೆ.ಹರಿಪ್ರಸಾದ್ ಕಳ್ಳತನ ಮಾಡಿಲ್ಲ. ಈಡಿಗ ಸಮುದಾಯವನ್ನು ಸರ್ಕಾರವೇ ಒಡೆಯುತ್ತಿದೆ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ರೈತನ ಬದುಕಿಗೆ ಗ್ಯಾರಂಟಿ ಕೊಡಲು ಸಾಧ್ಯವಿಲ್ಲವೇ?: ಹೆಚ್ಡಿಕೆ ಕಿಡಿ
ಸ್ವಾಮೀಜಿಗಳ ವಿರುದ್ಧ ಎತ್ತಿ ಕಟ್ಟುವ ಕೆಲಸ ಆಗುತ್ತಿದೆ. ನನ್ನ ಡಿಎನ್ಎ ವಿಚಾರ ನಿಮಗ್ಯಾಕೆ? ನಾನು ಸ್ವಾಮೀಜಿ ಅಲ್ಲ ಅಂತ ಹೇಳಲು ಹಕ್ಕು ಕೊಟ್ಟವರು ಯಾರು? ಸಮುದಾಯಕ್ಕೆ ಅನ್ಯಾಯವಾದ್ರೆ ಅದಕ್ಕೆ ನೀವೇ ಹೊಣೆ. ನಿಮ್ಮ ಹಿನ್ನೆಲೆ ಏನು ಅಂತ ನಿಮಗೆ ಗೊತ್ತಿದೆಯಾ? ನಿಮ್ಮ ಸಾಧನೆ ಏನು? ಈಗ ಜೆಡಿಎಸ್ನಿಂದ ಕಾಂಗ್ರೆಸ್ಗೆ ಬಂದಿದ್ದೀರ. ಮುಂದೆ ಯಾವ ಪಕ್ಷಕ್ಕೆ ಹೋಗ್ತೀರಾ ಅಂತ ಗೊತ್ತಿಲ್ಲ. ಸಿದ್ದರಾಮಯ್ಯನವರು ಮಧು ಬಂಗಾರಪ್ಪ ಮಾತಿಗೆ ಕಡಿವಾಣ ಹಾಕಬೇಕು ಎಂದು ಒತ್ತಾಯಿಸಿದ್ದಾರೆ. ಅಲ್ಲದೇ, ಸ್ಪೀಕರ್ ಭೇಟಿ ಮಾಡಿ ಮಧು ಬಂಗಾರಪ್ಪ ವಿರುದ್ಧ ದೂರು ಕೊಡುತ್ತೇವೆ. ಕಾನೂನು ಹೋರಾಟ ಕೂಡ ಮಾಡುತ್ತೇವೆ ಎಂದು ಎಚ್ಚರಿಸಿದ್ದಾರೆ.
ತಲೆಹರಟೆ, ಮದುವೆಯಾಗಿರುವವರು ಸ್ವಾಮೀಜಿಯೇ ಅಲ್ಲ ಎಂದು ತಮ್ಮ ವಿರುದ್ಧ ಹೇಳಿಕೆ ನೀಡಿದ್ದ ಮಧು ಬಂಗಾರಪ್ಪ ವಿರುದ್ಧ ಸ್ವಾಮೀಜಿ ಕಿಡಿಕಾರಿದರು. ನಾನು ಮದುವೆಯಾಗಿದ್ದೇನೆ. ನನ್ನ ಹೆಂಡತಿ ಕರೆದುಕೊಂಡು ನಿಮ್ಮ ಮನೆಗೆ ಬಂದು ಭಿಕ್ಷೆ ಬೇಡಿಲ್ಲ. ನಾನು ಶರಣ ಸಂಸ್ಕೃತಿಯಂತೆ ಮದುವೆಯಾಗಿದ್ದೇನೆ ಎಂದು ಪ್ರಣವಾನಂದ ಸ್ವಾಮೀಜಿ ತಿರುಗೇಟು ನೀಡಿದ್ದಾರೆ.
ಕೊಪ್ಪಳ: ಬಿ.ಕೆ ಹರಿಪ್ರಸಾದ್ (B.K Hariprasad) ಅವರನ್ನು ರಾಜಕೀಯವಾಗಿ ಮುಗಿಸಲು ಕಾಂಗ್ರೆಸ್ನ (Congress) ಕೆಲವು ನಾಯಕರು ಹುನ್ನಾರ ನಡೆಸಿದ್ದಾರೆ ಎಂದು ಪ್ರಣವಾನಂದ ಸ್ವಾಮೀಜಿ (Pranavananda Swamiji) ಗಂಭೀರ ಆರೋಪ ಮಾಡಿದ್ದಾರೆ.
ಗಂಗಾವತಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರ್.ಎಲ್ ಜಾಲಪ್ಪ, ದಿ.ಬಂಗಾರಪ್ಪ ಅವರ ರೀತಿಯಲ್ಲೆ ಹರಿಪ್ರಸಾದ್ ಅವರನ್ನು ರಾಜಕೀಯವಾಗಿ ಮುಗಿಸುವ ಸಂಚು ನಡೆಯುತ್ತಿದೆ. ಹರಿಪ್ರಸಾದ್ ಅವರಿಗೆ ಮಂತ್ರಿ ಸ್ಥಾನ ಕೊಡದೇ ಇರುವುದಕ್ಕೆ ನಮ್ಮ ಹೋರಾಟವಲ್ಲ. ಅವರನ್ನು ನಡೆಸಿಕೊಂಡ ರೀತಿ ನಮ್ಮ ಸಮುದಾಯಕ್ಕೆ ನೋವುಂಟು ಮಾಡಿದೆ. ಕೆಲವು ವಲಸಿಗ ಕಾಂಗ್ರೆಸ್ನವರಿಂದ ಅವರ ವಿರುದ್ಧ ಸಂಚು ನಡೆದಿದೆ ಎಂದು ಅವರು ಆರೋಪಿಸಿದ್ದಾರೆ. ಇದನ್ನೂ ಓದಿ: ನಾವು ಕಮಿಷನ್ ಹಿಂದೆ ಬಿದ್ದವರಲ್ಲ, ಭ್ರಷ್ಟರ ಬೆನ್ನು ಬಿದ್ದವರು – ಸಿಎಂ
ಸೋನಿಯಾಗಾಂಧಿಯವರೇ ಅವರನ್ನು ಗೌರವದಿಂದ ಹರಿ ಎಂದು ಕರೆಯುತ್ತಾರೆ. ಅಂಥವರಿಗೆ ಸ್ಥಾನಮಾನ ನೀಡಿ ಎಂದು ಸೋನಿಯಾಗಾಂಧಿಯವರು ಪತ್ರ ಬರೆದರೂ ಸಹ ಖರ್ಗೆ ಸೇರಿ ಕೆಲವು ವಲಸಿಗ ಕಾಂಗ್ರೆಸಿಗರು ಹರಿಪ್ರಸಾದ್ ಅವರನ್ನು ನಿರ್ಲಕ್ಷಿಸಿದ್ದಾರೆ. ಇದೇ ವಿಚಾರಕ್ಕೆ ಸೆ.9 ರಂದು ಬೆಂಗಳೂರಿನಲ್ಲಿ ಬೃಹತ್ ಸಭೆ ಕರೆಯಲಾಗಿದೆ. ಆ ಸಭೆಯಲ್ಲಿ ದಕ್ಷಿಣ ಭಾರತದ 6 ರಾಜ್ಯಗಳಿಂದ ನಮ್ಮ ಸಮುದಾಯದವರು ಬರುತ್ತಿದ್ದಾರೆ. ಈ ಸಮಾವೇಶದ ಮುಖಾಂತರ ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆ ನೀಡಲಿದ್ದೇವೆ ಎಂದು ಅವರು ತಿಳಿಸಿದ್ದಾರೆ.
ಈಗಾಗಲೇ ಈಡಿಗ ಸಮುದಾಯಕ್ಕೆ ಸಾಕಷ್ಟು ಅನ್ಯಾಯ ಮಾಡಲಾಗಿದೆ. ಈ ಬಜೆಟ್ನಲ್ಲಿ ಈಡಿಗ ಸಮುದಾಯದ ನಿಗಮ ಬಿಟ್ಟು ಉಳಿದ ನಿಗಮಗಳಿಗೆ ಅನುದಾನ ನೀಡಲಾಗಿದೆ. ಈಡಿಗ ನಿಗಮಕ್ಕೆ ನಯಾ ಪೈಸೆ ಅನುದಾನ ಕೊಡದೆ ಅನ್ಯಾಯ ಮಾಡಲಾಗಿದೆ ಎಂದು ಆಕ್ರೋಶ ಹೊರ ಹಾಕಿದ್ದಾರೆ. ಇದನ್ನೂ ಓದಿ: ಗ್ಯಾರಂಟಿ ಯೋಜನೆಗಳಿಂದ ಬಡವರ ಆರ್ಥಿಕ ಸ್ವಾವಲಂಬನೆ: ಹೆಚ್.ಸಿ ಮಹದೇವಪ್ಪ
ನವದೆಹಲಿ: SC – ST ಸಮುದಾಯಗಳಿಗೆ ಮೀಸಲಾತಿ (Reservation) ಹೆಚ್ಚಿಸುವ ಸರ್ಕಾರದ ನಿರ್ಧಾರ ಕೇವಲ ರಾಜಕೀಯ ಗಿಮಿಕ್ ಎಂದು ಪ್ರಣಾವಾನಂದ ಸ್ವಾಮೀಜಿ (Pranavananda Swamiji) ಹೇಳಿದ್ದಾರೆ. ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಸರ್ಕಾರದ ಆದೇಶ ಸುಪ್ರೀಂಕೋರ್ಟ್ (Supreme Court) ಆದೇಶವನ್ನು ಉಲ್ಲಂಘಿಸುತ್ತದೆ ಎಂದು ಹೇಳಿದರು.
ಎಸ್ಸಿ – ಎಸ್ಟಿ ಮೀಸಲಾತಿ ಹೆಚ್ಚಳ ಸರ್ಕಾರದ ನಿರ್ಧಾರ, ಅದು ಏನೇ ಇರಲಿ ನಾವು ಅದನ್ನು ಸ್ವಾಗತಿಸುತ್ತೇವೆ. ಆದರೆ ಈ ಸಮಯದಲ್ಲಿ ಈಡೀಗ, ಬಿಲ್ಲವ ಸಮುದಾಯದ ಬಗ್ಗೆಯೂ ಸರ್ಕಾರ ಯೋಚನೆ ಮಾಡಬೇಕು. ಸರ್ಕಾರ ನಮ್ಮ ಸಮುದಾಯಕ್ಕೆ ಅನ್ಯಾಯ ಮಾಡುತ್ತಿದೆ ಎಂದು ಆರೋಪಿಸಿದರು.
ಸಿಎಂ ಎಸ್ಟಿ ಎಸ್ಸಿಗೆ ಹೊಸ ಮೀಸಲಾತಿ ಘೋಷಣೆ ಮಾಡಿದ್ದಾರೆ. ಸಂಪುಟದಲ್ಲಿ ಅನುಮತಿಯೂ ಸಿಕ್ಕಿದೆ ಹೊಸ 7% ಮೀಸಲಾತಿ ಎಲ್ಲಿಂದ ತರುತ್ತೀರಿ. ಈ ನಿರ್ಧಾರ ಸುಪ್ರೀಂಕೋರ್ಟ್ ಆದೇಶದಂತೆ 50% ಕ್ಯಾಪ್ ಮೀರಿದೆ 2Aಯಿಂದ ಮ್ಯಾನೇಜ್ ಮಾಡುತ್ತೇವೆ ಎಂದು ಹೇಳಿದ್ದಾರೆ. ಆದರೆ ಇದು ಸಾಧ್ಯವಿಲ್ಲ. ಪ್ರಕರಣ ಸುಪ್ರೀಂಕೋರ್ಟ್ ಮೆಟ್ಟಿಲೇರಲಿದ್ದು, ಇದು ಚುನಾವಣೆಗಾಗಿ (Election) ಕೈಗೊಂಡ ನಿರ್ಧಾರವಾಗಿದೆ ಎಂದರು.
ಈಡೀಗ ಸಮುದಾಯ ಮೀಸಲಾತಿಗಾಗಿ ಹೋರಾಟ ಮಾಡುತ್ತಿದೆ. ಪ್ರವರ್ಗ 1 ಸೇರಿಸಲು ಮನವಿ ಮಾಡಿದೆ. ಕುಲಕಸಬು ಮುಂದುವರಿಸಲು ಅನುಮತಿ ಕೊಡಲು ಕೇಳಿದೆ. ನಾರಾಯಣ ಗುರು ನಿಗಮ ಮಂಡಳಿ ಮಾಡಲೂ ಮನವಿ ಮಾಡಿದ್ದೇವು. ಈವರೆಗೂ ಸರ್ಕಾರ ಯಾವ ಕೆಲಸ ಮಾಡಿಲ್ಲ. ಈ ಮೂಲಕ ಸರ್ಕಾರ ನಮಗೆ ಅಪಮಾನ ಮಾಡುತ್ತಿದೆ ಎಂದು ಕಿಡಿಕಾರಿದರು.
ಮೊನ್ನೆ ವಾಲ್ಮೀಕಿ ಜಯಂತಿ ಸರ್ಕಾರ ಮಾಡಿತು. ಯಾಕೆ ನಾರಾಯಣ ಗುರುಗಳ ಜಯಂತಿ ಮಾಡಿಲ್ಲ, ಸಚಿವ ಸುನೀಲ್ ಕುಮಾರ್, ಕೋಟಾ ಶ್ರೀನಿವಾಸ್ ಪೂಜಾರಿ ಇದಕ್ಕೆ ನೇರ ಹೊಣೆ, ಡಿ.ಕೆ ಶಿವಕುಮಾರ್ ಅವರು ಮಂಗಳೂರಿನಲ್ಲಿ ಮಾಡಿದರು. ಆದರೆ ಆ ಕಾರ್ಯಕ್ರಮಕ್ಕೆ ಡಿಸಿ ಕೂಡಾ ಬರಲಿಲ್ಲ. ನಮ್ಮ ಸಮುದಾಯದ 7 ಜನ ಶಾಸಕರು ಇದ್ದಾರೆ. ಆದರೆ ಯಾರು ಕೂಡಾ ಈ ಬಗ್ಗೆ ಚಕಾರ ಎತ್ತುತ್ತಿಲ್ಲ ಎಂದು ಹೇಳಿದರು.
ಸಿಂಗದೂರು ಚೌಡೇಶ್ವರಿ ದೇವಸ್ಥಾನದ ಮೇಲೂ ಸಾಕಷ್ಟು ಒತ್ತಡ ಹೇರಲಾಗುತ್ತಿದೆ. ಇದನ್ನು ಸಮುದಾಯ ಗಮನಿಸುತ್ತಿದೆ. ನಮ್ಮನ್ನು ಪ್ರವರ್ಗ 1 ಸೇರಬೇಕು, ಮಂಡಳಿ ಘೋಷಣೆ ಮಾಡಬೇಕು ಇಲ್ಲವಾದರೇ ಜ. 6ರಿಂದ ಕುದ್ರೊಳಿ ಗೋಕರ್ಣದಿಂದ ಬೆಂಗಳೂರುವರೆಗೂ ಪಾದಯಾತ್ರೆ ಮಾಡುತ್ತೇನೆ ಎಂದು ಎಚ್ಚರಿಕೆ ನೀಡಿದರು.
ಫೆ. 15ರಂದು ಬೃಹತ್ ಸಮಾವೇಶ ಮಾಡಲಿದ್ದೇವೆ. ಬಳಿಕ ಉಪವಾಸ ಸತ್ಯಾಗ್ರಹ ಆರಂಭಿಸಲಿದ್ದೇವೆ. ನಮ್ಮನ್ನು ರಾಜಕೀಯವಾಗಿ ಬಳಸಿಕೊಂಡು ಕೈಬಿಡಲಾಗುತ್ತದೆ. ಸಿಎಂ ಬೊಮ್ಮಾಯಿ, ಬಿಎಸ್ವೈಗೂ ಮನವಿ ಮಾಡಿದೆ. ಸಮುದಾಯದ ಏಳು ಜನ ಶಾಸಕರಿಗೂ ಎಚ್ಚರಿಕೆ ನೀಡುತ್ತಿದ್ದೇನೆ ಎಂದರು.
ದಕ್ಷಿಣ ಕನ್ನಡ (Dakshina Kannada) ಸೇರಿ ಹಲವು ಕಡೆ ನಮ್ಮ ಸಮುದಾಯ ಹೆಚ್ಚಿದೆ. ರಾಜಕೀಯ ಪ್ರಾತಿನಿಧ್ಯ ಕೊಡದಿದ್ದರೇ ತಕ್ಕ ಪಾಠ ಕಲಿಸುತ್ತೇವೆ ಕಾಂಗ್ರೆಸ್ ನಮ್ಮ ಬೇಡಿಕೆ ಈಡೇರಿಸುವ ಭರವಸೆ ನೀಡಿದೆ. ಇನ್ನು ಕೆಲವು ದಿನಗಳಲ್ಲಿ ಇದು ಪ್ರಣಾಳಿಕೆ ಸೇರಲಿದೆ. ಒಂದು ವೇಳೆ ಬಿಜೆಪಿ ಸರ್ಕಾರ ನಮ್ಮ ಬೇಡಿಕೆ ಈಡೇರಿಸದಿದ್ದರೇ ನಾವು ಕಾಂಗ್ರೆಸ್ (Congress) ಜೊತೆಗೆ ರಾಜಕೀಯವಾಗಿ ಕೈಜೋಡಿಸಬೇಕಾಗುತ್ತಿದೆ ಎಂದು ತಿಳಿಸಿದರು. ಇದನ್ನೂ ಓದಿ: ಹೆಚ್ಡಿ ದೇವೇಗೌಡರ ಆರೋಗ್ಯ ವಿಚಾರಿಸಿದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ
ಹಿಂದುಳಿದ ವರ್ಗಗಳಿಗೆ ಬಿಜೆಪಿ (BJP) ಸರ್ಕಾರದಲ್ಲಿ ನ್ಯಾಯ ಸಿಕ್ಕಲ್ಲ, ಚುನಾವಣೆಗೆ ಮಾತ್ರ ಹಿಂದುಳಿದ ವರ್ಗಗಳನ್ನು ಬಳಸಿಕೊಳ್ಳುತ್ತಿದೆ. ರಾಜ್ಯದಲ್ಲಿ ಇಡೀ ಮೀಸಲಾತಿ ವ್ಯವಸ್ಥೆ ಪರಿಷ್ಕರಣೆಯಾಗಬೇಕು. ಎಲ್ಲ ಸಮುದಾಯ ಮುಖಂಡರ ಜೊತೆ ಮಾತನಾಡಿಕೊಂಡು ನಿರ್ಧಾರ ಮಾಡಬೇಕು. ಎಲ್ಲರಿಗೂ ನ್ಯಾಯ ಸಿಗುವ ರೀತಿಯಲ್ಲಿ ಬದಲಾವಣೆಯಾಗಬೇಕು. ಈ ಬಗ್ಗೆ ದೆಹಲಿಯಲ್ಲಿ ಕೆಲವು ನಾಯಕರನ್ನು ಭೇಟಿ ಮಾಡಿ ಈ ಬಗ್ಗೆ ಚರ್ಚೆಯೂ ಮಾಡಲಿದ್ದೇನೆ ಎಂದರು. ಇದನ್ನೂ ಓದಿ: ಸರ್ಕಾರದಿಂದಲೇ ಆ್ಯಪ್ ಮಾಡಿ ಆಟೋ ಸೇವೆಗೆ ಅವಕಾಶ: ಶ್ರೀರಾಮುಲು
Live Tv
[brid partner=56869869 player=32851 video=960834 autoplay=true]
ಕಳೆದ 18 ವರ್ಷಗಳಿಂದ ವಿಶ್ವಶಾಂತಿ ನಿಕೇತನ ಆಶ್ರಮದಲ್ಲಿದ್ದ ಪ್ರಣವಾನಂದ ಸ್ವಾಮೀಜಿ ಮೂಲತಃ ಉಡುಪಿ ಜಿಲ್ಲೆ ಕಟಪಾಡಿಯವರು. ಬುಧವಾರ ಬಿಳಿಗಿರಿರಂಗನ ಬೆಟ್ಟದಲ್ಲಿ ಪ್ರಣವಾನಂದ ಸ್ವಾಮೀಜಿ ಅವರ ಅಂತ್ಯಕ್ರಿಯೆ ನಡೆಯಲಿದೆ.
Live Tv
[brid partner=56869869 player=32851 video=960834 autoplay=true]
ಬೆಂಗಳೂರು: ಬಿಲ್ಲವ-ಈಡಿಗ ಸಮುದಾಯ ಬೇಸರದಲ್ಲಿ ಇದೆ. ನಮ್ಮ ಯುವಕರನ್ನು ಬಳಸಿಕೊಂಡು ಬಿಜೆಪಿ ಅವರು ರಾಜಕೀಯ ಮಾಡುತ್ತಿದ್ದಾರೆ. ಪ್ರವೀಣ್ ಕುಟುಂಬಕ್ಕೆ ಒಂದು ಕೋಟಿ ರೂ. ಪರಿಹಾರ ಕೊಡಬೇಕು. ಪ್ರವೀಣ್ ಪತ್ನಿಗೆ ಸರ್ಕಾರಿ ನೌಕರಿ ಕೊಡಬೇಕು. ಇಲ್ಲದೆ ಹೋದ್ರೆ ಸರ್ಕಾರಕ್ಕೆ ಮುಂದಿನ ಚುನಾವಣೆಯಲ್ಲಿ ಪಾಠ ಕಲಿಸುತ್ತೇವೆ ಎಂದು ಈಡಿಗ-ಬಿಲ್ಲವ ಸಮುದಾಯದ ಸ್ವಾಮೀಜಿ ಪ್ರಣವಾನಂದ ಸ್ವಾಮೀಜಿ ಎಚ್ಚರಿಕೆ ನೀಡಿದ್ದಾರೆ.
ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರದ ವಿರುದ್ದ ಆಕ್ರೋಶ ಹೊರ ಹಾಕಿದರು. ಕೋಟಾ ಶ್ರೀನಿವಾಸ್ ಪೂಜಾರಿ, ಸುನಿಲ್ ಕುಮಾರ್ ಭೇಟಿಯಾಗಿದ್ದೇನೆ. ಪ್ರವೀಣ್ ಕುಟುಂಬಕ್ಕೆ 1 ಕೋಟಿ ರೂ. ಪರಿಹಾರ ನೀಡಬೇಕು. ಹೆಂಡತಿಗೆ ಸರ್ಕಾರಿ ನೌಕರಿ ಸರ್ಕಾರ ನೀಡಲೇಬೇಕು ಎಂದು ಒತ್ತಾಯ ಮಾಡಿದ್ದೇನೆ. ಈಗಾಗಲೇ 21 ಜನ ನಮ್ಮ ಸಮುದಾಯದ ಯುವಕರು ಸತ್ತಿದ್ದಾರೆ. ಮಂಗಳೂರು, ಉಡುಪಿಯಲ್ಲಿ ನಮ್ಮ ಸಮುದಾಯದ 12 ಲಕ್ಷ ಜನರು ಇದ್ದಾರೆ. ಬಿಜೆಪಿ ನಮ್ಮ ಯುವಕರನ್ನು ಯೂಸ್ & ಥ್ರೋ ಮಾಡುತ್ತಿದ್ದಾರೆ. ಪೋಸ್ಟರ್ ಹಂಚೋಕೆ ಮಾತ್ರ ಬಳಸಿಕೊಳ್ಳುತ್ತಿದ್ದಾರೆ. ಯಾವುದೇ ಸ್ಥಾನ ಮಾನ ಕೊಡ್ತಿಲ್ಲ. ನಮ್ಮ ಹಿಂದುಳಿದ ವರ್ಗ ಯುವಕರು ಎಚ್ಚೆತ್ತು ಕೊಳ್ಳಬೇಕು ಎಂದು ಕರೆ ಕೊಟ್ಟಿದ್ದಾರೆ. ಇದನ್ನೂ ಓದಿ: ಪ್ರವೀಣ್ ಕೊಲೆ ಖಂಡನೀಯ – 1 ಕೋಟಿ ರೂ. ಪರಿಹಾರ, ಪತ್ನಿಗೆ ಉದ್ಯೋಗ ಕೊಡಿ: ಶ್ರೀ ಪ್ರಣವಾನಂದ ಸ್ವಾಮೀಜಿ ಆಗ್ರಹ
ಈ ಬಿಜೆಪಿ ಸರ್ಕಾರ ಭ್ರಷ್ಟಾಚಾರದ ಕಾರ್ಖಾನೆಯಾಗಿದೆ. ಯುವಕರೇ ಪ್ರಚೋದನೆಗೆ ಜೀವನ ಕಳೆದುಕೊಳ್ಳಬೇಡಿ. ಪ್ರವೀಣ್ನ 16ನೇ ದಿನದ ಕಾರ್ಯ ಆಗಸ್ಟ್ 13ಕ್ಕೆ ನಡೆಯಲಿದೆ. ಪ್ರವೀಣ್ನ ಸಮಾಧಿಯ ಮುಂದೆ ನಾನು ನಮ್ಮ ಯುವಕರಿಗೆ ಪ್ರಮಾಣ ಮಾಡಿಸ್ತೀನಿ. ಕೋಮುಗಲಭೆ, ಸಾಮರಸ್ಯ ಹಾಳು ಮಾಡೋದಕ್ಕೆ ಹೋಗಬಾರದು ಎಂದು ಯುವಕರಿಗೆ ಶಪಥ ಮಾಡಿಸುತ್ತೇನೆ. ಆಗಸ್ಟ್ 13 ರಂದು ಗೋವಾ, ತೆಲಂಗಾಣ ಸೇರಿದಂತೆ ನಮ್ಮ ಸಮುದಾಯದ ಜನ ಇರುವ 12 ರಾಜ್ಯದಲ್ಲಿ ಪ್ರವೀಣ್ಗೆ ನ್ಯಾಯ ಕೇಳಿ ಹೋರಾಟ ಮಾಡ್ತೀವಿ ಎಂದಿದ್ದಾರೆ. ಇದನ್ನೂ ಓದಿ: ಮನೆ ಹಾನಿಗೆ ಒಂದು ಬಾರಿ ಮಾತ್ರ ಪರಿಹಾರ – ಷರತ್ತು ಏನು?
ಪರಿಹಾರ ರೂಪದಲ್ಲಿ ಕೇವಲ 25 ಲಕ್ಷ ರೂ. ಕೊಟ್ಟಿದ್ದಾರೆ. ಈಡಿಗ-ಬಿಲ್ಲವ ಸಮುದಾಯಕ್ಕೆ ಬೆಲೆ ಕಟ್ಟೋಕೆ ಸಾಧ್ಯವಿಲ್ಲ. 7 ಜನ ಶಾಸಕರು, ಇಬ್ಬರು ಮಂತ್ರಿಗಳು ಇದ್ದಾರೆ. ಅವರು ಸಮುದಾಯಕ್ಕೆ ಏನು ಮಾಡ್ತಿಲ್ಲ. ನಾರಾಯಣಗುರು ಅಭಿವೃದ್ಧಿ ನಿಗಮ ಪ್ರಾರಂಭ ಮಾಡಿಲ್ಲ. ನಮ್ಮ ಕುಲ ಕಸುಬು ಶೇಂದಿ ಇಳಿಸೋದು ನಿಷೇಧ ಮಾಡಿದ್ದಾರೆ. ಈಡಿಗ-ಬಿಲ್ಲವ ಸಮುದಾಯ ಮುಗಿಸೋಕೆ ಈ ಸರ್ಕಾರ ಮುಂದಾಗಿದೆ. ಕೇವಲ ಒಂದು ಸ್ಥಾನ ನಮ್ಮ ಸಮುದಾಯಕ್ಕೆ ನೀಡಿದ್ದಾರೆ. ಮಂಗಳೂರಿನಲ್ಲಿ ನಮ್ಮವರು ಹೆಚ್ಚು ಜನ ಇದ್ದಾರೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ಗೂ ಎಚ್ಚರಿಕೆ ನೀಡಿದ್ದಾರೆ.
ನಮ್ಮ ಸಮುದಾಯಕ್ಕೆ ನ್ಯಾಯ ಕೊಡಿಸಲಿಲ್ಲ ಅಂದರೆ ರಾಜ್ಯ ಸರ್ಕಾರಕ್ಕೆ ಪಾಠ ಕಲಿಸ್ತೀವಿ. ಕೋಟಾ ಶ್ರೀನಿವಾಸ್ ಪೂಜಾರಿ, ಸುನೀಲ್ ವಿರುದ್ಧವೂ ಸಮುದಾಯ ತಿರುಗಿ ಬೀಳುತ್ತದೆ. ಸಮಾಜದ ಕೆಲಸ ಮಾಡಬೇಕು. ಇಲ್ಲದೆ ಹೋದರೆ ನಿಮಗೆ ಪಾಠ ಕಲಿಸ್ತೀವಿ. ಮುಂದಿನ ಸಾರ್ವತ್ರಿಕ ಚುನಾವಣೆಯಲ್ಲಿ ನಮ್ಮ ಸಮುದಾಯ ಶಕ್ತಿ ತೋರಿಸುತ್ತೇವೆ ಎಂದು ಸರ್ಕಾರಕ್ಕೆ ಪ್ರಣವಾನಂದ ಸ್ವಾಮೀಜಿ ಚಾಟಿ ಬೀಸಿದ್ದಾರೆ.
Live Tv
[brid partner=56869869 player=32851 video=960834 autoplay=true]
ಕಾರವಾರ: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಮಾಡಿದರೆ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಮುಖ್ಯಮಂತ್ರಿ ಮಾಡಲಿ ಎಂದು ಆರ್ಯ ಈಡಿಗ ರಾಷ್ಟ್ರೀಯ ಮಹಾಮಂಡಳದ ಅಧ್ಯಕ್ಷ ಪ್ರಣವಾನಂದ ಸ್ವಾಮೀಜಿ ಒತ್ತಾಯಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ಚುನಾವಣೆ ನಂತರ ಈಡಿಗ ಸಮುದಾಯದವರೇ ಮುಖ್ಯಮಂತ್ರಿ ಆಗುತ್ತಾರೆ. ಬಿಜೆಪಿಯೂ ಹಿಂದುತ್ವವಾದಿ ಎಂದು ಹೇಳಿ ಜಾತಿ ಜಾತಿಗಳ ನಡುವೆ ಜಗಳ ಹುಟ್ಟುಹಾಕಲು ಹೊರಟಿದೆ. ಚಿಕ್ಕ ಸಮುದಾಯಕ್ಕೆ ನಿಗಮ ಮಂಡಳಿಯನ್ನು ಘೋಷಣೆ ಮಾಡುವ ಸರ್ಕಾರ ದೊಡ್ಡ ಸಮಾಜವಾದ ಆರ್ಯ ಈಡಿಗರ ಸಮುದಾಯಕ್ಕೆ ನಿಗಮ ಮಂಡಳಿಯನ್ನು ಘೋಷಣೆ ಮಾಡಿಲ್ಲ ಎಂದು ಕಿಡಿಕಾರಿದರು.
ಆರ್ಯ ಈಡಿಗ ಸಮಾಜಕ್ಕೆ ನಿಗಮ ಮಂಡಳಿ ಘೋಷಣೆ ಮಾಡಿ, 500 ಕೋಟಿ ರೂ. ಬಿಡುಗಡೆ ಮಾಡಬೇಕು. ಈಡಿಗ ಸಮಾಜದ ಕುಲಕಸಬು ಶೇಂದಿ ಇಳಿಸಲು ಅವಕಾಶ ನೀಡಬೇಕು ಎಂದು ಆಗ್ರಹಿಸಿದರು. ಇದನ್ನೂ ಓದಿ: ರಾಯಚೂರು ಕೋರ್ಟ್ ಮುಂದೆ ಜನಜಂಗುಳಿ
ದೆಹಲಿಯಲ್ಲಿ 75ನೇ ಗಣರಾಜ್ಯೋತ್ಸವ ಪರೇಡ್ನಲ್ಲಿ ಕೇರಳ ರಾಜ್ಯ ಸರ್ಕಾರ ನಾರಾಯಣ ಗುರುಗಳ ಸ್ತಬ್ಧ ಚಿತ್ರ (ಟ್ಯಾಬ್ಲೋ) ಪ್ರದರ್ಶನಕ್ಕೆ ಅವಕಾಶ ಕೋರಿದರೂ, ಅದರ ಬದಲು ಆದಿ ಶಂಕರಾಚಾರ್ಯರ ಟ್ಯಾಬ್ಲೋ ಮಾಡುವಂತೆ ಸೂಚಿಸಿದೆ. ಈ ಮೂಲಕ ಕೇಂದ್ರ ಸರ್ಕಾರ ಈಡಿಗ ಸಮುದಾಯವನ್ನು ಅಪಮಾನ ಮಾಡುತ್ತಿದೆ ಎಂದರು. ಇದನ್ನೂ ಓದಿ: ಕೋವಿಡ್-19 ಪ್ರಕರಣ ಏರಿಕೆ – ಮದುವೆ ನೋಂದಣಿ ಸೇವೆ ಸ್ಥಗಿತ!
ಹಾವೇರಿ: ಅರೆಮಲ್ಲಾಪುರ ಗ್ರಾಮದ ಶರಣಬಸವೇಶ್ವರ ಮಠದ ಪ್ರಣವನಾಂದ ಸ್ವಾಮೀಜಿ ಗಂಡು ಮಗುವಿನ ತಂದೆಯಾದ ಸಂತೋಷದಲ್ಲಿದ್ದಾರೆ.
ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ಅರೆಮಲ್ಲಾಪುರ ಗ್ರಾಮದ ಮಠದ ಸ್ವಾಮೀಜಿ ಎರಡು ವರ್ಷಗಳ ಹಿಂದೆ ಸನ್ಯಾಸತ್ವ ತ್ಯಜಿಸಿ ಕೇರಳ ಮೂಲದ ಮೀರಾ ಎಂಬವರನ್ನು ಮದುವೆ ಆಗಿದ್ದರು. ಕಲಬುರಗಿ ಶರಣ ಬಸವೇಶ್ವರ ದೇವಸ್ಥಾನದಲ್ಲಿ ಹಲವು ಮಠಾಧೀಶರ ಸಮ್ಮುಖದಲ್ಲಿ ಪ್ರಣವಾನಂದ ಸ್ವಾಮೀಜಿಗಳ ಮದುವೆ ನಡೆದಿತ್ತು.
ಕೇರಳದ ಕೋಝಿಕೋಡ್ ನ ಬಿಕಾಂ ವಿದ್ಯಾರ್ಥಿನಿಯಾಗಿದ್ದ ಮೀರಾ ಅವರು ಮದುವೆಗೆ ಮುನ್ನ ಲಿಂಗ ದೀಕ್ಷೆಯನ್ನು ಪಡೆದಿದ್ದರು. ನಮ್ಮಿಬ್ಬರ ಮದುವೆಗೆ ಎರಡು ಕುಟುಂಬಸ್ಥರು ಒಪ್ಪಿಗೆ ನೀಡಿದ್ದು, ನಾವು ಸಹ ಒಬ್ಬರನ್ನೊಬ್ಬರು ಇಷ್ಟಪಟ್ಟು ಮದುವೆ ಆಗಿದ್ದೇವೆ ಎಂದು ಪ್ರಣವನಾಂದ ಸ್ವಾಮೀಜಿ ಹೇಳಿದ್ದರು.
ಅರೆಮಲ್ಲಾಪುರದ ಶರಣಬಸವೇಶ್ವರ ಪೀಠವು ಕಲಬುರ್ಗಿಯ ಶರಣಬಸವೇಶ್ವರ ಪೀಠದಂತೆ ಗೃಹಸ್ಥ ಪೀಠವಾಗಿದೆ. ಹೀಗಾಗಿ ಪೀಠದ ಸಂಪ್ರದಾಯದಂತೆ ಪ್ರಣವಾನಂದ ಸ್ವಾಮೀಜಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಈಗಾಗಲೇ ಸ್ವಾಮೀಜಿ ಅವರ ಪುತ್ರನ ಫೋಟೋಗಳು ಸ್ಥಳೀಯ ಮಟ್ಟದಲ್ಲಿ ವೈರಲ್ ಆಗಿವೆ. ಗಂಡು ಮಗು ಜನಿಸಿರುವುದಕ್ಕೆ ಸಂತಸ ವ್ಯಕ್ತಪಡಿಸಿರುವ ಸ್ವಾಮೀಜಿ ಪತ್ನಿ ಹಾಗು ಪುತ್ರನನ್ನು ನೋಡಲು ಕೇರಳಕ್ಕೆ ತೆರಳಿದ್ದಾರೆ.