Tag: Pranayama

  • ಒಂದೇ ಶ್ವಾಸಕೋಶ ಹೊಂದಿದ್ದರೂ ಯೋಗ, ಪ್ರಾಣಾಯಾಮದಿಂದ 14 ದಿನಗಳಲ್ಲಿ ಕೊರೊನಾ ಗೆದ್ದ ನರ್ಸ್

    ಒಂದೇ ಶ್ವಾಸಕೋಶ ಹೊಂದಿದ್ದರೂ ಯೋಗ, ಪ್ರಾಣಾಯಾಮದಿಂದ 14 ದಿನಗಳಲ್ಲಿ ಕೊರೊನಾ ಗೆದ್ದ ನರ್ಸ್

    ಭೋಪಾಲ್: ಒಂದೇ ಲಂಗ್ಸ್ ಹೊಂದಿದ್ದರೂ ಕೇವಲ ಯೋಗಾಸನ ಹಾಗೂ ಉಸಿರಾಟ ಸಂಬಂಧಿ ಆಸನಗಳಿಂದ 14 ದಿನಗಳಲ್ಲಿ ಕೊರೊನಾ ಮಣಿಸಿ, ನರ್ಸ್ ಜಯಶಾಲಿಯಾಗಿದ್ದಾರೆ.

    ಮಧ್ಯಪ್ರದೇಶದ ಟಿಕಮ್‍ಘರ್ ಸಾರ್ವಜನಿಕ ಆಸ್ಪತ್ರೆಯಲ್ಲಿ 39 ವರ್ಷದ ನರ್ಸ್ ಪ್ರಫುಲ್ಲಿಟ್ ಪೀಟರ್ ಕೊರೊನಾ ಚಿಕಿತ್ಸೆ ಪಡೆಯುತ್ತಿದ್ದರು. ಕೇವಲ ಯೋಗ ಹಾಗೂ ಉಸಿರಾಟದ ಆಸನಗಳ ಮೂಲವೇ 14 ದಿನಗಳಲ್ಲಿ ಗುಣಮುಖರಾಗಿದ್ದಾರೆ.

    ಪ್ರಫುಲ್ಲಿಟ್ ಅವರು ಟಿಕಮ್‍ಘರ್ ಆಸ್ಪತ್ರೆಯ ಕೋವಿಡ್ ವಾರ್ಡ್‍ನಲ್ಲಿ ಕೆಲಸ ಮಾಡುತ್ತಿದ್ದರು. ಈ ವೇಳೆ ಅವರಿಗೆ ಕೊರೊನಾ ಸೋಂಕು ತಗುಲಿದೆ. ಟೆಸ್ಟ್ ನಲ್ಲಿ ಪಾಸಿಟಿವ್ ಬಂದ ತಕ್ಷಣ ಅವರ ಸಹೋದ್ಯೋಗಿಗಳು ಹಾಗೂ ಸಂಬಂಧಿಕರು ತೀವ್ರ ಆತಂಕಕ್ಕೊಳಗಾಗಿದ್ದರು. ಅವರ ಕೊರೊನಾ ಹೋರಾಟ ತುಂಬಾ ಕಷ್ಟವಾಗಿದೆ ಎಂದೆಲ್ಲ ಹೇಳಿದ್ದರು.

    ಗುಣಮುಖರಾದ ನಂತರ ಈ ಕುರಿತು ಮಾತನಾಡಿದ ಪೀಟರ್, ನಾನು ಹೋಮ್ ಐಸೋಲೇಶನ್‍ನಲ್ಲಿದ್ದಾಗ ಧೈರ್ಯ ಕಳೆದುಕೊಳ್ಳಲಿಲ್ಲ. ಆದರೆ ನಿಯಮಿತವಾಗಿ ಯೋಗ, ಪ್ರಾಣಾಯಾಮ ಹಾಗೂ ಉಸಿರಾಟಕ್ಕೆ ಸಂಬಂಧಿಸಿದ ಆಸನಗಳನ್ನು ಮಾಡುತ್ತಿದ್ದೆ. ಅಲ್ಲದೆ ಬಲೂನುಗಳನ್ನು ಊದುತ್ತಿದ್ದೆ ಎಂದು ತಮ್ಮ ಅನುಭವನ್ನು ಹಂಚಿಕೊಂಡಿದ್ದಾರೆ.

    ನರ್ಸ್ ಎರಡೂ ಡೋಸ್ ಲಸಿಕೆಯನ್ನು ಹಾಕಿಸಿಕೊಂಡಿದ್ದು, ಹೀಗಾಗಿ ಅವರಿಗೆ ಗುಣಮುಖವಾಗುತ್ತೇನೆ ಎಂಬ ಆತ್ಮವಿಶ್ವಾಸ ಹೆಚ್ಚಿದೆ. ಆದರೆ ಕೇವಲ 14 ದಿನಗಳಲ್ಲಿ ಅವರು ಗುಣಮುಖರಾಗಿರುವುದು ಅಚ್ಚರಿ ಮೂಡಿಸಿದೆ.

    ನರ್ಸ್ ಚಿಕ್ಕವರಿದ್ದಾಗಲೇ ತಮ್ಮ ಒಂದು ಶ್ವಾಸಕೋಶವನ್ನು ಕಳೆದುಕೊಂಡಿದ್ದರು. ಅಪಘಾತದಿಂದಾಗಿ ಚಿಕ್ಕವರಿದ್ದಾಗಲೇ ಅವರ ಒಂದು ಲಂಗ್ಸ್ ನ್ನು ಹೊರಗೆ ತೆಗೆಯಲಾಗಿತ್ತು. 2014ರಲ್ಲಿ ಚೆಸ್ಟ್ ಎಕ್ಸ್ ರೇ ಮಾಡಿಸಿದಾಗ ಇದು ಅವರಿಗೆ ತಿಳಿದಿತ್ತು.

  • ಬೆಂಗ್ಳೂರಿಗೆ ತಲೆನೋವಾದ ಸೋಂಕಿತರ ರಿಕವರಿ ರೇಟ್ – ಯೋಗದ ಮೊರೆ ಹೋದ ಆರೋಗ್ಯ ಇಲಾಖೆ

    ಬೆಂಗ್ಳೂರಿಗೆ ತಲೆನೋವಾದ ಸೋಂಕಿತರ ರಿಕವರಿ ರೇಟ್ – ಯೋಗದ ಮೊರೆ ಹೋದ ಆರೋಗ್ಯ ಇಲಾಖೆ

    ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಕೊರೊನಾ ಸೋಂಕಿತರ ರಿಕವರಿ ರೇಟ್ ಕಡಿಮೆಯಾಗಿದ್ದು, ಇದನ್ನು ಹೆಚ್ಚಿಸಲು ಆರೋಗ್ಯ ಇಲಾಖೆ ಯೋಗದ ಮೊರೆ ಹೋಗಿದೆ.

    ಬೆಂಗಳೂರಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಜಾಸ್ತಿಯಾಗುತ್ತಿದೆ. ದಿನಕ್ಕೆ ಎರಡು ಸಾವಿರ ಜನರಲ್ಲಿ ಕೊರೊನಾ ಕಾಣಿಸಿಕೊಳ್ಳುತ್ತಿದ್ದು, ಸರ್ಕಾರ ಸೋಂಕಿತರಿಗೆ ಬೆಡ್ ಒದಗಿಸಲು ಕಷ್ಟಪಡುತ್ತಿದೆ. ಕೊರೊನಾ ಸೋಂಕಿತರ ಸಂಖ್ಯೆ ಜಾಸ್ತಿಯಾಗುತ್ತಿರುವ ನಡುವೆ ಸೋಂಕಿನಿಂದ ಗುಣಮುಖರಾಗುತ್ತಿರುವವರ ಸಂಖ್ಯೆ ಕಡಿಮೆಯಾಗಿರುವುದು ಆರೋಗ್ಯ ಇಲಾಖೆಗೆ ಹೊಸ ತಲೆನೋವಾಗಿದೆ.

    ಹೀಗಾಗಿ ಆರೋಗ್ಯ ಇಲಾಖೆ ಸೋಂಕಿತರ ರಿಕವರಿ ರೇಟ್ ಹೆಚ್ಚಿಸಲು ಹೊಸ ಪ್ಲಾನ್ ಮಾಡಿದ್ದು, ಯೋಗ ಮಂತ್ರದ ಮೊರೆ ಹೋಗಿದೆ. ಹೀಗಾಗಿ ಕೊರೊನಾ ವೈರಸ್‍ಗೆ ರಾಮಭಾಣವಾಗಿರುವ ಪ್ರಾಣಾಯಾಮವನ್ನು ಕೋವಿಡ್ ಸೆಂಟರ್ ಗಳಲ್ಲಿ ಸೋಂಕಿತರಿಗೆ ಮಾಡಿಸುತ್ತಿದೆ. ಈ ಮೂಲಕ ಯೋಗ ಥೆರಪಿ ಬಳಸಿ ಕೊರೊನಾ ಸೋಂಕಿತರು ಬೇಗ ಗುಣಮುಖರಾಗುವಂತೆ ಮಾಡಿ ಡಿಸ್ಚಾರ್ಜ್ ಮಾಡುವ ಹೊಸ ಐಡಿಯಾವನ್ನು ಆರೋಗ್ಯ ಇಲಾಖೆ ಮಾಡಿದೆ.

    ಈಗ ಬೆಂಗಳೂರಿನ ಕೋವಿಡ್ ಕೇರ್ ಸೆಂಟರ್ ಗಳಲ್ಲಿ ಸೋಂಕಿತರಿಗೆ ಕಡ್ಡಾಯ ಯೋಗಭ್ಯಾಸ ಮಾಡಿಸಲು ಆರೋಗ್ಯ ಇಲಾಖೆ ನಿರ್ಧಾರ ಮಾಡಿದೆ. ಹೀಗಾಗಿ ರವಿಶಂಕರ್ ಗುರೂಜಿ ಆಶ್ರಮದ ಕೋವಿಡ್ ಕೇರ್ ಸೆಂಟರ್ ಮತ್ತು ಆಶ್ರಮ ಸಿಸಿಸಿಯಲ್ಲೂ ಪ್ರತಿಯೊಬ್ಬ ರೋಗಿಗೂ ಕಡ್ಡಾಯ ಯೋಗಭ್ಯಾಸಕ್ಕೆ ಪ್ರತ್ಯೇಕ ಸಿಬ್ಬಂದಿಯನ್ನು ನೇಮಕ ಮಾಡಲಾಗಿದೆ. ಕೊರೊನಾ ರೋಗಿಗಳ ಒತ್ತಡ ನಿವಾರಿಸಲು ಇಲಾಖೆ ಈ ಹೊಸ ಪ್ರಯತ್ನ ಮಾಡುತ್ತಿದೆ. ಅದರಂತೆ ಸತತ ಒಂದು ಗಂಟೆಗಳ ಕಾಲ ಸೋಂಕಿತರಿಗೆ ಸಿಬ್ಬಂದಿ ಯೋಗಭ್ಯಾಸ ಮಾಡಿಸುತ್ತಿದ್ದಾರೆ.