Tag: Prasad Biddappa

  • ಖ್ಯಾತ ಫ್ಯಾಷನ್ ಡಿಸೈನರ್ ಪುತ್ರಿ ಜೊತೆ ಅಭಿಷೇಕ್ ಅಂಬರೀಶ್ ನಿಶ್ಚಿತಾರ್ಥ

    ಖ್ಯಾತ ಫ್ಯಾಷನ್ ಡಿಸೈನರ್ ಪುತ್ರಿ ಜೊತೆ ಅಭಿಷೇಕ್ ಅಂಬರೀಶ್ ನಿಶ್ಚಿತಾರ್ಥ

    ರೆಬಲ್ ಸ್ಟಾರ್ ಅಂಬರೀಶ್ ಪುತ್ರ ಅಭಿಷೇಕ್ ಅಂಬರೀಶ್ ನಿಶ್ಚಿತಾರ್ಥ ಸುದ್ದಿ ಹಲವು ದಿನಗಳಿಂದ ಸ್ಯಾಂಡಲ್ ವುಡ್ ನಲ್ಲಿ ಭರ್ಜರಿಯಾಗಿಯೇ ಹರಿದಾಡುತ್ತಿದೆ. ಈ ರೀತಿಯ ಸುದ್ದಿ ಬಂದಾಗೆಲ್ಲ ಸುಮಲತಾ ಅಂಬರೀಶ್ ಅದನ್ನು ಅಲ್ಲಗಳೆಯುತ್ತಲೇ ಬಂದಿದ್ದಾರೆ. ಮೊನ್ನೆಯಷ್ಟೇ ಅಭಿಷೇಕ್ ಅಂಬರೀಶ್ ಕೂಡ ಇದೆಲ್ಲ ಸುಳ್ಳು ಸುದ್ದಿ ಎಂದು ಪ್ರತಿಕ್ರಿಯೆ ನೀಡಿದ್ದಾರೆ. ಆದರೆ, ಅಂಬರೀಶ್ ಕುಟುಂಬದ ಆಪ್ತರ ಪ್ರಕಾರ ಡಿಸೆಂಬರ್ 11 ರಂದು ಅಭಿಷೇಕ್ ಎಂಗೇಜ್ ಆಗಲಿದ್ದಾರೆ ಎನ್ನಲಾಗುತ್ತಿದೆ.

    ಹಲವು ವರ್ಷಗಳಿಂದ ಪರಿಚಯವಿರುವ ತಮ್ಮ ಗೆಳತಿಯನ್ನೇ ಅಭಿಷೇಕ್ ಮದುವೆಯಾಗಲಿದ್ದಾರೆ ಎಂದು ಹೇಳಲಾಗುತ್ತಿದ್ದು, ಅವರು ಖ್ಯಾತ ಫ್ಯಾಷನ್ ಡಿಸೈನರ್ ಪುತ್ರಿ ಎನ್ನುತ್ತವೆ ಆಪ್ತ ಮೂಲಗಳು. ಅಭಿಷೇಕ್ ಎಂಗೇಜ್ ಮೆಂಟ್ ಬೆಂಗಳೂರಿನ ಪ್ರತಿಷ್ಠಿತ ಸ್ಟಾರ್ ಹೋಟೆಲ್ ನಲ್ಲಿ ನಡೆಯಲಿದ್ದು, ಈಗಾಗಲೇ ರಜನಿಕಾಂತ್ ಸೇರಿದಂತೆ ದಕ್ಷಿಣದ ಹಲವು ದಿಗ್ಗಜರಿಗೆ ಆಹ್ವಾನ ಕೂಡ ಹೋಗಿದೆಯಂತೆ. ಇದನ್ನೂ ಓದಿ: ಬಿಕಿನಿ ತೊಟ್ಟು ಪೋಸ್‌ ಕೊಟ್ಟ ನಿವೇದಿತಾಗೆ ಬೆವರಿಳಿಸಿದ ನೆಟ್ಟಿಗರು

    ಅಭಿಷೇಕ್ ಅಂಬರೀಶ್ ಅವರ ಸ್ನೇಹಿತೆಯಾಗಿರುವ ಅವಿದಾ ಬಿದ್ದಪ್ಪ ಅವರೇ ಅಭಿ ಹೊಸ ಜೀವನಕ್ಕೆ ಕಾಲಿಡುತ್ತಿದ್ದಾರೆ ಎಂದು ಹೇಳಲಾಗುತ್ತಿದ್ದು, ಇವರು ಖ್ಯಾತ ಫ್ಯಾಷನ್ ಡಿಸೈನರ್ ಪ್ರಸಾದ್ ಬಿದ್ದಪ್ಪ ಅವರು ಪುತ್ರಿಯಾಗಿದ್ದಾರೆ. ಹಲವು ವರ್ಷಗಳಿಂದ ಅಭಿಷೇಕ್ ಮತ್ತು ಅವಿದಾ ಫ್ರೆಂಡ್ಸ್ ಎನ್ನುವುದು ಗುಟ್ಟಿನ ಸಂಗತಿಯೇನೂ ಅಲ್ಲ. ಈ ಗೆಳೆತನವೇ ಪ್ರೇಮಕ್ಕೆ ತಿರುಗಿ ಇದೀಗ ಹಸಮಣೆ ಹತ್ತಿಸುತ್ತಿದೆ.

    ನಿನ್ನೆಯಷ್ಟೇ ಅಭಿಷೇಕ್ ಅವರ ಹೊಸ ಸಿನಿಮಾದ ಮುಹೂರ್ತವಾಗಿದ್ದು, ಈ ಚಿತ್ರಕ್ಕೆ ಕಾಳಿ ಎಂದು ಹೆಸರಿಡಲಾಗಿದೆ. ಮುಂಗಾರು ಮಳೆ ಖ್ಯಾತಿಯ ಕೃಷ್ಣ ಅವರು ಈ ಸಿನಿಮಾವನ್ನು ನಿರ್ದೇಶನ ಮಾಡುತ್ತಿದ್ದಾರೆ. ಅಭಿ ಅವರ ಎಂಗೇಜ್ ಮೆಂಟ್ ಮುಗಿದ ನಂತರ ಚಿತ್ರೀಕರಣ ಶುರು ಆಗಲಿದೆ. ಅಲ್ಲದೇ, ಸೂರಿ ನಿರ್ದೇಶನದ ಬ್ಯಾಡ್ ಮ್ಯಾನರ್ಸ್ ಸಿನಿಮಾದಲ್ಲೂ ಅಭಿ ನಟಿಸಿದ್ದು, ಈ ಸಿನಿಮಾ ಸಂಪೂರ್ಣ ಚಿತ್ರೀಕರಣ ಮುಗಿಸಿದೆ.

    Live Tv
    [brid partner=56869869 player=32851 video=960834 autoplay=true]

  • ನನ್ನ ಮುಗಿಸ್ಬಿಡ್ತೀನಿ ಅಂತಾನೆ: ಗಂಭೀರ ಆರೋಪ ಮಾಡಿದ ನಟಿ ಸಂಜನಾ

    ನನ್ನ ಮುಗಿಸ್ಬಿಡ್ತೀನಿ ಅಂತಾನೆ: ಗಂಭೀರ ಆರೋಪ ಮಾಡಿದ ನಟಿ ಸಂಜನಾ

    ಫ್ಯಾಶನ್ ಐಕಾನ್ ಪ್ರಸಾದ್ ಬಿದ್ದಪ್ಪ ಪುತ್ರ ಆಡಂ ಬಿದ್ದಪ್ಪ ವಿರುದ್ಧ ಮತ್ತೊಂದು ಗಂಭೀರ ಆರೋಪ ಮಾಡಿದ್ದಾರೆ ನಟಿ ಸಂಜನಾ. ಮಾಧ್ಯಮಗಳ ಜತೆ ಮಾತನಾಡಿದ ಅವರು, “ಆಡಂ ನನಗೆ ನೇರವಾಗಿ ಪರಿಚಯವೇ ಇಲ್ಲ. ಅವರ ತಂದೆಯೊಂದಿಗೆ ನಾನು ಕೆಲಸ ಮಾಡಿದ್ದೇನೆ. ಅವರು ತುಂಬಾ ಒಳ್ಳೆಯವರು. ಆದರೆ, ಈ ಹುಡುಗನಿಗೆ ಏನಾಗಿದೆ ಅಂತ ನನಗೆ ಗೊತ್ತಿಲ್ಲ. ರಾತ್ರಿಯೆಲ್ಲ ಅಶ್ಲೀಲ ಮಸೇಜ್ ಕಳಿಸ್ತಾನೆ. ತನ್ನೊಂದಿಗೆ ಚಾಟ್ ಮಾಡುವಂತೆ ಒತ್ತಾಯಿಸುತ್ತಾನೆ. ಖಾರವಾಗಿ ನಾನು ರಿಯಾಕ್ಟ್ ಮಾಡಿದಾಗ, ನನ್ನ ಮುಗಿಸ್ಬಿಡ್ತೀನಿ ಅಂತ ಹೆದರಿಸುತ್ತಾನೆ’ ಎಂದು ನಟ ಸಂಜನಾ ಆರೋಪಿಸುತ್ತಾರೆ. ಇದನ್ನೂ ನೋಡಿ : ನಟ ಚೇತನ್‌ಗೆ ನೀಡಿದ್ದ ಗನ್ ಮ್ಯಾನ್ ಹಿಂಪಡೆದ ಸರ್ಕಾರ

    ಇಂತಹ ಕಿರಿಕಿರಿಯಿಂದಲೇ ಅವರು ಅನೇಕ ಬಾರಿ ಮೊಬೈಲ್ ನಂಬರ್ ಬದಲಾಯಿಸಿದ್ದಾರಂತೆ. ಮತ್ತೆ ಮತ್ತೆ ನಂಬರ್ ಬದಲಾಯಿಸಿದರೆ, ವೃತ್ತಿಗೆ ತೊಂದರೆ ಆಗುವುದರಿಂದ ಇನ್ಮುಂದೆ ಇಂತಹ ಘಟನೆಗಳನ್ನು ಅವರು ಗಂಭೀರವಾಗಿಯೇ ತಗೆದುಕೊಳ್ಳುತ್ತಾರಂತೆ. ಇದನ್ನೂ ಓದಿ : ಪ್ರಭಾಸ್‍ಗೆ ಮಿರ್ಚಿ ಪ್ರಶ್ನೆ ಕೇಳಿದ ದೀಪಿಕಾ ಪಡುಕೋಣೆ!

    ಪ್ರಕರಣವನ್ನು ಅಂತ್ಯದವರೆಗೂ ತಗೆದುಕೊಂಡು ಹೋಗುವುದಾಗಿಯೂ ಅವರು ಮಾತನಾಡಿದ್ದಾರೆ. ಏಳು ತಿಂಗಳು ಗರ್ಭಿಣಿಯಾಗಿರುವ ಸಂಜನಾಗೆ ತುಂಬಾ ಮಾನಸಿಕ ಹಿಂಸೆ ಕೊಡುವಂತಹ ಕೆಲಸಗಳು ನಡೆಯುತ್ತಿವೆಯಂತೆ. ಹಾಗಾಗಿ ಪೊಲೀಸ್ ರ ಮೊರೆ ಹೋಗುವುದು ಅನಿವಾರ್ಯ ಅಂದಿದ್ದಾರೆ. ಇದನ್ನೂ ಓದಿ: ಭಾಸ್ಕರ್.ವಿ.ರೆಡ್ಡಿ ಕ್ಯಾಮೆರಾ ಕಣ್ಣಲ್ಲಿ ಸೆರೆಯಾದ ಮ್ಯೂಸಿಕಲ್ ಲವ್ ಸ್ಟೋರಿ ಸಿನಿಮಾ ‘ಮೈಸೂರು

    ಪ್ರಸಾದ್ ಬಿದ್ದಪ್ಪ ಪುತ್ರ ಆಡಂನನ್ನು ಈಗಾಗಲೇ ಇಂದಿರಾ ನಗರ ಪೊಲೀಸ್ ರು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸುತ್ತಿದ್ದಾರೆ. ಆದರೆ, ಆಗಲೇ ಅವನು ಸಂಜನಾ ಜತೆ ಮಾಡಿದ್ದ ಚಾಟ್ ಗಳನ್ನು ಡಿಲಿಟ್ ಮಾಡಿದ್ದಾನೆ ಎನ್ನಲಾಗುತ್ತಿದೆ. ಡಿಲಿಟ್ ಆದ ಚಾಟ್ ಅನ್ನು ಮತ್ತೆ ಪಡೆಯುವ ಪ್ರಯತ್ನ ಮಾಡುತ್ತಿದ್ದಾರಂತೆ ಪೊಲೀಸ್ ಅಧಿಕಾರಿಗಳು.