Tag: prasada

  • ಪ್ರಸಾದದಲ್ಲಿ ಕೀಟನಾಶಕ ಮಿಶ್ರಣ: ಕೆ.ಆರ್.ಆಸ್ಪತ್ರೆ ವೈದ್ಯರ ಶಂಕೆ

    ಪ್ರಸಾದದಲ್ಲಿ ಕೀಟನಾಶಕ ಮಿಶ್ರಣ: ಕೆ.ಆರ್.ಆಸ್ಪತ್ರೆ ವೈದ್ಯರ ಶಂಕೆ

    ಕೆಪಿ ನಾಗರಾಜ್
    ಮೈಸೂರು: ದೇವರ ಪ್ರಸಾದದಲ್ಲಿ ವಿಷ ಬೆರತಿರುವುದರಿಂದ ಈ ದುರಂತ ಸಂಭವಿಸಿರಬಹುದು ಎಂದು ಕೆ.ಆರ್.ಆಸ್ಪತ್ರೆಯ ವೈದ್ಯರಾದ ರಾಜೇಶ್ ಕುಮಾರ್ ಶಂಕೆ ವ್ಯಕ್ತಪಡಿಸಿದ್ದಾರೆ.

    ಈ ಕುರಿತು ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿದ ಅವರು, ಇದೂವರೆಗೂ ಕೆಆರ್ ಆಸ್ಪತ್ರೆಯಲ್ಲಿ ಒಟ್ಟು 25 ಮಂದಿ ದಾಖಲಾಗಿದ್ದಾರೆ. ಆದರೆ ಆಸ್ಪತ್ರೆಗೆ ದಾಖಲಾದ ಕೆಲವೇ ಕ್ಷಣಗಳಲ್ಲಿ ಒಬ್ಬರು ಮೃತಪಟ್ಟಿದ್ದಾರೆ. ಅವರ ಯಾರೆಂಬ ಮಾಹಿತಿ ಲಭಿಸಿಲ್ಲ. ಅಸ್ವಸ್ಥರಾಗಿರುವವರೆಲ್ಲಾ ಉಸಿರಾಡಲೂ ಸಹ ಕಷ್ಟ ಪಡುತ್ತಿದ್ದಾರೆ. ಹೀಗಾಗಿ 10 ಜನಕ್ಕೆ ವೆಂಟಿಲೇಟರ್ ಮೂಲಕ ಉಸಿರಾಟದ ವ್ಯವಸ್ಥೆಯನ್ನು ನೀಡಿದ್ದೇವೆ ಎಂದು ತಿಳಿಸಿದರು.

    ಘಟನೆ ತಿಳಿಯುತ್ತಿದ್ದಂತೆ ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತರು ತುರ್ತು ಪರಿಸ್ಥಿತಿಯಲ್ಲಿ ರೋಗಿಗಳನ್ನು ಖಾಸಗಿ ಆಸ್ಪತ್ರೆಗಳಿಗೆ ರವಾನಿಸುವಂತೆ ಸೂಚನೆ ನೀಡಿದ್ದಾರೆ. ಅಲ್ಲದೇ ಈಗಾಗಲೇ ಮೈಸೂರಿನ ಎಲ್ಲಾ ಪ್ರಮುಖ ಖಾಸಗಿ ಆಸ್ಪತ್ರೆಗಳ ಬಳಿ ಮಾತನಾಡಿದ್ದು, ಎಲ್ಲಾ ಆಸ್ಪತ್ರೆಯವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಒಂದು ವೇಳೆ ಯಾರಿಗಾದರೂ ಅಗತ್ಯಬಿದ್ದಲ್ಲಿ ಕೂಡಲೇ ಅವರನ್ನು ಖಾಸಗಿ ಆಸ್ಪತ್ರೆಗಳಿಗೆ ರವಾನಿಸುತ್ತೇವೆ ಎಂದು ಹೇಳಿದರು.

    ಅಸ್ವಸ್ಥರ ಗುಣಲಕ್ಷಣಗಳನ್ನು ನೋಡಿದರೇ, ಆಹಾರದಲ್ಲಿ ಕೀಟನಾಶಕ ಬೆರೆತಿರುವ ಸಂಶಯ ವ್ಯಕ್ತವಾಗುತ್ತಿದೆ. ಜಮೀನುಗಳಲ್ಲಿ ಬೆಳೆಗಳಿಗೆ ಸಿಂಪಡಿಸುವ ಕೀಟನಾಶಕ ಇರಬಹುದೆಂದು ಅಂದಾಜಿಸಲಾಗಿದೆ. ಆದರೆ ಈ ಬಗ್ಗೆ ನಿಖರವಾಗಿ ಈಗ ಹೇಳಲು ಸಾಧ್ಯವಾಗುವುದಿಲ್ಲ. ರೋಗಿಗಳ ರಕ್ತ, ವಾಂತಿ ಹಾಗೂ ಆಹಾರದ ಮಾದರಿಗಳನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿಕೊಟ್ಟು ವರದಿ ಬಂದ ಬಳಿಕ ಘಟನೆಗೆ ನಿಖರ ಕಾರಣವನ್ನು ಹೇಳಬಹುದೆಂದು ಹೇಳಿದ್ದಾರೆ.

    ನಡೆದಿದ್ದು ಏನು?
    ಸುಲ್ವಾಡಿ ಗ್ರಾಮದ ಕಿಚ್ಚುಕುತ್ತಿ ಮಾರಮ್ಮ ದೇವಸ್ಥಾನದಲ್ಲಿ ಗೋಪುರದ ಶಂಕುಸ್ಥಾಪನೆ ಇಂದು ನಡೆದಿತ್ತು. ಈ ಕಾರ್ಯಕ್ರಮದ ನಿಮಿತ್ತ ಭಕ್ತರಿಗೆ ಹಾಗೂ ಸ್ಥಳೀಯರಿಗೆ ಪ್ರಸಾದ ವ್ಯವಸ್ಥೆ ಮಾಡಲಾಗಿತ್ತು. ಪೂಜೆ ಹಾಗೂ ಶಂಕುಸ್ಥಾಪನೆ ನೆರವೇರಿಸಿದ ಬಳಿಕ ಭಕ್ತರು ಪ್ರಸಾದದ ರೂಪದಲ್ಲಿ ರೈಸ್‍ಬಾತ್ ಸೇವಿಸಿದ್ದಾರೆ. ಸ್ವಲ್ಪ ಸಮಯದ ನಂತರ ರೈಸ್‍ಬಾತ್ ಸೇವಿಸಿದ್ದ 80ಕ್ಕೂ ಹೆಚ್ಚು ಜನರಿಗೆ ವಾಂತಿ ಭೇದಿ ಕಾಣಿಸಿಕೊಂಡು ಅಸ್ವಸ್ಥರಾಗಿ ಬಿದ್ದಿದ್ದಾರೆ. ಇದನ್ನು ನೋಡಿದ ಸ್ಥಳೀಯರೊಬ್ಬರು 108ಕ್ಕೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ.

    ಘಟನಾ ಸ್ಥಳಕ್ಕೆ ಬಂದ ಆಂಬುಲೆನ್ಸ್ ನಲ್ಲಿ ಅಸ್ವಸ್ಥಗೊಂಡ ಜನರನ್ನು ಕಾಮಗೆರೆ ಹೋಲಿ ಕ್ರಾಸ್ ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ದೇವಸ್ಥಾನದ ಅರ್ಚಕ, ಪುಟ್ಟ ಮಕ್ಕಳು, ಮಹಿಳೆಯರು, ವೃದ್ಧರು ಸೇರಿದಂತೆ 80ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿದ್ದಾರೆ. ಘಟನೆಯಲ್ಲಿ ಈವರೆಗೂ 10 ಮಂದಿ ಮೃತಪಟ್ಟಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಮಾರಮ್ಮ ದೇವಿಯ ಪ್ರಸಾದದಲ್ಲಿ ವಿಷ – ‘ನೀಲಿಯಾಗುತ್ತಿವೆ ಭಕ್ತರ ಕಣ್ಣುಗಳು’

    ಮಾರಮ್ಮ ದೇವಿಯ ಪ್ರಸಾದದಲ್ಲಿ ವಿಷ – ‘ನೀಲಿಯಾಗುತ್ತಿವೆ ಭಕ್ತರ ಕಣ್ಣುಗಳು’

    – ವಿಷದ ಶಂಕೆ ವ್ಯಕ್ತಪಡಿಸಿದ ಕೊಳ್ಳೇಗಾಲ ಡಿಎಚ್‍ಓ
    – ಸಾವಿನ ಸಂಖ್ಯೆ 7ಕ್ಕೆ ಏರಿಕೆ
    – ಸುಲ್ವಾಡಿ ಗ್ರಾಮದ ಕಿಚ್ಚುಕುತ್ತಿ ಮಾರಮ್ಮ ದೇವಾಲಯದಲ್ಲಿ ದುರಂತ
    – ಗೋಪುರ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಪ್ರಸಾದ ಸೇವನೆ

    ಚಾಮರಾಜನಗರ/ ಮೈಸೂರು: ಕೆಲವು ದುಷ್ಕರ್ಮಿಗಳು ಮಾರಮ್ಮ ದೇವಿಯ ಪ್ರಸಾದದಲ್ಲಿ ವಿಷ ಬೆರೆಸಿದ್ದರಿಂದಲೇ ಈ ದುರಂತ ಸಂಭವಿಸಿದೆ ಎಂದು ಹನೂರು ತಾಲೂಕಿನ ಸುಲ್ವಾಡಿ ಗ್ರಾಮಸ್ಥರು ದೂರಿದ್ದಾರೆ.

    ಆಸ್ಪತ್ರೆಗೆ ದಾಖಲಾಗಿರವ ಅನೇಕರ ಕಣ್ಣುಗಳು ನೀಲಿ ಆಗುತ್ತಿವೆ. ಈ ಮೂಲಕ ಆಹಾರಕ್ಕೆ ವಿಷ ಮಿಶ್ರಣ ಮಾಡಿರುವ ಸಾಧ್ಯತೆ ಇದೆ ಎಂದು ಕೊಳ್ಳೇಗಾಲ ಆಸ್ಪತ್ರೆಯ ವೈದ್ಯರೊಬ್ಬರು ತಿಳಿಸಿದ್ದಾರೆ. ನಮಗೆ ಪ್ರಸಾದದಲ್ಲಿ ರಾಸಾಯನಿಕ ರೀತಿಯ ವಾಸನೆ ಬಂದಿತ್ತು. ಸ್ವಲ್ಪ ತಿಂದು ಚೆಲ್ಲಿದೆವು. ಆದರೂ ನಮ್ಮ ಮೇಲೆ ಪರಿಣಾಮ ಬೀರಿದೆ. ನಮ್ಮ ಜೊತೆಗೆ ದೇವಸ್ಥಾನಕ್ಕೆ ಬಂದಿದ್ದವರು ಕೂಡ ಅಸ್ವಸ್ಥರಾಗಿದ್ದಾರೆ ಎಂದು ಕೊಳ್ಳೆಗಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಹಿಳೆಯೊಬ್ಬರು ತಿಳಿಸಿದ್ದಾರೆ.

    ಮೈಸೂರಿಗೆ ಅಸ್ವಸ್ಥರು ಶಿಫ್ಟ್:
    ಖಾಸಗಿ ಹಾಗೂ ವಿವಿಧ ಆಸ್ಪತ್ರೆಗಳ ಅಂಬುಲೆನ್ಸ್ ಗಳನ್ನು ಕೊಳ್ಳೇಗಾಲ ಆಸ್ಪತ್ರೆಗೆ ಕಳುಹಿಸಲಾಗಿದೆ. ಅಲ್ಲಿಂದ 30ರಿಂದ 40 ನಿಮಿಷದಲ್ಲಿ ಮೈಸೂರಿನ ಕೆ.ಆರ್.ಆಸ್ಪತ್ರೆಗೆ ಸಾಗಿಸುವ ಕೆಲಸ ನಡೆದಿದೆ. ಈಗಾಗಲೇ 7 ಮಂದಿ ಮೃತಪಟ್ಟಿದ್ದು, 80 ಜನರು ಅಸ್ವಸ್ಥಗೊಂಡಿದ್ದಾರೆ. 9 ಜನರ ಸ್ಥಿತಿ ಚಿಂತಾಜನಕವಾಗಿದೆ. ಹೀಗಾಗಿ ಮೈಸೂರಿನ ಕೆ.ಆರ್ ಆಸ್ಪತ್ರೆ ಸಾಗಿಸಲಾಗಿದ್ದು, ಆರು ಜನರನ್ನು ಐಸಿಯುನಲ್ಲಿ ಇರಿಸಿ ಚಿಕಿತ್ಸೆ ಕೊಡಲಾಗುತ್ತಿದೆ.

    50ಕ್ಕೂ ಹೆಚ್ಚು ಜನರು ಕೊಳ್ಳೇಗಾಲದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಷ್ಟೇ ಅಲ್ಲದೆ ದೇವಸ್ಥಾನಕ್ಕೆ ಪ್ರಸಾದ ಸೇವಿಸಿ ಮನೆಗೆ ಹೋಗಿದ್ದ ಅನೇಕರು ಅಸ್ವಸ್ಥಗೊಂಡು, ಒಬ್ಬೊಬ್ಬರಂತೆ ಆಸ್ಪತ್ರೆಗೆ ಬಂದು ಚಿಕಿತ್ಸೆ ಪಡೆಯುತ್ತಿದ್ದಾರೆ.

    ನಡೆದಿದ್ದು ಏನು?
    ಸುಲ್ವಾಡಿ ಗ್ರಾಮದ ಕಿಚ್ಚುಕುತ್ತಿ ಮಾರಮ್ಮ ದೇವಸ್ಥಾನದಲ್ಲಿ ಗೋಪುರದ ಶಂಕುಸ್ಥಾಪನೆ ಇಂದು ನಡೆದಿತ್ತು. ಈ ಕಾರ್ಯಕ್ರಮದ ನಿಮಿತ್ತ ಭಕ್ತರಿಗೆ ಹಾಗೂ ಸ್ಥಳೀಯರಿಗೆ ಪ್ರಸಾದ ವ್ಯವಸ್ಥೆ ಮಾಡಲಾಗಿತ್ತು. ಪೂಜೆ ಹಾಗೂ ಶಂಕುಸ್ಥಾಪನೆ ನೆರವೇರಿಸಿದ ಬಳಿಕ ಭಕ್ತರು ಪ್ರಸಾದದ ರೂಪದಲ್ಲಿ ರೈಸ್‍ಬಾತ್ ಸೇವಿಸಿದ್ದಾರೆ. ಸ್ವಲ್ಪ ಸಮಯದ ನಂತರ ರೈಸ್‍ಬಾತ್ ಸೇವಿಸಿದ್ದ 80ಕ್ಕೂ ಹೆಚ್ಚು ಜನರಿಗೆ ವಾಂತಿ ಭೇದಿ ಕಾಣಿಸಿಕೊಂಡು ಅಸ್ವಸ್ಥರಾಗಿ ಬಿದ್ದಿದ್ದಾರೆ. ಇದನ್ನು ನೋಡಿದ ಸ್ಥಳೀಯರೊಬ್ಬರು 108ಕ್ಕೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ.

    ಘಟನಾ ಸ್ಥಳಕ್ಕೆ ಬಂದ ಆಂಬುಲೆನ್ಸ್ ನಲ್ಲಿ ಅಸ್ವಸ್ಥಗೊಂಡ ಜನರನ್ನು ಕಾಮಗೆರೆ ಹೋಲಿ ಕ್ರಾಸ್ ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ದೇವಸ್ಥಾನದ ಅರ್ಚಕ, ಪುಟ್ಟ ಮಕ್ಕಳು, ಮಹಿಳೆಯರು, ವೃದ್ಧರು ಸೇರಿದಂತೆ 80ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿದ್ದಾರೆ. ಮೂವರು ಮೃತಪಟ್ಟಿದ್ದು, ಮೂವರ ಸ್ಥಿತಿ ಚಿಂತಾಜನಕವಾಗಿದೆ.

    ಹನೂರು ಶಾಸಕ ನಾಗೇಂದ್ರ ಪಬ್ಲಿಕ್ ಟಿವಿ ಜೊತೆಗೆ ಮಾತನಾಡಿ, ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುವಂತೆ ಜಿಲ್ಲಾಧಿಕಾರಿ, ತಹಶೀಲ್ದಾರ್ ಹಾಗೂ ಪೊಲೀಸರಿಗೆ ಸೂಚನೆ ನೀಡಿದ್ದೇನೆ. ಹೆಚ್ಚಾಗಿ ದೇವಸ್ಥಾನ ಸುತ್ತಮುತ್ತಲಿನ ಗ್ರಾಮಸ್ಥರು ಅಲ್ಲಿ ಸೇರಿದ್ದರು. ರೈಸ್‍ಬಾತ್ ಅನ್ನು ಲ್ಯಾಬ್‍ಗೆ ಕಳುಹಿಸಿ ಪರೀಕ್ಷೆ ಮಾಡುವಂತೆ ತಿಳಿಸಿದ್ದೇನೆ ಎಂದು ಪ್ರತಿಕ್ರಿಯಿಸಿದ್ದರು.

    https://www.youtube.com/watch?v=zFnWjIpKhQc

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಮಾರಮ್ಮ ದೇವಿ ಪ್ರಸಾದ ಸೇವಿಸಿ ಐವರ ಸಾವು, 80ಕ್ಕೂ ಹೆಚ್ಚು ಮಂದಿ ಅಸ್ವಸ್ಥ

    ಮಾರಮ್ಮ ದೇವಿ ಪ್ರಸಾದ ಸೇವಿಸಿ ಐವರ ಸಾವು, 80ಕ್ಕೂ ಹೆಚ್ಚು ಮಂದಿ ಅಸ್ವಸ್ಥ

    ಚಾಮರಾಜನಗರ: ಹನೂರು ತಾಲೂಕಿನ ಸುಲ್ವಾಡಿ ಗ್ರಾಮದ ಮಾರಮ್ಮ ದೇವಾಲಯದಲ್ಲಿ ಪ್ರಸಾದ ಸ್ವೀಕರಿಸಿ 5 ಜನ ಮೃತಪಟ್ಟಿದ್ದು, 80ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿದ್ದಾರೆ.

    ಗೋಪಿಯಮ್ಮ(35), ಶಾಂತ (20) ಹಾಗೂ ಪಾಪಣ್ಣ (50) ಮೃತ ದುರ್ದೈವಿಗಳು. ಅಸ್ವಸ್ಥಗೊಂಡವರನ್ನು ಕಾಮಗೆರೆ ಹೋಲಿ ಕ್ರಾಸ್ ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಆದರೆ ಮೂವರ ಸ್ಥಿತಿ ಗಂಭೀರವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಮೈಸೂರಿನ ಆಸ್ಪತ್ರೆಗೆ ಸಾಗಿಸಲಾಗಿದೆ. ಆಸ್ಪತ್ರೆಯ ಮುಂದೆ ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

    ಘಟನೆಯ ವಿವರ:
    ಸುಲ್ವಾಡಿ ಗ್ರಾಮದ ಕಿಚ್ಚುಕುತ್ತಿ ಮಾರಮ್ಮ ದೇವಸ್ಥಾನದಲ್ಲಿ ಗೋಪುರದ ಶಂಕುಸ್ಥಾಪನೆ ಇಂದು ನಡೆದಿತ್ತು. ಈ ಕಾರ್ಯಕ್ರಮದ ನಿಮಿತ್ತ ಭಕ್ತರಿಗೆ ಹಾಗೂ ಸ್ಥಳೀಯರಿಗೆ ಪ್ರಸಾದ ವ್ಯವಸ್ಥೆ ಮಾಡಲಾಗಿತ್ತು. ಪೂಜೆ ಹಾಗೂ ಶಂಕುಸ್ಥಾಪನೆ ನೆರವೇರಿಸಿದ ಬಳಿಕ ಭಕ್ತರು ಪ್ರಸಾದದ ರೂಪದಲ್ಲಿ ರೈಸ್‍ಬಾತ್ ಸೇವಿಸಿದ್ದಾರೆ. ಸ್ವಲ್ಪ ಸಮಯದ ನಂತರ ರೈಸ್‍ಬಾತ್ ಸೇವಿಸಿದ್ದ 80ಕ್ಕೂ ಹೆಚ್ಚು ಜನರಿಗೆ ವಾಂತಿ ಭೇದಿ ಕಾಣಿಸಿಕೊಂಡು ಅಸ್ವಸ್ಥರಾಗಿ ಬಿದ್ದಿದ್ದಾರೆ. ಇದನ್ನು ನೋಡಿದ ಸ್ಥಳೀಯರೊಬ್ಬರು 108ಕ್ಕೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ.

    ಘಟನಾ ಸ್ಥಳಕ್ಕೆ ಬಂದ ಆಂಬುಲೆನ್ಸ್ ನಲ್ಲಿ ಅಸ್ವಸ್ಥಗೊಂಡ ಜನರನ್ನು ಕಾಮಗೆರೆ ಹೋಲಿ ಕ್ರಾಸ್ ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ದೇವಸ್ಥಾನದ ಅರ್ಚಕ, ಪುಟ್ಟ ಮಕ್ಕಳು, ಮಹಿಳೆಯರು, ವೃದ್ಧರು ಸೇರಿದಂತೆ 80ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿದ್ದಾರೆ. ಐವರು ಮೃತಪಟ್ಟಿದ್ದು, ಮೂವರ ಸ್ಥಿತಿ ಚಿಂತಾಜನಕವಾಗಿದೆ.

    ಹನೂರು ಶಾಸಕ ನಾಗೇಂದ್ರ ಪಬ್ಲಿಕ್ ಟಿವಿ ಜೊತೆಗೆ ಮಾತನಾಡಿ, ಘಟನಾ ಸ್ಥಳಕ್ಕೆ ಭೇಡಿ ನೀಡಿ ಪರಿಶೀಲನೆ ನಡೆಸುವಂತೆ ಜಿಲ್ಲಾಧಿಕಾರಿ, ತಹಶೀಲ್ದಾರ್ ಹಾಗೂ ಪೊಲೀಸರಿಗೆ ಸೂಚನೆ ನೀಡಿದ್ದೇನೆ. ಹೆಚ್ಚಾಗಿ ದೇವಸ್ಥಾನ ಸುತ್ತಮುತ್ತಲಿನ ಗ್ರಾಮಸ್ಥರು ಅಲ್ಲಿ ಸೇರಿದ್ದರು. ರೈಸ್‍ಬಾತ್ ಅನ್ನು ಲ್ಯಾಬ್‍ಗೆ ಕಳುಹಿಸಿ ಪರೀಕ್ಷೆ ಮಾಡುವಂತೆ ತಿಳಿಸಿದ್ದೇನೆ ಎಂದರು.

    https://www.youtube.com/watch?v=zFnWjIpKhQc

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಶಿವರಾತ್ರಿ ಪ್ರಸಾದ ತಿಂದ ಬಳಿಕ 1500 ಮಂದಿ ಅಸ್ವಸ್ಥ

    ಶಿವರಾತ್ರಿ ಪ್ರಸಾದ ತಿಂದ ಬಳಿಕ 1500 ಮಂದಿ ಅಸ್ವಸ್ಥ

    ಭೋಪಾಲ್: ಶಿವರಾತ್ರಿ ಹಬ್ಬದ ಪ್ರಯುಕ್ತ ಏರ್ಪಡಿಸಲಾಗಿದ್ದ ಕಾರ್ಯಕ್ರಮದಲ್ಲಿ ಕಿಚಡಿ ಪ್ರಸಾದವನ್ನ ತಿಂದು ಬರೋಬ್ಬರಿ 1500 ಜನ ಅಸ್ವಸ್ಥಗೊಂಡ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.

    ಇಲ್ಲಿನ ಬರ್ವಾನಿ ಜಿಲ್ಲೆಯ ಆಶ್ರಮವೊಂದರಲ್ಲಿ ಪ್ರಸಾದ ಹಂಚಲಾಗಿತ್ತು. ಪ್ರಸಾದ ಸೇವಿಸಿದ ಬಳಿಕ ಗ್ರಾಮಸ್ಥರಿಗೆ ವಾಂತಿ ಹಾಗೂ ಹೊಟ್ಟೆನೋವು ಕಾಣಿಸಿಕೊಂಡಿದೆ. ಸುಮಾರು 7 ಹಳ್ಳಿಗಳ ಗ್ರಾಮಸ್ಥರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಅವರಲ್ಲಿ 300 ಜನರನ್ನ ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತು. ಸಾಕಷ್ಟು ಮಂದಿ ಅಸ್ವಸ್ಥಗೊಂಡಿದ್ದರಿಂದ ಟ್ರ್ಯಾಕ್ಟರ್ ಟ್ರಾಲಿ, ಪಿಕಪ್ ವಾಹನ ಹಾಗೂ ಖಾಸಗಿ ವಾಹನಗಳಲ್ಲಿ ಆಸ್ಪತ್ರೆಗೆ ರವಾನಿಸಬೇಕಾಯಿತು ಎಂದು ಪತ್ರಿಕೆಯೊಂದು ವರದಿ ಮಾಡಿದೆ.

    ಅಸ್ವಸ್ಥಗೊಂಡವರನ್ನ ಗುರುತಿಸಿ ಜಿಲ್ಲಾಸ್ಪತ್ರೆಗೆ ಕರೆತರಲು ತಂಡವನ್ನ ನಿಯೋಜಿಸಲಾಗಿದೆ. ಮತ್ತೆರಡು ಖಾಸಗಿ ಆಸ್ಪತ್ರೆಗಳು ಕೂಡ ನೆರವು ನೀಡಿದ್ದು, ಹಲವರು ಅಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸದ್ಯಕ್ಕೆ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಜಿಲ್ಲಾಧಿಕಾರಿ ತೇಜಸ್ವಿ ಎಸ್ ನಾಯ್ಕ್ ಹೇಳಿದ್ದಾರೆ.

    ಘಟನೆಗೆ ಕಾರಣವೇನೆಂಬುದನ್ನ ಪತ್ತೆಹಚ್ಚಲು ತನಿಖೆ ನಡೆಯುತ್ತಿದೆ ಎಂದು ವರದಿಯಾಗಿದೆ.

  • ಪ್ರಸಾದ ವಿನಿಯೋಗಕ್ಕೆ ಲೈಸೆನ್ಸ್, ದೇವರ ಪ್ರಸಾದ ಲ್ಯಾಬ್ ಪರೀಕ್ಷೆಗೆ ಒಳಪಡ್ಬೇಕು- ಆಹಾರ ಸುರಕ್ಷತೆ ಇಲಾಖೆ ನೋಟಿಸ್

    ಪ್ರಸಾದ ವಿನಿಯೋಗಕ್ಕೆ ಲೈಸೆನ್ಸ್, ದೇವರ ಪ್ರಸಾದ ಲ್ಯಾಬ್ ಪರೀಕ್ಷೆಗೆ ಒಳಪಡ್ಬೇಕು- ಆಹಾರ ಸುರಕ್ಷತೆ ಇಲಾಖೆ ನೋಟಿಸ್

    ಬೆಂಗಳೂರು: ಇನ್ಮುಂದೆ ಸಿಕ್ಕ ಸಿಕ್ಕಿದ್ದನ್ನೆಲ್ಲಾ ಪ್ರಸಾದ ಅಂತ ಹಂಚೋ ಹಾಗಿಲ್ಲ. ಯಾಕಂದ್ರೆ ಆಹಾರ ಸುರಕ್ಷತಾ ಇಲಾಖೆ ಹೊಸದೊಂದು ನಿಯಮ ಜಾರಿ ಮಾಡಿದೆ.

    ಮುಜುರಾಯಿ ಇಲಾಖೆ ದೇಗುಲ ಸೇರಿದಂತೆ ರಾಜ್ಯದ ಎಲ್ಲಾ ದೇಗುಲಗಳಿಗೆ, ಚರ್ಚ್ ಹಾಗೂ ಮಸೀದಿಗಳಿಗೆ ಆಹಾರ ಸುರಕ್ಷತಾ ಇಲಾಖೆ ನೋಟಿಸ್ ಜಾರಿ ಮಾಡಿದ್ದು, ಪ್ರಸಾದ ವಿನಿಯೋಗಕ್ಕೆ ಲೈಸನ್ಸ್ ಪಡೆಯುವಂತೆ ಸೂಚಿಸಿದೆ.

    ಭಕ್ತರಿಗೆ ಪ್ರಸಾದ ರೂಪದಲ್ಲಿ ಯಾವುದೇ ಆಹಾರ ಪದಾರ್ಥ ನೀಡಿದ್ರೂ ಅದನ್ನು ಆಹಾರ ಸುರಕ್ಷತೆ ಇಲಾಖೆಯ ಲ್ಯಾಬ್‍ನಲ್ಲಿ ಪರೀಕ್ಷೆಗೆ ಒಳಪಡಿಸಬೇಕೆಂದು ಹೇಳಿದೆ. ದೇಗುಲದಲ್ಲಿ ವಿತರಣೆ ಮಾಡುವ ಪ್ರಸಾದದಲ್ಲಿ ಗುಣಮಟ್ಟ ಕಾಪಾಡುವುದಿಲ್ಲ ಅಂತಾ ದೂರುಗಳು ಬಂದ ಹಿನ್ನಲೆಯಲ್ಲಿ ಈ ಕ್ರಮಕ್ಕೆ ಮುಂದಾಗಿರೋದಾಗಿ ಅಧಿಕಾರಿಗಳು ಹೇಳಿದ್ದಾರೆ.

    ಮೂರು ಬಾರಿ ನೋಟಿಸ್ ನೀಡಿದ ನಂತರವೂ ಲೈಸೆನ್ಸ್ ಪಡೆಯದೇ, ಪ್ರಸಾದ ಪರೀಕ್ಷೆಗೆ ಒಳಪಡಿಸದೇ ವಿತರಣೆ ಮಾಡಿದ್ರೆ ದಂಡ ವಿಧಿಸಲು ಆಹಾರ ಇಲಾಖೆ ನಿರ್ಧರಿಸಿದೆ.

  • ಹಿಮವದ್ ಗೋಪಾಲಸ್ವಾಮಿಯ ದರ್ಶನ ಪಡೆದು, ಪ್ರಸಾದ ತಿಂದು ಹೋಗುತ್ತಿದೆ ಒಂಟಿ ಸಲಗ – ಎಲ್ಲರಿಗೂ ಅಚ್ಚರಿಯೋ ಅಚ್ಚರಿ!

    ಹಿಮವದ್ ಗೋಪಾಲಸ್ವಾಮಿಯ ದರ್ಶನ ಪಡೆದು, ಪ್ರಸಾದ ತಿಂದು ಹೋಗುತ್ತಿದೆ ಒಂಟಿ ಸಲಗ – ಎಲ್ಲರಿಗೂ ಅಚ್ಚರಿಯೋ ಅಚ್ಚರಿ!

    ಚಾಮರಾಜನಗರ: ಒಂಟಿ ಸಲಗವೊಂದು ಕಳೆದ 5 ದಿನಗಳಿಂದ ದೇವರ ದರ್ಶನ ಮಾಡಿ ಪ್ರಸಾದ ಪಡೆದು ಹೋಗುತ್ತಿರುವ ಅಪರೂಪದ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿ ಜರುಗುತ್ತಿದೆ.

    ಬೆಟ್ಟದಲ್ಲಿರುವ ಗೋಪಾಲಸ್ವಾಮಿ ದರ್ಶನ ಮಾಡಲು ಬಂಡಿಪುರ ರಾಷ್ಟ್ರೀಯ ಉದ್ಯಾನವನದಿಂದ 5 ದಿನಗಳಿಂದ ಪ್ರತಿ ದಿನ ಸಂಜೆ ಈ ಒಂಟಿ ಸಲಗ ಬೆಟ್ಟಕ್ಕೆ ಆಗಮಿಸುತ್ತಿದೆ. ದೇವರ ದರ್ಶನ ಪಡೆದ ನಂತರ ಒಂಟಿ ಸಲಗ ದೇವಸ್ಥಾನದ ಅಡುಗೆ ಮನೆಗೆ ಹೋಗಿ ಸೊಂಡಿಲಿನಿಂದ ಪ್ರಸಾದ ಸ್ವೀಕರಿಸಿ ಕಾಡಿಗೆ ತೆರಳುತ್ತಿದೆ. ಈ ದೃಶ್ಯವನ್ನು ಕಂಡ ಇಲ್ಲಿನ ಭಕ್ತರು ಹಾಗೂ ಜನರು ಗಣಪತಿಯೇ ಈ ಒಂಟಿ ಸಲಗ ರೂಪದಲ್ಲಿ ಬರುತ್ತಿದ್ದಾನೆ ಎನ್ನುತ್ತಿದ್ದಾರೆ.

    ಸಾಮಾನ್ಯವಾಗಿ ದೊಡ್ಡ ದೇವಾಲಯಗಳಲ್ಲಿ ಸಾಕಾನೆಗಳಿರುತ್ತವೆ. ಈ ಆನೆಗಳು ದೇವರಿಗೆ ನಮಿಸುವುದು ರೂಢಿ. ಆ ಆನೆ ದೇವರ ದರ್ಶನ ಪಡೆಯುವ ಸಲುವಾಗಿ ಬರುತ್ತಿದೆ ಎನ್ನುವುದು ಕೆಲವರ ನಂಬಿಕೆ. ಆದರೆ, ಈ ಕಾಡಾನೆಗೆ ದೇವಾಲಯದಲ್ಲಿ ಸಿಗುತ್ತಿರುವ ಬಾಳೆಹಣ್ಣು, ತೆಂಗಿನಕಾಯಿ ರುಚಿ ಸಿಕ್ಕಿದೆ.

    ಹೀಗಾಗಿ ನಿತ್ಯ ಆ ಆನೆ ಇಲ್ಲಿಗೆ ಬರುತ್ತಿದೆ ಎನ್ನುವುದು ಕೆಲವರ ವಾದ. ಆದರೆ ಈ ಭಾರೀ ಗಾತ್ರದ ಒಂಟಿ ಸಲಗ ದೇವಾಲಯದ ಬಳಿಗೆ ಬಂದರೂ ಯಾರಿಗೂ ತೊಂದರೆ ಕೊಟ್ಟಿಲ್ಲ. ಹೀಗಾಗಿ ಇದು ಗೋಪಾಲಸ್ವಾಮಿ ಅನುಗ್ರಹದಿಂದಲೇ ಆನೆ ಬರುತ್ತಿದೆ ಎನ್ನುವುದು ದೇವಸ್ಥಾನದ ಅರ್ಚಕರ ನಂಬಿಕೆ. ಏನೇ ಇರಲಿ ಆನೆ ನಿತ್ಯ ದರ್ಶನ ಪಡೆದು ಹೋಗುತ್ತಿರುವುದು ಎಲ್ಲರ ಅಚ್ಚರಿಗೆ ಕಾರಣವಾಗಿರುವುದಂತೂ ಸುಳ್ಳಲ್ಲ.

  • ಕುದಿಯುತ್ತಿರುವ ಎಣ್ಣೆಯಿಂದ ಕಜ್ಜಾಯವನ್ನ ಬರಿಗೈಯಲ್ಲಿ ತೆಗೆದ ಅರ್ಚಕ!

    ಕುದಿಯುತ್ತಿರುವ ಎಣ್ಣೆಯಿಂದ ಕಜ್ಜಾಯವನ್ನ ಬರಿಗೈಯಲ್ಲಿ ತೆಗೆದ ಅರ್ಚಕ!

    ಚಾಮರಾಜನಗರ: ಅರ್ಚಕರೊಬ್ಬರು ಕುದಿಯುತ್ತಿರುವ ಎಣ್ಣೆಯಲ್ಲಿ ಬೇಯುತ್ತಿರುವ ಕಜ್ಜಾಯವನ್ನು ಬರಿಗೈಯಲ್ಲಿ ತೆಗೆದಿದ್ದಾರೆ.

    ಈ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೆಗಾಲ ತಾಲೂಕಿನ ಲೊಕ್ಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ಅರ್ಚಕ ಕುದಿಯುತ್ತಿರುವ ಎಣ್ಣೆಯಲ್ಲಿ ಬೇಯುತ್ತಿರುವ ಕಜ್ಜಾಯವನ್ನು ಬರಿಗೈಯಲ್ಲಿ ತೆಗೆದು ಪ್ರಸಾದ ಎಂದು ಹೇಳಿ ಭಕ್ತರಿಗೆ ನೀಡುತ್ತಾರೆ.

    ಪ್ರತಿ ವರ್ಷ ಕಾರ್ತಿಕ ಮಾಸದ ಕೊನೆಯ ಸೋಮವಾರದಂದು ಈ ಆಚರಣೆ ನಡೆಯುತ್ತಿದ್ದು, ಇಂದು ಮುಂಜಾನೆ ಕೂಡ ನಡೆದಿದೆ.

    ಸಿದ್ದಪ್ಪಾಜಿಯ ಈ ಆಚರಣೆಯನ್ನು ಎಲ್ಲಾ ಧರ್ಮದವರು ಸೇರಿ ಆಚರಿಸುತ್ತಾರೆ. ಕಂಡಾಯ ಹೊತ್ತ ಅರ್ಚಕನಿಂದ ನಡೆದಿದ್ದು, ಇದನ್ನು ವೀಕ್ಷಿಸಲು ಸಾವಿರಾರು ಭಕ್ತರು ಆಗಮಿಸುತ್ತಾರೆ. ಸಿದ್ದಪ್ಪಾಜಿ ಮೆರವಣಿಗೆ ರಾತ್ರಿ ಇಡೀ ಗ್ರಾಮದಲ್ಲಿ ನಡೆಯಲಿದೆ.

  • ಬಾಬಾ ಭಕ್ತರೇ ಶಿರಡಿ ಪ್ರಸಾದ ತಿನ್ನೋ ಮುನ್ನ ಎಚ್ಚರ- ಈ ಸುದ್ದಿ ಓದಿ

    ಬಾಬಾ ಭಕ್ತರೇ ಶಿರಡಿ ಪ್ರಸಾದ ತಿನ್ನೋ ಮುನ್ನ ಎಚ್ಚರ- ಈ ಸುದ್ದಿ ಓದಿ

    ಬೆಂಗಳೂರು: ಶಿರಡಿ ಸಾಯಿಬಾಬಾನನ್ನು ನಂಬದ ಜೀವಗಳಿಲ್ಲ. ಬಾಬಾ ದರ್ಶನಕ್ಕೆ, ಅಲ್ಲಿನ ಪ್ರಸಾದ ತಿಂದರೆ ಬದುಕು ಪಾವನ ಅನ್ನೋ ನಂಬಿಕೆ ಕೋಟಿ ಭಕ್ತರದ್ದು. ಆದ್ರೇ ಈಗ ನಂಬಿಕೆಯ ಬುಡವೊಂದು ಅಲ್ಲಾಡುತ್ತಿದೆ. ಕೋಟಿ ಭಕ್ತರು ಬಾಬಾ ಪ್ರಸಾದ ಕಂಡ್ರೆ ಮಾರು ದೂರು ಓಡೋ ಪ್ರಮಾದವೊಂದು ನಡೆದು ಹೋಗಿದೆ.

    ಬಾಬಾ ಭಕ್ತರಾಗಿರುವ ಬೆಂಗಳೂರಿನ ಸದಾಶಿವನಗರದ ನಿವಾಸಿ ಪರಶುರಾಮ್ ಶಿರಡಿಗೆ ತೆರಳಿ ಅಲ್ಲಿಂದ ಮೂವತ್ತು ಪ್ಯಾಕೆಟ್ ಪ್ರಸಾದದ ಪೇಡಾವನ್ನು ಸನ್ನಿಧಿಯಿಂದ ಕಳೆದ ತಿಂಗಳು ತಂದಿದ್ದಾರೆ. ಬಾಬಾ ಪ್ರಸಾದ ತಿಂದ ತಕ್ಷಣ ಅವ್ರಿಗೆ ವಾಂತಿ, ಭೇದಿ, ಹೊಟ್ಟೆನೋವು ಶುರುವಾಗಿದೆ. ಕೂಡಲೇ ಪ್ರಸಾದವನ್ನ ಪರಿಶೀಲಿಸಿ ನೋಡಿದಾಗ ಪೇಡಾದಲ್ಲಿ ಕಪ್ಪು ಮೆಟಲ್‍ನಂತಹ ವಸ್ತು ಪತ್ತೆಯಾಗಿದೆ. ಸುಟ್ಟಾಗ ವಿಚಿತ್ರ ಪ್ಲಾಸ್ಟಿಕ್ ವಾಸನೆ ಬಂದಿದೆ. ಕೂಡಲೇ ಇದನ್ನು ರಾಮಯ್ಯ ಆಸ್ಪತ್ರೆಯ ಲ್ಯಾಬ್‍ಗೆ ತೆಗೆದುಕೊಂಡು ಹೋಗಿ ಪರೀಕ್ಷೆಗೆ ನೀಡಿದ್ದಾರೆ. ಈಗ ಲ್ಯಾಬ್‍ನಿಂದ ಊಹಿಸಲಾರದ ಬಾಬಾ ಪ್ರಸಾದದ ಅಸಲಿಯತ್ತು ಬಯಲಾಗಿದೆ.

    ಏನೇನಿದೆ ಪ್ರಸಾದದಲ್ಲಿ?: ಬಾಬಾ ಪ್ರಸಾದದಲ್ಲಿ ರಾಶಿರಾಶಿ ಬ್ಯಾಕ್ಟೀರಿಯಾ ಪತ್ತೆಯಾಗಿದೆ. ಅಷ್ಟೇ ಅಲ್ಲದೇ ಅತ್ಯಂತ ಅಪಾಯಕಾರಿಯಾದ ಸ್ಟೆಪಿಲೋಕಾಕಯ್ ಹಾಗೂ ಸೂಡಾಮೋನಸ್ ಅನ್ನುವ ಬ್ಯಾಡ್ ಬ್ಯಾಕ್ಟೀರಿಯಾ ಪತ್ತೆಯಾಗಿದೆ. ಸಾಮಾನ್ಯವಾಗಿ ಸೂಡಾಮೋನಸ್ ಗಾಯವಾಗಿರುವ, ಕೀವಾಗಿರುವ ಅಥವಾ ಹುಣ್ಣಾಗಿದ್ರೆ ಈ ಬ್ಯಾಕ್ಟೀರಿಯಾ ಇರುತ್ತೆ. ಇದು ಪ್ರಸಾದದಲ್ಲಿ ಕಂಡುಬಂದಿದೆ ಅಂದ್ರೆ ಪ್ರಸಾದ ತಯಾರಿಸುವ ವ್ಯಕ್ತಿ ವೈಯಕ್ತಿಕ ಸ್ವಚ್ಛತೆಯನ್ನು ಕಾಪಾಡಿಕೊಂಡಿಲ್ಲ. ಅದ್ರಿಂದ ಪ್ರಸಾದವೇ ವಿಷವಾಗಿ ಮಾರ್ಪಾಡಾಗಿದೆ ಅನ್ನೋ ಶಾಕಿಂಗ್ ಸುದ್ದಿ ಲ್ಯಾಬ್ ರಿಪೋರ್ಟ್‍ನಲ್ಲಿ ಬಯಲಾಗಿದೆ. ಇದರ ಜೊತೆಗೆ ಪಾಲ್ಮೇಟಿಕ್ ಆ್ಯಸಿಡ್ ಅಂಶವೂ ಇದೆ. ಪೇಡಾಗೆ ಹಾಲು ಮಿಕ್ಸ್ ಮಾಡೋ ಬದಲು ವನಸ್ಪತಿ ಎಣ್ಣೆ ಬಳಕೆ ಮಾಡಿದ್ದು ಇನ್ನೊಂದು ಅನಾಹುತಕ್ಕೆ ಕಾರಣವಾಗಿದೆ.

    ಈ ಪ್ರಸಾದ ತಿಂದ್ರೆ ಏನಾಗುತ್ತೆ?: ಈ ವಿಷಯುಕ್ತ, ಕಲಬೆರೆಕೆ ಪ್ರಸಾದ ತಿಂದ್ರೆ ಹೊಟ್ಟೆನೋವು, ವಾಂತಿ-ಬೇಧಿ, ಜ್ವರ ಬಾಯಿಯ ಹುಣ್ಣು ಸೇರಿದಂತೆ ಟೈಫಾಯ್ಡ್, ಜಾಂಡೀಸ್‍ನಂತಹ ಕಾಯಿಲೆ ಬರಲಿದೆ. ಇಲ್ಲಿ ಸಂಪೂರ್ಣವಾಗಿ ಆಹಾರ ಸುರಕ್ಷತೆ ಕಾಯ್ದೆಯನ್ನು ಉಲ್ಲಂಘನೆ ಮಾಡಲಾಗಿದೆ ಅಂತಾ ವೈದ್ಯರು ಹೇಳ್ತಾರೆ. ಇನ್ನು ಲ್ಯಾಬ್ ಟೆಸ್ಟ್‍ಗೆ ಕೊಟ್ಟ ಸಾಯಿ ಭಕ್ತರಂತೂ ಈ ರಿಪೋರ್ಟ್‍ನಿಂದ ಕಂಗಾಲಾಗಿದ್ದಾರೆ.