Tag: Prashant Jagdev

  • ಒಡಿಶಾದಲ್ಲಿ ಇವಿಎಂ ಧ್ವಂಸ ಆರೋಪ – ಬಿಜೆಪಿ ಅಭ್ಯರ್ಥಿ ಅರೆಸ್ಟ್

    ಒಡಿಶಾದಲ್ಲಿ ಇವಿಎಂ ಧ್ವಂಸ ಆರೋಪ – ಬಿಜೆಪಿ ಅಭ್ಯರ್ಥಿ ಅರೆಸ್ಟ್

    ಭುವನೇಶ್ವರ: ಒಡಿಶಾದ (Odisha) ಖುರ್ದಾ ಜಿಲ್ಲೆಯಲ್ಲಿ ಇವಿಎಂ (EVM) ಧ್ವಂಸಗೊಳಿಸಿದ ಆರೋಪದ ಮೇಲೆ ಬಿಜೆಪಿ ಅಭ್ಯರ್ಥಿ (BJP Candidate) ಹಾಗೂ ಶಾಸಕ ಪ್ರಶಾಂತ್ ಜಗದೇವ್ (Prashant Jagdev) ಅವರನ್ನು ಪೊಲೀಸರು ಬಂಧಿಸಿದ್ದಾರೆ.

    ಪ್ರಶಾಂತ್ ಜಗದೇವ್ ತಮ್ಮ ಪತ್ನಿಯೊಂದಿಗೆ ಮತ ಚಲಾಯಿಸಲು ಬೇಗನಿಯಾ ವಿಧಾನಸಭಾ ಕ್ಷೇತ್ರದ ಬೋಲಗಾಡ್ ಬ್ಲಾಕ್‍ನ ಕೌನ್ರಿಪಟ್ನಾದ ಬೂತ್‍ಗೆ ತೆರಳಿದ್ದರು. ಈ ವೇಳೆ ಇವಿಎಂ ತಾಂತ್ರಿಕ ದೋಷದಿಂದ ಕೆಲ ಸಮಯ ಅವರು ಕಾಯಬೇಕಾಗಿ ಬಂತು. ಇದರಿಂದ ಕೋಪಗೊಂಡ ಅವರು, ಚುನಾವಣಾ ಸಿಬ್ಬಂದಿ ಮೇಲೆ ರೇಗಿದ್ದಾರೆ. ಬಳಿಕ ಇವಿಎಂ ಅನ್ನು ಎಳೆದಾಡಿದ್ದು, ಅದು ಕೆಳಗೆ ಬಿದ್ದು ಒಡೆದು ಹೋಗಿದೆ. ಇದನ್ನೂ ಓದಿ: ಉಡುಪಿ ಹೈವೇಯಲ್ಲಿ ತಲ್ವಾರ್ ಹಿಡಿದು ಅಟ್ಟಹಾಸ – ಗರುಡ ಗ್ಯಾಂಗ್‍ನ 6 ಪುಡಿ ರೌಡಿಗಳು ಅರೆಸ್ಟ್

    ಈ ಸಂಬಂಧ ಚುನಾವಣಾ ಸಿಬ್ಬಂದಿ ದೂರು ನೀಡಿದ್ದು, ಪ್ರಜಾಪ್ರತಿನಿಧಿ ಕಾಯ್ದೆಯ ಜೊತೆಗೆ ಐಪಿಸಿಯ ವಿವಿಧ ಸೆಕ್ಷನ್‍ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದ್ದು, ಖುರ್ದಾ ಜೈಲಿನಲ್ಲಿ ಇರಿಸಲಾಗಿದೆ. ಘಟನೆಯ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುವಂತೆ ಜಿಲ್ಲಾ ಚುನಾವಣಾಧಿಕಾರಿಗಳಿಗೆ (ಡಿಇಒ) ಪೊಲೀಸರು ಮನವಿ ಮಾಡಿದ್ದಾರೆ.

    ಪ್ರಶಾಂತ್ ಜಗದೇವ್ ಬಂಧನದ ಬೆನ್ನಲ್ಲೇ ಅವರ ವಿರುದ್ಧದ ಆರೋಪಗಳು ರಾಜಕೀಯ ಪ್ರೇರಿತ ಎಂದು ಬಿಜೆಪಿ (BJP) ಮುಖಂಡರು ಆರೋಪಿಸಿದ್ದಾರೆ.

    ಖುರ್ದಾ ವಿಧಾನಸಭಾ ಕ್ಷೇತ್ರದಿಂದ ಈ ಬಾರಿ ಪ್ರಶಾಂತ್ ಜಗದೇವ್ ಕಣಕ್ಕಿಳಿದಿದ್ದಾರೆ. ಅವರು ಮತದಾರರಾಗಿ ನೋಂದಾಯಿಸಿಕೊಂಡಿರುವ ಬೇಗನಿಯಾ ವಿಧಾನಸಭಾ ಕ್ಷೇತ್ರದ ಬೋಲಗಾಡ್ ಬ್ಲಾಕ್‍ನ ಕೌನ್ರಿಪಟ್ನಾದ ಬೂತ್ 114 ರಲ್ಲಿ ಶನಿವಾರ ಈ ಘಟನೆ ನಡೆದಿತ್ತು. ಇದನ್ನೂ ಓದಿ: ಚನ್ನಗಿರಿ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ಪ್ರಕರಣ – ಸಿಐಡಿಗೆ ವರ್ಗಾವಣೆ

  • 22 ಮಂದಿ ಮೇಲೆ ಕಾರು ಹರಿಸಿದ ಅಮಾನತಾಗಿದ್ದ ಶಾಸಕ- ಮುಖ, ಮೂತಿ ನೋಡದೆ ಸ್ಥಳೀಯರಿಂದ ಗೂಸಾ

    22 ಮಂದಿ ಮೇಲೆ ಕಾರು ಹರಿಸಿದ ಅಮಾನತಾಗಿದ್ದ ಶಾಸಕ- ಮುಖ, ಮೂತಿ ನೋಡದೆ ಸ್ಥಳೀಯರಿಂದ ಗೂಸಾ

    ಭುವನೇಶ್ವರ: ಶಾಸಕನೊಬ್ಬ ಜನರ ಮೇಲೆ ಕಾರು ಹರಿಸಿ 22 ಮಂದಿಗೆ ಗಾಯಗೊಂಡಿದ್ದಾರೆ. ಈ ವೇಳೆ ಸ್ಥಳೀಯರು ಒಟ್ಟಾಗಿ ಶಾಸಕನನ್ನು ಹಿಗ್ಗಾಮುಗ್ಗ ಥಳಿಸಿರುವ ಘಟನೆ ಕೊರ್ದಾ ಜಿಲ್ಲೆಯ ಬಾನ್‍ಪುರ್ ಬ್ಲಾಕ್ ಕಛೇರಿಯ ಬಳಿ ನಡೆದಿದೆ.

    ಚಿಲಿಕಾ ಶಾಸಕ ಪ್ರಶಾಂತ್ ಜಗದೇವ್ ತಮ್ಮ ವಾಹನವನ್ನು ಜನರ ಮೇಲೆ ಹರಿಸಿದ್ದಾರೆ. ಈ ವೇಳೆ ಏಳು ಮಂದಿ ಪೊಲೀಸ್ ಸಿಬ್ಬಂದಿ ಸೇರಿದಂತೆ ಕನಿಷ್ಠ 22 ಜನರು ಗಾಯಗೊಂಡಿದ್ದಾರೆ.

    ನಡೆದಿದ್ದೇನು?: ಬಾನ್‍ಪುರ ಬ್ಲಾಕ್ ಕಚೇರಿ ಬಳಿ ಬ್ಲಾಕ್ ಅಧ್ಯಕ್ಷರ ಆಯ್ಕೆ ನಡೆಯುತ್ತಿತ್ತು. ಈ ವೇಳೆ ಬ್ಲಾಕ್ ಕಚೇರಿಯಲ್ಲಿ ಹಲವರು ಜಮಾಯಿಸಿದ್ದರು. ಈ ವೇಳೆ ಪ್ರಶಾಂತ್ ಜಗದೇವ್ ಜನರ ಮೇಲೆ ವಾಹನ ಹರಿಸಿದ್ದಾನೆ. ಗಾಯಾಳುಗಳನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಘಟನೆಯ ನಂತರ ಆಕ್ರೋಶಗೊಂಡ ಸ್ಥಳೀಯರು ಪ್ರಶಾಂತ್ ಜಗದೇಬ್ ಮೇಲೆ ಹಲ್ಲೆ ನಡೆಸಿದ್ದು, ಜಗದೀಶ್ ಕೂಡ ಗಂಭೀರವಾಗಿ ಗಾಯಗೊಂಡಿದ್ದಾರೆ. ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಖೋರ್ಧಾ ಪೊಲೀಸ್ ವರಿಷ್ಠಾಧಿಕಾರಿ ಅಲೆಖ್ ಚಂದ್ರ ಪಾಹಿ ತಿಳಿಸಿದ್ದಾರೆ.

    ಬಿಜೆಪಿ ಪ್ರಧಾನ ಕಾರ್ಯದರ್ಶಿ ಪ್ರುತಿರಾಜ್ ಹರಿಚಂದನ್ ಘಟನೆಯನ್ನು ತೀವ್ರವಾಗಿ ಖಂಡಿಸಿದ್ದು, ಇದೊಂದು ಅಮಾನವೀಯ ಕೃತ್ಯ. ಇಂತಹ ಶಾಸಕರಿಗೆ ಜೈಲು ಶಿಕ್ಷೆ ವಿಧಿಸಬೇಕು ಎಂದು ಹೇಳಿದ್ದಾರೆ. ಇದನ್ನೂ ಓದಿ: ಭಾರತದ ರಫೇಲ್ ಯುದ್ಧ ವಿಮಾನ ಎದುರಿಸಲು ಚೀನಾದ ಜೆ-10ಸಿ ಫೈಟರ್ ಜೆಟ್ ಖರೀದಿಸಿದ ಪಾಕಿಸ್ತಾನ

    ಕಳೆದ ವರ್ಷ ಅಕ್ಟೋಬರ್‌ನಲ್ಲಿ ಬಿಜೆಪಿ ನಾಯಕರೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ, ಜಗದೇವ್ ಅವರನ್ನು ಬಿಜು ಜನತಾ ದಳದಿಂದ ಅಮಾನತುಗೊಳಿಸಲಾಗಿತ್ತು. ಇದೇ ಘಟನೆಯಲ್ಲಿ ಆತನನ್ನು ಬಂಧಿಸಲಾಗಿತ್ತು. ಇದೀಗ ಜನರ ಮೇಲೆ ಕಾರು ಹರಿಸಿ ಜನರಿಂದ ಥಳಿತಕ್ಕೊಳಗಾಗಿದ್ದಾರೆ.