Tag: Prashant Neal

  • ಕೆಜಿಎಫ್ 2 ಐವತ್ತನೇ ದಿನದ ಸಂಭ್ರಮದಲ್ಲಿ ತೆಲುಗು ನಟ ಪ್ರಭಾಸ್

    ಕೆಜಿಎಫ್ 2 ಐವತ್ತನೇ ದಿನದ ಸಂಭ್ರಮದಲ್ಲಿ ತೆಲುಗು ನಟ ಪ್ರಭಾಸ್

    ಶ್ ಮತ್ತು ಪ್ರಶಾಂತ್ ನೀಲ್ ಕಾಂಬಿನೇಷನ್ ನ ಕೆಜಿಎಫ್ 2 ಸಿನಿಮಾ ಐವತ್ತು ದಿನಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ಚಿತ್ರತಂಡವು ಭರ್ಜರಿ ಪಾರ್ಟಿಯೊಂದನ್ನು ಆಯೋಜನೆ ಮಾಡಿತ್ತು. ಈ ಸಂತೋಷ ಕೂಟದಲ್ಲಿ ತೆಲುಗಿನ ಹೆಸರಾಂತ ನಟ ಪ್ರಭಾಸ್ ಕೂಡ ಆಗಮಿಸಿದ್ದರು. ಪ್ರಶಾಂತ್ ನೀಲ್ ನಿರ್ದೇಶನದ ಸಲಾರ್ ಸಿನಿಮಾದಲ್ಲಿ ನಟಿಸುತ್ತಿರುವ ಪ್ರಭಾಸ್ ಬೆಂಗಳೂರಿಗೆ ಬಂದು ಹೊಂಬಾಳೆ ಫಿಲ್ಮ್ಸ್ ಸದಸ್ಯರಿಗೆ ಶುಭಾಶಯ ಹೇಳಿದರು. ಇದನ್ನೂ ಓದಿ : Exclusive : ರಾಷ್ಟ್ರ ಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್ ಮೊದಲ ವರ್ಷದ ಪುಣ್ಯಸ್ಮರಣೆ : ಪುತ್ಥಳಿ ಅನಾವರಣ

    ಐವತ್ತು ದಿನಗಳ ಈ ಸಂಭ್ರಮವನ್ನು ದೊಡ್ಡಮಟ್ಟದಲ್ಲಿ ಮಾಡುತ್ತಾರೆ ಎಂಬ ನಿರೀಕ್ಷೆ ಅಭಿಮಾನಿಗಳಿಗೆ ಇತ್ತು. ಆದರೆ, ಸಿನಿಮಾ ತಂಡ ತಮಗೆ ಮಾತ್ರ ಸೀಮಿತ ಮಾಡಿಕೊಂಡು ಕೇಕ್ ಕತ್ತರಿಸುವ ಮೂಲಕ ಸಂಭ್ರಮ ಆಚರಿಸಿದೆ. ಐವತ್ತು ದಿನಗಳ ಸಂಭ್ರಮಕ್ಕೆ ಯಶ್, ನಿರ್ದೇಶಕ ಪ್ರಶಾಂತ್ ನೀಲ್, ನಿರ್ಮಾಪಕ ವಿಜಯ ಕಿರಗಂದೂರು ಸೇರಿದಂತೆ ಚಿತ್ರ ತಂಡ ಭಾಗಿ ಆಗಿತ್ತು. ಇದನ್ನೂ ಓದಿ : ಕೆಜಿಎಫ್ 2 ಐವತ್ತು ದಿನ ಪೂರೈಸಿದ ಬೆನ್ನಲ್ಲೆ ಮತ್ತೊಂದು ಹೊಸ ಸಿನಿಮಾ ರಿಲೀಸ್ ಘೋಷಣೆ

    400ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಐವತ್ತು ದಿನ ಪೂರೈಸಿರುವ ಕೆಜಿಎಫ್ 2 ಈಗಾಗಲೇ ಸಾವಿರಾರು ಕೋಟಿ ರೂಪಾಯಿ ಗಳಿಕೆ ಮಾಡಿದೆ. ಬಾಕ್ಸ್ ಆಫೀಸಿನಲ್ಲಿ ದಾಖಲೆ ಬರೆದಿದೆ. ಬಾಲಿವುಡ್ ಮಂದಿಯನ್ನು ನಿದ್ದೆಗೆಡಿಸುವಂತೆ ಮಾಡಿದೆ. ಈಗಲೂ ಒಳ್ಳೆಯ ಗಳಿಕೆಯಲ್ಲೇ ಚಿತ್ರ ಸಾಗುತ್ತಿದೆ. ಬಹುಶಃ ನೂರು ದಿನಗಳನ್ನು ಪೂರೈಸಿದಾಗ ದೊಡ್ಡ ಮಟ್ಟದಲ್ಲಿ ಸಂಭ್ರಮಾಚಾರಣೆ ಮಾಡಬಹುದು ಎಂಬ ನಿರೀಕ್ಷೆ ಅಭಿಮಾನಿಗಳದ್ದು.

  • ‘ಕೆಜಿಎಫ್ 2’ ರಾಕಿಭಾಯ್ ಪ್ರೇರಣೆಯಿಂದ ಆಸ್ಪತ್ರೆ ಸೇರಿದ 15 ವರ್ಷದ ಬಾಲಕ

    ‘ಕೆಜಿಎಫ್ 2’ ರಾಕಿಭಾಯ್ ಪ್ರೇರಣೆಯಿಂದ ಆಸ್ಪತ್ರೆ ಸೇರಿದ 15 ವರ್ಷದ ಬಾಲಕ

    ಸಿನಿಮಾಗಳಿಂದ ಯಾರು, ಯಾವ ರೀತಿಯ ಪ್ರೇರಣೆ ಪಡೆಯುತ್ತಾರೋ ಗೊತ್ತಿಲ್ಲ. ಆದರೆ, ಹೈದರಾಬಾದ್ ನ ಹುಡುಗನೊಬ್ಬ ಕೆಜಿಎಫ್ 2 ಸಿನಿಮಾದ ರಾಕಿಭಾಯ್ ಪ್ರೇರಣೆ ಪಡೆದು ಆಸ್ಪತ್ರೆ ಸೇರಿದ್ದಾನೆ. ಅವನ ಈ ಹುಚ್ಚಾಟಕ್ಕೆ ಕುಟುಂಬ ಆತಂಕ ಪಡುವಂತಾಗಿದೆ. ಇದನ್ನೂ ಓದಿ : ಪ್ರಭುದೇವ್ ನಟನೆಯ ಪ್ಯಾನ್ ಇಂಡಿಯಾ ಸಿನಿಮಾಗೆ ಸಂದೇಶ್ ನಾಗರಾಜ್ ನಿರ್ಮಾಪಕ

    ಕೆಜಿಎಫ್ 2 ಸಿನಿಮಾದಲ್ಲಿ ರಾಕಿಭಾಯ್, ಪ್ಯಾಕೆಟ್ ಗಟ್ಟಲೆ ಸಿಗರೇಟು ಸೇದುತ್ತಾನೆ, ಒಂದು ರೀತಿಯಲ್ಲಿ ಉಗಿಬಂಡೆ ಹೋದಂತೆ ಒಂದರ ಮೇಲೊಂದು ಸಿಗರೇಟು ಹಚ್ಚುತ್ತಾನೆ. ಇದನ್ನೇ ಮಾದರಿಯನ್ನಾಗಿ ತಗೆದುಕೊಂಡ  ಆ ಹುಡುಗ ಫುಲ್ ಪ್ಯಾಕ್ ಸಿಗರೇಟು ಸೇದಿದ್ದಾನೆ. ಪರಿಣಾಮ ತೀವ್ರ ಗಂಟಲು ನೋವು ಮತ್ತು ಕೆಮ್ಮು ಕಾಣಿಸಿಕೊಂಡಿದೆ. ವಿಷಯ ತಿಳಿದ ಪಾಲಕರು ಅವನನ್ನು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸುತ್ತಿದ್ದಾರೆ. ಇದನ್ನೂ ಓದಿ : ಅಕ್ಟೋಬರ್ 3ಕ್ಕೆ ಅಭಿಷೇಕ್ ಅಂಬರೀಶ್ ಹೊಸ ಸಿನಿಮಾಗೆ ಮುಹೂರ್ತ

    ಅಂದಹಾಗೆ ಈ ಹುಡುಗ ಕೆಜಿಎಫ್ 2 ಸಿನಿಮಾವನ್ನು ಮೂರು ಬಾರಿ ನೋಡಿದ್ದಾನಂತೆ. ಥಿಯೇಟರ್ ನಿಂದ ಆಚೆ ಬರುತ್ತಿದ್ದಂತೆಯೇ ಥೇಟ್ ರಾಕಿಭಾಯ್ ತರಹ ಆಡುತ್ತಿದ್ದನಂತೆ. ಅದು ಅತಿರೇಕಕ್ಕೆ ಹೋಗಿ ಈಗ ಆಸ್ಪತ್ರೆ ಸೇರುವಂತಾಗಿದೆ. ಮಗನಿಗೆ ಚಿಕಿತ್ಸೆ ಕೊಡಿಸಿರುವ ಪಾಲಕರು, ಈ ರೀತಿ ಯಾರೂ ಮಾಡಬೇಡಿ ಎಂದು ಮನವಿ ಮಾಡಿಕೊಂಡಿದ್ದಾರೆ. ಇದನ್ನೂ ಓದಿ : ‘ಮಾ ಇಷ್ಟಂ’ ಸಿನಿಮಾಗೆ ತಡೆಯಾಜ್ಞೆ ತಂದವರ ವಿರುದ್ಧವೇ ನಕಲಿ ಸಹಿ ದೂರು ನೀಡಿದ ವರ್ಮಾ

    ಈ ವಿಷಯ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದಂತೆಯೇ ಈ ಕುರಿತು ಪರ ವಿರೋಧ ಚರ್ಚೆ ಶುರುವಾಗಿದೆ. ಸಿನಿಮಾ ನೋಡಿ ಈ ರೀತಿ ಮಾಡುವುದಾದರೆ, ಅದೆಷ್ಟೋ ಸಿನಿಮಾಗಳು ಸಮಾಜಕ್ಕೆ ಒಳ್ಳೆಯ ಸಂದೇಶ ನೀಡಿವೆ. ಅದರಲ್ಲೂ ಡಾ.ರಾಜ್ ಕುಮಾರ್ ಅವರ ಬಂಗಾರದ ಮನುಷ್ಯ, ಸಮಾಜಕ್ಕೆ ನೀಡಿದ ಸಂದೇಶ ಎಂತಹದ್ದು ಅಂತ ಎಲ್ಲರಿಗೂ ಗೊತ್ತಿದೆ. ಆದರೆ, ಯಾರೂ ಬಂಗಾರದ ಮನುಷ್ಯ ಆಗಲಿಲ್ಲ ಎಂದು ಕಾಮೆಂಟ್ ಮಾಡಿದ್ದಾರೆ.

  • ಯಶ್ ಹೊಸ ಚಿತ್ರದ ಬಗ್ಗೆ ಸುಳಿವು ಕೊಟ್ಟ ಹೊಂಬಾಳೆ ಫಿಲ್ಮ್ಸ್ ವಿಜಯ್ ಕಿರಗಂದೂರ್

    ಯಶ್ ಹೊಸ ಚಿತ್ರದ ಬಗ್ಗೆ ಸುಳಿವು ಕೊಟ್ಟ ಹೊಂಬಾಳೆ ಫಿಲ್ಮ್ಸ್ ವಿಜಯ್ ಕಿರಗಂದೂರ್

    ಕೆಜಿಎಫ್ 3 ಸಿನಿಮಾದ ಬಗ್ಗೆ ಕಳೆದ ಒಂದೂವರೆ ತಿಂಗಳಿಂದ ಭಾರೀ ಸುದ್ದಿಯಾಗುತ್ತಿದೆ. ಈ ಸಿನಿಮಾದ ಮುಹೂರ್ತ ಯಾವಾಗ? ಯಾರೆಲ್ಲ ಈ ಚಿತ್ರದಲ್ಲಿ ಇರಲಿದ್ದಾರೆ? ಎಷ್ಟೆಲ್ಲ ಭಾಷೆಗಳಲ್ಲಿ ಮೂಡಿ ಬರಲಿದೆ? ಬಜೆಟ್ ಎಷ್ಟು? ಹೀಗೆ ನಾನಾ ರೀತಿಯ ಚರ್ಚೆಗಳು ನಡೆದಿವೆ. ಅಲ್ಲದೇ, ರಾಣಾ ದುಗ್ಗುಬಾಟಿ, ಹೃತಿಕ್ ರೋಷನ್ ಸೇರಿದಂತೆ ಹಲವು ಹೆಸರುಗಳು ಕೂಡ ತಾರಾಗಣದಲ್ಲಿ ಕೇಳಿ ಬಂದಿತ್ತು. ಈ ವರ್ಷವೇ ಚಿತ್ರಕ್ಕೆ ಮುಹೂರ್ತ ಎಂದು ಸುದ್ದಿಯಾಗಿತ್ತು. ಇದನ್ನೂ ಓದಿ : 17 ವರ್ಷ ಲವ್, 2 ಮಕ್ಕಳಾದ ನಂತರ ಮದುವೆಯಾದ ನಿರ್ದೇಶಕ ಹನ್ಸಲ್ ಮೆಹ್ತಾ, ಸಫೀನಾ ಹುಸೇನ್

    ಹೊಂಬಾಳೆ ಫಿಲ್ಮ್ಸ್ ಮಾಲೀಕ, ನಿರ್ಮಾಪಕ ವಿಜಯ್ ಕಿರಂಗದೂರ್ ಅವರೇ ಮಾಧ್ಯಮಗಳ ಜೊತೆ ಮಾತನಾಡಿ, ಅತೀ ಶೀಘ್ರದಲ್ಲೇ ಕೆಜಿಎಫ್ 3 ಸಿನಿಮಾ ಶುರುವಾಗಲಿದೆ ಎಂದು ಹೇಳಿರುವ ಸುದ್ದಿಯೂ ಕೂಡ ಪ್ರಕಟವಾಯಿತು. ಕೆಜಿಎಫ್ 3 ಸಿನಿಮಾದಲ್ಲಿ ಯಶ್ ಇರುತ್ತಾರಾ? ಅಥವಾ ಅವರ ಪಾತ್ರ ಇರುತ್ತಾ ಎನ್ನುವಲ್ಲಿಗೆ ಸುದ್ದಿ ಆಯಿತು. ಆನಂತರ ಆದ ಲೆಕ್ಕಾಚಾರವೇ ಬೇರೆ. ಈ ಎಲ್ಲದರ ಕುರಿತು ವಿಜಯ ಕಿರಗಂದೂರು ಮತ್ತೆ ಮಾತನಾಡಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿದೆ. ಇದನ್ನೂ ಓದಿ : ಧನುಶ್ ನಟನೆಯ ಹಾಲಿವುಡ್ ಸಿನಿಮಾದ ಟ್ರೇಲರ್ ರಿಲೀಸ್ : ಎಲ್ಲಿದ್ದಾರೆ ಧನುಶ್?

    ಕೆಜಿಎಫ್ 3 ಸಿನಿಮಾ ಸದ್ಯಕ್ಕಂತೂ ಇಲ್ಲವೆಂದು ವಿಜಯ್ ಕಿರಂಗದೂರು ಹೇಳಿದ್ದಾರೆ ಎನ್ನುವ ಸುದ್ದಿಯಿದೆ. ಅವರು ಸಲಾರ್ ಸೇರಿದಂತೆ ಹಲವು ಚಿತ್ರಗಳಲ್ಲಿ ಬ್ಯುಸಿಯಾಗಿದ್ದಾರೆ. ಅಲ್ಲದೇ, ಸಲಾರ್ ಚಿತ್ರದಲ್ಲಿ ಪ್ರಶಾಂತ್ ನೀಲ್ ಕೂಡ ತೊಡಗಿಕೊಂಡಿದ್ದರಿಂದ ಮತ್ತು ಯಶ್ ಕೂಡ ತಮ್ಮ ಹೊಸ ಸಿನಿಮಾದ ಕೆಲಸದಲ್ಲಿ ಬ್ಯುಸಿಯಾಗಿದ್ದರಿಂದ ಸದ್ಯಕ್ಕಂತೂ ಕೆಜಿಎಫ್ 3 ಸಿನಿಮಾ ಆಗುವುದಿಲ್ಲ ಎಂದಿದ್ದಾರೆ. ಈ ಮೂಲಕ ಯಶ್ ಅವರು ಹೊಸ ಸಿನಿಮಾದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ ಎಂದು ಬ್ರೇಕಿಂಗ್ ನ್ಯೂಸ್ ನೀಡಿದ್ದಾರೆ. ಇದನ್ನೂ ಓದಿ : ಕನ್ನಡದ ಖ್ಯಾತ ನಟಿಯೊಬ್ಬಳು ನಿರ್ದೇಶಕನನ್ನೇ ಮಂಚಕ್ಕೆ ಕರೆದ ಕಥೆಗೆ ಮೆಗಾ ಟ್ವಿಸ್ಟ್

    ಯಶ್ ನಟನೆಯ ಹೊಸ ಸಿನಿಮಾವನ್ನು ಯಾರು ಮಾಡುತ್ತಾರೆ? ನಿರ್ಮಾಪಕರು ಯಾರು? ಹೀಗೆ ಇತ್ಯಾದಿ ವಿಷಯಗಳನ್ನು ಹೇಳದೇ ಇದ್ದರೂ, ಯಶ್ ಹೊಸ ಸಿನಿಮಾ ಸದ್ಯದಲ್ಲೇ ಮುಹೂರ್ತ ಕಾಣಲಿದೆ ಎನ್ನುವ ಸುಳಿವಂತೂ ವಿಜಯ್ ಅವರು ನೀಡಿದ್ದಾರೆ. ಹೀಗಾಗಿ ಯಶ್ ಹೊಸ ಸಿನಿಮಾ ಸದ್ಯದಲ್ಲೇ ಪಕ್ಕಾ ಎನ್ನುವುದು ಖುಷಿ ವಿಚಾರ.

  • ಸದ್ದಿಲ್ಲದೇ ಶುರುವಾಯ್ತು ಪ್ರಶಾಂತ್ ನೀಲ್ ನಿರ್ದೇಶನದ ಸಿನಿಮಾ : ಮೊದಲ ದಿನವೇ ಫೋಟೋ ಲೀಕ್

    ಸದ್ದಿಲ್ಲದೇ ಶುರುವಾಯ್ತು ಪ್ರಶಾಂತ್ ನೀಲ್ ನಿರ್ದೇಶನದ ಸಿನಿಮಾ : ಮೊದಲ ದಿನವೇ ಫೋಟೋ ಲೀಕ್

    ಪ್ರಶಾಂತ್ ನೀಲ್ ನಿರ್ದೇಶನದ ಕೆಜಿಎಫ್ 2 ಸಿನಿಮಾ ಯಶಸ್ಸಿ ನಂತರ ಮತ್ತೆ ನಿರ್ದೇಶನಕ್ಕೆ ಪ್ರಶಾಂತ್ ವಾಪಸ್ಸಾಗಿದ್ದರು. ಕೆಜಿಎಫ್ 2 ಸಿನಿಮಾ ರಿಲೀಸ್ ಕಾರಣದಿಂದಾಗಿ ನಿಲ್ಲಿಸಿದ್ದ ಸಲಾರ್ ಸಿನಿಮಾಗೆ ಅವರು ಮತ್ತೆ ಚಾಲನೆ ನೀಡಿದ್ದು, ಸದ್ದಿಲ್ಲದೇ ಶೂಟಿಂಗ್ ಶುರು ಮಾಡಿದ್ದಾರೆ. ಚಿತ್ರೀಕರಣ ಪ್ರಾರಂಭವಾದ ಮೊದಲ ದಿನವೇ ಸಿನಿಮಾದ ಫೋಟೋವೊಂದು ಲೀಕ್ ಆಗಿದೆ. ಇದನ್ನೂ ಓದಿ : ಧನುಶ್ ನಟನೆಯ ಹಾಲಿವುಡ್ ಸಿನಿಮಾದ ಟ್ರೇಲರ್ ರಿಲೀಸ್ : ಎಲ್ಲಿದ್ದಾರೆ ಧನುಶ್?

    ತಮ್ಮ ಸಿನಿಮಾದ ಯಾವುದೇ ಫೋಟೋ ಅಥವಾ ವಿಡಿಯೋ ಲೀಕ್ ಆಗದಂತೆ ಈವರೆಗೂ ಪ್ರಶಾಂತ್ ನೀಲ್ ಗೌಪ್ಯತೆಯನ್ನು ಕಾಪಾಡಿಕೊಂಡು ಬಂದಿದ್ದಾರೆ. ಆದರೆ, ಕೆಲವೊಂದ ಸಲ ಎಡವಟ್ಟುಗಳು ಆಗುತ್ತವೆ. ಈ ಬಾರಿ ಅದೇ ಆಗಿದೆ. ಚಿತ್ರೀಕರಣದಲ್ಲಿ ಪಾಲ್ಗೊಳ್ಳಲು ಬಂದ ನಟ ಪ್ರಭಾಸ್ ಅವರ ಫೋಟೋ ಮತ್ತು ಸೆಟ್ ಹಾಕಿರುವ ಫೋಟೋಗಳು ಲೀಕ್ ಆಗಿವೆ. ಅವುಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಇದನ್ನೂ ಓದಿ : ಕೆಜಿಎಫ್ 2 ಪ್ರದರ್ಶನಕ್ಕೆ ತಡೆ ಕೋರಿ ಸಲ್ಲಿಸಿದ್ದ ಅರ್ಜಿ ವಜಾ

    ಈ ಸಿನಿಮಾದ ಶೂಟಿಂಗ್ ಗಾಗಿ ಪ್ರಭಾಸ್ ಒಂದಷ್ಟು ತೂಕ ಹೆಚ್ಚಿಸಿಕೊಂಡಿದ್ದಾರೆ. ಇದನ್ನು ತೀರಾ ಸಿಕ್ರೇಟ್ ಆಗಿ ಇಟ್ಟು ಶೂಟಿಂಗ್ ಮಾಡಲಾಗುತ್ತಿತ್ತು. ಯಾರೋ ಚಿತ್ರೀಕರಣದ ಸ್ಥಳದಲ್ಲಿ ಪ್ರಭಾಸ್ ಇರುವ ಫೋಟೋವನ್ನು ತೆಗೆದು ಸೋಷಿಯಲ್ ಮೀಡಿಯಾದಲ್ಲಿ ಹಾಕಿದ್ದಾರೆ. ಅದನ್ನು ಕಂಡು ಪ್ರಭಾಸ್ ಅಭಿಮಾನಿಗಳು ಥ್ರಿಲ್ ಆಗಿದ್ದಾರೆ. ಇದನ್ನೂ ಓದಿ : ತೆರೆಯ ಮೇಲೂ ಒಂದಾದ ಮಿಲನಾ ನಾಗರಾಜ್ ಮತ್ತು ಡಾರ್ಲಿಂಗ್ ಕೃಷ್ಣ

    ಅಂದುಕೊಂಡಂತೆ ಆದರೆ, ಈ ವರ್ಷದ ಕೊನೆಯಲ್ಲಿ ಸಿನಿಮಾದ ಬಹುತೇಕ ಶೂಟಿಂಗ್ ಮುಗಿಯಲಿದೆ. ಮುಂದಿನ ವರ್ಷ ಮೊದಲ ಅಥವಾ ಎರಡನೇ ತಿಂಗಳಲ್ಲಿ ಸಲಾರ್ ಅನ್ನು ತೆರೆಗೆ ತರುವ ಪ್ಲ್ಯಾನ್ ಚಿತ್ರತಂಡದ್ದು. ಹಾಗಾಗಿಯೇ ಸಿಕ್ಕಾಪಟ್ಟೆ ಫಾಸ್ಟ್ ಆಗಿಯೇ ಶೂಟಿಂಗ್ ಮಾಡಲಾಗುತ್ತಿದೆ. ಚಿತ್ರತಂಡದ ಪ್ರಕಾರ ಅಕ್ಟೋಬರ್ ಹೊತ್ತಿಗೆ ಶೂಟಿಂಗ್ ಮುಗಿಯಬೇಕು. ನಂತರ ಪೋಸ್ಟ್ ಪ್ರೊಡಕ್ಷನ್ ಕೆಲಸ.

  • ಕೆಜಿಎಫ್ 2 ಪ್ರದರ್ಶನಕ್ಕೆ ತಡೆ ಕೋರಿ ಸಲ್ಲಿಸಿದ್ದ ಅರ್ಜಿ ವಜಾ

    ಕೆಜಿಎಫ್ 2 ಪ್ರದರ್ಶನಕ್ಕೆ ತಡೆ ಕೋರಿ ಸಲ್ಲಿಸಿದ್ದ ಅರ್ಜಿ ವಜಾ

    ಶ್ ಮತ್ತು ಪ್ರಶಾಂತ್ ನೀಲ್ ಕಾಂಬಿನೇಷನ್‌ನ ಕೆಜಿಎಫ್ 2 ಸಿನಿಮಾ ಐವತ್ತನೇ ದಿನದ ಪ್ರದರ್ಶನಕ್ಕೆ ಹತ್ತಿರವಾಗುತ್ತಿದೆ. ವಿಶ್ವದಾದ್ಯಂತ ಸಾವಿರಾರು ಚಿತ್ರಮಂದಿರಗಳಲ್ಲಿ ರಿಲೀಸ್ ಆಗಿ, ಭರ್ಜರಿ ಪ್ರದರ್ಶನ ಕೂಡ ಕಂಡಿದೆ. 1,200 ಕೋಟಿ ರೂಪಾಯಿಯನ್ನು ಬಾಕ್ಸ್ ಆಫೀಸಿನಲ್ಲಿ ದೋಚಿದೆ. ಇಂತಹ ಸಿನಿಮಾದಲ್ಲಿ ಧೂಮ್ರಪಾನಕ್ಕೆ ಹೆಚ್ಚಿನ ಪ್ರಾಧಾನ್ಯತೆ ನೀಡಲಾಗಿದ್ದು, ಅದರಿಂದ ಸಮಾಜದ ಮೇಲೆ ಕೆಟ್ಟ ಪರಿಣಾಮ ಬೀರಲಿದೆ. ಹಾಗಾಗಿ ಪ್ರದರ್ಶನಕ್ಕೆ ಅವಕಾಶ ನೀಡಬಾರದು ಎಂದು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿತ್ತು. ಇದನ್ನೂ ಓದಿ : ತೆರೆಯ ಮೇಲೂ ಒಂದಾದ ಮಿಲನಾ ನಾಗರಾಜ್ ಮತ್ತು ಡಾರ್ಲಿಂಗ್ ಕೃಷ್ಣ

    ಬೆಂಗಳೂರಿನ ಕ್ಯಾನ್ಸರ್ ರೋಗಿಗಳ ನೆರವು ಸಂಘವು ಹೈಕೋರ್ಟ್‌ಗೆ ‘ಕೆಜಿಎಫ್ 2’ ಸಿನಿಮಾವನ್ನು ಪ್ರದರ್ಶನಕ್ಕೆ ಅವಕಾಶ ನೀಡಬಾರದು ಎಂದು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆ ಮಾಡಲಾಗಿತ್ತು. ಇದೊಂದು ಸಮಾಜಿಕ ಕಳಕಳಿ ಇಲ್ಲದ ಸಿನಿಮಾ. ಧೂಮಪಾನವನ್ನು ವಿಜೃಂಭಿಸಲಾಗಿದೆ. ಇದರಿಂದಾಗಿ ಮಕ್ಕಳು ಮತ್ತು ಯುವಕರ ಮೇಲೆ ದುಷ್ಟಪರಿಣಾಮ ಬೀರಲಿದೆ ಎಂದು ಅರ್ಜಿಲಯಲ್ಲಿ ಉಲ್ಲೇಖಿಸಲಾಗಿತ್ತು. ಸಿನಿಮಾ ತಡೆ ಹಿಡಿದು, ಸೆನ್ಸಾರ್ ಮಂಡಳಿಯು ಕೊಟ್ಟಿರುವ ಯು/ಎ ಪ್ರಮಾಣ ಪತ್ರವನ್ನು ಹಿಂಪಡೆಯಬೇಕೆಂದು ಕೇಳಿತ್ತು. ಇದನ್ನೂ ಓದಿ: ಹೊಂಬಾಳೆ ಫಿಲ್ಮ್ಸ್ ನಿಂದ ಮತ್ತೆರಡು ಪ್ಯಾನ್ ಇಂಡಿಯಾ ಸಿನಿಮಾ

    ನ್ಯಾಯಮೂರ್ತಿಗಳಾದ ರಿತುರಾಜ್ ಅವಸ್ತಿ ನೇತೃತ್ವದ ವಿಭಾಗೀಯ ಪೀಠವು ಈ ಅರ್ಜಿ ವಿಚಾರಣೆಯನ್ನು ನಡೆಸಿತು. ಈ ಸಂದರ್ಭದಲ್ಲಿ ಸರ್ಕಾರದ ಪರ ವಿಜಯಕುಮಾರ್ ಅವರು ವಾದ ಮಂಡಿಸಿ, ‘ಈಗಾಗಲೇ ಸಿನಿಮಾ ರಿಲೀಸ್ ಆಗಿದೆ. ಪ್ರದರ್ಶನವನ್ನೂ ಕಾಣುತ್ತಿದೆ. ಹಾಗಾಗಿ ಅರ್ಜಿ ವಿಚಾರಣೆಯ ಮಾನ್ಯತೆ ಕಳೆದುಕೊಂಡಿದೆ’ ಎಂದು ವಾದ ಮಂಡಿಸಿದರು. ಈ ವಾದವನ್ನು ಆಲಿಸಿದ ಪೀಠ ಅರ್ಜಿಯನ್ನು ವಜಾ ಮಾಡಿದೆ.

  • ಯಶ್ ಆಸೆ ಈಡೇರಿಸುತ್ತಾರಾ ತಮಿಳಿನ ಖ್ಯಾತ ನಿರ್ದೇಶಕ ಶಂಕರ್

    ಯಶ್ ಆಸೆ ಈಡೇರಿಸುತ್ತಾರಾ ತಮಿಳಿನ ಖ್ಯಾತ ನಿರ್ದೇಶಕ ಶಂಕರ್

    ಜನಿಕಾಂತ್ ಸೇರಿದಂತೆ ತಮಿಳಿನ ಸೂಪರ್ ಸ್ಟಾರ್ ಗಳಿಗೆಲ್ಲ ಸಿನಿಮಾ ಮಾಡಿರುವ ನಿರ್ದೇಶಕ ಶಂಕರ್ ಇತ್ತೀಚೆಗಷ್ಟೇ ಯಶ್ ನಟನೆಯ ಕೆಜಿಎಫ್ 2 ಸಿನಿಮಾ ನೋಡಿದ್ದಾರೆ. 33 ದಿನಗಳ ನಂತರ ಕೆಜಿಎಫ್ 2 ಸಿನಿಮಾ ನೋಡಿರುವ ನಿರ್ದೇಶಕರು ಈ ಕುರಿತು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ. ಅಲ್ಲದೇ, ತಮ್ಮ ಮುಕ್ತ ಅಭಿಪ್ರಾಯಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದು, ಅವರ ಬರಹ ಮತ್ತೊಂದು ಚರ್ಚೆಯನ್ನು ಹುಟ್ಟುಹಾಕಿದೆ. ಇದನ್ನೂ ಓದಿ : ಪ್ರಾದೇಶಿಕ ಭಾಷಾ ಮಹತ್ವ ಪ್ರಧಾನಿ ಮೋದಿ ಮಾತಿಗೆ ಸಂತಸ ವ್ಯಕ್ತ ಪಡಿಸಿದ ಕಿಚ್ಚ ಸುದೀಪ್

    ‘ಕೊನೆಗೂ ನಾನು ಕೆಜಿಎಫ್ 2 ಸಿನಿಮಾ ನೋಡಿದೆ. ಹಲವು ಕಾರಣಗಳಿಂದಾಗಿ ಈ ಸಿನಿಮಾ ಕಾಡಿತು. ತೀಕ್ಷ್ಣವಾದ ಕಥೆ, ಅದನ್ನು ಹೇಳುವ ಕ್ರಮ, ದೃಶ್ಯಗಳನ್ನು ಕಟ್ಟಿದ ರೀತಿ, ಎಡಿಟಿಂಗ್, ದೃಶ್ಯಗಳನ್ನು ಜೋಡಿಸಿದ ಕಲೆ ಎಲ್ಲವೂ ಇಷ್ಟವಾಯಿತು. ಮಾಸ್ ಡೈಲಾಗ್ ಮತ್ತು ಅದನ್ನು ಸಮರ್ಥವಾಗಿ ಕಟ್ಟಿಕೊಟ್ಟ ರೀತಿಯೂ ಆಧುನಿಕವಾಗಿದೆ. ಯಶ್ ಪವರ್ ಹೌಸ್, ಪ್ರಶಾಂತ್ ನೀಲ್ ಕೂಡ ಅದ್ಭುತವಾಗಿ ಸಿನಿಮಾ ಮಾಡಿದ್ದಾರೆ’ ಎಂದು ಹಾಡಿಹೊಗಳಿದ್ದಾರೆ ಶಂಕರ್. ಇದನ್ನೂ ಓದಿ : ನಾಲ್ಕೈದು ವರ್ಷ ಪ್ರಶಾಂತ್ ನೀಲ್ ತೆಲುಗಿನಲ್ಲೇ ಲಾಕ್ : ಮತ್ತೆ ರಕ್ತದ ಹಿಂದೆ ಬಿದ್ದ ಕೆಜಿಎಫ್ ಡೈರೆಕ್ಟರ್

    ಭಾರತೀಯ ಸಿನಿಮಾ ರಂಗದಲ್ಲಿ ‘ಎಂದಿರನ್’, ‘ಜೆಂಟಲ್ ಮನ್’, ‘ಕಾದಲನ್’, ‘ಅನ್ನಿಯನ್’, ‘ಇಂಡಿಯನ್’  ರೀತಿಯ ಭಾರೀ ಬಜೆಟ್ ಸಿನಿಮಾ ಕೊಟ್ಟಿರುವ ಮತ್ತು ಅವೆಲ್ಲವೂ ಬಾಕ್ಸ್ ಆಫೀಸಿನಲ್ಲಿ ಹಿಟ್ ಆದಂತಹ ಚಿತ್ರಗಳನ್ನು ನೀಡಿರುವ ಶಂಕರ್ ಅವರು ಕೆಜಿಎಫ್ 2 ಸಿನಿಮಾದ ಬಗ್ಗೆ ಆಡಿದ ಮಾತುಗಳು ಚಿತ್ರತಂಡಕ್ಕೆ ಮತ್ತಷ್ಟು ಚೈತನ್ಯ ತುಂಬಿವೆ. ಅದರಲ್ಲೂ ಯಶ್‍ ಗೆ ಸಾಕಷ್ಟು ಸಂಭ್ರಮ ತಂದಿದೆ. ಅದಕ್ಕೆ ಕಾರಣವೂ ಇದೆ. ಇದನ್ನೂ ಓದಿ: ಬಾಡಿ ಶೇಮಿಂಗ್ ವಿರುದ್ಧ ನಟಿ ಮಯೂರಿ ಮಾತು

    KGF 2 Yash (4)

    ಈ ಹಿಂದೆ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಯಶ್ ಅವರಿಗೆ ನಿರೂಪಕರು, ‘ನೀವು ಶಂಕರ್ ಅವರ ಚಿತ್ರಗಳಲ್ಲಿ ನಟಿಸಲು ಇಷ್ಟಪಡುತ್ತಿರೋ ಅಥವಾ ಮಣಿರತ್ನಂ ಚಿತ್ರದಲ್ಲಿ ನಟಿಸಲು ಆಸಕ್ತಿ ಹೊಂದಿದ್ದೀರೋ’ ಎಂದು ಕೇಳಿದ್ದರು. ಕ್ಷಣವೂ ಯಶ್ ಯೋಚಿಸದೇ ಶಂಕರ್ ಅವರ ಹೆಸರು ಹೇಳಿದ್ದರು. ಇದೀಗ ಯಶ್ ನಟನೆಯ ಚಿತ್ರವನ್ನು ಶಂಕರ್ ಹಾಡಿಹೊಗಳಿದ್ದಾರೆ. ಹಾಗಾಗಿ ಶಂಕರ್ ನಿರ್ದೇಶನದ ಸಿನಿಮಾದಲ್ಲಿ ಯಶ್ ನಟಿಸಲಿದ್ದಾರಾ ಎನ್ನುವ ಹೊಸ ಚರ್ಚೆ ಇದೀಗ ಶುರುವಾಗಿದೆ. ಇದನ್ನೂ ಓದಿ: 625ಕ್ಕೆ 619 ಅಂಕಗಳನ್ನು ಗಳಿಸಿದ `ಗಟ್ಟಿಮೇಳ’ ಖ್ಯಾತಿಯ ಮಹತಿ ಭಟ್

    ಈ ಹಿಂದೆಯೂ ಕೆಜಿಎಫ್ ಸಿನಿಮಾದ ನಂತರ ಶಂಕರ್ ಅವರು ಯಶ್ ಗಾಗಿ ಸಿನಿಮಾವೊಂದನ್ನು ಮಾಡಲಿದ್ದಾರೆ ಎನ್ನುವ ಸುದ್ದಿಯಾಗಿತ್ತು. ಅದು ಕೊನೆಗೂ ಸುದ್ದಿಯಾಗಿಯೇ ಉಳಿಯಿತು. ಇದೀಗ ಮತ್ತೆ ಅದೇ ಸುದ್ದಿ ಹರಿದಾಡುತ್ತಿದೆ. ಆದರೆ, ಎರಡೂ ಕಡೆಯಿಂದ ಕುರಿತು ಪ್ರತಿಕ್ರಿಯೆ ಬರಬೇಕಷ್ಟೇ.

  • Exclusive- ಅಮೆಜಾನ್ ಪ್ರೈಮ್ನಲ್ಲಿ ‘ಕೆಜಿಎಫ್ 2’ : ಫಸ್ಟ್ ಟೈಮ್ ಮೆಂಬರ್ ಅಲ್ಲದವರೂ ಸಿನಿಮಾ ನೋಡಬಹುದು

    Exclusive- ಅಮೆಜಾನ್ ಪ್ರೈಮ್ನಲ್ಲಿ ‘ಕೆಜಿಎಫ್ 2’ : ಫಸ್ಟ್ ಟೈಮ್ ಮೆಂಬರ್ ಅಲ್ಲದವರೂ ಸಿನಿಮಾ ನೋಡಬಹುದು

    ಶ್ ಮತ್ತು ಪ್ರಶಾಂತ್ ನೀಲ್ ಕಾಂಬಿನೇಷನ್ ನ ‘ಕೆಜಿಎಫ್ 2’ ಸಿನಿಮಾ ರಿಲೀಸ್ ಆಗಿ ನಾಳೆಗೆ ಒಂದು ತಿಂಗಳು. ಈ ಸಂದರ್ಭದಲ್ಲಿ ಕೆಜಿಎಫ್ 2 ಸಿನಿಮಾ ತಂಡದಿಂದ ನೋಡುಗರಿಗೆ ಗುಡ್ ನ್ಯೂಸ್ ಸಿಕ್ಕಿದೆ. ಅತೀ ಶೀಘ್ರದಲ್ಲೇ ಅಮೆಜಾನ್ ಪ್ರೇಮ್ ನಲ್ಲಿ ಸಿನಿಮಾ ರಿಲೀಸ್ ಆಗುತ್ತಿದ್ದು, ಸದ್ಯಕ್ಕೆ ಅಮೆಜಾನ್ ಪ್ರೈಮ್ ಮೆಂಬರ್ ಅಲ್ಲದವರು ಸಿನಿಮಾ ನೋಡುವಂತೆ ಅವಕಾಶ ಕಲ್ಪಿಸಲಾಗಿದೆ. ಇದನ್ನೂ ಓದಿ : ಕಾಲೇಜು ದಿನಗಳಲ್ಲೇ ರಮ್ಯಾ ಮೇಲೆ ಕ್ರಶ್ ಆಗಿದೆ : ರಕ್ಷಿತ್ ಶೆಟ್ಟಿ

    ಸಾಮಾನ್ಯವಾಗಿ ಅಮೆಜಾನ್ ಪ್ರೈಮ್ ಸದಸ್ಯರಾದವರು ಮಾತ್ರ ಅಲ್ಲಿರುವ ಸಿನಿಮಾ ವೀಕ್ಷಣೆ ಮಾಡುವಂತಹ ಅವಕಾಶವಿತ್ತು. ಆದರೆ, ಕೆಜಿಎಫ್ 2 ಸಿನಿಮಾವನ್ನು ರೆಂಟಲ್ ಬೇಸಸ್ ಆಧಾರದಲ್ಲಿ ನೋಡುವಂತಹ ತಂತ್ರಜ್ಞಾನವನ್ನು ಭಾರತದಲ್ಲಿ ಜಾರಿ ಮಾಡುತ್ತಿದ್ದು, ಇಂತಿಷ್ಟು ಹಣ ಕೊಟ್ಟು 24 ಗಂಟೆಯೊಳಗೆ ಕೆಜಿಎಫ್ 2 ಸಿನಿಮಾ ನೋಡಬಹುದಾಗಿದೆ. ಇದಕ್ಕೆ ಅಮೆಜಾನ್ ಪ್ರೈಮ್ ಸದಸ್ಯರಾಗುವ ಅಗತ್ಯವಿಲ್ಲ. ಇದನ್ನೂ ಓದಿ : ಪತಿ ಉಪ್ಪಿಗಿಂತಲೂ ಪತ್ನಿ ಪ್ರಿಯಾಂಕಾ ಉಪೇಂದ್ರ ಫಾಸ್ಟ್ : ಡಿಟೆಕ್ಟೀವ್ ತೀಕ್ಷ್ಣ @ 50

    ಈ ರೀತಿಯ ವ್ಯವಸ್ಥೆಯನ್ನು ಅಮೆಜಾನ್ ಪ್ರೈಮ್ ವಿದೇಶದಲ್ಲಿ ಪರಿಚಯಿಸಿದೆ. ಆದರೆ, ಭಾರತದಲ್ಲಿ ಅದಕ್ಕೆ ಅವಕಾಶವಿರಲಿಲ್ಲ. ಕೆಜಿಎಫ್ 2 ಸಿನಿಮಾದ ಮೂಲಕ ಮೊದಲ ಬಾರಿಗೆ ಇಂಥದ್ದೊಂದು ಅವಕಾಶವನ್ನು ನೋಡುಗರಿಗೆ ನೀಡಿದೆ. ಸಾಮಾನ್ಯ ವರ್ಗದ ಜನರಿಗೂ ಈ ಸಿನಿಮಾವನ್ನು ತಲುಪಿಸುವ ಉದ್ದೇಶ ಚಿತ್ರತಂಡದ್ದು ಆಗಿರುವುದರಿಂದ ಅಮೆಜಾನ್ ಪ್ರೈಮ್ ಸದಸ್ಯತ್ವವನ್ನು ಪಡೆಯದೇ ಇದೊಂದು ಸಿನಿಮಾವನ್ನು ವೀಕ್ಷಿಸುವಂತೆ ಮಾಡಲಾಗಿದೆ. ಈ ಮೂಲಕ ಎಲ್ಲ ವರ್ಗದ ಜನರೂ ಈ ಸಿನಿಮಾವನ್ನು ನೋಡಲಿ ಎನ್ನುವ ಉದ್ದೇಶವಿದೆಯಂತೆ. ಇದನ್ನೂ ಓದಿ : ಬಾಲ್ಯದ ಗೆಳೆಯನ ಮದ್ವೆಯಲ್ಲಿ ಯಶ್ ದಂಪತಿ ಭಾಗಿ

    ಅಮೆಜಾನ್ ಪ್ರೈಮ್ ಸದಸ್ಯತ್ವ ಹೊಂದಿದವರು ಮತ್ತು ಹೊಂದಿಲ್ಲದೇ ಇರುವವರು ಕೆಜಿಎಫ್ 2 ಸಿನಿಮಾ ನೋಡುವುದರಿಂದ ಓಟಿಟಿಯಲ್ಲಿಯೂ ಈ ಸಿನಿಮಾ ದಾಖಲೆಯ ರೀತಿಯಲ್ಲಿ ಕೆಲೆಕ್ಷನ್ ಮಾಡಲಿದೆ ಎಂದು ಅಂದಾಜಿಸಲಾಗಿದೆ. ಈಗಾಗಲೇ ಥಿಯೇಟರ್ ನಲ್ಲಿ ಸಾವಿರಾರು ಕೋಟಿ ಬಾಚಿರುವ ಕೆಜಿಎಫ್ 2, ಓಟಿಟಿಯಲ್ಲೂ ಎಲ್ಲ ದಾಖಲೆಗಳನ್ನು ಮುರಿಯಲಿದೆ ಎನ್ನುತ್ತಿದ್ದಾರೆ ಸಿನಿಪಂಡಿತರು.

    ಯಾವಾಗ ಈ ಸಿನಿಮಾ ಅಮೆಜಾನ್ ಪ್ರೈಮ್‍ ನಲ್ಲಿ ಬರಲಿದೆ ಎಂದು ಕಾಯುವವರಿಗೂ ಶುಭ ಸುದ್ದಿಯಿದೆ. ಈ ವಾರದಲ್ಲೇ ಬಹುಶಃ ದಿನಾಂಕವನ್ನು ಘೋಷಣೆ ಮಾಡಲಿದೆ ಎನ್ನುವ ಮಾಹಿತಿ ಇದೆ. ಸಿನಿಮಾ ರಿಲೀಸ್ ಆಗಿ 50 ದಿನಗಳ ನಂತರ ಬಹುಶಃ ಅಮೆಜಾನ್ ಪ್ರೈಮ್ ನಲ್ಲಿ ಕೆಜಿಎಫ್ 2 ಲಭ್ಯವಾಗಲಿದೆ.

  • ಕೆಜಿಎಫ್ 2 : ನಾಲ್ಕೇ ದಿನಕ್ಕೆ 550 ಕೋಟಿ ಬಾಚಿದ ರಾಕಿಭಾಯ್

    ಕೆಜಿಎಫ್ 2 : ನಾಲ್ಕೇ ದಿನಕ್ಕೆ 550 ಕೋಟಿ ಬಾಚಿದ ರಾಕಿಭಾಯ್

    ಪ್ರಶಾಂತ್ ನೀಲ್ ಮತ್ತು ಯಶ್ ಕಾಂಬಿನೇಷನ್ ನ ಕೆಜಿಎಫ್ 2 ಗಳಿಕೆ ರಾಕೆಟ್ ಸ್ಪೀಡ್ ನಲ್ಲಿ ಮುನ್ನುಗ್ಗುತ್ತಿದೆ. ಬಿಡುಗಡೆಯಾದ ಅಷ್ಟೂ ಭಾಷೆಗಳಲ್ಲೂ ಕೋಟಿ ಕೋಟಿ ಸಂಪಾದನೆ ಮಾಡುತ್ತಿದೆ. ಈವರೆಗೂ ಎಲ್ಲಾ ರೆಕಾರ್ಡ್ ಗಳನ್ನು ಮುರಿದಿರುವ ಕೆಜಿಎಫ್ 2, ಮುಂದೆ ಯಾರೂ ಮುರಿಯದಂತಹ ದಾಖಲೆಯನ್ನೂ ಮಾಡುತ್ತಿದೆ. ಇದನ್ನೂ ಓದಿ : ಕ್ಷಮಿಸಿ ಬಿಡು ಬಸವಣ್ಣ : ವಿಡಿಯೋ ರಿಲೀಸ್ ಮಾಡಿದ ಹಂಸಲೇಖ

    ಏ.14ರ ಗುರುವಾರ ಬಿಡುಗಡೆಯಾದ ಕೆಜಿಎಫ್ 2 ದಿನದಿಂದ ದಿನಕ್ಕೆ ಬಾಕ್ಸ್ ಆಫೀಸಿನ ಕ್ರೇಜ್ ಏರಿಸುತ್ತಲೇ ಇದೆ. ನಾಲ್ಕು ದಿನಗಳ ಕಾಲ ರಜೆ ಸಿಕ್ಕ ಕಾರಣಕ್ಕಾಗಿ ರಾಕಿಭಾಯ್ ಮತ್ತಷ್ಟು ಜೇಬು ತುಂಬಿಸಿಕೊಳ್ಳುತ್ತಿದ್ದಾನೆ. ಕನ್ನಡ ಸಿನಿಮಾವೊಂದು ವಿಶ್ವಮಟ್ಟದಲ್ಲಿ ಈ ರೀತಿ ದುಡ್ಡು ಮಾಡುತ್ತಿರುವುದು ಅನೇಕ ಸಿನಿಮಾ ರಂಗದ ನಿರ್ಮಾಪಕರಿಗೆ ಹೊಸದೊಂದು ಮಾರ್ಗ ಕಾಣಿಸಿದಂತಾಗಿದೆ. ಇದನ್ನೂ ಓದಿ: ಬಾಲಿವುಡ್‌ 3ನೇ ದಿನದ ಕಲೆಕ್ಷನ್‌ನಲ್ಲೂ ಹವಾ ಕ್ರಿಯೇಟ್‌ ಮಾಡಿದ ʻಕೆಜಿಎಫ್‌ 2ʼ

    ಕೆಜಿಎಫ್ 2 ಮೂರು ದಿನಗಳ ಗಳಿಕೆ ಅಂದಾಜು 400 ಕೋಟಿ ಎನ್ನಲಾಗಿತ್ತು. ನಾಲ್ಕನೇ ದಿನದ ಗಳಿಕೆ ಒಟ್ಟು ಅಂದಾಜು 550 ಕೋಟಿ ಎನ್ನಲಾಗುತ್ತಿದೆ. ಈ ಮೂಲಕ ಆರ್.ಆರ್.ಆರ್, ಬಾಹುಬಲಿ, ಕೆಜಿಎಫ್ ಚಾಪ್ಟರ್ 1 ಹೀಗೆ ದಾಖಲಾಗಿದ್ದ ಎಲ್ಲ ರೇಕಾರ್ಡ್ ಉಢೀಸ್ ಆಗಿವೆ. ಅಲ್ಲದೇ ವಿದೇಶದಿಂದಲೇ ಅಂದಾಜು ಮೂರು ದಿನಗಳಲ್ಲಿ 80 ಕೋಟಿಗೂ ಅಧಿಕ ಹಣ ಹರಿದು ಬಂದಿದೆ ಎನ್ನುತ್ತಾರೆ ವಿತರಕರು.  ಇದನ್ನೂ ಓದಿ: `ಚಂದ್ರಲೇಖ ರಿಟರ್ನ್ಸ್’ ಅಂತಿದ್ದಾರೆ ನಿರ್ದೇಶಕ ಓಂಪ್ರಕಾಶ್ ರಾವ್

    ಯಾವ ದಿನ, ಎಷ್ಟು ಲೆಕ್ಕ ?

    ಮೊದಲ ದಿನದ ಗಳಿಕೆ : 165.37 ಕೋಟಿ

    ಎರಡನೇ ದಿನದ ಗಳಿಕೆ : 139.25 ಕೋಟಿ

    ಮೂರನೇ ದಿನದ ಗಳಿಕೆ : 115.08 ಕೋಟಿ

    ನಾಲ್ಕನೇ ದಿನದ ಗಳಿಕೆ 132.12 ಕೋಟಿ

    ಒಟ್ಟು : 551. 83 ಕೋಟಿ ಎಷ್ಟು ಕೆಜಿಎಫ್ 2 ಈವರೆಗೂ ಬಾಕ್ಸ್ ಆಫೀಸ್ ಅನ್ನು ತುಂಬಿಸಿದೆ ಎಂದು ಕಾಮ್ ಸ್ಕೋರ್ ವರದಿ ಮಾಡಿದೆ. ಕನ್ನಡಕ್ಕಿಂತಲೂ ಹಿಂದಿ ಸಿನಿಮಾ ರಂಗದಿಂದಲೇ ನಿರ್ಮಾಪಕರಿಗೆ ಹೆಚ್ಚು ಹಣ ಸಂದಾಯವಾಗಿದೆ. ಮೊದಲ ದಿನ 53 ಕೋಟಿ, ಎರಡನೇ ದಿನ 45.7 ಕೋಟಿ, ಮೂರನೇ ದಿನ 42.50 ಕೋಟಿ, ನಾಲ್ಕನೇ ದಿನವೂ ಅಂದಾಜು 50 ಕೋಟಿ ಹಣ ಬಂದಿದೆ ಎನ್ನಲಾಗುತ್ತಿದೆ. ಐದೇ ದಿನದಲ್ಲಿ ಬಹುಶಃ ಹಿಂದಿಯಲ್ಲಿ 200 ಕೋಟಿ ಕ್ಲಬ್ ಗೆ ಕೆಜಿಎಫ್ 2 ಸೇರಲಿದೆ.

  • ಕೆಜಿಎಫ್-2 : ಎರಡನೇ ದಿನಕ್ಕೆ 240 ಕೋಟಿ ಬಾಚಿದ ರಾಕಿ ಭಾಯ್ : ಗ್ರೌಂಡ್ ರಿಪೋರ್ಟ್

    ಕೆಜಿಎಫ್-2 : ಎರಡನೇ ದಿನಕ್ಕೆ 240 ಕೋಟಿ ಬಾಚಿದ ರಾಕಿ ಭಾಯ್ : ಗ್ರೌಂಡ್ ರಿಪೋರ್ಟ್

    ಪ್ರಶಾಂತ್ ನೀಲ್ ನಿರ್ದೇಶನದ ‘ಕೆಜಿಎಫ್ 2’ ಸಿನಿಮಾ ಈವರೆಗೂ ಬಾಕ್ಸ್ ಆಫೀಸಿನಲ್ಲಿದ್ದ ಎಲ್ಲ ದಾಖಲೆಗಳನ್ನು ಮುರಿದು ಮುನ್ನುಗ್ಗುತ್ತಿದೆ. ಭಾರತೀಯ ಸಿನಿಮಾ ರಂಗದಲ್ಲೇ ಈವರೆಗೂ ಯಾವ ಚಿತ್ರಗಳು ಮಾಡದೇ ಇರುವಂತಹ ಸಾಧನೆಯನ್ನು ಕನ್ನಡದ ಹೆಮ್ಮೆಯ ಚಿತ್ರ ಕೆಜಿಎಫ್ 2 ಮಾಡಿದೆ. ಹಾಗಾಗಿ ಭಾರತೀಯ ಚಲನಚಿತ್ರ ರಂಗವೇ ಬೆರಗಿನಿಂದ ಕನ್ನಡದತ್ತ ನೋಡುತ್ತಿದೆ. ಇದನ್ನೂ ಓದಿ : ಹನುಮ ಜಯಂತಿ : ದೂರದ ಬೆಟ್ಟ ಸಿನಿಮಾದಲ್ಲಿಯ ಡಾ.ರಾಜ್ ಅವರ ಹನುಮನ ಪಾತ್ರ ಏನಾಯಿತು?

    ಮೊದಲನೇ ದಿನ ಬಾಕ್ಸ್ ಆಫೀಸ್ ಕಲೆಕ್ಷನ್ ಭಾರತದಲ್ಲಿ 134.5 ಕೋಟಿ ಗಳಿಸಿತ್ತು. ಇದನ್ನು ಸ್ವತಃ ಸಿನಿಮಾ ನಿರ್ಮಾಣ ಸಂಸ್ಥೆಯಾದ ಹೊಂಬಾಳೆ ಫಿಲ್ಮ್ಸ್ ಅಧಿಕೃತವಾಗಿ ಹೇಳಿಕೊಂಡಿತ್ತು. ಎರಡನೇ ದಿನದ ಕಲೆಕ್ಷನ್ ನಲ್ಲೂ ಕೆಜಿಎಫ್ 2 ಹಿಂದೆ ಬಿದ್ದಿಲ್ಲ. ಶುಕ್ರವಾರ ಕೂಡ 105.5  ಕೋಟಿ ಗಳಿಸಿದೆ. ಅಲ್ಲಿಗೆ ಎರಡು ದಿನದ ಒಟ್ಟು ಬಾಕ್ಸ್ ಆಫೀಸ್ ರಿಪೋರ್ಟ್ 240 ಕೋಟಿ ಆಗಿದೆ. ಇದನ್ನೂ ಓದಿ : ಹಸೆಮಣೆ ಏರಿದ ಆಲಿಯಾ-ರಣಬೀರ್‌ಗೆ ಜೋಡಿ ಕುದುರೆ ಉಡುಗೊರೆ

    ಕನ್ನಡದ ಸಿನಿಮಾವೊಂದು ಇದೇ ಮೊದಲ ಬಾರಿಗೆ ಭಾರತೀಯ ಸಿನಿಮಾ ರಂಗದಲ್ಲಿ ಹಲವು ದಾಖಲೆಗಳನ್ನು ಬರೆದಿದೆ. ಭಾರತದಲ್ಲೇ ಎರಡು ದಿನಕ್ಕೆ ಅತೀ ಹೆಚ್ಚು ಕಲೆಕ್ಷನ್ ಮಾಡಿದ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಹಿಂದಿಯಲ್ಲಿ ಎರಡೇ ದಿನಕ್ಕೆ ನೂರು ಕೋಟಿ ಕ್ಲಬ್ ಗೆ ಸೇರಿದ ಮೊದಲ ಸಿನಿಮಾ ಎಂಬ ಗರಿಮೆ ಕೆಜಿಎಫ್ ಚಿತ್ರದ್ದು. ಹಿಂದಿಯಲ್ಲಿ ಮೊದಲ ದಿನ 46.79 ಕೋಟಿ, ಎರಡನೇ ದಿನ 55.21 ಕೋಟಿ ಗಳಿಗೆ ಮಾಡಿ, ಬಾಲಿವುಡ್ ನಲ್ಲಿ ಕಡಿಮೆ ಅವಧಿಯಲ್ಲೇ ನೂರು ಕೋಟಿ ಕ್ಲಬ್ ಸೇರಿದ ಚಿತ್ರ ಎನಿಸಿಕೊಂಡಿದೆ. ಒಬ್ಬನೇ ಸ್ಟಾರ್ ನಟಿಸಿದ ಸಿನಿಮಾಗಳು ಈವರೆಗೂ ಇಷ್ಟೊಂದು ಕಲೆಕ್ಷನ್ ಮಾಡಿಲ್ಲ ಹಾಗಾಗಿ ಆ ಗರಿಮೆ ಯಶ್‍ ಗೆ ಸೇರಿದೆ. ಭಾರತೀಯ ಸಿನಿಮಾ ರಂಗದಲ್ಲೇ ಇದೇ ಮೊದಲ ಬಾರಿಗೆ ಕೇರಳದಲ್ಲಿ ಅತೀ ಹೆಚ್ಚು ದುಡ್ಡು ಮಾಡಿದ ಸಿನಿಮಾ ಎಂಬ ಹೆಗ್ಗಳಿಕೆ ಕನ್ನಡ ಚಿತ್ರಕ್ಕೆ ಸಿಕ್ಕಿದೆ. ಕರ್ನಾಟಕದಲ್ಲಿ ಇದುವರೆಗೆ ಈ ಪ್ರಮಾಣದ ದುಡ್ಡನ್ನು ಯಾವ ಚಿತ್ರಗಳು ತಂದುಕೊಟ್ಟಿಲ್ಲ ಎನ್ನುವುದು ಖುಷಿ ಪಡಬೇಕಾದ ಸಂಗತಿ.  ಇದನ್ನೂ ಓದಿ : ಕೆಜಿಎಫ್-2 ಬಾಲಿವುಡ್ ಮೇಲೆ ಹಾಕಿದ ಅಣುಬಾಂಬ್ : ರಾಮ್ ಗೋಪಾಲ್ ವರ್ಮಾ

    ಪ್ರಶಾಂತ್ ನೀಲ್ ನಿರ್ದೇಶನದ ‘ಕೆಜಿಎಫ್ 2’ ಸಿನಿಮಾ ವಿಶ್ವದಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಬಾಕ್ಸ್ ಆಫೀಸಿನ ಎಲ್ಲಾ ದಾಖಲೆಗಳನ್ನು ಉಢೀಸ್ ಮಾಡಿದೆ. ಬಿಡುಗಡೆಯಾದ ಒಂದೇ ದಿನಕ್ಕೆ ನೂರು ಕೋಟಿ ಕ್ಲಬ್ ಸೇರಿ ಶರವೇಗದಲ್ಲಿ ಮುನ್ನುಗ್ಗುತ್ತಿದೆ. ಕೇವಲ ಗಲ್ಲಾಪೆಟ್ಟಿಗೆ ಮಾತ್ರವಲ್ಲ, ವಿಮರ್ಶಕರು ಕೂಡ ಸಿನಿಮಾವನ್ನು ಕೊಂಡಾಡಿದ್ದಾರೆ.

  • ಕೆಜಿಎಫ್-2 ಬಾಲಿವುಡ್ ಮೇಲೆ ಹಾಕಿದ ಅಣುಬಾಂಬ್ : ರಾಮ್ ಗೋಪಾಲ್ ವರ್ಮಾ

    ಕೆಜಿಎಫ್-2 ಬಾಲಿವುಡ್ ಮೇಲೆ ಹಾಕಿದ ಅಣುಬಾಂಬ್ : ರಾಮ್ ಗೋಪಾಲ್ ವರ್ಮಾ

    ನೇಕ ಹಿಟ್ ಚಿತ್ರಗಳನ್ನು ಕೊಟ್ಟಿರುವ ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ನಿನ್ನೆಯಿಂದ ಕೆಜಿಎಫ್ 2 ಚಿತ್ರದ ಬಗ್ಗೆ ಸಾಲು ಸಾಲು ಟ್ವಿಟ್ ಗಳನ್ನು ಮಾಡುತ್ತಿದ್ದಾರೆ. ಸಿನಿಮಾ, ಕಲಾವಿದರು, ತಂತ್ರಜ್ಞರು ಮತ್ತು ನಿರ್ದೇಶಕರ ಬಗ್ಗೆ ಹಾಡಿ ಹೊಗಳುತ್ತಿದ್ದಾರೆ. ಆರ್.ಆರ್.ಆರ್ ಸಿನಿಮಾ ರಿಲೀಸ್ ಆದಾಗ ತಮ್ಮ ಡೇಂಜರ್ಸ್ ಸಿನಿಮಾ ಹೋಲಿಸಿ ಲೇವಡಿ ಮಾಡಿದ್ದ ರಾಮ್ ಗೋಪಾಲ್ ವರ್ಮಾ, ಕೆಜಿಎಫ್ 2 ಸಿನಿಮಾದ ಮೇಲೆ ಎಲ್ಲಿಲ್ಲದ ಪ್ರೀತಿ ತೋರಿದ್ದಾರೆ. ಇದನ್ನೂ ಓದಿ : ಕೆಜಿಎಫ್ 2 ಡಿಜಾಸ್ಟರ್ ಸಿನಿಮಾ ಎಂದು ‘ಥೂ… ಥೂ..’ ಉಗಿಸಿಕೊಂಡ ಬಾಲಿವುಡ್ ನಟ

    ಕೆಜಿಎಫ್ 2 ವಿಶ್ವದಾದ್ಯಂತ ಗೆದ್ದಿದೆ. ಬಾಕ್ಸ್ ಆಫೀಸ್ ತುಂಬಿಸಿದೆ. ಸಿನಿಮಾ ನೋಡಿದ ಪ್ರತಿಯೊಬ್ಬರೂ ಚಿತ್ರದ ಬಗ್ಗೆ ಹಾಡಿ ಹೊಗಳುತ್ತಿದ್ದಾರೆ. ಕನ್ನಡಿಗರಂತೂ ಚಿತ್ರವನ್ನು ಎದೆ ಮೇಲೆ ಇಟ್ಟುಕೊಂಡು ಆರಾಧಿಸುತ್ತಿದ್ದಾರೆ. ಹಾಗೆಯೇ ವರ್ಮಾ ಒಬ್ಬ ಸಾಮಾನ್ಯ ನೋಡುಗನಾಗಿ ಸಿನಿಮಾ ವೀಕ್ಷಿಸಿ, ಚಿತ್ರದ ಬಗ್ಗೆ ಸರಣಿ ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ : ಕನ್ನಡದಲ್ಲೇ ಕೆಜಿಎಫ್ ನೋಡಿ ಫಿದಾ ಆದ ತಲೈವಾ

    ಸ್ಟಾರ್ ನಟರ ಮೇಲೆ ದುಡ್ಡು ಸುರಿಯುವುದಕ್ಕಿಂತ ಸಿನಿಮಾದ ಮೇಲೆ ದುಡ್ಡು ಸುರಿದರೆ ‘ಕೆಜಿಎಫ್ 2’ನಂತಹ ಚಿತ್ರವಾಗುತ್ತದೆ ಎಂದು ಪರೋಕ್ಷವಾಗಿ ಸ್ಟಾರ್ ನಟರ ಮೇಲೆ ದುಡ್ಡು ಹಾಕುವವರಿಗೆ ಟಾಂಗ್ ಕೊಟ್ಟಿದ್ದಾರೆ ವರ್ಮಾ. ಕೆಜಿಎಫ್ ಸಿನಿಮಾದ ಮೂಲಕ ನಿರ್ದೇಶಕ ಪ್ರಶಾಂತ್ ನೀಲ್, ಕನ್ನಡದ ಬಾವುಟವನ್ನು ಜಗತ್ತಿನ ತುತ್ತತುದಿಯವರೆಗೂ ತಗೆದುಕೊಂಡು ಹೋಗಿದ್ದಾರೆ ಎಂದೂ ಟ್ವೀಟ್ ಮಾಡಿದ್ದಾರೆ. ಜಗತ್ತಿನ ನಕಾಶೆಯನ್ನು ಬದಲಿಸಿದ ನಿರ್ದೇಶಕ ಎಂದು ಕೊಂಡಾಡಿದ್ದಾರೆ. ಇದನ್ನೂ ಓದಿ: ಕೆಜಿಎಫ್ 2 : ಯಾವ ರಾಜ್ಯದಲ್ಲಿ ಎಷ್ಟು ಕಲೆಕ್ಷನ್? ಪಕ್ಕಾ ಲೆಕ್ಕ

    ಸಿನಿಮಾದ ಒಂದೊಂದು ದೃಶ್ಯವನ್ನೂ ಹೋಲಿಸಿ ಕಾಮೆಂಟ್ ಮಾಡಿರುವ ರಾಮ್ ಗೋಪಾಲ್ ವರ್ಮಾ, ವಿಲನ್ ಗಳನ್ನು ಹುಡುಕಿಕೊಂಡು‌ ಮಷಿನ್ ಗನ್ ನೊಂದಿಗೆ ಮುಂಬೈಗೆ ಹೊರಡುವ ರಾಕಿಭಾಯ್ ರೀತಿಯಲ್ಲಿ ನಿರ್ದೇಶಕ ಪ್ರಶಾಂತ್ ನೀಲ್, ಬಾಲಿವುಡ್ ಮೇಲೆ ಅಣುಬಾಂಬ್ ಸಿಡಿಸಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.