Tag: Prashant Neal

  • ಥಿಯೇಟರ್ ಮುಂದೆ ರಾರಾಜಿಸಲು ಯಶ್ ಕಟೌಟ್ ರೆಡಿ: ಗ್ರೌಂಡ್ ರಿಪೋರ್ಟ್

    ಥಿಯೇಟರ್ ಮುಂದೆ ರಾರಾಜಿಸಲು ಯಶ್ ಕಟೌಟ್ ರೆಡಿ: ಗ್ರೌಂಡ್ ರಿಪೋರ್ಟ್

    ಶ್ ನಟನೆಯ ಕೆಜಿಎಫ್ ಚಾಪ್ಟರ್ 2 ಸಿನಿಮಾ ಬಿಡುಗಡೆಗೆ ಕ್ಷಣಗಣನೆ ಶುರುವಾಗಿದೆ. ಇದೇ ಏಪ್ರಿಲ್ 14 ರಿಂದ ವಿಶ್ವದಾದ್ಯಂತ ಎಂಟು ಸಾವಿರಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಈ ಸಿನಿಮಾ ರಿಲೀಸ್ ಆಗುತ್ತಿದೆ. ಕರ್ನಾಟಕವೊಂದರಲ್ಲೇ 400ಕ್ಕೂ ಹೆಚ್ಚು ಥಿಯೇಟರ್ ಗಳಲ್ಲಿ ಈ ಸಿನಿಮಾ ರಿಲೀಸ್ ಆಗುತ್ತಿದ್ದು, ಅದಕ್ಕಾಗಿ ಥಿಯೇಟರ್ ಸಿಂಗಾರಗೊಳ್ಳುತ್ತಿವೆ. ಇದನ್ನೂ ಓದಿ: ‘Lockup’ ಶೋಗೆ ಬರುವಂತೆ ವಿಲ್ ಸ್ಮಿತ್‍ಗೆ ಆಫರ್ ಕೊಟ್ಟ ಕ್ವಿನ್ ಕಂಗನಾ

    ಚಿತ್ರಮಂದಿರಗಳ ಮುಂದೆ ನಿಲ್ಲಿಸುವುದಕ್ಕಾಗಿಯೇ ನೂರಾರು ಕಟೌಟ್ ಗಳು ರೆಡಿ ಆಗುತ್ತಿದ್ದು, ಮೊದಲ ಹಂತದಲ್ಲಿ 100 ಕಟೌಟ್ ಗಳನ್ನು ಮಾಡಲು ಹೇಳಿದೆಯಂತೆ ಹೊಂಬಾಳೆ ಫಿಲ್ಮ್ ಸಂಸ್ಥೆ. ಬೆಂಗಳೂರಿನ ರಾಜ್ ಕಮಲ್ ಆರ್ಟ್ಸ್ ನಲ್ಲಿ ಕಟೌಟ್ ಕೆಲಸ ಶುರುವಾಗಿದ್ದು, ಹಗಲು ರಾತ್ರಿ ಎನ್ನದೇ ಕಲಾವಿದರು ಈ ಕೆಲಸದಲ್ಲಿ ತೊಡಗಿದ್ದಾರೆ. ಇದನ್ನೂ ಓದಿ: ಏಪ್ರಿಲ್ 2ಕ್ಕೆ ಕಿಚ್ಚನ ‘ವಿಕ್ರಾಂತ್ ರೋಣ’ ಟೀಸರ್ ರಿಲೀಸ್

    ಮೊದಲ ಹಂತದ ಕಟೌಟ್ ಗಳಲ್ಲಿ ಯಶ್ ಅವರ ಎರಡು ಲುಕ್ ಗಳು ಇರಲಿದ್ದು, 24 ಅಡಿಯಿಂದ 72 ಅಡಿವರೆಗೂ ಈ ಕಟೌಟ್ ಗಳು ರೆಡಿಯಾಗುತ್ತಿವೆ. ಯಶ್ ಈ ಸಿನಿಮಾದಲ್ಲಿ ನಾನಾ ಲುಕ್ ಗಳಲ್ಲಿ ಕಾಣಿಸಿಕೊಂಡಿದ್ದರೂ, ಎರಡು ಲುಕ್ ಗಳನ್ನು ಮಾತ್ರ ಕಟೌಟ್ ಮೂಲಕ ರಿವಿಲ್ ಮಾಡಲಾಗುತ್ತಿದೆ. ಅಲ್ಲದೇ ಯಶ್ ಜತೆ ಸಂಜಯ್ ದತ್ ಅವರ ಕಟೌಟ್ ಗಳು ಕೂಡ ರಾರಾಜಿಸಲಿವೆ. ಇದನ್ನೂ ಓದಿ: ಮೂರು ದಿನಕ್ಕೆ 500 ಕೋಟಿ ಬಾಚಿದ ಆರ್.ಆರ್.ಆರ್: ಬಾಕ್ಸ್ ಆಫೀಸ್ ಚಿಂದಿಚಿತ್ರಾನ್ನ

    ಪ್ರಶಾಂತ್ ನೀಲ್ ನಿರ್ದೇಶನದ ಈ ಸಿನಿಮಾ ಚಾಪ್ಟರ್ ಒಂದು ರಿಲೀಸ್ ಆದಾಗಲೇ ದಾಖಲೆ ಸೃಷ್ಟಿಸಿತ್ತು. ಈ ಸಲವೂ ಅಷ್ಟೇ ಕ್ರೇಜ್ ಕ್ರಿಯೇಟ್ ಮಾಡಿದೆ. ಮೊನ್ನೆಯಷ್ಟೇ ರಿಲೀಸ್ ಆಗಿರುವ ಟ್ರೈಲರ್ ಭಾರೀ ಸದ್ದು ಮಾಡಿದ್ದು, ರಿಲೀಸ್ ಆದ 24 ಗಂಟೆಯಲ್ಲಿ 109 ಮಿಲಿಯನ್ ನೋಡುಗರನ್ನು ಅದು ಆಕರ್ಷಿಸಿದೆ. ಭಾರತ ಸಿನಿಮಾ ರಂಗದ ಇತಿಹಾಸದಲ್ಲೇ ಈ ಪ್ರಮಾಣದಲ್ಲಿ ನೋಡಿದ ಟ್ರೈಲರ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

  • ಕೆಜಿಎಫ್ 2 ಟ್ರೈಲರ್ ರಿಲೀಸ್ : ಸಂಪೂರ್ಣ ಮಾಹಿತಿ ಜತೆ  Exclusive Photo Album

    ಕೆಜಿಎಫ್ 2 ಟ್ರೈಲರ್ ರಿಲೀಸ್ : ಸಂಪೂರ್ಣ ಮಾಹಿತಿ ಜತೆ Exclusive Photo Album

    ಗತ್ತೇ ತಿರುಗಿನೋಡುವಂಥಹ ಸಿನಿಮಾ ಕೊಟ್ಟ ‘ಕೆಜಿಎಫ್’ ಮೇಲೆ ಇಡೀ ದೇಶದ ದೃಷ್ಟಿ ಇದೆ. ಕನ್ನಡ ಮೂಲದ ಚಿತ್ರವಾದ್ದರಿಂದ ಕನ್ನಡ ನೆಲದಲ್ಲೇ ಕೆಜಿಎಫ್ 2 ಟ್ರೈಲರ್ ಅನಾವರಣ ಮಾಡಲಾಗಿದೆ. ವಿಶೇಷ ಅಂದ್ರೆ ಈ ಅದ್ದೂರಿ ಕಾರ್ಯಕ್ರಮವನ್ನ ನಟ, ನಿರ್ದೇಶಕ, ನಿರೂಪಕ ಕರಣ್ ಜೋಹರ್ ನಿರೂಪಣೆ ಮಾಡಿದ್ದು. ಬೆಂಗಳೂರಿನ ಓರಾಯನ್ ಮಾಲ್‍ನಲ್ಲಿ ನಡೆದ ಅದ್ದೂರಿ ಟ್ರೈಲರ್ ರಿಲೀಸ್ ಸಮಾರಂಭದಲ್ಲಿ ಸಿನಿಮಾ ಮತ್ತು ಅತಿಥಿಗಳಾಗಿ ಶಿವರಾಜ್ ಕುಮಾರ್ ಹಾಗೂ ಸಚಿವ ಅಶ್ವತ್ಥ್ ನಾರಾಯಣ್ ಆಗಮಿಸಿದ್ದರು.

    ಒದೊಂದೂ ಭಾಷೆಯಲ್ಲೂ ಆಯಾ ಸೂಪರ್ ಸ್ಟಾರ್‌ಗಳು ಡಿಜಿಟಲ್ ರಿಲೀಸ್ ಉಸ್ತುವಾರಿಯನ್ನ ವಹಿಸಿಕೊಂಡ್ರು. ಕನ್ನಡದಲ್ಲಿ ಶಿವಣ್ಣ, ತೆಲುಗಿನಲ್ಲಿ ರಾಮ್‍ಚರಣ್ ತೇಜ, ತಮಿಳಿನಲ್ಲಿ ಸೂರ್ಯ, ಮಲಯಾಳಂನಲ್ಲಿ ಪೃಥ್ವಿರಾಜ್ ಸುಕುಮಾರನ್, ಹಿಂದಿಯಲ್ಲಿ ಫರಾನ್ ಅಖ್ತರ್ ಸೇರಿದಂತೆ ದೊಡ್ಡ ದೊಡ್ಡ ಸ್ಟಾರ್ ನಟರೇ ಟ್ರೈಲರ್ ರಿಲೀಸ್ ಮಾಡಿದ್ದು ವಿಶೇಷವಾಗಿತ್ತು. ಇದನ್ನೂ ಓದಿ : ಮೂರು ದಿನಕ್ಕೆ 500 ಕೋಟಿ ಬಾಚಿದ ಆರ್.ಆರ್.ಆರ್: ಬಾಕ್ಸ್ ಆಫೀಸ್ ಚಿಂದಿಚಿತ್ರಾನ್ನ

    ಏಪ್ರಿಲ್ 14ಕ್ಕೆ ರಿಲೀಸ್ ಆಗಲಿರುವ ಕೆಜಿಎಫ್ 2 ಚಿತ್ರದ ಟೀಸರ್ ಹಾಗೂ ಹಾಡೊಂದು ರಿಲೀಸ್ ಆಗಿದ್ದು ಬಿಟ್ಟರೆ ಪಾರ್ಟ್ 2 ಬಗೆಗಿನ ಚಿಕ್ಕ ಸುಳಿವೂ ಇದುವರೆಗೆ ಇರಲಿಲ್ಲ. ಆ ಕುತೂಹಲವನ್ನ ಹಾಗೇ ಕಾಯ್ದಿರಿಸಿಕೊಂಡಿದ್ದ ಚಿತ್ರತಂಡ ರಿಲೀಸ್‍ಗೆ ಕೆಲವೇ ದಿನಗಳ ಮುಂಚೆ ಈಗ ಆಫಿಷಿಯಲ್ ಟ್ರೈಲರ್ ಲಾಂಚ್ ಮಾಡುವ ಮೂಲಕ ಪ್ರಚಾರಕ್ಕೆ ಚಾಲನೆ ನೀಡಲಾಗಿದೆ.

    ಈ ಸಮಾರಂಭಕ್ಕೆ ರಾಕಿಂಗ್ ಸ್ಟಾರ್ ಯಶ್ ಪತ್ನಿ ರಾಧಿಕಾ ಪಂಡಿತ್ ಜೊತೆಗೆ ಆಗಮಿಸಿದರು. ಒಂದೇ ಕಾರ್ಯಕ್ರಮದಲ್ಲಿ ರಾಕಿಬಾಯ್ ಮತ್ತು ಮುನ್ನಬಾಯ್ ಒಂದಾಗಿದ್ದು, ಕಾರ್ಯಕ್ರಮಕ್ಕೆ ಹೆಚ್ಚು ಮೆರುಗು ಸೇರಿಕೊಂಡಿತು. ಈ ಅದ್ದೂರಿ ಕಾರ್ಯಕ್ರಮಕ್ಕೆ ಚಂದನವನದ ಅನೇಕ ಗಣ್ಯರು ಭಾಗಿಯಾಗಿದ್ದು, ಟಾಲಿವುಡ್ ಮತ್ತು ಬಾಲಿವುಡ್ ಸಿನಿತಾರೆಯರು ಭಾಗಿಯಾಗಿದ್ದರು. ಇದನ್ನೂ ಓದಿ : ಕೆಜಿಎಫ್ ಸಿನಿಮಾ ಆಗೋಕೆ ಮೂವರು ಮಹಿಳೆಯರು ಕಾರಣ: ವಿಜಯ್ ಕಿರಗಂದೂರು

    ಯಶ್ ಬೇರೆ ಲೆವೆಲ್ಗೆ ಬೆಳೆದಿದ್ದಾರೆ.

    ಕೆಜಿಎಫ್-2 ಟ್ರೈಲರ್ ರಿಲೀಸ್ ಮಾಡಿದ ನಂತರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಟ್ರೈಲರ್‌ನಲ್ಲಿದ್ದ ಯಶ್ ವೈಲನ್ಸ್… ವೈಲನ್ಸ್.. ಡೈಲಾಗ್ ಹೇಳಿ ಯಶ್, ಪ್ರಶಾಂತ್ ಸರ್, ಸಂಜಯ್ ದತ್ತ್ ಸರ್ ಸೂಪರ್ ಆಗಿ ಟ್ರೈಲರ್‌ ಬಂದಿದೆ ಎಂದು ಚಿತ್ರತಂಡಕ್ಕೆ ಶುಭ ಹಾರೈಸಿದರು. ನಂತರ ಮಾತನ್ನು ಮುಂದುವರಿಸಿದ ಅವರು, ನಿಜವಾಗಿ ಟ್ರೈಲರ್ ಸೂಪರ್ ಆಗಿತ್ತು. ಮೊದಲಿನಿಂದಲೂ ನನಗೆ ಯಶ್ ಕಂಡ್ರೆ ತುಂಬಾ ಇಷ್ಟ. ಅವರು ನೋಡಲು ತುಂಬಾ ಹ್ಯಾಂಡ್‍ಸಮ್ ಆಗಿ ಇದ್ದಾರೆ. ಯಶ್ ಸಿನಿಮಾ ನೋಡಲು ನಿಜಕ್ಕೂ ತುಂಬಾ ಖುಷಿಯಾಗುತ್ತೆ. ನಾವಿಬ್ಬರು ‘ತಮಸ್ಸು’ ಸಿನಿಮಾದಲ್ಲಿ ಒಟ್ಟಿಗೆ ನಟಿಸಿದ್ದೆವು. ಅಲ್ಲಿಂದ ಕೆಜಿಎಫ್ ಮೂಲಕ ಬೇರೆ ಲೆವೆಲ್‌ಗೆ ಬೆಳೆದಿದ್ದಾರೆ. ಅದರಲ್ಲಿಯೂ ಯಶ್, ರಾಧಿಕಾ ಅವರನ್ನು ಮದುವೆಯಾದ ಮೇಲೆ ಅದೃಷ್ಟ ಹೆಚ್ಚಾಗಿದೆ ಎಂದು ಪ್ರಶಂಸೆಯ ಮಾತುಗಳನ್ನಾಡಿದ್ದಾರೆ.

    ಎಲ್ಲರಿಗೂ ಧನ್ಯವಾದ ಹೇಳಿದ ಯಶ್

    ಟ್ರೈಲರ್ ಲಾಂಚ್ ಬಳಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಮೊದಲು ನಮ್ಮೂರಿಗೆ ಸ್ವಾಗತ. ನಾನು ನನ್ನ ಜೀವನದಲ್ಲಿ ಯಾವತ್ತು ನರ್ವಸ್ ಆಗಿಲ್ಲ. ಆದರೆ ಇವತ್ತು ಯಾವ ರೀತಿ ಫೀಲಿಂಗ್ ಆಗುತ್ತಿದೆ ಎಂದು ನನಗೆ ಅರ್ಥವಾಗುತ್ತಿಲ್ಲ. ಈ ಭಾವನೆಯನ್ನು ಯಾವ ರೀತಿ ಹೇಳಿಕೊಳ್ಳಬೇಕು ಅಂತ ಗೊತ್ತಾಗುತ್ತಿಲ್ಲ. ವಿ ಮಿಸ್ ಯೂ ಅಪ್ಪು ಸರ್ ಎಂದು ತಮ್ಮ ಮಾತನ್ನು ಮುಂದುವರೆದಿಸಿದರು. ಪುನೀತ್ ರಾಜ್‍ಕುಮಾರ್ ಅವರ ‘ನಿನ್ನಿಂದಲೇ’ ಸಿನಿಮಾದಿಂದಲ್ಲೇ ಹೊಂಬಾಳೆ ಫಿಲ್ಮ್ ಜರ್ನಿ ಪ್ರಾರಂಭವಾಗಿತ್ತು. ಈ ದಿನ ಬರುತ್ತೆ ಎಂದು ನಾವು ತಿಳಿದುಕೊಂಡಿರಲಿಲ್ಲ. ಶಿವಣ್ಣ ನಮ್ಮ ಅಣ್ಣ. ಅವರನ್ನು ಎಲ್ಲರೂ ಅಳಿಸುವುದನ್ನು ನನ್ನ ಕೈಯಲ್ಲಿ ನೋಡೋಕೆ ಆಗುತ್ತಿಲ್ಲ. ಇಲ್ಲಿವರೆಗೂ ನಾನು ಅಪ್ಪು ಅವರ ಬಗ್ಗೆ ಮಾತನಾಡಿಲ್ಲ. ಆದರೆ ಇಂದು ನಾನು ಅವರ ಬಗ್ಗೆ ಮಾತನಾಡಲು ಇಷ್ಟ ಪಡುತ್ತೇನೆ. ಅವರು ನಮ್ಮೆಲ್ಲರ ಜೊತೆಯಲ್ಲೇ ಇರುತ್ತಾರೆ. ಅವರು ಎಲ್ಲರ ನಡುವೆ ಜೀವಂತವಾಗಿ ಇರುತ್ತಾರೆ ಎಂದು ನೆನೆದರು ಇದನ್ನೂ ಓದಿ : ಪ್ರತಿಷ್ಠಿತ ಆಸ್ಕರ್ ಪ್ರಶಸ್ತಿ ವೇದಿಕೆಯಲ್ಲೇ ಕಪಾಳಮೋಕ್ಷ: ಅತ್ಯುತ್ತಮ ನಟ ಆಸ್ಕರ್ ವಿಜೇತ ವಿಲ್ ಸ್ಮಿತ್ ಉಗ್ರತಾಪ

    ನಾನು ನನ್ನ ಇಂಡಸ್ಟ್ರಿಯನ್ನು ತುಂಬಾ ಅಚ್ಚುಕೊಂಡಿದ್ದೇನೆ. ನಾನು ನಮ್ಮ ಸಿನಿಮಾ ಮತ್ತು ನಮ್ಮ ಇಂಡಸ್ಟ್ರಿಗೆ ಪ್ರಶಂಸೆ ಹೋಗಬೇಕು ಎಂದು ನಾನು ಇಷ್ಟ ಪಡುತ್ತೇನೆ. ನನಗೆ ಇವರಲ್ಲಿ ಕ್ರೆಡಿಟ್ ಬೇಡ. ಇದು ನಮ್ಮ ಕನ್ನಡ ಜನರ ಕನಸು ಆಗಿತ್ತು. ಆದರೆ ಒಂದೇ ಸಮಯದಲ್ಲಿ ಕನ್ನಡದ ಲೆಜೆಂಡ್‍ಗಳನ್ನು ನೋಡುತ್ತಿರುವುದಕ್ಕೆ ತುಂಬಾ ಸಂತೋಷವಾಗುತ್ತಿದೆ. ಬೇರೆ ಭಾಷೆ ತಾರೆಯರು ನಮ್ಮ ಇಂಡಸ್ಟ್ರಿ ಬಗ್ಗೆ ಹೆಚ್ಚು ಪ್ರೀತಿ ತೋರಿಸಿ ಇಲ್ಲಿಗೆ ಬಂದಿರುವುದು ತುಂಬಾ ಸಂತೋಷವಾಗುತ್ತಿದೆ. ಕೆಜಿಎಫ್ 1 ಮುಗಿನ ಮೇಲೆ ನಾವು ನಮ್ಮ ಇಂಡಸ್ಟ್ರಿಗೋಸ್ಕರ ಏನಾದರೂ ಮಾಡಿದ್ದೇವೆ ಎಂದು ಸಂತೋಷವಾಗುತ್ತಿದೆ ಎಂದರು.

    ನಾನು ಈ ಬಗ್ಗೆ ಹೊಂಬಾಳೆ ವಿಜಯ್ ಕಿರಗಂದೂರು ಅವರ ಜೊತೆ ಕೆಜಿಎಫ್ ಬಗ್ಗೆ ಮಾತನಾಡುತ್ತಿರಬೇಕಾದರೆ ಎಲ್ಲರೂ ನಮ್ಮನ್ನು ಹುಚ್ಚ ಎಂದು ತಿಳಿದಿದ್ದರು. ಎಲ್ಲ ಹೀರೋಗಳಿಗೂ ಹೆಚ್ಚು ದೊಡ್ಡ ಸ್ಥಾನದಲ್ಲಿ ಇರಬೇಕು ಎಂದು ಇಷ್ಟವಿರುತ್ತೆ. ಅದೇ ರೀತಿ ನಾನು ಮಾತನಾಡುತ್ತಿದ್ದೆ ಎಂದು ಕೆಲವರು ತಿಳಿದುಕೊಂಡಿದ್ದರು. ಆದರೆ ವಿಜಿ ಅವರು ನನ್ನ ಉದ್ದೇಶವನ್ನು ಸರಿಯಾಗಿ ತಿಳಿದುಕೊಂಡು ನನಗೆ ಬೆಂಬಲವಾಗಿ ನಿಂತರು. ಯಾರು ಊಹಿಸಲು ಸಾಧ್ಯವಾಗದನ್ನು ಅವರು ಮಾಡಿದ್ದಾರೆ. ಇದೇ ರೀತಿ ಕೆಜಿಎಫ್ ಆಯ್ತು. ಇದಕ್ಕೆ ಮುಖ್ಯ ಕಾರಣ ಪ್ರಶಾಂತ್ ನೀಲ್ ಎಂದು ವಿವರಿಸಿದರು. ಇದನ್ನೂ ಓದಿ: ಕೆಜಿಎಫ್-2 ಟ್ರೈಲರ್ ರಿಲೀಸ್ ಮಾಡಿದ ಶಿವಣ್ಣ- ರಾಕಿಬಾಯ್ ಅಬ್ಬರ ಶುರು

    ಸಂಜಯ್ ದತ್ತ ಅಣ್ಣ

    ಟ್ರೈಲರ್ ರಿಲೀಸ್ ಆದ ನಂತರ ಸಭೆಯನ್ನು ಉದ್ದೇಶಿ ಮಾತನಾಡಿದ ಅವರು, 45 ವರ್ಷಗಳ ನನ್ನ ಸಿನಿಜರ್ನಿಯಲ್ಲಿ ಕೆಜಿಎಫ್-2 ಒಂದು ಅದ್ಭುತವಾದ ಪಾಠವಾಗಿದೆ. ಸಿನಿಮಾ ಸೆಟ್‍ನಲ್ಲಿ ಇದ್ದ ಶಿಸ್ತು, ಸಿನಿಮಾ ಮಾಡಬೇಕು ಎಂದು ಈ ತಂಡಕ್ಕೆ ಇರುವ ಗುರಿ ನೋಡಿ ತುಂಬಾ ಖುಷಿಯಾಗುತ್ತೆ. ಈ ತಂಡದಿಂದ ನಾನು ತುಂಬಾ ಕಲಿತಿದ್ದೇನೆ. ಈ ಸಿನಿಮಾ ಕುಟುಂಬದ ರೀತಿ ಎಂದು ಸಂತೋಷವನ್ನು ವ್ಯಕ್ತಪಡಿಸಿದರು. ಇಲ್ಲಿರುವ ಪ್ರತಿಯೊಬ್ಬ ಜೂನಿಯರ್ ಆರ್ಟಿಸ್ಟ್ ಕೂಡ ತುಂಬಾ ಮುಖ್ಯವಾಗಿದ್ದರು. ಎಲ್ಲರನ್ನು ಗೌರವದಿಂದ ನೋಡಿಕೊಳ್ಳುತ್ತಿದ್ದರು. ನಾನು ಯಶ್ ಅವರಿಗೆ ಧನ್ಯವಾದ ಹೇಳುತ್ತೇನೆ. ನನ್ನ ಕೋ ಆರ್ಟಿಸ್ಟ್ ಆಗಿ ನೀವು ತುಂಬಾ ಚೆನ್ನಾಗಿ ಬೆಂಬಲ ಕೊಟ್ಟಿದ್ದಾರೆ. ನನ್ನನ್ನು ಅಣ್ಣ ಎಂದು ಪ್ರೀತಿಯಿಂದ ಕರೆದಿದ್ದಾರೆ.

    ಪುನೀತ್ ನೆನೆದ ರಾಧಿಕಾ ಪಂಡಿತ್

    ಟ್ರೈಲರ್ ರಿಲೀಸ್ ಆದ ನಂತರ ಸಭೆಯನ್ನು ಉದ್ದೇಶಿ ಮಾತನಾಡಿದ ಅವರು, 3 ವರ್ಷದ ನಂತರ ನಾನು ಎಲ್ಲರೊಂದಿಗೆ ಮಾತನಾಡುತ್ತಿದ್ದೇನೆ. ಈ ಸಿನಿಮಾಕ್ಕೆ ಶ್ರಮಿಸಿದ ಪ್ರತಿಯೊಬ್ಬರಿಗೂ ಧನ್ಯವಾದ ತಿಳಿಸುತ್ತೇನೆ. ಕೆಜಿಎಫ್ ಚಿತ್ರವನ್ನು ನಾನು ವೀಕ್ಷಿಸಿದ್ದೇನೆ. ನನ್ನ ಪತಿಯ ಸಿನಿಮಾ ಎಂದು ನಾನು ಹೊಗಳುತ್ತಿಲ್ಲ. ಕೆಜಿಫ್ ಎನ್ನುವ ಕಾರಣಕ್ಕೆ ನನಗೆ ಸಿನಿಮಾದ ಮೇಲೆ ಪ್ರೀತಿ ಇದೆ. ಸಿನಿಮಾವನ್ನು ನಾನು ನಿಜಕ್ಕೂ ಇಷ್ಟಪಟ್ಟೆ ಎಂದು ಹೇಳಿದರು. ವಿಜಯ್, ಪ್ರಶಾಂತ್ ನಿಲಜ್, ರವಿ ಬಸೂರ್ ಯಶ್, ಶ್ರೀನಿಧಿ ಪ್ರತಿಯೊಬ್ಬರು ಈ ಸಿನಿಮಾದ ಕಂಬಂಗಳಿದ್ದಂತೆ. ಅದರಲ್ಲೂ ರವೀನಾ ಟಂಡನ್ ಅವರ ಅಭಿನಯ ನನಗೆ ತುಂಬಾ ಇಷ್ಟವಾಯಿತು. ಗುಸ್ಕೆ ಮಾರೆಂಗೆ ಡೈಲಾಗ್ ತುಂಬಾ ಇಷ್ಟವಾಯಿತು. ಸಂಜಯ್ ದತ್ ಅವರನ್ನು ಈ ರೀತಿ ನಾನು ಎಂದೂ ನೋಡಿರಲಿಲ್ಲ. ಆದರೆ ಇಡೀ ಸಿನಿಮಾದಲ್ಲಿ ನಿಮ್ಮ ಇರುವಿಕೆ ನನಗೆ ತುಂಬಾ ಇಷ್ಟವಾಯಿತು ಎಂದು ಸಂತಸ ವ್ಯಕ್ತಪಡಿಸಿದರು. ಇದೇ ವೇಳೆ ಶಿವರಾಜ್ ಕುಮಾರ್ ಅವರೇ ನೀವು ಇಲ್ಲಿ ಬಂದಿದ್ದಕ್ಕೆ ಸಂತೋಷವಾಗಿದೆ. ಅಪ್ಪು ಅವರು ನಮ್ಮನ್ನಗಲಿದ್ದಾರೆ. ಆದರೆ ಅವರನ್ನು ಶಿವಣ್ಣನ್ನಲ್ಲೆ ಕಾಣುತ್ತಿದ್ದೇವೆ ಎಂದು ಪುನೀತ್ ರಾಜ್‍ಕುಮಾರ್ ಅವರನ್ನು ನೆನೆದರು.

  • ಸಿನಿಮಾದ ಒಂದಷ್ಟು ಕಥೆ ಬಿಟ್ಟುಕೊಟ್ಟ ‘ಕೆಜಿಎಫ್ 2’ ಟ್ರೈಲರ್

    ಸಿನಿಮಾದ ಒಂದಷ್ಟು ಕಥೆ ಬಿಟ್ಟುಕೊಟ್ಟ ‘ಕೆಜಿಎಫ್ 2’ ಟ್ರೈಲರ್

    ಶ್  ನಟನೆಯ ‘ಕೆಜಿಎಫ್ ಚಾಪ್ಟರ್ 2’ ಸಿನಿಮಾದ ಟ್ರೈಲರ್ ರಿಲೀಸ್ ಆಗಿದೆ. ಅದ್ಧೂರಿ ತಾರಾಗಣ, ಭರ್ಜರಿ ಮೇಕಿಂಗ್ ಮತ್ತು ಭಾರೀ ಬಜೆಟ್ ನಲ್ಲಿ ಮೂಡಿ ಬಂದಿರುವ ಸಿನಿಮಾದ ಸಾಕಷ್ಟು ಅಂಶಗಳನ್ನು ಈ ಟ್ರೈಲರ್ ನಲ್ಲಿ ತೋರಿಸಲಾಗಿದೆ. ಯಶ್, ರವೀನಾ ಟಂಡನ್, ಸಂಜಯ್ ದತ್, ಪ್ರಕಾಶ್ ರೈ, ಮಾಳ್ವಿಕಾ ಅವಿನಾಶ್, ಶ್ರೀನಿಧಿ ಶೆಟ್ಟಿ, ಅಚ್ಯುತ್ ಕುಮಾರ್, ವಸಿಷ್ಠ ಸಿಂಹ, ರಾವ್ ರಮೇಶ್, ಈಶ್ವರಿ ರಾವ್, ಹರೀಶ್ ರೈ, ದಿನೇಶ್ ಮಂಗಳೂರು, ಅರ್ಚನಾ ಹೀಗೆ ಬಹುತೇಕ ಕಲಾವಿದರನ್ನು ಈ ಟ್ರೈಲರ್ ಒಳಗೊಂಡಿದೆ. ಹಾಗಾಗಿ ಕಲಾವಿದರ ದಂಡೇ ಈ ಸಿನಿಮಾದಲ್ಲಿದೆ. ಇದನ್ನೂ ಓದಿ : ಕೆಜಿಎಫ್ ಸಿನಿಮಾ ಆಗೋಕೆ ಮೂವರು ಮಹಿಳೆಯರು ಕಾರಣ: ವಿಜಯ್ ಕಿರಗಂದೂರು

    ಟ್ರೈಲರ್ ಶುರುವಾಗುವುದೇ ಒಂದು ಇಂಟ್ರಸ್ಟಿಂಗ್ ಸಂಗತಿಯಿಂದ. ‘ಕೆಜಿಎಫ್ ನಲ್ಲಿ ಗರುಡ ಸಾಯಿಸಿದ ನಂತರ ಮುಂದೇನಾಯಿತು ಎಂದು ನೀವು ಓದ್ತಿರಾ’ ಎಂಬ ಸಾಲಿನಿಂದ ಟ್ರೈಲರ್ ಶುರುವಾಗುತ್ತದೆ. ಇದನ್ನೂ ಓದಿ : ಪ್ರತಿಷ್ಠಿತ ಆಸ್ಕರ್ ಪ್ರಶಸ್ತಿ ವೇದಿಕೆಯಲ್ಲೇ ಕಪಾಳಮೋಕ್ಷ: ಅತ್ಯುತ್ತಮ ನಟ ಆಸ್ಕರ್ ವಿಜೇತ ವಿಲ್ ಸ್ಮಿತ್ ಉಗ್ರತಾಪ

    ಮಹಾಕ್ರೂರಿ, ಕೆಜಿಎಫ್ ಅಧಿಪತಿಯಾದ ಗರುಡನ ರುಂಡ ಚೆಂಡಾಡಿ, ಗರುಡ ಸತ್ತ ನಂತರ ನರಾಚಿ ಕೋಟೆಯ ಅಧಿಪತಿಯಾಗುತ್ತಾನೆ ರಾಕಿ. ನಂತರ ಈ ರಾಕಿ ಭಾಯ್ ಏನಾದ ಎನ್ನುವ ಕುತೂಹಲದೊಂದಿಗೆ ಚಾಪ್ಟರ್ 1 ಮುಗಿದಿತ್ತು. ಅಂದರೆ, ಗರುಡ ಸತ್ತ ನಂತರದ ಮತ್ತೊಂದು ಅಧ್ಯಾಯವನ್ನು ಚಾಪ್ಟರ್ 2 ಕಥೆ ಒಳಗೊಂಡಿದೆ. ಕಳೆದ ಬಾರಿ ಅನಂತ್ ನಾಗ್ ನಿರ್ವಹಿಸಿದ್ದ ಪಾತ್ರದಂತೆಯೇ ಕಾಣುವ ಅಥವಾ ಅದೇ ಪಾತ್ರದ ಮುಂದುವರಿಕೆ ಎನ್ನುವಂತೆ ಪ್ರಕಾಶ್ ರೈ ಕಾಣಿಸುತ್ತಾರೆ. ಪ್ರಕಾಶ್ ರೈ ಮಾಡಿರುವ ಪಾತ್ರವೇ ಹೇಳುವಂತೆ, ‘ರಕ್ತದಿಂದ ಬರೆದಿರೋ ಕಥೆಯಿದು. ಶಾಯಿಯಿಂದ ಮುಂದುವರೆಸೋಕೆ ಆಗಲ್ಲ. ಮತ್ತೆ ರಕ್ತನೇ ಕೇಳುತ್ತದೆ’ ಎಂಬ ಡೈಲಾಗ್, ಕೆಜಿಎಫ್ ಚಾಪ್ಟರ್ 2 ಕಥೆಯು ಒಂದು ರಕ್ತಸಿಕ್ತ ಅಧ್ಯಾಯ ಅನ್ನುವುದು ಪಕ್ಕಾ ಮಾಡುತ್ತದೆ. ಚಾಪ್ಟರ್ 1 ಗಿಂತಲೂ ಈ ಬಾರಿ ಘರ್ಷನೆ, ಹಿಂಸೆ ಮತ್ತು ಸಂಘರ್ಷ ಹೆಚ್ಚೇ ಇರಲಿದೆ.   ಇದನ್ನೂ ಓದಿ: ಕೆಜಿಎಫ್-2 ಟ್ರೈಲರ್ ರಿಲೀಸ್ ಮಾಡಿದ ಶಿವಣ್ಣ- ರಾಕಿಬಾಯ್ ಅಬ್ಬರ ಶುರು

    ರಾಕಿಭಾಯ್ ಹೇಳುವ ಸಂಭಾಷಣೆ ‘ನನಗೆ ಹಿಂಸೆ ಇಷ್ಟವಿಲ್ಲ. ಆದರೆ, ನನ್ನನ್ನು ಹಿಂಸೆಯೇ ಇಷ್ಟಪಡುತ್ತಿದೆ. ಅದನ್ನು ನಿವಾರಿಸಲು ಆಗದು’ ಎಂದು ಇಂಗ್ಲಿಷ್ ನಲ್ಲಿ ಹೇಳುವುದು ಯಾವ ಮಟ್ಟಿಗೆ ವೈಲೆನ್ಸ್ ಸಿನಿಮಾದಲ್ಲಿ ಇರಲಿದೆ ಎನ್ನುವುದನ್ನು ನೀವೇ ಊಹಿಸಿಕೊಳ್ಳಿ. ಚಾಪ್ಟರ್ 1 ರಲ್ಲಿ ಗರುಡನ ಹವಾ ಇತ್ತು. ಈ ಬಾರಿ ಅಧೀರನ ಪಾತ್ರ ಪ್ರವೇಶವಾಗಿದೆ. ಈ ಪಾತ್ರವನ್ನು ಸಂಜಯ್ ದತ್ ನಿರ್ವಹಿಸಿದ್ದಾರೆ ಅಂದರೆ, ಅಧೀರ ಪಾತ್ರದ ತೂಕ ಎಷ್ಟಿರಲಿದೆ ಎಂದು ಅಂದಾಜಿಸುವುದು ಕಷ್ಟ. ವಿಚಿತ್ರ ಗೆಟಪ್ ನಲ್ಲಿ ಸಂಜಯ್ ದತ್ ಕಾಣಿಸಿಕೊಂಡಿದ್ದಾರೆ. ಹಾಗಾಗಿ ರಾಕಿಭಾಯ್ ಗೆ ಸರಿಯಾದ ಎದುರಾಳಿಯನ್ನೇ ನಿರ್ದೇಶಕ ಪ್ರಶಾಂತ್ ನೀಲ್ ತಂದಿದ್ದಾರೆ. ಇದನ್ನೂ ಓದಿ: ಹೊಸ ದಾಖಲೆ ಬರೆದ ಕೆಜಿಎಫ್ 2 ಟ್ರೈಲರ್ – ರಿಲೀಸ್ ಆದ ಕೆಲವೇ ನಿಮಿಷದಲ್ಲಿ ಲಕ್ಷಾಂತರ ವ್ಯೂ

    ಚಾಪ್ಟರ್ 1ರಲ್ಲಿ ಗ್ಯಾಂಗ್ ಸ್ಟರ್ ಆಗಿ ಕಾಣಿಸಿಕೊಂಡಿದ್ದ ರಾಕ್ ಭಾಯ್, ಈ ಬಾರಿ ಉದ್ಯಮಿಯಾಗಿಯೂ ಬದಲಾಗಿದ್ದಾರೆ. ಅಮ್ಮನಿಗೆ ಚಿನ್ನವನ್ನು ತಂದುಕೊಡುವ ಬಾಲ ರಾಕಿಭಾಯ್ ಕನಸು, ಈ ಸಿನಿಮಾದಲ್ಲಿ ಈಡೇರಿದಂತಿದೆ. ಟ್ರೈಲರ್ ನಲ್ಲಿ ಅಂಥದ್ದೊಂದು ಡೈಲಾಗ್ ಇಟ್ಟು, ನಾಳೆವರೆಗೂ ಕಾಯೋಣ ಅನಿಸುತ್ತದೆ. ‘ವೈಲೆನ್ಸ್.. ವೈಲೆನ್ಸ್.. ವೈಲೆನ್ಸ್…’ ಎನ್ನುತ್ತಾ ಎಂಟ್ರಿ ಕೊಡುವ ನಾಯಕನ ಮಾತೇ ಇಡೀ ಸಿನಿಮಾದ ಕಥಾ ಮತ್ತು ಕೇಂದ್ರ ವಸ್ತುವಾಗಿದೆ.

  • ಕೆಜಿಎಫ್ ಸಿನಿಮಾ ಆಗೋಕೆ ಮೂವರು ಮಹಿಳೆಯರು ಕಾರಣ: ವಿಜಯ್ ಕಿರಗಂದೂರು

    ಕೆಜಿಎಫ್ ಸಿನಿಮಾ ಆಗೋಕೆ ಮೂವರು ಮಹಿಳೆಯರು ಕಾರಣ: ವಿಜಯ್ ಕಿರಗಂದೂರು

    ದೇಶಾದ್ಯಂತ ಇದೀಗ ಕೆಜಿಎಫ್ 2 ಹವಾ ಕ್ರಿಯೇಟ್ ಆಗಿದೆ. ನೆನ್ನೆಯಷ್ಟೇ ರಿಲೀಸ್ ಆಗಿರುವ ಚಿತ್ರದ ಟ್ರೈಲರ್ ಗೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ಭಾರತೀಯ ಸಿನಿಮಾ ರಂಗದ ಬಹುತೇಕ ಸ್ಟಾರ್ ನಟರು ಟ್ರೈಲರ್ ಮೆಚ್ಚಿಕೊಂಡು, ಅದನ್ನು ಸೋಷಿಯಲ್ ಮೀಡಿಯಾಗಳಲ್ಲೂ ಹಂಚಿಕೊಳ್ಳುತ್ತಿದ್ದಾರೆ. ಅಭಿಮಾನಿಗಳಂತೂ ಹಬ್ಬದ ರೀತಿಯಲ್ಲೇ ಸಂಭ್ರಮಿಸುತ್ತಿದ್ದಾರೆ. ಈಗ ಕನ್ನಡದ ಚಿತ್ರವೊಂದು ಬಾಲಿವುಡ್ ದಾಟಿಕೊಂಡು ಹಾಲಿವುಡ್ ಅಂಗಳಕ್ಕೆ ಪಾದಾರ್ಪಣೆ ಮಾಡಿದೆ. ಇದನ್ನೂ ಓದಿ : ಪ್ರತಿಷ್ಠಿತ ಆಸ್ಕರ್ ಪ್ರಶಸ್ತಿ ವೇದಿಕೆಯಲ್ಲೇ ಕಪಾಳಮೋಕ್ಷ: ಅತ್ಯುತ್ತಮ ನಟ ಆಸ್ಕರ್ ವಿಜೇತ ವಿಲ್ ಸ್ಮಿತ್ ಉಗ್ರತಾಪ

    ಹಲವು ದಾಖಲೆಗಳನ್ನು ಬರೆದಿರುವ ಮತ್ತು ತಾನೇ ಬರೆದ ದಾಖಲೆಯನ್ನು ಮುರಿದಿರುವ ‘ಕೆಜಿಎಫ್’ ಸಿನಿಮಾ ಶುರುವಾಗಿದ್ದು 2015ರಂದು. ನಟ ಯಶ್ ‘ಮಿಸ್ಟರ್ ಅಂಡ್ ಮಿಸೆಸ್ ರಾಮಾಚಾರಿ’ ಸಿನಿಮಾದ ಗೆಲುವಿನಲ್ಲಿದ್ದರು. ನಿರ್ದೇಶಕ ಪ್ರಶಾಂತ್ ನೀಲ್ ‘ಉ್ರಗಂ’ ಚಿತ್ರದ ಮೂಲಕ ಭರವಸೆಯ ನಿರ್ದೇಶಕರಾಗಿದ್ದರು. ಪುನೀತ್ ರಾಜ್ ಕುಮಾರ್ ನಟನೆಯ ‘ನಿನ್ನಿಂದಲೇ’ ಚಿತ್ರದ ಮೂಲಕ ಹೊಂಬಾಳೆ ಫಿಲ್ಮ್ ಬ್ಯಾನರ್ ಸಿನಿಮಾ ರಂಗ ಪ್ರವೇಶ ಮಾಡಿತ್ತು. ಈ ಮೂವರು ಸೇರಿ ಮೊದಲು ‘ಕೆಜಿಎಫ್’ ಕನಸು ಕಂಡವರು. ಇದನ್ನೂ ಓದಿ: ಹೊಸ ದಾಖಲೆ ಬರೆದ ಕೆಜಿಎಫ್ 2 ಟ್ರೈಲರ್ – ರಿಲೀಸ್ ಆದ ಕೆಲವೇ ನಿಮಿಷದಲ್ಲಿ ಲಕ್ಷಾಂತರ ವ್ಯೂ

    21 ಡಿಸೆಂಬರ್ 2018ರಲ್ಲಿ ತೆರೆಕಂಡ ‘ಕೆಜಿಎಫ್’ ಸಿನಿಮಾ ಐತಿಹಾಸಿಕ ದಾಖಲೆ ಮಾಡಿತು. ಪ್ಯಾನ್ ಇಂಡಿಯಾ ಪರಿಕಲ್ಪನೆಯ ಪಕ್ಕಾ ಸಿನಿಮಾ ಎನಿಸಿತು. ಬಾಕ್ಸ್ ಆಫೀಸಿನಲ್ಲಿ ನೂರಾರು ಕೋಟಿ ಬಾಚಿತು. ಯಶ್ ಎಂಬ ಕನ್ನಡದ ಹುಡುಗ ಪ್ಯಾನ್ ಇಂಡಿಯಾ ನಾಯಕನಾಗಿ ಹೊರಹೊಮ್ಮಿದರು. ಭಾರತೀಯ ಸಿನಿಮಾ ರಂಗವೇ ಈ ಸಿನಿಮಾವನ್ನು ಬೆರಗಿನಿಂದ ನೋಡಿತ್ತು. ನಿರ್ದೇಶಕ ಪ್ರಶಾಂತ್ ನೀಲ್ ಕೂಡ ಈ ಸಿನಿಮಾದಿಂದ ಕೇವಲ ಕನ್ನಡಕ್ಕೆ ಮಾತ್ರ ಸೀಮಿತವಾಗಲಿಲ್ಲ. ತೆಲುಗಿಗೂ ಹಾರಿದರು. ಇಷ್ಟೆಲ್ಲ ಗೆಲುವಿಗೆ ಇಂಬು ಕೊಟ್ಟಿದ್ದು ‘ಕೆಜಿಎಫ್ 2’ ಚಿತ್ರ.  ಇದನ್ನೂ ಓದಿ: ಕೆಜಿಎಫ್-2 ಟ್ರೈಲರ್ ರಿಲೀಸ್ ಮಾಡಿದ ಶಿವಣ್ಣ- ರಾಕಿಬಾಯ್ ಅಬ್ಬರ ಶುರು

    2018ರಲ್ಲೇ ‘ಕೆಜಿಎಫ್ 2’ ಸಿನಿಮಾದ ಕೆಲಸ ಶುರುವಾದವು. ಇದೀಗ ಸಿನಿಮಾ ಬಿಡುಗಡೆಗೆ ಸಿದ್ಧತೆ ಮಾಡಿಕೊಂಡಿದೆ. ಈ ಸಿನಿಮಾ ಕೂಡ ಭಾರತದ ಸಹಿತ 70 ದೇಶಗಳಲ್ಲಿ ಬಿಡುಗಡೆ ಆಗುತ್ತಿರುವುದು ಮತ್ತೊಂದು ಹೆಮ್ಮೆಯ ಸಂಗತಿ. ಬರೋಬ್ಬರಿ ಎಂಟು ವರ್ಷಗಳ ಕಾಲ ಯಶ್, ಪ್ರಶಾಂತ್ ನೀಲ್ ಮತ್ತು ನಿರ್ಮಾಪಕ ವಿಜಯ್ ಕಿರಗಂದೂರು ಈ ಸಿನಿಮಾಗಾಗಿ ಕೆಲಸ ಮಾಡಿದ್ದಾರೆ. ಇದನ್ನೂ ಓದಿ: ಪುನೀತ್ ರಾಜ್‌ಕುಮಾರ್ ಮನೆಗೆ ಭೇಟಿ ನೀಡಿದ ಸಂಜಯ್ ದತ್

    ಎಂಟು ವರ್ಷಗಳ ಕಾಲ ಯಶ್ ಯಾವುದೇ ಸಿನಿಮಾ ಒಪ್ಪಿಕೊಳ್ಳದೇ ‘ಕೆಜಿಎಫ್’ನಲ್ಲೇ ಮುಳುಗಿದ್ದಾರೆ. ಪ್ರಶಾಂತ್ ನೀಲ್ ತೆಲುಗಿನಲ್ಲಿ ಸಿನಿಮಾ ಮಾಡುತ್ತಿದ್ದರೂ, ಕೆಜಿಎಫ್ 2 ಸಿನಿಮಾದ ಕೆಲಸ ಮುಗಿದ ನಂತರವೇ ಮತ್ತೊಂದು ಕೆಲಸಕ್ಕೆ ಕೈ ಹಾಕಿದ್ದಾರೆ. ಹೊಂಬಾಳೆ ಫಿಲ್ಮ್ ಬೇರೆ ಬೇರೆ ಚಿತ್ರಗಳನ್ನೂ ಮಾಡಿದರೂ, ಕೆಜಿಎಫ್ ಟೆನ್ಷನ್ ಮಾತ್ರ ಹಾಗೆಯೇ ಇತ್ತು. ಇವರೆಲ್ಲ ಇಷ್ಟೊಂದು ನಿರಾಳತೆಯಿಂದ ಕೆಲಸ ಮಾಡಲು ಕಾರಣ ಅವರ ಪತ್ನಿಯರು ಎನ್ನುವುದು ವಿಶೇಷ. ಕೆಜಿಎಫ್ 2 ಸಿನಿಮಾದ ಟ್ರೈಲರ್ ಬಿಡುಗಡೆ ಸಮಾರಂಭದಲ್ಲಿ ಸ್ವತಃ ನಿರ್ಮಾಪಕ ವಿಜಯ್ ಕಿರಗಂದೂರ ಅವರೇ ಈ ಮಾತನ್ನು ಹೇಳಿದ್ದಾರೆ.

    “ಪ್ರಶಾಂತ್ ನೀಲ್ ಪತ್ನಿ ಲಿಖಿತ, ಯಶ್ ಪತ್ನಿ ರಾಧಿಕಾ ಪಂಡಿತ್ ಮತ್ತು ನನ್ನ (ವಿಜಯ ಕಿರಗಂದೂರ) ಪತ್ನಿ ಸಹಕಾರದಿಂದಾಗಿ ಎಂಟು ವರ್ಷಗಳ ಕಾಲ ಒಂದೇ ಸಿನಿಮಾದ ಬಗ್ಗೆ ಅಷ್ಟೂ ಶಕ್ತಿಯನ್ನು ವ್ಯಹಿಸಿದ್ದೇವೆ. ನಾವು ಕೂಲ್ ಆಗಿ ಕೆಲಸ ಮಾಡಿದ್ದೇವೆ ಎಂದರೆ, ಅದರ ಅಷ್ಟೂ ಕ್ರೆಡಿಟ್ಸ್ ಅವರಿಗೆ ಸಲ್ಲಬೇಕು’ ಎಂದಿದ್ದಾರೆ ವಿಜಯ್ ಕಿರಗಂದೂರ.

  • KGF-2 ಟ್ರೈಲರ್ ರಿಲೀಸ್‌ಗೆ ಬೆಂಗ್ಳೂರಿಗೆ ಬಂದಿಳಿದ ಬಾಲಿವುಡ್ ಬ್ಯಾಡ್ ಬಾಯ್ ಸಂಜಯ್ ದತ್

    KGF-2 ಟ್ರೈಲರ್ ರಿಲೀಸ್‌ಗೆ ಬೆಂಗ್ಳೂರಿಗೆ ಬಂದಿಳಿದ ಬಾಲಿವುಡ್ ಬ್ಯಾಡ್ ಬಾಯ್ ಸಂಜಯ್ ದತ್

    ಇಂದು ಸಂಜೆ  6.40ಕ್ಕೆ ಕೆಜಿಎಫ್ 2 ಸಿನಿಮಾದ ಟ್ರೈಲರ್ ಬಿಡುಗಡೆ ಆಗಲಿದೆ. ಈ ಸಮಾರಂಭದಲ್ಲಿ ಭಾಗವಹಿಸುವುದಕ್ಕಾಗಿ ಬಾಲಿವುಡ್ ಖ್ಯಾತ ನಟ ಸಂಜಯ್ ದತ್ ಬೆಂಗಳೂರಿಗೆ ಬಂದಿಳಿದ್ದಾರೆ. ಪ್ರತಿಷ್ಠಿತ ಹೊಟೇಲ್ ವೊಂದರಲ್ಲಿ ತಂಗಿರುವ ಅವರನ್ನು ಚಿತ್ರದ ನಿರ್ಮಾಪಕ ವಿಜಯ್ ಕಿರಗಂದೂರು ಮತ್ತು ಚಿತ್ರತಂಡ ಭೇಟಿ ಮಾಡಿದೆ. ಇದನ್ನೂ ಓದಿ : ಕೆಜಿಎಫ್ 2 ಟ್ರೈಲರ್ ಮೊದಲ ವಿಮರ್ಶೆ : ಹೇಗಿದೆ ರಾಕಿಭಾಯ್ KGF 2 ಹವಾ

    ಕೆಜಿಎಫ್ 2 ಸಿನಿಮಾದ ಟ್ರೈಲರ್ ಇಂದು ಸಂಜೆ 6.40ಕ್ಕೆ ಯಶ್ ನಟನೆಯ ಕೆಜಿಎಫ್ 2 ಸಿನಿಮಾದ ಟ್ರೈಲರ್ ಬಿಡುಗಡೆ ಆಗಲಿದೆ. ಐದು ಭಾಷೆಗಳಲ್ಲಿ  ಸಿನಿಮಾ ಬಿಡುಗಡೆ ಆಗುತ್ತಿದ್ದು, ಹಾಗಾಗಿ ಐದು ಭಾಷೆಯಲ್ಲೂ ಏಕಕಾಲಕ್ಕೆ ಟ್ರೈಲರ್ ರಿಲೀಸ್ ಮಾಡಲು ಸಿದ್ಧತೆ ಮಾಡಿಕೊಂಡಿದ್ದಾರೆ ನಿರ್ದೇಶಕ ಪ್ರಶಾಂತ್ ನೀಲ್. ಇದನ್ನೂ ಓದಿ : ಕಾಂಗ್ರೆಸ್ ಅವಧಿಯಲ್ಲಿ ನಡೆದ ಭಯೋತ್ಪಾದನೆ ತಿಳಿಯಲು ‘ದಿ ಕಾಶ್ಮೀರ್ ಫೈಲ್ಸ್’ ನೋಡಿ: ಅಮಿತ್ ಶಾ

    ತೆಲುಗಿನ ಖ್ಯಾತ ನಟ ರಾಮ್ ಚರಣ್ ತೇಜ ಕೆಜಿಎಫ್‍ 2 ತೆಲುಗು ಸಿನಿಮಾದ ಟ್ರೈಲರ್ ರಿಲೀಸ್ ಮಾಡಿದರೆ, ತಮಿಳಿನ ಖ್ಯಾತ ನಟ ಸೂರ್ಯ ಕೆಜಿಎಫ್ 2 ತಮಿಳು ಸಿನಿಮಾದ ಟ್ರೈಲರ್ ಬಿಡುಗಡೆ ಮಾಡಲಿದ್ದಾರೆ. ಕೆಜಿಎಫ್ 2 ಮಲಯಾಳಂ ಟ್ರೈರಲ್ ಅನ್ನು ಅಲ್ಲಿನ ಖ್ಯಾತ ನಟ ಪೃಥ್ವಿರಾಜ್ ರಿಲೀಸ್ ಮಾಡಲಿದ್ದಾರೆ ಎಂದು ಹೊಂಬಾಳೆ ಫಿಲ್ಮ್ ಹೇಳಿದೆ.  ಈ ಟ್ರೈಲರ್ ರಿಲೀಸ್ ಅನ್ನು ವಿಶೇಷ ರೀತಿಯಲ್ಲಿ ಬಿಡುಗಡೆಗೆ ಸಿದ್ಧತೆ ಮಾಡಿಕೊಂಡಿದ್ದು, ಯಶ್ ಅಭಿಮಾನಿಗಳು ರಾಜ್ಯದ ನಾನಾ ಕಡೆ ಹಬ್ಬದಂತೆ ಆಚರಿಸುತ್ತಿದ್ದಾರೆ. ಇದನ್ನು ಓದಿ : ಚಂದನವನ ವಿಮರ್ಶಕರ ಪ್ರಶಸ್ತಿ: ರಾಜ್ ಬಿ ಶೆಟ್ಟಿ ಅತ್ಯುತ್ತಮ ನಟ, ಗಾನವಿ ಲಕ್ಷ್ಮಣ್ ನಟಿ, ಉಳಿದ ಪ್ರಶಸ್ತಿ ವಿವರ

    ಹಾಗೆಯೇ ಹಿಂದಿಯಲ್ಲೂ ಈ ಟ್ರೈಲರ್ ಬಿಡುಗಡೆ ಆಗುತ್ತಿದ್ದು, ಅದನ್ನು ಬಾಲಿವುಡ್ ಖ್ಯಾತ ನಟ ಫರಾನ್ ಅಖ್ತರ್ ರಿಲೀಸ್ ಮಾಡುತ್ತಿದ್ದಾರೆ. ಈಗಾಗಲೇ ನಾಲ್ಕು ಟ್ರೈಲರ್ ಗಳನ್ನು ಯಾರೆಲ್ಲ ರಿಲೀಸ್ ಮಾಡಲಿದ್ದಾರೆ ಎನ್ನುವ ಮಾಹಿತಿಯನ್ನು ಚಿತ್ರತಂಡ ಹಂಚಿಕೊಂಡಿದೆ. ಕನ್ನಡದ ಟ್ರೈಲರ್ ರಿಲೀಸ್ ಯಾರು ಮಾಡಲಿದ್ದಾರೆ ಎನ್ನುವ ಮಾಹಿತಿಯನ್ನು ಇನ್ನೂ ಹಂಚಿಕೊಂಡಿಲ್ಲ. ಇವತ್ತು ಟ್ರೈಲರ್ ಬಿಡುಗಡೆಯ ಮುಖ್ಯ ಅತಿಥಿಗಳಾಗಿ ಶಿವರಾಜ್ ಕುಮಾರ್ ಮತ್ತು ಸಚಿವ ಅಶ್ವತ್ಥ್ ನಾರಾಯಣ ಭಾಗಿ ಆಗುತ್ತಿರುವುದರಿಂದ ಇವರೇ ಬಹುಶಃ ಟ್ರೈಲರ್ ಬಿಡುಗಡೆ ಮಾಡಬಹುದು ಎನ್ನಲಾಗುತ್ತಿದೆ.

  • ಕೆಜಿಎಫ್ 2 ಟ್ರೈಲರ್ ಮೊದಲ ವಿಮರ್ಶೆ : ಹೇಗಿದೆ ರಾಕಿಭಾಯ್ KGF 2 ಹವಾ

    ಕೆಜಿಎಫ್ 2 ಟ್ರೈಲರ್ ಮೊದಲ ವಿಮರ್ಶೆ : ಹೇಗಿದೆ ರಾಕಿಭಾಯ್ KGF 2 ಹವಾ

    ಇಂದು ಸಂಜೆ  6.40ಕ್ಕೆ ಕೆಜಿಎಫ್ 2 ಸಿನಿಮಾದ ಟ್ರೈಲರ್ ಬಿಡುಗಡೆ ಆಗಲಿದೆ. ಇನ್ನೂ ಕೆಲವೇ ನಿಮಿಷಗಳು ಬಾಕಿ ಇರುವಾಗಲೇ ಈ ಟ್ರೈಲರ್ ವಿಮರ್ಶೆ ಹೊರ ಬಿದ್ದಿದೆ. ಅಷ್ಟಕ್ಕೂ ಈ ಟ್ರೈಲರ್ ಮೊದಲು ನೋಡಿದ್ದು ಯಾರು ಎನ್ನುವ ಕುತೂಹಕ್ಕೂ ತೆರೆ ಬಿದ್ದಿದೆ. ಇದನ್ನೂ ಓದಿ : ಕಾಂಗ್ರೆಸ್ ಅವಧಿಯಲ್ಲಿ ನಡೆದ ಭಯೋತ್ಪಾದನೆ ತಿಳಿಯಲು ‘ದಿ ಕಾಶ್ಮೀರ್ ಫೈಲ್ಸ್’ ನೋಡಿ: ಅಮಿತ್ ಶಾ

    ಈಗಾಗಲೇ ಟ್ರೈಲರ್ ರಿಲೀಸ್ ಗಾಗಿ ಯಶ್ ಅಭಿಮಾನಿಗಳು ಕಾಯುತ್ತಿದ್ದಾರೆ. ಯಶ್ ಮತ್ತು ಕೆಜಿಎಫ್ 2 ಸಿನಿಮಾದ ಹೆಸರಿನಲ್ಲಿ ಅಲ್ಲಲ್ಲಿ ಪೂಜೆ ನಡೆದಿವೆ. ಅಲ್ಲದೇ, ಹುಬ್ಬಳ್ಳಿ ಸೇರಿದಂತೆ ಹಲವು ಕಡೆ ಎಲ್.ಇ.ಡಿನಲ್ಲಿ ಟ್ರೈಲರ್ ತೋರಿಸುವ ವ್ಯವಸ್ಥೆ ಮಾಡಲಾಗುತ್ತಿದೆ. ಈ ಎಲ್ಲ ಸಂಭ್ರಮದ ಮಧ್ಯೆಯೇ ಟ್ರೈಲರ್ ವೀಕ್ಷಿಸಿದ ಮೊದಲ ವ್ಯಕ್ತಿಯು ಚುಟುಕಾಗಿ ಮತ್ತು ಅರ್ಥಪೂರ್ಣವಾಗಿ ವಿಮರ್ಶೆ ಮಾಡಿದ್ದಾರೆ.

     

    ಇಂದು ಸಂಜೆ ಬಿಡುಗಡೆ ಆಗಲಿರುವ ಕೆಜಿಎಫ್ 2 ಸಿನಿಮಾದ ಟ್ರೈಲರ್ ಐದು ಭಾಷೆಗಳಲ್ಲಿ ಬರಲಿದೆ. ತೆಲುಗಿನಲ್ಲಿ ರಾಮ್ ಚರಣ್, ತಮಿಳಿನಲ್ಲಿ ಸೂರ್ಯ, ಮಲಯಾಳಂನಲ್ಲಿ ಪೃಥ್ವಿರಾಜ್ ಮತ್ತು ಹಿಂದಿಯಲ್ಲಿ ಫರಾನ್ ಅಖ್ತಾರ್ ಆಯಾ ಭಾಷೆಯ ಟ್ರೈಲರ್ ಬಿಡುಗಡೆ ಮಾಡುತ್ತಿದ್ದಾರೆ. ಕನ್ನಡದಲ್ಲಿ ಶಿವರಾಜ್ ಕುಮಾರ್ ಮತ್ತು ಸಚಿವ ಅಶ್ವತ್ಥ್ ನಾರಾಯಣ ರಿಲೀಸ್ ಮಾಡಲಿದ್ದಾರೆ ಎನ್ನಲಾಗುತ್ತಿದೆ. ಇದನ್ನು ಓದಿ : ಚಂದನವನ ವಿಮರ್ಶಕರ ಪ್ರಶಸ್ತಿ: ರಾಜ್ ಬಿ ಶೆಟ್ಟಿ ಅತ್ಯುತ್ತಮ ನಟ, ಗಾನವಿ ಲಕ್ಷ್ಮಣ್ ನಟಿ, ಉಳಿದ ಪ್ರಶಸ್ತಿ ವಿವರ

    ಅಂದಹಾಗೆ ಈ ಸಿನಿಮಾದ ಮೊದಲ ಟ್ರೈಲರ್ ನೋಡಿದ್ದು ಪತ್ರಕರ್ತ ಹಾಗೂ ಓವರ್ ಸೀಸ್ ಸೆನ್ಸಾರ್ ಬೋರ್ಡನ ಸದಸ್ಯ  ಉಮೈರ್ ಸಂಧು. ದಕ್ಷಿಣದ ಮತ್ತು ಬಾಲಿವುಡ್ ನ ಯಾವುದೇ ಸಿನಿಮಾ ಅಥವಾ ಟ್ರೈಲರ್, ಟೀಸರ್ ವಿದೇಶದಲ್ಲಿ ಬಿಡುಗಡೆ ಆಗುತ್ತಿದ್ದರೆ, ಅದನ್ನು ಮೊದಲ ವೀಕ್ಷಣೆ ಮಾಡುವುದು ಇದೇ ಉಮೈರ್ ಸಂಧು. ಇವರು ಓವರ್ ಸಿಸ್ ಸೆನ್ಸಾರ್ ಬೋರ್ಡನ ಸದಸ್ಯರಾದ ಕಾರಣಕ್ಕಾಗಿ ಮೊದಲ ನೋಡುವ ಅವಕಾಶ ಇವರಿಗೆ ಸಿಕ್ಕಿದೆ.

    ಕೆಜಿಎಫ್ 2 ಟ್ರೈಲರ್ ಈಗಷ್ಟೇ ಸೆನ್ಸಾರ್ ಆಯಿತು. ಸೆನ್ಸಾರ್ ಬೋರ್ಡ್ ನಲ್ಲಿ ಟ್ರೈಲರ್ ನೋಡಿ ಸ್ಟನ್ ಆದೆ. ಟ್ರೈಲರ್ ನೋಡಿದ ನಂತರ ಮಾತೇ ಬರುತ್ತಿಲ್ಲ. ಸ್ಫೋಟಕ ರೀತಿಯಲ್ಲಿ ಅದು ಫೀಲ್ ಕೊಡುತ್ತಿದ್ದೆ. ಸಿನಿಮಾ ಹಿಟ್ ಆಗುವುದರಲ್ಲಿ ಅನುಮಾನವಿಲ್ಲ’ ಟ್ವಿಟ್ ಮಾಡಿದ್ದಾರೆ ಉಮೈರ್ ಸಂಧು.

  • ಕೆಜಿಎಫ್ 2 ಟ್ರೈಲರ್: ಮಲಯಾಳಂನಲ್ಲಿ ಪೃಥ್ವಿರಾಜ್, ಹಿಂದಿಯಲ್ಲಿ ಫರಾನ್ ಅಖ್ತರ್ ರಿಲೀಸ್

    ಕೆಜಿಎಫ್ 2 ಟ್ರೈಲರ್: ಮಲಯಾಳಂನಲ್ಲಿ ಪೃಥ್ವಿರಾಜ್, ಹಿಂದಿಯಲ್ಲಿ ಫರಾನ್ ಅಖ್ತರ್ ರಿಲೀಸ್

    ಶ್ ನಟನೆಯ ಕೆಜಿಎಫ್ 2 ಸಿನಿಮಾದ ಟ್ರೈಲರ್ ಇಂದು ಸಂಜೆ 6.40ಕ್ಕೆ ಯಶ್ ನಟನೆಯ ಕೆಜಿಎಫ್ 2 ಸಿನಿಮಾದ ಟ್ರೈಲರ್ ಬಿಡುಗಡೆ ಆಗಲಿದೆ. ಐದು ಭಾಷೆಗಳಲ್ಲಿ  ಸಿನಿಮಾ ಬಿಡುಗಡೆ ಆಗುತ್ತಿದ್ದು, ಹಾಗಾಗಿ ಐದು ಭಾಷೆಯಲ್ಲೂ ಏಕಕಾಲಕ್ಕೆ ಟ್ರೈಲರ್ ರಿಲೀಸ್ ಮಾಡಲು ಸಿದ್ಧತೆ ಮಾಡಿಕೊಂಡಿದ್ದಾರೆ ನಿರ್ದೇಶಕ ಪ್ರಶಾಂತ್ ನೀಲ್.

    ತೆಲುಗಿನ ಖ್ಯಾತ ನಟ ರಾಮ್ ಚರಣ್ ತೇಜ ಕೆಜಿಎಫ್‍ 2 ತೆಲುಗು ಸಿನಿಮಾದ ಟ್ರೈಲರ್ ರಿಲೀಸ್ ಮಾಡಿದರೆ, ತಮಿಳಿನ ಖ್ಯಾತ ನಟ ಸೂರ್ಯ ಕೆಜಿಎಫ್ 2 ತಮಿಳು ಸಿನಿಮಾದ ಟ್ರೈಲರ್ ಬಿಡುಗಡೆ ಮಾಡಲಿದ್ದಾರೆ. ಕೆಜಿಎಫ್ 2 ಮಲಯಾಳಂ ಟ್ರೈರಲ್ ಅನ್ನು ಅಲ್ಲಿನ ಖ್ಯಾತ ನಟ ಪೃಥ್ವಿರಾಜ್ ರಿಲೀಸ್ ಮಾಡಲಿದ್ದಾರೆ ಎಂದು ಹೊಂಬಾಳೆ ಫಿಲ್ಮ್ ಹೇಳಿದೆ.  ಈ ಟ್ರೈಲರ್ ರಿಲೀಸ್ ಅನ್ನು ವಿಶೇಷ ರೀತಿಯಲ್ಲಿ ಬಿಡುಗಡೆಗೆ ಸಿದ್ಧತೆ ಮಾಡಿಕೊಂಡಿದ್ದು, ಯಶ್ ಅಭಿಮಾನಿಗಳು ರಾಜ್ಯದ ನಾನಾ ಕಡೆ ಹಬ್ಬದಂತೆ ಆಚರಿಸುತ್ತಿದ್ದಾರೆ. ಇದನ್ನು ಓದಿ : ಚಂದನವನ ವಿಮರ್ಶಕರ ಪ್ರಶಸ್ತಿ: ರಾಜ್ ಬಿ ಶೆಟ್ಟಿ ಅತ್ಯುತ್ತಮ ನಟ, ಗಾನವಿ ಲಕ್ಷ್ಮಣ್ ನಟಿ, ಉಳಿದ ಪ್ರಶಸ್ತಿ ವಿವರ

    ಹಾಗೆಯೇ ಹಿಂದಿಯಲ್ಲೂ ಈ ಟ್ರೈಲರ್ ಬಿಡುಗಡೆ ಆಗುತ್ತಿದ್ದು, ಅದನ್ನು ಬಾಲಿವುಡ್ ಖ್ಯಾತ ನಟ ಫರಾನ್ ಅಖ್ತರ್ ರಿಲೀಸ್ ಮಾಡುತ್ತಿದ್ದಾರೆ. ಈಗಾಗಲೇ ನಾಲ್ಕು ಟ್ರೈಲರ್ ಗಳನ್ನು ಯಾರೆಲ್ಲ ರಿಲೀಸ್ ಮಾಡಲಿದ್ದಾರೆ ಎನ್ನುವ ಮಾಹಿತಿಯನ್ನು ಚಿತ್ರತಂಡ ಹಂಚಿಕೊಂಡಿದೆ. ಕನ್ನಡದ ಟ್ರೈಲರ್ ರಿಲೀಸ್ ಯಾರು ಮಾಡಲಿದ್ದಾರೆ ಎನ್ನುವ ಮಾಹಿತಿಯನ್ನು ಇನ್ನೂ ಹಂಚಿಕೊಂಡಿಲ್ಲ. ಇದನ್ನೂ ಓದಿ : ಕಾಂಗ್ರೆಸ್ ಅವಧಿಯಲ್ಲಿ ನಡೆದ ಭಯೋತ್ಪಾದನೆ ತಿಳಿಯಲು ‘ದಿ ಕಾಶ್ಮೀರ್ ಫೈಲ್ಸ್’ ನೋಡಿ: ಅಮಿತ್ ಶಾ

    ಇವತ್ತು ಟ್ರೈಲರ್ ಬಿಡುಗಡೆಯ ಮುಖ್ಯ ಅತಿಥಿಗಳಾಗಿ ಶಿವರಾಜ್ ಕುಮಾರ್ ಮತ್ತು ಸಚಿವ ಅಶ್ವತ್ಥ್ ನಾರಾಯಣ ಭಾಗಿ ಆಗುತ್ತಿರುವುದರಿಂದ ಇವರೇ ಬಹುಶಃ ಟ್ರೈಲರ್ ಬಿಡುಗಡೆ ಮಾಡಬಹುದು ಎನ್ನಲಾಗುತ್ತಿದೆ.

  • ಕೆಜಿಎಫ್ 2 ಟ್ರೈಲರ್: ತಮಿಳಿನಲ್ಲಿ ಸೂರ್ಯ, ತೆಲುಗಿನಲ್ಲಿ ರಾಮ್ ಚರಣ್ ತೇಜ್ ರಿಲೀಸ್

    ಕೆಜಿಎಫ್ 2 ಟ್ರೈಲರ್: ತಮಿಳಿನಲ್ಲಿ ಸೂರ್ಯ, ತೆಲುಗಿನಲ್ಲಿ ರಾಮ್ ಚರಣ್ ತೇಜ್ ರಿಲೀಸ್

    ಇಂದು ಸಂಜೆ 6.40ಕ್ಕೆ ಯಶ್ ನಟನೆಯ ಕೆಜಿಎಫ್ 2 ಸಿನಿಮಾದ ಟ್ರೈಲರ್ ಬಿಡುಗಡೆ ಆಗಲಿದೆ. ಐದು ಭಾಷೆಗಳಲ್ಲಿ ಈ ಸಿನಿಮಾ ಬಿಡುಗಡೆ ಆಗುತ್ತಿದ್ದು, ಹಾಗಾಗಿ ಐದು ಭಾಷೆಯಲ್ಲೂ ಏಕಕಾಲಕ್ಕೆ ಟ್ರೈಲರ್ ರಿಲೀಸ್ ಮಾಡಲು ಸಿದ್ಧತೆ ಮಾಡಿಕೊಂಡಿದ್ದಾರೆ ನಿರ್ದೇಶಕ ಪ್ರಶಾಂತ್ ನೀಲ್. ಇದನ್ನು ಓದಿ : ಚಂದನವನ ವಿಮರ್ಶಕರ ಪ್ರಶಸ್ತಿ: ರಾಜ್ ಬಿ ಶೆಟ್ಟಿ ಅತ್ಯುತ್ತಮ ನಟ, ಗಾನವಿ ಲಕ್ಷ್ಮಣ್ ನಟಿ, ಉಳಿದ ಪ್ರಶಸ್ತಿ ವಿವರ

    ತೆಲುಗಿನ ಖ್ಯಾತ ನಟ ರಾಮ್ ಚರಣ್ ತೇಜ ಕೆಜಿಎಫ್‍ 2 ತೆಲುಗು ಸಿನಿಮಾದ ಟ್ರೈಲರ್ ರಿಲೀಸ್ ಮಾಡಿದರೆ, ತಮಿಳಿನ ಖ್ಯಾತ ನಟ ಸೂರ್ಯ ಕೆಜಿಎಫ್ 2 ತಮಿಳು ಸಿನಿಮಾದ ಟ್ರೈಲರ್ ಬಿಡುಗಡೆ ಮಾಡಲಿದ್ದಾರೆ. ಈ ಟ್ರೈಲರ್ ರಿಲೀಸ್ ಅನ್ನು ವಿಶೇಷ ರೀತಿಯಲ್ಲಿ ಬಿಡುಗಡೆಗೆ ಸಿದ್ಧತೆ ಮಾಡಿಕೊಂಡಿದ್ದು, ಯಶ್ ಅಭಿಮಾನಿಗಳು ರಾಜ್ಯದ ನಾನಾ ಕಡೆ ಹಬ್ಬದಂತೆ ಆಚರಿಸುತ್ತಿದ್ದಾರೆ. ಇದನ್ನೂ ಓದಿ : ಕಾಂಗ್ರೆಸ್ ಅವಧಿಯಲ್ಲಿ ನಡೆದ ಭಯೋತ್ಪಾದನೆ ತಿಳಿಯಲು ‘ದಿ ಕಾಶ್ಮೀರ್ ಫೈಲ್ಸ್’ ನೋಡಿ: ಅಮಿತ್ ಶಾ

    ಅವತ್ತು ಬೆಂಗಳೂರಿಗೆ ಪ್ರತಿಷ್ಠತ ಸ್ಟಾರ್ ಹೋಟೆಲ್ ನಲ್ಲಿ ಕೇವಲ ಮಾಧ್ಯಮ ಗೋಷ್ಠಿ ಮಾಡುವ ಮೂಲಕ ಟ್ರೇಲರ್ ಬಿಡುಗಡೆ ಆಗುತ್ತಿದ್ದು ಭಾರತೀಯ ಭಾಷೆಯ 180ಕ್ಕೂ ಹೆಚ್ಚು ಬೇರೆ ಭಾಷೆಯ ಪತ್ರಕರ್ತರು ಅಂದು ಟ್ರೇಲರ್ ಕಾರ್ಯಕ್ರಮಕ್ಕೆ ಸಾಕ್ಷಿಯಾಗಲಿದ್ದಾರೆ. ಸಂಜೆ 6.45ಕ್ಕೆ ಟ್ರೇಲರ್ ಬಿಡುಗಡೆ ಆಗಲಿದ್ದು, ಚಿತ್ರತಂಡದ ಪ್ರಮುಖ ಕಲಾವಿದರು, ತಂತ್ರಜ್ಞರು ಮತ್ತು ಕನ್ನಡದ ಹೆಸರಾಂತ ನಟರು ಹಾಗೂ ಮಂತ್ರಿಗಳು ಈ ಕಾರ್ಯಕ್ರಮದಲ್ಲಿ ಹಾಜರಿರಲಿದ್ದಾರೆ. ಇದನ್ನೂ ಓದಿ: ಫ್ಯಾನ್ಸ್ ಜೊತೆ ‘ಜೇಮ್ಸ್’ ವೀಕ್ಷಿಸಿದ ಶಿವಣ್ಣ ದಂಪತಿ – ಏನ್ ಹೇಳಲಿ ನನ್ನ ತಮ್ಮನ ಆ್ಯಕ್ಟಿಂಗ್ ಬಗ್ಗೆ

    ಅತಿಥಿಗಳು ಯಾರು?

    ಟ್ರೇಲರ್ ಬಿಡುಗಡೆ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಉನ್ನತ ಶಿಕ್ಷಣ ಸಚಿವ ಅಶ್ವತ್ಥ್ ನಾರಾಯಣ್ ಮತ್ತು ಶಿವರಾಜ್ ಕುಮಾರ್ ಆಗಮಿಸುತ್ತಿದ್ದು, ಸಿನಿಮಾದ ಕಲಾವಿದರಾದ ಬಾಲಿವುಡ್ ನಟ ಸಂಜಯ್ ದತ್, ಮಲಯಾಳಂ ಹೆಸರಾಂತ ನಟ ಪೃಥ್ವಿರಾಜ್, ಬಾಲಿವುಡ್ ನಟಿ ರವೀನಾ ಟಂಡನ್, ನಟ ಯಶ್, ನಟಿ ಶ್ರೀನಿಧಿ ಶೆಟ್ಟಿ, ನಿರ್ದೇಶಕ ಪ್ರಶಾಂತ್ ನೀಲ್, ಸಂಗೀತ ನಿರ್ದೇಶಕ ರವಿ ಬಸ್ರೂರು, ನಿರ್ಮಾಪಕ ವಿಜಯ ಕಿರಗಂದೂರು ಟ್ರೇಲರ್ ಬಿಡುಗಡೆ ಸಂದರ್ಭದಲ್ಲಿ ವೇದಿಕೆಯ ಮೇಲೆ ಇರಲಿದ್ದಾರೆ. ಇದನ್ನು ಓದಿ : ಮತ್ತೆ ನಟನೆಗೆ ಮರಳಿದ ಮಾಲಾಶ್ರೀ

    7 ಸಾವಿರ ಚಿತ್ರಮಂದಿರದಲ್ಲಿ ಸಿನಿಮಾ ರಿಲೀಸ್

    ಕೆಜಿಎಫ್ 2 ಸಿನಿಮಾ ಕನ್ನಡ, ಮಲಯಾಳಂ, ಹಿಂದಿ, ತಮಿಳು ಮತ್ತು ತೆಲುಗಿನಲ್ಲಿ ಬಿಡುಗಡೆ ಆಗುತ್ತಿದ್ದು ವಿಶ್ವದಾದ್ಯಂತ ಏಳು ಸಾವಿರಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ರಿಲೀಸ್ ಮಾಡುವ ಪ್ಲ್ಯಾನ್ ಮಾಡಲಾಗಿದೆ ಅಂತಾರೆ ನಿರ್ಮಾಪಕ ವಿಜಯ್ ಕಿರಗಂದೂರು. ಕರ್ನಾಟಕದಲ್ಲೇ 450ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ರಿಲೀಸ್ ಆದರೆ, ತಮಿಳಿನಲ್ಲಿ ಸಾವಿರಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಕೆಜಿಎಫ್ 2 ಪ್ರದರ್ಶನ ಕಾಣಲಿದೆ. ಹಾಗೆಯೇ ವಿವಿಧ ಭಾಷೆಯ ಚಿತ್ರಮಂದಿರಗಳಲ್ಲಿ ಸಾವಿರ ಸಾವಿರ ಥಿಯೇಟರ್ ನಲ್ಲಿ ಈ ಸಿನಿಮಾ ರಿಲೀಸ್ ಆಗುತ್ತಿರುವುದು ವಿಶೇಷ.

  • ಕೆಜಿಎಫ್ 2 ಟ್ರೈಲರ್ ಬಿಡುಗಡೆಗೆ ಹೋಸ್ಟ್ ಮಾಡಲಿದ್ದಾರೆ ಕರಣ್ ಜೋಹಾರ್

    ಕೆಜಿಎಫ್ 2 ಟ್ರೈಲರ್ ಬಿಡುಗಡೆಗೆ ಹೋಸ್ಟ್ ಮಾಡಲಿದ್ದಾರೆ ಕರಣ್ ಜೋಹಾರ್

    ಬಾಲಿವುಡ್ ನ ಖ್ಯಾತ ನಿರ್ದೇಶಕ, ನಿರ್ಮಾಪಕ, ಬರಹಗಾರ, ಕಲಾವಿದ ಕರಣ್ ಜೋಹಾರ್ ರವಿವಾರ ಬೆಂಗಳೂರಿಗೆ ಬಂದು ಇಳಿಯಲಿದ್ದಾರೆ. ಇದೇ ಮೊದಲ ಬಾರಿಗೆ ಅವರು ಕನ್ನಡ ಸಿನಿಮಾವೊಂದರ ಕಾರ್ಯಕ್ರಮವನ್ನು ಹೋಸ್ಟ್ ಮಾಡಲಿದ್ದಾರೆ. ಈಗಾಗಲೇ ಬಾಲಿವುಡ್ ನಲ್ಲಿ ಸಾಕಷ್ಟು ಪ್ರತಿಷ್ಠಿತ ಕಾರ್ಯಕ್ರಮಗಳಲ್ಲಿ ನಿರೂಪಣೆ ಮಾಡಿರುವ ಅವರು ಇದೇ ಮೊದಲ ಬಾರಿಗೆ ಕನ್ನಡದ ಪ್ಯಾನ್ ಇಂಡಿಯಾ ಚಿತ್ರವೊಂದಕ್ಕೆ ಹೋಸ್ಟ್ ಮಾಡುತ್ತಿರುವುದು ಇದೇ ಮೊದಲು. ಇದನ್ನೂ ಓದಿ : RRR- ಸ್ಟಾರ್ ವಾರ್ ಬೆಂಕಿಗೆ ತಣ್ಣನೆಯ ನೀರು ಸುರಿದ ನಿರ್ದೇಶಕ ರಾಜಮೌಳಿ

    ಯಶ್ ನಟನೆಯ ‘ಕೆಜಿಎಫ್ 2’ ಸಿನಿಮಾದ ಟ್ರೈಲರ್ ಇದೇ ರವಿವಾರ ಮಾರ್ಚ್ 27ರಂದು ಬಿಡುಗಡೆ ಆಗುತ್ತಿದ್ದು, ಈ ಕಾರ್ಯಕ್ರಮದ ನಿರೂಪಣೆಯ ಜವಾಬ್ದಾರಿಯನ್ನು ಕರಣ್ ಜೋಹಾರ್ ಹೊತ್ತುಕೊಂಡಿದ್ದಾರೆ. ಸಂಜೆ 6.45ಕ್ಕೆ ಟ್ರೇಲರ್ ಬಿಡುಗಡೆ ಆಗಲಿದ್ದು, ಚಿತ್ರತಂಡದ ಪ್ರಮುಖ ಕಲಾವಿದರು, ತಂತ್ರಜ್ಞರು ಮತ್ತು ಕನ್ನಡದ ಹೆಸರಾಂತ ನಟರು ಹಾಗೂ ಮಂತ್ರಿಗಳು ಈ ಕಾರ್ಯಕ್ರಮದಲ್ಲಿ ಹಾಜರಿರಲಿದ್ದಾರೆ. ಇದನ್ನೂ ಓದಿ : RRR ಸಿನೆಮಾ ನೋಡಲು ಬಾಗಿಲು ಮುರಿದು ಚಿತ್ರಮಂದಿರಕ್ಕೆ ನುಗ್ಗಿದ ಪ್ರೇಕ್ಷಕರು

    ಯಶ್ ನಟನೆಯ ಪ್ಯಾನ್ ಇಂಡಿಯಾ ಸಿನಿಮಾ ಏ.14 ರಂದು ವಿಶ್ವದಾದ್ಯಂತ ಬಿಡುಗಡೆ ಆಗುತ್ತಿದೆ. ಕನ್ನಡ, ತಮಿಳು, ತೆಲುಗು, ಮಲಯಾಳ ಮತ್ತು ಹಿಂದಿಯಲ್ಲಿ ಈ ಸಿನಿಮಾ ಏಕಕಾಲಕ್ಕೆ ರಿಲೀಸ್ ಆಗುತ್ತಿದ್ದು, ಅದಕ್ಕೂ ಮುನ್ನ ಮಾ.27ರಂದು ಚಿತ್ರದ ಟ್ರೇಲರ್ ಬಿಡುಗಡೆ ಮಾಡಲು ಸಿನಿಮಾ ತಂಡ ಸಿದ್ಧತೆ ಮಾಡಿಕೊಂಡಿದೆ. ಅವತ್ತು ಬೆಂಗಳೂರಿಗೆ ಪ್ರತಿಷ್ಠತ ಸ್ಟಾರ್ ಹೋಟೆಲ್ ನಲ್ಲಿ ಕೇವಲ ಮಾಧ್ಯಮ ಗೋಷ್ಠಿ ಮಾಡುವ ಮೂಲಕ ಟ್ರೇಲರ್ ಬಿಡುಗಡೆ ಆಗುತ್ತಿದ್ದು ಭಾರತೀಯ ಭಾಷೆಯ 180ಕ್ಕೂ ಹೆಚ್ಚು ಬೇರೆ ಭಾಷೆಯ ಪತ್ರಕರ್ತರು ಅಂದು ಟ್ರೇಲರ್ ಕಾರ್ಯಕ್ರಮಕ್ಕೆ ಸಾಕ್ಷಿಯಾಗಲಿದ್ದಾರೆ. ಇದನ್ನೂ ಓದಿ: RRR ಬ್ಯಾನ್ ಮಾಡಿದ್ರೆ ಕೆಜಿಎಫ್‍ಗಿದೆ ಕಂಟಕ

    ಟ್ರೇಲರ್ ಬಿಡುಗಡೆ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಉನ್ನತ ಶಿಕ್ಷಣ ಸಚಿವ ಅಶ್ವತ್ಥ್ ನಾರಾಯಣ್ ಮತ್ತು ಶಿವರಾಜ್ ಕುಮಾರ್ ಆಗಮಿಸುತ್ತಿದ್ದು, ಸಿನಿಮಾದ ಕಲಾವಿದರಾದ ಬಾಲಿವುಡ್ ನಟ ಸಂಜಯ್ ದತ್, ಮಲಯಾಳಂ ಹೆಸರಾಂತ ನಟ ಪೃಥ್ವಿರಾಜ್, ಬಾಲಿವುಡ್ ನಟಿ ರವೀನಾ ಟಂಡನ್, ನಟ ಯಶ್, ನಟಿ ಶ್ರೀನಿಧಿ ಶೆಟ್ಟಿ, ನಿರ್ದೇಶಕ ಪ್ರಶಾಂತ್ ನೀಲ್, ಸಂಗೀತ ನಿರ್ದೇಶಕ ರವಿ ಬಸ್ರೂರು, ನಿರ್ಮಾಪಕ ವಿಜಯ ಕಿರಗಂದೂರು ಟ್ರೇಲರ್ ಬಿಡುಗಡೆ ಸಂದರ್ಭದಲ್ಲಿ ವೇದಿಕೆಯ ಮೇಲೆ ಇರಲಿದ್ದಾರೆ.

  • ಕೆಜಿಎಫ್ ಶೂಟಿಂಗ್ ನಡೆದ ಬಂಜರು ಭೂಮಿಗೆ ಮತ್ತೆ ಜೀವ ನೀಡುತ್ತಿದೆ ಹೊಂಬಾಳೆ ಫಿಲಂಸ್

    ಕೆಜಿಎಫ್ ಶೂಟಿಂಗ್ ನಡೆದ ಬಂಜರು ಭೂಮಿಗೆ ಮತ್ತೆ ಜೀವ ನೀಡುತ್ತಿದೆ ಹೊಂಬಾಳೆ ಫಿಲಂಸ್

    ಕೋಲಾರ: ಕೆಜಿಎಫ್ ಚಾಪ್ಟರ್ 2 ಸಿನಿಮಾ ಚಿತ್ರೀಕರಣ ನಡೆದ ಸೈನೈಡ್ ಬೆಟ್ಟದಲ್ಲಿ ಹೊಂಬಾಳೆ ಫಿಲಂಸ್ ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದೆ.

    ಕೆಜಿಎಫ್ ಚಾಪ್ಟರ್ 2 ನಿರ್ಮಾಣ ಮಾಡುತ್ತಿರುವ ಹೊಂಬಾಳೆ ಫಿಲಂಸ್ ಸಂಸ್ಥೆ ಕೆಜಿಎಫ್ ನಗರದಲ್ಲಿ ಬರಡು ಭೂಮಿಯಾಗಿದ್ದ ಸೈನೈಡ್ ಗುಡ್ಡದಲ್ಲಿ ಸಸಿ ನೆಡಲು ಆರಂಭಿಸಿದೆ.

    ಸೈನೈಡ್ ಗುಡ್ಡದಲ್ಲಿ ಅರಣ್ಯ ಬೆಳೆಸುವ ಮೂಲಕ ಅಲ್ಲಿನ ನಿವಾಸಿಗಳಿಗೆ ಸ್ವಚ್ಛ ಪರಿಸರ ನೀಡುವ ಉದ್ದೇವನ್ನು ಹೊಂಬಾಳೆ ಫಿಲಂಸ್ ಹೊಂದಿದ್ದು, ಹೊಂಬಾಳೆ ಫಿಲಂಸ್ ವೀಡಿಯೋ ಅಪ್ಲೋಡ್ ಮಾಡಿದೆ. ಈ ವೀಡಿಯೋ ನೋಡಿದ ವೀಕ್ಷಕರು ಸಖತ್ ಖುಷಿ ಪಟ್ಟಿದ್ದು, ಈ ಕೆಲಸಕ್ಕೆ ಪ್ರಶಂಸೆಯನ್ನು ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಕಷ್ಟಕರವಾದ ರಸ್ತೆಗಳು ಸುಂದರ ತಾಣಗಳಿಗೆ ದಾರಿ ಮಾಡಿಕೊಡುತ್ತೆ: ದೀಪಿಕಾ ದಾಸ್

    ಕೆಜಿಎಫ್ ಸಿನಿಮಾ ಚಿತ್ರೀಕರಣ ನಡೆದ ಜಾಗದಲ್ಲಿ ಹೊಂಬಾಳೆ ಫಿಲಂಸ್ ಹಾಗೂ ಅರಣ್ಯ ಇಲಾಖೆ ಜೊತೆಗೂಡಿ ಸಾವಿರಾರು ಗಿಡಗಳನ್ನು ನೆಡುವ ಮೂಲಕ ಈ ಬಂಜರು ಭೂಮಿಗೆ ಮತ್ತೆ ಜೀವ ನೀಡಲಾಗುತ್ತಿದೆ. ಇದಕ್ಕೆ ಕೋಲಾರದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಕಛೇರಿ ಈ ಕಾರ್ಯಕ್ಕೆ ಎಲ್ಲ ರೀತಿಯ ವ್ಯವಸ್ಥೆಯನ್ನು ಮಾಡಿದೆ.

    ಪ್ರಕೃತಿಯ ಮೇಲಿನ ಕಾಳಜಿ ಪ್ರಕೃತಿಗೆ ಮರಳಿ ನೀಡುವುದರಲ್ಲಿ ಹಾಗೂ ಅದನ್ನು ಮುಂದಿನ ಪೀಳಿಗೆಗೋಸ್ಕರ ಕಾಪಾಡುವುದರಲ್ಲಿದೆ ಎಂದು ನಾವು ನಂಬುತ್ತೇವೆ ಹೊಂಬಾಳೆ ಫಿಲಂಸ್ ಹೇಳಿದೆ. ಇದನ್ನೂ ಓದಿ: ಭಾರತದಲ್ಲಿ ಆರಂಭ, ಅಮೆರಿಕದಲ್ಲಿ ಕೊನೆ – ಸ್ಪೆಷಲ್ ಆಗಿ ಹುಟ್ಟುಹಬ್ಬ ಆಚರಿಸಿದ ರಮಿಕಾ ಸೇನ್‍

    ಕೆಜಿಎಫ್ ಸಿನಿಮಾ ಪ್ಯಾನ್ ಇಂಡಿಯಾ ಸುದ್ದಿಯಾಗಿತ್ತು. ಈಗ ಕೆಜಿಎಫ್ ಚಾಪ್ಟರ್ 2 ಸಿನಿಮಾ ಮೇಲೆ ಪ್ರೇಕ್ಷಕರಲ್ಲಿ ಭಾರೀ ನೀರಿಕ್ಷೆಯಿದೆ. ಪ್ರಶಾಂತ್ ನೀಲ್ ಈ ಚಿತ್ರಕ್ಕೆ ಆಕ್ಷನ್ ಕಟ್ ಕೇಳಿದ್ದು, ರಾಕಿಂಗ್ ಸ್ಟಾರ್ ಯಶ್ ಮುಖ್ಯ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಕೆಜಿಎಫ್ ಚಾಪ್ಟರ್ 2 ಚಿತ್ರವನ್ನು 2022ರ ಏಪ್ರಿಲ್ 14 ರಂದು ಬಹುಭಾಷೆಗಳಲ್ಲಿ ರಿಲೀಸ್ ಮಾಡಲಾಗುತ್ತಿದೆ.