Tag: Prashant Neal

  • ಭಾರತದಲ್ಲಿ ಆರಂಭ, ಅಮೆರಿಕದಲ್ಲಿ ಕೊನೆ –  ಸ್ಪೆಷಲ್ ಆಗಿ ಹುಟ್ಟುಹಬ್ಬ ಆಚರಿಸಿದ ರಮಿಕಾ ಸೇನ್‍

    ಭಾರತದಲ್ಲಿ ಆರಂಭ, ಅಮೆರಿಕದಲ್ಲಿ ಕೊನೆ – ಸ್ಪೆಷಲ್ ಆಗಿ ಹುಟ್ಟುಹಬ್ಬ ಆಚರಿಸಿದ ರಮಿಕಾ ಸೇನ್‍

    ಮುಂಬೈ: ಕೆಜಿಎಫ್:ಚಾಪ್ಟರ್ 2 ಸಿನಿಮಾದಲ್ಲಿ ನಟಿಸಿದ ರವೀನಾ ಟಂಡನ್ ತಮ್ಮ 47ನೇ ಹುಟ್ಟುಹಬ್ಬದ ಆಚರಣೆಯನ್ನು ಭಾರತದಲ್ಲಿ ಪ್ರಾರಂಭಿಸಿ ಅಮೆರಿಕದ ಲಾಸ್ ಏಂಜಲೀಸ್‍ನಲ್ಲಿ ಕೊನೆಗೊಳಿಸಿದ್ದಾರೆ.

    ನಿನ್ನೆ ರವೀನಾ 47ನೇ ವಸಂತಕ್ಕೆ ಕಾಲಿಟ್ಟಿದ್ದು, ತಮ್ಮ ಹುಟ್ಟುಹಬ್ಬದ ಸಂಭ್ರಮಾಚರಣೆಯನ್ನು ಭಾರತದಲ್ಲಿ ತಮ್ಮ ಮನೆಯಲ್ಲಿ ಮಧ್ಯರಾತ್ರಿ ಕೇಕ್ ಕತ್ತರಿಸುವುದರೊಂದಿಗೆ ಆರಂಭಿಸಿದ ಇವರು, ಮರುದಿನ ಸಂಜೆ ಲಾಸ್ ಏಂಜಲೀಸ್, ಕ್ಯಾಲಿಫೋರ್ನಿಯಾ, ಯುಎಸ್ ನಲ್ಲಿ ಮುಕ್ತಾಯಗೊಳಿಸಿದ್ದಾರೆ. ಈ ವೇಳೆ ರುಚಿಕರವಾದ ಭಿನ್ನ ಆಹಾರವನ್ನು ಸೇವಿಸಿರುವ ಈ ನಟಿ ತಮ್ಮ ಹುಟ್ಟುಹಬ್ಬವನ್ನು ಮತ್ತಷ್ಟು ವಿಶೇಷವಾಗಿಸಿಕೊಂಡಿದ್ದಾರೆ. ಇದನ್ನೂ ಓದಿ:  ನವೆಂಬರ್‌ನಲ್ಲಿ ತೆರೆಗೆ ಅಪ್ಪಳಿಸಲಿದೆ ‘ಟಾಮ್ ಅಂಡ್ ಜೆರ್ರಿ’

    ರವೀನಾ ತಮ್ಮ ಹುಟ್ಟುಹಬ್ಬದ ಆಚರಣೆಯ ಫೋಟೋ ಮತ್ತು ವೀಡಿಯೋಗಳನ್ನು ಇನ್‍ಸ್ಟಾಗ್ರಾಮ್ ನಲ್ಲಿ ಹಂಚಿಕೊಂಡಿದ್ದು, ಶುಭಕೋರಿದ, ಆಶೀರ್ವಾದ ಮಾಡಿದ ಅಭಿಮಾನಿಗಳಿಗೆ ಧನ್ಯವಾದಗಳನ್ನು ತಿಳಿಸಿದ್ದಾರೆ. ಇವರ ಹುಟ್ಟುಹಬ್ಬಕ್ಕೆ, ಶಿಲ್ಪಾ ಶೆಟ್ಟಿ ಮತ್ತು ಜೂಹಿ ಚಾವ್ಲಾ ಸೇರಿದಂತೆ ಹಲವು ಸೆಲೆಬ್ರಿಟಿಗಳು ವಿಶೇಷ ಪೋಸ್ಟ್ ಹಾಕಿ ಶುಭ ಹಾರೈಸಿದ್ದಾರೆ.

    ರವೀನಾ ಅವರ ಹಂಚಿಕೊಂಡಿದ್ದ ಫೋಟೋಗಳನ್ನು ನೋಡಿದರೆ, ಜನ್ಮದಿನವನ್ನು ವಿಶೇಷವಾಗಿ, ಬಹಳ ಸಂತೋಷದಿಂದ ಕಳೆದಿದ್ದಾರೆ ಎಂದು ಅವರು ಶೇರ್ ಮಾಡಿದ ಫೋಟೋ ಮತ್ತು ವೀಡಿಯೋ ನೋಡಿದರೆ ತಿಳಿಯುತ್ತದೆ. ರವೀನಾ ಭಾರತ ಮತ್ತು ಲಾಸ್ ಏಂಜಲೀಸ್‍ನಲ್ಲಿ ತನ್ನ ಪ್ರೀತಿಪಾತ್ರರ ಜೊತೆ ದಿನ ಕಳೆದಿದ್ದಾರೆ.

    ನನ್ನ ಮಕ್ಕಳು 16 ವರ್ಷ ಎಂದು ಭಾವಿಸುತ್ತಾರೆ!

    ರವೀನಾ ತಮ್ಮ ಹುಟ್ಟುಹಬ್ಬದ ಆಚರಣೆಯ ಫೋಟೋಗಳನ್ನು ಹಂಚಿಕೊಂಡಿದ್ದು, ಎ ಹ್ಯಾಪ್ ಹ್ಯಾಪ್ ಹ್ಯಾಪಿಪಿ ಜನ್ಮದಿನದ ಡಂಪ್, ಮಧ್ಯರಾತ್ರಿ 12 ಗಂಟೆಯಿಂದ ಕೇಕ್ ಹಾಸಿಗೆಯಲ್ಲಿ ಮುಂದಿನ ರಾತ್ರಿ 12 ರವರೆಗೆ, ಭಾರತದಲ್ಲಿ ಈಗ ನನ್ನ ಸಮಯ! ನನ್ನ ಮಕ್ಕಳು ನನಗೆ ಇನ್ನೂ 16 ವರ್ಷ ಎಂದು ಭಾವಿಸುತ್ತಾರೆ! ನಿಮ್ಮ ಶುಭಾಶಯಗಳು ಮತ್ತು ಆಶೀರ್ವಾದಕ್ಕೆ ಎಲ್ಲರಿಗೂ ಧನ್ಯವಾದಗಳು! ನಿಮ್ಮೆಲ್ಲರಿಗೂ ವೈಯಕ್ತಿಕವಾಗಿ ಧನ್ಯವಾದ ಹೇಳಲು ಇಷ್ಟಪಡುತ್ತೇನೆ, ಆದರೆ ಕೊರೊನಾ ಕಾರಣ ಈ ಸಮಯದಲ್ಲಿ ಆಗುವುದಿಲ್ಲ. ಆದರೆ ನಿಮ್ಮೆಲ್ಲರ ಆಶೀರ್ವಾದಗಳೇ ನನ್ನ ಜೀವನವನ್ನು ಅದ್ಭುತವಾಗಿಸಿದೆ. ಎಂದೆಂದಿಗೂ ಕೃತಜ್ಞರಾಗಿರುತ್ತೇನೆ ಎಂದು ಬರೆದು ಪೋಸ್ಟ್ ಮಾಡಿದ್ದಾರೆ. ಇದನ್ನೂ ಓದಿ: ರಿಲ್ಯಾಕ್ಸ್ ಮೂಡ್​ನಲ್ಲಿರುವ ಹೇಮ ಮಾಲಿನಿ, ಧರ್ಮೇಂದ್ರ

    ಓಟಿಟಿಯಲ್ಲಿ ‘ಅರಣ್ಯಕ್’ ಸರಣಿಯಲ್ಲಿ ರವೀನಾ ಪೊಲೀಸ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಸರಣಿಯಲ್ಲಿ ಇವರು ಯುವ ಪ್ರವಾಸಿಗರು ಕಣ್ಮರೆಯದಾಗ ಅವರನ್ನು ತನಿಖೆ ಮಾಡುವ ಪಾತ್ರವನ್ನು ಮಾಡುತ್ತಿದ್ದಾರೆ. ರಾಕಿಂಗ್ ಸ್ಟಾರ್ ಯಶ್ ಅಭಿನಯದ ಪ್ರಶಾಂತ್ ನೀಲ್ ಆಕ್ಷನ್ ಕಟ್ ಹೇಳುತ್ತಿರುವ ಕೆಜಿಎಫ್ ಚಾಪ್ಟರ್ 2 ಸಿನಿಮಾದಲ್ಲಿ ರವೀನಾ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದು, ಈ ಚಿತ್ರವನ್ನು 2022ರ ಏಪ್ರಿಲ್ 14 ರಂದು ಬಹುಭಾಷೆಗಳಲ್ಲಿ ರಿಲೀಸ್ ಮಾಡಲಾಗುತ್ತಿದೆ. ಈ ಚಿತ್ರದಲ್ಲಿ ಸಂಜಯ್ ದತ್, ಶ್ರೀನಿಧಿ ಶೆಟ್ಟಿ, ಪ್ರಕಾಶ್ ರಾಜ್, ಮಾಳವಿಕಾ ಅವಿನಾಶ್, ಅನಂತ್ ನಾಗ್ ಮತ್ತು ಅಚ್ಯುತ್ ಕುಮಾರ್ ನಟಿಸಿದ್ದಾರೆ.

  • ಪ್ರಶಾಂತ್ ನೀಲ್ ಹುಟ್ಟುಹಬ್ಬಕ್ಕೆ ಮೈತ್ರಿ ಮೂವೀಸ್‍ನಿಂದ ಸರ್ಪ್ರೈಸ್

    ಪ್ರಶಾಂತ್ ನೀಲ್ ಹುಟ್ಟುಹಬ್ಬಕ್ಕೆ ಮೈತ್ರಿ ಮೂವೀಸ್‍ನಿಂದ ಸರ್ಪ್ರೈಸ್

    ಬೆಂಗಳೂರು: ಚಂದನವನದಲ್ಲಿ ಹೊಸ ಇತಿಹಾಸ ಸೃಷ್ಟಿಸುವ ಮೂಲಕ ಭಾರತೀಯ ಚಿತ್ರರಂಗದಲ್ಲಿ ಗುರುತಿಸಿಕೊಂಡು ಸಾಧನೆಗೈದ ಅಪರೂಪದ ನಿರ್ದೇಶಕ, ಕೆಜಿಎಫ್ ಸಿನಿಮಾ ಸೃಷ್ಟಿಕರ್ತ ಪ್ರಶಾಂತ್ ನೀಲ್ ಅವರಿಗೆ ಇಂದು ಹುಟ್ಟುಹಬ್ಬದ ಸಂಭ್ರಮ. ಈ ಹಿನ್ನೆಲೆ ಅಭಿಮಾನಿಗಳು ಸಾಗರೋಪಾದಿಯಲ್ಲಿ ಶುಭ ಕೋರುತ್ತಿದ್ದಾರೆ.

    ಪ್ರಶಾಂತ್ ನೀಲ್ ಅವರು 40ನೇ ವಸಂತಕ್ಕೆ ಕಾಲಿಟ್ಟಿದ್ದು, ಲಾಕ್‍ಡೌನ್ ಹಿನ್ನೆಲೆ ಸಂಭ್ರಮಾಚರಣೆಗೆ ಬ್ರೇಕ್ ಬಿದ್ದಿದೆ. ಆದರೆ ಸಾಮಾಜಿಕ ಜಾಲತಾಣಗಳಲ್ಲಿನ ಸಂಭ್ರಮಕ್ಕೆ ಮಾತ್ರ ಮಿತಿ ಇಲ್ಲದಂತಾಗಿದ್ದು, ಟ್ವಿಟ್ಟರ್‍ನಲ್ಲಿ ಸಾವಿರಾರು ಜನ ಶುಭ ಕೋರುತ್ತಿದ್ದಾರೆ. ಈ ಮೂಲಕ ಹ್ಯಾಷ್ ಟ್ಯಾಗ್‍ನೊಂದಿಗೆ ಹ್ಯಾಪಿ ಬರ್ತ್‍ಡೇ ಪ್ರಶಾಂತ್ ನೀಲ್ ಎಂಬುದು ಟ್ರೆಂಡಿಂಗ್‍ನಲ್ಲಿದೆ. ಹೀಗೆ ಸಾಮಾಜಿಕ ಜಾಲತಾಣಗಳಲ್ಲಿ ಹಬ್ಬದ ರೀತಿಯಲ್ಲೇ ಅಭಿಮಾನಿಗಳು ಶುಭ ಕೋರುತ್ತಿದ್ದಾರೆ.

    ಮಾಡಿದ್ದು ಕೇವಲ ಮೂರೇ ಚಿತ್ರಗಳಾದರೂ ತಮ್ಮ ಖದರ್ ಚಿತ್ರಗಳ ಮೂಲಕವೇ ಭಾರತೀಯ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ. ಅಲ್ಲದೆ ಇದೀಗ ಟಾಲಿವುಡ್‍ಗೆ ಕಾಲಿಡಲು ಸಹ ಸಿದ್ಧತೆ ನಡೆಸಿದ್ದಾರೆ. ಉಗ್ರಂ ಸಿನಿಮಾ ಮೂಲಕ ಶ್ರೀಮುರಳಿಯವರಿಗೆ ದೊಡ್ಡ ಬ್ರೇಕ್ ನೀಡಿದ್ದರು. ಇದಾದ ಬಳಿಕ ರಾಕಿಂಗ್ ಸ್ಟಾರ್ ಯಶ್ ಜೊತೆ ಸೇರಿ ಕೆಜಿಎಫ್ ಹಾಗೂ ಕೆಜಿಎಫ್-2 ಸಿನಿಮಾಗಳ ಮೂಲಕ ತಮ್ಮದೇಯಾದ ಅಭಿಮಾನಿ ಬಳಗವನ್ನು ಸೃಷ್ಟಿಸಿಕೊಂಡಿದ್ದಾರೆ.

    ಪ್ರಶಾಂತ್ ನೀಲ್ ಅಸಿಸ್ಟೆಂಟ್, ಅಸೋಸಿಯೇಟ್ ಡೈರೆಕ್ಟರ್ ಆಗಿ ಕೆಲಸ ಮಾಡಿದವರಲ್ಲ. ಯಾವುದೇ ಸಂಸ್ಥೆಯಲ್ಲಿ ತರಬೇತಿ ಪಡೆದವರೂ ಅಲ್ಲ. ಅಸಲಿಗೆ ಸಿನಿಮಾ ಬಗ್ಗೆ ಅಷ್ಟೇನು ಗೊತ್ತಿರಲಿಲ್ಲ. ಶ್ರೀ ಮುರಳಿ ನಟನೆಯ ಉಗ್ರಂ ಸಿನಿಮಾ ಸೆಟ್‍ಗೆ ಆಗಾಗ ಹೋಗಿ ಬಂದಿದ್ದರಷ್ಟೆ. ಉಗ್ರಂ ಸಿನಿಮಾ ಮಾಡುವಾಗ ಸಿನಿಮಾ ವ್ಯಾಕರಣ ಗೊತ್ತಿರಲಿಲ್ಲ. ಚಿತ್ರ ಮುಗಿಸುವ ಹೊತ್ತಿಗೆ ನಿರ್ದೇಶನ, ಸಿನಿಮಾ ತಯಾರಿ, ಇಡೀ ಸಿನಿಮಾ ಮಾಧ್ಯಮವನ್ನು ಪ್ರಯೋಗಾತ್ಮಕವಾಗಿ ಕಲಿತರು.

    ನಟಿಸುವುದು ಕ್ಯಾಮೆರಾ ಮುಂದೆ ಕಾಣಿಸಿಕೊಳ್ಳುವುದೆಂದರೆ ಪ್ರಶಾಂತ್ ನೀಲ್ ಅವರಿಗೆ ಭಯ. ಅವರ ಕೆಲಸವೇನಿದ್ದರೂ ಕ್ಯಾಮೆರಾ ಹಿಂದೆ. ಉಗ್ರಂ ಬಳಿಕ ಕೆಜಿಎಫ್ ಚಿತ್ರಕ್ಕೆ ಕೈ ಹಾಕಿದರು. ನಂತರ ಕೆಜಿಎಫ್ ಚಿತ್ರ ಬಹುಭಾಷೆಗಳಲ್ಲಿ ತಯಾರಾಗಲಿದೆಯೇ ಎಂದು ಪದೇ ಪದೆ ನಟ ಯಶ್ ಅವರನ್ನು ಕೇಳುತ್ತಿದ್ದರಂತೆ. ಆದರೆ ಯಶ್ ಅವರಿಗೆ ಇವರ ಮೇಲೆ ನಂಬಿಕೆ ಇತ್ತಂತೆ. ಹೀಗೆ ಸೂಪರ್ ಹಿಟ್ ಚಿತ್ರಗಳನ್ನು ನೀಡುವ ಮೂಲಕ ತೆಲುಗು, ತಮಿಳು ಮಲಯಾಳಂ, ಹಿಂದಿ ಪ್ರೇಕ್ಷಕರನ್ನು ಕನ್ನಡದತ್ತ ತಿರುಗಿ ನೋಡುವಂತೆ ಮಾಡಿದ್ದಾರೆ.

    ಈಗಲೂ ಹಲವು ದೊಡ್ಡ ನಟರು ಪ್ರಶಾಂತ್ ನೀಲ್ ಅವರ ಕಾಲ್ ಶೀಟ್‍ಗಾಗಿ ಕಾತರದಿಂದ ಕಾಯುತ್ತಿದ್ದಾರೆ ಎಂದರೆ ತಪ್ಪಾಗಲಿಕ್ಕಿಲ್ಲ. ಆ ಮಟ್ಟಕ್ಕೆ ಪ್ರಶಾಂತ್ ನೀಲ್ ತಮ್ಮ ಸಿನಿಮಾಗಳ ಮೂಲಕ ಪ್ರಸಿದ್ಧಿ ಪಡೆದಿದ್ದಾರೆ. ಇದೀಗ ತೆಲುಗಿನ ಜೂನಿಯರ್ ಎನ್‍ಟಿಆರ್ ಜೊತೆ ಸಿನಿಮಾ ಮಾಡುವ ಕುರಿತು ಅವರೇ ಸುಳಿವು ನೀಡಿದ್ದರು. ಈ ಕುರಿತು ಸಹ ನಿರೀಕ್ಷೆ ಹೆಚ್ಚಿದೆ.

    ಸಿನಿಮಾ ಕುರಿತು ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ ಜೂ.ಎನ್‍ಟಿಆರ್ ಹುಟ್ಟಹಬ್ಬದಂದು ಪ್ರಶಾಂತ್ ನೀಲ್ ಟ್ವೀಟ್ ಮಾಡಿ ಈ ಕುರಿತು ಖಚಿತಪಡಿಸಿದ್ದರು. ಇದೀಗ ತೆಲುಗು ಸಿನಿಮಾ ನಿರ್ಮಾಣ ಸಂಸ್ಥೆ ಮೈತ್ರಿ ಮೂವಿ ಮೇಕರ್ಸ್ ಸಹ ಪ್ರಶಾಂತ್ ನೀಲ್ ಅವರ ಹುಟ್ಟುಹಬ್ಬಕ್ಕೆ ಶುಭ ಕೋರಿ ಟ್ವೀಟ್ ಮಾಡಿದೆ. ಇದರ ಜೊತೆಗೆ ರೇಡಿಯೇಷನ್ ಶೂಟ್‍ನಲ್ಲಿ ಶೀಘ್ರವೇ ಭೇಟಿಯಾಗೋಣ ಎಂದು ತಿಳಿಸಿದೆ. ವಿಶೇಷವೆಂದರೆ ಪ್ರಶಾಂತ್ ನೀಲ್ ಜೂ.ಎನ್‍ಟಿಆರ್ ಅವರಿಗೆ ಬರ್ತ್ ಡೇ ವಿಶ್ ತಿಳಿಸಿದಾಗಲೂ ರೇಡಿಯೇಷನ್ ಶೂಟ್ ಎಂದು ಹೇಳಿದ್ದರು. ಇದೀಗ ಮೈತ್ರಿ ಸಂಸ್ಥೆ ಸಹ ಅದೇ ರೀತಿ ಹೇಳಿದೆ. ಈ ಮೂಲಕ ಮತ್ತೊಂದು ಅದ್ಭುತ ಸಿನಿಮಾ ತಯಾರಾಗಲಿದೆ ಎಂಬ ಸುಳಿವು ನೀಡಿದೆ.

    ಸಾಮಾಜಿಕ ಜಾಲತಾಣಗಳಲ್ಲಿ ಕೆಜಿಎಫ್ ಅಭಿಮಾನಿಗಳು ವೇಟಿಂಗ್ ಫಾರ್ ಕೆಜಿಎಫ್-2 ಎಂದು ಬರೆದುಕೊಂಡರೆ, ಜೂನಿಯರ್ ಎನ್‍ಟಿಆರ್ ಅಭಿಮಾನಿಗಳು ವೇಟಿಂಗ್ ಫಾರ್ ಎನ್‍ಟಿಆರ್31 ಎಂದು ಬರೆದುಕೊಂಡಿದ್ದಾರೆ.

  • ಜೂ.ಎನ್‍ಟಿಆರ್ ಹುಟ್ಟುಹಬ್ಬಕ್ಕೆ ಪ್ರಶಾಂತ್ ನೀಲ್ ಸರ್ಪ್ರೈಸ್

    ಜೂ.ಎನ್‍ಟಿಆರ್ ಹುಟ್ಟುಹಬ್ಬಕ್ಕೆ ಪ್ರಶಾಂತ್ ನೀಲ್ ಸರ್ಪ್ರೈಸ್

    – ಹೊಸ ಸಿನಿಮಾ ಮಾಡುವುದಾಗಿ ಘೋಷಣೆ

    ಬೆಂಗಳೂರು: ಕೆಜಿಎಫ್ ಸಿನಿಮಾ ಮೂಲಕ ಇಡೀ ದೇಶವೇ ತಿರುಗಿ ನೋಡುವಂತೆ ಮಾಡಿದ ನಿರ್ದೇಶಕ ಪ್ರಶಾಂತ್ ನೀಲ್ ತೆಲುಗಿನ ತಾರಕ್ ಎಂದೇ ಗುರುತಿಸಿಕೊಂಡಿರುವ ಜೂನಿಯರ್ ಎನ್‍ಟಿಆರ್ ಹುಟ್ಟುಹಬ್ಬಕ್ಕೆ ಭರ್ಜರಿ ಗಿಫ್ಟ್ ನೀಡಿದ್ದು, ಹೊಸ ಸಿನಿಮಾ ಮಾಡುತ್ತಿರುವುದಾಗಿ ಘೋಷಣೆ ಮಾಡಿದ್ದಾರೆ.

    ಜೂನಿಯರ್ ಎನ್‍ಟಿಆರ್ ಗೆ ಪ್ರಶಾಂತ್ ನೀಲ್ ಆ್ಯಕ್ಷನ್ ಕಟ್ ಹೇಳುತ್ತಾರೆ ಎಂಬ ಸುದ್ದಿ ಬಹಳ ದಿನಗಳಿಂದ ಹರಿದಾಡುತ್ತಿತ್ತು. ಇದೀಗ ಎನ್‍ಟಿಆರ್ ಹುಟ್ಟುಹಬ್ಬದ ದಿನದಂದು ಪ್ರಶಾಂತ್ ನೀಲ್ ಬಿಗ್ ಸರ್ಪ್ರೈಸ್ ನೀಡಿದ್ದು, ಅವರೊಂದಿಗೆ ಸಿನಿಮಾ ಮಾಡುತ್ತಿರುವ ಕುರಿತು ಸ್ವತಃ ಅವರೇ ಖಚಿತಪಡಿಸಿದ್ದಾರೆ.

    ಜೂ.20ರಂದು ಜೂನಿಯರ್ ಎನ್‍ಟಿಆರ್ ಹುಟ್ಟುಹಬ್ಬವಾಗಿದ್ದು, ಇದೇ ವೇಳೆ ಅವರ 31ನೇ ಸಿನಿಮಾ ಕುರಿತು ಗುಟ್ಟು ಬಿಟ್ಟುಕೊಟ್ಟಿದ್ದಾರೆ. ತಮ್ಮ ಮುಂಚಿನ ಸಿನಿಮಾ ಜೂನಿಯರ್ ಎನ್‍ಟಿಆರ್ ಜೊತೆಗೆ ಎಂದು ಪರೋಕ್ಷವಾಗಿ ಹೇಳಿದ್ದು, ಜೂ.ಎನ್‍ಟಿಆರ್ ಪಕ್ಕದಲ್ಲಿ ಕುಳಿತಂತೆ ಭಾಸವಾಗುತ್ತಿದೆ ಎಂದು ಹೇಳಿದ್ದಾರೆ.

    ಟ್ವೀಟ್ ಮಾಡಿರುವ ಅವರು, ನ್ಯೂಕ್ಲಿಯರ್ ಪ್ಲಾಂಟ್ ಪಕ್ಕದಲ್ಲಿ ಕುಳಿತರೆ ಹೇಗಿರುತ್ತದೆ ಎಂಬುದನ್ನು ನಾನು ಅಂತಿಮವಾಗಿ ತಿಳಿದೆ. ಮುಂದಿನ ಸಲ ಕ್ರೇಜಿ ಎನರ್ಜಿಗೆ ನನ್ನ ರೇಡಿಯೇಶನ್ ಸೂಟ್ ತರುತ್ತೇನೆ ಎಂದು ಜೂನಿಯರ್ ಎನ್‍ಟಿಆರ್ ಅವರ ತಾರಕ್9999 ಖಾತೆಗೆ ಟ್ಯಾಗ್ ಮಾಡಿದ್ದಾರೆ. ಅಲ್ಲದೆ ಹ್ಯಾಪಿ ಬರ್ತ್‍ಡೇ ಬ್ರದರ್!!! ಹ್ಯಾವ್ ಎ ಸೇಫ್ ಆ್ಯಂಡ್ ಗ್ರೇಟ್ ಡೇ, ಸೀ ಯು ಸೂನ್ ಎಂದು ಬರೆದುಕೊಂಡಿದ್ದಾರೆ. ಹ್ಯಾಶ್ ಟ್ಯಾಗ್‍ನೊಂದಿಗೆ ಹ್ಯಾಪಿ ಬರ್ತ್ ಡೇ ಎನ್‍ಟಿಆರ್, ಸ್ಟೇ ಹೋಮ್ ಸ್ಟೇ ಸೇಫ್ ಎಂದು ಬರೆದುಕೊಂಡಿದ್ದಾರೆ.

    ಇದೆಲ್ಲದ ಮಧ್ಯೆ ಸುದ್ದಿಯೊಂದು ಹರಿದಾಡುತ್ತಿದ್ದು, ಜೂನಿಯರ್ ಎನ್‍ಟಿಆರ್ ಜೊತೆ ಸಿನಿಮಾ ಮಾಡಲು ಪ್ರಶಾಂತ್ ನೀಲ್ ಅವರಿಗೆ ಈಗಾಗಲೇ 2 ಕೋಟಿ ರೂ.ಗಳನ್ನು ಮುಂಗಡ ಹಣವನ್ನಾಗಿ ನೀಡಲಾಗಿದೆ ಎನ್ನಲಾಗಿದೆ. ಮೈತ್ರಿ ಮೂವಿ ಮೇಕರ್ಸ್ ಸಂಸ್ಥೆ ಈ ಸಿನಿಮಾ ನಿರ್ಮಿಸುತ್ತಿದ್ದು, 2022ರಲ್ಲಿ ಚಿತ್ರೀಕರಣ ಆರಂಭವಾಗಲಿದೆ ಎಂದು ಅಂದಾಜಿಸಲಾಗಿದೆ. ಆದರೆ ಸಿನಿಮಾ ಕುರಿತು ಈ ವರೆಗೆ ಯಾವುದೇ ಅಧೀಕೃತ ಮಾಹಿತಿ ಹೊರ ಬಿದ್ದಿಲ್ಲ.

    ಟ್ವೀಟ್ ಮಾಡುವ ಮೂಲಕ ಜೂ.ಎನ್‍ಟಿಆರ್ ಜೊತೆಗೆ ಸಿನಿಮಾ ಮಾಡುವ ಕುರಿತು ಪ್ರಶಾಂತ್ ನೀಲ್ ಸುಳಿವು ನೀಡಿದ್ದು, ಅಭಿಮಾನಿಗಳಲ್ಲಿ ಇದೀಗ ಭಾರೀ ಕುತೂಹಲ ಮನೆ ಮಾಡಿದೆ. ಯಾವ ಮಟ್ಟದಲ್ಲಿ ಸಿನಿಮಾ ಮೂಡಿ ಬರಲಿದೆ, ಯಾವ ರೀತಿಯ ಕಥೆ ಎಂಬ ಪ್ರಶ್ನೆ ಮೂಡಿದೆ. ಇದಕ್ಕೆ ಜೂನಿಯರ್ ಎನ್‍ಟಿಆರ್ ಹಾಗೂ ಪ್ರಶಾಂತ್ ನೀಲ್ ಅವರೇ ಉತ್ತರಿಸಬೇಕಿದೆ.

  • ಸೈಮಾ ಪ್ರಶಸ್ತಿ- ಕೆಜಿಎಫ್‍ಗೆ ಸಿಂಹಪಾಲು, ಡಾಲಿ, ಕಾಸರಗೋಡಿಗೆ ಪ್ರಶಸ್ತಿ

    ಸೈಮಾ ಪ್ರಶಸ್ತಿ- ಕೆಜಿಎಫ್‍ಗೆ ಸಿಂಹಪಾಲು, ಡಾಲಿ, ಕಾಸರಗೋಡಿಗೆ ಪ್ರಶಸ್ತಿ

    ದೋಹಾ: ಸಾಕಷ್ಟು ಕೂತೂಹಲ ಕೆರಳಿಸಿದ್ದ 2019ರ ಸೈಮಾ ಪ್ರಶಸ್ತಿಗೆ ತೆರೆಬಿದ್ದಿದೆ. ಕತಾರ್ ನ ರಾಜಧಾನಿ ದೋಹಾದಲ್ಲಿ ದಕ್ಷಿಣ ಭಾರತದ 8ನೇ ಅಂತರಾಷ್ಟ್ರೀಯ ವರ್ಣರಂಜಿತ ಸಮಾರಂಭ ನಡೆದಿದ್ದು 2019ರ ಸೈಮಾ ಪ್ರಶಸ್ತಿ ಘೋಷಣೆಯಾಗಿದೆ.

    ಕನ್ನಡ-ತೆಲುಗು-ತಮಿಳು-ಮಲೆಯಾಳಂ ಭಾಷೆಯ ಸಿನಿದಿಗ್ಗಜರು ಒಟ್ಟಾಗಿ ಸೇರಿದ್ದು ಸೈಮಾ ಗೋಲ್ಡನ್ ಟ್ರೋಪಿಗೆ ಮುತ್ತಿಕ್ಕಿದ್ದಾರೆ. ಅತ್ಯುತ್ತಮ ಸಿನಿಮಾ, ಅತ್ಯುತ್ತಮ ಸಂಗೀತ ನಿರ್ದೇಶಕ, ಅತ್ಯುತ್ತಮ ಖಳನಾಯಕ. ಅತ್ಯುತ್ತಮ ನಟಿ ಸೇರಿದಂತೆ ಹಲವು ವಿಭಾಗಗಳಿಗೆ ಪ್ರಶಸ್ತಿ ನೀಡಲಾಗಿದೆ.

    ಅತ್ಯುತ್ತಮ ನಟನಾಗಿ ಮಿಂಚಿದ ರಾಕಿಭಾಯ್, ಕನ್ನಡ ಚಿತ್ರರಂಗದ ಬ್ಲಾಕ್ ಬಸ್ಟರ್ ಕೆಜಿಎಫ್ ಚಿತ್ರದ ನಾಯಕ ರಾಕಿಂಗ್ ಸ್ಟಾರ್ ಯಶ್ ಅವರಿಗೆ 2019ರ ಸೈಮಾ ಅತ್ಯುತ್ತಮ ನಟನಾಗಿ ಗೋಲ್ಡನ್ ಬ್ಯೂಟಿಗೆ ಮುತ್ತಿಕ್ಕಿದ್ದಾರೆ. ಕನ್ನಡ, ತಮಿಳು, ತೆಲುಗು ಮತ್ತು ಹಿಂದಿ ಸೇರಿದಂತೆ ಹಲವಾರು ಭಾಷೆಗಳಲ್ಲಿ ಬಿಡುಗಡೆಯಾಗಿದ್ದ ಈ ಚಿತ್ರ ದೇಶದಾದ್ಯಂತ ಉತ್ತಮ ಯಶಸ್ಸು ಕಂಡಿತ್ತು.

    ಕೆಜಿಎಫ್‍ನಂತಹ ಬಿಗ್ ಬಜೆಟ್ ಸಿನಿಮಾ ಮಾಡಿ ಸೈ ಅನಿಸಿಕೊಂಡ ನಿರ್ದೇಶಕ ಪ್ರಶಾಂತ್ ನೀಲ್ ಅವರಿಗೆ ಸೈಮಾದ ಅತ್ಯುತ್ತಮ ನಿರ್ದೇಶಕನಾಗಿ ಪ್ರಶಸ್ತಿ ಪಡೆದಿದ್ದಾರೆ. ತಮ್ಮ ಚೊಚ್ಚಲ ಸಿನಿಮಾದಲ್ಲೇ ಉಗ್ರಂ ರೀತಿಯ ಮಾಸ್ ಹಿಟ್ ಕೊಟ್ಟಿದ್ದ ಪ್ರಶಾಂತ್ ತನ್ನ ಎರಡನೇ ಚಿತ್ರದಲ್ಲಿ ಕೆಜಿಎಫ್‍ನಂತಹ ಬಿಗ್ ಸಿನಿಮಾ ಮಾಡಿ ಗೆದ್ದಿದ್ದರು.

    ಕನ್ನಡ ವಿಭಾಗ ಸೈಮಾ ಪ್ರಶಸ್ತಿಯ ಬಹುಪಾಲು ಪ್ರಶಸ್ತಿಗಳನ್ನು ತನ್ನ ತೆಕ್ಕೆಗೆ ಹಾಕಿಕೊಂಡಿರುವ ಕೆಜಿಎಫ್ ಅತ್ಯುತ್ತಮ ಪೋಷಕ ನಟಿ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ. ಈ ಸಿನಿಮಾದಲ್ಲಿ ಯಶ್ ಅವರ ತಾಯಿಯ ಪಾತ್ರದಲ್ಲಿ ಮಿಂಚಿದ್ದ ಅರ್ಚನಾ ಜೋಯಿಸ್ ಅವರಿಗೆ ಸೈಮಾದ ಅತ್ಯುತ್ತಮ ಪೋಷಕ ನಟಿ ಪ್ರಶಸ್ತಿ ದೊರತಿದೆ.

    ಕೆಜಿಎಫ್ ಸಿನಿಮಾಗೆ ಒಟ್ಟು ಐದು ಪ್ರಶಸ್ತಿಗಳು ಲಭಿಸಿದ್ದು, ಕೆಜಿಎಫ್ ಸಿನಿಮಾದಲ್ಲಿ ರಾಜಕಾರಣಿಯಾಗಿ ಅಭಿನಯಸಿದ್ದ ಅಚ್ಯುತ್ ಕುಮಾರ್ ಅವರಿಗೆ ಅತ್ಯುತ್ತಮ ಪೋಷಕ ನಟ ಪ್ರಶಸ್ತಿ ಸಿಕ್ಕಿದೆ. ಕೆಜಿಎಫ್ ಚಿತ್ರಕ್ಕೆ ಉತ್ತಮ ಛಾಯಾಗ್ರಹಣ ಮಾಡಿದ್ದ ಭುವನ್ ಗೌಡ ಅವರಿಗೆ ಸೈಮಾದ ಅತ್ಯುತ್ತಮ ಛಾಯಾಗ್ರಹಣ ಪ್ರಶಸ್ತಿ ಲಭಿಸಿದೆ.

    ಹ್ಯಾಟ್ರಿಕ್ ಹಿರೋ ಶಿವರಾಜ್‍ಕುಮಾರ್ ಅಭಿನಯದ ಟಗರು ಚಿತ್ರಕ್ಕೆ ಅತ್ಯುತ್ತಮ ಖಳನಾಯಕ ಪ್ರಶಸ್ತಿ ಸಿಕ್ಕಿದ್ದು, ಈ ಚಿತ್ರದಲ್ಲಿ ಡಾಲಿ ಎಂಬ ಹೆಸರಿನ ಪಾತ್ರದಲ್ಲಿ ತನ್ನ ವಿಭಿನ್ನ ನಟನೆಯ ಮೂಲಕ ಸಖತ್ ಮನೋರಂಜನೆ ನೀಡಿದ್ದ ಡಾಲಿ ಧನಂಜಯ ಅವರಿಗೆ 2019ರ ಅತ್ಯುತ್ತಮ ಖಳನಾಯಕ ಪ್ರಶಸ್ತಿ ಸಿಕ್ಕಿದೆ.

    ಅತ್ಯುತ್ತಮ ಯುವ ನಿರ್ದೇಶಕ ಪ್ರಶಸ್ತಿ ಅಯೋಗ್ಯ ಚಿತ್ರ ತಂಡಕ್ಕೆ ಸಿಕ್ಕಿದೆ. ಸತೀಶ್ ನಿನಾಸಂ, ಡಿಂಪಲ್ ಕ್ವೀನ್ ರಚಿತಾ ರಾಮ್ ಹಾಕಿಕೊಂಡು ಉತ್ತಮ ಕೌಟುಂಬಿಕ ಕಾಮಿಡಿ ಚಿತ್ರ ಮಾಡಿದ ಮಹೇಶ್ ಅವರಿಗೆ ಸೈಮಾದ ಅತ್ಯುತ್ತಮ ಯುವ ನಿರ್ದೇಶಕ ಪ್ರಶಸ್ತಿ ದೊರಕಿದೆ. ಇದೇ ಚಿತ್ರದ `ಏನಮ್ಮಿ ಏನಮ್ಮಿ’ ಪದ್ಯ ಬರೆದ ಚೇತನ್ ಕುಮಾರ್ ಅವರಿಗೆ ಅತ್ಯುತ್ತಮ ಚಿತ್ರ ಸಾಹಿತಿ ಪ್ರಶಸ್ತಿ ಸಿಕ್ಕಿದೆ.

    ದಯಾಳ್ ಪದ್ಮನಾಭನ್ ನಿರ್ದೇಶನ ಮಾಡಿದ ಕರಾಳರಾತ್ರಿ ಸಿನಿಮಾಗೆ ಅತ್ಯುತ್ತಮ ನವ ನಟಿ ಪ್ರಶಸ್ತಿ ಸಿಕಿದ್ದು, ಈ ಚಿತ್ರದಲ್ಲಿ ಜೆಕೆ ಜೊತೆ ನಾಯಕಿಯಾಗಿ ನಟಿಸಿದ್ದ ಬಿಗ್‍ಬಾಸ್ ಖ್ಯಾತಿಯ ಅನುಪಮಾ ಗೌಡ ಅವರು ಪ್ರಶಸ್ತಿ ಗೆದ್ದಿದ್ದಾರೆ.

    ಬೆಲ್‍ಬಾಟಮ್ ಖ್ಯಾತಿಯ ನಟ ರಿಷಬ್ ಶೆಟ್ಟಿ ನಿರ್ದೇಶನದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು ಚಿತ್ರಕ್ಕೆ ಅತ್ಯುತ್ತಮ ಹಾಸ್ಯ ನಟ ಪ್ರಶಸ್ತಿ ಸಿಕ್ಕಿದೆ. ಈ ಚಿತ್ರದಲ್ಲಿ ಕಾಮಿಡಿ ಟೈಮಿಂಗ್ ಮೂಲಕ ಹೆಸರುವಾಸಿಯಾದ ಪ್ರಕಾಶ್ ತುಮಿನಾಡ್ ಅವರಿಗೆ ಸೈಮಾ ಪ್ರಶಸ್ತಿ ಒಲಿದಿದೆ.