Tag: Prashant Sambargi

  • ಕನ್ನಡದಲ್ಲಿ ಮತ್ತೊಂದು ರಿಯಾಲಿಟಿ ಶೋ : ಇದು ಫಿಟ್ ಬಾಸ್

    ಕನ್ನಡದಲ್ಲಿ ಮತ್ತೊಂದು ರಿಯಾಲಿಟಿ ಶೋ : ಇದು ಫಿಟ್ ಬಾಸ್

    ಬಿಗ್ ಬಾಸ್, ಸರಿಗಮಪ ಸೇರಿದಂತೆ ಹಲವಾರು ರಿಯಾಲಿಟಿ ಶೋಗಳು (Reality Show) ಕನ್ನಡ ಕಿರುತೆರೆಯಲ್ಲಿ ಮನರಂಜಿಸುತ್ತಿದೆ. ಈ ಗ್ರೂಪ್ ‍ಗೆ ಮತ್ತೊಂದು ರಿಯಾಲಿಟಿ ಶೋ ಸೇರ್ಪಡೆಯಾಗಿದೆ. ಆಯುಷ್‌ ಟಿ.ವಿ ಕಳೆದ ಏಳು ವರ್ಷಗಳಿಂದ ಆರೋಗ್ಯಕರ ಜೀವನ ಶೈಲಿಗಾಗಿ ಎಂಬ ಧ್ಯೇಯದೊಂದಿಗೆ ವೈವಿಧ್ಯಮಯ ಕಾರ್ಯಕ್ರಮಗಳನ್ನು ಪ್ರಸ್ತುತಪಡಿಸುವ ಮೂಲಕ ಪ್ರೇಕ್ಷಕರ ಮನ್ನಣೆಗಳಿಸಿರುವ ಏಕೈಕ ಆರೋಗ್ಯದ ಕುರಿತಾದ ವಾಹಿನಿಯಾಗಿದ್ದು,  ಪ್ರಸ್ತುತ ಕರ್ನಾಟಕದ ಜನಪ್ರಿಯ ಮನೋರಂಜನಾ ವಾಹಿನಿ ಸಿರಿಕನ್ನಡ ಹಾಗೂ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸೆ ಕೇಂದ್ರ (ಕ್ಷೇಮವನ) ಇವರ ಸಹಭಾಗಿತ್ವದಲ್ಲಿ ಆಯೋಜಿಸಿರುವ ವಿಶ್ವದ ಮೊಟ್ಟಮೊದಲ ಆರೋಗ್ಯದ ಕುರಿತಾದ ರಿಯಾಲಿಟಿ ಶೋ ‘ಫಿಟ್‌ ಬಾಸ್‌’ (Fit Boss) ನಿರ್ಮಾಣಗೊಂಡಿದೆ.

    ಫಿಟ್ ಬಾಸ್ ರಿಯಾಲಿಟಿ ಶೋ ಕುರಿತು ಹೆಚ್ಚಿನ ಮಾಹಿತಿ ನೀಡಲು ಪತ್ರಿಕಾಗೋಷ್ಠಿ ಆಯೋಜಿಸಲಾಗಿತ್ತು.  ಮನುಷ್ಯನಿಗೆ ಎಲ್ಲದಕ್ಕಿಂತ ಆರೋಗ್ಯವೇ ಹೆಚ್ಚು ಎಂಬ ಧ್ಯೇಯದಿಂದ ನಮ್ಮ ಆಯೂಷ್ ಟಿವಿ ಕಳೆದ ಏಳು ವರ್ಷಗಳಿಂದ ಆರೋಗ್ಯದ ವಿವಿಧ ಕಾರ್ಯಕ್ರಮಗಳನ್ನು ಪ್ರಸಾರ ಮಾಡುತ್ತಿದೆ. ಇದೇ ಮೊದಲ ಬಾರಿಗೆ ಸ್ಥೂಲಕಾಯದವರಿಗಾಗಿ (ಹೆಚ್ಚು ದಪ್ಪ) ಫಿಟ್ ಬಾಸ್ ಎಂಬ ರಿಯಾಲಿಟಿ ಶೋ ಆರಂಭಿಸಲಾಗಿದೆ. ನಮ್ಮೊಂದಿಗೆ ಸಿರಿಕನ್ನಡ ವಾಹಿನಿ‌ ಹಾಗೂ ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸಾ ಕೇಂದ್ರ(ಕ್ಷೇಮವನ) ಕೈ ಜೋಡಿಸಿದೆ ಎಂದು ಆಯೂಷ್ ಟಿವಿ‌ ವೈಸ್ ಚೇರ್ಮನ್ ಅರುಣಾಚಲಂ ತಿಳಿಸಿದರು

    ಕಳೆದ ಕೆಲವು ವರ್ಷಗಳಿಂದ ನಮ್ಮ ಸಿರಿಕನ್ನಡ ವಾಹಿನಿ ಹಲವು ಜನಪ್ರಿಯ ಕಾರ್ಯಕ್ರಮಗಳ ಮೂಲಕ ಜನರ ಮೆಚ್ಚುಗೆ ಪಡೆದಿದೆ. ಪ್ರಸ್ತುತ ಆಯೂಷ್ ಟಿವಿಯ “ಫಿಟ್ ಬಾಸ್” ರಿಯಾಲಿಟಿ ಶೋ ಜೊತೆಗೆ ಸಿರಿಕನ್ನಡ ವಾಹಿನಿ ಕೈ ಜೋಡಿಸಿದೆ. ಆರೋಗ್ಯದ ಕುರಿತು ಜಾಗೃತಿ ಮೂಡಿಸುವ ಈ ರಿಯಾಲಿಟಿ ಶೋ ಅಕ್ಟೋಬರ್ 16 ರಿಂದ ಸೋಮವಾರದಿಂದ ಶುಕ್ರವಾರದವರೆಗೂ ಆಯೂಷ್ ಟಿವಿ ಸಂಜೆ 7 ಕ್ಕೆ ಹಾಗೂ ಸಿರಿಕನ್ನಡ ವಾಹಿನಿಯಲ್ಲಿ ರಾತ್ರಿ 8 ಕ್ಕೆ ಪ್ರಸಾರವಾಗಲಿದೆ ಎಂದರು ಸಿರಿಕನ್ನಡ ವಾಹಿನಿ ಸಂಸ್ಥಾಪಕ ನಿರ್ದೇಶಕ ಸಂಜಯ್ ಶಿಂಧೆ.

    ಈ ರಿಯಾಲಿಟಿ ಶೋ‌ ನ ಆಡಿಷನ್ ನಲ್ಲಿ  ಸುಮಾರು 2000 ಜನ ಪಾಲ್ಗೊಂಡಿದ್ದರು.  ಅದರಲ್ಲಿ ಸುಮಾರು 100 ಕೆಜಿ ಗಿಂತ ಹೆಚ್ಚು ತೂಕವಿರುವ  21 ಜನರನ್ನು ಆಯ್ಕೆ ಮಾಡಿಕೊಳ್ಳಲಾಯಿತು. ಇಪ್ಪತ್ತೊಂದು ದಿನ, ತಮ್ಮ ದೇಹದ ಅತಿಯಾದ ತೂಕವನ್ನು ಕಡಿಮೆ ಮಾಡಲು ಇಲ್ಲಿ ಪಾಲ್ಗೊಂಡಿದ್ದು ವಿಶೇಷ,  ತಮ್ಮ ಆರೋಗ್ಯದ ಸಮಸ್ಯೆಗಳನ್ನು ವೈಜ್ಞಾನಿಕವಾಗಿ ಕ್ಯೂರ್‌ ಮಾಡಿಕೊಳ್ಳುವುದರ ಜೊತೆಗೆ ಆಟ, ಮೋಜು, ಮಸ್ತಿ, ಮತ್ತು ಸ್ನೇಹ ಸಂಬಂಧಗಳ ಮೌಲ್ಯಗಳನ್ನು ಈ ರಿಯಾಲಿಟಿ ಶೋ ನಲ್ಲಿ ಕಲಿತಿದ್ದಾರೆ. ಗೋಲ್ಡನ್ ಸ್ಟಾರ್ ಗಣೇಶ್, ಅಮೂಲ್ಯ, ರೂಪಿಕಾ, ನಿರೂಪಕ ಮುರಳಿ, ಆರ್ಯನ್ ಶಾಮ್ ಮುಂತಾದ ಗಣ್ಯರು ಗ್ರ್ಯಾಂಡ್ ಫಿನಾಲೆಗೆ ಆಗಮಿಸಿ ಸ್ಪರ್ಧಿಗಳಿಗೆ ಶುಭ ಕೋರಿದ್ದಾರೆ. ಗೆದ್ದ ಸ್ಪರ್ಧಿಗೆ 5 ಲಕ್ಷ ರೂಪಾಯಿ ಬಹುಮಾನ ನೀಡಲಾಗಿದೆ ಎಂದು ಫಿಟ್ ಬಾಸ್ ರಿಯಾಲಿಟಿ ಶೋ‌ ನಿರ್ದೇಶಕ ಬಾಲಕೃಷ್ಣ ತಿಳಿಸಿದರು.

    21 ದಿನಗಳಕಾಲ ಪ್ರತಿ ದಿನ ಮುಂಜಾನೆ 5 ರಿಂದ ಯೋಗದೊಂದಿಗೆ ಸಾಧಕರ ದಿನಚರಿ ಪ್ರಾರಂಭವಾದರೆ ಕ್ರಮೇಣ ವಿವಿಧ ನ್ಯಾಚುರೋಪತಿ ಚಿಕಿತ್ಸೆಗಳು ಹಾಗೂ ಹಲವು ಮನೋರಂಜನಾ ಕಾರ್ಯಕ್ರಮಗಳು ಸ್ಪರ್ಧಿಗಳನ್ನು ಕ್ರಿಯಾಶೀಲರನ್ನಾಗಿಸಿರುವಂತೆ ಮಾಡಿದ್ದವು ಎಂಬ ಮಾಹಿತಿಯನ್ನು “ಕ್ಷೇಮವನ”ದ ಮುಖ್ಯ ಕ್ಷೇಮಾಧಿಕಾರಿ ನರೇಂದ್ರ ಶೆಟ್ಟಿ ನೀಡಿದರು. ಫಿಟ್ ಬಾಸ್ ರಿಯಾಲಿಟಿ ಶೋ ನ ಆರಂಭದ ದಿನ ಹಾಗೂ ಫಿನಾಲೆ ದಿನ ನಿರೂಪಕನಾಗಿ ಕೆಲಸ ಮಾಡಿದ್ದು ಖುಷಿಯಾಗಿದೆ.‌ ಇಂತಹ ಕಾರ್ಯಕ್ರಮಗಳನ್ನು ಎಲ್ಲರೂ ನೋಡಬೇಕೆಂದರು ಪ್ರಶಾಂತ್ ಸಂಬರ್ಗಿ (Prashant Sambargi). ಫಿಟ್ ಬಾಸ್ ಕಾರ್ಯಕ್ರಮದ ಬಗ್ಗೆ  ಆಯೂಷ್ ಟಿವಿಯ ದಿವ್ಯ ಅವರು ಮಾತನಾಡಿದರು ಹರಿಕೃಷ್ಣ, ವ್ಯವಸ್ಥಾಪಕ ನಿರ್ದೇಶಕರು ಆಯುಷ್‌ ಟಿ ವಿ, ಸಂಜಯ್‌ ಶಿಂಧೆ, ಸಂಸ್ಥಾಪಕ ನಿರ್ದೇಶಕರು ಸಿರಿ ಕನ್ನಡ ವಾಹಿನಿ, ಪ್ರಶಾಂತ್‌ ಸಂಬರ್ಗಿ, ಕಲಾವಿದರು ಹಾಗೂ ಫಿಟ್‌ ಬಾಸ್‌ ಗ್ರ್ಯಾಂಡ್‌ ಫಿನಾಲೆ ನಿರೂಪಕರು,  ಬಾಲಕೃಷ್ಣ, ಫಿಟ್‌ ಬಾಸ್‌ ರಿಯಾಲಿಟಿ ಷೋ ನಿರ್ದೇಶಕರು ಅರುಣಾಚಲಂ , ವೈಸ್‌ ಚೇರ್ಮನ್‌ ಆಯುಷ್‌ ಟಿವಿ ಅರವಿಂದ್‌ ಎನ್.ಜೆ , ಪವನ್ ಕುಮಾರ್‌ , ವಿನಾಯಕ್‌ ಪೈ ,  ದಿವ್ಯ(ಆಯೂಷ್ ಟಿವಿ), ರಾಜೇಶ್‌ ರಾಜಘಟ್ಟ  ಮುಖ್ಯಸ್ಥರು , ಸಿರಿ ಕನ್ನಡ ವಾಹಿನಿ ಮುಂತಾದವರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ದುಡ್ಡಿಗಾಗಿ ನಾನು ಪ್ರಚಾರಕ್ಕೆ ಬಂದಿಲ್ಲ: ಸಂಬರಗಿಗೆ ಶಿವಣ್ಣ ತಿರುಗೇಟು

    ದುಡ್ಡಿಗಾಗಿ ನಾನು ಪ್ರಚಾರಕ್ಕೆ ಬಂದಿಲ್ಲ: ಸಂಬರಗಿಗೆ ಶಿವಣ್ಣ ತಿರುಗೇಟು

    ಟ ಶಿವರಾಜ್ ಕುಮಾರ್ (Shivaraj Kumar) ದುಡ್ಡಿಗಾಗಿ ಕಾಂಗ್ರೆಸ್ (Congress) ಪಕ್ಷದ ಪ್ರಚಾರಕ್ಕೆ ಹೋಗಿದ್ದಾರೆ ಎನ್ನುವ ಅರ್ಥದಲ್ಲಿ ಬಿಗ್ ಬಾಸ್ ಸ್ಪರ್ಧಿ ಪ್ರಶಾಂತ್ ಸಂಬರ್ಗಿ (Prashant Sambargi) ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದರು. ಇದಕ್ಕೆ ಸಂಬಂಧಿಸಿದಂತೆ ಶಿವಣ್ಣ ಪ್ರತಿಕ್ರಿಯೆ ನೀಡಿದ್ದು, ‘ಇಂತಹ ಮಾತುಗಳನ್ನು ಸಹಿಸಿಕೊಳ್ಳಲು ಆಗುವುದಿಲ್ಲ. ಕೂಡಲೇ ಆ ಮಾತುಗಳನ್ನು ಅವರು ವಾಪಸ್ಸು ಪಡೆಯಬೇಕು. ನನ್ನ ಹತ್ತಿರ ದುಡ್ಡಿಲ್ಲವಾ? ನಾನು ಯಾವತ್ತೂ ದುಡ್ಡಿಗಾಗಿ ಕೆಲಸ ಮಾಡಿದವನು ಅಲ್ಲ. ಇಂತಹ ಮಾತುಗಳು ಶೋಭೆ ತರುವುದಿಲ್ಲ’ ಎಂದಿದ್ದಾರೆ.

    ಶಿವರಾಜ್ ಕುಮಾರ್ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಪರವಾಗಿ ಪ್ರಚಾರ ಮಾಡುತ್ತಿರುವುದಕ್ಕೆ ಮೊನ್ನೆಯಷ್ಟೇ ಸಂಸದ ಪ್ರತಾಪ್ ಸಿಂಹ ತಮ್ಮದೇ ಆದ ರೀತಿಯಲ್ಲಿ ಟಾಂಗ್ ಕೊಟ್ಟಿದ್ದರು. ನಂತರ ‘ನಾನು ಡಾ.ರಾಜ್ ಕುಟುಂಬ ಅಭಿಮಾನಿ’ ಎಂದು ಹೇಳುವ ಮೂಲಕ ಡ್ಯಾಮೇಜ್ ಕಂಟ್ರೋಲ್ ಗೆ ಮುಂದಾದರು. ಇದೀಗ ಬಿಜೆಪಿ ಪಕ್ಷದೊಂದಿಗೆ ಗುರುತಿಸಿಕೊಂಡಿರುವ ಪ್ರಶಾಂತ್ ಸಂಬರಗಿ ಕೂಡ ಆಕ್ಷೇಪಾರ್ಹ ಕಾಮೆಂಟ್ ಮಾಡಿದ್ದಾರೆ.

    ಫೇಸ್ ಬುಕ್ ನಲ್ಲಿ ಶಿವರಾಜ್ ಕುಮಾರ್ ಬಗ್ಗೆ ವಿವಾದಾತ್ಮಕ ಕಾಮೆಂಟ್ ಮಾಡಿರುವ ಪ್ರಶಾಂತ್ ಸಂಬರ್ಗಿ. ‘ಶಿವಣ್ಣ ಯಾವತ್ತೂ ಸ್ಕ್ರಿಪ್ಟ್ ಕೇಳೋದೇ ಇಲ್ಲ. ಆದರೆ, ಪೇಮೆಂಟ್ ತುಂಬಾನೇ ಮುಖ್ಯ. ಒಪ್ಪಿಕೊಂಡಿದ್ದ ಸಿನಿಮಾ ಮಾಡ್ತಾರೆ. ತುಂಬಾ ಎಮೋಷನಲ್ ಜೀವಿ ನಮ್ಮ ಶಿವಣ್ಣ. ಸಿನಿಮಾ ಫ್ಲಾಪ್ ಆದರೂ, ಅವರು ಕೇರ್ ಮಾಡಲ್ಲ. ಮತ್ತೆ ಪೇಮೆಂಟ್ ತಗೊಂಡು ಇನ್ನೊಂದು ಫಿಲ್ಮ್ ಗೆ ಸೈನ್ ಮಾಡ್ಬಿಡ್ತಾರೆ. ಅದೇ ಫಾರ್ಮುಲಾ ರಾಜಕೀಯದಲ್ಲೂ ಅನುಸರಿಸಿದ್ದಾರೆ. ಕ್ಯಾಂಡಿಡೇಟ್ ಗೆದ್ರೆ ಏನು ಸೋತ್ರೆ ಏನು ಎಲ್ಲಾ ಒಂದೇ. ಏನೋ ಹೇಳ್ತಾರಲ್ಲ ಗೆದ್ದರೆ ಬೆಟ್ಟ. ಇಲ್ಲ ಅಂದ್ರೆ.. ಬಂತಾ ಪ್ಯಾಕೆಟ್.. ಸರಿ ಆಲ್ ರೈಟ್ ಮುಂದೆ ಹೋಗೋಣ’ ಎಂದು ಬರೆದುಕೊಂಡಿದ್ದಾರೆ.

    ಪ್ರಶಾಂತ್ ಸಂಬರ್ಗಿಯ ಪೋಸ್ಟ್ ಗೆ ಅನೇಕರು ಕಾಮೆಂಟ್ ಮಾಡಿದ್ದಾರೆ. ಶಿವರಾಜ್ ಕುಮಾರ್ ಬಗ್ಗೆ ಅವಹೇಳನಕಾರಿ ಆಕ್ಷೇಪ ವ್ಯಕ್ತ ಪಡಿಸಿದ್ದಾರೆ. ಅಲ್ಲದೇ, ಅನೇಕರು ಪ್ರಶಾಂತ್ ಸಂಬರ್ಗಿ ವಿರುದ್ಧವೇ ಗರಂ ಆಗಿದ್ದಾರೆ. ತಮ್ಮ ವಿರುದ್ಧ ಕಾಮೆಂಟ್ ಮಾಡಿದವರನ್ನು ಡಿಲಿಟ್ ಮಾಡಿ, ಡಸ್ಟ್ ಬಿನ್ ಗೆ ಹಾಕಲಾಗುವುದು ಎಂದು ಕಾಮೆಂಟ್ ಬೇರೆ ಮಾಡಿದ್ದಾರೆ ಪ್ರಶಾಂತ್. ಇದನ್ನೂ ಓದಿ:ಆರ್.ಎಲ್ ಜಾಲಪ್ಪ ವಿರುದ್ಧ ಸ್ಪರ್ಧಿಸಿ ಸೋತಿದ್ದರು ಹಿರಿಯ ನಟ ಶ್ರೀನಿವಾಸ್ ಮೂರ್ತಿ

    ಸಿನಿಮಾ ರಂಗದ ಮೇಲೆ ಅನೇಕ ಬಾರಿ ಮುಗಿಬಿದ್ದಿದ್ದಾರೆ ಪ್ರಶಾಂತ್ ಸಂಬರ್ಗಿ. ಡಬ್ಬಿಂಗ್ ವಿಚಾರದಿಂದ ಹಿಡಿದು ಡ್ರಗ್ಸ್ ತನಕವೂ ಸಂಬರ್ಗಿ ಧ್ವನಿ ಎತ್ತಿದ್ದಾರೆ. ಮೀಟೂ ಕೇಸ್ ನಲ್ಲೂ ಅವರು ನಟಿಯ ವಿರುದ್ಧ ಮಾತನಾಡಿದ್ದರು. ಇದೀಗ ಡಾ.ರಾಜ್ ಕುಟುಂಬ ಎಂಬ ಜೇನುಗೂಡಿಗೆ ಗುರಿಯಿಟ್ಟಿದ್ದಾರೆ.

  • ಕನ್ನಡಪರ ಹೋರಾಟಗಾರರಿಗೆ ಕ್ಷಮೆ ಕೇಳಿ ಕಣ್ಣೀರು ಹಾಕಿದ ಪ್ರಶಾಂತ್ ಸಂಬರ್ಗಿ

    ಕನ್ನಡಪರ ಹೋರಾಟಗಾರರಿಗೆ ಕ್ಷಮೆ ಕೇಳಿ ಕಣ್ಣೀರು ಹಾಕಿದ ಪ್ರಶಾಂತ್ ಸಂಬರ್ಗಿ

    ಬಿಗ್ ಬಾಸ್ (Big Boss) ಮನೆಗೆ ಹೋದಾಗಿನಿಂದ ರೂಪೇಶ್ ರಾಜಣ್ಣ ಮತ್ತು ಪ್ರಶಾಂತ್ ಸಂಬರ್ಗಿ ನಡುವೆ ಮುಸುಕಿನ ಗುದ್ದಾಟ ನಡೆದೇ ಇತ್ತು. ಒಂದೊಂದು ಸಾರಿ ಈ ಗುದ್ದಾಟ ಅತಿರೇಕಕ್ಕೂ ಹೋಗಿದ್ದು ಇದೆ. ಇಬ್ಬರೂ ಒಬ್ಬರಿಗೊಬ್ಬರಿಗೆ ಬಾಯಿಗೆ ಬಂದಂತೆ ಮಾತನಾಡುವುದನ್ನು ರೂಢಿ ಮಾಡಿಕೊಂಡಿದ್ದರು. ಹಾಗಾಗಿ ಮನೆಯಲ್ಲಿ ವೈಯಕ್ತಿಕವಾಗಿ ಜಗಳ ಆಗುತ್ತಲೇ ಇತ್ತು. ಈ ಜಗಳವು ಕನ್ನಡಪರ (Kannada) ಸಂಘಟನೆಯ ಕಾರ್ಯಕರ್ತರನ್ನು ಕೆರಳಿಸುವಂತೆ ಮಾಡಿತ್ತು.

    ರೂಪೇಶ್ ರಾಜಣ್ಣ (Rupesh Rajanna) ಅವರ ಕನ್ನಡಪರ ಹೋರಾಟಗಳನ್ನು ಟೀಕಿಸುತ್ತಲೇ ಬಂದಿದ್ದ ಪ್ರಶಾಂತ್ ಸಂಬರ್ಗಿ (Prashant Sambargi), ಏಕಾಏಕಿ ಇತರ ಹೋರಾಟಗಾರರನ್ನು ನಿಂದಿಸಿದ್ದರು. ಯಾವ ಹೋರಾಟಗಾರರನ್ನು ಹೇಗೆ ಹತ್ತಿಕ್ಕಬೇಕು, ನೋಡಿಕೊಳ್ಳಬೇಕು ಎಂದು ನನಗೆ ಗೊತ್ತಿದೆ. ಎಷ್ಟೋ ಜನರನ್ನು ಮೂಲೆಗುಂಪು ಮಾಡಿದ್ದೇನೆ ಎನ್ನುವ ಅರ್ಥದಲ್ಲಿ ಮಾತನಾಡಿದ್ದರು. ಸಂಬರ್ಗಿ ಅವರ ಈ ಮಾತು ಕನ್ನಡಪರ ಹೋರಾಟಗಾರರನ್ನು ಕೆರಳಿಸಿತ್ತು. ಹೀಗಾಗಿಯೇ ಅನೇಕರು ವಾಹಿನಿಯ ಮುಂದೆ ಮತ್ತು ಬಿಗ್ ಬಾಸ್ ಶೂಟಿಂಗ್ ನಡೆಯುವ ಸ್ಥಳಕ್ಕೂ ಹೋಗಿ ಪ್ರತಿಭಟನೆ ಮಾಡಿದ್ದರು. ಇದನ್ನೂ ಓದಿ:ತಾಯ್ನಾಡಿಗೆ ಪ್ರಿಯಾಂಕಾ ಚೋಪ್ರಾ ಕಾಲಿಟ್ಟ ಬೆನ್ನಲ್ಲೇ ನಟಿಯ ವಿರುದ್ಧ ಗಂಭೀರ ಆರೋಪ

    ಹೋರಾಟಗಾರರ ಪ್ರತಿಭಟನೆ ತಾರಕಕ್ಕೇ ಏರುತ್ತಿದ್ದಂತೆಯೇ ವಾಹಿನಿ ಕೂಡ ಎಚ್ಚೆತ್ತುಕೊಂಡಿದೆ. ಬಿಗ್ ಬಾಸ್ ಮನೆಯಿಂದ ಸಂಬರ್ಗಿಯನ್ನು ಆಚೆ ಕರೆತರದಿದ್ದರೆ, ಅವರನ್ನು ಹೇಗೆ ಆಚೆ ಕರೆದುಕೊಂಡು ಬರಬೇಕು ಎನ್ನುವುದು ನಮಗೂ ಗೊತ್ತಿದೆ ಎಂದು ಹೋರಾಟಗಾರರು ಎಚ್ಚರಿಕೆಯನ್ನು ಕೊಟ್ಟಿದ್ದರು. ಈ ವಿಷಯವನ್ನು ಬಿಗ್ ಬಾಸ್ ಮನೆಯಲ್ಲಿರುವ ಸಂಬರ್ಗಿಗೆ ಮುಟ್ಟಿಸಲಾಗಿದೆ. ಹೀಗಾಗಿಯೇ ಸಂಬರ್ಗಿ ಕ್ಷಮೆ ಕೇಳಿದ್ದಾರೆ.

    ಬಿಗ್ ಬಾಸ್ ಕನ್ಪೆಷನ್ ರೂಂಗೆ ಸಂಬರ್ಗಿ ಕರೆಯಿಸಿಕೊಂಡು ಅಸಲಿ ವಿಚಾರವನ್ನು ಮುಂದಿಟ್ಟರು. ಅದನ್ನು ಕೇಳುತ್ತಿದ್ದಂತೆಯೇ ನಾನು ಆ ರೀತಿಯಲ್ಲಿ ಮಾತನಾಡಿಲ್ಲ, ಯಾರಿಗೂ ಅವಮಾನಿಸಿಲ್ಲ. ಹಾಗೆನಿಸಿದ್ದರೆ ಕ್ಷಮಿಸಿ ಎಂದು ಕಣ್ಣಿರಿಡುತ್ತಾ ಹೇಳಿದರು. ಆಡಿದ ಅಷ್ಟೂ ಮಾತುಗಳನ್ನು ನಾನು ಹಿಂಪಡೆಯುತ್ತೇನೆ. ಯಾವುದೇ ಕಾರಣಕ್ಕೂ ಯಾರನ್ನೂ ನೋಯಿಸುವ ಉದ್ದೇಶ ನನಗಿಲ್ಲ ಎಂದು ಹೇಳಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ರಾಜ್ಯೋತ್ಸವ ದಿನವೇ ಕೋಪ: ಬಿಗ್ ಬಾಸ್ ಮನೆಯಿಂದ ಹೊರಟ ರೂಪೇಶ್ ರಾಜಣ್ಣ

    ರಾಜ್ಯೋತ್ಸವ ದಿನವೇ ಕೋಪ: ಬಿಗ್ ಬಾಸ್ ಮನೆಯಿಂದ ಹೊರಟ ರೂಪೇಶ್ ರಾಜಣ್ಣ

    ನ್ನಡಪರ ಹೋರಾಟಗಾರ ರೂಪೇಶ್ ರಾಜಣ್ಣ (Rupesh Rajanna) ಕೋಪ ಮಾಡಿಕೊಳ್ಳುವುದು, ಕಿತ್ತಾಡಿಕೊಳ್ಳುವುದು, ಜೋರು ಧ್ವನಿಯಲ್ಲಿ ಮಾತನಾಡುವುದು ಹೊಸದೇನೂ ಅಲ್ಲ. ಬಿಗ್ ಬಾಸ್ ಮನೆಯಲ್ಲಿರುವ ಹಲವಾರು ಜನರ ಜೊತೆ ಅವರು ಹೀಗೆ ಕೋಪ ಮಾಡಿಕೊಂಡಿದ್ದಾರೆ. ಜಗಳವನ್ನೂ ಆಡಿದ್ದಾರೆ. ಆದರೆ, ಪ್ರಶಾಂತ್ ಸಂಬರ್ಗಿ ವಿಷಯದಲ್ಲಿ ಅವರು ಪದೇ ಪದೇ ರೊಚ್ಚಿಗೇಳುತ್ತಲೇ ಇರುತ್ತಾರೆ.

    ಇವತ್ತು ಕೂಡ ಬಿಗ್ ಬಾಸ್ ಮನೆಯಲ್ಲಿ ಜೋರಾಗಿಯೇ ಗಲಾಟೆ ಆಗಿದ್ದು, ರೂಪೇಶ್ ರಾಜಣ್ಣ ತಮ್ಮ ಬ್ಯಾಗ್ ತಗೆದುಕೊಂಡು ದೊಡ್ಮನೆಯಿಂದ ಹೊರ ಹೋಗುವುದಾಗಿ ಅಬ್ಬರಿಸಿದ್ದಾರೆ. ಬ್ಯಾಗ್ ಎತ್ತಿಕೊಂಡು ಮನೆಯಿಂದ ತಮ್ಮನ್ನು ಕಳುಹಿಸುವಂತೆ ಮನೆಯ ಮುಖ್ಯ ಬಾಗಿಲಿನವರೆಗೂ ಬಂದಿದ್ದಾರೆ. ಅವರು ಇಂಥದ್ದೊಂದು ನಿರ್ಧಾರ ತಗೆದುಕೊಳ್ಳುವುದಕ್ಕೆ ಕಾರಣವಾಗಿದ್ದು ಕ್ಯಾಪ್ಟನ್ಸಿ ಟಾಸ್ಕ್. ಇದನ್ನೂ ಓದಿ:ಹಿಂದಿಯಲ್ಲಿ 50 ಕೋಟಿ ಗಳಿಸಿದ ‘ಕಾಂತಾರ’ ಸಿನಿಮಾ

    ಇದೀಗ ಬಿಗ್ ಬಾಸ್ (Bigg Boss Season 9) ಮನೆಯ ಕ್ಯಾಪ್ಟನ್ ಆಗಿ ಅನುಪಮಾ ಗೌಡ ಆಯ್ಕೆಯಾಗಿದ್ದಾರೆ. ಅವರ ಮುಂದಾಳತ್ವದಲ್ಲಿ ಕ್ಯಾಪ್ಟನ್ಸಿ ಆಯ್ಕೆಯ ಟೆಸ್ಟ್ ನಡೆದಿತ್ತು. ಗಾರ್ಡನ್ ಏರಿಯಾದಲ್ಲಿ ಬಜರ್ ಒಂದನ್ನು ಇಟ್ಟಿದ್ದು, ಮೊದಲು ಈ ಬಜರ್ ಯಾರು ಒತ್ತುತ್ತಾರೋ, ಅವರು ಕ್ಯಾಪ್ಟನ್ಸಿ ಟಾಸ್ಕ್ ಗೆ ಆಯ್ಕೆ ಆಗಲಿದ್ದಾರೆ ಎನ್ನುವುದು ನಿಯಮವಾಗಿತ್ತು. ಅದರಂತೆ ರೂಪೇಶ್ ರಾಜಣ್ಣ ಮತ್ತು ಪ್ರಶಾಂತ್ ಸಂಬರ್ಗಿ ಓಡುತ್ತಾ ಬಂದು ಇಬ್ಬರೂ ಒಂದೇ ವೇಳೆಗೆ ಬಜರ್ ಮುಟ್ಟಿದರು. ಅದರಂತೆ ಯಾರು ಮೊದಲು ಮುಟ್ಟಿದ್ದು ಎಂಬ ಗೊಂದಲ ಎದುರಾಯಿತು.

    ಮೊದಲು ಬಜರ್ ಮುಟ್ಟಿದ್ದು ನಾನೇ ಎಂದು ಸಂಬರ್ಗಿ (Prashant Sambargi) ಕೈ ಎತ್ತಿದರೆ, ನಾನು ಮುಟ್ಟಿದ್ದು ಎಂದು ರೂಪೇಶ್ ರಾಜಣ್ಣ ಹೇಳಿದರೆ. ಸಂಬರ್ಗಿಯೇ ಮೊದಲು ಮುಟ್ಟಿದ್ದು ಎಂದು ಅನುಪಮಾ ಗೌಡ (Anupama Gowda) ಹೇಳಿದ್ದು ಜಗಳಕ್ಕೆ ಕಾರಣವಾಯಿತು. ಸಂಬರ್ಗಿಯ ಬೆನ್ನಿಗೆ ನಿಂತು ಅವರಿಗೆ ಕ್ಯಾಪ್ಟನ್ ಅನುಪಮಾ ಗೌಡ ಸಪೋರ್ಟ್ ಮಾಡಿದ್ದು ರೂಪೇಶ್ ರಾಜಣ್ಣಗೆ ಸರಿಬರಲಿಲ್ಲ. ಹಾಗಾಗಿ ಇಬ್ಬರ ಮಧ್ಯೆ ಮಾತಿನ ಚಕಮಕಿಯೇ ನಡೆಯಿತು. ಈ ರೀತಿಯಾದರೆ ನಾನು ಮನೆಯಲ್ಲಿ ಇರಲಾರೆ ಎಂದು ಬ್ಯಾಗ್ ಸಮೇತ ಹೊರಟು ನಿಂತರು.

    ತಾನು ಮನೆಯಿಂದ ಹೊರ ಹೋಗಬೇಕು, ದಯವಿಟ್ಟು ಬಾಗಿಲು ತೆಗೆಯಿರಿ ಎಂದು ಬಿಗ್ ಬಾಸ್ ಅವರನ್ನು ಕೇಳಿಕೊಂಡರು ರೂಪೇಶ್ ರಾಜಣ್ಣ. ಕೋಪಗೊಂಡಿದ್ದ ರೂಪೇಶ್ ಅವರನ್ನು ರೂಪೇಶ್ ಶೆಟ್ಟಿ ಮತ್ತು ಸಾನ್ಯ ಸಮಾಧಾನಿಸಿದರು. ಆದರೆ, ಅನುಪಮಾ ಗೌಡ ಮಾತ್ರ ತಾವೇನೂ ತಪ್ಪು ಮಾಡಿಲ್ಲ, ಸುಖಾಸುಮ್ಮನೆ ರೂಪೇಶ್ ಕೂಗಾಡಿದ್ರು ಎಂದು ನೊಂದುಕೊಂಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ರೂಪೇಶ್ ರಾಜಣ್ಣ- ಪ್ರಶಾಂತ್ ಸಂಬರ್ಗಿ ‘ಲೇ..’ ಜಗಳ: ರಣರಂಗವಾಯ್ತು ಬಿಗ್ ಬಾಸ್ ಮನೆ

    ರೂಪೇಶ್ ರಾಜಣ್ಣ- ಪ್ರಶಾಂತ್ ಸಂಬರ್ಗಿ ‘ಲೇ..’ ಜಗಳ: ರಣರಂಗವಾಯ್ತು ಬಿಗ್ ಬಾಸ್ ಮನೆ

    ಬಿಗ್ ಬಾಸ್ ಮನೆಯಲ್ಲಿ ಹಾವು ಮುಂಗಸಿಯಂತಿದ್ದ ರೂಪೇಶ್ ರಾಜಣ್ಣ ಮತ್ತು ಪ್ರಶಾಂತ್ ಸಂಬರ್ಗಿ (Prashant Sambargi) ಕಳೆದೊಂದು ವಾರದಿಂದ ತೀರಾ ಹತ್ತಿರವಾಗಿದ್ದರು. ಒಡಹುಟ್ಟಿದವರಂತೆ ಅನ್ಯೋನ್ಯವಾಗಿದ್ದರು. ಸ್ವತಃ ಬಿಗ್ ಬಾಸ್ಸೇ ಅಚ್ಚರಿ ಪಡುವಷ್ಟು ಒಬ್ಬರಿಗೊಬ್ಬರು ಗೌರವ ಕೊಟ್ಟುಕೊಂಡು ದಿನಗಳನ್ನು ದುಡುತ್ತಿದ್ದರು. ಆದರೆ, ದೀಪಾವಳಿ ದಿನದಂದು ಲಕ್ಷ್ಮಿ ಪಟಾಕಿ ಸಿಡಿಯುವಂತೆ ಇಬ್ಬರೂ ಸಿಡಿದುಕೊಂಡಿದ್ದಾರೆ. ಇವರಿಬ್ಬರ ಮಾತಿಗೆ ಬಿಗ್ ಬಾಸ್ ಮನೆ ರಣರಂಗವಾಗಿ ಮಾರ್ಪಟಿದೆ.

    ಕಳೆದ ನಾಲ್ಕೈದು ದಿನಗಳಿಂದ ರೂಪೇಶ್ ರಾಜಣ್ಣ (Rupesh Rajanna)ನನ್ನು ಪ್ರ್ಯಾಂಕ್ ಮಾಡುತ್ತಾ, ಮಜಾ ತಗೆದುಕೊಳ್ಳುತ್ತಿದ್ದರು ಪ್ರಶಾಂತ್ ಸಂಬರ್ಗಿ. ದೆವ್ವದ ವಿಚಾರವಾಗಿ ಕಾವ್ಯಶ್ರೀ ಗೌಡ ಮತ್ತು ಪ್ರಶಾಂತ್ ಸಂಬರ್ಗಿ ಹೂಡಿದ್ದ ಆಟಕ್ಕೆ ರೂಪೇಶ್ ರಾಜಣ್ಣ ಕ್ಲೀನ್ ಬೋಲ್ಡ್ ಆಗಿದ್ದರು. ಹೀಗಾಗಿ ರೂಪೇಶ್ ಮತ್ತು ಪ್ರಶಾಂತ್ ನಡುವೆ ಸ್ನೇಹ ಗಟ್ಟಿಯಾಗುತ್ತಿತ್ತು. ಆದರೆ, ದೀಪಾವಳಿ ದಿನದಂದು ಆಡಿದ ಆಟ ಮಾತ್ರ ಇಬ್ಬರನ್ನೂ ಕೆರಳಿಸಿತ್ತು. ದೀಪಾವಳಿ ಸಂಭ್ರಮವನ್ನು ನುಂಗಿತ್ತು. ಇಬ್ಬರ ಕಿತ್ತಾಟದಲ್ಲಿ ಬಿಗ್ ಬಾಸ್ ಮನೆಯ ಉಳಿದ ಸದಸ್ಯರು ಕೂಡ ಆತಂಕಗೊಂಡರು. ಇದನ್ನೂ ಓದಿ:ದೇಶ-ವಿದೇಶದಲ್ಲಿ ಮಾರ್ದನಿಸ್ತಿರೋ ಗಗ್ಗರ ಶಬ್ಧ- ಅಮೆರಿಕಾದಲ್ಲಿ ಎಂಟೂವರೆ ಕೋಟಿ ಬಾಚಿದ ಕಾಂತಾರ

    ‘ಉಡುಗೊರೆ ಬೇಕಾ, ಕ್ಯಾಪ್ಟನ್ಸಿ ಪಾಯಿಂಟ್ಸ್ ಬೇಕಾ’ ವಿಚಾರವು ಅರುಣ್ ಸಾಗರ್ (Arun Sagar) ಸೇರಿದಂತೆ ಹಲವು ಸದಸ್ಯರನ್ನು ಚರ್ಚೆಗೀಡು ಮಾಡಿತ್ತು. ಮೊದಲ ಹಂತದ ಚರ್ಚೆಯಲ್ಲಿ ಅರುಣ್ ಸಾಗರ್ ಮತ್ತು ರೂಪೇಶ್ ರಾಜಣ್ಣ ಸಣ್ಣದಾಗಿ ಕಿತ್ತಾಡಿಕೊಂಡರು. ರೂಪೇಶ್ ಅವರಿಗೆ ದುರಾಸೆ ಎಂದು ಅರುಣ್ ಆಡಿದ ಮಾತು ರೂಪೇಶ್ ರಾಜಣ್ಣರನ್ನು ಕೆರಳಿಸಿತ್ತು. ಇವರಿಬ್ಬರ ನಡುವಿನ ಕಿತ್ತಾಟದಲ್ಲಿ ಪ್ರಶಾಂತ್ ಸಂಬರ್ಗಿ ಮೂಗು ತೂರಿಸಿದರು. ಪ್ರಶಾಂತ್ ಎಂಟ್ರಿ ಕೊಡುತ್ತಿದ್ದಂತೆಯೇ ಜಗಳ ಬೇರೆ ಹಂತ ತಲುಪಿತು.

    ಅರುಣ್ ಮತ್ತು ರೂಪೇಶ್ ನಡುವಿನ ಗಲಾಟೆಗೆ  ಉರಿವ ಬೆಂಕಿಗೆ ತುಪ್ಪ ಸುರಿದಂತೆ ಅರುಣ್ ಪರ ಬ್ಯಾಟ್ ಬೀಸಿದರು ಪ್ರಶಾಂತ್. ಅದರಿಂದ ಮತ್ತಷ್ಟು ಕುಪಿತಗೊಂಡ ರೂಪೇಶ್ ರಾಜಣ್ಣ ಸಿಡಿದೆದ್ದು ಬಿಟ್ಟರು. ಮಾತಿನ ಭರಾಟೆಯಲ್ಲಿ ರೂಪೇಶ್ ಅವರನ್ನು ‘ಲೇ..’ ಎಂದು ಕರೆದುಬಿಟ್ಟರು ಪ್ರಶಾಂತ್ ಸಂಬರ್ಗಿ. ರೂಪೇಶ್ ರಾಜಣ್ಣ ಮತ್ತಷ್ಟು ಸಿಟ್ಟಾಗಿ ಹೊಡೆಯಲೆಂದು ಹೊರಟರು. ಇಬ್ಬರೂ ಕೈ ಕೈ ಮಿಲಾಯಿಸಿದರು. ದೀಪಾವಳಿ ಸಂಭ್ರಮದಲ್ಲಿದ್ದ ಬಿಗ್ ಬಾಸ್ ಮನೆ ರಣರಂಗವಾಯಿತು. ರೂಪೇಶ್ ಶೆಟ್ಟಿ (Rupesh Shetty) ಇವರನ್ನು ಸಮಾಧಾನ ಪಡಿಸದೇ ಇದ್ದರೆ, ಬಿಗ್ ಬಾಸ್ ಮನೆ ಇನ್ನೇನಾಗುತ್ತಿತ್ತೋ. ಈ ಗಲಾಟೆ ಕಿಚ್ಚನ ಪಂಚಾಯತಿಯಲ್ಲಿ ಯಾವೆಲ್ಲ ಚರ್ಚೆಯನ್ನು ಹುಟ್ಟು ಹಾಕತ್ತೋ ಕಾದು ನೋಡಬೇಕು.

    Live Tv
    [brid partner=56869869 player=32851 video=960834 autoplay=true]

  • ಬಿಗ್ ಬಾಸ್ ಮನೆಯಲ್ಲಿ ದೆವ್ವ: ಲಿಂಬೆಹಣ್ಣು ಇಟ್ಕೊಂಡಿದ್ದಾರಂತೆ ಪ್ರಶಾಂತ್ ಸಂಬರ್ಗಿ

    ಬಿಗ್ ಬಾಸ್ ಮನೆಯಲ್ಲಿ ದೆವ್ವ: ಲಿಂಬೆಹಣ್ಣು ಇಟ್ಕೊಂಡಿದ್ದಾರಂತೆ ಪ್ರಶಾಂತ್ ಸಂಬರ್ಗಿ

    ಬಿಗ್ ಬಾಸ್ (Bigg Boss Season 9 ) ಮನೆಯಲ್ಲಿ ಇದೀಗ ದೆವ್ವದ್ದೇ ಸದ್ದು. ಪ್ರಶಾಂತ್ ಸಂಬರ್ಗಿ, ರೂಪೇಶ್ ಶೆಟ್ಟಿ ಹಾಗೂ ಕಾವ್ಯಶ್ರೀ ಗೌಡ ಮಧ್ಯೆ ದೆವ್ವಗಳ ಬಗ್ಗೆ ರಸವತ್ತಾದ ಚರ್ಚೆ ನಡೆಯುತ್ತಿದೆ. ರೂಪೇಶ್ ಕೊಂಚ ಭಯಗೊಂಡಂತೆ ಕಂಡರೆ, ಇವರನ್ನು ಭಯಕ್ಕೆ ಬೀಳಿಸಿದ್ದಾರೆ ಕಾವ್ಯಶ್ರೀ ಗೌಡ. ಈ ಕಥೆಗೆ ಸ್ಕ್ರಿಪ್ಟ್ ಬರೆದು, ನಿರ್ದೇಶನ ಮಾಡಿದ್ದಾರೆ ಪ್ರಶಾಂತ್ ಸಂಬರ್ಗಿ. ಹಾಗಾಗಿ ಬಿಗ್ ಬಾಸ್ ಮನೆಯಲ್ಲಿ ದೆವ್ವಗಳ ಕಾರುಬಾರು ಶುರುವಾಗಿದೆ. ಪ್ರಶಾಂತ್ ಸಂಬರ್ಗಿ ತನ್ನ ಜೇಬಿನಲ್ಲಿ ಲಿಂಬೆಹಣ್ಣು ಇಟ್ಟುಕೊಂಡು ದೆವ್ವಗಳಿಂದ ರಕ್ಷಣೆ ಪಡೆದುಕೊಂಡಿದ್ದಾರಂತೆ.

    ರೂಪೇಶ್ ಶೆಟ್ಟಿ ಬಳಿ ಬರುವ ಕಾವ್ಯಶ್ರೀ ಗೌಡ (Kavyashree Gowda), ದೆವ್ವಗಳ ವಿಚಾರವನ್ನು ಪ್ರಸ್ತಾಪಿಸುತ್ತಾರೆ. ‘ಪ್ರಶಾಂತ್ ಸಂಬರ್ಗಿ ಸಖತ್ ಪುಕ್ಕಲು. ಯಾವುದೋ ಒಂದು ಶಬ್ದಕ್ಕೆ ಹೆದರಿಕೊಂಡಿದ್ದಾರೆ. ದೆವ್ವಗಳು ಇರುವುದು ಅನುಭವಕ್ಕೆ ಬಂದರೆ, ಮಂಚದ ಕೆಳಗೆ ಈರುಳ್ಳಿ ಇಟ್ಟುಕೊಳ್ಳಲು ಅವರ ತಾಯಿ ಹೇಳಿದ್ದಾರಂತೆ. ಹಾಗಾಗಿ ಅವರು ಈರುಳ್ಳಿ ಇಟ್ಟುಕೊಂಡಿದ್ದಾರೆ. ರಾತ್ರಿ ಒಬ್ಬರೇ ಬಾತ್ ರೂಮ್ ಗೆ ಹೋಗುವುದಕ್ಕೂ ಹೆದರಿಕೊಳ್ಳುತ್ತಾರೆ. ಸಡನ್ನಾಗಿ ಮಧ್ಯರಾತ್ರಿ ಎದ್ದು ಕೂರುತ್ತಾರೆ’ ಎಂದೆಲ್ಲ ರೂಪೇಶ್ ಬಳಿ ಕಥೆ ಕಟ್ಟಿದ್ದಾರೆ.

    ಅಷ್ಟಕ್ಕೂ ರೂಪೇಶ್ ಬಳಿಯೇ ಕಾವ್ಯಶ್ರೀ ಗೌಡ ಈ ಕಥೆ ಹೇಳುವುದಕ್ಕೆ ಕಾರಣವಿದೆ. ರೂಪೇಶ್ ಗೆ ಭಯ ಪಡಿಸುವುದಕ್ಕಾಗಿ ಪ್ರಶಾಂತ್ ಸಂಬರ್ಗಿ (Prashant Sambargi), ಕಾವ್ಯಶ್ರೀ ಗೌಡ ಅವರನ್ನು ಬಳಸಿಕೊಂಡಿದ್ದಾರೆ. ದೆವ್ವ (Devil), ಲಿಂಬೆಹಣ್ಣಿನ ಕಥೆಯನ್ನು ಕಾವ್ಯಶ್ರೀ ಗೌಡರಿಂದ ರೂಪೇಶ್ ಶೆಟ್ಟಿಗೆ ಹೇಳಿಸಿದ್ದಾರೆ. ಕೊಂಚ ಭಯದಲ್ಲಿಯೇ ಇರುವ ರೂಪೇಶ್, ತನ್ನ ಅನುಭವಕ್ಕೆ ಬಂದರೆ ಮಾತ್ರ ದೆವ್ವವನ್ನು ನಂಬುತ್ತೇನೆ ಎಂದು ಮಾತನಾಡಿದ್ದಾರೆ. ಅಲ್ಲದೇ, ತಮಗೆ ಇವರಿಬ್ಬರೂ ಫ್ರಾಂಕ್ ಮಾಡುತ್ತಿರಬಹುದಾ? ಎಂದು ಅನುಮಾನವನ್ನೂ ವ್ಯಕ್ತ ಪಡಿಸಿದ್ದಾರೆ. ಇದನ್ನೂ ಓದಿ:ದೇಶ-ವಿದೇಶದಲ್ಲಿ ಮಾರ್ದನಿಸ್ತಿರೋ ಗಗ್ಗರ ಶಬ್ಧ- ಅಮೆರಿಕಾದಲ್ಲಿ ಎಂಟೂವರೆ ಕೋಟಿ ಬಾಚಿದ ಕಾಂತಾರ

    ಪ್ರಶಾಂತ್ ಸಂಬರ್ಗಿ ಮತ್ತು ರೂಪೇಶ್ ಶೆಟ್ಟಿ (Rupesh Shetty) ಮತ್ತೆ ಮತ್ತೆ ದೆವ್ವಗಳ ವಿಚಾರವನ್ನು ಚರ್ಚೆ ಮಾಡುತ್ತಾ, ಮನೆಯ ಇತರ ಸದಸ್ಯರಿಗೂ ಭಯ ಹುಟ್ಟಿಸುತ್ತಿದ್ದಾರೆ. ಅದರಲ್ಲೂ ಪ್ರಶಾಂತ್ ಸಂಬರ್ಗಿ ಹೂಡಿರುವ ಈ ನಾಟಕಕ್ಕೆ ರೂಪೇಶ್ ಶೆಟ್ಟಿ ಬಕ್ರಾ ಆಗ್ತಾರಾ? ಅಥವಾ ಇವರು ತಮಾಷೆ ಮಾಡುತ್ತಿರುವ ವಿಚಾರವನ್ನು ಅರಿತುಕೊಳ್ಳುತ್ತಾರಾ ಎನ್ನುವುದೇ ಸದ್ಯಕ್ಕಿರುವ ಕುತೂಹಲ. ದೆವ್ವದ ಕಥೆ ಸದ್ಯಕ್ಕೆ ರೋಚಕತೆ ಹುಟ್ಟು ಹಾಕಿದೆ. ದೆವ್ವ ಯಾರನ್ನು ಎಷ್ಟು ಕಾಡುತ್ತದೆ ಎಂದು ಕಾದು ನೋಡೋಣ.

    Live Tv
    [brid partner=56869869 player=32851 video=960834 autoplay=true]

  • ಲವ್ ಯೂ ರಚಿತಾ, ನನ್ನ ನೀ ಹಗ್ ಮಾಡು: ಆರ್ಯವರ್ಧನ್ ಗುರೂಜಿ ಬೇಡಿಕೆ

    ಲವ್ ಯೂ ರಚಿತಾ, ನನ್ನ ನೀ ಹಗ್ ಮಾಡು: ಆರ್ಯವರ್ಧನ್ ಗುರೂಜಿ ಬೇಡಿಕೆ

    ಬಿಗ್ ಬಾಸ್ (Bigg Boss Season 9) ಮನೆಯಲ್ಲಿ ಆರ್ಯವರ್ಧನ್ ಗುರೂಜಿ (Aryavardhan Guruji) ವಿಚಿತ್ರ ಬೇಡಿಕೆ ಇಟ್ಟಿದ್ದಾರೆ. ಗುರೂಜಿ ಬಾಯಿಯಿಂದ ಇಂತಹ ನುಡಿಮುತ್ತುಗಳು ಬರುತ್ತಿದ್ದಂತೆಯೇ ಬಿಗ್ ಬಾಸ್ ಮನೆ ಸದಸ್ಯರೂ ಭಾವುಕರಾಗಿದ್ದಾರೆ. ಅಷ್ಟಕ್ಕೂ ಗುರೂಜಿಯ ಆ ಬೇಡಿಕೆ ಸದ್ಯಕ್ಕೆ ಈಡೇರದಿದ್ದರೂ, ಮುಂದಿನ ದಿನಗಳಲ್ಲಿ ಕಂಡಿತಾ ಸಾಧ್ಯವಾಗಬಹುದು ಎಂದು ಪ್ರಶಾಂತ್ ಸಂಬರ್ಗಿ ಭವಿಷ್ಯ ನುಡಿದಿದ್ದಾರೆ. ಹಾಗಾದರೆ, ಆರ್ಯವರ್ಧನ್ ಗುರೂಜಿ ಬೇಡಿಕೆ ಏನಾಗಿತ್ತು? ಯಾಕೆ ಬಿಗ್ ಬಾಸ್ ಮನೆಯ ಸದಸ್ಯರು ಭಾವುಕರಾದರು ಎನ್ನುವುದೇ ಸದ್ಯಕ್ಕಿರುವ ಕುತೂಹಲ.

    ಹೊಟ್ಟೆ ತುಂಬಾ ಊಟ ಮಾಡಿಕೊಂಡು ಬಂದ ಪ್ರಶಾಂತ್ ಸಂಬರ್ಗಿ(Prashant Sambargi) , ಕ್ಯಾಮೆರಾ ಮುಂದೆ ಬಂದು ‘ಬಿಗ್ ಬಾಸ್ ನನ್ನದು ಊಟ ಆಯಿತು, ನಿಮ್ಮದು ಆಯಿತಾ ಅಂದ್ಕೋತೀನಿ. ಥ್ಯಾಂಕ್ಸ್ ಬಿಗ್ ಬಾಸ್’ ಅಂದರು. ಅದನ್ನು ಗಮನಿಸುತ್ತಿದ್ದ ಆರ್ಯವರ್ಧನ್ ಗುರೂಜಿ, ‘ನೀವಷ್ಟೇ ಕ್ಯಾಮೆರಾ ಮುಂದೆ ಮಾತಾಡ್ಬೇಕಾ? ನಾನೂ ಮಾತಾಡ್ತೀನಿ’ ಅಂತ ಕ್ಯಾಮೆರಾ ಎದುರು ನಿಂತರು. ಪ್ರಶಾಂತ್ ಸಂಬರ್ಗಿ ರೀತಿಯಲ್ಲೇ ಗುರೂಜಿ ಕೂಡ ಬಿಗ್ ಬಾಸ್ ಗೆ ಏನಾದರೂ ಕೇಳುತ್ತಾರೆ ಅಂದುಕೊಂಡರೆ ಲೆಕ್ಕಾಚಾರವೇ ಉಲ್ಟಾ ಆಯಿತು. ಇದನ್ನೂ ಓದಿ: ‘ಬಿಗ್ ಬಾಸ್ ಸೀಸನ್ 9’ರ ಮೊದಲ ಮಹಿಳಾ ಕ್ಯಾಪ್ಟನ್ ಆಗಿ ದೀಪಿಕಾ ದಾಸ್ ಆಯ್ಕೆ

    ಕ್ಯಾಮೆರಾ ಮುಂದೆ ಬಂದ ಗುರೂಜಿ ತುಸು ಭಾವುಕರಾಗಿಯೇ ‘ ಐ ಲವ್ ಯೂ ರಚಿತಾ’ (Rachita) ಎಂದು ಬಿಟ್ಟರು. ರಚಿತಾ ಅಂದಾಕ್ಷಣ ಬಹುತೇಕರು ನಟಿ ರಚಿತಾ ರಾಮ್ ಗೆ ಹೇಳುತ್ತಿದ್ದಾರಾ ಅಂತ ಅಂದುಕೊಂಡಿದ್ದು ಸುಳ್ಳಲ್ಲ.  ಮತ್ತೆ ಮಾತು ಮುಂದುವರೆಸಿದ ಗುರೂಜಿ, ‘ನಿನಗೋಸ್ಕರ ನಾನು ಇಲ್ಲಿಗೆ ಬಂದಿದ್ದೇನೆ. ಆಚೆ ಬಂದ್ಮೇಲೆ ನನ್ನ ತುಂಬಾ ಲವ್ ಮಾಡು, ಯಾವತ್ತೂ ನಾನು ಲವ್ ನೋಡೇ ಇಲ್ಲ. ನಿನ್ನ ಪ್ರೀತಿ ಮಾಡಿಲ್ಲ. ನಿನ್ನ ಜೊತೆ ಲೈವ್ ಆಗಿ ಪ್ರೀತಿ ಮಾಡಿಲ್ಲ. ನಿನ್ನನ್ನು ನಾನು ರಿಯಲ್ ಆಗಿ ಲವ್ ಮಾಡ್ಬೇಕು. ನೀನು ನನ್ನ ಹಗ್ ಮಾಡಬೇಕು’ ಅಂತೆಲ್ಲ ಮಾತಾಡೋಕೆ ಶುರು ಮಾಡಿದ್ದರು. ಇದನ್ನು ಕೇಳಿ ಬಿಗ್ ಬಾಸ್ ಮನೆಯವರು ಒಂದು ಕ್ಷಣ ಶಾಕ್ ಗೆ ಒಳಗಾದರು.

    ರೋಮ್ಯಾಂಟಿಕ್ ಆಗಿ, ಎಮೋಷನಲ್ ಆಗಿ ಗುರೂಜಿ ಯಾವ ರಚಿತಾಗೆ ಈ ಮಾತುಗಳನ್ನು ಹೇಳುತ್ತಿರಬೇಕು ಎಂದು ಹಲವರು ತಲೆ ಕೆಡಿಸಿಕೊಂಡರು. ಆನಂತರ ಗೊತ್ತಾಗಿದ್ದು, ಗುರೂಜಿ ಅವರ ಪತ್ನಿಯ ಹೆಸರು ರಚಿತಾ ಅಂತ. ತಮ್ಮ ಪತ್ನಿಗೆ ಗುರೂಜಿ ಇದನ್ನೆಲ್ಲ ಹೇಳಿದ್ದಾರೆ ಎಂದು ಕೇಳಿ ಎಲ್ಲರೂ ನಿಟ್ಟುಸಿರಿಟ್ಟರು. ಅಷ್ಟಕ್ಕೆ ಸುಮ್ಮನಾಗದ ಗುರೂಜಿ, ‘ಇಲ್ಲಿ ಎಲ್ಲರೂ ನೈಟ್ ಹಗ್ ಮಾಡ್ತಾರೆ. ಅಯ್ಯಯ್ಯೋ ನಂಗೆ ನೋಡೋಕೆ ಆಗ್ತಿಲ್ಲ. ಅವರನ್ನೆಲ್ಲ ನೋಡಿ ನಿನ್ನ ಹಗ್ ಮಾಡ್ಬೇಕು ಅನಿಸ್ತಿದೆ’ ಎಂದು ತಮ್ಮೊಳಗೆ ತುಮುಲಗಳನ್ನು ಬಿಚ್ಚಿಟ್ಟರು ಗುರೂಜಿ.

    ಲವ್, ರಿಯಲ್ ಲವ್, ಹಗ್ ಅಂತೆಲ್ಲ ಮಾತನಾಡುತ್ತಾ ಗುರೂಜಿ, ನಂತರ ತುಸು ಭಾವುಕರಾಗಿ ‘ಇಲ್ಲಿವರೆಗೂ ಹೇಗೋ ಆಯ್ತು. ಕ್ಷಮಿಸಿ ಬಿಡಿ ನನ್ನ. ನಿನಗೋಸ್ಕರ ನಾನು ದುಡೀತೀನಿ. ನಿನಗೋಸ್ಕರ ಬದುಕ್ತೀನಿ’ ಎಂದು ಆಶ್ವಾಸನೆ ನೀಡಿದರು. ಗುರೂಜಿ ಮಾತುಗಳನ್ನು ಕೇಳಿಸಿಕೊಂಡ ದೊಡ್ಮನೆ ಸದಸ್ಯರು ಗುರೂಜಿ ಮಾತುಗಳಿಗೆ ಮೆಚ್ಚುಗೆ ಸೂಚಿಸಿದರು. ಗುರೂಜಿ ಮಾತು ಒಂದು ಕ್ಷಣ ಅಚ್ಚರಿ ಮತ್ತೊಂದು ಕ್ಷಣ ಭಾವುಕತೆಗೆ ನೂಕಿದ್ದು ಸುಳ್ಳಲ್ಲ. ಮನೆಯಿಂದ ಗುರೂಜಿ ಆಚೆ ಬಂದ ತಕ್ಷಣವೇ ರಚಿತಾ ಅವರು ಹಗ್ ಮಾಡಿಕೊಂಡು ಪತಿಯನ್ನು ಸ್ವಾಗತಿಸಿಕೊಳ್ಳಲಿ ಎಂದು ಹಾರೈಸೋಣ.

    Live Tv
    [brid partner=56869869 player=32851 video=960834 autoplay=true]

  • ಪ್ರಶಾಂತ್ ಸಂಬರ್ಗಿ ತಾಯಿಗೆ ಅವಮಾನ ಮಾಡಿದ ರೂಪೇಶ್ ರಾಜಣ್ಣ: ಬಹಿರಂಗ ಕ್ಷಮೆ

    ಪ್ರಶಾಂತ್ ಸಂಬರ್ಗಿ ತಾಯಿಗೆ ಅವಮಾನ ಮಾಡಿದ ರೂಪೇಶ್ ರಾಜಣ್ಣ: ಬಹಿರಂಗ ಕ್ಷಮೆ

    ಬಿಗ್ ಬಾಸ್ (Bigg Boss Season 9) ಮನೆಯಲ್ಲಿ ಪ್ರಶಾಂತ್ ಸಂಬರ್ಗಿ (Prashant Sambargi) ಮತ್ತು ರೂಪೇಶ್ ರಾಜಣ್ಣ ನಡೆ ಒಂದು ಕಡೆಯಾದರೆ, ಉಳಿದವರ ಆಟ ಮತ್ತೊಂದು ಕಡೆ ಆಗಿದೆ. ಎತ್ತು ಏರಿಗೆ ಎಳೆದರೆ, ಕೋಣ ನೀರಿಗೆ ಎಳೆಯಿತು ಅಂತಾರಲ್ಲ ಹಾಗಾಗಿದೆ ಬಿಗ್ ಬಾಸ್ ಮನೆಯ ಪರಿಸ್ಥಿತಿ. ದೊಡ್ಮನೆಯಲ್ಲಿರುವ ಬಹುತೇಕ ಸದಸ್ಯರು ಟಾಸ್ಕ್ ಗಾಗಿ ಕಿತ್ತಾಡಿಕೊಂಡರೆ, ಸಂಬರ್ಗಿ ಮತ್ತು ರೂಪೇಶ್ ವೈಯಕ್ತಿಕ ಕಾರಣಗಳಿಗಾಗಿ ಜಗಳ ಮಾಡುತ್ತಿದ್ದಾರೆ. ಈ ಜಗಳವು ಅವರ ಕುಟುಂಬದ ಸದಸ್ಯರಿಗೆ ಮುಜುಗರ ಪಡುವಂತಾಗಿದೆ.

    ವೈಯಕ್ತಿಕವಾಗಿ ಅವರಿಬ್ಬರೂ ಹೇಗಾದರೂ ಕಿತ್ತಾಡಿಕೊಳ್ಳಲಿ, ಯಾವ ಪದಗಳಿಂದಲಾದರೂ ನಿಂದಿಸಿಕೊಳ್ಳಲಿ. ಆದರೆ, ತಮ್ಮ ಮನೆಯ ಸದಸ್ಯರಿಗೆ ಅಪಮಾನ ಮಾಡುವಂತಹ ಮಾತುಗಳನ್ನು ಆಡುವುದು ಸರಿಯಲ್ಲ ಎನ್ನುವ ಮಾತು ಬಿಗ್ ಬಾಸ್ ಪ್ರೇಮಿಗಳದ್ದು. ಗೋಲ್ಡ್ ಮೈನ್ ಟಾಸ್ಕ್ ನಲ್ಲಂತೂ ಇಬ್ಬರೂ ನಾಲಿಗೆ ಹರಿಬಿಟ್ಟು, ತಮ್ಮ ಮರ್ಯಾದೆಯನ್ನು ತಾವೇ ಕಳೆದುಕೊಂಡಿದರು. ಅದರಲ್ಲೂ ಪ್ರಶಾಂತ್ ಸಂಬರ್ಗಿ ತಾಯಿಗೆ ಅಪಮಾನ ಮಾಡುವ ರೀತಿಯಲ್ಲಿ ರೂಪೇಶ್ ರಾಜಣ್ಣ ಮಾತನಾಡಿ ತಮ್ಮ ವ್ಯಕ್ತಿತ್ವಕ್ಕೆ ಮಸಿ ಬಳಿದುಕೊಂಡರು. ರೂಪೇಶ್ (Rupesh Rajanna) ಆಡಿದ ಆ ಮಾತು ಸಂಬರ್ಗಿಯನ್ನು ಸಖತ್ ಕೆರಳಿಸಿತು. ಇದನ್ನೂ ಓದಿ:ಬಿಗ್ ಬಾಸ್ ಮನೆಯಲ್ಲಿ ರೂಪೇಶ್ ರಾಜಣ್ಣ ಮೇಲೆ ಪ್ರಶಾಂತ್ ಸಂಬರ್ಗಿ ವಾಗ್ದಾಳಿ

    ಇದೇ ವಿಚಾರವಾಗಿ ಸಂಬರ್ಗಿ ಮತ್ತು ರೂಪೇಶ್ ಪದೇ ಪದೇ ಜಗಳ ಮಾಡುತ್ತಿದ್ದಾರೆ. ‘ನನ್ನ ತಾಯಿಗೆ ಅವಮಾನ ಮಾಡಿದ್ದೀರಿ. ಇದು ಮಾನನಷ್ಟ ಮೊಕದ್ದಮೆ ಹೂಡುವಂತಹ ಪದವಾಗಿದೆ. ನಮ್ಮ ತಾಯಿಯ ಮಾನವನ್ನು ಕರ್ನಾಟಕದ ಜನತೆ ಮುಂದೆ ಹರಾಜು ಹಾಕಿದ್ದೀರಿ. ನಾನು ನಿಮ್ಮನ್ನು ಸುಮ್ಮನೆ ಬಿಡುವುದಿಲ್ಲ’ ಎಂದು ರೂಪೇಶ್ ಮೇಲೆ ಸಂಬರ್ಗಿ ಕೂಗಾಡಿದ್ದಾರೆ. ಕೊನೆಗೂ ತಾವು ಮಾಡಿದ್ದ ತಪ್ಪಿನ ಅರಿವಾಗಿ ರೂಪೇಶ್ ಬಹಿರಂಗವಾಗಿಯೇ ಕ್ಷಮೆಯಾಚಿಸಿದ್ದಾರೆ. ನಾನು ಆ ಎರಡು ಪದಗಳನ್ನು ಆಡಬಾರದಿತ್ತು. ಆಡಿದ್ದಕ್ಕೆ ಕ್ಷಮೆ ಕೇಳುವೆ. ಆದರೆ ಉಳಿದ ಪದಗಳಿಗೆ ನಾನು ಬದ್ಧನಾಗಿದ್ದೇನೆ ಎಂದು ಮತ್ತೆ ಚುಚ್ಚಿದ್ದಾರೆ.

    ಗೋಲ್ಡ್ ಮೈನ್ ಟಾಸ್ಕ್‌ನಲ್ಲಿ ಪ್ರಶಾಂತ್ ಸಂಬರ್ಗಿಗೆ ರಾಜಾ ಇಲಿ, ಹೇಡಿ, ಕುತಂತ್ರಿ ಅಂತೆಲ್ಲ ಕರೆದಿದ್ದಾರೆ ರೂಪೇಶ್ ರಾಜಣ್ಣ. ಇಷ್ಟೆಲ್ಲ ಅನಿಸಿಕೊಂಡಿದ್ದ ಸಂಬರ್ಗಿ ಕೂಡ ಸುಮ್ಮನೆ ಕೂತಿಲ್ಲ, ರೂಪೇಶ್ ರಾಜಣ್ಣಗೂ ಬಾಯಿಗೆ ಬಂದಂತೆ ಬೈದಿದ್ದಾರೆ. ರೋಲ್‌ಕಾಲ್ ಹೋರಾಟಗಾರ ಎಂದೆಲ್ಲ ಜರಿದಿದ್ದಾರೆ. ‘ತಾವು ರೋಲ್‌ಕಾಲ್ ಮಾಡಿದ್ರೆ ಪ್ರೂ ಮಾಡಿ. ನೇಣಿಗೂ ಸಿದ್ಧನಿದ್ದೇನೆ’ ಎಂದು ರೂಪೇಶ್ ರಾಜಣ್ಣ ಮರು ಉತ್ತರ ನೀಡಿದ್ದರು. ಈ ಇಬ್ಬರ ಗಲಾಟೆ ಬಿಗ್ ಬಾಸ್ ನೋಡುಗರಿಗಂತೂ ಸಖತ್ ಕಿರಿಕಿರಿ ಮಾಡುತ್ತಿರುವುದಂತೂ ಸತ್ಯ.

    Live Tv
    [brid partner=56869869 player=32851 video=960834 autoplay=true]

  • ಕನ್ನಡದ ಹೆಸರಲ್ಲಿ ರೋಲ್‌ಕಾಲ್‌: ಪ್ರೂವ್ ಮಾಡಿದರೆ ನೇಣಿಗೇರುವೆ ಎಂದ ರೂಪೇಶ್ ರಾಜಣ್ಣ

    ಕನ್ನಡದ ಹೆಸರಲ್ಲಿ ರೋಲ್‌ಕಾಲ್‌: ಪ್ರೂವ್ ಮಾಡಿದರೆ ನೇಣಿಗೇರುವೆ ಎಂದ ರೂಪೇಶ್ ರಾಜಣ್ಣ

    ಮಾತಿನ ಚಕಮಕಿಯಿಂದಾಗಿ ‘ಬಿಗ್ ಬಾಸ್’ (Bigg Boss Season 9) ಮನೆ ಕೊತ ಕೊತ ಕುದಿಯುತ್ತಿದೆ. ಮೊದಲ ದಿನದಂದು ಇಲ್ಲಿಯತನಕ ಪ್ರಶಾಂತ್ ಸಂಬರ್ಗಿ ಮತ್ತು ಕನ್ನಡಪರ ಹೋರಾಟಗಾರ ರೂಪೇಶ್ ರಾಜಣ್ಣ(Rupesh Rajanna)  ಮಧ್ಯೆ ಜಗಳವಾಗುತ್ತಲೇ ಇದೆ. ಇಬ್ಬರೂ ಒಂದು ರೀತಿಯಲ್ಲಿ ಹಾವು ಮುಂಗಸಿ ತರಹ ಆಡುತ್ತಿದ್ದಾರೆ. ವೈಯಕ್ತಿಕ ವಿಚಾರವನ್ನು ಕೆದಕಿ, ತಮ್ಮ ಮರ್ಯಾದೆಯನ್ನು ತಾವೇ ಕ್ಯಾಮೆರಾ ಮುಂದೆ ಕಳೆದುಕೊಳ್ಳುತ್ತಿದ್ದಾರೆ. ಕ್ಯಾಪ್ಟೆನ್ಸಿಗಾಗಿ ನಡೆದ ‘ಬಿಗ್ ಬಾಸ್ ಗೋಲ್ಡ್ ಮೈನ್’ ಟಾಸ್ಕ್ ನಲ್ಲಿ ಮತ್ತೆ ಇಬ್ಬರೂ ಗಲಾಟೆ ಮಾಡಿಕೊಂಡಿದ್ದಾರೆ.

    ಈ ವಾರದ ಕ್ಯಾಪ್ಟೆನ್ಸಿಗಾಗಿ ವಿಭಿನ್ನ ರೀತಿಯ ಟಾಸ್ಕ್ ಒಂದನ್ನು ಆಯೋಜನೆ ಮಾಡಿದ್ದಾರೆ ಬಿಗ್ ಬಾಸ್. ಈ ಟಾಸ್ಕ್ ನಲ್ಲಿ ನಿಧಿ ಶೋಧಕರು ಚಿನ್ನವನ್ನು ಹುಡುಕಿ, ಅದನ್ನು ವಿಸರ್ಜಕರ ಬಳಿ ವಿನಿಯೋಗಿಸಿ, ಎದುರಾಳಿಯನ್ನು ಕ್ಯಾಪ್ಟೆನ್ಸಿ ಟಾಸ್ಕ್ ನಿಂದ ಹೊರಗಿಡಬೇಕು.  ಮೊದಲ ಸುತ್ತಿನಲ್ಲಿ ರೂಪೇಶ್ ಶೆಟ್ಟಿ ಜೊತೆ ಒಪ್ಪಂದ ಮಾಡಿಕೊಂಡಿದ್ದ ರೂಪೇಶ್ ರಾಜಣ್ಣ, ಟಾಸ್ಕ್ ಅನುಸಾರ ಪ್ರಶಾಂತ್ ಸಂಬರ್ಗಿಯನ್ನು ಔಟ್ ಮಾಡಿದರು. ಎರಡನೇ ಸುತ್ತಿನಲ್ಲಿ ವಿನೋದ್ ಗೊಬ್ಬರಗಾಲ ಜೊತೆ ಪ್ರಶಾಂತ್ ಸಂಬರ್ಗಿ ಡೀಲ್ ಮಾಡಿಕೊಂಡು ರೂಪೇಶ್ ರಾಜಣ್ಣನನ್ನು ಹೊರ ಹಾಕಿದರು. ಇದೇ ಜಗಳಕ್ಕೆ ಕಾರಣವಾಯಿತು. ಇದನ್ನೂ ಓದಿ:ತಮಿಳು ಬಿಗ್ ಬಾಸ್‌ಗೆ ಕಾಲಿಟ್ಟ ಕನ್ನಡತಿ ರಚಿತಾ ಮಹಾಲಕ್ಷ್ಮಿ

    ಕುತಂತ್ರಿ ಬುದ್ದಿಯಿಂದ ತನ್ನನ್ನು ಔಟ್ ಮಾಡಿದರು ಎಂದು ರೂಪೇಶ್ ರಾಜಣ್ಣ ಕೂಗಾಡಿದರು. ಸಂಬರ್ಗಿ (Prashant Sambargi) ಅವರನ್ನು ‘ಹೇಡಿ, ರಾಜಾ ಇಲಿ’ ಎಂದೆಲ್ಲ ಜರಿದರು. ಮಾತಿಗೆ ಮಾತು ಬೆಳೆದು ‘ಡಬ್ಬಾ ನನ್ ಮಗ, ಹೆದರುಪುಕ್ಲ ರೂಪೇಶ್ ರಾಜಣ್ಣ, ಯಾರ‍್ಯಾರ ಬಳಿ ರೋಲ್ ಮಾಡಿದ್ದಾರೋ, ಏನೋ? ಕನ್ನಡದ ಕಂದ ಹೇಡಿ’ ಅಂತೆಲ್ಲ ಪ್ರಶಾಂತ್ ಸಂಬರಗಿ ಜರಿದರು. ರೋಲ್‌ಕಾಲ್‌ ವಿಚಾರವಾಗಿ ರೂಪೇಶ್ ರಾಜಣ್ಣ ಗರಂ ಆದರು. ಇಬ್ಬರ ನಡುವಿನ ಗಲಾಟೆ ತಾರಕಕ್ಕೇರಿ ಬಿಗ್ ಬಾಸ್ ಮನೆಯ ವಾತಾವರಣವೇ ಬದಲಾಯಿತು.

    ತನಗೆ ರೋಲ್‌ಕಾಲ್‌ (Roll Call) ಅಂದ ಪ್ರಶಾಂತ್ ಸಂಬರ್ಗಿಯನ್ನು ದುರುಗುಟ್ಟಿ ನೋಡಿದ ರೂಪೇಶ್ ರಾಜಣ್ಣ, ‘ನಾನೇನಾದರೂ ರೋಲ್‌ಕಾಲ್ ಮಾಡಿದ್ದರೆ, ಯಾರಿಂದಾದರೂ ನಯಾಪೈಸೆ ಪಡೆದಿದ್ದರೆ, ಅದನ್ನು ಸಂಬರ್ಗಿ ಸಾಬೀತು ಪಡಿಸಲಿ. ನಾನು ರೋಲ್‌ಕಾಲ್ ಮಾಡಿದ್ದೇನೆ ಅಂತ ಪ್ರೂವ್ ಮಾಡಿದರೆ ಹ್ಯಾಂಗ್ ಮಾಡಿಕೊಳ್ಳಲು ಸಿದ್ಧ’ ಎಂದು ಘೋಷಿಸಿದರು. ‘ಹೊರಗಡೆ ಕೋಟಿ ಕೋಟಿ ವ್ಯವಹಾರ ಮಾಡೋ ಕುತಂತ್ರಿಗಳು ನಾವಲ್ಲ’ ಎಂದು ಪರೋಕ್ಷವಾಗಿ ಸಂಬರ್ಗಿಗೆ ಟಾಂಗ್ ಕೂಡ ಕೊಟ್ಟರು.

    ಕನ್ನಡದ (Kannada) ವಿಚಾರದಲ್ಲಿ ಮೊದಲಿನಿಂದಲೂ ರೂಪೇಶ್ ರಾಜಣ್ಣ ಮತ್ತು ಪ್ರಶಾಂತ್ ಸಂಬರ್ಗಿ ಮಧ್ಯೆ ಶೀತಲಸಮರ ನಡೆಯುತ್ತಲೇ ಇದೆ. ಈ ಹಿಂದೆ ‘ಸಂಬರ್ಗಿ ಕನ್ನಡ ವಿರೋಧಿ’ ಎಂದು ರೂಪೇಶ್ ಆರೋಪಿಸಿದ್ದರು. ‘ಕನ್ನಡದ ವಿಚಾರದಲ್ಲಿ ರೂಪೇಶ್ ಏನು ಅಂತ ಎಲ್ಲರಿಗೂ ಗೊತ್ತಿದೆ’ ಎಂದು ಸಂಬರ್ಗಿ ಪ್ರಶ್ನೆ ಮಾಡಿದ್ದರು. ಇದೀಗ ರೋಲ್‌ಕಾಲ್ ವಿಷಯ ಬಿಗ್ ಬಾಸ್ ಮನೆಯಲ್ಲಿ ಮಾತ್ರವಲ್ಲ, ದೊಡ್ಮನೆ ಆಚೆಯೂ ಚರ್ಚೆಗೆ ಕಾರಣವಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಸಾನ್ಯ ಅಯ್ಯರ್ ತಂಟೆಗೆ ಬಂದವರಿಗೆ ರೂಪೇಶ್ ಶೆಟ್ಟಿ ಖಡಕ್ ವಿಲನ್ : ಪ್ರಶಾಂತ್ ಸಂಬರ್ಗಿ ಎಚ್ಚರಿಕೆ

    ಸಾನ್ಯ ಅಯ್ಯರ್ ತಂಟೆಗೆ ಬಂದವರಿಗೆ ರೂಪೇಶ್ ಶೆಟ್ಟಿ ಖಡಕ್ ವಿಲನ್ : ಪ್ರಶಾಂತ್ ಸಂಬರ್ಗಿ ಎಚ್ಚರಿಕೆ

    ಕಿರುತೆರೆಯ ಬಿಗ್ ಶೋ ಬಿಗ್ ಬಾಸ್‌ನ ಲವ್ ಬರ್ಡ್ಸ್ ಆಗಿ ಮಿಂಚುತ್ತಿರುವ ಸಾನ್ಯ ಅಯ್ಯರ್ ಮತ್ತು ರೂಪೇಶ್ ಶೆಟ್ಟಿ ಸದಾ ಒಂದಲ್ಲಾ ಒಂದು ವಿಚಾರವಾಗಿ ಸುದ್ದಿಯಲ್ಲಿರುತ್ತಾರೆ. ಇದೀಗ ಸಾನ್ಯ ತಂಟೆಗೆ ಬಂದ್ರೆ ರೂಪೇಶ್ ವಿಲನ್ ಆಗುತ್ತಾನೆ ಎಂದು ಸಂಬರ್ಗಿ ಮಾತನಾಡಿರುವ ಮಾತು ಹೈಲೆಟ್ ಆಗಿದೆ.

    ಸಾನ್ಯ ಮತ್ತು ರೂಪೇಶ್ ಲವ್ವಿ ಡವ್ವಿ ವಿಚಾರ ಮನೆಮಂದಿಗೆ ಮಾತ್ರವಲ್ಲ ನೋಡುಗರಿಗೆ ಈ ಜೋಡಿ ಇಷ್ಟವಾಗಿದೆ. ಹಾಗೆಯೇ ಮನೆಯಲ್ಲಿ ಈ ಜೋಡಿಯನ್ನು ಕಂಡ್ರೆ‌ ಉರಿದುಕೊಳ್ಳುವವರು ಇದ್ದಾರೆ. ಸದ್ಯ ರೂಪೇಶ್ ಮತ್ತು ಸಾನ್ಯ ಬಗ್ಗೆ ರಾಕೇಶ್ ಬಳಿ ಸಂಬರ್ಗಿ ಚರ್ಚಿಸಿದ್ದಾರೆ. ಮನೆಮಂದಿಯ ಬಗ್ಗೆ ಈ‌ ಮೊದಲೇ ತಿಳಿದುಕೊಂಡು‌ ಬಂದಿದ್ದೇನೆ. ಅವರ ಪಾಸಿಟಿವ್ & ನೆಗೆಟಿವ್ ಗೊತ್ತು ಎಂದು ರಾಕಿ ಬಳಿ ಪ್ರಶಾಂತ್ ಸಂಬರ್ಗಿ ಚರ್ಚೆ ಮಾಡಿದ್ದಾರೆ. ಇದನ್ನೂ ಓದಿ:ತಮಿಳು ಬಿಗ್ ಬಾಸ್‌ಗೆ ಕಾಲಿಟ್ಟ ಕನ್ನಡತಿ ರಚಿತಾ ಮಹಾಲಕ್ಷ್ಮಿ

    ಮನೆಮಂದಿಯ ಪಾಸಿಟಿವ್ ಮತ್ತು ನೆಗೆಟಿವ್ ಬಗ್ಗೆ ರಾಕಿ ಮತ್ತು ಸಂಬರ್ಗಿ ಡಿಸ್ಕಸ್ ಮಾಡಿದ್ದಾರೆ. ಈ ವೇಳೆ ಸಾನ್ಯ, ರೂಪೇಶ್ ಬಗ್ಗೆ ಸಂಬರ್ಗಿ ಮಾತನಾಡಿದ್ದಾರೆ. ಸಾನ್ಯ ಒಳ್ಳೆಯ ಹುಡುಗಿ, ರೂಪೇಶ್ ಹಾರ್ಟ್ಲಿ ಒಳ್ಳೆಯ ಹುಡುಗ. ಆದರೆ ಅವನ ಕೆಲವೊಂದು ವೈಯಕ್ತಿಕ ವಿಚಾರಕ್ಕೆ ಕೈ ಹಾಕಿದ್ರೆ ಅವನಿಗೆ ಆಗಲ್ಲ. ಊಟ, ಸ್ನಾನ, ಸಾನ್ಯ ವಿಚಾರಕ್ಕೆ ರೂಪೇಶ್ ವಿಲನ್ ಆಗುತ್ತಾರೆ ಎಂದು ಸಂಬರ್ಗಿ ರಾಕೇಶ್ ಅಡಿಗ ಬಳಿ ಹೇಳಿದ್ದಾರೆ. ಸಾನ್ಯ ತಂಟೆಗೆ ಬಂದ್ರೆ ಶೆಟ್ರು ವಿಲನ್ ಆಗುತ್ತಾರೆ ಎಂಬ ಮಾತನ್ನ ಸಂಬರ್ಗಿ ಮಾತನಾಡಿದ್ದಾರೆ.

    ಕೆಲ ದಿನಗಳ ಹಿಂದೆ ರೂಪೇಶ್ ಯಾವಾಗಲೂ ಶೌಚಾಲಯದಲ್ಲಿಯೇ ಇರುತ್ತಾರೆ ಎಂದು ದೊಡ್ಡ ಚರ್ಚೆ ಆಗಿತ್ತು. ಆಗ ರೂಪೇಶ್ ಖಡಕ್ ಆಗಿಯೇ ಉತ್ತರ ನೀಡಿದ್ದರು. ಹಾಗಾಗಿ ರೂಪೇಶ್ ಆದ್ಯತೆ ಕೊಡುವ ಸ್ಥಾನದಲ್ಲಿ ಸಾನ್ಯ ಕೂಡ ಇದ್ದಾರೆ ಎಂಬ ಮಾತನ್ನ ಸಂಬರ್ಗಿ ಆಡಿದ್ದಾರೆ. ಮುಂದಿನ ದಿನಗಳಲ್ಲಿ ದೊಡ್ಮನೆ ಆಟ ಯಾವ ರೀತಿ ತಿರುವು ಪಡೆಯಲಿದೆ ಎಂಬುದನ್ನ ಕಾದುನೋಡಬೇಕಿದೆ.

    Live Tv
    [brid partner=56869869 player=32851 video=960834 autoplay=true]