Tag: Pratapgarh

  • ಸೋನಿಯಾ ಗಾಂಧಿ ತಿರುಚಿದ ವಿಡಿಯೋ ಪೋಸ್ಟ್ – ವ್ಯಕ್ತಿ ಬಂಧನ

    ಸೋನಿಯಾ ಗಾಂಧಿ ತಿರುಚಿದ ವಿಡಿಯೋ ಪೋಸ್ಟ್ – ವ್ಯಕ್ತಿ ಬಂಧನ

    ಜೈಪುರ: ಅಖಿಲ ಭಾರತ ಕಾಂಗ್ರೆಸ್ (Congress) ಸಮಿತಿಯ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ (Sonia Gandhi) ಅವರ ತಿರುಚಿದ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ ಆರೋಪದ ಮೇಲೆ ರಾಜಸ್ಥಾನದ (Rajasthan) ಪ್ರತಾಪಗಢ ಮೂಲದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

    ಘಟನೆಯು ಬೆಳಕಿಗೆ ಬಂದಂತೆ ಪೊಲೀಸ್ ಸೈಬರ್ ಕ್ರೈಂ (Police Cyber Crime) ವಿಭಾಗವು ಆರೋಪಿ ಬಿಪಿನ್ ಕುಮಾರ್ ಸಿಂಗ್ ಶಾಂಡಿಲ್ಯನನ್ನು ಪತ್ತೆಹಚ್ಚಿ ಬಂಧಿಸಿ ಆತನನ್ನು ನ್ಯಾಯಾಲಯಕ್ಕೆ (Court) ಹಾಜರುಪಡಿಸಿದೆ. ನ್ಯಾಯಾಲಯವು ಆರೋಪಿಯನ್ನು ಮಾರ್ಚ್ 14ರ ವರೆಗೆ ಪೊಲೀಸ್ ಕಸ್ಟಡಿಗೆ ನೀಡಿದೆ. ಇದನ್ನೂ ಓದಿ: ಮೋದಿ ಕಾರ್ಯಕ್ರಮ ಮುಗಿಯುತ್ತಿದ್ದಂತೆ ಹೆದ್ದಾರಿಯಲ್ಲಿ ಸಂಚಾರಕ್ಕೆ ಅನುಮತಿ  

    ಈ ಹಿಂದೆಯೇ ಸಾಮಾಜಿಕ ಮಾಧ್ಯಮ ವೇದಿಕೆಯು ಆರೋಪಿಯಲ್ಲಿ ವಿಡಿಯೋವನ್ನು ತೆಗೆದುಹಾಕುವಂತೆ ಸೂಚಿಸಿತ್ತು. ಆದರೆ ಆರೋಪಿ ಸೂಚನೆಯನ್ನು ಧಿಕ್ಕರಿಸಿ ಕೃತ್ಯವನ್ನು ಮುಂದುವರಿಸಿದ್ದ ಎಂದು ತಿಳಿದು ಬಂದಿದೆ. ಹೀಗಾಗಿ ಸಂಬಂಧಪಟ್ಟ ಅಧಿಕಾರಿಗಳು ಈ ವಿಚಾರದಲ್ಲಿ ಮಧ್ಯ ಪ್ರವೇಶಿಸಿ ಪೋಸ್ಟ್ ಮಾಡಿರುವ ವಿಡಿಯೋವನ್ನು ಸಾಮಾಜಿಕ ಮಾಧ್ಯಮಗಳಿಂದ ತೆಗೆದುಹಾಕಿ ಆರೋಪಿಯನ್ನು ಬಂಧಿಸಿದ್ದಾರೆ. ಇದನ್ನೂ ಓದಿ: ಆಸ್ಕರ್ ಪ್ರಶಸ್ತಿ ಪ್ರದಾನಕ್ಕೆ ಕ್ಷಣಗಣನೆ : ಭಾರತದ ಯಾವ ಚಿತ್ರಕ್ಕೆ ಸಿಗತ್ತೆ ಆಸ್ಕರ್?

  • ಕಾರು, ಟ್ರಕ್ ಮುಖಾಮುಖಿ ಡಿಕ್ಕಿ- ಮಕ್ಕಳು ಸೇರಿ ಒಂದೇ ಕುಟುಂಬದ 9 ಮಂದಿ ದಾರುಣ ಸಾವು

    ಕಾರು, ಟ್ರಕ್ ಮುಖಾಮುಖಿ ಡಿಕ್ಕಿ- ಮಕ್ಕಳು ಸೇರಿ ಒಂದೇ ಕುಟುಂಬದ 9 ಮಂದಿ ದಾರುಣ ಸಾವು

    ಲಕ್ನೋ: ಎಸ್‍ಯುವಿ ಕಾರು ಹಾಗೂ ಟ್ರಕ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಎರಡು ಮಕ್ಕಳು ಸೇರಿ 9 ಜನರು ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಪ್ರತಾಪ್‍ಗಢದಲ್ಲಿ ನಡೆದಿದೆ.

    ಅಘಾತದಲ್ಲಿ ಓರ್ವ ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಶುಕ್ರವಾರ ಬೆಳಗ್ಗೆ ತಮ್ಮ ಊರಿಗೆ ತೆರಳುತ್ತಿದ್ದಾಗ ನವಾಬ್‍ಗಂಜ್ ಸಮೀಪದ ವಾಜಿದ್‍ಪುರ್ ಪ್ರದೇಶದಲ್ಲಿ ಅಪಘಾತ ಸಂಭವಿಸಿದೆ. ಮೃತರು ಒಂದೇ ಕುಟುಂಬದವರಾಗಿದ್ದು, ಬಿಹಾರದ ಭೋಜ್ಪುರ ಮೂಲದವರು ಎಂದು ವರದಿಯಾಗಿದೆ.

    ಭೋಜ್ಪುರದ ಒಟ್ಟು 9 ಜನರು ಕಾರಿನಲ್ಲಿ ಉತ್ತರ ಪ್ರದೇಶದಿಂದ ತಮ್ಮ ಊರಿಗೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ. ಡಿಕ್ಕಿ ಹೊಡೆದ ರಭಸಕ್ಕೆ ಕಾರಿನ ಬಹುತೇಕ ಭಾಗ ನುಜ್ಜುಗುಜ್ಜಾಗಿದೆ. ಅಷ್ಟೇ ಅಲ್ಲದೆ ಟ್ರಕ್ ಚಕ್ರ ಕೂಡ ಜಖಂಗೊಂಡಿದೆ. ಇದೇ ಮಾರ್ಗವಾಗಿ ಪ್ರಯಾಣಿಸುತ್ತಿದ್ದ ಕೆಲವರು ವಾಹನ ನಿಲ್ಲಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣವೇ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಮೃತದೇಹಗಳನ್ನು ಹೊರಕ್ಕೆ ತೆಗೆದು ಮರಣೋತ್ತರ ಪರೀಕ್ಷೆಗೆ ಸಾಗಿಸಿದ್ದಾರೆ.

    ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪ್ರತಾಪ್‍ಗಢದ ಪೊಲೀಸರು ತನಿಖೆ ಆರಂಭಿಸಿದ್ದಾರೆ. ದುರ್ಘಟನೆಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕಂಬನಿ ಮಿಡಿದಿದ್ದಾರೆ.

  • ಕಾಲಿಗೆ ಸರಪಳಿ ಕಟ್ಟಿ ಮಹಿಳೆ ಬಂಧನ- ಸಂಬಂಧಿಕರಿಂದ್ಲೇ ರೇಪ್

    ಕಾಲಿಗೆ ಸರಪಳಿ ಕಟ್ಟಿ ಮಹಿಳೆ ಬಂಧನ- ಸಂಬಂಧಿಕರಿಂದ್ಲೇ ರೇಪ್

    ಜೈಪುರ್: ಅತ್ತೆ-ಮಾವ ಸರಪಳಿಯಿಂದ ಕಟ್ಟಿಹಾಕಿದ್ದ ಮಹಿಳೆಯ ಮೇಲೆ ಸಂಬಂಧಿಕರೇ ಅತ್ಯಾಚಾರ ಎಸಗಿದ ಅಮಾನವೀಯ ಘಟನೆ ರಾಜಸ್ಥಾನದ ಪ್ರತಾಪ್‍ಗಢ್‍ನಲ್ಲಿ ನಡೆದಿದೆ.

    ಸಂತ್ರಸ್ತೆಯನ್ನು ಪ್ರತಾಪ್‍ಗಢ್ ಜಿಲ್ಲಾಧಿಕಾರಿ ರಕ್ಷಿಸಿದ್ದಾರೆ. ಮಹಿಳೆಯ ಕಾಲಿಗೆ ಕಟ್ಟಲಾಗಿದ್ದ ಸರಪಳಿಯನ್ನು ಬಿಚ್ಚಿ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ವರದಿಯಾಗಿದೆ.

    ಸಂತ್ರಸ್ತೆಯು ಪ್ರತಾಪ್‍ಗಢ್ ಜಿಲ್ಲೆಯ ಪೀಪಲ್ ಖುಂಟ್ ಗ್ರಾಮದ ನಿವಾಸಿ. ಆಕೆಗೆ ಐವರು ಮಕ್ಕಳಿದ್ದು, ಅತ್ತೆ-ಮಾವ ಹಾಗೂ ಪತಿಯ ಜೊತೆಗೆ ವಾಸವಾಗಿದ್ದಳು. ಆದರೆ ಪತಿ ಮದ್ಯ ವ್ಯಸನಿಯಾಗಿದ್ದು, ನಿತ್ಯವೂ ಕುಡಿದು ಬಂದು ಹೊಡೆಯುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

    ಅತ್ತೆ-ಮಾವನ ಸಂಬಂಧಿಕರು ನನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ. ಮನೆಯಿಂದ ತಪ್ಪಿಸಿಕೊಂಡು ಹೋಗಿದ್ದ ನನ್ನನ್ನು ಹಿಡಿದುಕೊಂಡು ಬಂದು ಸರಪಳಿಯಿಂದ ಕಟ್ಟಿ ಹಾಕಿದ್ದಾರೆ ಎಂದು ಮಹಿಳೆ ದೂರಿದ್ದಾಳೆ. ಆಕೆಯ ಹೇಳಿಕೆ ದಾಖಲಿಸಿಕೊಂಡು ತನಿಖೆ ಆರಂಭಿಸಲಾಗಿದೆ ಎಂದು ಪ್ರತಾಪ್‍ಗಢ್ ಪೊಲೀಸ್ ಠಾಣೆಯ ಅಧಿಕಾರಿ ತಿಳಿಸಿದ್ದಾರೆ.

    ಈ ಸಂಬಂಧ ಪ್ರತಾಪ್‍ಗಢ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತನಿಖೆ ಆರಂಭಿಸಿರುವ ಪೊಲೀಸರು ಇನ್ನು ಯಾವುದೇ ಆರೋಪಿಗಳನ್ನು ಬಂಧಿಸಿಲ್ಲ.