Tag: Prathima

  • ಫ್ಯಾನ್ಸ್‌ಗೆ ಗುಡ್ ನ್ಯೂಸ್- ‘ಮುದ್ದು ಸೊಸೆ’ಗೆ ತ್ರಿವಿಕ್ರಮ್ ಹೀರೋ

    ಫ್ಯಾನ್ಸ್‌ಗೆ ಗುಡ್ ನ್ಯೂಸ್- ‘ಮುದ್ದು ಸೊಸೆ’ಗೆ ತ್ರಿವಿಕ್ರಮ್ ಹೀರೋ

    ‘ಬಿಗ್ ಬಾಸ್ ಕನ್ನಡ 11’ರ (Bigg Boss Kannada 11) ರನ್ನರ್ ಅಪ್ ತ್ರಿವಿಕ್ರಮ್ (Trivikram) ಅವರು ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ‘ಮುದ್ದು ಸೊಸೆ’ಗೆ ಹೀರೋ ಆಗಿ ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟಿದ್ದಾರೆ. ಇದನ್ನೂ ಓದಿ:‘ದಿ ಡೆವಿಲ್’ ಶೂಟಿಂಗ್ ಮತ್ತೆ ಆರಂಭ- ದರ್ಶನ್ ಭದ್ರತೆಗಾಗಿ ಭಾರೀ ಮೊತ್ತ ಕಟ್ಟಿದ ಚಿತ್ರತಂಡ

    ‘ಬಿಗ್ ಬಾಸ್’ ಶೋ ಮುಗಿಯಿತು ತ್ರಿವಿಕ್ರಮ್ ಮುಂದೇನು ಮಾಡ್ತಾರೆ ಎಂಬುದಕ್ಕೆ ಈಗ ಉತ್ತರ ಸಿಕ್ಕಿದೆ. ‘ಮುದ್ದು ಸೊಸೆ’ ಎಂಬ ಹೊಸ ಸೀರಿಯಲ್‌ನಲ್ಲಿ ನಟಿಸಲು ಅವರು ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ರೀಲ್ಸ್ ಮೂಲಕ ಮೋಡಿ ಮಾಡಿದ್ದ ಪ್ರತಿಮಾ ಅವರು ‘ಮುದ್ದು ಸೊಸೆ’ಯಾಗಿ ಕಾಣಿಸಿಕೊಳ್ತಿದ್ದಾರೆ.

    ‘ಮುದ್ದು ಸೊಸೆ’ ಧಾರಾವಾಹಿಯಲ್ಲಿ ನಾಯಕ-ನಾಯಕಿಯ ಮದುವೆ ಫಿಕ್ಸ್ ಆಗಿರುತ್ತದೆ. ಇನ್ನೂ 10ನೇ ಕ್ಲಾಸ್ ಓದುತ್ತಿದ್ದ ನಾಯಕಿ ವಿದ್ಯಾಗೆ ಈಗಲೇ ಮದುವೆ ಆಗೋ ಆಸೆ ಇರೋದಿಲ್ಲ. ಓದುವ ಕನಸಿನಿಂದ ಮದುವೆ ಬೇಡ ಎಂದರೂ ಯಾರೂ ಅವಳ ಮಾತನ್ನು ಕೇಳಲು ರೆಡಿ ಇರೋದಿಲ್ಲ. ಇದು ಈ ಸೀರಿಯಲ್‌ನ ಒನ್‌ಲೈನ್ ಸ್ಟೋರಿಯಾಗಿದೆ. ಬಾಲ್ಯ ವಿವಾಹದ ಕಥೆಯಾಗಿದೆ. ಈ ವಿಭಿನ್ನ ಸ್ಟೋರಿಯಲ್ಲಿ ತ್ರಿವಿಕ್ರಮ್ ನಾಯಕನಾಗಿ ನಟಿಸುತ್ತಿದ್ದಾರೆ.

    ಈ ಸೀರಿಯಲ್‌ನ ಪ್ರೋಮೋ ರಿಲೀಸ್ ಆಗ್ತಿದ್ದಂತೆ ಭವ್ಯಾ ಗೌಡನೇ ನಾಯಕಿಯಾಗಿದಿದ್ರೆ ಚೆನ್ನಾಗಿರುತ್ತಿತ್ತು ಎಂದು ಪ್ರೇಕ್ಷಕರು ಕಾಮೆಂಟ್ ಮಾಡಿದ್ದಾರೆ. ಸೀರಿಯಲ್ ಶುರುವಾಗೋ ಮುಂಚೆ ನಾಯಕಿಯನ್ನು ಬದಲಿಸಿ ಎಂದು ಬೇಡಿಕೆ ಇಟ್ಟಿದ್ದಾರೆ.

  • ಗಂಡನಿಗೆ ಪ್ರತಿನಿತ್ಯ ಊಟದಲ್ಲಿ ವಿಷ ಬೆರೆಸಿ ಕೊಡ್ತಿದ್ದ ಖತರ್ನಾಕ್ ಸುಂದರಿ – ಸ್ಲೋ ಪಾಯ್ಸನ್ ಯಾವುದು?

    ಗಂಡನಿಗೆ ಪ್ರತಿನಿತ್ಯ ಊಟದಲ್ಲಿ ವಿಷ ಬೆರೆಸಿ ಕೊಡ್ತಿದ್ದ ಖತರ್ನಾಕ್ ಸುಂದರಿ – ಸ್ಲೋ ಪಾಯ್ಸನ್ ಯಾವುದು?

    – ವರ್ಷ ಕಳೆಯುವ ಮೊದಲೇ ಬೆಡ್‌ರೂಮ್‌ನಲ್ಲಿ ಕೊಲೆ
    – FSL ವರದಿಗಾಗಿ ಅಧಿಕಾರಿಗಳು ವೇಯ್ಟಿಂಗ್‌

    ಉಡುಪಿ: ಕರಿಮಣಿ ಮಾಲೀಕ ನೀನಲ್ಲ ಎನ್ನುತ್ತಾ ವಿಷ ಹಾಕಿ.. ಉಸಿರುಗಟ್ಟಿಸಿ ಕೊಂದ ರಿಲ್ಸ್ ರಾಣಿ (Reels Queen) ಪ್ರತಿಮಾ ಕಂಬಿ ಎಣಿಸುತ್ತಿದ್ದಾಳೆ. ಕೊಲೆ ಕೃತ್ಯದಲ್ಲಿ ಪ್ರಮುಖ ಪಾತ್ರವಹಿಸಿದ ಆಕೆಯ ಸ್ನೇಹಿತ ದಿಲೀಪ್ ಹೆಗ್ಡೆಯ ತೀವ್ರ ವಿಚಾರಣೆ ನಡೆಸಲಾಗುತ್ತಿದೆ. ಹೊಸ ಮನೆ ಕಟ್ಟಿಸಿ ಒಂದು ವರ್ಷ ಕಳೆಯುವ ಮೊದಲೇ ಬೆಡ್‌ರೂಮ್‌ನಲ್ಲಿ ಗಂಡನ ಉಸಿರು ನಿಲ್ಲಿಸಿದ ಕಥೆ ನಿಜಕ್ಕೂ ರೋಚಕ.. ಭಯಾನಕ…

    ಉಡುಪಿ (Udupi) ಜಿಲ್ಲೆ ಕಾರ್ಕಳದ ಪ್ರತಿಮಾ ಎಂಬ ರಿಲ್ಸ್ ರಾಣಿ ತನ್ನ ಪ್ರಿಯಕರ ದಿಲೀಪ್ ಹೆಗ್ಡೆ ಜೊತೆ ಸೇರಿ, ಮುಗ್ಧ ಪತಿ ಬಾಲಕೃಷ್ಣ ಪೂಜಾರಿಯನ್ನು ಕೊಂದಿರುವ ಅಮಾನವೀಯ ಘಟನೆ ಎಲ್ಲರನ್ನೂ ಬೆಚ್ಚಿ ಬೀಳಿಸಿದೆ. ಪ್ರಿಯಕರ ತಂದುಕೊಟ್ಟ ಸ್ಲೋ ಪಾಯ್ಸನನ್ನು ಸ್ವಲ್ಪ ಸ್ವಲ್ಪವೇ ಕೊಟ್ಟು, ಆರೋಗ್ಯ ಹದಗೆಡುವಂತೆ ಮಾಡಿದ ಪ್ರತಿಮಾ, ಕೊನೆಗೆ ಗೆಳೆಯನ ಜೊತೆ ಸೇರಿ ಉಸಿರುಗಟ್ಟಿಸಿ ಪತಿಯನ್ನು ಕೊಂದ ಪ್ರಕರಣವಿದು. ಇದೀಗ ಆರೋಪಿಗಳಿಬ್ಬರು ಪೊಲೀಸರ ಅತಿಥಿಗಳಾಗಿದ್ದಾರೆ. ತನ್ನ ಸಹೋದರನ ಮುಂದೆ ಎಲ್ಲಾ ಸತ್ಯವನ್ನು ಬಿಚ್ಚಿಟ್ಟ ಪ್ರತಿಮಾ, ಅಜೆಕಾರು ಪೊಲೀಸರ ಮುಂದೆ ತಾನೇ ಕೊಲೆ ಮಾಡಿರುವುದನ್ನು ಒಪ್ಪಿಕೊಂಡಿದ್ದಾಳೆ. ಆಕೆಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು ನೇರವಾಗಿ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ. ಕಂಬಿ ಹಿಂದೆ ಸೇರುವ ಮೊದಲೇ ಪತ್ನಿ ಪ್ರತಿಮಾ ಎಲ್ಲಾ ದುಷ್ಟ ಕೃತ್ಯವನ್ನು ಪೊಲೀಸರ ಮುಂದೆ ಬಿಚ್ಚಿಟ್ಟಿದ್ದಾಳೆ.

    ತನ್ನ ಪ್ರಿಯತಮೆಗೆ ವಿಷ ತಂದುಕೊಟ್ಟು ಕೊಲೆಯಲ್ಲಿ ಪ್ರಮುಖ ಪಾತ್ರ ವಹಿಸಿದ, ಪ್ರಿಯಕರ ದಿಲೀಪ್ ಹೆಗ್ಡೆ, ಬಾಯಿಬಿಡಲು ನಕ್ರಾ ಮಾಡುತ್ತಿದ್ದಾನೆ. ಈತನಿಂದ ಸಾಕಷ್ಟು ಸತ್ಯಗಳನ್ನು ಹೊರ ತರುವುದು ಬಾಕಿ ಇದೆ. ಹಾಗಾಗಿ ಇವನನ್ನು 5 ದಿನಗಳ ಪೊಲೀಸ್ ಕಸ್ಟಡಿಗೆ ನೀಡಿ ನ್ಯಾಯಾಲಯ ಆದೇಶ ಮಾಡಿದೆ. ಇದನ್ನೂ ಓದಿ: ಉಡುಪಿ| ಪ್ರಿಯಕರನ ಜೊತೆ ಸೇರಿ ಪತಿಯನ್ನೇ ಕೊಲೆ ಮಾಡಿದ ಪತ್ನಿ

    ಪ್ರಕರಣದ ಕುರಿತು ಉಡುಪಿ ಎಸ್ಪಿ ಡಾ. ಅರುಣ್‌ ಕುಮಾರ್‌ ಮಾಹಿತಿ ನೀಡಿದ್ದಾರೆ. ಪತಿ ಬಾಲಕೃಷ್ಣನಿಂದ ಇದ್ದರೆ ನಮ್ಮ ಸ್ನೇಹಕ್ಕೆ ಅಡ್ಡಿಯಾಗುತ್ತದೆ ಎಂದು ಪತ್ನಿ ಕೊಲೆ ಮಾಡಿದ್ದಾಳೆ. ಇಬ್ಬರ ಅಕ್ರಮ ಸಂಬಂಧಕ್ಕೆ ಪತಿ ಬದುಕಿರೋದೇ ಸಮಸ್ಯೆ ಎಂದು ಕೊಲೆಮಾಡಿರುವುದು ಸಾಬೀತಾಗಿದೆ. ಅಲ್ಲದೇ ಪ್ರತಿನಿತ್ಯ ಊಟದಲ್ಲಿ ಪತಿಗೆ ವಿಷ ಬೆರೆಸಿಕೊಡುತ್ತಿದ್ದ ಪತ್ನಿ ಪ್ರತಿಮಾ, ಪ್ಲ್ಯಾನ್ ಪ್ರಕಾರ ಪತಿಯನ್ನು ಸಾಯುಸಲು ಪ್ರಿಯಕರನನ್ನ ಮನೆಗೆ ಕರೆಸಿದ್ದಳು ಎಂದು ಒಪ್ಪಿಕೊಂಡಿರುವುದಾಗಿ ತಿಳಿಸಿದ್ದಾರೆ.

    1 ವರ್ಷದ ಮನೆ ಕಟ್ಟಿಸಿ ಹೆಂಡತಿ ಮಕ್ಕಳನ್ನ ಪ್ರೀತಿಯಿಂದ ನೋಡಿಕೊಳ್ಳುತ್ತಿದ್ದ ಬಾಲಕೃಷ್ಣ ಪೂಜಾರಿಯನ್ನು ಪತ್ನಿ ಕೊಂದಿದ್ದಾಳೆ. ಮನೆ ತುಂಬಾ ಅನ್ಯೋನ್ಯವಾಗಿ ಇರುವ ಫೋಟೋಗಳನ್ನು ಜೋಡಿಸಿರುವ ಕತರ್ನಾಕ್ ಸುಂದರಿ ಗಂಡನ ಜೊತೆ ಮಲಗಿ ಸುಖ ಸಂಸಾರ ಮಾಡಿದ ಬೆಡ್ ರೂಮ್ ನಲ್ಲೆ ಉಸಿರು ನಿಲ್ಲಿಸಿ ಬಿಟ್ಟಿದ್ದಾಳೆ. ಇದನ್ನೂ ಓದಿ: ಪೇಜಾವರ ಶ್ರೀ ಬಗ್ಗೆ ಹರಿಪ್ರಸಾದ್ ವಿವಾದಾತ್ಮಕ ಹೇಳಿಕೆ – ಬಾಗಲಕೋಟೆಯಲ್ಲಿ ಬ್ರಾಹ್ಮಣ ಸಮಾಜ ಆಕ್ರೋಶ

  • ತೀರ್ಥಹಳ್ಳಿಯಲ್ಲಿ ಪ್ರತಿಮಾ ಅಂತ್ಯಕ್ರಿಯೆ – ಪುತ್ರನಿಂದ ತಾಯಿಯ ಚಿತೆಗೆ ಅಗ್ನಿಸ್ಪರ್ಶ

    ತೀರ್ಥಹಳ್ಳಿಯಲ್ಲಿ ಪ್ರತಿಮಾ ಅಂತ್ಯಕ್ರಿಯೆ – ಪುತ್ರನಿಂದ ತಾಯಿಯ ಚಿತೆಗೆ ಅಗ್ನಿಸ್ಪರ್ಶ

    ಶಿವಮೊಗ್ಗ: ಬೆಂಗಳೂರಿನಲ್ಲಿ ಹತ್ಯೆಯಾಗಿದ್ದ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ (Department Of Mines And Geology) ಉಪ ನಿರ್ದೇಶಕಿ (Deputy Director) ಪ್ರತಿಮಾ (Prathima) ಅಂತ್ಯಕ್ರಿಯೆ (Funeral) ಇಂದು ಶಿವಮೊಗ್ಗ (Shivamogga) ಜಿಲ್ಲೆ ತೀರ್ಥಹಳ್ಳಿಯ (Thirthahalli) ಹಿಂದೂ ರುದ್ರಭೂಮಿಯಲ್ಲಿ ಒಕ್ಕಲಿಗ ಸಂಪ್ರದಾಯದಂತೆ ಕುಟುಂಬಸ್ಥರು ನೆರವೇರಿಸಿದರು.

    ಪ್ರತಿಮಾ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಉಪ ನಿರ್ದೇಶಕಿ. ಮೂಲತಃ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯವರಾದ ಪ್ರತಿಮಾ ಉದ್ಯೋಗದ ನಿಮಿತ್ತ ಬೆಂಗಳೂರಿನ ಅಪಾರ್ಟ್ಮೆಂಟ್‌ವೊಂದರಲ್ಲಿ ಒಬ್ಬರೇ ವಾಸಿಸುತ್ತಿದ್ದರು. ಪತಿ ಸತ್ಯನಾರಾಯಣ ಕೃಷಿಕರಾಗಿದ್ದ ಕಾರಣ ಪತಿ ಹಾಗು ಪುತ್ರ ಪಾರ್ಥ ತೀರ್ಥಹಳ್ಳಿಯಲ್ಲಿ ವಾಸವಾಗಿದ್ದರು. ಪ್ರತಿಮಾ ರಜಾ ದಿನಗಳಲ್ಲಿ ಆಗಾಗ ತೀರ್ಥಹಳ್ಳಿಗೆ ಬಂದು ಹೋಗುತ್ತಿದ್ದರು. ಇದನ್ನೂ ಓದಿ:‌ 2013 ರಿಂದ ದಲಿತ ಸಿಎಂ ಓಡ್ತಿದೆ, ಪಿಕ್ಚರ್‌ ರಿಲೀಸ್ ಆಗ್ತಿಲ್ಲ: ಸತೀಶ್ ಜಾರಕಿಹೊಳಿ

    ಸಣ್ಣ ವಯಸ್ಸಿನಲ್ಲೇ ಉನ್ನತ ಹುದ್ದೆಯಲ್ಲಿದ್ದ ಪ್ರತಿಮಾ ಇಲಾಖೆಯಲ್ಲಿ ಉತ್ತಮ ಹೆಸರು ಗಳಿಸಿದ್ದರು. ಪ್ರಾಮಾಣಿಕ ಅಧಿಕಾರಿ ಎನಿಸಿಕೊಂಡಿದ್ದರು. ಆದರೆ ಇಂತಹ ಅಧಿಕಾರಿ ಪ್ರತಿಮಾ ಅವರನ್ನು ಶನಿವಾರ ರಾತ್ರಿ ಅವರ ಅಪಾರ್ಟ್ಮೆಂಟ್‌ನಲ್ಲೇ ಕೊಲೆ ಮಾಡಿದ್ದಾರೆ. ಕೊಲೆಯಾಗಿದ್ದ ಪ್ರತಿಮಾ ಅವರ ಮರಣೋತ್ತರ ಶವ ಪರೀಕ್ಷೆ ನಂತರ ಕುಟುಂಬಸ್ಥರು ಪ್ರತಿಮಾ ಮೃತದೇಹವನ್ನು ಭಾನುವಾರ ರಾತ್ರಿ ಬೆಂಗಳೂರಿನಿಂದ ತೀರ್ಥಹಳ್ಳಿಗೆ ಕರೆತಂದಿದ್ದರು. ತೀರ್ಥಹಳ್ಳಿಯ ಸತ್ಯನಾರಾಯಣ ಅವರ ಮೂಲ ಮನೆಯಲ್ಲಿ ರಾತ್ರಿಯಿಂದ ಮುಂಜಾನೆಯವರೆಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ನಂತರ ಕಳೆದ ವಾರವಷ್ಟೇ ಗೃಹ ಪ್ರವೇಶವಾಗಿದ್ದ ನೂತನ ಮನೆಗೆ ಮುಂಜಾನೆ 10 ಗಂಟೆಗೆ ಹಳೆ ಮನೆಯಿಂದ ಹೊಸ ಮನೆಗೆ ಮೃತದೇಹ ಕೊಂಡೊಯ್ಯಲಾಯಿತು. ಅಲ್ಲಿ 10 ನಿಮಿಷಗಳ ಕಾಲ ಪಾರ್ಥಿವ ಶರೀರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಇದನ್ನೂ ಓದಿ: ಪಬ್ಲಿಕ್ ಟಿವಿ ಇಂಪ್ಯಾಕ್ಟ್ – ಕೊಡಗಿನ ಅಂಗನವಾಡಿಗಳಿಗೆ ವಿದ್ಯುತ್ ಸಂಪರ್ಕ ಮರುಸ್ಥಾಪನೆ

    ನಂತರ ಪ್ರತಿಮಾ ಪಾರ್ಥಿವ ಶರೀರವನ್ನು ತುಂಗಾ ನದಿ ದಡದಲ್ಲಿರುವ ಹಿಂದೂ ರುದ್ರ ಭೂಮಿಗೆ ಕೊಂಡೊಯ್ಯಲಾಯಿತು. ಹಿಂದೂ ರುದ್ರಭೂಮಿಯಲ್ಲಿ ಪ್ರತಿಮಾ ಅವರಿಗೆ ಕುಟುಂಬಸ್ಥರು ಒಕ್ಕಲಿಗ ಸಂಪ್ರದಾಯದಂತೆ ಅಂತಿಮ ವಿಧಿವಿಧಾನ ನೆರವೇರಿಸಿದರು. ತಾಯಿಯ ಚಿತೆಗೆ ಪುತ್ರ ಪಾರ್ಥ ಅಗ್ನಿ ಸ್ಪರ್ಶ ನೆರವೇರಿಸಿದ್ದಾನೆ. ಸದ್ಯದ ಪರಿಸ್ಥಿತಿಯಲ್ಲಿ ಪ್ರಾಮಾಣಿಕ ಅಧಿಕಾರಿಗಳು ಕರ್ತವ್ಯ ನಿರ್ವಹಿಸುವುದು ಕಷ್ಟವಾಗಿದೆ. ಸರ್ಕಾರ ಪ್ರಾಮಾಣಿಕ ಅಧಿಕಾರಿಗಳಿಗೆ ರಕ್ಷಣೆ ನೀಡಬೇಕು. ಇಂತಹ ಘಟನೆ ಮರುಕಳಿಸದಂತೆ ತಪ್ಪಿತಸ್ಥರ ವಿರುದ್ದ ಕಠಿಣ ಕ್ರಮ ಕೈಗೊಳ್ಳುವಂತೆ ಪ್ರತಿಮಾ ಕುಟುಂಬಸ್ಥರು ಹಾಗೂ ಸ್ಥಳೀಯರ ಆಗ್ರಹವಾಗಿದೆ. ಇದನ್ನೂ ಓದಿ: ಪಂಚರಾಜ್ಯ ಚುನಾವಣೆಯಲ್ಲಿ ಕಾಂಗ್ರೆಸ್ ಪರ ಒಲವು ಕಂಡು ಮೋದಿಗೆ ನೋವಾಗಿದೆ: ಚಲುವರಾಯ ಸ್ವಾಮಿ

    ಒಟ್ಟಾರೆ ಬಾಳಿ ಬದುಕಬೇಕಾದ ವಯಸ್ಸಿನಲ್ಲಿ, ಇನ್ನು ಹಂತ ಹಂತವಾಗಿ ಉನ್ನತ ಹುದ್ದೆ ಅಲಂಕರಿಸುವ ಕನಸು ಕಂಡಿದ್ದ ಪ್ರತಿಮಾ ಕನಸು ಕಮರಿ ಹೋಗಿದೆ. ಇದನ್ನೂ ಓದಿ: ಉಚಿತ ಭಾಗ್ಯದಿಂದ ಪರಿಶಿಷ್ಟರ ಅಂತ್ಯಕ್ರಿಯೆಗೂ ಸರ್ಕಾರದ ಬಳಿ ದುಡ್ಡಿಲ್ಲ: ಬಿಎಸ್‌ವೈ

  • ಕೆಲಸದಿಂದ ತೆಗೆದು ಹಾಕಿದ್ದಕ್ಕೆ ಪ್ರತಿಮಾ ಕೊಲೆ- ತಪ್ಪೊಪ್ಪಿಕೊಂಡ ಕಿರಣ್

    ಕೆಲಸದಿಂದ ತೆಗೆದು ಹಾಕಿದ್ದಕ್ಕೆ ಪ್ರತಿಮಾ ಕೊಲೆ- ತಪ್ಪೊಪ್ಪಿಕೊಂಡ ಕಿರಣ್

    ಬೆಂಗಳೂರು: ಗಣಿ ಅಧಿಕಾರಿ ಪ್ರತಿಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಕಾರು ಚಾಲಕನನ್ನು ಬಂಧಿಸಲಾಗಿದೆ.

    ಪ್ರತಿಮಾ ಮೇಲಿನ ಸೇಡಿನಿಂದ ಪ್ರಾಣ ತೆಗೆದು ಕಿರಣ್ ಎಸ್ಕೇಪ್ ಆಗಿ ಇವಾಗ ಪೊಲೀಸರಿಗೆ ಸಿಕ್ಕಿ ಬಿದ್ದಿದ್ದಾನೆ. ಅಲ್ಲದೆ ವಿಚಾರಣೆಯ ವೇಳೆ ತಪ್ಪೊಪ್ಪಿಕೊಂಡಿದ್ದಾನೆ.

    4 ವರ್ಷದಿಂದ ಕಾರು ಚಾಲಕನಾಗಿದ್ದ ಕಿರಣ್, ಬೇಜವಾಬ್ದಾರಿಯಿಂದ ಕಾರು ಓಡಿಸುತ್ತಿದ್ದನು. ಗುತ್ತಿಗೆ ಆಧಾರದಲ್ಲಿ ಚಾಲಕ ವೃತ್ತಿ ಮಾಡುತ್ತಿದ್ದ ಕಿರಣ್ ಕಳೆದ ತಿಂಗಳು ಹೊಸ ಸರ್ಕಾರಿ ಕಾರು ಅಪಘಾತ ಮಾಡಿದ್ದನು. ಅಪಘಾತದ ನಂತರ ಕಚೇರಿಯಲ್ಲೇ ಕಾರು ಬಿಟ್ಟು ತೆರಳಿದ್ದನು.

    ಕಿರಣ್ ನಡವಳಿಕೆಯಿಂದ ಕೋಪಗೊಂಡಿದ್ದ ಪ್ರತಿಮಾ, 10 ದಿನಗಳ ಹಿಂದೆ ಕೆಲಸದಿಂದ ತೆಗೆದು ಹಾಕಿದ್ದರು. ಈ ವೇಳೆ ಪ್ರತಿಮಾ ಕಾಲಿಗೆ ಬಿದ್ದು ಕೆಲಸಕ್ಕೆ ಸೇರಿಸಿಕೊಳ್ಳುವಂತೆ ಬೇಡಿಕೊಂಡಿದ್ದನು. ಆದರೆ ಪ್ರತಿಮಾ ಅವರು ಕಿರಣ್‍ನನ್ನು ಮತ್ತೆ ಕೆಲಸಕ್ಕೆ ಸೇರಿಸಿಕೊಳ್ಳಲು ನಿರಾಕರಿಸಿದ್ದರು. ಇದೇ ಕಾರಣಕ್ಕೆ ಪ್ರತಿಮಾ ಮೇಲೆ ದ್ವೇಷಕಾರಿದ್ದನು.

    ಕಿರಣ್‍ಗೆ ವಾರ್ನಿಂಗ್ ಕೊಟ್ಟಿದ್ದ ಪ್ರತಿಮಾ: ಪ್ರತಿಮಾ ರೇಡ್ ಹೋಗುವ ವಿಚಾರ ಲೀಕ್ ಮಾಡುತ್ತಿದ್ದ ಬಗ್ಗೆ ಮಾಹಿತಿ ಇತ್ತು. ಈ ಕಾರಣಕ್ಕೆ ಪ್ರತಿಮಾ ವಾರ್ನ್ ಕೂಡ ಮಾಡಿದ್ದರು. ಈ ವೇಳೆ ಬೈದಾಗ ತಪ್ಪಾಗಿದೆ ಕೆಲಸದಿಂದ ತೆಗೆಯಬೇಡಿ ಎಂದು ಕೇಳಿಕೊಂಡಿದ್ದನು.

    ಕೊಲೆ ದಿನವೂ ಪ್ರತಿಮಾ ಕಾಲಿಗೆ ಬಿದ್ದು ಕೆಲಸಕ್ಕೆ ಸೇರಿಸಿಕೊಳ್ಳುವಂತೆ ದುಂಬಾಲು ಬಿದ್ದಿದ್ದನು. ಆದರೆ ಆಕೆ ಅದನ್ನು ತಿರಸ್ಕರಿಸಿದ್ದರಿಂದ ಶನಿವಾರ ಮನೆ ಬಳಿಯೇ ಕಾದು ಕುಳಿತು ಹೊಂಚು ಹಾಕಿ ಕೊಲೆ ಮಾಡಿ ಕಿರಣ್ ಎಸ್ಕೇಪ್ ಆಗಿದ್ದನು. ಇದೀಗ ಪೊಲೀಸರು ಆತನನ್ನು ಬಂಧಿಸಿದ್ದು, ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

  • ಗಣಿ ಅಧಿಕಾರಿ ಪ್ರತಿಮಾ ಕೊಲೆ ಕೇಸ್‌ನಲ್ಲಿ ಸುಳಿವು ಸಿಕ್ಕಿದೆ: ಪರಮೇಶ್ವರ್

    ಗಣಿ ಅಧಿಕಾರಿ ಪ್ರತಿಮಾ ಕೊಲೆ ಕೇಸ್‌ನಲ್ಲಿ ಸುಳಿವು ಸಿಕ್ಕಿದೆ: ಪರಮೇಶ್ವರ್

    ಬೆಂಗಳೂರು: ಗಣಿ ಮತ್ತು ಭೂವಿಜ್ಞಾನ ಅಧಿಕಾರಿ ಪ್ರತಿಮಾ (Senior Woman Geologist Prathima) ಕೊಲೆ ಪ್ರಕರಣದಲ್ಲಿ ಸುಳಿವು ಸಿಕ್ಕಿದೆ ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದ್ದಾರೆ.

    ಪ್ರತಿಮಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಮಾತನಾಡಿದ ಸಚಿವರು (G Parameshwar), ಪ್ರತಿಮಾ ಕೊಲೆ ಪ್ರಕರಣದಲ್ಲಿ ಪೊಲೀಸರು ಆಕ್ಟೀವ್ ಆಗಿದ್ದಾರೆ. ಕೊಲೆಗೆ ಸಂಬಂಧಿಸಿದಂತೆ ಪೊಲೀಸರಿಗೆ ಮಹತ್ವದ ಸುಳಿವು ಸಿಕ್ಕಿದೆ. ಅದರ ಆಧಾರದಲ್ಲಿ ಪೊಲೀಸರು ತನಿಖೆ ಮಾಡುತ್ತಿದ್ದಾರೆ. ತನಿಖೆ ಮಾಡಿದ ಬಳಿಕ ಕೊಲೆಗೆ ಕಾರಣ ಏನು?. ಹಿಂದೆ ಮುಂದೆ ಎಲ್ಲವೂ ಗೊತ್ತಾಗಲಿದೆ ಎಂದು ಹೇಳಿದರು.

    ಈಗಲೇ ಏನು ಹೇಳೋಕೆ ಆಗೋದಿಲ್ಲ. ಘಟನೆ ಸಂಬಂಧ ಸಿಕ್ಕಿರೋ ಲೀಡ್ ಪ್ರಕಾರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಒಂದು ಬಾರಿ ಆರೋಪಿಯನ್ನ ಬಂಧನ ಮಾಡಿದ ಮೇಲೆ ಎಲ್ಲವೂ ಹೊರಗೆ ಬರಲಿದೆ ಅಂತ ತಿಳಿಸಿದರು. ಇದನ್ನೂ ಓದಿ: ಪ್ರತಿಮಾ ಕೊಲೆ ಪ್ರಕರಣ- ಚಾಲಕನನ್ನು ವಶಕ್ಕೆ ಪಡೆದು ವಿಚಾರಣೆ

    ಇದೇ ವೇಳೆ ಪ್ರತಿಮಾ ಕೊಲೆ ವಿಚಾರದಲ್ಲಿ ರಾಜ್ಯದಲ್ಲಿ ಗೃಹ ಸಚಿವರು ಇದ್ದಾರಾ ಎಂಬ ಬಿಜೆಪಿ (BJP) ಟ್ವೀಟ್ ಗೆ ಕಿಡಿಕಾರಿದ ಅವರು, ಗೃಹ ಸಚಿವರು ಇದ್ದಾರಾ ಇಲ್ಲವಾ ಅಂತ ಬಿಜೆಪಿ ಅವರಿಗೆ ಗೊತ್ತಾಗಲಿದೆ ಎಂದು ಆಕ್ರೋಶ ಹೊರ ಹಾಕಿದ್ರು.

    ನಡೆದಿದ್ದೇನು..?: ಪ್ರತಿಮಾ ಕಳೆದ 8 ವರ್ಷಗಳಿಂದ ಒಬ್ಬರೇ ಬೆಂಗಳೂರಿನ ದೊಡ್ಡಕಲ್ಲಸಂದ್ರದ ಗೋಕುಲ್ ಅಪಾರ್ಟ್‍ಮೆಂಟ್‍ನಲ್ಲಿ ವಾಸವಿದ್ದರು. ನವೆಂಬರ್ 4ರಂದು ರಾತ್ರಿ 8.30ಗೆ ಪ್ರತಿಮಾ ಅವರನ್ನು ಮನೆಯ ಮುಂಭಾಗದಲ್ಲೇ ಉಸಿರುಗಟ್ಟಿಸಿ ಕತ್ತು ಇರಿದು ಕೊಲೆ ಮಾಡಲಾಗಿತ್ತು. ಇದೀಗ ಘಟನೆ ಸಂಬಂಧ ಪ್ರತಿಮಾ ಕಾರು ಚಾಲಕ ಕಿರಣ್‍ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

  • ಪ್ರತಿಮಾ ಕೊಲೆ ಪ್ರಕರಣ- ಚಾಲಕನನ್ನು ವಶಕ್ಕೆ ಪಡೆದು ವಿಚಾರಣೆ

    ಪ್ರತಿಮಾ ಕೊಲೆ ಪ್ರಕರಣ- ಚಾಲಕನನ್ನು ವಶಕ್ಕೆ ಪಡೆದು ವಿಚಾರಣೆ

    ಬೆಂಗಳೂರು: ಹಿರಿಯ ಗಣಿ ಭೂವಿಜ್ಞಾನ ಅಧಿಕಾರಿ ಪ್ರತಿಮಾ (Prathima Murder Case) ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪೊಲೀಸರು ಅವರ ಚಾಲಕನನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.

    ಕಾಂಟ್ರಾಕ್ಟ್ ಬೇಸಿಸ್ ನಲ್ಲಿ ಕಿರಣ್ ಕೆಲಸ ಮಾಡುತ್ತಿದ್ದ. ಕಳೆದ ಐದು ವರ್ಷಗಳಿಂದ ಕೆಲಸ ಮಾಡ್ತಿದ್ದ ಕಿರಣ್‍ಗೆ ಕೆಲವೊಂದು ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಮಾ ನಡುವೆ ಭಿನ್ನಾಭಿಪ್ರಾಯ ಬಂದಿತ್ತು. ಹೀಗಾಗಿ ಕೆಲ ದಿನಗಳ ಹಿಂದೆಯಷ್ಟೇ ಕಿರಣ್‍ನನ್ನು ಕೆಲಸದಿಂದ ತೆಗೆದುಹಾಕಲಾಗಿತ್ತು. ಈ ಹಿನ್ನೆಲೆಯಲ್ಲಿ ಇದೀಗ ಪೊಲೀಸರು ಕಿರಣ್ ನನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಭೂ ವಿಜ್ಞಾನಿ ಪ್ರತಿಮಾ ಕಗ್ಗೊಲೆ- ಹಂತಕರ ಪತ್ತೆಗೆ 6 ಸ್ಪೆಷಲ್ ತಂಡ ರಚನೆ

    ಕಿರಣ್ ತಂದೆ ಸುರೇಶ್ ಸಹ ಇದೇ ಇಲಾಖೆಯಲ್ಲಿ ಚಾಲಕರಾದ್ದರು. ಸದ್ಯ ಕೃತ್ಯ ನಡೆದ ಬಳಿಕ ಕಿರಣ್ ಚಾಮರಾಜನಗರ ಕಡೆಗೆ ಎಸ್ಕೇಪ್ ಆಗಿದ್ದ. ಈ ವೇಳೆ ಚಾಮರಾಜನಗರದಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

    ಇತ್ತ ಪ್ರತಿಮಾ ಮೊಬೈಲ್ ವಶಕ್ಕೆ ಪಡೆದಿರುವ ಸುಬ್ರಹ್ಮಣ್ಯಪುರ ಪೊಲೀಸರು ಪರಿಶೀಲನೆಗೆ ನಡೆಸುತ್ತಿದ್ದಾರೆ. ಕೊಲೆಯಾದ ವೇಳೆ ಮನೆಯ ಬಾಗಿಲು ಬಳಿ ಪ್ರತಿಮಾ ಮೊಬೈಲ್ ಫೋನ್ ಪತ್ತೆಯಾಗಿತ್ತು. ಆದರೆ ಫೋನ್ ಲಾಕ್ ಹಿನ್ನೆಲೆಯಲ್ಲಿ ಟೆಕ್ನಿಕಲ್ ಸೆಲ್ ಗೆ ರವಾನಿಸಿ ಲಾಕ್ ತೆಗೆದು ಪರಿಶೀಲಿಸುತ್ತಿದ್ದಾರೆ. ಒಂದು ವಾರದಿಂದ ಎಷ್ಟು ಕರೆಗಳು ಬಂದಿದ್ದವು?. ಯಾರ್ಯಾರು ಕರೆ ಮಾಡಿದ್ದಾರೆ..?. ಪ್ರತಿಮಾ ಅವರೇ ಯಾರಿಗಾದರೂ ಕರೆ ಮಾಡಿ ಮಾತನಾಡಿದ್ದಾರಾ ಅಂತಾ ಪರಿಶೀಲಿಸುತ್ತಿದ್ದಾರೆ.

    ಪ್ರತಿಮಾ ಮನೆ ಇರುವ ರಸ್ತೆಯಲ್ಲಿ ಸುಮಾರು 20ಕ್ಕೂ ಹೆಚ್ಚು ಮನೆಗಳಿವೆ. ಆದರೆ ಕೇವಲ 3 ಸಿಸಿಟಿವಿ ಮಾತ್ರವೇ ಅಳವಡಿಕೆ ಮಾಡಲಾಗಿತ್ತು. ಸದ್ಯ ಸಿಸಿಟಿವಿ ವಶಕ್ಕೆ ಪಡೆದು ಪರಿಶೀಲನೆ ನಡೆಸಲಾಗುತ್ತಿದೆ.

  • ಭೂ ವಿಜ್ಞಾನಿ ಪ್ರತಿಮಾ ಕಗ್ಗೊಲೆ- ಹಂತಕರ ಪತ್ತೆಗೆ 6 ಸ್ಪೆಷಲ್ ತಂಡ ರಚನೆ

    ಭೂ ವಿಜ್ಞಾನಿ ಪ್ರತಿಮಾ ಕಗ್ಗೊಲೆ- ಹಂತಕರ ಪತ್ತೆಗೆ 6 ಸ್ಪೆಷಲ್ ತಂಡ ರಚನೆ

    – ವಿವಿಧೆಡೆ ಪ್ರತ್ಯೇಕ ತಂಡದಿಂದ ತಲಾಶ್

    ಬೆಂಗಳೂರು: ಸರ್ಕಾರಿ ಅಧಿಕಾರಿ ಪ್ರತಿಮಾ ಮರ್ಡರ್ ಪ್ರಕರಣದ ಹಂತಕರ ಪತ್ತೆಗೆ ಪೊಲೀಸರು ತಂಡವನ್ನು ರಚಿಸಿದ್ದಾರೆ. 6 ಸ್ಪೆಷಲ್ ಟೀಂ 60 ಮಂದಿ ಪೊಲೀಸ್ ಹಾಗೂ ಅಧಿಕಾರಿಗಳಿಂದ ಆರೋಪಿಗಾಗಿ ತಲಾಶ್ ಮಾಡಲಾಗುತ್ತಿದೆ.

    2 ಇನ್ಸ್‍ಪೆಕ್ಟರ್, 6 ಸಬ್‍ಇನ್ಸ್ ಪೆಕ್ಟರ್, 30ಕ್ಕೂ ಹೆಚ್ಚಿನ ಪೊಲೀಸ್ ಸಿಬ್ಬಂದಿಯಿಂದಿ ಹುಡುಕಾಟ ನಡೆಸಲಾಗ್ತಿದೆ. ಕೊಲೆ ಮಾಡಿರೋ ಸ್ಥಳದ ದಶದಿಕ್ಕುಗಳಲ್ಲಿಯೂ ಪ್ರತ್ಯೇಕ ತಂಡಗಳಿಂದ ಶೋಧ ಕಾರ್ಯನಡೆಯುತ್ತಿದೆ. ಹಂತಕರು ಬೆಂಗಳೂರು ಬಿಟ್ಟು ಹೋಗದಂತೆ ಚಕ್ರವ್ಯೂಹ ಹೆಣೆಯಲಾಗಿದೆ.

    ಪೊಲೀಸರ ಪ್ರಾಥಮಿಕ ತನಿಖೆಯ ವೇಳೆ ಪರಿಚಯಸ್ಥರಿಂದಲೇ ಕೊಲೆ ನಡೆದಿರೋದು ಖಚಿತವಾಗಿದೆ. ಕೊಲೆಯಾದ ಪ್ರತಿಮ ಕೊನೆಯಾದಾಗಿ ಮಗನಿಗೆ ಕರೆ ಮಾಡಿ ಮಾತನಾಡಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಹಾಗಾಗಿ ಪೊಲೀಸರು ಬೇರೆ ಎಲ್ಲ ಫೋನ್ ಕರೆಯ ಸಿಡಿಆರ್ ಚೆಕ್ ಮಾಡುತ್ತಿದ್ದಾರೆ. ಯಾರಿಗೆಲ್ಲ ಕರೆ ಮಾಡಲಾಗಿದೆ. ಇದನ್ನೂ ಓದಿ: ಉಪನಿರ್ದೇಶಕಿ ಹತ್ಯೆ ಪ್ರಕರಣ- ವಿಚ್ಛೇದನ ಪಡೆದಿದ್ರಿಂದ ಬೆಂಗಳೂರಲ್ಲಿ ಒಂಟಿಯಾಗಿದ್ದರು ಪ್ರತಿಮಾ

    ಅತಿ ಹೆಚ್ಚು ಯಾವ ನಂಬರಿಗೆ ಕರೆ ಹೋಗಿದೆ. ಇತ್ತೀಚೆಗೆ ಬಂದಿರುವ ಕರೆ ಯಾವುದು ಎನ್ನುವುದರ ತನಿಖೆ ಬಗ್ಗೆ ತಡಕಾಟ ನಡೆಯುತ್ತಿದೆ. ಪ್ರತಿಮಾ ಮನೆಯ ಸುತ್ತಮುತ್ತಲಿನ ರಸ್ತೆಗಳ ಸಿಸಿಟಿವಿಗಳ ಪರಿಶೀಲನೆ, ಕೊಲೆಯಾದ ಅಪಾರ್ಟ್ ಮೆಂಟ್ ಸುತ್ತಮುತ್ತ ಅರ್ಥ ಕಿಲೋಮೀಟರ್ ಅಷ್ಟು ದೂರ ಯಾವುದೇ ಸಿಸಿಟಿವಿಗಳ ಪರಿಶೀಲನೆಗೆ ಇಳಿಯಲಾಗಿದೆ.

  • Prathima Murder Case – ಮನೆಯ ಬಾಗಿಲು ತೆರೆಯುತ್ತಿದ್ದಂತೆ ಹಿಂದಿನಿಂದ ದಾಳಿ

    Prathima Murder Case – ಮನೆಯ ಬಾಗಿಲು ತೆರೆಯುತ್ತಿದ್ದಂತೆ ಹಿಂದಿನಿಂದ ದಾಳಿ

    ಬೆಂಗಳೂರು: ಗಣಿ ಮತ್ತು ಭೂ ವಿಜ್ಞಾನ ಕಚೇರಿಯಿಂದ ಮನೆಗೆ ಆಗಮಿಸಿದ ಪ್ರತಿಮಾ (Prathima) ಅವರು ಬಾಗಿಲು ತೆರೆಯುತ್ತಿದ್ದಂತೆ ಹತ್ಯೆ (Murder) ಮಾಡಲಾಗಿದೆ.

    ಹೌದು. ಶನಿವಾರ ರಾತ್ರಿ 7:45 ಕ್ಕೆ ಪ್ರತಿಮಾ ಆಫೀಸ್ ಬಿಟ್ಟಿದ್ದು ಮನೆ ಬಳಿ ಬಂದಾಗ 8:30 ಆಗಿತ್ತು. ಮಳೆ ಬರುತ್ತಿದ್ದ ಕಾರಣ ಡ್ರೈವರ್ ಬಳಿ ಹೇಗೆ ಹೋಗ್ತೀಯ ಎಂದು ಕೇಳಿದ್ದರು. ಡ್ರೈವರ್‌ ಪ್ರತಿಮಾರನ್ನು ಇಳಿಸಿ ಕಾರು ಪಾರ್ಕ್ ಮಾಡಿ ಬೈಕಿನಲ್ಲಿ ತೆರಳಿದ್ದರು. ಇದನ್ನೂ ಓದಿ: ಉಪನಿರ್ದೇಶಕಿ ಹತ್ಯೆ ಪ್ರಕರಣ- ವಿಚ್ಛೇದನ ಪಡೆದಿದ್ರಿಂದ ಬೆಂಗಳೂರಲ್ಲಿ ಒಂಟಿಯಾಗಿದ್ದರು ಪ್ರತಿಮಾ

    ಕಾರಿನಿಂದ ಇಳಿದು ಪ್ರತಿಮಾ ಮೊದಲ ಮಹಡಿಯಲ್ಲಿರುವ ಮನೆಗೆ ಬಂದಿದ್ದರು. ಮನೆಯ ಡೋರ್ ತೆಗೆಯುತ್ತಿದ್ದಂತೆ ಹಿಂದಿನಿಂದ ದಾಳಿ ಮಾಡಲಾಗಿದೆ. ಈ ವೇಳೆ ಪ್ರತಿಮಾರ ಬಾಯಿಯನ್ನು ಮುಚ್ಚಿ ಒಳಗೆ ಎಳೆದುಕೊಂಡು ಹೋಗಲಾಗಿದೆ. ದಾಳಿಯಿಂದಾಗಿ ಪ್ರತಿಮಾ ಧರಿಸುತ್ತಿದ್ದ ಕನ್ನಡಕ ಬಾಗಿಲ ಬಳಿಯೇ ಬಿದ್ದಿದೆ. ಪ್ರತಿಮಾ ಆಫೀಸ್‌ಗೆ ಕೊಂಡೊಯ್ದಿದ್ದ ಲಂಚ್ ಬಾಕ್ಸ್ ಕೂಡ ಬಾಗಿಲಿನಲ್ಲೇ ಸಿಕ್ಕಿದೆ.

    ಪ್ರತಿಮಾ ಕಿರುಚಾಡುವುದು ಯಾರಿಗೂ ತಿಳಿಯಬಾರದು ಎಂದು ಬಾಯಿ ಮುಚ್ಚಿ ಕುತ್ತಿಗೆಗೆ ಹಗ್ಗ ಕಟ್ಟಲಾಗಿದೆ. ನಂತರ ಉಸಿರುಗಟ್ಟಿಸಿ ಚಾಕುವಿನಿಂದ ಕತ್ತು ಕೊಯ್ದು ಕೊಲೆ ಮಾಡಲಾಗಿದೆ.  ಬಹಳ ಪೂರ್ವನಿಯೋಜಿತ ಪ್ಲ್ಯಾನ್‌ ಮಾಡಿಕೊಂಡು ಈ ಕೃತ್ಯವನ್ನು ಎಸಗಿದಂತೆ ಮೇಲ್ನೋಟಕ್ಕೆ ಕಂಡುಬರುತ್ತಿದೆ. ಇದನ್ನೂ ಓದಿ: ಅಕ್ರಮ ಗಣಿಗಾರಿಕೆ ತಡೆದಿದ್ದೇ ಪ್ರತಿಮಾ ಕೊಲೆಗೆ ಕಾರಣವಾಯ್ತಾ? – ಹಲವು ಆಯಾಮಗಳಲ್ಲಿ ಪೊಲೀಸ್‌ ತನಿಖೆ

    ರಾತ್ರಿ 8:30ಕ್ಕೆ ಸಹೋದರ ಪ್ರತಿಮಾಗೆ ಕರೆ ಮಾಡಿದ್ದಾರೆ. ಕಾಲ್‌ ತೆಗೆಯದ ಹಿನ್ನೆಲೆಯಲ್ಲಿ ರಾತ್ರಿ 9 ಗಂಟೆಗೆ ಕರೆ ಮಾಡಿ ಮಾಡಿದ್ದಾರೆ. ಈಗಲೂ ಕರೆ ಸ್ವೀಕರಿಸದ ಕಾರಣ 9:30ಕ್ಕೆ ಮತ್ತು 10 ಗಂಟೆಗೆ ಕರೆ ಮಾಡಿದ್ದರು. 4 ಬಾರಿಯೂ ಕರೆ ಸ್ವೀಕರಿಸದ ಕಾರಣ ಎಲ್ಲೋ ರೇಡ್‌ಗೆ ಹೋಗಿರಬಹುದು ಎಂದು ಸಹೋದರ ಸುಮ್ಮನಾಗಿದ್ದರು.

    ಬೆಳಗ್ಗೆ 8 ಗಂಟೆಗೆ ಪ್ರತಿಮಾ ಮನೆ ಬಳಿ ಸಹೋದರ ಬಂದಿದ್ದರು. ಈ ವೇಳೆ ಕಬ್ಬಿಣದ ಡೋರ್ ಒಳಗಿನಿಂದ ಲಾಕ್ ಆಗಿತ್ತು. ಲಾಕ್ ತೆಗೆದು ಒಳಹೋದಾಗ ತಂಗಿಯ ಕೊಲೆ ನಡೆದಿರುವುದು ಬೆಳಕಿಗೆ ಬಂದಿದೆ.

    ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ (Department of Mines and Geology) ಉಪನಿರ್ದೇಶಕಿಯಾಗಿದ್ದ ಪ್ರತಿಮಾ ಅವರನ್ನು ಶನಿವಾರ ರಾತ್ರಿ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು.

     

  • ಬೆಂಗಳೂರಿನಲ್ಲಿ ಚಾಕು ಇರಿದು ಉಪನಿರ್ದೇಶಕಿಯ ಬರ್ಬರ ಹತ್ಯೆ

    ಬೆಂಗಳೂರಿನಲ್ಲಿ ಚಾಕು ಇರಿದು ಉಪನಿರ್ದೇಶಕಿಯ ಬರ್ಬರ ಹತ್ಯೆ

    ಬೆಂಗಳೂರು: ಚಾಕು ಇರಿದು ಉಪ ನಿರ್ದೇಶಕಿಯನ್ನು ಬರ್ಬರ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ (Bengaluru) ಸುಬ್ರಹ್ಮಣ್ಯಪುರದಲ್ಲಿ ನಡೆದಿದೆ.

    ಗಣಿ ಭೂ ವಿಜ್ಞಾನ ಇಲಾಖೆಯ (Department of Mines and Geology) ಉಪ ನಿರ್ದೇಶಕಿಯಾಗಿದ್ದ ಪ್ರತಿಮಾ (Prathima) ಮೃತ ಸರ್ಕಾರಿ ಅಧಿಕಾರಿ. ತೀರ್ಥಹಳ್ಳಿ ಮೂಲದ ಪ್ರತಿಮಾ ಸುಬ್ರಹ್ಮಣ್ಯಪುರದ ದೊಡ್ಡಕಲ್ಲಸಂದ್ರ ಬಳಿಯ ಕುವೆಂಪು ನಗರದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು.

    ಶನಿವಾರ ರಾತ್ರಿ ಪ್ರತಿಮಾ ಅವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಭಾನುವಾರ ಬೆಳಗ್ಗೆ ಪ್ರತಿಮಾ ಅವರ ಸಹೋದರ ಕರೆ ಮಾಡಿದ್ದಾರೆ. ಕರೆ ಸ್ವೀಕರಿಸದ ಹಿನ್ನೆಲೆಯಲ್ಲಿ ಮನೆ ಬಳಿ ತೆರಳಿದಾಗ ಕೊಲೆಯಾದ ವಿಚಾರ ಬೆಳಕಿಗೆ ಬಂದಿದೆ.   ಇದನ್ನೂ ಓದಿ: ದೇಶದಲ್ಲಿ ಫಸ್ಟ್‌ – ಶಂಕಿತ ಉಗ್ರರ ಕಾಲಿಗೆ ಜಿಪಿಎಸ್‌ ಬಳೆ

    ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಶನಿವಾರ ರಾತ್ರಿ  8 ಗಂಟೆಗೆ ಪ್ರತಿಮಾ ಅವರನ್ನು ಕಾರು ಚಾಲಕ ನಿವಾಸಕ್ಕೆ ತಂದು ಬಿಟ್ಟಿದ್ದಾನೆ. ಪ್ರತಿಮಾ ಬೆಂಗಳೂರಿನಲ್ಲಿ ಒಬ್ಬರೇ ವಾಸವಾಗಿದ್ದು, ಪತಿ ಮತ್ತು ಮಗ ತೀರ್ಥಹಳ್ಳಿಯಲ್ಲಿ ವಾಸವಾಗಿದ್ದಾರೆ. ಪ್ರತಿಮಾ ಅವರ ಜೊತೆ ಮನೆಯಲ್ಲಿ ನಿನ್ನೆ ಯಾರಿದ್ದರು? ಯಾವ ಕಾರಣಕ್ಕೆ ಹತ್ಯೆ ನಡೆದಿದೆ ಈ ವಿಚಾರಗಳು ಇನ್ನಷ್ಟೇ ತಿಳಿಯಬೇಕಿದೆ.