Tag: Praveen

  • ಮನೆಗೆಲಸ ಮಾಡಿ ಪ್ರವೀಣ್‌ನನ್ನ ಎಂಜಿನಿಯರಿಂಗ್ ಓದಿಸ್ತಿದ್ದ ತಾಯಿ

    ಮನೆಗೆಲಸ ಮಾಡಿ ಪ್ರವೀಣ್‌ನನ್ನ ಎಂಜಿನಿಯರಿಂಗ್ ಓದಿಸ್ತಿದ್ದ ತಾಯಿ

    – ಇನ್ನೇನು ಕಷ್ಟಗಳೆಲ್ಲಾ ಕಳೆಯಿತು ಅನ್ನುವಾಗಲೇ ಜವರಾಯ ಹೊತ್ತೊಯ್ದ
    – ಮಗನ ಸಾವಿನ ಸುದ್ದಿ ಕೇಳಿ ಗೋಳಾಡಿದ ತಾಯಿ

    ಹಾಸನ\ಬಳ್ಳಾರಿ: ಹಾಸನದ (Hassan) ಮೊಸಳೆಹೊಸಳ್ಳಿ ಗ್ರಾಮದಲ್ಲಿ ಗಣೇಶ ಮೆರವಣಿಗೆ (Ganesh Procession) ವೇಳೆ ಟ್ರಕ್ ಹರಿದು ಬಳ್ಳಾರಿಯ ಪ್ರವೀಣ್ ಮೃತಪಟ್ಟಿದ್ದು, ಇದ್ದ ಒಬ್ಬ ಮಗನನ್ನು ಕಳೆದುಕೊಂಡ ತಾಯಿಯ ಆಕ್ರಂದನ ಮುಗಿಲು ಮುಟ್ಟಿದೆ.

    ಬಳ್ಳಾರಿಯ (Ballary) ನಾಗಲಕೆರೆ ಏರಿಯಾದ ಪ್ರವೀಣ್ ಮೃತ ದುರ್ದೈವಿ. ಇಂಜಿನಿಯರಿಂಗ್ ವಿದ್ಯಾಭ್ಯಾಸಕ್ಕಾಗಿ ಹಾಸನಕ್ಕೆ ಬಂದಿದ್ದ ಪ್ರವೀಣ್, ಶುಕ್ರವಾರ ಗಣೇಶ ವಿಸರ್ಜನೆ ವೇಳೆ ನಡೆದ ಘನಘೋರ ದುರಂತದಲ್ಲಿ ಉಸಿರುಚೆಲ್ಲಿದ್ದಾನೆ. ಚಿಕ್ಕ ವಯಸ್ಸಿನಲ್ಲೇ ತಂದೆಯನ್ನು ಕಳೆದುಕೊಂಡಿದ್ದ ಪ್ರವೀಣ್ ತಾಯಿ ಸುಶೀಲಾ ಆರೈಕೆಯಲ್ಲೇ ಬೆಳೆದಿದ್ದ. ಇದನ್ನೂ ಓದಿ: ಹಾಸನ ಗಣೇಶ ಮೆರವಣಿಗೆ ವೇಳೆ ದುರಂತ – ಹುಟ್ಟುಹಬ್ಬದ ಸಂಭ್ರಮದಲ್ಲಿದ್ದ ವಿದ್ಯಾರ್ಥಿ ದುರ್ಮರಣ

    ಕಿತ್ತು ತಿನ್ನುವ ಬಡತನವಿದ್ದರೂ ಮನೆಗೆಲಸ ಹಾಗೂ ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡಿ ಮಗನನ್ನು ತಾಯಿ ಇಂಜಿನಿಯರಿಂಗ್ ಓದಿಸುತ್ತಿದ್ದರು. ಬಳ್ಳಾರಿಯಲ್ಲಿ ಡಿಪ್ಲೊಮಾ ಮುಗಿಸಿ, ಹಾಸನದಲ್ಲಿ ಇಂಜಿನಿಯರಿಂಗ್ ಮಾಡಲು ತೆರಳಿದ್ದ ಪ್ರವೀಣ್, ಎಲೆಕ್ಟ್ರಾನಿಕ್ ವಿಭಾಗದ ಕೊನೆಯ ಸೆಮಿಸ್ಟರ್‌ನಲ್ಲಿ ವ್ಯಾಸಂಗ ಮಾಡ್ತಿದ್ದ. ಮಗ ಇನ್ನೇನು ಕೆಲಸಕ್ಕೆ ಸೇರಿ ತನ್ನ ಕಷ್ಟಗಳೆಲ್ಲ ಕಳೆಯುತ್ತದೆ ಅಂದುಕೊಂಡಿದ್ದ ತಾಯಿಗೆ ಪ್ರವೀಣ್ ಸಾವಿನ ಸುದ್ದಿ ಬರಸಿಡಿಲು ಬಡಿದಂತಾಗಿದೆ. ಇದನ್ನೂ ಓದಿ: ಹಾಸನದಲ್ಲಿ ಗಣೇಶ ಮೆರವಣಿಗೆ ವೇಳೆ ಘನಘೋರ ದುರಂತ – ಸಾವಿನ ಸಂಖ್ಯೆ 9ಕ್ಕೆ ಏರಿಕೆ

    ಇದೀಗ ಪ್ರವೀಣ್ ಮೃತದೇಹ ಬಳ್ಳಾರಿಯ ಮನೆಗೆ ತಲುಪುತ್ತಿದ್ದಂತೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಮಗನ ಮೃತದೇಹ ನೋಡಿ ತಾಯಿ ನನಗ್ಯಾರು ದಿಕ್ಕೆಂದು ಎದೆ ಬಡಿದುಕೊಂಡು ಗೋಳಾಡಿದ್ದಾರೆ. ತಾಯಿಯ ಸ್ಥಿತಿ ಕಂಡು ಗ್ರಾಮಸ್ಥರು ಕಣ್ಣೀರಿಟ್ಟಿದ್ದಾರೆ.

  • ಕಾರು ಅಪಘಾತ: ಖ್ಯಾತನಟ ಪ್ರವೀಣ್ ಗೆ ಐಸಿಯುವಿನಲ್ಲಿ ಚಿಕಿತ್ಸೆ

    ಕಾರು ಅಪಘಾತ: ಖ್ಯಾತನಟ ಪ್ರವೀಣ್ ಗೆ ಐಸಿಯುವಿನಲ್ಲಿ ಚಿಕಿತ್ಸೆ

    ಖ್ಯಾತ ನಟ ಪ್ರವೀಣ್ (Praveen) ಕಾರು ಅಪಘಾತದಲ್ಲಿ (Accident) ತೀವ್ರ ಗಾಯಗೊಂಡಿದ್ದಾರೆ. ಶನಿವಾರ ಬೆಳಗ್ಗೆ ಈ ಅಪಘಾತ ನಡೆದಿದ್ದು, ಕೂಡಲೇ ಪ್ರವೀಣ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ತೀವ್ರ ಗಾಯಗೊಂಡಿದ್ದರಿಂದ ಐಸಿಯುವಿಗೆ ಶಿಫ್ಟ್ ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎನ್ನಲಾಗ್ತಿದೆ.

    ಬಾಂದ್ರ ಹೋಲಿ ಫ್ಯಾಮಿಲಿ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಪತ್ನಿ ಸೇರಿದಂತೆ ಕುಟುಂಬಸ್ಥರು ಆಸ್ಪತ್ರೆಗೆ ಧಾವಿಸಿದ್ದಾರೆ. ಸದ್ಯಕ್ಕೆ ಆ ಕುರಿತು ಏನೂ ಹೇಳೋಕೆ ಆಗ್ತಿಲ್ಲ. ನಮ್ಮ ಕುಟುಂಬಕ್ಕೆ ತೀವ್ರ ಆಘಾತವಾಗಿದೆ ಎಂದು ಪತ್ನಿ ಹೇಳಿದ್ದಾರೆ.

     

    ಬಾಲಿವುಡ್ ನ ದಿಲ್ಲಿಗಿ ಸಿನಿಮಾದ ಮೂಲಕ ಸಿನಿಮಾ ರಂಗಕ್ಕೆ ಆಗಮಿಸಿದ್ದ ಪ್ರವೀಣ್. ಆ ನಂತರ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿದ್ದಾರೆ. ವೆಬ್ ಸಿರೀಸ್ ನಲ್ಲೂ ಕಾಣಿಸಿಕೊಂಡಿದ್ದಾರೆ. ರಾಗಿಣಿ ಎಂಎಂಎಸ್ ಸಿನಿಮಾ ಅವರಿಗೆ ಸಾಕಷ್ಟು ಹೆಸರು ತಂದುಕೊಟ್ಟಿತ್ತು. ಸದ್ಯ ತೀವ್ರನಿಗಾ ಘಟಕದಲ್ಲಿ ಅವರಿಗೆ ಚಿಕಿತ್ಸೆ ಮುಂದುವರೆದಿದೆ.

  • ಪುನೀತ್ ರಾಜ್ ಕುಮಾರ್ ನಿರ್ಮಾಣದ ’02’ ಚಿತ್ರದ ಟ್ರೈಲರ್ ರಿಲೀಸ್

    ಪುನೀತ್ ರಾಜ್ ಕುಮಾರ್ ನಿರ್ಮಾಣದ ’02’ ಚಿತ್ರದ ಟ್ರೈಲರ್ ರಿಲೀಸ್

    ಹೆಸರಾಂತ ಚಿತ್ರ ನಿರ್ಮಾಣ ಸಂಸ್ಥೆಯಾದ ಪಿ.ಆರ್.ಕೆ ಪ್ರೊಡಕ್ಷನ್ಸ್ ಇದೀಗ ಮತ್ತೊಮ್ಮೆ ಸಿನಿ ಪ್ರೇಕ್ಷಕರನ್ನು ‘O2’ ಎಂಬ ಹೊಸ ಚಿತ್ರದ ಮೂಲಕ ರಂಜಿಸಲು ಸಜ್ಜಾಗಿದೆ. ಒಂದು ಕುತೂಹಲಕಾರಿ ಮೆಡಿಕಲ್ ಥ್ರಿಲ್ಲರ್ ಕಥೆಯನ್ನು ಇದು ಒಳಗೊಂಡಿದೆ. ಈ ಕಥೆಯು ಕೇವಲ‌ ಥ್ರಿಲ್ಲರ್ ಅಂಶಗಳನ್ನಷ್ಟೇ ಅಲ್ಲದೆ, ಪ್ರೀತಿ-ಪ್ರೇಮದ ಅಂಶಗಳನ್ನೂ ಒಳಗೊಂಡಿರುವುದು ವಿಶೇಷ ಸಂಗತಿ. ಹಾಗಾಗಿ ಈ ಚಿತ್ರವನ್ನು ಲವ್ ಥ್ರಿಲ್ಲರ್ ಎಂದು ಕೂಡ ಪರಿಗಣಿಸಬಹುದು.

    ಚಿತ್ರರಂಗದಲ್ಲಿ ತನ್ನದೇ ಆದಂತಹ ಛಾಪನ್ನು ಮೂಡಿಸಿರುವ‌ ಪಿ.ಆರ್.ಕೆ ಪ್ರೊಡಕ್ಷನ್ಸ್ ಹೊಸ ಪ್ರತಿಭೆಗಳಿಗೆ ಅವಕಾಶ ನೀಡುವುದರಲ್ಲಿ‌ ನಿಸ್ಸೀಮರು. ಇದು ಪಿ.ಆರ್.ಕೆ ಬ್ಯಾನರ್ ನಲ್ಲಿ ಅಶ್ವಿನಿ ಪುನೀತ್ ರಾಜ್‌ಕುಮಾರ್ (Ashwini Puneeth Rajkumar) ಅವರ ನಿರ್ಮಾಣದ ಹತ್ತನೇ ಚಿತ್ರ. ಚಿತ್ರದಲ್ಲಿ ಆಶಿಕಾ ರಂಗನಾಥ್ (Ashika Ranganath), ಪ್ರವೀಣ್ ತೇಜ್ (Praveen), ರಾಘವ್ ನಾಯಕ್, ಸಿರಿ ರವಿಕುಮಾರ್, ಪ್ರಕಾಶ್ ಬೆಳವಾಡಿ ಮುಖ್ಯ ಭೂಮಿಕೆಯಲ್ಲಿದ್ದಾರೆ. ಹಾಗೂ ಚಿತ್ರವನ್ನು ಪ್ರಶಾಂತ್ ರಾಜ್ ಮತ್ತು ಚಿತ್ರದ‌ ನಾಯಕ ರಾಘವ್ ನಾಯಕ್ ನಿರ್ದೇಶಿಸಿರುತ್ತಾರೆ‌.

    ಹಳ ವಿಭಿನ್ನವಾದ ಕಥಾಹಂದರವನ್ನು ಹೊಂದಿರುವಂತಹ ಚಿತ್ರ. ಸಾಯುತ್ತಿರುವವರನ್ನು ಬದುಕಿಸುವುದೇ ವೈದ್ಯರ ಆದ್ಯ ಕರ್ತವ್ಯ ಎಂದು ನಂಬುವ ಶ್ರದ್ಧಾ (ಆಶಿಕಾ ರಂಗನಾಥ್), ತನ್ನ  ಸಂಶೋಧನೆಯ ಫಲವಾದ O2 ಎಂಬ ಡ್ರಗ್ ಮೂಲಕ ಸಾವು-ಬದುಕಿನ ಮಧ್ಯೆ ಹೋರಾಡುತ್ತಿರುವವರನ್ನು ಬದುಕಿಸುವ ಪ್ರಯತ್ನಕ್ಕೆ ಮುಂದಾಗುತ್ತಾಳೆ. ಈ ಹಾದಿಯಲ್ಲಿ ಅನೇಕ ಸಮಸ್ಯೆಗಳನ್ನು ಎದುರಿಸುತ್ತಾಳೆ. ಈ ಎಲ್ಲಾ ಅಡೆತಡೆಗಳನ್ನು ಮೀರಿ ಗುರಿ ತಲುಪಲು ಶ್ರದ್ಧಾಳಿಗೆ ಸಾಧ್ಯವಾಗುವುದೋ ಇಲ್ಲವೋ ಎಂಬುದನ್ನು ಪ್ರೇಕ್ಷಕರು ಚಿತ್ರಮಂದಿರದಲ್ಲಿ ನೋಡಿ ತಿಳಿದುಕೊಳ್ಳಬೇಕಿದೆ. ಒಟ್ಟಾರೆ ಈ ಚಿತ್ರ ಮನರಂಜನೆ, ವಿಜ್ಞಾನ, ಪ್ರೀತಿ, ಅನಿರೀಕ್ಷಿತ ತಿರುವುಗಳ ಸಮಾಗಮ ಎಂದರೆ ಉತ್ಪ್ರೇಕ್ಷೆಯಲ್ಲ.

    ಚಿತ್ರದ ನಿರ್ಮಾಪಕಿ, ಅಶ್ವಿನಿ ಪುನೀತ್ ರಾಜ್‌ಕುಮಾರ್ ಅವರು ಮಾತನಾಡಿ, O2 ಎಂಬ ವಿಭಿನ್ನವಾದ ಚಿತ್ರವನ್ನು ನಿರ್ಮಿಸಿರುವುದು ನಮಗೆ ಹೆಮ್ಮೆ ತಂದಿದೆ. ಈ ಚಿತ್ರವನ್ನು ಪ್ರೇಕ್ಷಕರ ಮುಂದಿಡಲು ಕಾತುರದಿಂದ ಕಾಯುತ್ತಿದ್ದೇನೆ. ಹೊಸ ಪ್ರತಿಭೆಗಳಿಗೆ ಅವಕಾಶ ನೀಡುವ ಉದ್ದೇಶ ಹೊಂದಿರುವ ನಮ್ಮ ಸಂಸ್ಥೆಯಿಂದ ಮೂಡಿಬರುತ್ತಿರುವ ಈ‌ ಚಿತ್ರ ಪ್ರೇಕ್ಷಕರ ಮನಸ್ಸಿನಲ್ಲಿ ಉಳಿಯುತ್ತದೆ ಹಾಗೂ ಭಾರಿ‌ ಮಟ್ಟದಲ್ಲಿ ಪರಿಣಾಮ ಬೀರುತ್ತದೆ ಎಂದು ನಂಬಿದ್ದೇನೆ” ಎಂದಿದ್ದಾರೆ.

  • ‘ಜಿಗರ್’ ಚಿತ್ರದ ರೊಮ್ಯಾಂಟಿಕ್ ಹಾಡಿಗೆ ಧ್ವನಿಯಾದ ಸಂಚಿತ್ ಹೆಗ್ಡೆ

    ‘ಜಿಗರ್’ ಚಿತ್ರದ ರೊಮ್ಯಾಂಟಿಕ್ ಹಾಡಿಗೆ ಧ್ವನಿಯಾದ ಸಂಚಿತ್ ಹೆಗ್ಡೆ

    ಸ್ಯಾಂಡಲ್‌ವುಡ್ ನಟ ಪ್ರವೀಣ್ ತೇಜ್ ಮತ್ತೊಂದು ವಿಭಿನ್ನ ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಬರಲು ಸಜ್ಜಾಗಿದ್ದಾರೆ. ಈಗಾಗಲೇ ವಿವಿಧ ಪಾತ್ರಗಳ ಮೂಲಕ ಅಭಿಮಾನಿಗಳನ್ನು ರಂಜಿಸಿರುವ ಪ್ರವೀಣ್ ಈ ಬಾರಿ ಮಾಸ್ ಲುಕ್‌ನಲ್ಲಿ ಎಂಟ್ರಿ ಕೊಡುತ್ತಿದ್ದಾರೆ. ಅಂದಹಾಗೆ ಮೊದಲ ಬಾರಿಗೆ ಪ್ರವೀಣ್ ‘ಜಿಗರ್’ ಎನ್ನುವ ಸಾಹಸ ಪ್ರಧಾನ ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಬರುತ್ತಿದ್ದಾರೆ. ಈಗಾಗಲೇ ಶೂಟಿಂಗ್ ಮುಗಿಸಿ ರಿಲೀಸ್‌ಗೆ ರೆಡಿಯಾಗಿರುವ ಜಿಗರ್ ಸಿನಿಮಾ ಸದ್ಯ ಹಾಡಿನ ಮೂಲಕ ಆಮಂತ್ರಣ ನೀಡಿದೆ.

    ಜಿಗರ್ ಸಿನಿಮಾದ ಮೊದಲ ಹಾಡು ರಿಲೀಸ್ ಆಗಿದೆ. ಮಾಸ್ ಸಿನಿಮಾ ಆಗಿದ್ದರೂ ಸದ್ಯ ರೊಮ್ಯಾಂಕ್ ಹಾಡಿನ ಮೂಲಕ ಮೋಡಿ ಮಾಡುತ್ತಿದ್ದಾರೆ ಪ್ರವೀಣ್. ಅಂದಹಾಗೆ ಸದ್ಯ ಬಿಡುಗಡೆಯಾಗಿರುವ ಈ ಹಾಡು ಗಾನಪ್ರಿಯರ ಹಾಟ್ ಫೇವರೆಟ್ ಸಿಂಗರ್ ಸಂಚಿತ್ ಹೆಗ್ಡೆ ಕಂಠದಲ್ಲಿ ಮೂಡಿಬಂದಿದೆ. ಸಂಚಿತ್ ಹಾಡಿರುವ ಬಹುತೇಕ ಹಾಡುಗಳು ಸೂಪರ್ ಹಿಟ್. ಜಿಗರ್ ಸಿನಿಮಾದ ಈ ರೊಮ್ಯಾಂಟಿಕ್ ಹಾಡು ಕೂಡ  ಸಂಚಿತ್ ಧ್ವನಿಯಲ್ಲಿ ಅಷ್ಟೇ ಅದ್ಭುತವಾಗಿ ಮೂಡಿ ಬಂದಿದೆ.

    ‘ಸುಮ್ಮನೆ…..’ ಎನ್ನುವ ಸಾಲುಗಳಿಂದ ಪ್ರಾರಂಭವಾಗುವ ಈ ಹಾಡಿಗೆ ರಿತ್ವಿಕ್ ಮುರಳಿಧರ ಸಂಗೀತ  ಸಂಯೋಜನೆ ಮಾಡಿದ್ದಾರೆ. ಈ ಸುಂದರ ಹಾಡಿಗೆ ಅರ್ಜುನ್ ಲೂಯಿಸ್ ಸಾಹಿತ್ಯವಿದೆ. ಈಗಾಗಲೇ ಚಮಕ್, ವೆನಿಲ್ಲ, ಸಖತ್ ಸೇರಿದಂತೆ ಅನೇಕ ಸಿನಿಮಾಗಳಿಗೆ ಹಾಡು ಬರೆದಿರುವ ಅರ್ಜುನ್ ಇದೀಗ ಜಿಗರ್ ಸಿನಿಮಾದ ಹಾಡನ್ನೂ ಬರೆದಿದ್ದಾರೆ. ಈ ಸುಂದರ ಹಾಡನ್ನು ಕರಾವಳಿ ಸುತ್ತಮುತ್ತ ಚಿತ್ರೀಕರಿಸಲಾಗಿದೆ. ಮಲ್ಫೆ, ಮರುವಂತೆ, ಮಂಗಳೂರು ಸುತ್ತಮುತ್ತ ಸೆರೆಹಿಡಿಯಲಾಗಿದೆ. ಸಿನಿಮಾ ಕೂಡ ಇದೇ ಬ್ಯಾಕ್‌ಡ್ರಾಪ್‌ನಲ್ಲಿ ಇರಲಿದೆ.

    ಅಂದಹಾಗೆ ಪ್ರವೀಣ್ ತೇಜ್ ಅವರನ್ನು ಆಕ್ಷನ್ ಅವತಾರದಲ್ಲಿ ಅಭಿಮಾನಿಗಳ ಮುಂದೆ ಕರೆತರುತ್ತಿದ್ದಾರೆ ನಿರ್ದೇಶಕ ಸೂರಿ ಕುಂದರ್. ಈಗಾಗಲೇ ಸ್ಯಾಂಡಲ್‌ವುಡ್‌ನಲ್ಲಿ ಅನೇಕ ಸಿನಿಮಾಗಳಿಗೆ ಸಹಾಯಕ  ನಿರ್ದೇಶಕರಾಗಿ ಕೆಲಸ ಮಾಡಿದ್ದ ಸೂರಿ ಜಿಗರ್ ಮೂಲಕ ಪೂರ್ಣ ಪ್ರಮಾಣದ ನಿರ್ದೇಶಕರಾಗಿ ಗುರುತಿಸಿಕೊಂಡಿದ್ದಾರೆ. ತನ್ನ ಮೊದಲ ಸಿನಿಮಾದ ಮೇಲೆ ನಿರ್ದೇಶಕ ಸೂರಿ ಭಾರಿ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಯು ಕೆ ಪ್ರೊಡಕ್ಷನ್ ಅಡಿಯಲ್ಲಿ ಸಿನಿಮಾ ನಿರ್ಮಾಣವಾಗಿದ್ದು ಪೂಜಾ ವಸಂತ್ ಚಿತ್ರಕ್ಕೆ  ಬಂಡವಾಳ ಹಾಕಿದ್ದಾರೆ , ಶಿವಸೇನಾ ಕ್ಯಾಮೆರಾ ವರ್ಕ್ ಚಿತ್ರಕ್ಕಿದೆ  ಇನ್ನೂ ಈ ಸಿನಿಮಾದಲ್ಲಿ ಪ್ರವೀಣ್‌ಗೆ ನಾಯಕಿಯಾಗಿ ವಿಜಯ್ ಶ್ರೀ ಕಾಣಿಸಿಕೊಂಡಿದ್ದಾರೆ. ವಿಜಯ್ ಶ್ರೀ ಅವರಿಗೂ ಇದು ಮೊದಲ ಸಿನಿಮಾವಾಗಿದೆ.

    ನಟ ಪ್ರವೀಣ್ ಮೊದಲ ಬಾರಿಗೆ ಮಾಸ್ ಅವತಾರದಲ್ಲಿ ಕಾಣಿಸಿಕೊಂಡಿದ್ದು ಅಭಿಮಾನಿಗಳು ಹೇಗೆ ಸ್ವೀಕರಿಸುತ್ತಾರೆ ಎಂದು ಎದುರು ನೋಡುತ್ತಿದ್ದಾರೆ. ಕೊನೆಯದಾಗಿ ಪ್ರವೀಣ್ ಹೊಂದಿಸಿ ಬರೆಯಿರಿ ಸಿನಿಮಾ ಮೂಲಕ ಸಿನಿಮಾ ಪ್ರೇಕ್ಷಕರ ಮುಂದೆ ಬಂದಿದ್ದರು. ಇದೀಗ ಜಿಗರ್ ಮೂಲಕ ಎಂಟ್ರಿ ಕೊಡುತ್ತಿದ್ದಾರೆ. ಸದ್ಯ ಹಾಡಿನ ಮೂಲಕ ಅಭಿಮಾನಿಗಳನ್ನು ಸೆಳೆಯುತ್ತಿರುವ ಜಿಗರ್ ಸಿನಿಮಾ ಹೇಗಿರಲಿದೆ ಎನ್ನುವ ಕುತೂಹಲ ಹೆಚ್ಚಿಸಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ‘ಠಾಣೆ’ ಸಿನಿಮಾದ ಪೋಸ್ಟರ್ ರಿಲೀಸ್ ಮಾಡಿದ ಧ್ರುವ ಸರ್ಜಾ

    ‘ಠಾಣೆ’ ಸಿನಿಮಾದ ಪೋಸ್ಟರ್ ರಿಲೀಸ್ ಮಾಡಿದ ಧ್ರುವ ಸರ್ಜಾ

    ಗಾಯತ್ರಿ ಎಂ ನಿರ್ಮಿಸಿರುವ “ಠಾಣೆ” (Thane) ಚಿತ್ರದ ಪೋಸ್ಟರ್ ಧ್ರುವ ಸರ್ಜಾ (Dhruva Sarja) ಅವರಿಂದ ಬಿಡುಗಡೆಯಾಗಿದೆ. ಈ ಪೋಸ್ಟರ್ ನೋಡಿದರೆ ಇಡೀ ಚಿತ್ರ ನೋಡಿದ ಹಾಗೆ ಆಗುತ್ತಿದೆ. ಪೋಸ್ಟರ್ (Poster) ತುಂಬಾ ಚೆನ್ನಾಗಿದೆ. ಚಿತ್ರ ಕೂಡ ಅಷ್ಟೇ ಚೆನ್ನಾಗಿರುತ್ತದೆ ಎಂದು ಅನಿಸುತ್ತದೆ. ಚಿತ್ರ ಯಶಸ್ವಿಯಾಗಲಿ ಎಂದು ಧ್ರುವ ಸರ್ಜಾ ಹಾರೈಸಿದರು.

    ಕಳೆದ ಹದಿನೈದು ವರ್ಷಗಳಿಂದ ರಂಗಭೂಮಿ ಕಲಾವಿದನಾಗಿ ಗುರುತಿಸಿಕೊಂಡಿರುವ, ಕೌರವ ವೆಂಕಟೇಶ್ ಸೇರಿದಂತೆ ಅನೇಕ ಸಾಹಸ ನಿರ್ದೇಶಕರ ಬಳಿ ಕೆಲಸ ಮಾಡಿರುವ ಪ್ರಕಸಂ ತಂಡದ ಪ್ರವೀಣ್ “ಠಾಣೆ” ಚಿತ್ರದ ನಾಯಕ. ಭರತ ನಾಟ್ಯ ಸೇರಿದಂತೆ ಅನೇಕ ಕಲೆಗಳಲ್ಲಿ ನೈಪುಣ್ಯತೆ ಪಡೆದಿರುವ ಮೈಸೂರಿನ ಹರಿಣಾಕ್ಷಿ ಈ ಚಿತ್ರದ ನಾಯಕಿ. ಪಿ.ಡಿ.ಸತೀಶ್, ರಾಜ್ ಬೆಳವಾಡಿ ಸೇರಿದಂತೆ ಅನೇಕ ರಂಗಭೂಮಿ ಕಲಾವಿದರು ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ. ನಟ, ನಿರ್ದೇಶಕ ಕಾಶಿನಾಥ್, ರಾಮನಾಥ್ ಋಗ್ವೇದಿ, ಗುರುಪ್ರಸಾದ್ ಮುಂತಾದವರ ಬಳಿ ಕಾರ್ಯ ನಿರ್ವಹಿಸಿರುವ ಎಸ್ ಭಗತ್ ರಾಜ್ (Bhagat Raj) ಈ ಚಿತ್ರದ ನಿರ್ದೇಶಕರು. ನಾವು ಧರಿಸುವ ಸೂಟ್ ಮೇಲೆ ಒಂದು ಕಥೆ ರಚಿಸಿ, ನಿರ್ದೇಶಿಸಿರುವ “ದಿ ಸೂಟ್” ಭಗತ್ ರಾಜ್ ನಿರ್ದೇಶನದ ಮೊದಲ ಚಿತ್ರ. “ಠಾಣೆ” ಎರಡನೇ ಚಿತ್ರ. ಇದನ್ನೂ ಓದಿ:ಬಿಗ್ ಬಾಸ್ ವಿರುದ್ಧ ಮ್ಯಾಚ್ ಫಿಕ್ಸಿಂಗ್ ಆರೋಪ: ಗುರೂಜಿ ಮೇಲೆ ಕಿಚ್ಚ ಕೆಂಡಾಮಂಡಲ

    “ಠಾಣೆ” 1962 ರ ಕಾಲಘಟ್ಟದಲ್ಲಿ ನಡೆಯುವ ಕಥೆ. ನಗರಗಳು ಬೆಳೆದರು, ಸ್ಲಂಗಳು ಬೆಳೆಯುವುದಿಲ್ಲ. ಅದು ಬೆಳೆಯಲು ಕೆಲವರು ಬಿಡುವುದು ಇಲ್ಲ. ಸ್ಲಂ ನಲ್ಲೇ ಹುಟ್ಟಿಬೆಳೆದ ಯುವಕ‌ನೊಬ್ಬ ಅಲ್ಲಿನ ಜನರಿಗೆ ನ್ಯಾಯ ಕೊಡಿಸಲು ಹೋರಾಡುವ ಕಥೆಯಿದು. ಆ ಕಾಲಘಟ್ಟದ ಕಥೆಯಾಗಿರುವುದರಿಂದ ಬೆಂಗಳೂರಿನ ಹಳೆ ಬಡಾವಣೆಗಳಾದ ಶ್ರೀರಾಮಪುರ, ಶಿವಾಜಿ ನಗರ ಮುಂತಾದ ಕಡೆ ಹಳೆಯ ಜಾಗಗಳನ್ನು ಹುಡುಕಿ ಚಿತ್ರೀಕರಣ ಮಾಡಿರುವುದಾಗಿ ನಿರ್ದೇಶಕರು ತಿಳಿಸಿದ್ದಾರೆ.

    ಎರಡು ಸುಮಧುರ ಹಾಡುಗಳಿಗೆ ಮಾನಸ ಹೊಳ್ಳ ಸಂಗೀತ ನೀಡಿದ್ದಾರೆ. ಸಾಗರದ ಪ್ರಶಾಂತ್ ಸಾಗರ್ ಛಾಯಾಗ್ರಹಣ, ಹಿರಿಯ ಸಂಕಲನಕಾರ ಸುರೇಶ್ ಅರಸ್ ಸಂಕಲನ, ಪ್ರವೀಣ್ ಜಾನ್ ಅವರ ಕಲಾ ನಿರ್ದೇಶನ ಈ ಚಿತ್ರಕ್ಕಿದೆ. ಕೌರವ ವೆಂಕಟೇಶ್ ಹಾಗೂ ಟೈಗರ್ ಶಿವ ಸಾಹಸ ಸಂಯೋಜನೆಯಲ್ಲಿ ಐದು ಸಾಹಸ ಸನ್ನಿವೇಶಗಳು ಮೂಡಿಬಂದಿದೆ. ನಾಯಕ ಪ್ರವೀಣ್ ಅವರಿಗೂ ಸಾಹಸ ಸಂಯೋಜನೆ ಮಾಡಿ ಅನುಭವವಿರುವುದರಿಂದ ಅವರ ಅಭಿನಯದಲ್ಲಿ ಸಾಹಸ ಸನ್ನಿವೇಶಗಳು ಅದ್ಭುತವಾಗಿ ಮೂಡಿಬಂದಿದೆ. “ಠಾಣೆ” ಚಿತ್ರದಲ್ಲಿ ಪ್ರವೀಣ್, (Praveen) ಕಾಳಿ  ಎಂಬ ಪಾತ್ರದ ಮೂಲಕ ಚಿತ್ರರಂಗಕ್ಕೆ ನಾಯಕನಾಗಿ ಪಾದಾರ್ಪಣೆ ಮಾಡುತ್ತಿದ್ದಾರೆ. C/O ಶ್ರೀರಾಮಪುರ ಎಂಬ ಅಡಿಬರಹ ಈ ಚಿತ್ರಕ್ಕಿದೆ.

    Live Tv
    [brid partner=56869869 player=32851 video=960834 autoplay=true]

  • ಗಣೇಶ ಹಬ್ಬಕ್ಕಾಗಿ ರಾಜವರ್ಧನ್ ನಟನೆಯ ‘ಹಿರಣ್ಯ’ ಸಿನಿಮಾದ ಮಾಸ್ ಲುಕ್ ರಿಲೀಸ್

    ಗಣೇಶ ಹಬ್ಬಕ್ಕಾಗಿ ರಾಜವರ್ಧನ್ ನಟನೆಯ ‘ಹಿರಣ್ಯ’ ಸಿನಿಮಾದ ಮಾಸ್ ಲುಕ್ ರಿಲೀಸ್

    ವೇದಾಸ್ ಇನ್ಫಿನೈಟ್ ಪಿಕ್ಚರ್ಸ್ ಬ್ಯಾನರ್ ನಡಿ ನಿರ್ಮಾಪಕರಾದ ವಿಘ್ನೇಶ್ವರ್ ಯು ಮತ್ತು ವಿಜಯ್ ಗೌಡ ಬಿದರಹಳ್ಳಿ ಅತೀವ ಸಿನಿಮೋತ್ಸಾಹದಿಂದ ಚೊಚ್ಚಲ ಬಾರಿಗೆ ನಿರ್ಮಾಣ ಮಾಡುತ್ತಿರುವ ಹಿರಣ್ಯ ಸಿನಿಮಾದ ಹೊಸ ಪೋಸ್ಟರ್  ಗಣೇಶ್ ಚತುರ್ಥಿಗೆ ಬಿಡುಗಡೆಯಾಗಿದೆ. ಮ್ಯಾಸೀವ್ ಸ್ಟಾರ್ ರಾಜವರ್ಧನ್ ನಾಯಕನಾಗಿ ಮಾಸ್ ಅವತಾರದಲ್ಲಿ ಧಗಧಗಿಸಿದ್ದು, ಬಾಯಲ್ಲಿ ಸಿಗರೇಟ್ ಹಿಡಿದು, ಪಕ್ಕ ರಾ ಲುಕ್ ನಲ್ಲಿ ಮಿಂಚಿದ್ದಾರೆ.

    ಬಿಚ್ಚುಗತ್ತಿ ಸಿನಿಮಾ ಮೂಲಕ ಚಿತ್ರರಂಗ ಪ್ರವೇಶಿಸಿದ್ದ ರಾಜವರ್ಧನ್ ಮೊದಲ ಹೆಜ್ಜೆಯಲ್ಲಿಯೇ ಗೆಲುವು ತಮ್ಮದಾಗಿಸಿಕೊಂಡಿದ್ದರು. ಸದ್ಯ ಹಿರಣ್ಯ ಸಿನಿಮಾದಲ್ಲಿ ರಾಜವರ್ಧನ್ ಬ್ಯುಸಿಯಾಗಿದ್ದು, ಈ ಚಿತ್ರಕ್ಕೆ ಪ್ರವೀಣ್ ಅವ್ಯುಕ್ತ್ ಆಕ್ಷನ್ ಕಟ್ ಹೇಳಿದ್ದಾರೆ. ರಾಜವರ್ಧನ್ ಗೆ ಜೋಡಿಯಾಗಿ ಮಾಡೆಲ್ ರಿಹಾನಾ ನಟಿಸಿದ್ದು, ಈ ಚಿತ್ರದ ಮೂಲಕ ರಿಹಾನಾ ಚಂದನವನ ಪ್ರವೇಶಿಸಿದ್ದಾರೆ. ಇದನ್ನೂ ಓದಿ: ನೂಡಲ್ಸ್ ಬಿಡಿಸು ಅಂದ್ರೆ ಮೂಲಂಗಿ ಬಿಡಿಸ್ತಾಳೆ – ಸೋನು ಪೇಂಟಿಂಗ್‌ಗೆ ರಾಕೇಶ್ ಫುಲ್ ಶಾಕ್..!

    ಸದ್ಯ ಹಿರಣ್ಯ ಸಿನಿಮಾದ ಶೂಟಿಂಗ್ ಭರದಿಂದ ಸಾಗ್ತಿದ್ದು, ಚಿತ್ರಕ್ಕೆ ಯೋಗೇಶ್ವರನ್‌ ಆರ್‌ ಛಾಯಾಗ್ರಹಣವಿದೆ. ಚಿತ್ರದ ಹಾಡುಗಳಿಗೆ ಜ್ಯೂಡಾ ಸ್ಯಾಂಡಿ ಸಂಗೀತ ಸಂಯೋಜನೆಯಿದೆ.  ಇನ್ನೂ ಸ್ಪೆಷಲ್ ರೋಲ್ ಬಿಗ್ ಬಾಸ್ ಖ್ಯಾತಿಯ ದಿವ್ಯಾ ಸುರೇಶ್ ನಟಿಸುತ್ತಿದ್ದಾರೆ. ಅಂದ ಹಾಗೇ ಹಿರಣ್ಯ ಸಿನಿಮಾದ ಟೈಟಲ್ ಡಾಲಿ ಧನಂಜಯ್ ಬಳಿ ಇತ್ತು. ಪ್ರೀತಿಯಿಂದ ಡಾಲಿ ಗೆಳೆಯ ರಾಜವರ್ಧನ್ ಗೆ ಬಿಟ್ಟು ಕೊಟ್ಟಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ತಮಿಳು ಮತ್ತು ತೆಲುಗಿಗೆ ರಿಮೇಕ್ ಆಗಲಿದೆ ಶಶಾಂಕ್ ನಿರ್ದೇಶನದ ‘ಲವ್ 360’ ಸಿನಿಮಾ

    ತಮಿಳು ಮತ್ತು ತೆಲುಗಿಗೆ ರಿಮೇಕ್ ಆಗಲಿದೆ ಶಶಾಂಕ್ ನಿರ್ದೇಶನದ ‘ಲವ್ 360’ ಸಿನಿಮಾ

    ನ್ನಡ ಸಿನಿಮಾ ರಂಗದ ಪ್ರತಿಭಾವಂತ ನಿರ್ದೇಶಕ ಶಶಾಂಕ್ ಮತ್ತೆ ಹೊಸಬರನ್ನು ಹಾಕಿಕೊಂಡು ಮಾಡಿರುವ ‘ಲವ್ 360’ ಸಿನಿಮಾಗೆ ಸಖತ್ ಡಿಮಾಂಡ್ ಕ್ರಿಯೇಟ್ ಆಗಿದೆ. ರಿಮೇಕ್ ರೈಟ್ಸ್ ಗಾಗಿ ತಮಿಳು ಮತ್ತು ತೆಲುಗು ಸಿನಿಮಾ ರಂಗದಿಂದ ಆಫರ್ ಬಂದಿದ್ದು, ದೊಡ್ಡ ನಿರ್ಮಾಣ ಸಂಸ್ಥೆಯೇ ಹಕ್ಕುಗಳನ್ನು ಕೇಳಿದೆಯಂತೆ. ಈ ಕುರಿತು ಸ್ವತಃ ಶಶಾಂಕ್ ಅವರೇ ಬರೆದುಕೊಂಡಿದ್ದಾರೆ.

    ಲವ್ 360 ಡಿಗ್ರಿ ಸಿನಿಮಾ ರಿಲೀಸ್ ಆದಾಗ ಮೊದಲೆರಡು ದಿನ ಹೇಳಿಕೊಳ್ಳುವಂತಹ ರೆಸ್ಪಾನ್ಸ್ ಸಿಗಲಿಲ್ಲ. ಆದರೆ, ನೋಡಿದವರೆಲ್ಲ ಶಶಾಂಕ್ ಅದ್ಭುತವಾಗಿ ಸಿನಿಮಾ ಮಾಡಿದ್ದಾರೆ ಎಂದು ಪ್ರತಿಕ್ರಿಯಿಸಿದರು. ಇಂತಹ ಸಿನಿಮಾಗಳು ಗೆಲ್ಲಬೇಕು ಎಂದು ಹಲವು ಕಲಾವಿದರು ಮತ್ತು ನಿರ್ದೇಶಕರು ಮಾತನಾಡಿದರು. ಆನಂತರ ಚಿತ್ರಕ್ಕೆ ಒಳ್ಳೆಯ ರೆಸ್ಪಾನ್ಸ್ ಸಿಕ್ಕಿತು. ಇದೀಗ ರಿಮೇಕ್ ರೈಟ್ಸ್ ಗೂ ಕೂಡ ಭಾರೀ ಬೇಡಿಕೆ ಕ್ರಿಯೆಟ್ ಆಗಿದೆ. ಇದನ್ನೂ ಓದಿ:ತಮ್ಮ ಸಂಭಾವನೆಯಲ್ಲಿ ʼಜವಾನ್‌ʼ ಚಿತ್ರಕ್ಕಾಗಿ 5 ಕೋಟಿ ಹೆಚ್ಚಿಸಿಕೊಂಡ ವಿಜಯ್ ಸೇತುಪತಿ!

    ಈ ಸಿನಿಮಾದ ಮೂಲಕ ಪ್ರವೀಣ್ ಎನ್ನುವ ಹೊಸ ಹುಡುಗ ಸಿನಿಮಾ ರಂಗಕ್ಕೆ ಪ್ರವೇಶವಾಗಿದ್ದು, ರಚನಾ ನಾಯಕಿಯಾಗಿ ನಟಿಸಿದ್ದಾರೆ. ಒಂದೊಳ್ಳೆ ಪ್ರೇಮಕಥೆಗೆ ಸಸ್ಪೆನ್ಸ್ ಅಂಶಗಳನ್ನು ಬಳಸಿಕೊಂಡು ಮಾಡಿರುವ ಲವ್ 360 ಸಿನಿಮಾ ಮುಂದಿನ ದಿನಗಳಲ್ಲಿ ತಮಿಳು ಮತ್ತು ತೆಲುಗಿನಲ್ಲಿ ಈ ಸಿನಿಮಾ ರಿಮೇಕ್ ಆಗಲಿದ್ದು, ಯಾರೆಲ್ಲ ಈ ಚಿತ್ರದಲ್ಲಿ ನಟಿಸಲಿದ್ದಾರೆ ಎನ್ನುವ ಕುತೂಹಲ ಮೂಡಿದೆ.

    Live Tv
    [brid partner=56869869 player=32851 video=960834 autoplay=true]

  • ಪ್ರವೀಣ್ ಕುಮಾರ್ ನೆಟ್ಟಾರು ಕೊಲೆ ಪ್ರಕರಣ- ಮತ್ತೊಬ್ಬ ಆರೋಪಿಯ ಬಂಧನ

    ಪ್ರವೀಣ್ ಕುಮಾರ್ ನೆಟ್ಟಾರು ಕೊಲೆ ಪ್ರಕರಣ- ಮತ್ತೊಬ್ಬ ಆರೋಪಿಯ ಬಂಧನ

    ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆಯಲ್ಲಿ ನಡೆದಿದ್ದ ಬಿಜೆಪಿ ಯುವಮೋರ್ಚಾ ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮಂಗಳವಾರ ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ.

    ಹತ್ಯೆಗೆ ಸಂಚು ರೂಪಿಸಿದ್ದ ಆರೋಪದ ಮೇಲೆ ಸುಳ್ಯದ ಜಟ್ಟಿಪಳ್ಳ ನಿವಾಸಿ ಅಬ್ದುಲ್ ಕಬೀರ್(33)ನನ್ನು ಪೊಲೀಸರು ಬಂಧಿಸಿದ್ದಾರೆ. ಈ ಮೂಲಕ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 7 ಆರೊಪಿಗಳನ್ನು ಬಂಧಿಸಲಾಗಿದೆ ಎಂದು ದಕ್ಷಿಣ ಕನ್ನಡ ಎಸ್‌ಪಿ ಋಷಿಕೇಶ್ ಸೋನಾವಣೆ ಮಾಹಿತಿ ನೀಡಿದ್ದಾರೆ.

    ಏನಿದು ಪ್ರಕರಣ?
    ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಸಮೀಪ ಪರುವಾಜೆ ಕ್ರಾಸ್ ಬಳಿ ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ಕುಮಾರ್ ನೆಟ್ಟಾರು ಅವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಕೋಳಿ ಮಾಂಸದಂಗಡಿ ಹೊಂದಿದ್ದ ಪ್ರವಿಣ್ ಜುಲೈ 26 ರಂದು ರಾತ್ರಿ 8 ಗಂಟೆಗೆ ಅಂಗಡಿ ಮುಚ್ಚಿ ಮನೆ ಕಡೆ ಹೊರಟಿದ್ದ ವೇಳೆ ಬೈಕಿನಲ್ಲಿ ಬಂದಿದ್ದ ಮೂವರು ತಲ್ವಾರ್‌ನಿಂದ ಪ್ರವೀಣ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದರು. ಇದನ್ನೂ ಓದಿ: ಕಾಂಗ್ರೆಸ್‍ನಲ್ಲಿ ಗಟ್ಟಿಯಾಯ್ತು ಡಿಕೆ, ಸಿದ್ದು ಜೋಡಿ- ಪರಸ್ಪರ ಟೋಪಿ ಹಾಕಿಕೊಂಡ ನಾಯಕರು

    ಪ್ರವಿಣ್ ಅವರನ್ನು ತಕ್ಷಣವೇ ಪುತ್ತೂರು ಆಸ್ಪತ್ರೆಗೆ ಸಾಗಿಸಲಾಗಿತ್ತಾದರೂ ಕುತ್ತಿಗೆಯ ಭಾಗಕ್ಕೆ ತೀವ್ರವಾಗಿ ಏಟು ಬಿದ್ದಿದ್ದರಿಂದ ಅವರು ಮೃತಪಟ್ಟಿದ್ದರು. ಈ ಘಟನೆ ನಡೆದ ಬಳಿಕ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ಅಲ್ಲದೆ ಬಿಜೆಪಿ ಕಾರ್ಯಕರ್ತರೇ ಸರ್ಕಾರದ ವಿರುದ್ಧ ತಿರುಗಿ ಬಿದ್ದರು. ಈ ಬೆನ್ನಲ್ಲೇ ಸರ್ಕಾರ ಪ್ರಕರಣವನ್ನು ಎನ್‌ಐಎಗೆ ಹಸ್ತಾಂತರಿಸಿತ್ತು. ಸದ್ಯ ಈವರೆಗೆ 7 ಮಂದಿಯನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ. ಇದನ್ನೂ ಓದಿ: ಯಾರೂ ಯಾಕೆ ನನ್ನ ಅರ್ಥ ಮಾಡಿಕೊಳ್ಳುತ್ತಿಲ್ಲ- ನೋವನ್ನು ಅಕ್ಷರ ರೂಪಕ್ಕಿಳಿಸಿದ ಚಂದನಾ ಹೇಳಿದ್ದೇನು..?

    Live Tv
    [brid partner=56869869 player=32851 video=960834 autoplay=true]

  • ‘ಸುಮ್ಮನೆ’ ಹಾಡುತ್ತಾ ಹೊಂದಿಸಿ ಬರೆಯಿರಿ ಅಂತಿದ್ದಾರೆ ಕೆಜಿಎಫ್ ಅರ್ಚನಾ

    ‘ಸುಮ್ಮನೆ’ ಹಾಡುತ್ತಾ ಹೊಂದಿಸಿ ಬರೆಯಿರಿ ಅಂತಿದ್ದಾರೆ ಕೆಜಿಎಫ್ ಅರ್ಚನಾ

    ರಾಮೇನಹಳ್ಳಿ ಜಗನ್ನಾಥ್ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ‘ಹೊಂದಿಸಿ ಬರೆಯಿರಿ’ ಸಿನಿಮಾ ಸಾಕಷ್ಟು ವಿಶೇಷತೆಗಳಿಂದ ಗಮನಸೆಳೆಯುತ್ತಿದೆ. ತಾರಾಗಣ, ಕಂಟೆಂಟು, ಕ್ವಾಲಿಟಿ , ಟೀಸರ್ ಹಾಗೂ ಹಾಡಿನ ಮೂಲಕ ನಿರೀಕ್ಷೆ ಹೆಚ್ಚಿಸಿರುವ ಸಿನಿಮಾದಿಂದ ಬದುಕಿ ಸುಮ್ಮನೆ ಎಂಬ ಮೆಲೋಡಿ ಹಾಡು ಬಿಡುಗಡೆಯಾಗಿದೆ. ರಾಮೇನಹಳ್ಳಿ ಜಗನ್ನಾಥ್ ಅರ್ಥಪೂರ್ಣ ಪದಪುಂಜಗಳನ್ನು ಪೊಣಿಸಿ ರಚಿಸಿರುವ ಹಾಡಿಗೆ ಜೋ ಕೋಸ್ಟ ಅದ್ಭುತ ಸಂಗೀತ ನೀಡುವುದರ ಜೊತೆಗೆ ಹಾಡಿಗೆ ಧ್ವನಿಯಾಗಿದ್ದಾರೆ.

    ಗುಳ್ಟು ಖ್ಯಾತಿಯ ನವೀನ್ ಹಾಗೂ ಕೆಜಿಎಫ್ ಸಿನಿಮಾದಲ್ಲಿ ರಾಕಿಭಾಯ್ ಅಮ್ಮನಾಗಿ ನಟಿಸಿದ್ದ ಅರ್ಚನಾ ಜೋಯಿಸ್  ಕೆ. ಜಿ. ಎಫ್ ನಂತರ ಹೊಂದಿಸಿ ಬರೆಯಿರಿ ಚಿತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಪರಿಸ್ಥಿತಿಗಳನ್ನು ಹೊಂದಿಕೊಂಡು ಸಾಗುವ ಬದುಕಿನ ಪಯಣದ ಹೊಂದಿಸಿ ಬರೆಯಿರಿ ಸಿನಿಮಾದಲ್ಲಿ ಏಳು ಯುವಕ-ಯುವತಿಯರ ಒಂದೊಂದು ಕಥೆ, ಪ್ರೀತಿ ತುಂಬಿದೆ. ಈಗಾಗಲೇ ಹೊಂದಿಸಿ ಬರೆಯಿರಿ ಸಿನಿಮಾದ  ಶೂಟಿಂಗ್ ಆಗಿದ್ದು, ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿವೆ. ಟಗರು  ಖ್ಯಾತಿಯ ಮಾಸ್ತಿ, ಪೊಗರು ಖ್ಯಾತಿಯ ಪ್ರಶಾಂತ್ ರಾಜಪ್ಪ ಹಾಗೂ ಜಗನ್ನಾಥ್ ಸೇರಿದಂತೆ ಮೂವರು ಈ ಚಿತ್ರಕ್ಕೆ ಸಂಭಾಷಣೆ ಬರೆದಿದ್ದಾರೆ. ‘ಗುಳ್ಟು’ ಚಿತ್ರಕ್ಕೆ ಸಿನಿಮಾಟೋಗ್ರಫಿ ಮಾಡಿದ್ದ ಶಾಂತಿ ಸಾಗರ್‌ ಈ ಚಿತ್ರಕ್ಕೆ ಕ್ಯಾಮೆರಾ ಹಿಡಿದಿದ್ದಾರೆ. ಇದನ್ನೂ ಓದಿ:ಕರೀನಾ ಬರೆದ ಪ್ರೆಗ್ನೆನ್ಸಿ ಬೈಬಲ್ ಪುಸ್ತಕ ಕೇಸು: ಸರ್ಕಾರದ ಮೂಲಕ ದೂರು ದಾಖಲಿಸಿ ಎಂದ ಹೈಕೋರ್ಟ್

    ಕೋಸ್ಟ ಸಂಗೀತ, ಕೆ ಕಲ್ಯಾಣ್, ಹೃದಯಶಿವ ಹಾಗೂ ನಿರ್ದೇಶಕ ರಾಮೇನಹಳ್ಳಿ ಜಗನ್ನಾಥ್ ಹಾಡುಗಳಿಗೆ ಸಾಹಿತ್ಯ ಬರೆದಿದ್ದಾರೆ. ದೊಡ್ಡ ತಾರಾಬಳಗವೇ ನಟಿಸಿರುವ ಹೊಂದಿಸಿ ಬರೆಯಿರಿ ಸಿನಿಮಾವನ್ನು “ಸಂಡೇ ಸಿನಿಮಾಸ್ “ಬ್ಯಾನರ್ ನಡಿ ರಾಮೇನಹಳ್ಳಿ ಜಗನ್ನಾಥ್ ಹಾಗೂ ಅವರ ಸ್ನೇಹಿತರು ನಿರ್ಮಾಣ ಮಾಡಿದ್ದು, ಚೂರಿಕಟ್ಟೆ ಖ್ಯಾತಿಯ ಪ್ರವೀಣ್, ಐಶಾನಿ ಶೆಟ್ಟಿ, ಸಂಯುಕ್ತ ಹೊರನಾಡು, ಗಜಾನನ ಅಂಡ್ ಗ್ಯಾಂಗ್ ಖ್ಯಾತಿಯ ಶ್ರೀಮಹಾದೇವ್, ಗಾಳಿಪಟ ಚಿತ್ರ ಖ್ಯಾತಿಯ ಭಾವನಾರಾವ್ ಹೀಗೆ ಹಲವು ಪ್ರತಿಭೆಗಳು ಸಿನಿಮಾದಲ್ಲಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಹತ್ಯೆಯಾದವರ ಕುಟುಂಬಗಳಿಗೆ ಪರಿಹಾರ ನೀಡುವಲ್ಲಿ ತಾರತಮ್ಯ ಮಾಡಬಾರದು: ಮಂತ್ರಾಲಯ ಶ್ರೀ

    ಹತ್ಯೆಯಾದವರ ಕುಟುಂಬಗಳಿಗೆ ಪರಿಹಾರ ನೀಡುವಲ್ಲಿ ತಾರತಮ್ಯ ಮಾಡಬಾರದು: ಮಂತ್ರಾಲಯ ಶ್ರೀ

    ರಾಯಚೂರು: ಹತ್ಯೆಯಾದವರ ಕುಟುಂಬಗಳಿಗೆ ಪರಿಹಾರ ನೀಡುವ ವಿಚಾರದಲ್ಲಿ ಸರ್ಕಾರ ಯಾವುದೇ ತಾರತಮ್ಯ ಮಾಡಬಾರದು. ಎಲ್ಲರೂ ಜೀವಿಗಳು, ಪ್ರಾಣ ಕಳೆದುಕೊಂಡವರೆಲ್ಲ ಸಮಾನರು. ಎಲ್ಲರಿಗೂ ಸೂಕ್ತ ರೀತಿಯ ಪರಿಹಾರ ನೀಡಬೇಕೆಂದು ಸರ್ಕಾರಕ್ಕೆ ಕೋರುತ್ತೇನೆ ಎಂದು ಶ್ರೀ ರಾಘವೇಂದ್ರ ಸ್ವಾಮಿ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಸ್ವಾಮಿ ಹೇಳಿದ್ದಾರೆ.

    ಮಂತ್ರಾಲಯದಲ್ಲಿ ಮಾತನಾಡಿದ ಶ್ರೀಗಳು ಮಂಗಳೂರಿನಲ್ಲಿ ಹತ್ಯೆಯಾದ ಹಿಂದೂ, ಮುಸ್ಲಿಂ ಯುವಕರಿಬ್ಬರ ಕುಟುಂಬಕ್ಕೆ ಪರಿಹಾರ ನೀಡುವ ವಿಷಯದಲ್ಲಿ ಸರ್ಕಾರದಿಂದ ತಾರತಮ್ಯ ಆರೋಪದ ಬಗ್ಗೆ ಮಾತನಾಡಿ, ಹತ್ಯೆಯಾದ ಯಾವುದೇ ವ್ಯಕ್ತಿಗೆ ಹಣ ನೀಡುವುದು ಅಂತಿಮ ಪರ್ಯಾಯವಲ್ಲ. ಹಣಕ್ಕೆ ಮತ್ತು ಜೀವಕ್ಕೆ ತುಲನೆ ಮಾಡಲು ಬರುವುದಿಲ್ಲ. ಆದರೆ ಕುಟುಂಬದವರಿಗೆ ತೊಂದರೆಯಾಗಬಾರದು ಎಂದು ಪರಿಹಾರ ನೀಡುತ್ತಾರೆ. ಆಯಾ ರಾಜ್ಯ ಸರ್ಕಾರಗಳು ಪ್ರಾಣ ಕಳೆದುಕೊಂಡ ಎಲ್ಲರಿಗೂ ಪರಿಹಾರ ನೀಡಬೇಕು. ಪರಿಹಾರ ನೀಡುವಲ್ಲಿ ಸರ್ಕಾರ ತಾರತಮ್ಯ ಮಾಡಬಾರದು ಎಂದರು. ಇದನ್ನೂ ಓದಿ: ಅಕ್ರಮ ಹಣ ವರ್ಗಾವಣೆ ಪ್ರಕರಣ – ಡಿ.ಕೆ ಶಿವಕುಮಾರ್‌ಗೆ ಬಿಗ್ ರಿಲೀಫ್

    ದೇಶ ನೆಮ್ಮದಿ, ಪ್ರಗತಿ ಹೊಂದಬೇಕು ಎಂದರೆ ಶಾಂತಿ ಸೌಹಾರ್ದತೆಯಿರಬೇಕು. ಯಾವುದೇ ಸಮುದಾಯದವರು ಇತರ ಸಮುದಾಯದ ಮೇಲೆ ಆಕ್ರಮಣ, ಬೆದರಿಕೆ, ದಬ್ಬಾಳಿಕೆ ಮಾಡಬಾರದು. ಯಾವುದೇ ಸಮುದಾಯದವರು ಮಾಡಿದರೂ ಶಾಂತಿಯುತವಾಗಿ ತೀವ್ರವಾಗಿ ವಿರೋಧಿಸುತ್ತೇವೆ. ಭದ್ರತೆ, ಶಾಂತಿ, ನೆಮ್ಮದಿ ದೇಶದ ಉದ್ದೇಶ. ಯಾವುದೇ ಸಮುದಾಯದವರ ಮೇಲೂ ದಬ್ಬಾಳಿಕೆಯಾಗಬಾರದು. ಯಾರ ಮೇಲೂ ದಬ್ಬಾಳಿಕೆಯಾಗದಂತೆ ಸರ್ಕಾರ ಗಮನಿಸಬೇಕು ಎಂದು ಮಂತ್ರಾಲಯ ಶ್ರೀಗಳು ಹೇಳಿದರು. ಇದನ್ನೂ ಓದಿ: ಆ.10 ರಿಂದ ಮಂತ್ರಾಲಯದಲ್ಲಿ ರಾಘವೇಂದ್ರ ಸ್ವಾಮಿಗಳ 351ನೇ ಆರಾಧನಾ ಮಹೋತ್ಸವ

    Live Tv
    [brid partner=56869869 player=32851 video=960834 autoplay=true]