Tag: praveen shetty

  • ರಾಜ್ಯದಲ್ಲಿ ‘ಥಗ್ ಲೈಫ್’ ಸಿನಿಮಾ ರಿಲೀಸ್ ಮಾಡಿದ್ರೆ ಬೆಂಗಳೂರು ಬಂದ್: ಪ್ರವೀಣ್ ಶೆಟ್ಟಿ ಎಚ್ಚರಿಕೆ

    ರಾಜ್ಯದಲ್ಲಿ ‘ಥಗ್ ಲೈಫ್’ ಸಿನಿಮಾ ರಿಲೀಸ್ ಮಾಡಿದ್ರೆ ಬೆಂಗಳೂರು ಬಂದ್: ಪ್ರವೀಣ್ ಶೆಟ್ಟಿ ಎಚ್ಚರಿಕೆ

    ಬೆಂಗಳೂರು: ಕನ್ನಡದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿರುವ ಕಮಲ್ ಹಾಸನ್ (Kamal Haasan) ಬಗ್ಗೆ ವಿರೋಧ ಹೆಚ್ಚಾಗುತ್ತಿದೆ. ‘ಥಗ್ ಲೈಫ್’ ಸಿನಿಮಾ (Thug Life Cinema) ಕರ್ನಾಟಕದಲ್ಲಿ ರಿಲೀಸ್ ಮಾಡದಂತೆ ಕನ್ನಡ ಸಂಘಟನೆಗಳು ಎಚ್ಚರಿಕೆ ನೀಡಿವೆ. ಆದರೆ ಎಲ್ಲೋ ಒಂದು ಕಡೆ ಪಿತೂರಿ ಮಾಡಿ ಒಂದೇ ಒಂದು ಥಿಯೇಟರ್‌ನಲ್ಲಿ ಸಿನಿಮಾ ರಿಲೀಸ್ ಆದರೂ ಬೆಂಗಳೂರು ಬಂದ್ ಮಾಡುವ ಎಚ್ಚರಿಕೆಯನ್ನು ಕರವೇ ಪ್ರವೀಣ್ ಶೆಟ್ಟಿ (Praveen Shetty) ನೀಡಿದ್ದಾರೆ.

    ಜೂನ್ 5ರಂದು ಎಲ್ಲಿಯೂ ಕೂಡ ಸಿನಿಮಾ ರಿಲೀಸ್ ಆಗಬಾರದು. ಒಂದು ವೇಳೆ ಸಿನಿಮಾ ರಿಲೀಸ್ ಆದರೆ ಕರ್ನಾಟಕದಲ್ಲಿ ಹೋರಾಟದ ಕಿಚ್ಚು ಹೆಚ್ಚಾಗಲಿದೆ. ಜೂ.5ರಂದು ಸಿನಿಮಾ ರಿಲೀಸ್ ಆದರೆ ಸಿನಿಮಾ ಥಿಯೇಟರ್ ಒಳಗಡೆಗೆ ನುಗ್ಗಿ ಥಿಯೇಟರ್ ಪುಡಿಪುಡಿ ಮಾಡುವ ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ‘ಥಗ್‌ ಲೈಫ್‌’ ಟೀಂ ಉದ್ಧಟತನ ಬಟಾಬಯಲು – ಕನ್ನಡ ಬಿಟ್ಟು 4 ಭಾಷೆಗಳಿಗೆ ಸಿನಿಮಾ ಡಬ್‌

    ಕನ್ನಡ ಪರ ಸಂಘಟನೆಗಳ ಒಕ್ಕೊರಲಿನ ತೀರ್ಮಾನ ಮಾಡಿದ್ದೇವೆ. ನಾವೆಲ್ಲಾ ಸೇರಿ ಬೆಂಗಳೂರು ಬಂದ್ ಮಾಡುವ ಬಗ್ಗೆ ಎಚ್ಚರಿಕೆ ಕೊಟ್ಟಿದ್ದೇವೆ. ತಮಿಳಿನಿಂದ ಕನ್ನಡ ಹುಟ್ಟಿತು ಎಂಬ ಮಾತು ಸಹಿಸಲ್ಲ. ನಟ ಕ್ಷಮೆ ಕೇಳಬೇಕು. ನಾನು ಸದಾ ಕನ್ನಡ ಪರ. ಸಿನಿಮಾ ರಿಲೀಸ್ ಆದರೆ ಕನ್ನಡ ಸಂಘಟನೆಯ ಹಿರಿಯ ಹೋರಾಟಗಾರರ ಅಭಿಪ್ರಾಯ ಸಂಗ್ರಹಿಸಿ ಹೋರಾಟ ರೂಪಿಸುತ್ತೇವೆ ಎಂದು ಪ್ರವೀಣ್ ಶೆಟ್ಟಿ ತಿಳಿಸಿದ್ದಾರೆ. ಇದನ್ನೂ ಓದಿ: ಶಿವಣ್ಣನ ರೀತಿಯಲ್ಲಿ ಇನ್ಯಾರು ಕಮಲ್‌ ಪರವಾಗಿದ್ದಾರೋ ಅವರೆಲ್ಲ ನಾಡದ್ರೋಹಿಗಳು: ಮುಖ್ಯಮಂತ್ರಿ ಚಂದ್ರು

  • ಕನ್ನಡ ಹೋರಾಟಗಾರರು ಗೂಂಡಾಗಳಲ್ಲ, ಬಸ್‍ಗಳಿಗೆ ಬೆಂಕಿ ಹಾಕಿಲ್ಲ: ಪ್ರವೀಣ್ ಶೆಟ್ಟಿ ಕಿಡಿ

    ಕನ್ನಡ ಹೋರಾಟಗಾರರು ಗೂಂಡಾಗಳಲ್ಲ, ಬಸ್‍ಗಳಿಗೆ ಬೆಂಕಿ ಹಾಕಿಲ್ಲ: ಪ್ರವೀಣ್ ಶೆಟ್ಟಿ ಕಿಡಿ

    ಬೆಂಗಳೂರು: I.N.D.I.A ಒಕ್ಕೂಟಕ್ಕೆ ಮಾತುಕತೆ ಮಾಡಲು ಆಗುತ್ತದೆ. ಆದರೆ ಕಾವೇರಿ ವಿಚಾರಕ್ಕೆ (Cauvery River water) ಮಾತಾಡಲು ಸಾಧ್ಯವಿಲ್ಲವೇ ಎಂದು ಸರ್ಕಾರದ ವಿರುದ್ಧ ಕರವೇ ಸಂಘಟನೆಯ ಪ್ರವೀಣ್ ಶೆಟ್ಟಿಯವರು (Praveen Shetty) ತೀವ್ರ ವಾಗ್ದಾಳಿ ನಡೆಸಿದ್ದಾರೆ.

    ಕನ್ನಡಪರ ಹೋರಾಟಗಾರರಿಗೆ ನೋಟಿಸ್ ನೀಡಿದ ಹಿನ್ನೆಲೆ ಬೆಂಗಳೂರಿನಲ್ಲಿ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು ಸರ್ಕಾರ ಪೊಲೀಸರ ಮೂಲಕ ನೋಟಿಸ್ ಕೊಡುವ ಕೆಲಸ ಮಾಡುತ್ತಿದೆ. ಕನ್ನಡ ಹೋರಾಟಗಾರು ಗೂಂಡಗಳಲ್ಲ, ಅವರು ಯಾವುದೇ ಬಸ್‍ಗಳಿಗೆ ಬೆಂಕಿ ಹಾಕಿಲ್ಲ. ಅಂಗಡಿಗಳ ಮೇಲೆ ದಾಳಿ ಮಾಡಿಲ್ಲ. ಆದರೂ ಸರ್ಕಾರ ನೋಟಿಸ್ ನೀಡಿರುವುದು ಸರಿಯಾದ ಕ್ರಮವಲ್ಲ ಎಂದಿದ್ದಾರೆ. ಇದನ್ನೂ ಓದಿ: Karnataka Bandh : ಸರ್ಕಾರಿ ಬಸ್‌ಗಳಿದ್ದರೂ ಪ್ರಯಾಣಿಕರು ಇಲ್ಲ

    ಕಾವೇರಿ ನಮ್ಮ ಮಹಾರಾಜರ ಶ್ರಮದಿಂದ ಕಟ್ಟಿದ್ದು, ಕಾವೇರಿ ಕೊಳ್ಳದಲ್ಲೇ ಅನೇಕ ತಾಲೂಕುಗಳು ಬರದಲ್ಲಿ ಬಳಲುತ್ತಿವೆ. ಆದರೆ ತಮಿಳುನಾಡಿಗೆ ಬೆಳೆ ಬೆಳೆಯಲು ನೀರು ಬಿಡಲಾಗುತ್ತಿದೆ. ನಮಗೆ ಕುಡಿಯಲು ನೀರಿಲ್ಲ. ತಮಿಳರು ಸಮುದ್ರಕ್ಕೆ ನೀರು ಹರಿಸುತ್ತಿದ್ದಾರೆ. ಈ ವೇಳೆ ನೀರು ಹರಿಸುವುದನ್ನು ನಿಲ್ಲಿಸುವಂತೆ ಮುಖ್ಯಮಂತ್ರಿಗಳಿಗೆ ನಾನು ಮನವಿ ಮಾಡುತ್ತಿದ್ದೇನೆ. ಬಣ ರಾಜಕೀಯದಿಂದ ಈ ವಿಚಾರ ಮುನ್ನೆಲೆಗೆ ಬರುತ್ತಿಲ್ಲ. ಶೀಘ್ರ ಸುಗ್ರವಾಜ್ಞೆ ಜಾರಿಗೆ ತಂದು, ಪ್ರಧಾನಿ ಮಧ್ಯಸ್ಥಿಕೆಗೆ ಒತ್ತಾಯಿಸಬೇಕು ಎಂದಿದ್ದಾರೆ.

    ನಾವು ನಿಯಮ ಮೀರಿ ಬಂದ್ ಮಾಡುತ್ತಿಲ್ಲ. ಕೊವೀಡ್ ಸಂದರ್ಭದಲ್ಲಿ ಕಾನೂನು ಉಲ್ಲಂಘಿಸಿ ಕಾಂಗ್ರೆಸ್ ನಾಯಕರು ಮೇಕೆದಾಟು ಪಾದಯಾತ್ರೆ ಮಾಡಿದ್ದರು. ಈಗ ನಾವು ಪ್ರತಿಭಟನೆ ಮಾಡುವುದನ್ನು ಹತ್ತಿಕ್ಕುವ ಪ್ರಯತ್ನ ನಡೆಸಲಾಗುತ್ತಿದೆ. ಕಾಂಗ್ರೆಸ್ ವಿರೋಧ ಪಕ್ಷದಲ್ಲಿದ್ದಾಗ ಮಾಡಿದ್ದು ಗೊತ್ತಿದೆ. ಇದಕ್ಕೆ ಮುಂದಿನ ದಿನಗಳಲ್ಲಿ ತಕ್ಕ ಉತ್ತರ ಸಿಗಲಿದೆ. ಮುಂಬರುವ ಲೋಕಸಭಾ ಚುನಾವಣೆಗೆ ಇದರ ಬೆಲೆ ತೆರಬೇಕಾಗುತ್ತದೆ. ಏನೇ ಆದರೂ ಹೋರಾಟವನ್ನು ಕೈಬಿಡುವುದಿಲ್ಲ ಹೋರಾಟವನ್ನು ಮುಂದುವರೆಸುತ್ತೇವೆ ಎಂದಿದ್ದಾರೆ. ಇದನ್ನೂ ಓದಿ: ಶುಕ್ರವಾರ ಕರ್ನಾಟಕ ಬಂದ್ – ಏನಿರುತ್ತೆ? ಏನಿರಲ್ಲ?

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ‘ಸೈರನ್’ ಚಿತ್ರದ ಮಂಗ್ಲಿ ಹಾಡಿಗೆ ಪ್ರೇಕ್ಷಕ ಫಿದಾ

    ‘ಸೈರನ್’ ಚಿತ್ರದ ಮಂಗ್ಲಿ ಹಾಡಿಗೆ ಪ್ರೇಕ್ಷಕ ಫಿದಾ

    ರವೇ ರಾಜ್ಯಾಧ್ಯಕ್ಷ ಪ್ರವೀಣ್ ಶೆಟ್ಟಿ (Praveen Shetty) ಅವರ ಮಗ ಪ್ರವೀರ್ ಶೆಟ್ಟಿ (Praveer Shetty) ಸ್ಯಂಡಲ್‌ವುಡ್‌ಗೆ ನಾಯಕನಾಗಿ ಎಂಟ್ರಿ ಕೊಡುತ್ತಿರುವುದು ನಿಮಗೆಲ್ಲಾ ಗೊತ್ತೆ ಇದೆ. ಪ್ರವೀರ್ ನಟನೆಯ ‘ಸೈರನ್’ (Siren) ಸಿನಿಮಾ ಬಿಡುಗಡೆಗೆ ಸಿದ್ದವಾಗಿದ್ದು, ಇತ್ತೀಚೆಗೆ ಈ ಚಿತ್ರದ ಹಾಡೊಂದು ಬಿಡುಗಡೆಯಾಗಿದೆ. ಜಾಲತಾಣದಲ್ಲಿ ವೈರಲ್ ಆಗುತ್ತಿರುವ ಈ ಗೀತೆಗೆ ಯುವ ಪ್ರತಿಭೆ ಚಿನ್ಮಯ ಸಾಹಿತ್ಯ ಬರೆದಿದ್ದಾರೆ. ‘ಮೈ ಆಟೋಗ್ರಾಫ್’ ಖ್ಯಾತಿಯ ಭಾರತ್ವಾಜ್ ಸಂಗೀತ ಸಂಯೋಜಿಸಿರುವ ‘ಎಣ್ಣೆ ಹೊಡೆಯೋ ಟೈಮಲ್ಲಿ …’ ಸಾಂಗ್‌ನ್ನು (Song) ಮಂಗ್ಲಿ (Mangli)  ಹಾಡಿದ್ದಾರೆ. ಲಹರಿ ಯೂಟ್ಯೂಬ್‌ನಲ್ಲಿ ಗೀತೆ ರಿಲೀಸ್ ಆಗಿದ್ದು, ಹಾಡು ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಲಹರಿ ವೇಲು ‘ಇದು ಪ್ರವೀರ್ ಶೆಟ್ಟಿ ಅವರ ಮೊದಲ ಸಿನಿಮಾ ಆಗಿದ್ದು, ತಯಾರಿ ಮಾಡಿಕೊಂಡು ಚಿತ್ರರಂಗಕ್ಕೆ ಬಂದಿದ್ದಾರೆ. ಹಾಡು ಚನ್ನಾಗಿ ಬಂದಿದೆ. ಜಾನಪದ ಸೊಗಡಿನ ಮೂಲದಿಂದ ಬಂದಂತ ಸಿಂಗರ್‌ಗಳು ಹಾಡಿರುವ ಗೀತೆಗಳು ಚನ್ನಾಗಿರುತ್ತವೆ. ಹಾಗೆಯೇ ಮಂಗ್ಲಿ ಕೂಡ ಜಾನಪದ ಮೂಲದಿಂದ ಬಂದವರು. ತಾಂತ್ರಿಕವಾಗಿ ಸಿನಿಮಾ ಸ್ಟ್ರಾಂಗ್ ಆಗಿ ಬಂದಿದೆ’ ಎಂದು ಹೇಳಿದರು. ಕಾರ್ಯಕ್ರಮಕ್ಕೆ ಅಥಿತಿಯಾಗಿ ಆಗಮಿಸಿದ್ದ ನಿರ್ಮಾಪಕ ಸಂಘದ ಅಧ್ಯಕ್ಷರಾದ ಉಮೇಶ್ ಬಣಕಾರ್ ತಂಡಕ್ಕೆ ಶುಭ ಹಾರೈಸಿದರು.

    ಅಂದಂಗೆ ಈ ಚಿತ್ರವನ್ನು ಮೂಲತಃ ತಮಿಳುನಾಡಿನವರಾದ ರಾಜಾ ವೆಂಕಯ್ಯ ನಿರ್ದೇಶಿಸಿದ್ದಾರೆ. ಕಳೆದ 30 ವರ್ಷಗಳಿಂದ ನಿರ್ದೇಶಕ ಮುರುಗ ದಾಸ್ ಸೇರಿದಂತೆ ಹಲವರ ಬಳಿ ಚಿತ್ರರಂಗದ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿರುವ ರಾಜಾ ವೆಂಕಯ್ಯ ಕನ್ನಡ ಕಲಿತು ಸಿನಿಮಾಗೆ ಆ್ಯಕ್ಷನ್-ಕಟ್ ಹೇಳಿರುವುದು ವಿಶೇಷ. ಇದು ಅವರು ನಿರ್ದೇಶನದ ಮೊದಲ ಕನ್ನಡ ಸಿನಿಮಾ. “ಸೈರನ್’ ಚಿತ್ರದ ಕೆಲಸಗಳು ಈಗಾಗಲೇ ಮುಗಿದಿದ್ದು, ಫೆಬ್ರವರಿ ಮೂರನೇ ವಾರದಲ್ಲಿ ರಿಲೀಸ್ ಮಾಡುವ ಪ್ಲ್ಯಾನ್ ಇದೆ. ಈ ಸಿನಿಮಾವನ್ನು ನಾವು ಕನ್ನಡ ಮತ್ತು ತಮಿಳುನಲ್ಲಿ ಶೂಟ್ ಮಾಡಿದ್ದು, ತೆಲುಗು ಮತ್ತು ಮಲಯಾಳಂಗೆ ಡಬ್ ಮಾಡಿ ರಿಲೀಸ್ ಮಾಡುತ್ತಿದ್ದೇವೆ. ನನ್ನ ಮೊದಲ ಚಿತ್ರಕ್ಕೆ ‘ಡೆಕ್ಕನ್ ಕಿಂಗ್’ ಬ್ಯಾನರ್‌ನಲ್ಲಿ ಸಿನಿಮಾ ನಿರ್ಮಿಸಿರುವ ಬಿಜ್ಜು ಶಿವಾನಂದ್ ತುಂಬಾ ಸಪೋರ್ಟ್ ಮಾಡಿದ್ದಾರೆ. ಮೂಲತಃ ನಾನು ಸಂಕಲನಕಾರನಾಗಿ ಸಾಕಷ್ಟು ಸಿನಿಮಾಗೆ ಕೆಲಸ ಮಾಡಿದ್ದೇನೆ. ಇದೊಂದು ಇನ್ವೆಸ್ಟಿಗೇಷನ್ ಮರ್ಡರ್ ಮಿಸ್ಟರಿ ಕಥೆ ಹೊಂದಿದ್ದು, ಇಲ್ಲಿ ನಾಯಕ ಪ್ರವೀರ್ ಯಂಗ್ ಆ್ಯಂಡ್ ಯನರ್ಜಿ ಇರುವ ಇನ್ವೆಸ್ಟಿಗೇಷನ್ ಆಫೀಸರ್ ಪಾತ್ರ ಮಾಡಿದ್ದಾರೆ’ ಎಂದು ಹೇಳಿದರು. ಇದನ್ನೂ ಓದಿ: ರಾಜಮೌಳಿ ಹತ್ಯೆಗೆ ಸ್ಕೆಚ್ ಹಾಕಿದ ಡೈರೆಕ್ಟರ್ಸ್ : ಬಾಯ್ಬಿಟ್ಟ ವರ್ಮಾ

    ನಂತರ ಮಾತನಾಡಿದ ಚಿತ್ರದ ನಾಯಕ ಪ್ರವೀರ್ ಶೆಟ್ಟಿ ‘ನಾನು ಇದರಲ್ಲಿ ಪೊಲೀಸ್ ಪಾತ್ರ ಮಾಡಿದ್ದೇನೆ. ಇದು ನನ್ನ ಮೊದಲ ಸಿನಿಮಾ. ಬಾಂಬೆಯ ಅನುಪಮ್ ಖೇರ್ ಟ್ರೈನಿಂಗ್‌ ಶಾಲೆಯಲ್ಲಿ  ತರಬೇತಿ ಪಡೆದಿದ್ದು, ಈ ಚಿತ್ರದಲ್ಲಿ ಯಂಗ್ ಇನ್ವೆಸ್ಟಿಗೇಷನ್ ಆಫೀಸರ್ ಪಾತ್ರ ಮಾಡಿದ್ದೇನೆ’ ಎಂದರು. ಮಲಯಾಳಂ ಮೂಲದ ನಾಯಕಿ ಲಾಸ್ಯ ‘ಇದು ನನ್ನ ಅಭಿನಯದ ಮೊದಲ ಸಿನಿಮಾ. ಚಿತ್ರತಂಡ ಒಳ್ಳೆ ಅವಕಾಶ ಕೊಟ್ಟಿದ್ದು, ಇದರಲ್ಲಿ ನಾನೂ ಕೂಡ ಪೋಲಿಸ್ ಆಫೀಸರ್ ಪಾತ್ರ ಮಾಡಿದ್ದೇನೆ’ ಎನ್ನುವರು. ಹೋಟೆಲ್ ಉದ್ಯಮ ನಡೆಸುತ್ತಿರುವ ಚಿತ್ರದ ನಿರ್ಮಾಪಕ ಬಿಜ್ಜು ಶಿವಾನಂದ್ ಮಾತನಾಡಿ ‘ಈ ಚಿತ್ರವನ್ನು ನಾವು ಗೆಳೆಯರು ಸೇರಿ ಕಷ್ಟಪಟ್ಟು ಮಾಡಿದ್ದೇವೆ. ಈ ಸಿನಿಮಾಗಾಗಿ ಎರಡು ವರ್ಷ ಶ್ರಮ ಹಾಕಲಾಗಿದೆ’ ಎಂದರು. ಇದೇ ಸಂದರ್ಭದಲ್ಲಿ ಕರವೇ ರಾಜ್ಯಾಧ್ಯಕ್ಷ ಪ್ರವೀಣ್ ಶೆಟ್ಟಿ ಮಗನ ಚಿತ್ರಕ್ಕೆ ಶುಭ ಹಾರೈಸಿದರು. ಚಿತ್ರಕ್ಕೆ ‘ಮೈ ಆಟೋಗ್ರಾಫ್’ ಖ್ಯಾತಿಯ ಭಾರದ್ವಾಜ್ ಸಂಗೀತ, ನಾಗೇಶ್ ಆಚಾರ್ ಛಾಯಾಗ್ರಹಣ, ಕಲೈ ಮಾಸ್ಟರ್ ನೃತ್ಯವಿದೆ. ಚಿತ್ರವನ್ನು ಲಿಖಿತ್ ಫಿಲ್ಮಸ್‌ನ ರಮೇಶ್ ಬಾಬು ವಿತರಣೆ ಮಾಡಲಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಫಾರ್ಚೂನ್ ಗ್ರೂಪ್ ಆಫ್ ಹೋಟೆಲ್ಸ್ ವತಿಯಿಂದ ರಕ್ತದಾನ ಶಿಬಿರ

    ಫಾರ್ಚೂನ್ ಗ್ರೂಪ್ ಆಫ್ ಹೋಟೆಲ್ಸ್ ವತಿಯಿಂದ ರಕ್ತದಾನ ಶಿಬಿರ

    ದುಬೈ: ದುಬೈ ಉದ್ಯಮಿ, ಕರ್ನಾಟಕ ಅನಿವಾಸಿ ಭಾರತೀಯ ಸಮಿತಿ ಯುಎಇ ಅಧ್ಯಕ್ಷರಾದ ಪ್ರವೀಣ್ ಶೆಟ್ಟಿಯವರ ಫಾರ್ಚೂನ್ ಗ್ರೂಪ್ ಆಫ್ ಹೋಟೆಲ್ಸ್ ವತಿಯಿಂದ ಸತತ ಏಳನೇ ವರ್ಷದ ರಕ್ತದಾನ ಶಿಬಿರ ದುಬೈನ ಫಾರ್ಚೂನ್ ಏಟ್ರಿಯಂ ಹೋಟೆಲ್ ನಲ್ಲಿ ಯಶಸ್ವಿಯಾಗಿ ನಡೆಯಿತು.

    ಪ್ರವೀಣ್ ಶೆಟ್ಟಿಯವರು ತಮ್ಮ ಹೆತ್ತವರಾದ ನಾರಾಯಣ ಶೆಟ್ಟಿ ಮತ್ತು ಸರೋಜಿನಿಯವರ ವಿವಾಹ ವಾರ್ಷಿಕೋತ್ಸವದ ಪ್ರಯುಕ್ತ ಪ್ರತೀ ವರ್ಷ ಫಾರ್ಚೂನ್ ಗ್ರೂಪ್ ಹೋಟೆಲ್ ಸಿಬ್ಬಂದಿ ಸಹಕಾರದೊಂದಿಗೆ ರಕ್ತದಾನ ಶಿಬಿರ ನಡೆಸುತ್ತಿದ್ದು, ರಕ್ತದಾನದ ಮಹತ್ವದ ಕುರಿತು ಸತತವಾಗಿ ಜಾಗೃತಿ ಮೂಡಿಸುವ ಅಭಿಯಾನದಲ್ಲಿ ನಿರತರಾಗಿದ್ದಾರೆ.

    ರಕ್ತದಾನ ಶಿಬಿರದ ನೇತೃತ್ವದ ವಹಿಸಿ, ಸ್ವಯಂ ರಕ್ತದಾನ ನೀಡಿ ಮಾಧ್ಯಮದವರೊಂದಿಗೆ ಮಾತನಾಡಿದ ಪ್ರವೀಣ್ ಶೆಟ್ಟಿ, ರಕ್ತದಾನ ಮಾಡಿದರೆ 24 ಗಂಟೆಯೊಳಗೆ ನಮ್ಮ ದೇಹ ರಕ್ತವನ್ನು ಪುನರುತ್ಪತ್ತಿ ಮಾಡುತ್ತದೆ. ಆದರೆ ಜೀವ ಹೋದರೆ ಮತ್ತೆ ವಾಪಸ್ ಬರುವುದಿಲ್ಲ ಹಾಗಾಗಿ ಎಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಬೇಕು, ಜೀವದಾನಿ ಆಗಬೇಕು. ಕೊರೊನಾ ಸಂದರ್ಭದಲ್ಲಿ ಇದೀಗ ಪ್ರಪಂಚದಾದ್ಯಂತ ಬ್ಲಡ್ ಬ್ಯಾಂಕ್ ನಲ್ಲಿ ರಕ್ತದ ಕೊರತೆ ಇದ್ದು, ಕೊರೊನಾ ಸುರಕ್ಷತೆಯ ನಿಯಮಗಳನ್ನು ಪಾಲಿಸಿ ನಮ್ಮ ಶಿಬಿರ ಆಯೋಜಿಸಿದ್ದು, ಇದರ ಯಶಸ್ವಿ ಆಯೋಜನೆಗೆ ಕಾರಣಕರ್ತರಾದ ಫಾರ್ಚೂನ್ ಹೋಟೆಲ್ ಸಿಬ್ಬಂದಿ ಸಂದೇಶ್, ರಾಕೇಶ್ ಶೆಟ್ಟಿ ಮತ್ತು ಪಾಲ್ಗೊಂಡ ಎಲ್ಲಾ ರಕ್ತದಾನಿಗಳಿಗೆ ಹಾಗೂ ದುಬೈ ಹೆಲ್ತ್ ಅಥೋರಿಟಿಗೆ ಮನಃಪೂರ್ವಕ ಧನ್ಯವಾದ ತಿಳಿಸಿದರು.

    ರಕ್ತದಾನ ಶಿಬಿರದಲ್ಲಿ ಕರ್ನಾಟಕ ಅನಿವಾಸಿ ಭಾರತೀಯ ಸಮಿತಿಯ ಹಲವು ಸದಸ್ಯರು, ಕನ್ನಡಿಗಾಸ್ ಫೆಡರೇಷನ್ ನ ಸಂಚಾಲಕರಾದ ಹಿದಾಯತ್ ಅಡ್ಡೂರ್, ಯಶವಂತ್ ಕರ್ಕೇರಾ, ಇಮ್ರಾನ್ ಖಾನ್ ಎರ್ಮಾಳ್ ಪಾಲ್ಗೊಂಡಿದ್ದು, ಯುಎಇಯಲ್ಲಿ ರಕ್ತದಾನ ಜಾಗೃತಿ ಮೂಡಿಸುವಲ್ಲಿ ಮುಂಚೂಣಿಯಲ್ಲಿರುವ ಬಾಲಕೃಷ್ಣ ರವರು ಶಿಬಿರ ಸುಸೂತ್ರವಾಗಿ ನಡೆಯಲು ಸಹಕರಿಸಿದರು.

  • ಅನಿವಾಸಿ ಭಾರತೀಯ ಸಮಿತಿಗೆ ಉಪಾಧ್ಯಕ್ಷರನ್ನ ನೇಮಿಸಿ: ಅನಿವಾಸಿ ಕನ್ನಡಿಗರು

    ಅನಿವಾಸಿ ಭಾರತೀಯ ಸಮಿತಿಗೆ ಉಪಾಧ್ಯಕ್ಷರನ್ನ ನೇಮಿಸಿ: ಅನಿವಾಸಿ ಕನ್ನಡಿಗರು

    -ಅನಿವಾಸಿ ಕನ್ನಡಿಗರ ಸಹಾಯಕ್ಕೆ ರಾಜ್ಯ ಸರ್ಕಾರ ಮುಂದೆ ಬರಲಿ

    ಬೆಂಗಳೂರು: ಅನಿವಾಸಿ ಕನ್ನಡಿಗರ ಸಹಾಯಕ್ಕೆ ರಾಜ್ಯ ಸರ್ಕಾರ ಮುಂದಾಗಬೇಕು ಮತ್ತು ಕಳೆದ ಮೂರು ವರ್ಷಗಳಿಂದ ಖಾಲಿ ಇರುವ ಅನಿವಾಸಿ ಭಾರತೀಯ ಸಮಿತಿಗೆ ಕನ್ನಡಿಗರನ್ನ ನೇಮಿಸಬೇಕೆಂದು ದುಬೈನಲ್ಲಿರುವ ಕನ್ನಡಿಗರು ಒತ್ತಾಯಿಸಿದ್ದಾರೆ. ಅನಿವಾಸಿ ಭಾರತೀಯ ಸಮಿತಿಗೆ ಓರ್ವ ಕನ್ನಡಿಗ ಸದಸ್ಯರನ್ನ ನೇಮಿಸಿದ್ರೆ, ಕೆಲಸ ಅರಸಿ ವಿದೇಶದಲ್ಲಿರುವ ಕನ್ನಡಿಗರಿಗೆ ಸಹಾಯವಾಗಲಿದೆ ಎಂದು ಎನ್‍ಆರ್‍ಐಗಳು ರಾಜ್ಯ ಸರ್ಕಾರಕ್ಕೆ ಸಾಮಾಜಿಕ ಜಾಲತಾಣಗಳ ಮೂಲಕ ಮನವಿ ಸಲ್ಲಿಸುತ್ತಿದ್ದಾರೆ.

    ದುಬೈನ ಕನ್ನಡಿಗಾಸ್ ಫೆಡರೇಷನ್ ಸಂಚಾಲಕರಾಗಿರುವ ಹಿದಾಯತ್ ಅಡ್ಡೂರು, ಅನಿವಾಸಿ ಭಾರತೀಯ ಸಮಿತಿಗೆ ಪ್ರವೀಣ್ ಶೆಟ್ಟಿಯವರ ಹೆಸರನ್ನು ಸೂಚಿಸಿದ್ದಾರೆ. ಟ್ವಿಟ್ಟರ್ ನಲ್ಲಿ #ಪ್ರವೀಣ್‍ಶೆಟ್ಟಿಫಾರ್‍ಎನ್‍ಆರ್‍ಐ ಎಂಬ ಹ್ಯಾಶ್ ಟ್ಯಾಗ್ ಬಳಸಿ ಅನಿವಾಸಿ ಕನ್ನಡಿಗರು ಟ್ವೀಟ್ ಮಾಡುತ್ತಿದ್ದಾರೆ. ಇತ್ತ ಹಿದಾಯತ್ ಅಡ್ಡೂರ್ ಸಾಲು ಸಾಲು ಟ್ವೀಟ್ ಮೂಲಕ ವಿದೇಶದಲ್ಲಿರುವ ಕನ್ನಡಿಗರ ಸಹಾಯಕ್ಕೆ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

    ಟ್ವೀಟ್: ಎಲ್ಲೇ ಇರು ಹೇಗೇ ಇರು ಎಂದೆಂದಿಗೂ ನೀ ಕನ್ನಡವಾಗಿರು, ಕುವೆಂಪು ಬರೆದ ಸಾಲನ್ನು ನಾವು ಅನಿವಾಸಿಗಳು ಅಕ್ಷರಶಃ ಪಾಲಿಸುತ್ತಿದ್ದೇವೆ, ಆದರೆ ಈ ಅನಿವಾಸಿಗಳ ನಿರೀಕ್ಷೆಯನ್ನು ರಾಜ್ಯ ಸರ್ಕಾರ ಈಡೇರಿಸುವುದೇ? ಅನಿವಾಸಿ ಭಾರತೀಯ ಸಮಿತಿಗೆ ಪ್ರವೀಣ್ ಶೆಟ್ಟಿಯವರನ್ನು ಉಪಾಧ್ಯಕ್ಷರಾಗಿ ನೇಮಿಸಿದರೆ ಪ್ರಪಂಚದಾದ್ಯಂತ ವಿವಿಧ ದೇಶಗಳಲ್ಲಿ ಇರುವ ಅನಿವಾಸಿ ಕನ್ನಡಿಗರಿಗೆ ಉಪಕಾರಿಯಾಗಲಿದೆ, ನಮ್ಮ ಬೇಡಿಕೆಯನ್ನು ಕಡೆಗಣಿಸಬೇಡಿ.

    ಜನರ ನಡುವೆ ಇದ್ದು ಜನರ ಧ್ವನಿಯಾಗುವವರು ನಮ್ಮ ಜನಪ್ರತಿನಿಧಿಯಾಗಬೇಕು ಎಂದೇ ಎಲ್ಲರೂ ನಿರೀಕ್ಷಿಸುವುದು, ಅನಿವಾಸಿ ಕನ್ನಡಿಗರ ಧ್ವನಿ, ಸಮರ್ಥ ಪ್ರತಿನಿಧಿ ಪ್ರವೀಣ್ ಶೆಟ್ಟಿ. ಸಾವಿರಾರು ಅನಿವಾಸಿ ಕನ್ನಡಿಗರಿಗೆ ಉದ್ಯೋಗ ನೀಡಿ, ನೂರಾರು ಕನ್ನಡ ಪರ ಸಂಘಟನೆಗಳಿಗೆ ತನು ಮನ ಧನದಿಂದ ಸಹಾಯಹಸ್ತ ಚಾಚಿ, ಕನ್ನಡಿಗರ ಸಮಸ್ಯೆಗಳಿಗೆ ಸದಾ ಸ್ಪಂದಿಸುತ್ತಾ ಅನಿವಾಸಿ ಕನ್ನಡಿಗರ ಮನಗೆದ್ದ ಪ್ರವೀಣ್ ಶೆಟ್ಟಿ ಅನಿವಾಸಿ ಭಾರತೀಯ ಸಮಿತಿಗೆ ಸೂಕ್ತ ಆಯ್ಕೆ.

    ಮುಖ್ಯಮಂತ್ರಿ ಯಡಿಯುರಪ್ಪನವರೇ, ಬಹಳಷ್ಟು ನಿರೀಕ್ಷೆಯೊಂದಿಗೆ ಅನಿವಾಸಿಗಳು ನಿಮ್ಮ ಮುಂದೆ ಬೇಡಿಕೆ ಇಡುತ್ತಿದ್ದೇವೆ, ತಕ್ಷಣವೇ ಅನಿವಾಸಿ ಭಾರತೀಯ ಸಮಿತಿಗೆ ಉಪಾಧ್ಯಕ್ಷರನ್ನಾಗಿ ಪ್ರವೀಣ್ ಶೆಟ್ಟಿಯವರನ್ನು ನೇಮಿಸುವಿರೆಂಬ ಆಶಯದಲ್ಲಿದ್ದೇವೆ. ನಮ್ಮ ರಾಜ್ಯ ಸರ್ಕಾರವನ್ನು ನೆರೆಯ ಕೇರಳ ಸರ್ಕಾರದೊಂದಿಗೆ ತುಲನೆ ಮಾಡಲು ನಮಗೆ ಇಚ್ಚೆಯಿಲ್ಲ, ಆದರೂ ಅವರ ಸರ್ಕಾರ ಅನಿವಾಸಿಗಳಿಗೆ ನೀಡುವ ಮಾನ್ಯತೆ ನಮ್ಮ ಸರ್ಕಾರದ ನಿರ್ಲಕ್ಷ್ಯತೆಯನ್ನು ಎತ್ತಿ ತೋರಿಸುತ್ತೆ, ನಮ್ಮ ಬೇಡಿಕೆಯನ್ನು ಕೂಡಲೇ ಈಡೇರಿಸಿ.

  • 16 ದಿನ ಊಟ, ಸ್ನಾನವಿಲ್ಲದೆ ಕೆಚ್ಚೆದೆಯ ಹೋರಾಟ – ಕಾರ್ಗಿಲ್ ಗೆದ್ದು ಬಂದ ಸೇನಾನಿಯ ರೋಚಕ ಕಥೆ

    16 ದಿನ ಊಟ, ಸ್ನಾನವಿಲ್ಲದೆ ಕೆಚ್ಚೆದೆಯ ಹೋರಾಟ – ಕಾರ್ಗಿಲ್ ಗೆದ್ದು ಬಂದ ಸೇನಾನಿಯ ರೋಚಕ ಕಥೆ

    – ನಮ್ಮ ಸೈನಿಕರ ಛಿದ್ರ ಛಿದ್ರ ದೇಹ ನೋಡಿ 49 ಪಾಕಿಗಳನ್ನು ಹೊಡೆದುರುಳಿಸಿದ್ದ ಕರಾವಳಿ ಸೈನಿಕ

    ಮಂಗಳೂರು: ಭಾರತದ ಹೆಬ್ಬುಲಿಗಳ ಅಟ್ಟಹಾಸಕ್ಕೆ ಪತರುಗುಟ್ಟಿದ ಪಾಕಿಸ್ತಾನ ಕಾರ್ಗಿಲ್ ಬಿಟ್ಟು ಓಡಿಹೋಗಿ 21 ವರ್ಷಗಳು ಕಳೆದಿವೆ. ಭಾರತೀಯ ಯೋಧರ ಧೈರ್ಯ, ಸಾಹಸ, ದೇಶಪ್ರೇಮದ ಪ್ರತೀಕವಾಗಿ ಕಾರ್ಗಿಲ್ ಭಾರತದಲ್ಲೇ ಉಳಿದಿದೆ. ತ್ರಿವರ್ಣ ಧ್ವಜ ಸ್ವಚ್ಛಂದವಾಗಿ ಹಾರುತ್ತಿದೆ.

    ಕಾರ್ಗಿಲ್ ಯುದ್ಧದಲ್ಲಿ ದೇಶಕ್ಕಾಗಿ ಹುತಾತ್ಮರಾದವರ ಕಥೆಯೇ ರೋಮಾಂಚನಕಾರಿ ಯಾದರೆ, ಯುದ್ಧದಲ್ಲಿ ಗೆದ್ದು, ಭಾರತಮಾತೆಗೆ ವಿಜಯದ ತಿಲಕವಿಟ್ಟ ವೀರ ಸೇನಾನಿಗಳ ಹೋರಾಟ ಅದೊಂದು ಇತಿಹಾಸ. ಇಂತಹ ವೀರ ಸೇನಾನಿಗಳ ಪೈಕಿ ಕರಾವಳಿಯಲ್ಲಿ ಹೆಮ್ಮೆಯ ಯೋಧ ಪ್ರವೀಣ್ ಶೆಟ್ಟಿ ಕೂಡಾ ಒಬ್ಬರು. ಕಾರ್ಗಿಲ್ ಯುದ್ಧದ ಸಂದರ್ಭದಲ್ಲಿ ವಿಶ್ವದ ಏಕೈಕ 244 ಹೆವಿ ಮೋರ್ಟಾರ್ ರೆಜಿಮೆಂಟ್‍ನಲ್ಲಿ ಕರ್ತವ್ಯದಲ್ಲಿದ್ದ ಮಂಗಳೂರಿನ ಕುಂಪಲ ನಿವಾಸಿ ಪ್ರವೀಣ್ ಶೆಟ್ಟಿ, ಯುದ್ಧದಲ್ಲಿ ಕೆಚ್ಚೆದೆಯಿಂದ ಹೋರಾಡಿದ್ದಾರೆ. ಇದನ್ನು ಓದಿ: ಏನಿದು ಕಾರ್ಗಿಲ್ ವಿಜಯ್ ದಿವಸ್?

    18 ವರ್ಷದಲ್ಲೇ ಸೇನೆ ಸೇರಿದ ಪ್ರವೀಣ್ ಶೆಟ್ಟಿ ಸೇನೆ ಸೇರಿದ ಎರಡು ವರ್ಷದಲ್ಲೇ ಕಾರ್ಗಿಲ್ ಯುದ್ಧದಲ್ಲಿ ಭಾಗವಹಿಸಬೇಕಾಯಿತು. ಊರಿಗೆ ಬಂದ ದಿನವೇ ಸೇನೆಯಿಂದ ಮತ್ತೆ ಕರ್ತವ್ಯಕ್ಕೆ ಹಾಜರಾಗಲು ಬುಲಾವ್ ಬಂತು. ಹಾಗಾಗಿ ತಕ್ಷಣವೇ ಮತ್ತೆ ಕರ್ತವ್ಯಕ್ಕೆ ತೆರಳಿದ ಪ್ರವೀಣ್ ಶೆಟ್ಟಿ ಎದುರಿದ್ದದ್ದು ಬರೀ ಹೆಣಗಳ ರಾಶಿ. ತನ್ನ ರೆಜಿಮೆಂಟ್‍ನಲ್ಲಿದ್ದವರ ಛಿದ್ರ ಛಿದ್ರವಾದ ಹೆಣಗಳನ್ನು ನೋಡಿ ಒಂದು ಕ್ಷಣ ಕಂಗಾಲಾದರೂ ಮತ್ತೆ ಹೋರಾಡಿದ ರೀತಿ ಮಾತ್ರ ಆಶ್ಚರ್ಯಕಾರಕ. 16 ದಿನ ಊಟ, ಸ್ನಾನವಿಲ್ಲದೆ ಕೆಚ್ಚೆದೆಯಿಂದ ಹೋರಾಡಿದ್ದಾರೆ.

    ಯುದ್ಧ ಭೂಮಿಯ ಅತೀ ಮುಖ್ಯಭಾಗದ ಕಾರ್ಗಿಲ್‍ನ ತೊಲೊಲಿಂಗ್ ಪ್ರದೇಶವನ್ನು ಪ್ರವೀಣ್ ಶೆಟ್ಟಿ ತಂಡ ವಶಪಡಿಸಿಕೊಂಡಿತು. ತನ್ನ ಜೊತೆ ಇದ್ದವರು ತನ್ನೆದುರೇ ಹುತಾತ್ಮರಾದರೂ ಛಲ ಬಿಡದ ಪ್ರವೀಣ್ ಶೆಟ್ಟಿ ತಂಡ 49 ಶತ್ರುಗಳ ರುಂಡ ಚೆಂಡಾಡಿ ಪರಾಕ್ರಮ ಮೆರೆದಿದ್ದರು. ತೊಲೊಲಿಂಗ್ ಪರ್ವತ ಮಾತ್ರವಲ್ಲದೆ, ಟೈಗರ್ ಹಿಲ್ ಮುತಾಂದ ಪರ್ವತ ಶ್ರೇಣಿಗಳಲ್ಲೂ ಪ್ರವೀಣ್ ಶೆಟ್ಟಿ ತಂಡ ಹೋರಾಡಿದೆ. 16 ವರ್ಷಗಳ ಕಾಲ ದೇಶ ಸೇವೆ ಮಾಡಿದ ಪ್ರವೀಣ್, 11 ವರ್ಷ ಕಾಶ್ಮೀರದಲ್ಲೇ ಕರ್ತವ್ಯ ನಿರ್ವಹಿಸಿದ್ದಾರೆ.

    8 ಸೇನಾ ಸೇವಾ ಪದಕಗಳನ್ನು ಗಳಿಸಿದ್ದಾರೆ. 9 ವರ್ಷದ ಸೇನಾ ಪದಕ, 50 ವರ್ಷದ ಸೇನಾ ಪದಕ, ಫೀಲ್ಡ್ ಸೇನಾ ಪದಕ, ಡಬಲ್ ಫೀಲ್ಡ್ ಸೇನಾ ಪದಕ, ಆಪರೇಷನ್ ವಿಜಯ್, ಆಪರೇಷನ್ ರಕ್ಷಕ್, ಆಪರೇಷನ್ ಪರಾಕ್ರಮ್, ಆಪರೇಷನ್ ವಿಜಯ್ ಸ್ಟಾರ್ ಎಂಬ ಪದಕಗಳನ್ನು ಗಳಿಸಿದ್ದಾರೆ. ಆಪರೇಷನ್ ವಿಜಯ್ ಸ್ಟಾರ್ ಪದಕ ಗಳಿಸಿದ ಕರಾವಳಿ ಕರ್ನಾಟಕದ ಏಕೈಕ ಯೋಧ ಎಂಬ ಹೆಗ್ಗಳಿಕೆ ಪ್ರವೀಣ್ ಶೆಟ್ಟಿ ಪಾತ್ರರಾಗಿದ್ದಾರೆ. 15 ವರ್ಷಗಳ ಸೇನಾ ಸೇವೆ ಬಳಿಕ ಮಂಗಳೂರಿನ ಬಲ್ಮಠದಲ್ಲಿರುವ ಕೆನರಾ ಬ್ಯಾಂಕ್ ನಲ್ಲಿ ಸೆಕ್ಯೂರಿಟಿ ವಿಭಾಗದಲ್ಲಿ ಪ್ರವೀಣ್ ಶೆಟ್ಟಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

    ಯುದ್ಧ ಭೂಮಿಯಲ್ಲಿ ಪರಾಕ್ರಮ ಮೆರೆದ ಕರಾವಳಿಯ ಈ ಯೋಧ, ಕರ್ತವ್ಯ ಸಂದರ್ಭದಲ್ಲಿ ದೇಹದ ಅಂಗಾಂಗಳಿಗೆ ಮಾರಣಾಂತಿಕವಾದ ಗಾಯವಾದರೂ ಪಟ್ಟು ಬಿಡದೆ ಹೋರಾಡಿ ಜನಮಾನಸದಲ್ಲಿ ನೆಲೆಯೂರಿದ್ದಾರೆ. ಪ್ರವೀಣ್ ಶೆಟ್ಟಿ ಯವರ ಕೆಚ್ಚೆದೆಯ ಹೋರಾಟಕ್ಕೆ ಈ ಸಂದರ್ಭದಲ್ಲಿ ನಮ್ಮದೊಂದು ಸಲಾಂ.

  • ವಾಟಾಳ್ ಹಾಗೂ ಕರವೇ ಪ್ರವೀಣ್ ಶೆಟ್ಟಿ ನಡುವೆ ಮುನಿಸು?

    ವಾಟಾಳ್ ಹಾಗೂ ಕರವೇ ಪ್ರವೀಣ್ ಶೆಟ್ಟಿ ನಡುವೆ ಮುನಿಸು?

    ಬೆಂಗಳೂರು: ಮಹದಾಯಿಗಾಗಿ ಗುರುವಾರ ಕರೆ ನೀಡಿದ್ದ ಬಂದ್ ವಿಚಾರದಲ್ಲಿ ಕನ್ನಡ ಸಂಘಟನೆಗಳ ಭಿನ್ನಮತ ಶಮನ ಆಗುವ ಯಾವುದೇ ಲಕ್ಷಣಗಳು ಕಾಣಿಸುತ್ತಿಲ್ಲ. ಈ ನಡುವೆ ಕನ್ನಡ ಸಂಘಟನೆಗಳ ಒಕ್ಕೂಟ ಅಧ್ಯಕ್ಷ ವಾಟಾಳ್ ನಾಗರಾಜ್ ಹಾಗೂ ಕರ್ನಾಟಕ ರಕ್ಷಣಾ ವೇದಿಕೆಯ ಪ್ರವೀಣ್ ಶೆಟ್ಟಿ ಅವರ ನಡುವೆ ಬಂದ್ ವಿಚಾರವಾಗಿ ಮುನಿಸು ಏರ್ಪಟ್ಟಿದೆ ಎನ್ನಲಾಗಿದೆ.

    ಈ ಕುರಿತು ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಪ್ರವೀಣ್ ಶೆಟ್ಟಿ ಅವರು, ಜನವರಿ 25 ರ ಬಂದ್‍ಗೆ ಬೆಂಬಲ ಕೊಡುವ ಬಗ್ಗೆ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ. ಅಂದು ಬಂದ್ ಮಾಡುವ ಬದಲು ಹೋರಾಟ ಮಾಡೋಣ ಎನ್ನುವುದು ನಮ್ಮ ಕರವೇ ಕಾರ್ಯಕರ್ತ ಅಭಿಪ್ರಾಯ ಎಂದರು.

    ಮಹದಾಯಿ ವಿಚಾರವಾಗಿ ಅನಿವಾರ್ಯವಾಗಿ ಬಂದ್ ಮಾಡೋಣ, ಆದರೆ ಈಗ ಜನರಲ್ಲಿ ಬಂದ್ ಅಗತ್ಯದ ಪ್ರಶ್ನೆ ಮೂಡಿದೆ. ಫೆಬ್ರವರಿ ನಾಲ್ಕರಂದು ಬೆಂಗಳೂರು ಬಂದ್ ಮಾಡುವ ನಿರ್ಧಾರಕ್ಕೆ ನಾವು ಬೆಂಬಲ ಕೊಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.

    ರಾಜ್ಯದಲ್ಲಿ ಪದೇ ಪದೇ ಬಂದ್ ನಡೆಸುವುದು ಸರಿಯಾಗುವುದಿಲ್ಲ, ಇದರಿಂದ ಸಾಮಾನ್ಯ ಜನರಿಗೆ ತೊಂದರೆಯಾಗುತ್ತದೆ. ಆದರೆ ಫೆಬ್ರವರಿ ನಾಲ್ಕರಂದು ಬಂದ್ ಗೆ ಕರೆ ನೀಡಿದ್ದು ಯಾಕೆ ಎಂಬುದನ್ನು ಅವರ ಬಳಿಯೇ ಕೇಳಬೇಕು ಎಂದು ಪ್ರಶ್ನಿಸುವ ಮೂಲಕ ವಾಟಾಳ್ ನಾಗರಾಜ್ ಅವರಿಗೆ ಪರೋಕ್ಷವಾಗಿ ಟಾಂಗ್ ನೀಡಿದರು.

    ಕನ್ನಡ ಸಂಘಟನೆಗಳಿಗೆ ಒಂದು ಪ್ರಾದೇಶಿಕ ಪಕ್ಷದ ಚಿಂತನೆ ಬೇಕಾಗಿದೆ. ಆದರೆ ಒಂದು ರಾಷ್ಟ್ರೀಯ ಪಕ್ಷದ ಜೊತೆ ಕೈ ಜೋಡಿಸುವುದು ಅಥವಾ ಒಂದೇ ಪಕ್ಷಕ್ಕೆ ವಿರೋಧ ವ್ಯಕ್ತಪಡಿಸುವುದು ಸರಿಯಲ್ಲ. ಸಂಘಟನೆ ಅಂದರೆ ಎಲ್ಲಾ ಹೋರಾಟಗಳಲ್ಲಿ ಒಟ್ಟಿಗೆ ಹೋಗಬೇಕು. ಆದರೆ ಸಂಘಟನೆಗಳ ನಡುವಿನ ಭಿನ್ನಾಭಿಪ್ರಾಯದಿಂದ ಈ ವಿಚಾರದಿಂದ ಕೊಂಚ ಹೊರ ಉಳಿದಿದ್ದೇನೆ ಎಂದರು.

  • ಕರ್ನಾಟಕ ಬಂದ್: ಕರವೇ ರಾಜ್ಯಾಧ್ಯಕ್ಷ ಪ್ರವೀಣ್ ಶೆಟ್ಟಿಗೆ ನೋಟಿಸ್

    ಕರ್ನಾಟಕ ಬಂದ್: ಕರವೇ ರಾಜ್ಯಾಧ್ಯಕ್ಷ ಪ್ರವೀಣ್ ಶೆಟ್ಟಿಗೆ ನೋಟಿಸ್

    ಬೆಂಗಳೂರು: ರಾಜ್ಯಾದ್ಯಂತ ಕರೆ ನೀಡಿರುವ ಬಂದ್ ಗೆ ಅವಕಾಶ ಇಲ್ಲ ಎಂದು ಉತ್ತರ ವಿಭಾಗದ ಡಿಸಿಪಿ ಲಾಬೂರಾಂ ಕರವೇ ರಾಜ್ಯಾಧ್ಯಕ್ಷ ಪ್ರವೀಣ್ ಶೆಟ್ಟಿಗೆ ನೋಟಿಸ್ ನೀಡಿದ್ದಾರೆ.

    ನೋಟಿಸ್ ನಲ್ಲಿ ಸರ್ವೋಚ್ಛ ನ್ಯಾಯಾಲಯದ ಆದೇಶದಂತೆ ಬಂದ್‍ಗೆ ಕರೆ ನೀಡಿದವರೇ ಜವಾಬ್ದಾರರಾಗಿರುತ್ತಾರೆ. ಹೀಗಾಗಿ ಬಂದ್ ವೇಳೆ ರಾಜ್ಯದಲ್ಲಿ ಯಾವುದಾದರೂ ಅಹಿತರ ಘಟನೆಗಳು ನಡೆದರೆ ಅದಕ್ಕೆ ಬಂದ್ ಗೆ ಕರೆ ನೀಡಿರುವವರೇ ಹೊಣೆಗಾರರು ಅಂತಾ ತಿಳಿಸಲಾಗಿದೆ.

    ಬಯಲು ಸೀಮೆಗೆ ಶಾಶ್ವತ ನೀರಾವರಿ, ಮಹದಾಯಿ-ಕಳಸಾ ಬಂಡೂರಿ ಯೋಜನೆಯ ತ್ವರಿತ ಜಾರಿ, ಮೇಕೆದಾಟು ಯೋಜನೆ ಜಾರಿ, ರೈತರ ಸಾಲ ಮನ್ನಾ ಸೇರಿದಂತೆ ಹತ್ತಾರು ವಿಷಯಗಳನ್ನು ಮುಂದಿಟ್ಟುಕೊಂಡು ಇಂದು ವಾಟಾಳ್ ನಾಗರಾಜ್ ನೇತೃತ್ವದ ಕನ್ನಡ ಒಕ್ಕೂಟ ಬಂದ್‍ಗೆ ಕರೆ ನೀಡಿದೆ. ಆದ್ರೆ ಈ ಬಂದ್ ಗೆ ಇದೀಗ ರಾಜ್ಯದ ಬಹುತೇಕ ಕಡೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.

    ಇದನ್ನೂ ಓದಿ: ಕರ್ನಾಟಕ ಬಂದ್‍ಗೆ ನೀರಸ ಪ್ರತಿಕ್ರಿಯೆ: ಬೆಂಗ್ಳೂರಲ್ಲಿ ಎಂದಿನಂತೆ ಬಿಎಂಟಿಸಿ ಬಸ್‍ಗಳ ಓಡಾಟ

    ಬೆಂಗಳೂರಿನಲ್ಲಿ ಈಗಾಗಲೇ ಬಿಎಸಂಟಿಸಿ ಬಸ್ ಗಳು ಸೇರಿದಂತೆ ಎಲ್ಲಾ ವಾಹನಗಳು ರಸ್ತೆಗಿಳಿದಿವೆ. ಆದ್ರೆ ಚಲನಚಿತ್ರ ಪ್ರದರ್ಶಗಳು ಇಂದು ರದ್ದಾಗುವ ಸಾಧ್ಯತೆಗಳಿವೆ.