Tag: Praveen Thogadia

  • ಗೌರಿ ಲಂಕೇಶ್ ಹತ್ಯೆ ನಂತ್ರ ರೈ ಗೋರಿಯಿಂದ ಹೊರ ಬಂದಿದ್ದಾರೆ- ಪ್ರಮೋದ್ ಮುತಾಲಿಕ್ ಕಿಡಿ

    ಗೌರಿ ಲಂಕೇಶ್ ಹತ್ಯೆ ನಂತ್ರ ರೈ ಗೋರಿಯಿಂದ ಹೊರ ಬಂದಿದ್ದಾರೆ- ಪ್ರಮೋದ್ ಮುತಾಲಿಕ್ ಕಿಡಿ

    ಬೆಳಗಾವಿ: ಇತ್ತೀಚಿಗೆ ಪ್ರಧಾನಿ ನರೇಂದ್ರ ಮೇಲೆ ಪ್ರಹಾರ ನಡೆಸುತ್ತಿರುವ ನಟ ಪ್ರಕಾಶ್ ರೈ ಗೌರಿ ಲಂಕೇಶ್ ಹತ್ಯೆ ನಂತರ ಗೋರಿಯಿಂದ ಹೊರ ಬಂದಿದ್ದಾರೆ ಅಂತ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.

    ನಗರದಲ್ಲಿ ಮಾತನಾಡಿದ ಅವರು, ಕಾವರಿ, ಮಹದಾಯಿ ಮತ್ತು ಕೃಷ್ಣ ನದಿ ಬಗ್ಗೆ ರೈ ಮಾತನಾಡಲ್ಲ. ನಟನಾಗಿ ಎಲ್ಲ ಭಾಷೆಯಿಂದ ಆಗೋ ಲಾಭ ಬೇಕು. ಕಾಂಗ್ರೆಸ್ ಅಧಿಕಾರದಲ್ಲಿಯೇ ಕಲಬುರ್ಗಿ, ಗೌರಿ, ಪನ್ಸಾರೆ ಹತ್ಯೆ ನಡೆದಿದೆ. ಕಾಂಗ್ರೆಸ್ ಸರ್ಕಾರದ ವೈಫಲ್ಯದ ಬಗ್ಗೆ ಪ್ರಕಾಶ್ ರೈ ಮಾತನಾಡಬೇಕು. ಬೈಯೋದಾದ್ರೆ ಎಲ್ಲರನ್ನು ಬೈಯಿರಿ ಇಲ್ಲವಾದ್ರೆ ನೀವು ಕಾಂಗ್ರೆಸ್ ಏಜೆಂಟ್ ಎನ್ನುವುದು ಸಾಬೀತಾಗುತ್ತದೆ ಅಂತ ಅವರು ಕಿಡಿಕಾರಿದ್ದಾರೆ. ಇದನ್ನೂ ಓದಿ: ನನಗೆ ಲೇಟಾಗಿ ಆದರೂ ಜ್ಞಾನೋದಯ ಆಗಿದೆ, ಹೀಗಾಗಿ ಕ್ಷಮಿಸಿ: ಪ್ರಕಾಶ್ ರೈ

    ಇದೇ ವೇಳೆ ವಿಎಚ್‍ಪಿಯಿಂದ ಪ್ರವೀಣ್ ತೊಗಾಡಿಯ ಉಚ್ಛಾಟನೆ ವಿಚಾರದ ಕುರಿತು ಮಾತನಾಡಿದ ಅವರು, ಇದು ಅತ್ಯಂತ ನೀಚ, ನಿರ್ಲಜ್ಜದ ಕೆಲಸವಾಗಿದ್ದು ಖಂಡನೀಯವಾಗಿದೆ. ತೊಗಾಡಿಯ ಉಚ್ಛಾಟನೆ ಹಿಂದೆ ಮೋದಿ, ಆರ್ ಎಸ್ ಎಸ್ ಕೈವಾಡವಿದೆ. ಪ್ರವೀಣ ತೊಗಾಡಿಯ ಮಾಡಿದ ಅಪರಾಧ ಏನು? ಹಿಂದೂ ಮತಗಳನ್ನು ಒಗ್ಗೂಡಿಸಲು ಪ್ರವೀಣ ತೊಗಾಡಿಯಾ ಬೇಕು. ಆದರೇ ಈಗ ಯಾರೊಬ್ಬರು ಆರ್ ಎಸ್ ಎಸ್ ವಿರುದ್ಧ ಧ್ವನಿ ಎತ್ತುತ್ತಿಲ್ಲ. ನಿಮ್ಮ ಅವಧಿಯಲ್ಲಿ ರಾಮಮಂದಿರ ನಿರ್ಮಿಸಿ ಅಂತ ಹೇಳಿದ್ದ ತೊಗಾಡಿಯ ಮಾಡಿದ್ದು ತಪ್ಪಾ? ಗೋ ಹತ್ಯೆ, ಸಮಾನ ನಾಗರೀಕ ಕಾಯ್ದೆ ಜಾರಿ ಮಾಡಿ ಅಂತ ಹೇಳಿದ್ದೆ ತಪ್ಪೇ? ರಾಮ ಮಂದಿರದ ಹೆಸರಲ್ಲಿ ಕಟ್ಟಿಸುವ ಹೆಸರಿನಲ್ಲಿ ಮೋದಿ ಪ್ರಧಾನಿಯಾಗಿದ್ದಾರೆ. ಇದೀಗ ಆರ್ ಎಸ್ ಎಸ್ ಕಟ್ಟಪ್ಪಣೆ ಮೀರಿದ್ದಕ್ಕೆ ತೊಗಾಡಿಯಾ ಉಚ್ಛಾಟನೆಯಾಗಿದ್ದಾರೆ ಅಂತ ಸಿಡಿಮಿಡಿಗೊಂಡರು. ಇದನ್ನೂ ಓದಿ: ಮೋದಿ, ಅಮಿತ್ ಶಾ ತಲೆಯಲ್ಲಿ ಏನು ಇಲ್ಲ ಅನ್ನೋದಕ್ಕೆ ಪುರಾವೆ ನನ್ನಲ್ಲಿದೆ: ಪ್ರಕಾಶ್ ರೈ

    ತೊಗಾಡಿಯ ಉಚ್ಛಾಟನೆ ಖಂಡಿಸಿ ಬೆಂಗಳೂರಿನಲ್ಲಿ ಮಂಗಳವಾರ ರಾಜ್ಯದ 22 ಜಿಲ್ಲೆಯಲ್ಲಿ ಶ್ರೀರಾಮಸೇನೆ ಉಪವಾಸ ಸತ್ಯಾಗ್ರಹ ಕೈಗೊಳ್ಳಲಿದೆ. ಶ್ರೀರಾಮಸೇನೆಗೆ 5 ಹಿಂದುಪರ ಸಂಘಟನೆಗಳ ಬೆಂಬಲ ಸೂಚಿಸಿವೆ ಅಂತ ಅವರು ತಿಳಿಸಿದ್ರು.

  • ವಿಷ್ಣು ಸದಾಶಿವ ಕೊಕ್ಜೆ ವಿಹೆಚ್‍ಪಿಯ ಅಂತರಾಷ್ಟ್ರೀಯ ನೂತನ ಅಧ್ಯಕ್ಷರಾಗಿ ಆಯ್ಕೆ

    ವಿಷ್ಣು ಸದಾಶಿವ ಕೊಕ್ಜೆ ವಿಹೆಚ್‍ಪಿಯ ಅಂತರಾಷ್ಟ್ರೀಯ ನೂತನ ಅಧ್ಯಕ್ಷರಾಗಿ ಆಯ್ಕೆ

    ನವದೆಹಲಿ: ವಿಹೆಚ್‍ಪಿಯ 52 ವರ್ಷದ ಇತಿಹಾಸದಲ್ಲೇ ಮೊದಲ ಬಾರಿಗೆ ನಡೆದ ಅಂತರಾಷ್ಟ್ರೀಯ ಅಧ್ಯಕ್ಷ ಸ್ಥಾನದ ಚುನವಣೆಯಲ್ಲಿ ವಿಷ್ಣು ಸದಾಶಿವ ಕೊಕ್ಜೆ ಅವರು ಜಯಗಳಿಸಿದ್ದಾರೆ.

    273 ಮತದಾರರಲ್ಲಿ 192 ಜನರು ಮಾತ್ರ ವಿಶ್ವ ಹಿಂದೂ ಪರಿಷತ್ ಚುನಾವಣೆಯಲ್ಲಿ ವೋಟ್ ಮಾಡಿದ್ದರು. ಕೊಕ್ಜೆ 131 ಮತಗಳನ್ನು ಗಳಿಸಿದ್ರೆ ಎದುರಾಳಿ ರಾಘವ್ ರೆಡ್ಡಿ 60 ಮತಗಳನ್ನು ಪಡೆದಿದ್ದಾರೆ. 1964ರಲ್ಲಿ ಸ್ಥಾಪನೆಯಾದ ವಿಶ್ವ ಹಿಂದೂ ಪರಿಷತ್‍ಗೆ ಮೊದಲ ಬಾರಿ ಅಧ್ಯಕ್ಷ ಸ್ಥಾನಕ್ಕಾಗಿ ಚುನಾವಣೆ ನಡೆದಿದೆ.

    ಸದ್ಯದ ಪರಿಸ್ಥಿತಿಯಲ್ಲಿ ಪ್ರವೀಣ್ ತೊಗಡಿಯಾ ಮತ್ತು ಪ್ರಧಾನಿ ಮೋದಿ ಮಧ್ಯೆ ಎಲ್ಲವೂ ಸರಿಯಾಗಿಲ್ಲ ಎಂಬ ಮಾತುಗಳು ಕೇಳಿಬರುತ್ತಿದೆ. ಈ ಹಿನ್ನೆಲೆಯಲ್ಲಿ ವಿಶ್ವ ಹಿಂದೂ ಪರಿಷತ್ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಸುವ ಮೂಲಕ ಪ್ರವೀಣ್ ತೊಗಡಿಯಾರನ್ನು ಕುಗ್ಗಿಸುವ ರಣತಂತ್ರಗಳು ಅಡಗಿವೆ ಅಂತಾ ವಿಶ್ಲೇಷಣೆ ಮಾಡಲಾಗ್ತಿದೆ.

    ಕೊಕ್ಜೆ ಅವರು ಈ ಮೊದಲು ಮಧ್ಯ ಪ್ರದೇಶ ಹೈಕೋರ್ಟ್ ನ ನ್ಯಾಯಾಧೀಶರಾಗಿ ಸೇವೆಸಲ್ಲಿಸಿದ್ದಾರೆ. ಹಿಮಾಚಲ ಪ್ರದೇಶದ ರಾಜ್ಯಪಾಲರಾಗಿಯೂ ಸೇವೆ ಸಲ್ಲಿಸಿದ್ದಾರೆ.

    1939, ಡಿಸೆಂಬರ್ 6 ರಂದು ಮಧ್ಯಪ್ರದೇಶದಲ್ಲಿ ಕೊಕ್ಜೆ ಅವರು ಜನಿಸಿದ್ದಾರೆ. ಇಂಧೋರ್ ನಲ್ಲಿ ಎಲ್ ಎಲ್ ಬಿ ಮುಗಿಸಿದ ಬಳಿಕ 1964 ರಲ್ಲಿ ಕಾನೂನು ಅಭ್ಯಾಸ ಶುರು ಮಾಡಿದ್ದಾರೆ. ಹಾಗಾಗಿ ಹಿಂದುತ್ವಕ್ಕೂ ಕೊಕ್ಜೆ ಅವರಿಗೂ ಏನೂ ಸಂಬಂಧ ಇಲ್ಲ ಎಂದು ಪ್ರವೀಣ್ ತೊಗಾಡಿಯ ಆರೋಪ ಮಾಡಿದ್ದಾರೆ. ಈ ವಿಜಯದ ನಂತರ ತೊಗಾಡಿಯ ಅವರು ಅಧ್ಯಕ್ಷ ಸ್ಥಾನದಿಂದ ನಿರ್ಗಮಿಸುತ್ತಾರಾ ಎಂದು ನೋಡಬೇಕಿದೆ.